ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್; ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ಗೆ KUWJ ಸನ್ಮಾನ - Vistara News

ಬೆಂಗಳೂರು

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್; ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ಗೆ KUWJ ಸನ್ಮಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನಿರಂತರ ಶ್ರಮದಿಂದಾಗಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ದೊರಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ಧಾರೆ.

VISTARANEWS.COM


on

Free bus passes for rural journalists KV Prabhakar praises Shivananda Tagadur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಬೇಡಿಕೆಯನ್ನು ರಾಜ್ಯ ಬಜೆಟ್‌ನಲ್ಲಿ ಸರ್ಕಾರ ಈಡೇರಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಮಂಗಳವಾರ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ವಿ.ಪ್ರಭಾಕರ್ ಅವರು, ಗ್ರಾಮೀಣ ಪತ್ರಕರ್ತರ ಶ್ರಮ ಮತ್ತು ಕಾರ್ಯಕ್ಷಮತೆ ಗುರುತಿಸಿ, ಉಚಿತ ಬಸ್ ಪಾಸ್‌ ಸೌಲಭ್ಯ ಕಲ್ಪಿಸಿ, ಬಹುವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸುವೆ. ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನಿರಂತರ ಶ್ರಮದಿಂದಾಗಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ದೊರಕಿದೆ ಎಂದು ತಿಳಿಸಿದರು.

ಪತ್ರಕರ್ತ ಹುದ್ದೆಗೆ ಬರುವವರಲ್ಲಿ ಹೆಚ್ಚಿನವರು ಕಷ್ಟದ ಕುಟುಂಬಗಳಿಂದ ಬರುವವರು. ಆದ್ದರಿಂದ ಸರ್ಕಾರ ಈ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಬೇಕಾಗುತ್ತದೆ. ಪತ್ರಕರ್ತರ ಪೆನ್ಷನ್ ಮತ್ತು ನಿವೇಶನ ಸೇರಿ ಪತ್ರಕರ್ತರಿಗೆ ಇಲಾಖೆಯಿಂದ, ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳು ಸಿಗದಂತೆ ಅಡ್ಡಿ ಆಗಿರುವ ಎಲ್ಲಾ ತಾಂತ್ರಿಕ ಅಡೆ ತಡೆಗಳನ್ನು ನಿವಾರಿಸಲು ಸತತ ಪ್ರಯತ್ನ ಮತ್ತು ಸಭೆ ನಡೆಸುತ್ತಿದ್ದೇವೆ. ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಮಾತನಾಡಿ, 29 ವರ್ಷದ ಹಿಂದೆ ಚಿಕ್ಕಮಗಳೂರಿನಲ್ಲಿ ರಾಜ್ಯ ಸಮ್ಮೇಳನವಾದ ಸಂದರ್ಭದಿಂದ ಬಸ್ ಪಾಸ್ ಬೇಡಿಕೆ ಇತ್ತು. ಆ ಬೇಡಿಕೆ ಬಜೆಟ್‌ನಲ್ಲಿ ಸಾಕಾರಗೊಂಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಕೆ.ವಿ.ಪ್ರಭಾಕರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಇದನ್ನೂ ಓದಿ | Police Transfer : Good News; ಪೊಲೀಸರ ಅಂತರ್ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್‌ ಸಿಗ್ನಲ್‌

ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಸಮ್ಮೇಳನದಲ್ಲಿ ಕೆಯುಡಬ್ಲ್ಯೂಜೆ ಹಕ್ಕೊತ್ತಾಯಕ್ಕೆ ಸ್ಪಂದಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಬಸ್ ಪಾಸ್ ಬೇಡಿಕೆ ಈಡೇರಿಸುವುದಾಗಿ ಹೇಳಿ, ಹಾಗೆ ನುಡಿದಂತೆಯೇ ನಡೆದುಕೊಂಡಿದ್ದಾರೆ ಎಂದು ಹೇಳಿದರು.

ಕೆಯುಡಬ್ಲ್ಯೂಜೆ ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ನಮ್ಮ ಭಾವನೆಗೆ ಸ್ಪಂದಿಸಿದ ಕೆ.ವಿ. ಪ್ರಭಾಕರ್ ಅವರ ಪರಿಶ್ರಮವನ್ನು ಮರೆಯಲು ಸಾಧ್ಯವಿಲ್ಲ. ಹಣಕಾಸು ಇಲಾಖೆ ಮುಖ್ಯಸ್ಥ ಎಲ್.ಕೆ.ಅತೀಕ್ ಸೇರಿದಂತೆ ಎಲ್ಲಾ ಅಧಿಕಾರಿ ವರ್ಗಕ್ಕೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಗಡೂರು ತಿಳಿಸಿದರು.

ಸಂಘದ ಉಪಾಧ್ಯಕ್ಷ ಅಜ್ಜಮಾಡ ಕುಟ್ಟಪ್ಪ ಮಾತನಾಡಿ, ಬಸ್ ಪಾಸ್‌ಗೆ ಹೆಚ್ಚಿನ ಷರತ್ತುಗಳನ್ನು ವಿಧಿಸದೆ ಪತ್ರಕರ್ತರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ.ಮದನಗೌಡ ಮಾತನಾಡಿ, ಸ್ನೇಹಿತರಾದ ಪ್ರಭಾಕರ್ ಅವರು ಪತ್ರಕರ್ತರ ಬೇಡಿಕೆಗಳಿಗೆ ಸ್ಪಂಸಿಸಿದ್ದರೆ, ಶಿವಾನಂದ ತಗಡೂರು ಅವರು ಪತ್ರಕರ್ತರ ಶಕ್ತಿಯಾಗಿ ಕೆಲಸ ಮಾಡಿ ಇಬ್ಬರೂ ಸೇರಿ ಬಸ್ ಪಾಸ್ ಕನಸು ನನಸಾಗಿಸಿದ್ದಾರೆ ಎಂದರು.

ವಸತಿ ಸಚಿವರ ಮಾಧ್ಯಮ ಸಂಯೋಜಕ ಲಕ್ಷ್ಮೀನಾರಾಯಣ್ ಮಾತನಾಡಿ, ಹಿಡಿದ ಕೆಲಸವನ್ನು ತಗಡೂರು ಬಿಡುವುದಿಲ್ಲ. ಸತತ ವಿಧಾನಸೌಧದಲ್ಲಿ ಫಾಲೊಅಪ್ ಮಾಡುತ್ತಾರೆ ಎಂದರು. ಈ ನಿಟ್ಟಿನಲ್ಲಿ ಕೆ.ವಿ.ಪ್ರಭಾಕರ್ ಮತ್ತು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ಪ್ರಶಸ್ತಿಗೆ ಭಾಜನರಾಗಿದ್ದ ಕೆ.ಎನ್.ಪುಟ್ಟಲಿಂಗಯ್ಯ ಮತ್ತು ತೃಪ್ತಿ ಕುಮ್ರಗೋಡು ಅವರನ್ನು ಸನ್ಮಾನಿಸಲಾಯಿತು.

ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಭವಾನಿಸಿಂಗ್ ಠಾಕೂರ್, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಂ, ಖಜಾಂಚಿ ವಾಸುದೇವ ಹೊಳ್ಳ ಹಾಜರಿದ್ದರು.

ಇದನ್ನೂ ಓದಿ | 7ನೇ ವೇತನ ಆಯೋಗದ ವರದಿ ಬಂದ ನಂತರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಸಿಎಂ ಭರವಸೆ

ಅಭಿಮಾನದಲ್ಲಿ ಮಿಂದೆದ್ದ ಪ್ರಭಾಕರ್

ಕೆ.ವಿ.ಪ್ರಭಾಕರ್ ಅವರನ್ನು ಮೊದಲು ರಾಜ್ಯ ಸಂಘದಿಂದ ಗೌರವಿಸಲಾಯಿತು. ಬಿ.ಪಿ.ಲೋಕೇಶ್ ಅವರು ರಚಿಸಿದ ಅವರದೇ ಭಾವಚಿತ್ರವನ್ನು ಕೊಡುಗೆಯಾಗಿ ನೀಡಲಾಯಿತು. ಜಿಲ್ಲೆ ಮತ್ತು ತಾಲೂಕುಗಳಿಂದ ಬಂದಿದ್ದ ಪತ್ರಕರ್ತರು ಪ್ರಭಾಕರ್ ಅವರನ್ನು ಅಭಿಮಾನದಿಂದ ಸನ್ಮಾನಿಸಿದರು. ಪತ್ರಕರ್ತರ ಅಭಿಮಾನದ ಹೊಳೆಯಲ್ಲಿ ಮಿಂದೆದ್ದ ಪ್ರಭಾಕರ್, ಕ್ಷಣ ಕಾಲ ಭಾವುಕರಾಗಿ, ಸುದ್ದಿಮನೆಯ ಒಡನಾಟವನ್ನು ನೆನೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ರೇವಣ್ಣ ಅವರ ಜಾಮೀನು ಅರ್ಜಿ (bail plea) ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

VISTARANEWS.COM


on

hd revanna jailed prajwal revanna case
Koo

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರಿಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ಜೈಲಾಧಿಕಾರಿಗಳು ನೀಡಿದ್ದು, ಅವರ ನಂಬರ್‌ 4567 ಆಗಿದೆ. ನಿನ್ನೆ ರಾತ್ರಿ ಎಲ್ಲ ಕೈದಿಗಳಂತೆ ಜೈಲಿನ ಊಟ ಸೇವಿಸಿದ್ದ ರೇವಣ್ಣ ನಿದ್ರಿಸದೆ ಮೌನಿಯಾಗಿ ಯೋಚಿಸುತ್ತಾ ಕುಳಿತಿದ್ದರು ಎಂದು ತಿಳಿದುಬಂದಿದೆ. ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ರೇವಣ್ಣ ಅವರ ಜಾಮೀನು ಅರ್ಜಿ (bail plea) ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆಯೇ ರೇವಣ್ಣಗೆ ವಿಚಾರಣಾಧೀನ ಬಂಧಿ 4567 ನಂಬರ್ ನೀಡಲಾಗಿದೆ. ಜೈಲಿನಲ್ಲಿ ಎಲ್ಲ ಕೈದಿಗಳಿಗೆ ನೀಡುವ ಊಟ ಸವಿಯಬೇಕಾದ ಪರಿಸ್ಥಿತಿ ಅವರದ್ದಾಗಿದೆ. ಜೈಲಿನ ಮೆನುವಿನಂತೆಯೇ ಅಧಿಕಾರಿಗಳು ಚಪಾತಿ, ಪಲ್ಯ, ಮುದ್ದೆ, ಅನ್ನ, ಸಾಂಬಾರ್ ಊಟ ನೀಡಿದ್ದಾರೆ. ಕೋರ್ಟ್ ಅನುಮತಿ ಇದ್ದರೆ ಮಾತ್ರ ಹೊರಗಿನ ಊಟ ತರಿಸಲು ಅವಕಾಶವಿದೆ. ಆದರೆ ರೇವಣ್ಣಗೆ ಹೊರಗಿನ ಊಟಕ್ಕೆ ಯಾವುದೇ ಅನುಮತಿ ಇಲ್ಲ. ಆದರೆ ರಾತ್ರಿ ಊಟ ನೀಡಿ ಒಂದು ಗಂಟೆ ಕಳೆದರೂ ಊಟ ಮಾಡದೆ ರೇವಣ್ಣ ಮೌನಕ್ಕೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸಚಿವರಾಗಿ ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ ಒಂದು ರಾತ್ರಿಯನ್ನು ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ಕಳೆದಿದ್ದು, ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್ ಸಾಂಬಾರ್ ತಡವಾಗಿ ತಿಂದಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆ ಪಡೆದಿದ್ದಾರೆ. ರಾತ್ರಿ ಒಂದು ಗಂಟೆಯವರೆಗೂ ನಿದ್ರೆ ಮಾಡದೆ ಯೋಚಿಸುತ್ತಿದ್ದರು ಎನ್ನಲಾಗಿದೆ. ರೇವಣ್ಣ ಆರೋಗ್ಯ ಸರಿ‌ ಇಲ್ಲದ ಕಾರಣ ಜೈಲಾಧಿಕಾರಿಗಳು ಹೆಚ್ಚು ನಿಗಾ ಇಟ್ಟಿದ್ದಾರೆ. ರೇವಣ್ಣ ಇರುವ ಕೊಠಡಿ ಬಳಿ ಒಬ್ಬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇಂದು ಬೆಳಿಗ್ಗೆ 5.30ಕ್ಕೆ ನಿದ್ರೆಯಿಂದ ಎದ್ದ ರೇವಣ್ಣ ಅವರಿಗೆ ಕಾಫಿ-ಟೀ ನೀಡಲಾಗಿದೆ. ಕೈದಿಗಳಿಗೆ ಟಿವಿ ವ್ಯವಸ್ಥೆ ಇಲ್ಲ. ಹೊರಗಿನ ಸುದ್ದಿ ತಿಳಿಯಲು ನ್ಯೂಸ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ರೇವಣ್ಣಗೆ ಓದಲು ಕನ್ನಡ-ಇಂಗ್ಲೀಷ್ ಪೇಪರ್ ನೀಡಲಾಗಿದೆ. ಪೇಪರ್ ಕಡೆ ಕಣ್ಣಾಡಿಸಿ ನಿನ್ನೆಯ ವಿದ್ಯಮಾನಗಳನ್ನು ರೇವಣ್ಣ ಓದಿದ್ದಾರೆ. ಜೈಲಿನ ಮೆನುವಿನಂತೆ ರೇವಣ್ಣಗೆ ಇಂದು ಬೆಳಗ್ಗಿನ ತಿಂಡಿಗೆ ಪುಳಿಯೋಗರೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ನಾನೇನೂ ಮಾಡಿಲ್ಲ: ರೇವಣ್ಣ

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿ ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Continue Reading

ಶಿಕ್ಷಣ

SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

SSLC Exam Result 2024: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ. ಗುರುವಾರ ಫಲಿತಾಂಶ ಪ್ರಕಟವಾಗಲಿದೆ.

VISTARANEWS.COM


on

SSLC Exam Result 2024 to be declared tomorrow Here are the details
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶ ಇಂದು ಪ್ರಕಟವಾಗಲಿದೆ. ಮೇ 9ರ ಬೆಳಗ್ಗೆ 10.30ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ದಿನಾಂಕ: 25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30ಕ್ಕೆ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದೆ.

SSLC Exam Result 2024 to be declared tomorrow Here are the details

ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಮೇ 9ರ ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆ ತಡವಾಗಿದೆ.

ಮಾ.25ರಿಂದ ಏ.6ರ ವರೆಗೆ ನಡೆದಿದ್ದ ಪರೀಕ್ಷೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ.

ಫಲಿತಾಂಶ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ನೋಡಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಜತೆಗೆ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ ಕಾತರ ಹೆಚ್ಚಿದೆ.

ಇದನ್ನೂ ಓದಿ | Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಇನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿಶಾಂಶವನ್ನು ಮೇ 08 ರಂದು ಬಿಡುಗಡೆ ಮಾಡಲಾಗಿತ್ತು. ಘೋಷಿಸಿತ್ತು. ಒಟ್ಟಾರ ಉತ್ತೀರ್ಣ ಪ್ರಮಾಣ ಶೇ 83.89 ದಾಖಲಾಗಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Continue Reading

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Karnataka Weather: ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧೆಡೆ ಬುಧವಾರ ಭಾರಿ ಮಳೆ ಸುರಿದಿತ್ತು. ಅದೇ ರೀತಿ ಇಂದು(ಮೇ 9) ಕೂಡ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆ ಇದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ (30-40 kmph) ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಅದೇ ರೀತಿ ಬಳ್ಳಾರಿ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗಲಿದೆ (Rain News) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರವಾದ ಮಳೆ/ ಗುಡುಗು ಸಹಿತ ಗಾಳಿ (30-40 kmph) ಉಂಟಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮೇ 10ರಂದು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಕೊಡಗು, ಹಾಸನ, ಚಿಕ್ಕಮಗಳೂರು, ವಿಜಯನಗರ, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳು. ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದೇ ರೀತಿ ಮೇ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿರಿ ನೀಡಿದೆ.

ಇದನ್ನೂ ಓದಿ | Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

ತಾಪಮಾನದ ಮುನ್ಸೂಚನೆ

ಮುಂದಿನ 2 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ನಂತರ ರಾಜ್ಯದ ಮೇಲೆ 2-3 ಡಿಗ್ರಿ ಇಳಿಕೆಯಾಗಲಿದೆ.

ಮುಂದಿನ 24 ಗಂಟೆಗಳ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಮಿಂಚು/ಗಾಳಿ (30- 40kmph) ಸಹಿತ ಲಘುವಾಗಿ ಮಧ್ಯಮ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

Vistara Gramadani: ಹಾಗೆ ನೋಡಿದರೆ, ಹೆಚ್ಚು ಓದಿದದವರು ನಾಗರಿಕತೆಯಲ್ಲಿ ಮುಂದಿದ್ದೇವೆ ಅಂತ ಭ್ರಮಿಸುವ ನಗರವಾಸಿಗಳು ಮತದಾನದಂತಹ ಕರ್ತವ್ಯದಲ್ಲಿ ಗ್ರಾಮೀಣ ಪ್ರದೇಶದವರಿಗಿಂತ ಪರ್ಸಂಟೇಜಿನಲ್ಲಿ ಮುಂದಿರಬೇಕಿತ್ತು. ಆದರೆ, ವಾಸ್ತವವಾಗಿ ಮತದಾನ ಇರಲಿ, PUC ಪಲಿತಾಂಶ ಇರಲಿ, ಒಟ್ಟಾರೆ ಆರೋಗ್ಯ ನೆಮ್ಮದಿಗಳ ವಿಚಾರವೇ ಇರಲಿ… ಗ್ರಾಮೀಣ ಪ್ರದೇಶದಲ್ಲೇ ಪರ್ಸಂಟೇಜ್ ಜಾಸ್ತಿ.

VISTARANEWS.COM


on

ವಿಸ್ತಾರ ಗ್ರಾಮದನಿ Vistara Gramadaani
ವಿಜಯಪುರ ಲೋಕಸಭಾ ಕ್ಷೇತ್ರದ ನಿಡಗುಂದಿ ತಾಲೂಕಿನ ಹೆಬ್ಬಾಳ, ಯಲಗೂರ, ಬೀರಲದಿನ್ನಿ ಹಾಗೂ ಬಳಬಟ್ಟಿ ಗ್ರಾಮದಲ್ಲಿ ಮಂಗಳವಾರ ನರೇಗಾ ಯೋಜನೆಯಡಿ ನೋಂದಾಯಿತ 256 ಕೂಲಿಕಾರರು ತಮ್ಮ ಹಕ್ಕು ಚಲಾಯಿಸಿ, ನರೇಗಾ ಕೆಲಸಕ್ಕೆ ಹಾಜರಾಗಿ ಇತರರಿಗೆ ಮಾದರಿ ಆಗಿದ್ದಾರೆ.
Koo
Aravind Sigadal

| ಅರವಿಂದ ಸಿಗದಾಳ್, ಮೇಲುಕೊಪ್ಪ
ಪ್ರತೀ ವರ್ಷ ಬಹುತೇಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದಾಗ ಮರುದಿನ ಪತ್ರಿಕೆಗಳಲ್ಲಿ ಕಾಣುವ ಸಾಮಾನ್ಯ ಹೆಡ್ಡಿಂಗ್‌: ‘ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ’ ಅಥವಾ ‘ಕನ್ನಡ ಮಾಧ್ಯಮದ ವಿದ್ಯಾರ್ಥಿಗಳೇ ಮುಂದೆ’ ಅಥವಾ ‘ಹೆಣ್ಮಕ್ಳೇ ಸ್ಟ್ರಾಂಗು ಗುರು’ ಇತ್ಯಾದಿ. ಅದರಲ್ಲೂ ‘ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ’ ಎಂಬುದು ಒಂದು ವಿಶೇಷವಾದ ವಿಚಾರ. ಹಾಗೆಯೇ ಮತದಾನ ಸಂದರ್ಭಗಳಲ್ಲೂ ಇದೇ ವಿಶೇಷ ಕಾಣುತ್ತೇವೆ. ಗ್ರಾಮೀಣ ಪ್ರದೇಶಗಳಲ್ಲಿ ಯಾವಾಗಲೂ ಅತಿ ಹೆಚ್ಚು ಮತದಾನ ನಡೆಯುತ್ತದೆ. ಸ್ವೀಪ್ (SVEEP Systematic Voters’ Education and Electoral Participation) ಜಾಗೃತಿ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದವರನ್ನು (Vistara Gramadani) ತಲುಪದೇ ಇದ್ದರೂ ಮತದಾನ ಮಾತ್ರ ನಗರ ಪ್ರದೇಶಗಳಿಗಿಂತ ಹಳ್ಳಿಗಳಲ್ಲಿ ಹೆಚ್ಚು.

ನಗರಗಳಿಗಿಂತ ಹಳ್ಳಿ, ಪಟ್ಟಣಗಳಲ್ಲಿ ಶೇಕಡಾವಾರು ಓಟ್ ಜಾಸ್ತಿ ಕಾರಣವೇನು?

ಹೌದು, ಹಳ್ಳಿ ಪಟ್ಟಣಗಳಲ್ಲಿ ಮತದಾನ ಹೆಚ್ಚು. ಹಳ್ಳಿ ಪಟ್ಟಣಗಳ ಕೆಲವು ಬೂತ್‌ಗಳಲ್ಲಿ 100% ಮತದಾನ ಆಗಿದ್ದೂ ಇದೆ. ಸಾಮಾನ್ಯವಾಗಿ ಹಳ್ಳಿಗಳ ಬೂತ್‌ಗಳಲ್ಲಿ 80-90% ಮತದಾನ ‘ಗ್ಯಾರಂಟಿ’. ಗ್ರಾಮೀಣ ಪ್ರದೇಶಗಳಲ್ಲಿ ಮತದಾನ ಹೆಚ್ಚಾಗಲು ಹಲವರು ಕಾರಣಗಳಿವೆ.

  1. ಹಳ್ಳಿಗಳಲ್ಲಿ ಹೆಚ್ಚಿನ ಮತದಾರರು ಕೇವಲ ಮತದಾರರಾಗಿ ಇರುವುದಿಲ್ಲ. ಯಾವುದೋ ಪಕ್ಷಗಳ ವ್ಯಕ್ತಿಗಳ ಬೆಂಬಲಿತ ವ್ಯಕ್ತಿಗಳಾಗಿರುತ್ತಾರೆ.
  2. ಪಕ್ಷಗಳ ಬೂತ್ ಕಾರ್ಯಕರ್ತರೊಂದಿಗೆ ಎಲ್ಲಾ ಮತದಾರರ ಸಂಪರ್ಕ ಇರುತ್ತದೆ. ಮತ ಹಾಕಿಲ್ಲ ಅಂದರೆ, ಮತ ಹಾಕದಿರುವ ವಿಚಾರ ಇಡೀ ಹಳ್ಳಿಗೆ ಗೊತ್ತಾಗುತ್ತದೆ. ‘ಮತ ಹಾಕದೆ ಸುದ್ದಿ ಆಗುವುದು ಬೇಡ’ ಎಂಬ ಕಾರಣಕ್ಕೆ ಹಳ್ಳಿಗಳಲ್ಲಿ ಮತದಾನ ಮಾಡುವವರೂ ಇದ್ದಾರೆ.
  3. ಹಳ್ಳಿ ಪಟ್ಟಣಗಳಲ್ಲಿ ಮತದಾರರಿಗೆ ರಾಜಕೀಯದಾಟದಲ್ಲಿ ಆಸಕ್ತಿ ಜಾಸ್ತಿ. ದೊಡ್ಡ ನಗರಗಳಲ್ಲಿ ಹೆಚ್ಚಿನ ಜನರಿಗೆ, ಅದರಲ್ಲೂ ದೊಡ್ಡ ಸಂಬಳದ ದೊಡ್ಡ ಹುದ್ದೆಯಲ್ಲಿ ಇರುವವರಿಗೆ ರಾಜಕೀಯ ಆಸಕ್ತಿ ವಿಷಯ ಆಗಿರುವುದಿಲ್ಲ. ಒಂದು ರೀತಿಯಲ್ಲಿ ನಗರವಾಸಿಗಳಿಗೆ ರಾಜಕೀಯ ಒಂದು ಜಿಗುಪ್ಸೆ.
  4. ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಜನರು ಸರ್ಕಾರಿ ಇಲಾಖೆಗಳಿಂದ ಫಲಾನುಭವಿ ಆಗಿರುತ್ತಾರೆ ಅಥವಾ ಯಾವುದಾದರೂ ಕೆಲಸಗಳು ಇಲಾಖೆಗಳಿಂದ ಬಾಕಿ ಉಳಿದಿರುತ್ತವೆ. ಆಗಿರುವ ಕೆಲಸ ಅಥವಾ ಆಗಬೇಕಿರುವ ಕೆಲಸದ ಹಿಂದೆ ಓಡಾಡುವವರು ಪಕ್ಷ ಪ್ರತಿನಿಧಿಗಳಾಗಿರುತ್ತಾರೆ ಮತ್ತು ಆ ಪ್ರತಿನಿಧಿಗಳು ಮತದಾನ ಸಂದರ್ಭದಲ್ಲಿ ಮತದಾರರನ್ನು ಮತದಾರ ಪ್ರಕ್ರಿಯೆಗೆ ತೊಡಗುವಂತೆ ಪ್ರಭಾವ ಬೀರಿರುತ್ತಾರೆ.
  5. ಜಾತ್ರೆ, ಊರಿನ ಹಬ್ಬಗಳಂತೆ ಎಲೆಕ್ಷನ್ ಕೂಡ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ ಒಂದು ಉತ್ಸವ ಇದ್ದಂತೆ, ಹೆಚ್ಚಿನವರು ಉತ್ಸಾಹದಿಂದಲೇ ಭಾಗವಹಿಸುತ್ತಾರೆ. ಹಳ್ಳಿಯ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳು ನಡೆಯುವಾಗ, ಭೇಟಿಯಾದ ಸಂದರ್ಭಗಳಲ್ಲಿ ರಾಜಕೀಯ ವಿಚಾರಗಳು ಚರ್ಚೆಯ ಒಂದು ಸಬ್ಜೆಕ್ಟ್ ಆಗಿರುತ್ತದೆ. ಇದರ ಪ್ರಭಾವ, ಮತದಾನ ಹೆಚ್ಚಲು ಪರೋಕ್ವ ಕಾರಣಗಳಲ್ಲಿ ಒಂದಾಗಿರುತ್ತದೆ.
  6. ದೊಡ್ಡ ನಗರಗಳಲ್ಲಿ ವೃತ್ತಿಯಲ್ಲಿ ಇರುವವರು, ಚುನಾವಣೆಯ ರಜೆಯಲ್ಲಿ ಊರಿಗೆ ಬಂದಿರುವುದರಿಂದ ಮತ್ತು ಕುಟುಂಬದವರು ಮತದಾನ ಮಾಡುವಾಗ ಸಹಜವಾಗಿ ಪ್ರೇರಿತಗೊಂಡು ಮತದಾನಕ್ಕೆ ಮುಂದಾಗುತ್ತಾರೆ. ನಗರದಲ್ಲೇ ಹುಟ್ಟಿ ಬೆಳೆದವರು ರಜೆ ಸಿಕ್ಕಿದರೆ ಗಿರಿಧಾಮದ ತುದಿಗೆ ಜಾಲಿ ಪಿಕ್‌ನಿಕ್ ಹೋಗುವವರೇ ಹೆಚ್ಚು!
  7. ದೊಡ್ಡ ನಗರದ ಜನರು ಹಣ, ವೃತ್ತಿ, ಐಷಾರಾಮಿ ಜೀವನಕ್ಕೆ ಕೊಟ್ಟ ಪ್ರಾಧಾನ್ಯತೆಯನ್ನು ಜೀವನದ ಅಗತ್ಯದ ಪ್ರಮುಖ ವಿಚಾರಗಳಲ್ಲಿ ಕೊಡುವುದಿಲ್ಲ. ಅದು ಅಡುಗೆ ಮನೆಯ ಕೆಲಸವಿರಬಹುದು, ಸಾಮಾಜಿಕ ಚಟುವಟಿಕೆಗಳಿರಬಹುದು, ರಾಜಕೀಯವಿರಬಹುದು. ಹಳ್ಳಿಗಳಲ್ಲಿ ಆ ರೀತಿ ವಾತಾವರಣ ಇರುವುದಿಲ್ಲ.
  8. ಹಳ್ಳಿಗಳ ಜನಗಳ ಮಧ್ಯೆ ಒಂದು ಸ್ನೇಹ ಸಂಬಂಧ ಅಥವಾ ಬಾಂಧವ್ಯದ ಸಂಬಂಧ ಗಟ್ಟಿ ಇರುತ್ತದೆ. ಅದರ ಪರಿಣಾಮ, ಎಲ್ಲಾ ವಿಚಾರಗಳಂತೆ ರಾಜಕೀಯ ಸಂವಹನವೂ ನಡೆಯುತ್ತಿರುತ್ತದೆ. ಮತದಾನಕ್ಕೆ ಆ ಸಂವಹನ ಪ್ರೇರಣೆಯೂ ಆಗಿರುತ್ತದೆ.
  9. ಹಳ್ಳಿಗಳ ಜನರಲ್ಲಿ ರಾಜಕೀಯದ ಆಗುಹೋಗುಗಳ ಅರಿವು, ತಿಳಿವಳಿಕೆ ಹೆಚ್ಚು. ರಾಜಕಾರಣಿಗಳು/ಪಕ್ಷಗಳು ಮಾಡಿದ ಸಾಧನೆಗಳು ಅಥವಾ ನಿಷ್ಕ್ರಿಯತೆ ಬಗ್ಗೆ ಹಳ್ಳಿಯ ಸಾಮಾನ್ಯ ಪ್ರಜೆಗೆ ಇರುವ ಜ್ಞಾನ, ಪರಿಚಯ ದೊಡ್ಡ ನಗರವಾಸಿಗಳಿಗೆ ಇರುವುದಿಲ್ಲ. ನಗರ ನಿವಾಸಿಗಳಲ್ಲಿ ಅನೇಕರಿಗೆ ತಮ್ಮ MLA ಯಾರು? ಕಾರ್ಪೋರೇಟರ್ ಯಾರು ಅಂತಾನೇ ಗೊತ್ತಿರುವುದಿಲ್ಲ. ಹಳ್ಳಿಯ ಸಾಮಾನ್ಯರಿಗೂ MLA ಯಾರು ಅಂತ ಕೇಳಿದರೆ, ಕಳೆದ ಮೂರು ಬಾರಿಯ MLA ಗಳ ಪೂರ್ಣ ವಿವರ ಕೊಡುವಷ್ಟು ಮಾಹಿತಿ ಅವರ ಬಳಿ ಇರುತ್ತದೆ. ಇಂತಹ ಅರಿವು ಹಳ್ಳಿಗಳಲ್ಲಿ ಜನರನ್ನು ಮತಗಟ್ಟೆಗೆ ಬರುವಂತೆ ಮಾಡುತ್ತವೆ.
  10. ಹಳ್ಳಿಯ ಮತದಾರರು ನಗರದ ನಿವಾಸಿಗಳಷ್ಟು ಸೋಮಾರಿಗಳಲ್ಲ! ನಿರಾಶಾವಾದಿಗಳಲ್ಲ! ಸಾಮಾನ್ಯವಾಗಿ, ನಗರದವರಿಗಿಂತ ಹಳ್ಳಿಗರು ಹೆಚ್ಚು ಶ್ರಮಿಕರಾಗಿರುವುದರಿಂದ, ಮಾನಸಿಕ ಮತ್ತು ದೈಹಿಕ ಆರೋಗ್ಯದ ವಿಚಾರದಲ್ಲಿ, ಗಟ್ಟಿತನದಲ್ಲಿ ಹಳ್ಳಿಗರು ಒಂದು ಹೆಜ್ಜೆ ಮುಂದೆ ಇರ್ತಾರೆ. ಸರದಿಯಲ್ಲಿ ಅರ್ಧ ಗಂಟೆ ಮತದಾನಕ್ಕೆ ನಿಲ್ಲಬೇಕಾದರೆ, ಅದನ್ನೂ ಕೂಡ ಸಂಭ್ರಮಿಸುತ್ತಾರೆ. ನಗರದವರಂತೆ ಅಸಹನೆ, ಚಡಪಡಿಕೆ ಹಳ್ಳಿಗರಲ್ಲಿ ಕಡಿಮೆ.

ಹಾಗೆ ನೋಡಿದರೆ, ಹೆಚ್ಚು ಓದಿದದವರು ನಾಗರಿಕತೆಯಲ್ಲಿ ಮುಂದಿದ್ದೇವೆ ಅಂತ ಭ್ರಮಿಸುವ ನಗರವಾಸಿಗಳು ಮತದಾನದಂತಹ ಕರ್ತವ್ಯದಲ್ಲಿ ಗ್ರಾಮೀಣ ಪ್ರದೇಶದವರಿಗಿಂತ ಪರ್ಸಂಟೇಜಿನಲ್ಲಿ ಮುಂದಿರಬೇಕಿತ್ತು. ಆದರೆ, ವಾಸ್ತವವಾಗಿ ಮತದಾನ ಇರಲಿ, ಪಿಯುಸಿ ಪರೀಕ್ಷೆ ಫಲಿತಾಂಶ ಇರಲಿ, ಒಟ್ಟಾರೆ ಆರೋಗ್ಯ ನೆಮ್ಮದಿಗಳ ವಿಚಾರವೇ ಇರಲಿ… ಗ್ರಾಮೀಣ ಪ್ರದೇಶದಲ್ಲೇ ಪರ್ಸಂಟೇಜ್ ಜಾಸ್ತಿ.

ಇದನ್ನೂ ಓದಿ | Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

ನಗರದಲ್ಲಿ ಯಾವುದೇ ಕಾರಣವಿಲ್ಲದೆ ಮತದಾನದಿಂದ ತಪ್ಪಿಸಿಕೊಳ್ಳುವ, ವಿವೇಕ ರಹಿತರಾಗಿ ಮತದಾನ ಕರ್ತವ್ಯ ಮಾಡದ ನಾಗರಿಕರಿಗೆ ಧಿಕ್ಕಾರ ಹೇಳುವಾಗಲೇ, ಮತದಾನ ಪೂಜೆಯನ್ನು ಶ್ರದ್ಧೆಯಿಂದ ಮಾಡಿದ ಗ್ರಾಮೀಣವಾಸಿ ದೇಶ ಪ್ರೇಮಿಗಳಿಗೆ ಒಂದು ಜೈಕಾರ ಹೇಳೋಣ.

Continue Reading
Advertisement
Do You Know
ಲೈಫ್‌ಸ್ಟೈಲ್10 mins ago

Do You Know: ನಿಮಗಿದು ಗೊತ್ತಾ? ಲವ್‌ ಮಾಡುತ್ತಿದ್ದರೆ ತೂಕ ಜಾಸ್ತಿಯಾಗುತ್ತದೆ!

hd revanna jailed prajwal revanna case
ಕ್ರೈಂ29 mins ago

Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

Nijjar Killling
ವಿದೇಶ29 mins ago

Nijjar Killing: ಒಂದೇ ದಿನದಲ್ಲಿ ಸ್ಟೂಡೆಂಟ್‌ ವೀಸಾ ಪಡೆದು ಕೆನಡಾಕ್ಕೆ ಬಂದಿದ್ನಂತೆ ನಿಜ್ಜರ್‌ ಹಂತಕ

Maldives
ದೇಶ34 mins ago

Maldives: ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ ಆಗಮಿಸಿದ ಮಾಲ್ಡೀವ್ಸ್ ಸಚಿವ ಮೂಸಾ ಜಮೀರ್

SSLC Exam Result 2024 to be declared tomorrow Here are the details
ಶಿಕ್ಷಣ1 hour ago

SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

Cooking Oils
ಆಹಾರ/ಅಡುಗೆ1 hour ago

Cooking Oils: ಭಾರತೀಯ ಅಡುಗೆ ಶೈಲಿಗೆ ಯೋಗ್ಯವಾದ 7 ಅಡುಗೆ ಎಣ್ಣೆಗಳಿವು

Karnataka Weather
ಕರ್ನಾಟಕ2 hours ago

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Sam Pitroda
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

dina bhavishya read your daily horoscope predictions for May 09 2024
ಪ್ರಮುಖ ಸುದ್ದಿ3 hours ago

Dina Bhavishya: 12 ರಾಶಿಗಳ ಇಂದಿನ ಭವಿಷ್ಯ ಏನು? ಯಾರಿಗೆ ಪ್ಲಸ್‌? ಯಾರಿಗೆ ಮೈನಸ್!?

Pune
ದೇಶ8 hours ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌