Hamsajyothi Trust: ನಾಳೆ ಹಂಸಜ್ಯೋತಿಯ 48ನೇ ವಾರ್ಷಿಕೋತ್ಸವ, ಹಂಸ ಸಮ್ಮಾನ್‌ ಪ್ರಶಸ್ತಿ ಪ್ರದಾನ - Vistara News

ನೋಟಿಸ್ ಬೋರ್ಡ

Hamsajyothi Trust: ನಾಳೆ ಹಂಸಜ್ಯೋತಿಯ 48ನೇ ವಾರ್ಷಿಕೋತ್ಸವ, ಹಂಸ ಸಮ್ಮಾನ್‌ ಪ್ರಶಸ್ತಿ ಪ್ರದಾನ

Hamsajyothi Trust: ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾ ಗ್ರಾಮದಲ್ಲಿ ಸೆ.27ರಂದು ನಡೆಯಲಿರುವ ಹಂಸಜ್ಯೋತಿ ಟ್ರಸ್ಟ್‌ನ 48ನೇ ವಾರ್ಷಿಕೋತ್ಸವದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ʼಕೃಷ್ಣಂ ಕಲಯ ಸಖಿʼ ಹಂಸ ಗಾನ, ನಾಟ್ಯ ಸಂಭ್ರಮ ಹಮ್ಮಿಕೊಳ್ಳಲಾಗಿದೆ.

VISTARANEWS.COM


on

Hamsajyothi Trust
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಡಿನ ಸಾಂಸ್ಕೃತಿಕ ಚಳವಳಿಯ ಸಂದರ್ಭದಲ್ಲಿ ಪ್ರಮುಖ ಸಂಸ್ಥೆಯಾದ ಹಂಸಜ್ಯೋತಿ ಟ್ರಸ್ಟ್‌ನ (Hamsajyothi Trust) 48ನೇ ವಾರ್ಷಿಕೋತ್ಸವ, 12 ಸಾಧಕೋತ್ತಮರಿಗೆ ʼಹಂಸ ಸಮ್ಮಾನ್‌ ಪ್ರಶಸ್ತಿ-2023ʼ ಪ್ರದಾನ ಹಾಗೂ ʼಕೃಷ್ಣಂ ಕಲಯ ಸಖಿʼ ಹಂಸ ಗಾನ, ನಾಟ್ಯ ಸಂಭ್ರಮವನ್ನು ಸೆ.27ರಂದು ಸಂಜೆ 4.30ಕ್ಕೆ ನಗರದ ಮಲ್ಲತ್ತಹಳ್ಳಿಯ ಕಲಾ ಗ್ರಾಮದ ಸಾಂಸ್ಕೃತಿಕ ಸಮುಚ್ಛಯ ಭವನದಲ್ಲಿ ಆಯೋಜಿಸಲಾಗಿದೆ.

ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ.ವೂಡೇ ಪಿ. ಕೃಷ್ಣ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ, ಬೆಂ. ನಗರ ಜಿಲ್ಲೆ ಅಬಕಾರಿ ಇಲಾಖೆ ಉಪ ಆಯುಕ್ತ ಡಾ.ಬಿ.ಆರ್.ಹಿರೇಮಠ ಅಧ್ಯಕ್ಷತೆ ವಹಿಸುವ ಕಾರ್ಯಕ್ರಮದಲ್ಲಿ ನಾಡಿನ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ, ಧಾರ್ಮಿಕ, ಸೇವಾ ವಲಯದ 12 ಸಾಧಕರಿಗೆ ʼಹಂಸ ಸಮ್ಮಾನ್‌ ಪ್ರಶಸ್ತಿ-2023 ಪ್ರದಾನ ಮಾಡಲಾಗುತ್ತದೆ.

ʼಹಂಸ ಸಮ್ಮಾನ್‌ʼ ಪ್ರಶಸ್ತಿ-2023ಕ್ಕೆ ಆಯ್ಕೆಯಾದವರು

1. ಟಿ.ವಿ.ವಿಶ್ವನಾಥ ಆಯ್ಯ‌ರ್‌, ವೇದ, ಜೋತಿಷ್ಯ, ವಾಸ್ತು ಶಾಸ್ತ್ರ ಪರಿಣತರು, ಬೆಂಗಳೂರು
2. ಡಾ. ಮೀರಾ ಕುಮಾರ್, ಮೈಸೂರು ಸಾಂಪ್ರದಾಯಿಕ ಶೈಲಿಯ ಖ್ಯಾತ ಚಿತ್ರಕಲಾವಿರು, ಬೆಂಗಳೂರು
3. ಎಸ್.ವೀರಭದ್ರಯ್ಯ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರ ಅಭಿವೃದ್ಧಿಯ ಹರಿಕಾರ, ಬೆಂಗಳೂರು
4. ಎಸ್‌. ಗೀತಾ ಶಂಕರ್, ಭಾರತೀಯ ಸಾರ್ವಜನಿಕ ಸಂಪರ್ಕ ಪರಿಷತ್, ರಾಷ್ಟ್ರೀಯ ಅಧ್ಯಕ್ಷರು, ಬೆಂಗಳೂರು
5. ಆರ್.ಶ್ರೀನಿವಾಸ್, ವಿಕ್ಟೋರಿಯಾ ಆಸತ್ರೆಯ ಸಹಾಯಕ ಆಡಳಿತಾಧಿಕಾರಿ
6. ಡಾ.ಆರ್.ಸರ್ವಮಂಗಳ, ಬೆಂಗಳೂರು ವಿವಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಡೀನ್
7. ಬಿ.ಕೆ.ಮುರಳೀಧರ, ವಾಸ್ತು ಶಿಲ್ಪ ತಜ್ಞ, ಬೆಂಗಳೂರು
8. ಬಿ.ಕೆ.ರವಿಶಂಕರ್, ಶಾಸ್ತ್ರೀಯ ಗಾಯಕರು, ರಂಗ ಸಜ್ಜಿಕೆ, ಬೆಳಕು ಮತ್ತು ಧ್ವನಿ ತಜ್ಞ, ಬೆಂಗಳೂರು
9. ಜಯರಾಂಶೆಟ್ಟಿ, ಕ್ರೀಡಾ ಪಟು, ಕ್ರೀಡಾ ತರಬೇತುದಾರರು
10. ವಿದುಷಿ ರೂಪಶ್ರೀ ಮಧುಸೂಧನ, ನೃತ್ಯ ಕಲಾವಿದೆ, ನೃತ್ಯ ತರಬೇತುದಾರರು, ಬೆಂಗಳೂರು
11. ಡಾ.ಗುರುರಾಜ ಪೋಶೆಟ್ಟಿಹಳ್ಳಿ, ಸಂಸ್ಕೃತಿ ಚಿಂತಕ, ಅಂಕಣಕಾರ, ಪ್ರಣವ ಮೀಡಿಯಾಹೌಸ್ ಪ್ರಕಾಶನ ನಿರ್ದೇಶಕ
12. ಸ್ನೇಹ ಕಪ್ಪಣ್ಣ, ವಚನ, ಜಾನಪದ ನೃತ್ಯ ಸಂಯೋಜಕಿ, ಬೆಂಗಳೂರು

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ರಂಗ ಸಂಘಟಕ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶ್ರೀನಿವಾಸ ಜಿ. ಕಪ್ಪಣ್ಣ, ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ನಿರ್ದೇಶಕ ಜಿ.ಎಂ ಶಿರಹಟ್ಟಿ, ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ರಾಮಚಂದ್ರ ಹಾಗೂ ಎನ್.ಟಿ.ಪಿ.ಸಿ ಮುಖ್ಯ ಸಲಹೆಗಾರ ಎಂ.ಬಿ.ಜಯರಾಮ್‌ ಭಾಗವಹಿಸಿಲಿದ್ದಾರೆ.

ಕಳೆದ 48 ವರ್ಷಗಳಿಂದ ಹಲವಾರು ವೈಶಿಷ್ಟಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವ ಹಂಸಜ್ಯೋತಿಯು ಈ ಬಾರಿ ‘ಕೃಷ್ಣಂ ಕಲಯ ಸಖಿ’ ಎಂಬ ಶೀರ್ಷಿಕೆಯಡಿ ನಾಡಿನ ಸುಪ್ರಸಿದ್ಧ ಕಲಾವಿದರಾದ ವಿಜಯ ಹಾವನೂರು , ರವೀಂದ್ರ ಸೊರಗಾವಿ ಗಣೇಶ ದೇಸಾಯಿ, ದಿವಾಕರ ಕಶ್ಯಪ್, ಹರೀಶ ನರಸಿಂಹ, ಗುರುರಾಜ ಹೊಳೆನರಸೀಪುರ, ಮಧುರ ರವಿಕುಮಾರ್ , ಶ್ರೀದೇವಿ ಗರ್ತಿಕೆರೆ , ಚಾಂದಿನಿ ಗರ್ತಿಕೆರೆ ಮತ್ತು ಎಚ್.ಕೆ .ಅನಘ ಅವರು ಶ್ರೀಕೃಷ್ಣ ಸ್ಮರಣೆಯ ವೈವಿಧ್ಯಮಯ ಗಾಯನವನ್ನು ಪ್ರಸ್ತುತಪಡಿಸಲಿದ್ದಾರೆ.

ಡಾ.ಮಾಲಿನಿ ರವಿಶಂಕರ್ ನಿರ್ದೇಶನದ ಲಾಸ್ಯ ವರ್ಧನ ಟ್ರಸ್ಟ್‌ ನೃತ್ಯ ಶಾಲೆಯ ಕಲಾವಿದರು ಮತ್ತು ರೂಪಶ್ರೀ ಮಧುಸೂಧನ್ ನಿರ್ದೇಶನದ ನೃತ್ಯ ಗಂಗಾ ಪ್ರದರ್ಶನ ಕಲಾಕೇಂದ್ರದಿಂದ ಶ್ರೀಕೃಷ್ಣ ಸ್ಮರಣೆಯ ಶಾಸ್ತ್ರೀಯ ನೃತ್ಯ ನಡೆಯಲಿದೆ ಎಂದು ಹಂಸಜ್ಯೋತಿ ಟ್ರಸ್ಟ್‌ನ ಸಂಸ್ಥಾಪಕ ವ್ಯವಸ್ಥಾಪಕ ಟ್ರಸ್ಟಿ ಎಂ.ಮುರಳೀಧರ ಮತ್ತು ಹಿರಿಯ ಟ್ರಸ್ಟಿ ಎಂ.ಆರ್.ನಾಗರಾಜ ನಾಯ್ಡು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

SSLC 2024 Exam 2: ಎಸ್ಎಸ್ಎಲ್‌ಸಿ ಪರೀಕ್ಷೆ-2, ಜೂನ್‌ 14ರಿಂದ 22 ರವರೆಗೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಸುತ್ತೋಲೆ ಬಿಡುಗಡೆ ಮಾಡಿದೆ.

VISTARANEWS.COM


on

SSLC 2024 Exam 2
Koo

ಬೆಂಗಳೂರು: 2024ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-2ರ (SSLC 2024 Exam 2) ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದ್ದು, ಜೂನ್‌ 14 ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್‌.ಮಂಜುಶ್ರೀ ಸುತ್ತೋಲೆ ಹೊರಡಿಸಿದ್ದಾರೆ.

2024ರ ಎಸ್ಎಸ್ಎಲ್‌ಸಿ ಪರೀಕ್ಷೆ-2 ಅನ್ನು ಈ ಹಿಂದೆ ಜೂನ್‌ 7ರಿಂದ 14ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಸರ್ಕಾರದ ಸೂಚನೆ ಅನ್ವಯ ಪರೀಕ್ಷೆ-2ನ್ನು ಮುಂದೂಡಿ, ಜೂನ್‌ 14ರಿಂದ 22 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್ಎಸ್ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾ ಉಪನಿರ್ದೇಶಕರು(ಆಡಳಿತ) ಸೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ

  • 14-06-2024 ಶುಕ್ರವಾರ: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್‌ಸಿಇಆರ್‌ಟಿ), ಸಂಸ್ಕೃತ.
  • 15-06-2024 ಶನಿವಾರ: ತೃತೀಯ ಭಾಷೆ – ಹಿಂದಿ (ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 18-06-2024 ಮಂಗಳವಾರ: ಕೋರ್ ಸಬ್ಜೆಕ್ಟ್‌ -ಗಣಿತ, ಸಮಾಜ ಶಾಸ್ತ್ರ
  • 19-06-2024 ಬುಧವಾರ: ಅರ್ಥ ಶಾಸ್ತ್ರ
  • 20-06-2024 ಗುರುವಾರ: ಕೋರ್ ಸಬ್ಜೆಕ್ಟ್- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.
  • 21-06-2024 ಶುಕ್ರವಾರ– ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ
  • 22-06-2024 ಶನಿವಾರ – ಕೋರ್ ಸಬ್ಜೆಕ್ಟ್- ಸಮಾಜ ವಿಜ್ಞಾನ

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC Exam 2024

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

Hebbal flyover: ಮೇ 14ರಿಂದ ಹೆಬ್ಬಾಳ ಫ್ಲೈ ಓವರ್‌ನ ಕೆ.ಆರ್. ಪುರಂ ಅಪ್ ರ‍್ಯಾಂಪ್ ಮುಚ್ಚುತ್ತಿರುವುದರಿಂದ ಕೆ.ಆರ್‌.ಪುರಂ., ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿರ್ಬಂಧಿಸಲಾಗಿದೆ.

VISTARANEWS.COM


on

Hebbal Flyover
Koo

ಬೆಂಗಳೂರು: ಬಿಡಿಎ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಹೆಬ್ಬಾಳ ಮೇಲ್ಸೇತುವೆಯ ಕೆ.ಆರ್.ಪುರಂ ಅಪ್ ರ‍್ಯಾಂಪ್ ಮುಚ್ಚಲಾಗಿದ್ದು, ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ವಾಹನಗಳಿಗೆ ಫ್ಲೈ ಓವರ್ (Hebbal flyover) ಮೇಲೆ ಸಂಚಾರ ನಿರ್ಬಂಧಿಸಲಾಗಿದೆ. ಏಪ್ರಿಲ್ 17ರಿಂದ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳಿಗೆ ನಿರ್ಬಂಧ ಇತ್ತು. ಈಗ ಎಲ್ಲಾ ರೀತಿಯ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಈ ಮಾರ್ಗದ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ.

ಹೆಬ್ಬಾಳ ಮೇಲ್ಸೇತುವೆಗೆ ಎರಡು ಹೊಸ ಟ್ರ್ಯಾಕ್‌ಗಳನ್ನು ಸೇರಿಸಲು ಬಿ.ಡಿ.ಎ ಕಾಮಗಾರಿ ಆರಂಭಿಸಿರುವುದರಿಂದ ಈಗಾಗಲೇ ಏ.17ರಿಂದ ಕೆ.ಆರ್.ಪುರ ಲೂಪ್ ಸೇರುವ ಟ್ರ್ಯಾಕ್‌ನಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಇದೀಗ ಮೇ 14ರಿಂದ ಕೆ.ಆರ್.ಪುರಂ ಕಡೆಯಿಂದ ಬರುವ ಲೂಪ್ ಹೆಬ್ಬಾಳ ಫ್ಲೈ ಓವರ್‌ನ ಮುಖ್ಯ ಟ್ರ್ಯಾಕ್‌ಗೆ ಸೇರಿಸುವ ಎರಡು ಲಿಂಕ್ ಸ್ಪ್ಯಾನ್‌ಗಳನ್ನು ತೆಗೆದುಹಾಕುತ್ತಿರುವುದರಿಂದ ರ‍್ಯಾಂಪ್ ಮತ್ತು ಮುಖ್ಯ ಟ್ರ್ಯಾಕ್‌ಗೆ ಸಂಪರ್ಕ ಕಡಿತವಾಗಲಿದೆ. ಹೀಗಾಗಿ ಯಾವುದೇ ರೀತಿಯ ವಾಹನ ಸಂಚಾರ ಸಾಧ್ಯವಿರದ ಹಿನ್ನೆಲೆಯಲ್ಲಿ, ಕಾಮಗಾರಿ ಮುಕ್ತಾಯವಾಗುವವರೆಗೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ವಿಭಾಗದಿಂದ ಈ ಕೆಳಕಂಡ ಮಾರ್ಪಾಡುಗಳನ್ನು ಮಾಡಲಾಗಿದೆ.

ಇದನ್ನೂ ಓದಿ | Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 14ರಿಂದ ಹೆಬ್ಬಾಳ ಫ್ಲೈ ಓವರ್‌ನ ಕೆ.ಆರ್. ಪುರಂ ಅಪ್ ರ‍್ಯಾಂಪ್ ಮುಚ್ಚುತ್ತಿರುವುದರಿಂದ ಕೆ.ಆರ್‌.ಪುರಂ., ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿರ್ಬಂಧಿಸಲಾಗಿದೆ.

ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

  1. ನಾಗವಾರ(ಔಟರ್‌ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇಖ್ರಿ ಸರ್ಕಲ್ ಮುಖಾಂತರ ಸಂಚರಿಸುವ ವಾಹನಗಳು ಹೆಬ್ಬಾಳ ಸರ್ಕಲ್‌ನಲ್ಲಿ ಫ್ಲೈ ಓವರ್ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೇಹಳ್ಳಿ ಜಂಕ್ಷನ್ ಬಳಿ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಫ್ಲೈ ಓವರ್‌ನ ರ‍್ಯಾಂಪ್ ಮುಖೇನ ನಗರದ ಕಡೆಗೆ ಚಲಿಸಬಹುದಾಗಿರುತ್ತದೆ.
  2. ಕೆ.ಆರ್. ಪುರಂ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ಈ ಕೆಳಕಂಡ ರಸ್ತೆಗಳ ಮೂಲಕ ನಗರ ಪ್ರವೇಶಿಸಬಹುದಾಗಿದೆ.
    ಐ.ಒ.ಸಿ. ಮುಕುಂದ ಥಿಯೇಟರ್ ರಸ್ತೆ,
    ಲಿಂಗರಾಜಪುರ ಮೇಲ್ಸೇತುವೆ ಮಾರ್ಗ,
    ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ
  3. ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನಗಳು ಜಿ.ಕೆ.ವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.
  4. ಕೆ.ಆ‌ರ್.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫ್ಲೈ ಓವರ್ ಕೆಳಗಡೆ ನೇರವಾಗಿ ಬಿ.ಇ.ಎಲ್. ಸರ್ಕಲ್ ತಲುಪಿ ಎಡತಿರುವು ಪಡೆದು ಸದಾಶಿವನಗರ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಐ.ಐ.ಎಸ್.ಸಿ. ಮುಖಾಂತರ ಚಲಿಸಬಹುದಾಗಿದೆ.
  5. ಕೆ.ಆ‌ರ್.ಪುರಂ, ಹೆಣ್ಣೂರು, ಎಚ್.ಆರ್.ಬಿ.ಆರ್. ಲೇಔಟ್, ಕೆ.ಜಿ.ಹಳ್ಳಿ, ಬಾಣಸವಾಡಿ ಕಡೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಂಚರಿಸುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯ ಮುಖಾಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬಹುದಾಗಿದೆ.

Continue Reading

ಬೆಂಗಳೂರು

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Award Ceremony: 2022ನೇ ಸಾಲಿನ ಅ. ನ. ಕೃ. ಪ್ರಶಸ್ತಿಗೆ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಹಾಗೂ 2023ನೇ ಸಾಲಿನ ಅ. ನ. ಕೃ. ಪ್ರಶಸ್ತಿಗೆ ಡಾ. ಬಿ. ಎಸ್. ಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

VISTARANEWS.COM


on

Award Ceremony
Koo

ಬೆಂಗಳೂರು: ಅ. ನ. ಕೃ. ಪ್ರತಿಷ್ಠಾನ ವತಿಯಿಂದ ಕಾದಂಬರಿ ಸಾರ್ವಭೌಮ ಅ. ನ. ಕೃ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ 19ರಂದು ಬೆಳಗ್ಗೆ 10ಗಂಟೆಗೆ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜಿನ ಎಚ್. ಎನ್. ಮಲ್ಟಿಮೀಡಿಯಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 2022ನೇ ಸಾಲಿನ ಅ. ನ. ಕೃ. ಪ್ರಶಸ್ತಿಯನ್ನು ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಹಾಗೂ 2023ನೇ ಸಾಲಿನ ಅ. ನ. ಕೃ. ಪ್ರಶಸ್ತಿಯನ್ನು ಡಾ. ಬಿ. ಎಸ್. ಸ್ವಾಮಿ ಅವರಿಗೆ ಪ್ರದಾನ (Award Ceremony) ಮಾಡಲಾಗುತ್ತದೆ.

ಪ್ರಶಸ್ತಿ ಪುರಸ್ಕೃತರಾದ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಅವರು ರಾಷ್ಟೋತ್ಥಾನ ಸಾಹಿತ್ಯದ ಗೌರವ ಪ್ರಧಾನ ಸಂಪಾದಕರಾಗಿದ್ದು, ಡಾ. ಬಿ. ಎಸ್. ಸ್ವಾಮಿ ಅವರು ಆಕಾಶವಾಣಿಯ ವಿಶ್ರಾಂತ ಕಾರ್ಯಕ್ರಮ ನಿರ್ವಾಹಕರಾಗಿದ್ದಾರೆ.

ಪ್ರಜಾವಾಣಿ ದಿನಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಹುಶ್ರುತ ವಿದ್ವಾಂಸರಾದ ಶತಾವಧಾನಿ ಡಾ. ಆರ್. ಗಣೇಶ್, ಲೇಖಕ, ಉಪನ್ಯಾಸಕ ಡಾ. ಬಂಡ್ಲಹಳ್ಳಿ ವಿಜಯಕುಮಾ‌ರ್ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಇದನ್ನೂ ಓದಿ | ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ಡಾ. ಕೆ.ಆರ್. ಸಂಧ್ಯಾರೆಡ್ಡಿ, ಶಾ.ಮಂ. ಕೃಷ್ಣರಾವ್, ಎಂ. ವೆಂಕಟೇಶ್ ಅವರು ಉಪಸ್ಥಿತರಿರಲಿದ್ದು, ಮಾಜಿ ಅಡ್ವೊಕೇಟ್ ಜನರಲ್ ಹಾಗೂ ನ್ಯಾಯವಾದಿ ಅಶೋಕ್ ಹಾರನಹಳ್ಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅ. ನ. ಕೃ. ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಗೌತಮ್ ಅ. ನ. ಕೃ, ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿರಲಿದ್ದಾರೆ.

2022ರ ಪ್ರಶಸ್ತಿ ಪುರಸ್ಕೃತರು: ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ

ಆರೂವರೆ ದಶಕಗಳ ಕಾಲ ಪತ್ರಿಕೋದ್ಯಮ, ಸಾಹಿತ್ಯ ಮತ್ತು ಸಮಾಜಕಾರ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಎಸ್. ಆರ್. ರಾಮಸ್ವಾಮಿ ಅವರು (ಜನನ: 29-10-1937) ಕಳೆದ 45 ವರ್ಷಗಳಿಂದ ‘ಉತ್ಥಾನ’ ಮಾಸಪತ್ರಿಕೆ ಮತ್ತು ‘ರಾಷ್ಟ್ರೋತ್ಥಾನ ಸಾಹಿತ್ಯ’ ಪ್ರಕಾಶನದ ಪ್ರಧಾನ ಸಂಪಾದಕರಾಗಿದ್ದಾರೆ.

ಸುಭಾಷ್‌ಚಂದ್ರ ಬೋಸ್ ಅವರ ಸಮಗ್ರ ಜೀವನಚರಿತ್ರೆ ‘ಕೋಲ್ಮಿಂಚು’ ಜಯಪ್ರಕಾಶ್ ನಾರಾಯಣ್ ವಲ್ಲಭಭಾಯಿ ಪಟೇಲ್, ಮೋಕ್ಷಗುಂಡಂ ವಿಶ್ವೇಶ್ವರಯ್ಯ, ಸ್ವಾಮಿ ವಿವೇಕಾನಂದ, ಭಗಿನಿ ನಿವೇದಿತಾ ಮೊದಲಾದ ಇಪ್ಪತ್ತಕ್ಕೂ ಹೆಚ್ಚು ಜೀವನಚರಿತ್ರೆಗಳೂ ಸೇರಿ ಸುಮಾರು 60 ಗ್ರಂಥಗಳನ್ನು ಬರೆದಿದ್ದಾರೆ. ‘ಭಾರತದಲ್ಲಿ ಸಮಾಜಕಾರ್ಯ’, ‘ಸ್ವಾತಂತ್ರ್ಯೋದಯದ ಮೈಲಿಗಲ್ಲುಗಳು’ ಮೊದಲಾದ ಹಲವಾರು ಪ್ರತಿಷ್ಠಿತ ಕೃತಿಗಳಿಗೆ ವಿಸ್ತತ ಸ್ವತಂತ್ರ ಅವಲೋಕನ ಪ್ರಬಂಧಗಳನ್ನು ಬರೆದು ಸಂಪಾದನ ಮಾಡಿದ್ದಾರೆ.

ಅಭ್ಯುದಯ ಅರ್ಥಶಾಸ್ತ್ರದಲ್ಲಿ ಆಳವಾದ ಪರಿಶ್ರಮ ಮಾಡಿರುವ ಇವರು ಜಾಗತೀಕರಣದ ಹಿನ್ನೆಲೆಯಲ್ಲಿ ಬರೆದ ‘ಆರ್ಥಿಕತೆಯ ಎರಡು ಧ್ರುವ’ ಅರ್ಥಶಾಸ್ತ್ರ ಕ್ಷೇತ್ರದ ಒಂದು ಉನ್ನತ ಕೃತಿಯೆಂದು ಪರಿಗಣಿತವಾಗಿದೆ. ಸ್ವಾತಂತ್ರ್ಯೋತ್ತರ ಭಾರತದ ಅರ್ಥಿಕ ಯೋಜನೆಗಳನ್ನು ತಲಸ್ಪರ್ಶಿಯಾಗಿ ವಿಶ್ಲೇಷಿಸಿರುವ ರಾಮಸ್ವಾಮಿಯವರ ‘ಶತಮಾನದ ತಿರುವಿನಲ್ಲಿ ಭಾರತ’ ಸಮಾಜವಿಜ್ಞಾನ ಕ್ಷೇತ್ರದ ಆ ವರ್ಷದ ಶ್ರೇಷ್ಠ ಕೃತಿಯೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಪಡೆದಿದೆ. ಬ್ರಿಟಿಷ್-ಪೂರ್ವ ಭಾರತದ ಉನ್ನತ ಸ್ಥಿತಿ ಕುರಿತ ಖ್ಯಾತ ಸಂಶೋಧಕ ಧರ್ಮಪಾಲ್ ಅವರ ಕೃತಿಗಳನ್ನು ಇವರು ಕನ್ನಡಕ್ಕೆ ಪರಿಚಯಿಸಿದ್ದಾರೆ. ಸ್ವದೇಶೀ ಚಿಂತನೆಯ ಪ್ರತಿಪಾದಕಗಳಾದ ಇವರ ಹಲವಾರು ಕೃತಿಗಳು ಪಥದರ್ಶಕವೆನಿಸಿವೆ.

ಅನೇಕ ಹಿರಿಯ ಸಾಹಿತಿಗಳ ಒಡನಾಟದಲ್ಲಿದ್ದ ರಾಮಸ್ವಾಮಿಯವರು, ಡಿ.ವಿ.ಗುಂಡಪ್ಪ, ಸೀತಾರಾಮಯ್ಯ, ರಾಕ್ಲಪಲ್ಲಿ ಅನಂತಕೃಷ್ಣಶರ್ಮ, ವೀರಕೇಸರಿ ಸೀತಾರಾಮಶಾಸ್ತ್ರಿ, ತಿ. ತಾ. ಶರ್ಮ, ಪಿ. ಕೋದಂಡರಾವ್, ತೋಟಗಾರಿಕೆ ಋಷಿ ಎಂ. ಎಚ್. ಮರಿಗೌಡ ಮೊದಲಾದ ಧೀಮಂತರನ್ನು ಕುರಿತು ಬರೆದ ‘ದೀವಟಿಗೆಗಳು’, ‘ದೀಪ್ತಿಮಂತರು’ ಮತ್ತು ‘ದೀಪ್ತಶೃಂಗಗಳು’ – ಇವು ಅನುಪಮ ವ್ಯಕ್ತಿಚಿತ್ರಮಾಲಿಕೆಗಳಾಗಿವೆ. ಈಗಿನ ಜಗದ್‌ವ್ಯಾಪಿ ತುಮುಲಗಳ ಬೇರುಗಳಿರುವುದು ಎರಡು ಭಿನ್ನ ಜೀವನದೃಷ್ಟಿಗಳಲ್ಲಿ – ಎಂದು ಅವರ ‘ನಾಗರಿಕತೆಗಳ ಸಂಘರ್ಷ’ ಕೃತಿ ಪ್ರತಿಪಾದಿಸಿದೆ. ಅವರ ‘ಕೆಲವು ಇತಿಹಾಸ-ಪರ್ವಗಳು’ ಮತ್ತು ‘ಮರೆಯಬಾರದ ಇತಿಹಾಸಾಧ್ಯಾಯಗಳು’ ಮೈಲಿಗಲ್ಲುಗಳೆಂದು ಅಂಕಿತಗೊಂಡಿರುವ ಕೆಲವು ಇತಿಹಾಸ ಘಟನಾಸರಣಿಗಳ ಪರಾಮರ್ಶನೆಯಾಗಿವೆ. ಭಾರತದ ಈಚಿನ ಇತಿಹಾಸಕ್ಕೆ ನಿರ್ಣಾಯಕ ತಿರುವನ್ನಿತ್ತ ರಾಜಾ ರಾಮಮೋಹನರಾಯ್ ಅವರಿಂದ ಜಯಪ್ರಕಾಶ ನಾರಾಯಣ್ ವರೆಗಿನ ಹತ್ತಾರು ಮಹನೀಯರ ಜೀವಿತಕಥನಗಳು `ನವೋತ್ಥಾನದ ಅಧ್ವರ್ಯುಗಳು’ ಮತ್ತು ‘ಹಲವರು ರಾಷ್ಟ್ರಾರಾಧಕರು’. ರಾಮಸ್ವಾಮಿಯವರ ‘ಕವಳಿಗೆ’ ಮತ್ತು ‘ಸಾಹಿತ್ಯ ಸಾನ್ನಿಹಿತ್ಯ ಉನ್ನತಮಟ್ಟದ ಸಾಹಿತ್ಯ ಪರಾಮರ್ಶಕ ಕೃತಿಗಳಾಗಿವೆ. ರಾಮಸ್ವಾಮಿಯವರು ಕಳೆದ ಅರವತ್ತು ವರ್ಷಗಳಲ್ಲಿ ವಿವಿಧ ಪತ್ರಿಕೆಗಳಲ್ಲಿ 2000ಕ್ಕೂ ಹೆಚ್ಚು ಅಧ್ಯಯನಪೂರ್ಣ ಲೇಖನಗಳನ್ನು ಬರೆದಿದ್ದಾರೆ.

ಪತ್ರಿಕೋದ್ಯಮ ಸೇವೆಗಾಗಿ 2006ರಲ್ಲಿ ಇವರಿಗೆ ‘ಆರ್ಯಭಟ ಪ್ರಶಸ್ತಿ’ ದೊರೆತಿದೆ. ಸಾಹಿತ್ಯಸೇವೆಗಾಗಿ 2008ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ ಇವರಿಗೆ ದೊರೆತಿದೆ. 2011ರಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಇವರ ಸುದೀರ್ಘ ಸಾಹಿತ್ಯಸೇವೆಗಾಗಿ ಗೌರವಾರ್ಥ ಡಾಕ್ಟರೇಟ್ ನೀಡಿದೆ. ದೀರ್ಘ ಪತ್ರಿಕೋದ್ಯಮ ಸೇವೆಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ‘ವರ್ಷದ ಶ್ರೇಷ್ಠ ವ್ಯಕ್ತಿ’ ಸಮ್ಮಾನ ದೊರೆತಿದೆ (2012). ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳ ಜೀವಮಾನ ಸಾಧನೆಗಾಗಿ 2015ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪದವಿಯನ್ನು ಇವರಿಗೆ ನೀಡಲಾಗಿದೆ. ಕರ್ನಾಟಕ ಸರಕಾರವು 2022-23ರ ‘ಪಂಪಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ.

2023ರ ಪ್ರಶಸ್ತಿ ಪುರಸ್ಕೃತರು : ಡಾ. ಬಿ. ಎಸ್. ಸ್ವಾಮಿ

ಬಿ. ಸಿದ್ಧಲಿಂಗ ಸ್ವಾಮಿಯವರು ಮೂಲತಃ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯವರು. ವಿ. ಬಸವಲಿಂಗಪ್ಪ – ಶಿವನಾಗಮ್ಮ ದಂಪತಿಯ ಸುಪುತ್ರರಾದ ಇವರು ಎಂ. ಎ., ಪಿಎಚ್. ಡಿ. ಪದವೀಧರರು. ಐದು ವರ್ಷ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಂತರ ಬೆಂಗಳೂರು ಆಕಾಶವಾಣಿಯಲ್ಲಿ ಇಪ್ಪತ್ತು ವರ್ಷ ಕಾರ್ಯನಿರ್ವಹಿಸಿ ಅನಂತರ ಗುಲ್ಬರ್ಗ, ಬೆಂಗಳೂರು, ಮಂಗಳೂರು ಬಾನುಲಿಕೇಂದ್ರಗಳಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿ ಹದಿನಾಲ್ಕು ವರ್ಷ ದುಡಿದು ನಿವೃತ್ತರಾದರು.

ಬಾನುಲಿಯ ಸುದೀರ್ಘ ಸೇವೆಯಲ್ಲಿ ಇವರು ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸಿ, ಪ್ರತಿಭಾವಂತರನ್ನು ಹುಡುಕಿ ಅವರನ್ನು ಆಕಾಶವಾಣಿಯ ಕಾರ್ಯಕ್ರಮಗಳಲ್ಲಿ ತೊಡಗಿಸಿ ಜನಾನುರಾಗಿಯಾದರು.
1967ರಲ್ಲಿ ಇವರ ಮೊದಲ ಕವನಸಂಗ್ರಹ ‘ಅಮೃತ’ ಪ್ರಕಟವಾಯಿತು. ಅಂದಿನಿಂದ ಇಂದಿನವರೆಗೆ ಆರು ದಶಕ ಲೇಖನಿಯನ್ನು ಕೆಳಗಿಡದೆ ಒಂದೇ ಸಮನೆ ಬರೆಯುತ್ತ ಸುಮಾರು ನಾಲ್ಕುನೂರು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವುಗಳಲ್ಲಿ ‘ಕಲಿ ಭಾರತ’, ‘ಅಲ್ಲಮಪ್ರಭು’, ‘ಅಕ್ಕಮಹಾದೇವಿ’, ‘ಬಸವಣ್ಣ’ ಮಹಾಕಾವ್ಯಗಳೂ, ‘ಬೆಂಕಿಯಲ್ಲಿ ಅರಳಿದ ಹೂವು’ ನಂತಹ ಆತ್ಮಕಥನವೂ ಸೇರಿದೆ.

ಇವರ ಸಾಹಿತ್ಯಸೃಷ್ಟಿಗೆ ಯಾವ ಸರಹದ್ದುಗಳೂ ಇಲ್ಲ. ಕಥೆ, ಕಾದಂಬರಿ, ಕವನ, ನಾಟಕ, ರೂಪಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಸಂಪಾದನೆ, ವೈಚಾಲಕ, ಹಾಸ್ಯ, ಜಾನಪದ, ಪ್ರವಾಸಕಥನ, ಜೀವನ ಚರಿತ್ರೆ, ವಚನಸಾಹಿತ್ಯ, ದಾಸಸಾಹಿತ್ಯ, ಮಕ್ಕಳ ಸಾಹಿತ್ಯ, ಬಿಡಿ ಬರೆಹಗಳು – ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೈಯಾಡಿಸಿದ್ದಾರೆ. ಅನೇಕ ಸಾಮಾಜಿಕ, ಐತಿಹಾಸಿಕ ಕಾದಂಬರಿಗಳನ್ನು ಬರೆದ ಕೈಗಳಿಂದಲೇ ಜಾನಪದ ಸಾಹಿತ್ಯಚರಿತ್ರೆಯ ಹದಿನೈದು ಸಂಪುಟಗಳು, ಮಲೆ ಮಾದೇಶ್ವರ ಕಾವ್ಯ ಸಂಪಾದನೆ ಮಾಡಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಒಂದು ವಿಶ್ವವಿದ್ಯಾಲಯ ಮಾಡುವಷ್ಟು ಕ್ಷೇತ್ರಕಾರ್ಯ, ಸಂಪಾದನೆ, ವಿಶ್ಲೇಷಣ, ಸಂಗ್ರಹ ಮಾಡಿದ್ದಾರೆ. ಶಿಷ್ಟಸಾಹಿತ್ಯದಲ್ಲಿ ಡಾ. ಸ್ವಾಮಿಯವರ ಕೊಡುಗೆ ಸಣ್ಣದಲ್ಲ. ಕಾಳಿದಾಸನ ಸಾಹಿತ್ಯದ ಕುರಿತು ಬರೆಯಬಲ್ಲ ಡಾ. ಸ್ವಾಮಿಯವರು ಸೂರದಾಸನ ಸಾಹಿತ್ಯದ ಬಗೆಗೂ ಬರೆಯಬಲ್ಲರು. ಹರಿದಾಸ ಪರಂಪರೆಯ ಕುರಿತು ಹಲವು ವರ್ಷ ಸಂಶೋಧನೆ ಮಾಡಿ ಒಂದು ಬೃಹತ್ ಗ್ರಂಥ ಪ್ರಕಟಿಸಿದ್ದಾರೆ. ಅದಕ್ಕಾಗಿ ಅವರು ಊರೂರು ಅಲೆದು ಹಲಕಥಾಕಾರರನ್ನು ಸಂದರ್ಶಿಸಿ, ವಾಚನಾಲಯಗಳಲ್ಲಿ ತಿಂಗಳುಗಟ್ಟಲೆ ಕುಳಿತು ಸಂಶೋಧನೆ ಮಾಡಿದ್ದಾರೆ.

ಇದನ್ನೂ ಓದಿ | ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ಇವರ ಸಾಹಿತ್ಯಸೇವೆಯನ್ನು ಗಮನಿಸಿ ಕನ್ನಡಿಗರು ಅವರಿಗೆ ‘ಮಧುವೃತ’ ಎಂಬ ಗೌರವಗ್ರಂಥ ಅರ್ಪಿಸಿದ್ದಾರೆ.
ಇವರ ‘ಕವಿಚಕ್ರೇಶ್ವರ’ ಕಾದಂಬರಿಗೆ ದೇವರಾಜ ಬಹದ್ದೂರ್ ಪ್ರಶಸ್ತಿ(1974), ‘ಜಾನಪದ ಕಥಾಸಂಗಮ’ಕ್ಕೆ ಕರ್ನಾಟಕ ಜಾನಪದ-ಯಕ್ಷಗಾನ ಅಕಾಡೆಮಿಯ ಬಹುಮಾನ(1987), ‘ಮಹಾಜ್ಯೋತಿ ಮಾದೇಶ್ವರ’ ಕೃತಿಗೆ ಮುದ್ದಣ- ರತ್ನಾಕರವರ್ಣಿ ಪ್ರಶಸ್ತಿ, ‘ಜಾನಪದ ಸೌರಭ’, ಅಕ್ಕಮ್ಮ ಗಿರಿಗೌಡ ರುದ್ರಪ್ಪ ಪ್ರಶಸ್ತಿ (1996), ‘ತುಳುನಾಡ ಐಸಿರಿ’ಗೆ ಗೊರೂರು ಪ್ರತಿಷ್ಠಾನದ ಪ್ರಶಸ್ತಿ (1997), ಕದಂಬೋತ್ಸವದಲ್ಲಿ ಅಭಿನಂದನೆ(1998), ‘ಸಮಗ್ರ ನಾಟಕಗಳು’ಗೆ ಆರ್ಯಭಟ ಪ್ರಶಸ್ತಿ, ಜಾನಪದ ಜ್ಞಾನ ವಿಜ್ಞಾನ ಪ್ರಶಸ್ತಿ(2002), ‘ನಾಟಕ ರೂಪಕ’ ಕೃತಿಗೆ ಅತ್ತಿಮಬ್ಬೆ ಸಾಹಿತ್ಯಪ್ರತಿಷ್ಠಾನದ ಪ್ರಶಸ್ತಿ, ‘ಜಾನಪದಶ್ರೀ’ಗೆ ಕರ್ನಾಟಕ ಜಾನಪದ ಅಕಾಡೆಮಿ ಬಹುಮಾನ, ಇಂಥ ಅನೇಕ ಸಂಘಸಂಸ್ಥೆಗಳ ಬಹುಮಾನಗಳು, ಪ್ರಶಸ್ತಿಗಳು ಇವರಿಗೆ ಸಂದಿವೆ.

Continue Reading

ಬೆಂಗಳೂರು

Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

Book Release: ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲ್ಮ್‌ ಸೊಸೈಟಿಯ ನಾಣಿ ಸಭಾಂಗಣದಲ್ಲಿ ಮೇ 12ರಂದು ಬೆಳಗ್ಗೆ 10ಗಂಟೆಗೆ ಕನ್ನಡದಲ್ಲಿ ಶ್ರೀ ಶಂಕರ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Book Release
Koo

ಬೆಂಗಳೂರು: ಅಯೋಧ್ಯಾ ಪ್ರಕಾಶನ ಪ್ರಕಟನೆಯ ಲೇಖಕ ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರ; ಶಾಂಕರ ಸ್ತೋತ್ರಗಳ ಭಾವಾನುಭವ (Book Release) ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಮೇ 12ರಂದು ಬೆಳಗ್ಗೆ 10ಗಂಟೆಗೆ ನಗರದ ಬನಶಂಕರಿಯ ಬಿ.ವಿ.ಕಾರಂತ್‌ ರಸ್ತೆಯ ಸುಚಿತ್ರ ಫಿಲ್ಮ್‌ ಸೊಸೈಟಿಯ ನಾಣಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರದ ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಸ್ವಾಮಿ ನಿತ್ಯಸ್ಥಾನಂದಜಿ ಮಹಾರಾಜ್‌ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿ ಹಾಗೂ ಸಂಸ್ಕೃತಿ ಚಿಂತಕರಾದ ಡಾ.ಜಿ.ಬಿ. ಹರೀಶ, ವಾಗ್ಮಿ ಹಾಗೂ ಬಹುಭಾಷಾವಿದರು ಶತಾವಧಾನಿ ಆರ್‌. ಗಣೇಶ್‌ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Continue Reading
Advertisement
PBKS vs SRH
ಕ್ರೀಡೆ3 mins ago

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

West Nile fever Health department on alert
ಆರೋಗ್ಯ34 mins ago

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

Great Khali
ದೇಶ37 mins ago

Great Khali: ಜಗತ್ತಿನ ಕುಬ್ಜ ಮಹಿಳೆಯನ್ನು ಮಗುವಿನಂತೆ ಎತ್ತಿ ಆಡಿಸಿದ ಗ್ರೇಟ್‌ ಖಲಿ; ಜನ ಕೆಂಡವಾಗಿದ್ದು ಏಕೆ?

Kalki 2898 AD
ಪ್ರಮುಖ ಸುದ್ದಿ41 mins ago

Kalki 2898 AD: ಮೇ 22ಕ್ಕೆ ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ; ಕಲ್ಕಿ ಚಿತ್ರದ 5ನೇ ಸೂಪರ್ ಸ್ಟಾರ್ ಯಾರು?

RCB vs CSK
ಕ್ರೀಡೆ60 mins ago

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

Rain News
ಕರ್ನಾಟಕ1 hour ago

Rain News: ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

Prajwal Revanna Case
ಕರ್ನಾಟಕ1 hour ago

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Rohit Sharma
ಕ್ರೀಡೆ2 hours ago

Rohit Sharma: ಐಪಿಎಲ್ ಪ್ರಸಾರಕರ ವಿರುದ್ಧ ಕಿಡಿ ಕಾರಿದ ಹಿಟ್​ಮ್ಯಾನ್​ ರೋಹಿತ್​

R Ashok
ರಾಜಕೀಯ2 hours ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್2 hours ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌