Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ - Vistara News

ಬೆಂಗಳೂರು

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Karnataka Rain: ಸೋಮವಾರ ರಾತ್ರಿ ಸುರಿದ ಮಳೆಗೆ (Heavy Rain) ಜನರು ಕಂಗಲಾಗಿದ್ದಾರೆ. ಹಲವೆಡೆ ಭಾರಿ ಮಳೆಗೆ (Karnataka Weather) ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿದ್ದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಜಾಗರಣೆ ಮಾಡುವಂತಾಯಿತು.

VISTARANEWS.COM


on

karnataka Rain Effected
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಗಳೂರು/ಬೆಳಗಾವಿ: ತಡರಾತ್ರಿ ಸುರಿದ ಮಳೆಯು (Karnataka Rain) ಅವಾಂತರವನ್ನೇ ಸೃಷ್ಟಿಸಿ ಮಾಡಿದೆ. ಬೆಂಗಳೂರಿನಲ್ಲಿ ರಾತ್ರಿ ಪೂರ್ತಿ ಅಬ್ಬರಿಸಿದ ಮಳೆಗೆ (Rain News) ಮರಗಳು ಧರೆಗುರುಳಿದ್ದವು. ನೃಪತುಂಗದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎದುರಿಗೆ ಮರದ ಕೊಂಬೆ ನೆಲಕ್ಕೆ ಉರುಳಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇತ್ತ ಬುಕ್‌ಫೀಲ್ಡ್‌ನಲ್ಲಿ ಮರ ಬಿದ್ದು ಕಾರೊಂದು ಜಖಂಗೊಂಡಿತ್ತು. ಚಾಮರಾಜಪೇಟೆಯ ಗುಡ್ಡದಹಳ್ಳಿಯಲ್ಲಿ ಮನೆಗಳಿಗೆ ಕೆಸರುಮಯ ನೀರು ನುಗ್ಗಿದ್ದರಿಂದ ಹೊರಹಾಕಲು ಜನರು ತೊಂದರೆ ಅನುಭವಿಸಿದರು.

ಮೈಸೂರಿನಲ್ಲಿ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಬಾರಿ ಬಿರುಗಾಳಿ ಸಹಿತ ಮಳೆಗೆ ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಮನೆ ಕುಸಿದು ಬಿದ್ದಿದ್ದು, ವಾಸ ಮಾಡಲು ಮನೆ ಇಲ್ಲದೆ ಭಾಗ್ಯಮ್ಮ ಕಣ್ಣೀರು ಹಾಕಿದರು. ಮನೆಯಲ್ಲಿ ಸುಮಾರು 6 ತಿಂಗಳು ಸಣ್ಣ ಮಗುವಿದ್ದು ಮಧ್ಯರಾತ್ರಿ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಬಿದ್ದು ಕುಟುಂಬವು ಕಂಗಲಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನಾಶವಾಗಿವೆ. ನಮಗೆ ಆದಷ್ಟು ಬೇಗ ಸರ್ಕಾರ ಪರಿಹಾರ ಮಾಡಿಕೊಡಬೇಕು ಎಂದು ಭಾಗ್ಯಮ್ಮ ಮನವಿ ಮಾಡಿದರು.

ವಿಜಯನಗರದಲ್ಲಿ ಮಳೆಗೆ ಬೆಳೆ ಹಾನಿ

ಕಳೆದ ರಾತ್ರಿ ಮಳೆ ಜೆತಗೆ ಬಿರುಗಾಳಿ ಬೀಸಿದ ಹಿನ್ನೆಲೆಯಲ್ಲಿ ಬಾಳೆ, ಭತ್ತ, ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ವಿಜಯನಗರದ ಹುರುಳಿಹಾಳ ಗ್ರಾಮದಲ್ಲಿ ಗಾಳಿ ಪ್ರಮಾಣ ಹೆಚ್ಚಿದರಿಂದ ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ಕಾನಾಹೊಸಹಳ್ಳಿ ಹೋಬಳಿಯ ಎಕ್ಕೆಗೊಂದಿ ಗ್ರಾಮದಲ್ಲಿ ರೇಷ್ಮೆ ಸಾಗಾಣೆ ಮನೆಗೆ ಹಾನಿಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಗುಡುಗು, ಮಿಂಚು ಸಿಡಿಲಿನ ಆರ್ಭಟ ಮಧ್ಯೆ ಸಾಧಾರಣ ಮಳೆ ವರದಿಯಾಗಿದೆ.

ಧರೆಗುರುಳಿದ ಮರಗಳು

ಚಿಕ್ಕೋಡಿ ಗಡಿ ತಾಲೂಕು ನಿಪ್ಪಾಣಿಯಲ್ಲಿ ರಣ ಗಾಳಿ-ಮಳೆಗೆ ಸಿಕ್ಕಿ ನಲುಗಿದೆ. ನಿಪ್ಪಾಣಿ ನಗರದ ವಿವಿಧೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ನಿಪ್ಪಾಣಿಯ ಭೀಮನಗರ,ವಿದ್ಯಾನಗರ,ಅಂಬೇಡ್ಕರ್ ನಗರದ ಹತ್ತಿರ ಮರಗಳು ಬಿದ್ದಿವೆ. ಮುನ್ಸಿಪಲ್ ಹೈಸ್ಕೂಲ್,ಅಬಕಾರಿ ಫೀಸ್ ಸೇರಿದಂತೆ ವಿವಿಧೆಡೆ ಹಾನಿಯಾಗಿದೆ. ಭಾರಿ ಗಾಳಿಗೆ ವಿದ್ಯುತ್ ಕಂಬಗಳು ವಾಲಿದರೆ, ಮನೆಯ ಚಾವಣೆ ಹಾರಿ ಹೋಗಿವೆ. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ನಿಪ್ಪಾಣಿ ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ವಾಹನ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಹಾನಿಯಾದ ಪ್ರದೇಶಗಳಿಗೆ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಿಪ್ಪಾಣಿ ನಗರ ತತ್ತರಿಸಿದೆ. ಭಾರಿ ಮಳೆಗೆ 20 ಕ್ಕೂ ಹೆಚ್ಚು ಮನೆಗಳ ಚಾವಣಿ ಹಾರಿ ಹೋಗಿದೆ. ಪತ್ರಾಸ್ ಶೇಡ್ ಹಾಗೂ ಹಂಚಿನ ಮನೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಭಾರಿ ಮಳೆ ಗಾಳಿಗೆ 30 ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಮರಗಳ ಜತೆಗೆ ನಗರದಲ್ಲಿ 50 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿವೆ. ಮರಗಳು ಬಿದ್ದು 10 ಕ್ಕೂ ಹೆಚ್ಚು ವಾಹನಗಳು ಸಹ ಜಖಂಗೊಂಡಿವೆ. ಕಳೆದ ರಾತ್ರಿಯಿಂದ ನಿಪ್ಪಾಣಿ ನಗರದಲ್ಲಿ ವಿದ್ಯುತ್ ಕಟ್ ಆಗಿದೆ. ನಿಪ್ಪಾಣಿ ನಗರಸಭೆಯಿಂದ ಮರಗಳ ತೆರುವು ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿಪ್ಪಾಣಿ ನಗರಸಭೆ ಅಧಿಕಾರಿಗಳು ಹಾನಿಯಾದ ಮನೆಗಳ ಸರ್ವೆಗೆ ಮುಂದಾಗಿದ್ದಾರೆ. ನಿಪ್ಪಾಣಿ ಪಟ್ಟಣದ ಅಂಬೇಡ್ಕರ್ ಗಲ್ಲಿಗೆ ಭೀಮ ನಗರ ಪ್ರದೇಶದಲ್ಲಿ ಅತಿ ಹೆಚ್ಚಿನ ಹಾನಿಯಾಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

ಆನೇಕಲ್‌ನಲ್ಲಿ ಮನೆಗೆ ನುಗ್ಗಿದ ಚರಂಡಿ ನೀರು

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಮನೆಗಳಿಗೆ ಹಾಗೂ ಬಡಾವಣೆಗಳಿಗೆ ಕೊಳಚೆ ನೀರು ನುಗ್ಗಿದೆ. ಚರಂಡಿ-ರಾಜಕಾಲುವೆ ವ್ಯವಸ್ಥೆ ಸರಿ ಇಲ್ಲದೆ ಮನೆಗಳಿಗೆ ನೀರು ನುಗ್ಗಿದೆ. ಇಡೀ ರಾತ್ರಿ ನೀರಿನಲ್ಲಿ ನಿವಾಸಿಗಳು ಕಾಲ ಕಳೆದಿದ್ದಾರೆ. ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ಬಾರಿ ಮಳೆ ಬಂದಾಗಲೂ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಮನೆಯೊಳಗೆ ನುಗ್ಗಿದ ಕೊಳಚೆ ನೀರನ್ನು ಸ್ವಚ್ಛ ಮಾಡುವುದರಲ್ಲಿ ದಿನದೂಡುತ್ತಿದ್ದಾರೆ.

ವಿಜಯನಗರದಲ್ಲಿ ವರುಣನ ಕೃಪೆಗಾಗಿ ಜಪ – ತಪ

ಜಪ – ತಪ ಮಾಡಿದ ಕೇವಲ ಎಂಟು ದಿನದಲ್ಲಿ ವರುಣನ ಆಗಮನವಾಗಿದೆ. ಕಳೆದ ಒಂದು ವಾರದಲ್ಲಿ ಎರಡು ಬಾರಿ ವಿಜಯನಗರದ ಹೊಸಪೇಟೆ ತಾಲೂಕಿನಲ್ಲಿ ಮಳೆ ಸುರಿದಿದೆ. ಭೀಕರ ಬರಗಾಲ, ಬಿಸಿಲಿನ ಧಗೆಯಿಂದ ಜನರು ಆಂಜನೇಯನ ಮೊರೆ ಹೋಗಿದ್ದರು. ಮಳೆಗಾಗಿ ನೂರಾರು ವರ್ಷ ಹಳೆಯದಾದ ಐತಿಹಾಸಿಕ ಹಿನ್ನೆಲೆವೊಳ್ಳ ಆಂಜನೇಯನಿಗೆ ಮಳೆಗಾಗಿ ನಿತ್ಯ ಪೂಜೆ, ಭಜನೆ ಮಾಡುತ್ತಿದ್ದರು. ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿರೋ ಐತಿಹಾಸಿಕ ಆಂಜನೇಯ ದೇಗುಲವನ್ನು ವಿಜಯನಗರ ಅರಸರ ಕಾಲದಿಂದಲೂ ವಿಶೇಷ ಸಲ್ಲಿಕೆ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತ ನೀರು

ಧಾರಾಕಾರ ಮಳೆಗೆ ಹಳೇ ಮೈ-ಬೆಂ ಹೆದ್ದಾರಿಯಲ್ಲಿ ಜಲಾವೃತಗೊಂಡಿತ್ತು. ಶ್ರೀರಂಗಪಟ್ಟಣದ ಅಗ್ನಿಶಾಮಕ ದಳದ ಎದುರಿನ ಮೈ- ಬೆಂ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಮೂರು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಹೆದ್ದಾರಿಯಲ್ಲಿ ತೆರಳಲಾಗದೆ ಬೈಕ್ ಸವಾರರು ಬದಲಿ ರಸ್ತೆಯಲ್ಲಿ ಸಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest57 minutes ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest1 day ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌