Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ! - Vistara News

ಬೆಂಗಳೂರು

Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

Hidden Camera: ದೊಡ್ಡ ದೊಡ್ಡ ಹೋಟೆಲ್‌, ಕೆಫೆಗಳಲ್ಲಿ ವಾಶ್‌ರೂಮ್‌ ಬಳಸುವ ಮುನ್ನ ನೂರು ಸಲ ಯೋಚನೆ ಮಾಡಿ.. ಯಾಕೆಂದರೆ ನಿಮಗೆ ಗೊತ್ತಿಲ್ಲದಂತೆ ನಿಮ್ಮ ವಿಡಿಯೊ ರೆಕಾರ್ಡ್‌ ಆಗುತ್ತಿರಬಹುದು. ಸದ್ಯ ಇಂತಹದ್ದೆ ಒಂದು ಘಟನೆ ಪ್ರಸಿದ್ಧ ಕಾಫಿ ಶಾಪ್‌ನಲ್ಲಿ ನಡೆದಿದೆ.

VISTARANEWS.COM


on

Hidden camera
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕೆಲವು ಕಿಡಿಗೇಡಿಗಳ ಕೃತ್ಯಕ್ಕೆ ಹೆಣ್ಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಹೋಟೆಲ್‌, ಕಾಫಿ ಶಾಪ್‌, ಶಾಪಿಂಗ್‌ ಮಾಲ್‌ನ ಟ್ರಯಲ್‌ ರೂಮ್‌ನಿಂದ ಹಿಡಿದು ವಾಶ್‌ ರೂಮ್‌ನಲ್ಲಿ ಹಿಡನ್‌ ಕ್ಯಾಮೆರಾಗಳನ್ನು (Hidden Camera) ಇಟ್ಟು, ಹೆಣ್ಮಕ್ಕಳ ವಿಡಿಯೊ ಮಾಡಿಕೊ‌ಳ್ಳುವ ಗ್ಯಾಂಗ್‌ ಇದೆ. ಸದ್ಯ ಬೆಂಗಳೂರು ನಗರದ ಬಿಇಎಲ್ ರಸ್ತೆಯಲ್ಲಿರುವ ಪ್ರಸಿದ್ಧ ಥರ್ಡ್ ವೇವ್ ಕಾಫಿ ಕೆಫೆಯ (Third Wave Coffee cafe) ಲೇಡಿಸ್‌ ವಾಶ್‌ ರೂಮ್‌ನ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆಯಾಗಿದೆ. ಸುಮಾರು 2 ಗಂಟೆಗಳ ಕಾಲ ಮೊಬೈಲ್‌ ಕ್ಯಾಮೆರಾದಲ್ಲಿ ವಿಡಿಯೊ ರೆಕಾರ್ಡ್‌ ಆಗಿದೆ.

ಥರ್ಡ್‌ ವೇವ್‌ ಕಾಫಿ ಕೆಫೆ ಸಿಬ್ಬಂದಿಯೇ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಕೆಫೆ ಸಿಬ್ಬಂದಿಯೇ ಮೊಬೈಲ್ ಫೋನ್ ಅನ್ನು ಮಹಿಳಾ ಶೌಚಾಲಯದಲ್ಲಿ ಬಚ್ಚಿಟ್ಟಿದ್ದು, ಸುಮಾರು ಎರಡು ಗಂಟೆಗಳ ಕಾಲ ವಿಡಿಯೊ ರೆಕಾರ್ಡಿಂಗ್ ಆಗಿದೆ ಎಂದು ‘ಗ್ಯಾಂಗ್ಸ್ ಆಫ್ ಸಿನಿಪುರ್’ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮಗೆ ಆದ ಅನುಭವವನ್ನು ಹಂಚಿಕೊಂಡಿದ್ದಾರೆ.

“ನಾನು ಬೆಂಗಳೂರಿನ ಥರ್ಡ್ ವೇವ್ ಕಾಫಿ ಕೆಫೆಗೆ ಹೋಗಿದ್ದೆ. ಶೌಚಾಲಯದ ಸೀಟಿಗೆ ಎದುರಾಗಿ ಇರುವ ಕಸದ ಬುಟ್ಟಿಯಲ್ಲಿ ಮೊಬೈಲ್‌ ಫೋನ್‌ ಅಡಗಿಸಿಟ್ಟಿರುವುದು ಕಂಡು ಬಂತು. ಫೋನ್‌ ಫ್ಲೈಟ್‌ ಮೋಡ್‌ನಲ್ಲಿ ಇದ್ದ ಕಾರಣಕ್ಕೆ ಯಾರಿಗೂ ಗೊತ್ತಾಗಿಲ್ಲ. ಡಸ್ಟ್‌ಬೀನ್‌ನಲ್ಲಿ ಸಣ್ಣದೊಂದು ರಂಧ್ರ ಮಾಡಿ, ಫೋನ್‌ ಇಟ್ಟು ಕ್ಯಾಮೆರಾ ಆನ್‌ ಮಾಡಲಾಗಿತ್ತು. ಇದನ್ನೂ ಸೂಕ್ಷ್ಮವಾಗಿ ಗಮನಿಸಿದಾಗ ಫೋನ್‌ ಇರುವುದು ಗೊತ್ತಾಗಿದೆ. ಆ ಫೋನ್‌ ಅಲ್ಲಿನ ಸಿಬ್ಬಂದಿಯದ್ದು ಎಂದು ಗೊತ್ತಾಯಿತು ಎಂದು ತಿಳಿಸಿದ್ದಾರೆ.

Hidden camera

ಇಂತಹ ಕೆಫೆಗಳು ಅಥವಾ ರೆಸ್ಟೋರೆಂಟ್‌ಗಳು ಎಷ್ಟೇ ಪ್ರಸಿದ್ಧವಾಗಿದ್ದರೂ, ಇವತ್ತಿನಿಂದ ನಾನು ಯಾವುದೇ ವಾಶ್ ರೂಮ್‌ ಬಳಸಬೇಕಾದರೂ ನೂರು ಸಲ ಯೋಚನೆ ಮಾಡುತ್ತೇನೆ. ನೀವೂ ಕೂಡ ಹುಷಾರಾಗಿ ಎಂದು ಇನ್ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿಬ್ಬಂದಿಯನ್ನು ವಜಾ ಮಾಡಿದ ಥರ್ಡ್‌ ವೇವ್‌ ಕಾಫಿ ಕೆಫೆ

ಸೋಶಿಯಲ್‌ ಮೀಡಿಯಾದಲ್ಲಿ ಈ ಘಟನೆ ಕುರಿತು ಥರ್ಡ್‌ ವೇವ್‌ ಕಾಫಿ ಕೆಫೆ ಎಕ್ಸ್‌ನಲ್ಲಿ ಕ್ಷಮೆ ಕೇಳಿ ಪೋಸ್ಟ್‌ ಮಾಡಿದೆ. ಬಿಇಎಲ್‌ ರಸ್ತೆಯಲ್ಲಿರುವ ಕಫೆಯಲ್ಲಿ ನಡೆದಿರುವ ಈ ಘಟನೆಗೆ ವಿಷಾದಿಸುತ್ತೇವೆ. ನಮ್ಮ ಸಿಬ್ಬಂದಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಲಾಗಿದೆ. ಜತೆಗೆ ಗ್ರಾಹಕರ ಸುರಕ್ಷತೆಗಾಗಿ ಮತ್ತಷ್ಟು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Hidden camera

ಕ್ಯಾಮೆರಾ ಇಟ್ಟ ಕಾಮುಕ ಅರೆಸ್ಟ್‌

ಕ್ಯಾಮೆರಾ ಕಂಡೊಡನೆ ಗಾಬರಿಯಾದ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೃತ್ಯದ ಸ್ಥಳಕ್ಕಾಗಮಿಸಿದ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜತೆಗೆ ಭದ್ರಾವತಿ ಮೂಲದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಕೊಂಡಿದ್ದು ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಕಾಫಿ ಶಾಪ್‌ನಲ್ಲಿ ಕಾಫಿ ಮೇಕರ್ ಆಗಿದ್ದ ಮನೋಜ್ (23) ಎಂಬಾತನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಫೋನ್ ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

VISTARANEWS.COM


on

ನರೇಂದ್ರ ಮೋದಿ

ನರೇಂದ್ರ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಕಿಚ್ಚ.

ಸುದೀರ್ಘ ಅವಧಿಗೆ ಭಾರತದ ಚುನಾಯಿತ ಪ್ರಧಾನಮಂತ್ರಿಯಾಗಿ ಹೊಸ ಇತಿಹಾಸ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಕಿಚ್ಚ ಸುದೀಪ್ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುದೀಪ್, “12 ವರ್ಷಗಳು ಕಳೆದರೂ ಅದೇ ಉತ್ಸಾಹ, ಅದೇ ಕಾರ್ಯವೇಗ, ಕಿಂಚಿತ್ತೂ ದಣಿವೇ ಇಲ್ಲ” ಎಂದು ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ದೇಶದ ಅಭಿವೃದ್ಧಿ ಮತ್ತು ಜನಸೇವೆಯತ್ತ ಪ್ರಧಾನಿ ಮೋದಿ ತೋರಿರುವ ನಿರಂತರ ಬದ್ಧತೆ ಹಾಗೂ ಸಮರ್ಪಣೆಯನ್ನು ಕೊಂಡಾಡಿರುವ ಸುದೀಪ್, ಈ ಸಾಧನೆ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಅವರ ಮುಂದಿನ ದಿನಗಳಿಗೂ ಯಶಸ್ಸು, ಆರೋಗ್ಯ ಮತ್ತು ಇನ್ನಷ್ಟು ಸಾಧನೆಗಳು ತಮ್ಮದಾಗಲಿ ಎಂದು ಹಾರೈಸಿದ್ದಾರೆ.

ಭಾರತದ ಚುನಾವಣೋತ್ತರ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಸತತವಾಗಿ 4,399 ದಿನಗಳ(ಜೂನ್‌ 10ಕ್ಕೆ) ಕಾಲ ಅಧಿಕಾರದಲ್ಲಿದ್ದು, ನೆಹರೂ ಅವರ 4,398 ದಿನಗಳ ಚುನಾವಣೋತ್ತರ ಪ್ರಧಾನಮಂತ್ರಿ ಅವಧಿಯನ್ನು ಮೀರಿಸಿದ್ದಾರೆ.

ಕಿಚ್ಚ ಸುದೀಪ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದ್ದು, ಅನೇಕರು ಪ್ರಧಾನಿ ಮೋದಿ ಅವರ ಐತಿಹಾಸಿಕ ಆಡಳಿತಾವಧಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

Also Read: ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

ಪ್ರಮುಖ ಸುದ್ದಿ

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

VISTARANEWS.COM


on

ರಾಜ್ಯಸಭೆ ಟಿಕೆಟ್‌

ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ- ಹೆಚ್‌ಡಿಡಿ

ರಾಜ್ಯಸಭಾ ಟಿಕೆಟ್‌ಗಾಗಿ ಮೋದಿ ನನ್ನ ಸಂಬಂಧ ಆರಂಭವಾಗಿಲ್ಲ. ಮೋದಿಯವರು ವಿಶ್ವನಾಯಕ, ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆ ಜೆಡಿಎಸ್‌ ಇರುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಟಿಕೆಟ್‌ ಸಿಗದ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಹೆಚ್‌.ಡಿ.ದೇವೇಗೌಡರು ಇಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯಸಭೆ ಟಿಕೆಟ್‌ ವಿಚಾರವಾಗಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿ 18 ಶಾಸಕರು ಇದ್ದಾರೆ. ಹಾಗಾಗಿ ನಾವು ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನನ್ನ ಮತ್ತು ಮೋದಿಯವರ ಸಂಬಂಧ ಒಂದು ರಾಜ್ಯಸಭೆ ಟಿಕೆಟ್‌ನಿಂದ ಆರಂಭವಾಗಿದೆ ಅಥವಾ ಅದಕ್ಕಾಗಿಯೇ ಮುಂದುವರಿಯುತ್ತಿದೆ ಎಂದು ರಾಜ್ಯದ ಜನರು ಭಾವಿಸಬಾರದು. 2014ರಲ್ಲಿ ಮೋದಿ ಅವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಾಗಿನಿಂದಲೇ ಅವರ ಕಾರ್ಯವೈಖರಿಯನ್ನು ಗಮನಿಸುತ್ತಿದ್ದೇನೆ” ಎಂದು ದೇವೇಗೌಡರು ಹೇಳಿದ್ದಾರೆ.

ಗೋಧ್ರಾ ಘಟನೆಯ ಸಂದರ್ಭದಲ್ಲಿ ತಾವು ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮೋದಿ ಅವರನ್ನು ಟೀಕಿಸಿದ್ದ ವಿಚಾರವನ್ನೂ ಅವರು ನೆನಪಿಸಿಕೊಂಡರು. ಆದರೆ ನಂತರ ಪ್ರಧಾನಿಯಾದ ಬಳಿಕ ಮೋದಿ ಅವರನ್ನು ಹಲವು ಬಾರಿ ಭೇಟಿಯಾಗಿ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯದ ವಿಚಾರಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿಗಾಗಿ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಗಮನಿಸಿದ್ದೇನೆ. ದೇಶದ ಆರ್ಥಿಕತೆ, ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶ ಗಮನಾರ್ಹ ಪ್ರಗತಿ ಸಾಧಿಸಿದೆ. ಜಾಗತಿಕ ಮಟ್ಟದಲ್ಲೂ ಮೋದಿ ಅವರಿಗೆ ವಿಶಿಷ್ಟ ಗೌರವ ಮತ್ತು ಸ್ಥಾನಮಾನ ದೊರೆತಿದೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

“ಮೋದಿಯವರಂತಹ ನಾಯಕತ್ವವನ್ನು ಬೇರೆ ಯಾರಿಂದಲೂ ಸರಿಸಾಟಿಯಾಗಿ ನಿರ್ವಹಿಸಲು ಸಾಧ್ಯವಿಲ್ಲ. ವೈಯಕ್ತಿಕವಾಗಿ ಅವರೊಂದಿಗೆ ನನಗೆ ಆತ್ಮೀಯ ಸಂಬಂಧವಿದೆ. ನಾನು ರಾಜ್ಯಸಭಾ ಸದಸ್ಯನಾಗದಿದ್ದರೂ ಆ ಸಂಬಂಧ ಮುಂದುವರಿಯುತ್ತದೆ” ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ವಿಚಾರ ಬಂದರೂ ಪ್ರಧಾನಿಯನ್ನು ಭೇಟಿ ಮಾಡುವ ಅಥವಾ ಪತ್ರ ಬರೆಯುವ ಅವಕಾಶ ನನಗಿದೆ. ನಮ್ಮ ಸಂಬಂಧ ರಾಜಕೀಯ ಹುದ್ದೆಗಳಿಗೆ ಸೀಮಿತವಲ್ಲ ಎಂದು ದೇವೇಗೌಡರು ಹೇಳಿದರು.

ಇದೇ ವೇಳೆ, ಎನ್‌ಡಿಎ ಜತೆಗಿನ ಜೆಡಿಎಸ್ ಬಾಂಧವ್ಯದ ಬಗ್ಗೆ ಮಾತನಾಡಿದ ಅವರು, “ಒಂದು ರಾಜ್ಯಸಭೆ ಸ್ಥಾನದ ಕಾರಣಕ್ಕೆ ಎನ್‌ಡಿಎ ಜೊತೆಗಿನ ಸಂಬಂಧ ಮುಕ್ತಾಯವಾಗುವುದಿಲ್ಲ. ನಾವು ರಾಜ್ಯಸಭಾ ಸ್ಥಾನವನ್ನು ಕೇಳಿಯೂ ಇಲ್ಲ ಎಂದ ಅವರು ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆಗಿನ ಮೈತ್ರಿ ಮತ್ತು ಸಂಬಂಧ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.

Also Read: ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

VISTARANEWS.COM


on

ಪಿಂಕ್ ಲೈನ್ ಮೆಟ್ರೋ

ದಕ್ಷಿಣ ಬೆಂಗಳೂರಿನ ಜನರಿಗೆ ಬಹುಕಾಲದ ನಿರೀಕ್ಷೆಯಾಗಿದ್ದ ಪಿಂಕ್ ಲೈನ್ ಮೆಟ್ರೋ ಸೇವೆ ಆಗಸ್ಟ್ 15ರಂದು ಆರಂಭವಾಗುವ ಸಾಧ್ಯತೆ ಇದೆ. ಈ ಹೊಸ ಮಾರ್ಗ ಕಾರ್ಯಾರಂಭ ಮಾಡಿದರೆ ಪ್ರಮುಖ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದ್ದು, ಪ್ರಯಾಣಿಕರಿಗೆ ವೇಗವಾದ ಹಾಗೂ ಸುಗಮ ಸಂಚಾರ ಸೌಲಭ್ಯ ದೊರೆಯಲಿದೆ.

ಪಿಂಕ್ ಲೈನ್ ಮೆಟ್ರೋ:

ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್‌ನ ಮೊದಲ ಹಂತದ ಸಂಚಾರ ಆಗಸ್ಟ್ 15 ರಂದು ಸಾರ್ವಜನಿಕರಿಗೆ ಮುಕ್ತವಾಗುವ ಸಾಧ್ಯತೆ ಇದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ನಿರ್ಮಾಣಗೊಂಡಿರುವ 7.5 ಕಿಲೋಮೀಟರ್ ಉದ್ದದ ಎಲಿವೇಟೆಡ್ ಮಾರ್ಗದ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದೆ.

ಪಿಂಕ್ ಲೈನ್ ಮೆಟ್ರೋನಲ್ಲಿ ಸಂಚರಿಸಲಿರುವ ಮೆಟ್ರೋ ರೈಲುಗಳಿಗೆ ರೈಲು ವಿನ್ಯಾಸ ಮತ್ತು ಮಾನದಂಡಗಳ ಸಂಸ್ಥೆ (RDSO) ಯಿಂದ ಗಂಟೆಗೆ 90 ಕಿಲೋಮೀಟರ್ ವೇಗದಲ್ಲಿ ಸಂಚರಿಸಲು ಅಗತ್ಯ ಪ್ರಮಾಣ ಪತ್ರ ದೊರೆತಿದೆ. ಇದರಿಂದ ಮಾರ್ಗ ಉದ್ಘಾಟನೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಮತ್ತಷ್ಟು ವೇಗ ಪಡೆದಿವೆ.

ಮೊದಲ ಹಂತದಲ್ಲಿ ಕಾಳೇನ ಅಗ್ರಹಾರ, ಗೊಟ್ಟಿಗೆರೆ, ಹುಳಿಮಾವು, ಐಐಎಂಬಿ, ಜೆಪಿ ನಗರ 4ನೇ ಹಂತ ಹಾಗೂ ತಾವರೆಕೆರೆ ಸೇರಿದಂತೆ ಒಟ್ಟು ಆರು ಮೆಟ್ರೋ ನಿಲ್ದಾಣಗಳು ಪ್ರಯಾಣಿಕರ ಸೇವೆಗೆ ಲಭ್ಯವಾಗಲಿವೆ. ಈ ಮಾರ್ಗ ಆರಂಭವಾದರೆ ದಕ್ಷಿಣ ಬೆಂಗಳೂರಿನ ಸಾವಿರಾರು ಪ್ರಯಾಣಿಕರಿಗೆ ವೇಗದ ಮತ್ತು ಸುಗಮ ಸಂಚಾರ ವ್ಯವಸ್ಥೆ ದೊರೆಯಲಿದೆ.

ಸಂಪೂರ್ಣ ಪಿಂಕ್ ಲೈನ್ ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ 21.25 ಕಿಲೋಮೀಟರ್ ಉದ್ದ ಹೊಂದಿದ್ದು, ಒಟ್ಟು 18 ನಿಲ್ದಾಣಗಳನ್ನು ಒಳಗೊಂಡಿದೆ. ಇದರಲ್ಲಿ 12 ಅಂಡರ್‌ಗ್ರೌಂಡ್ ಹಾಗೂ 6 ಎಲಿವೇಟೆಡ್ ನಿಲ್ದಾಣಗಳು ನಿರ್ಮಾಣವಾಗುತ್ತಿವೆ.

ಪಿಂಕ್ ಲೈನ್‌ನ ಪ್ರಮುಖ ಆಕರ್ಷಣೆಯಾಗಿ ಜಯದೇವ ಆಸ್ಪತ್ರೆ ಇಂಟರ್‌ಚೇಂಜ್ ನಿಲ್ದಾಣವಿರಲಿದೆ. ಈ ನಿಲ್ದಾಣದ ಮೂಲಕ ಪ್ರಯಾಣಿಕರು ಒಂದು ಮೆಟ್ರೋ ಮಾರ್ಗದಿಂದ ಮತ್ತೊಂದು ಮಾರ್ಗಕ್ಕೆ ಸುಲಭವಾಗಿ ಬದಲಾಯಿಸಬಹುದಾಗಿದ್ದು, ನಗರದ ವಿವಿಧ ಭಾಗಗಳಿಗೆ ಸಂಪರ್ಕ ಇನ್ನಷ್ಟು ಸುಗಮವಾಗಲಿದೆ.

ಪಿಂಕ್ ಲೈನ್ ಸಂಪೂರ್ಣ ಕಾರ್ಯಾರಂಭ ಮಾಡಿದ ಬಳಿಕ ದಕ್ಷಿಣ ಮತ್ತು ಮಧ್ಯ ಬೆಂಗಳೂರಿನ ನಡುವಿನ ಸಂಪರ್ಕ ಬಲವಾಗಲಿದ್ದು, ರಸ್ತೆ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದೆ. ಲಕ್ಷಾಂತರ ಪ್ರಯಾಣಿಕರಿಗೆ ಇದರ ನೇರ ಪ್ರಯೋಜನ ದೊರೆಯಲಿದ್ದು, ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಇದು ಮಹತ್ವದ ಸೇರ್ಪಡೆಯಾಗಲಿದೆ.

Also Read: ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಮುಂದಿನ 7 ದಿನ ಭಾರೀ ಮಳೆ: ಉಡುಪಿ, ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್

VISTARANEWS.COM


on

ಭಾರೀ ಮಳೆ

ಭಾರೀ ಮಳೆ ಬೆಂಗಳೂರು:

ನೈಋತ್ಯ ಮುಂಗಾರು ರಾಜ್ಯಕ್ಕೆ ಸಂಪೂರ್ಣವಾಗಿ ಪ್ರವೇಶಿಸಿದ್ದು, ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ 7 ದಿನ ವ್ಯಾಪಕ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ವಿಶೇಷವಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, 204.5 ಮಿಲಿಮೀಟರ್‌ಗಿಂತ ಅಧಿಕ ಪ್ರಮಾಣದ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಹೆಚ್ಚಿದ್ದು, ನದಿ, ಹೊಳೆ ಮತ್ತು ಜಲಾಶಯಗಳ ಸಮೀಪ ವಾಸಿಸುವವರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿದಿದ್ದು, ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Also Read: ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

ಭಾರೀ ಮಳೆ
Continue Reading
Advertisement
Latest4 hours ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest7 hours ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ1 day ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest1 day ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest1 day ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest1 day ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest2 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest2 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

ಪಿಂಕ್ ಲೈನ್ ಮೆಟ್ರೋ
Latest2 days ago

ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

ಮುಂದಿನ ಐದು ದಿನ ಭಾರೀ ಮಳೆ
Latest2 days ago

ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌