Site icon Vistara News

ಅ.1ರಂದು ಮಹಾಲಕ್ಷ್ಮೀ ಲೇಔಟ್‌ನಲ್ಲಿ ಆರೋಗ್ಯ ಶಿಬಿರ, ಸ್ವಚ್ಛತಾ ದಿವಸ್

Swachhata Diwas

ಬೆಂಗಳೂರು: ಮಹಾಲಕ್ಷ್ಮೀ ಎಜುಕೇಶನಲ್ ಟ್ರಸ್ಟ್ ಹಾಗೂ ಮಹಾಲಕ್ಷ್ಮೀ ಲೇಔಟ್‌ ಬಿಜೆಪಿ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಸಪ್ತಾಹದ ಅಂಗವಾಗಿ ಅ.1ರಂದು ಬೆಳಗ್ಗೆ 8 ಗಂಟೆಗೆ ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದ ಕಮಲಾ ನಗರದ ಗವಿ ಗಂಗಾಧರೇಶ್ವರ ಶಾಲೆಯಲ್ಲಿ ಬೃಹತ್ ಆರೋಗ್ಯ ಶಿಬಿರ, ಸ್ವಚ್ಛತಾ ದಿವಸ್ ಹಾಗೂ ಶಾಸಕರ ಭವನದಲ್ಲಿ ಕ್ಷಯ ರೋಗಿಗಳಿಗೆ ಕಿಟ್ ವಿತರಣೆ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ, ಗೋಪಾಲಯ್ಯ, ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ ಹಾಗೂ ಎಸ್ ಹರೀಶ್ ಸೇರಿ ಬಿಬಿಎಂಪಿ ಮಾಜಿ ಸದಸ್ಯರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ | Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ

Exit mobile version