HD Kumaraswamy : ಧಮ್ಕಿ ಸಂಸ್ಕೃತಿ ಯಾರದು? ಸೆಟ್ಲ್‌ಮೆಂಟ್‌ ಮಾತು ಆಡಿದ್ಯಾರು?; ಡಿಕೆಶಿಗೆ HDK ತಿರುಗೇಟು - Vistara News

ಬೆಂಗಳೂರು

HD Kumaraswamy : ಧಮ್ಕಿ ಸಂಸ್ಕೃತಿ ಯಾರದು? ಸೆಟ್ಲ್‌ಮೆಂಟ್‌ ಮಾತು ಆಡಿದ್ಯಾರು?; ಡಿಕೆಶಿಗೆ HDK ತಿರುಗೇಟು

HD Kumaraswamy : ರಾಜ್ಯಸಭಾ ಚುನಾವಣೆ ಸಂಬಂಧಿಸಿ ಎಚ್.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಶಾಸಕರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದರು. ಅದಕ್ಕೆ ಮಾಜಿ ಮುಖ್ಯಮಂತ್ರಿ ಉತ್ತರ ನೀಡಿದ್ದಾರೆ.

VISTARANEWS.COM


on

HD Kumaraswamy DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು:ʻ ʻನನ್ನದು ಧಮ್ಕಿ ಸಂಸ್ಕೃತಿ ಅಲ್ಲ (Threatening Culture), ಸೆಟ್ಲ್‌ಮೆಂಟ್ ಮಾಡುವ ಸಂಸ್ಕೃತಿ ಅಲ್ಲʼʼ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswmy) ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರಿಗೆ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರ ಆರೋಪಗಳಿಗೆ ಖಾರವಾದ ಉತ್ತರ ನೀಡಿದರು.

ಧಮ್ಕಿ ಸಂಸ್ಕೃತಿಯಿಂದ ಬಂದವರು ಯಾರು? ಸೆಟ್ಲ್ ಮೆಂಟ್ ಮಾಡುತ್ತೇನೆ ಎಂದು ಹೇಳಿದವರು ಯಾರು? ಧಮ್ಕಿ ಹಾಕುವ, ಸೆಟ್ಲ್ ಮೆಂಟ್ ಮಾಡುವ ಸಂಸ್ಕೃತಿ ನಮ್ಮದಲ್ಲ. ಧಮ್ಕಿ ಹಾಕಿ, ಸಿಕ್ಕ ಸಿಕ್ಕ ಜಾಗದಲ್ಲಿ ಬೇಲಿ ಹಾಕೋದು ನಮ್ಮ ಜಾಯಮಾನದಲ್ಲಿ‌ ಇಲ್ಲ ಎಂದರು ಕುಮಾರಸ್ವಾಮಿ ಅವರು.

ನಾನು ಯಾರಿಗೂ ಧಮ್ಕಿ ಹಾಕಿಲ್ಲ, ಹಾಕುವುದೂ ಇಲ್ಲ. ರಾಜ್ಯಸಭಾ ಚುನಾವಣೆ ನಡೆಯುತ್ತಿದೆ. ಆತ್ಮಸಾಕ್ಷಿಯ ಮತ ಕೇಳುವುದಾಗಿ ಹೇಳಿದ್ದೇವೆ. ಇವರು ಯಾರೋ ಬಿಜೆಪಿ ಶಾಸಕರನ್ನು ಅಕ್ಕಪಕ್ಕ ಕೂರಿಸಿಕೊಂಡಿದ್ರಲ್ಲ, ಅದು ತಪ್ಪಲ್ಲವೇ? ಜೆಡಿಎಸ್‌ ಪಕ್ಷದ ಇಬ್ಬರು ಶಾಸಕರ ಮತ ಬರಲಿದೆ ಅಂತ ಹೇಳಿದ್ದಾರೆ, ಅದು ತಪ್ಪಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಯಾರಿಗೂ ಧಮಕಿ‌ ಹಾಕಿಲ್ಲ, ಅಂತಹ ಸಂಸ್ಕೃತಿಯಿಂದ ಬಂದವನೂ ಅಲ್ಲ. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಇದನ್ನೂ ಓದಿ : DK Shivakumar : ಕುಮಾರಸ್ವಾಮಿಯಿಂದ ಕಾಂಗ್ರೆಸ್‌ ಶಾಸಕರಿಗೆ ಆಫರ್‌, ಧಮಕಿ?

ರಾಮ ನಗರದಲ್ಲಿ ಕಾನೂನು ವಿರೋಧಿ ಶಕ್ತಿಗಳಿಗೆ ರಕ್ಷಣೆ

ಅಧಿಕಾರಿಗಳನ್ನು ಹೆಸರಿಸಿ ಬೇದರಿಸಿಕೊಂಡು ಕಾನೂನು ವಿರೋಧಿ ಶಕ್ತಿಗಳಿಗೆ ರಕ್ಷಣೆ ಕೊಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಡಿಸಿಎಂ ಡಿಕೆಶಿ ಮತ್ತವರ ಟೀಮ್‌ ವಿರುದ್ಧ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ನಡೆಯುತ್ತಿರುವ ವಕೀಲರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು; ಈ ಸರ್ಕಾರ ಅಧಿಕಾರಿಗಳನ್ನು ಗುಲಾಮರ ರೀತಿ ನಡೆಸಿಕೊಳ್ಳುತ್ತಿದೆ. ಕರ್ತವ್ಯ ಲೋಪದ ಎಸಗಿದ ಪೊಲೀಸ್ ಅಧಿಕಾರಿಯನ್ನು ಸರ್ಕಾರ ಅಮಾನತು ಮಾಡಬೇಕಿತ್ತು. ಆದರೆ, ಜನರಲ್ಲಿ ದ್ವೇಷ ಭಾವನೆ ಬಿತ್ತಿ ಸಮಾಜಘಾತುಕ ಚಟುವಟಿಕೆ ಮಾಡುತ್ತಿರುವ ವ್ಯಕ್ತಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದರು.

ಜ್ಞಾನ ವ್ಯಾಪಿ ಶಿವಲಿಂಗ ದೇವಸ್ಥಾನ ಅಂತ ಒಂದು ವರ್ಗ, ಮಸೀದಿ ಅಂತ‌ ಮತ್ತೊಂದು ವರ್ಗ ಹೇಳುತ್ತಿದೆ. ಆದರೆ, ಆ ಬಗ್ಗೆ ನಾಯಾಯಲಯ ಆದೇಶ ನೀಡಿದೆ. ಆದೇಶ ತೃಪ್ತಿಕರ ಆಗಿಲ್ಲದಿದ್ದರೆ ಅವರು ಮೇಲಿನ ನ್ಯಾಯಾಲಯಕ್ಕೆ ಮನವಿ ಸಲ್ಲಿಸಬಹುದು. ಅದು ಬಿಟ್ಟು ನ್ಯಾಯಾಧೀಶರು, ನ್ಯಾಯಾಂಗವನ್ನು ಅಶ್ಲೀಲ ಭಾಷೆಯಲ್ಲಿ ನಿಂದಿಸಿದರೆ ತಪ್ಪು. ಅದು ನ್ಯಾಯಾಂಗ ನಿಂದನೆ. ಇಂಥ ಕೆಲಸ ಮಾಡಿದ ಕಿಡಿಗೇಡಿ ರಕ್ಷಣೆಗೆ ಸರ್ಕಾರ ನಿಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಿಂದ ಫೋನ್ ಹೋದರೆ ಅಧಿಕಾರಿಗಳು ನಡುಗುತ್ತಾರೆ. ಕೂತ ಜಾಗದಲ್ಲಿಯೇ ಎದ್ದು ನಿಂತು ಸೆಲ್ಯೂಟ್ ಹೊಡೆಯುತ್ತಾರೆ. ಕರೆ ಮಾಡಿದವರು ವಕೀಲರ ಪ್ರತಿಭಟನೆಗೆ ತಲೆ ಕೆಡಿಸಿಕೊಳ್ಳಬೇಡಿ ಅಂತ ಹೇಳಿದ್ದಾರೆ. ಪೊಲೀಸ್ ಇಲಾಖೆ ವೈಫಲ್ಯದಿಂದ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ನ್ಯಾಯಾಂಗ ನಿಂದನೆ ಮಾಡಿದವನು ಒಂದು ಸಮುದಾಯಕ್ಕೆ ಸೇರಿದವನು. ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಕೂಡ ಅದೇ ಸಮುದಾಯದ ವ್ಯಕ್ತಿ. ಶಾಸಕರೂ ಅದೇ ಸಮುದಾಯಕ್ಕೆ ಸೇರಿದವರು. ಈ ಸರಕಾರ ಆ ಸಮುದಾಯಕ್ಕೆ ಮಾತ್ರ ಕೆಲಸ ಮಾಡುತ್ತಿದೆಯಾ? ಎನ್ನುವ ಅನುಮಾನ ನನಗೆ ಕಾಡುತ್ತಿದೆ ಎಂದರು ಅವರು.

ಕಳೆದ ರಾತ್ರಿ ಪ್ರತಿಭಟನೆ ಸ್ಥಳಕ್ಕೆ ನಾನು, ಅರ್ ಅಶೋಕ್ ಹೋಗುತ್ತೇವೆ ಎಂದು ಗೊತ್ತಾದ ಮೇಲೆ ಪೊಲೀಸರು ಅಧಿಕಾರಿಗಳಿಗೆ ದಿಗ್ಬಂಧನ ಹೇರಿದ್ದ ಜಿಲ್ಲಾಡಳಿತ ಕಚೇರಿಯ ಗೇಟ್ ಬೀಗ ಒಡೆದಿದ್ದಾರೆ. ಬೀಗವನ್ನು ಕಳ್ಳರು ಒಡೆಯೋದನ್ನು ನೋಡಿದ್ದೇವೆ. ಇಲ್ಲಿ ಪೊಲೀಸರೇ ಬೀಗವನ್ನು ಒಡೆದಿದ್ದಾರೆ ಎಂದು ಅವರು ಕಿಡಿಕಾರಿದರು. ಮಾಜಿ ಸಚಿವರಾದ ಸಿಸಿ ಪಾಟೀಲ್, ಶಾಸಕರಾದ ಸಮೃದ್ಧಿ ಮಂಜುನಾಥ್, ಕರೆಮ್ಮ ನಾಯಕ್ ಅವರು ಈ ಸಂದರ್ಭದಲ್ಲಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Bengaluru News: ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌.ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ ತಿಳಿಸಿದ್ದಾರೆ.

VISTARANEWS.COM


on

Sri Vedavyasa Jayanti programme at Bengaluru
Koo

ಬೆಂಗಳೂರು: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮವಾಗುತ್ತದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ (Bengaluru News) ಹೇಳಿದರು‌.

ಬೆಂಗಳೂರಿನ ಗಿರಿನಗರದ ಭಂಡಾರಕೇರಿ ಮಠದಲ್ಲಿ ಗುರುವಾರ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾವಿದ್ಯಾ ವಿಕಾಸ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಗುರು ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವ, ಶ್ರೀ ಮಾಧ್ವ ರಾದ್ಧಾತ ಸಂವರ್ಧಕ ಸಭಾದ 81ನೇ ಅಧಿವೇಶನ, ಶ್ರೀ ವೇದವ್ಯಾಸ ಜಯಂತಿ ಸರಣಿಯ 2ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ ವಿಷಯ ಕುರಿತು ಪ್ರೌಢ ಉಪನ್ಯಾಸ ನೀಡಿದ ಅವರು, ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌. ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಹೇಳಿದರು.

ಹರಿಕಥಾಮೃತಸಾರವನ್ನು ಓದಿ ನಾವು ವಿಶಾಲರಾಗಬೇಕು. ಆ ಮೂಲಕ ದೊಡ್ಡವರಾಗಬೇಕು. ಬದುಕನ್ನು ಹಸನ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಅವರು ಬ್ಯಾಗವಟ್ಟಿಯ ನರಸಿಂಹ ದಾಸ ಕುಲಕರ್ಣಿ ಅವರು ನಡೆಸಿದ ಸಮಾಜಮುಖಿ ಚಟುವಟಿಕೆಗಳನ್ನು ವಿವರಿಸಿದರು.

ಮಾನವಿ ಜಗನ್ನಾಥದಾಸರ ಮನೆಯೇ ಮಂದಿರವಾದ ಕಥೆಯನ್ನು ಸುಂದರವಾಗಿ ನಿರೂಪಿಸಿದರು. ಹರಿಕಥಾಮೃತಸಾರ ರಚನೆ ಆದಂತಹ ಸಂದರ್ಭ, ಹಿರಿಯರು ಅವರ ಮೇಲೆ ಮಾಡಿದಂತಹ ಕೃಪೆ ಮತ್ತು ಜಗನ್ನಾಥದಾಸರ ಕಾರುಣ್ಯಗಳನ್ನು ಸಮರ್ಥವಾಗಿ ಅಪ್ಪಣ್ಣಾಚಾರ್ಯರು ವಿವರಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಸಂಜೆ ಮಹಾಭಾರತ ಕುರಿತು ವಿವಾದ-ಸಂವಾದ ಕಾರ್ಯಕ್ರಮ ನಡೆಯಿತು. ವಿದ್ವಾನ್ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಹತ್ತು ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು.

Continue Reading

ಪ್ರಮುಖ ಸುದ್ದಿ

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

R Ashok: ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Opposition party leader r ashok latest statement in Mysuru
Koo

ಮೈಸೂರು: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.‌ ಅಶೋಕ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಈ ಎಲ್ಲ ಸಮಸ್ಯೆಗಳ ನಡುವೆ ಬರಗಾಲದಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಐದು ವರ್ಷವೂ ಬರಗಾಲ ಬಂದಿತ್ತು. ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾ ಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ 3 ಕೋಟಿ ರೂಪಾಯಿ ಆಸ್ತಿ ಇದೆ. ಆದರೆ ಡಿ.ಕೆ. ಶಿವಕುಮಾರ್ ಅವರ ಆಸ್ತಿ ಹೆಚ್ಚಾಗಿದೆ. ಹಾಲಿನ ಪ್ರೋತ್ಸಾಹಧನ 700 ಕೋಟಿ ರೂ‌. ಉಳಿಸಿಕೊಂಡಿದ್ದಾರೆ. ಆಂಬ್ಯುಲೆನ್ಸ್ ಚಾಲಕರು, ಗುತ್ತಿಗೆ ಸಿಬ್ಬಂದಿಗೆ ಸಂಬಳ ಪಾವತಿಯಾಗಿಲ್ಲ. ಕೇರಳಕ್ಕೆ ಬಂದ ಪರಿಸ್ಥಿತಿಯೇ ಇನ್ನು ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನದಲ್ಲಿ ಅಕ್ಕಿ, ಬೇಳೆ, ಗೋಧಿ ಬೆಲೆ 2 ಸಾವಿರ ರೂ.ಗೆ ತಲುಪಿದೆ. ಚಹ ಕುಡಿದರೆ 500 ರೂ. ಕೊಡಬೇಕು. ಸಿದ್ದರಾಮಯ್ಯನವರ ಸರ್ಕಾರ ಇನ್ನೂ ಇದ್ದರೆ ಪಾಕಿಸ್ತಾನದ ಆರ್ಥಿಕತೆ ಕರ್ನಾಟಕಕ್ಕೆ ಬರಲಿದೆ ಎಂದು ಹೇಳಿದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ವಿದ್ಯಾವಂತ ಮತದಾರರು

ಈಗ ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಇಲ್ಲಿ ವಿದ್ಯಾವಂತರೇ ಇದ್ದಾರೆ. ಇದು ಕೈ ಮುಗಿದುಕೊಂಡು ಕೇಳುವ ಮತದಾನ ಅಲ್ಲ. ಎಲ್ಲರನ್ನೂ ಸಂಪರ್ಕಿಸಿ ಮನ ಒಲಿಸಬೇಕಾಗುತ್ತದೆ. ನಾವು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಬಿಜೆಪಿ ಅಭ್ಯರ್ಥಿ ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಮತ ನೀಡಿ ಎಂದು ಮನವಿ ಮಾಡಿದರು.

Continue Reading

Lok Sabha Election 2024

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

DK Shivakumar: ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಈಗ ಇಲ್ಲಿಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದು, ಚುನಾವಣಾ ಕಾರ್ಯತಂತ್ರಗಳಲ್ಲಿ ತೊಡಗಿದ್ದಾರೆ.

VISTARANEWS.COM


on

DK Shivakumar in Uttar Pradesh and Strategy in Amethi and Rae Bareli
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿ 5ನೇ ಹಂತಕ್ಕೆ ರಾಜಕೀಯ ಪಕ್ಷಗಳು ಸಿದ್ಧವಾಗುತ್ತಿವೆ. ಇತ್ತ ಟ್ರಬಲ್‌ ಶೂಟರ್‌ ಖ್ಯಾತಿಯ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅಂತಾರಾಜ್ಯಗಳಲ್ಲಿ ಪ್ರಚಾರಕ್ಕೆ ಜೈ ಎಂದಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಆಂಧ್ರಪ್ರದೇಶದ ಕಡಪ ಪ್ರಚಾರಕ್ಕೆ ಹೋಗಿದ್ದ ಡಿಕೆಶಿ ಈಗ ಉತ್ತರ ಪ್ರದೇಶ ತಲುಪಿದ್ದಾರೆ. ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಪ್ರಚಾರಕ್ಕೆ ಮುಂದಾಗಿದ್ದು, ತಂತ್ರಗಾರಿಕೆಯಲ್ಲಿ ತೊಡಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆನ್ನಿಗೆ ಡಿ.ಕೆ. ಶಿವಕುಮಾರ್‌ ನಿಂತಿದ್ದಾರೆ. ಕಳೆದ ಬಾರಿ ಅಮೇಥಿಯಲ್ಲಾದ ಸೋಲಿನ ಕಹಿಯನ್ನು ಮರೆಸಲು ಪಣ ತೊಟ್ಟಿರುವ ಡಿಕೆಶಿ ಈಗ ಆ ನಿಟ್ಟಿನಲ್ಲಿ ಪ್ರಚಾರಕ್ಕೆ ಮುನ್ನಡಿ ಬರೆಯಲು ಹೊರಟಿದ್ದಾರೆ. ಅಲ್ಲಿ ಯಾವ ರೀತಿ ತಂತ್ರಗಾರಿಕೆ ಮಾಡಲಿದ್ದಾರೆ? ಅದು ಮತದಾರರ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದು ಫಲಿತಾಂಶ ಬಂದ ಮೇಲಷ್ಟೆ ತಿಳಿಯಬಹುದಾಗಿದೆ.

ಕಾಂಗ್ರೆಸ್‌ಗೆ ಅಮೇಥಿ ಮತ್ತು ರಾಯ್‌ ಬರೇಲಿ ಏಕೆ ಮುಖ್ಯ?

ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಶತಾಯಗತಾಯ ಗೆಲ್ಲಲೇ ಬೇಕಿರುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇಲ್ಲದಿದ್ದರೆ ಅವರ ನಾಯಕತ್ವದ ಮೇಲೆ ಮತ್ತೊಮ್ಮೆ ಪ್ರಶ್ನೆಗಳು ಏಳುತ್ತವೆ. ಹೀಗಾಗಿ ಈ ಕ್ಷೇತ್ರಕ್ಕೆ ಕಾಂಗ್ರೆಸ್‌ ಹೆಚ್ಚಿನ ಒತ್ತನ್ನು ನೀಡಿದೆ. ಇದಕ್ಕಾಗಿಯೇ ಡಿ.ಕೆ. ಶಿವಕುಮಾರ್‌ ಅಲ್ಲಿ ತಮ್ಮ ದೃಷ್ಟಿಯನ್ನು ನೆಟ್ಟಿದ್ದಾರೆ ಎನ್ನಲಾಗಿದೆ.

ಅಮೇಥಿ ವಾಪಸ್‌ಗೆ ತಂತ್ರ

ಇನ್ನು ಅಮೇಥಿ ಲೋಕಸಭಾ ಕ್ಷೇತ್ರ ಸಹ ಕಾಂಗ್ರೆಸ್‌ ಕಪಿಮುಷ್ಟಿಯಲ್ಲಿತ್ತು. 1980ರಲ್ಲಿ ಸಂಜಯ್‌ ಗಾಂಧಿ ಮೊದಲ ಬಾರಿಗೆ ಇಲ್ಲಿಂದ ಸ್ಪರ್ಧಿಸಿದ್ದರು. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಸ್ಪರ್ಧೆ ಮಾಡಿದ್ದರು. ಅವರು 1981 ರಿಂದ 1991ರವರೆಗೆ 4 ಬಾರಿ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 1998ರಲ್ಲಿ ಸೋನಿಯಾ ಗಾಂಧಿ, 2004ರಿಂದ 2014ರ ವರೆಗೆ ರಾಹುಲ್‌ ಗಾಂಧಿ ಇಲ್ಲಿಂದಲೇ ಚುನಾಯಿತರಾಗುತ್ತಾ ಬರುತ್ತಿದ್ದರು. ಆದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧಿಸಿ ಬರೋಬ್ಬರಿ 55,120 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇಲ್ಲಿ ರಾಹುಲ್‌ ಗಾಂಧಿಗೆ ಮುಖಭಂಗವಾಗಿತ್ತು. ಆದರೆ, ರಾಹುಲ್‌ ಕೇರಳದ ವಯನಾಡಿನಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ಒಂದರಲ್ಲಿ ಹೋದ ಮಾನ, ಇನ್ನೊಂದರಲ್ಲಿ ಬಂತು ಎಂಬಂತೆ ಆಗಿತ್ತು. ಈ ಬಾರಿಯೂ ರಾಹುಲ್‌ ವಯನಾಡು ಹಾಗೂ ರಾಯ್‌ ಬರೇಲಿಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಇನ್ನು ಅಮೇಥಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಎದುರಾಳಿಯಾಗಿ ಕಿಶೋರ್‌ ಲಾಲ್‌ ಶರ್ಮಾ ಸ್ಪರ್ಧೆ ಮಾಡಿದ್ದಾರೆ.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

ಗಾಂಧಿ ಕುಟುಂಬದ ಅತ್ಯಾಪ್ತನಿಗೆ ಟಿಕೆಟ್‌

ಕಿಶೋರ್‌ ಲಾಲ್‌ ಶರ್ಮಾ ಅವರು ರಾಯ್‌ಬರೇಲಿ ಹಾಗೂ ಅಮೇಥಿ ಕ್ಷೇತ್ರಗಳಿಗೆ ಅಘೋಷಿತ ಉಸ್ತುವಾರಿಯಂತೆ ಇದ್ದರು. ಇಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಪ್ರತಿನಿಧಿಸುವಾಗ ಹೆಚ್ಚಿನ ಹೊಣೆ ಇವರ ಮೇಲೆಯೇ ಇತ್ತು. ಹೀಗಾಗಿ ಇಲ್ಲಿ ಪಕ್ಷದ ಚಟುವಟಿಕೆಯಲ್ಲಿ ನಿರತರಾಗುತ್ತಿದ್ದರಿಂದ ಅವರಿಗೆ ಕ್ಷೇತ್ರ ಪರಿಚಯದ ಜತೆಗೆ ಸ್ಥಳೀಯ ನಾಯಕರ ಒಡನಾಟವೂ ಇದೆ. ಜತೆಗೆ ಗಾಂಧಿ ಕುಟುಂಬ ಅತ್ಯಾಪ್ತರೂ ಆಗಿದ್ದರಿಂದ ಅವರಿಗೆ ಈ ಬಾರಿ ಅಮೇಥಿಯಿಂದ ಟಿಕೆಟ್‌ ನೀಡಲಾಗಿದೆ. ಈ ಎಲ್ಲ ಕಾರಣಗಳಿಂದ ಅಮೇಥಿಯನ್ನು ಗೆದ್ದು ಬೀಗುವ ಮೂಲಕ ಜಿದ್ದು ಸಾಧಿಸುವ ತವಕದಲ್ಲಿ ಕಾಂಗ್ರೆಸ್‌ ಇದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಈ ಎರಡೂ ಕ್ಷೇತ್ರಗಳ ಮೇಲೆ ಫೋಕಸ್‌ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಕೆಲವು ದಿನ ವಾಸ್ತವ್ಯ ಹೂಡಿ ತಂತ್ರಗಾರಿಕೆ ಹೆಣೆಯಲಿದ್ದಾರೆ.

Continue Reading

ಕ್ರೈಂ

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Prajwal Revanna Case: ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಮೇಲೆ ಬಂಧಿತನಾಗಿರುವ 2ನೇ ಆರೋಪಿ ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಇನ್ನೊಬ್ಬ A6 ಆರೋಪಿ ಕೀರ್ತಿಯನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈ ಪ್ರಕರಣದ ಮೊದಲ ಆರೋಪಿ ಎಚ್‌.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.

VISTARANEWS.COM


on

Prajwal Revanna Case KR Nagar victim kidnapping case Satish sent to judicial custody
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಮೇಲೆ ಬಂಧಿತನಾಗಿರುವ 2ನೇ ಆರೋಪಿ ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಇನ್ನೊಬ್ಬ A6 ಆರೋಪಿ ಕೀರ್ತಿಯನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

42ನೇ ಎಸಿಎಂಎಂ ಕೋರ್ಟ್‌ನಲ್ಲಿ ಗುರುವಾರ ಮಧ್ಯಾಹ್ನ ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಜಾಮೀನು (Bail) ವಿಚಾರಣೆ ನಡೆಯುತ್ತಿದ್ದ ವೇಳೆಯೇ ಇಬ್ಬರು ಆರೋಪಿಗಳನ್ನು ಕೋರ್ಟ್‌ ಎದುರು ಹಾಜರುಪಡಿಸಲಾಗಿತ್ತು.

ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯವು A2 ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿದರೆ, ಮತ್ತೊಬ್ಬ ಆರೋಪಿ ಹೊಸೂರು ಕೀರ್ತಿಯನ್ನು 3 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ವಹಿಸಿದೆ.

ಏನಿದು ಕೇಸ್‌?

ಪ್ರಜ್ವಲ್‌ ರೇವಣ್ಣ ಅವರು ಅತ್ಯಾಚಾರ ನಡೆಸಿದ್ದಾರೆನ್ನಲಾದ ಮಹಿಳೆ ಮೈಸೂರಿನ ಕೆ.ಆರ್.‌ ನಗರ ನಿವಾಸಿಯಾಗಿದ್ದಾರೆ. ಆದರೆ, ಇವರನ್ನು ಸಾಕ್ಷಿ ನಾಶಕ್ಕಾಗಿ ಎಚ್‌.ಡಿ. ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬು ಅಪಹರಣ ಮಾಡಿದ್ದಾರೆ ಎಂದು ಕೆ.ಆರ್. ನಗರದಲ್ಲಿ ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ಇದರ ಬೆನ್ನಲ್ಲೇ ಸಂತ್ರಸ್ತೆಯ ವಿಡಿಯೊ ರಿಲೀಸ್‌ ಆಗಿದೆ. ಇದರಲ್ಲಿ ಮಹಿಳೆಯು ಅಪಹರಣ ಪ್ರಕರಣಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಮುಗಿದಿಲ್ಲ ಟೆನ್ಶನ್‌!

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಮಧ್ಯಂತರ ಜಾಮೀನು (Bail) ನೀಡಲಾಗಿದ್ದು, ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ. ಹೀಗಾಗಿ ರೇವಣ್ಣ ಅವರು ಇನ್ನೂ ನಿಟ್ಟುಸಿರು ಬಿಡುವಂತೆ ಇಲ್ಲ. ನಾಳೆ ಕೋರ್ಟ್‌ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದರ ಮೇಲೆ ಜೈಲಾ? ಎಸ್‌ಐಟಿ ವಶವೇ? ಅಥವಾ ಜಾಮೀನಾ ಎಂಬುದು ನಿರ್ಧಾರ ಆಗಲಿದೆ.

ಎಚ್‌.ಡಿ. ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಈಗ ಹೊಳೆನರಸೀಪುರದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದ್ದು, ಶುಕ್ರವಾರದ ಆದೇಶದ ಮೇಲೆ ಎಲ್ಲವೂ ನಿಂತಿದೆ. ಈಗ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್‌ ಸೂಚನೆ ನೀಡಿದೆ.

ವಾದ – ಪ್ರತಿವಾದ

ಗುರುವಾರ (ಮೇ 16) ಬೆಳಗ್ಗೆ 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಎಚ್.ಡಿ. ರೇವಣ್ಣ ಪರ ವಕೀಲರ ವಾದವನ್ನು ಆಲಿಸಿದರು. ಬಳಿಕ ಎಸ್ಐಟಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು‌ ಸೂಚಿಸಿದ ನ್ಯಾಯಾಧೀಶೆ ಪ್ರೀತ್ ಜೆ. ವಿಚಾರಣೆಯನ್ನು ಕೆಲ ಕಾಲ ಮುಂದೂಡಿದ್ದರು.

ಜಾಮೀನು ನೀಡದಂತೆ ಜಯ್ನಾ ಕೊಠಾರಿ ಮನವಿ

ಈ ವೇಳೆ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ, ಈ ಕೇಸ್‌ನಲ್ಲಿ ನಾನ್ ಬೇಲಬಲ್‌ ಸೆಕ್ಷನ್ ಇಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಆಗ ಮಧ್ಯಪ್ರವೇಶ ಮಾಡಿದ ಜಡ್ಜ್‌, ಎಸ್ಐಟಿ ವಾದಕ್ಕೂ ಅವಕಾಶ ನೀಡೋಣ ಎಂದು ಹೇಳಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು.

ಮಧ್ಯಾಹ್ನದ ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ, ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಆರಂಭಿಸಿದರು. ಈ ವೇಲೆ ಎಚ್.ಡಿ. ರೇವಣ್ಣ ಪರ ವಕೀಲರು ಮಧ್ಯ ಪ್ರವೇಶ ಮಾಡಿ, ಸೀನಿಯರ್ ವಕೀಲರು ಬರ್ತಾರೆ. ಹೀಗಾಗಿ ನಾಳೆಯವರೆಗೂ (ಮೇ 17) ಸಮಯ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಿ, ಹೊಳೆನರಸೀಪುರ ಕೇಸಲ್ಲಿ ವಿಚಾರಣೆಗೆ ಬರುವುದಾಗಿ ಹೇಳಿದ್ದಾರೆ. ಇನ್ನೂ ವಿಚಾರಣೆಗೆ ಬಂದಿಲ್ಲ. ಈಗಲೇ ವಿಚಾರಣೆ ನಡೆಯಲಿ. ಅಥವಾ ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಯ್ನಾ ಕೋಠಾರಿ, ಆರೋಪಿಯು ಪೊಲೀಸರ ಮುಂದೆ ಶರಣಾಗಲಿ ಅಥವಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿ. ಆರೋಪಿ ತುಂಬಾ ಪ್ರಭಾವಿ ಆಗಿದ್ದಾರೆ. ಹೀಗಾಗಿ ಆರೋಪಿಯೇ ಸ್ವ – ಇಚ್ಛೆಯಿಂದ ಬಂದು ಶರಣಾಗಲಿ ಎಂದು ವಾದಿಸಿದರು.

ಆಗ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್‌, ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಇನ್ನು ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

ರೇವಣ್ಣ ಹಾಜರಾಗಲು ಜಡ್ಜ್‌ ಸೂಚನೆ

ಪುನಃ ವಾದ ಮಂಡಿಸಿದ ಜಯ್ನಾ ಕೊಠಾರಿ, ಆರೋಪಿ ಬೆಳಗ್ಗೆ ಶರಣಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈಗ ಕೋರ್ಟ್‌ಗೆ ಶರಣಾಗಲು ಸಿದ್ಧರಿಲ್ಲ. ಸದ್ಯ ಇಲ್ಲೇ ಎಲ್ಲಿಯೋ ಕಾರಿನಲ್ಲಿ ಕುಳಿತಿರಬಹುದು ಎಂದು ಹೇಳಿದರು. ಈ ವೇಳೆ ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು. ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ ಎಚ್‌.ಡಿ. ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರೇವಣ್ಣ ಟೆಂಪಲ್‌ ರನ್‌ ಹೀಗಿತ್ತು

ಇಂದು ಮುಂಜಾನೆ ತಾವು ಉಳಿದುಕೊಂಡಿದ್ದ ದೇವೇಗೌಡರ ಮನೆಯಿಂದ ಹೊರಟ ರೇವಣ್ಣ ಅವರು ವೈದ್ಯ ಸಿಎನ್ ಮಂಜುನಾಥ್ ಅವರ ನಿವಾಸಕ್ಕೆ ಬಂದು, ಅಲ್ಲಿಂದ ಟೆಂಪಲ್ ರನ್ ಶುರು ಮಾಡಿದರು. ಬೆಳಗ್ಗೆ 8:26ಕ್ಕೆ ಜಯನಗರ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ, 8:50ಕ್ಕೆ ಗವಿಗಂಗಾಧರೇಶ್ವರ ದೇವಸ್ಥಾನ, 9:10ಕ್ಕೆ ಶ್ರೀ ಶೃಂಗೇರಿ ಶಂಕರ ಮಠ, 10:31ಕ್ಕೆ ಬಸವನಗುಡಿಯ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿ ನಂತರ ಕೋರ್ಟ್‌ಗೆ ಹಾಜರಾದರು.

Continue Reading
Advertisement
Pakistan
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ4 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ4 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ5 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ5 hours ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು5 hours ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ5 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

BJP district president N S Hegde pressmeet in Yallapur
ಉತ್ತರ ಕನ್ನಡ5 hours ago

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

IPL 2024
ಪ್ರಮುಖ ಸುದ್ದಿ5 hours ago

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

Lady Constable
ದೇಶ6 hours ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ14 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು17 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌