ಆಕೆಗೆ ಮಗುವಿಗಿಂತಲೂ‌ ಹುಚ್ಚು ಪ್ರಿಯಕರನೇ ಹೆಚ್ಚಾದ; ತಾಯಿಯಿಂದ ತಂದೆ ಕೈಗೆ ಮಗುವನ್ನು ನೀಡಿದ್ದನ್ನು ಸಮರ್ಥಿಸಿದ ಹೈಕೋರ್ಟ್ - Vistara News

ಕೋರ್ಟ್

ಆಕೆಗೆ ಮಗುವಿಗಿಂತಲೂ‌ ಹುಚ್ಚು ಪ್ರಿಯಕರನೇ ಹೆಚ್ಚಾದ; ತಾಯಿಯಿಂದ ತಂದೆ ಕೈಗೆ ಮಗುವನ್ನು ನೀಡಿದ್ದನ್ನು ಸಮರ್ಥಿಸಿದ ಹೈಕೋರ್ಟ್

ಕೌಟುಂಬಿಕ ನ್ಯಾಯಾಲಯ ಮಗುವಿನ ಸುಪರ್ದಿಯನ್ನು ಗಂಡನಿಗೆ ಒಪ್ಪಿಸಿತ್ತು. ನಂಗೇ ಬೇಕು ಅಂತ ಆಕೆ ವಾದಿಸಿದ್ದರು. ಆಗ ಹೈಕೋರ್ಟ್‌ ನಿಮಗೆ ಮಗುವಿಗಿಂತ ಅಕ್ರಮ ಸಂಬಂಧವೇ ಹೆಚ್ಚಾಗಿದೆ. ಮಗು ಯಾಕೆ ಎಂಬರ್ಥದಲ್ಲಿ ತರಾಟೆಗೆ ತೆಗೆದುಕೊಂಡಿದೆ.

VISTARANEWS.COM


on

Family court order to tej pratap to provide separate house to Aishwarya Rai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅವರಿಬ್ಬರೂ ಮದುವೆಯಾಗಿ ಒಂದು ಮಗುವಿತ್ತು. ವೈವಾಹಿಕ ಸಂಬಂಧದಲ್ಲಿ ಬಿರುಕು ಮೂಡಿ ದೂರಾಗಿದ್ದರು. ಈ ಹಂತದಲ್ಲಿ ಕೌಟುಂಬಿಕ ನ್ಯಾಯಾಲಯ ಮಗುವಿನ ಉಸ್ತುವಾರಿಯನ್ನು ತಂದೆಯ ಕೈಗೆ ಒಪ್ಪಿಸಿತ್ತು. ಆದರೆ, ಅದನ್ನು ಆಕೆ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಈಗ ಹೈಕೋರ್ಟ್‌ ಕೂಡಾ ಮಗು ತಂದೆಯ ಕೈಯಲ್ಲಿದ್ದರೇ ಒಳ್ಳೆಯದು ಎಂದು ಹೇಳಿದೆ. ಇದಕ್ಕೆ ಅದು ನೀಡಿರುವ ಸಮರ್ಥನೆ ಹೀಗಿದೆ: ಈ ತಾಯಿಗೆ ತನ್ನ ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧವೇ ದೊಡ್ಡದು, ಮಗುವಿನ ಬಗ್ಗೆ ಲಕ್ಷ್ಯವಿಲ್ಲ. ಈ ವರ್ತನೆಯನ್ನು ಪರಿಗಣಿಸಿ ಮಗು ತಂದೆಯ ಕೈಲಿರುವುದೇ ಒಳ್ಳೆಯದು.

ಮಗುವನ್ನು ನನ್ನ ಕಸ್ಟಡಿಗೆ ಕೊಡಬೇಕು ಎಂಬ ತಾಯಿಯ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಲೋಕ್‌ ಅರಾಧೆ ಮತ್ತು ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು. ಒಂದು ಹಂತದಲ್ಲಿ ಮಗುವಿನ ಕಸ್ಟಡಿಯನ್ನು ತಾಯಿಗೆ ನೀಡಲಾಗಿತ್ತು. ಆದರೆ, ಆಕೆ ಮಗುವನ್ನು ತನ್ನ ತಾಯಿ ಮನೆಯಲ್ಲಿ ಬಿಟ್ಟು ಪ್ರಿಯಕರನ ಅಕ್ರಮ ಸಂಬಂಧದಲ್ಲಿದ್ದರು. ಪ್ರಿಯಕರನ ಜೊತೆ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು ಎಂಬುದನ್ನು ಹೈಕೋರ್ಟ್‌ ಪರಿಗಣಿಸಿದೆ.

“ಬೇರೆ ವ್ಯಕ್ತಿಯೊಂದಿಗಿನ ಸಂಬಂಧದ ವಿಚಾರವನ್ನು ಮಗುವಿನ ಕಲ್ಯಾಣದೊಂದಿಗೆ ತುಲನೆ ಮಾಡಿ ಪರಿಗಣಿಸಿದಾಗ ಆಕೆಯು ತನ್ನ ಅಕ್ರಮ ಸಂಬಂಧಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದು, ಮಗುವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮದುವೆಯಾದ ಮನೆಯನ್ನು ತೊರೆದ ಬಳಿಕ ಆಕೆಯು ಮಗುವನ್ನು ಚಂಡೀಗಢದ ಪಂಚಕುಲದಲ್ಲಿರುವ ಆಕೆಯ ಪೋಷಕರ ವಶಕ್ಕೆ ನೀಡಿ, ತಾನು ಬೆಂಗಳೂರಿನಲ್ಲಿ ಜೀವನ ಮುಂದುವರಿಸಿದ್ದರು. ದಾಖಲೆಗಳನ್ನು ಗಮನಿಸಿದರೆ ಆಕೆ ನಿರಂತರವಾಗಿ ತನ್ನ ಪ್ರಿಯಕರನ ಜೊತೆ ಒಡನಾಟದಲ್ಲಿದ್ದಾರೆ ಎಂಬುದನ್ನು ತೋರಿಸುತ್ತದೆ. ಹೀಗಾಗಿ, ಆಕೆಯು ಮಗುವಿನ ಕಲ್ಯಾಣ ಮತ್ತು ಹಿತಾಸಕ್ತಿಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಪ್ರತೀಕಾರಕ್ಕಾಗಿ ಆಕೆಯು ಮಗುವನ್ನು ತಂದೆಯಿಂದ ಕಿತ್ತುಕೊಂಡಿದ್ದಾರೆ” ಎಂದು ಆದೇಶದಲ್ಲಿ ಹೇಳಲಾಗಿದೆ.

ಯಾಕೆ ತಂದೆಯೇ ಒಳ್ಳೆಯದು?

“ಆಕೆ ಸಂಬಂಧಕ್ಕೆ ಯಾವುದೇ ರೀತಿಯ ಗೌರವ ಮತ್ತು ಮನ್ನಣೆ ನೀಡಿಲ್ಲ. ಸಣ್ಣ ವಿಚಾರಕ್ಕೆ ಕಲಹ ನಡೆಸುವ ಅಭ್ಯಾಸ ಬೆಳೆಸಿಕೊಂಡಿದ್ದರು. ಅತ್ತೆ-ಮಾವ ಜೊತೆಗೂ ಅವರು ನೆಲೆಸಲು ಬಯಸಿರಲಿಲ್ಲ. ಆದ್ದರಿಂದ, ಅವರು ಮನೆಯಿಂದ ಹೊರಹೋಗುವಂತೆ ಮಾಡಿದ್ದರು. ಆ ವರ್ತನೆಯೂ ನಡುವೆಯೂ, ಆಕೆ ಗರ್ಭಿಣಿಯಾಗಿದ್ದಾಗ ಅತ್ತೆ-ಮಾವ ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಆಕೆಗೆ ಆರೈಕೆ ಮಾಡಿದ್ದಲ್ಲದೇ, ಮಗುವಿನ ಆರೈಕೆ ಮಾಡಿದ್ದರು. ಇದೆಲ್ಲದರ ಮಧ್ಯೆಯೂ ಆಕೆ ಜಗಳ ತೆಗೆದಿದ್ದು, ಅವರನ್ನು ಮನೆಯಿಂದ ಹೊರಹಾಕಿದ್ದರು” ಎಂದು ವಿವರಿಸಲಾಗಿದೆ.

“ನ್ಯಾಯಾಲಯವು ಕೇವಲ ಮಗುವಿನ ಬಾಂಧವ್ಯ ಮತ್ತು ಸೌಕರ್ಯವನ್ನಲ್ಲದೇ ಮಗುವಿನ ಯೋಗಕ್ಷೇಮ ಮತ್ತು ಭವಿಷ್ಯದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ ಬೆಳೆಯುತ್ತಿರುವ ಪರಿಸರವನ್ನು ಸಹ ಪರಿಗಣಿಸಬೇಕು. ಹಣಕಾಸಿನ ಭದ್ರತೆಯ ಜೊತೆಗೆ, ಮಗುವಿಗೆ ಪ್ರೀತಿ ಮತ್ತು ವಾತ್ಸಲ್ಯದ ಅಗತ್ಯವಿರುವಾಗ ಪೋಷಕರು ಲಭ್ಯವಿದ್ದರೆ ಮತ್ತು ಯಾರ ಆರೈಕೆ ಮತ್ತು ರಕ್ಷಣೆಯ ಅಡಿಯಲ್ಲಿ ಮಗುವಿಗೆ ಉತ್ತಮ ಭವಿಷ್ಯವಿದೆ ಎಂಬುದನ್ನು ಸಹ ಪರಿಗಣಿಸಬೇಕಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : Madras High court : ಮುಸ್ಲಿಂ ಮಹಿಳೆಯರು ವಿಚ್ಛೇದನ ಪಡೆಯುವುದಕ್ಕೆ ಫ್ಯಾಮಿಲಿ ಕೋರ್ಟ್‌ಗೇ ಬರಬೇಕು; ಮದ್ರಾಸ್‌ ಹೈಕೋರ್ಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Arvind Kejriwal: ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

Arvind Kejriwal: ಅರವಿಂದ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ತಮ್ಮ ವೈದ್ಯರೊಂದಿಗೆ ಪ್ರತಿದಿನ 15 ನಿಮಿಷಗಳ ವೈದ್ಯಕೀಯ ಸಮಾಲೋಚನೆಗೆ ಅವಕಾಶ ನೀಡುವಂತೆ ಕೋರಿ ಆಮ್ ಆದ್ಮಿ ಪಕ್ಷದ ಸಂಚಾಲಕರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

VISTARANEWS.COM


on

arvind kejriwal in tihar jail
Koo

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿಯ (Delhi Excise policy) ಹಿನ್ನೆಲೆಯಲ್ಲಿ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal), ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ (K Kavitha) ಮತ್ತು ಆಮ್ ಆದ್ಮಿ ಪಕ್ಷದ (Aam Admi Party) ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರ ನ್ಯಾಯಾಂಗ ಬಂಧನವನ್ನು (Judicial custody) ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿದೆ.

ಅಬಕಾರಿ ನೀತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಬಂಧಿಸಲಾಗಿತ್ತು. ಇದೀಗ ರದ್ದಾಗಿರುವ ಈ ನೀತಿಗೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ 7ರವರೆಗೆ ರೋಸ್ ಅವೆನ್ಯೂ ನ್ಯಾಯಾಲಯ ವಿಸ್ತರಿಸಿದೆ. ಮೂವರೂ ಆರೋಪಿಗಳನ್ನು ವರ್ಚುವಲ್ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಅರವಿಂದ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ತಮ್ಮ ವೈದ್ಯರೊಂದಿಗೆ ಪ್ರತಿದಿನ 15 ನಿಮಿಷಗಳ ವೈದ್ಯಕೀಯ ಸಮಾಲೋಚನೆಗೆ ಅವಕಾಶ ನೀಡುವಂತೆ ಕೋರಿ ಆಮ್ ಆದ್ಮಿ ಪಕ್ಷದ ಸಂಚಾಲಕರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದಾಗಿ ಒಂದು ದಿನದ ನಂತರ ನ್ಯಾಯಾಲಯದ ಈ ನಿರ್ಧಾರವು ಬಂದಿದೆ.

ದೆಹಲಿ ನ್ಯಾಯಾಲಯವು ಕೇಜ್ರಿವಾಲ್‌ ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುವಂತೆ ನಿರ್ದೇಶಿಸಿದೆ ಮತ್ತು ಯಾವುದೇ ವಿಶೇಷ ಸಮಾಲೋಚನೆಯ ಅಗತ್ಯವಿದ್ದಲ್ಲಿ, ತಿಹಾರ್ ಜೈಲು ಅಧಿಕಾರಿಗಳು ಅಂತಃಸ್ರಾವಶಾಸ್ತ್ರಜ್ಞರು ಮತ್ತು ಮಧುಮೇಹಶಾಸ್ತ್ರಜ್ಞರನ್ನು ಒಳಗೊಂಡ AIIMS ನಿರ್ದೇಶಕರು ರಚಿಸಿರುವ ವೈದ್ಯಕೀಯ ಮಂಡಳಿಗೆ ತಿಳಿಸಬೇಕಿದೆ.

ಸೋಮವಾರ ಸಂಜೆ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಿದ್ದು, ನಂತರ ಅವರಿಗೆ ಕಡಿಮೆ ಪ್ರಮಾಣದ ಇನ್ಸುಲಿನ್ ಅನ್ನು ನೀಡಲಾಯಿತು ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಹನುಮ ಜಯಂತಿಯ ಸಂದರ್ಭದಲ್ಲಿ ಬಂದಿರುವ ಈ ಸುದ್ದಿಯನ್ನು ಆಪ್ ಸ್ವಾಗತಿಸಿದ್ದು, ಈ ಬೆಳವಣಿಗೆಯು ದೇವರ ಆಶೀರ್ವಾದದ ಫಲವಾಗಿದೆ ಎಂದು ಹೇಳಿದೆ. ತಿಹಾರ್ ಅಧಿಕಾರಿಯೊಬ್ಬರ ಪ್ರಕಾರ, ಏಮ್ಸ್ ವೈದ್ಯರ ಸಲಹೆಯ ಮೇರೆಗೆ ಕೇಜ್ರಿವಾಲ್ ಅವರಿಗೆ ಸೋಮವಾರ ಸಂಜೆ ಕಡಿಮೆ ಪ್ರಮಾಣದ ಇನ್ಸುಲಿನ್ ಎರಡು ಘಟಕಗಳನ್ನು ನೀಡಲಾಯಿತು.

ಇಡಿಯ ಕಾನೂನು ಕ್ರಮದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ಅವರನ್ನು ಬಂಧಿಸಿತು. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು ಇಡಿ ಮತ್ತು ಸಿಬಿಐ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ತೆಲಂಗಾಣ ಎಂಎಲ್‌ಸಿಯನ್ನು ಸಿಬಿಐ ಬಂಧಿಸಿತ್ತು.

ಮತ್ತೊಂದೆಡೆ, 2022ರ ಗೋವಾ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಹಣವನ್ನು ನಿರ್ವಹಿಸಿದ ವ್ಯಕ್ತಿ ಚನ್‌ಪ್ರೀತ್ ಸಿಂಗ್ ಅವರನ್ನು ಇಡಿ ಬಂಧಿಸಿದೆ. ದೆಹಲಿ ಅಬಕಾರಿ ನೀತಿಯಲ್ಲಿ ಲಂಚ ಸಂಗ್ರಹಿಸಿದ ಆರೋಪ ಇವರ ಮೇಲಿದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ಹಿನ್ನಡೆ; ವಿಶೇಷ ವೈದ್ಯಕೀಯ ಸಮಾಲೋಚನೆಯ ಅರ್ಜಿ ವಜಾ

Continue Reading

ಪ್ರಮುಖ ಸುದ್ದಿ

Patanjali Case: ಮೊದಲು ನಿಮ್ಮನ್ನು ಸರಿಪಡಿಸಿಕೊಳ್ಳಿ: ಪತಂಜಲಿ ಪ್ರಕರಣದಲ್ಲಿ ವೈದ್ಯಕೀಯ ಸಂಘಕ್ಕೂ ಸುಪ್ರೀಂ ಚಾಟಿ

Patanjali Case: “ಪತಂಜಲಿಯನ್ನು ಒಂದು ಬೆಟ್ಟು ಮಾಡಿ ತೋರುವಾಗ ನಾಲ್ಕು ಬೆರಳುಗಳು ಅವರತ್ತಲೂ ತೋರಿಸುತ್ತಿವೆ. ನಿಮ್ಮ (ಐಎಂಎ) ವೈದ್ಯರು ಕೂಡ ಅಲೋಪತಿ ಕ್ಷೇತ್ರದಲ್ಲಿ ದುಬಾರಿ ಮತ್ತು ಅನಗತ್ಯ ಔಷಧಿಗಳನ್ನು ಅನುಮೋದಿಸುತ್ತಿದ್ದಾರೆ. ನಾವು ನಿಮ್ಮ (ಐಎಂಎ) ಕಡೆ ಏಕೆ ಪ್ರಕರಣವನ್ನು ತಿರುಗಿಸಬಾರದು?” ಎಂದು ಸುಪ್ರೀಂ ಕೋರ್ಟ್ ಐಎಂಎಗೆ ಪ್ರಶ್ನಿಸಿದೆ.

VISTARANEWS.COM


on

supreme court baba ramdev IMA
Koo

ಹೊಸದಿಲ್ಲಿ: ತಪ್ಪುದಾರಿಗೆಳೆಯುವ ಜಾಹೀರಾತು (Misleading advertisements) ಪ್ರಕರಣದಲ್ಲಿ (Patanjali Case) ಪತಂಜಲಿ ಆಯುರ್ವೇದ (Patanjali Ayurved) ಸಂಸ್ಥೆಯನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಸುಪ್ರೀಂ ಕೋರ್ಟ್‌ (Supreme court), ಅಲೋಪತಿಯಲ್ಲಿ (Allopathy) “ದುಬಾರಿ ಮತ್ತು ಅನಗತ್ಯ” ಔಷಧಿಗಳನ್ನು ಅನುಮೋದಿಸುತ್ತಿರುವ ಭಾರತೀಯ ವೈದ್ಯಕೀಯ ಸಂಘ (IMA) ಅರ್ಜಿದಾರರಿಗೂ ಚಾಟಿ ಬೀಸಿದೆ. “ಇತರರನ್ನು ದೂರುವ ಮೊದಲು ನಿಮ್ಮ ಮನೆಯನ್ನು ಸರಿಪಡಿಸಿಕೊಳ್ಳಿ” ಎಂದು ಪೀಠ ತೀಕ್ಷ್ಣವಾಗಿ ನುಡಿದಿದೆ.

ಪತಂಜಲಿ ಆಯುರ್ವೇದ ಸಂಸ್ಥೆ, ಅದರ ಸ್ಥಾಪಕರಾದ ಬಾಬಾ ರಾಮ್‌ದೇವ್ (Baba Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balakrishna) ಅವರ ವಿರುದ್ಧದ ಐಎಂಎ ದೂರಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಐಎಂಎ ಬಗ್ಗೆ ಹೇಳುವ ಮುನ್ನ ಪೀಠವು, ಕ್ಷಮೆಯಾಚನೆಯನ್ನು ಅದರ ಉತ್ಪನ್ನಗಳ ಜಾಹೀರಾತು ಮಾದರಿಯಲ್ಲೇ ದೊಡ್ಡದಾಗಿ ಪತ್ರಿಕೆಗಳನ್ನು ಪ್ರಕಟಿಸುವಂತೆ ಪತಂಜಲಿಗೆ ತಾಕೀತು ಮಾಡಿತ್ತು.

ನಂತರ ತೀಕ್ಷ್ಣವಾದ ಪದಗಳೊಂದಿಗೆ ನ್ಯಾಯಪೀಠವು ದೇಶದ ಪ್ರಮುಖ ವೈದ್ಯರ ಸಂಘದತ್ತ ಚಾಟಿ ಬೀಸಿತು. “ಪತಂಜಲಿಯನ್ನು ಒಂದು ಬೆಟ್ಟು ಮಾಡಿ ತೋರುವಾಗ ನಾಲ್ಕು ಬೆರಳುಗಳು ಅವರತ್ತಲೂ ತೋರಿಸುತ್ತಿವೆ. ನಿಮ್ಮ (ಐಎಂಎ) ವೈದ್ಯರು ಕೂಡ ಅಲೋಪತಿ ಕ್ಷೇತ್ರದಲ್ಲಿ ದುಬಾರಿ ಮತ್ತು ಅನಗತ್ಯ ಔಷಧಿಗಳನ್ನು ಅನುಮೋದಿಸುತ್ತಿದ್ದಾರೆ. ನಾವು ನಿಮ್ಮ (ಐಎಂಎ) ಕಡೆ ಏಕೆ ಪ್ರಕರಣವನ್ನು ತಿರುಗಿಸಬಾರದು?” ಎಂದು ಸುಪ್ರೀಂ ಕೋರ್ಟ್ ಐಎಂಎಗೆ ಪ್ರಶ್ನಿಸಿದೆ.

“ಐಎಂಎಯ ಅನೈತಿಕ ವರ್ತನೆಗೆ ಸಂಬಂಧಿಸಿದಂತೆ ಹಲವಾರು ದೂರುಗಳಿವೆ. ಶಿಶುಗಳು, ಶಾಲೆಗೆ ಹೋಗುವ ಮಕ್ಕಳು ಮತ್ತು ಹಿರಿಯ ನಾಗರಿಕರ ಆರೋಗ್ಯದ ಮೇಲೆ ಪರಿಣಾಮ ಬೀರುವ ಉತ್ಪನ್ನಗಳ ಜಾಹೀರಾತುಗಳನ್ನು ಪ್ರಕಟಿಸುವ ಮೂಲಕ ಎಫ್‌ಎಂಸಿಜಿ ಕಂಪನಿಗಳು ಸಾರ್ವಜನಿಕರ ಮೇಲೆ ಸವಾರಿ ಮಾಡುತ್ತಿವೆ” ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪರವಾನಗಿ ಅಧಿಕಾರಿಗಳನ್ನು ಈ ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡುವಂತೆ ನ್ಯಾಯಾಲಯ ಕೇಳಿದೆ. ಕಳೆದ ಮೂರು ವರ್ಷಗಳಲ್ಲಿ ತಪ್ಪುದಾರಿಗೆಳೆಯುವ ಜಾಹೀರಾತುಗಳ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸಚಿವಾಲಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

“ಈಗ ನಾವು ಎಲ್ಲವನ್ನೂ ನೋಡುತ್ತಿದ್ದೇವೆ. ನಾವು ಮಕ್ಕಳು, ಶಿಶುಗಳು, ಮಹಿಳೆಯರ ಸಮಸ್ಯೆಗಳನ್ನು ಕಂಡಿದ್ದೇವೆ. ಯಾರನ್ನೂ ಸುಲಭವಾಗಿ ಯಾಮಾರಿಸಲಾಗುವುದಿಲ್ಲ” ಎಂದ ನ್ಯಾಯಾಲಯ, “ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು” ಎಂದೂ ಹೇಳಿದೆ.

ಪತಂಜಲಿ ವಿರುದ್ಧದ ಪ್ರಕರಣವೇನು?

ಪತಂಜಲಿ ಆಯುರ್ವೇದ್‌ನ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ನ್ಯಾಯಾಲಯದ ಮೆಟ್ಟಿಲೇರಿದೆ. ರೋಗಗಳನ್ನು ಗುಣಪಡಿಸುವ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮತ್ತು ಆಧುನಿಕ ಔಷಧದ ವಿರುದ್ಧ ಅಪಪ್ರಚಾರ ನಡೆಸಿದ್ದಕ್ಕಾಗಿ ಪತಂಜಲಿಯುನ್ನು ಕೋರ್ಟಿಗೆಳೆಯಲಾಗಿದೆ. ಕಳೆದ ವರ್ಷ, ಸುಪ್ರೀಂ ಕೋರ್ಟ್‌ ತಪರಾಕಿಯ ನಂತರ, ಪತಂಜಲಿ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ನಿಲ್ಲಿಸುವುದಾಗಿ ಭರವಸೆ ನೀಡಿತ್ತು. ಆದರೂ ಈ ವರ್ಷದ ಆರಂಭದಲ್ಲಿ ತನ್ನ ಮಾತನ್ನು ಉಲ್ಲಂಘಿಸಿತ್ತು.

ಎಪ್ರಿಲ್ 16ರಂದು, ಸುಪ್ರೀಂ ಕೋರ್ಟ್ ಬಾಬಾ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ “ಅಲೋಪತಿಯನ್ನು ಕೀಳಾಗಿ ಹಾಕುವ” ಯಾವುದೇ ಪ್ರಯತ್ನದ ವಿರುದ್ಧ ಎಚ್ಚರಿಕೆ ನೀಡಿತು. ಒಂದು ವಾರದೊಳಗೆ “ಸಾರ್ವಜನಿಕ ಕ್ಷಮೆಯಾಚನೆ ಮತ್ತು ಪಶ್ಚಾತ್ತಾಪವನ್ನು ತೋರಿಸಲು” ಅನುಮತಿ ನೀಡಿತು. ಆದರೂ ಅವರಿಬ್ಬರೂ ಬಗ್ಗಿರಲಿಲ್ಲ. ಇಂದು ಕಂಪನಿಯು 60ಕ್ಕೂ ಹೆಚ್ಚು ಪತ್ರಿಕೆಗಳಲ್ಲಿ ತನ್ನ ಕ್ಷಮೆಯಾಚನೆಯನ್ನು ಸಣ್ಣದಾಗಿ ಪ್ರಕಟಿಸಿದೆ. ಇದನ್ನು ಗಮನಿಸಿದ ನ್ಯಾಯಾಲಯ, ಜಾಹೀರಾತುಗಳಷ್ಟೇ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸುವಂತೆ ಚಾಟಿ ಬೀಸಿದೆ.

ಇದನ್ನೂ ಓದಿ: Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Continue Reading

ಪ್ರಮುಖ ಸುದ್ದಿ

Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Patanjali Case: ನ್ಯಾಯಾಲಯವು ಈ ಹಿಂದೆ ರಾಮ್‌ದೇವ್ ಮತ್ತು ಬಾಲಕೃಷ್ಣ ಸಲ್ಲಿಸಿದ್ದ ಕ್ಷಮೆ ಅರ್ಜಿಯನ್ನು ತಿರಸ್ಕರಿಸಿತ್ತು. “ಅದು ಹೃದಯಪೂರ್ವಕವಾಗಿಲ್ಲ” ಮತ್ತು “ತುಟಿಯ ಮೇಲಿನ ಮಾತು” ಎಂದು ಪೀಠ ಹೇಳಿತ್ತು. ಏಪ್ರಿಲ್ 16ರಂದು ನಡೆದ ವಿಚಾರಣೆಯಲ್ಲಿ, ಇಬ್ಬರೂ ಇಂದು ನೇರವಾಗಿ ಹಾಜರಾಗಲು ಮತ್ತು ಕ್ಷಮೆಯಾಚಿಸಲು ಆದೇಶಿಸಿತ್ತು.

VISTARANEWS.COM


on

baba ramdev supreme court
Koo

ಹೊಸದಿಲ್ಲಿ: ತಪ್ಪುದಾರಿಗೆಳೆಯುವ ಜಾಹೀರಾತು (Advertisements) ಪ್ರಕರಣದಲ್ಲಿ ಪತಂಜಲಿ ಆಯುರ್ವೇದ (Patanjali Ayurved) ಸಂಸ್ಥೆ ಹಾಗೂ ಅದರ ಸಂಸ್ಥಾಪಕರಾದ ಬಾಬಾ ರಾಮ್‌ದೇವ್‌ (Baba Ramdev) ಅವರನ್ನು ಕಳೆದೊಂದು ತಿಂಗಳಿನಿಂದ ಹಿಗ್ಗಾಮುಗ್ಗಾ ತರಾಟೆಗೆ (Patanjali Case) ತೆಗೆದುಕೊಳ್ಳುತ್ತಿರುವ ಸುಪ್ರೀಂ ಕೋರ್ಟ್ (Supreme court), ಇಂದು ಮತ್ತೆ ಆ ಕೆಲಸವನ್ನು ಮುಂದುವರಿಸಿದೆ. ಪತಂಜಲಿ ಪತ್ರಿಕೆಗಳಲ್ಲಿ ಪ್ರಕಟಿಸಿರುವ ಕ್ಷಮಾಯಾಚನೆಯ (Apology) ಗಾತ್ರವು “ಅದರ ಉತ್ಪನ್ನಗಳ ಪೂರ್ಣ ಪುಟದ ಜಾಹೀರಾತುಗಳ ಗಾತ್ರದಲ್ಲೇ ಇದೆಯೇ?” ಎಂದು ಪ್ರಶ್ನಿಸಿದೆ. ಸರಿಪಡಿಸಿ ದೊಡ್ಡ ಗಾತ್ರದಲ್ಲಿ ಮರಳಿ ಪ್ರಕಟಿಸುವಂತೆ ತಾಕೀತು ಮಾಡಿದೆ.

ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ನ್ಯಾಯಾಲಯದ ಮುಂದೆ ಹೊಸದಾಗಿ ಅವರಿಬ್ಬರ ಕ್ಷಮಾಪಣೆಯನ್ನು ಮಂಡಿಸಿದ್ದಾರೆ. “ನಿನ್ನೆಯಷ್ಟೇ ಏಕೆ ಕ್ಷಮೆಯಾಚಿಸಲಾಯಿತು? ಮತ್ತು ಅದನ್ನು ಯಾಕೆ ಮೊದಲೇ ಮಾಡಲಿಲ್ಲ?” ಎಂದು ಪೀಠ ಕೇಳಿದೆ. ಕ್ಷಮಾಪಣೆಯನ್ನು ₹10 ಲಕ್ಷ ವೆಚ್ಚದಲ್ಲಿ 67 ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ ಎಂದು ರೋಹಟಗಿ ಹೇಳಿದರು. “ಕ್ಷಮೆಯಾಚನೆಯನ್ನು ದೊಡ್ಡದಾಗಿ ಪ್ರಕಟಿಸಲಾಗಿದೆಯೇ? ನಿಮ್ಮ ಹಿಂದಿನ ಜಾಹೀರಾತುಗಳಂತೆಯೇ ಅದೇ ಫಾಂಟ್ ಮತ್ತು ಗಾತ್ರದಲ್ಲಿ ಇದೆಯೇ?” ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ಪ್ರಶ್ನಿಸಿದ್ದಾರೆ. “ಕಂಪನಿಯು ಇದಕ್ಕಾಗಿ ಲಕ್ಷಗಳಲ್ಲಿ ಖರ್ಚು ಮಾಡಿದೆ” ಎಂದು ರೋಹಟಗಿ ಹೇಳಿದಾಗ, ನ್ಯಾಯಾಲಯವು “ಅದಕ್ಕೂ ನಮಗೂ ಸಂಬಂಧವಿಲ್ಲ” ಎಂದು ಉತ್ತರಿಸಿತು.

ಪತಂಜಲಿ ವಿರುದ್ಧದ ಪ್ರಕರಣ ಹೂಡಿರುವ ಭಾರತೀಯ ವೈದ್ಯಕೀಯ ಸಂಘ (ಐಎಂಎ) ವಿರುದ್ಧ ₹1000 ಕೋಟಿ ದಂಡ ಹಾಕಲು ಕೋರಿದ ಅರ್ಜಿಯೊಂದನ್ನು ಸ್ವೀಕರಿಸಲಾಗಿದೆ ಎಂದು ನ್ಯಾಯಾಲಯ ಗಮನಿಸಿದ್ದು, “ಇದು ನಕಲಿ ಅರ್ಜಿಯೇ? ನಮಗೆ ಅನುಮಾನವಿದೆ” ಎಂದಿದೆ. “ತಮ್ಮ ಕಕ್ಷಿದಾರರಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ರೋಹಟಗಿ ಅವರು ಒತ್ತಿ ಹೇಳಿದರು.

ಪತ್ರಿಕೆಗಳಲ್ಲಿ ದೊಡ್ಡ ಕ್ಷಮಾಪಣೆಯನ್ನು ಪ್ರಕಟಿಸುವುದಾಗಿ ಬಾಬಾ ರಾಮ್‌ದೇವ್ ಹೇಳಿದ ನಂತರ ಸುಪ್ರೀಂ ಕೋರ್ಟ್ ಪ್ರಕರಣವನ್ನು ಒಂದು ವಾರಕ್ಕೆ ಮುಂದೂಡಿದೆ. ತಪ್ಪುದಾರಿಗೆಳೆಯುವ ಜಾಹೀರಾತು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆಗೆ ಗಂಟೆಗಳ ಮೊದಲು, ಪತಂಜಲಿ ಆಯುರ್ವೇದ್ ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಕ್ಷಮೆಯಾಚಿಸಿದೆ. ನ್ಯಾಯಾಲಯದ ಬಗ್ಗೆ ತನಗೆ ಹೆಚ್ಚಿನ ಗೌರವವಿದೆ ಮತ್ತು ತಪ್ಪುಗಳು ಪುನರಾವರ್ತನೆಯಾಗುವುದಿಲ್ಲ ಎಂದು ಹೇಳಿದೆ.

ಪತಂಜಲಿ ಸಂಸ್ಥಾಪಕರಾದ ಯೋಗ ಗುರು ರಾಮ್‌ದೇವ್ ಮತ್ತು ಅವರ ಸಹಾಯಕ ಬಾಲಕೃಷ್ಣ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಕಾಯಿಲೆಗಳನ್ನು ಕಂಪನಿಯ ಉತ್ಪನ್ನಗಳು ಗುಣಪಡಿಸುತ್ತವೆ ಎಂದು ಸಾರುವ ಜಾಹೀರಾತುಗಳನ್ನು ಪ್ರಕಟಿಸಿದ್ದರು. ಇದನ್ನು ಪ್ರಶ್ನಿಸಿ ವೈದ್ಯಕೀಯ ಸಂಘ ಕೋರ್ಟ್‌ಗೆ ಹೋಗಿತ್ತು. ನ್ಯಾಯಾಲಯವು ಈ ಹಿಂದೆ ರಾಮ್‌ದೇವ್ ಮತ್ತು ಬಾಲಕೃಷ್ಣ ಸಲ್ಲಿಸಿದ್ದ ಕ್ಷಮೆ ಅರ್ಜಿಯನ್ನು ತಿರಸ್ಕರಿಸಿತ್ತು. “ಅದು ಹೃದಯಪೂರ್ವಕವಾಗಿಲ್ಲ” ಮತ್ತು “ತುಟಿಯ ಮೇಲಿನ ಮಾತು” ಎಂದು ಪೀಠ ಹೇಳಿತ್ತು. ಏಪ್ರಿಲ್ 16ರಂದು ನಡೆದ ವಿಚಾರಣೆಯಲ್ಲಿ, ಇಬ್ಬರೂ ಇಂದು ನೇರವಾಗಿ ಹಾಜರಾಗಲು ಮತ್ತು ಕ್ಷಮೆಯಾಚಿಸಲು ಆದೇಶಿಸಿತ್ತು.

ರಾಷ್ಟ್ರೀಯ ಹಿಂದಿ ದೈನಿಕದಲ್ಲಿ ಸಣ್ಣದಾಗಿ ಪ್ರಕಟವಾದ ಜಾಹೀರಾತಿನಲ್ಲಿ, ಪತಂಜಲಿಯು ಸುಪ್ರೀಂ ಕೋರ್ಟ್‌ನ ಬಗ್ಗೆ ತಾವು ಅತ್ಯಂತ ಗೌರವವನ್ನು ಹೊಂದಿದ್ದೇವೆ ಎಂದು ಹೇಳಿದೆ. “ಜಾಹೀರಾತುಗಳನ್ನು ಪ್ರಕಟಿಸುವಲ್ಲಿ ಮತ್ತು ಪತ್ರಿಕಾಗೋಷ್ಠಿಗಳನ್ನು ನಡೆಸುವಲ್ಲಿ ಮಾಡಿದ ತಪ್ಪುಗಳಿಗಾಗಿ ನಾವು ನಮ್ಮ ಹೃತ್ಪೂರ್ವಕ ಕ್ಷಮೆಯಾಚಿಸುತ್ತೇವೆ. ಈ ತಪ್ಪನ್ನು ಪುನರಾವರ್ತಿಸದಿರಲು ನಾವು ಬದ್ಧರಾಗಿದ್ದೇವೆ” ಎಂದು ಜಾಹೀರಾತು ಹೇಳಿದೆ.

ಕಳೆದ ವಾರ ವಿಚಾರಣೆಯ ನಂತರ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ರಾಮ್‌ದೇವ್, “ನಾನು ಮಾಡಬೇಕಾಗಿದ್ದನ್ನು ಹೇಳಿದ್ದೇನೆ, ನನಗೆ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ” ಎಂದು ಹೇಳಿದ್ದರು. ರಾಮ್‌ದೇವ್ ಮತ್ತು ಬಾಲಕೃಷ್ಣ ಅವರ ಹಿಂದಿನ ಕ್ಷಮೆಯಾಚನೆಯನ್ನು ತಿರಸ್ಕರಿಸಿದ ನ್ಯಾಯಾಲಯವು ಪತ್ರಗಳನ್ನು ಮೊದಲು ಮಾಧ್ಯಮಗಳಿಗೆ ಕಳುಹಿಸಲಾಗಿದೆ ಎಂದು ಗಮನಿಸಿತ್ತು. “ವಿಷಯವು ನ್ಯಾಯಾಲಯದ ಮೆಟ್ಟಿಲೇರುವವರೆಗೂ, ಅಫಿಡವಿಟ್‌ಗಳನ್ನು ನಮಗೆ ಕಳುಹಿಸಬೇಕಿಲ್ಲ ಎಂದು ಆರೋಪಿಗಳು ಕಂಡುಕೊಂಡರು. ಅವರು ಪ್ರಚಾರವನ್ನು ಸ್ಪಷ್ಟವಾಗಿ ನಂಬುತ್ತಾರೆ” ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ಹೇಳಿದ್ದಾರೆ.

ಪೀಠದಲ್ಲಿದ್ದ ನ್ಯಾಯಮೂರ್ತಿ ಎ. ಅಮಾನುಲ್ಲಾ ಅವರು, “ಕ್ಷಮಾಪಣೆ ಸಲ್ಲಿಸುವುದು ಸಾಕಾಗುವುದಿಲ್ಲ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ನೀವು ಪರಿಣಾಮಗಳನ್ನು ಅನುಭವಿಸಲೇಬೇಕು” ಎಂದು ಎಚ್ಚರಿಸಿದ್ದರು.

ಏನಿದು ಪ್ರಕರಣ?

ಪತಂಜಲಿ ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು (IMA) ಅರ್ಜಿ ಸಲ್ಲಿಸಿದೆ. ಪತಂಜಲಿ ಸಂಸ್ಥೆಯು ಕೊರೊನಾ ನಿರೋಧಕ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದೆ. ಅಷ್ಟೇ ಅಲ್ಲ, ಅಲೋಪಥಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವ ರೀತಿ ಪತಂಜಲಿ ಸಂಸ್ಥೆಯು ಜಾಹೀರಾತುಗಳನ್ನು ನೀಡುತ್ತಿದೆ. ಇದು ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮೆಡೀಸ್‌ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಐಎಂಎ ಅರ್ಜಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರು ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪತಂಜಲಿ ತಪ್ಪು ಮಾಡಿದ್ರೆ 1000 ಕೋಟಿ ದಂಡ ಹಾಕಿ; ಆದ್ರೆ ವೈದ್ಯರಿಗೆ ಯಾವ ಶಿಕ್ಷೆ? ಬಾಬಾ ರಾಮದೇವ ಕೆಂಡ

Continue Reading

ಕರ್ನಾಟಕ

Hookah Ban: ರಾಜ್ಯ ಸರ್ಕಾರದ ಹುಕ್ಕಾ ಬಾರ್‌ ನಿಷೇಧ ಆದೇಶ ಎತ್ತಿಹಿಡಿದ ಹೈಕೋರ್ಟ್

Hookah Ban: ಹುಕ್ಕಾ ಸೇವನೆ, ಸಂಗ್ರಹ, ಮಾರಾಟವನ್ನು ರಾಜ್ಯ ಸರ್ಕಾರ ನಿಷೇಧಿಸಿತ್ತು. ಆದರೆ, ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ

VISTARANEWS.COM


on

Hookah Ban
Koo

ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧ (ban hookah bars) ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹುಕ್ಕಾ ನಿಷೇಧ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹುಕ್ಕಾ ಸೇವನೆ, ಸಂಗ್ರಹ, ಮಾರಾಟವನ್ನು ರಾಜ್ಯ ಸರ್ಕಾರ ನಿಷೇಧಿಸಿತ್ತು. ಆದರೆ, ಇದನ್ನು ಪ್ರಶ್ನಿಸಿ ಹಲವರು ಹೈಕೋರ್ಟ್‌ ರಿಟ್ ‌ಸಲ್ಲಿಸಿದ್ದರು. ಆದರೆ, ಇದೀಗ ರಿಟ್ ಅರ್ಜಿಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಸೋಮವಾರ ವಜಾಗೊಳಿಸಿದೆ.

ಬೆಂಗಳೂರಿನ ಆರ್‌. ಭರತ್‌ ಮತ್ತಿತರರು ಸಲ್ಲಿಸಿದ ಅರ್ಜಿ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ಇಂದು ಆದೇಶ ಪ್ರಕಟಿಸಿದೆ. ಈ ಬಗ್ಗೆ ಮಾರ್ಚ್‌ 11ರಂದು ನ್ಯಾಯಾಲಯವು ವಿಸ್ತೃತವಾಗಿ ವಾದ ಆಲಿಸಿ, ಆದೇಶ ಕಾಯ್ದಿರಿಸಿತ್ತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ.ಸುಮನ್‌ ಅವರು, ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ, ವಹಿವಾಟು, ಉತ್ಪಾದನೆ, ಪೂರೈಕೆ ಮತ್ತು ಹಂಚಿಕೆ ಕಾಯ್ದೆ 2003 (ಸಿಒಟಿಪಿಎ) ಕೇಂದ್ರ ಸರ್ಕಾರದ ಕಾನೂನಾಗಿದ್ದು, ಇಲ್ಲಿ ಹುಕ್ಕಾ ನಿಷೇಧಕ್ಕೆ ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಆಹಾರ ಪೂರೈಸದ ನಿರ್ದಿಷ್ಟ ಸ್ಥಳಗಳಲ್ಲಿ ಹುಕ್ಕಾ ಸೇದಲು ಅವಕಾಶವಿದೆ ಎಂದು ವಾದಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರು, ಸಿಒಟಿಪಿಎ ಸಿಗರೇಟುಗಳಿಗೆ ಸಂಬಂಧಿಸಿದ್ದು, ಹುಕ್ಕಾಗೂ ಇದಕ್ಕೂ ಸಂಬಂಧವಿಲ್ಲ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಹುಕ್ಕಾಗೆ ನಿಷೇಧ ವಿಧಿಸಲು ಸರ್ಕಾರಕ್ಕೆ ಅಧಿಕಾರವಿದೆ. ಸಂವಿಧಾನದ 47ನೇ ವಿಧಿಯ ಅನ್ವಯ ಸಾರ್ವಜನಿಕ ಆರೋಗ್ಯ ಸುಧಾರಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳುವ ಹೊಣೆಗಾರಿಕೆ ಹೊಂದಿದೆ ಎಂದಿದ್ದರು.

ಇದನ್ನೂ ಓದಿ | Hookah Bar : ಹುಕ್ಕಾ, ಹುಕ್ಕಾಬಾರ್‌ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ? ತೀರ್ಪು ಕಾಯ್ದಿರಿಸಿದ ಕೋರ್ಟ್‌

ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಹುಕ್ಕಾ ನಿಷೇಧಿಸಲಾಗಿದೆ. ಹುಕ್ಕಾ ನಿಷೇಧ ಕುರಿತಾದ ಅಧಿಸೂಚನೆಯ ಜೊತೆಗೆ ಮಸೂದೆಯನ್ನೂ ಸದನದಲ್ಲಿ ಮಂಡಿಸಲಾಗಿದೆ. ಹುಕ್ಕಾ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹಾಗೆಂದು ನಾವು ಸಿಗರೇಟು ಬಳಕೆಗೆ ಆದ್ಯತೆ ನೀಡುತ್ತಿಲ್ಲ ಎಂದು ಹೇಳಿದ್ದರು. ವಾದ-ಪ್ರತಿವಾದ ಅಲಿಸಿ ಅಂತಿಮವಾಗಿ ರಿಟ್ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ್ದು, ಹುಕ್ಕಾ ನಿಷೇಧದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.

ಸರ್ಕಾರ ಹುಕ್ಕಾ ಬಾರ್‌ ನಿಷೇಧಿಸಿದ್ದು ಯಾಕೆ?

ಹುಕ್ಕಾ, ತಂಬಾಕು ಅಥವಾ ನಿಕೋಟಿನ್‌ ಒಳಗೊಂಡ ನಿಕೋಟಿನ್‌ ರಹಿತ, ತಂಬಾಕು ರಹಿತ, ಸ್ವಾದಭರಿತ, ಸ್ವಾದರಹಿತ ಹುಕ್ಕಾ ಮೊಲಾಸಸ್‌ ಇದೇ ಮಾದರಿಯ ಇನ್ನಿತರ ಹೆಸರುಗಳಿಂದ ಕರೆಯಲ್ಪಡುವ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ, ವ್ಯಾಪಾರವನ್ನು ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದವರ ವಿರುದ್ಧ ಸಿಒಟಿಪಿಎ, ಮಕ್ಕಳ ಆರೈಕೆ ಮತ್ತು ರಕ್ಷಣೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಗಳು, ಭಾರತೀಯ ದಂಡ ಸಂಹಿತೆ ಹಾಗೂ ಅಗ್ನಿ ನಿಯಂತ್ರಣ ಹಾಗೂ ಅಗ್ನಿಸುರಕ್ಷತೆ ಕಾಯಿದೆ ಪ್ರಕಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಫೆಬ್ರವರಿ 7ರಂದು ಅಧಿಸೂಚನೆ ಹೊರಡಿಸಿತ್ತು.

Continue Reading
Advertisement
Money Guide
ಮನಿ-ಗೈಡ್6 mins ago

Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Karnataka Weather
ಕರ್ನಾಟಕ15 mins ago

Karnataka Weather: ನಾಳೆ ಬೆಳಗಾವಿ, ಕೊಪ್ಪಳ ಸೇರಿ ವಿವಿಧೆಡೆ ಮಳೆ; ಮುಂದಿನ 4 ದಿನ ಶಾಖದ ಅಲೆ ತೀವ್ರತೆ ಹೆಚ್ಚಳ!

Lok Sabha Election 2024 Vote on April 26 and get 10 percent discount on these hotels
Lok Sabha Election 202429 mins ago

Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

Actress Saree Fashion
ಫ್ಯಾಷನ್38 mins ago

Actress Saree Fashion: ಟ್ರೆಂಡಿ ಸನ್‌ ಶೇಡ್‌ ಸೀರೆಯಲ್ಲಿ ನಟಿ ತೇಜಸ್ವಿನಿ ಶರ್ಮಾ ಸಮ್ಮರ್‌ ಲುಕ್‌

Sachin Tendulkar Birthday
ಕ್ರೀಡೆ39 mins ago

Sachin Tendulkar Birthday: ಈ ಬಾರಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್‌ ತೆಂಡೂಲ್ಕರ್‌; ವಿಡಿಯೊ ವೈರಲ್​

Condemns Neha murder case Gangavathi bandh
ಕೊಪ್ಪಳ42 mins ago

Neha Murder Case: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಗಂಗಾವತಿ ಬಂದ್; ಉತ್ತಮ ಪ್ರತಿಕ್ರಿಯೆ

Voter Slip
Lok Sabha Election 202444 mins ago

Voter Slip: ಮತದಾನಕ್ಕೆ ಇನ್ನೊಂದೇ ದಿನ ಬಾಕಿ; ವೋಟರ್ ಸ್ಲಿಪ್ ಸಿಕ್ಕಿಲ್ಲವೇ? ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಿ

Lok Sabha Election 2024
Lok Sabha Election 202445 mins ago

Lok Sabha Election 2024: ಚುನಾವಣಾ ಕಣಕ್ಕೆ ಧುಮುಕಿದ ಖಲಿಸ್ತಾನಿ ನಾಯಕ ಅಮೃತ್​ಪಾಲ್​ ಸಿಂಗ್‌; ಯಾವ ಕ್ಷೇತ್ರ?

ಕರ್ನಾಟಕ1 hour ago

Rapido Bike Taxi: ಏ.26ರಂದು ಬೆಂಗಳೂರು ಸೇರಿ 3 ನಗರಗಳಲ್ಲಿ ಮತದಾರರಿಗೆ ರ‍್ಯಾಪಿಡೋದಿಂದ ಉಚಿತ ರೈಡ್‌ ಆಫರ್‌

Kotak Mahindra Bank
ದೇಶ1 hour ago

Kotak Mahindra Bank: ಹೊಸ ಕ್ರೆಡಿಟ್ ಕಾರ್ಡ್ ನೀಡದಂತೆ ಕೊಟಕ್‌ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ; ಕಾರಣ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌