High court : ಪತಿ ಆಪರೇಷನ್‌ ಮಾಡಿಸಿಕೊಂಡಿಲ್ಲ ಎಂದು ಪತ್ನಿಯ ಹೆರಿಗೆ ಭತ್ಯೆ ತಡೆಹಿಡಿದ KPTCL, ಹೈಕೋರ್ಟ್‌ ಗರಂ - Vistara News

ಬೆಂಗಳೂರು

High court : ಪತಿ ಆಪರೇಷನ್‌ ಮಾಡಿಸಿಕೊಂಡಿಲ್ಲ ಎಂದು ಪತ್ನಿಯ ಹೆರಿಗೆ ಭತ್ಯೆ ತಡೆಹಿಡಿದ KPTCL, ಹೈಕೋರ್ಟ್‌ ಗರಂ

High Court : ಗಂಡ ವ್ಯಾಸೆಕ್ಟಮಿ ಮಾಡಿಸಿಕೊಂಡಿಲ್ಲ ಎಂಬ ಕಾರಣಕ್ಕೆ ಹೆಂಡತಿಯ ಹೆರಿಗೆ ಭತ್ಯೆಗೆ ಕತ್ತರಿ ಹಾಕಿದ ಕೆಪಿಟಿಸಿಎಲ್‌ಗೆ ಕರ್ನಾಟಕ ಹೈಕೋರ್ಟ್‌ ನ್ಯಾಯದ ಪಾಠ ಮಾಡಿದೆ.

VISTARANEWS.COM


on

High Court pregnant Woman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗಂಡ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆ (Vasectomy) ಮಾಡಿಸಿಕೊಂಡಿಲ್ಲ ಎಂಬ ಕಾರಣ ತನ್ನಲ್ಲಿ ಉದ್ಯೋಗಿಯಾಗಿದ್ದ (KPTCL Employee) ಮಹಿಳೆಯ 90 ದಿನಗಳ ಹೆರಿಗೆ ಭತ್ಯೆಯನ್ನು (Maternity allowance) ತಡೆ ಹಿಡಿದಿದ್ದ ರಾಜ್ಯ ವಿದ್ಯುತ್ ಪ್ರಸರಣ ನಿಗಮದ (KPTCL) ಕ್ರಮವನ್ನು ಕರ್ನಾಟಕ ಹೈಕೋರ್ಟ್ (Karnataka High Court) ಆಕ್ಷೇಪಿಸಿದೆ ಮತ್ತು ಆ ದಿನಗಳ ಭತ್ಯೆಯನ್ನು ಶೇ. 8 ಬಡ್ಡಿಯೊಂದಿಗೆ ಪಾವತಿಸಲು ಆದೇಶಿಸಿದೆ.

ನಿಜವೆಂದರೆ ಈ ವಿದ್ಯಮಾನ ನಡೆದಿರುವುದು ಈಗಲ್ಲ. ಯಾಕೆಂದರೆ, ಈ 11 ವರ್ಷದ ಹಿಂದೆ ನಿವೃತ್ತರಾಗಿರುವ ಅವರು ಅದಕ್ಕಿಂತಲೂ ಮೊದಲು ಹೆರಿಗೆ ಆದಾಗ ನಡೆದ ವಿದ್ಯಮಾನಕ್ಕೆ ಸಂಬಂಧಿಸಿ ಹೋರಾಟ ನಡೆಯುತ್ತಿದೆ. ಈಗ ಕೋರ್ಟ್‌ 2013ರ ನಿವೃತ್ತಿಯಿಂದ ಅನ್ವಯವಾಗುವಂತೆ ಬಡ್ಡಿ ಸಹಿತ ಹಣ ಪಾವತಿಸುವಂತೆ ಸೂಚಿಸಿದೆ.

ತಾನು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ನಿವೃತ್ತಿ ಸೌಲಭ್ಯಗಳನ್ನು ತಡೆಹಿಡಿದಿದ್ದ ರಾಜ್ಯ ವಿದ್ಯುತ್ ಪ್ರಸರಣ ನಿಗಮದ ಕ್ರಮವನ್ನು ಪ್ರಶ್ನಿಸಿ 71 ವರ್ಷದ ನಿವೃತ್ತ ನೌಕರರಾಗಿರುವ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್‌ ಶಂಕರ್ ಮಗದುಮ್‌ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. ಅಲ್ಲದೆ ಮಹಿಳಾ ಉದ್ಯೋಗಿಯು ನಿವೃತ್ತರಾದ 2013ರ ಮೇ 1ರಿಂದ ಅನ್ವಯವಾಗುವಂತೆ 90 ದಿನಗಳ ಭತ್ಯೆಯನ್ನು ಬಡ್ಡಿಯೊಂದಿಗೆ ಬಿಡುಗಡೆ ಮಾಡಲು ಆದೇಶಿಸಿದೆ.

ಅರ್ಜಿದಾರರು ಬೆಸ್ಕಾಂನ ಸೂಪರಿಂಡೆಂಟ್‌ ಎಂಜಿನಿಯರ್‌ಗೆ ಹೊಸದಾಗಿ ಮನವಿ ಸಲ್ಲಿಸಿ, 90 ದಿನಗಳ ಭತ್ಯೆಯನ್ನು ಪಾವತಿಸುವಂತೆ ಕೋರಬಹುದು. ಅರ್ಜಿದಾರರು ಮನವಿ ಸಲ್ಲಿಸಿದರೆ, ಸಂಬಂಧಪಟ್ಟ ಪ್ರಾಧಿಕಾರ ಆದೇಶ ಪರಿಶೀಲಿಸಿ ಭತ್ಯೆಯನ್ನು ಶೇ.8ರ ಬಡ್ಡಿಯೊಂದಿಗೆ ಪಾವತಿ ಮಾಡಬೇಕು ಎಂದು ಆದೇಶಿಸಿದೆ.

ಇದನ್ನೂ ಓದಿ : Budget 2024: ಮಹಿಳಾ ಉದ್ಯೋಗಿಗಳಿಗೆ ಇನ್ನಷ್ಟು ಸಂಬಳಸಹಿತ ರಜೆ; ಬಜೆಟ್‌ನಲ್ಲಿ ಏನಿದೆ ನಿರ್ಮಲಾ ಕೊಡುಗೆ?

ಏನಿದು ಹೆರಿಗೆ ಭತ್ಯೆ ವಿವಾದ?

ಅರ್ಜಿದಾರ ಮಹಿಳೆ ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿಯಲ್ಲಿ ಉದ್ಯೋಗಿಯಾಗಿದ್ದು, ಬೆಂಗಳೂರಿನ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಹಿರಿಯ ಸಹಾಯಕಿಯಾಗಿದ್ದರು. ಅವರಿಗೆ ಮೂರನೇ ಹೆರಿಗೆಯಾದಾಗ ಕರ್ನಾಟಕ ಸಿವಿಲ್ ಕಾಯಿದೆ 1983ರ ನಿಯಮ 130ರ ಅಡಿಯಲ್ಲಿ ಅರ್ಜಿದಾರರಿಗೆ 90 ದಿನಗಳ ಕಾಲ ಹೆರಿಗೆ ರಜೆ ಮಂಜೂರು ಮಾಡಲಾಗಿತ್ತು.

ಆದರೆ, ಅದಕ್ಕೆ ಒಂದು ಕಂಡೀಷನ್‌ ಇತ್ತು. ಈ ರಜೆ ದಿನಗಳಿಗೆ ವೇತನ ಪಾವತಿ ಮಾಡಬೇಕಾದಲ್ಲಿ ಮೂರಕ್ಕಿಂತ ಹೆಚ್ಚಿನ ಮಕ್ಕಳಿರುವವರು ಕಡ್ಡಾಯವಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕು ಎಂದು ಹೇಳಲಾಗಿತ್ತು. ಬಳಿಕ ಸರ್ಕಾರಿ ಮಹಿಳಾ ಉದ್ಯೋಗಿಯ ಪತಿಯೂ ಪರ್ಯಾಯವಾಗಿ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು ಎಂದು ನಿಯಮಗಳಿಗೆ ತಿದ್ದುಪಡಿ ಮಾಡಲಾಗಿತ್ತು.

ಮಹಿಳೆ ನಿವೃತ್ತಿಯ ಸಂದರ್ಭದಲ್ಲಿ ತಾವು ಹೆರಿಗೆ ರಜೆ ಪಡೆದುಕೊಂಡ ಅವಧಿಯ ನಗದೀಕರಣವನ್ನೂ ಸೇರಿಸಿ ನಿವೃತ್ತಿ ಸೌಲಭ್ಯಗಳನ್ನು ನೀಡುವಂತೆ ಮನವಿ ಸಲ್ಲಿಸಿದ್ದರು. ಆದರೆ, ನಿಗಮವು, ನಿಯಮ 130ರನ್ನು ಉಲ್ಲೇಖಿಸಿ ಅದರಂತೆ ರಜೆ ದಿನಗಳ ವೇತನ ನಗದೀಕರಣ ಮಾಡಿಕೊಳ್ಳಬೇಕಾದರೆ ಅರ್ಜಿದಾರರ ಪತಿಯೂ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕು ಎಂಬ ತಾಂತ್ರಿಕ ಕಾರಣ ನೀಡಿತ್ತು. ರಜೆ ಪಡೆದಿದ್ದ ದಿನಗಳ ವೇತನ ನಗದೀಕರಣ ಮಾಡಿಕೊಡುವುದಕ್ಕೆ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮಹಿಳೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಹೆರಿಗೆ ಭತ್ಯೆ ನೀಡಬಹುದು. ಗಂಡ ಮಾಡಿಸಿಕೊಂಡಿಲ್ಲ ಎಂಬ ತಾಂತ್ರಿಕ ಕಾರಣ ನೀಡಿ ತಡೆ ಹಿಡಿದಿದ್ದು ಸರಿಯಲ್ಲ ಎಂದು ನ್ಯಾಯಾಲಯ ಹೇಳಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾರ್ಗಸೂಚಿಗಳನ್ನು ಪಾಲಿಸದೆ ಇಬ್ಬರು ಆರೋಪಿಗಳು ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದಾರೆ. ಹಾಗಾಗಿ, ಇಬ್ಬರಿಗೂ ನ್ಯಾಯಾಲಯವು ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

VISTARANEWS.COM


on

Notes
Koo

ಬೆಂಗಳೂರು: ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ನಿಯಮಗಳನ್ನು ಉಲ್ಲಂಘಿಸಿ ನೋಟುಗಳನ್ನು ನಗದೀಕರಣ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯವು (CBI Special Court) ಇಬ್ಬರು ಆರೋಪಿಗಳಿಗೆ ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನೋಟು ನಗದೀಕರಣ ಮಾಡಿದ ಎಸ್.‌ ಗೋಪಾಲಯ್ಯ ಹಾಗೂ ಎಲ್‌ಐಸಿ ಏಜೆಂಟ್‌ ಕೆ.ರಾಘವೇಂದ್ರ ಎಂಬುವರಿಗೆ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

2016ರಲ್ಲಿ ಕೇಂದ್ರ ಸರ್ಕಾರವು ಐನೂರು ಹಾಗೂ ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದ ಸಂದರ್ಭದಲ್ಲಿ ನಿಷೇಧಿತ ಕರೆನ್ಸಿಗಳ ನಗದೀಕರಣಕ್ಕೆ ಆರ್‌ಬಿಐ ಹಲವು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ, ಇಬ್ಬರೂ ಆರ್‌ಬಿಐ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದರು. ಹಾಗಾಗಿ, ಸಿಬಿಐ ನ್ಯಾಯಾಲಯವು ಇಬ್ಬರಿಗೂ ಜೈಲು ಶಿಕ್ಷೆಯ ಜತೆಗೆ ಭಾರಿ ದಂಡ ವಿಧಿಸಿದೆ. ಎಸ್‌.ಗೋಪಾಲಯ್ಯಗೆ 2.10 ಲಕ್ಷ ರೂ. ಹಾಗೂ ರಾಘವೇಂದ್ರಗೆ 1.6 ಲಕ್ಷ ರೂ. ದಂಡ ವಿಧಿಸಿದೆ.

money guide

ಮಾರ್ಗಸೂಚಿ ಅನುಸರಿಸದೆ ನೋಟುಗಳನ್ನು ನಗದೀಕರಣ ಮಾಡಿಕೊಂಡ ಹಿನ್ನೆಲೆಯಲ್ಲಿ ಸಿಬಿಐ 2017ರ ಮಾರ್ಚ್‌ನಲ್ಲಿ ಈಗ ಶಿಕ್ಷೆಗೆ ಗುರಿಯಾಗಿರುವ ಇಬ್ಬರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಿಸಿತ್ತು. ತನಿಖೆ ವೇಳೆ ಇವರ ದುರುದ್ದೇಶ ಬಯಲಾಗಿತ್ತು. ತನಿಖೆ ಪೂರ್ಣಗೊಳಿಸಿದ್ದ ತಂಡವು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಂತೆ, ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.

ಕೆಲ ತಿಂಗಳ ಹಿಂದಷ್ಟೇ, ರಾಷ್ಟ್ರೀಯ ತನಿಖಾ ದಳವು ನಕಲಿ ನೋಟು ಜಾಲದ ಮೇಲೆ ಮುಗಿಬಿದ್ದಿತ್ತು. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಎನ್‌ಐಎ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅದರಲ್ಲಿ ಕರ್ನಾಟಕದ ಬಳ್ಳಾರಿಯಲ್ಲೂ ಒಬ್ಬನನ್ನು ಸೆರೆ ಹಿಡಿದಿತ್ತು. ಬಳ್ಳಾರಿಯಲ್ಲಿ ಬಂಧಿತ ಆರೋಪಿಯನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು, ಆತನಿಂದ ಭಾರಿ ಪ್ರಮಾಣದ ನಕಲಿ ನೋಟು, ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮೆಷಿನ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಈತ 500, 200, ಹಾಗೂ 100 ರೂ ಮುಖಬೆಲೆಯ ನೋಟು ತಯಾರಿಸುತ್ತಿದ್ದ ಎಂದು ತಿಳಿದುಬಂದಿತ್ತು.

ಇದನ್ನೂ ಓದಿ: Fake Currency: ಬಳ್ಳಾರಿಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಇಬ್ಬರ ಬಂಧನ

Continue Reading

ಕರ್ನಾಟಕ

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

CET 2024: ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಮೇ ಕೊನೇ ವಾರದಲ್ಲಿ ಸಿಇಟಿ 2024 ಫಲಿತಾಂಶ ಬಿಡುಗಡೆಯಾಗಲಿದೆ.

VISTARANEWS.COM


on

cet exam karnataka exam authority
Koo

ಬೆಂಗಳೂರು: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಿದ್ದ ಹಿನ್ನೆಲೆಯಲ್ಲಿ ಮರು ಪರೀಕ್ಷೆ (CET 2024) ನಡೆಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು, ಆದರೆ, ಇದೀಗ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು (Out Of Syllabus Questions) ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಮರು ಪರೀಕ್ಷೆ ನಡೆಸದೇ ಫಲಿತಾಂಶ ಬಿಡುಗಡೆ ಮಾಡಲು ತೀರ್ಮಾನಿಸಿದೆ.

ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ಔಟ್ ಆಫ್‌ ಸಿಲಬಸ್ ಪ್ರಶ್ನೆ ಕೈ ಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಜ್ಞರ ಸಮಿತಿ ಶಿಫಾರಸಿಗೆ ಒಪ್ಪಿಗೆ ನೀಡಿದ ಉನ್ನತ ಶಿಕ್ಷಣ ಇಲಾಖೆ, ಔಟ್ ಆಫ್ ಸಿಲಬಸ್ ಪ್ರಶ್ನೆ ಬಿಟ್ಟು ಉಳಿದ ಪ್ರಶ್ನೆಗಳನ್ನು ಫಲಿತಾಂಶಕ್ಕೆ ಪರಿಗಣಿಸಲು ನಿರ್ಧಾರ ಮಾಡಿದೆ.

ಇದನ್ನೂ ಓದಿ | PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

ತಪ್ಪಾದ 2 ಪ್ರಶ್ನೆಗಳಿಗೆ ಮಾತ್ರ ಗ್ರೇಸ್ ಅಂಕ ನೀಡಲು ‌ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಪ್ಪಾದ 2 ಪ್ರಶ್ನೆಗೆ ಗ್ರೇಸ್ ಅಂಕಗಳನ್ನು ಕೆಇಎ ನೀಡಲಿದೆ. ಉಳಿದಂತೆ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಟ್ಟು ಉಳಿದ ಪ್ರಶ್ನೆಗಳ‌ನ್ನು ಅಂಕಗಳಾಗಿ ಪರಿಗಣಿಸಲಾಗುತ್ತದೆ. ಇನ್ನು ಮೇ ಕೊನೇ ವಾರದಲ್ಲಿ ಸಿಇಟಿ ಫಲಿತಾಂಶವನ್ನು ಕೆಇಎ ಪ್ರಕಟ ಮಾಡಲಿದೆ.

ಸಿಇಟಿ ಪರೀಕ್ಷೆಯಲ್ಲಿ (CET 2024) ಪಠ್ಯಕ್ರಮದ ಹೊರತಾದ ಪ್ರಶ್ನೆಗಳಿಂದ (Out of syllabus questions) ವಿದ್ಯಾರ್ಥಿಗಳಲ್ಲಿ ಆತಂಕ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ತಜ್ಞರ ಸಮಿತಿ ರಚನೆ ಮಾಡಲಾಗಿತ್ತು. ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್‌ ಎಂ.ಎಸ್‌ ತಿಳಿಸಿದ್ದರು.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ.18 ಮತ್ತು 19ರಂದು ನಡೆಸಲಾಗಿತ್ತು. 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆದಿದ್ದ ಸಿಇಟಿ ಪರೀಕ್ಷೆಗೆ ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆದ ನಂತರ, ಪತ್ರಿಕೆಗಳಲ್ಲಿ ಹಲವು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ವಿದ್ಯಾರ್ತಿಗಳು ಆರೋಪಿಸಿದ್ದರು. ಆದ್ದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯ ಕೇಳಿಬಂದಿತ್ತು. ಆದರೆ ಇದೀಗ ಮರು ಪರೀಕ್ಷೆ ನಡೆಸದಿರಲ್ಲಿ ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Continue Reading

ಬೆಂಗಳೂರು

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Car Accident: ಬೆಂಗಳೂರು-ತುಮಕೂರು ಹೆದ್ದಾರಿಯ ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ಮಾರುತಿ ಓಮ್ನಿಗೆ ಬಲೆನೊ ಕಾರು ಡಿಕ್ಕಿಯಾಗಿ ಅಪಘಾತ ನಡೆದಿತ್ತು. ಅಂದು ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಳು. ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Car Accident
Koo

ಬೆಂಗಳೂರು: ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ನಡೆದಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ. ಇದರಿಂದ ಪ್ರಕರಣದಲ್ಲಿ ಸಾವಿನ ಸಂಖ್ಯೆ 4ಕ್ಕೇರಿದೆ. ಅಪಘಾತದಲ್ಲಿ ಮಾರುತಿ ಬಲೆನೊ ಕಾರು ಡಿಕ್ಕಿಯಾಗಿದ್ದರಿಂದ ಪಲ್ಟಿಯಾದ ಓಮ್ನಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ ಬಾಲಕಿಯೊಬ್ಬಳು ಸಜೀವ ದಹನವಾಗಿದ್ದಳು. ಘಟನೆಯಲ್ಲಿ (Car Accident) ಗಾಯಗೊಂಡಿದ್ದ 14 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು, ಈ ಪೈಕಿ ಮೂವರು ಇದೀಗ ಕೊನೆಯುಸಿರೆಳೆದಿದ್ದಾರೆ.

ಘಟನೆಯ ವಿವರ

ಬೆಂಗಳೂರು-ತುಮಕೂರು ಹೆದ್ದಾರಿಯ ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ರಾತ್ರಿ ಮಾರುತಿ ಓಮ್ನಿ (Maruti Omni) ವಾಹನಕ್ಕೆ ಬಲೆನೊ ಕಾರು (Baleno) ಹಿಂದಿನಿಂದ ಡಿಕ್ಕಿಯಾದ (Road Accident) ಪರಿಣಾಮ ಬಾಲಕಿಯೊಬ್ಬಳು (girl death) ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿತ್ತು.

ಓಮ್ನಿಯಲ್ಲಿದ್ದವರು ಅಬ್ಬಿಗೆರೆ, ದಾಸಾನುಪುರದ ಸಂಬಂಧಿಕರ ಮನೆಯಿಂದ ಬರುತ್ತಿದ್ದಾಗ ದುರಂತ ಘಟಿಸಿತ್ತು ಒಟ್ಟು ಎಂಟು ಜನ ಮಾರುತಿ ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಬಲೆನೊ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಬಲೆನೊ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಮೂರು ಪಲ್ಟಿಯಾಗಿತ್ತು. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ 14 ವರ್ಷದ ಬಾಲಕಿ ದಿವ್ಯ ಸ್ಥಳದಲ್ಲೇ ಸಾವಿಗೀಡಾಗಿದ್ದಳು.

ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಟು ಜನರಲ್ಲಿ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್, ಶಾಂತಿಲಾಲ್ ಗಾಯಗೊಂಡಿದ್ದರು. ಎಲ್ಲರೂ ದಾಸನಪುರ ನಿವಾಸಿಗಳು. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ನಮನ್, ಸುನಿತಾ, ಮಾಯಾಂಕ್ ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

ಮತ್ತೊಂದು ಕಾರಿನಲ್ಲಿದ್ದ ಚಾಲಕ ರಕ್ಷಿತ್, ಚೇತನ್, ಮುಬಾರಕ್, ಸಲ್ಮಾ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದವು. ಅವರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಪಘಾತಕ್ಕೆ ಕಾರಣವಾದ ಬಾಲೆನೋ ಕಾರು ಚಾಲಕ ಇನ್ಶೂರೆನ್ಸ್ ಹಣ ಕಟ್ಟದೆ ಫೇಕ್ ನಂಬರ್ ಹಾಕಿದ್ದ ಎನ್ನಲಾಗಿದೆ. ಜತೆಗೆ ಇದರ ಅಸಲಿ ಕಾರಿನ ಕಾರು ನಂಬರ್ ಬೆಳಗಾವಿಯ ಪಲ್ಲವಿ ಎಂಬುವವರಿಗೆ ಸೇರಿದ್ದು, ಹೀಗಾಗಿ ಡಿವೈಎಸ್ಪಿ ಜಗದೀಶ್ ನೇತೃತ್ವದಲ್ಲಿ ತನಿಖೆ ಚುರಕುಗೊಂಡಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather: ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆ ದಾಖಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ. ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Continue Reading
Advertisement
Tooth Decay
ಆರೋಗ್ಯ5 mins ago

Tooth Decay: ನಮ್ಮ ಈ ದುರಭ್ಯಾಸಗಳು ಹಲ್ಲಿನ ಹುಳುಕಿಗೆ ಕಾರಣವಾಗುತ್ತವೆ

dina bhavishya read your daily horoscope predictions for April 29 2024
ಭವಿಷ್ಯ1 hour ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

love jihad
ಕರ್ನಾಟಕ6 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ6 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು6 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ7 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ7 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20247 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ7 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ7 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ1 hour ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202413 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202416 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202417 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202418 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ21 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌