Govt. Employees : ಸರ್ಕಾರಿ ನೌಕರರು ಕೋರ್ಟ್‌ನಲ್ಲಿ ಜಾಮೀನು ಪಡೆದರೂ ಶಿಸ್ತುಕ್ರಮದಿಂದ ವಿನಾಯಿತಿ ಇಲ್ಲ - Vistara News

ಬೆಂಗಳೂರು

Govt. Employees : ಸರ್ಕಾರಿ ನೌಕರರು ಕೋರ್ಟ್‌ನಲ್ಲಿ ಜಾಮೀನು ಪಡೆದರೂ ಶಿಸ್ತುಕ್ರಮದಿಂದ ವಿನಾಯಿತಿ ಇಲ್ಲ

Govt. Employees : ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರ ಕೋರ್ಟ್‌ ಮೊರೆ ಹೋಗಿದ್ದರೂ ಶಿಸ್ತು ಕ್ರಮದಿಂದ ತಪ್ಪಿಸಿಕೊಳ್ಳುವಂತಿಲ್ಲ. ಹೀಗೆ ರಾಜ್ಯ ಸರ್ಕಾರ ಆದೇಶವೊಂದನ್ನು ಹೊರಡಿಸಿದೆ.

VISTARANEWS.COM


on

Govt Employees
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕ್ರಿಮಿನಲ್ ನ್ಯಾಯಾಲಯದಲ್ಲಿ (Criminal court) ದಂಡನೆಗೆ ಒಳಗಾದ ಸರ್ಕಾರಿ ನೌಕರರ (Govt. Employees) ವಿರುದ್ಧ ಶಿಸ್ತುಕ್ರಮ ಜರುಗಿಸುವ (Disciplinary Action) ಬಗ್ಗೆ ರಾಜ್ಯ ಸರ್ಕಾರ (Karnataka Government) ಮಹತ್ವದ ಆದೇಶ ಹೊರಡಿಸಿದೆ. ಒಂದೊಮ್ಮೆ ಸರ್ಕಾರಿ ನೌಕರರು ಕ್ರಿಮಿನಲ್‌ ಪ್ರಕರಣದಲ್ಲಿ ಜಾಮೀನು ಪಡೆದರೂ ಅವರ ಮೇಲಿನ ಶಿಸ್ತುಕ್ರಮವನ್ನು ತಡೆ ಹಿಡಿಯುವಂತಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 14(i)ರ ಅನ್ವಯಿಕೆಗೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಈ ಆದೇಶದಲ್ಲಿ ಸುಪ್ರೀಂಕೋರ್ಟ್‌ ಈ ಹಿಂದೆ ನೀಡಿದ ತೀರ್ಪು (The Deputy Director of Collegiate Education Vs S.Nagoor Meera (AIR 1995 SC 1364) ಮತ್ತು ಪ್ರತಿಪಾದಿಸಿರುವ ವಿಚಾರಗಳನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿದೆ : Govt Employees Conference: ಬೆಂಗಳೂರಿನಲ್ಲಿ ಫೆ.27ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ

Govt Employees order.webp

ಏನಿದೆ ಆದೇಶದಲ್ಲಿ?

  1. ಕ್ರಿಮಿನಲ್ ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರನು ಕ್ರಿಮಿನಲ್ ನ್ಯಾಯಾಲಯದ ದಂಡನಾ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದಾನೆ ಎಂಬ ಕಾರಣಕ್ಕಾಗಿ ಆತನ ಮೇಲಿನ ಕ್ರಮವನ್ನು ತಡೆ ಹಿಡಿಯುವಂತಿಲ್ಲ.
  2. ಆರೋಪಿತ ವ್ಯಕ್ತಿಯು ಮೇಲನವಿ ಸಲ್ಲಿಸಿದ್ದಾನೆ, ಮೇಲಿನ ನ್ಯಾಯಾಲಯವು ಕ್ರಿಮಿನಲ್ ನ್ಯಾಯಾಲಯದ ದಂಡನೆ ಆದೇಶವನ್ನು ನಿಲಂಬನೆಯಲ್ಲಿಟ್ಟಿದೆ ಎಂಬುದೂ ಶಿಸ್ತು ಕ್ರಮ ತಡೆಗೆ ಕಾರಣವಾಗುವುದಿಲ್ಲ.
  3. ಮೇಲ್ಮನವಿ ಅರ್ಜಿ ಇತ್ಯರ್ಥದಲ್ಲಿರುವಾಗ ಜಾಮೀನಿನ ಮೇಲೆ ಬಿಡುಗಡೆ ಪಡೆದಿದ್ದಾನೆ ಎಂಬ ಕಾರಣಕ್ಕಾಗಿಯೂ ಕ್ರಮದಿಂದ ಹಿಂದೆ ಸರಿಯುವಂತಿಲ್ಲ.
  4. ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 14(i) ರನ್ನಯ ಕ್ರಮ ಜರುಗಿಸುವುದನ್ನು ತಡೆ ಹಿಡಿಯದೆ ಸಂವಿಧಾನದ 311(2)ರಡಿ ಎರಡನೇ ಪರಂತುಕದ ಸಮರ್ಥನೆ ಪಡೆದಿರುವ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 14(1) ರನ್ವಯ ಶಿಸ್ತಿನ ಕ್ರಮ ಕೈಗೊಳ್ಳತಕ್ಕದ್ದು ಎಂದು ಮತ್ತೊಮ್ಮೆ ಸ್ಪಷ್ಟಪಡಿಸಲಾಗಿದೆ.
  5. 26.6.1996ರ ಸುತ್ತೋಲೆ ಹಾಗೂ ಮೇಲೆ ನೀಡಲಾದ ಸೂಚನೆಗಳನ್ನು ಉಲ್ಲಂಘಿಸುವ ಪುಕರಣಗಳಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಜರುಗಿಸತಕ್ಕದ್ದು ಎಂದು ಸೂಚಿಸಲಾಗಿದೆ.
  6. ಸರ್ಕಾರದ ಎಲ್ಲಾ ಅವರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಯವರು ಈ ಸೂಚನೆಗಳನ್ನು ಅವರವರ ಕಾರ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನೇಮಕಾತಿ ಮತ್ತು ಶಿಸ್ತುಪ್ರಾಧಿಕಾರಿಗಳ ಗಮನಕ್ಕೆ ತರಲು ಸೂಚಿಸಿದೆ ಎಂದು ಹೇಳಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

Fire Accident: ಬೆಂಗಳೂರಿನ ಎಂಜಿ‌ ರಸ್ತೆಯ ಮೆಟ್ರೋ ಸ್ಟೇಷನ್ ಬಳಿಯ ಮಳಿಗೆಯಲ್ಲಿ ಭಾನುವಾರ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ನಡೆದಿದೆ.

VISTARANEWS.COM


on

Fire Accident
Koo

ಬೆಂಗಳೂರು: ನಗರದ ಎಂ.ಜಿ. ರಸ್ತೆಯ ಆಪ್ಟಿಕಲ್ಸ್ ಮಳಿಗೆಯಲ್ಲಿ ಭಾನುವಾರ ರಾತ್ರಿ ಬೆಂಕಿ ಅವಘಡ (Fire Accident) ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಎಂಜಿ‌ ರೋಡ್ ಮೆಟ್ರೋ ಸ್ಟೇಷನ್ ಬಳಿಯ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು.

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Gadag News

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

murder case In karwar

ಕಾರವಾರ : ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಇದನ್ನೂ ಓದಿ: Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ಕೇಸ್‌ನಲ್ಲಿ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿದ ಎಸ್‌ಐಟಿ

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಇನ್ನೂ ಹಲವು ಸಂತ್ರಸ್ತೆಯರು ಇರುವ ಹಿನ್ನೆಲೆಯಲ್ಲಿ ಅಂತಹವರ ನೆರವಿಗಾಗಿ ಎಸ್‌ಐಟಿ ಸಹಾಯವಾಣಿ ತೆರೆದಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ಡ್ಯಾಪ್‌ ಮಾಡಿದ ಆರೋಪದಲ್ಲಿ ಈಗಾಗಲೇ ಶಾಸಕ ಎಚ್‌.ಡಿ.ರೇವಣ್ಣ ಬಂಧನವಾಗಿದೆ. ಪ್ರಕರಣದಲ್ಲಿ ಇನ್ನೂ ಹಲವು ಸಂತ್ರಸ್ತೆಯರು ಇರುವುದರಿಂದ ಅವರಿಗೆ ಕಾನೂನು ನೆರವು ಮತ್ತು ರಕ್ಷಣೆ ಪಡೆಯಲು ಎಸ್‌ಐಟಿಯಿಂದ ಹೆಲ್ಪ್‌ಲೈನ್‌ ತೆರೆಯಲಾಗಿದೆ.

ಈ ಬಗ್ಗೆ ಎಸ್‌ಐಟಿ ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಕುರಿತು ಈಗಾಗಲೇ ವಿಶೇಷ ತನಿಖಾ ತಂಡ (SIT) ವನ್ನು ರಚಿಸಲಾಗಿದೆ. ತನಿಖೆ ವೇಳೆ ಘಟನೆಗೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರಿರುವುದು ಗೊತ್ತಾಗಿದ್ದು, ಯಾರೇ ಸಂತ್ರಸ್ತರು ಅಥವಾ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನಿನ ನೆರವು ಮತ್ತು ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾದಲ್ಲಿ ಹೆಲ್ಪ್‌ಲೈನ್‌ ನಂ. 6360938947 ಗೆ ಕರೆ ಮಾಡಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ಇದನ್ನೂ ಓದಿ | Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇಂದು ಭಾನುವಾರ (ಮೇ 5) ಕೋರ್ಟ್‌ ರಜೆ ಇರುವ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ ವಕೀಲರು, ಪ್ರಕರಣದ ತೀವ್ರತೆಯನ್ನು ವಿವರಿಸಿ ರೇವಣ್ಣ ಅವರನ್ನು ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ರೇವಣ್ಣ ಪರ ವಕೀಲರಾದ ಮೂರ್ತಿ ಡಿ. ನಾಯಕ್‌ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಎಸ್‌ಐಟಿಯವರು ತಮ್ಮ ಕಕ್ಷಿದಾರರಿಗೆ ಕಿರುಕುಳವನ್ನು ನೀಡುತ್ತಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ವಾದವನ್ನು ಮಂಡಿಸಿದರು.

ಈ ವೇಳೆ ರಿಮೈಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಬಿಗಿ ಭದ್ರತೆ ಒದಗಿಸಿದ್ದ ಪೊಲೀಸ್‌!

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಭದ್ರತೆಯೊಂದಿಗೆ ಅವರನ್ನು ಜಡ್ಜ್‌ಗೆ ಹಾಜರುಪಡಿಸಲಾಯಿತು.

ಇದನ್ನೂ ಓದಿ | Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ.

Continue Reading

ಕ್ರೈಂ

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case: ಎಚ್‌.ಡಿ. ರೇವಣ್ಣ ಅವರನ್ನು ರಿಮೈಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಅಪಹರಣ ಹಾಗೂ ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಪ್ರಶ್ನೆಗಳು ಕೇಳಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Prajwal Revanna Case HD Revanna sent to judicial custody Shift to Parappana Agrahara
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರನ್ನು 4 ದಿನಗಳವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇಂದು ಭಾನುವಾರ (ಮೇ 5) ಕೋರ್ಟ್‌ ರಜೆ ಇರುವ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ ವಕೀಲರು, ಪ್ರಕರಣದ ತೀವ್ರತೆಯನ್ನು ವಿವರಿಸಿ ರೇವಣ್ಣ ಅವರನ್ನು ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ರೇವಣ್ಣ ಪರ ವಕೀಲರಾದ ಮೂರ್ತಿ ಡಿ. ನಾಯಕ್‌ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಎಸ್‌ಐಟಿಯವರು ತಮ್ಮ ಕಕ್ಷಿದಾರರಿಗೆ ಕಿರುಕುಳವನ್ನು ನೀಡುತ್ತಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ವಾದವನ್ನು ಮಂಡಿಸಿದರು.

ಈ ವೇಳೆ ರಿಮೈಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು 4 ದಿನಗಳ ವರೆಗೆ ಅಂದರೆ ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಬಿಗಿ ಭದ್ರತೆ ಒದಗಿಸಿದ್ದ ಪೊಲೀಸ್‌!

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಭದ್ರತೆಯೊಂದಿಗೆ ಅವರನ್ನು ಜಡ್ಜ್‌ಗೆ ಹಾಜರುಪಡಿಸಲಾಯಿತು.

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ.

ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದು ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಎಸ್‌ಐಟಿ ಅಧಿಕಾರಿಗಳು ಮೆಡಿಕಲ್‌ ಟೆಸ್ಟ್‌ಗೆಂದು ಬೋರಿಂಗ್‌ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ರೇವಣ್ಣ ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಗುಡುಗಿದರು.

ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಈ ಕೇಸ್‌ಗೆ ಸಂಬಂಧಿಸಿ ಆ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮೂವರು ಮಹಿಳಾ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರೂ, “ನಾನವಳಲ್ಲ” ಎಂಬ ಉತ್ತರವನ್ನು ನೀಡಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

ಆದರೆ, ಈಗಾಗಲೇ ಈ ಪ್ರಕರಣದಲ್ಲಿ ಸಂಪೂರ್ಣ ಮುಜುಗರವನ್ನು ಅನುಭವಿಸಿರುವ ಮಹಿಳಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ವಿಡಿಯೊ ಹಾಗೂ ಫೋಟೊಗಳು ಸಹ ವೈರಲ್ ಆಗಿದ್ದವು. ಇದರಿಂದ ಅವರು ತೀವ್ರ ಆಘಾತವನ್ನು ಎದುರಿಸಿದ್ದಾರೆ.

ಈಗ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರಿಂದ ಮತ್ತಷ್ಟು ಕಂಗೆಟ್ಟಿರುವ ಮಹಿಳಾ ಅಧಿಕಾರಿಗಳು, ಆ ವಿಡಿಯೊ ಹಾಗೂ ಫೋಟೊಗಳು ನಮ್ಮದಲ್ಲ. ಅದನ್ನು ಮಾರ್ಫ್‌ ಮಾಡಲಾಗಿದೆ ಎಂದು ನೋಟಿಸ್‌ಗೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.

ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ

ಒಂದು ವೇಳೆ ಈ ಮಹಿಳಾ ಅಧಿಕಾರಿಗಳು ಎಸ್‌ಐಟಿ ಮುಂದೆ ಬಂದು ತಮ್ಮ ಮೇಲೆ ಪ್ರಜ್ವಲ್‌ ದೌರ್ಜನ್ಯ ಮಾಡಿದ್ದಾರೆ. ಆಮಿಷವೊಡ್ಡುವ ಮೂಲಕ ಇಲ್ಲವೇ ಕಿರುಕುಳ ನೀಡುವ ಮೂಲಕ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರೆ, ಈ ಕೇಸ್‌ ಮತ್ತಷ್ಟು ಬಲಿಷ್ಠವಾಗುತ್ತಿತ್ತು. ಆದರೆ, ಈಗ ಈ ಮಹಿಳಾ ಅಧಿಕಾರಿಗಳು ಆ ವಿಡಿಯೊ ಹಾಗೂ ಫೋಟೊದಲ್ಲಿರುವುದು ನಾವೇ ಅಲ್ಲ ಎಂದು ಹೇಳಿಬಿಟ್ಟಿದ್ದಾರೆ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಎಸ್‌ಐಟಿ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದಲ್ಲಿ ಗೌಪ್ಯ ಸ್ಥಳದಲ್ಲಿ ಹೇಳಿಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading

ಕರ್ನಾಟಕ

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Drought Relief: ಬರಗಾಲದ ಪರಿಹಾರ ವಿತರಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡುತ್ತಾ ಕಟುಕನಂತೆ ವರ್ತಿಸುತ್ತಿದೆಯೇ ಹೊರತು ಕಾಳಜಿ ತೋರುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

VISTARANEWS.COM


on

Drought Relief
Koo

ಬೆಂಗಳೂರು: ಚುನಾವಣೆಗೆ ಖರ್ಚು ಮಾಡಲು ಹಾಗೂ ಗ್ಯಾರಂಟಿಗಾಗಿ ಕಾಂಗ್ರೆಸ್‌ ಸರ್ಕಾರ ಬರ ಪರಿಹಾರವನ್ನು (Drought Relief) ತಡೆ ಹಿಡಿದುಕೊಂಡಿದೆ. ಇದನ್ನು ಕೂಡಲೇ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ಪರಿಹಾರ ವಿತರಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡುತ್ತಾ ಕಟುಕನಂತೆ ವರ್ತಿಸುತ್ತಿದೆಯೇ ಹೊರತು ಕಾಳಜಿ ತೋರುತ್ತಿಲ್ಲ. ಜಾಹೀರಾತು ನೋಡಿ ರಾಜಕೀಯ ಮಾಡುವುದನ್ನು ಬಿಟ್ಟರೆ ರೈತರ ಸಂಕಷ್ಟಕ್ಕೆ ಮಿಡಿಯುವ ಕೆಲಸ ಮಾಡಿಲ್ಲ. ಕಾಂಗ್ರೆಸ್‌ ನಾಯಕರ ಯೋಗ್ಯತೆಗೆ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಪರಿಹಾರ ನೀಡಿದ್ದರೂ ಅದನ್ನು ರೈತರಿಗೆ ಕೊಡದೆ ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆ. ಇದಕ್ಕಾಗಿಯೇ ಪರಿಹಾರ ವಿತರಣೆಗೆ ವಿಳಂಬ ಮಾಡಲಾಗಿದೆ ಎಂದರು.

ರೈತರು ಪರಿಹಾರ ಕೇಳಿದರೆ ನಿಮ್ಮ ಮನೆಯ ಹೆಂಗಸರಿಗೆ 2 ಸಾವಿರ ರೂಪಾಯಿ ಕೊಡಲಿಲ್ಲವೇ ಎಂದು ಶಾಸಕರು ಅಹಂಕಾರದಿಂದ ಮಾತನಾಡುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ಕೂಡಲೇ ಟಾಸ್ಕ್‌ಫೋರ್ಸ್‌ ರಚನೆ ಮಾಡಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ರಾಜ್ಯಾದ್ಯಂತ ಜಾನುವಾರುಗಳಿಗೆ ಮೇವಿನ ಕೊರತೆ ಕಂಡುಬಂದಿದ್ದು, ಇದಕ್ಕಾಗಿ ಗೋಶಾಲೆಗಳನ್ನು ಆರಂಭಿಸಬೇಕು. ಇಲ್ಲವಾದರೆ ಎಷ್ಟು ಗೋಶಾಲೆ ಆರಂಭಿಸಿದ್ದಾರೆ ಎಂದು ಲೆಕ್ಕ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

ಬರದ ವಿಚಾರದಲ್ಲಿ ಗಂಭೀರತೆ ತೋರಿಸದ ಸಿದ್ದರಾಮಯ್ಯ ಮಜವಾದಿ ಸಿಎಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಬಂದ ಬಳಿಕ ರಾಜ್ಯದಲ್ಲಿ ಬರಗಾಲ ಬಂದಿದೆ. ಈ ಜೂನ್‌ನಲ್ಲಾದರೂ ಮಳೆ ಬರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಬರಗಾಲದಲ್ಲಿ ಗೊಬ್ಬರ ಸಂಗ್ರಹ ಎಷ್ಟಿದೆ ಎಂದು ಸರ್ಕಾರ ತಿಳಿಸಬೇಕು. ಆದರೆ ಮುಂಗಾರು ಮಳೆ ಬರುತ್ತೆಯೋ ಇಲ್ಲವೋ ಎಂಬ ಜ್ಞಾನವೂ ಮುಖ್ಯಮಂತ್ರಿಗಿಲ್ಲ. ಕೃಷಿ ಸಚಿವರು ಈ ಕುರಿತು ಸಭೆಗಳನ್ನೇ ನಡೆಸಿಲ್ಲ. 5,000 ಕೋಟಿ ರೂ. ಬರ ನಿರ್ವಹಣೆಗೆ ಇಡುತ್ತೇವೆ ಎಂದು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಆದರೆ ನಯಾಪೈಸೆಯೂ ಕಾಣುತ್ತಿಲ್ಲ ಎಂದು ದೂರಿದರು.

ಬಡ್ಡಿ ವ್ಯಾಪಾರಿ ಅಧಿಕಾರಿಗಳು

ಕಾಂಗ್ರೆಸ್‌ ಸರ್ಕಾರ ರೈತರಿಗೆ ನೀಡಿದ 2,000 ರೂಪಾಯಿಯನ್ನು ಕೇಂದ್ರ ಸರ್ಕಾರ ನೀಡಿದ ಪರಿಹಾರದ ಮೊತ್ತದಲ್ಲಿ ಕಡಿತಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಮಾನವೀಯತೆ ಇಲ್ಲದೆ ಮೀಟರ್‌ ಬಡ್ಡಿ ವ್ಯಾಪಾರಿಗಳಂತೆ ವರ್ತಿಸುತ್ತಿದ್ದಾರೆ. ಆ ಹಣವನ್ನು ವಾಪಸ್‌ ಕೇಳಲು ಸರ್ಕಾರಕ್ಕೆ ನಾಚಿಕೆಯಾಗಬೇಕು. ಬಿಜೆಪಿ ಸರ್ಕಾರ ದುಪ್ಪಟ್ಟು ಪರಿಹಾರ ನೀಡಿತ್ತು. ಆ ಹಣವನ್ನು ಯಾವುದೇ ಕಾರಣಕ್ಕೂ ಕಡಿತ ಮಾಡಬಾರದು ಎಂದು ಒತ್ತಾಯಿಸಿದರು.

ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ ಕೂಡಲೇ ಹಣ ವರ್ಗಾವಣೆ ಮಾಡಬಹುದು. ಆದರೆ ಇನ್ನೂ ಸರ್ಕಾರ ವಿಳಂಬ ಮಾಡುತ್ತಿದೆ. ಹಣವನ್ನು ತನ್ನಲ್ಲೇ ಇಟ್ಟುಕೊಳ್ಳಲು ಸರ್ಕಾರ ಈ ರೀತಿ ತಡ ಮಾಡುತ್ತಿದೆ. ಈ ಕುರಿತು ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸುತ್ತೇನೆ ಎಂದರು.

ಹಿಂದುಳಿದ ವರ್ಗಕ್ಕೆ ಅನ್ಯಾಯ

ಹಿಂದುಳಿದ ವರ್ಗಗಳ ಪರ ಮೊಸಳೆ ಕಣ್ಣೀರು ಹಾಕುವ ಕಾಂಗ್ರೆಸ್‌, ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಿದೆ. ದೇವರಾಜ ಅರಸು ನಿಗಮಕ್ಕೆ ಬಿಜೆಪಿ 190 ಕೋಟಿ ರೂ. ನೀಡಿದ್ದರೆ, ಕಾಂಗ್ರೆಸ್‌ ಸರ್ಕಾರ 100 ಕೋಟಿ ರೂ. ಗೆ ಇಳಿಸಿದೆ. ಮರಾಠ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಅಂಬಿಗರ ಚೌಡಯ್ಯ ನಿಗಮಕ್ಕೆ ಬಿಜೆಪಿ 25 ಕೋಟಿ ರೂ. ನೀಡಿದ್ದು, ಕಾಂಗ್ರೆಸ್‌ ಸರ್ಕಾರ ಅದನ್ನೂ ಅರ್ಧಕ್ಕಿಳಿಸಿದೆ. ವೀರಶೈವ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದ್ದರೆ, ಅದನ್ನು ಕಾಂಗ್ರೆಸ್‌ 60 ಕೋಟಿ ರೂ. ಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ | Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

ರಾಹುಲ್‌ ಗಾಂಧಿಯನ್ನು ಕೇರಳದ ಸಿಎಂ ಅಮುಲ್‌ ಬೇಬಿ ಎಂದಿದ್ದಾರೆ. ಆದ್ದರಿಂದ ಅಲ್ಲಿಂದ ಮಿಂಚಿನ ಓಟದ ಮೂಲಕ ರಾಹುಲ್‌, ರಾಯ್‌ಬರೇಲಿಗೆ ಹೋಗಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಮೋದಿ ಎಂದರೆ ಭಯವಿದೆ ಎಂದರು.

Continue Reading
Advertisement
Champions Trophy
Latest7 mins ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Fire Accident
ಕರ್ನಾಟಕ1 hour ago

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

IPL 2024
ಕ್ರೀಡೆ1 hour ago

IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

Al Jazeera
ಪ್ರಮುಖ ಸುದ್ದಿ1 hour ago

Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Pralhad Joshi
ಕರ್ನಾಟಕ1 hour ago

Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Bernard Hill
Latest2 hours ago

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

IPL 2024
Latest2 hours ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Air India
ದೇಶ2 hours ago

Air India: ವಿಮಾನ ಪ್ರಯಾಣಿಕರೇ ಗಮನಿಸಿ, ಚೆಕ್-ಇನ್ ಬ್ಯಾಗೇಜ್ ಭಾರದ ಮಿತಿ ಇಳಿಕೆ!

Lok Sabha Election 2024 Narendra Modi cant become PM again says CM Siddaramaiah
Lok Sabha Election 20242 hours ago

Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

Radhika Khera
ದೇಶ2 hours ago

Radhika Khera: ಅಯೋಧ್ಯೆಗೆ ಭೇಟಿ ನೀಡಿದ್ದಕ್ಕೆ ಪಕ್ಷದಲ್ಲಿ ವಿರೋಧ; ಕಾಂಗ್ರೆಸ್‌ ತೊರೆದ ನಾಯಕಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ5 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌