GITAM University: ಗೀತಂ ವಿವಿಯಲ್ಲಿ ವಿದ್ಯಾರ್ಥಿಗಳ ಗಲಾಟೆ; ಮಹಿಳಾ ಸೆಕ್ಯೂರಿಟಿ ಗಾರ್ಡ್‌ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ! - Vistara News

ಬೆಂಗಳೂರು

GITAM University: ಗೀತಂ ವಿವಿಯಲ್ಲಿ ವಿದ್ಯಾರ್ಥಿಗಳ ಗಲಾಟೆ; ಮಹಿಳಾ ಸೆಕ್ಯೂರಿಟಿ ಗಾರ್ಡ್‌ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ!

GITAM University: ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ‌ ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಕಾಲೇಜಿನ ಮುಖ್ಯ ದ್ವಾರದ ಬಳಿ ವಿದ್ಯಾರ್ಥಿಯೊಬ್ಬ ಮಹಿಳಾ ಸೆಕ್ಯೂರಿಟಿ ಗಾರ್ಡ್ ಜತೆ ಅನುಚಿತ ವರ್ತನೆ ತೋರಿದ್ದಾನೆ.

VISTARANEWS.COM


on

GITAM University
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೊಡ್ಡಬಳ್ಳಾಪುರ: ತಾಲೂಕಿನ ಗೀತಂ ವಿಶ್ವವಿದ್ಯಾಲಯದಲ್ಲಿ (GITAM University) ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಮಹಿಳಾ ಸೆಕ್ಯೂರಿಟಿ ಗಾರ್ಡ್ ಮುಂದೆ ವಿದ್ಯಾರ್ಥಿಯೊಬ್ಬ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ ತೋರಿರುವುದು ಕಂಡುಬಂದಿದೆ.

ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ‌ ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಕಾಲೇಜಿನ ಮುಖ್ಯ ದ್ವಾರದ ಬಳಿ ವಿದ್ಯಾರ್ಥಿಯೊಬ್ಬ ಮಹಿಳಾ ಸೆಕ್ಯೂರಿಟಿ ಗಾರ್ಡ್ ಜತೆ ಅನುಚಿತ ವರ್ತನೆ ತೋರಿದ್ದಾನೆ. ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ ತೋರಿದ ದೃಶ್ಯ ವಿದ್ಯಾರ್ಥಿಗಳ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಫೋನ್‌ನಲ್ಲಿ ಪರಸ್ಪರ ಆವಾಜ್ ಹಾಕಿಕೊಂಡು ವಿದ್ಯಾರ್ಥಿಗಳು ಗಲಾಟೆಗೆ ಮುಂದಾಗಿದ್ದರು. ಈ‌ ವೇಳೆ ಒಂದು ಗುಂಪನ್ನು ಕ್ಯಾಂಪಸ್ ಒಳಗಡೆ ಹಾಕಿ ಮತ್ತೊಂದು ಗುಂಪನ್ನು ಹೊರಗಡೆ ಇಟ್ಟಿದಕ್ಕೆ ವಿದ್ಯಾರ್ಥಿ ಅಸಭ್ಯ ವರ್ತನೆ ತೋರಿದ್ದಾನೆ. ಹೀಗಾಗಿ ಎರಡು ಗುಂಪುಗಳಿಗೆ ವಿವಿ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ | Viral Video: ತಂದೆಯ ವಿರುದ್ಧ ಎಫ್ಐಆರ್ ದಾಖಲಿಸಿದ 5 ವರ್ಷದ ಬಾಲಕ; ಅಸಲಿ ಕಾರಣವೇನು ಗೊತ್ತಾ?

ಪತ್ನಿಯ ಅನುಮಾನಾಸ್ಪದ ಸಾವು; ಜನರ ಆಕ್ರೋಶಕ್ಕೆ ಹೆದರಿ ಗಂಡ ಕೂಡ ಆತ್ಮಹತ್ಯೆ

Couple death
Couple death

ಮಂಡ್ಯ: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು (Woman Self Harming) ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ (Couple Death) ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ಅಂಜಿ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಕೆ‌.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ (Murder) ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.

ನೆನ್ನೆ ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.

ಇದನ್ನೂ ಓದಿ | Mimi Chakraborty : ಕೋಲ್ಕೊತಾ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿದ ನಟಿ ಮಿಮಿ ಚಕ್ರವರ್ತಿಗೆ ಅತ್ಯಾಚಾರ ಬೆದರಿಕೆ!

ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Kumaraswamy: ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು ಎಂದ ಎಚ್‌ಡಿಕೆ

HD Kumaraswamy: ಗಣಿ ಗುತ್ತಿಗೆ ಪ್ರಕರಣದಲ್ಲಿ ತಮ್ಮ ವಿರುದ್ಧ ಚಾರ್ಜ್‌ ಶೀಟ್ ಸಲ್ಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಲೋಕಾಯುಕ್ತ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ.

VISTARANEWS.COM


on

HD Kumaraswamy
Koo

ಬೆಂಗಳೂರು: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ಮೈಸೂರಿನ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಅಂತ ಹೇಳುತ್ತಿದ್ದಾರೆ. ಇಂತಹ ಬಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡೋಕೆ ನೂರು ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದರು.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗೆ ನಿಯಮ ಉಲ್ಲಂಘಿಸಿ ಗಣಿಗಾರಿಕೆ ಗುತ್ತಿಗೆ ಮುಂಜೂರು ಮಾಡಿದ್ದ ಆರೋಪ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ ಸಿದ್ಧತೆ ನಡೆಸುತ್ತಿರುವ ಬಗ್ಗೆ ಕೇಂದ್ರ ಸಚಿವರು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಅಗತ್ಯ ಬಿದ್ರೆ ಕುಮಾರಸ್ವಾಮಿ ಬಂಧನ ಮಾಡುತ್ತೇವೆ ಎಂಬ ಸಿಎಂ ಹೇಳಿಕೆಗೆ ಕಿಡಿಕಾರಿರುವ ಅವರು, ನನಗೆ ಯಾವುದೇ ಭಯ ಇಲ್ಲ, ನನ್ನ ಬಂಧನ ಮಾಡೋಕೆ ನೂರು ಸಿದ್ದರಾಮಯ್ಯ ಬರಬೇಕು ಎಂದು ಹೇಳಿದರು.

ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮೋದನೆಗೆ ಕೋರಿದ್ದಾರೆ. ಅನುಮತಿ ಕೋರಿರೋದು 2023 ನವೆಂಬರ್‌ನಲ್ಲಿ. ಸುಮಾರು ಹತ್ತು ತಿಂಗಳಾಗಿದೆ. ಆದರೆ ನೆನ್ನೆ ಬೆಳಗ್ಗೆಯಿಂದ ಸಂಜೆವರೆಗೂ ಕುಮಾರಸ್ವಾಮಿಗೆ ಮತ್ತೆ ಗಣಿ ಸಂಕಷ್ಟ ಶುರುವಾಗಿದೆ ಅಂತ ವರದಿಗಳು ಬರುತ್ತಿವೆ. 2023ರ ಜುಲೈನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಬಂದಾಗಲೇ ವರ್ಗಾವಣೆ ದಂಧೆಗೆ ಮುಂದಾದರು. ಅದರ ಬಗ್ಗೆ ನಾನು‌ ವಾಗ್ದಾಳಿ ನಡೆಸಿದೆ, ಇದರಿಂದ ಸರ್ಕಾರಕ್ಕೆ‌ ಮುಜುಗರ ಆಯಿತು, ಆಗ ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಅಂತೆಲ್ಲಾ ಹೇಳಿದರು ಎಂದು ಟೀಕಿಸಿದರು.

ಇದನ್ನೂ ಓದಿ | PM Modi US Visit : ಸೆಪ್ಟೆಂಬರ್‌ನಲ್ಲಿ ಅಮೆರಿಕ ಪ್ರವಾಸ ಮಾಡಲಿದ್ದಾರೆ ಮೋದಿ; ಅಮೆರಿಕ ಚುನಾವಣೆ ನಡುವೆ ಕುತೂಹಲ ಮೂಡಿಸಿದೆ ಅವರ ಭೇಟಿ

ನಾನು 2006ರಲ್ಲಿ ಸಿಎಂ‌ ಆದ ಆರು ತಿಂಗಳಲ್ಲಿ ನನ್ನ ಮೇಲೆ ಆರೋಪ ಬಂದಿತ್ತು. ಗಣಿ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿದ್ದರು. ನನಗೆ ಬೆಂಬಲ ನೀಡಿದ ಶಾಸಕನ ಮೇಲೆ ಆರೋಪಗಳು ಬರಲು ಶುರುವಾಯಿತು. ವಿಪಕ್ಷ ಆಗಿದ್ದ ಕಾಂಗ್ರೆಸ್ ನನ್ನನ್ನು ಸಿಲುಕಿಸಲು ಹೊರಟಿತು. ನಾನು ಶಾಸಕರ ಸಂಖ್ಯೆ ಬೆಂಬಲ ಪಡೆಯಲ್ಲ. ಹೋರಾಟ ಶುರು ಮಾಡಿ, ಸದನದಲ್ಲಿ ಚರ್ಚೆ ಮಾಡಿ ಅಂತ ಹೇಳಿದ್ದೆ. ಅದಾದ ಮೇಲೆ ಯಾರೂ ಕೋರ್ಟ್‌ಗೆ ಅರ್ಜಿ ಹಾಕಲಿಲ್ಲ. ಅಂದಿನ ಲೋಕಾಯುಕ್ತಾಗೆ ಗಣಿಗೆ ಸಂಬಂಧಿಸಿದ ದಾಖಲೆ ನೀಡಿದ್ದೆ ಎಂದು ಹೇಳಿದರು.

ಗಣಿ ಅಕ್ರಮ ಪ್ರಕರಣದ ಬಗ್ಗೆ ಲೋಕಾಯುಕ್ತ 2011ರಲ್ಲಿ ವರದಿ ನೀಡಿತ್ತು. ಎರಡು ಮೂರು ಟ್ರಂಕ್‌ಗಳಲ್ಲಿ ವರದಿ ತಂದುಕೊಟ್ಟರು. ಅದರಲ್ಲಿ ಮೂರು ನಾಲ್ಕು ಸಿಎಂ ವರದಿ ಸೇರಿತ್ತು. ಎಸ್.ಎಂ ಕೃಷ್ಣ, ಧರ್ಮಸಿಂಗ್, ನನ್ನ ಮೇಲೆ ವರದಿ ನೀಡಿದರು. ಆ ವರದಿಯಲ್ಲಿ ಅಂದಿನ ಸಿಎಂ ಪ್ರಕರಣದಲ್ಲಿ ಮಿಸ್ ಕಂಡಕ್ಟ್ ರಿಪೋರ್ಟ್‌ ಇತ್ತು. ಅವರ ಮೇಲೆ ಯಾವ ರೀತಿಯ ಆಕ್ಷನ್ ಆಗಬೇಕು ಅಂತ ಒತ್ತಾಯ ಮಾಡಲ್ಲ ಅಂತ ಲೋಕಾಯುಕ್ತ ವರದಿ ನೀಡಿದ್ದರು.

ನಮ್ಮಲ್ಲಿ 28 ಶಾಸಕರು ಮಾತ್ರ ಇದ್ದರು. ಆಗಲೂ ಜನತೆ ಮುಂದೆ ದಾಖಲೆ ಇಟ್ಟಿದ್ದೆ. ಆ ಸಂಘರ್ಷದಲ್ಲಿ ನನ್ನ ಮೇಲೆ ವೈಯಕ್ತಿಕ ಟೀಕೆ ಮಾಡಿದರು. ಸಾಯಿವೆಂಕಟೇಶ್ವರ ಮತ್ತು ಜಂತಕಲ್ ಪ್ರಕರಣ ತಂದರು. ಕಾಂಗ್ರೆಸ್‌ನವರು ಅಬ್ರಹಾಂ ಅವರ ಬ್ಯಾಕ್ ಗ್ರೌಂಡ್ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಪ್ರಶ್ನೆ ಮಾಡುವೆ, ತನಿಖೆ ಮಾಡುವುದಾಗಿ ಅರ್ಜಿ ಹಾಕಿದ್ದೀರಿ. ಆಗ ನಿಮಗೆ ಅಬ್ರಹಾಂ ಹೀರೋ ಆಗಿದ್ದರು. 2011ರಲ್ಲಿ ಕೋರ್ಟಿಗೆ ಹೋಗಿದ್ದರು ಎಂದು ತಿಳಿಸಿದರು.

2011ರ ಮಾ.3ರಂದು ಅಡಿಷನಲ್ ಸೆಷನ್ ಸಿಟಿ ಸಿವಿಲ್‌ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಎಸ್.ಎಂ.ಕೃಷ್ಣ, ಧರ್ಮಸಿಂಗ್ ಹಾಗೂ ನನ್ನ ಮೇಲೆ ದೂರು ದಾಖಲು ಮಾಡಿದ್ದರು. 2013ರ ನ.8ರಂದು ಮೂವರು ಸಿಎಂ ಹಾಗೂ ಇತರ 11 ಮಂದಿ ಮೇಲೆ ತನಿಖೆ ಆರಂಭವಾಯಿತು. ಹೈಕೋರ್ಟ್‌ನಲ್ಲಿ 2011ರ 20ರಂದು ನನ್ನ ಮೇಲಿದ್ದ ಪ್ರಕರಣ ರದ್ದು ಮಾಡಿ, ಸಾಯಿ ವೆಂಕಟೇಶ್ವರ ಕೇಸ್ ತನಿಖೆ ಮಾಡುವಂತೆ ಆದೇಶ ಮಾಡಲಾಗಿತ್ತು. ಧರ್ಮಸಿಂಗ್ ಪ್ರಕರಣ ರದ್ದು ಮಾಡಲು ಅವರ ಅಡ್ವೋಕೇಟ್ ಬಳಸಿ‌ ವಾದ ಮಾಡಿಸಿದ್ದರು. ಅದರಲ್ಲಿ ನನ್ನ ಕೇಸ್ ಕೂಡ ಸೇರಿದೆ. ಎಸ್.ಎಂ. ಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಹೈಕೋರ್ಟ್‌ನಲ್ಲಿ ಸಾಯಿ ವೆಂಕಟೇಶ್ವರ ಕೇಸ್ ಬಾಕಿ ಇದೆ. ಸುಪ್ರೀಂ ಕೋರ್ಟ್‌ಗೆ ಪ್ರಕರಣ ರದ್ದಿಗೆ ಹೋದೆ. ಆಗ ಸಿದ್ದರಾಮಯ್ಯ ಅವರೇ ಸಿಎಂ‌ ಆಗಿದ್ದರು. ಎಸ್‌ಐಟಿ ತನಿಖೆಗೆ ಕೊಡಿ ಅಂತ ಸಿದ್ದರಾಮಯ್ಯ ಸರ್ಕಾರ ಹೋಯಿತು ಎಂದರು.

ಏನಾದರೂ ಮಾಡಿ ಕುಮಾರಸ್ವಾಮಿನ ಒಳಗೆ ಹಾಕಿಸಬೇಕು ಅಂತ ಅವರಿಗೆ ನಿರಾಸೆ ಆಗಿದೆ. 2017ರಲ್ಲಿ ಮೂರು ತಿಂಗಳೊಳಗೆ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ನಂತರ ನಾನು ಬೇಲ್ ಪಡೆದುಕೊಂಡು ಹೋದೆ. ಸುಪ್ರೀಂ ಯಾವುದೇ ಕೋರ್ಟಿಗೆ ಹೋಗುವ ಅವಶ್ಯಕತೆ ಇಲ್ಲ ಅಂತ ತೀರ್ಪು ನೀಡಿತ್ತು. ಆದರೆ ಎಸ್‌ಐಟಿ 2017ರ ಜೂ. 20ರಂದು ಮತ್ತೊಂದು ಕೇಸ್ ಹಾಕಿತ್ತು. 2018ರ ಜನವರಿ ತಿಂಗಳಲ್ಲಿ ಮತ್ತೊಂದು ಫೈಲ್ ರಿಪೋರ್ಟ್‌ ಹಾಕಿಕೊಂಡರು. ವಿಪರ್ಯಾಸ ಅವರು ನನ್ನ ಜೊತೆಗೇ ಸರ್ಕಾರ ಮಾಡಬೇಕಾಯಿತು ಎಂದರು.

ಸಿದ್ದರಾಮಯ್ಯ ವಿರುದ್ಧ 61 ಕೇಸ್ ತನಿಖೆಯೇ ಆಗಿಲ್ಲ ಅಂತ ವರದಿ ಆಗಿದೆ. ಹಲವು ಕೇಸ್ ಅವರ ಮೇಲೆ ದಾಖಲಾಗಿ, ತನಿಖೆಯೇ ಆಗಿಲ್ಲ. ಲೋಕಾಯುಕ್ತಾದಲ್ಲಿ 61 ಕೇಸ್ ತನಿಖೆ ಆಗದೆ ಉಳಿದಿದೆ. ಇದನ್ನ ನಾನು ಹೇಳುತ್ತಿಲ್ಲ, ಪತ್ರಿಕೆಗಳಲ್ಲೇ ಬಂದಿದೆ. ನಾನು ಕಪ್ಪು ಚುಕ್ಕೆ‌ ಇಲ್ಲದ ನಾಯಕ, ಹಿಂದುಳಿದ ನಾಯಕ ಅಂತ ಹೇಳಿಕೊಳ್ಳುತ್ತಾರೆ. ಲೋಕಾಯುಕ್ತವನ್ನು ಇವರು ಏನು ಮಾಡಿದರು ಎಂದು ಪ್ರಶ್ನಿಸಿದರು.

ಚಾರ್ಜ್‌ಶೀಟ್‌ನಲ್ಲಿ ಹೆಸರು ಇರುವವರು ಕೇಂದ್ರ ಸಚಿವರಾಗಬಹುದಾ ಎಂಬ ಶಾಸಕ ಹಾಗೂ ಸಿಎಂ‌ ಕಾನೂನು ಸಲಹೆಗಾರ ಪೊನ್ನಣ್ಣ ಪ್ರಶ್ನೆಗೆ ಪ್ರತಿಕ್ರಿಯಿಸಿ, 2011-12ರಲ್ಲೇ ನಾನು ಪ್ರಕರಣವನ್ನು ಮುಚ್ಚಿ ಹಾಕಿಸಬಹುದಿತ್ತು. ಆದರೆ, ಹಾಗೆ ಮಾಡಿಲ್ಲ. ಆದರೆ ಈಗ ಯಾವುದೋ ಹೊಸ ಕೇಸ್ ತೆಗೆಯುತ್ತಿದ್ದಾರೆ. ಸುಪ್ರೀಂ ಕೋರ್ಟ್ ತನಿಖೆಗೆ ಹೋಗುವ ಮುನ್ನ ರಾಜ್ಯಪಾಲರ ಅನುಮತಿ ಪಡೆಯಿರಿ ಅಂತ ಕೋರ್ಟ್‌ ಹೇಳಿದೆಯಾ? ನಾನು ಸಚಿವನಾಗಿರುವುದೇ ಎರಡು ತಿಂಗಳ ಹಿಂದೆ. 2017ರಲ್ಲಿ ಮೂರು ತಿಂಗಳೊಳಗೆ ವರದಿ ಕೊಡಿ ಅಂತ ಕೋರ್ಟ್‌ ಹೇಳಿತ್ತು. ಈಗ 2024, ಇನ್ನೂ ವರದಿ ಕೊಡದೆ ಯಾಕೆ ಕುಳಿತಿದ್ದೀರಿ ಎಂದು ಪ್ರಶ್ನಿಸಿದರು.

ಸಾಯಿ ವೆಂಕಟೇಶ್ವರ ಪ್ರಕರಣದ ಎಲ್ಲಾ ದಾಖಲೆ ಇಲ್ಲಿ ಇದೆ ಎಂದು ದಾಖಲೆ‌ ಪ್ರದರ್ಶಿಸಿದ ಅವರು, ನಾನು ಸಹಿ ಹಾಕಿದ್ದೀನಿ ಅಂತ ಯಾರೋ ಈಗ ಹೇಳುತ್ತಿದ್ದಾರೆ. ನಾನು ಸಹಿ ಹಾಕಿದ್ದು ಯಾವುದಕ್ಕೆ ಅಂತ ತನಿಖೆ ಮಾಡಿದ್ದೀರಾ? ಏನೆಲ್ಲಾ ಫ್ರಾಡ್ ಆಗಿದೆ ಅಂತ ನೋಡಿದ್ದೀರಾ? 20 ಲಕ್ಷ ಹಣ ಯಾರೋ ಅಧಿಕಾರಿ ಮಗನ ಅಕೌಂಟಿಗೆ ತೆಗೆದುಕೊಂಡಿದ್ದ. ನಾನು ಅದನ್ನ ಪತ್ತೆ ಹಚ್ಚಿದ್ದು, ಪೊಲೀಸರಲ್ಲ. ಪೊನ್ನಣ್ಣ ನಿನ್ನ ಕಾನೂನು, ನಿನಗಿಂತ ನಮಗೆ ಗೊತ್ತು ಎಂದರು.

ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣದ 2009ರಲ್ಲಿ ನಡೆದಿರುವುದು, ನಾನು ಆಗ ಸಿಎಂ‌ ಆಗಿರಲಿಲ್ಲ. ನನ್ನ ಬಳಿ ಫೈಲ್ ಬಂದಿದೆಯೋ ಇಲ್ಲವೋ ಅದು ಪ್ರೂವ್ ಆಗಿಲ್ಲ. 2015ರಲ್ಲಿ ಬೇಲೆಕೇರಿ ಗಣಿಗೆ ಅನುಮತಿ ನೀಡಲಾಗಿದೆ. ಅಲ್ಲಿ ಈಗಲೂ ಮೈನಿಂಗ್ ನಡೆಯುತ್ತಿದೆ. ಅದಕ್ಕೂ ಅನುಮತಿ ನೀಡಿದ್ದಾರೆ. ಈ ದಾಖಲೆಗಳನ್ನು ಈಗಲೇ ಕೊಟ್ಟರೆ ರೆಕಾರ್ಡ್ ತಿದ್ದೋರು ಅನೇಕರಿದ್ದಾರೆ. ನಾನೂ ಸೇಫ್ ಗೇಮ್ ಆಡಬೇಕಲ್ವಾ ಎಂದರು.

ಇದನ್ನೂ ಓದಿ | ICC Chairman Election: ಅಮಿತ್​ ಶಾ ಮಗ ಜಯ್​ ಶಾ ಐಸಿಸಿಯ ಮುಂದಿನ ಅಧ್ಯಕ್ಷ?

ಬಿಜೆಪಿ ಮೇಲೆ 21 ಕೇಸ್ ಇದೆ ಅಂತ ಬೊಂಬಡಿ ಹೊಡೆಯುತ್ತಾರೆ. ಸತ್ತಿರೋ ಕೇಸ್ ಈಗ ತೆರೆದಿದ್ದಾರೆ, ಜೀವ ಇರುವ ಕೇಸ್‌ ಅದರೂ ತನ್ನಿ ಸಿದ್ದರಾಮಯ್ಯ ಅವರೇ? ಎಂದ ಅವರು, ಕುಮಾರಸ್ವಾಮಿ ಮೇಲೆ ತನಿಖೆ ವಿಳಂಬ ಹೀಗೆಲ್ಲಾ ಹೇಳಿಕೊಂಡು ಓಡಾಡ್ತಿದ್ದಾರೆ. ಮುಡಾದಲ್ಲಿ ಸಿಎಂ 14 ಸೈಟ್ ಹೇಗೆ ಪಡೆದುಕೊಂಡರು? ಭೂಮಿ ನಿಮ್ಮದೇ ಅಂತ ಅಂದುಕೊಳ್ಳೋಣ. ಆದರೆ ಕಾನೂನಿನಲ್ಲಿ ಏನಿದೆ? ದಾಖಲೆ ತಿದ್ದುಪಡಿ ಮಾಡಿ ಏನೆಲ್ಲಾ ಮಾಡಿದ್ದೀರಿ ಎಂಬುವುದು ಗೊತ್ತಿದೆ. ಸಾಯಿ ಮಿನರಲ್ಸ್ ವಿಚಾರದಲ್ಲಿ ನಾನು ಹೋರಾಟ ಮಾಡುತ್ತೇನೆ. ಇಂತಹ ಪರಿಸ್ಥಿತಿಯಲ್ಲಿ ಕಾನೂನು ಮೊರೆ ಹೋಗಲೇಬೇಕು, ಕೋರ್ಟ್‌ ತೀರ್ಪಿಗೆ ನಾವು ತಲೆಬಾಗಲೇಬೇಕ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

Continue Reading

ಕ್ರೈಂ

Couple Death: ಪತ್ನಿಯ ಅನುಮಾನಾಸ್ಪದ ಸಾವು; ಜನರ ಆಕ್ರೋಶಕ್ಕೆ ಹೆದರಿ ಗಂಡ ಕೂಡ ಆತ್ಮಹತ್ಯೆ

Couple Death: ನೆನ್ನೆ ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.

VISTARANEWS.COM


on

Couple death
Koo

ಮಂಡ್ಯ: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು (Woman Self Harming) ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ (Couple Death) ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ಅಂಜಿ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಕೆ‌.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ (Murder) ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.

ನೆನ್ನೆ ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.

ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.

ಬೆಂಗಳೂರಿನಲ್ಲಿ ಯುವಕನಿಗೆ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಬೆಂಗಳೂರು: ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ (Assault Case) ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ. ಸುಲಭವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಇಂತಹ ಕೃತ್ಯ‌ ನಡೆಸಿದ್ದಾರೆ.

ಮೂರು ವರ್ಷಗಳ ಹಿಂದೆ ಅಂಬೇಡ್ಕರ್‌ ಕಾಲೇಜ ಸಮೀಪದಲ್ಲಿದ್ದ ಟೀ ಅಂಗಡಿಯಲ್ಲಿ ಸಂತ್ರಸ್ತ ಕೆಲಸ ಮಾಡಿಕೊಂಡಿದ್ದ. ಚಿತ್ರ, ಅಶ್ವಿನಿ, ಕಾಜಲ್‌, ಪ್ರೀತಿ, ಮುಗಿಲ ಎಂಬುವವರು ಟೀ ಕುಡಿಯುವ ನೆಪದಲ್ಲಿ ಬಂದು ಯುವಕನನ್ನು ಪರಿಚಯ ಮಾಡಿಕೊಂಡಿದ್ದರು.

ನಮ್ಮ ಜತೆಗೆ ಬಂದರೆ ನಿನ್ನನ್ನು ಒಳ್ಳೆಯ ಮನೆಯಲ್ಲಿರಿಸಿ, ಸಂಪಾದನೆಯ ದಾರಿಯನ್ನು ಮಾಡಿಕೊಡುವುದಾಗಿ ಯುವಕನನ್ನು ಪುಸಲಾಯಿಸಿದ್ದಾರೆ. ಆದರೆ ಯುವಕ ಇದಕ್ಕೆ ಒಪ್ಪದೆ ಇದ್ದಾಗ, ಬಲವಂತವಾಗಿ ಬೆದರಿಸಿ ಮನೆಗೆ ಕರೆದೊಯ್ದಿದ್ದಾರೆ.

ಟ್ಯಾನರಿ ರಸ್ತೆಯಲ್ಲಿದ್ದ ಮನೆಯಲ್ಲಿ ಯುವಕನನ್ನು ಇರಿಸಿಕೊಂಡಿದ್ದಾರೆ. ಬಳಿಕ ಭಿಕ್ಷೆ ಬೇಡು ಇಲ್ಲದಿದ್ದರೆ ರೌಡಿಗಳಿಗೆ ಹೇಳಿ ನಿನ್ನ ತಂದೆ-ತಾಯಿಯನ್ನು ಕೊಲೆ ಮಾಡಿಸುತ್ತೇವೆ ಎಂದು ಹೆದರಿಸಿದ್ದಾರೆ. ಇವರ ಬ್ಲ್ಯಾಕ್‌ಮೇಲ್‌ಗೆ ಹೆದರಿದ ಯುವಕ ಸುಮಾರು ಮೂರು ವರ್ಷಗಳ ಕಾಲ ಭಿಕ್ಷಾಟನೆ ಮಾಡಿಸಿ ಹಣ ಸಂಪಾದಿಸಿದ್ದಾರೆ.

ಇತ್ತೀಚೆಗೆ ಈ ಮಂಗಳಮುಖಿಯರು ಯುವಕನಾಗಿಯೇ ಇಷ್ಟು ದುಡಿಯುತ್ತಿದ್ದಯಾ, ಹೆಣ್ಣಾದರೆ ಇನ್ನೂ ಎಷ್ಟು ಹಣವನ್ನು ಸಂಪಾದನೆ ಮಾಡಬಹುದು ಎಂದಿದ್ದಾರೆ. ಲಿಂಗ ಪರಿವರ್ತಿಸಿಕೊಂಡು ಹೆಣ್ಣಾಗು ಎಂದು ಬಲವಂತ ಮಾಡಿದ್ದಾರೆ. ಒಪ್ಪದೆ ಇದ್ದಾಗ ಗಾಂಜಾ ಸೇವಿಸಿ, ಮದ್ಯಪಾನ ಮಾಡಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ.

ಬಳಿಕ ಬಲವಂತವಾಗಿ ಇಂಜೆಕ್ಷನ್ ಕೊಟ್ಟು ಪ್ರಜ್ಞೆ ತಪ್ಪಿಸಿ ಮರ್ಮಾಂಗವನ್ನು ಕತ್ತರಿಸಿದ್ದಾರೆ. ಯುವಕ ಎಚ್ಚರಗೊಂಡ ಲಿಂಗ ಪರಿವರ್ತನೆ ಮಾಡಿದ್ದಾರೆ. ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಫೋಟೊ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಮನಬಂದಂತೆ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದಾರೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Continue Reading

ತುಮಕೂರು

Food Poisoning: ಬೀಗರೂಟ ಸೇವಿಸಿ ಮನೆಗೆ ಬಂದವರು ಅಸ್ವಸ್ಥ; 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಪಾಲು

Food Poisoning: ನಾಗೇನಹಳ್ಳಿ ತಾಂಡಾದವರು ಪಕ್ಕದ ಶ್ರೀರಂಗಪುರ ತಾಂಡಾದಲ್ಲಿ ಬೀಗರ ಊಟ ಸೇವಿಸಿದ್ದು, ಹಾಗೆ ಸೇವಿಸಿದವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಉಪಚರಿಸಲಾಗಿದೆ. ಶಾಸಕ ವೆಂಕಟೇಶ್ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲರ ಆರೋಗ್ಯ ವಿಚಾರಿಸಿದ್ದಾರೆ.

VISTARANEWS.COM


on

food poisoning tumkur
Koo

ತುಮಕೂರು: ಬೀಗರ ಊಟ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ (food poisoning) ತುಮಕೂರು (tumkur news) ಜಿಲ್ಲೆ ಪಾವಗಡ ತಾಲೂಕಿನ ನಾಗೇನಹಳ್ಳಿ ತಾಂಡಾದಲ್ಲಿ ನಡೆದಿದೆ. ಅಸ್ವಸ್ಥಗೊಂಡವರನ್ನು ಪಾವಗಡ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ನಾಗೇನಹಳ್ಳಿ ತಾಂಡಾದವರು ಪಕ್ಕದ ಶ್ರೀರಂಗಪುರ ತಾಂಡಾದಲ್ಲಿ ಬೀಗರ ಊಟ ಸೇವಿಸಿದ್ದು, ಹಾಗೆ ಸೇವಿಸಿದವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಉಪಚರಿಸಲಾಗಿದೆ. ಶಾಸಕ ವೆಂಕಟೇಶ್ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲರ ಆರೋಗ್ಯ ವಿಚಾರಿಸಿದ್ದಾರೆ. ಅಧಿಕಾರಿಗಳು ನಾಗೇನಹಳ್ಳಿ ತಾಂಡಾಗೆ ತೆರಳಿ ಕುಡಿಯುವ ನೀರಿನ ಪರೀಕ್ಷೆ ನಡೆಸಿದ್ದು, ನೀರಿನಿಂದ ಯಾವುದೇ ಸಮಸ್ಯೆ ಆಗಿಲ್ಲ ಎನ್ನುವುದು ಖಚಿತವಾಗಿದೆ. ಹೀಗಾಗಿ ಫುಡ್ ಪಾಯಿಸನಿಂಗ್‌ನಿಂದಲೇ ಆರೋಗ್ಯದಲ್ಲಿ ಏರುಪೇರಾಗಿರುವ ಶಂಕೆ ಮೂಡಿದೆ.

ಬೆಂಗಳೂರಿನಲ್ಲಿ ಯುವಕನಿಗೆ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಬೆಂಗಳೂರು: ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ (Assault Case) ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ. ಸುಲಭವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಇಂತಹ ಕೃತ್ಯ‌ ನಡೆಸಿದ್ದಾರೆ.

ಮೂರು ವರ್ಷಗಳ ಹಿಂದೆ ಅಂಬೇಡ್ಕರ್‌ ಕಾಲೇಜ ಸಮೀಪದಲ್ಲಿದ್ದ ಟೀ ಅಂಗಡಿಯಲ್ಲಿ ಸಂತ್ರಸ್ತ ಕೆಲಸ ಮಾಡಿಕೊಂಡಿದ್ದ. ಚಿತ್ರ, ಅಶ್ವಿನಿ, ಕಾಜಲ್‌, ಪ್ರೀತಿ, ಮುಗಿಲ ಎಂಬುವವರು ಟೀ ಕುಡಿಯುವ ನೆಪದಲ್ಲಿ ಬಂದು ಯುವಕನನ್ನು ಪರಿಚಯ ಮಾಡಿಕೊಂಡಿದ್ದರು.

ನಮ್ಮ ಜತೆಗೆ ಬಂದರೆ ನಿನ್ನನ್ನು ಒಳ್ಳೆಯ ಮನೆಯಲ್ಲಿರಿಸಿ, ಸಂಪಾದನೆಯ ದಾರಿಯನ್ನು ಮಾಡಿಕೊಡುವುದಾಗಿ ಯುವಕನನ್ನು ಪುಸಲಾಯಿಸಿದ್ದಾರೆ. ಆದರೆ ಯುವಕ ಇದಕ್ಕೆ ಒಪ್ಪದೆ ಇದ್ದಾಗ, ಬಲವಂತವಾಗಿ ಬೆದರಿಸಿ ಮನೆಗೆ ಕರೆದೊಯ್ದಿದ್ದಾರೆ.

ಟ್ಯಾನರಿ ರಸ್ತೆಯಲ್ಲಿದ್ದ ಮನೆಯಲ್ಲಿ ಯುವಕನನ್ನು ಇರಿಸಿಕೊಂಡಿದ್ದಾರೆ. ಬಳಿಕ ಭಿಕ್ಷೆ ಬೇಡು ಇಲ್ಲದಿದ್ದರೆ ರೌಡಿಗಳಿಗೆ ಹೇಳಿ ನಿನ್ನ ತಂದೆ-ತಾಯಿಯನ್ನು ಕೊಲೆ ಮಾಡಿಸುತ್ತೇವೆ ಎಂದು ಹೆದರಿಸಿದ್ದಾರೆ. ಇವರ ಬ್ಲ್ಯಾಕ್‌ಮೇಲ್‌ಗೆ ಹೆದರಿದ ಯುವಕ ಸುಮಾರು ಮೂರು ವರ್ಷಗಳ ಕಾಲ ಭಿಕ್ಷಾಟನೆ ಮಾಡಿಸಿ ಹಣ ಸಂಪಾದಿಸಿದ್ದಾರೆ.

ಇತ್ತೀಚೆಗೆ ಈ ಮಂಗಳಮುಖಿಯರು ಯುವಕನಾಗಿಯೇ ಇಷ್ಟು ದುಡಿಯುತ್ತಿದ್ದಯಾ, ಹೆಣ್ಣಾದರೆ ಇನ್ನೂ ಎಷ್ಟು ಹಣವನ್ನು ಸಂಪಾದನೆ ಮಾಡಬಹುದು ಎಂದಿದ್ದಾರೆ. ಲಿಂಗ ಪರಿವರ್ತಿಸಿಕೊಂಡು ಹೆಣ್ಣಾಗು ಎಂದು ಬಲವಂತ ಮಾಡಿದ್ದಾರೆ. ಒಪ್ಪದೆ ಇದ್ದಾಗ ಗಾಂಜಾ ಸೇವಿಸಿ, ಮದ್ಯಪಾನ ಮಾಡಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ.

ಬಳಿಕ ಬಲವಂತವಾಗಿ ಇಂಜೆಕ್ಷನ್ ಕೊಟ್ಟು ಪ್ರಜ್ಞೆ ತಪ್ಪಿಸಿ ಮರ್ಮಾಂಗವನ್ನು ಕತ್ತರಿಸಿದ್ದಾರೆ. ಯುವಕ ಎಚ್ಚರಗೊಂಡ ಲಿಂಗ ಪರಿವರ್ತನೆ ಮಾಡಿದ್ದಾರೆ. ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಫೋಟೊ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಮನಬಂದಂತೆ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದಾರೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Continue Reading

ಕರ್ನಾಟಕ

Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ಇಂದು ಅಂತಿಮ ದಿನ

Banking Recruitment 2024: ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 4455 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಗೆ ಆ.21 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಗೆ ಹೇಗೆ?, ಶುಲ್ಕ, ಪರೀಕ್ಷಾ ವಿಧಾನ ಮತ್ತಿತರ ವಿವರಗಳು ಇಲ್ಲಿವೆ.

VISTARANEWS.COM


on

Job Alert
Koo

| ಆರ್‌.ಕೆ. ಬಾಲಚಂದ್ರ, ಬ್ಯಾಂಕಿಂಗ್, ವ್ಯಕ್ತಿತ್ವ ವಿಕಸನ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು, ವೃತ್ತಿ ಮಾರ್ಗದರ್ಶಕರು
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ದೇಶದ (Banking Recruitment 2024) ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡುವ ಪ್ರಕ್ರಿಯೆ ಆರಂಭಿಸಿದೆ. ಈ ವರ್ಷದಲ್ಲಿ ಇಲ್ಲಿಯವರೆಗೆ 20,566ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಂತಾಗಿದೆ. ಪದವೀಧರ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿದೆ. ಈಗ ಮತ್ತೊಂದು ಸುತ್ತಿನ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 4455 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಎಂದಿನಂತೆ, ಪೂರ್ವ ಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಒಟ್ಟು ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ 657, ಪರಿಶಿಷ್ಟ ಪಂಗಡಕ್ಕೆ 332, ಹಿಂದುಳಿದ ವರ್ಗದವರಿಗೆ 1185, ಆರ್ಥಿಕವಾಗಿ ಹಿಂದುಳಿದ ವರ್ಗ ದವರಿಗೆ 435 ಹಾಗೂ ಸಾಮಾನ್ಯ ವರ್ಗದವರಿಗೆ 1,846 ಹುದ್ದೆಗಳನ್ನು ಮೀಸಲಿಡಲಾಗಿದೆ. ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿನ ಒಟ್ಟು 4455 ಹುದ್ದೆಗೆ ಅರ್ಜಿ ಸಲ್ಲಿಸಲು ಆ.21 ಅಂತಿಮ ದಿನವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆನ್ಲೈ ನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಆಗಸ್ಟ್ 21, 2024 ಕೊನೆ ದಿನ.

ಯಾವ ಬ್ಯಾಂಕ್, ಎಷ್ಟು ಹುದ್ದೆ?

ಕೆನರಾ ಬ್ಯಾಂಕ್ 750, ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ 360, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2000, ಬ್ಯಾಂಕ್ ಆಫ್ ಇಂಡಿಯಾ 885 ಪಂಜಾಬ್ ನ್ಯಾಷನಲ್ ಬ್ಯಾಂಕ್ 200, ಇಂಡಿಯನ್ ಒವರಸೀಸ್ ಬ್ಯಾಂಕ್ 260, ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ.

ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಈ ಲಿಂಕ್‌ಗಳನ್ನು ನೋಡಬಹುದು: www.ibps.in ಮತ್ತು https://www.ibps.in/index.php/management-trainees-xiv/

ಶೈಕ್ಷಣಿಕ ಅರ್ಹತೆ: (21.08.2024ಕ್ಕೆ ಅನ್ವಯಿಸುವಂತೆ)

ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ.

ವಯೋಮಿತಿ: 01.08.2024 ಕನಿಷ್ಠ 20 ವರ್ಷ ಹಾಗೂ ಗರಿಷ್ಡ 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಗಳು 02.08.1994 ಕ್ಕಿಂತ ಮುಂಚಿತವಾಗಿ ಮತ್ತು 01.08.2004ರ ನಂತರ ಜನಿಸಿರಬಾರದು. ಸರ್ಕಾರದ ನಿಯಮಾನುಸಾರ ಎಸ್.ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳಷ್ಟು ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ , ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ: ₹850. ಪ.ಜಾ, ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಯೋಧರಿಗೆ ₹175. ನೋಂದಣಿ ನಂತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕ/ಇಂಟಿಮೇಷನ್ ಶುಲ್ಕಗಳನ್ನು ಹಾಗೂ ಆನ್‌ಲೈನ್ ಪಾವತಿಗಾಗಿ ಬ್ಯಾಂಕ್ ವಹಿವಾಟು ಶುಲ್ಕಗಳನ್ನು ಅಭ್ಯರ್ಥಿಯು ಭರಿಸಬೇಕಾಗುತ್ತದೆ.

ಶುಲ್ಕ ಪಾವತಿ: ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ, ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆ ಪದ ರಹಿತ (Non creamy layer) ಷರತ್ತಿನೊಂದಿಗೆ ಇತ್ತೀಚಿನ ಒಬಿಸಿ ಪ್ರಮಾಣಪತ್ರವನ್ನು ಹೊಂದಿರಬೇಕು.

ಪರೀಕ್ಷಾ ಪ್ರಕ್ರಿಯೆ: ಇದೇ ಅಕ್ಟೋಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ, ನವೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ಎರಡೂ ಪರೀಕ್ಷೆಗಳು ಆನ್‌ಲೈನ್‌ನಲ್ಲಿ ನಡೆಯುಲಿವೆ. ಸಂದರ್ಶನ 2025ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆ ಇದೆ. ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವ ಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳು

ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್): ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ- ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು

ಪೂರ್ವ ಭಾವಿ ಪರೀಕ್ಷೆಗೆ ತರಬೇತಿ: ಐಬಿಪಿಎಸ್ ವತಿಯಿಂದ ಎಸ್.ಸಿ/ಎಸ್.ಟಿ/ಅಲ್ಪ ಸಂಖ್ಯಾತ ವರ್ಗದ ಅಭ್ಯರ್ಥಿಗಳು, ಮಾಜಿ ಸೈನಿಕರು, ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ತರಬೇತಿ ನೀಡಲಾಗುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಕೋರಿಕೆ ಸಲ್ಲಿಸಬೇಕು.  ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ಮತ್ತು ಮೈಸೂರಿನಲ್ಲಿ ಉಚಿತ ಪರೀಕ್ಷಾ ತರಬೇತಿಯನ್ನೂ ಸೆಪ್ಟೆಂಬರ್ ತಿಂಗಳಲ್ಲಿ ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್ ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.

ಇದನ್ನೂ ಓದಿ: Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯ ವಿಲ್ಲ.

ಅರ್ಜಿ ಸಲ್ಲಿಸುವಾಗ ಗಮನಿಸಿ:

  • ಅಭ್ಯರ್ಥಿ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವುದಕ್ಕೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಬ್ಯಾಂಕ್ ಆದ್ಯ ತೆಯ ಆದೇಶವನ್ನು ಅಳವಡಿಸಲಾಗಿದೆ.
  • ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್‌ಗಳ ಆದ್ಯತೆಯ ಕ್ರಮವನ್ನು ಅಗತ್ಯ ವಾಗಿ ಸೂಚಿಸಬೇಕು.
  • ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ.
  • ಒಮ್ಮೆ ನೀವು ಆಯ್ಕೆಯಾದರೆ ನಂತರದ ದಿನಗಳಲ್ಲಿ ಬ್ಯಾಂಕ್/ಸ್ಥಳ ಬದಲಾವಣೆಗಾಗಿ ಸಲ್ಲಿಸುವ ವಿನಂತಿಯನ್ನು ಪರಿಗಣಿಸಲಾ ಗುವುದಿಲ್ಲ.
  • ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿಸಲ್ಲಿಸುವಾಗ ಬಹಳ ಎಚ್ಚರಿಕೆ ವಹಿಸುವುದು ಒಳಿತು.

ಆಫೀಸರ್ಸ್‌ ಆಯ್ಕೆಗೆ ಮೂರು ಹಂತಗಳ ಪರೀಕ್ಷೆ

ನೇಮಕಾತಿ ಪ್ರಕ್ರಿಯೆ

ಪೂರ್ವ ಭಾವಿ ಪರೀಕ್ಷೆ

ಪೂರ್ವ ಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕು. ಆದರೆ ಒಟ್ಟಾರೆ ಹೆಚ್ಚು ಅಂಕಗಳಿಸುವುದು ಮುಖ್ಯ . ಪೂರ್ವ ಭಾವಿ ಪರೀಕ್ಷೆ ಒಂದು ಗಂಟೆ ಅವಧಿಯದ್ದು (ಪ್ರತಿ ಪತ್ರಿಕೆಗೂ 20 ನಿಮಿಷಗಳು). 100 ಅಂಕಗಳಿರುತ್ತವೆ (ಅಂದರೆ ಪ್ರತಿ ಪ್ರಶ್ನೆಗೆ ಒಂದೊಂದು ಅಂಕ ನಿಗದಿ) ಇದರಲ್ಲಿ ಇಂಗ್ಲಿಷ್ ಭಾಷಾ ಪತ್ರಿಕೆಗೆ 30, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಗೆ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ.

ಮುಖ್ಯ ಪರೀಕ್ಷೆ ವಿವರಗಳು

ಕ್ರ. ಸಂವಿಷಯ ಹಾಗೂ ಪತ್ರಿಕೆಪ್ರಶ್ನೆಗಳುಅಂಕಗಳುಅವಧಿ
Iರೀಸನಿಂಗ್ ಮತ್ತು ಕಂಪ್ಯೂಟರ್ ಆಪ್ಟಿಟ್ಯೂಡ್456060 ನಿಮಿಷಗಳು
IIಜನರಲ್/ಎಕಾನಮಿ/ಬ್ಯಾಂಕಿಂಗ್ ಅವೇರ್ನೆ ಸ್404035 ನಿಮಿಷಗಳು
IIIಇಂಗ್ಲಿಷ್ ಭಾಷೆ354040 ನಿಮಿಷಗಳು
IVಡೇಟಾಅನಾಲಿಸಿಸ್ಆ್ಯಂಡ್ ಇಂಟರ್ ಪ್ರಿಟೇಷನ್356045 ನಿಮಿಷಗಳು
 ಒಟ್ಟು1552003 ಗಂಟೆಗಳು
Vಪತ್ರ ಬರವಣಿಗೆ ಮತ್ತು ಪ್ರಬಂಧ022530 ನಿಮಿಷಗಳು

ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರುತ್ತವೆ. ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯದ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕ ವನ್ನು ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ. ಪ್ರಶ್ನೆಗೆ ಉತ್ತರ ಗುರುತಿಸಲಾಗಿಲ್ಲದಿದ್ದರೆ ಅಂಕ ಕಳೆಯುವುದಿಲ್ಲ. ಮುಖ್ಯ ಪರೀಕ್ಷೆ ಮುಗಿಯುತ್ತಿದ್ದಂತೆ ಇಂಗ್ಲಿಷ್ ಭಾಷೆಗೆ (Letter Writing & Essay- with two questions) ಸಂಬಂಧಿಸಿದಂತೆ 25 ಅಂಕಗಳಿಗೆ ಡಿಸ್ಸ್ಕ್ರಿಟಿವ್ ಟೆಸ್ಟ್ ನಡೆಸಲಾಗುತ್ತದೆ. ಅವಧಿ 30 ನಿಮಿಷಗಳು. ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿಯೇ ಉತ್ತರ ಬರೆಯಬೇಕು. ಇಂಗ್ಲಿಷ್ ಭಾಷೆಯ ವಿವರಣಾತ್ಮಕ ಪೇಪರ್ (ಪತ್ರ ಬರವಣಿಗೆ ಮತ್ತು ಪ್ರಬಂಧ) ಅನ್ನು ಸ್ವಯಂಚಾಲಿತ ಸ್ಕೋರಿಂಗ್ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ. ಬರವಣಿಗೆಯ ಪ್ರಾವೀಣ್ಯಕ್ಕೆ ಸಂಬಂಧಿಸಿದಂತೆ ವೈಶಿಷ್ಟಗಳನ್ನು ಗುರುತಿಸುವುದು ಇದರ ಕಾರ್ಯ ವಿಧಾನವಾಗಿದೆ. ಆಂಗ್ಲ ಭಾಷೆಯಲ್ಲಿ

ಇದನ್ನೂ ಓದಿ | Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೆನಪಿಡಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ .

ಈ ಎರಡೂ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತ ಸಂದರ್ಶನಕ್ಕೆ ಅರ್ಹರಾಗುತ್ತಾರೆ.

ಹಂತ-III ಸಂದರ್ಶನ.

ಆಯ್ಕೆ ಪಟ್ಟಿ: ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ-II ಮತ್ತು ಹಂತ-III ಎರಡರಲ್ಲೂ ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು. ಸಂದರ್ಶನಕ್ಕೆ ನಿಗದಿ ಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಶೇ 40 (SC/ST/OBC/PWBD ಅಭ್ಯರ್ಥಿಗಳಿಗೆ ಶೇ 35).

ಪರೀಕ್ಷೆ ಕುರಿತು ಇನ್ನಷ್ಟು ವಿವರಗಳಿಗಾಗಿ www.ibps.in ಮತ್ತುhttps://www.ibps.in/index.php/management-trainees-xiv/ ಜಾಲ ತಾಣ ನೋಡಿ.

ಹಾಗೂ ಬರವಣಿಗೆಯಲ್ಲಿ ಪರೀಕ್ಷೆ ಬರೆಯುವವರ ಪ್ರಾವೀಣ್ಯವನ್ನು ವಸ್ತುನಿಷ್ಠ ರೀತಿಯಲ್ಲಿ ಮೌಲ್ಯಮಾಪನ ಮಾಡುವ ವಿಶಿಷ್ಟ ವಿಧಾನವಾಗಿದೆ.

Continue Reading
Advertisement
sexual abuse
ದೇಶ5 mins ago

Sexual abuse: ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಕೇಸ್‌ ತೆಗೆದುಕೊಳ್ಳಲು ವಕೀಲರ ಹಿಂದೇಟು-ಆ.24ರಂದು ಬಂದ್‌ಗೆ ಕರೆ

KL Rahul
ಕ್ರಿಕೆಟ್13 mins ago

KL Rahul: ಆರ್‌ಸಿಬಿ ಸೇರದಂತೆ ಕೆ.ಎಲ್​ ರಾಹುಲ್‌ಗೆ 25 ಕೋಟಿ ಆಫರ್ ಮಾಡಿದ ಫ್ರಾಂಚೈಸಿ!

ಕರ್ನಾಟಕ14 mins ago

CM Siddaramaiah: ಪರಿಸ್ಥಿತಿ ಬಂದ್ರೆ ಮುಲಾಜಿಲ್ಲದೆ ಕುಮಾರಸ್ವಾಮಿಯನ್ನು ಬಂದಿಸ್ತೀವಿ ಎಂದ ಸಿಎಂ

HD Kumaraswamy
ಕರ್ನಾಟಕ36 mins ago

HD Kumaraswamy: ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು ಎಂದ ಎಚ್‌ಡಿಕೆ

World's Oldest Bus Driver
Latest45 mins ago

World’s Oldest Bus Driver: ಇವರು ವಿಶ್ವದ ಅತ್ಯಂತ ಹಿರಿಯ ಬಸ್ ಚಾಲಕ! ವಯಸ್ಸು ಎಷ್ಟು ನೋಡಿ!

Viral Video
ವೈರಲ್ ನ್ಯೂಸ್49 mins ago

Viral Video: ಸೂಪರ್ ಮಾರ್ಕೆಟ್‍ನೊಳಗೇ ಒಳ ಉಡುಪು ಕಳಚಿ ಬ್ರೆಡ್ ಟ್ರೇನಲ್ಲಿಟ್ಟ ಯುವತಿ!

ICC Chairman Election
ಕ್ರೀಡೆ54 mins ago

ICC Chairman Election: ಅಮಿತ್​ ಶಾ ಮಗ ಜಯ್​ ಶಾ ಐಸಿಸಿಯ ಮುಂದಿನ ಅಧ್ಯಕ್ಷ?

GITAM University
ಬೆಂಗಳೂರು2 hours ago

GITAM University: ಗೀತಂ ವಿವಿಯಲ್ಲಿ ವಿದ್ಯಾರ್ಥಿಗಳ ಗಲಾಟೆ; ಮಹಿಳಾ ಸೆಕ್ಯೂರಿಟಿ ಗಾರ್ಡ್‌ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ!

Gold In Country
ವಾಣಿಜ್ಯ3 hours ago

Gold In Country: ಅತೀ ಹೆಚ್ಚು ಚಿನ್ನವನ್ನು ಹೊಂದಿರುವ ದೇಶಗಳಲ್ಲಿ ಭಾರತ ಯಾವ ಸ್ಥಾನದಲ್ಲಿದೆ?

Viral Video
Latest3 hours ago

Viral Video: ತಂದೆಯ ವಿರುದ್ಧ ಎಫ್ಐಆರ್ ದಾಖಲಿಸಿದ 5 ವರ್ಷದ ಬಾಲಕ; ಅಸಲಿ ಕಾರಣವೇನು ಗೊತ್ತಾ?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌