Free Health Camp | ಕೇಸರಿ ಫೌ೦ಡೇಶನ್‌ನಿಂದ ಆ.26ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ - Vistara News

ಆರೋಗ್ಯ

Free Health Camp | ಕೇಸರಿ ಫೌ೦ಡೇಶನ್‌ನಿಂದ ಆ.26ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೇಸರಿ ಫೌಂಡೇಶನ್‌ ವತಿಯಿಂದ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರವನ್ನು (Free Health Camp) ಆಗಸ್ಟ್‌ 26ರಂದು ಏರ್ಪಡಿಸಲಾಗಿದೆ. ಹಲವು ರೀತಿಯ ಆರೋಗ್ಯ ತಪಾಸಣೆ ಇಲ್ಲಿ ನಡೆಯಲಿದ್ದು, ಅಗತ್ಯವುಳ್ಳವರಿಗೆ ಕಣ್ಣಿನ ಉಚಿತ ಶಸ್ತ್ರಚಿಕಿತ್ಸೆಯ ಸೌಲಭ್ಯವೂ ಇದೆ.

VISTARANEWS.COM


on

health camp
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಸರಿ ಫೌಂಡೇಶನ್‌, ಮುತ್ತೂಟ್‌ ಫೈನಾನ್ಸ್‌ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ (Free Health Camp) ಆಯೋಜಿಸಲಾಗಿದೆ. ಇದೇ ಆಗಸ್ಟ್‌ 26ರಂದು ಬೆಳ್ಳಗ್ಗೆ 6.30ರಿಂದ ಮಧ್ಯಾಹ್ನ 2ಗಂಟೆ ವರೆಗೆ ತಪಾಸಣೆ ನಡೆಯಲಿದೆ.

ಉಚಿತ ಆರೋಗ್ಯ ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಕೊಬ್ಬು, ಹೆಪಟೈಟಿಸ್ ಬಿ ವೈರಸ್ ಹಾಗೂ ಕ್ರಿಯೇಟಿನೈನ್ ಪರೀಕ್ಷೆ ಮಾಡಲಾಗುತ್ತದೆ. ಶಿಬಿರದಲ್ಲಿ ಉಚಿತ ಕನ್ನಡಕವನ್ನು ಹಾಗೂ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ಕೊಡಿಸಲಾಗುವುದು.

ಬೆಂಗಳೂರಿನ ಥಣಿಸಂದ್ರ ಬಸ್ ನಿಲ್ದಾಣದ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಮುಂಭಾಗ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೇಸರಿ ಫೌಂಡೇಶನ್‌ನ ಸಂಸ್ಥಾಪಕ ತಮ್ಮೇಶ್‌ಗೌಡ ಎಚ್‌.ಸಿ ಇವರನ್ನು ಸಂಪರ್ಕಿಸಬಹುದಾಗಿದೆ. ಆಸಕ್ತರು 9591735999 ಅಥವಾ 9945566359 ಸಂಖ್ಯೆಗೆ ಸಂಪರ್ಕಿಸಬಹುದಾಗಿದ್ದು, ರಕ್ತ ಪರೀಕ್ಷೆ ಮಾಡಿಸಲು ಬರುವವರು ಖಾಲಿ ಹೊಟ್ಟೆಯಲ್ಲಿ ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | ಪ್ರತಿಕೂಲ ಹವಾಮಾನ: ಅಮರನಾಥ ಯಾತ್ರೆಗೆ ತಾತ್ಕಾಲಿಕ ತಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

Run4Research: ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ವತಿಯಿಂದ ಜೂ.30ರಂದು ಭಾನುವಾರ ಬೆಳಿಗ್ಗೆ 5 ರಿಂದ 9 ರವರೆಗೆ ಬೆಂಗಳೂರಿನ ಎಚ್.ಎಸ್.ಆರ್. ಬಡಾವಣೆಯ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ʼರನ್4ರೀಸರ್ಚ್ʼ ಕ್ಲಿನಿಕಲ್ ರೀಸರ್ಚ್ ಕುರಿತು ಅರಿವನ್ನು ಮೂಡಿಸಲು ಸವಾಲಿನ ಓಟ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Run4Research programme on June 30 in Bengaluru
Koo

ಬೆಂಗಳೂರು: ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ವತಿಯಿಂದ ಜೂ.30 ರಂದು ಭಾನುವಾರ ಬೆಳಿಗ್ಗೆ 5 ಗಂಟೆಯಿಂದ 9 ರವರೆಗೆ ಬೆಂಗಳೂರಿನ ಎಚ್.ಎಸ್.ಆರ್. ಬಡಾವಣೆಯ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ʼರನ್4ರೀಸರ್ಚ್ʼ (Run4Research) ಕ್ಲಿನಿಕಲ್ ರೀಸರ್ಚ್ ಕುರಿತು ಅರಿವನ್ನು ಮೂಡಿಸಲು ಸವಾಲಿನ ಓಟ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಸವಾಲಿನ ಓಟವು ಭಾರತದ ಉಜ್ವಲ ಕ್ಲಿನಿಕಲ್ ರೀಸರ್ಚ್ ಸಮುದಾಯಕ್ಕೆ ಅರಿವನ್ನು ಉತ್ತೇಜಿಸುವ ಗುರಿ ಹೊಂದಿದೆ. ಅನುಷ್ಠಾನದ ಪಾಲುದಾರ ಸೆಲ್ಲುಲಾದೊಂದಿಗೆ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ 3ಕೆ, 5ಕೆ ಮತ್ತು 10ಕೆ ವಿಭಾಗಗಳಿದ್ದು, ಎಲ್ಲ ಫಿಟ್ನೆಸ್ ಹಂತಗಳ ಭಾಗವಹಿಸುವವರಿಗೆ ಅವಕಾಶ ನೀಡುತ್ತದೆ. ಐ.ಸಿ.ಎಸ್.ಆರ್. ಕ್ಲಿನಿಕಲ್ ರೀಸರ್ಚ್ ಕ್ಷೇತ್ರದಲ್ಲಿ ತೊಡಗಿಕೊಂಡ ಮತ್ತು ಆರೋಗ್ಯದ ಉತ್ಸಾಹಿಗಳನ್ನು ಈ ಉತ್ಸಾಹಕರ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸುತ್ತಿದೆ.

ಇದನ್ನೂ ಓದಿ: Post Office: ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ ಬಡ್ಡಿದರ ಬದಲಾವಣೆ ಇಲ್ಲ; ಬಡ್ಡಿಯ ಪಟ್ಟಿ ಇಲ್ಲಿದೆ

ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ಭಾರತದಲ್ಲಿ ನೈತಿಕ ಮತ್ತು ಉನ್ನತ ಗುಣಮಟ್ಟದ ಕ್ಲಿನಿಕಲ್ ರೀಸರ್ಚ್ ಉತ್ತೇಜಿಸಲು ಬದ್ಧವಾದ ವೃತ್ತಿಪರ ಸಂಸ್ಥೆಯಾಗಿದೆ. ಐ.ಸಿ.ಎಸ್.ಆರ್.ನ ಉದ್ದೇಶ ಪಾಲುದಾರರೊಂದಿಗೆ ಸಹಯೋಗ ರೂಪಿಸುವುದು ಮತ್ತು ಆರೋಗ್ಯಸೇವಾ ಫಲಿತಾಂಶಗಳನ್ನು ಸುಧಾರಿಸಲು ಕ್ಲಿನಿಕಲ್ ರೀಸರ್ಚ್ ಸುಧಾರಣೆಯನ್ನು ಪ್ರತಿಪಾದಿಸುವುದು. ಹಲವಾರು ಉಪಕ್ರಮಗಳ ಮೂಲಕ ಐ.ಸಿ.ಎಸ್.ಆರ್. ದೇಶದಲ್ಲಿ ಕ್ಲಿನಿಕಲ್ ಟ್ರಯಲ್‌ಗಳ ವೈಜ್ಞಾನಿಕ, ನೈತಿಕ ಮತ್ತು ಕಾರ್ಯಾಚರಣೆಯ ಆಯಾಮಗಳನ್ನು ಹೆಚ್ಚಿಸಲು ಶ್ರಮಿಸುತ್ತದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ ಅಧ್ಯಕ್ಷ ಡಾ. ಸನಿಶ್ ಡೇವಿಸ್ ಈ ಕಾರ್ಯಕ್ರಮದ ಕುರಿತು ಮಾತನಾಡಿ, ಕ್ಲಿನಿಕಲ್ ರೀಸರ್ಚ್ ರೋಗಿಗಳಿಗೆ ಹೊಸ ಚಿಕಿತ್ಸೆಗಳನ್ನು ತರುವಲ್ಲಿ ಅತ್ಯಂತ ಮುಖ್ಯವಾಗಿದೆ. ಕ್ಲಿನಿಕಲ್ ಟ್ರಯಲ್‌ಗಳಲ್ಲಿ ಕಠಿಣ ಪರೀಕ್ಷೆಗಳಿಲ್ಲದೆ ಹೊಸ ಔಷಧಗಳು, ಲಸಿಕೆಗಳು ಮತ್ತು ವೈದ್ಯಕೀಯ ಸಾಧನಗಳನ್ನು ಬಳಕೆಗೆ ಅನುಮೋದಿಸಲು ಸಾಧ್ಯವಿಲ್ಲ. ಈ ಕಾರ್ಯಕ್ರಮವು ರೋಗಿಗಳಿಗೆ ಕ್ಲಿನಿಕಲ್ ಟ್ರಯಲ್‌ಗಳ ಪ್ರಾಮುಖ್ಯತೆ ಕುರಿತು ಮತ್ತು ಹೇಗೆ ಅವರ ಭಾಗವಹಿಸುವಿಕೆಯು ಅವರಿಗೆ ಮತ್ತು ಭವಿಷ್ಯದ ತಲೆಮಾರುಗಳಿಗೆ ಪ್ರಯೋಜನವಾಗಬಲ್ಲದು ಎಂದು ಅರಿವನ್ನು ಮೂಡಿಸುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ.

Continue Reading

ಆರೋಗ್ಯ

What Is Stage 3 Breast Cancer: ಮೂರನೇ ಹಂತದ ಸ್ತನ ಕ್ಯಾನ್ಸರ್‌ ಎಂದರೇನು? ಇದರ ಲಕ್ಷಣಗಳೇನು?

What is Stage 3 Breast Cancer?: ಹಿರಿತೆರೆ ಮತ್ತು ಕಿರುತೆರೆ ನಟಿ ಹಿನಾ ಖಾನ್‌ ಅವರಿಗೆ ಮೂರನೇ ಹಂತದ ಸ್ತನ ಕ್ಯಾನ್ಸರ್‌ ಇದೆಯೆಂಬ ಸುದ್ದಿ ಅಧಿಕೃತ ಆಗುತ್ತಿದ್ದಂತೆಯೇ, ಈ ಕುರಿತಾದ ಚರ್ಚೆಗಳು ಇನ್ನಷ್ಟು ತೀವ್ರವಾಗುತ್ತಿವೆ. ಮೂರನೇ ಹಂತದ ಕ್ಯಾನ್ಸರ್‌ ಎಂದರೇನು? ಅದು ಗುಣವಾಗುತ್ತದೆಯೇ? ಅದಕ್ಕೆ ಚಿಕಿತ್ಸೆಯೇನು ಎಂಬೆಲ್ಲ ಆತಂಕಗಳ ನಡುವೆ, ಮಹಿಳೆಯರಿಗೆ ಉಪಯುಕ್ತವಾಗುವ ಒಂದಿಷ್ಟು ಮಾಹಿತಿ ಇಲ್ಲಿದೆ.

VISTARANEWS.COM


on

Breast Cancer Awareness
Koo

ಬಾಲಿವುಡ್‌ ಮತ್ತು ಕಿರುತೆರೆ (What is Stage 3 Breast) Cancer? ನಟಿ ಹಿನಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದ್ದು, ಮೂರನೇ ಹಂತದಲ್ಲಿರುವ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾರೆ. ಹೆಚ್ಚಿನ ಮಂದಿಗೆ ಕ್ಯಾನ್ಸರ್‌ ಎಂಬ ಹೆಸರು ಕೇಳುತ್ತಿದ್ದಂತೆಯೇ, ಮರಣ ಶಾಸನದಂತೆ ಕೇಳುತ್ತದೆ. ಅದರಲ್ಲೂ ಮೂರನೇ ಹಂತ ಎಂಬುದು ಇನ್ನೂ ಕಷ್ಟವಾಗುತ್ತದೆ. ಹಿನಾ ಖಾನ್ ಅವರಿಗೆ ರೋಗ ಆರಂಭಿಕ ಹಂತವನ್ನು ದಾಟಿದೆ ಎಂಬುದು ಹೌದು. ಆದರೆ ರೋಗಮುಕ್ತರಾಗುವ ಆಸೆಯನ್ನು ತ್ಯಜಿಸುವ ಅಗತ್ಯವಿಲ್ಲ. ಮೂರನೇ ಹಂತದ ಸ್ತನ ಕ್ಯಾನ್ಸರ್‌ ಎಂದರೇನು ಎಂಬ ವಿವರಗಳು ಇಲ್ಲಿವೆ.

hina khan

ಹಂತಗಳೆಂದರೇನು?

ಕ್ಯಾನ್ಸರ್‌ ಗಡ್ಡೆ ಎಷ್ಟು ದೊಡ್ಡದಿದೆ ಮತ್ತು ಎಲ್ಲೆಲ್ಲಿ ಹಬ್ಬಿದೆ ಎನ್ನುವುದರ ಆಧಾರದ ಮೇಲೆ ಅದನ್ನು ಭಿನ್ನ ಹಂತಗಳನ್ನಾಗಿ ವಿಂಗಡಿಸಲಾಗುತ್ತದೆ. ಮೂರನೇ ಹಂತವೆಂದರೆ ಆರಂಭದ ಹಂತಗಳನ್ನು ದಾಟಿ ಬೆಳೆದಿದ್ದು, ಸ್ತನಗಳಿಂದ ಹೊರಗೂ ಕ್ಯಾನ್ಸರ್‌ ಹರಡಿದೆ ಎಂದು ಹೇಳಬಹುದು. ಆದರೆ ದೇಹದಲ್ಲಿ ಎಲ್ಲೆಲ್ಲೋ ಇರುವಂಥ ಅಂಗಾಂಗಗಳಿಗೆ ಇನ್ನೂ ಹರಡಿಲ್ಲ. ಸುತ್ತಮುತ್ತಲಿನ ಭಾಗದಲ್ಲಿ ಮಾತ್ರವೇ ವಿಸ್ತರಿಸಿದೆ ಎಂದು ಅರ್ಥ.

ಮೂರನೇ ಹಂತದಲ್ಲೂ ಮೂರು ಉಪವಿಭಾಗಗಳನ್ನು ವೈದ್ಯ ವಿಜ್ಞಾನ ಮಾಡುತ್ತದೆ. ಮೊದಲನೆಯದು 3ಎ ಹಂತ. ಇದರಲ್ಲಿ-

  • ಸ್ತನಗಳಲ್ಲಿ ಯಾವುದೇ ಗಡ್ಡೆಗಳಿಲ್ಲ. ಆದರೆ 4ರಿಂದ 9 ದುಗ್ಧ ರಸ ಗ್ರಂಥಿ (lymph nodes) ಗಳಲ್ಲಿ ಕ್ಯಾನ್ಸರ್‌ ಕೋಶಗಳು ಕಾಣುತ್ತಿವೆ.
  • 5 ಸೆಂ.ಮೀ. ಗಿಂತ ದೊಡ್ಡದಾದ ಕ್ಯಾನ್ಸರ್‌ನ ಗಡ್ಡೆಯಿದ್ದು, ಲಿಂಫ್‌ ನೋಡ್‌ಗಳಲ್ಲಿ ಸಣ್ಣದಾದ ಕ್ಯಾನ್ಸರ್‌ ಕೋಶಗಳ ಗೊಂಚಲುಗಳಿವೆ.
  • 5 ಸೆಂ.ಮೀ.ಗಿಂತ ದೊಡ್ಡದಾದ ಕ್ಯಾನ್ಸರ್‌ ಗಡ್ಡೆಯಿದ್ದು, ಕಂಕುಳಿನ 3 ಲಿಂಫ್‌ ನೋಡ್‌ಗಳಿಗೆ ಹರಡಿದೆ. ಎದೆಯ ಮೂಳೆಗಳ ದುಗ್ಧ ರಸ ಗ್ರಂಥಿಗಳಿಗೂ ಹರಡಿರಬಹುದು.
  • ಎರಡನೇ ಹಂತ 3ಬಿ- ಎದೆಯ ಗೋಡೆಗಳಿಗೆ ಅಥವಾ ಚರ್ಮಕ್ಕೆ ಅಂಟಿ, ಉರಿಯೂತ ಕಾಣಿಸಿರಬಹುದು. ಜೊತೆಗೆ 9 ಲಿಂಫ್‌ ನೋಡ್‌ಗಳವರೆಗೆ ಹರಡಿರಬಹುದು.
  • ಮೂರನೇ ಹಂತ 3ಸಿ- ಇದರಲ್ಲಿ 10ಕ್ಕಿಂತ ಹೆಚ್ಚು ಲಿಂಫ್‌ ನೋಡ್‌ಗಳಿಗೆ ಕ್ಯಾನ್ಸರ್‌ ಹರಡಿದೆ. ಕಾಲರ್‌ಬೋನ್‌ ಕೆಳಗೆ ಮೇಲೆಲ್ಲ ವ್ಯಾಪಿಸಿದೆ.

ಇದಕ್ಕೇನು ಕಾರಣ?

ಇದಕ್ಕೆ ನಿಖರವಾದ ಕಾರಣವನ್ನು ಇನ್ನೂ ಪತ್ತೆ ಮಾಡಲಾಗಿಲ್ಲ. ಆದರೆ ಇದರ ಭೀತಿಯನ್ನು ಹೆಚ್ಚಿಸುವಂಥ ಹಲವು ಕಾರಣಗಳನ್ನು ಪಟ್ಟಿ ಮಾಡಲಾಗಿದೆ.

  • ಆನುವಂಶಿಕ ಕಾರಣಗಳು: BRCA1 ಮತ್ತು BRCA2 ವಂಶವಾಹಿಗಳು ಬದಲಾಗುವುದು.
  • ಕೌಟುಂಬಿಕ ಹಿನ್ನೆಲೆ: ಕುಟುಂಬದಲ್ಲಿ ಯಾರಿಗಾದರೂ ಕ್ಯಾನ್ಸರ್‌ ಇದ್ದರೆ ಭೀತಿ ಹೆಚ್ಚು
  • ವಯಸ್ಸು: ವಯಸ್ಸು ಹೆಚ್ಚುತ್ತಿದ್ದಂತೆ ಈ ತೊಂದರೆಗಳು ಹತ್ತಿರವಾಗಬಹುದು
  • ಹಾರ್ಮೋನು: ಈಸ್ಟ್ರೋಜೆನ್‌ನಂಥ ಚೋದಕಗಳಿಗೆ ದೀರ್ಘಕಾಲ ಒಡ್ಡಿಕೊಳ್ಳುವುದು
  • ಜೀವನಶೈಲಿ: ಬೊಜ್ಜು, ಜಡ ಜೀವನ, ಆಲ್ಕೋಹಾಲ್‌ನಂಥ ಚಟಗಳು ಈ ರೋಗವನ್ನು ಹತ್ತಿರ ತರುತ್ತವೆ
Breast Cancer picture

ಲಕ್ಷಣಗಳೇನು?

ಕ್ಯಾನ್ಸರ್‌ನ ಮೂರನೇ ಹಂತದಲ್ಲಿ ಸ್ತನಗಳಲ್ಲಿ ಕಾಣುವಂಥ ಲಕ್ಷಣಗಳೇನು ಎಂಬುದನ್ನು ತಿಳಿಯೋಣ. ಸ್ತನಗಳಲ್ಲಿ ಅಥವಾ ಕಂಕುಳಲ್ಲಿ ಗಡ್ಡೆ ಕಾಣಿಸುತ್ತದೆ. ಸ್ತನಗಳು ಮೇಲ್ನೋಟಕ್ಕೆ ಬದಲಾದಂತೆ ಗೋಚರಿಸುತ್ತವೆ. ಸ್ತನಗಳಲ್ಲಿ ಸ್ರಾವ ಕಾಣಬಹುದು. ನೋವು, ಊತವೂ ಇದ್ದೀತು. ಚರ್ಮ ಕೆಂಪಾಗಿ ಹೆಕ್ಕಳಿಕೆ ಎದ್ದಂತೆ ಕಾಣಬಹುದು. ಇಂಥ ಯಾವುದೇ ಲಕ್ಷಣಗಳು ಕಂಡರೂ ತುರ್ತಾಗಿ ವೈದ್ಯರನ್ನು ಕಾಣಬೇಕು.

ತಪಾಸಣೆ

ಮೊದಲಿಗೆ ವೈದ್ಯರು ದೈಹಿಕ ಬದಲಾವಣೆಗಳನ್ನು ತಪಾಸಣೆ ಮಾಡುತ್ತಾರೆ. ಮೊಮೊಗ್ರಾಮ್‌, ಅಲ್ಟ್ರಾಸೌಂಡ್‌ಗಳ ಮೂಲಕ ಈ ಗಡ್ಡೆಗಳು ಮತ್ತು ಕೋಶಗಳನ್ನು ಪರಿಶೀಲಿಸಲಾಗುತ್ತದೆ. ಇವುಗಳ ಸಣ್ಣ ಭಾಗವನ್ನು ತೆಗೆದು ಬಯಾಪ್ಸಿ ಮಾಡಲಾಗುತ್ತದೆ. ದುಗ್ಧರಸ ಗ್ರಂಥಿಗಳಿಗೆ ಅಂಟಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ.

ಇದನ್ನೂ ಓದಿ: Hina Khan: ಬಿಗ್ ಬಾಸ್ ಸ್ಪರ್ಧಿ, ʻಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಧಾರಾವಾಹಿ ಖ್ಯಾತಿಯ ನಟಿಗೆ ಸ್ತನ ಕ್ಯಾನ್ಸರ್!

ಚಿಕಿತ್ಸೆ

ಶಸ್ತ್ರಚಿಕಿತ್ಸೆಯ ಮೂಲಕ ಗಡ್ಡೆಗಳನ್ನು ತೆಗೆಯಲಾಗುತ್ತದೆ. ಕೆಲವೊಮ್ಮೆ ಸ್ತನಗಳನ್ನೇ ಸಂಪೂರ್ಣವಾಗಿ ತೆಗೆದು ಹಾಕುವುದು ಅನಿವಾರ್ಯವಾಗುತ್ತದೆ. ತೀವ್ರ ಶಕ್ತಿಯ ಕಿರಣಗಳ ಮೂಲಕ (ರೇಡಿಯೇಶನ್)‌ ಕ್ಯಾನ್ಸರ್‌ ಕೋಶಗಳನ್ನು ಸಾಯಿಸಲಾಗುತ್ತದೆ. ಇರುವ ಕೋಶಗಳನ್ನು ಸಾಯಿಸಿ, ಮುಂದೆ ಹರಡದಂತೆ ಮಾಡಲು ಕಿಮೊ ಸಹ ಅಗತ್ಯ. ಉಳಿದಂತೆ ಹಾರ್ಮೋನ್‌ ಥೆರಪಿ, ಇಮ್ಯುನೋಥೆರಪಿಯಂಥ ಚಿಕಿತ್ಸೆಗಳನ್ನು ವೈದ್ಯರು ನಿರ್ಧರಿಸುತ್ತಾರೆ.

Continue Reading

ಬೆಂಗಳೂರು

Narayana Health: ನಾರಾಯಣ ಹೆಲ್ತ್ ಸಿಟಿಯಲ್ಲಿ 6 ತಿಂಗಳಲ್ಲಿ 300 ರೊಬೊಟಿಕ್ ಮೊಣಕಾಲಿನ ಶಸ್ತ್ರಚಿಕಿತ್ಸೆಗಳು

Narayana Health: ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಆರು ತಿಂಗಳಲ್ಲಿ 300 ರೊಬೊಟಿಕ್ ಮೊಣಕಾಲಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿದೆ. ನಾರಾಯಣ ಹೆಲ್ತ್ ಸಿಟಿಯಲ್ಲಿ ಆರ್ಥೊಪಿಡಿಕ್ಸ್, ಸ್ಪೈನ್ ಅಂಡ್ ಟ್ರೌಮಾದ ಸೀನಿಯರ್ ಕನ್ಸಲ್ಟೆಂಟ್ ಪ್ರೊ. ಅರುಣ್ ರಂಗನಾಥನ್ ಅವರ ನೇತೃತ್ವದ ಆರ್ಥೋಪಿಡಿಕ್ ತಂಡವು ಈ ಸಾಧನೆ ಮಾಡಿದೆ.

VISTARANEWS.COM


on

Narayana Health City Performs 300 Robotic Knee Replacements in Six Months
Koo

ಬೆಂಗಳೂರು: ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಆರು ತಿಂಗಳಲ್ಲಿ 300 ರೊಬೊಟಿಕ್ ಮೊಣಕಾಲಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿದೆ. ನಾರಾಯಣ ಹೆಲ್ತ್ ಸಿಟಿಯಲ್ಲಿ (Narayana Health) ಆರ್ಥೊಪಿಡಿಕ್ಸ್, ಸ್ಪೈನ್ ಅಂಡ್ ಟ್ರೌಮಾದ ಸೀನಿಯರ್ ಕನ್ಸಲ್ಟೆಂಟ್ ಪ್ರೊ. ಅರುಣ್ ರಂಗನಾಥನ್ ಅವರ ನೇತೃತ್ವದ ಆರ್ಥೋಪಿಡಿಕ್ ತಂಡವು ಈ ಸಾಧನೆ ಮಾಡಿದೆ.

ಮಹಾವೀರ ಚಕ್ರ ಪುರಸ್ಕೃತ ಪಿಟಿ ಎಸ್.ಕೆ. ಗುಪ್ತಾ ಅವರು 88 ವರ್ಷದ ರೋಗಿಯಾಗಿದ್ದು, ತೀವ್ರವಾದ ಮೊಣಕಾಲಿನ ಆರ್ಥ್ರೈಟಿಸ್‌ನಿಂದ ನಡೆಯಲು ಆಗದಷ್ಟು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು. ಅವರಿಗೆ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಮರು ಜೀವನ ಪಡೆದಿದ್ದಾರೆ. ರೊಬೊಟಿಕ್ ಮೊಣಕಾಲ ಶಸ್ತ್ರಚಿಕಿತ್ಸೆಯು ಅವರಿಗೆ ಚಲನೆ ಹಾಗೂ ವಿಶ್ವಾಸ ತಂದುಕೊಟ್ಟಿದೆ.

ಈ ಸಾಧನೆಯು ನಾರಾಯಣ ಹೆಲ್ತ್ ಸಿಟಿಯಲ್ಲಿ ಆರ್ಥೊಪಿಡಿಕ್ಸ್, ಸ್ಪೈನ್ ಅಂಡ್ ಟ್ರೌಮಾದ ಸೀನಿಯರ್ ಕನ್ಸಲ್ಟೆಂಟ್ ಪ್ರೊಫೆಸರ್ ಅರುಣ್ ರಂಗನಾಥನ್ ಅವರ ನೇತೃತ್ವದ ಆರ್ಥೋಪಿಡಿಕ್ ತಂಡವು, ಕಳೆದ ಆರು ತಿಂಗಳಲ್ಲಿ ಪೂರ್ಣಗೊಳಿಸಿದ 300ನೇ ರೊಬೊಟಿಕ್ ಮೊಣಕಾಲು ಬದಲಾವಣೆಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

ಈ ಕುರಿತು ನಾರಾಯಣ ಹೆಲ್ತ್ ಸಿಟಿಯ ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್, ನೀ ರಿಪ್ಲೇಸ್ಮೆಂಟ್ ಸರ್ಜರಿಯ ಆರ್ಥೊಪಿಡಿಕ್ ಸರ್ಜನ್ ಡಾ. ಅಭಿನಂದನ್ ಎಸ್. ಪುನೀತ್ ಮಾತನಾಡಿ, ನಾರಾಯಣ ಹೆಲ್ತ್ ಸಿಟಿಯಲ್ಲಿ ನಮ್ಮ ಉದ್ದೇಶ ಸದಾ ನಮ್ಮ ರೋಗಿಗಳ ಸ್ವಾಸ್ಥ್ಯದ ಸುತ್ತಲೂ ಕೇಂದ್ರೀಕೃತವಾಗಿದೆ. ರೊಬೊಟಿಕ್ ಮೊಣಕಾಲು ಶಸ್ತ್ರಚಿಕಿತ್ಸೆಯ ತಂತ್ರಜ್ಞಾನ ಪರಿಚಯಿಸುವುದು ನಮಗೆ ಸಹಜ ಹೆಜ್ಜೆಯಾಗಿದ್ದು, ಅದು ಸರಿಸಾಟಿ ಇರದ ನಿಖರತೆ ಮತ್ತು ವೈಯಕ್ತಿಕಗೊಳಿಸಿದ ಆರೈಕೆ ನೀಡುತ್ತದೆ.

ನಾವು ನಮ್ಮ ರೋಗಿಗಳ ಜೀವನ ಉನ್ನತಗೊಳಿಸಲು ಶ್ರಮಿಸುತ್ತಿದ್ದೇವೆ ಮತ್ತು ಈ ಸುಧಾರಿತ ತಂತ್ರಜ್ಞಾನವು ನಮಗೆ ಅದನ್ನು ಸಾಧ್ಯವಾಗಿಸುತ್ತದೆ. ನಮ್ಮ ರೋಗಿಗಳು ಅವರ ಮೊಬಿಲಿಟಿ ಪಡೆಯುವುದು ಮತ್ತು ಸ್ವಾತಂತ್ರ್ಯ ಮರಳಿ ಪಡೆಯುವುದು ನಮ್ಮ ತಂಡಕ್ಕೆ ಅತ್ಯಂತ ದೊಡ್ಡ ಪುರಸ್ಕಾರವಾಗಿದೆ” ಎಂದು ತಿಳಿಸಿದರು.

ಈ ಬಗ್ಗೆ ಪ್ರೊ. ಅರುಣ್ ರಂಗನಾಥನ್ ಮಾತನಾಡಿ, “ನಮ್ಮ ಗುರಿ ರೋಗಿಗಳ ಆರ್ಥಿಕ ಹಿನ್ನೆಲೆ ಏನೇ ಇರಲಿ, ಎಲ್ಲ ರೋಗಿಗಳಿಗೂ ಅತ್ಯಾಧುನಿಕ ಮೊಣಕಾಲಿನ ಬದಲಾವಣೆ ತಂತ್ರಜ್ಞಾನ ದೊರೆಯುವಂತೆ ಮಾಡುವುದು ಎಂದ ಅವರು, ಈ ಪ್ರಕ್ರಿಯೆಯಲ್ಲಿ ರಿಯಲ್-ಟೈಮ್ ಮ್ಯಾಪಿಂಗ್ ಅನ್ನು ನಡೆಸುವ ಮೂಲಕ ರೋಗಿಯ ಮೊಣಕಾಲಿನ 3ಡಿ ಮಾಡೆಲ್ ಸೃಷ್ಟಿಸಲಾಗುತ್ತದೆ. ರೊಬೊಟಿಕ್ ಸಾಧನವು ಶಸ್ತ್ರಚಿಕಿತ್ಸೆ ನಿರ್ವಹಿಸುತ್ತದೆ, ಶಸ್ತ್ರಚಿಕಿತ್ಸಾ ತಜ್ಞರು ಅದರ ಪೂರ್ಣ ನಿಯಂತ್ರಣ ಕಾಪಾಡಿಕೊಳ್ಳುವ ಮೂಲಕ ಉತ್ತಮ ಫಲಿತಾಂಶ ಲಭ್ಯವಾಗುವಂತೆ ಮಾಡುತ್ತಾರೆ ಎಂದರು.

ಇದನ್ನೂ ಓದಿ: Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ನಾರಾಯಣ ಹೆಲ್ತ್ ಸಿಟಿಯ ರೊಬೊಟಿಕ್ ನೀ ರೀಪ್ಲೇಸ್ಮೆಂಟ್, ನೀ ರೀಪ್ಲೇಸ್ಮೆಂಟ್ ಸರ್ಜರಿಯ ಆರ್ಥೊಪಿಡಿಕ್ ಸರ್ಜನ್ ಡಾ.ಪ್ರಶಾಂತ್ ಬಿ.ಎನ್. ಮಾತನಾಡಿ, ಜಾಯಿಂಟ್ ರೊಬೊಟ್ ಸಿಸ್ಟಂನ ಶಸ್ತ್ರಚಿಕಿತ್ಸೆಯ ನಿಖರತೆ ಹೆಚ್ಚು ಅನುಕೂಲಗಳನ್ನು ಹೊಂದಿದ್ದು ಅದರಲ್ಲಿ ಹೆಚ್ಚು ನಿಖರ ಇಂಪ್ಲಾಂಟ್ ಪ್ಲೇಸ್ಮೆಂಟ್ ಹೊಂದಿದ್ದು, ಅದು ಸಹಜವಾದ ಶಸ್ತ್ರಚಿಕಿತ್ಸೆಯ ನಂತರ ಭಾವನೆ, ಸುತ್ತಮುತ್ತಲಿನ ಜೀವಕೋಶಗಳಿಗೆ ಗಾಯದ ತೊಂದರೆ ಕಡಿಮೆ, ಸೋಂಕಿನ ತೊಂದರೆ ಕಡಿಮೆ ಮತ್ತು ಬೇಗನೆ ಪುನಶ್ಚೇತನದಿಂದ ಬಹಳ ಕಡಿಮೆ ಆಸ್ಪತ್ರೆ ವಾಸವಿರುತ್ತದೆ. ಈ ನಿಖರ ಇಂಪ್ಲಾಂಟ್ ಪ್ಲೇಸ್ಮೆಂಟ್ ಇಂಪ್ಲಾಂಟ್ ಬಾಳಿಕೆ ಹೆಚ್ಚಿಸಿ, ಭವಿಷ್ಯದ ಪುನರ್ ಪರಿಶೀಲನೆಯ ಅಗತ್ಯ ಕಡಿಮೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

Continue Reading

ಆರೋಗ್ಯ

Dengue Prevention: ರಾಜ್ಯದಲ್ಲಿ 6000ಕ್ಕೂ ಡೆಂಗ್ಯೂ ಪ್ರಕರಣ; ಇದರಿಂದ ಪಾರಾಗಲು ಹೀಗೆ ಮಾಡಿ

Dengue prevention: ಡೆಂಗೂ ಜ್ವರ ಎಲ್ಲೆಡೆ ಹರಡುತ್ತಿದೆ. ಒಮ್ಮೆ ಜ್ವರ ಆರಂಭವಾದ ಮೇಲೆ 2ರಿಂದ 7 ದಿನಗಳವರೆಗೆ ಇರಬಹುದು. ಜ್ವರ ಬಿಟ್ಟ ನಂತರವೇ ಹೆಚ್ಚಿನವರಲ್ಲಿ ಸಮಸ್ಯೆಗಳು ದ್ವಿಗುಣಗೊಳ್ಳುತ್ತವೆ. ಅವರಿಗೆ ಇನ್ನಷ್ಟು ಆರೈಕೆಯ ಅಗತ್ಯವಿರುತ್ತದೆ. ಏನು ಲಕ್ಷಣಗಳು ಕಾಣುತ್ತವೆ? ಆಗೇನು ಮಾಡಬೇಕು? ಯಾವ ಆಹಾರ ಸೇವಿಸಬೇಕು? ಈ ಅಪಾಯಕಾರಿ ಕಾಯಿಲೆಯಿಂದ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಉಪಯುಕ್ತ ವಿವರ.

VISTARANEWS.COM


on

Dengue Prevention
Koo

ಮಳೆಗಾಲವೆಂದರೆ (Dengue prevention) ಹುಲ್ಲಿನಿಂದ ಹಿಡಿದು ಹುಳು-ಹುಪ್ಪಡಿಗಳವರೆಗೆ ಸರ್ವತ್ರ ಚಿಗುರುವ ಕಾಲ. ಜೊತೆಗೆ ಸೊಳ್ಳೆಗಳಿಗೆ ಸಂತಾನೋತ್ಪತ್ತಿಯ ದಿನಗಳು. ವಿಶ್ವಮಟ್ಟದಲ್ಲಿ ಶೇ. 34ರಷ್ಟು ಡೆಂಗೂ ಪ್ರಕರಣಗಳಿಗೆ ಭಾರತವೇ ತವರು. ಈ ಬಾರಿಯ ಮಳೆಗಾಲದಲ್ಲೂ ಎಂದಿನಂತರ ಡೆಂಗೂ ಪ್ರಕರಣಗಳು ಎಲ್ಲ ಕಡೆಗಳಲ್ಲಿ ಹೆಚ್ಚುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕಾದ್ದು ಅಗತ್ಯ. ಹಾಗಾಗಿ ಈ ರೋಗ ಪ್ರವರಗಳು, ಹರಡುವುದು ಹೇಗೆ ಮತ್ತು ತಡೆ ಹೇಗೆ ಎನ್ನುವ ಬಗ್ಗೆ ಒಂದಿಷ್ಟು ವಿವರಗಳನ್ನು ಗಮನಿಸೋಣ. ಏಡಿಸ್‌ ಹೆಣ್ಣು ಸೊಳ್ಳೆಯಿಂದ ಹರಡುವ ವೈರಸ್‌ ಸೋಂಕಿದು. ಸೊಳ್ಳೆ ಕಚ್ಚಿದ ನಾಲ್ಕಾರು ದಿನಗಳ ನಂತರ ರೋಗದ ಚಿಹ್ನೆಗಳು ಕಾಣಿಸಿಕೊಳ್ಳುತ್ತವೆ. ಸಾಮಾನ್ಯವಾಗಿ ಫ್ಲೂ ಮಾದರಿಯಲ್ಲಿ ಪ್ರಾರಂಭವಾಗುವ ಈ ಕಾಯಿಲೆಯಲ್ಲಿ ಕೆಲವೊಮ್ಮೆ ರಕ್ತದಲ್ಲಿ ಪ್ಲೇಟ್‌ಲೆಟ್‌ಗಳು ಕುಸಿದು ಜೀವಕ್ಕೆ ಎರವಾಗುವ ಸಾಧ್ಯತೆಯಿದೆ.

dengue flue

ಲಕ್ಷಣಗಳು

ಸಾಮಾನ್ಯ ಲಕ್ಷಣಗಳ ಬಗ್ಗೆ ಹೇಳುವುದಾದರೆ- ತೀವ್ರ ಜ್ವರ, ಕಣ್ಣುಗಳ ಹಿಂದೆ ನೋವು, ಸ್ನಾಯು, ಕೀಲು ಮತ್ತು ಮೂಳೆಗಳಲ್ಲಿ ವಿಪರೀತ ನೋವು, ಅತೀವ ತಲೆನೋವು, ಮೈಮೇಲೆ ದದ್ದುಗಳು, ಮೂಗು ಅಥವಾ ದಂತದಲ್ಲಿ ಸ್ವಲ್ಪ ರಕ್ತಸ್ರಾವ, ವಾಂತಿ ಇತ್ಯಾದಿಗಳು ಕಾಣಿಸಿಕೊಳ್ಳಬಹುದು. ಮೊದಲಿಗೆ ಫ್ಲೂ ಮಾದರಿಯಲ್ಲಿ ಕಾಣಿಸಿಕೊಳ್ಳುವ ಈ ಜ್ವರಕ್ಕೆ ಸುಸ್ತಾಗಿ ಹೈರಾಣಾಗುವುದು, ಕಿರಿಕಿರಿ, ಮೈಯೆಲ್ಲಾ ತುರಿಕೆ ಮುಂತಾದವುಗಳು ಮೊದಲ ಎಚ್ಚರಿಕೆ ಗಂಟೆ. ಚರ್ಮದಡಿಯಲ್ಲಿ ರಕ್ತಸ್ರಾವ ಆಗುತ್ತಿದ್ದರೆ (ತರಚಿದಂತೆ ಕಾಣಬಹುದು), ಉಸಿರಾಟಕ್ಕೆ ಕಷ್ಟವಾದರೆ, ಅತೀವ ಹೊಟ್ಟೆ ನೋವು ಮತ್ತು ವಾಂತಿ, ಮಲಮೂತ್ರಗಳಲ್ಲಿ ರಕ್ತ ಮುಂತಾದ ಲಕ್ಷಣಗಳು ಕಂಡುಬಂದರೆ ಡೆಂಗು ಲಕ್ಷಣಗಳು ತೀವ್ರವಾಗಿದ್ದು, ಆಸ್ಪತ್ರೆಗೆ ದಾಖಲಿಸಬೇಕಾಗಬಹುದು. ಈ ಹೊತ್ತಿನಲ್ಲಿ ಕಾಳಜಿ ತಪ್ಪಿದರೆ ಜೀವಕ್ಕೆ ಆಪತ್ತು. ಹಾಗೆಂದು ಸೌಮ್ಯ ಲಕ್ಷಣಗಳಿದ್ದರೆ ವೈದ್ಯರು ಮನೆಯಲ್ಲೇ ಚಿಕಿತ್ಸೆ ನೀಡುತ್ತಾರೆ.
ಒಮ್ಮೆ ಜ್ವರ ಆರಂಭವಾದ ಮೇಲೆ 2ರಿಂದ 7 ದಿನಗಳವರೆಗೆ ಇರಬಹುದು. ಜ್ವರ ಬಿಟ್ಟ ನಂತರವೇ ಹೆಚ್ಚಿನವರಲ್ಲಿ ಸಮಸ್ಯೆಗಳು ದ್ವಿಗುಣಗೊಳ್ಳುತ್ತವೆ. ಅವರಿಗೆ ಇನ್ನಷ್ಟು ಆರೈಕೆಯ ಅಗತ್ಯವಿರುತ್ತದೆ. ಹೊಟ್ಟೆನೋವು, ವಾಂತಿ, ಉಸಿರಾಟ ಸಮಸ್ಯೆಗಳು, ತೀವ್ರ ತೆರನಾದ ಸ್ನಾಯು ಅಥವಾ ಮೂಳೆ ನೋವು, ನಿರ್ಜಲೀಕರಣ, ರಕ್ತದೊತ್ತಡ ಇಳಿಯುವುದು ಮುಂತಾದ ಹಲವರು ರೀತಿಯ ತೊಂದರೆಗಳು ಕಾಣಿಸಿಕೊಳ್ಳಬಹುದು. ಹಾಗಾಗಿ ಈ ದಿನಗಳಲ್ಲಿ ಸರಿಯಾದ ನಿದ್ದೆ, ಪೌಷ್ಟಿಕ ಆಹಾರ, ಧಾರಾಳವಾಗಿ ದ್ರವಾಹಾರದಂಥ ಆರೈಕೆಗಳು ಕಡ್ಡಾಯವಾಗಿ ಬೇಕು.

Dengue Fever

ತಡೆ ಹೇಗೆ?

ಸೊಳ್ಳೆಯಿಂದ ಹರಡುವ ಯಾವುದೇ ರೋಗವಾದರೂ, ಅದನ್ನು ತಡೆಯುವ ಕ್ರಮದಲ್ಲಿ ವಿಶೇಷ ವ್ಯತ್ಯಾಸವಿಲ್ಲ. ಮನೆಯ ಸುತ್ತಲೂ ನೀರು ನಿಲ್ಲದಂತೆ ನಿಗಾ ವಹಿಸಿ. ತೆರೆದ ಚರಂಡಿಯೇ ಬೇಕೆಂದಿಲ್ಲ, ಎಳನೀರಿನ ಚಿಪ್ಪುಗಳು, ರಸ್ತೆಗುಂಡಿಗಳಿಂದ ಹಿಡಿದು, ಎಲ್ಲೆಲ್ಲಿ ನೀರಿನ ಪಸೆಯಿದ್ದರೂ ಸೊಳ್ಳೆಗಳು ಸೃಷ್ಟಿ ಕಾರ್ಯ ನಡೆಸುತ್ತವೆ. ಮನೆಯಲ್ಲಿ ನೀರಿರಬಹುದಾದ ಕೂಲರ್‌ಗಳು, ಬಕೆಟ್‌ ಇತ್ಯಾದಿಗಳ ಬಗ್ಗೆ ಗಮನಕೊಡಿ. ನೀರು ತುಂಬಿಸಿಸುವ ಎಲ್ಲವನ್ನೂ ಮುಚ್ಚಿಡಿ. ನೀರು ನಿಲ್ಲುವಂಥ ಜಾಗಗಳಿದ್ದರೆ ಅವುಗಳ ಮೇಲೆ ಕೀಟನಾಶಕ ಸಿಂಪಡಿಸಿ.
ಬೆಳಗ್ಗೆ ಮತ್ತು ಸಂಜೆ ಸೊಳ್ಳೆಗಳು ಹೆಚ್ಚು ಸಕ್ರಿಯವಾಗಿರುವ ಸಮಯಗಳಲ್ಲಿ ಹೊರಗೆ ಹೋಗಬೇಡಿ; ಮಕ್ಕಳನ್ನೂ ಹೊರಗೆ ಬಿಡಬೇಡಿ. ಅನಗತ್ಯ ಪ್ರಯಾಣಗಳನ್ನು ತಪ್ಪಿಸಿ. ಮೈ ತುಂಬಾ ವಸ್ತ್ರಗಳನ್ನು ಧರಿಸಿದರೆ, ಸೊಳ್ಳೆಗಳು ಕಚ್ಚುವುದರಿಂದ ತಪ್ಪಿಸಿಕೊಳ್ಳಬಹುದು. ಸೊಳ್ಳೆ ನಿರೋಧಕ ಕ್ರೀಮ್‌, ಸ್ಪ್ರೇ ಅಥವಾ ಪ್ಯಾಚ್‌ಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ. ಸೊಳ್ಳೆಗಳ ಉಪಟಳಕ್ಕೆ ಕೆಲವು ನೈಸರ್ಗಿಕ ಉಪಾಯಗಳೂ ಚಾಲ್ತಿಯಲ್ಲಿವೆ. ನಿಮಗೆ ಸರಿಹೊಂದುವಂಥ ಯಾವುದನ್ನಾದರೂ ಬಳಸಿ. ರಾತ್ರಿ ಮಲಗುವಾಗ ಕಡ್ಡಾಯವಾಗಿ ಸೊಳ್ಳೆ ಪರದೆ ಉಪಯೋಗಿಸಿ. ಚಿಕ್ಕ ಮಕ್ಕಳಿದ್ದರೆ ಎಲ್ಲಕ್ಕಿಂತ ಹೆಚ್ಚು ಅಪಾಯ ಅವರಿಗೇ ಆಗಬಹುದು, ಎಚ್ಚರವಹಿಸಿ.

ಇದನ್ನೂ ಓದಿ: Seeds For Weight Loss: ತೂಕ ಇಳಿಸಿಕೊಳ್ಳಬೇಕೆ? ಈ 7 ಬೀಜಗಳನ್ನು ನಿಯಮಿತವಾಗಿ ಸೇವಿಸಿ

ಆಹಾರ

ದ್ರವಾಹಾರವನ್ನು ಸೋಂಕಿತರಿಗೆ ಧಾರಾಳವಾಗಿ ನೀಡಿ. ದಿನಕ್ಕೆ ಮೂರಲ್ಲದೆ, ಐದು ಲೀ. ಪಾನೀಯಗಳು ಹೊಟ್ಟೆಗೆ ಹೋದರೂ ಹೆಚ್ಚಲ್ಲ. ನಿಂಬೆ ಪಾನಕ, ಮಜ್ಜಿಗೆ, ಎಳನೀರು, ಸೂಪ್‌, ಅಂಬಲಿ, ಹರ್ಬಲ್‌ ಚಹಾಗಳು, ಕಷಾಯಗಳು ಮುಂತಾದ ಯಾವುದೇ ರೂಪದಲ್ಲಿ ದ್ರವಾಹಾರ ಹೊಟ್ಟೆಗೆ ಹೋಗಲಿ. ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚಿ, ಶರೀರ ಡಿಟಾಕ್ಸ್‌ ಆಗುವುದಕ್ಕೆ ನೆರವಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ರಕ್ತದೊತ್ತಡ ಕುಸಿಯದಂತೆ ನೋಡಿಕೊಳ್ಳುತ್ತದೆ.
ಋತುಮಾನದ ಹಣ್ಣುಗಳು ಬೇಕು. ಅದರಲ್ಲೂ ಪಪ್ಪಾಯ, ಕಿವಿ, ನೇರಳೆ, ದಾಳಿಂಬೆ, ಬೆರ್ರಿಗಳು, ಮರಸೇಬು ಮುಂತಾದ ಹಣ್ಣುಗಳನ್ನು ಯಾವುದೇ ರೂಪದಲ್ಲಿ ಸೋಂಕಿತರಿಗೆ ನೀಡಬಹುದು. ಹಲವು ಬಣ್ಣದ ತರಕಾರಿಗಳು ಅವರಿಗೆ ಅಗತ್ಯ. ಹಸಿರು, ಹಳದಿ, ಕೇಸರಿ, ಕೆಂಪು, ಬಿಳಿ, ನೇರಳೆ ಮುಂತಾದ ಬಣ್ಣದ ತರಕಾರಿಗಳು ಜೀರ್ಣಕ್ರಿಯೆಯನ್ನು ಸುಗಮಗೊಳಿಸಿ, ಕರುಳಿನ ಒಳ್ಳೆಯ ಬ್ಯಾಕ್ಟೀರಿಯಗಳನ್ನು ಹೆಚ್ಚಿಸುತ್ತವೆ. ಇವೆಲ್ಲ ಒಟ್ಟಾಗಿ ರಕ್ತದಲ್ಲಿ ಪ್ಲೇಟ್‌ಲೆಟ್‌ ಕೆಳಗಿಳಿಯದಂತೆ ಕಾಪಾಡಿಕೊಳ್ಳಲು ನೆರವಾಗುತ್ತವೆ.

Continue Reading
Advertisement
Rahyl Dravid
ಪ್ರಮುಖ ಸುದ್ದಿ20 mins ago

Rahul Dravid : ವಿಶ್ವ ಕಪ್​ ಗೆದ್ದು ಬನ್ನಿ ಅಭಿಯಾನದ ವಿರುದ್ಧ ಸಿಟ್ಟಿಗೆದ್ದ ರಾಹುಲ್ ದ್ರಾವಿಡ್​

Run4Research programme on June 30 in Bengaluru
ಕರ್ನಾಟಕ28 mins ago

Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

MLA Dr N T Srinivas drives for crop insurance Awareness jatha in Kudligi
ವಿಜಯನಗರ29 mins ago

Vijayanagara News: ಕೂಡ್ಲಿಗಿಯಲ್ಲಿ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಶಾಸಕ ಶ್ರೀನಿವಾಸ್ ಚಾಲನೆ

physical Abuse
ಕ್ರೈಂ30 mins ago

Physical Abuse: ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ, ತೀವ್ರ ರಕ್ತಸ್ರಾವವಾಗಿ ಸಾವು!

Viral Video
Latest32 mins ago

Viral Video: ಈ ಆರು ಯೂಟ್ಯೂಬರ್‌ಗಳು ಜೈಲು ಪಾಲಾಗಲು ಶಾರುಖ್‌ ಖಾನ್‌ ಕಾರಣವಂತೆ!

Sonakshi Sinha
Latest40 mins ago

Sonakshi Sinha: ಈಗಷ್ಟೇ ಮದುವೆಯಾಗಿರುವ ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿ?

Snake
ಪ್ರಮುಖ ಸುದ್ದಿ41 mins ago

Snake: ಮಲಗಿದ್ದವನ ಚಡ್ಡಿಯೊಳಗೆ ನುಗ್ಗಿದ ನಾಗರಹಾವು; ಅದು ಹೊರಬರುವ ಮುನ್ನ ಮಾಡಿದ ಅನಾಹುತ ಏನು?

Team India
ಪ್ರಮುಖ ಸುದ್ದಿ48 mins ago

Team India : ಟೆಸ್ಟ್​​ ಕ್ರಿಕೆಟ್​ನ ಒಂದೇ ದಿನದಲ್ಲಿ ಗರಿಷ್ಠ ರನ್​; ದಾಖಲೆ ಬರೆದ ಭಾರತ ತಂಡ

Parliament Sessions
ದೇಶ54 mins ago

Parliament Sessions: ಅಧಿವೇಶನದ ವೇಳೆ ತಲೆಸುತ್ತಿ ಬಿದ್ದ ಸಂಸದೆ; ವಿಡಿಯೋ ಇದೆ

Breast Cancer Awareness
ಆರೋಗ್ಯ1 hour ago

What Is Stage 3 Breast Cancer: ಮೂರನೇ ಹಂತದ ಸ್ತನ ಕ್ಯಾನ್ಸರ್‌ ಎಂದರೇನು? ಇದರ ಲಕ್ಷಣಗಳೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌