Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ! - Vistara News

ಬೆಂಗಳೂರು

Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

Hidden Camera: ದೊಡ್ಡ ದೊಡ್ಡ ಹೋಟೆಲ್‌, ಕೆಫೆಗಳಲ್ಲಿ ವಾಶ್‌ರೂಮ್‌ ಬಳಸುವ ಮುನ್ನ ನೂರು ಸಲ ಯೋಚನೆ ಮಾಡಿ.. ಯಾಕೆಂದರೆ ನಿಮಗೆ ಗೊತ್ತಿಲ್ಲದಂತೆ ನಿಮ್ಮ ವಿಡಿಯೊ ರೆಕಾರ್ಡ್‌ ಆಗುತ್ತಿರಬಹುದು. ಸದ್ಯ ಇಂತಹದ್ದೆ ಒಂದು ಘಟನೆ ಪ್ರಸಿದ್ಧ ಕಾಫಿ ಶಾಪ್‌ನಲ್ಲಿ ನಡೆದಿದೆ.

VISTARANEWS.COM


on

Hidden camera
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಲವು ಕಿಡಿಗೇಡಿಗಳ ಕೃತ್ಯಕ್ಕೆ ಹೆಣ್ಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಹೋಟೆಲ್‌, ಕಾಫಿ ಶಾಪ್‌, ಶಾಪಿಂಗ್‌ ಮಾಲ್‌ನ ಟ್ರಯಲ್‌ ರೂಮ್‌ನಿಂದ ಹಿಡಿದು ವಾಶ್‌ ರೂಮ್‌ನಲ್ಲಿ ಹಿಡನ್‌ ಕ್ಯಾಮೆರಾಗಳನ್ನು (Hidden Camera) ಇಟ್ಟು, ಹೆಣ್ಮಕ್ಕಳ ವಿಡಿಯೊ ಮಾಡಿಕೊ‌ಳ್ಳುವ ಗ್ಯಾಂಗ್‌ ಇದೆ. ಸದ್ಯ ಬೆಂಗಳೂರು ನಗರದ ಬಿಇಎಲ್ ರಸ್ತೆಯಲ್ಲಿರುವ ಪ್ರಸಿದ್ಧ ಥರ್ಡ್ ವೇವ್ ಕಾಫಿ ಕೆಫೆಯ (Third Wave Coffee cafe) ಲೇಡಿಸ್‌ ವಾಶ್‌ ರೂಮ್‌ನ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆಯಾಗಿದೆ. ಸುಮಾರು 2 ಗಂಟೆಗಳ ಕಾಲ ಮೊಬೈಲ್‌ ಕ್ಯಾಮೆರಾದಲ್ಲಿ ವಿಡಿಯೊ ರೆಕಾರ್ಡ್‌ ಆಗಿದೆ.

ಥರ್ಡ್‌ ವೇವ್‌ ಕಾಫಿ ಕೆಫೆ ಸಿಬ್ಬಂದಿಯೇ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಕೆಫೆ ಸಿಬ್ಬಂದಿಯೇ ಮೊಬೈಲ್ ಫೋನ್ ಅನ್ನು ಮಹಿಳಾ ಶೌಚಾಲಯದಲ್ಲಿ ಬಚ್ಚಿಟ್ಟಿದ್ದು, ಸುಮಾರು ಎರಡು ಗಂಟೆಗಳ ಕಾಲ ವಿಡಿಯೊ ರೆಕಾರ್ಡಿಂಗ್ ಆಗಿದೆ ಎಂದು ‘ಗ್ಯಾಂಗ್ಸ್ ಆಫ್ ಸಿನಿಪುರ್’ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮಗೆ ಆದ ಅನುಭವವನ್ನು ಹಂಚಿಕೊಂಡಿದ್ದಾರೆ.

“ನಾನು ಬೆಂಗಳೂರಿನ ಥರ್ಡ್ ವೇವ್ ಕಾಫಿ ಕೆಫೆಗೆ ಹೋಗಿದ್ದೆ. ಶೌಚಾಲಯದ ಸೀಟಿಗೆ ಎದುರಾಗಿ ಇರುವ ಕಸದ ಬುಟ್ಟಿಯಲ್ಲಿ ಮೊಬೈಲ್‌ ಫೋನ್‌ ಅಡಗಿಸಿಟ್ಟಿರುವುದು ಕಂಡು ಬಂತು. ಫೋನ್‌ ಫ್ಲೈಟ್‌ ಮೋಡ್‌ನಲ್ಲಿ ಇದ್ದ ಕಾರಣಕ್ಕೆ ಯಾರಿಗೂ ಗೊತ್ತಾಗಿಲ್ಲ. ಡಸ್ಟ್‌ಬೀನ್‌ನಲ್ಲಿ ಸಣ್ಣದೊಂದು ರಂಧ್ರ ಮಾಡಿ, ಫೋನ್‌ ಇಟ್ಟು ಕ್ಯಾಮೆರಾ ಆನ್‌ ಮಾಡಲಾಗಿತ್ತು. ಇದನ್ನೂ ಸೂಕ್ಷ್ಮವಾಗಿ ಗಮನಿಸಿದಾಗ ಫೋನ್‌ ಇರುವುದು ಗೊತ್ತಾಗಿದೆ. ಆ ಫೋನ್‌ ಅಲ್ಲಿನ ಸಿಬ್ಬಂದಿಯದ್ದು ಎಂದು ಗೊತ್ತಾಯಿತು ಎಂದು ತಿಳಿಸಿದ್ದಾರೆ.

Hidden camera
Hidden camera

ಇಂತಹ ಕೆಫೆಗಳು ಅಥವಾ ರೆಸ್ಟೋರೆಂಟ್‌ಗಳು ಎಷ್ಟೇ ಪ್ರಸಿದ್ಧವಾಗಿದ್ದರೂ, ಇವತ್ತಿನಿಂದ ನಾನು ಯಾವುದೇ ವಾಶ್ ರೂಮ್‌ ಬಳಸಬೇಕಾದರೂ ನೂರು ಸಲ ಯೋಚನೆ ಮಾಡುತ್ತೇನೆ. ನೀವೂ ಕೂಡ ಹುಷಾರಾಗಿ ಎಂದು ಇನ್ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿಬ್ಬಂದಿಯನ್ನು ವಜಾ ಮಾಡಿದ ಥರ್ಡ್‌ ವೇವ್‌ ಕಾಫಿ ಕೆಫೆ

ಸೋಶಿಯಲ್‌ ಮೀಡಿಯಾದಲ್ಲಿ ಈ ಘಟನೆ ಕುರಿತು ಥರ್ಡ್‌ ವೇವ್‌ ಕಾಫಿ ಕೆಫೆ ಎಕ್ಸ್‌ನಲ್ಲಿ ಕ್ಷಮೆ ಕೇಳಿ ಪೋಸ್ಟ್‌ ಮಾಡಿದೆ. ಬಿಇಎಲ್‌ ರಸ್ತೆಯಲ್ಲಿರುವ ಕಫೆಯಲ್ಲಿ ನಡೆದಿರುವ ಈ ಘಟನೆಗೆ ವಿಷಾದಿಸುತ್ತೇವೆ. ನಮ್ಮ ಸಿಬ್ಬಂದಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಲಾಗಿದೆ. ಜತೆಗೆ ಗ್ರಾಹಕರ ಸುರಕ್ಷತೆಗಾಗಿ ಮತ್ತಷ್ಟು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Hidden camera
Hidden camera

ಕ್ಯಾಮೆರಾ ಇಟ್ಟ ಕಾಮುಕ ಅರೆಸ್ಟ್‌

ಕ್ಯಾಮೆರಾ ಕಂಡೊಡನೆ ಗಾಬರಿಯಾದ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೃತ್ಯದ ಸ್ಥಳಕ್ಕಾಗಮಿಸಿದ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜತೆಗೆ ಭದ್ರಾವತಿ ಮೂಲದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಕೊಂಡಿದ್ದು ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಕಾಫಿ ಶಾಪ್‌ನಲ್ಲಿ ಕಾಫಿ ಮೇಕರ್ ಆಗಿದ್ದ ಮನೋಜ್ (23) ಎಂಬಾತನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಫೋನ್ ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Teachers Protest: ಶಿಕ್ಷಣ ಇಲಾಖೆ ವಿರುದ್ಧ ಸಮರ ಸಾರಿದ ಶಿಕ್ಷಕರು; ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ

Teachers Protest: ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳು ನಾಳೆ ಬಂದ್ ಆಗಲಿವೆ. ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ.

VISTARANEWS.COM


on

Teachers Protest
Koo

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಣ ಇಲಾಖೆ ವಿರುದ್ಧ ಶಿಕ್ಷಕರು ಸಮರ ಸಾರಿದ್ದಾರೆ. ಜುಲೈ 12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ರಾಜ್ಯದ ವಿವಿಧೆಡೆಯಿಂದ ಸುಮಾರು 1.30 ಲಕ್ಷ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳು ನಾಳೆ ಬಂದ್ ಆಗಲಿವೆ. ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ. ಶಿಕ್ಷಕರು ಅನೇಕ ಬಾರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲಾಖೆ ಮೊರೆ ಹೋಗಿದ್ದರು. ಸಚಿವರ ಭೇಟಿಯಿಂದಲೂ ನಿರಾಸೆ ಉಂಟಾಗಿದ್ದರಿಂದ ಬೀದಿಗಿಳಿಯಲು ನಿರ್ಧರಿಸಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದ ಶಿಕ್ಷಕರು ಭಾಗಿಯಾಗುವ ಸಾಧ್ಯತೆ ಇದೆ. ಇತ್ತ ನಾಳೆ ಶಾಲೆ ಬಂದ್ ಮಾಡದಂತೆ ಇಲಾಖೆಯಿಂದ ಆದೇಶ ಹೊರಡಿಸಿದೆ. ಆದರೆ, ಇಲಾಖೆಯ ಆದೇಶಕ್ಕೂ ಕ್ಯಾರೆ ಎನ್ನದೇ 1.30 ಲಕ್ಷ ಶಿಕ್ಷಕರಿಂದ ಪ್ರತಿಭಟನ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ನಾಗೇಶ್ ಮಾಹಿತಿ ನೀಡಿದ್ದಾರೆ.

ಸರ್ಕಾರ 2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5 ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. 2016ಕ್ಕಿಂತ ಮುಂಚೆ ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು ಎಂಬುದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯಾಗಿದೆ.

ಇದನ್ನೂ ಓದಿ | Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮುಂಚೆ ನೇಮಕಾತಿ ಹೊಂದಿದ ಹಾಗೂ ಬಿ.ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು, ತದನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು, ಈ ಮುಂಚಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಶಿಕ್ಷಕರು ಒತ್ತಾಯಿಸಿದ್ದಾರೆ.

Continue Reading

ಬೆಂಗಳೂರು

Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

Tungabhadra Dam: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ʼʼಸರ್ಕಾರ ಅಲ್ಲಿಗೆ ತಾಂತ್ರಿಕ ತಂಡವನ್ನು ಕಳುಹಿಸುತ್ತಿದೆ. ನದಿಪಾತ್ರದ ಊರುಗಳಲ್ಲಿ ಪ್ರವಾಹ ಆಗುವ ಭಯ ಬೇಡ” ಎಂದು ಹೇಳಿದ್ದಾರೆ.

VISTARANEWS.COM


on

Tungabhadra Dam
Koo

ಬೆಂಗಳೂರು: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯ (Tungabhadra Dam)ದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ (Dr. G. Parameshwar) ಅವರು, ʼʼಸರ್ಕಾರ ಅಲ್ಲಿಗೆ ತಾಂತ್ರಿಕ ತಂಡವನ್ನು ಕಳುಹಿಸುತ್ತಿದೆ. ನದಿಪಾತ್ರದ ಊರುಗಳಲ್ಲಿ ಪ್ರವಾಹ ಆಗುವ ಭಯ ಬೇಡ ಎಂದು ಎಂಜಿನಿಯರ್‌ಗಳು ತಿಳಿಸಿದ್ದಾರೆ. ಕ್ರಸ್ಟ್ ಗೇಟ್ ರಿಪೇರಿ ಮಾಡಲು ಸಾಧ್ಯವಿದೆʼʼ ಎಂದು ಅಭಯ ನೀಡಿದ್ದಾರೆ.

ʼʼಪ್ರವಾಹ ಭೀತಿ ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳುತ್ತಿದ್ದಾರೆ. ತಾಂತ್ರಿಕ ತಂಡ ಹೋದ ನಂತರ ಎಲ್ಲ ಸರಿಯಾಗುವ ವಿಶ್ವಾಸ ಇದೆʼʼ ಎಂದು ತಿಳಿಸಿದ್ದಾರೆ.

ಸರ್ಕಾರ ‌ಎಲ್ಲಿ‌ದೆ? ಮಾಜಿ ಸಚಿವ ಹಾಲಪ್ಪ ಆಚಾರ್ ಆಕ್ರೋಶ

ಕೊಪ್ಪಳ: ತುಂಗಭದ್ರಾ ಜಲಾಶಯ ಪರಿಶೀಲಿಸಿದ ಮಾಜಿ ಸಚಿವ ಹಾಲಪ್ಪ ಆಚಾರ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ʼʼಜಲಾಶಯದ 19ನೇ ಗೇಟ್ ಅಡ್ರೆಸ್ ಇಲ್ಲದಂತೆ ನಾಪತ್ತೆಯಾಗಿದೆ. ಉಳಿದ ಗೇಟ್‌ಗಳಲ್ಲಿ ಕೂಡ ಬಿರುಕು ಕಂಡು ಬಂದಿದೆ. ಇಂತಹ ಘಟನೆ ನಡೆದಿದ್ದರೂ ಜವಾಬ್ದಾರಿ ಇರುವ ಸರ್ಕಾರ ‌ಎಲ್ಲಿ‌ದೆ?ʼʼ ಎಂದು ಪ್ರಶ್ನಿಸಿದ್ದಾರೆ.

ʼʼ4 ಜಿಲ್ಲೆಯ 10 ಲಕ್ಷ ಎಕರೆ ಪ್ರದೇಶದ ರೈತರು ಇದೇ ಡ್ಯಾಂ ನೀರನ್ನು ನೆಚ್ಚಿಕೊಂಡಿದ್ದಾರೆ. ನೀರು ಅಪಾರ ಪ್ರಮಾಣದಲ್ಲಿ ಹರಿ ಹೋಗುತ್ತಿರುವುದಿಂದ ಪ್ರವಾಹ ಭೀತಿ ಜತೆಗೆ ಮುಂದೆ ನೀರು ಖಾಲಿಯಾಗುವ ಆತಂಕವೂ ಇದೆ. ರೈತರ ತಲೆ ಮೇಲೆ ಸರ್ಕಾರ ಬಂಡೆ ಹಾಕಿದಂತಾಗಿದೆ. ಯಾವುದೇ ಯೋಜನೆಯಿರಲಿ ಅದನ್ನು ಸೂಕ್ತವಾಗಿ ನಿರ್ವಹಣೆ ಮಾಡಬೇಕು. ಆದರೆ ಇಲ್ಲಿ ಸರಿಯಾಗಿ ನಿರ್ವಹಣೆ ಮಾಡದ ಕಾರಣ ನಿರ್ಲಕ್ಷ್ಯದಿಂದ ಈ ರೀತಿ ಪರಿಸ್ಥಿತಿ ಎದುರಾಗಿದೆʼʼ ಎಂದು ದೂರಿದ್ದಾರೆ.

ʼʼಇದು ಸರ್ಕಾರದ ತಪ್ಪು. ಜಲಾಶಯದ ಸ್ಥಿತಿಗೆ ಸರ್ಕಾರವೇ ನೇರ ಹೊಣೆ. ಜಲಾಶಯ ನಿರ್ವಹಣೆಗೆ ಅನುದಾನ ಇರುತ್ತದೆ. ಒಂದುವೇಳೆ ಇಲ್ಲದಿದ್ದರೆ ರಾಜ್ಯ ಸರ್ಕಾರ ‌ನೀಡಬೇಕು. ಕಾಂಗ್ರೆಸ್ ಸರ್ಕಾರದಿಂದ ಬೇಜವಬ್ದಾರಿತನದಿಂದ ಆಡಳಿತ ನಡೆಯುತ್ತಿದೆ. ಯುದ್ದೋಪಾದಿಯಲ್ಲಿ ಗೇಟ್ ರಿಪೇರಿ ಕೆಲಸವಾಗಬೇಕಿತ್ತು. ಆದರೆ ಇಲ್ಲಿವರಗೆ ರಿಪೇರಿ ‌ಕೆಲಸ‌ ಆರಂಭವಾಗಿಲ್ಲʼʼ ಎಂದು ಹೇಳಿದ್ದಾರೆ.

ನೀರು ಉಳಿಸಬೇಕು: ಸಂಸದ ತುಕಾರಾಂ

ವಿಜಯನಗರ: ʼʼತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿಯಲು ಏನು ಕಾರಣ ಎನ್ನುವುದು ಗೊತ್ತಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ‌ವೋ ತಾಂತ್ರಿಕ ತೊಂದರೆಯೋ ಎನ್ನುವುದು ತಿಳಿದು ಬಂದಿಲ್ಲ. ಮೊದಲು ಹರಿದು ಹೋಗುತ್ತಿರುವ ನೀರನ್ನು ಉಳಿಸಬೇಕಿದೆ. ಈ ಬಗ್ಗೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದೇನೆʼʼ ಎಂದ ಸಂಸದ ತುಕಾರಾಂ ತಿಳಿಸಿದ್ದಾರೆ.

ಜಲಾಶಯ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ʼʼಗೇಟ್ ದುರಸ್ತಿಗಾಗಿ ಪರಿಣಿತರನ್ನು ಕರೆಸುತ್ತಿದ್ದೇವೆ. ಈಗಾಗಲೇ ನೀರಾವರಿ ನಿಗಮದ ಎಂಡಿ ಬಂದಿದ್ದಾರೆ. ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಮತ್ತು ನಾನು ರೈತರ ಜತೆ ಇದ್ದೇ ಇರುತ್ತೇವೆʼʼ ಎಂದು ತಿಳಿಸಿದ್ದಾರೆ.

ಬಾಗಿನ ಅರ್ಪಣೆ ಕಾರ್ಯಕ್ರಮ ಮುಂದೂಡಿಕೆ

ಸೋಮವಾರ (ಆಗಸ್ಟ್‌ 13) ನಿಗದಿಯಾಗಿದ್ದ ಹೇಮಾವತಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

Continue Reading

ಕ್ರೈಂ

Cyber Crime: ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ವಂಚನೆ; 1.53 ಕೋಟಿ ರೂ. ಕಳೆದುಕೊಂಡ ಟೆಕ್ಕಿ ದಂಪತಿ

Cyber Crime: ವಂಚಕನೊಬ್ಬ ಆನ್‌ಲೈನ್‌ ಹೂಡಿಕೆ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿ ಬಳಿಯಿಂದ ಬರೋಬ್ಬರಿ 1.53 ಕೋಟಿ ರೂಪಾಯಿ ಪೀಕಿಸಿದ್ದು, ಸದ್ಯ ಪೊಲೀಸರು 1.4 ಕೋಟಿ ರೂ. ಅನ್ನು 50ಕ್ಕೂ ಹೆಚ್ಚು ಖಾತೆಗಳಿಂದ ರಿಕವರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಂಚನೆಗೆ ಒಳಗಾದ ದಂಪತಿ ನೀಡಿ ದೂರು ಆಧರಿಸಿ ಪೂರ್ವ ವಲಯದ ಸೈಬರ್ ಕ್ರೈಂ ‌ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಲಾಭದ ಆಸೆ ತೋರಿಸಿ ಲಂಡನ್‌ಲ್ಲಿ ಕುಳಿತು ವಂಚಕ ಈ ಕೃತ್ಯ ಎಸಗಿದ್ದ.

VISTARANEWS.COM


on

Cyber Crime
Koo

ಬೆಂಗಳೂರು: ಸೈಬರ್‌ ಕ್ರೈಂ (Cyber Crime) ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ವಂಚಕನೊಬ್ಬ ಆನ್‌ಲೈನ್‌ ಹೂಡಿಕೆ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿ ಬಳಿಯಿಂದ ಬರೋಬ್ಬರಿ 1.53 ಕೋಟಿ ರೂಪಾಯಿ ಪೀಕಿಸಿದ್ದು, ಸದ್ಯ ಪೊಲೀಸರು 1.4 ಕೋಟಿ ರೂ. ಅನ್ನು 50ಕ್ಕೂ ಹೆಚ್ಚು ಖಾತೆಗಳಿಂದ ರಿಕವರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಂಚನೆಗೆ ಒಳಗಾದ ದಂಪತಿ ನೀಡಿ ದೂರು ಆಧರಿಸಿ ಪೂರ್ವ ವಲಯದ ಸೈಬರ್ ಕ್ರೈಂ ‌ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಬಾಣಸವಾಡಿಯಲ್ಲಿ ವಾಸಿಸುತ್ತಿರುವ ದಂಪತಿಗೆ ಬ್ಯಾಂಕ್‌ ಅಧಿಕಾರಿಗಳ ಜತೆ ಸೇರಿ ವಂಚಕ ಬಲೆ ಬೀಸಿದ್ದ. ಹೆಚ್ಚಿನ ಲಾಭದ ಆಸೆ ತೋರಿಸಿ ಈ ಕೃತ್ಯ ಎಸಗಿದ್ದ ಎನ್ನುವುದು ತನಿಖೆ ವೇಳೆ ತಿಳಿದು ಬಂದಿದೆ.

ಬ್ರಿಟನ್‌ನಲ್ಲಿ ಕುಳಿತು ವಂಚಕ ಈ ವಂಚನೆ ಜಾಲವನ್ನು ನಡೆಸುತ್ತಿದ್ದ. ಈತ ಹಣ ಸ್ವೀಕರಿಸಲು ಉತ್ತರ ಭಾರತೀಯರ ಒಂದಿಷ್ಟು ಖಾತೆಗಳನ್ನು ಬಾಡಿಗೆಗೆ ಪಡೆದಿದ್ದ. ಅಷ್ಟೇ ಅಲ್ಲ ಹೂಡಿಕೆ ನಿಜ ಎಂದು ಬಿಂಬಿಸಲು ಈತ ನಕಲಿ ವೆಬ್‌ಸೈಟ್‌ ಒಂದನ್ನು ತೆರೆದು ದಂಪತಿಗೆ ಇದರ ಆಕ್ಸೆಸ್‌ ಕೂಡ ನೀಡಿದ್ದ.

ಇದರಲ್ಲಿ ತಮ್ಮ ಹೂಡಿಕೆ ಬೆಳೆಯುತ್ತಿರುವುದನ್ನು ಕಂಡು ದಂಪತಿ ಖುಷಿಯಾಗಿದ್ದರು. ಕೆಲವು ತಿಂಗಳ ನಂತರ ಒಂದಿಷ್ಟು ಹಣವನ್ನು ಹಿಂಪಡೆಯಲು ನೋಡಿದ್ದಾರೆ. ಆದರೆ ಹಣ ತೆಗೆಯಲು ಆಗುತ್ತಿರಲಿಲ್ಲ. ಇದರಿಂದ ಅವರಿಗೆ ಅನುಮಾನ ಮೂಡತೊಡಗಿತ್ತು. ಅಷ್ಟೇ ಅಲ್ಲ ನಕಲಿ ವೆಬ್‌ಸೈಟ್‌ನ ಆಕ್ಸೆಸ್‌ ಕೂಡ ಹೋಗಿತ್ತು. ಕೊನೆಗೆ ದಂಪತಿಯನ್ನು ಈ ವೆಬ್‌ಸೈಟ್‌ ಬ್ಲಾಕ್ ಮಾಡಿತ್ತು.

ಇದರೊಂದಿಗೆ ತಾವು ವಂಚನೆಗೆ ಸಿಲುಕಿರುವುದು ದಂಪತಿಗೆ ದೃಢವಾಗಿತ್ತು. ಕೂಡಲೇ ದಂಪತಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ಆರಂಭಿಸಿದ್ದಲ್ಲದೆ ಬ್ಯಾಂಕ್‌ ಅಧಿಕಾರಿಗಳ ಜತೆ ಸೇರಿ ನಡೆಸಿದ್ದ ಈ ವಂಚನೆ ಜಾಲವನ್ನು ಭೇದಿಸಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿದ್ದ 50ಕ್ಕೂ ಹೆಚ್ಚು ಖಾತೆಗಳನ್ನು ಬ್ಲಾಕ್‌ ಮಾಡಿದ್ದಾರೆ.

ಲಂಡನ್​​ನಿಂದ ಕೃತ್ಯ

ʼʼಆರೋಪಿ ಲಂಡನ್​​ನಲ್ಲಿ ಕುಳಿತು ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಇದ್ದು, ಇದಕ್ಕಾಗಿ ಉತ್ತರ ಭಾರತದ ಹಲವಾರು ಅಕೌಂಟ್​ಗಳನ್ನು ಬಳಕೆ ಮಾಡಿದ್ದಾನೆ. ಷೇರು ಮಾರ್ಕೆಟ್ ಬ್ರೋಕರೇಜ್ ರೀತಿಯ ನಕಲಿ ವೆಬ್​ಸೈಟ್ ರಚನೆ ಮಾಡಿದ್ದಾನೆ. ಸದ್ಯ ಆರೋಪಿ ಯಾರು ಎಂಬುದರ ಸ್ಪಷ್ಟತೆ ಇಲ್ಲʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಶಪಡಿಸಿಕೊಳ್ಳಲಾದ ಹಣವನ್ನು ಪೊಲೀಸರು ವಂಚನೆಗೆ ಒಳಗಾದ ದಂಪತಿಗೆ ಮರಳಿಸುತ್ತಿದ್ದಾರೆ.

ನೋಡ ನೋಡುತ್ತಲೇ ಸ್ಕೂಟರ್‌ ಕದ್ದ ಕಳ್ಳ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಕ‍ಳ್ಳರ ಹಾವಳಿ ಮಿತಿ ಮೀರಿದೆ. ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್‌ ಅನ್ನು ಕಳ್ಳನೊಬ್ಬ ರಾಜಾರೋಷವಾಗಿ ಕದ್ದುಕೊಂಡು ಹೋಗಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಬ್ಬಾಳದ ಚೋಳನಹಳ್ಳಿ ಮಿನಿ ಮಾರ್ಟ್ ಮುಂಭಾಗ ಈ ಘಟನೆ ನಡೆದಿದೆ. ಕೀ ಸಮೇತ ಸ್ಕೂಟರ್ ನಿಲ್ಲಿಸಿ ಮಹಿಳೆಯೊಬ್ಬರು ತರಕಾರಿ ತರಲು ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ. ಮಹಿಳೆ ತರಕಾರಿ ತಗೊಂಡು ವಾಪಸ್ ಬರುವ ವೇಳೆ ಆ್ಯಕ್ಟಿವಾ ಮಾಯವಾಗಿತ್ತು. ಮಹಿಳೆ ಕೀಯನ್ನು ಸ್ಕೂಟರ್‌ನಲ್ಲೇ ಬಿಟ್ಟು ಅಂಗಡಿಗೆ ತೆರಳಿರುವುದನ್ನು ಗಮನಿಸಿದ ಕಳ್ಳ ತನ್ನ ಕೈಚಳಕ ತೋರಿದ್ದ. ಅತ್ತ-ಇತ್ತ ನೋಡಿ ಸ್ಕೂಟರ್ ಸ್ಟಾರ್ಟ್ ಮಾಡಿಕೊಂಡು ಕಳ್ಳ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಇದನ್ನೂ ಓದಿ: Californium Stone: ಪೊಲೀಸರಿಂದ ಭರ್ಜರಿ ಬೇಟೆ; 850 ಕೋಟಿ ರೂ. ಮೌಲ್ಯದ ಅಪರೂಪದ ವಿಕಿರಣಶೀಲ ಹರಳು ವಶ

Continue Reading

ಕರ್ನಾಟಕ

Dog Meat: ಅಬ್ದುಲ್‌ ರಜಾಕ್‌ ಬಾಕ್ಸ್‌ನಲ್ಲಿದ್ದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಹೈದರಾಬಾದ್‌ ಲ್ಯಾಬ್‌ ವರದಿ

Dog Meat: ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌ ರಜಾಕ್‌ ತರಿಸುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು ಪುನೀತ್‌ ಕೆರೆಹಳ್ಳಿ ಸೇರಿ ಹಲವು ಆರೋಪಿಸಿದ್ದರು. ಹಾಗಾಗಿ, ಕೆಲ ಬಾಕ್ಸ್‌ಗಳಲ್ಲಿದ್ದ ಮಾಂಸದ ಸ್ಯಾಂಪಲ್‌ಅನ್ನು ಲ್ಯಾಬ್‌ಗೆ ಕಳುಹಿಸಲಾಗಿತ್ತು. ಈಗ ಅದರ ವರದಿ ಬಂದಿದ್ದು, ಬಾಕ್ಸ್‌ನಲ್ಲಿದ್ದಿದ್ದು ಕುರಿ ಮಾಂಸವೇ ಎಂಬುದು ಸಾಬೀತಾಗಿದೆ.

VISTARANEWS.COM


on

Dog meat
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ (Majestic Railway Station) ಪತ್ತೆಯಾಗಿರುವುದು ಕುರಿ ಮಾಂಸವೇ (mutton) ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್‌ ಹೇಳಿದ್ದಾರೆ. ಲ್ಯಾಬ್ ರಿಪೋರ್ಟ್‌ನಲ್ಲಿ (Lab Report) ಇದು ಕುರಿ ಮಾಂಸ ಎಂದು ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರ ಬೆನ್ನಲ್ಲೇ, ಹೈದರಾಬಾದ್‌ ಲ್ಯಾಬ್‌ ವರದಿ ಕೂಡ ಲಭ್ಯವಾಗಿದ್ದು, ಬಾಕ್ಸ್‌ನಲ್ಲಿದ್ದಿದ್ದು ಕುರಿ ಮಾಂಸವೇ ಎಂದು ಸ್ಪಷ್ಟಪಡಿಸಿದೆ. ಇದು ಕೂಡ ʼನಾಯಿ ಮಾಂಸ ವಿವಾದʼ (Dog Meat Controversy) ಎತ್ತಿರುವ ಪುನೀತ್‌ ಕೆರೆಹಳ್ಳಿ (Puneeth Kerehalli) ಬಳಗಕ್ಕೆ ಹಿನ್ನಡೆಯಾಗಿದೆ.

ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌ ರಜಾಕ್‌ ತರಿಸುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು ಪುನೀತ್‌ ಕೆರೆಹಳ್ಳಿ ಸೇರಿ ಹಲವು ಆರೋಪಿಸಿದ್ದರು. ಹಾಗಾಗಿ, ಬಾಕ್ಸ್‌ನಲ್ಲಿದ್ದ ಮಾಂಸದ ಸ್ಯಾಂಪಲ್‌ಅನ್ನು ಹೈದರಾಬಾದ್‌ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಈಗ ಲ್ಯಾಬ್‌ ವರದಿ ಬಂದಿದ್ದು, ಅದು ಕುರಿ ಮಾಂಸವೇ ಎಂಬುದು ದೃಢವಾಗಿದೆ ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ. ಅಲ್ಲಿಗೆ, ನಾಯಿ ಮಾಂಸ ವಿವಾದವು ಸತ್ವ ಕಳೆದುಕೊಂಡಂತಾಗಿದೆ.

Puneeth Kerehalli
Puneeth Kerehalli

ಜುಲೈ 26ರಂದು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ 86 ಬಾಕ್ಸ್‌ಗಳಷ್ಟು ರಾಜಸ್ಥಾನದಿಂದ ತರಿಸಿದ ಮಾಂಸದ ಬಾಕ್ಸ್‌ಗಳು ಪತ್ತೆಯಾಗಿದ್ದವು. ಇವುಗಳನ್ನು ಹೈದರಾಬಾದ್‌ನ ICAR ನ್ಯಾಷನಲ್ ಮೀಟ್ ರಿಸರ್ಚ್ ಇನ್ಸ್ಟಿಟ್ಯೂಟ್‌ನಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಅದರಲ್ಲಿ S Ovis Aries ಎಂದು ಲ್ಯಾಬ್ ವರದಿಯಲ್ಲಿ ಬಂದಿದೆ. ಹಾಗೆಂದರೆ ಅದು ಕುರಿಯ ವೈಜ್ಞಾನಿಕ ಹೆಸರು. ಹೀಗಾಗಿ ಇದು ಕುರಿ ಮಾಂಸ ಎಂದು ಇಲಾಖೆ ಆಯುಕ್ತ ಶ್ರೀನಿವಾಸ್ ಅಧಿಕೃತವಾಗಿ ಹೇಳಿಕೆ ನೀಡಿದ್ದರು.

FSSAI ಗೈಡ್‌ಲೈನ್ಸ್ ಪ್ರಕಾರ ಉದ್ಯಮಿ ರಜಾಕ್ ಕೊಟ್ಟ ದಾಖಲೆ ಎಲ್ಲವೂ ಸರಿಯಾಗಿಯೇ ಇದೆ. ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ಥಾನ ಸೇರಿದಂತೆ ಹಲವು ಕಡೆಯಿಂದ ನಗರಕ್ಕೆ ಮಾಂಸ ಆಮದಾಗುತ್ತಿದೆ. ಮೀನು, ಕುರಿ ಸೇರಿದಂತೆ ವಿವಿಧ ರೀತಿಯ ಮಾಂಸ ಆಮದಾಗುತ್ತಿದೆ. ಎಲ್ಲವನ್ನೂ ಆಹಾರ ಗುಣಮಟ್ಟ ಇಲಾಖೆ ಪರೀಕ್ಷೆ ಮಾಡಿದೆ. ಮುಂದೆಯೂ ಮಾಡುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

Continue Reading
Advertisement
ವಿಜಯನಗರ14 mins ago

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

assault case
ಧಾರವಾಡ48 mins ago

Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

Serial Killer
ದೇಶ1 hour ago

Serial Killer: ಚಿಕ್ಕಮ್ಮನ ಮೇಲಿನ ದ್ವೇಷಕ್ಕೆ 9 ಅಮಾಯಕ ಮಹಿಳೆಯರನ್ನು ಕೊಂದ! ಇಲ್ಲಿದೆ ವಿಲಕ್ಷಣ ಹಂತಕನ unusual story!

Kannada New Movie Gopilola cinema Song Out
ಸ್ಯಾಂಡಲ್ ವುಡ್1 hour ago

Kannada New Movie: `ಗೋಪಿಲೋಲ’ ಸಿನಿಮಾದ ಎರಡನೇ ಹಾಡು ರಿಲೀಸ್ !

Job Alert
ಉದ್ಯೋಗ1 hour ago

Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

murder case
ತುಮಕೂರು1 hour ago

Murder Case : ಮಧ್ಯರಾತ್ರಿಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

Abhinav Bindra
ಕ್ರೀಡೆ2 hours ago

Abhinav Bindra: ‘ಒಲಿಂಪಿಕ್‌ ಆರ್ಡರ್‌’ ಗೌರವ ಸ್ವೀಕರಿಸಿದ ಅಭಿನವ್‌ ಬಿಂದ್ರಾ

Teachers Protest
ಕರ್ನಾಟಕ2 hours ago

Teachers Protest: ಶಿಕ್ಷಣ ಇಲಾಖೆ ವಿರುದ್ಧ ಸಮರ ಸಾರಿದ ಶಿಕ್ಷಕರು; ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ

Bear attack
ಹಾಸನ2 hours ago

Bear Attack : ರೈತನ ಮೇಲೆ ಡೆಡ್ಲಿ ಅಟ್ಯಾಕ್‌ ಮಾಡಿ ಕೊಂದು ಹಾಕಿದ ಕರಡಿ

Viral Video
ವೈರಲ್ ನ್ಯೂಸ್2 hours ago

Viral Video: ಸಾಧುಗಳಂತೆ ನಟಿಸಿ ಜನರನ್ನು ದೋಚುತ್ತಿದ್ದ ಖದೀಮರು; ಸಾರ್ವಜನಿಕರಿಂದ ಗೂಸಾ! ವಿಡಿಯೋ ಇದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌