Fraud Case : ಶಾಸಕರ ನಕಲಿ ಸಹಿ ಬಳಸಿ ಕೆಲಸ ಗಿಟ್ಟಿಸಿಕೊಂಡ‌ ಖತರ್ನಾಕ್‌ ಖದೀಮರು - Vistara News

ಬೆಂಗಳೂರು

Fraud Case : ಶಾಸಕರ ನಕಲಿ ಸಹಿ ಬಳಸಿ ಕೆಲಸ ಗಿಟ್ಟಿಸಿಕೊಂಡ‌ ಖತರ್ನಾಕ್‌ ಖದೀಮರು

Fraud Case : ಶಾಸಕ ಶಾಮನೂರು ಶಿವಶಂಕರಪ್ಪ ಸಹಿಯನ್ನು ನಕಲಿ ಮಾಡಿ, ನಕಲಿ ಲೆಟರ್ ಹೆಡ್ ಸೃಷ್ಟಿಸಿ‌ ಖತರ್ನಾಕ್‌ಗಳು ಕೆಲಸವನ್ನು ಗಿಟ್ಟಿಸಿಕೊಂಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಶಾಸಕರ ಹೆಸರು ದುರ್ಬಳಕೆ ಮಾಡಿಕೊಂಡು ವಂಚಿಸದವರನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

fraud case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಾಸಕರ ಹೆಸರಿನಲ್ಲಿ ನಕಲಿ ಸಹಿ, ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೆಲಸ ಪಡೆದ ಆರೋಪ ಕೇಳಿ (Fraud Case ) ಬಂದಿದೆ. ನಕಲಿ ಲೆಟರ್ ಸೃಷ್ಟಿಸಿ ಕೆಲಸ ಪಡೆದ ಆರೋಪದಲ್ಲಿ ಇಬ್ಬರು ಆರೋಪಿಗಳ ಬಂಧನವಾಗಿದೆ. ಬೆಂಗಳೂರಿನ ವಿಧಾನಸೌಧ ಠಾಣಾ ಪೊಲೀಸರು ರಾಮನಗರದ ಸ್ವಾಮಿ(35), ಅಂಜನ್ ಕುಮಾರ್(28) ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಮತ್ತೊಬ್ಬ ಆರೋಪಿ ಸ್ವಾಮಿ ಎಂಬಾತನ ಪತ್ನಿ ವಿನುತಾಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿಂದೆ ವಿಧಾನಸೌಧದಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವಾಮಿ ಕೆಲಸ ಮಾಡಿಕೊಂಡಿದ್ದ. ಆದರೆ ಕೆಲವು ದಿನಗಳ ನಂತರ ಕೆಲಸ ತೊರೆದು ರಾಜಕಾರಣಿಗಳ ಒಡನಾಟ ಬೆಳೆಸಿಕೊಂಡಿದ್ದ.

ಶಾಸಕ ಶಾಮನೂರು ಶಿವಶಂಕರಪ್ಪ ಸಹಿ ನಕಲಿ ಮಾಡಿ ನಕಲಿ ಲೆಟರ್ ಹೆಡ್ ಸೃಷ್ಟಿಸಿದ್ದ. ಆರೋಪಿ ಸ್ವಾಮಿ ವಿಧಾನಸಭಾ ಸಚಿವಾಲಯಕ್ಕೆ ಪತ್ರ ಬರೆದು ವಿನುತಾ, ಅಂಜನ್‌ ಎಂಬುವವರಿಗೆ ಶಾಸಕರ ಆಪ್ತ ಸಹಾಯಕರ ಹುದ್ದೆ ಕೊಡಿಸಿದ್ದ.

ಇದನ್ನೂ ಓದಿ: Actor Darshan: ರೌಡಿಶೀಟರ್‌ ಮಗನ ಜೊತೆ ಜೈಲಿನಿಂದ ವಿಡಿಯೋ ಕಾಲ್;‌ ತನಿಖೆಗೆ ಗೃಹ ಸಚಿವರ ಸೂಚನೆ

ಲೆಟರ್ ಹೆಡ್ ಬಳಸಿ ಪತ್ನಿ ವಿನುತಾಗೆ ಶಿವಶಂಕರಪ್ಪ ಆಪ್ತ ಸಹಾಯಕಿಯಾಗಿ ನೇಮಿಸಲು ಶಿಫಾರಸ್ಸು ಮಾಡಲಾಗಿತ್ತು. ವಿಧಾನಸಭಾ ಸಚಿವಾಲಯ ಸಿಬ್ಬಂದಿ ಈ ನಕಲಿ ಲೆಟರ್ ಹೆಡ್ ನಂಬಿ ವಿನುತಾಗೆ 2023ರ ಮೇ ನಲ್ಲಿ ಕೆಲಸ ನೀಡಿದ್ದರು. ಬಳಿಕ ಕೆಲಸಕ್ಕೆ ಬಾರದೆ ಪ್ರತಿ ತಿಂಗಳು 30 ಸಾವಿರ ಸಂಬಳವನ್ನು ವಿನುತಾ ಪಡೆದಿದ್ದಳು.

ಆನಂತರ ಗರ್ಭಿಣಿಯಾದ ಬಳಿಕ ಕೆಲಸದಿಂದ ಬಿಡುಗಡೆಗೊಳಿಸಲು ವಿನುತಾ ಪತ್ರ ಬರೆದಿದ್ದಳು. ಇದರ ಬಗ್ಗೆ ಅನುಮಾನಗೊಂಡು ಪರಿಶೀಲನೆ ಮಾಡಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದೆ. ಅಧಿಕಾರಿಗಳು ವಂಚನೆ ಬಗ್ಗೆ ವಿಧಾನಸೌಧ ಠಾಣೆಗೆ ದೂರು‌ ನೀಡಿದ್ದರು.

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಶಾಸಕ ಎಸ್.ರಘು ಹೆಸರಿನಲ್ಲೂ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಶಾಸಕ ರಘು ಹೆಸರಿನಲ್ಲಿ ನಕಲಿ ಲೆಟರ್ ಸೃಷ್ಟಿಸಿ ಅಂಜನ್ ಕುಮಾರ್ ಎಂಬಾತನಿಗೆ ಕೆಲಸ ಕೊಡಿಸಿದ್ದ. ಸದ್ಯ ಇಬ್ಬರನ್ನೂ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ದಾವಣಗೆರೆಯಲ್ಲಿ ತಾಮದ್ರ ತಂತಿ ಕದಿಯುತ್ತಿದ್ದ ಕಳ್ಳರು ಅರೆಸ್ಟ್‌

ದಾವಣಗೆರೆಯ ಹರಿಹರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತಾಮ್ರದ ತಂತಿ ಹಾಗೂ ಎಲೆಕ್ಟ್ರಿಕಲ್ ಸಾಮಗ್ರಿ ಎಗರಿಸಿದ್ದ ಖತರ್ನಾಕ್ ಕಳ್ಳರ ಬಂಧನವಾಗಿದೆ. ಪೈಪ್ಸ್ ಮತ್ತು ಸ್ಪೀಂಕ್ಲರ್ ತಯಾರಿಕಾ ಘಟಕದಲ್ಲಿ ಕಳ್ಳತನ ಮಾಡಿದ್ದ ಹರಿಹರ ಮೂಲದ ಸೈಯದ್ ನೂರುದ್ದೀನ್ , ಮಹ್ಮದ್ ಆಸೀಫ್ ,ಇರ್ಷದ್ ಬಂಧಿತ ಆರೋಪಿಗಳು. ಘಟಕದಲ್ಲಿ 12 ಲಕ್ಷದ ಮೌಲ್ಯದ ಸಾಮಾಗ್ರಿ ಕದ್ದು ಪರಾರಿಯಾಗಿದ್ದರು.
ತಾಮ್ರದ ತಂತಿ ಮತ್ತು ಎಲೆಕ್ಟ್ರಿಕಲ್ ಸಾಮಗ್ರಿ, ಕೃತ್ಯಕ್ಕೆ ಬಳಸಿದ ಓಮಿನಿ ಮತ್ತು 02 ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಹರಿಹರ ತಾಲೂಕಿನ ಹನಗವಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕೊಟ್ರೇಶ್ ನಾಯ್ಕ ಎಂಬುವವರಿಗೆ ಸಂಬಂಧಿಸಿದ ಗ್ರೀನ್ ರಾಯಲ್ ಘಟಕದಲ್ಲಿ ಕಳ್ಳತನವಾಗಿತ್ತು. ಆರೋಪಿತರ ಮೇಲೆ ವಿವಿಧೆಡೆ ಠಾಣೆಯಲ್ಲಿ ಈ ಹಿಂದೆ ಹಲವು ಪ್ರಕರಣಗಳು ದಾಖಲಾಗಿವೆ. ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹರಿಹರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Reliance Jio: ರಿಲಯನ್ಸ್ ಜಿಯೋನಿಂದ ಹೊಸ ಆಫರ್‌; 100 ಜಿಬಿ ಕ್ಲೌಡ್ ಸಂಗ್ರಹ ಉಚಿತ

ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗಾಗಿ ಬಂಪರ್ ಆಫರ್ ಘೋಷಿಸಿದ್ದು, ಶೀಘ್ರದಲ್ಲೇ ಕಂಪನಿಯು ತನ್ನ ಗ್ರಾಹಕರಿಗೆ 100 ಜಿಬಿ ತನಕ ಉಚಿತ ಕ್ಲೌಡ್ ಸಂಗ್ರಹವನ್ನು ನೀಡುತ್ತಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Reliance Jio
Koo

ಮುಂಬೈ: ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗಾಗಿ ಬಂಪರ್ ಆಫರ್ ಘೋಷಿಸಿದ್ದು, ಶೀಘ್ರದಲ್ಲೇ ಕಂಪನಿಯು ತನ್ನ ಗ್ರಾಹಕರಿಗೆ 100 ಜಿಬಿ ತನಕ ಉಚಿತ ಕ್ಲೌಡ್ ಸಂಗ್ರಹವನ್ನು ನೀಡುತ್ತಿದೆ. ಫೋಟೋಗಳು, ವಿಡಿಯೋಗಳು ಅಥವಾ ಡಾಕ್ಯುಮೆಂಟ್‌ಗಳು ಇಂತಹುಗಳನ್ನು ಸಂಗ್ರಹಿಸಬಹುದಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 47ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುರುವಾರ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಈ ಮಾಹಿತಿಯನ್ನು ನೀಡಿದ್ದಾರೆ.

ಅಲ್ಲದೆ, ಜಿಯೋ ಬ್ರೈನ್ ಶೀಘ್ರದಲ್ಲೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕನೆಕ್ಟೆಡ್ ಇಂಟೆಲಿಜೆನ್ಸ್ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ ಬರುತ್ತದೆ. ಕಂಪನಿಯು ಇದನ್ನು “ಎಐ ಎವೆರಿವೇರ್ ಫಾರ್ ಎವರಿಒನ್” ಎಂಬ ಥೀಮ್ ಮೇಲೆ ಪ್ರಾರಂಭಿಸುತ್ತದೆ.

ಇದನ್ನೂ ಓದಿ: Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

ಜಿಯೋ ಸಂಪೂರ್ಣ ಎಐ ಅನ್ನು ಒಳಗೊಂಡ ಪರಿಕರಗಳು ಮತ್ತು ಪ್ಲಾಟ್‌ಫಾರ್ಮ್‌ಗಳ ಸಮಗ್ರ ಸೂಟ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ಇದನ್ನು ‘ಜಿಯೋ ಬ್ರೈನ್’ ಎಂದು ಕರೆಯಲಾಗುತ್ತದೆ. “ರಿಲಯನ್ಸ್‌ ಜಿಯೋ ಬ್ರೈನ್ ಅನ್ನು ಗಟ್ಟಿಗೊಳಿಸುವ ಮೂಲಕ ನಾವು ಶಕ್ತಿಯುತ ಎಐ ಸೇವೆಗಳ ಪ್ಲಾಟ್‌ಫಾರ್ಮ್ ರೂಪಿಸುತ್ತೇವೆ ಎಂಬುದಾಗಿ ನಾನು ಭಾವಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ನಾವು ಜಾಮ್‌ನಗರದಲ್ಲಿ ಗಿಗಾವ್ಯಾಟ್ ಪ್ರಮಾಣದ ಎಐ- ಸಿದ್ಧ ಡೇಟಾ ಕೇಂದ್ರವನ್ನು ಸ್ಥಾಪಿಸಲು ಯೋಜಿಸಿದ್ದೇವೆ, ಇದು ಸಂಪೂರ್ಣವಾಗಿ ರಿಲಯನ್ಸ್‌ನ ಹಸಿರು ಶಕ್ತಿಯಿಂದ ಚಾಲಿತವಾಗುತ್ತದೆ. ಭಾರತದಲ್ಲಿಯೇ ವಿಶ್ವದ ಅತ್ಯಂತ ಕೈಗೆಟುಕುವ ಎಐ ಇಂಟರ್ ಫೇಸಿಂಗ್ ಸೃಷ್ಟಿಸುವುದು ನಮ್ಮ ಗುರಿಯಾಗಿದೆ. “ಇದು ಭಾರತದಲ್ಲಿ ಎಐ ಅಪ್ಲಿಕೇಷನ್‌ಗಳನ್ನು ಹೆಚ್ಚು ಕೈಗೆಟುಕುವಂತೆ ಮತ್ತು ಎಲ್ಲರಿಗೂ ಸಂಪರ್ಕ ಸಿಗುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kannada New Movie: ‘ಸರ್ವೇ ನಂಬರ್ 45’ ಚಿತ್ರೀಕರಣಕ್ಕೆ ಚಾಲನೆ

ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ ಹಲವಾರು ಹೊಸ ಎಐ ಸೇವೆಗಳನ್ನು ಘೋಷಿಸಿದ್ದಾರೆ. ಇದು ಜಿಯೋ ಟಿವಿಒಎಸ್ (Jio TVOS), ಹಲೋಜಿಯೋ (HelloJio), ಜಿಯೋ ಐಒಟಿ ಸಲ್ಯೂಷನ್ (Jio Home IoT), ಜಿಯೋ ಹೋಮ್ (JioHome) ಅಪ್ಲಿಕೇಷನ್ ಮತ್ತು ಜಿಯೋ ಫೋನ್ ಕಾಲ್ ಎಐ (Jio Phonecall AI) ಅನ್ನು ಒಳಗೊಂಡಿದೆ.

Continue Reading

ಕ್ರೈಂ

Bomb Threat: ನಗರದಲ್ಲಿ ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ (Bomb Threat) ಇಮೇಲ್ ಬಂದಿದೆ. ಬೆಳಗ್ಗೆ 6.57ರ ಸುಮಾರಿಗೆ ಬಂದಿರುವ ಇಮೇಲ್ ನಲ್ಲಿ ಶಾಲೆ ಆವರಣದಲ್ಲಿ ಐದು ಪೈಪ್ ಲೈನ್ ಬಾಂಬ್ ಗಳನ್ನು ಇಡಲಾಗಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ.

VISTARANEWS.COM


on

By

Bomb Threat
Koo

ಬೆಂಗಳೂರು: ಕೆಲವು ತಿಂಗಳ ಹಿಂದೆ ಬೆಂಗಳೂರು ನಗರದ (bengaluru city) ಕೆಲವು ಖಾಸಗಿ ಶಾಲೆಗಳಿಗೆ (Private schools) ಬಾಂಬ್ ಬೆದರಿಕೆ (Bomb Threat) ಬಂದಿತ್ತು. ಇದೀಗ ಮತ್ತೆ ದುಷ್ಕರ್ಮಿಗಳು ಇಮೇಲ್ ಮೂಲಕ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ಗೋವಿಂದಪುರ ಠಾಣೆಯಲ್ಲಿ (govindapura station) ಪ್ರಕರಣ ದಾಖಲಿಸಲಾಗಿದೆ.

ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಬೆಳಗ್ಗೆ 6.57ರ ಸುಮಾರಿಗೆ ಬಂದಿರುವ ಇಮೇಲ್ ನಲ್ಲಿ ಶಾಲೆ ಆವರಣದಲ್ಲಿ ಐದು ಪೈಪ್ ಲೈನ್ ಬಾಂಬ್ ಗಳನ್ನು ಇಡಲಾಗಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ.

Father Kodachi ಹೆಸರಿನ coldghost456@gmail.com askbirnorth@tipsglobal.net ಎಂಬ ಐಡಿಯಿಂದ ಇಮೇಲ್ ಬೆದರಿಕೆ ಬಂದಿದ್ದು, ಮಧ್ಯಾಹ್ನ 1.30ಕ್ಕೆ ಬ್ಲಾಸ್ಟ್ ಆಗ ಆಗಲಿದೆ ಎಂದು ಮೇಲ್ ನಲ್ಲಿ ತಿಳಿಸಲಾಗಿದೆ.

ಮಾಹಿತಿ ಬಂದ ಕೂಡಲೇ ಶಾಲೆಗೆ ಹೋಗಿ ಗೋವಿಂದಪುರ ಪೊಲೀಸರು, ಬಾಂಬ್ ಸ್ಕ್ವಾಡ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಯಾವುದೇ ಆತಂಕಕಾರಿ ವಿಚಾರ ಪತ್ತೆಯಾಗಿಲ್ಲ.
ಸದ್ಯ ಘಟನೆ ಸಂಬಂಧ ಶಾಲೆಯ ಆಡಳಿತಾಧಿಕಾರಿ ನೀಡಿರುವ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌; ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

Bomb Threat
Bomb Threat


ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

ಇತ್ತೀಚೆಗಷ್ಟೇ ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್ ಬೆದರಿಕೆಯ ಸಂದೇಶ ಬಂದಿತ್ತು. ಇಂಗ್ಲಿಷ್ ಬಳಸಿ‌ ಉರ್ದು ಭಾಷೆಯಲ್ಲಿ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿತ್ತು.

ವಂಡರ್‌ ಲಾ ಅಮ್ಯೂಸ್ಮೆಂಟ್ ಪಾರ್ಕ್ ಆಡಳಿತ ಹಾಗೂ ಸಿಬ್ಬಂದಿಗೆ ಇ-ಮೇಲ್ ಬಂದಿದೆ. ಸಂಡೇ ನಿನ್ನ ಹಾಗೂ ವಂಡರ್‌ ಲಾ ಪಾರ್ಕ್‌ಗೆ ಮೂರು ಬಾಂಬ್ ಸಿಡಿಸುತ್ತೇವೆ ಇನ್ಶಾಅಲ್ಲಾ..! ಕನ್ನಡದ ಕಾಫೀರರು ಮುಸ್ಲಿಂರ ಮೇಲೆ ಮಾಡುತ್ತಿರುವ ದಬ್ಬಾಳಿಕೆಯ ಶಿಕ್ಷೆ ಸಿಗಲಿದೆ ಎಂದು ಸಂದೇಶ ಕಳಿಸಿದ್ದರು.

ಕಳೆದ ಆಗಸ್ಟ್ ‌3ರಂದು ಹುಸಿ ಬಾಂಬ್ ಬೆದರಿಕೆ ಬಂದಿದ್ದು, ‌ತಡವಾಗಿ ಬೆಳಕಿಗೆ ಬಂದಿದೆ. ಮೊಹಮ್ಮದ್ ಇರ್ಫಾನ್ ಜಿಹಾದಿ ಎಂಬ ಹೆಸರಿನ‌ ಇ -ಮೇಲ್‌ನಿಂದ ಬಂದಿದೆ. ಬಿಡದಿ ಪೊಲೀಸರು ಇ ಮೇಲ್ ಮಾಡಿದ ಆರೋಪಿಯನ್ನು ಹುಡುಕುತ್ತಿದ್ದಾರೆ. ಬಾಂಬ್ ಬೆದರಿಕೆ ಬಳಿಕ‌ ಇಡೀ ಪಾರ್ಕ್ ಪರಿಶೀಲನೆ ಮಾಡಲಾಗಿದೆ.

Continue Reading

ಬೆಂಗಳೂರು

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ (Actor Darshan) ಬಳ್ಳಾರಿ ಜೈಲಿಗೆ ಸ್ಟೈಲಿಶ್ ಲುಕ್ನಲ್ಲಿ ಎಂಟ್ರಿ ನೀಡಿದ ವಿಚಾರವಾಗಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ (Actor Darshan) ಬಳ್ಳಾರಿ ಜೈಲಿಗೆ ಸ್ಟೈಲಿಶ್ ಲುಕ್‌ನಲ್ಲಿ ಎಂಟ್ರಿ ನೀಡಿದ ವಿಚಾರವಾಗಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ ತಿಳಿಸಿದ್ದಾರೆ.

ಇದನ್ನೂ ಓದಿ: Viral News: 10 ವರ್ಷಗಳ ಬೋಧನೆಯ ಅನಂತರವೂ ಸಂಬಳ ಹೆಚ್ಚಿಸಿಲ್ಲ; ಹತಾಶೆಯಿಂದ ರಾಜೀನಾಮೆ

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಬಳ್ಳಾರಿ ಜೈಲಿನ ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡರು. ಆದರೆ ಯಾವುದೇ ಕಾರಣಕ್ಕೂ ಜೈಲಿನಲ್ಲಿ ಕೂಲಿಂಗ್ ಗ್ಲಾಸ್‌ನಂಥ ವಸ್ತುಗಳನ್ನು ಒಯ್ಯುವ ಹಾಗಿಲ್ಲ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ, ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್‌ನನ್ನು (Actor Darshan) ಪೊಲೀಸ್‌ ಬಂದೋಬಸ್ತ್‌ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇನ್ಮುಂದೆ ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ.

ಕೇವಲ ಕೈದಿಯ ಧರ್ಮಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವ ಆಗಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ.

ದರ್ಶನ್‌ಗಿಲ್ಲ ವಿವಿಐಪಿ ಟ್ರೀಟ್ಮೆಂಟ್‌; ಸಾಮಾನ್ಯ ಖೈದಿಗೆ ಸಿಸಿಟಿವಿ ಕಣ್ಗಾವಲು

ಈಗಾಗಲೇ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಿದ್ದು, ಸಾಮಾನ್ಯ ಖೈದಿಯಂತೆ ಇರಬೇಕಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ವಿವಿಐಪಿ ಟ್ರೀಟ್ಮೆಂಟ್‌ ಬಳ್ಳಾರಿ ಜೈಲಿನಲ್ಲಿ ಇರುವುದಿಲ್ಲ. ಇನ್ನೂ ದಿನದ 24/7 ದರ್ಶನ್ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿದೆ. ದಿನನಿತ್ಯ ದರ್ಶನ್ ಸಿಸಿಟಿವಿ ಫೂಟೇಜ್ ಪ್ರತ್ಯೇಕವಾಗಿ ಶೇಖರಿಸಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

ದರ್ಶನ್ ಇರುವ ಕೊಠಡಿಗೆ ಮುಖ್ಯ ವೀಕ್ಷಕ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅನುಭವವುಳ್ಳ ಸಿಬ್ಬಂದಿ ವರ್ಗ ನಿಯೋಜನೆ ಮಾಡಲಾಗಿದೆ. ಭದ್ರತೆ ಹಾಗೂ ದರ್ಶನ್ ಚಲನವಲನಗಳ ಬಗ್ಗೆ ತೀವ್ರ ನಿಗಾ ಇಡಲಾಗುತ್ತದೆ. ಕಾರಾಗೃಹದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿನಿತ್ಯ ಬೀಗ ತೆರೆಯುವ ಹಾಗೂ ಬೀಗ ಮುದ್ರೆ ಮಾಡುವ ಸಮಯದಲ್ಲಿ ಕೂಲಂಕುಷವಾಗಿ ತಪಾಸಣೆ ಮಾಡುವಂತೆ ಸೂಚನೆನೀಡಲಾಗಿದೆ. ಯಾವುದೇ ನಿಷೇಧಿತ ವಸ್ತುಗಳು ದೊರಕದ ಹಾಗೆ ಪ್ರತ್ಯೇಕ ವಹಿಯನ್ನು ನಿರ್ವಹಿಸಬೇಕು. ಪಹರೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಬೇಕು ಎನ್ನಲಾಗಿದೆ.

Continue Reading

ಮಳೆ

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Karnataka Weather Forecast : ಗುರುವಾರ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ (Rain News) ಜನರು ಪರದಾಡಿದರು. ಉಡುಪಿ ಜಿಲ್ಲೆಯ ಮೀನುಗಾರರಿಗೂ ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಉಡುಪಿ: ಪೂರ್ವ ಅರಬ್ಬೀ ಸಮುದ್ರದಲ್ಲಿ ಟ್ರಫ್ ಎದ್ದಿದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ.ಇದರ ಪ್ರಭಾವದಿಂದಾಗಿ ಗುರುವಾರ ರಾಜ್ಯದ ಹಲವೆಡೆ ಮಳೆ (Rain News) ಅಬ್ಬರಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆಯು ಗುರುವಾರ (Karnataka Weather Forecast) ಗರ್ಜಿಸಿತ್ತು.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೋಡ ಕವಿದು ಗುಡುಗು ಸಹಿತ ಭರ್ಜರಿ ಮಳೆಯಾಗಿತ್ತು. ದಿಢೀರ್‌ ಮಳೆಗೆ ಕೋರಮಂಗಲ, ಆಡುಗೋಡಿ, ಮಡಿವಾಳ, ಬನ್ನೇರುಘಟ್ಟ, ಮೆಜೆಸ್ಟಿಕ್‌, ಶಿವಾಜಿನಗರ, ವಿಧಾನಸೌಧ ಸೇರಿದಂತೆ ಹಲವೆಡೆ ಮಳೆಯಾಗಿದೆ.

ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡಿ, ಬಸ್ ನಿಲ್ದಾಣವನ್ನು ಆಶ್ರಯ ಪಡೆದರು. ಕೆಲವೆಡೆ ರಸ್ತೆ ಮೇಲೆ ನೀರು ನಿಂತ ಕಾರಣ ಸವಾರರು ಸಂಕಷ್ಟ ಎದುರಿಸಿದರು. ಫ್ರೀಡಂ ಪಾರ್ಕ್‌ನಿಂದ ಆನಂದ್‌ ರಾವ್ ಸರ್ಕಲ್‌ಗೆ ಸಂಪರ್ಕಿಸುವ ರಸ್ತೆಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಲೋಕಾಯುಕ್ತ ಕಚೇರಿಯ ಮುಂಭಾಗ ಸಂಪೂರ್ಣ ಕೆರೆಯಂತಾಗಿತ್ತು. ಮಳೆ ನೀರಲ್ಲಿ ರಸ್ತೆ ದಾಟಲು ಜನರು ಪರದಾಡಿದರು.

ಇನ್ನು ಬೆಂಗಳೂರಿನಲ್ಲಿ ಭಾರಿ ಮಳೆಗೆ ಚಿಕ್ಕಪೇಟೆಯಲ್ಲಿರುವ ಸುಲ್ತಾನ್ ಪೇಟೆ ಜಲಾವೃತಗೊಂಡಿತ್ತು. ಜವಳಿ ಅಂಗಡಿಗಳ ಪ್ರಮುಖ ಕೇಂದ್ರವಾಗಿರುವ ಸುಲ್ತಾನ್ ಪೇಟೆಯ ಬಹುತೇಕ ಗಲ್ಲಿಗಳಿಗೆ, ಅಂಗಡಿಗಳಿಗೂ ಮೋರಿ ನೀರು ನುಗ್ಗಿತ್ತು. ನೀರು ತೆರವು ಮಾಡಲು ಅಂಗಡಿ ಸಿಬ್ಬಂದಿ ಪರದಾಡಿದರು.

ಇದನ್ನೂ ಓದಿ: CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

ಮುಂದಿನ ಐದು ದಿನಗಳಿಗೆ ಮಳೆ ಅಲರ್ಟ್

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆಗಸ್ಟ್ 29 ರಿಂದ ಆಗಸ್ಟ್ 31ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಆಗಸ್ಟ್ 29 ರಿಂದ 30ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ ಆಗಸ್ಟ್ 29ರಿಂದ ಸೆಪ್ಟೆಂಬರ್1ರ ವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಆಳಸಮುದ್ರ ಮೀನುಗಾರಿಕೆಗೆ ತೆರಳಿದವರಿಗೆ ಕಟ್ಟೆಚ್ಚರ

ಕರಾವಳಿಯ ಉಡುಪಿಗೆ ಆರೆಂಜ್ ಹಾಗೂ ರೆಡ್ ಅಲರ್ಟ್ ನೀಡಲಾಗಿದೆ. ಗಾಳಿ ಜತೆಗೆ ಮಳೆಯಾಗಲಿದ್ದು, ಕಡಲಿಗಿಳಿಯುವ ಮೀನುಗಾರರಿಗೆ ಎಚ್ಚರಿಕೆ ಸಂದೇಶ ನೀಡಿದೆ. ಆಳಸಮುದ್ರ ಮೀನುಗಾರಿಕೆಗೆ ತೆರಳಿದವರಿಗೆ ಕಟ್ಟೆಚ್ಚರ ನೀಡಿದೆ. ಹವಾಮಾನ ಇಲಾಖೆ ಮನ್ಸೂಚನೆ ಮೇರೆಗೆ ಕೆಲ ಬೋಟ್‌ಗಳು ವಾಪಸ್ ಆಗಿವೆ. ಐಎಂಡಿ ಆಗಸ್ಟ್ 30 ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಆಗಸ್ಟ್ 31 ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Reliance Jio
ವಾಣಿಜ್ಯ35 mins ago

Reliance Jio: ರಿಲಯನ್ಸ್ ಜಿಯೋನಿಂದ ಹೊಸ ಆಫರ್‌; 100 ಜಿಬಿ ಕ್ಲೌಡ್ ಸಂಗ್ರಹ ಉಚಿತ

Assault case
ಚಿತ್ರದುರ್ಗ1 hour ago

Assault Case: ಪತ್ನಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿದ ಪಾಪಿ ಪತಿ; ಪ್ರಕರಣ ದಾಖಲು

Kannada New Movie
ಸಿನಿಮಾ2 hours ago

Kannada New Movie: ‘ಸರ್ವೇ ನಂಬರ್ 45’ ಚಿತ್ರೀಕರಣಕ್ಕೆ ಚಾಲನೆ

Spectrum Dress Fashion
ಫ್ಯಾಷನ್2 hours ago

Spectrum Dress Fashion: ಮಳೆಗಾಲದ ಫ್ಯಾಷನ್‌ಗೆ ಕಾಲಿಟ್ಟಿವೆ ಗ್ಲಾಮರಸ್‌ ಸಿಕ್ವೀನ್ಸ್ ರೆಟ್ರೊ ಸ್ಪೆಕ್ಟ್ರಮ್‌ ಡ್ರೆಸ್

Bomb Threat
ಕ್ರೈಂ2 hours ago

Bomb Threat: ನಗರದಲ್ಲಿ ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

Actor Darshan
ಬೆಂಗಳೂರು3 hours ago

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

Karwar Jail
ಕ್ರೈಂ3 hours ago

Karwar Jail: ನಟ ದರ್ಶನ್‌ಗೆ ಐಷಾರಾಮಿ ಸವಲತ್ತು! ಕಾರವಾರ ಜೈಲಿನಲ್ಲಿ ತಂಬಾಕಿಗೆ ಬೇಡಿಕೆ ಇಟ್ಟ ಖೈದಿಗಳಿಂದ ಗಲಾಟೆ

Shalini Rajaneesh
ಫ್ಯಾಷನ್3 hours ago

Shalini Rajaneesh: ಸೀರೆ, ಹಣೆಗೆ ಅಗಲವಾದ ರೆಡ್ ಬಿಂದಿ ಎಂದಿಗೂ ಬದಲಾಗದ ನನ್ನ ಯೂನಿಕ್ ಫ್ಯಾಷನ್ ಸ್ಟೇಟ್ಮೆಂಟ್!

karnataka Weather Forecast
ಮಳೆ3 hours ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Namratha Gowda
ಕಿರುತೆರೆ3 hours ago

Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್11 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌