JDS Pancharatna | ನಿರಂತರ ಮಳೆಯಿಂದ ಜೆಡಿಎಸ್‌ ಪಂಚರತ್ನ ರಥಯಾತ್ರೆ ಮುಂದೂಡಿಕೆ; ಡಿ.15ರಿಂದ ಮತ್ತೆ ಆರಂಭ - Vistara News

ಬೆಂಗಳೂರು

JDS Pancharatna | ನಿರಂತರ ಮಳೆಯಿಂದ ಜೆಡಿಎಸ್‌ ಪಂಚರತ್ನ ರಥಯಾತ್ರೆ ಮುಂದೂಡಿಕೆ; ಡಿ.15ರಿಂದ ಮತ್ತೆ ಆರಂಭ

JDS Pancharatna | ಭಾರಿ ಮಳೆ ಕಾರಣಕ್ಕೆ ಜೆಡಿಎಸ್‌ ಪಂಚರತ್ನ ರಥಯಾತ್ರೆ ಮಾರ್ಗ, ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಿ, ನಾಲ್ಕು ದಿನ ಮುಂದೂಡಲಾಗಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

VISTARANEWS.COM


on

JDS Pancharatna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತುಮಕೂರು ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನರಾರಂಭ ಆಗಬೇಕಿದ್ದ ಜೆಡಿಎಸ್ ಪಂಚರತ್ನ ರಥಯಾತ್ರೆಯನ್ನು (JDS Pancharatna) ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿ ರಾಜ್ಯದ ಒಳನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾಕಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಪೂರ್ವ ನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆಯು ಚಿಕ್ಕನಾಯಕನಹಳ್ಳಿಯಿಂದ ಶುರುವಾಗಬೇಕಿತ್ತು. ತದನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಬೇಕಿತ್ತು. ತುಮಕೂರು ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಣೆ ಮಾಡುವ ಮೂಲಕ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ಕಾರಣಕ್ಕೆ ಪಂಚರತ್ನ ರಥಯಾತ್ರೆ ಮಾರ್ಗ, ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Elections | ಬಿಜೆಪಿಯಿಂದ ಮತ್ತೊಂದು ಮೆಗಾ ಸಮಾವೇಶ: ಡಿ. 18ರಂದು ನಾನಾ ಪ್ರಕೋಷ್ಠಗಳ ಶಕ್ತಿ ಸಂಗಮ

ಡಿಸೆಂಬರ್ 15ರಂದು ಮಾಗಡಿಯಲ್ಲಿ ರಥಯಾತ್ರೆ ಮರು ಆರಂಭವಾಗಲಿದ್ದು, ಡಿ. 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ. ಡಿ. 27ರಂದು ಮತ್ತೆ ತುಮಕೂರು ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ. ಡಿ. 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ | Kalyana Kranti Samavesha | ನಾವು ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಖಾಲಿ ಹುದ್ದೆ ಭರ್ತಿ: ಖರ್ಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

Prajwal Revanna Case: ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

VISTARANEWS.COM


on

Prajwal Revanna Case HD Revanna ready to leave the country SIT issues lookout notice
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಈಗ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ.

ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಕಾನೂನು ಜಾರಿ ಅಧಿಕಾರಿಗಳಿಗೆ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿಗಾ ಇಡಲು, ಪರಿಣಾಮಕಾರಿಯಾಗಿ ತಡೆಗಟ್ಟಲು ಇದನ್ನು ಹೊರಡಿಸಲಾಗುತ್ತದೆ.

ಒಂದು ದೇಶದ ವಲಸೆ ಅಧಿಕಾರಿಗಳು ಯಾವುದೇ ತಲೆಮರೆಸಿಕೊಂಡಿರುವ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದರೆ, ಆ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಬಹುದು. ಅಪರಾಧಿಗಳು ಇದರಿಂದಾಗಿ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ನಾವು ಆಗಾಗ ಕೇಳುತ್ತಿರುತ್ತೇವೆ.

ಮಾರ್ಗಸೂಚಿಗಳು

ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಈ ಸರ್ಕ್ಯುಲರ್‌ಗಳ ಮೂಲ ಮಾರ್ಗಸೂಚಿಗಳನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಹೊರಡಿಸಿದೆ. ಈ ಮಾರ್ಗಸೂಚಿಗಳು ಹೀಗಿವೆ:

1) LOC ನೀಡುವ ವಿನಂತಿಯನ್ನು ಭಾರತ ಸರ್ಕಾರದ ಉಪ ಕಾರ್ಯದರ್ಶಿ, ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ, ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಯ ಅಧಿಕಾರಿಗಳು ಮಾತ್ರ ಮಾಡಬಹುದು.

2) ಯಾವುದೇ ಭಾರತೀಯ ವ್ಯಕ್ತಿಯ ವಿರುದ್ಧ ಎಲ್ಲಾ ವಲಸೆ ಚೆಕ್‌ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟೀಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು.

3) ನೋಟಿಸ್ ನೀಡುವ ಏಜೆನ್ಸಿಯು ಆರೋಪಿಯ ಸಂಪೂರ್ಣ ಗುರುತಿನ ವಿವರಗಳನ್ನು ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ಮಾನದಂಡಗಳಿದ್ದಲ್ಲಿ LOC ನೀಡಲಾಗುವುದಿಲ್ಲ.

4) ಸಾಮಾನ್ಯವಾಗಿ ಲುಕ್‌ಔಟ್ ನೋಟೀಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮಾಡಬಹುದು. ಒಂದು ವರ್ಷದ ನಿಗದಿತ ಅವಧಿಯೊಳಗೆ LOCಯನ್ನು ವಿಸ್ತರಿಸಲು ಯಾವುದೇ ವಿನಂತಿ ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿಕಾರವಿದೆ.

ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟೀಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್‌ಔಟ್ ನೋಟಿಸ್‌ನ ದುರ್ಬಳಕೆ

ಹಲವು ಪ್ರಕರಣಗಳಲ್ಲಿ ಲುಕ್‌ಔಟ್‌ ನೋಟಿಸ್‌ ದುರ್ಬಳಕೆಯಾಗಿದೆ. ಯಾರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆಯೋ ಅವರಿಗೂ ಲುಕ್‌ಔಟ್ ನೋಟಿಸ್ ಬಗ್ಗೆ ಕೆಲವೊಮ್ಮ ತಿಳಿದಿರುವುದಿಲ್ಲ. ವ್ಯಕ್ತಿ ತನ್ನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವುದನ್ನು ನಿರೀಕ್ಷಿಸದೇ ಇರಬಹುದು. ವಿಮಾನ ನಿಲ್ದಾಣ/ಗಡಿ ಇತ್ಯಾದಿಗಳಲ್ಲಿ ವಲಸೆ ಅಧಿಕಾರಿಗಳು ತಡೆದಾಗ ಅಥವಾ ಬಂಧಿಸಿದಾಗ ಮಾತ್ರ ಆರೋಪಿಗೆ ತಿಳಿಯುತ್ತದೆ.

ಆದರೆ ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಯುಗದಲ್ಲಿ ಹೀಗಾಗದು. ಕೆಲವೊಮ್ಮೆ ಲುಕ್‌ಔಟ್ ನೋಟಿಸ್‌ಗಳನ್ನು ಎಲ್ಲಾ ನಿಯಮಗಳ ಪಾಲನೆಯಾಗದೆ ನೀಡಲಾಗುತ್ತದೆ. ಈ ಪ್ರಕರಣಗಳು ಶಂಕಿತ ವ್ಯಕ್ತಿಗಳು, ದೇಶ ವಿರೋಧಿ ಅಂಶಗಳು ಇತ್ಯಾದಿಗಳೊಂದಿಗೆ ಸಂಬಂಧ ಹೊಂದಿವೆ. ಇಂತಹ ಪ್ರಕರಣಗಳಿಂದ ಬಾಧಿತರಾದ ಯಾವುದೇ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪರಿಹಾರ ಪಡೆಯಲು ಮಾನವ ಹಕ್ಕುಗಳ ಆಯೋಗ ಅಥವಾ ಹೈಕೋರ್ಟ್‌ಗಳನ್ನು ಸಂಪರ್ಕಿಸಬಹುದು. ಆದರೆ ಈ ಪ್ರಕ್ರಿಯೆ ಹಲವು ವರ್ಷಗಳನ್ನು ತೆಗೆದುಕೊಳ್ಳಬಹುದು ಮತ್ತು ತುಂಬಾ ದುಬಾರಿಯಾಗಬಹುದು.

ಇದನ್ನೂ ಓದಿ: Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

ಲುಕ್‌ಔಟ್ ನೋಟಿಸ್‌ಗಳು ಅಪರಾಧಿಗಳಲ್ಲಿ ಭಯವನ್ನು ಉಂಟುಮಾಡುತ್ತವೆಯೇ? ಅನೇಕ ಪ್ರಕರಣಗಳಲ್ಲಿ ಅನೇಕ ಅಪರಾಧಿಗಳು ಮತ್ತು ಆರೋಪಿಗಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಭಾರತದಲ್ಲಿ ಲುಕ್‌ಔಟ್ ನೋಟಿಸ್‌ಗಳನ್ನು ಹೊರಡಿಸಲಾಗಿದೆ. ಆದರೆ ಇದರಿಂದ ಅವರು ವಿಚಲಿತರಾದಂತಿಲ್ಲ. ಇಲ್ಲಿಯವರೆಗೆ ಎಷ್ಟು ಲುಕ್‌ಔಟ್ ನೋಟಿಸ್‌ಗಳನ್ನು ನೀಡಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

Continue Reading

ಕರ್ನಾಟಕ

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

VISTARANEWS.COM


on

Wonderla Bengaluru
Koo

ಬೆಂಗಳೂರು: ಈ ಬೇಸಿಗೆಯ ಮಜವನ್ನು ಇನ್ನಷ್ಟು ಹೆಚ್ಚಿಸಲು ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ (Wonderla Bengaluru) ಬೆಂಗಳೂರು ಪಾರ್ಕ್‌ನಲ್ಲಿ ‘ಸಮ್ಮರ್‌ಲಾ ಫಿಯೆಸ್ಟಾ’ (Summer Fiesta 2024) ನಡೆಸುತ್ತಿದ್ದು, ಮೇ 31 ರವರೆಗೂ ಇರಲಿದೆ. ಸಮ್ಮರ್‌ಲಾ ಫಿಯೆಸ್ಟಾದಲ್ಲಿ ಸಾಕಷ್ಟು ಆಫರ್‌ಗಳು ನಿಮ್ಮನ್ನು ಕೈ ಬೀಸಿ ಕರೆಯುತ್ತಿದ್ದು, ಅನೇಕ ಮೋಜಿನ ರೈಡ್‌, ವಾಟರ್‌ ಗೇಮ್‌ಗಳು, ಫುಡ್‌-ಫೆಸ್ಟಿವಲ್‌, ಡಿಜೆ ಮ್ಯೂಸಿಕ್‌ ಸೇರಿದಂತೆ ಅನೇಕ ವಿಶೇಷತೆಗಳು ಈ ಸಮ್ಮರ್‌ಲಾದಲ್ಲಿ ಇರಲಿವೆ. ಇದಲ್ಲದೆ, ಡೊಳ್ಳು ಕುಣಿತ, ಚಿಂಗಾರಿ ಮೇಳಗಳಂತಹ ವಿಶೇಷ ಸಾಂಸ್ಕೃತಿಕ ಪ್ರದರ್ಶನ ಹಾಗೂ ಮೆರವಣಿಗೆ ಇರಲಿವೆ. ವಾರಾಂತ್ಯದಲ್ಲಿ ನಿಮ್ಮನ್ನು ಇನ್ನಷ್ಟು ಉತ್ಸಾಹಿಗಳನ್ನಾಗಿ ಮಾಡಲು ಡಿಜೆ ಮ್ಯೂಸಿಕ್‌ ಸಹ ಆಯೋಜಿಸಲಾಗುತ್ತಿದೆ.

ಇನ್ನು ಭಾನುವಾರದಂದು ವಂಡರ್‌ಲಾ ರೆಸಾರ್ಟ್‌ನಲ್ಲಿ ಬೇಸಿಗೆಯ ಬ್ರಂಚ್‌ ಸಹ ಇರಲಿದೆ. ಈ ಎಲ್ಲಾ ಮನರಂಜನೆಗಳ ಮೇಲೂ ಸಾಕಷ್ಟು ರಿಯಾಯಿತಿ ಹಾಗೂ ಆಫರ್‌ಗಳು ಇದ್ದು, ಆಸಕ್ತರು ಭಾಗಿಯಾಗಿ ಈ ಬೇಸಿಗೆ ರಜೆಯನ್ನು ಇನ್ನಷ್ಟು ಸಂತಸದಿಂದ ಕಳೆಯಬಹುದು. ಈ ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಲ್ಲಿ ಲಭ್ಯವಿರಲಿದೆ. ಪಾರ್ಕ್‌ನಲ್ಲಿ ಈಗ ಲಭ್ಯವಿರುವ ಹೊಸ ವಿಶೇಷ ಪಾನೀಯ ಕೌಂಟರ್‌ಗಳೊಂದಿಗೆ ಈ ಬೇಸಿಗೆಯ ಶಾಖವನ್ನು ತಣಿಸಲು ತಾಜಾ ಹಣ್ಣಿನ ಜ್ಯೂಸ್‌ಗಳು, ಋತುವಿನ ಅತ್ಯುತ್ತಮ ಆಮ್ರಾಸ್‌, ತಂಪಾದ ಮಜ್ಜಿಗೆ ಮತ್ತು ಬೇಸಿಗೆಯ ಪಾನೀಯಗಳು ಲಭ್ಯವಿರಲಿದೆ.

ಇದನ್ನೂ ಓದಿ | E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

ಆಫರ್‌ಗಳ ವಿವರ ಇಲ್ಲಿದೆ

  • ವಂಡರ್‌ಲಾಗೆ ಭೇಟಿ ನೀಡಲು ಬಯಸುವವರಿಗೆ Early Bird ಹೆಸರಿನಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ. ಈ ಕೊಡುಗೆ(Offer) ಪಡೆಯಲು ಮೂರು ದಿನಗಳ ಮುಂಚಿತವಾಗಿ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬುಕ್‌ ಮಾಡಿಕೊಳ್ಳಬೇಕು.
  • ಜನ್ಮದಿನದ ಆಫರ್‌, ವಿಶೇಷವಾಗಿ ಮೇ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವವರಿಗೆ 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಉಚಿತವಾಗಿ ಸಿಗಲಿದೆ.
  • ಇನ್ನು, ವಿದ್ಯಾರ್ಥಿಗಳಿಗಾಗಿ ಹಾಲ್ ಟಿಕೆಟ್ ಆಫರ್ ಸಹ ಚಾಲ್ತಿಯಲ್ಲಿದೆ. 2023-2024ರ ಶೈಕ್ಷಣಿಕ ವರ್ಷದ 10ನೇ, 11ನೇ ಮತ್ತು 12ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಮೂಲ ಪರೀಕ್ಷೆಯ ಹಾಲ್ ಟಿಕೆಟ್‌ಗಳನ್ನು ಪ್ರಸ್ತುತಪಡಿಸಿ ಪಾರ್ಕ್ ಪ್ರವೇಶ ಟಿಕೆಟ್‌ಗಳ ಮೇಲೆ ಶೇ. 35ರಷ್ಟು ರಿಯಾಯಿತಿಯನ್ನು ಪಡೆಯಬಹುದು.
  • ವಂಡರ್‌ಲಾ ಕಾಲೇಜು ವಿದ್ಯಾರ್ಥಿಗಳಿಗೆ (16-24 ವರ್ಷ ವಯಸ್ಸಿನವರು) ತಮ್ಮ ಕಾಲೇಜು ಐಡಿ ಕಾರ್ಡ್‌ಗಳನ್ನು ಪ್ರಸ್ತುತಪಡಿಸಿದರೆ ಶೇ. 25ರಷ್ಟು ರಿಯಾಯಿತಿ ಪಡೆಯಲಿದ್ದಾರೆ, ಜೊತೆಗೆ, ವಿದ್ಯಾರ್ಥಿಗಳು ಆಹಾರ ಆಯ್ಕೆಗಳನ್ನು ಒಳಗೊಂಡಿರುವ ಕಾಂಬೊ ಪ್ಯಾಕೇಜ್‌ಗಳನ್ನು ಸಹ ಪಡೆಯಬಹುದು. ಆರಂಭಿಕ ಅರ್ಲಿ ಬರ್ಡ್‌ ಕೊಡುಗೆಯನ್ನು ಹೊರತುಪಡಿಸಿ, ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಗೆ ಮಾನ್ಯವಾಗಿರುತ್ತವೆ. ಅತಿಥಿಗಳು ತಮ್ಮ ವಂಡರ್ಲಾ ಸಮ್ಮರ್ಲಾ ಫಿಯೆಸ್ಟಾ ಭಾಗವಾಗಿ ಮೇ 31 ರವರೆಗೆ ಪ್ರತಿ ಶನಿವಾರ ನಡೆಯುವ ವಂಡರ್ಲಾ ವಿಶೇಷ ಪೂಲ್ ಪಾರ್ಟಿಗಳೊಂದಿಗೆ ಭಾಗವಹಿಸಬಹುದು.

ಈ ಕುರಿತು ಮಾತನಾಡಿದ ವಂಡರ್‌ಲಾ ಹಾಲಿಡೇಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ. ಚಿಟ್ಟಿಲಪ್ಪಿಳ್ಳಿ, ಬೇಸಿಗೆ ರಜೆಯನ್ನು ಇನ್ನಷ್ಟು ಉತ್ಸಾಹ ಭರಿತವನ್ನಾಗಿದಲು ವಂಡರ್‌ಲಾ “ಸಮ್ಮರ್ಲಾ ಫಿಯೆಸ್ಟಾ’ ಆಯೋಜಿಸಿದೆ. ಈ ಸಮ್ಮರ್ಲಾದಲ್ಲಿ ಇಡೀ ಕುಟುಂಬಗಳು, ಕಾಲೇಜು ಸ್ನೇಹಿತರು, ಮಕ್ಕಳು ಎಲ್ಲರೂ ತಮ್ಮ ಪ್ರೀತಿಪಾತ್ರರೊಂದಿಗೆ ಆಗಮಿಸಿ, ಆನಂದಿಸಬಹುದು.

ಸಮ್ಮರ್‌ಲಾ ಭಾಗವಾಗಿ ಫುಡ್‌ಫೆಸ್ಟಿವಲ್‌, ಸಾಂಸ್ಕೃತಿಕ ಮೆರವಣಿಗೆ, ಡಿಜೆ ಮ್ಯೂಸಿಕ್‌ ಸೇರಿದಂತೆ ಇನ್ನೂ ಅನೇಕ ಮನರಂಜನೆಗಳು ಇರಲಿವೆ. ಈ ಎಲ್ಲಾ ಮನರಂಜನೆಯೊಂದಿಗೆ ನಿಮ್ಮ ಸವಿನೆನಪನ್ನು ಅಚ್ಚಳಿಯದಂತೆ ಮಾಡುವುದೇ ನಮ್ಮ ವಂಡರ್‌ಲಾದ ಪ್ರಮುಖ ಉದ್ದೇಶ ಎಂದು ಹೇಳಿದರು.

ವಂಡರ್‌ಲಾ ಆನ್‌ಲೈನ್ ಪೋರ್ಟಲ್ ಮೂಲಕ ಅಥವಾ ನೇರವಾಗಿ ಪಾರ್ಕ್ ಕೌಂಟರ್‌ಗಳಲ್ಲಿ ಟಿಕೆಟ್‌ಗಳನ್ನು ಮುಂಗಡವಾಗಿ ಬುಕ್ ಮಾಡುವ ಮೂಲಕ ಸಮ್ಮರ್ಲಾವನ್ನು ಆನಂದಿಸಿ.

ಇದನ್ನೂ ಓದಿ | Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

ಹೆಚ್ಚಿನ ಮಾಹಿತಿ ಮತ್ತು ಬುಕಿಂಗ್‌ಗಳಿಗಾಗಿ, www.wonderla.com ಗೆ ಭೇಟಿ ನೀಡಿ ಅಥವಾ +91 80372 30333, +91 80350 73966 ಅನ್ನು ಸಂಪರ್ಕಿಸಿ.

Continue Reading

ಬೆಂಗಳೂರು

Vidyashree HS: ಬೆಂಗಳೂರಿನಲ್ಲಿ ಮೇ 4ರಂದು ವಿದ್ಯಾಶ್ರೀ ಎಚ್.ಎಸ್. ಭರತನಾಟ್ಯ ರಂಗಪ್ರವೇಶ

Vidyashree HS: ಬೆಂಗಳೂರಿನ ಜೆಸಿ ರಸ್ತೆಯ ಎಡಿಎ ರಂಗಮಂದಿರದಲ್ಲಿ ವಿದುಷಿ ರೂಪಶ್ರೀ ಮಧುಸೂದನ ಅವರ ಶಿಷ್ಯೆ ಹಾಗೂ ಚಿನ್ನದ ನಾಡು ಕೋಲಾರ ಮೂಲದ ಕಲಾವಿದೆ ವಿದ್ಯಾಶ್ರೀ ಎಚ್.ಎಸ್. ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Vidyashree HS
Koo

ಬೆಂಗಳೂರು: ಕೋಲಾರ ಮೂಲದ ಎಂಜಿನಿಯರ್ ಎಚ್.ಎಸ್. ಸುರೇಶ್ ಮತ್ತು ಸಂಸ್ಕೃತ ಶಿಕ್ಷಕಿ ಕೆ. ಸಿ. ನಾಗಶ್ರೀ ಅವರ ಪುತ್ರಿ ವಿದ್ಯಾಶ್ರೀ ಎಚ್.ಎಸ್. (Vidyashree HS) ಇದೀಗ ಭರತನಾಟ್ಯ ರಂಗಪ್ರವೇಶಕ್ಕೆ (Bharatanatyam Arangetram) ಸಿದ್ಧರಾಗಿದ್ದಾರೆ. ಸಂಸ್ಕಾರವಂತ ಕುಟುಂಬದಿಂದ ಬಂದ ಯುವತಿಯು ವಿದುಷಿ ರೂಪಶ್ರೀ ಮಧುಸೂದನ ಅವರಲ್ಲಿ ಶಿಷ್ಯತ್ವ ಪಡೆದಿದ್ದು, ರಂಗಾರೋಹಣಕ್ಕೆ ಅಣಿಯಾಗಿರುವುದು ವಿಶೇಷ.

ಮೇ 4 ರಂದು ಬೆಳಗ್ಗೆ 9.30ಕ್ಕೆ ರಾಜಧಾನಿ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಎಡಿಎ ರಂಗಮಂದಿರದಲ್ಲಿ ಹಿರಿಯ ಕಲಾವಿದರು, ಖ್ಯಾತ ವಿದ್ವಾಂಸರ ಸಮ್ಮುಖ ರಂಗ ಪ್ರಸ್ತುತಿ ಸಂಪನ್ನಗೊಳ್ಳಲಿದೆ. ಕಾರ್ಯಕ್ರಮಕ್ಕೆ ಗುರು ವಿದುಷಿ ರೂಪಶ್ರೀ ಮಧುಸೂದನರ ನಟುವಾಂಗ, ವಿದುಷಿ ದೀಪ್ತಿ ಶ್ರೀನಾಥ ಅವರ ಗಾಯನವಿದೆ. ಪಕ್ಕವಾದ್ಯ ಮೃದಂಗದಲ್ಲಿ ವಿದ್ವಾನ್ ಶ್ರೀಹರಿ ರಂಗಸ್ವಾಮಿ, ಕೊಳಲು ವಿದ್ವಾನ್ ವಿವೇಕ ಕೃಷ್ಣ, ರಿದಂ ಪ್ಯಾಡ್‌ನಲ್ಲಿ ವಿದ್ವಾನ್ ಕಾರ್ತಿಕ್ ದಾತಾರ್ ಸಾಥ್ ನೀಡಲಿದ್ದಾರೆ. ಮನೋಜ್ಞ ನೃತ್ಯ ಪ್ರದರ್ಶನಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಲಾಶ್ರೀ, ಹಿರಿಯ ನೃತ್ಯ ಪ್ರವೀಣೆ ಡಾ. ಪದ್ಮಜಾ ಸುರೇಶ, ಭರತನಾಟ್ಯ ವಿದ್ವಾಂಸ ಪ್ರವೀಣ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಮನೆಯ ಸಂಸ್ಕಾರವೇ ಕಲೆಗೆ ಭೂಮಿಕೆಯಾಯಿತು

ಸುಸಂಸ್ಕೃತ ಮನೆಯಲ್ಲಿ ಹಿರಿಯರಿಂದ ದೊರಕುವ ಸಂಸ್ಕಾರವೇ ಮಕ್ಕಳ ಕಲಾಸಕ್ತಿಗೆ ಭೂಮಿಕೆಯಾಗಿತ್ತದೆ ಎಂಬುದಕ್ಕೆ ಯುವ ಪ್ರತಿಭೆ ವಿದ್ಯಾಶ್ರೀ ಪ್ರತೀಕವಾಗಿದ್ದಾರೆ ಎನ್ನಬಹುದು. ಹೌದು, ಕೋಲಾರ ಮೂಲದ ಎಂಜಿನಿಯರ್ ಎಚ್.ಎಸ್. ಸುರೇಶ್ ಮತ್ತು ಸಂಸ್ಕೃತ ಶಿಕ್ಷಕಿ ಕೆ. ಸಿ. ನಾಗಶ್ರೀ ಅವರ ವಂಶದಲ್ಲಿ ಎಲ್ಲರಿಗೂ ಸಂಗೀತ- ನೃತ್ಯದ ಬಗ್ಗೆ ಅಪಾರ ಗೌರವ ಇದೆ. ಆದರೆ ಯಾರೂ ಅದರಲ್ಲಿ ಈ ಮಟ್ಟಿನ ಸಾಧನೆ ಮಾಡಿದವರಿಲ್ಲ. ಆದರೂ ವಿದ್ಯಾಶ್ರೀಗೆ ಹೇಗೆ ಭರತನಾಟ್ಯ ಕಲೆ ಒಲಿಯಿತು ಎಂದು ಅವಲೋಕಿಸಿದಾಗ ಇದರ ಹಿಂದೆ ಅವರ ಮನೆಯ ಸಂಸ್ಕಾರ ಢಾಳಾಗಿ ಎದ್ದು ಕಾಣುತ್ತದೆ.

ಈ ಬಗ್ಗೆ ವಿದ್ಯಾಶ್ರೀ ಅವರ ತಾಯಿ ನಾಗಶ್ರೀ ಪ್ರತಿಕ್ರಿಯಿಸಿ, ನನ್ನ ಮಗಳು ವಿದ್ಯಾಶ್ರೀಗೆ 6ನೇ ವರ್ಷದಿಂದಲೇ ಸಂಗೀತ- ನೃತ್ಯದ ಆಸಕ್ತಿ ಕಾಣಿಸಿತು. ಮನೆಯ ಸಮೀಪದಲ್ಲೇ ಶಾರದಾ ಸುಗಮ ಸಂಗೀತ ಶಾಲೆಯಲ್ಲಿ ಗಾಯನ, ಚಿತ್ರಕಲಾ ತರಗತಿಗೆ ಸೇರಿದಳು. ಮಗಳು ವ್ಯಾಸಂಗ ಮಾಡುತ್ತಿದ್ದ ವಿದ್ಯಾನಿಕೇತನ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ವಿದುಷಿ ರೂಪಶ್ರೀ ಮಧುಸೂದನ ಅವರು ಈಕೆ ಪ್ರತಿಭೆ ಗುರುತಿಸಿದರು. ಸರಿ. ಅವರ ಬಳಿಯೇ ನೃತ್ಯಗಂಗಾ ಕಲಾ ಶಾಲೆಯಲ್ಲಿ ನೃತ್ಯಾಭ್ಯಾಸ ಆರಂಭವಾಯಿತು. 16 ವರ್ಷದಿಂದ ನಾವು ಈಕೆಗೆ ಎಂದೂ ‘ಅಭ್ಯಾಸ ಮಾಡು’, ನೃತ್ಯ ಪರೀಕ್ಷೆ ಕಟ್ಟು ಎಂದು ಹೇಳಿಲ್ಲ. ಎಲ್ಲವೂ ಅವಳ ಸ್ವಯಂ ಸ್ಫೂರ್ತಿಯೇ ಎಂದು ಹೆಮ್ಮೆಯಿಂದ ಹೇಳುತ್ತಾರೆ.

ಶಾಲಾ ಕಲಿಕೆಗೆ ಪೂರಕವಾದ ನೃತ್ಯ

ಸಾಮಾನ್ಯವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಂತಕ್ಕೆ ಬಂದ ಮಕ್ಕಳಿಗೆ ಪಾಲಕರು ಸಂಗೀತ, ನೃತ್ಯ, ಕಲೆ, ಕ್ರೀಡೆ… ಹೀಗೆ ಎಲ್ಲ ಚಟುವಟಿಕೆಗಳನ್ನೂ ನಿಲ್ಲಿಸಿಬಿಡುತ್ತಾರೆ. ‘ಓದಬೇಕು, ಅಂಕ ಗಳಿಸಬೇಕು’ ಅಷ್ಟೇ ಪರಮ ಗುರಿ! ಆದರೆ, ವಿದ್ಯಾಶ್ರೀ ವಿಭಿನ್ನ. ಕಲೆ ಎಂದಿಗೂ ಶಾಲಾ ಪಠ್ಯಕ್ರಮಕ್ಕೆ ಪೂರಕವಾಗಿ ಇರುತ್ತದೆ ಎಂದು ಶಿಕ್ಷಣ ತಜ್ಞರು ಹೇಳುವ ಮಾತನ್ನು ಈಕೆ ದಿಟಗೊಳಿಸಿದಳು. 10ನೇ ತರಗತಿ ವ್ಯಾಸಂಗದ ನಡುವೆಯೇ ಭರತನಾಟ್ಯ ಸೀನಿಯರ್ ಪರೀಕ್ಷೆಯನ್ನು ಉತ್ತಮ ಅಂಕದೊಂದಿಗೇ ಉತ್ತೀರ್ಣಳಾದಳು.

ಮಾದರಿ ವಿದ್ಯಾರ್ಥಿ

ವಿದುಷಿ ದಿವ್ಯಾ ಗಿರಿಧರ ಅವರಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪಾಠಕ್ರಮ ಪೂರ್ಣಗೊಳಿಸಿಕೊಂಡಳು. ಶಾಲಾ-ಕಾಲೇಜಿನ ಯಾವ ಹಂತದ ಪರೀಕ್ಷೆಗೂ ಸಂಗೀತ, ನೃತ್ಯ ಎಂಬುದು ಚೈತನ್ಯ ಕೊಟ್ಟಿತು. ಇದು ನಮ್ಮೆಲ್ಲಾ ಪಾಲಕರಿಗೆ ಮಾದರಿಯಾಗಬೇಕು. ಆ ಮಟ್ಟಿನ ಸಾಧನೆ ಮಾಡಿದ ವಿದ್ಯಾಶ್ರೀ, ಹಿಂತಿರುಗಿ ನೋಡಲೇ ಇಲ್ಲ. ಬಿಇ- ಎಂಎ. ಫೈನ್ ಆರ್ಟ್ಸ್ ಸಂದರ್ಭದಲ್ಲೂ ನೃತ್ಯ ಕಲಿಕೆ ಮರೆಯಲಿಲ್ಲ. ಆ ಮಟ್ಟಿಗಿನ ಬಾಂಧವ್ಯ, ಗುರು- ಶಿಷ್ಯ ಪರಂಪರೆಯನ್ನು ಬಿಗಿಗೊಳಿಸಿದ ಕೀರ್ತಿ ವಿದುಷಿ ರೂಪಶ್ರೀ ಅವರಿಗೂ ಸಲ್ಲುತ್ತದೆ. 16 ವರ್ಷ ನರ್ತನ ಕಲಿಕೆ ಫಲವಾಗಿ ವಿದ್ಯಾಶ್ರೀ ಇದೀಗ ಭರತನಾಟ್ಯ ವಿದ್ವತ್ ಪೂರ್ಣಗೊಳಿಸಿ ಕ್ರೈಸ್ಟ್ ವಿಶ್ವ ವಿದ್ಯಾಲಯದಲ್ಲಿ ಭರತನಾಟ್ಯ ಸ್ನಾತಕೋತ್ತರ ಪದವಿಯನ್ನೂ (ವಾರಾಂತ್ಯ ತರಗತಿಗೆ ಬದ್ಧವಾಗಿ) ಪಡೆದಿರುವುದು ಸಾಧನೆಯ ಛಾವಣಿಯ ನಿಚ್ಚಣಿಕೆಯಾಗಿದೆ.

ಇದನ್ನೂ ಓದಿ | Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

ಬಹುಮುಖೀ- ಸಖೀ

ವಿದ್ಯಾಶ್ರೀ ಸಂಸ್ಕೃತ ಭಾಷೆಯಲ್ಲೂ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದಾರೆ. 15 ವರ್ಷಗಳಿಂದ ವಿದ್ವಾನ್. ಸುಬ್ರಮಣ್ಯಯನ್ ಅವರ ಮಾರ್ಗದರ್ಶನದಲ್ಲಿ ಸಂಸ್ಕೃತ ಭಾಷಾಧ್ಯಯನ ಸಾಗಿದೆ. ವಿದುಷಿ ಅನಂತಲಕ್ಷ್ಮೀ ನಟರಾಜನ್ ರವರು ಸ್ಥಾಪಿಸಿದ ಗೀತಾಗೋವಿಂದ ಸಂಸ್ಕೃತ ಸಂಘದಲ್ಲಿ ಈಕೆ ಸಂಸ್ಕೃತ ಶಿಕ್ಷಕಿಯಾಗಿದ್ದಾರೆ. ವ್ಯೋಮಾ ಲಿಂಗ್ವಿಸ್ಟಿಕ್ ಲ್ಯಾಬ್ಸ್, ಸಂಸ್ಕೃತ ಇ – ಲರ್ನಿಂಗ್ ಸಂಸ್ಥೆಯಲ್ಲಿ ಸ್ವಯಂ ಸೇವಕಿಯಾಗಿ ಸೇವೆ ಮಾಡುತ್ತಿದ್ದಾರೆ.
ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಅನ್ನ ನೀಡುವ ‘ ಆಪ್ತ ಸಹಾಯ ಫೌಂಡೇಷನ್’ ಎಂಬ ಎನ್‌ಜಿಒದಲ್ಲೂ ವಿದ್ಯಾಶ್ರೀ ವಾಲಂಟಿಯರ್. ಹೆತ್ತವರಿಗೆ, ವಿದ್ಯೆ ಕಲಿಸಿದ ಗುರುವಿಗೆ ಇದಕ್ಕಿಂತ ಇನ್ನೇನು ಕಾಣಿಕೆ ಬೇಕು ? ಎಲ್ಲ ಮನೆಯಲ್ಲೂ ವಿದ್ಯಾಶ್ರೀ ಯಂಥಾ ಮಕ್ಕಳೇ ಜನಿಸಿದರೆ ನಮ್ಮ ಭರತಖಂಡದ ಕೀರ್ತಿ ಬಹುಬೇಗ ವಿಶ್ವವ್ಯಾಪಿ ಆಗಲಿದೆ.
ಬನ್ನಿ. ಚಿನ್ನದ ನಾಡು ಕೋಲಾರ ಮೂಲದ ಹೆಮ್ಮೆಯ ಪುತ್ರಿಯ ಕಲಾ ಸೊಬಗಿನ ದರ್ಶನ ಮಾಡೋಣ.

Continue Reading

ಕ್ರೈಂ

Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Prajwal Revanna Case: ನಿಮಗೆ ಬೇಕಿರುವುದು ಆ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಲ್ಲ. ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡು ಗೆಲ್ಲಬೇಕು ಹಾಗೂ ಪ್ರಧಾನಿ ನರೇಂದ್ರ‌ ಮೋದಿಯವರ ಹೆಸರು ಕೆಡಿಸಬೇಕು ಎಂಬುದಷ್ಟೇ ನಿಮಗೆ ಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದರಲ್ಲಿ ಏನೂ ರಾಜೀ‌ ಇಲ್ಲ. ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ. ನಾವೇನೂ ಪಲಾಯನವಾದಿಗಳಲ್ಲ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಈ ಪ್ರಕರಣದಲ್ಲಿ ಇಲ್ಲ. ಆದರೂ ನಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Prajwal Revanna Case face not visible in videos says HD Kumaraswamy
Koo

ರಾಯಚೂರು: ಪ್ರಜ್ವಲ್ ರೇವಣ್ಣ (Prajwal Revanna Case) 400 ಮಹಿಳೆಯರನ್ನು ರೇಪ್ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ (Rahul Gandhi) ಹೇಳುತ್ತಾರೆ. ಅವರಿಗೆ ಈ ಮಾಹಿತಿ ಕೊಟ್ಟವರು ಯಾರು? ನೀವು (ಸರ್ಕಾರದವರು) ಕೊಟ್ಟಿದ್ದೀರಾ? ಈ ಕುರಿತು ಬೇಕಾಬಿಟ್ಟಿ ಹೇಳಿಕೆ ನೀಡಿರುವ ರಾಹುಲ್‌ಗೆ ನೋಟಿಸ್‌ ಕೊಡುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿ. ಈ ಸರ್ಕಾರಕ್ಕೆ‌ ಮಾನ, ಮರ್ಯಾದೆ ಇದ್ದಿದ್ದರೆ, ಹೆಣ್ಣು‌ಮಕ್ಕಳ‌ ಫೋಟೊಗಳನ್ನು ಇಡೀ ದೇಶಕ್ಕೆ ಕಳುಹಿಸುತ್ತಿರಲಿಲ್ಲ. ನಿಮಗೆ‌ ಹೆಣ್ಣು ಮಕ್ಕಳ ಮೇಲೆ ಗೌರವ ಇದೆಯಾ? ನಿಮಗೆ‌ ಗಂಡಸ್ತನ, ತಾಕತ್ತಿದ್ದರೆ ರಾಹುಲ್ ಗಾಂಧಿಗೆ ನೋಟಿಸ್‌ ಕೊಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸವಾಲು ಹಾಕಿದರು.

ಈ ಕುರಿತು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ನೀವು‌ ಬಿಟ್ಟಿರುವ ವಿಡಿಯೊಗಳಲ್ಲಿ ಪ್ರಜ್ವಲ್ ಮುಖವೇ ಇಲ್ಲ. ಹಾಗಂತ ನಾನೇನು ಆ ವಿಡಿಯೊಗಳನ್ನು ನೋಡಿಲ್ಲ. ಇಷ್ಟಾದರೂ ಸಹಿಸಿಕೊಂಡಿದ್ದೇವೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ನ ಮಹಾನಾಯಕ ತೋಟದಲ್ಲಿ‌ ಏನೇನಾಗಿದೆ? ನೀನೇನು 6 – 7 ಜನರನ್ನು ಹೋಟೆಲ್‌ನಲ್ಲಿ ತೆಗೆದುಕೊಂಡು ಹೋಗಿ ಇಟ್ಟೀದಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ

ನಿಮಗೆ ಬೇಕಿರುವುದು ಆ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಲ್ಲ. ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡು ಗೆಲ್ಲಬೇಕು ಹಾಗೂ ಪ್ರಧಾನಿ ನರೇಂದ್ರ‌ ಮೋದಿಯವರ ಹೆಸರು ಕೆಡಿಸಬೇಕು ಎಂಬುದಷ್ಟೇ ನಿಮಗೆ ಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದರಲ್ಲಿ ಏನೂ ರಾಜೀ‌ ಇಲ್ಲ. ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ. ನಾವೇನೂ ಪಲಾಯನವಾದಿಗಳಲ್ಲ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಈ ಪ್ರಕರಣದಲ್ಲಿ ಇಲ್ಲ. ಆದರೂ ನಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಪೆನ್‌ಡ್ರೈವ್‌ ಲೀಕ್‌ ಬಗ್ಗೆ ಹೊರಜಗತ್ತಿಗೆ ಗೊತ್ತಾದ ದಿನವೇ ಹೇಳಿದ್ದೇನೆ. ಈ ನೆಲದ ಕಾನೂನಿಗೆ ತಲೆ ಬಾಗಬೇಕು. ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಹೇಳಿದ್ದೇನೆ. ಆದರೂ‌ ಕ್ಯಾಮರಾ ಹಿಡಿದು ನನ್ನ ಮುಂದೆಯೇ ಏಕೆ ಬರುತ್ತೀರಿ? ಎಂದು ಮಾಧ್ಯಮದವರಿಗೆ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಏನೋ‌ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ.
ಎಸ್.ಐ.ಟಿ. ಜತೆ ಚಿಂತನೆ ಮಾಡುತ್ತೇವೆ ಎಂದು ಹೇಳಿ ಏಪ್ರಿಲ್‌ 28ಕ್ಕೆ ಎಫ್.ಐ.ಆರ್ ಮಾಡಿಸಿದ್ದೀರಿ. ಈ ವಿಚಾರದಲ್ಲಿ ಪದೇ ಪದೆ ಪ್ರಧಾನಿ ಮೋದಿ ಹಾಗೂ ಬಿಜೆಪಿಯವರನ್ನು ಏಕೆ ಎಳೆಯುತ್ತೀರಿ? ಅದಕ್ಕೂ‌ ಪ್ರಧಾನಿಗೂ ಸಂಬಂಧ ಏನು? ಎಂದು ಎಚ್‌.ಡಿ. ಕುಮಾರಸ್ವಾಮಿ ಕೇಳಿದರು.

ಸುಮ್ಮನೆ ನನ್ನನ್ನು ಕೆಣಕಿದ್ದಾರೆ

ನೋಟಿಸ್ ಕೊಟ್ಟ ನಂತರ ಒಂದು ವಾರ ಸಮಯ ಕೇಳಲಾಗಿದೆ. ರೇವಣ್ಣ ಅವರು ಎರಡು ದಿನ ಸಮಯ‌ ಕೇಳಿದ್ದಾರೆ. 8, 10 ಹತ್ತು ಬಾರಿ ಸಮನ್ಸ್ ಕೊಟ್ಟು ಸಮನ್ಸ್‌ಗೇ ಗೌರವ ಕಳಿದಿದ್ದೀರಿ. ದೇವೇಗೌಡರನ್ನು, ಪ್ರಧಾನಿಯವರನ್ನು ಎಳೆದು ತಂದಿದ್ದೀರಿ. ನಿಮ್ಮ ಸರ್ಕಾರದಲ್ಲಿ ನೀವೇ ಈ ರೀತಿಯ ಹೇಳಿಕೆಗಳನ್ನು ಕೊಡುವುದರ ಮುಖಾಂತರ ತನಿಖೆಯ ಹಾದಿಯನ್ನು ತಪ್ಪಿಸುವುದಲ್ಲದೆ, ಪ್ರಚಾರಕ್ಕೋಸ್ಕರ ಈ ಪ್ರಕರಣವನ್ನು ಬಳಸಿಕೊಳ್ಳುತ್ತಿದ್ದೀರಿ. ಕೆಲವರು ಕುಮಾರಸ್ವಾಮಿಯೇ ಈ‌ ಪೆನ್‌ಡ್ರೈವ್‌ ಬಿಟ್ಟಿದ್ದಾಗಿ ಹೇಳುತ್ತಾರೆ. ಇಲ್ಲಿ‌ ನನ್ನ ಹೆಸರನ್ನು ತರಲಾಗಿದೆ. ಸುಮ್ಮನೆ ನನ್ನನ್ನು ಕೆಣಕಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಗುಡುಗಿದರು.

ಇದನ್ನೂ ಓದಿ: Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

ತಂದೆ – ತಾಯಿಗೆ ಆತ್ಮಸ್ಥೈರ್ಯ ತುಂಬಲು ಹೋಗಿದ್ದೆ

ರಾಜ್ಯದ‌ ಮುಖ್ಯಮಂತ್ರಿಗೆ ತಂದೆ – ತಾಯಿ‌ ಮೇಲೆ ಗೌರವ ಇದೆಯೇ? ಸಿದ್ದರಾಮಯ್ಯ ಅವರಿಗೆ ಮನುಷ್ಯತ್ವ ಇಲ್ಲದಿರಬಹುದು. ಆದರೆ, ನಮಗೆ ಇದೆ. ನಾನು ಬಂದಿರುವ ಸಂಸ್ಕೃತಿ ನಮಗೆ ಇದನ್ನು ಕಲಿಸಿದೆ. ನನ್ನ ತಂದೆ – ತಾಯಿ ನೋವಿನಲ್ಲಿದಾರೆ. ಅವರಿಗೆ ಆತ್ಮಸ್ಥೈರ್ಯ ತುಂಬುವುದಕ್ಕೆ ನಾನು ಅವರ ಜತೆ ಎರಡು ದಿನ ಇದ್ದೆ. ನಮ್ಮ ಮನೆಗೆ ಯಾವ ವಕೀಲರು ಬಂದಿದ್ದರು? ಇವತ್ತು ಆರೋಪಿ‌ ಸ್ಥಾನದಲ್ಲಿ‌ ನಿಲ್ಲಿಸಿದ್ದೀರಿ ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

Continue Reading
Advertisement
Prajwal Revanna Case HD Revanna ready to leave the country SIT issues lookout notice
ಕ್ರೈಂ1 min ago

Prajwal Revanna Case: ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

IPL 2024
Latest6 mins ago

IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

Faisal Raza Abidi
ದೇಶ11 mins ago

2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

Wonderla Bengaluru
ಕರ್ನಾಟಕ19 mins ago

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

training for election duty staff in Karwar
ಉತ್ತರ ಕನ್ನಡ23 mins ago

Lok Sabha Election 2024: ಗೊಂದಲಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಉ.ಕ ಡಿಸಿ ಸೂಚನೆ

IPL 2024
ಕ್ರೀಡೆ37 mins ago

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

Rohith Vemula
ದೇಶ58 mins ago

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

IPL 2024
Latest1 hour ago

IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

Vidyashree HS
ಬೆಂಗಳೂರು1 hour ago

Vidyashree HS: ಬೆಂಗಳೂರಿನಲ್ಲಿ ಮೇ 4ರಂದು ವಿದ್ಯಾಶ್ರೀ ಎಚ್.ಎಸ್. ಭರತನಾಟ್ಯ ರಂಗಪ್ರವೇಶ

Prajwal Revanna Case
ಕರ್ನಾಟಕ2 hours ago

Prajwal Revanna Case: ರೇವಣ್ಣ ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್‌ ಕೇಸ್; 2ನೇ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ4 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ15 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌