ಬೆಂಗಳೂರು
Fire Tragedy: ಟಿಶ್ಯೂ ಪೇಪರ್ ಕಂಪನಿ ಗೋದಾಮು ಸಂಪೂರ್ಣ ಭಸ್ಮ
ಬೆಂಗಳೂರಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಸಮೀಪದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿರುವ ಭಾರಿ ಅಗ್ನಿ ಅನಾಹುತದಲ್ಲಿ ಗಾಮಿ ಕೇರ್ ಐಜಿನ್ ಕಂಪನಿ ಎಂಬ ಟಿಶ್ಯೂ ಪೇಪರ್ ಮ್ಯಾನುಫ್ಯಾಕ್ಚರ್ ಕಂಪನಿಗೆ ಸೇರಿದ ಗೋಡೌನ್ ಪೂರ್ತಿ ಸುಟ್ಟುಹೋಗಿದೆ.
ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಟಿಶ್ಯೂ ಪೇಪರ್ ಕಂಪನಿಯ ಗೋಡೌನ್ ಸಂಪೂರ್ಣ ಭಸ್ಮವಾಗಿದೆ.
ಬೆಂಗಳೂರಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಸಮೀಪದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿರುವ ಭಾರಿ ಅಗ್ನಿ ಅನಾಹುತದಲ್ಲಿ ಗಾಮಿ ಕೇರ್ ಐಜಿನ್ ಕಂಪನಿ ಎಂಬ ಟಿಶ್ಯೂ ಪೇಪರ್ ಮ್ಯಾನುಫ್ಯಾಕ್ಚರ್ ಕಂಪನಿಗೆ ಸೇರಿದ ಗೋಡೌನ್ ಪೂರ್ತಿ ಸುಟ್ಟುಹೋಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಊಟಕ್ಕೆಂದು ಹೊರ ಹೋಗಿದ್ದ ವೇಳೆ ಗೋದಾಮಿನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಬೆಂಕಿ ಕೆಲವೇ ನಿಮಿಷಗಳಲ್ಲಿ ಇಡೀ ಗೋದಾಮನ್ನು ಆವರಿಸಿದೆ.
9 ವಾಹನಗಳಲ್ಲಿ ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸತತ ಏಳೆಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕಚೇರಿ, ತಯಾರಿಕ ಘಟಕದಲ್ಲಿದ್ದ ಕಂಪ್ಯೂಟರ್ಸ್, ಯಂತ್ರೋಪಕರಣಗಳು, ಕೆಮಿಕಲ್ಸ್, ಕಚ್ಚಾ ವಸ್ತುಗಳು ಸೇರಿದಂತೆ ಕೋಟ್ಯಾಂತರ ರೂಪಾಯಿ ಮೌಲ್ಯದ ಸ್ವತ್ತು ಬೆಂಕಿಯಲ್ಲಿ ಬೆಂದು ಬೂದಿಯಾಗಿವೆ. ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: Fire Accident: ಜೆ.ಸಿ. ನಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಪ್ರಾಣಾಪಾಯದಿಂದ ಚಾಲಕ ಪಾರು
ಕರ್ನಾಟಕ
Bengaluru Murder Case: ಬೆಂಗಳೂರಲ್ಲಿ ನೇಪಾಳಿ ಯುವಕನ ಕೊಲೆಗೆ ಕಾರಣವಾಯ್ತು ಗಾಂಜಾ ನಶೆ; ಹಂತಕರ ಸೆರೆ
Bengaluru Murder Case: ಬೆಂಗಳೂರಲ್ಲಿ ಯುವಕನೊಬ್ಬ ಗಾಂಜಾ (Drugs) ಸೇವನೆ ಮಾಡಲು ಹೋಗಿ ಹೆಣವಾಗಿದ್ದಾನೆ. ಗಾಂಜಾಕ್ಕಾಗಿ ಶುರುವಾಗಿದ್ದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದ್ದು, ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಇಲ್ಲಿನ ವಿವಿ ಪುರಂನ (VV puram) ನ್ಯೂ ತರುಗುಪೇಟೆಯಲ್ಲಿ ನೇಪಾಳಿ ಯುವಕನ ಹತ್ಯೆ (murder Case) ಮಾಡಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಗಾಂಜಾ (Durgs) ನಶೆ ಕಾರಣವೆಂದು ತಿಳಿದುಬಂದಿದೆ. ಸತೀಶ್ ಅಲಿಯಾಸ್ ಕಳಿ ಹಾಗೂ ಶ್ರೀನಿವಾಸ್ ಅಲಿಯಾಸ್ ಚಿನು ಬಂಧಿತ ಆರೋಪಿಗಳಾಗಿದ್ದು, ರಮೇಶ್ ಕೊಲೆಯಾದವನು.
ರಮೇಶ್ ತನ್ನ ಮಾವ ರತನ್ ಎಂಬುವವರ ಬಳಿ ಮನೆ ಹಾಗೂ ತೋಟಗಳಿಗೆ ಹಾಗೂ ಬೃಹತ್ ಕಟ್ಟಡಗಳಿಗೆ ಗ್ರೀನ್ ಮೆಶ್ ಅಳವಡಿಸುವ ಕೆಲಸ ಮಾಡಿಕೊಂಡಿದ್ದ. ಕಳೆದ ಭಾನುವಾರ (ಮಾ.28ರಂದು) ಮೆಟೀರಿಯಲ್ ತರಲು ತನ್ನ ಸ್ನೇಹಿತ ಇಂದ್ರೇಶ್ ಜತೆಗೆ ಜೆ.ಸಿ ರೋಡ್ಗೆ ಬಂದಿದ್ದ. ಮಾರ್ಗ ಮಧ್ಯೆ ಇಬ್ಬರು ಜತೆಯಾಗಿ ಮದ್ಯಪಾನ ಮಾಡಲು ಬಾರ್ಗೆ ಹೋಗಿದ್ದರು.
ಈ ವೇಳೆ ಅಲ್ಲೇ ಇದ್ದ ಆರೋಪಿ ಸತೀಶ್ ಹಾಗೂ ಶ್ರೀನಿವಾಸ್ ಗಾಂಜಾ ಸೇವನೆ ಮಾಡುತ್ತಿದ್ದರು. ಇದನ್ನು ನೋಡಿದ ರಮೇಶ್ ಹಾಗೂ ಇಂದ್ರೇಶ್ ಗಾಂಜಾ ಪೆಡ್ಲರ್ ಎಂದುಕೊಂಡಿದ್ದರು. ಬಳಿಕ ಆರೋಪಿಗಳ ಹಿಂದೆ ಬಿದ್ದ ರಮೇಶ್ ಹಾಗೂ ಇದ್ರೇಶ್ 500 ರೂ. ಕೊಟ್ಟು ಗಾಂಜಾ ಕೊಡುವಂತೆ ಕೇಳಿದ್ದರು. ಮೊದಲೇ ಗಾಂಜಾ ನಶೆಯಲ್ಲಿದ್ದ ಆರೋಪಿಗಳು ಗಾಂಜಾ ಇಲ್ಲವೆಂದು ಹೇಳಿದ್ದಾರೆ. ಆದರೂ ಬಿಡದ ರಮೇಶ್ ಪದೇ ಪದೆ ಗಾಂಜಾ ನೀಡುವಂತೆ ಪೀಡಿಸಿ ಜಗಳ ಶುರುಮಾಡಿದ್ದ. ಸತೀಶ್ ಹಾಗೂ ಶ್ರೀನಿವಾಸ್ಗೆ ಇವರಿಬ್ಬರೂ ಸೇರಿ ಹಲ್ಲೆ ಮಾಡಿದ್ದಾರೆ.
ಸಿಟ್ಟಿಗೆದ್ದ ಸತೀಶ್ ಹಿಂದೆಯಿಂದ ಬಂದು ಬಿಯರ್ ಬಾಟಲಿಯಿಂದ ರಮೇಶ್ ಕುತ್ತಿಗೆಯನ್ನು ಇರಿದಿದ್ದಾನೆ. ಬಳಿಕ ಇಬ್ಬರೂ ಪರಾರಿ ಆಗಿದ್ದರು. ಈ ಗಲಾಟೆಯಲ್ಲಿ ಹೇಗೋ ಇಂದ್ರೇಶ್ ತಪ್ಪಿಸಿಕೊಂಡಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದ. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದ ವಿವಿಪುರ ಪೊಲೀಸರು, ಸಿಸಿಟಿವಿ ಆಧರಿಸಿ ಪ್ರಕರಣವನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ತಮಿಳುನಾಡು ಮೂಲದವರಾಗಿದ್ದು, ನ್ಯೂ ತರುಗು ಪೇಟೆಯಲ್ಲಿ ಮೂಟೆ ಹೊರುವ ಕೆಲಸ ಮಾಡಿಕೊಂಡಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಕಾಂತಾರ ಚಿತ್ರದ ದೃಶ್ಯ ಕಳಿಸಿ ಕೊಲೆ ಬೆದರಿಕೆ! ದೂರು ದಾಖಲು
ಬೆಂಗಳೂರು: ʼಕಾಂತಾರʼ ಚಲನಚಿತ್ರದ ದೃಶ್ಯವೊಂದು ಕೊಲೆ ಬೆದರಿಕೆಗೆ ಬಳಕೆಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಜಮೀನು ವ್ಯಾಜ್ಯ ಸಂಬಂಧ ಹಿರಿಯ ನಾಗರಿಕರೊಬ್ಬರಿಗೆ ಹೀಗೆ ಕೊಲೆ ಬೆದರಿಕೆ ಹಾಕಲಾಗಿದೆ.
ಕುಣಿಗಲ್ನಲ್ಲಿ ನರಸಿಂಹಮೂರ್ತಿ ಎಂಬ ಹಿರಿಯ ನಾಗರಿಕರಿಗೆ ಶರತ್ ಕುಮಾರ್ ಎಂಬಾತ ಹೀಗೆ ಹತ್ಯೆ ಬೆದರಿಕೆ ಒಡ್ಡಿದ್ದಾನೆ. ಕುಣಿಗಲ್ನಲ್ಲಿ ಪತ್ನಿ ಹೆಸರಿನಲ್ಲಿ ನರಸಿಂಹ ಮೂರ್ತಿ ಎರಡು ಎಕರೆ ಜಮೀನು ಖರೀದಿ ಮಾಡಿದ್ದರು. ಈ ಜಮೀನಿನ ಕುರಿತು ಶರತ್ ಕುಮಾರ್ ಎಂಬಾತ ತಗಾದೆ ತೆಗೆದಿದ್ದ. ಜಮೀನಿಗೆ ಈತ ಅತಿಕ್ರಮ ಪ್ರವೇಶ ಮಾಡಿದ್ದಾನೆ ಎಂದು ಈ ಹಿಂದೆ ನರಸಿಂಹಮೂರ್ತಿ ದೂರು ನೀಡಿದ್ದರು. ಸದ್ಯ ಜಮೀನು ವ್ಯಾಜ್ಯ ನ್ಯಾಯಾಲಯದಲ್ಲಿದೆ.
ಇದನ್ನೂ ಓದಿ: SC-ST Reservation: ಒಳಮೀಸಲಾತಿ ವಿರೋಧಿಸಿ ವಿಜಯನಗರ, ಕಲಬುರಗಿಯಲ್ಲಿ ಬಂಜಾರರ ಪ್ರತಿಭಟನೆ; ಶೆಟ್ಟರ್, ಖೂಬಾ ಸಮರ್ಥನೆ
ಇದೇ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶರತ್ ಕುಮಾರ್ ತನಗೆ ಕೊಲೆ ಬೆದರಿಕೆ ಹಾಕುತ್ತಿದ್ದಾನೆ. ವಾಟ್ಸ್ಯಾಪ್ ಮೂಲಕ ʼಕಾಂತಾರʼ ಚಿತ್ರದ ದೃಶ್ಯಗಳನ್ನು ಕಳಿಸಿ ಇದೇ ರೀತಿ ಸಾಯ್ತೀಯ ಎಂದು ಬೆದರಿಕೆ ಹಾಕಿದ್ದಾನೆ ಎಂದು ನರಸಿಂಹಮೂರ್ತಿ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಎಫ್ಐಆರ್ನಲ್ಲಿ ಕೂಡ ಉಲ್ಲೇಖಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಕಿರುಕುಳ, ಕೊಲೆ ಬೆದರಿಕೆ ದೂರು ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಕರ್ನಾಟಕ
MySugar Factory: ಮೈಶುಗರ್ ಕಾರ್ಖಾನೆಗೆ ಬಾಕಿ ಇರುವ 17.42 ಕೋಟಿ ರೂ. ಬಿಡುಗಡೆ ಮಾಡಿ: ದಿನೇಶ್ ಗೂಳಿಗೌಡ
Dinesh Gooligowda: ಮೈಶುಗರ್ ಕಾರ್ಖಾನೆಗೆ ಸರ್ಕಾರದಿಂದ 17.42 ಕೋಟಿ ರೂಪಾಯಿ ಬಾಕಿ ಅನುದಾನ ಬಿಡುಗಡೆಯಾಗಬೇಕಿದ್ದು, ಈ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಬೆಂಗಳೂರು: ಮೈಸೂರು ಸಕ್ಕರೆ ಕಾರ್ಖಾನೆಯ (MySugar Factory) ಪುನಶ್ಚೇತನಕ್ಕೆ ಮಂಜೂರಾಗಿರುವ ಹಣದಲ್ಲಿ ಬಾಕಿ ಉಳಿಕೆಯಾಗಿರುವ 17.42 ಕೋಟಿ ರೂಪಾಯಿಯನ್ನು ಶೀಘ್ರವೇ ಬಿಡುಗಡೆ ಮಾಡಿ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರನ್ನು ಶುಕ್ರವಾರ (ಮಾ. 31) ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಬರುವ ಜೂನ್ನಿಂದಲೇ ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ಆರಂಭವಾಗಲಿದೆ. ಇದೇ ವೇಳೆ ಕಾರ್ಖಾನೆಯಲ್ಲಿ ಮುಂಚಿತವಾಗಿ ಹಣದ ಅವಶ್ಯಕತೆ ಇರುತ್ತದೆ. ರೈತರಿಗೆ ಮುಂಗಡ ಪಾವತಿ ಸೇರಿದಂತೆ ಕಬ್ಬು ಅರೆಯುವ ಸಂಬಂಧ ಅನೇಕ ಖರ್ಚು ವೆಚ್ಚಗಳು ಇರುತ್ತವೆ. ಆದರೆ, ಇಂತಹ ಸಂದರ್ಭದಲ್ಲಿ ಬರಬೇಕಾದ ಅನುದಾನವು ಬಿಡುಗಡೆಯಾಗದೇ ಹೋದರೆ ರೈತರಿಗೆ ಬಹಳವೇ ತೊಂದರೆಯಾಗಲಿದೆ. ಹೀಗಾಗಿ ಈ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ದಿನೇಶ್ ಗೂಳಿಗೌಡ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Karnataka Election: ಜೆಡಿಎಸ್, ಬಿಜೆಪಿಯ ತಲಾ ಒಂದು ವಿಕೆಟ್ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ
ಅಲ್ಲದೆ, ಜಿಲ್ಲೆಯಲ್ಲಿ 6112 ಎಕರೆ ಪ್ರದೇಶದಲ್ಲಿ 305600 ಮೆಟ್ರಿಕ್ ಟನ್ ಕಬ್ಬು ಬೆಳೆದ 3395 ರೈತರು 2023 ಮತ್ತು 24ನೇ ಸಾಲಿಗೆ ಕಬ್ಬು ಸರಬರಾಜು ಮಾಡಲು ಈಗಾಗಲೇ ನೋಂದಣಿ ಮಾಡಿಸಿಕೊಂಡಿದ್ದಾರೆ. ಇವರೆಲ್ಲರೂ ಜೂನ್ನಿಂದಲೇ ಕಬ್ಬು ಪೂರೈಕೆಯನ್ನು ಪ್ರಾರಂಭಿಸಬಹುದಾಗಿದ್ದು, ಇವರಿಗೆ ಆ ಸಮಯದಲ್ಲಿ ಯಾವುದೇ ತೊಂದರೆಯಾಗದಂತೆ ಹಣದ ಪಾವತಿಯಾಗಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಬಾಕಿ ಇರುವ ಅನುದಾನ ಬಿಡುಗಡೆಯಾಗಬೇಕಿದೆ ಎಂದು ದಿನೇಶ್ ಗೂಳಿಗೌಡ ಅವರು ಪತ್ರದ ಮೂಲಕ ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದ್ದಾರೆ.
ಮನವಿ ಪತ್ರದಲ್ಲೇನಿದೆ?
ಮಂಡ್ಯ ಜಿಲ್ಲೆಯ ಜನತೆಯ, ರೈತರ ಜೀವನಾಡಿಯಾಗಿರುವ ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜೂನ್ ತಿಂಗಳಿನಲ್ಲೀಯೇ ಕಬ್ಬು ಅರೆಯುವ ಕೆಲಸವನ್ನು ಪ್ರಾರಂಭಿಸುವ ಗುರಿ ಹೊಂದಲಾಗಿದೆ. ಈ ಸಾಲಿನಲ್ಲಿ ಒಟ್ಟಾರೆ ಸುಮಾರು 6 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಫೆಬ್ರವರಿ, ಮಾರ್ಚ್ ಎರಡು ತಿಂಗಳಲ್ಲಿ 3 ಲಕ್ಷ ಟನ್ ಕಬ್ಬು ಸರಬರಾಜು ಮಾಡುವುದಾಗಿ ರೈತರು ಈಗಾಗಲೇ ಕಾರ್ಖಾನೆಯೊಟ್ಟಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಕಾರ್ಖಾನೆಯಲ್ಲಿ ಯಂತ್ರಗಳ ರಿಪೇರಿ, ಹಾಗೂ ಕಬ್ಬು ನುರಿಸುವ ತಯಾರಿ ಕಾರ್ಯಕ್ಕೆ ಹಣಕಾಸಿನ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಈಗ ಸರ್ಕಾರದ ಸಹಕಾರ ಬಹಳ ಮುಖ್ಯವಾಗುತ್ತದೆ.
ಸ್ಥಗಿತಗೊಂಡಿರುವ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸರ್ಕಾರವು ನಿರ್ಧರಿಸಿ, ಮುಂದಿನ ಎರಡು ವರ್ಷಗಳ ಕಾಲ ಪ್ರಾಯೋಗಿಕವಾಗಿ ಸರ್ಕಾರದ ವತಿಯಿಂದಲೇ ಕಾರ್ಖಾನೆಯನ್ನು ನಡೆಸಲಾಗುವುದು. ಕಾರ್ಖಾನೆಯ ಯಂತ್ರೋಪಕರಣ ದುರಸ್ತಿಗಾಗಿ 50 ಕೋಟಿ ರೂ.ಗಳನ್ನು ಒದಗಿಸುವುದಲ್ಲದೆ, ಹಣಕಾಸು ಸಂಸ್ಥೆಗಳಿಂದ ದುಡಿಯುವ ಬಂಡವಾಳವನ್ನು ಪಡೆಯಲು ವ್ಯವಸ್ಥೆ ಮಾಡಲಾಗುವುದು ಎಂದು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿತ್ತು. ಅದರಂತೆ ಯಂತ್ರೋಪಕರಣಗಳ ದುರಸ್ತಿ ಮತ್ತು ಓವರ್-ಹಾಲಿಂಗ್ ಕೆಲಸಗಳಿಗೆ, ಸಾಮಗ್ರಿ ಖರೀದಿ ಮತ್ತು ಗುತ್ತಿಗೆ ಕೆಲಸಗಳನ್ನು ಕೈಗೊಳ್ಳಲು, ಕಬ್ಬು ಕಟಾವು ಮಾಡುವ ಮೇಸ್ತ್ರಿಗಳಿಗೆ ಮುಂಗಡ ಹಣ ಪಾವತಿಸಲು, ನೌಕರರಿಗೆ ಸ್ವಯಂ ನಿವೃತ್ತಿ ಸೌಲಭ್ಯ ಪಾವತಿಸುವುದಕ್ಕಾಗಿ 32.58 ಕೋಟಿ ರೂ. ಅನುದಾನವನ್ನು ಇದುವರೆಗೆ ಬಿಡುಗಡೆಗೊಳಿಸಲಾಗಿದೆ. ಬಾಕಿ ಉಳಿದಿರುವ 17.42 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸುವ ಕ್ರಮವಹಿಸಲಾಗುತ್ತಿದೆ ಎಂದು ಹೇಳಲಾಗಿತ್ತು.
ಇದನ್ನೂ ಓದಿ: Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್ ಸಿಲಿಂಡರ್ ಲೀಕ್ ಆಗಿ 7 ಕಾರ್ಮಿಕರ ದಾರುಣ ಸಾವು
ಆದ್ದರಿಂದ ಈಗಾಗಲೇ ಸರ್ಕಾರ ನೀಡಿ ಬಜೆಟ್ನಲ್ಲಿ ಘೋಷಿಸಿದ್ದ 50 ಕೋಟಿ ರೂಪಾಯಿಯಲ್ಲಿ ಬಾಕಿ ಇರುವ 17.42 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಕೊಡಬೇಕು ಎಂದು ಮಂಡ್ಯ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಅವರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ದಿನೇಶ್ ಗೂಳಿಗೌಡ ಅವರು ಪತ್ರದ ಮೂಲಕ ಕೋರಿದ್ದಾರೆ.
ಕರ್ನಾಟಕ
Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್ ಸಿಲಿಂಡರ್ ಲೀಕ್ ಆಗಿ 7 ಕಾರ್ಮಿಕರ ದಾರುಣ ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೇಡಹಳ್ಳಿಯಲ್ಲಿ ವಾರದ ಹಿಂದೆ ಸಂಭವಿಸಿದ ಗ್ಯಾಸ್ ಲೀಕೇಜ್ ಪ್ರಕರಣದಲ್ಲಿ ಗಾಯಗೊಂಡಿದ್ದವರು ದಿನಕ್ಕೊಬ್ಬರಂತೆ ಸಾಯುತ್ತಿದ್ದು, ಈಗ ಸಾವಿನ ಸಂಖ್ಯೆ ಏಳಕ್ಕೇರಿದೆ.
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕಳೆದ ಭಾನುವಾರ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸೋರಿಕೆ (Fire tragedy) ಪ್ರಕರಣವೊಂದು ಏಳು ಮಂದಿಯ ಪ್ರಾಣವನ್ನೇ ಕಸಿದಿದೆ. ಸಾವನ್ನಪ್ಪಿದವರೆಲ್ಲರೂ ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಕಾರ್ಮಿಕರಾಗಿರುವುದರಿಂದ ಆರು ದಿನಗಳ ಕಳೆದರೂ ಇದರ ಸ್ಪಷ್ಟ ಮಾಹಿತಿ ಹೊರಬಿದ್ದಿರಲಿಲ್ಲ.
ಹೊಸಕೋಟೆ ತಾಲೂಕಿನ ಮೇಡಹಳ್ಳಿಯಲ್ಲಿ ಕಳೆದ ಭಾನುವಾರ ಶೆಡ್ ಒಂದರಲ್ಲಿ ರಾತ್ರಿ ಅನಿಲ ಸೋರಿಕೆ ಆಗಿದ್ದು, ರಾತ್ರಿ ಯಾರೋ ಕರೆಂಟ್ ಹಾಕಿದಾಗ ಬೆಂಕಿ ಹತ್ತಿಕೊಂಡು ಎಂಟು ಮಂದಿಗೆ ಬೆಂಕಿಯ ಗಾಯಗಳಾಗಿದ್ದವು. ಆರಂಭಿಕ ಹಂತದಲ್ಲಿ ಇದೇನೂ ತುಂಬ ದೊಡ್ಡ ಅವಘಡದಂತೆ ಕಾಣಿಸಿರಲಿಲ್ಲ. ಆದರೆ, ದಿನ ಕಳೆದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು ಒಬ್ಬೊಬ್ಬರಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದ ಈಗ ಎಂಟು ಮಂದಿಯಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಕಾರ್ಮಿಕರನ್ನು ಕರೆದುಕೊಂಡು ಬಂದು ಇಲ್ಲಿ ಕಾಮಗಾರಿಗಳಲ್ಲಿ ದುಡಿಸಿಕೊಳ್ಳಲಾಗುತ್ತಿತ್ತು. ಅವರಿಗೆ ಒಂದು ಶೆಡ್ನಲ್ಲಿ ವಾಸವಾಗಿರಲು ವ್ಯವಸ್ಥೆ ಮಾಡಲಾಗಿತ್ತು. ಕಳೆದ ಭಾನುವಾರ ರಾತ್ರಿಯೂ ಈ ಕಾರ್ಮಿಕರು ಮೇಡಹಳ್ಳಿಯ ಅಂತಹುದೇ ಒಂದು ಶೆಡ್ನಲ್ಲಿ ಮಲಗಿದ್ದರು. ಹೊರಗಡೆ ಊಟ ಮಾಡಿಕೊಂಡು ಬಂದು ಅವರು ಇಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆಗ ಯಾವುದೋ ಕಾರಣದಿಂದ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿತ್ತು.
ನಡುವೆ ರಾತ್ರಿ ಯಾರೋ ಲೈಟ್ ಆನ್ ಮಾಡಿದಾಗ ಸೋರಿಕೆಯಾದ ಅನಿಲದಿಂದಾಗಿ ಬೆಂಕಿ ಹತ್ತಿಕೊಂಡಿತ್ತು. ಇದರಿಂದ ಮಲಗಿದ್ದವರಿಗೆಲ್ಲ ಸುಟ್ಟ ಗಾಯಗಳಾಗಿತ್ತು. ಅವರನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಆರೋಗ್ಯವಾಗಿದ್ದಾರೆ ಎಂಬಂತೆ ಕಂಡುಬಂದ ಇವರ ದೇಹದ ಒಳಗೆ ಬೆಂದ ಗಾಯಗಳು ಘಾಸಿಗೊಳಿಸಿತ್ತು. ಹೀಗಾಗಿ ದಿನ ಕಳೆದಂತೆ ಒಬ್ಬೊಬ್ಬರೇ ಪ್ರಾಣ ಕಳೆದುಕೊಳ್ಳಲಾರಂಭಿಸಿದ್ದಾರೆ. ಶುಕ್ರವಾರ ಏಳನೇ ಸಾವು ಸಂಭವಿಸಿದೆ.
ಅಮಿತ್, ಸನೋಜ್, ನೀರಜ್, ಸೋಮಯ್ ಗುಪ್ತಾ, ತಿಲಕ್ ರಾಮ್, ಲಕ್ಷ್ಮಣ್ ಮತ್ತು ಚಂದ್ರಭಾನ್ ಮೃತ ಕಾರ್ಮಿಕರು. ಈ ಘಟನೆಗೆ ಸಂಬಂಧಿಸಿ ಅರವಿಂದ ಗುಪ್ತಾ, ಮತ್ತು ಬಾಸ್ಕರ್ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶದಿಂದ, ಬಿಹಾರದಿಂದ ಕಾರ್ಮಿಕರನ್ನು ಕರೆತರುವ ಲೇಬರ್ ಕಂಟ್ರಾಕ್ಟರ್ಗಳು ಮತ್ತು ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕೆಲಸಕ್ಕಾಗಿ ಕರೆತಂದು ಸೂಕ್ತ ಮೂಲ ಸೌಕರ್ಯ ನೀಡದ ಕಾರಣ ಅವಘಡ ಸಂಭವಿಸಿದೆ. ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು
ಉತ್ತರ ಕನ್ನಡ
Karnataka Elections : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್ವೈ ಗೋಪಾಲಕೃಷ್ಣ; ಕಾಂಗ್ರೆಸ್ ಸೇರಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ!
ಕೂಡ್ಲಿ ಬಿಜೆಪಿ ಶಾಸಕ ಎನ್.ವೈ ಗೋಪಾಲಕೃಷ್ಣ ಅವರು ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜತೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹಾಗಿದ್ದರೆ ಮೊಳಕಾಲ್ಮುರು ಕ್ಷೇತ್ರದಿಂದ ಮಗನಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸುತ್ತಾರಾ?
ಶಿರಸಿ/ವಿಜಯನಗರ: ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ತಮ್ಮ ಶಾಸಕ ಸ್ಥಾನಕ್ಕೆ (Karnataka Elections) ರಾಜೀನಾಮೆ ನೀಡಿದ್ದು, ಅದರ ಬೆನ್ನಿಗೇ ರಾಜಕೀಯ ನಿವೃತ್ತಿಯ ಘೋಷಣೆಯನ್ನು ಮಾಡಿದ್ದಾರೆ. ತಾನು ಯಾವುದೇ ಪಕ್ಷ ಸೇರುವುದಿಲ್ಲ, ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದರು.
ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶಿರಸಿಯ ಅವರ ನಿವಾಸದಲ್ಲಿ ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅವರು ಕಾಂಗ್ರೆಸ್ ಸೇರುವ ಮತ್ತು ಮೊಳಕಾಲ್ಮುರು ಕ್ಷೇತ್ರದಿಂದ ಅಭ್ಯರ್ಥಿಯಾಗುವ ಸಾಧ್ಯತೆಗಳನ್ನು ಅಲ್ಲಗಳೆದರು. ಮಾತ್ರವಲ್ಲ, ತಾನು ರಾಜಕೀಯದಿಂದಲೇ ನಿವೃತ್ತಿ ಹೊಂದುವುದಾಗಿ ಪ್ರಕಟಿಸಿದರು.
ವಿಸ್ತಾರ ನ್ಯೂಸ್ನೊಂದಿಗೆ ಮಾತನಾಡಿದ ಅವರು, ನಾನು ಯಾವ ಪಕ್ಷವನ್ನೂ ಸೇರೊಲ್ಲ, ರಾಜಕೀಯದಿಂದಲೇ ದೂರವಿರುತ್ತೇನೆ ಎಂದು ಹೇಳಿದರು. ಆದರೆ ಈ ಬಾರಿ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಅವರು ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಅವರು ಸೂಚ್ಯವಾಗಿ ಹೇಳಿದ್ದಾರೆ.
ʻʻನನಗೆ ವಯಸ್ಸಾಗಿದೆ. ಕ್ಷೇತ್ರದ ಜನರು ಬೇರೆಯವರಿಗೆ ನೀಡಿ ಎನ್ನುತ್ತಿದ್ದಾರೆ. ಜೊತೆಗೆ ಮಕ್ಕಳು ನಮಗೆ ಅವಕಾಶ ನೀಡಿ ಎಂದು ಕೇಳುತ್ತಿದ್ದಾರೆ. ಆದರೆ, ಅವರು ಯಾವ ಪಕ್ಷಕ್ಕೆ ಹೋಗುತ್ತಾರೋ ಗೊತ್ತಿಲ್ಲ.ʼʼ ಎಂದು ಎನ್.ವೈ ಗೋಪಾಲಕೃಷ್ಣ ಹೇಳಿದರು.
ಮಂತ್ರಿ ಸ್ಥಾನ ನೀಡದ ಬಗ್ಗೆ ಬೇಸರ
ಆರು ಬಾರಿ ಗೆಲುವು ಸಾಧಿಸಿದರೂ ಮಂತ್ರಿ ಸ್ಥಾನ ಸಿಗಲಿಲ್ಲ ಎಂಬ ಬಗ್ಗೆ ಎನ್ವೈ ಗೋಪಾಲಕೃಷ್ಣ ಅವರಿಗೆ ಬೇಸರ ಇರುವುದು ಸ್ಪಷ್ಟವಾಗಿದೆ. ʻʻನಾಲ್ಕು ಬಾರಿ ಗೆದ್ದವರಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಆದರೆ ನಾನು ಆರು ಬಾರಿ ಶಾಸಕನಾದರೂ ಮಂತ್ರಿ ಸ್ಥಾನ ನೀಡಿಲ್ಲ. ಬಿಜೆಪಿಯೂ ನೀಡಿಲ್ಲ. ಕಾಂಗ್ರೆಸ್ ಸಹ ನೀಡಿಲ್ಲ. ಇದಕ್ಕೆ ಅಸಮಧಾನವಿದೆʼʼ ಎಮದು ಹೇಳಿದರು.
ʻʻನನಗೆ ಈಗ 73 ವರ್ಷ. ವಯಸ್ಸಾದ ಕಾರಣಕ್ಕೆ, ಆರೋಗ್ಯದ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೂ ಸೇರೋದಿಲ್ಲ. ಅದಕ್ಕೆ ರಾಜಕೀಯದಿಂದ ದೂರವಿರುತ್ತೇನೆ. ರಾಜಕೀಯ ನಿವೃತ್ತಿ ಪಡೆಯಲೆಂದೇ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶಾಸಕನಾಗಿದ್ದರೆ ಅವರು ಕರೆಯುವುದು, ಇವರು ಕರೆಯುವ ಗೊಂದಲ ಉಂಟಾಗುತ್ತದೆ. ನಾನು ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂದೆಲ್ಲ ಸುದ್ದಿಯಾಗಿದೆ. ಆದರೆ, ಸ್ಪಷ್ಟವಾಗಿ ಹೇಳುತ್ತೇನೆ. ನಾನು ಯಾವ ಪಕ್ಷಕ್ಕೂ ಹೋಗುವುದಿಲ್ಲʼʼ ಎಂದಿದ್ದಾರೆ.
ಹಾಗಿದ್ದರೆ ಮುಂದಿನ ಕಥೆ ಏನು?
ಇದುವರೆಗಿನ ಮಾಹಿತಿ ಪ್ರಕಾರ ಎನ್ವೈ ಗೋಪಾಲಕೃಷ್ಣ ಅವರು ಶಾಸಕತ್ವಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಈಗ ಸ್ವತಃ ಗೋಪಾಲಕೃಷ್ಣ ಅವರೇ ಬೇರೆ ಪಕ್ಷ ಸೇರುವ, ಸ್ಪರ್ಧಿಸುವ ಸಾಧ್ಯತೆಯನ್ನು ನಿರಾಕರಿಸಿರುವುದರಿಂದ ಮುಂದೇನು ಎಂಬ ಕುತೂಹಲ ಮೂಡಿದೆ. ಒಂದು ಸಾಧ್ಯತೆಯ ಪ್ರಕಾರ, ಎನ್.ವೈ. ಗೋಪಾಲಕೃಷ್ಣ ಅವರ ಪುತ್ರ ಮೊಳಕಾಲ್ಮುರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ. ಅದಕ್ಕಾಗಿಯೇ ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವುದು ಸ್ಪಷ್ಟ.
ಆರು ಬಾರಿ ಕಾಂಗ್ರೆಸ್ನಿಂದ ಶಾಸಕರಾಗಿದ್ದರು
ಎನ್. ಯಲ್ಲಪ್ಪ ಗೋಪಾಲಕೃಷ್ಣ ಅವರು ಒಟ್ಟು ಆರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ಮೊಳಕಾಲ್ಮುರುವಿನಿಂದ (1993ರಿಂದ 2013) ಶಾಸಕರಾಗಿದ್ದು, 2014ರಲ್ಲಿ ಕಾಂಗ್ರೆಸ್ನಿಂದ ಬಳ್ಳಾರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಅವರು 2018ರಲ್ಲಿ ಬಿಜೆಪಿ ಸೇರಿ ಕೂಡ್ಲಿಗಿ ಶಾಸಕರಾದರು.
ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ನಂತರ 2018ರಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣ ಕೂಡ್ಲಿಗಿಯಿಂದ ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಇದನ್ನೂ ಓದಿ : Karnataka Elections : ಬಿಜೆಪಿಯ ಮತ್ತೊಂದು ವಿಕೆಟ್ ಪತನ, ಕೂಡ್ಲಿಗಿ ಶಾಸಕ ಎನ್.ವೈ ಗೋಪಾಲಕೃಷ್ಣ ಕಾಂಗ್ರೆಸ್ಗೆ
-
ಸುವಚನ11 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ8 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಪ್ರಮುಖ ಸುದ್ದಿ17 hours ago
ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು
-
ಕರ್ನಾಟಕ8 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಕ್ರಿಕೆಟ್24 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ವೈರಲ್ ನ್ಯೂಸ್23 hours ago
Viral Video: ಇದು ರೋಲ್ಸ್ ರಾಯ್ಸ್ ಆಫ್ ಆಟೋ; ಒಂದು ಬಟನ್ ಪ್ರೆಸ್ ಮಾಡಿದ್ರೆ ಸಾಕು ಮೇಲ್ಭಾಗ ತೆರೆದುಕೊಳ್ಳತ್ತೆ!
-
ಕರ್ನಾಟಕ20 hours ago
ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ
-
ಕ್ರಿಕೆಟ್20 hours ago
IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ