ಯಶವಂತಪುರದಲ್ಲಿ ಮತದಾರರ ಮಾಹಿತಿ ಸಂಗ್ರಹ ವೇಳೆ ಕಾಂಗ್ರೆಸ್-‌ ಬಿಜೆಪಿ ಕಾರ್ಯಕರ್ತರ ಚಕಮಕಿ - Vistara News

ಬೆಂಗಳೂರು

ಯಶವಂತಪುರದಲ್ಲಿ ಮತದಾರರ ಮಾಹಿತಿ ಸಂಗ್ರಹ ವೇಳೆ ಕಾಂಗ್ರೆಸ್-‌ ಬಿಜೆಪಿ ಕಾರ್ಯಕರ್ತರ ಚಕಮಕಿ

ಬೂತ್ ಲಿಸ್ಟ್ ಹಿಡಿದು ಸರ್ವೇ ಮಾಡುತ್ತಿದ್ದ ಕಾರ್ಯಕರ್ತರನ್ನು ಪ್ರಶ್ನಿಸಿದ ಪರಿಣಾಮ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಕುರಿತು ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎರಡೂ ಕಡೆಯಿಂದ ದೂರುಗಳು ದಾಖಲಾಗಿವೆ.

VISTARANEWS.COM


on

yeshwanthpura police station
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೂತ್ ಲಿಸ್ಟ್ ಹಿಡಿದು ಸರ್ವೇ ಮಾಡುತ್ತಿದ್ದ ಕಾರ್ಯಕರ್ತರನ್ನು ಪ್ರಶ್ನಿಸಿದ ಪರಿಣಾಮ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಕುರಿತು ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎರಡೂ ಕಡೆಯಿಂದ ದೂರುಗಳು ದಾಖಲಾಗಿವೆ.

ಕಾಂಗ್ರೆಸ್‌ ಕಾರ್ಯಕರ್ತರು ಬೂತ್ ಲಿಸ್ಟ್ ಹಿಡಿದು ಮತದಾರರ ಸರ್ವೇ ಮಾಡುತ್ತಿದ್ದ ವೇಳೆ ಅದನ್ನು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದು, ಈ ಸಂದರ್ಭದಲ್ಲಿ ಮಾತಿನ ಚಕಮಕಿ ಉಂಟಾಗಿದೆ. ಎರಡೂ ಕಡೆಯವರೂ ತಮ್ಮ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಪರಸ್ಪರ ದೂರು ದಾಖಲಿಸಿದ್ದಾರೆ.

ರಘು, ಶ್ಯಾಮ್, ಗೋಪಾಲ್ ಎಂಬ ಮೂವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಗುಲಾಬ್ ಜಾನ್ ಎಂಬವರು ನೀಡಿದ ದೂರಿನ ಮೇರೆಗೆ ಕೇಸ್ ದಾಖಲು ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ರಘು ಕೊಟ್ಟ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತರಾದ ಮಾಜಿ ಪಾಲಿಕೆ ಸದಸ್ಯ ವೆಂಕಟೇಶ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ | ಶೃಂಗೇರಿ ಮಸೀದಿ ಮುಂಭಾಗ ಕೇಸರಿ ಬಾವುಟ, ಯುವಕರ ಚಕಮಕಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Assault Case: ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಎಂದಿದ್ದಕ್ಕೆ ಟೀ ಶಾಪ್‌ ಯುವಕನಿಗೆ, ಮುಸ್ಲಿಂ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ.

VISTARANEWS.COM


on

Assault Case
Koo

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಅಂದಿದ್ದಕ್ಕೆ ಅನ್ಯ ಧರ್ಮೀಯ ಯುವಕರು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರಿಂದ ಟೀ ಶಾಪ್ ಯುವಕನ ತಲೆಗೆ ಗಂಭೀರ ಗಾಯವಾಗಿದೆ.

ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಎಂದಿದ್ದಕ್ಕೆ ಮುಸ್ಲಿಂ ಯುವಕರು, ಟೀ ಶಾಪ್‌ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕೆಟ್ಟ ಪದ ಬಳಸಿದಕ್ಕೆ ಟೀ ಶಾಪ್ ಯುವಕ ಪ್ರಶ್ನಿಸಿದ್ದಾನೆ. ಈ ವೇಳೆ ಇಬ್ಬರು ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ನಂತರ ಬಿಯರ್ ಬಾಟಲಿನಿಂದ ಟೀ ಶಾಪ್ ಯುವಕನ ಮೇಲೆ ಅನ್ಯಧರ್ಮೀಯ ಯುವಕರು ಹಲ್ಲೆ ನಡೆಸಿದ್ದಾರೆ.

ಗಲಾಟೆಯಲ್ಲಿ ಟೀ ಶಾಪ್‌ ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಅನ್ಯಧರ್ಮಿಯ ಯುವಕರಿಗೂ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

ಅವಾಚ್ಯ ಪದಗಳ ಬಳಕೆ ಮಾಡಿ ಬಿಯರ್ ಬಾಟಲ್‌ನಿಂದ ಹಲ್ಲೆ ಮಾಡಿದ್ದಲ್ಲದೆ ಆಸ್ಪತ್ರೆಯಲ್ಲಿ ಮುಸ್ಲಿಂ ಯುವಕರು ಮತ್ತೆ ಧಮ್ಕಿ‌ ಹಾಕಿದ್ದಾರೆ. ಹಲ್ಲೆ ಮಾಡುವ ವೇಳೆ ತಡೆಯಲು ಬಂದ ಸ್ಥಳೀಯ ಯುವಕನ ಮೇಲೂ ಹಲ್ಲೆ ನಡೆಸಲಾಗಿದೆ. ಗಲಾಟೆ ನಂತರ ಎರಡು ಕಡೆಯಿಂದ ಕಾಟನ್ ಪೇಟೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಪೊಲೀಸರು ಸದ್ಯ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

Murder case in Belgavi

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು (murder Case) ಬಲಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ.

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾರೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

ಬೆಂಗಳೂರು

Namma Metro: ಟಿಸಿಎಸ್‌ ಮ್ಯಾರಥಾನ್‌ ಹಿನ್ನೆಲೆ ಭಾನುವಾರ ಮುಂಜಾನೆ 3.35ರಿಂದಲೇ ಮೆಟ್ರೋ ರೈಲು ಸೇವೆ

Namma Metro: ಸಾಮಾನ್ಯವಾಗಿ ಪ್ರತಿದಿನ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. ಆದರೆ, ಟಿಸಿಎಸ್‌ ಮ್ಯಾರಥಾನ್‌ ಪ್ರಯುಕ್ತ ಬೆಂಗಳೂರಿನಲ್ಲಿ ಏ.28ರಂದು ಮುಂಜಾನೆ 3:35ರಿಂದ 4.25ರವರೆಗೆ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

Namma Metro
Koo

ಬೆಂಗಳೂರು: ನಗರದಲ್ಲಿ ಏಪ್ರಿಲ್​ 28ರಂದು ಭಾನುವಾರ ಬೆಳಗ್ಗೆ ಆಯೋಜಿಸಿರುವ ಟಿಸಿಎಸ್‌ ವರ್ಲ್ಡ್ 10K ಮ್ಯಾರಥಾನ್‌ನಲ್ಲಿ ಭಾಗವಹಿಸುವವರಿಗೆ ನಮ್ಮ ಮೆಟ್ರೋ (Namma Metro) ಸಿಹಿ ಸುದ್ದಿ ನೀಡಿದೆ. ನಗರದ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್​ ಷಾ ಪರೇಡ್ ಮೈದಾನದಲ್ಲಿ ಟಿಸಿಎಸ್‌ ವರ್ಲ್ಡ್ 10K ಮ್ಯಾರಥಾನ್ (TCS World 10K Bengaluru 2024) ಶುರುವಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲು ನಮ್ಮ ಮೆಟ್ರೋ ರೈಲು ಸೇವೆ ಮುಂಜಾನೆ 3.35ರಿಂದಲೇ ಆರಂಭವಾಗಲಿದೆ.

ಸಾಮಾನ್ಯವಾಗಿ ಪ್ರತಿದಿನ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. ಆದರೆ, ಟಿಸಿಎಸ್‌ ಮ್ಯಾರಥಾನ್‌ ಪ್ರಯುಕ್ತ ಮುಂಜಾನೆ 3:35ರಿಂದ 4.25ರವರೆಗೆ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ.

ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 3.35 ರಿಂದ 4.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಆವರ್ತನದಲ್ಲಿ ರೈಲು ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಗ್ಗೆ 4.10 ಗಂಟೆಗೆ ಪ್ರಾರಂಭವಾಗಲಿದೆ. ನಂತರ 10 ನಿಮಿಷಗಳ ಅಂತರದಿಂದ ಬೆಳಿಗ್ಗೆ 5.00 ಗಂಟೆಯವರೆಗೆ ರೈಲುಗಳು ಸಂಚರಿಸಲಿದೆ. ಆ ನಂತರ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Namma Metro : ನಮ್ಮ ಮೆಟ್ರೊ ವಿಸ್ತೃತ ನೇರಳೆ ಮಾರ್ಗ ಲೋಕಾರ್ಪಣೆ ಮಾಡಿದ ಮೋದಿ; ಏನಿದರ ವಿಶೇಷತೆ?

10K ಓಟದಲ್ಲಿ ಭಾಗವಹಿಸಲು ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮೆಟ್ರೊ ಅಧಿಕಾರಿಗಳು ವಿನಿಂತಿ ಮಾಡಿದ್ದಾರೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್‌ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಹೇಳಿದೆ.

ಏ.28ರಂದು ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು: ನಗರದಲ್ಲಿ ಏಪ್ರಿಲ್ 28ರಂದು ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್‌ (TCS World 10K Bengaluru 2024) ನಡೆಯುವ ಹಿನ್ನೆಲೆಯಲ್ಲಿ ರಾಜಧಾನಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಬೆಳಗ್ಗೆ 4 ಗಂಟೆಯಿಂದ 10 ಗಂಟೆಯವರೆಗೆ ಮ್ಯಾರಥಾನ್‌ ನಡೆಯಲಿದ್ದು, ಸುಮಾರು 25,000 ಜನರು ಭಾಗವಹಿಸಲಿದ್ದಾರೆ. ಮ್ಯಾರಥಾನ್ ಸಲುವಾಗಿ ವಾಹನಗಳ ಸುಗಮ ಸಂಚಾರಕ್ಕಾಗಿ ಹಲವೆಡೆ ವಾಹನ ನಿಲುಗಡೆ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ (Traffic Restrictions) ಮಾಡಿದ್ದು, ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳಬೇಕು ಎಂದು ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ಮಾಹಿತಿ ನೀಡಿದೆ.

ವಾಹನ ಸಂಚಾರ ನಿರ್ಬಂಧಿಸಲಾಗಿರುವ ರಸ್ತೆಗಳು

  1. ವಿಧಾನಸೌಧದ ಕಡೆಗೆ ಸಂಚರಿಸುವ ವಾಹನಗಳನ್ನು ಕೆ.ಆರ್ ಸರ್ಕಲ್‌ನಲ್ಲಿ ಮಾರ್ಗ ಬದಲಾಯಿಸಿ ಪೊಲೀಸ್ ಕಾರ್ನರ್ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ವಿಧಾನಸೌಧದ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.(ಬೆಳಗ್ಗೆ 4 ರಿಂದ 8 ರವರೆಗೆ)
  2. ಬಾಳೇಕುಂದ್ರಿ ವೃತ್ತದಿಂದ ವಿಧಾನಸೌಧದ ಕಡೆಗೆ ಬರುವ ವಾಹನಗಳನ್ನು ಬಾಳೇಕುಂದ್ರಿ ಜಂಕ್ಷನ್‌ನಲ್ಲಿ ಮಾರ್ಗ ಬದಲಾಯಿಸಿ ಕನ್ನಿಂಗ್‌ಹ್ಯಾಮ್ ರಸ್ತೆ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ. (ಬೆಳಗ್ಗೆ 4 ರಿಂದ 8 ವರೆಗೆ)
  3. ಕಬ್ಬನ್‌ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಯಿಂದ ಸಿ.ಟಿ.ಓ. ವೃತ್ತದವರೆಗೆ ಎರಡೂ ಕಡೆಯಲ್ಲೂ ವಾಹನ
    ಸಂಚಾರ ನಿರ್ಬಂಧಿಸಿದೆ.(ಬೆಳಗ್ಗೆ 4 ರಿಂದ 10:30 ರವರೆಗೆ)
  4. ಕಾಫಿಬೋರ್ಡ್ ನಿಂದ ಬರುವ ಎಲ್ಲಾ ವಾಹನಗಳು ಸಿ.ಟಿ.ಓ ಸರ್ಕಲ್ ಕಡೆಗೆ ಚಲಿಸಲು ಅವಕಾಶವಿರುವುದಿಲ್ಲ. ಟ್ರಾಫಿಕ್ ಹೆಡ್‌ಕ್ವಾರ್ಟರ್ ಜಂಕ್ಷನ್‌ನಿಂದ ನೇರವಾಗಿ ಚಲಿಸುವುದು.(ಬೆಳಗ್ಗೆ 4 ರಿಂದ 10:00)

ಈ ಕೆಳಕಂಡಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ

  1. ಇಂದಿರಾನಗರ, ಕೆ.ಆರ್.ಪುರಂ, ವೈಟ್ ಪೀಲ್ಡ್‌ನಿಂದ ಬರುವ ವಾಹನಗಳ ಸಂಚಾರವನ್ನು ಆಂಜನೇಯ ಜಂಕ್ಷನ್‌ನಲ್ಲಿ ಹಲಸೂರು ಲೇಕ್ ಕಡಗೆ ಬಲತಿರುವನ್ನು ನಿಷೇಧಿಸಲಾಗಿರುತ್ತದೆ.
  2. ಸಿಂಧಿ ಕಾಲೋನಿ ಜಂಕ್ಷನ್‌ನಲ್ಲಿ ಅಸ್ಸಾಯೇ ರಸ್ತೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್‌ಜಾನ್ಸ್ ಚರ್ಚ್ ರಸ್ತೆ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
  3. ಕೀರ್ತಿ ಸಾಗರ್ ಜಂಕ್ಷನ್‌ನಲ್ಲಿ ಅಸ್ಸಾಯೆ ರಸ್ತೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್‌ಜಾನ್ಸ್ ಚರ್ಚ್ ರಸ್ತೆ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
  4. ಥಾಮ್ಸ್ ಬೇಕರಿ ಜಂಕ್ಷನ್‌ನಲ್ಲಿ ಅಸ್ಸಾಯೆ ರಸ್ತೆ ಮತ್ತು ನಾಗಾ ಜಂಕ್ಷನ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮುಖಾಂತರ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
    ನಾಗಾ ಜಂಕ್ಷನ್‌ನಲ್ಲಿ ಸೆಂಟ್ ಜಾನ್ಸ್ ರಸ್ತೆಗೆ ಮತ್ತು ಹಲಸೂರು ಕೆರೆ ಕಡೆಗೆ ಹೋಗುವ ವಾಹನಗಳನ್ನು ನಿರ್ಬಂಧಿಸಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ಹಾಗೂ ಪ್ರೊಮೈಡ್ ರಸ್ತೆ ಮುಖಾಂತರ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
  5. ಲಾವಣ್ಯ ಜಂಕ್ಷನನಲ್ಲಿ ಶ್ರೀ ಸರ್ಕಲ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ಎಸ್.ಸಿ. ಗಾರ್ಡನ್ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಭಾರೀ ವಾಹನಗಳ ಮಾರ್ಗ ಬದಲಾವಣೆ

  • ಓಲ್ಡ್ ಏರ್‌ಪೋರ್ಟ್ ರಸ್ತೆಯಿಂದ ಬರುವ ವಾಹನಗಳನ್ನು ಎ.ಎಸ್.ಸಿ ಸೆಂಟರ್‌ನಿಂದ ಇಂಡಿಯಾ ಗ್ಯಾರೇಜ್ ಮೂಲಕ ರಿಚ್‌ ಮಂಡ್ ಸರ್ಕಲ್ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.
  • ಹಲಸೂರು ಮತ್ತು ಟ್ರಿನಿಟಿ ಕಡೆಯಿಂದ ಬರುವ ವಾಹನಗಳನ್ನು ಟ್ರಿನಿಟಿ ವೃತ್ತದಲ್ಲಿ ಹಾಸ್ಕೆಟ್ ಜಂಕ್ಷನ್ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.

ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  1. ಮ್ಯಾರಥಾನ್‌ನಲ್ಲಿ ಭಾಗವಹಿಸಲು ಬರುವ ವಾಹನಗಳಿಗೆ:
  2. ಕಂಠೀರವ ಕ್ರೀಡಾಂಗಣ
  3. ಒನ್ ಎಂ.ಜಿ ಮಾಲ್
  4. ಗರುಡಾ ಮಾಲ್
  5. ಆರ್ಮಿ ಪಬ್ಲಿಕ್ ಸ್ಕೂಲ್ (ಹಿರಿಯ ನಾಗರೀಕರ ಮತ್ತು ಬಸ್ಸುಗಳಿಗಾಗಿ)
  6. ಮಣಿಪಾಲ್ ಸೆಂಟರ್ (ಮಾಧ್ಯಮದ ವಾಹನಗಳಿಗೆ)

ಇದನ್ನೂ ಓದಿ | Namma Metro: ಅಡಚಡಣೆಗಾಗಿ ಕ್ಷಮಿಸಿ; ಮೆಟ್ರೋ ಕಾಮಗಾರಿಗಾಗಿ ಈ ರೂಟ್‌ನಲ್ಲಿ 1 ವರ್ಷ ವಾಹನ ಓಡಾಟವಿಲ್ಲ

ವಾಹನ ಪಾರ್ಕಿಂಗ್‌ ನಿರ್ಬಂಧಿತ ಸ್ಥಳಗಳು

  1. ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ
  2. ಕೆ.ಬಿ. ರಸ್ತೆ
  3. ನೃಪತುಂಗ ರಸ್ತೆ
  4. ಕ್ಲೀನ್ಸ್ ರಸ್ತೆ
  5. ರಾಜಭವನ ರಸ್ತೆ
  6. ಮ್ಯೂಸಿಯಂ ರಸ್ತೆ
  7. ಕಬ್ಬನ್ ರಸ್ತೆ,
  8. ಡಾ. ಬಿ.ಆ‌ರ್. ಅಂಬೇಡ್ಕರ್ ರಸ್ತೆ
  9. ಗೋಪಾಲಗೌಡ ವೃತ್ತ
  10. ಡಿಸ್ಪೆನ್ಸರಿ ರಸ್ತೆ
  11. ಡಿಕೆನ್ಸನ್ ರಸ್ತೆ
  12. ಸೆಂಟ್ ಜಾನ್ಸ್ ರಸ್ತೆ
  13. ಅಜಂತಾ ರಸ್ತೆ
  14. ಅಣ್ಣಾಸ್ವಾಮಿ ಮೊದಲಿಯಾರ್ ರಸ್ತೆ
    ಎಂ.ಜಿ.ರಸ್ತೆ
  15. ಕಮೀಷರಿಯೇಟ್ ರಸ್ತೆ
  16. ಮಗರತ್ ರಸ್ತೆ,
  17. ಬ್ರಿಗೇಡ್ ರಸ್ತೆ
  18. ಎ.ಎಸ್.ಸಿ ಸೆಂಟರ್‌ನಿಂದ ರಿಚ್ ಮಂಡ್ ಸರ್ಕಲ್
    ವರೆಗೆ
  19. ವೆಬ್ ಜಂಕ್ಷನ್‌ನಿಂದ ಅಡಿಗಾಸ್ ವರೆಗೆ
  20. ಭಾಸ್ಕರನ್ ರಸ್ತೆ
  21. ಗಂಗಾಧರ್ ಚೆಟ್ಟಿ ರಸ್ತೆ.
  22. ವಾರ್ ಮೆಮೋರಿಯಲ್ ರಸ್ತೆ,
  23. ರೆಸಿಡೆನ್ಸಿ ರಸ್ತೆ
  24. ಎ.ವಿ.ಎಂ. ರಸ್ತೆ
  25. ಗುರುದ್ವಾರ ರಸ್ತೆ
Continue Reading

ಬೆಂಗಳೂರು

Traffic Restrictions: ಟಿಸಿಎಸ್‌ ವರ್ಲ್ಡ್ 10ಕೆ ಮ್ಯಾರಥಾನ್; ನಾಳೆ ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

Traffic Restrictions: ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್‌ ಹಿನ್ನೆಲೆಯಲ್ಲಿ ಏ.28ರಂದು ಬೆಳಗೆ 4ರಿಂದ 10ಗಂಟೆವರೆಗೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಮ್ಯಾರಥಾನ್‌ನಲ್ಲಿ ಬರುವವರಿಗೆ ವಿವಿಧೆಡೆ ಪಾರ್ಕಿಂಗ್‌ ಸೌಲಭ್ಯ ಕಲ್ಪಿಸಲಾಗಿದೆ.

VISTARANEWS.COM


on

Traffic Restrictions
Koo

ಬೆಂಗಳೂರು: ನಗರದಲ್ಲಿ ಏಪ್ರಿಲ್ 28ರಂದು ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್‌ (TCS World 10K Bengaluru 2024) ನಡೆಯುವ ಹಿನ್ನೆಲೆಯಲ್ಲಿ ರಾಜಧಾನಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಬೆಳಗ್ಗೆ 4 ಗಂಟೆಯಿಂದ 10 ಗಂಟೆಯವರೆಗೆ ಮ್ಯಾರಥಾನ್‌ ನಡೆಯಲಿದ್ದು, ಸುಮಾರು 25,000 ಜನರು ಭಾಗವಹಿಸಲಿದ್ದಾರೆ. ಮ್ಯಾರಥಾನ್ ಸಲುವಾಗಿ ವಾಹನಗಳ ಸುಗಮ ಸಂಚಾರಕ್ಕಾಗಿ ಹಲವೆಡೆ ವಾಹನ ನಿಲುಗಡೆ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ (Traffic Restrictions) ಮಾಡಿದ್ದು, ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳಬೇಕು ಎಂದು ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ಮಾಹಿತಿ ನೀಡಿದೆ.

ವಾಹನ ಸಂಚಾರ ನಿರ್ಬಂಧಿಸಲಾಗಿರುವ ರಸ್ತೆಗಳು

  1. ವಿಧಾನಸೌಧದ ಕಡೆಗೆ ಸಂಚರಿಸುವ ವಾಹನಗಳನ್ನು ಕೆ.ಆರ್ ಸರ್ಕಲ್‌ನಲ್ಲಿ ಮಾರ್ಗ ಬದಲಾಯಿಸಿ ಪೊಲೀಸ್ ಕಾರ್ನರ್ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ವಿಧಾನಸೌಧದ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.(ಬೆಳಗ್ಗೆ 4 ರಿಂದ 8 ರವರೆಗೆ)
  2. ಬಾಳೇಕುಂದ್ರಿ ವೃತ್ತದಿಂದ ವಿಧಾನಸೌಧದ ಕಡೆಗೆ ಬರುವ ವಾಹನಗಳನ್ನು ಬಾಳೇಕುಂದ್ರಿ ಜಂಕ್ಷನ್‌ನಲ್ಲಿ ಮಾರ್ಗ ಬದಲಾಯಿಸಿ ಕನ್ನಿಂಗ್‌ಹ್ಯಾಮ್ ರಸ್ತೆ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ. (ಬೆಳಗ್ಗೆ 4 ರಿಂದ 8 ವರೆಗೆ)
  3. ಕಬ್ಬನ್‌ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಯಿಂದ ಸಿ.ಟಿ.ಓ. ವೃತ್ತದವರೆಗೆ ಎರಡೂ ಕಡೆಯಲ್ಲೂ ವಾಹನ
    ಸಂಚಾರ ನಿರ್ಬಂಧಿಸಿದೆ.(ಬೆಳಗ್ಗೆ 4 ರಿಂದ 10:30 ರವರೆಗೆ)
  4. ಕಾಫಿಬೋರ್ಡ್ ನಿಂದ ಬರುವ ಎಲ್ಲಾ ವಾಹನಗಳು ಸಿ.ಟಿ.ಓ ಸರ್ಕಲ್ ಕಡೆಗೆ ಚಲಿಸಲು ಅವಕಾಶವಿರುವುದಿಲ್ಲ. ಟ್ರಾಫಿಕ್ ಹೆಡ್‌ಕ್ವಾರ್ಟರ್ ಜಂಕ್ಷನ್‌ನಿಂದ ನೇರವಾಗಿ ಚಲಿಸುವುದು.(ಬೆಳಗ್ಗೆ 4 ರಿಂದ 10:00)

ಈ ಕೆಳಕಂಡಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ

  1. ಇಂದಿರಾನಗರ, ಕೆ.ಆರ್.ಪುರಂ, ವೈಟ್ ಪೀಲ್ಡ್‌ನಿಂದ ಬರುವ ವಾಹನಗಳ ಸಂಚಾರವನ್ನು ಆಂಜನೇಯ ಜಂಕ್ಷನ್‌ನಲ್ಲಿ ಹಲಸೂರು ಲೇಕ್ ಕಡಗೆ ಬಲತಿರುವನ್ನು ನಿಷೇಧಿಸಲಾಗಿರುತ್ತದೆ.
  2. ಸಿಂಧಿ ಕಾಲೋನಿ ಜಂಕ್ಷನ್‌ನಲ್ಲಿ ಅಸ್ಸಾಯೇ ರಸ್ತೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್‌ಜಾನ್ಸ್ ಚರ್ಚ್ ರಸ್ತೆ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
  3. ಕೀರ್ತಿ ಸಾಗರ್ ಜಂಕ್ಷನ್‌ನಲ್ಲಿ ಅಸ್ಸಾಯೆ ರಸ್ತೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್‌ಜಾನ್ಸ್ ಚರ್ಚ್ ರಸ್ತೆ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
  4. ಥಾಮ್ಸ್ ಬೇಕರಿ ಜಂಕ್ಷನ್‌ನಲ್ಲಿ ಅಸ್ಸಾಯೆ ರಸ್ತೆ ಮತ್ತು ನಾಗಾ ಜಂಕ್ಷನ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮುಖಾಂತರ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
    ನಾಗಾ ಜಂಕ್ಷನ್‌ನಲ್ಲಿ ಸೆಂಟ್ ಜಾನ್ಸ್ ರಸ್ತೆಗೆ ಮತ್ತು ಹಲಸೂರು ಕೆರೆ ಕಡೆಗೆ ಹೋಗುವ ವಾಹನಗಳನ್ನು ನಿರ್ಬಂಧಿಸಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ಹಾಗೂ ಪ್ರೊಮೈಡ್ ರಸ್ತೆ ಮುಖಾಂತರ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
  5. ಲಾವಣ್ಯ ಜಂಕ್ಷನನಲ್ಲಿ ಶ್ರೀ ಸರ್ಕಲ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ಎಸ್.ಸಿ. ಗಾರ್ಡನ್ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಭಾರೀ ವಾಹನಗಳ ಮಾರ್ಗ ಬದಲಾವಣೆ

  • ಓಲ್ಡ್ ಏರ್‌ಪೋರ್ಟ್ ರಸ್ತೆಯಿಂದ ಬರುವ ವಾಹನಗಳನ್ನು ಎ.ಎಸ್.ಸಿ ಸೆಂಟರ್‌ನಿಂದ ಇಂಡಿಯಾ ಗ್ಯಾರೇಜ್ ಮೂಲಕ ರಿಚ್‌ ಮಂಡ್ ಸರ್ಕಲ್ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.
  • ಹಲಸೂರು ಮತ್ತು ಟ್ರಿನಿಟಿ ಕಡೆಯಿಂದ ಬರುವ ವಾಹನಗಳನ್ನು ಟ್ರಿನಿಟಿ ವೃತ್ತದಲ್ಲಿ ಹಾಸ್ಕೆಟ್ ಜಂಕ್ಷನ್ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.

ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  1. ಮ್ಯಾರಥಾನ್‌ನಲ್ಲಿ ಭಾಗವಹಿಸಲು ಬರುವ ವಾಹನಗಳಿಗೆ:
  2. ಕಂಠೀರವ ಕ್ರೀಡಾಂಗಣ
  3. ಒನ್ ಎಂ.ಜಿ ಮಾಲ್
  4. ಗರುಡಾ ಮಾಲ್
  5. ಆರ್ಮಿ ಪಬ್ಲಿಕ್ ಸ್ಕೂಲ್ (ಹಿರಿಯ ನಾಗರೀಕರ ಮತ್ತು ಬಸ್ಸುಗಳಿಗಾಗಿ)
  6. ಮಣಿಪಾಲ್ ಸೆಂಟರ್ (ಮಾಧ್ಯಮದ ವಾಹನಗಳಿಗೆ)

ಇದನ್ನೂ ಓದಿ | Namma Metro: ಅಡಚಡಣೆಗಾಗಿ ಕ್ಷಮಿಸಿ; ಮೆಟ್ರೋ ಕಾಮಗಾರಿಗಾಗಿ ಈ ರೂಟ್‌ನಲ್ಲಿ 1 ವರ್ಷ ವಾಹನ ಓಡಾಟವಿಲ್ಲ

ವಾಹನ ಪಾರ್ಕಿಂಗ್‌ ನಿರ್ಬಂಧಿತ ಸ್ಥಳಗಳು

  1. ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ
  2. ಕೆ.ಬಿ. ರಸ್ತೆ
  3. ನೃಪತುಂಗ ರಸ್ತೆ
  4. ಕ್ಲೀನ್ಸ್ ರಸ್ತೆ
  5. ರಾಜಭವನ ರಸ್ತೆ
  6. ಮ್ಯೂಸಿಯಂ ರಸ್ತೆ
  7. ಕಬ್ಬನ್ ರಸ್ತೆ,
  8. ಡಾ. ಬಿ.ಆ‌ರ್. ಅಂಬೇಡ್ಕರ್ ರಸ್ತೆ
  9. ಗೋಪಾಲಗೌಡ ವೃತ್ತ
  10. ಡಿಸ್ಪೆನ್ಸರಿ ರಸ್ತೆ
  11. ಡಿಕೆನ್ಸನ್ ರಸ್ತೆ
  12. ಸೆಂಟ್ ಜಾನ್ಸ್ ರಸ್ತೆ
  13. ಅಜಂತಾ ರಸ್ತೆ
  14. ಅಣ್ಣಾಸ್ವಾಮಿ ಮೊದಲಿಯಾರ್ ರಸ್ತೆ
    ಎಂ.ಜಿ.ರಸ್ತೆ
  15. ಕಮೀಷರಿಯೇಟ್ ರಸ್ತೆ
  16. ಮಗರತ್ ರಸ್ತೆ,
  17. ಬ್ರಿಗೇಡ್ ರಸ್ತೆ
  18. ಎ.ಎಸ್.ಸಿ ಸೆಂಟರ್‌ನಿಂದ ರಿಚ್ ಮಂಡ್ ಸರ್ಕಲ್
    ವರೆಗೆ
  19. ವೆಬ್ ಜಂಕ್ಷನ್‌ನಿಂದ ಅಡಿಗಾಸ್ ವರೆಗೆ
  20. ಭಾಸ್ಕರನ್ ರಸ್ತೆ
  21. ಗಂಗಾಧರ್ ಚೆಟ್ಟಿ ರಸ್ತೆ.
  22. ವಾರ್ ಮೆಮೋರಿಯಲ್ ರಸ್ತೆ,
  23. ರೆಸಿಡೆನ್ಸಿ ರಸ್ತೆ
  24. ಎ.ವಿ.ಎಂ. ರಸ್ತೆ
  25. ಗುರುದ್ವಾರ ರಸ್ತೆ

ಭಾನುವಾರ ಬೆಳಗ್ಗೆ 4.10ಕ್ಕೆ ಮೆಟ್ರೊ ರೈಲು ಸೇವೆ ಆರಂಭ

ಬೆಂಗಳೂರು: ಏಪ್ರಿಲ್​ 28ರಂದು (ಭಾನುವಾರ) ಬೆಂಗಳೂರಿನ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್​ ಷಾ ಪರೇಡ್ ಮೈದಾನದಿಂದ ನಡೆಯಲಿರುವ TCS ವರ್ಲ್ಡ್ 10K ರನ್ (TCS World 10K Run ) ಪ್ರಯುಕ್ತ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆ ಯನ್ನು 07:00 ಗಂಟೆಗೆ ಬದಲಾಗಿ ಮುಂಜಾನೆ 03:35 ಕ್ಕೆ ಆರಂಭಗೊಳ್ಳಲಿದೆ ಎಂದು ಮೆಟ್ರೊ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಗ್ಗೆ 04.10 ಗಂಟೆಗೆ ಪ್ರಾರಂಭವಾಗಲಿದೆ. ನಂತರ 10 ನಿಮಿಷಗಳ ಅಂತರದಿಂದ ಬೆಳಿಗ್ಗೆ 5.00 ಗಂಟೆಯವರೆಗೆ ರೈಲುಗಳು ಸಂಚರಿಸಲಿದೆ. ಆ ನಂತರ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Namma Metro : ನಮ್ಮ ಮೆಟ್ರೊ ವಿಸ್ತೃತ ನೇರಳೆ ಮಾರ್ಗ ಲೋಕಾರ್ಪಣೆ ಮಾಡಿದ ಮೋದಿ; ಏನಿದರ ವಿಶೇಷತೆ?

10K ಓಟದಲ್ಲಿ ಭಾಗವಹಿಸಲು ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮೆಟ್ರೊ ಅಧಿಕಾರಿಗಳು ವಿನಿಂತಿ ಮಾಡಿದ್ದಾರೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್‌ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಹೇಳಿದೆ.

Continue Reading

ಮಳೆ

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Temperature Warning: ಈ ವರ್ಷ ಬೆಂಗಳೂರು ತನ್ನೆಲ್ಲ ಹಳೆಯ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ದುಪ್ಪಟ್ಟು ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ನಡುವೆ 15 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ (Heat Wave alert) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು ದೂರ ಸರಿದಿದ್ದು, ಒಣಹವೆ (Karnataka Weather forecast) ಆವರಿಸಿದೆ. ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದೆ. ಮಾರ್ಚ್‌ನಲ್ಲಿ ಹಳೆಯ ಎಲ್ಲ ದಾಖಲೆ ಮುರಿದಿದ್ದ ಬೆಂಗಳೂರಲ್ಲಿ ಇದೀಗ ಏಪ್ರಿಲ್‌ 28ರಂದು ಗರಿಷ್ಠ ಉಷ್ಣಾಂಶವು 39 ಡಿ.ಸೆಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ (Bengaluru weather) ಮಾಹಿತಿ ನೀಡಿದೆ. ತಾಪಮಾನ (Bengaluru temperature) ಏರಿಕೆಯಿಂದ ಜನರು ಪರಿತಪಿಸುವಂತಾಗಿದೆ

ಕೂಲ್‌ ಸಿಟಿ (Cool city Bengaluru) ಎಂದು ಕರೆಸಿಕೊಳ್ಳುವ ಬೆಂಗಳೂರು ಹಾಟ್‌ ಸಿಟಿಯಾಗಿ (Bengaluru temperature) ಬದಲಾಗುತ್ತಿದೆ. ಬೆಂಗಳೂರಿನಲ್ಲೀಗ ದಾಖಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ (Temperature Warning) ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲನಾಡು ಎಂದು ಕರೆಸಿಕೊಳ್ಳುವ ಉತ್ತರ ಒಳನಾಡಿನ ಜಿಲ್ಲೆಗಳಿಗೂ ರಾಜಧಾನಿ ಬೆಂಗಳೂರು ಅಕ್ಷರಶಃ ಸೆಡ್ಡು ಹೊಡೆಯುತ್ತಿದೆ.

ಮಾರ್ಚ್‌ ಬಳಿಕ ಏಪ್ರಿಲ್‌ ಮೊದಲ ವಾರದಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಮಟ್ಟದಲ್ಲಿ ಗರಿಷ್ಠ ತಾಪಮಾನವು (Bengaluru heatwave) ದಾಖಲಾಗಿತ್ತು. ಇದೀಗ ಏಪ್ರಿಲ್‌ ಅಂತ್ಯದಲ್ಲೂ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ. ಇದರಿಂದಾಗಿ ಬಿಸಿಲ ಬೇಗೆಗೆ ತೇವಾಂಶದ ಕೊರತೆಯಿಂದಾಗಿ ಒಣ ಹವೆ (Bengaluru heat) ಮುಂದುವರಿದಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಹೀಟ್‌ ವೇವ್‌ ಶಾಕ್‌

ರಾಜ್ಯದಲ್ಲಿ ಏ.28ರಂದು ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಹೆಚ್ಚಾಗಲಿದೆ. ಹೀಗಾಗಿ ಈ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚಿಸಲಾಗಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೂ ಶುಕ್ರವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.2 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Zameer Ahmed Khan‌
ಕರ್ನಾಟಕ3 mins ago

Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

Medical Negligence
ಕ್ರೈಂ17 mins ago

Medical Negligence: ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಲಕ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​​

IPL 2024
ಕ್ರೀಡೆ34 mins ago

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

Viral News
ವೈರಲ್ ನ್ಯೂಸ್44 mins ago

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Assault Case
ಕರ್ನಾಟಕ47 mins ago

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Srinivasa Prasad
ಕರ್ನಾಟಕ52 mins ago

Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ

Gold Seized
ಕ್ರೈಂ1 hour ago

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Virat Kohli
ಪ್ರಮುಖ ಸುದ್ದಿ1 hour ago

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

Illegal Cattle Trafficking 9 Accused Arrested in gangavathi
ಕರ್ನಾಟಕ1 hour ago

Koppala News: ಅಕ್ರಮ ಜಾನುವಾರು ಸಾಗಾಟ: 9 ಜನ ಆರೋಪಿಗಳ ಬಂಧನ

Congress leader B K Hariprasad latest statement In Gangavathi
ಕೊಪ್ಪಳ1 hour ago

Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20244 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ9 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ16 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌