Police Alert | ಬೆಂಗಳೂರಿನ ಅಂಡರ್‌ಪಾಸ್‌ಗಳಲ್ಲಿ ವಾಹನ ನಿಲ್ಲಿಸಿದರೆ ಇನ್ನು ಬೀಳಲಿದೆ ಕೇಸ್! - Vistara News

ಬೆಂಗಳೂರು

Police Alert | ಬೆಂಗಳೂರಿನ ಅಂಡರ್‌ಪಾಸ್‌ಗಳಲ್ಲಿ ವಾಹನ ನಿಲ್ಲಿಸಿದರೆ ಇನ್ನು ಬೀಳಲಿದೆ ಕೇಸ್!

ಅಂಡರ್‌ಪಾಸ್‌ಗಳಲ್ಲಿ ವಾಹನ ನಿಲ್ಲಿಸಿದರೆ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು
ಎಂದು ಸಂಚಾರ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

ಬೆಂಗಳೂರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಳೆ ಬಂದಾಗ ನಗರದ ಕೆಳಸೇತುವೆ(ಅಂಡರ್‌ಪಾಸ್‌)ಗಳಲ್ಲಿ ವಾಹನ ನಿಲ್ಲಿಸಿದರೆ ವಾಹನ ಸವಾರರಿಗೆ ಇನ್ನು ಮುಂದೆ ದಂಡ ಬೀಳಲಿದೆ. ಕೆಳಸೇತುವೆಗಳಲ್ಲಿ ವಾಹನ ನಿಲ್ಲಿಸುವುರಿಂದ ಉಂಟಾಗುವ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ನಿಯಂತ್ರಿಸಲು ಬೆಂಗಳೂರು ಟ್ರಾಫಿಕ್‌ ಪೊಲೀಸ್ (Police Alert) ಕಠಿಣ ಕ್ರಮ ಕೈಗೊಂಡಿದೆ.

ಅಂಡರ್‌ಪಾಸ್‌ಗಳಲ್ಲಿ ಅಪಘಾತಗಳಾಗುವುದನ್ನು ತಪ್ಪಿಸಲು ನಗರದ ವಿಂಡ್ಸನ್ ಮ್ಯಾನರ್ ಬ್ರಿಡ್ಜ್, ನಾಯಂಡಹಳ್ಳಿ ಬ್ರಿಡ್ಜ್ ಅಂಡರ್ ಪಾಸ್ ಸೇರಿ ನಗರದ ಕೆಳಸೇತುವೆಗಳಲ್ಲಿ ವಾಹನ ನಿಲ್ಲಿಸಿದರೆ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಎಂದು ಸಂಚಾರ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಮಳೆ ಬರುವಾಗ ಯಾವುದೇ ಕಾರಣಕ್ಕೂ ಅಂಡರ್ ಪಾಸ್‌ಗಳಲ್ಲಿ ವಾಹನ ನಿಲ್ಲಿಸಬಾರದು. ಅಂಡರ್‌ಪಾಸ್‌ನಲ್ಲಿ ವಾಹನ ನಿಲ್ಲಿಸುವುದರಿಂದ ಹಿಂಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ನಗರದಲ್ಲಿ ಒಟ್ಟು 3 ಕಡೆ ಇತ್ತೀಚೆಗೆ ಈ ಕಾರಣಕ್ಕಾಗಿ ಅಪಘಾತ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಇಂತಹ ಪ್ರಕರಣಗಳು ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ | Suicide Case | ಸಾಲಗಾರರ ಹಿಂಸೆ ತಾಳಲಾರದೆ ಬೆಂಗಳೂರಲ್ಲಿ ಜಿಮ್ ಮಾಲೀಕ ಆತ್ಮಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

Lok Sabha Election 2024: ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿಯವರು ಸುಳ್ಳು ಹೇಳಿದ್ದಾರೆ. ದಲಿತರು, ಹಿಂದುಳಿದವರ ಮೀಸಲಾತಿ ಕಿತ್ತು ಎಲ್ಲಿ ಮುಸ್ಲಿಂರಿಗೆ ನೀಡಲಾಗಿದೆ. ಮೋದಿಯವರು ದಾಖಲೆ ಕೊಡಬೇಕು. ಇಲ್ಲವಾದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ವಕ್ತಾರ ಹಾಗೂ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

VISTARANEWS.COM


on

Minister Dinesh Gundurao latest statement
Koo

ಬೆಂಗಳೂರು: ಚುನಾವಣೆ ಗೆಲ್ಲಬೇಕು ಎಂಬ ಒಂದೇ ಕಾರಣಕ್ಕೆ ಹಸಿ ಸುಳ್ಳುಗಳನ್ನು ಹರಡುತ್ತಿರುವ ಮೋದಿಯವರು, ಸಮಾಜದಲ್ಲಿ ಒಡುಕು ಮೂಡಿಸುವ ಸ್ವಾರ್ಥ ರಾಜಕಾರಣಕ್ಕೆ ಕೈ ಹಾಕಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ವಕ್ತಾರ ಹಾಗೂ ಸಚಿವ ದಿನೇಶ್ ಗುಂಡೂರಾವ್ (Lok Sabha Election 2024) ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿಯವರು ಸುಳ್ಳು ಹೇಳಿದ್ದಾರೆ. ದಲಿತರು, ಹಿಂದುಳಿದವರ ಮೀಸಲಾತಿ ಕಿತ್ತು ಎಲ್ಲಿ ಮುಸ್ಲಿಮರಿಗೆ ನೀಡಲಾಗಿದೆ? ಮೋದಿಯವರು ದಾಖಲೆ ಕೊಡಬೇಕು. ಇಲ್ಲವಾದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ತಿಳಿಸಿದರು.

10 ವರ್ಷ ಏನು ಕೆಲಸ ಮಾಡದೇ ಅಧಿಕಾರ ಅನುಭವಿಸಿರುವ ಮೋದಿಯವರಿಗೆ ಈಗ ಮುಸ್ಲಿಂ ಮೀಸಲಾತಿ ಎಂಬ ಕಪೋಲ ಕಲ್ಪಿತ ವಿಷಯ ಜ್ಞಾನೋದಯವಾಗಿದೆಯೇ? ಇಷ್ಟು ವರ್ಷ ಸುಮ್ಮನಿದ್ದು ಈಗ ಚುನಾವಣೆ ಸಮಯದಲ್ಲೇ ಸುಳ್ಳು ಹೇಳಿಕೆ ನೀಡುತ್ತಿರುವುದು ಏಕೆ? ಬಹುಮತ ಪಡೆಯುವುದು ಕಷ್ಟ ಎಂಬುದು‌ ಮೋದಿಯವರಿಗೆ ಸ್ಪಷ್ಟವಾದಂತಿದೆ. ಹೀಗಾಗಿ ಈ ರೀತಿಯ ಸಮಾಜದಲ್ಲಿ ಒಡಕು ಮೂಡಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

ದಲಿತರ ಮೀಸಲಾತಿಯನ್ನು ಪರಿಷ್ಕರಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗಿಲ್ಲ. ಇದಕ್ಕೆ ಸಂಸತ್ತಿನ ಎರಡು ಸದನಗಳ ಒಪ್ಪಿಗೆ ಮೂಲಕ ಕಾಯ್ದೆ ತಿದ್ದುಪಡಿಯಾಗಬೇಕಾಗುತ್ತೆ. ಪ್ರಧಾನಿಯಾದವರು ಈ ಮಟ್ಟಕ್ಕೆ ಸುಳ್ಳು ಹೇಳಬಾರದು. ಕರ್ನಾಟಕದಲ್ಲಿ ಮುಸ್ಲಿಂರನ್ನು ಹಿಂದುಳಿದ ಜಾತಿಗಳ 2B ವರ್ಗಕ್ಕೆ ಸೇರಿಸಿದ್ದು 30 ವರ್ಷಗಳ ಹಿಂದಿನ ಕಥೆ. ಚೆನ್ನಪ್ಪ ರೆಡ್ಡಿಯವರ ಆಯೋಗದ ವರದಿ ಅನ್ವಯ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಗತಿ‌ ಗಳನ್ನು ಗಮನದಲ್ಲಿಟ್ಟುಕೊಂಡು ಅಂದು 2B ವರ್ಗಕ್ಕೆ ಸೇರಿಸಲಾಯಿತು. ಇಲ್ಲಿಯವರೆಗು ಯಾರು ಇದನ್ನು ಪ್ರಶ್ನೆ ಮಾಡಿಲ್ಲ. ಈಗ ಚುನಾವಣೆ ಸಂದರ್ಭದಲ್ಲಿ ಸಮಾಜದಲ್ಲಿ ಒಡಕು ಮೂಡಿಸಿ ಮತ ಪಡೆಯುವ ಉದ್ದೇಶದಿಂದ ಮೋದಿಯವರು ಪ್ರಸ್ತಾಪಿಸಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಬ್ ಕಾ ವಿಶ್ವಾಸ್‌ ಎನ್ನುತ್ತಿದ್ದ ಮೋದಿಯವರು ಈಗ ಹೇಳುತ್ತಿರುವುದು ಏನು? ಅವರ ಹೇಳಿಕೆಗಳನ್ನು ಗಮನಿಸಿದರೆ ಸಬ್ ಕಾ ಸಾಥ್ ಎನ್ನುವುದು ಶುದ್ಧ ಸುಳ್ಳು ಎಂದಾಯ್ತು. ಒಂದು ಕೋಮಿನ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವ ಮೋದಿಯವರಿಗೆ ಸಬ್ ಕಾ ಸಾಥ್ ಎಂದು ಹೇಳುವ ನೈತಿಕತೆ ಇದೆಯಾ. ಸಮಾಜದಲ್ಲಿ ಬೆಂಕಿ ಹಚ್ವುವ ಹೇಳಿಕೆಗಳನ್ನು ನೀಡುವುದರಲ್ಲಿ ಮೋದಿಯವರು ಯತ್ನಾಳ್ ಅವರನ್ನೂ ಮೀರಿಸುವ ಹಂತಕ್ಕೆ ಹೋದಂತಿದೆ‌ ಎಂದು ಟೀಕಿಸಿದ ಅವರು, ಸೋಲಿನ ಭೀತಿ ಮೋದಿಯವರನ್ನು ಕಾಡುತ್ತಿದೆ. ಹೀಗಾಗಿ ಮೋದಿಯವರು ಸುಳ್ಳಿನ ಆಶ್ರಯ ಪಡೆಯುತ್ತಿದ್ದಾರೆ. ಯಾವುದೇ ಆಧಾರದವಿಲ್ಲದೇ ದಲಿತರ ಮೀಸಲಾತಿ ಕಡಿತ ಮಾಡ್ತಿದೆ ಕಾಂಗ್ರೆಸ್ ಎಂದು ಹೇಳಿದ್ದಾರೆ. ದಾಖಲೆ ಸಮೇತ ಮಾತನಾಡಲಿ. ಇಲ್ಲವಾದರೆ ದೇಶದ ಜನರ ಕ್ಷಮೆ ಕೇಳಲಿ ಎಂದು ಅವರು ಆಗ್ರಹಿಸಿದರು.‌

ಇದನ್ನೂ ಓದಿ: Karnataka Weather : ನಾಳೆ ಬೆಳಗಾವಿ, ಚಾಮರಾಜನಗರದಲ್ಲಿ ಮಳೆ ; ಉಳಿದೆಡೆ ಬಿಸಿಲ ಶಾಕ್‌

ನ್ಯಾಷನಲ್ ಒಬಿಸಿ ಕಮಿಷನ್‌ಗೆ ನಮ್ಮ ವಿಚಾರದಲ್ಲಿ ಹಸ್ತಕ್ಷೇಪ ಮಾಡುವ ಯಾವ ಅಧಿಕಾರವೂ ಇಲ್ಲ. ಇಷ್ಟು ವರ್ಷದಿಂದ ನ್ಯಾಷನಲ್ ಓಬಿಸಿ ಅಧ್ಯಕ್ಷ ಏನು ಮಾಡ್ತಿದ್ರು? ಕೇವಲ ಗೊಂದಲ ಮೂಡಿಸುವುದಕ್ಕೆ ಮಾತ್ರ ಹೇಳಿಕೆ ಕೊಟ್ಟಿದ್ದಾರೆ. ಅವರು ಮಧ್ಯಪ್ರವೇಶ ಮಾಡುವ ಅವಶ್ಯಕತೆ ಇಲ್ಲ, ನಾವು ಅವರಿಗೆ ಉತ್ತರ ಕೊಡುವ ಅಗತ್ಯವೂ ಇಲ್ಲ ಹಿಂದೆ ಬೊಮ್ಮಾಯಿ ಅವರು ಇದಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡು ಸೋತು ಸುಣ್ಣವಾಗಿ ಹೋಗಿದ್ದಾರೆ. ಇದಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡೇ ಬಿಜೆಪಿ 65ಕ್ಕೆ ಇಳಿದಿದೆ. ಅವಿವೇಕಿಯ ರೀತಿ ಮಾತನಾಡಿರುವ ನ್ಯಾಷನಲ್ ಒಬಿಸಿ ಅಧ್ಯಕ್ಷರು ಈಗ ಯಾಕೆ ಹಸ್ತಕ್ಷೇಪ ಮಾಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಗುಡುಗಿದರು.

Continue Reading

ಕ್ರೀಡೆ

TCS World 10K Run : ಈ ದಿನದಂದು ಮೆಟ್ರೊ ರೈಲು ಸೇವೆ ಬೆಳಗ್ಗೆ 4.10ಕ್ಕೆ ಆರಂಭ

TCS World 10K Run : ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

VISTARANEWS.COM


on

Namma metro
Koo

ಬೆಂಗಳೂರು: ಏಪ್ರಿಲ್​ 28ರಂದು (ಭಾನುವಾರ) ಬೆಂಗಳೂರಿನ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್​ ಷಾ ಪರೇಡ್ ಮೈದಾನದಿಂದ ನಡೆಯಲಿರುವ TCS ವರ್ಲ್ಡ್ 10K ರನ್ (TCS World 10K Run ) ಪ್ರಯುಕ್ತ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆ ಯನ್ನು 07:00 ಗಂಟೆಗೆ ಬದಲಾಗಿ ಮುಂಜಾನೆ 03:35 ಕ್ಕೆ ಆರಂಭಗೊಳ್ಳಲಿದೆ ಎಂದು ಮೆಟ್ರೊ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಗ್ಗೆ 04.10 ಗಂಟೆಗೆ ಪ್ರಾರಂಭವಾಗಲಿದೆ. ನಂತರ 10 ನಿಮಿಷಗಳ ಅಂತರದಿಂದ ಬೆಳಿಗ್ಗೆ 5.00 ಗಂಟೆಯವರೆಗೆ ರೈಲುಗಳು ಸಂಚರಿಸಲಿದೆ. ಆ ನಂತರ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Namma Metro : ನಮ್ಮ ಮೆಟ್ರೊ ವಿಸ್ತೃತ ನೇರಳೆ ಮಾರ್ಗ ಲೋಕಾರ್ಪಣೆ ಮಾಡಿದ ಮೋದಿ; ಏನಿದರ ವಿಶೇಷತೆ?

10K ಓಟದಲ್ಲಿ ಭಾಗವಹಿಸಲು ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮೆಟ್ರೊ ಅಧಿಕಾರಿಗಳು ವಿನಿಂತಿ ಮಾಡಿದ್ದಾರೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್‌ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಹೇಳಿದೆ.

ಮತದಾನದ ದಿನದಂದು ನಮ್ಮ ಮೆಟ್ರೋ ಸೇವೆ ಹೀಗಿದೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಮೆಟ್ರೊ ರೈಲಿನ ಸಂಚಾರ ಅವಧಿ ರಾತ್ರಿ 11.55ರ ಬದಲಿಗೆ 12.35ರವರೆಗೆ ವಿಸ್ತರಣೆಗೊಳ್ಳಲಿದೆ. ಮತದಾನಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೆಟ್ರೋ ಸೇವೆಯನ್ನು ವಿಸ್ತರಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.

ಏಪ್ರಿಲ್ 26, 2024 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ತನ್ನ ನಾಲ್ಕು ಪ್ರಮುಖ ನಿಲ್ದಾಣಗಳಾದ ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್, ಚಲ್ಲಘಟ್ಟ, ವೈಟ್ಫೀಲ್ಡ್ (ಕಾಡುಗೋಡು) ನಿಂದ ತನ್ನ ಕೊನೆಯ ರೈಲು ಸೇವೆಗಳನ್ನು 23.55 ಬದಲಿಗೆ (ರಾತ್ರಿ 11.55) 12.35ರವರೆಗೆ ವಿಸ್ತರಿಸುತ್ತದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ವೈರಲ್ ನ್ಯೂಸ್

Viral Video: ಸ್ಕೂಟರ್‌ನಲ್ಲೇ ಆನ್‌ಲೈನ್‌ ಮೀಟಿಂಗ್‌ ನಡೆಸಿದ ಮಹಿಳೆ; ಇದು ವರ್ಕ್‌ ಫ್ರಮ್‌ ಟ್ರಾಫಿಕ್‌ ಬ್ರೋ!

Viral Video: ಬೆಂಗಳೂರು ಟ್ರಾಫಿಕ್‌ ಎಂಬ ಹೆಸರು ಕೇಳಿದರೆ ಸಾಕು ಹಲವರ ಕುತೂಹಲ ಗರಿಗೆದರುತ್ತದೆ. ಯಾಕೆಂದರೆ ಬೆಂಗಳೂರು ಟ್ರಾಫಿಕ್‌ನಲ್ಲಿ ಹಲವು ಆಸಕ್ತಿದಾಯಕ ಸಂಗತಿಗಳು ಜರಗುತ್ತವೆ. ಒಂದಲ್ಲ ಒಂದು ವಿಶಿಷ್ಟ ಘಟನೆಗೆ ಬೆಂಗಳೂರು ಟ್ರಾಫಿಕ್‌ ಸಾಕ್ಷಿಯಾಗುತ್ತದೆ. ಇದೂ ಕೂಡ ಅಂತಹದ್ದೆ ಆಸಕ್ತಿದಾಯಕ ಘಟನೆ. ಟ್ರಾಫಿಕ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಸ್ಕೂಟರ್‌ ಸವಾರ ಮಹಿಳೆಯೊಬ್ಬರು ಆನ್‌ಲೈನ್‌ ಮೀಟಿಂಗ್‌ ಅಟೆಂಡ್‌ ಆಗುತ್ತಾರೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Viral Video
Koo

ಬೆಂಗಳೂರು: ಸಿಲಿಕಾನ್‌ ಸಿಟಿ, ಗಾರ್ಡನ್‌ ಸಿಟಿ, ಐಟಿ ಸಿಟಿ ಎಂದೆಲ್ಲ ಕರೆಯಿಸಿಕೊಳ್ಳುವ ಬೆಂಗಳೂರು ಬಹುತೇಕ ಎಲ್ಲರಿಗೂ ಪ್ರಿಯ. ಹೀಗೆ ಎಲ್ಲರ ನೆಚ್ಚಿನ ನಮ್ಮ ಬೆಂಗಳೂರು ಬಗ್ಗೆ ಹಲವರ ಆಕ್ಷೇಪ ಇರುವುದು ಟ್ರಾಫಿಕ್‌ ವಿಚಾರದಲ್ಲಿ. ಟ್ರಾಫಿಕ್‌ ಸಮಸ್ಯೆ ಬೆಂಗಳೂರಿಗರನ್ನು ಹೆಚ್ಚಿನ ಸಂದರ್ಭಗಳಲ್ಲಿ ಹೈರಾಣಾಗಿಸುತ್ತದೆ (Bengaluru Traffic). ಬೆಂಗಳೂರಿನ ಈ ಟ್ರಾಫಿಕ್‌ ಸಮಸ್ಯೆಗೆ ಪರಿಹಾರವೇ ಇಲ್ಲ ಎನ್ನುವಂತಾಗಿದೆ. ಬೆಂಗಳೂರು ಟ್ರಾಫಿಕ್‌ ಬಗ್ಗೆ ತಹೇವಾರಿ ಕಥೆ ಹುಟ್ಟಿಕೊಳ್ಳುತ್ತದೆ. ಟ್ರಾಫಿಕ್‌ಗೆ ಸಿಲುಕಿ ಅನೇಕ ವಿಶಿಷ್ಟ ಸಂಗತಿ ಜರಗುತ್ತವೆ. ಅದಕ್ಕೆ ತಕ್ಕ ಉದಾಹರಣೆ ಎನ್ನುವಂತಿದೆ ಈ ವೈರಲ್‌ ವಿಡಿಯೊ (Viral Video). ಅಷ್ಟಕ್ಕೂ ಈ ವಿಡಿಯೊದಲ್ಲಿ ಏನಿದೆ? ಇಲ್ಲಿದೆ ವಿವರ.

ಟ್ರಾಫಿಕ್‌ನಲ್ಲಿ ಸಿಕ್ಕಿಹಾಕಿಕೊಂಡ ಸ್ಕೂಟರ್‌ ಚಲಾಯಿಸುತ್ತಿದ್ದ ಮಹಿಳೆಯೊಬ್ಬರು ಅಲ್ಲೇ ಆನ್‌ಲೈನ್‌ ಮೀಟಿಂಗ್‌ನಲ್ಲಿ ಭಾಗಿಯಾಗುತ್ತಾರೆ. ʼವರ್ಕ್‌ ಫ್ರಮ್‌ ಟ್ರಾಫಿಕ್‌ʼ ಎನ್ನುವ ಶೀರ್ಷಿಕೆಯಡಿ ವಿಡಿಯೊವನ್ನು ಶೇರ್‌ ಮಾಡಲಾಗಿದೆ. ಬೆಂಗಳೂರಿನಲ್ಲಿ ಇದು ಸಾಮಾನ್ಯ ಎಂದೂ ಬರೆಯಲಾಗಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೊ ನೆಟ್ಟಿಗರ ಗಮನ ಸೆಳೆದಿದೆ.

ವಿಡಿಯೊದಲ್ಲಿ ಏನಿದೆ?

ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ಮಹಿಳೆ ಸ್ಕೂಟರ್‌ ಅನ್ನು ಒಂದು ಬದಿಗೆ ನಿಲ್ಲಿಸಿ ಆನ್‌ಲೈನ್‌ ಮೀಟಿಂಗ್‌ಗೆ ಹಾಜರಾಗುತ್ತಾರೆ. ಕ್ಯಾಮೆರಾವನ್ನು ಮಹಿಳೆಯ ಮೊಬೈಲ್‌ಗೆ ಝೂಮ್‌ ಮಾಡಿದಾಗ ಅವರು ಮೀಟಿಂಗ್‌ನಲ್ಲಿ ಭಾಗವಹಿಸಿರುವುದು ಸ್ಪಷ್ಟವಾಗುತ್ತದೆ. ಜತೆಗೆ ವಿಡಿಯೊ ಹಲವು ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್‌ ಜಾಮ್‌ ಆಗಿರುವುದನ್ನು ತೋರಿಸುತ್ತದೆ. ಮಹಿಳೆಗೆ ಕರ್ತವ್ಯ ಪ್ರಜ್ಞೆಗೆ ಹಲವರು ಶಬ್ಬಾಶ್‌ಗಿರಿ ತಿಳಿಸಿದ್ದಾರೆ.

ಆಧುನಿಕ ಯುಗದಲ್ಲಿ ವೈಯಕ್ತಿಕ ಬದುಕು ಮತ್ತು ಉದ್ಯೋಗವನ್ನು ಸಮತೋಲನಗೊಳಿಸಲೇಬೇಕಾದ ಅನಿವಾರ್ಯತೆಯನ್ನು ಇದು ಒತ್ತಿ ಹೇಳುತ್ತದೆ. ಜತೆಗೆ ಡಿಜಿಟಲ್‌ ಫ್ಲಾಟ್‌ಫಾರ್ಮ್‌ಗಳ ಮೇಲೆ ಹೆಚ್ಚುತ್ತಿರುವ ಅವಲಂಬನೆಯನ್ನೂ ಇದು ಪ್ರತಿನಿಧಿಸುತ್ತದೆ.

ಸ್ಕೂಟರ್‌ ರೈಡಿಂಗ್‌ ಮಾಡ್ತಾ ಲ್ಯಾಪ್‌ಟಾಪ್‌ನಲ್ಲಿ ವಿಡಿಯೊ ಕಾಲ್‌

ಈ ರೀತಿಯ ಘಟನೆ ಹಿಂದೆಯೂ ನಡೆದಿತ್ತು. ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಸ್ಕೂಟರ್‌ ಓಡಿಸುತ್ತ ಲ್ಯಾಪ್‌ಟಾಪ್‌ನಲ್ಲಿ ವಿಡಿಯೊ ಕಾಲ್‌ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿತ್ತು. ಟೆಕ್ಕಿಯಂತೆ ಕಾಣುವ ವ್ಯಕ್ತಿಯೊಬ್ಬರು ಬೆಂಗಳೂರಿನ ರಸ್ತೆಯಲ್ಲಿ ಸ್ಕೂಟರ್‌ ಓಡಿಸುತ್ತಿದ್ದಾರೆ. ಅವರ ಮುಂದುಗಡೆ ಲ್ಯಾಪ್‌ಟಾಪ್‌ ಓಪನ್‌ ಆಗಿದ್ದು, ವಿಡಿಯೊ ಕಾನ್ಫರೆನ್ಸ್‌ ನಡೆಯುತ್ತಿದೆ. ಅದರಲ್ಲಿ ಈ ವ್ಯಕ್ತಿಯೂ ಭಾಗಿಯಾಗಿದ್ದಾರೆ ಎಂಬುದು ಗೊತ್ತಾಗುತ್ತದೆ. ಬೆಂಗಳೂರಿನ ವಾಹನನಿಬಿಡ ರಸ್ತೆಯಲ್ಲಿ ಸ್ಕೂಟರ್‌ ಚಲಾವಣೆಯನ್ನೂ ಕಚೇರಿ ಕೆಲಸವನ್ನೂ ಬ್ಯಾಲೆನ್ಸ್‌ ಮಾಡುತ್ತಿರುವ ಈ ವ್ಯಕ್ತಿಯ ಚಾಕಚಕ್ಯತೆ ಹಲವರಲ್ಲಿ ಬೆರಗು ಮೂಡಿಸಿತ್ತು. ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಉಲ್ಲಾಸದ, ಟೀಕೆಯ, ವಿನೋದದ ಪ್ರತಿಕ್ರಿಯೆಗಳನ್ನು ಹುಟ್ಟು ಹಾಕಿತ್ತು. ಕೆಲವು ಬಳಕೆದಾರರು ರಸ್ತೆ ಸುರಕ್ಷತೆ ಮತ್ತು ಕೆಲಸದ ಒತ್ತಡದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Bengaluru Traffic: ಟ್ರಾಫಿಕ್‌ ಚಕ್ರವ್ಯೂಹಕ್ಕೆ ಸಿಲುಕಿ 12 ಕಿ.ಮೀ ನಡೆದು ಮನೆ ತಲುಪಿದ ವ್ಯಕ್ತಿ!

ಅದಕ್ಕೂ ಹಿಂದೆ ಆನ್‌ಲೈನ್‌ ಫುಡ್‌ ಡೆಲಿವರಿ ಮಾಡುವವರು ಬೆಂಗಳೂರಿನ ಟ್ರಾಫಿಕ್‌ನಲ್ಲೇ ಆರ್ಡರ್‌ ಮಾಡಿದ ವ್ಯಕ್ತಿಗೆ ಆಹಾರ ವಿತರಿಸಿ ಸುದ್ದಿಯಾಗಿದ್ದರು. ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿಕೊಂಡಿದ್ದ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಿಶಿವತ್ಸ್‌ ಡೊಮಿನೋಸ್‌ನಿಂದ ಆಹಾರ ಆರ್ಡರ್‌ ಮಾಡಿದ್ದರು. ಅವರ ಲೈವ್‌ ಲೊಕೇಷನ್‌ ಟ್ರ್ಯಾಕ್‌ ಮಾಡಿದ ಫುಡ್‌ ಡೆಲಿವರಿ ಏಜೆಂಟ್‌ಗಳು ಕಾರಿನ ಬಳಿಗೇ ಬಂದು ಡೆಲಿವರಿ ಮಾಡಿದ್ದರು. ರಿಶಿವತ್ಸ್‌ ಟ್ರಾಫಿಕ್‌ ಜಾಮ್‌ನಲ್ಲಿ ಸಿಕ್ಕಿ ಹಾಕಿಕೊಂಡಾಗ ಡೊಮಿನೋಸ್‌ನ ಏಜೆಂಟ್‌ಗಳಿಬ್ಬರು ಸ್ಕೂಟರ್‌ನಲ್ಲಿ ಆಗಮಿಸಿದ್ದರು. ಬಳಿಕ ಅವರು ತಮ್ಮ ವಾಹನವನ್ನು ರಸ್ತೆ ಬದಿ ನಿಲ್ಲಿ ಕಾರಿನ ಬಳಿಗೆ ಬಂದು ಆರ್ಡರ್‌ ನೀಡಿದ್ದರು. ಈ ದೃಶ್ಯ ವೈರಲ್‌ ಆಗಿತ್ತು.

Continue Reading

Lok Sabha Election 2024

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯುತ್ತೀರಾ? ಹಾಗಿದ್ರೆ ನಿಮ್ಗೆ ಬಸ್‌ ಪ್ರಯಾಣ ಫ್ರೀ!

2nd PUC Exam: ಏಪ್ರಿಲ್‌ 2ರಿಂದ ರಾಜ್ಯದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ 2ನೇ ಪೂರಕ ಪರೀಕ್ಷೆಯು ಪ್ರಾರಂಭವಾಗುತ್ತಿದೆ. ಇನ್ನು ವಿದ್ಯಾರ್ಥಿಗಳಿಗೆ ಅವರ ಕಾಲೇಜಿನ ಹೊರತಾಗಿ ಇತರೆ ಕಾಲೇಜಿಗೆ ಪರೀಕ್ಷಾ ಕೇಂದ್ರಗಳು ನಿಗದಿಯಾಗಿವೆ. ಈ ಕಾರಣದಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಅವರ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಸಂಚಾರ ಮಾಡಲು ನಿಗಮದ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲು ಅನುಮತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರ ಬರೆದು ಕೋರಿದ್ದಾರೆ. ಈ ಕಾರಣದಿಂದಾಗಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

VISTARANEWS.COM


on

2nd PUC Exam 2 KSRTC BMTC bus travel free for students in exam timing
Koo

ಬೆಂಗಳೂರು: ಇದೇ ಏಪ್ರಿಲ್ 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭವಾಗಲಿದ್ದು, ವಿದ್ಯಾರ್ಥಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಈಗ ರಾಜ್ಯದ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಉಚಿತ ಪ್ರಯಾಣಕ್ಕೆ ಅನುವು ಮಾಡಿ ಕೊಟ್ಟಿದೆ. ಪರೀಕ್ಷೆಗೆ ಹಾಜರಾಗುವವರು ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಪ್ರಕಟಣೆ ಮೂಲಕ ತಿಳಿಸಿದೆ.

ಏಪ್ರಿಲ್‌ 2ರಿಂದ ರಾಜ್ಯದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ 2ನೇ ಪೂರಕ ಪರೀಕ್ಷೆಯು ಪ್ರಾರಂಭವಾಗುತ್ತಿದೆ. ಇನ್ನು ವಿದ್ಯಾರ್ಥಿಗಳಿಗೆ ಅವರ ಕಾಲೇಜಿನ ಹೊರತಾಗಿ ಇತರೆ ಕಾಲೇಜಿಗೆ ಪರೀಕ್ಷಾ ಕೇಂದ್ರಗಳು ನಿಗದಿಯಾಗಿವೆ. ಈ ಕಾರಣದಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಅವರ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಸಂಚಾರ ಮಾಡಲು ನಿಗಮದ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲು ಅನುಮತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರ ಬರೆದು ಕೋರಿದ್ದಾರೆ. ಈ ಕಾರಣದಿಂದಾಗಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

ಆದೇಶದಲ್ಲೇನಿದೆ?

ಕ.ರಾ.ರ.ಸಾ. ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 29.04.2024 ರಿಂದ 16.05.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸಂಬಂಧ, ನಿಗಮದ ಎಲ್ಲ ಚಾಲಕರು ಹಾಗೂ ನಿರ್ವಾಹಕರಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ. ಮುಂದುವರಿದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವುದು.

ಚಾಲನಾ ಸಿಬ್ಬಂದಿ ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಲಾಗಿದೆ ಎಂದು ನಿಗಮವು ಆದೇಶದಲ್ಲಿ ಉಲ್ಲೇಖಿಸಿದೆ.

ಬಿಎಂಟಿಸಿ ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬಿಎಂಟಿಸಿ ಸಹ ಈ ಬಗ್ಗೆ ಆದೇಶ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಏಪ್ರಿಲ್ 29ರಿಂದ ಏಪ್ರಿಲ್‌ 15 ರವರೆಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ – 2 ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅವರ ಕಾಲೇಜು ಹೊರತಾಗಿ ಇತರೆ ಕಾಲೇಜಿನ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಅವರ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ ಪತ್ರದಲ್ಲಿ ಕೋರಲಾಗಿದೆ. ಹೀಗಾಗಿ ಸಂಸ್ಥೆಯು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: 2nd PUC Exam: ಏಪ್ರಿಲ್‌ 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಮತ್ತೊಂದು ಎಡವಟ್ಟು!

ಬಿಎಂಟಿಸಿ ಆದೇಶದಲ್ಲೇನಿದೆ?

ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ದಿನಾಂಕ 29.04.2024 ರಿಂದ 16.05.2024 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋಲಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸುವುದು.

ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡುವುದು. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಇದ್ದಲ್ಲಿ, ಬಸ್ ನಿಲುಗಡೆಯನ್ನು ನೀಡಲು ಚಾಲನಾ ಸಿಬ್ಬಂದಿಗೆ ತಿಳಿಸುವುದು. ಚಾಲನಾ ಸಿಬ್ಬಂದಿಯು ವಿದ್ಯಾರ್ಥಿಗಳೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು ಎಂದು ಬಿಎಂಟಿಸಿ ಆದೇಶದಲ್ಲಿ ಸೂಚಿಸಿದೆ.

Continue Reading
Advertisement
Lok sabha Election
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

food
ಕರ್ನಾಟಕ2 hours ago

Food Poisoning : ಮದುವೆ ಮನೆ ಊಟ ತಿಂದ ನೂರಾರು ಮಂದಿ ಅಸ್ವಸ್ಥ; ಆಸ್ಪತ್ರೆಯಲ್ಲಿ ಹಾಹಾಕಾರ

PM Narendra Modi will visit Sirsi on April 28
ಉತ್ತರ ಕನ್ನಡ2 hours ago

Lok Sabha Election 2024: ಶಿರಸಿಯಲ್ಲಿ ಏಪ್ರಿಲ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಸಮಾವೇಶ

Bus Driver attacked
ಕರ್ನಾಟಕ2 hours ago

Bus driver Attacked : ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಠಾಣೆ ಮುಂಭಾಗ ಧರಣಿ

IPL 2024
ಪ್ರಮುಖ ಸುದ್ದಿ2 hours ago

IPL 2024 : ಆರ್​​ಸಿಬಿಗೆ ಸಿಕ್ಕಿತು ಕೊನೆಗೂ ಒಂದು ವಿಜಯ; ಎಸ್​ಆರ್​ಎಚ್​ ವಿರುದ್ಧ 35 ರನ್ ಗೆಲುವು

Viral News
ವೈರಲ್ ನ್ಯೂಸ್2 hours ago

Viral News: ವಾಟರ್‌ ಪ್ಯೂರಿಫೈಯರ್‌ನಿಂದ ನೀರು ಕುಡಿದ ಬುದ್ಧಿವಂತ ಮಂಗ; ವಿಡಿಯೊ ನೀವೂ ನೋಡಿ

lok sabha Election
ಪ್ರಮುಖ ಸುದ್ದಿ3 hours ago

lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

Car Accident
ಪ್ರಮುಖ ಸುದ್ದಿ3 hours ago

Car Accident : ಟೈರ್​ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕಾರು; ಇಬ್ಬರ ದುರ್ಮರಣ

Narendra Modi
ದೇಶ3 hours ago

Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

khalistan movement
ಪ್ರಮುಖ ಸುದ್ದಿ3 hours ago

khalistan Movement : ಲಂಡನ್​ ಭಾರತ ಹೈಕಮಿಷನ್​ ಮೇಲೆ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಎನ್​ಐಎ ವಶಕ್ಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ10 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ10 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ13 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202415 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET 2024 Exam
ಬೆಂಗಳೂರು4 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌