Fraud Case : ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ ಹಾಗೂ ಇನ್ಫಾರ್ಮರ್ - Vistara News

ಬೆಂಗಳೂರು

Fraud Case : ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ ಹಾಗೂ ಇನ್ಫಾರ್ಮರ್

Fraud Case : ಇನ್ಫಾರ್ಮರ್ ಜತೆ ಸೇರಿ ಪೊಲೀಸರೇ ಹಣ ವಸೂಲಿಗಿಳಿದಿರುವ ಆರೋಪವೊಂದು ಕೇಳಿ ಬಂದಿದೆ. ವೈಟ್‌ ಫೀಲ್ಡ್‌ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಇನ್ಪಾರ್ಮರ್‌ನನ್ನು ಬಂಧಿಸಿದ್ದಾರೆ.

VISTARANEWS.COM


on

Fraud case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Road Accident : ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ನಕಲಿ ಸಿಐಡಿ ಅಧಿಕಾರಿಗಳ ಬಂಧನ

ಹುಬ್ಬಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ನಕಲಿ ಸಿಐಡಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಸಿಐಡಿ ಅಧಿಕಾರಿಗಳೆಂದು ಹೆದರಿಸಿ ಮಹಿಳೆಯೊಬ್ಬರಿಗೆ ವಂಚನೆ ಮಾಡಿದ್ದರು. ಚೈತನ್ಯ ನಗರದ ನಿವಾಸಿ ಯಶೋಧಾ ಮದುಗಲ್‌ಗೆ ಹೆದರಿಸಿ ಹಣ ವಸೂಲಿ ಮಾಡಿದ್ದರು. ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಹಳೇ ಹುಬ್ಬಳ್ಳಿ ಪೊಲೀಸರು ಕೃಷ್ಣಾಪೂರ ಓಣಿಯ ನಿವಾಸಿ ಚೇತನ ಹಡಪದ (39), ಲಿಂಗಸೂರನ ಪರಶುರಾಮಗೌಡ ಪಾಟೀಲ್ (45), ಗಂಗಾವತಿಯ ಕಾರಟಗಿಯ ಮಧು ಎಮ್ (35) ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಮೊಬೈಲ್, ಒಂದು ಬುಲೆಟ್ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Petrol Diesel Price: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ: ಸಿಎಂ ಸಮರ್ಥನೆ

Petrol Diesel Price: ವ್ಯಾಟ್ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Petrol Diesel Price
Koo

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು (Petrol Diesel Price) ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವ್ಯಾಟ್ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ಕಡಿಮೆ ದರವಿದೆ. ಗುಜರಾತ್ ಮತ್ತು ಮಧ್ಯಪ್ರವೇಶಕ್ಕಿಂತಲ್ಲೂ ನಮ್ಮಲ್ಲೇ ಕಡಿಮೆ. ಅಗಿನ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ನಮ್ಮ ರಾಜ್ಯದ ಸಂಪನ್ಮೂಲಗಳನ್ನ ಬೇರೆ ರಾಜ್ಯಕ್ಕೆ ನೀಡಿತ್ತು. ರಾಜ್ಯ ಬಿಜೆಪಿ ಸರ್ಕಾರ ವ್ಯಾಟ್ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೇ ವ್ಯಾಟ್ ಹೆಚ್ಚಳ (Price Hike) ಮಾಡಿತ್ತು. ಇದರಿಂದ ಕರ್ನಾಟಕದ ಆದಾಯ ಕುಂಠಿತವಾಗಿತ್ತು. ಈ ಮೂಲಕ ಕೇಂದ್ರ ಸರ್ಕಾರ ಕನ್ನಡಿಗರನ್ನು ವಂಚಿಸಿ ಹೆಚ್ಚು ತೆರಿಗೆ ಸಂಗ್ರಹ ಮಾಡಿತ್ತು ಎಂದು ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಕ್ಕೂ ಮುಂಚೆ ಪೆಟ್ರೋಲ್ ಮತ್ತು ಡೀಸೆಲ್‌ಗೆ ತಲಾ 9.48 ರೂಪಾಯಿ ಮತ್ತು 3.56 ರೂಪಾಯಿ ತೆರಿಗೆ ಇತ್ತು. ಬಿಜೆಪಿ ಅವಧಿಯಲ್ಲಿ ದಾಖಲೆಯ ತೆರಿಗೆ ಹೆಚ್ಚಳವಾಗಿ ಪೆಟ್ರೋಲ್‌ಗೆ 32.98 ರೂ., ಡೀಸೆಲ್‌ಗೆ 31.83 ರೂ. ಹೆಚ್ಚಳವಾಗಿತ್ತು. 2021-22 ರಲ್ಲಿ ಅಬಕಾರಿ ತೆರಿಗೆಯನ್ನು ಪೆಟ್ರೋಲ್ ಮೇಲೆ 13 ರೂಪಾಯಿ ಮತ್ತು ಡಿಸೇಲ್ ಮೇಲೆ 16 ಕಡಿಮೆ ಮಾಡಲಾಗಿತ್ತು. ಸದ್ಯ ಪೆಟ್ರೋಲ್ ಮೇಲಿನ ಕೇಂದ್ರ ತೆರಿಗೆ 19.9 ರೂ., ಡೀಸೆಲ್ ಮೇಲೆ 18.8 ರೂಪಾಯಿ ಇದೆ. ಇದನ್ನು ಕೇಂದ್ರ ಸರ್ಕಾರ ಜನರ ಒಳಿತಿಗೊಸ್ಕರ ಕಡಿಮೆ ಮಾಡಬೇಕು ಎಂದು ಆಗ್ರಹಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ | Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

ರಾಜ್ಯದ ವ್ಯಾಟ್ ಹೆಚ್ಚಳದಿಂದ ಜನರ ಸೇವೆಗಳು, ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಹಣ ನೀಡಲಿದ್ದೇವೆ. ನಾವು ಸಮತೋಲಿತ ಮತ್ತು ಜವಾಬ್ದಾರಿಯುತ ಆಡಳಿತ ನೀಡಲು ಬದ್ಧರಾಗಿದ್ದೇವೆ ಎಂದು ತೈಲ ಬೆಲೆ ಏರಿಕೆಯನ್ನು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ (Petrol Diesel Price) ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ (BJP Protest) ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ (Petrol, Diesel Price Hike) ಮೂಲಕ ವಿಪಕ್ಷಗಳ ಕೈಗೆ ರಾಜ್ಯ ಸರ್ಕಾರ ಅಸ್ತ್ರ ಕೊಟ್ಟಿದೆ. ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ.

ಇದನ್ನೂ ಓದಿ | Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಲೆ ಏರಿಕೆಯನ್ನು ಸದನದ ಒಳಗೂ ಮತ್ತು ಹೊರಗೆ ಸರ್ಕಾರದ ವಿರುದ್ಧ ಪ್ರಮುಖ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಹೋರಾಟದ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ಲ್ಯಾನ್ ಮಾಡಿದೆ.

Continue Reading

ಪ್ರಮುಖ ಸುದ್ದಿ

Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

Renuka Swamy Murder: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ವಿಧಿ ವೈದ್ಯ ಮತ್ತು ವಿಷ ವಿಜ್ಞಾನ ಶಾಸ್ತ್ರ ವಿಭಾಗದ ವೈದ್ಯರು, ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿಯನ್ನು ಪೊಲೀಸರಿಗೆ ನೀಡಿದ್ದಾರೆ.

VISTARANEWS.COM


on

Renuka Swamy murder
Koo

ಬೆಂಗಳೂರು: ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ (Renuka Swamy Murder) ಪೊಲೀಸ್‌ಗೆ ಹಸ್ತಾಂತರಗೊಂಡಿದ್ದು, ವರದಿಯಲ್ಲಿ ಭಯಾನಕ ಅಂಶಗಳು ಪತ್ತೆಯಾಗಿವೆ. ವಿಕ್ಟೋರಿಯಾ ಆಸ್ಪತ್ರೆಯ ವಿಧಿ ವೈದ್ಯ ಮತ್ತು ವಿಷ ವಿಜ್ಞಾನ ಶಾಸ್ತ್ರ ವಿಭಾಗದ ವೈದ್ಯರಿಂದ ಮರಣೋತ್ತರ ಪರೀಕ್ಷೆ ವರದಿಯನ್ನು ಪೊಲೀಸರಿಗೆ ನೀಡಲಾಗಿದೆ.

ರೇಣುಕಾಸ್ವಾಮಿ ಪೋಸ್ಟ್ ಮಾರ್ಟಂ ರಿಪೋರ್ಟ್‌ನಲ್ಲಿ ಭಯಾನಕ ಅಂಶಗಳು ಪತ್ತೆಯಾಗಿವೆ. ರೇಣುಕಾಸ್ವಾಮಿ ದೇಹದ ಮೇಲೆ 30ಕ್ಕೂ ಅಧಿಕ ಗಾಯಗಳು ಕಂಡುಬಂದಿದ್ದು, ತಲೆ ಮೇಲೆ ನಾಲ್ಕು ಬಲವಾದ ಗಾಯಗಳು ಪತ್ತೆಯಾಗಿವೆ. ಸಾಯುವ ಮುನ್ನ ನಾಲ್ಕು ಬಾರಿ ಎಲೆಕ್ಟ್ರಿಕ್ ಶಾಕ್ ನೀಡಿರುವುದು ತಿಳಿದುಬಂದಿದೆ. ಹೀಗಾಗಿ ತೀವ್ರ ರಕ್ತ ಸ್ರಾವದಿಂದ ರೇಣುಕಾಸ್ವಾಮಿ ಸಾವನ್ನಪ್ಪಿರುವುದು ದೃಢವಾಗಿದೆ. ಕಬ್ಬಿಣದ ರಾಡ್, ದೊಣ್ಣೆಯಿಂದ ಹಲ್ಲೆ ನಡೆಸಿದ್ದರಿಂದ ರಕ್ತ ಹೆಪ್ಪುಗಟ್ಟಿ, ರಕ್ತಸಾವ್ರದಿಂದ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ಮತ್ತೊಂದು ಹಂತದ ತನಿಖೆಗೆ ಮುಂದಾದ ಪೊಲೀಸರು

ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತೊಂದು ಹಂತದ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ ಕಸ್ಟಡಿಗೆ ಪಡೆದ ಆರೋಪಿಗಳ ವಿಚಾರಣೆ ವೇಗಗೊಳಿಸಿದ್ದು, ಈ ವೇಳೆ ಸಾಕ್ಷ್ಯ ನಾಶಕ್ಕೆ ಸತ ಪ್ರಯತ್ನ ನಡೆಸಿರುವುದು ತಿಳಿದುಬಂದಿದೆ.

ಆರೋಪಿಗಳ ಬಳಿ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ಇನ್ನು ಸ್ಥಳ ಮಹಜರು ವೇಳೆ ಮತ್ತಷ್ಟು ಆಧಾರಗಳು ಪತ್ತೆಯಾಗಿವೆ ಎನ್ನಲಾಗಿದೆ. ಈಗಾಗಲೇ ಆಯುಧಗಳು, 30 ಲಕ್ಷ ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿ ಮಾಡಲಾಗಿದೆ.

ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Actor Darshan teacher Addanda Cariappa sad on arrested darshan

ಬೆಂಗಳೂರು: ನಟ ದರ್ಶನ್‌ (Actor Darshan) ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರ ಬಗ್ಗೆ ಮೈಸೂರಿನ ರಂಗಾಯಣದ ಅಡ್ಡಂಡ ಕಾರ್ಯಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದರ್ಶನ್‌ ಬಗ್ಗೆ ಅವರ ಮೊದಲ ಗುರು ಅಡ್ಡಂಡ ಕಾರ್ಯಪ್ಪ ಅವರು ದರ್ಶನ್‌ ಕುರಿತಾಗಿ ಬೇಸರ ಹೊರ ಹಾಕಿದ್ದಾರೆ. ʻʻದರ್ಶನ್‌ಗೆ ಶನಿಯಾಗಿ ಬಂದಿದ್ದು ಪವಿತ್ರಾ ಗೌಡ. ರೇಣುಕಾಸ್ವಾಮಿ ಪತ್ನಿ ಅನಾಥವಾಗಿದ್ದಾಳೆʼʼಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮವೊಂದರಲ್ಲಿ ಅಡ್ಡಂಡ ಕಾರ್ಯಪ್ಪ ಮಾತನಾಡಿ ʻʻದರ್ಶನ್‌ ಮೆಜಿಸ್ಟಿಕ್‌ ಸಿನಿಮಾ ಹಿಟ್‌ ಆದ ಬಳಿಕ ನನ್ನ ಹತ್ರ ಬಂದಿದ್ದ. ನನ್ನ ಮನೆಗೆ ಬಂದು ನನ್ನ ಕಾಲಿಗೆ ಬಿದ್ದು ನಿಮ್ಮ ಆಶೀರ್ವಾದ ಎಂದ. ಅಲ್ಲಿಂದ ಅವನು ಬೆಳೆಯುತ್ತ ಹೋದ. ಹಲವು ವಿಡಿಯೊಗಳಲ್ಲಿ ಅವನ ಬಾಡಿ ಲಾಂಗ್ವೇಜ್‌ ನೋಡಿದ್ದೆ. ಅಕ್ಕನ್‌…ಅಮ್ಮನ್‌.. ಈ ರೀತಿ ಹೊಲಸು ಮಾತುಗಳು. ಅದನ್ನು ನೋಡಿ ನನಗೆ ಊಹಿಸಲು ಆಗಿಲ್ಲ. ಇವನ ನಡವಳಿಕೆ ಬರಬರುತ್ತ ತುಂಬ ಚೇಂಜ್‌ ಆಯ್ತು. ಎಜುಕೇಶನ್‌ ಕೊರತೆ ಅವನಿಗೆ ಇದೆʼʼಎಂದರು.

ಬದುಕು ಮತ್ತು ಸಿನಿಮಾ ಬೇರೆ ಬೇರೆ

ʻʻಬದುಕು ಮತ್ತು ಸಿನಿಮಾ ಬೇರೆ ಬೇರೆ. ಆದರೆ ದರ್ಶನ್‌ ಹೇಗೆ ತಿಳಿದುಕೊಂಡಿದ್ದ ಎಂದರೆ, ಸಿನಿಮಾದಲ್ಲಿ ಏನೂ ರೌಡಿಸಂ ಇರುತ್ತೋ ಅದನ್ನ ನೋಡಿ ಬದುಕು ಹಾಗೇ ಅಂದುಕೊಂಡಿದ್ದಾನೆ. ದರ್ಶನ್‌ಗೆ ಒಂದು ಪಾಠ ಇದು. ಅವನ ಜೀವನ ಇಲ್ಲಿಗೆ ಮುಗಿದಿಲ್ಲ. ರೇಣುಕಾಸ್ವಾಮಿ ಏನೋ ಸತ್ತ. ಆದರೆ ಅವನ ಹೆಂಡತಿ ಕಥೆ ಏನು? ದರ್ಶನ್‌ ಅಭಿಮಾನಿಗಳಿಗೆ ನಾನು ಹೇಳುವುದು ಇಷ್ಟೇ. ನಿಮಗೆ ದರ್ಶನ್‌ ಎಷ್ಟು ಮುಖ್ಯವೋ. ಅದೇ ರೀತಿ ರೇಣುಕಾ ಸ್ವಾಮಿ ಹೆಂಡತಿ ಕೂಡ ಅಷ್ಟೇ ಮುಖ್ಯ. ರೇಣುಕಾಸ್ವಾಮಿ ತಪ್ಪು ಮಾಡಿದ್ದಾರೆ. ಆತನ ಹೆಂಡತಿಗೆ ಸಾಂತ್ವನ ಹೇಳಿʼʼಎಂದರು.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

ಸಂಸ್ಕಾರ ಮತ್ತು ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ!

ʻʻಸಂಸ್ಕಾರ ಮತ್ತು ಶಿಕ್ಷಣ ಮುಖ್ಯ. ಅದು ದರ್ಶನ್‌ ಬಳಿ ಎರಡೂ ಇಲ್ಲ. ಇನ್ನೊಂದು ಅವನಿಗೆ ಸಿಕ್ಕ ಲೋಫರ್ ಫ್ರೆಂಡ್ಸ್. ಸುದೀಪ್‌ಗೆ ಹಾಗೆ ಫ್ರೆಂಡ್ಸ್ ಮಾಡಿಕೊಳ್ಳೋಕೆ ಆಗಲ್ಲ. ಯಾಕಂದ್ರೆ, ಸುದೀಪ್ ವಿದ್ಯಾವಂತ. ಸಹವಾಸ ದೋಷ, ಹೆಂಡ, ಮೊದಲ ಹೆಂಡತಿಗೆ ಚಿತ್ರಹಿಂಸೆ ಕೊಟ್ಟಿದ್ದು, ಹಾಗೇ ಮೀಡಿಯಾದವರು ಅವನನ್ನ 2 ವರ್ಷ ಬ್ಯಾನ್ ಮಾಡಿದರು. ರಾಜ್‌ಕುಮಾರ್ ಅವರ ವಿನೀತತೆಯನ್ನ ನೋಡಿ ದರ್ಶನ್ ಕಲಿತುಕೊಳ್ಳಲಿಲ್ಲ’’ ಎಂದು ಅಡ್ಡಂಡ ಕಾರ್ಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

Continue Reading

ರಾಜಕೀಯ

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Petrol Diesel Price: ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ. ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಜೂನ್‌ 17ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ.

VISTARANEWS.COM


on

Petrol Diesel Price
Koo

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ (Petrol Diesel Price) ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ (BJP Protest) ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ (Petrol, Diesel Price Hike) ಮೂಲಕ ವಿಪಕ್ಷಗಳ ಕೈಗೆ ರಾಜ್ಯ ಸರ್ಕಾರ ಅಸ್ತ್ರ ಕೊಟ್ಟಿದೆ. ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ.

ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಲೆ ಏರಿಕೆಯನ್ನು ಸದನದ ಒಳಗೂ ಮತ್ತು ಹೊರಗೆ ಸರ್ಕಾರದ ವಿರುದ್ಧ ಪ್ರಮುಖ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಹೋರಾಟದ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ಲ್ಯಾನ್ ಮಾಡಿದೆ.

ಇದನ್ನೂ ಓದಿ | Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

ಕಾಂಗ್ರೆಸ್‌ ಸರ್ಕಾರ ಬೆಲೆ ಏರಿಕೆ‌ ಭಾಗ್ಯ ನೀಡಿದೆ: ಅಶೋಕ್

ಬೆಲೆ ಏರಿಕೆ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಭಾನುವಾರ ಸುದ್ದಿಗೋಷ್ಠಿ ನಡೆಸಿದರು. ಪೆಟ್ರೋಲ್ ದರ ಹೆಚ್ಚಳವಾದಾಗ ಕಾಂಗ್ರೆಸ್‌ನಿಂದ ಪ್ರತಿಭಟನೆ ಮಾಡಲಾಗಿತ್ತು ಎಂದು ಹೇಳಿದ ಅವರು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಬೈಕ್ ಶವಯಾತ್ರೆ ಮಾಡಿದ್ದ ಫೋಟೊ ರಿಲೀಸ್ ಮಾಡಿದರು. ಇದೇ ವೇಳೆ ಸಿದ್ದರಾಮಯ್ಯ ಟ್ವೀಟ್ ಅನ್ನು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಬಿಡುಗಡೆ ಮಾಡಿದರು.

ನಾವು ಅಧಿಕಾರಕ್ಕೆ ಬಂದರೆ ಗೊಬ್ಬರ ಬೆಲೆ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವುದಾಗಿ ಹೇಳಿದ್ದ ಸಿದ್ದರಾಮಯ್ಯ ಅವರ ವೀಡಿಯೊವನ್ನು ಬಿಡುಗಡೆ ಮಾಡಿ ಕಿಡಿ ಕಾರಿದ ಅಶೋಕ್‌ ಅವರು, ಕಾಂಗ್ರೆಸ್ ಸರ್ಕಾರ ಬಂದ ಒಂದು ವರ್ಷದಲ್ಲಿ ಎಲ್ಲಾ ಬೆಲೆ ಏರಿಕೆ‌ ಭಾಗ್ಯ ನೀಡಿದೆ. ಹಾಲು, ಆಲ್ಕೋಹಾಲ್, ಸ್ಟ್ಯಾಂಪ್ ಡ್ಯೂಟಿ, ಗೈಡೆನ್ಸ್ ವ್ಯಾಲ್ಯೂ, ಆಸ್ತಿ ತೆರಿಗೆ, ಎಲೆಕ್ಟ್ರಿಕ್‌ ಬಿಲ್ ಜಾಸ್ತಿ ಮಾಡಿದ್ದಾರೆ. ವರ್ಷಕ್ಕೆ ಮೂರು ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ರಾಜ್ಯಾ ಸರ್ಕಾರ ದರೋಡೆಗೆ ಮುಂದಾಗಿದೆ. ಬಿಜೆಪಿ ಅವಧಿಯಲ್ಲಿ ಒಂದು ರೂಪಾಯಿ ದರ ಹೆಚ್ಚಳ ಆಗಿದ್ದಕ್ಕೆ ಬೈಕ್ ಶವಯಾತ್ರೆ ಮಾಡಿದ್ದರು. ಈಗ ದರ ಹೆಚ್ಚಳ ಮಾಡಿರುವ ಸಿದ್ದರಾಮಯ್ಯ ಅವರೇ ನಿಮಗೆ ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಮತದಾರ ಪ್ರಭುಗಳು ಮತದಾನ ಮಾಡಿಲ್ಲ ಅಂತ ದ್ವೇಷ ಮಾಡುತ್ತಿದ್ದಾರೆ. ಈ ಹಿಂದೆ ನಮ್ಮ‌ ಸರ್ಕಾರ ದರ ಹೆಚ್ಚಳ‌ ಆದಾಗ ತೆರಿಗೆ ಕಡಿಮೆ ಮಾಡಿತ್ತು. ನೀವೂ ಕೂಡ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಹೋಗಿದೆ. ಬಿಡಿಎ ಕಮರ್ಷಿಯಲ್ ಕಾಂಪ್ಲೆಕ್ಸ್ ಮೂಲಕ ಆದಾಯ ಬರಲು‌ ಕಾಂಪ್ಲೆಕ್ಸ್ ಕಟ್ಟಿದರು. ಅದನ್ನೂ ಮಾರಾಟ ಮಾಡಲು ಹೊರಟಿದ್ದಾರೆ. ಕಮುಷನ್ ಹೊಡೆಯಲು ದುಡ್ಡಿಲ್ಲ. ಬಿಬಿಎಂಪಿಗೆ ನಾಲ್ಕು ಸಾವಿರ ಕೋಟಿ ಸಾಲ ಮಾಡುತ್ತಿದ್ದಾರೆ. ಕಾರ್ಪೊರೇಷನ್ ಬಿಲ್ಡಿಂಗ್, ಯುಟಿಲಿಟಿ ಬಿಲ್ಡಿಂಗ್, ವಾರ್ಡ್ ಆಫಿಸ್ ಅಡ ಇಡಲು ನೀಲಿ ನಕ್ಷೆ ತಯಾರು ಮಾಡುತ್ತಿದ್ದಾರೆ. ವರ್ಲ್ಡ್ ಬ್ಯಾಂಕ್ ಅಥವಾ ನ್ಯಾಷನಲ್ ಬ್ಯಾಂಕಿಗೆ ಅಡ ಇಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

Continue Reading

ಕರ್ನಾಟಕ

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

R Ashok: ಸಿದ್ದರಾಮಯ್ಯ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎಂದು ರಾಜ್ಯದ ಜನರ ಮೇಲೆ ದ್ವೇಷ ಕಾರುತ್ತಿದ್ದಾರೆ. ಇದೇ ಕಾರಣಕ್ಕಾಗಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ನಾವು ತೆರಿಗೆ ಕಡಿಮೆ ಮಾಡಿದ್ದೆವು. ನಮ್ಮ ತೆರಿಗೆ, ನಮ್ಮ ಹಕ್ಕು ಎಂದೆಲ್ಲ ಹಾರಾಡಿದ ಕಾಂಗ್ರೆಸ್‌ ಈಗ ಬೆಲೆಯೇರಿಕೆ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಟೀಕಿಸಿದ್ದಾರೆ.

VISTARANEWS.COM


on

R Ashok
Koo

ಬೆಂಗಳೂರು: ರಾಜ್ಯದಲ್ಲಿ ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ (Petrol Diesel Price Hike) ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ (Karnataka Government) ವಿರುದ್ಧ ಬಿಜೆಪಿಯು ಬೆಲೆಯೇರಿಕೆ ಅಸ್ತ್ರ ಪ್ರಯೋಗಿಸುತ್ತಿದೆ. ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ (ಜೂನ್‌ 17) ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಮಾಡಲು ಮುಂದಾಗಿದೆ. ಪ್ರತಿಭಟನೆ ಕುರಿತು ಸುದ್ದಿಗೋಷ್ಠಿ ನಡೆಸಿದ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ (R Ashok), ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ರಾಜ್ಯ ಸರ್ಕಾರವು ದಿವಾಳಿಯಾಗಿದ್ದು, ಸಿದ್ದರಾಮಯ್ಯ ಅವರು ವಿಫಲರಾಗಿದ್ದಾರೆ. ಪೆಟ್ರೋಲ್‌ ಬೆಲೆಯೇರಿಕೆ ಮಾಡಿರುವ ರಾಜ್ಯ ಸರ್ಕಾರವು, ಹಣಕ್ಕಾಗಿ ಕಾರ್ಪೊರೇಷನ್‌ ಹಾಗೂ ಯುಟಿಲಿಟಿ ಬಿಲ್ಡಿಂಗ್‌ಅನ್ನು ಅಡಮಾನ ಇಡಲು ಸಜ್ಜಾಗಿದೆ” ಎಂದು ಆರೋಪಿಸಿದರು.

“ಸಿದ್ದರಾಮಯ್ಯ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎಂದು ರಾಜ್ಯದ ಜನರ ಮೇಲೆ ದ್ವೇಷ ಕಾರುತ್ತಿದ್ದಾರೆ. ಇದೇ ಕಾರಣಕ್ಕಾಗಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ನಾವು ತೆರಿಗೆ ಕಡಿಮೆ ಮಾಡಿದ್ದೆವು. ನಮ್ಮ ತೆರಿಗೆ, ನಮ್ಮ ಹಕ್ಕು ಎಂದೆಲ್ಲ ಹಾರಾಡಿದ ಕಾಂಗ್ರೆಸ್‌ ಈಗ ಬೆಲೆಯೇರಿಕೆ ಮಾಡಿದೆ. ಕರ್ನಾಟಕದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಿರುವ ಕಾರಣ ಸಿದ್ದರಾಮಯ್ಯ ಅವರು ಜನರಿಗೆ ಬೆಲೆಯೇರಿಕೆಯ ಬರೆ ಎಳೆಯಲು ಮುಂದಾಗಿದ್ದಾರೆ” ಎಂಬುದಾಗಿ ಆರ್.‌ ಅಶೋಕ್‌ ಅಸಮಾಧಾನ ವ್ಯಕ್ತಪಡಿಸಿದರು.

ಸಂಬಳ ಕೊಡಲೂ ದುಡ್ಡಿಲ್ಲ

“ಮುಂದಿನ ತಿಂಗಳು ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಸರ್ಕಾರದ ಬಳಿ ದುಡ್ಡಿಲ್ಲ ಎಂಬ ಕಾರಣಕ್ಕಾಗಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಲಾಗಿದೆ. ಆದಾಯ ಬರುವಂತಾಗಲಿ ಎಂದು ಬಿಡಿಎ ಕಮರ್ಷಿಯಲ್‌ ಕಾಂಪ್ಲೆಕ್ಸ್‌ ಕಟ್ಟಿಸಲಾಯಿತು. ಆದರೆ, ಸಿದ್ದರಾಮಯ್ಯ ಅವರು ಅದನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್‌ನವರಿಗೆ ಕಮಿಷನ್‌ ಹೊಡೆಯಲು ಆಗುತ್ತಿಲ್ಲ. ಬಿಬಿಎಂಪಿಗೆ 4 ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆ. ಕಾರ್ಪೊರೇಷನ್‌ ಬಿಲ್ಡಿಂಗ್‌, ಯುಟಿಲಿಟಿ ಬಿಲ್ಡಿಂಗ್‌, ವಾರ್ಡ್‌ ಆಫೀಸ್‌ಗಳನ್ನು ಕೂಡ ಅಡ ಇಡಲು ಇವರು ನೀಲಿನಕ್ಷೆ ತಯಾರಿಸಿದ್ದಾರೆ. ವಿಶ್ವಬ್ಯಾಂಕ್‌ ಅಥವಾ ನ್ಯಾಷನಲ್‌ ಬ್ಯಾಂಕ್‌ಗೆ ಅಡ ಇಡಲು ಯೋಜನೆ ರೂಪಿಸುತ್ತಿದ್ದಾರೆ” ಎಂದು ಪ್ರತಿಪಕ್ಷ ನಾಯಕ ಆರೋಪಿಸಿದರು.

ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ

“ಬೆಲೆಯೇರಿಕೆ ಮೂಲಕ ರಾಜ್ಯದ ಜನರ ದುಡಿಮೆಯ ಹಣವನ್ನು ಕೊಳ್ಳೆ ಹೊಡೆಯಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ (ಜೂನ್‌ 17) ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗತ್ತದೆ. ನನ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬೆಳಗ್ಗೆ 11.30ಕ್ಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತೇವೆ” ಎಂದು ತಿಳಿಸಿದರು.

ಇದನ್ನೂ ಓದಿ: Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

Continue Reading
Advertisement
Sachin Tendulkar
ಕ್ರೀಡೆ4 mins ago

Sachin Tendulkar: ವಿಶ್ವ ಅಪ್ಪಂದಿರ ದಿನದಂದು ವಿಶೇಷ ಫೋಟೊ ಹಂಚಿಕೊಂಡು ಭಾವುಕರಾದ ಸಚಿನ್​ ತೆಂಡೂಲ್ಕರ್​

Petrol Diesel Price
ಪ್ರಮುಖ ಸುದ್ದಿ28 mins ago

Petrol Diesel Price: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ: ಸಿಎಂ ಸಮರ್ಥನೆ

Child Marriage
ವಿದೇಶ37 mins ago

12ರ ಹರೆಯದ ಮಗಳನ್ನು 5 ಲಕ್ಷ ರೂ.ಗೆ ಮಾರಿ 72 ವರ್ಷದ ವೃದ್ಧನೊಂದಿಗೆ ಮದುವೆ ಮಾಡಿಸಲು ಮುಂದಾದ ಪಾಪಿ ತಂದೆ!

EVM Row
ದೇಶ43 mins ago

EVM Row: ಮೊಬೈಲ್‌ ಬಳಸಿ ಇವಿಎಂ ಅನ್‌ಲಾಕ್‌ ಮಾಡಿದ ಸಂಸದನ ಸಂಬಂಧಿ; ಎಲ್ಲಿ ನಡೆಯಿತು ಮೋಸ?

Vijayalakshmi Darshan Reactivated Instagram Account
ಸ್ಯಾಂಡಲ್ ವುಡ್58 mins ago

Actor Darshan:  ಇನ್​ಸ್ಟಾಗ್ರಾಮ್‌ ಖಾತೆಯನ್ನು ಸಕ್ರಿಯಗೊಳಿಸಿದ ದರ್ಶನ್‌ ಪತ್ನಿ; ಮಾಧ್ಯಮದ ಮುಂದೆ ಬರ್ತಾರಾ?

Rishabh Pant
ಕ್ರೀಡೆ1 hour ago

Rishabh Pant: ಯೂಟ್ಯೂಬ್ ಸಿಲ್ವರ್ ಪ್ಲೇ ಬಟನ್ ಪಡೆದ ರಿಷಭ್​ ಪಂತ್​; ಗಳಿಕೆಯ ಹಣ ದಾನಕ್ಕೆ ಮೀಸಲು

Electric Shock
ಕರ್ನಾಟಕ1 hour ago

Electric Shock: ಕುಷ್ಟಗಿಯಲ್ಲಿ ವಿದ್ಯುತ್ ತಂತಿ ತಗುಲಿ ರೈತ, 2 ಎತ್ತುಗಳ ಸಾವು

Renuka swamy murder case
ಕ್ರೈಂ1 hour ago

Renuka swamy Murder : ಟೀಕೆಗೆಲ್ಲ ಕೊಲೆ ಮಾಡುವುದಾದರೆ ಗಂಟೆಗೊಂದು ಹೆಣ ಬೀಳುತ್ತಿತ್ತು- ಸಿಟಿ ರವಿ

Goat With Plastic Teeth
ವಿದೇಶ1 hour ago

Goat With Plastic Teeth: ಬಕ್ರೀದ್‌ಗೆ ಬಲಿ ಕೊಡಲು ಪ್ಲಾಸ್ಟಿಕ್‌ ಹಲ್ಲಿರುವ ಮೇಕೆ ಮಾರಾಟ ಮಾಡಿ ಸಿಕ್ಕಿಬಿದ್ದ ಭೂಪ

Double iSmart to release on August 15
ಟಾಲಿವುಡ್2 hours ago

Ram Pothineni: ರಾಮ್ ಪೋತಿನೇನಿ ಅಭಿನಯದ ʻಡಬಲ್ ಇಸ್ಮಾರ್ಟ್ʼ ಬಿಡುಗಡೆಗೆ‌ ಮುಹೂರ್ತ ಫಿಕ್ಸ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ5 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌