House thief | ಪೊಲೀಸರಿಗೆ ತಲೆನೋವಾಗಿದ್ದ, ಮುಸುಕಿನ ಜೋಳದ ವ್ಯಾಪಾರದ ನೆಪದಲ್ಲಿ ಸಿಕ್ಕಿಬಿದ್ದ - Vistara News

ಕ್ರೈಂ

House thief | ಪೊಲೀಸರಿಗೆ ತಲೆನೋವಾಗಿದ್ದ, ಮುಸುಕಿನ ಜೋಳದ ವ್ಯಾಪಾರದ ನೆಪದಲ್ಲಿ ಸಿಕ್ಕಿಬಿದ್ದ

ಬೆಂಗಳೂರಿನಲ್ಲಿ ಮುಸುಕಿನ ಜೋಳ ಮಾರಾಟದ ನೆಪದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ (House thief) ಆಸಾಮಿಯೊಬ್ಬ ಕೊನೆಗೂ ಸಿಕ್ಕಿ ಬಿದ್ದಿದ್ದಾನೆ.

VISTARANEWS.COM


on

Crime News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಗಾಗ್ಗೆ ಮನೆಗಳ್ಳತನ ಮಾಡಿ ಪೊಲೀಸರಿಗೆ ತಲೆನೋವಾಗಿದ್ದ ಆಸಾಮಿಯೊಬ್ಬ, ಮುಸುಕಿನ ಜೋಳದ ವ್ಯಾಪಾರದ ಸೋಗಿನಲ್ಲಿ ಅಲೆದು ಸಿಕ್ಕಿಬಿದ್ದಿದ್ದಾನೆ. ಮಂಜುನಾಥ್ ಅಲಿಯಾಸ್ ಮೂರ್ತಿ (House thief) ಎಂಬಾತನೇ ಈ ವ್ಯಕ್ತಿ.

ಈತ ಮನೆಗಳ್ಳತನ ಮಾಡುತ್ತಾ ಮೂರು ತಿಂಗಳಿಗೊಮ್ಮೆ ಪರಪ್ಪನ ಅಗ್ರಹಾರ ಜೈಲು ಪಾಲಾಗುತ್ತಿದ್ದ. ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ. ಆತ ಮೊಬೈಲ್ ಬಳಸುತ್ತಿರಲಿಲ್ಲ. ಓಡಾಡೋದಕ್ಕೆ ಬೈಕು ಬಳಸುತ್ತಿರಲಿಲ್ಲ.

ಆದರೆ ಮುಸುಕಿನಜೋಳದ ವ್ಯಾಪಾರದ ನೆಪದಲ್ಲಿ ಅಲೆದಾಡುತ್ತಿದ್ದ. ಇದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಜಾಡು ಹಿಡಿದ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಸರಿಸುಮಾರು 50 ಸಿಸಿಟಿವಿ ದೃಶ್ಯಾವಳಿಗಳನ್ನ ಜಾಲಾಡಿ ಗುರುತಿಸಿದ್ದರು.

ನೋಡುಗರ ದೃಷ್ಟಿಯಲ್ಲಿ ಮುಸುಕಿನ ಜೋಳ ವ್ಯಾಪಾರ ಮಾಡುತ್ತಿದ್ದ. ಆದರೆ ಮನೆಗಳ್ಳತನ ಮಾಡುತ್ತಿದ್ದ. ವಾಕಿಂಗ್ ವೇಳೆಯೇ ಮನೆಗಳನ್ನ ಹುಡುಕಿ ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದ. ಬಳಿಕ ಕದ್ದ ಮಾಲ್ ನೊಂದಿಗೆ ಯಾರಿಗೂ ಅನುಮಾನ ಬರದಂತೆ ಹೊರ ಹೋಗುತ್ತಿದ್ದ. ಸಿಸಿ ಟಿವಿ ಪರಿಶೀಲನೆ ವೇಳೆ ಆರೋಪಿಯ ಚಹರೆ ಪತ್ತೆಯಾಗಿತ್ತು.

ಶ್ರೀರಾಮಪುರದಲ್ಲಿ ಅನುಮಾನ ಬರದಂತೆ ತಿರುಗಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಯಿತು. ಬಂಧಿತನಿಂದ 6. 50 ಲಕ್ಷ ರೂ. ಮೌಲ್ಯದ 131 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

Drowned in water : ಈಜಲು ಕಾವೇರಿ ನದಿಗಿಳಿದ ಬಾಲಕರಿಬ್ಬರು ಜಲ ಸಮಾಧಿ

Drowned in water : ಕುಟುಂಬ ಸಮೇತ ನಿಮಿಷಾಂಭ ದೇಗುಲಕ್ಕೆಂದು ಬಂದಿದ್ದ ಬಾಲಕರಿಬ್ಬರು ನೀರು ಕಂಡೊಡನೆ ನದಿಗೆ ಇಳಿದಿದ್ದರು. ಆದರೆ ಈಜಲು ಹೋಗಿ ಜಲ ಸಮಾಧಿಯಾಗಿದ್ದಾರೆ.

VISTARANEWS.COM


on

By

Drowned in water
Koo

ಮಂಡ್ಯ: ಕಾವೇರಿ ನದಿಯಲ್ಲಿ (Cauvery River) ಮುಳುಗಿ ಬಾಲಕರಿಬ್ಬರು (Drowned in water) ದುರ್ಮರಣ ಹೊಂದಿದ್ದಾರೆ. ಮೈಸೂರಿನ ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ನಿಮಿಷಾಂಭ ದೇಗುಲ (Nimishamba Temple) ಬಳಿ ಘಟನೆ ನಡೆದಿದೆ. ವಿಶಾಲ್ (19), ರೋಹಣ್ (17) ಮೃತ ದುರ್ದೈವಿಗಳು.

ಕಾವೇರಿ ನದಿಯಲ್ಲಿ ವಿಶಾಲ್‌ ಹಾಗೂ ರೋಹಣ್‌ ಈಜಲು ಹೋದ ಈ ದುರ್ಘಟನೆ ನಡೆದಿದೆ. ಬೆಂಗಳೂರು ಮತ್ತು ತಮಿಳುನಾಡು ಮೂಲದ ಯುವಕರು ಮೈಸೂರಿನ ಅಜ್ಜಿ ಮನೆಗೆ ಬಂದಿದ್ದರು. ಕುಟುಂಬಸ್ಥರ ಜತೆ ನಿಮಿಷಾಂಭ ದೇಗುಲಕ್ಕೆ ಬಂದಿದ್ದರು.

ಈ ವೇಳೆ ಈಜಲು ಬಾರದೆ ಇದ್ದರೂ ನೀರಿಗೆ ಇಳಿದಿದ್ದಾರೆ. ಆದರೆ ಕಳೆದೊಂದು ವಾರದಿಂದ ಸುರಿದ ಮಳೆಗೆ ನೀರಿನ ಪ್ರಮಾಣ ಹೆಚ್ಚಾಗಿತ್ತು. ನೀರಿನ ರಭಸಕ್ಕೆ ಯುವಕರಿಬ್ಬರು ಕೊಚ್ಚಿ ಹೋಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಸ್ಥಳೀಯ ಈಜುಗಾರರ ನೆರವಿನಿಂದ ಶವಗಳನ್ನು ಮೇಲೆಕ್ಕೆತ್ತಿಸಿದ್ದಾರೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಜ್ಜಿ ಮನೆಗೆಂದು ಬಂದವರು ವಾಪಸ್‌ ಹೆಣವಾಗಿ ಹೋಗಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

ಕಾರು ಡಿಕ್ಕಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರ ಸಾವು

ಕೋಲಾರದ ಶ್ರೀನಿವಾಸಪುರ ತಾಲೂಕಿನ ಕಲ್ಲೂರು ಗ್ರಾಮದ ಬಳಿ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಲೂರು ಗ್ರಾಮದ ನಾಗರಾಜ (50) ಮೃತ ದುರ್ದೈವಿ.

ಚವರ್ಲೈಟ್ ಕಾರು ಹಾಗೂ ಸೂಪರ್ ಎಕ್ಸ್ ಎಲ್ ಸ್ಕೂಟರ್‌ ನಡುವೆ ಅಪಘಾತ ನಡೆದಿದೆ. ನಾಗರಾಜ ಅವರು ಸ್ಕೂಟರ್‌ನಲ್ಲಿ ಮನೆಯಿಂದ ತೋಟದ ಕಡೆಗೆ ಹೊರಟಿದ್ದರು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ನಾಗರಾಜ ರಸ್ತೆ ಬದಿಯ‌ ಡಿವೈಡರ್‌ ಹಾರಿ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಕಾರಿಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರರು

ಶಿವಮೊಗ್ಗ ತಾಲೂಕಿನ ಯಡೆಹಳ್ಳಿ ಗ್ರಾಮದ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ಹೋಗುತ್ತಿದ್ದ ಕಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ.

ಹೊಳೆ ಬೈರನಹಳ್ಳಿ ಗ್ರಾಮದ ಮೂವರು ಯುವಕರು ಒಂದೇ ಬೈಕ್‌ ಹೊರಡುವಾಗ ನಿಯಂತ್ರಣ ತಪ್ಪಿ ಕಾರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮೂವರು ಹಾರಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರು. ಕೈ-ಕಾಲುಗಳಿಗೆ ಗಾಯವಾಗಿದ್ದು, ಮೂವರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಾರು ರಿವರ್ಸ್‌ ತೆಗೆಯುವಾಗ ಸ್ಕೂಟಿಗೆ ಡಿಕ್ಕಿ

ಕಾರು ರಿವರ್ಸ್‌ ತೆಗೆಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಗೆ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರ ಸಂಡೇ ಮಾರ್ಕೆಟ್ ಬಳಿ ಕಾರು ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದೆ.

ಸ್ಕೂಟಿಯಲ್ಲಿದ್ದ ಎಲಿಜಬೆತ್ ಕಲ್ವಕುರಿ, ಯೇಸುದಾಸ್ ಕಲ್ವಕುರಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಮಹಿಳೆಯೊಬ್ಬರು ತಮ್ಮ ಕಾರನ್ನು ರಿವರ್ಸ್‌ ತೆಗೆಯುವಾಗ ಈ ಅವಘಡ ನಡೆದಿದೆ. ಗಾಯಾಳುಗಳು ಧಾರವಾಡ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan Arrested : ರೇಣುಕಾ ಸ್ವಾಮಿಯ ಮರ್ಮಾಂಗಕ್ಕೆ ಬೂಟು ಕಾಲಿನಿಂದ ಒದ್ದಿದ್ದ ದರ್ಶನ್​!

Actor Darshan Arrested : ದರ್ಶನ್​ ಮತ್ತು ಗ್ಯಾಂಗ್​ ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಯರ್ರಾಬಿರ್ರಿ ಹಲ್ಲೆ ಮಾಡಿದ್ದರು. ಹೀಗಾಗಿ ಒಂಟಿ ಮನೆಯಲ್ಲಿಯೇ ಪ್ರಾಣ ಬಿಟ್ಟಿದ್ದರು. ಇದನ್ನು ದರ್ಶನ್ ಒಪ್ಪಿಕೊಂಡಿದ್ದಾರೆ. ನನ್ನ ಗೆಳತಿಗೆ ಮರ್ಮಾಂಗದ ಫೋಟೋ ಕಳುಹಿಸ್ತಿಯಾ ಎಂದು ಬಂದ ದರ್ಶನ್​, ರೇಣುಕಾ ಸ್ವಾಮಿಯ ಕಾಲು ಅಗಲಿಸಿ ಬೂಟುಗಾಲಿನಲ್ಲಿ ಮರ್ಮಾಂಗವನ್ನು ಹೊಸಕಿದ್ದ. ಇದು ರೇಣುಕಾ ಸ್ವಾಮಿಯ ಅರ್ಧ ಪ್ರಾಣವನ್ನು ತೆಗೆದಿತ್ತು.

VISTARANEWS.COM


on

Actor Darshan Arrested
Koo

ಬೆಂಗಳೂರು: ತನ್ನ ಗೆಳತಿ ಪವಿತ್ರಾ ಗೌಡಗೆ ಮರ್ಮಾಂಗದ ಪೋಟೋ ಕಳುಹಿಸಿದ ರೇಣುಕಾ ಸ್ವಾಮಿಯ ಮರ್ಮಾಂಗಕ್ಕೆ ದರ್ಶನ್​ ಸಿಟ್ಟಿನಿಂದ ಬೂಟು ಕಾಲಿನಿಂದ ಒದ್ದಿದ್ದಾರೆ. ದರ್ಶನ್​ ವಿಚಾರಣೆ ವೇಳೆ (Actor Darshan Arrested) ಈ ತಪ್ಪನ್ನು ಒಪ್ಪಿಕೊಂಡಿದ್ದಾರೆ. ರೇಣುಕಾ ಸ್ವಾಮಿಯನ್ನು ಭಯಂಕರವಾಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿತ್ತು ಮತ್ತು ಪೋಸ್ಟ್​ ಮಾರ್ಟಂ ರಿಪೋರ್ಟ್ ಕೂಡ ಅದನ್ನೇ ಹೇಳಿತ್ತು. ಇದೀಗ ಸ್ವತಃ ದರ್ಶನ್​ ಸಿಟ್ಟಿನ ಭರದಲ್ಲಿ ಮಾಡಿರುವ ಕ್ರೌರ್ಯವನ್ನು ಒಂದೊಂದಾಗಿ ಒಪ್ಪಿಕೊಂಡಿದ್ದಾರೆ.

ದರ್ಶನ್​ ಮತ್ತು ಗ್ಯಾಂಗ್​ ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಯರ್ರಾಬಿರ್ರಿ ಹಲ್ಲೆ ಮಾಡಿದ್ದರು. ಹೀಗಾಗಿ ಒಂಟಿ ಮನೆಯಲ್ಲಿಯೇ ಪ್ರಾಣ ಬಿಟ್ಟಿದ್ದರು. ಇದನ್ನು ದರ್ಶನ್ ಒಪ್ಪಿಕೊಂಡಿದ್ದಾರೆ. ನನ್ನ ಗೆಳತಿಗೆ ಮರ್ಮಾಂಗದ ಫೋಟೋ ಕಳುಹಿಸ್ತಿಯಾ ಎಂದು ಬಂದ ದರ್ಶನ್​, ರೇಣುಕಾ ಸ್ವಾಮಿಯ ಕಾಲು ಅಗಲಿಸಿ ಬೂಟುಗಾಲಿನಲ್ಲಿ ಮರ್ಮಾಂಗವನ್ನು ಹೊಸಕಿದ್ದ. ಇದು ರೇಣುಕಾ ಸ್ವಾಮಿಯ ಅರ್ಧ ಪ್ರಾಣವನ್ನು ತೆಗೆದಿತ್ತು.

ದರ್ಶನ್ ಮತ್ತು ಬಳಗದ ಏಟಿನ ಆಘಾತಕ್ಕೆ ನೆಲದಲ್ಲಿ ಬಿದ್ದಿದ್ದ ರೇಣುಕಾ ಸ್ವಾಮಿ ತಪ್ಪಾಯ್ತು ಎಂದು ದರ್ಶನ್ ಕಾಲು ಹಿಡಿಲು ಹೋಗಿದ್ದರು. ಈ ವೇಳೆ ಇನ್ನಷ್ಟು ಸಿಟ್ಟಿಗೆದ್ದಿದ್ದ ದರ್ಶನ್ ಮುಖದ ಮೇಲೆಯೂ ಹಲ್ಲೆ ಮಾಡಿದ್ದರು. ಒದ್ದ ರಭಸಕ್ಕೆ ರೇಣುಕಾ ಸ್ವಾಮಿಯ ತಲೆ ಗೋಡೌನ್​ನಲ್ಲಿ ನಿಲ್ಲಿಸಿದ್ದ ಟೆಂಪೊಗೆ ತಗುಲಿತ್ತು. ಹೀಗಾಗಿ ಮಂಡೆಗೂ ಸರಿಯಾಗಿ ಪೆಟ್ಟು ಬಿದ್ದಿತ್ತು. ಬಳಿಕ ಮತಿ ತಪ್ಪುವ ತನಕ ಸಿಕ್ಕಾಪಟ್ಟೆ ಹೊಡೆದಿದ್ದರು.

ಆ ಬಳಿಕ ರಿಪೀಸ್​, ದೊಣ್ಣೆ ಸೇರಿದಂತೆ ನಾನಾ ವಸ್ತುಗಳಿಂದ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. ಹಲವಾರು ಹೊಡೆತಗಳನ್ನು ತಿಂದ ಬಳಿಕ ರೇಣುಕಾಸ್ವಾಮಿ ಸತ್ತಿದ್ದಾರೆ ಎಂಬುದಾಗಿ ಪ್ರದೂಷ್ ಫೋನ್ ಮಾಡಿ ದರ್ಶನ್​ಗೆ ತಿಳಿಸಿದ್ದ. ನಂತರ ಅವರು ವಿನಯ್ ಮಾಲೀಕತ್ವದ ಸ್ಟೋನಿ ಬ್ರೂಕ್ ಹೋಟೆಲ್​ನಲ್ಲಿ ಮೀಟಿಂಗ್ ಮಾಡಿ ಏನು ಮಾಡಬೇಕು ಎಂಬುದನ್ನು ನಿರ್ಧರಿಸಿದ್ದರು.

ನಂತರ ಅವರು ಮೃತದೇಹವನ್ನು ಮೋರಿಗೆ ಎಸೆದು ಸುಮ್ಮನಾಗುವ ಪ್ರಯತ್ನ ಮಾಡಿದ್ದರು. ಆದರೆ, ಮೋರಿಗೆ ಬೀಳದ ದೇಹ ಸೀದಾ ತಟದಲ್ಲಿ ಬಿದ್ದಿತ್ತು.

ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಸ್ಟಡಿಯಲ್ಲಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ (Pavitra Gowda) ಸೇರಿ ಇತರ ಆರೋಪಿಗಳ ತೀವ್ರ ವಿಚಾರಣೆಯು ನಡೆಯುತ್ತಿದೆ. ಈ ಮಧ್ಯೆ ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಭಾಗಿಯಾಗಿರುವ ಗುಮಾನಿಯು ಶುರುವಾಗಿದೆ.

ಇದನ್ನೂ ಓದಿ :Actor darshan Arrested : ದರ್ಶನ್​ಗೆ ಎಣ್ಣೆ ಹೊಡೆಯಲು, ಸಿಗರೇಟ್​ ಸೇದಲು ಪೊಲೀಸ್​ ಠಾಣೆಗೆ ಶಾಮಿಯಾನ​ವೇ?

ರೇಣುಕಾಸ್ವಾಮಿ ಕೊಲೆಯಾದ ಬಳಿಕ ಆರೋಪಿಗಳು ಒರ್ವ ಪೊಲೀಸ್ ಅಧಿಕಾರಿ ಜತೆಗೆ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಆರ್‌ಆರ್ ನಗರದಲ್ಲಿ ನಡೆದ ಕೊಲೆ ನಂತರ ಮೃತದೇಹವನ್ನು ಕಾಮಾಕ್ಷಿ ಪಾಳ್ಯಕ್ಕೆ ತಂದು ಹಾಕಿದ್ದು ಯಾಕೆ? ಎಲ್ಲಿಯೂ ಜಾಗ ಇಲ್ಲವೆಂದು ಕಾಮಾಕ್ಷಿ ಪಾಳ್ಯಕ್ಕೆ ತಂದು ಹಾಕಿದ್ದರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ನಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡೆಡ್‌ಬಾಡಿ ಹಾಕಬೇಡಿ ಎಂದಿದ್ದರಾ? ಆರೋಪಿಗಳು ಪೊಲೀಸ್‌ ಅಧಿಕಾರಿ ಸೂಚನೆ ಮೇರೆಗೆ ಮೃತದೇಹ ಕಾಮಾಕ್ಷಿಪಾಳ್ಯಕ್ಕೆ ತಂದು ಎಸೆಯಲಾಗಿದೆ. ಮೃತ ದೇಹ ಎಸೆದ ಬಳಿಕ ಸಹ ಪೊಲೀಸ್ ಅಧಿಕಾರಿ ಜತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Continue Reading

ಕ್ರೈಂ

Road Accident : ಪ್ರತ್ಯೇಕ 5 ಕಡೆಗಳಲ್ಲಿ ಆ್ಯಕ್ಸಿಡೆಂಟ್‌; ಕಾರು ಡಿಕ್ಕಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರ ಸಾವು

Road Accident : ರಾಜ್ಯದ ಹಲವೆಡೆ ರಸ್ತೆ ಅಪಘಾತಗಳು ಸಂಭವಿಸಿದೆ. ಕೋಲಾರದಲ್ಲಿ ಕಾರು ಡಿಕ್ಕಿ ಸವಾರ ಪ್ರಾಣ ಕಳೆದುಕೊಂಡರೆ, ಶಿವಮೊಗ್ಗದಲ್ಲಿ ತ್ರಿಬಲ್‌ ರೈಡಿಂಗ್‌ ಪ್ರಾಣಕ್ಕೆ ಕುತ್ತು ತಂದಿತ್ತು. ಇತ ಕಾರವಾರದಲ್ಲಿ ಕಾರು ರಿವರ್ಸ್‌ ತೆಗೆಯುವಾಗ ಸ್ಕೂಟಿ ಡಿಕ್ಕಿ ಹೊಡೆದರೆ, ಹಾಸನದಲ್ಲಿ ಟ್ಯಾಂಕರ್‌ವೊಂದು ಪಲ್ಟಿಯಾಗಿತ್ತು. ದಾವಣಗೆರೆಯಲ್ಲಿ ನಿಂತಿದ್ದ ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಸವಾರರು ನರಳಾಡುವಂತಾಗಿತ್ತು.

VISTARANEWS.COM


on

By

Road Accident
Koo

ಕೋಲಾರ/ಶಿವಮೊಗ್ಗ: ಪ್ರತ್ಯೇಕ ಕಡೆಗಳಲ್ಲಿ ಅಪಘಾತಗಳು (Road Accident ) ನಡೆದಿದ್ದು, ಸಾವು-ನೋವಿಗೆ ಕಾರಣವಾಗಿದೆ. ಕೋಲಾರದ ಶ್ರೀನಿವಾಸಪುರ ತಾಲೂಕಿನ ಕಲ್ಲೂರು ಗ್ರಾಮದ ಬಳಿ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಲೂರು ಗ್ರಾಮದ ನಾಗರಾಜ (50) ಮೃತ ದುರ್ದೈವಿ.

ಚವರ್ಲೈಟ್ ಕಾರು ಹಾಗೂ ಸೂಪರ್ ಎಕ್ಸ್ ಎಲ್ ಸ್ಕೂಟರ್‌ ನಡುವೆ ಅಪಘಾತ ನಡೆದಿದೆ. ನಾಗರಾಜ ಅವರು ಸ್ಕೂಟರ್‌ನಲ್ಲಿ ಮನೆಯಿಂದ ತೋಟದ ಕಡೆಗೆ ಹೊರಟಿದ್ದರು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ನಾಗರಾಜ ರಸ್ತೆ ಬದಿಯ‌ ಡಿವೈಡರ್‌ ಹಾರಿ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಕಾರಿಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರರು

ಶಿವಮೊಗ್ಗ ತಾಲೂಕಿನ ಯಡೆಹಳ್ಳಿ ಗ್ರಾಮದ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ಹೋಗುತ್ತಿದ್ದ ಕಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ.

ಹೊಳೆ ಬೈರನಹಳ್ಳಿ ಗ್ರಾಮದ ಮೂವರು ಯುವಕರು ಒಂದೇ ಬೈಕ್‌ ಹೊರಡುವಾಗ ನಿಯಂತ್ರಣ ತಪ್ಪಿ ಕಾರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮೂವರು ಹಾರಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರು. ಕೈ-ಕಾಲುಗಳಿಗೆ ಗಾಯವಾಗಿದ್ದು, ಮೂವರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಾರು ರಿವರ್ಸ್‌ ತೆಗೆಯುವಾಗ ಸ್ಕೂಟಿಗೆ ಡಿಕ್ಕಿ

ಕಾರು ರಿವರ್ಸ್‌ ತೆಗೆಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಗೆ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರ ಸಂಡೇ ಮಾರ್ಕೆಟ್ ಬಳಿ ಕಾರು ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದೆ.

ಸ್ಕೂಟಿಯಲ್ಲಿದ್ದ ಎಲಿಜಬೆತ್ ಕಲ್ವಕುರಿ, ಯೇಸುದಾಸ್ ಕಲ್ವಕುರಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಮಹಿಳೆಯೊಬ್ಬರು ತಮ್ಮ ಕಾರನ್ನು ರಿವರ್ಸ್‌ ತೆಗೆಯುವಾಗ ಈ ಅವಘಡ ನಡೆದಿದೆ. ಗಾಯಾಳುಗಳು ಧಾರವಾಡ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಹಾಸನ ಹೊರವಲಯದ ಸಮುದ್ರವಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ ಹೊಡೆದಿದೆ. ಅಪಘಾತದಿಂದಾಗಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್, ಸಮುದ್ರವಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಪಲ್ಟಿಯಾಗಿತ್ತು.

ಇತ್ತ ಗ್ಯಾಸ್ ಪಲ್ಟಿಯಾದ ವೇಳೆ ಡ್ರೈವಿಂಗ್ ಸೀಟ್‌ನಲ್ಲಿ ಚಾಲಕ ಸಿಲುಕಿಕೊಂಡಿದ್ದ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಚಾಲಕನನ್ನು ರಕ್ಷಿಸಿದರು. ಬಳಿಕ ಗ್ಯಾಸ್ ಟ್ಯಾಂಕರ್ ತೆರವುಗೊಳಿಸಿದರು. ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಬೈಕ್‌ಗಳಿಗೆ ಕಾರು ಡಿಕ್ಕಿ

ರಸ್ತೆ ಬದಿ ನಿಂತಿದ್ದ ಎರಡು ಬೈಕ್‌ಗಳಿಗೆ ಕಾರೊಂದು ಡಿಕ್ಕಿ ಹೊಡೆದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ದಾವಣಗೆರೆ ನಗರದ ವಿಮಾನ‌ಮಟ್ಟಿ ಚಕ್ ಪೋಸ್ಟ್ ಬಳಿ ಘಟನೆ ನಡೆದಿದೆ. ಕುಡಿದು ಕಾರು ಚಲಾಯಿಸಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಹರಪ್ಪನಹಳ್ಳಿ ತಾಲೂಕಿನ ಅಣಜಿಕೆರೆ ಗ್ರಾಮದ ಪ್ರದೀಪ್, ಲೋಕೇಶ್ ಮದ್ಯಪಾನ ‌ಮಾಡಿ ಕಾರು ಚಲಾಯಿಸಿದವರು. ಸದ್ಯ ಗಾಯಗೊಂಡವರ ಗುರುತು ಪತ್ತೆಯಾಗಿಲ್ಲ. ಅಪಘಾತ ಆಗುತ್ತಿದ್ದಂತೆ ಕಾರಿ‌ನಲ್ಲಿದ್ದ ಒಬ್ಬನನ್ನು ‌ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊಬ್ಬ ಕಾರಿನಲ್ಲಿ ತಪ್ಪಿಸಿಕೊಂಡು ಹೋಗುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor darshan Arrested : ದರ್ಶನ್‌ಗೆ ಎಣ್ಣೆ ಹೊಡೆಯಲು, ಸಿಗರೇಟ್​ ಸೇದಲು ಠಾಣೆಗೇ ಶಾಮಿಯಾನ ಹಾಕಿದರೆ ಪೊಲೀಸರು?

Actor darshan Arrested : ಪೊಲೀಸ್​ ಠಾಣೆಯ ಲಾಕ್​ಅಪ್​ನಲ್ಲಿರುವವರಿಗೆ ಕಾನೂನು ಪ್ರಕಾರ ಊಟ, ತಿಂಡಿ ಬಿಟ್ಟರೆ ಇನ್ಯಾವುದೂ ಇಲ್ಲ. ಆದರೆ, ಸೆಲೆಬ್ರಿಟಿಗಳು ಹಣ ಬಲ ಬಳಸಿ ಇಂಥದ್ದನ್ನೆಲ್ಲ ಪಡೆದುಕೊಳ್ಳುತ್ತಾರೆ. ಅಂತೆಯೇ ದರ್ಶನ್ ಬಳಗ ಈ ಒಂದು ಐಡಿಯಾ ಮಾಡಿರಬಹುದು ಎನ್ನಲಾಗಿದೆ. ಇಲ್ಲದಿದ್ದರೆ ಸಾಮಾನ್ಯರ ಪೊಲೀಸ್ ಠಾಣೆಯನ್ನು ಟೆಂಟ್ ಶಾಮಿಯಾನಗಳಿಂದ ಮುಚ್ಚುವ ಪ್ರಮೇಯ ಏನಿದೆ ಎಂದು ಜನ ಪ್ರಶ್ನಿಸಿದ್ದಾರೆ.

VISTARANEWS.COM


on

Actor darshan Arrested
Koo

ಬೆಂಗಳೂರು: ಚಿತ್ರದುರ್ಗದ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಬಂಧಿಸಿಟ್ಟಿರುವ (Actor darshan Arrested) ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ಟೆಂಟ್ ಹಾಕಿ ಮುಚ್ಚಲಾಗಿದೆ! ಪೊಲೀಸರು ಟೆಂಟ್​ ಹಾಕಿದ್ದಕ್ಕೆ ಕಾರಣ ಕೊಟ್ಟಿಲ್ಲ. ಹೀಗಾಗಿ ದರ್ಶನ್​ಗೆ ‘ಸಕಲ ಸೇವೆಗಳನ್ನು’ ನೀಡಲು ಟೆಂಟ್​​ನ ಕವಚ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಬಂಧನವಾದ ದಿನದಿಂದಲೂ ದರ್ಶನ್ ಸರಿಯಾಗಿ ಊಟ ಮಾಡದೇ ಎಣ್ಣೆ ಕೊಡಿ, ಸಿಗರೇಟು ಕೊಡಿ ಎಂದಷ್ಟೇ ಕೇಳುತ್ತಿದ್ದಾರೆ ಎಂಬುದಾಗಿಯೂ ವರದಿಯಾಗಿತ್ತು. ಮೈ ನಡುಕ ಉಂಟಾಗಿದೆ. ಸಿಗರೇಟು ಬೇಕು, ಕುಡಿಯಲು ಎಣ್ಣೆ ಬೇಕು ಎಂದು ಅವರು ಡಿಮ್ಯಾಂಡ್ ಮಾಡುತ್ತಿದ್ದಾರೆ. ತೆರೆದ ಪೊಲೀಸ್​ ಠಾಣೆಯಲ್ಲಿ ಅವರಿಗೆ ಇಂಥ ‘ಅಗತ್ಯ’ ವಸ್ತುಗಳನ್ನು ಕೊಟ್ಟರೆ ಸಾರ್ವಜನಿಕರಿಗೆ ಮತ್ತು ಮಾಧ್ಯಮದವರಿಗೆ ಗೊತ್ತಾದರೆ ಸಮಸ್ಯೆಯಾಗುತ್ತದೆ ಎಂದು ಪೊಲೀಸರು ಟೆಂಟ್​ನ ಐಡಿಯಾ ಮಾಡಿದ್ದಾರೆ.

ಪೊಲೀಸ್​ ಠಾಣೆಯ ಲಾಕ್​ಅಪ್​ನಲ್ಲಿರುವವರಿಗೆ ಕಾನೂನು ಪ್ರಕಾರ ಊಟ, ತಿಂಡಿ ಬಿಟ್ಟರೆ ಇನ್ಯಾವುದೂ ಇಲ್ಲ. ಆದರೆ, ಸೆಲೆಬ್ರಿಟಿಗಳು ಹಣ ಬಲ ಬಳಸಿ ಇಂಥದ್ದನ್ನೆಲ್ಲ ಪಡೆದುಕೊಳ್ಳುತ್ತಾರೆ. ಅಂತೆಯೇ ದರ್ಶನ್ ಬಳಗಕ್ಕೆ ಉಪಕಾರ ಮಾಡಲು ಐಡಿಯಾ ಮಾಡಿರಬಹುದು ಎನ್ನಲಾಗಿದೆ. ಇಲ್ಲದಿದ್ದರೆ ಸಾಮಾನ್ಯರಿಗಾಗಿ ಇರುವ ಪೊಲೀಸ್ ಠಾಣೆಯನ್ನು ಟೆಂಟ್ ಶಾಮಿಯಾನಗಳಿಂದ ಮುಚ್ಚುವ ಪ್ರಮೇಯ ಏನಿದೆ ಎಂದು ಜನ ಪ್ರಶ್ನಿಸಿದ್ದಾರೆ.

ಠಾಣೆಯ ಸುತ್ತಲೂ ಶಾಮಿಯಾನದ ಜತೆಗೆ ಹಾಕುವ ಸೈಡ್​ವಾಲ್​ (ಪರದೆಗಳನ್ನು) ಹಾಕಲಾಗಿದ್ದು, ಪೊಲೀಸ್​ ಠಾಣೆಯನ್ನು ಯಾರಿಗೂ ಕಾಣದಂತೆ ಮಾಡಲಾಗಿದೆ. ಈ ಸ್ಟೇಷನ್​ಗೆ ಯಾರಿಗೂ ಪ್ರವೇಶ ಇಲ್ಲದಂತೆ ಮಾಡಲಾಗಿದೆ. ಸಣ್ಣ ಪುಟ್ಟ ಅಹವಾಲುಗಳನ್ನು ತೆಗೆದುಕೊಂಡು ಬರುವ ಜನರನ್ನು ಶಾಮಿಯಾನದಿಂದ ಮುಚ್ಚಿದ ಗೇಟ್​ನಿಂದಲೇ ಪೊಲೀಸರು ಮಾತನಾಡಿಸಿ ಕಳುಹಿಸುತ್ತಿದ್ದಾರೆ. ಒಟ್ಟಿನಲ್ಲಿ ಸಾರ್ವಜನಿಕರ ಸೇವೆಗೆ ಇರುವ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ದರ್ಶನ್​ ಗ್ಯಾಂಗ್​ಗೆ ರೆಸಾರ್ಟ್ ಆಗಿ ಪರಿವರ್ತನೆಗೊಂಡಿದೆ. ದರ್ಶನ್​ ಬಳಗ ಆ ಠಾಣೆಯಲ್ಲಿ ಇರುವ ತನಕ ಸಾರ್ಜನಿಕರ ಸೇವೆಗೆ ದೊರೆಯುವುದು ಅನುಮಾನ.

ಬೋರ್ಡ್​ ಕಾಣದ ಹಾಗೆ ಶಾಮಿಯಾನ

ಬೋರ್ಡ್​ ಹಾಕಿದ ಅಂದಕ್ಕೆ ಠಾಣೆಯ ಬೋರ್ಡ್​ ಕೂಡ ಕಾಣುತ್ತಿಲ್ಲ. ಅಗತ್ಯಕ್ಕಾಗಿ ಠಾಣೆಗೆ ಬರುವ ಮಂದಿಗೆ ಠಾಣೆ ಎಲ್ಲಿ ಎಂದು ಹುಡುಕುವ ಪರಿಸ್ಥಿತಿ ಶುರುವಾಗಿದೆ. ಹಾಗಾದರೆ ಜನಸಾಮಾನ್ಯರ ಪೊಲೀಸ್​ ಠಾಣೆ ವಿಐಪಿ ಆರೋಪಿಗಳ ಅಡಗುದಾಣವಾಗಿರುವುದು ವಿಪರ್ಯಾಸ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಠಾಣೆಯ ಸುತ್ತ ಮುತ್ತ ನಿಷೇದಾಜ್ಞೆ

ದರ್ಶನ್​ ಬಂಧಿಸಿಟ್ಟಿರುವ ಠಾಣೆಯ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಭಿಮಾನಿಗಳು ಹಾಗೂ ಮಾಧ್ಯಮಗಳ ಕ್ಯಾಮೆರಾಮನ್​ಗಳು ತುಂಬಿಕೊಳ್ಳುತ್ತಿದ್ದ ಜಾಗದಲ್ಲಿ ಈಗ ನಾಲ್ಕು ಮಂದಿಗಿಂತ ಹೆಚ್ಚು ಜನ ಸೇರುವಂತಿಲ್ಲ. ಗುರುವಾರ ನಗರ ಪೊಲೀಶ್​ ಕಮಿಷನರ್ ದಯಾನಂದ್ ಅವರು ಠಾಣೆಗೆ ಭೇಟಿ ನೀಡಿದ್ದರು. ಆ ಬಳಿಕದಿಂದ ಠಾಣೆಯ ಸುತ್ತ ನಿಷೇದಾಜ್ಞೆ ಜಾರಿ ಮಾಡಿ ಪರದೆಯಿಂದ ಮುಚ್ಚಲಾಗಿದೆ.

ಜೂನ್​ 13ರಿಂದ 17ನೇ ದಿನಾಂಕದವರೆಗೂ 144ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಠಾಣಾ ಸುತ್ತ ಮುತ್ತ 200 ಮೀಟರ್ ಸುತ್ತಲೂ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ದರ್ಶನ್ ಅರೆಸ್ಟ್ ಹಿನ್ನೆಲೆ ಠಾಣೆ ಬಳಿ ಅಭಿಮಾನಿಗಳು ಮಿತಿಮೀರಿ ಜಮಾಯಿಸುತ್ತಿದ್ದರು. ಕೆಲವೊಂದು ಬಾರಿ ಲಾಠಿ ಚಾರ್ಜ್​ ಮಾಡಿದ್ದರು. ಹೀಗಾಗಿ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ರಿಂದ ಆದೇಶ ಹೊರಡಿಸಿದ್ದಾರೆ.

ದರ್ಶನ್‌ಗೆ ನೆರವು ಕೊಟ್ಟ ಮತ್ತೊಬ್ಬ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌!

ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಆರೋಪಿಗಳನ್ನು ತಂಡಗಳಾಗಿ ವಿಂಗಡಿಸಿ, ಶೆಡ್‌ನ ಪ್ರತಿ ಮೂಲೆಯಲ್ಲೂ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಲಾಗಿದೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಬಂಧಿತನನ್ನು ಪ್ರದೋಶ್ (Paradosh) ಎಂದು ಗುರುತಿಲಾಗಿದ್ದು, ಈತ ಕೂಡ ಸ್ಯಾಂಡಲ್ ವುಡ್ ನಟನಾಗಿದ್ದಾನೆ. ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ. ರೇಣುಕಾ ಸ್ವಾಮಿ ಮೃತಪಟ್ಟ ಬಳಿಕ ಗಾಬರಿಗೊಂಡ ದರ್ಶನ್‌ 30 ಲಕ್ಷ ರೂ. ನೀಡಿ ಬಾಡಿಯನ್ನು ಎಲ್ಲಾದರು ಬಿಸಾಕುವಂತೆ ಹೇಳುತ್ತಾರೆ. ಆಗ ತನ್ನ ಆಪ್ತ, ಹೋಟೆಲ್ ಉದ್ಯಮಿ ಪ್ರದೋಶ್‌ ದರ್ಶನ್‌ ಹೇಳಿದಾಗ ಪ್ರದೋಶ್ ಮತ್ತಿತರರು ದೇಹವನ್ನು ಸ್ಕಾರ್ಪಿಯೋ ಕಾರಿನಲ್ಲಿ ಒಯ್ದು ಸುಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ಒಂದರ ಮುಂಭಾಗದ ಮೋರಿ ಬಳಿ ಎಸೆದು ಹೋಗಿದ್ದಾರೆ.

Continue Reading
Advertisement
Maruti Suzuki
ಆಟೋಮೊಬೈಲ್10 mins ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ38 mins ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ41 mins ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು44 mins ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Joshimath Teshil Now Jyotirmath
ದೇಶ52 mins ago

Joshimath Teshil Now Jyotirmath: ಉತ್ತರಾಖಂಡದ ಜೋಶಿಮಠ ಈಗ ಜ್ಯೋತಿರ್ಮಠ!

ATM Cash Withdrawal Fee
ವಾಣಿಜ್ಯ1 hour ago

ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

Siddaramaiah
ಕರ್ನಾಟಕ2 hours ago

ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

NEET UG Result 2024
ಶಿಕ್ಷಣ2 hours ago

NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

Actor Darshan
ಕರ್ನಾಟಕ2 hours ago

Actor Darshan: ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದ ದರ್ಶನ್‌ ಪುತ್ರ ವಿನೀಶ್;‌ ಪೋಸ್ಟ್‌ನಲ್ಲಿ ಇನ್ನೇನಿದೆ?

Viral Video
ವೈರಲ್ ನ್ಯೂಸ್3 hours ago

Viral Video: ಮಗನಿಗೆ ಮುಸಲ್ಮಾನರ ಕ್ಯಾಪ್‌ ಹಾಕಿದ ನಟಿ; ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌