Food Poison: ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಅಸ್ವಸ್ಥ - Vistara News

ಬೆಂಗಳೂರು

Food Poison: ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಅಸ್ವಸ್ಥ

Food Poison: ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು.

VISTARANEWS.COM


on

food poison bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯ ಪಿಜಿಯೊಂದರಲ್ಲಿ (PG) ಊಟ ಮಾಡುತ್ತಿರುವಾಗ ಇಲಿ ವಿಷ (Rat Poison spray) ಸ್ಪ್ರೇ ಮಾಡಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥಗೊಂಡು (Food Poison) ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು. ಪಿಜಿಯಲ್ಲಿ‌ ಕೆಲಸ ಮಾಡುತ್ತಿದ್ದ ಮಂಜುನಾಥ್ ಎಂಬಾತ ಸ್ಪ್ರೇ ಮಾಡಿದ್ದು, ಇದರಿಂದ ಫುಡ್‌ ಪಾಯಿಸನ್‌ ಆಗಿದೆ.

ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ತಿರದ ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿನಿಂದ ಹಾಸ್ಟೆಲ್ ನಡೆಸಲಾಗುತ್ತಿದ್ದು, ಹಾಸ್ಟೆಲ್ ಬಿಲ್ಡಿಂಗ್‌ನ ನೆಲ‌ ಮಹಡಿಯಲ್ಲಿ ಊಟದ ಹಾಲ್ ಇದೆ. ಜ್ಞಾನ‌ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿಡ್ನ್ಯಾಪ್ ಮಾಡಿ ಮಹಿಳೆ ಮೇಲೆ ಅತ್ಯಾಚಾರ, ಮಗನ ಮೇಲೂ ಹಲ್ಲೆ; 9 ಆರೋಪಿಗಳ ಅರೆಸ್ಟ್‌

ಬೆಂಗಳೂರು: ತಾಯಿ-ಮಗನನ್ನು ಕಿಡ್ನ್ಯಾಪ್‌ ಮಾಡಿ ಕಿರುಕುಳ ನೀಡಿದ ಆರೋಪದಲ್ಲಿ 9 ಆರೋಪಿಗಳನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕಿಡ್ನ್ಯಾಪ್‌ ಆಗಿದ್ದ ಯುವಕನ ಮೇಲೆ ಕಳ್ಳತನ ಪ್ರಕರಣಗಳಿದ್ದವು. ಹೀಗಾಗಿ ಹಣ ವಸೂಲಿ ಮಾಡಲು ಯುವಕ ಹಾಗೂ ಆತನ ತಾಯಿಯನ್ನು ಆರೋಪಿಗಳು ಅಪಹರಿಸಿ, ಕಿರುಕುಳ (Physical Abuse) ನೀಡಿದ್ದರು. ಹೀಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವರುಣ್ ಮತ್ತು ಆತನ ತಾಯಿಯನ್ನು ಅಪಹರಣ ಮಾಡಲಾಗಿತ್ತು. ರೌಡಿ ಶೀಟರ್‌ಗಳಾದ ಜೋಸೆಫ್, ಶ್ರೀನಿವಾಸ್ @ ಪಾಗಲ್ ಸೀನಾ, ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಬಂಧಿತ ಆರೋಪಿಗಳು.

ವರುಣ್ ಹಾಗೂ ತಾಯಿ ಇಬ್ಬರು ಸೇರಿ ಕಳ್ಳತನ ಮಾಡಿರುವ ವಿಚಾರ ಆರೋಪಿಗಳಿಗೆ ತಿಳಿದಿತ್ತು. ಹಾಗಾಗಿ ಕಳ್ಳತನ ಮಾಡಿರುವ ಹಣ ನೀಡುವಂತೆ ತಾಯಿ-ಮಗನನ್ನು ಆರೋಪಿಗಳು ಬೆದರಿಸಿದ್ದರು. ಆದರೆ, ಅವರು ಹಣ ನೀಡದ ಹಿನ್ನೆಲೆ ತಾಯಿ- ಮಗನನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು.

ಆ. 13ರಂದು ತಾಯಿ-ಮಗನನ್ನು ಆರೋಪಿಗಳಾದ ಜೋಸೇಫ್ ಮತ್ತು ಶ್ರೀನಿವಾಸ್@ಪಾಗಲ್ ಸೀನಾ ಕಿಡ್ನ್ಯಾಪ್‌ ಮಾಡಿದ್ದರು. ನಂತರ ಪರಿಚಯಸ್ಥ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ನೀಡಲಾಗಿದೆ. ಈ ವೇಳೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು.

2 ಲಕ್ಷ ರೂ. ಕೊಡುವಂತೆ ಆರೋಪಿಗಳಿಂದ ಕಿರುಕುಳ ನೀಡಲಾಗಿದೆ. ಇಬ್ಬರ ಬಳಿಯೂ ಹಣ ಇಲ್ಲ ಎಂದು ಗೊತ್ತಾದಾಗ ಬಿಟ್ಟು ಕಳಿಸಿದ್ದಾರೆ. ನಂತರ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದರಿಂದ ಪ್ರಕರಣ ಸಂಬಂದ 9 ಆರೋಪಿಗಳ ಬಂಧನವಾಗಿದೆ.

ಆರೋಪಿಗಳಾದ ಜೋಸೆಫ್ ಮತ್ತು ಪಾಗಲ್ ಸೀನ ಚಂದ್ರಾ ಲೇಔಟ್ ರೌಡಿ ಶೀಟರ್‌ಗಳಾಗಿದ್ದು, ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ | Food Poisoning: ಶಾಲೆಯಲ್ಲಿ ಕೊಟ್ಟ ಬಿಸ್ಕೇಟ್‌ ಸೇವಿಸಿ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Physical Abuse: ಪಾರ್ಟಿ ಮುಗಿಸಿ ಲಿಫ್ಟ್‌ ಕೇಳಿದ ಯುವತಿಯ ಮೇಲೆರಗಿದ ಕಾಮುಕನ ಬಂಧನ; ಸಂತ್ರಸ್ತೆಯ ಜೀವ ಉಳಿಸಿದ SOS ಬಟನ್!

Physical Abuse: ಅನ್ಯರಾಜ್ಯದ ಯುವತಿ ಬೆಂಗಳೂರಿನಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದು ಗೆಟ್‌ ಟುಗೆದರ್‌ ಪಾರ್ಟಿಗಾಗಿ ಸ್ನೇಹಿತರ ಜೊತೆ ಹೋಗಿದ್ದಳು. ವಾಪಸ್ ಆಗುತ್ತಿದ್ದ ಯುವತಿಯನ್ನು ಈ ಯುವಕ ಬೈಕ್‌ನಲ್ಲಿ ಡ್ರಾಪ್‌ ನೆಪದಲ್ಲಿ ಕರೆದೊಯ್ದಿದ್ದಾನೆ.

VISTARANEWS.COM


on

physical abuse hsr layout
Koo

ಬೆಂಗಳೂರು: ಪಾರ್ಟಿ ಮುಗಿಸಿದ ಬಳಿಕ ಮನೆಗೆ ಹೋಗಲು ಅಪರಿಚಿತನ ಬಳಿ ಲಿಫ್ಟ್‌ ಕೇಳಿದ ಯುವತಿಯನ್ನು ಎಚ್‌ಎಸ್‌ಆರ್‌ ಲೇಔಟ್‌ನ (HSR Layout) ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ (Physical Abuse) ಎಸಗಿದ ಪಾತಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಫೂಟೇಜ್‌ (CCTV footage) ಆಧರಿಸಿ ಕಾಮುಕನನ್ನು (Culprit) ಪತ್ತೆಹಚ್ಚಲಾಗಿದೆ.

ಅನ್ಯರಾಜ್ಯದ ಯುವತಿ ಬೆಂಗಳೂರಿನಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದು ಗೆಟ್‌ ಟುಗೆದರ್‌ ಪಾರ್ಟಿಗಾಗಿ ಸ್ನೇಹಿತರ ಜೊತೆ ಹೋಗಿದ್ದಳು. ವಾಪಸ್ ಆಗುತ್ತಿದ್ದ ಯುವತಿಯನ್ನು ಈ ಯುವಕ ಬೈಕ್‌ನಲ್ಲಿ ಡ್ರಾಪ್‌ ನೆಪದಲ್ಲಿ ಕರೆದೊಯ್ದಿದ್ದಾನೆ. ಬೊಮ್ಮನಹಳ್ಳಿ ಸಮೀಪದ ಶೆಡ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಪ್ರಕರಣದ ಸ್ಥಳದ ಸಿಸಿಟಿವಿ ಫೂಟೇಜ್‌ ಆಧರಿಸಿ ಆರೋಪಿಯನ್ನು ಹೆಚ್​ಎಸ್​ಆರ್​ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್​ 17ರ ರಾತ್ರಿ 1 ಗಂಟೆ ಸುಮಾರಿಗೆ ಕೋರಮಂಗಲದಲ್ಲಿ ಪಾರ್ಟಿ ಮುಗಿಸಿಕೊಂಡು ವಾಪಸ್‌ ಬರುವಾಗ ಸ್ನೇಹಿತರಿಂದ ಬೇರ್ಪಟ್ಟಿದ್ದಾಳೆ. ಹೆಬ್ಬಗೋಡಿಯಲ್ಲಿರೋ ಮನೆ ಸೇರಬೇಕಿದ್ದ ಯುವತಿ, ಅಪರಿಚಿತನ ಬೈಕ್‌ ಹತ್ತಿದ್ದಾಳೆ. ಆ ಬೈಕ್‌ನಲ್ಲಿ ಡ್ರಾಪ್‌ ಪಡೆದವಳು ಮಾರ್ಗಮಧ್ಯೆ ಕೆಳಗಿಳಿದ್ದಾಳೆ. ಸ್ವಲ್ಪದೂರ ನಡೆದುಕೊಂಡು ಹೋದವಳು, ಮತ್ತೊಂದು ಬೈಕ್‌ ಹತ್ತಿದ್ದಾಳೆ. ಯುವತಿ ಮದ್ಯದ ನಶೆಯಲ್ಲಿರುವುದನ್ನು ಬಂಡವಾಳ ಮಾಡಿಕೊಂಡ ಈತ, ಬೊಮ್ಮನಹಳ್ಳಿ ಸಮೀಪದ ನಿರ್ಜನವಾದ ಲಾರಿ ನಿಲ್ಲಿಸುವ ಜಾಗಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಆರೋಪಿಯ ಆಡುಗೋಡಿಯ ನಿವಾಸದಿಂದ ಆತನನ್ನು ಬಂಧಿಸಲಾಗಿದೆ. ಸದ್ಯ ತನಿಖೆ ಮುಂದುವರೆದಿದ್ದು ಆರೋಪಿಯ ಹೆಚ್ಚಿನ ವಿವರ ಗೊತ್ತಾಗಬೇಕಿದೆ. ಕೊರಿಯೋಗ್ರಾಫರ್ ಆಗಿರುವ ಅತ್ಯಾಚಾರ ಆರೋಪಿ ಇದೇ ಸಮಯದಲ್ಲಿ ಕೋರಮಂಗಲ ಪಬ್​ಗೆ ಪಾರ್ಟಿಗೆ ಬಂದಿದ್ದ. ಮನೆಗೆ ತೆರಳುವಾಗ ಯುವತಿ‌ ಡ್ರಾಪ್ ಕೇಳಿದ್ದಾಳೆ. ಯುವತಿ ಕೂಡ ಕೋರಮಂಗಲದ ಪಬ್​ನಲ್ಲಿ ಪಾರ್ಟಿ ಮುಗಿಸಿ ಹೊರಟಿದ್ದಳು.

ಆರೋಪಿ ಅತ್ಯಾಚಾರದ ವೇಳೆ ಯುವತಿಯ ಬಟ್ಟೆ ಹರಿದು ಕ್ರೌರ್ಯ ಮೆರೆದಿದ್ದಾನೆ. ಈ ವೇಳೆ ಯುವತಿ ಕೂಡ ಈತನ ಕೃತ್ಯಕ್ಕೆ ಪ್ರತಿರೋಧ ಒಡ್ಡಿದ್ದು ಆತನ ಬಟ್ಟೆ ಹರಿದು, ಮುಖಕ್ಕೆ ಪರಚಿದ್ದಾಳೆ. ಇದೇ ವೇಳೆಗೆ ಯುವತಿಯ ಸ್ನೇಹಿತರು ಕೂಡ ಸ್ಥಳಕ್ಕೆ ಬಂದಿದ್ದು ಇದರಿಂದ ಹೆದರಿ ಆರೋಪಿ ಪರಾರಿಯಾಗಿದ್ದ. BNS ಕಾಯ್ದೆ 64 ಅಡಿಯಲ್ಲಿ HSR ಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಕಾಮುಕ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದಂತೆ ಯುವತಿ ಮೊಬೈಲ್​ನಲ್ಲಿ ಎಮರ್ಜೆನ್ಸಿ SOS ಬಟನ್ ಒತ್ತಿದ್ದಾಳೆ. ತಕ್ಷಣ ಮಾಹಿತಿ ಸ್ನೇಹಿತರಿಗೆ ಹೋಗಿದೆ. ಸ್ಥಳಕ್ಕೆ ದೌಡಾಯಿಸಿದ ಸ್ನೇಹಿತರು ಯುವತಿಯ ಜೀವ ಉಳಿಸಿದ್ದಾರೆ. ಸ್ಥಳದಲ್ಲೆ ಅರೆ ನಗ್ನ ಸ್ಥಿತಿಯಲ್ಲಿದ್ದ ಅಪರಿಚಿತ ಓಡಿ ಹೋಗಿದ್ದಾನೆ. ಆತನ ಮುಖದ ಮೇಲೆ ಪರಚಿದ ಗಾಯಗಳಾಗಿವೆ ಎಂದು ಸ್ನೇಹಿತರು ಮಾಹಿತಿ ಕೊಟ್ಟು ದೂರು ದಾಖಲಿಸಿದ್ದರು. ಅಸ್ವಸ್ಥಗೊಂಡಿದ್ದ ಯುವತಿ ಬೊಮ್ಮಸಂದ್ರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಕೋಲ್ಕತಾದಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಭೀಕರ ಕೊಲೆಯ ಬಳಿಕ, ಇಂಥ ಪ್ರಕರಣಗಳ ಬಗ್ಗೆ ಕಳವಳ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಸದ್ದು ಮಾಡಿತ್ತು.

ಇದನ್ನೂ ಓದಿ: Physical Abuse: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್ಐಆರ್ ದಾಖಲು

Continue Reading

ಪ್ರಮುಖ ಸುದ್ದಿ

CM Siddaramaiah: ಇಂದು ಕಟಕಟೆ ಏರಲಿದೆ ಮುಡಾ ಪ್ರಕರಣ; 20 ಅಂಶಗಳೊಂದಿಗೆ ಸಿದ್ದರಾಮಯ್ಯ ಹೈಕೋರ್ಟ್‌ಗೆ; ಇಂದು ಏನೇನಾಗಲಿದೆ?

CM Siddaramaiah: ಸಿಎಂ ಸಿದ್ದರಾಮಯ್ಯ ಘಟಾನುಘಟಿ ವಕೀಲರನ್ನು ಮುಂದಿಟ್ಟುಕೊಂಡು ಕಾನೂನು ಸಮರಕ್ಕೆ ಸಜ್ಜಾಗಿದ್ದು, ಇಂದೇ ಹೈ ವೋಲ್ಟೇಜ್‌ ಲೀಗಲ್‌ ಫೈಟ್‌ ಆರಂಭವಾಗಲಿದೆ. ನ್ಯಾಯವಾದಿಗಳಾದ ಅಭಿಷೇಕ್ ಮನು ಸಿಂಗ್ವಿ ಹಾಗೂ ಕಪಿಲ್ ಸಿಬಲ್ ಟೀಮ್‌ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ.

VISTARANEWS.COM


on

CM Siddaramaiah and high court
Koo

ಬೆಂಗಳೂರು: ಮುಡಾ ಹಗರಣಕ್ಕೆ (MUDA Scam, MUDA case) ಸಂಬಂಧಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governir Thawar Chand Gehlot) ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಂದು ದೂರುದಾರರು ಅಧಿಕೃತವಾಗಿ ಹೈಕೋರ್ಟ್‌ಗೆ (High Court) ತೆರಳಿ ರಾಜ್ಯಪಾಲರ ಆದೇಶದ ಪ್ರತಿಯನ್ನು ನೀಡಲಿದ್ದಾರೆ. ಇತ್ತ ಸಿಎಂ ಕೂಡ ಘಟಾನುಘಟಿ ವಕೀಲರನ್ನು ಮುಂದಿಟ್ಟುಕೊಂಡು ಕಾನೂನು ಸಮರಕ್ಕೆ ಸಜ್ಜಾಗಿದ್ದು, ಇಂದೇ ಹೈ ವೋಲ್ಟೇಜ್‌ ಲೀಗಲ್‌ ಫೈಟ್‌ ಆರಂಭವಾಗಲಿದೆ.

ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಟ್ಟ ನಡೆಯನ್ನು ಹೈಕೋರ್ಟ್‌ ಮುಂದೆ ಸಿಎಂ ಪ್ರಶ್ನೆ ಮಾಡಲಿದ್ದಾರೆ. ಸಿಎಂ ಸಲ್ಲಿಕೆ ಮಾಡಲಿರುವ ಅರ್ಜಿಯಲ್ಲಿ 20 ಅಂಶಗಳನ್ನು ಪ್ರಸ್ತಾಪ ಮಾಡಿದ್ದಾರೆ.

1) ರಾಜ್ಯಪಾಲರು ಕಾನೂನು ಹಾಗೂ ಸಂವಿಧಾನದ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ.

2) ಎಸ್ಓಪಿ ನಿಯಮ ಪಾಲನೆ ಮಾಡಿಲ್ಲ. ಎಸ್ಓಪಿ ಬಗ್ಗೆ ರಾಜ್ಯಪಾಲರಿಗೆ ಅರಿವಿಲ್ಲ. ಕೇಂದ್ರ ಸರ್ಕಾರ ಮಾಡಿರುವ ಹೊಸ ಕಾನೂನಿನ ವಿರುದ್ಧ ನಡೆದುಕೊಂಡಿದ್ದಾರೆ.

3) ಈ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ.

4) ಇದೊಂದು ಸಿವಿಲ್ ಮೊಕದ್ದಮೆಯೇ ಹೊರತು ಕ್ರೈಮ್ ಅಲ್ಲ

5) ಮುಡಾದಲ್ಲಿ ಪಡೆದ ನಿವೇಶನಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ

6) ಅದು ನನ್ನ ಪತ್ನಿಗೆ ಅವರ ಸಹೋದರರಿಂದ ಬಂದ ಗಿಫ್ಟ್

7) ನನ್ನ ಪತ್ನಿಯ ಆಸ್ತಿಯನ್ನು ಮುಡಾ ಅಧಿಕಾರಿಗಳು ಅಕ್ರಮವಾಗಿ ಸ್ವಾಧೀನ ಮಾಡಿದ್ದಾರೆ

8) ಅದಕ್ಕೆ ಮುಡಾದವರು 14 ನಿವೇಶನಗಳನ್ನ ಪರ್ಯಾಯವಾಗಿ ನೀಡಿದ್ದಾರೆ

9) ಇದು ಎಲ್ಲ ಪ್ರಕ್ರಿಯೆ ನಡೆದಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ

10) ಇಂತಹ ಆರೋಪ ಬಂದ ತಕ್ಷಣ ಒನ್ ಮ್ಯಾನ್ ಕಮಿಷನ್ ನೇಮಕ ಮಾಡಿದ್ದೇವೆ. ಕಮಿಷನ್ ತನಿಖೆ ಮಾಡ್ತಿದೆ

11) ನ್ಯಾಯಾಂಗ ತನಿಖೆಯ ಸಮಿತಿ ಮಾಹಿತಿ ಸಹ ರಾಜ್ಯಪಾಲರು ಪಡೆದಿಲ್ಲ

12) ದೂರುದಾರರ ಬಗ್ಗೆ ಹಲವು ಅನುಮಾನಗಳಿವೆ

13) ಪ್ರದೀಪ್ ಜೆಡಿಎಸ್ ವಕ್ತಾರ

14) ಅಬ್ರಹಾಂ ಈ ಹಿಂದೆ ಹಲವು ದೂರುಗಳನ್ನು ಕೊಟ್ರೂ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿಲ್ಲ. ಒಬ್ಬ ಅಧಿಕಾರಿಯನ್ನು ಬ್ಲಾಕ್‌ ಮೇಲ್ ಮಾಡಿದ ಪ್ರಕರಣದಲ್ಲಿ ಆರೋಪಿ ಆಗಿದ್ದಾರೆ.

15) ಇದೊಂದು ರಾಜಕೀಯ ಪ್ರೇರಿತ ಪ್ರಕರಣ

16) ರಾಜ್ಯ ಸರ್ಕಾರವನ್ನ ಬುಡಮೇಲು ಮಾಡುವ ಹುನ್ನಾರ

17) ದೆಹಲಿ ಸೇರಿದಂತೆ ಇತರೆ ರಾಜ್ಯಗಳಲ್ಲಿ ರಾಜ್ಯಪಾಲರ ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರಗಳನ್ನ ಅಭದ್ರ ಮಾಡಿ ಇಲ್ಲಿಯೂ ಅದನ್ನೇ ಮಾಡುವ ಕೆಲಸ ಮಾಡ್ತಿದ್ದಾರೆ

18) ನನ್ನ ವಿರುದ್ಧ ಮಾಜಿ ಪಿಎಂ ಎಚ್‌ಡಿ ದೇವೇಗೌಡ, ಕುಮಾರಸ್ವಾಮಿ ಹಾಗೂ ಬಿಎಸ್‌ವೈ ಸೇರಿದಂತೆ ಬಿಜೆಪಿಯ ಕೇಂದ್ರ ನಾಯಕರು ನನ್ನ ವಿರುದ್ಧ ಮಾಡ್ತಿರುವ ಷಡ್ಯಂತ್ರ

19) ಈ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲದಿದ್ದರೂ ನನ್ನ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಟ್ಟ ರಾಜ್ಯಪಾಲರ ಆದೇಶ ಸರಿಯಲ್ಲ

20) ಹೀಗಾಗಿ ಪ್ರಾಸಿಕ್ಯೂಶನ್‌ಗೆ ಕೊಟ್ಟ ಕ್ರಮ ಸರಿಯಿಲ್ಲ ಎಂದು ಆದೇಶ ಮಾಡಬೇಕೆಂದು ಮನವಿ.

ಘಟಾನುಘಟಿ ನ್ಯಾಯವಾದಿಗಳು

ಅಭಿಷೇಕ್ ಮನು ಸಿಂಗ್ವಿ ಹಾಗೂ ಕಪಿಲ್ ಸಿಬಲ್ ಟೀಮ್‌ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಈಗಾಗಲೇ ಹೈಕೋರ್ಟ್‌ಗೆ ಸಲ್ಲಿಸಬೇಕಿರುವ ಅರ್ಜಿ ತಯಾರು ಮಾಡಿರುವ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ನೆರವಿನೊಂದಿಗೆ ಹೈಕೋರ್ಟ್‌ನಲ್ಲಿ ವಾದ ಮಂಡನೆಗೆ ತಯಾರಿ ಶುರು ಮಾಡಲಾಗಿದೆ. ಇಂದು ಅರ್ಜಿ ದಾಖಲು ಮಾಡಿ ತ್ವರಿತ ವಿಚಾರಣೆಗೆ ಸಿಎಂ ಪರ ವಕೀಲರು ಒತ್ತಾಯ ಮಾಡಲಿದ್ದಾರೆ.

ದೆಹಲಿಯಿಂದ ಅಭಿಷೇಕ್ ಮನುಸಿಂಗ್ವಿ ಹಾಗೂ ಕಪಿಲ್ ಸಿಬಲ್ ಬಂದ ತಕ್ಷಣ ಅರ್ಜಿ ಪರಿಶೀಲನೆ ಮಾಡಿ ಕೋರ್ಟ್ ಮೊರೆ ಹೋಗಲಿದ್ದಾರೆ. 20, 21ನೇ ತಾರೀಕು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತೀರ್ಪು ಇರೋದರಿಂದ ಅದಕ್ಕೂ ಮೊದಲೇ ಅರ್ಜಿ ವಿಚಾರಣೆ ಮಾಡುವಂತೆ ಮನವಿ ಮಾಡುವ, ಜನಪ್ರತಿನಿಧಿಗಳ ನ್ಯಾಯಾಲಯದ ವಿಚಾರಣೆಗೆ ತಡೆ ಕೊಡುವಂತೆಯೂ ಮನವಿ ಮಾಡುವ ಸಾಧ್ಯತೆ ಇದೆ.

ಕಾಂಗ್ರೆಸ್ ನಾಯಕರಿಗೆ ಕಾನೂನು ಸಂಕಷ್ಟ ಬಂದಾಗಲೆಲ್ಲ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನುಸಿಂಗ್ವಿ ಎಂಟ್ರಿ ಕೊಡುತ್ತಿದ್ದು, ಡಿಕೆ ಶಿವಕುಮಾರ್ ಪ್ರಕರಣಗಳಲ್ಲೂ ವಕಾಲತ್ತು ವಹಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಇವರು ಹೆಸರಾಂತ ವಕೀಲರುಗಳಾಗಿದ್ದಾರೆ.

ಅಂದು ಯಡಿಯೂರಪ್ಪ ಇಂದು ಸಿದ್ದರಾಮಯ್ಯ

2010-11ರಲ್ಲಿ ಯಡಿಯೂರಪ್ಪ ವಿರುದ್ಧವೂ ಆರು ಪಿಸಿಆರ್‌ಗಳು ದಾಖಲಾಗಿದ್ದವು. ಬಾಲರಾಜು ಎಂಬವರಿಂದ ದಾಖಲಾಗಿದ್ದ ಪ್ರಕರಣಗಳಲ್ಲಿ ರಾಜ್ಯಪಾಲರ ಅನುಮತಿ ಪಡೆದು ದೂರು ದಾಖಲು ಮಾಡಲಾಗಿತ್ತು. ರಾಜ್ಯಪಾಲರ ಅನುಮತಿ ಪ್ರಶ್ನೆ ಮಾಡಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ರಾಜ್ಯಪಾಲರ ನಿರ್ಧಾರ ಕಾನೂನು ಬಾಹಿರ ಎಂದು ವಾದ ಮಂಡಿಸಿದ್ದರು. ಕೆಳ ನ್ಯಾಯಾಲಯದ ವಿಚಾರಣೆಗೆ ತಡೆ ಪಡೆದಿದ್ದರು. ಬಳಿಕ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿ ರಾಜ್ಯಪಾಲರ ಪ್ರಾಸಿಕ್ಯೂಶನ್ ನೀಡಿದ್ದು ಸರಿ ಇದೆ ಎಂದು ಹೈಕೋರ್ಟ್ ಹೇಳಿತ್ತು. ಲೋಕಾಯುಕ್ತ ಕೋರ್ಟ್‌ನಲ್ಲಿ ವಿಚಾರಣೆ ನಡೆದು ಯಡಿಯೂರಪ್ಪ ಜೈಲಿಗೆ ಹೋಗಿದ್ದರು.

ಈಗ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಪ್ರಕರಣದಲ್ಲಿ, ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಪರ ತೀರ್ಪು ಬಂದರೆ ಸದ್ಯಕ್ಕೆ ಸುರಕ್ಷಿತರಾಗುತ್ತಾರೆ. ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದ್ರೆ ಸಿಎಂ ಸ್ಥಾನಕ್ಕೂ ಕುತ್ತು ಬರಬಹುದು. ಆರೋಪಿಯನ್ನು ವಶಕ್ಕೆ ಪಡೆಯುವುದು ಅಗತ್ಯವಿದೆ ಎಂದು ತನಿಖಾಧಿಕಾರಿ ವಾದ ಮಂಡಿಸಿದರೆ ಬಂಧನಕ್ಕೂ ಕೋರ್ಟ್ ಸೂಚಿಸಬಹುದು. ಬಂಧನದ ಪ್ರಕ್ರಿಯೆ ಕೊನೆಯ ಆಯ್ಕೆಯಾಗಿದೆ.

ಇದನ್ನೂ ಓದಿ: CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

Continue Reading

ಕ್ರೈಂ

Murder Case: ಗಂಡನ ಫೈನಾನ್ಸ್‌ ವ್ಯವಹಾರಕ್ಕಾಗಿ ಹೆಂಡತಿಯ ಹತ್ಯೆ; ಕೊಲೆ ಮಾಡಿ ತಿರುಪತಿಯಲ್ಲಿ ತಲೆಮರೆಸಿಕೊಂಡವರ ಸೆರೆ

Murder Case: ದಿವ್ಯಶ್ರೀ ಅವರ ಗಂಡನ ಫೈನಾನ್ಸ್‌ ವ್ಯವಹಾರಕ್ಕೆ ಸಂಬಂಧಿಸಿ ಚಿಂತಾಮಣಿಯಲ್ಲಿರುವ ಜಮೀನಿನ ವ್ಯಾಜ್ಯದ ವಿಚಾರದಲ್ಲಿ ಕೊಲೆ ನಡೆದಿದೆ. ಕೊಲೆಗಾಗಿ ಸುಪಾರಿ ನೀಡಿದ ಆರೋಪಿಗಾಗಿ ಹುಡುಕಾಟ ನಡೆದಿದೆ. ಆರೋಪಿಗಳಲ್ಲಿ ಹೆಚ್ಚಿನವರು ಅಪ್ರಾಪ್ತ ವಯಸ್ಕರಾಗಿದ್ದಾರೆ.

VISTARANEWS.COM


on

kolar teacher murder case
Koo

ಕೋಲಾರ: ಮನೆಗೆ ನುಗ್ಗಿ ಶಿಕ್ಷಕಿಯ ಕೊಲೆ (Teacher Murder Case) ಮಾಡಿದ ಪ್ರಕರಣದಲ್ಲಿ ತಿರುಪತಿಯಲ್ಲಿ ತಲೆ ಮರೆಸಿಕೊಂಡಿದ್ದ ಆರು ಮಂದಿಯನ್ನು ಕೋಲಾರ ಪೊಲೀಸರು (Kolar news) ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಸುಂಕ ಲೇಔಟ್ ಬಡಾವಣೆಯಲ್ಲಿ ಕೊಲೆ ಪ್ರಕರಣ ನಡೆದಿತ್ತು. ಆಗಸ್ಟ್ 14ರ ಸಂಜೆ ದಿವ್ಯಶ್ರೀ (43) ಎಂಬ ಶಿಕ್ಷಕಿಯನ್ನು ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ ಆರೋಪಿಗಳು ಆಂಧ್ರಪ್ರದೇಶದ ತಿರುಪತಿಯಲ್ಲಿ ತಲೆ ಮರೆಸಿಕೊಂಡಿದ್ದರು. ಆರೋಪಿಗಳನ್ನು ಭುವನ್‌ ಪತ್ರಹಳ್ಳಿ, ರಂಜಿತ್‌ ಮುಳಬಾಗಿಲು, ಶಹೀದ್‌ ನಂಗಲಿ, ರಾಹುಲ್‌ ಮಲ್ಲೇಕುಪ್ಪ, ಭರತ್‌ ಗುಮ್ಮಕಲ್‌, ಯಶ್ವಂತ್‌ ಮಲ್ಲೇಕುಪ್ಪ ಎಂದು ಗುರುತಿಸಲಾಗಿದೆ.

ದಿವ್ಯಶ್ರೀ ಅವರ ಗಂಡನ ಫೈನಾನ್ಸ್‌ ವ್ಯವಹಾರಕ್ಕೆ ಸಂಬಂಧಿಸಿ ಚಿಂತಾಮಣಿಯಲ್ಲಿರುವ ಜಮೀನಿನ ವ್ಯಾಜ್ಯದ ವಿಚಾರದಲ್ಲಿ ಕೊಲೆ ನಡೆದಿದೆ. ಕೊಲೆಗಾಗಿ ಸುಪಾರಿ ನೀಡಿದ ಆರೋಪಿಗಾಗಿ ಹುಡುಕಾಟ ನಡೆದಿದೆ. ಆರೋಪಿಗಳಲ್ಲಿ ಅಪ್ರಾಪ್ತ ವಯಸ್ಕರೂ ಇದ್ದು, ಮಾದಕ ದ್ರವ್ಯವ ವ್ಯಸನಿಗಳಾದ ಇವರು ಚಿಲ್ಲರೆ ಕಾಸಿಗಾಗಿ ಕೊಲೆ ಮಾಡಿರುವ ಸಾಧ್ಯತೆ ಇದೆ. ಮುಳಬಾಗಿಲು ಪೊಲೀಸರಿಂದ ವಿಚಾರಣೆ ಮುಂದುವರಿದಿದೆ.

ಪ್ರಕರಣದ ವಿವರ

ಮುಳಬಾಗಿಲು ನಗರದ ಪ್ರತಿಷ್ಠಿತ ಬಡಾವಣೆಯಲ್ಲಿ ದಿವ್ಯಶ್ರೀ ಅವರು ಮಗಳೊಂದಿಗೆ ವಾಸವಾಗಿದ್ದು, ಇವರ ಪತಿ ಪದ್ಮನಾಭ ಶೆಟ್ಟಿ ಅಗರಬತ್ತಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದಾರೆ. ಇವರ ಮತ್ತೊಬ್ಬ ಮಗ ಪ್ರೇಮ್‌ ವಿದ್ಯಾಭ್ಯಾಸದ ನಿಮಿತ್ತ ಬೇರೆ ಊರಿನಲ್ಲಿ ನೆಲೆಸಿದ್ದಾರೆ. ಪತಿ ಹೊರಗೆ ಹೋಗಿದ್ದು, ಮನೆಯಲ್ಲಿ ದಿವ್ಯಶ್ರೀ ಹಾಗೂ ಪುತ್ರಿ ನಿಶಾ ಮಾತ್ರ ಇದ್ದಾಗ ಪಾತಕ ನಡೆದಿದೆ.

ನಿಶಾ ನಿನ್ನೆ ಸಂಜೆ ಮನೆಯ ಮೇಲ್ಭಾಗದ ಕೊಠಡಿಯಲ್ಲಿ ಓದುತ್ತಿದ್ದಳು. ನೆಲ ಮಾಳಿಗೆಯಲ್ಲಿ ದಿವ್ಯಶ್ರೀ ಅವರು ರಾತ್ರಿ 7.30ರ ಸುಮಾರಿನಲ್ಲಿ ಟಿವಿ ವೀಕ್ಷಿಸುತ್ತ ಕುಳಿತಿದ್ದರು. ಆ ವೇಳೆ ಹಂತಕರು ಏಕಾಏಕಿ ಮನೆಯೊಳಗೆ ನುಗ್ಗಿ ಚಾಕುವಿನಿಂದ ದಿವ್ಯಶ್ರೀ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮನೆಯೊಳಗೆ ಏನೋ ಗಲಾಟೆಯಾಗುತ್ತಿದೆ ಎಂದು ನಿಶಾ ಕೆಳಗೆ ಇಳಿದು ಬಂದು ನೋಡಿದಾಗ ತಾಯಿ ರಕ್ತದ ಮಡುವಿನಲ್ಲಿ ಇದ್ದದ್ದು ಕಂಡು ಚೀರಾಡಿದ್ದಾರೆ. ನೆರೆಹೊರೆಯವರು ಏನಾಯಿತೆಂದು ಇವರ ಮನೆಗೆ ಬಂದು ನೋಡಿ ತಕ್ಷಣ ರಕ್ತದ ಮಡುವಿನಲ್ಲಿ ಬಿದಿದ್ದ ದಿವ್ಯಶ್ರೀ ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಜನಭರಿತ ಈ ಬಡಾವಣೆಯಲ್ಲಿ ಶಿಕ್ಷಕಿಯ ಕೊಲೆ ನಡೆದಿರುವುದು ಕಂಡು ಆತಂಕಗೊಂಡ ಸುತ್ತಮುತ್ತಲ ನಿವಾಸಿಗಳು ಭಯಭೀತರಾಗಿದ್ದಾರೆ.

ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಆಸ್ಪತ್ರೆಪಾಲು

ಬೆಂಗಳೂರು: ರಾಜಧಾನಿಯ ಪಿಜಿಯೊಂದರಲ್ಲಿ (PG) ಊಟ ಮಾಡುತ್ತಿರುವಾಗ ಇಲಿ ವಿಷ (Rat Poison spray) ಸ್ಪ್ರೇ ಮಾಡಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥಗೊಂಡು (Food Poison) ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು. ಪಿಜಿಯಲ್ಲಿ‌ ಕೆಲಸ ಮಾಡುತ್ತಿದ್ದ ಮಂಜುನಾಥ್ ಎಂಬಾತ ಸ್ಪ್ರೇ ಮಾಡಿದ್ದು, ಇದರಿಂದ ಫುಡ್‌ ಪಾಯಿಸನ್‌ ಆಗಿದೆ.

ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ತಿರದ ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿನಿಂದ ಹಾಸ್ಟೆಲ್ ನಡೆಸಲಾಗುತ್ತಿದ್ದು, ಹಾಸ್ಟೆಲ್ ಬಿಲ್ಡಿಂಗ್‌ನ ನೆಲ‌ ಮಹಡಿಯಲ್ಲಿ ಊಟದ ಹಾಲ್ ಇದೆ. ಜ್ಞಾನ‌ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್‌

Continue Reading

ಬೆಂಗಳೂರು

Kidnap case: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್!

Kidnap Case: ನಾವು ನಲಪಾಡ್ ಹುಡುಗರು, ಹತ್ತು ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆರು ಲಕ್ಷ ರೂಪಾಯಿ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಎಂದು ಬೆದರಿಸಿದ್ದಾರೆ ಎಂದು ದೂರಿನಲ್ಲಿ ವಿದ್ಯಾರ್ಥಿ ತಿಳಿಸಿದ್ದಾನೆ.

VISTARANEWS.COM


on

Kidnap Case
Koo

ಬೆಂಗಳೂರು: ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ (Youth Congress President Nalapad) ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ (Student Kidnap Case) ಮಾಡಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಈ ಕುರಿತು ವಿದ್ಯಾರ್ಥಿ ದೂರು ನೀಡಿದ್ದು, ಆರೋಪಿಗಳಿಗೆ ಹುಡುಕಾಡಲಾಗುತ್ತಿದೆ.

ಕಿಡ್ನಾಪ್ ಮಾಡಿ ಸುಲಿಗೆ ಮಾಡಿರುವ ಕುರಿತು ನಾಲ್ವರ ವಿರುದ್ಧ ಜೀವನ್‌ ಜೈನ್‌ ಎಂಬ ವಿದ್ಯಾರ್ಥಿ ಆರೋಪ ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್, ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ ಜೀವನ್ ನಂತರ ಕಾರಣಾಂತರದಿಂದ ಹಣ ಕೊಡಲು ಆಗದೆ ಒದ್ದಾಡುತ್ತಿದ್ದ.

ಲೇಟಾಗಿ ಹಣ ಕೊಟ್ಟಿದ್ದಕ್ಕೆ ಕಿಡ್ನಾಪ್ ಮಾಡಿ ಬೆದರಿಸಲಾಗಿದೆ. ನಾವು ನಲಪಾಡ್ ಹುಡುಗರು, ಹತ್ತು ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆರು ಲಕ್ಷ ರೂಪಾಯಿ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಎಂದು ಬೆದರಿಸಿದ್ದಾರೆ ಎಂದು ದೂರಿನಲ್ಲಿ ವಿದ್ಯಾರ್ಥಿ ತಿಳಿಸಿದ್ದಾನೆ. ಪೊಲೀಸ್‌ ಕಮಿಷನರ್‌ಗೆ ಮೇಲ್ ಮಾಡಿ ದೂರು ನೀಡಿದ್ದಾನೆ.

ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಆಸ್ಪತ್ರೆಪಾಲು

ಬೆಂಗಳೂರು: ರಾಜಧಾನಿಯ ಪಿಜಿಯೊಂದರಲ್ಲಿ (PG) ಊಟ ಮಾಡುತ್ತಿರುವಾಗ ಇಲಿ ವಿಷ (Rat Poison spray) ಸ್ಪ್ರೇ ಮಾಡಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥಗೊಂಡು (Food Poison) ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು. ಪಿಜಿಯಲ್ಲಿ‌ ಕೆಲಸ ಮಾಡುತ್ತಿದ್ದ ಮಂಜುನಾಥ್ ಎಂಬಾತ ಸ್ಪ್ರೇ ಮಾಡಿದ್ದು, ಇದರಿಂದ ಫುಡ್‌ ಪಾಯಿಸನ್‌ ಆಗಿದೆ.

ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ತಿರದ ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿನಿಂದ ಹಾಸ್ಟೆಲ್ ನಡೆಸಲಾಗುತ್ತಿದ್ದು, ಹಾಸ್ಟೆಲ್ ಬಿಲ್ಡಿಂಗ್‌ನ ನೆಲ‌ ಮಹಡಿಯಲ್ಲಿ ಊಟದ ಹಾಲ್ ಇದೆ. ಜ್ಞಾನ‌ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್‌

Continue Reading
Advertisement
physical abuse hsr layout
ಕ್ರೈಂ29 mins ago

Physical Abuse: ಪಾರ್ಟಿ ಮುಗಿಸಿ ಲಿಫ್ಟ್‌ ಕೇಳಿದ ಯುವತಿಯ ಮೇಲೆರಗಿದ ಕಾಮುಕನ ಬಂಧನ; ಸಂತ್ರಸ್ತೆಯ ಜೀವ ಉಳಿಸಿದ SOS ಬಟನ್!

ಬಾಲಿವುಡ್36 mins ago

Deepika Padukone: ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ ಮುಂಬೈನಲ್ಲಿ ಸುತ್ತಾಟ; ವಿಡಿಯೊ ವೈರಲ್‌!

Viral Video
ವೈರಲ್ ನ್ಯೂಸ್56 mins ago

Viral Video: ದೇವಸ್ಥಾನದಿಂದ ಬರ್ತಿದ್ದ ಪುರೋಹಿತರ ಮೇಲೆ ಚಾಕು, ದೊಣ್ಣೆಯಿಂದ ಡೆಡ್ಲಿ ಅಟ್ಯಾಕ್‌! ವಿಡಿಯೋ ಇದೆ

CM Siddaramaiah and high court
ಪ್ರಮುಖ ಸುದ್ದಿ1 hour ago

CM Siddaramaiah: ಇಂದು ಕಟಕಟೆ ಏರಲಿದೆ ಮುಡಾ ಪ್ರಕರಣ; 20 ಅಂಶಗಳೊಂದಿಗೆ ಸಿದ್ದರಾಮಯ್ಯ ಹೈಕೋರ್ಟ್‌ಗೆ; ಇಂದು ಏನೇನಾಗಲಿದೆ?

Vinay Rajkumar Pepe Trailer Shreelesh SNair out
ಸ್ಯಾಂಡಲ್ ವುಡ್1 hour ago

Vinay Rajkumar: ಪೆಪೆ ಟ್ರೈಲರ್ ಔಟ್‌; ವಿನಯ್‌ ರಾಜ್‌ಕುಮಾರ್ ಸಿನಿಮಾ ಹಿಟ್‌ ಗ್ಯಾರಂಟಿ ಅಂದ್ರು ಫ್ಯಾನ್ಸ್‌!

Fake Garlic
ವೈರಲ್ ನ್ಯೂಸ್2 hours ago

Fake Garlic: ಎಚ್ಚರ..ಎಚ್ಚರ.. ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ ಸಿಮೆಂಟ್‌ ಬೆಳ್ಳುಳ್ಳಿ! ವಿಡಿಯೋ ನೋಡಿದ್ರೆ ಶಾಕ್‌ ಆಗೋದು ಗ್ಯಾರಂಟಿ

kolar teacher murder case
ಕ್ರೈಂ2 hours ago

Murder Case: ಗಂಡನ ಫೈನಾನ್ಸ್‌ ವ್ಯವಹಾರಕ್ಕಾಗಿ ಹೆಂಡತಿಯ ಹತ್ಯೆ; ಕೊಲೆ ಮಾಡಿ ತಿರುಪತಿಯಲ್ಲಿ ತಲೆಮರೆಸಿಕೊಂಡವರ ಸೆರೆ

Kidnap Case
ಬೆಂಗಳೂರು2 hours ago

Kidnap case: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್!

Woman Using an Asthma Inhaler
ಆರೋಗ್ಯ3 hours ago

Myths About Asthma: ಇವು ಅಸ್ತಮಾ ಕುರಿತು ಇರುವ 9 ಸುಳ್ಳುಗಳು!

food poison bangalore
ಬೆಂಗಳೂರು3 hours ago

Food Poison: ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಅಸ್ವಸ್ಥ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌