Karnataka Election: ಡಿಕೆ ಬ್ರದರ್ಸ್ ಒಕ್ಕಲಿಗ ಜನಾಂಗಕ್ಕೆ ಕಳಂಕ: ಟಿಕೆಟ್ ವಂಚಿತ ಪಿ.ಎನ್ ಕೃಷ್ಣಮೂರ್ತಿ ಕಿಡಿ - Vistara News

ಬೆಂಗಳೂರು

Karnataka Election: ಡಿಕೆ ಬ್ರದರ್ಸ್ ಒಕ್ಕಲಿಗ ಜನಾಂಗಕ್ಕೆ ಕಳಂಕ: ಟಿಕೆಟ್ ವಂಚಿತ ಪಿ.ಎನ್ ಕೃಷ್ಣಮೂರ್ತಿ ಕಿಡಿ

ಟಿ.ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಭ್ಯರ್ಥಿ ಕೃಷ್ಣಮೂರ್ತಿ, ಕ್ಷೇತ್ರದ ಜನರ ಕಷ್ಟ ಸುಖ ಕೇಳಲು ಯಾರೂ ಬಂದಿಲ್ಲ. ಕೋವಿಡ್ ಸಂದರ್ಭದಲ್ಲಿ 35 ಸಾವಿರ ಜನರಿಗೆ ಕಿಟ್‌ಗಳನ್ನು ನೀಡಿದ್ದೇನೆ‌. ಟಿಕೆಟ್‌ಗೆ ನನ್ನನ್ನು ಪರಿಗಣಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

VISTARANEWS.COM


on

pn krishnamuthy dasarahalli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾಸರಹಳ್ಳಿ: ಒಕ್ಕಲಿಗ ಸಮುದಾಯಕ್ಕೆ ಡಿಕೆ ಬ್ರದರ್ಸ್ ಕಳಂಕ ಎಂದು ದಾಸರಹಳ್ಳಿ ಕಾಂಗ್ರೆಸ್‌ ಟಿಕೆಟ್ ವಂಚಿತ ಅಭ್ಯರ್ಥಿ ಪಿ.ಎನ್ ಕೃಷ್ಣಮೂರ್ತಿ ಕಿಡಿ ಕಾರಿದ್ದಾರೆ. ಡಿಕೆ ಶಿವಕುಮಾರ್‌ ಹಣ ಪಡೆದು ಟಿಕೆಟ್ ವಿತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಟಿ.ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಭ್ಯರ್ಥಿ ಕೃಷ್ಣಮೂರ್ತಿ ಮಾತನಾಡಿ, ಕಳೆದ 5 ವರ್ಷದಲ್ಲಿ ಡಿ.ಕೆ ಸುರೇಶ ನಮ್ಮ ಕ್ಷೇತ್ರಕ್ಕೆ ಬಂದಿಲ್ಲ. ಕ್ಷೇತ್ರದ ಜನರ ಕಷ್ಟ ಸುಖ ಕೇಳಲು ಯಾರೂ ಬಂದಿಲ್ಲ. ಕೋವಿಡ್ ಸಂದರ್ಭದಲ್ಲಿ 35 ಸಾವಿರ ಜನರಿಗೆ ಕಿಟ್‌ಗಳನ್ನು ನೀಡಿದ್ದೇನೆ‌. ಟಿಕೆಟ್‌ಗೆ ನನ್ನನ್ನು ಪರಿಗಣಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ನೀರಿಗೆ ಪಾಚಿ ವೈರಿ ಇದ್ದ ಹಾಗೆ ಡಿಕೆ ಶಿವಕುಮಾರ್ ಒಕ್ಕಲಿಗ ಜನಾಂಗಕ್ಕೆ ಕಳಂಕ. ಈ ಬಾರಿ ಟಿಕೆಟ್ ಪಡೆದ ಧನಂಜಯ್ಯಗೆ 2 ಲಕ್ಷ ಹಣ ಪಡೆದು ತಕ್ಷಣ ಟಿಕೆಟ್ ಕೊಟ್ಟಿದ್ದಾರೆ. ದಾಸರಹಳ್ಳಿ ಜನ ಟಿಕೆಟ್ ಮಾರಾಟವಾಗಿದೆ ಎಂದು ಹೇಳುತ್ತಿದ್ದಾರೆ. ಬ್ಲಾಕ್ ಅಧ್ಯಕ್ಷರಿಗೆ ಡಿಕೆ ಶಿವಕುಮಾರ್ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುತ್ತೇನೆ ಎಂದು ಧಮಕಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕ್ಷೇತ್ರದಲ್ಲಿ 2018ರಿಂದ 2023ರ ವರೆಗೂ ಕೆಲಸ ಮಾಡಿಕೊಂಡು ಬಂದಿದ್ದೇನೆ. ಕ್ಷೇತ್ರದಲ್ಲಿ ನೀವೇ ಚುನಾವಣಾ ಸರ್ವೇ ಮಾಡಿಸಿದ್ದೀರಿ. ದಿಲ್ಲಿಯಿಂದ ಸರ್ವೇ ಮಾಡಿದ್ದಾರೆ. ಆ ಸರ್ವೇಯಲ್ಲಿ ನನ್ನ ಹೆಸರೇ ಇದೆ‌. ಕಾಂಗ್ರೆಸ್ ಪಕ್ಷದ ಸರ್ವೇ ಬರೀ ಬೋಗಸ್. ಪಕ್ಷದ ಅಭ್ಯರ್ಥಿಗಳ ಹತ್ತಿರ ಅರ್ಜಿಗಾಗಿ 2 ಲಕ್ಷ ತಗೊಂಡಿದ್ದೀರಿ. 30 ಕೋಟಿ ಹಣ ಸಂಗ್ರಹ ಮಾಡಿದ್ದೀರಿ. ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಮನೆಯ ದುಡ್ಡು ಹಾಕಿ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮಂತ್ರಿಗಳಿಗೆ 2 ಕೋಟಿ ಹೇಳಿದ್ದರೆ ತಂದು ಕೊಡುತ್ತಿದ್ದರು. ಅಣ್ಣ ತಮ್ಮಂದಿರಿಬ್ಬರಿಲ್ಲದಿದ್ದರೆ ಈ ಕಾಂಗ್ರೆಸ್ ಪಕ್ಷ ಇಲ್ಲ ಅಂದುಕೊಂಡಿದ್ದೀರಾ? ಕೋಟ್ಯಂತರ ಜನ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ ಎಂದು ಪಿ.ಎನ್ ಕೃಷ್ಣಮೂರ್ತಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Karnataka Elections : ಪಕ್ಷದ್ರೋಹ ಮಾಡಿಲ್ಲ, 10 ಬಾರಿ ಯೋಚಿಸಿ ಕಾಂಗ್ರೆಸ್‌ ಸೇರಿದ್ದೇನೆ; ಬಿ ಫಾರಂ ಸ್ವೀಕರಿಸಿದ ಜಗದೀಶ್‌ ಶೆಟ್ಟರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಚಿನ್ನದ ದರ

Gold Rate Today: ಚಿನ್ನದ ಬೆಲೆ ಮತ್ತೂ ಇಳಿಕೆ; ಇಂದಿನ ಧಾರಣೆಯನ್ನು ಇಲ್ಲಿ ಗಮನಿಸಿ

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,610 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,211 ಇದೆ. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,211 ಆಗಿದ್ದು, ಎಂಟು ಗ್ರಾಂ ಬೆಲೆ ₹57,688ಕ್ಕೆ ಇಳಿದಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿಯ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಧಾರಣೆ ಕೆಲವು ದಿನಗಳಿಂದ ಇಳಿಯುತ್ತಿದೆ. ಇದು ಕೊಳ್ಳುವವರಿಗೆ ತುಸು ಸಮಾಧಾನದ ಸುದ್ದಿ. ನಿನ್ನೆಯೂ ಬೆಲೆ ಇಳಿದಿತ್ತು. ಇಂದು ಕೂಢ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹ 40 ಮತ್ತು ₹44 ಇಳಿಕೆಯಾಗಿದೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,610 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,211 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,880 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,100 ಮತ್ತು ₹6,61,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,211 ಆಗಿದ್ದು, ಎಂಟು ಗ್ರಾಂ ಬೆಲೆ ₹57,688ಕ್ಕೆ ಇಳಿದಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,110 ಮತ್ತು ₹7,21,100 ವೆಚ್ಚವಾಗಲಿದೆ.

ಬೆಳ್ಳಿಯ ಬೆಲೆಯಲ್ಲಿ ಹೆಚ್ಚೇನೂ ವ್ಯತ್ಯಾಸವಾಗಿಲ್ಲ. ಒಂದು ಗ್ರಾಂಗೆ ₹92.90 ಹಾಗೂ 8 ಗ್ರಾಂಗೆ ₹743.20 ಇದೆ. 10 ಗ್ರಾಂಗೆ ₹929 ಹಾಗೂ 1 ಕಿಲೋಗ್ರಾಂಗೆ ₹92,900 ಬೆಲೆ ಬಾಳುತ್ತದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ₹ 66,250₹ 72,600
ಮುಂಬೈ₹ 66,100₹ 72,110
ಬೆಂಗಳೂರು₹ 66,100₹ 72,110
ಚೆನ್ನೈ₹ 66,660₹ 72,270

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳಲು ಇದೇ ಸೂಕ್ತ ಸಮಯ; ಮತ್ತೆ ಬಂಗಾರದ ದರ ಇಳಿಕೆ

Continue Reading

ಮಳೆ

Karnataka Rain : ಸಿಡಿಲಿಗೆ ಆಕಳು ಬಲಿ; ಹಲವೆಡೆ ಮಳೆ ಅವಾಂತರಕ್ಕೆ ಜನರು ತತ್ತರ

Karnataka Rain : ಸಿಡಿಲು ಬಡಿದು ಆಕಳು ಬಲಿಯಾಗಿದ್ದರೆ, ರಾಜ್ಯದಲ್ಲಿ ಮಳೆ (Rain News) ಅವಾಂತರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನೋಡಿದಷ್ಟು ದೂರ ಮಳೆ ನೀರಿನಿಂದ ರಸ್ತೆಗಳು ಜಲಾವೃತಗೊಮಡಿದೆ.

VISTARANEWS.COM


on

By

karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರು ಮಾತ್ರವಲ್ಲದೇ ವಿವಿಧ ಜಿಲ್ಲೆಗಳಲ್ಲೂ ಮಳೆಯು (Karnataka Rain) ಅವಾಂತರವೇ ಸೃಷ್ಟಿಸಿದೆ. ಗುಡುಗು ಸಿಡಿಲು ಸಹಿತ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮುಖ್ಯವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲೇ ಭಾರಿ ಮಳೆಯಾಗಿದ್ದು, ಮನೆಗಳಿಗೆ (Rain News) ನೀರು ನುಗ್ಗಿದೆ. ಜತೆಗೆ ಜಮೀನುಗಳು ಜಲಾವೃತಗೊಂಡಿದೆ. ವಿಜಯಪುರದಲ್ಲಿ ಸಿಡಿಲು ಬಡಿದು ಆಕಳು ಸ್ಥಳದಲ್ಲೇ ಮೃತಪಟ್ಟಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಲ್ಲಿ ಏನೆಲ್ಲ ಅನಾಹುತಗಳು ಸಂಭವಿಸಿದೆ ಎಂದು (Karnataka weather Forecast) ಮಾಹಿತಿ ಇಲ್ಲಿದೆ.

Karnataka rain

ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದವು. ವರುಣನ ಅಬ್ಬರದಿಂದ ಬೈಕ್ ಸವಾರರು ಪರದಾಡಬೇಕಾಯಿತು.

Karnataka Rain

ರಾಯಚೂರಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ರಾತ್ರಿಯಿಂದ ಮುಂದುವರೆದ ಮಳೆ ಮುಂದುವರಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದ ಹಲವೆಡೆ ವಿದ್ಯುತ್ ವ್ಯತ್ಯಯದಿಂದಾಗಿ ಸಾರ್ವಜನಿಕರು ಪರದಾಡಿದರು. ಕಳೆದ 10 ಗಂಟೆಯಿಂದಲೂ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ.

karnataka Rain

ವಿಜಯನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಬಾಳೆ, ಕಬ್ಬು, ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ನೀರು ನುಗ್ಗಿದೆ. ಹೊಸಪೇಟೆಯ ಜಂಬುನಾಥನ ಹಳ್ಳಿ ಪ್ರದೇಶದ ರಾಯರಕೆರೆ ಭಾಗದಲ್ಲಿನ ರೈತರ ಬೆಳೆಗಳು ನೀರುಪಾಲಾಗಿದೆ.

ಬಾಗಲಕೋಟೆ ಜಿಲ್ಲೆ ಇಲಕಲ್ಲ ತಾಲ್ಲೂಕಿನ ಕರಡಿ ಗ್ರಾಮದಲ್ಲಿ ಭಾರಿ ಮಳೆಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲಕಲ್ ತಾಲ್ಲೂಕಿನಲ್ಲಿ ರಾತ್ರಿ ಸುರಿದ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ಕರಡಿ ಗ್ರಾಮದ ಸಂಪರ್ಕ ರಸ್ತೆ ಹಳ್ಳದ ನೀರಿನಿಂದ ಜಲಾವೃತಗೊಂಡಿದೆ. ಕರಡಿ ರಸ್ತೆ ಮೇಲ್ಸೇತುವೆ ಕಾಮಗಾರಿಯಿಂದ ನೀರು ರಸ್ತೆಗೆ ನುಗ್ಗಿದೆ. ಕರಡಿ, ದಾಸಬಾಳ, ಪಾಲತಿ, ಕೊಣ್ಣೂರ, ಹುನಗುಂದ ಸಂಪರ್ಕ ಕಡಿತಗೊಂಡಿದೆ.

karnataka Rain

ತಡರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿಜಯಪುರ ನಗರದ ಜುಮನಾಳ, ಸಾರವಾಡ, ಹೊನಗನಹಳ್ಳಿ ಸೇರಿದಂತೆ ಭಾರಿ ಮಳೆಯಾಗಿದೆ. ವಿಜಯಪುರ ನಗರದ ಮೀನಾಕ್ಷಿ ವೃತ್ತ ಜಲಾವೃತಗೊಂಡಿದ್ದು, ನೀರು ತುಂಬಿದ ರಸ್ತೆಯಲ್ಲೇ ಸವಾರರು ವಾಹನ ಚಲಾಯಿಸಿದ್ದಾರೆ.

karnataka Rain

ದಾವಣಗೆರೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿತ್ತು. ದಾವಣಗೆರೆ ತಾಲೂಕಿನ ಅನಗೋಡು, ಮಾಯಕೊಂಡ, ಹುಣಸೇಕಟ್ಟೆ, ಹೆಬ್ಬಾಳು, ನರಗನಹಳ್ಳಿ ಹಾಗೂ ಹೊನ್ನಯಕನಹಳ್ಳಿ ಒಬಣ್ಣನಹಳ್ಳಿ ಭಾವಿಹಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭರ್ಜರಿ ಮಳೆಯಾಗಿದೆ. ಹೆಬ್ಬಾಳು ನರಗನಹಳ್ಳಿ, ಕೊಡಗನೂರು ಸೇರಿದಂತೆ ಇತರೆ ಕೆರೆಗಳಿಗೆ ನೀರು ಹರಿದು ಬಂದಿದೆ. ಮಳೆಯ ರಭಸಕ್ಕೆ ಹೊಲಗಳಿಗೆ ನೀರು ನುಗ್ಗಿದ್ದು, ಗುಲಾಬಿ ಗಿಡಗಳು ನೆಲಕಚ್ಚಿದೆ.

karnataka rain

ಈಶಾನ್ಯ ಪದವೀಧರ ಕ್ಷೇತ್ರದ ಮತದಾನಕ್ಕೂ ಮಳೆ ಎಫೆಕ್ಟ್‌ ತಟ್ಟಿದೆ. ರಾಯಚೂರಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಪವರ್ ಕಟ್ ಆಗಿದ್ದು, ಸಿಬ್ಬಂದಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮತದಾನ ನಡೆದಿದೆ. ಪವರ್ ಇಲ್ಲದೆ ಮೊಬೈಲ್ ‌ಟಾರ್ಚ್ ಬಳಸಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮತಗಟ್ಟೆ ನಂ.84ರಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮತದಾನ ಮಾಡಬೇಕಾಯಿತು.

Karnataka Rain

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ಹಿರೇಮಸಳಿ ಗ್ರಾಮದಲ್ಲಿ ಸಿಡಿಲು ಬಡಿದು ಆಕಳು ಮೃತಪಟ್ಟಿದೆ. ಶಿವಯೋಗಿ ಹೊಸಮನಿ ಎಂಬುವವರಿಗೆ ಸೇರಿದ ಆಕಳನ್ನು ಹೊಲದಲ್ಲಿ ಮರದ ಕೆಳಗೆ ಕಟ್ಟಲಾಗಿತ್ತು. ಈ ವೇಳೆ ಸಿಡಿಲು ಬಡಿದು ಆಕಳು ಮೃತಪಟ್ಟಿದೆ. ಇಂಡಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Rain

ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಗೆ ಕೃಪಾ ನಗರ ಹಾಗೂ ಹೊಸಳ್ಳಿ ಕ್ರಾಸ್ ಸಮೀಪದ 20ಕ್ಕೂ ಹೆಚ್ಚು ಗುಡಿಸಲು ಒಳಗೆ ನೀರು ನುಗ್ಗಿದೆ. ಅಲೆಮಾರಿ ಜನಾಂಗದವರು ವಾಸ ಮಾಡುವ ಗುಡಿಸಲು ನೀರುಪಾಲಾಗಿದ್ದು, ರಾತ್ರಿ ಪೂರ್ತಿ ಜಾಗರಣೆ ಮಾಡಿದ್ದಾರೆ. ಸರಕಾರ ವಾಸಕ್ಕೆ ಮನೆ ಸೌಲಭ್ಯ ಕಲ್ಪಿಸುವಂತೆ ಅಲೆಮಾರಿ ಜನಾಂಗದವರು ಒತ್ತಾಯಿಸಿದ್ದಾರೆ.

Karnataka Rain

ಕೊಪ್ಪಳದ ನಗರದ ಗಣೇಶ ನಗರದಲ್ಲಿ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಗಣೇಶ ನಗರ ಬಡಾವಣೆಯ ಹತ್ತಾರು ಮನೆಗಳ ಮುಂದೆ ಜಲಾವೃತಗೊಂಡಿದ್ದು, ಭಾಗ್ಯನಗರ ಪಟ್ಟಣ ಪಂಚಾಯತ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Karnataka Rain

ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ಕಿತ್ನೂರು ಸರ್ಕಾರಿ ಶಾಲೆ ಆವರಣವು ಕೆರೆಯಂತಾಗಿತ್ತು. ನಿನ್ನೆ ರಾತ್ರಿ ಸುರಿದ ಮಳೆಗೆ ಶಾಲಾ ಆವರಣದಲ್ಲಿ ಮಳೆ ನೀರು ತುಂಬಿತ್ತು.

Karnataka Rain

ಯಾದಗಿರಿಯ ಹೊಸಳ್ಳಿ ಕ್ರಾಸ್ ಸಮೀಪದಲ್ಲಿ 3 ಮನೆಗಳಿಗೆ ಮಳೆ ನೀರು ನುಗ್ಗಿದೆ. ಧವಸ ಧಾನ್ಯ ಹಾಗೂ ಅಗತ್ಯ ವಸ್ತುಗಳಿಗೆ ಹಾನಿಯಾಗಿದೆ. ಕೃಷ್ಣಾ ದೇಗುಲ ಜಲ ದಿಗ್ಬಂಧನವಾಗಿದೆ. ನಗರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

karnataka Rain

ತುಮಕೂರಿನ ತಿಪಟೂರಿನಲ್ಲಿ ಧಾರಕಾರವಾಗಿ ಸುರಿದ ಮಳೆಗೆ ಕುಡಿಯುವ ನೀರಿನ ಕೆರೆಗೆ ಕಲುಷಿತ ನೀರು ಸೇರ್ಪಡೆಯಾಗಿದೆ. ತಿಪಟೂರು ಪಟ್ಟಣದ ಕಲುಷಿತ ನೀರು ಈಚನೂರು ಕೆರೆಗೆ ಸೇರ್ಪಡೆಯಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಲು ಸ್ಥಳೀಯರು ಮನವಿ ಮಾಡಿದ್ದಾರೆ.

Karnataka Rain

ಬಾಗಲಕೋಟೆಯ ಬಾದಾಮಿ ಭಾಗದಲ್ಲಿ ರಾತ್ರಿ ಸುರಿದ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ನಿರ್ಮಾಣ ಹಂತದ ಕಾಲುವೆಯಿಂದ ನೀರು ನುಗ್ಗಿದ್ದು, 4 ಎಕರೆ ಜಮೀನಿನಲ್ಲಿ ಬೆಳೆದ ಕಬ್ಬು, ಗೋವಿನಜೋಳ ನಾಶವಾಗಿದೆ. ಹನುಮಂತ ಚೂರಿ ಎಂಬ ರೈತರ ಬೆಳೆ ಹಾನಿಯಾಗಿದೆ.

karnataka Rain

ಯಾದಗಿರಿಯಲ್ಲಿ ಮಳೆ ಆರ್ಭಟಕ್ಕೆ ಕಿರಾಣಿ ಅಂಗಡಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ನರಸಿಂಹ ಅವರಿಗೆ ಸೇರಿದ ಕಿರಾಣಿ ಅಂಗಡಿ ಹಾಳಾಗಿದೆ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಿಡಿಕಾರಿದ್ದಾರೆ.

karnataka Rain

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ‌ 150ಎ ರಲ್ಲಿನ ಅಂಡರ್ ಪಾಸ್ ಜಲಾವೃತಗೊಂಡಿತ್ತು. ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಅಂಡರ್ ಪಾಸ್‌ನಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಹೈರಾಣಾದರು. ನೀರಿನಲ್ಲಿ ವಾಹನ ತಳ್ಳಿಕೊಂಡು ಹೋದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿಕ್ಷಣ

2nd PUC Exam 3: ದ್ವಿತೀಯ ಪಿಯುಸಿ ಪರೀಕ್ಷೆ-3ರ ದಂಡಸಹಿತ ಶುಲ್ಕ ಪಾವತಿಗೆ ಇಂದೇ ಕೊನೇ ದಿನ

2nd PUC Exam 3 : 2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿತ್ತು. ದಂಡ ಸಹಿತ ಶುಲ್ಕ ಪಾವತಿಸಲು ಇಂದೇ ಕೊನೆಯ ದಿನವಾಗಿದೆ.

VISTARANEWS.COM


on

By

2nd Puc Exam 3
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ರ (2nd PUC Exam 3) ಶುಲ್ಕ ಪಾವತಿಸಲು ಇಂದೇ (ಜೂ.3) ಕೊನೆ ದಿನವಾಗಿದೆ. ವಿದ್ಯಾರ್ಥಿಗಳು ದಂಡಸಹಿತ ಶುಲ್ಕ ಪಾವತಿ ಮಾಡಬೇಕಾಗಿದ್ದು, ದಿನಕ್ಕೆ 50 ರೂ.ಅಂತೆ ಪಾವತಿಸಬೇಕಾಗಿದೆ.

ಈ ಹಿಂದೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 28ಕ್ಕೆ ಕೊನೆ ದಿನವಾಗಿತ್ತು. ಆದರೆ ಪೋಷಕರು ಹಾಗೂ ವಿದಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಿ ಆದೇಶಿಸಲಾಗಿತ್ತು. ಇದು ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿದ್ದು, ಮುಂದೆ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಶಾಲಾ ಶಿಕ್ಷಿಣ ಇಲಾಖೆ ಸೂಚನೆ ನೀಡಿತ್ತು.

ಅದರಂತೆ ವಿದ್ಯಾರ್ಥಿಗಳು ತಮ್ಮ ಕಾಲೇಜು ಅಥವಾ KSEAB ಪೋರ್ಟಲ್‌ನಲ್ಲಿ ಆನ್‌ಲೈನ್‌ ಮುಖಾಂತರ ನೋಂದಾಯಿಸಿಕೊಳ್ಳಬಹುದು. 2023-24ನೇ ಸಾಲಿನ ಫಲಿತಾಂಶ ಪೂರ್ಣಗೊಂಡಿರದ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹೊಸಬರು ಮತ್ತು ಖಾಸಗಿಯಾಗಿ ನೋಂದಾವಣೆಯಾದ ವಿದ್ಯಾರ್ಥಿಗಳು ಮಂಡಲಿಯ ವೆಬ್‌ಸೈಟ್‌ ಮೂಲಕ ನೇರವಾಗಿ ಪರೀಕ್ಷೆ 3ಕ್ಕೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

2nd Puc Exam 3

ಈ ಮೊದಲು ಮೇ 23ರಿಂದ 28ರವರಗೆ ದಂಡ ರಹಿತ ನೋಂದಣಿ ಮಾಡಿಕೊಳ್ಳಬಹುದಿತ್ತು. ಒಂದು ವೇಳೆ ಮೇ 28ರೊಳಗೆ ಅರ್ಜಿ ಸಲ್ಲಿಸದೇ ಹೋದರೆ ಮೇ 29ರಿಂದ 30ರವರೆಗೆ ದಂಡ ಸಹಿತ ನೋಂದಣಿ ಮಾಡಿಕೊಳ್ಳಬೇಕಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಮೇರೆಗೆ ದಿನಾಂಕವನ್ನು ವಿಸ್ತರಿಸಲಾಗಿತ್ತು. ಸದ್ಯ ಜೂನ್‌ 3ರಂದು ದಂಡ ಸಹಿತ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಅಂದಹಾಗೇ ವಿದ್ಯಾರ್ಥಿಗಳು ಕಾಲೇಜಿಗೆ ಪರೀಕ್ಷಾ ಶುಲ್ಕ ಪಾವತಿಸಲು ಮೇ 31 ದಂಡರಹಿತ ಕೊನೆ ದಿನವಾಗಿತ್ತು. ದಂಡ ಸಹಿತ ಜೂ. 1 ರಿಂದ 3 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳ ಮಾಹಿತಿಯನ್ನು ಪ್ರಾಂಶುಪಾಲರು ಕೆಎಸ್‌ಇಎಬಿ ತಂತ್ರಾಂಶದಲ್ಲಿ ಸಲ್ಲಿಸಬೇಕು. ಇದಕ್ಕೆ ದಂಡ ರಹಿತ ಜೂ.3ರಂದು ಕೊನೆ ದಿನವಾದರೆ, ದಂಡಸಹಿತ ಜೂ.5ರಂದು ನಿಗಧಿ ಮಾಡಲಾಗಿದೆ.

2024ರ ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕವನ್ನು ನಿಗಧಿಸಲಾಗಿದೆ. ಒಂದು ವಿಷಯಕ್ಕೆ 140 ರೂ ಹಾಗೂ ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಗಳಿಗೆ 400 ರೂ. ನಿಗದಿ ಮಾಡಲಾಗಿದೆ. ಇನ್ನೂ ಫಲಿತಾಂಶ ತಿರಸ್ಕರಣಾ ಪದ್ಧತಿಯನ್ನು ರದ್ದುಪಡಿಸಲಾಗಿದೆ. 2023ರ ನಂತರ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು 2024ರ ದ್ವಿತೀಯ ಪಿಯುಸಿ ಪರೀಕ್ಷೆ 3ರಲ್ಲಿ ಹಾಜರಾಗಬೇಕಾದರೆ ಮಂಡಲಿಯು ಒದಗಿಸಿದ ಫಲಿತಾಂಶದ ಪಟ್ಟಿಯ ಆಧಾರದ ಮೇಲೆ ಶುಲ್ಕವನ್ನು ಭರಿಸಬೇಕಾಗುತ್ತದೆ.

ಇದನ್ನೂ ಓದಿ: Stock Market News: ಮೋದಿ ಸರಕಾರ ಪುನರಾಗಮನಕ್ಕೆ ಷೇರು ಮಾರುಕಟ್ಟೆ ಹರ್ಷ, ಸೆನ್ಸೆಕ್ಸ್‌- ನಿಫ್ಟಿ ದಾಖಲೆ ಏರಿಕೆ

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (2nd PUC Exam) 3ನೇ ಪೂರಕ ಪರೀಕ್ಷೆಯು ನಡೆಯಲಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್‌ 24 ರಿಂದ ಜುಲೈ 5ರವರೆಗೆ ಪರೀಕ್ಷೆಯು ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ.

ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

MLC Election: ಮೇಲ್ಮನೆ ಚುನಾವಣೆ ಮತದಾನ ಆರಂಭ, 6 ಕ್ಷೇತ್ರಗಳಲ್ಲಿ 78 ಸ್ಪರ್ಧಿಗಳ ಹಣಾಹಣಿ

ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6ಕ್ಕೆ ಇದರ ಫಲಿತಾಂಶ ಹೊರ ಬೀಳಲಿದೆ. ಈ ಆರು ಕ್ಷೇತ್ರಗಳಲ್ಲಿ ಓರ್ವ ಮಹಿಳೆ ಸೇರಿ ಒಟ್ಟು 78 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

VISTARANEWS.COM


on

mlc election raghupathi bhat
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಮಣಿಪಾಲ ಜೂನಿಯರ್ ಕಾಲೇಜಿನಲ್ಲಿ ಮತದಾನ.
Koo

ಬೆಂಗಳೂರು: ಇಂದು ವಿಧಾನ ಪರಿಷತ್ತಿನ (vidhana parishath, Legislative council) ಆರು ಸ್ಥಾನಗಳಿಗೆ ಮತದಾನ (MLC Election) ನಡೆಯುತ್ತಿದೆ. 3 ಪದವೀಧರ ಕ್ಷೇತ್ರ (graduate constituency), 3 ಶಿಕ್ಷಕರ ಕ್ಷೇತ್ರಗಳ (teachers constituency) ಮತದಾನ (voting) ನಡೆಯಲಿದ್ದು ಒಟ್ಟು 78 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈರುತ್ಯ ಪದವೀಧರ ಮತ್ತು ಅಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದೆ.

ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6ಕ್ಕೆ ಇದರ ಫಲಿತಾಂಶ ಹೊರ ಬೀಳಲಿದೆ. ಈ ಆರು ಕ್ಷೇತ್ರಗಳಲ್ಲಿ ಓರ್ವ ಮಹಿಳೆ ಸೇರಿ ಒಟ್ಟು 78 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಪ್ರಮುಖವಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ, ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧೆಯಲ್ಲಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ.ಮಂಜುನಾಥ್, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ. ರಘುಪತಿ ಭಟ್, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ, ಅಗ್ನೇಯ ಶಿಕ್ಷಕರ ಕ್ಷೇತ್ರದಿಂದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸೇರಿ ಒಟ್ಟು 78 ಅಭ್ಯರ್ಥಿಗಳು ತಮ್ಮ ಗೆಲುವಿಗೆ ಸೆಣಸಲಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 19 ಅಭ್ಯರ್ಥಿಗಳು ಕಣದಲ್ಲಿದ್ದು, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15 ಮಂದಿ ಸ್ಪರ್ಧಿಸುತ್ತಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎಂಟು ಅಭ್ಯರ್ಥಿಗಳು ಪೈಪೋಟಿಗಳಿದಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಡುವೆ ಗೆಲುವಿಗೆ ಪೈಪೋಟಿ ನಡೆಯುತ್ತಿದೆ.

ಪದವೀಧರ ಕ್ಷೇತ್ರದಲ್ಲಿ 2,01,632 ಪುರುಷರು, 161,907 ಮಹಿಳೆಯರು ಹಾಗೂ 34 ಇತರರು ಸೇರಿ ಒಟ್ಟು 3,63,573 ಮತದಾರರು ಇದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ 38,305 ಪುರುಷರು, 31,954 ಮಹಿಳೆಯರು ಹಾಗೂ ಒಬ್ಬರು ಇತರರು ಸೇರಿ ಒಟ್ಟು 70,260 ಮತದಾರರಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ 151 ಸಾಮಾನ್ಯ ಮತಗಟ್ಟೆ ಮತ್ತು 19 ಉಪ ಮತಗಟ್ಟೆ ಸೇರಿ ಒಟ್ಟು 170 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪದವೀಧರ ಕ್ಷೇತ್ರದಲ್ಲಿ 307 ಸಾಮಾನ್ಯ ಮತಗಟ್ಟೆ ಮತ್ತು 154 ಉಪ ಮತಗಟ್ಟೆ ಸೇರಿ ಒಟ್ಟು 461 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರ ಹೊರತುಪಡಿಸಿ ಇನ್ನುಳಿದ ಕ್ಷೇತ್ರಗಳಲ್ಲಿ ಬಲಗೈ ತೋರುಬೆರಳಿಗೆ ಶಾಯಿ ಹಾಕಲಾಗುತ್ತದೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಲಗೈ ಮಧ್ಯದ ಬೆರಳಿಗೆ ಶಾಯಿ ಹಾಕಲಾಗುತ್ತದೆ.

ಆರು ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಅಬ್ಬರದ ಬಹಿರಂಗ ಪ್ರಚಾರ ಶನಿವಾರ ಸಂಜೆ ಅಂತ್ಯವಾಗಿದ್ದು, ಭಾನುವಾರ ಸಂಜೆ ಆರು ಗಂಟೆಯವರೆಗೆ ಅಭ್ಯರ್ಥಿಗಳು ಮತದಾರರ ಮನೆ ಮನೆ ತೆರಳಿ ಮತಯಾಚನೆ ಮಾಡಿದರು. ಇಂದು ಎಲ್ಲಾ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ಓದಿ: MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Continue Reading
Advertisement
Udupi-Chikmagalur Lok Sabha constituency
ದೇಶ8 mins ago

Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

Vasishta Simha Lovely Kannada Film Trailer Event
ಸ್ಯಾಂಡಲ್ ವುಡ್14 mins ago

Vasishta Simha: ಟ್ರೈಲರ್‌ ಲಾಂಚ್ ವೇಳೆ ರಿಷಬ್ ಶೆಟ್ಟಿ ಕಾಲಿಗೆ ಬಿದ್ದ ವಸಿಷ್ಠ ಸಿಂಹ!

Heat wave
ದೇಶ14 mins ago

Heat Wave: ಒಡಿಶಾದಲ್ಲಿ ಬಿಸಿಗಾಳಿ ಶಾಖಕ್ಕೆ ಒಂದೇ ದಿನ 45 ಜನ ಬಲಿ

Food Poisoning
ಮೈಸೂರು15 mins ago

Food Poisoning : ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Gold Rate Today
ಚಿನ್ನದ ದರ25 mins ago

Gold Rate Today: ಚಿನ್ನದ ಬೆಲೆ ಮತ್ತೂ ಇಳಿಕೆ; ಇಂದಿನ ಧಾರಣೆಯನ್ನು ಇಲ್ಲಿ ಗಮನಿಸಿ

karnataka Rain
ಮಳೆ35 mins ago

Karnataka Rain : ಸಿಡಿಲಿಗೆ ಆಕಳು ಬಲಿ; ಹಲವೆಡೆ ಮಳೆ ಅವಾಂತರಕ್ಕೆ ಜನರು ತತ್ತರ

Team India
ಪ್ರಮುಖ ಸುದ್ದಿ45 mins ago

Team India : ಈ ಕೆಲಸ ಇಷ್ಟವಿದೆ; ಟೀಮ್ ಇಂಡಿಯಾ ಕೋಚ್​ ಹುದ್ದೆಯ ಬಗ್ಗೆ ಮೊದಲ ಹೇಳಿಕೆ ನೀಡಿದ ಗೌತಮ್ ಗಂಭೀರ್​

Priyanka Chopra The Bluff team Malti enjoys
ಬಾಲಿವುಡ್52 mins ago

Priyanka Chopra: ಆಸ್ಟ್ರೇಲಿಯಾದ ಬೀಚ್‌ನಲ್ಲಿ ಅಮ್ಮನ ಸಿನಿ ತಂಡದ ಜತೆ ಎಂಜಾಯ್ ಮಾಡಿದ ಮಾಲತಿ ಮೇರಿ ಚೋಪ್ರಾ!

George Fernandes ರಾಜಮಾರ್ಗ ಅಂಕಣ
ಅಂಕಣ53 mins ago

ರಾಜಮಾರ್ಗ ಅಂಕಣ: ಜಾರ್ಜ್ ಫರ್ನಾಂಡಿಸ್ ಮತ್ತು ಕೊಂಕಣ್ ರೈಲ್ವೆ ಎಂಬ ಮಹಾ ಕನಸು!

gold rate today
ಕರ್ನಾಟಕ1 hour ago

Gold Rate Today: ಚಿನ್ನ ಕೊಳ್ಳಲು ಇದೇ ಸೂಕ್ತ ಸಮಯ; ಮತ್ತೆ ಬಂಗಾರದ ದರ ಇಳಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌