Guru Purnima 2024: ನಮ್ಮ ಆಚಾರ-ವಿಚಾರಗಳು ಹಿಂದೂ ಸಂಸ್ಕೃತಿಗನುಸಾರ ಇರಬೇಕು; ಮೋಹನ ಗೌಡ - Vistara News

ಬೆಂಗಳೂರು

Guru Purnima 2024: ನಮ್ಮ ಆಚಾರ-ವಿಚಾರಗಳು ಹಿಂದೂ ಸಂಸ್ಕೃತಿಗನುಸಾರ ಇರಬೇಕು; ಮೋಹನ ಗೌಡ

Guru Purnima 2024: ನಮ್ಮ ಆಚಾರ-ವಿಚಾರಗಳು ಹಿಂದೂ ಸಂಸ್ಕೃತಿಗನುಸಾರ ಇರಬೇಕು. ‘ರಾಮ-ಕೃಷ್ಣʼ ನಮ್ಮ ಆದರ್ಶವಾಗಿದ್ದಾರೆ. ನಮ್ಮ ನಿತ್ಯ ವ್ಯವಹಾರದಲ್ಲಿ ನಮ್ಮ ಸಂಸ್ಕೃತಿಯ ರಕ್ಷಣೆ ಮತ್ತು ಪಾಲನೆ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.

VISTARANEWS.COM


on

Hindu Jana Jagruti Samiti State Spokesperson Mohan Gowda speech
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಮರಾಜ್ಯಕ್ಕಾಗಿ ಸಾಧನೆ ಮಾಡುವುದರ ಜತೆಗೆ ಭ್ರಷ್ಟಾಚಾರ, ಅನೈತಿಕತೆ ಮತ್ತು ಅರಾಜಕತೆಯ ವಿರುದ್ಧ ಹೋರಾಡಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ (Guru Purnima 2024) ತಿಳಿಸಿದರು.

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನಗರದ ಕಾಮಾಕ್ಷಿಪಾಳ್ಯದ ಧನಂಜಯ ಪ್ಯಾಲೇಸ್‌ನಲ್ಲಿ ಆಯೋಜಿಸಲಾಗಿದ್ದ ಗುರುಪೂರ್ಣಿಮಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವೈಯಕ್ತಿಕ ಜೀವನದಲ್ಲಿ ಆಧ್ಯಾತ್ಮಿಕ ಸಾಧನೆಯಿಂದ ಅಂತರಂಗದಲ್ಲಿ ರಾಮರಾಜ್ಯದ ಸ್ಥಾಪನೆ ಮಾಡಬಹುದು ಆದರೆ ಸಾಮಾಜಿಕ ಮತ್ತು ರಾಷ್ಟ್ರೀಯ ಜೀವನದಲ್ಲಿ ರಾಮರಾಜ್ಯದ ಸ್ಥಾಪನೆಗಾಗಿ ನಾವು ಕರ್ತವ್ಯನಿಷ್ಠರಾಗಿ ನಿಭಾಯಿಸುವುದರೊಂದಿಗೆ ಭ್ರಷ್ಟಾಚಾರ, ಅನೈತಿಕತೆ ಮತ್ತು ಅರಾಜಕತೆಯ ವಿರುದ್ಧ ಹೋರಾಡಬೇಕಿದೆ.

ನಮ್ಮ ಆಚಾರ-ವಿಚಾರಗಳು ಹಿಂದೂ ಸಂಸ್ಕೃತಿಗನುಸಾರ ಇರಬೇಕು. ‘ರಾಮ-ಕೃಷ್ಣʼ ನಮ್ಮ ಆದರ್ಶವಾಗಿದ್ದಾರೆ. ನಮ್ಮ ನಿತ್ಯ ವ್ಯವಹಾರದಲ್ಲಿ ನಮ್ಮ ಸಂಸ್ಕೃತಿಯ ರಕ್ಷಣೆ ಮತ್ತು ಪಾಲನೆ ಮಾಡಬೇಕು ಎಂದು ಅವರು ಕರೆ ನೀಡಿದರು.

ಇದನ್ನೂ ಓದಿ: Union Budget 2024: ಕೇಂದ್ರ ಬಜೆಟ್‌ನಲ್ಲಿ ರೈಲ್ವೇ ವಲಯದ 9 ಪ್ರಮುಖ ನಿರೀಕ್ಷೆಗಳಿವು

ಗುರು ಪೂರ್ಣಿಮಾ ಮಹೋತ್ಸವದಲ್ಲಿ ಬೆಳಿಗ್ಗೆ ಶ್ರೀ ವ್ಯಾಸ ಪೂಜೆ ಮತ್ತು ಪರಮಪೂಜ್ಯ ಭಕ್ತರಾಜ ಮಹಾರಾಜರ ಪ್ರತಿಮೆಯ ಪೂಜೆ ನೆರವೇರಿಸಲಾಯಿತು.

ಮಹೋತ್ಸವದಲ್ಲಿ ರಾಷ್ಟ್ರ ಧರ್ಮ ಸಂಘಟನೆಯ ಸಂಸ್ಥಾಪಕ ಸಂತೋಷ ಕೆಂಚಾಂಬ, ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಪರಿಷತ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎನ್. ಮಹೇಶ್, ಆನೇಕಲ್‌ನ ಶ್ರೀ ಚೌಡೇಶ್ವರಿ ದೇವಸ್ಥಾನದ ಅಧ್ಯಕ್ಷ ಸೋಮೇಶ್ ರೆಡ್ಡಿ ಹಾಗೂ ರಾಜರಾಜೇಶ್ವರಿ ನಗರದ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಟ್ರಸ್ಟಿ ಶಶಾಂಕ ಆಚಾರ್ ಪಾಲ್ಗೊಂಡಿದ್ದರು.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ

ಬೆಂಗಳೂರಿನ ಬಸವನಗುಡಿಯ ಭವಾನಿ ಕಲ್ಯಾಣ ಮಂಟಪ, ಯಲಹಂಕದ ಆರ್.ವಿ. ಕಲ್ಯಾಣ ಮಂಟಪ ಹಾಗೂ ಚಂದಾಪುರದ ಯಾರೆಂಡಳ್ಳಿಯ ಸಾಯಿಬಾಬಾ ಯೋಗ ಕೇಂದ್ರದಲ್ಲಿ ಸೇರಿದಂತೆ ದೇಶದಾದ್ಯಂತ 71 ಕ್ಕೂ ಅಧಿಕ ಕಡೆಗಳಲ್ಲಿ ಗುರುಪೂರ್ಣಿಮಾ ಮಹೋತ್ಸವ ಆಚರಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Suraj Revanna Case: ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಕೇಸ್‌ನಲ್ಲೂ ಜಾಮೀನು, ನಾಳೆ ರಿಲೀಸ್‌!

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್‌ ರೇವಣ್ಣ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಇದೀಗ ಎರಡೂ ಪ್ರಕರಣಗಳಲ್ಲೂ ಜಾಮೀನು ಸಿಕ್ಕಿದೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ದಾಖಲಾಗಿದ್ದ ಎರಡನೇ ಪ್ರಕರಣದಲ್ಲೂ ಎಂಎಲ್‌ಸಿ ಸೂರಜ್‌ ರೇವಣ್ಣಗೆ (Suraj Revanna Case) ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಇದರಿಂದ ಒಂದು ತಿಂಗಳ ಜೈಲುವಾಸದ ಬಳಿಕ ಸೂರಜ್‌ ರೇವಣ್ಣಗೆ ಮುಕ್ತಿ ಲಭಿಸಿದೆ.

ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್‌ ರೇವಣ್ಣ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಹೊಳೆನರಸೀಪುರ ಟೌನ್‌ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮೊದಲಿಗೆ ಸೂರಜ್‌ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು‌ ಮಂಜೂರು ಮಾಡಿತ್ತು. ಬಳಿಕ ಇದೀಗ ಎರಡನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ನೀಡಿದೆ. ಇದರಿಂದ ನಾಳೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 3ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿತ್ತು. ಸಿಐಡಿ ಕಸ್ಟಡಿ ಮುಕ್ತಾಯಗೊಂಡ ನಂತರ 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಲಾಗಿತ್ತು. ಇದರಿಂದ ಸೂರಜ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದರು.

ಇದನ್ನೂ ಓದಿ | Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಜೂನ್‌ 23 ರಂದು ಬಂಧನವಾಗಿದ್ದ ಸೂರಜ್‌ ರೇವಣ್ಣ ಪರಪ್ಪನ ಅಗ್ರಹಾರ ಸೇರಿದ್ದರು. ಪ್ರಕರಣ ನಡೆದು 29 ದಿನಗಳ ನಂತರ ಈಗ ಸೂರಜ್‌ಗೆ ಎರಡೂ ಪ್ರಕರಣಗಳಲ್ಲೂ ಜಾಮೀನು ಸಿಕ್ಕಿದೆ.

ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Actor Darshan

ಬೆಂಗಳೂರು: ಮನೆ ಊಟ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನಗರದ 24ನೇ ಎಸಿಎಂಎಂ ಕೋರ್ಟ್, ಆದೇಶವನ್ನು ಜುಲೈ 25ಕ್ಕೆ ಕಾಯ್ದಿರಿಸಿದೆ. ಇದರಿಂದ ಇನ್ನೂ ಮೂರು ದಿನಗಳ ಕಾಲ ನಟ ದರ್ಶನ್‌ಗೆ (Actor Darshan) ಜೈಲೂಟವೇ ಗತಿಯಾಗಿದೆ.

ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.

ದರ್ಶನ್ ಒಬ್ಬ ಸೆಲೆಬ್ರಿಟಿ ಅಗಿರುವುದರಿಂದ ಪ್ರಚಾರ ಸಿಗುತ್ತದೆ. ಆಗಾಗಿಯೇ ಜೈಲು ಅಧಿಕಾರಿಗಳು ಮನೆ ಊಟಕ್ಕೆ ಅವಕಾಶ ನೀಡುತ್ತಿಲ್ಲ. ಆರೋಪ ಸಾಬೀತಾಗುವವರೆಗೂ ಮುಗ್ಧನೆಂದು ಪರಿಗಣಿಸಿ ಮನೆ ಊಟ, ಹಾಸಿಗೆ ಒದಗಿಸಬೇಕೆಂದು ಮನವಿ ಮಾಡಿ ವಾದ ಮುಕ್ತಾಯಗೊಳಿಸಿದರು.

ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ಆಗಲ್ಲ

ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಆರಂಭಿಸಿ, ಜೈಲು ಊಟ ಜೀರ್ಣವಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಮೆಡಿಕಲ್ ರಿಪೋರ್ಟ್ ಕೋರ್ಟ್‌ಗೆ ಸಲ್ಲಿಸಿದ್ದೇವೆ. ನ್ಯಾಯಾಂಗ ಬಂಧನಕ್ಕೆ ಕಳುಹಿಸುವಾಗ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಅವರಿಗೆ ಆರ್ಥೋಪೆಡಿಕ್ ಸಮಸ್ಯೆ ಇದೆ. ಅದಕ್ಕೆ ಮೊದಲು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದನ್ನ ಮುಂದುವರಿಸಲು ಸೂಚನೆ ನೀಡಿದ್ದರು. ಈಗ ಡಯಟ್ ಪುಡ್ ಕೇಳಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಜೈಲು ಮ್ಯಾನ್ಯುವಲ್ ಪ್ರಕಾರ ಏನೇನು ನೀಡಬೇಕೋ ಅದನ್ನು ನೀಡುತ್ತಿದ್ದೇವೆ. ಜೈಲು ಕೈಪಿಡಿಯಲ್ಲಿ ಮನೆ ಊಟ ಎಂಬ ಪದವೇ ಇಲ್ಲ. ಹುಷಾರಿಲ್ಲದ ವೇಳೆ ಎಕ್ಟ್ರಾ ಡಯಟ್ 30 ದಿನ ನೀಡಬಹುದು. ವಾರದಲ್ಲಿ ಒಂದು ದಿನ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡಬಹುದು. ಜ್ವರ ಇದ್ದಾಗ ಬಿಸಿ ನೀರು ನೀಡುತ್ತಾರೆ. ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ನಿಯಮದಲ್ಲಿ ಅವಕಾಶ ಇಲ್ಲ ಎಂದು ತಿಳಿಸಿದರು.

ಸದ್ಯ ದರ್ಶನ್ ಮೆಡಿಕಲ್ ರಿಪೋರ್ಟ್‌ನಲ್ಲಿ ಬೆಡ್ ರೆಸ್ಟ್ ಬೇಕು ಎಂದಿದೆ. ಜೈಲು ವೈದ್ಯಾಧಿಕಾರಿಗಳು ಅಗತ್ಯವಿದ್ದರೆ ವಿಶೇಷ ಆಹಾರವನ್ನು ನೀಡಬಹುದು. ಜೈಲು ನಿಯಮ 728 ರಲ್ಲಿ ಬಟ್ಟೆ, ಹಾಸಿಗೆ ನೀಡುವ ನಿಯಮವಿದೆ. ಇದು ಕೊಲೆ ಆರೋಪಿಯನ್ನು ಹೊರತು ಪಡಿಸಿ ಬೇರೆ ಕೈದಿಗಳಿಗೆ ಅನ್ವಯವಾಗುತ್ತದೆ. ದರ್ಶನ್ ನಾನು ನಿತ್ಯ ಜಿಮ್‌ನಲ್ಲಿ ಕಸರತ್ತು ಮಾಡುತ್ತಿದ್ದೆ. ಹೀಗಾಗಿ ಜೈಲಿನಲ್ಲಿ ನೀಡುವ ಊಟದ ಜೊತೆಗೆ ಎಕ್ಟ್ರಾ ಪ್ರೋಟಿನ್ ನೀಡಬೇಕೆಂದು ಮಾನವಿ ಮಾಡಿದ್ದಾರೆ. ಪ್ರತಿ ಭಾರಿ ನಾನು ಮನೆಯಲ್ಲಿ ವ್ಯಾಯಾಮ ಮಾಡ್ತಿದ್ದೆ. ಪ್ರೋಟಿನ್ ಆಹಾರ ತಿನ್ನುತ್ತಿದ್ದೆ. ಹೀಗಾಗಿ ಮನೆ ಊಟ ಬೇಕು ಎಂದಿದ್ದಾರೆ. ದರ್ಶನ್ ಬಂಧನವಾಗೋವರೆಗೂ ವ್ಯಾಯಾಮ ಮಾಡಿಕೊಂಡಿದ್ದರು, ಈಗ ಬಂಧಿಯಾಗಿದ್ದಾರೆ. ಜೈಲಿನಲ್ಲಿದ್ದಾಗಲೂ ಎಲ್ಲಾ ಸೌಲಭ್ಯಗಳು ಬೇಕೆಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಕೆಲವು ಸಮಯದಲ್ಲಿ ಮಾತ್ರ ಮನೆಯ ಊಟ ನೀಡಲು ಅವಕಾಶ ಇದೆ. ನಿಮಗೆ ಬೆನ್ನು ನೋವು ಇದ್ದರೆ, ಜ್ವರ ಇದ್ದರೆ ಚಿಕಿತ್ಸೆ ಕೊಡಿಸಿ. ಜೈಲಿನಲ್ಲಿ ಆಸ್ಪತ್ರೆಯಲ್ಲಿ ಇದೆ ಚಿಕಿತ್ಸೆ ಕೊಡಿಸಿ. ದಿನ 5 ಸಾವಿರ ಜನ ಅದೇ ಜೈಲಿನಲ್ಲಿ ಊಟ ಮಾಡುತ್ತಾರೆ. ಅವರ ಪರಿಸ್ಥಿತಿಯೂ ನೋಡಬೇಕಲ್ಲವೇ. ಅವರ‍್ಯಾರಿಗೂ ವಾಂತಿ-ಭೇದಿ ಆಗುತ್ತಿಲ್ಲ ಎಂದು ಹೇಳಿದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಜುಲೈ 25ಕ್ಕೆ ಆದೇಶವನ್ನು ಕಾಯ್ದಿರಿಸಿದರು.

Continue Reading

ಕರ್ನಾಟಕ

Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನವಾಗಿರುವ ದರ್ಶನ್ ಮತ್ತು ಗ್ಯಾಂಗ್‌ಗೆ ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ಮನೆ ಊಟ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನಗರದ 24ನೇ ಎಸಿಎಂಎಂ ಕೋರ್ಟ್, ಆದೇಶವನ್ನು ಜುಲೈ 25ಕ್ಕೆ ಕಾಯ್ದಿರಿಸಿದೆ. ಇದರಿಂದ ಇನ್ನೂ ಮೂರು ದಿನಗಳ ಕಾಲ ನಟ ದರ್ಶನ್‌ಗೆ (Actor Darshan) ಜೈಲೂಟವೇ ಗತಿಯಾಗಿದೆ.

ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.

ದರ್ಶನ್ ಒಬ್ಬ ಸೆಲೆಬ್ರಿಟಿ ಅಗಿರುವುದರಿಂದ ಪ್ರಚಾರ ಸಿಗುತ್ತದೆ. ಆಗಾಗಿಯೇ ಜೈಲು ಅಧಿಕಾರಿಗಳು ಮನೆ ಊಟಕ್ಕೆ ಅವಕಾಶ ನೀಡುತ್ತಿಲ್ಲ. ಆರೋಪ ಸಾಬೀತಾಗುವವರೆಗೂ ಮುಗ್ಧನೆಂದು ಪರಿಗಣಿಸಿ ಮನೆ ಊಟ, ಹಾಸಿಗೆ ಒದಗಿಸಬೇಕೆಂದು ಮನವಿ ಮಾಡಿ ವಾದ ಮುಕ್ತಾಯಗೊಳಿಸಿದರು.

ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ಆಗಲ್ಲ

ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಆರಂಭಿಸಿ, ಜೈಲು ಊಟ ಜೀರ್ಣವಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಮೆಡಿಕಲ್ ರಿಪೋರ್ಟ್ ಕೋರ್ಟ್‌ಗೆ ಸಲ್ಲಿಸಿದ್ದೇವೆ. ನ್ಯಾಯಾಂಗ ಬಂಧನಕ್ಕೆ ಕಳುಹಿಸುವಾಗ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಅವರಿಗೆ ಆರ್ಥೋಪೆಡಿಕ್ ಸಮಸ್ಯೆ ಇದೆ. ಅದಕ್ಕೆ ಮೊದಲು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದನ್ನ ಮುಂದುವರಿಸಲು ಸೂಚನೆ ನೀಡಿದ್ದರು. ಈಗ ಡಯಟ್ ಪುಡ್ ಕೇಳಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಜೈಲು ಮ್ಯಾನ್ಯುವಲ್ ಪ್ರಕಾರ ಏನೇನು ನೀಡಬೇಕೋ ಅದನ್ನು ನೀಡುತ್ತಿದ್ದೇವೆ. ಜೈಲು ಕೈಪಿಡಿಯಲ್ಲಿ ಮನೆ ಊಟ ಎಂಬ ಪದವೇ ಇಲ್ಲ. ಹುಷಾರಿಲ್ಲದ ವೇಳೆ ಎಕ್ಟ್ರಾ ಡಯಟ್ 30 ದಿನ ನೀಡಬಹುದು. ವಾರದಲ್ಲಿ ಒಂದು ದಿನ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡಬಹುದು. ಜ್ವರ ಇದ್ದಾಗ ಬಿಸಿ ನೀರು ನೀಡುತ್ತಾರೆ. ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ನಿಯಮದಲ್ಲಿ ಅವಕಾಶ ಇಲ್ಲ ಎಂದು ತಿಳಿಸಿದರು.

ಸದ್ಯ ದರ್ಶನ್ ಮೆಡಿಕಲ್ ರಿಪೋರ್ಟ್‌ನಲ್ಲಿ ಬೆಡ್ ರೆಸ್ಟ್ ಬೇಕು ಎಂದಿದೆ. ಜೈಲು ವೈದ್ಯಾಧಿಕಾರಿಗಳು ಅಗತ್ಯವಿದ್ದರೆ ವಿಶೇಷ ಆಹಾರವನ್ನು ನೀಡಬಹುದು. ಜೈಲು ನಿಯಮ 728 ರಲ್ಲಿ ಬಟ್ಟೆ, ಹಾಸಿಗೆ ನೀಡುವ ನಿಯಮವಿದೆ. ಇದು ಕೊಲೆ ಆರೋಪಿಯನ್ನು ಹೊರತು ಪಡಿಸಿ ಬೇರೆ ಕೈದಿಗಳಿಗೆ ಅನ್ವಯವಾಗುತ್ತದೆ. ದರ್ಶನ್ ನಾನು ನಿತ್ಯ ಜಿಮ್‌ನಲ್ಲಿ ಕಸರತ್ತು ಮಾಡುತ್ತಿದ್ದೆ. ಹೀಗಾಗಿ ಜೈಲಿನಲ್ಲಿ ನೀಡುವ ಊಟದ ಜೊತೆಗೆ ಎಕ್ಟ್ರಾ ಪ್ರೋಟಿನ್ ನೀಡಬೇಕೆಂದು ಮಾನವಿ ಮಾಡಿದ್ದಾರೆ. ಪ್ರತಿ ಭಾರಿ ನಾನು ಮನೆಯಲ್ಲಿ ವ್ಯಾಯಾಮ ಮಾಡ್ತಿದ್ದೆ. ಪ್ರೋಟಿನ್ ಆಹಾರ ತಿನ್ನುತ್ತಿದ್ದೆ. ಹೀಗಾಗಿ ಮನೆ ಊಟ ಬೇಕು ಎಂದಿದ್ದಾರೆ. ದರ್ಶನ್ ಬಂಧನವಾಗೋವರೆಗೂ ವ್ಯಾಯಾಮ ಮಾಡಿಕೊಂಡಿದ್ದರು, ಈಗ ಬಂಧಿಯಾಗಿದ್ದಾರೆ. ಜೈಲಿನಲ್ಲಿದ್ದಾಗಲೂ ಎಲ್ಲಾ ಸೌಲಭ್ಯಗಳು ಬೇಕೆಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಕೆಲವು ಸಮಯದಲ್ಲಿ ಮಾತ್ರ ಮನೆಯ ಊಟ ನೀಡಲು ಅವಕಾಶ ಇದೆ. ನಿಮಗೆ ಬೆನ್ನು ನೋವು ಇದ್ದರೆ, ಜ್ವರ ಇದ್ದರೆ ಚಿಕಿತ್ಸೆ ಕೊಡಿಸಿ. ಜೈಲಿನಲ್ಲಿ ಆಸ್ಪತ್ರೆಯಲ್ಲಿ ಇದೆ ಚಿಕಿತ್ಸೆ ಕೊಡಿಸಿ. ದಿನ 5 ಸಾವಿರ ಜನ ಅದೇ ಜೈಲಿನಲ್ಲಿ ಊಟ ಮಾಡುತ್ತಾರೆ. ಅವರ ಪರಿಸ್ಥಿತಿಯೂ ನೋಡಬೇಕಲ್ಲವೇ. ಅವರ‍್ಯಾರಿಗೂ ವಾಂತಿ-ಭೇದಿ ಆಗುತ್ತಿಲ್ಲ ಎಂದು ಹೇಳಿದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಜುಲೈ 25ಕ್ಕೆ ಆದೇಶವನ್ನು ಕಾಯ್ದಿರಿಸಿದರು.

Continue Reading

ಬೆಂಗಳೂರು

Rowdy Reels : 500 ರೂ. ಕೊಟ್ಟರೆ ರೌಡಿಗಳ ರೀಲ್ಸ್‌ ಅಪ್ಲೋಡ್‌; ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ಪೊಲೀಸರು

Rowdy Reels : ಸೋಶಿಯಲ್‌ ಮೀಡಿಯಾದಲ್ಲಿ ರೌಡಿಗಳ ರೀಲ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಫ್ಯಾನ್‌ ಪೇಜ್ ಅಡ್ಮಿನ್‌ಗಳು ಬಹುಪಾಲು ಅಪ್ರಾಪ್ತ ಬಾಲಕರು ಎಂದು ತಿಳಿದು ಬಂದಿದೆ. ಈಗಾಗಲೇ ರೌಡಿಗಳ ಅಕೌಂಟ್‌ ಡಿಲೀಟ್‌ ಮಾಡಲಾಗಿದೆ.

VISTARANEWS.COM


on

By

Rowdy reels
Koo

ಬೆಂಗಳೂರು: ಈ ಹಿಂದೆ ದುಷ್ಕೃತ್ಯ ಮಾಡುವವರನ್ನು ಸಮಾಜ ಅಸ್ಪೃಶ್ಯರಂತೆ ನೋಡುತ್ತಿತ್ತು. ಆದರೆ ಇತ್ತೀಚೆಗೆ ಆ್ಯಂಟಿ ಸೋಷಿಯಲ್ ಎಲಿಮೆಂಟ್ಸ್‌ಗಳಿಗೆ ಫ್ಯಾನ್ ಬೇಸ್‌ಗಳು ಹುಟ್ಟಿಕೊಂಡಿದೆ. ಸಾಮಾಜಿಕ ಜಾಲತಾಣಗಳನ್ನು ತೆರೆದರೆ ಸಾಕು ರೌಡಿಗಳು (Rowdy Reels) ಮಚ್ಚು ಹಿಡಿದ ವಿಡಿಯೊಗಳು, ಹುಡುಗರ ಗ್ಯಾಂಗ್ ಕಟ್ಟಿಕೊಂಡು ಬರುವುದು, ಯಾರದ್ದೋ ಡೈಲಾಗ್‌ ಬಳಸಿ ರೌಡಿ ಎಲಿಮೆಂಟ್‌ಗೆ ಕಂಪೇರ್ ಮಾಡಿ ರೀಲ್ಸ್ ಮಾಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇವೆಲ್ಲಾವನ್ನೂ ಗಮನಿಸಿದ್ದ ಸಿಸಿಬಿ ಪೊಲೀಸರು ಅಂತಹ ಕಿರಾತಕರಿಗೆ ಕಡಿವಾಣ ಹಾಕಿದ್ದಾರೆ.

ಸಿಸಿಬಿಯ ಆರ್ಗನೈಝ್ ಕ್ರೈಂ ವಿಂಗ್‌ನ ಕಾರ್ಯಾಚರಣೆ ಇದು. ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್‌ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್‌ ಮಾಡುವವರಿಗೆ ಸಿಗುತ್ತಿತ್ತು. ಇದರಿಂದ ಸಹಜವಾಗಿಯೇ ಪೊಲೀಸರಿಗೂ ಅನುಮಾನ ಬಂದಿತ್ತು.

ಇದನ್ನೂ ಓದಿ: Accident News : ಭಾರಿ ಮಳೆಗೆ ಉರುಳಿ ಬಿದ್ದ ಮರ; ಬೈಕ್‌ನಲ್ಲಿ ತೆರಳುತ್ತಿದ್ದ ಹೆಸ್ಕಾಂ ನೌಕರರ ದುರ್ಮರಣ

ರೌಡಿಗಳಾದ ಸೈಲೆಂಟ್ ಸುನೀಲ , ವಿಲ್ಸನ್ ಗಾರ್ಡನ್ ನಾಗ , ಕಾಡುಬೀಸನಹಳ್ಳಿ ರೋಹಿತ್, ‌ಕುಣಿಗಲ್ ಗಿರಿ ಇಂತಹ ನಟೋರಿಯಸ್ ರೌಡಿಗಳ ರೀಲ್ಸ್‌ಗಳೇ ಹೆಚ್ಚಾಗಿವೆ. ಅಷ್ಟಲ್ಲದೆ ಆಯಾ ಏರಿಯಾದ ಪುಡಿ ರೌಡಿಗಳೂ ಕೂಡ ತಮ್ಮ ಹವಾ ಮೇಂಟೇನ್ ಮಾಡುವ ಸಲುವಾಗಿ ರೀಲ್ಸ್ ಮೊರೆ ಹೋಗುತ್ತಿದ್ದರು.

ಕೆಲವರು ರೌಡಿಗಳ ಶಿಷ್ಯಂದರು ಬಾಸ್‌ ಎಂದು ರೀಲ್ಸ್‌ ಮಾಡಿದರೆ, ಉಳಿದವರು ಕೆಲಸವಿಲ್ಲದ ಕೆಲ ಹುಡುಗರಿಗೆ 500 ರೂ. ಕೊಟ್ಟು ರೀಲ್ಸ್ ಮಾಡಿ ಅಪ್ಲೋಡ್ ಮಾಡುವ ಕೆಲಸಗಳನ್ನು ನೀಡುತ್ತಿದ್ದರು. ಇನ್ನು ಏರಿಯಾದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಇರುವಿಕೆಯನ್ನು ತೋರಿಸಿಕೊಳ್ಳಲು ಹಾಗೂ ಫ್ಯಾನ್ ಫಾಲೋವರ್ಸ್‌ಗಳನ್ನು ಹೆಚ್ಚಿಸಲು ಈ ರೀತಿಯ ಕೆಲಸಗಳನ್ನು ರೌಡಿಗಳ ಶಿಷ್ಯಂದಿರು ಮಾಡುತ್ತಿದ್ದರು.

ಇನ್ನು ಎಲ್ಲೋ ಕೂತ ಮುಖ್ಯ ರೌಡಿಯೇ ಈ ರೀತಿಯ ಕೃತ್ಯವನ್ನು ಎಸಗಲು ಪ್ರೇರೆಪಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಬ್ಯಾನರ್‌ಗಳನ್ನು ಕಟ್ಟಿ ಏರಿಯಾದಲ್ಲಿ ಹವಾ ತೋರಿಸುತ್ತಿದ್ದರು. ಸದ್ಯ ಸೋಷಿಯಲ್ ಮೀಡಿಯಾ ಮೂಲಕ ತಮ್ಮದೇ ಆದ ಕುಖ್ಯಾತಿಯನ್ನು ಗಳಿಸುತ್ತಿದ್ದಾರೆ. ಇನ್ನು ಈ ಸಂಬಂಧ ಅಪ್ರಾಪ್ತರ ಮನೆಯವರನ್ನು ಕರೆಸಿ ವಾರ್ನಿಂಗ್ ಮಾಡಲಾಗಿದೆ. ಸುಮಾರು 60ಕ್ಕೂ ಹೆಚ್ಚು ರೌಡಿಗಳ ಪೇಜ್‌ ಅಕೌಂಟ್‌ಗಳನ್ನು ಬಂದ್ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಜಾಮೀನು ಮಂಜೂರು

Suraj Revanna Case: ಹೊಳೆನರಸೀಪುರ ಟೌನ್‌ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಹೊಳೆನರಸೀಪುರ ಟೌನ್‌ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು‌ ಮಂಜೂರು ಮಾಡಿದೆ.

ಸದ್ಯ ಒಂದು ಪ್ರಕರಣದಲ್ಲಿ ಜಾಮೀನು ಮಂಜೂರು ಆಗಿದ್ದು, ಇನ್ನೊಂದು ಪ್ರಕರಣದ ಆದೇಶವನ್ನು ಕೋರ್ಟ್‌ ಕಾಯ್ದಿರಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕಣದಲ್ಲಿ ಸೂರಜ್‌ಗೆ ಷರತ್ತು ಬದ್ಧ ಜಾಮೀನನ್ನು ನ್ಯಾಯಾಲಯ ನೀಡಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 3ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿತ್ತು. ಸಿಐಡಿ ಕಸ್ಟಡಿ ಮುಕ್ತಾಯಗೊಂಡ ನಂತರ 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಲಾಗಿತ್ತು. ಇದರಿಂದ ಸೂರಜ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದರು. ಇದೀಗ ಜಾಮೀನು ಮಂಜೂರು ಆಗಿದ್ದರೂ ಸೂರಜ್‌ಗೆ ಬಿಡುಗಡೆ ಭಾಗ್ಯವಿಲ್ಲ. ಯಾಕೆಂದರೆ ಮತ್ತೊಂದು ಪ್ರಕರಣದಲ್ಲಿ ತೀರ್ಪು ಕಾಯ್ದಿರಿಸಿದ ಹಿನ್ನೆಲೆಯಲ್ಲಿ ಸದ್ಯಕ್ಕೆ ಜೈಲೇ ಗತಿಯಾಗಿದೆ.

ಜೂನ್‌ 23 ರಂದು ಬಂಧನವಾಗಿದ್ದ ಸೂರಜ್‌ ರೇವಣ್ಣ ಪರಪ್ಪನ ಅಗ್ರಹಾರ ಸೇರಿದ್ದರು. ಪ್ರಕರಣ ನಡೆದು 29 ದಿನಗಳ ನಂತರ ಈಗ ಸೂರಜ್‌ಗೆ ಜಾಮೀನು ಸಿಕ್ಕಿದೆ. ಸೂರಜ್‌ ವಿರುದ್ಧ ಇಬ್ಬರು ದೂರು ಸಲ್ಲಿಸಿದ್ದರು. ಇದರಲ್ಲಿ ಒಂದು ಕೇಸ್‌ನಲ್ಲಿ ಮಾತ್ರ ಜಾಮೀನು ಮಂಜೂರಾಗಿದೆ.

ಇದನ್ನೂ ಓದಿ | Accident News : ಭಾರಿ ಮಳೆಗೆ ಉರುಳಿ ಬಿದ್ದ ಮರ; ಬೈಕ್‌ನಲ್ಲಿ ತೆರಳುತ್ತಿದ್ದ ಹೆಸ್ಕಾಂ ನೌಕರರ ದುರ್ಮರಣ

ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದವರಿಗೆ ಬ್ರೈನ್‌ ವಾಶ್‌; ಮತಾಂತರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್‌

Forced Conversion

ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರ (Forced Conversion) ಆಗುವಂತೆ ಒತ್ತಾಯಿಸಲಾಗಿದೆ. ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಳ್ಳಾರಿಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಕಳೆದ ಜುಲೈ 18 ರಂದು ಘಟನೆ ನಡೆದಿದೆ.

ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ (44) ಹಾಗೂ ಸಾಯಿ ಬಾಬಾ (24) ಎಂಬುವವರು ಮತಾಂತರಕ್ಕೆ ಯತ್ನಿಸಿದ್ದರು ಎಂಬ ಆರೋಪವಿದೆ.

ಇದನ್ನೂ ಓದಿ: Fraud Case : ಮಸಾಜ್‌ ಥೆರಪಿಸ್ಟ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿ ಲಕ್ಷ ಲೂಟಿ ಮಾಡಿದ ನಕಲಿ ಪೊಲೀಸ್‌

ಕೇಸರಿ ಧ್ವಜ ಹಿಡಿದುಕೊಂಡು ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದ ಭಕ್ತರನ್ನು ನಿಲ್ಲಿಸಿ, ಕುರಾನ್ ಹಾಗೂ ಮುಸ್ಲಿಂ ಧರ್ಮ ಶ್ರೇಷ್ಠ ಎನ್ನುವಂತೆ ಹೇಳಿ ಮತಾಂತರಕ್ಕೆ ಯತ್ನಿಸಿದ್ದಾರೆ. ಸದ್ಯ ಗಾದಿಲಿಂಗಪ್ಪ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತಾಂತರ ಮಾಡಲು ಪ್ರಯತ್ನ ಮಾಡಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ತೆಕ್ಕಲಕೋಟೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ತೆಕ್ಕಲಕೋಟೆ ಠಾಣೆಯಲ್ಲಿ ವಿಡಿಯೋ ದಾಖಲೆ ಆಧಾರದ ಮೇಲೆ ಮತಾಂತರ ಯತ್ನದ ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ. ಆದರೆ ಯಾತ್ರಾತ್ರಿಗಳು ಯಾರೆಂದು ತಿಳಿದು ಬಂದಿಲ್ಲ.

Continue Reading
Advertisement
Contact Lens Awareness
ಫ್ಯಾಷನ್12 seconds ago

Contact Lens Awareness: ಶೋಕಿಗಾಗಿ ಕಾಂಟ್ಯಾಕ್ಟ್‌ ಲೆನ್ಸ್ ಧರಿಸುವವರೇ ಎಚ್ಚರ! ಈ 5 ಸಂಗತಿ ಗಮನದಲ್ಲಿರಲಿ

Viral News
Latest1 min ago

Viral News: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

Suraj Revanna Case
ಕರ್ನಾಟಕ24 mins ago

Suraj Revanna Case: ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಕೇಸ್‌ನಲ್ಲೂ ಜಾಮೀನು, ನಾಳೆ ರಿಲೀಸ್‌!

Gautam Gambhir
ಕ್ರೀಡೆ34 mins ago

Gautam Gambhir : ನನ್ನ ಮತ್ತು ಕೊಹ್ಲಿಯ ನಡುವೆ ಗೌರವಯುತ ಸಂಬಂಧವಿದೆ; ಗೌತಮ್ ಗಂಭೀರ್​

Nipah Virus
ಆರೋಗ್ಯ35 mins ago

Nipah Virus: ಡೇಂಜರಸ್‌ ನಿಫಾ ವೈರಸ್‌; ಇದರ ಲಕ್ಷಣಗಳೇನು? ನಮಗೆ ಅಪಾಯ ಇದೆಯೆ?

Nitish Kumar
ದೇಶ36 mins ago

Nitish Kumar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಕೊಡಲ್ಲ ಎಂದ ಮೋದಿ ಸರ್ಕಾರ; ನಿತೀಶ್‌ ಕುಮಾರ್‌ ಬಂಡಾಯ ನಿಶ್ಚಿತ?

Shoe Theft
ಕ್ರೈಂ40 mins ago

Shoe Theft: ಬೆಂಗಳೂರಿನಲ್ಲಿ 10,000 ಶೂ, ಚಪ್ಪಲಿ ಕದ್ದ ಖತರ್‌ನಾಕ್‌ ಕಳ್ಳರ ಬಂಧನ!

Actor Darshan
ಕರ್ನಾಟಕ48 mins ago

Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Beautician and Basic Fashion Designing Training Programme inauguration in Yallapura
ಉತ್ತರ ಕನ್ನಡ51 mins ago

Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ

Rowdy reels
ಬೆಂಗಳೂರು1 hour ago

Rowdy Reels : 500 ರೂ. ಕೊಟ್ಟರೆ ರೌಡಿಗಳ ರೀಲ್ಸ್‌ ಅಪ್ಲೋಡ್‌; ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ಪೊಲೀಸರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌