Kidnap case : ಪತಿ ಮೇಲಿನ ಸಿಟ್ಟಿಗೆ ಗೆಳೆಯನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ! - Vistara News

ಬೆಂಗಳೂರು

Kidnap case : ಪತಿ ಮೇಲಿನ ಸಿಟ್ಟಿಗೆ ಗೆಳೆಯನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ!

Kidnap case : ಕೌಟುಂಬಿಕ ಕಲಹಕ್ಕೆ ಪತಿಯಿಂದ ದೂರಾಗಿದ್ದ ಪತ್ನಿ ಬೇರೊಂದು ಮದುವೆ ಆಗಿದ್ದಳು. ಈ ನಡುವೆ ಏಕಾಏಕಿ ಮನೆ ಬಳಿ ಆಕೆ ಸ್ವಂತ ಮಗುವನ್ನೇ ಕಿಡ್ನ್ಯಾಪ್‌ ಮಾಡಿ ಎಸ್ಕೇಪ್‌ ಆಗಿದ್ದಾಳೆ.

VISTARANEWS.COM


on

kidnap case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ತಾಯಿಯಿಂದಲೇ ಮಗುವಿನ (Kidnap case) ಅಪಹರಣವಾಗಿದೆ. ಮಗುವನ್ನು ಕಿಡ್ನ್ಯಾಪ್ ಮಾಡಿ ಎಸ್ಕೇಪ್‌ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕೆಆರ್‌ ಪುರಂನ ಕ್ಯಾಸ ಗ್ರ್ಯಾಂಡ್ ರಾಯ್ಸಿ ಅಪಾರ್ಟ್ ಮೆಂಟ್ ಮುಂಭಾಗ ಬೆಳಗ್ಗೆ 8.30 ರ ಸುಮಾರಿಗೆ ಘಟನೆ ನಡೆದಿದೆ.

ಮಗುವಿನ ತಾಯಿ ಅನುಪಮ ಮತ್ತು ಆತನ ಸ್ನೇಹಿತನಿಂದ ಈ ಕೃತ್ಯ ನಡೆದಿದೆ. ಪತಿ ಸಿದ್ದಾರ್ಥ ಮತ್ತು ಪತ್ನಿ ಅನುಪಮ ನಡುವೆ ಕೌಟುಂಬಿಕ ಕಲಹವಿತ್ತು. ಹೀಗಾಗಿ ಈ ಇಬ್ಬರು ದೂರವಾಗಿದ್ದರು. ದೂರಾದ ಬಳಿಕ ಪತ್ನಿ ಅನುಪಮ ಬೇರೊಬ್ಬ ವ್ಯಕ್ತಿ ಜತೆಗೆ ಮದುವೆ ಆಗಿದ್ದರು.

ಈ ಹಿನ್ನೆಲೆಯಲ್ಲಿ ಕೋರ್ಟ್ ಮಗುವನ್ನು ಪತಿ ಸಿದ್ದಾರ್ಥ್‌ ವಶಕ್ಕೆ ಒಪ್ಪಿಸಿತ್ತು. ಆದರೆ ಇಂದು ಶುಕ್ರವಾರ ಅಪಾರ್ಟ್‌ಮೆಂಟ್ ಮುಂಭಾಗ ಸ್ಕೂಲ್‌ಗೆ ಹೋಗಲು ನಿಂತಿದ್ದಾಗ ಅನುಪಮ, ಸ್ನೇಹಿತ ಜತೆ ಸೇರಿ ಮಗುವನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಸದ್ಯ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮಗುವನ್ನು ಕಿಡ್ನ್ಯಾಪ್‌ ಮಾಡುವ ದೃಶ್ಯವು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Murder case : ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಕಿರಾತಕ

ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಮತಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವಳು. ಬೆಂಗಳೂರಿನ ಬಾಗಲಗುಂಟೆ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಘಟನೆ ನಡೆದಿದೆ. ಡೆತ್ ನೋಟ್ ಬರೆದಿಟ್ಟಿರುವ ಮಮತಾ, ನನ್ನ ಬಗ್ಗೆ ಕೆಟ್ಟದ್ದಾಗಿ ಏನಾದರೂ ಬಂದರೆ ನೀವೆ ಹೊಣೆ ಎಂದು ಉಲ್ಲೇಖಸಿದ್ದಾಳೆ. ಇಬ್ಬರು ಯುವಕರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

BBMP Property Tax: ಆಸ್ತಿ ತೆರಿಗೆ ಒನ್‌ ಟೈಮ್‌ ಸೆಟ್ಲ್‌ಮೆಂಟ್‌ಗೆ ಮತ್ತೆ 1 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಿದ ಬಿಬಿಎಂಪಿ

BBMP Property Tax: ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿಸಲು ಒಂದು ಬಾರಿ ಪರಿಹಾರ ಯೋಜನೆಯನ್ನು(ಒಟಿಎಸ್) ಸರ್ಕಾರ ಜಾರಿಗೆ ತಂದಿತ್ತು. ಈ ಯೋಜನೆಯಿಂದ ಆಸ್ತಿ ತೆರಿಗೆಯ ಬಾಕಿಯ ಮೇಲೆ ಪಾವತಿಸಬೇಕಾದ ಬಡ್ಡಿಯನ್ನು ಸಂಪೂರ್ಣ ಮನ್ನಾ ಮತ್ತು ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ. ಈ ಒಟಿಎಸ್ ಯೋಜನೆ ಸೌಲಭ್ಯ ಪಡೆಯಲು ಮತ್ತೊಂದು ತಿಂಗಳು ಕಾಲಾವಧಿಯನ್ನು ವಿಸ್ತರಿಸಲಾಗಿದೆ.

VISTARANEWS.COM


on

BBMP Property Tax
Koo

ಬೆಂಗಳೂರು: ಆಸ್ತಿ ತೆರಿಗೆ ಬಾಕಿ (BBMP Property Tax) ಉಳಿಸಿಕೊಂಡವರಿಗೆ ಬಿಬಿಎಂಪಿ ಗುಡ್‌ ನ್ಯೂಸ್‌ ನೀಡಿದೆ. ‘ಒಂದು ಬಾರಿ ಪರಿಹಾರ ಯೋಜನೆʼಯಡಿ (ಒಟಿಎಸ್) ಆಸ್ತಿ ತೆರಿಗೆಗೆ ಶೇ.5 ರಿಯಾಯಿತಿ ಪಡೆಯಲು ಜುಲೈ 31 ಅಂತಿಮ ದಿನವಾಗಿತ್ತು. ಆದರೆ, ಇದೀಗ ʼಒನ್‌ ಟೈಮ್‌ ಸೆಟ್ಲ್‌ಮೆಂಟ್‌ ಯೋಜನೆʼ ಕಾಲಾವಕಾಶವನ್ನು ಮತ್ತೆ ಒಂದು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿಸಲು ಒಂದು ಬಾರಿ ಪರಿಹಾರ ಯೋಜನೆಯನ್ನು(ಒಟಿಎಸ್) ಸರ್ಕಾರ ಜಾರಿಗೆ ತಂದಿತ್ತು. ಈ ಯೋಜನೆಯಿಂದ ಆಸ್ತಿ ತೆರಿಗೆಯ ಬಾಕಿಯ ಮೇಲೆ ಪಾವತಿಸಬೇಕಾದ ಬಡ್ಡಿಯನ್ನು ಸಂಪೂರ್ಣ ಮನ್ನಾ ಮತ್ತು ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ. ಒಟಿಎಸ್ ಯೋಜನೆಯಡಿ ದಂಡಗಳ ಮೇಲೆ ಶೇ. 50 ರಿಯಾಯಿತಿ ಮತ್ತು ಆಸ್ತಿ ತೆರಿಗೆ ಡೀಫಾಲ್ಟರ್‌ಗಳಿಗೆ ಬಡ್ಡಿ ಪಾವತಿಗಳ ಮೇಲೆ ಶೇ. 100ರಷ್ಟು ರಿಯಾಯಿತಿ ನೀಡಲಾಗುತ್ತದೆ.

ಒಟಿಎಸ್‌ ಕಾಲಾವಧಿ ಆ. 31ರವರೆಗೆ ವಿಸ್ತರಣೆ: ಡಿಕೆಶಿ

ಈ ಬಗ್ಗೆ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದ್ದಾರೆ. “ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Income Tax Return: ಹಳೆಯ ತೆರಿಗೆ ಪದ್ದತಿ ಕೊನೆಯಾಗುತ್ತಾ? CBDT ಅಧ್ಯಕ್ಷ ಹೇಳೋದೇನು?

11ನೇ ನ್ಯಾನೋ ತಂತ್ರಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜತೆ ಶುಕ್ರವಾರ ಮಾತನಾಡಿದ ಶಿವಕುಮಾರ್ ಅವರು, “ಈವರೆಗೂ 3 ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವರಿಯಾಗಿ 400 ಕೋಟಿ ತೆರಿಗೆ ಸಂಗ್ರಹವಾಗಿದೆ. ಕೆಲ ಬದಲಾವಣೆ ಮಾಡಿಕೊಳ್ಳಬೇಕು ಮತ್ತು ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿದೆ. ಸರ್ವರ್ ಸಮಸ್ಯೆ ಹಾಗೂ ಮತ್ತೆ ಕೆಲವರು ಚೆಕ್ ನೀಡಿದ್ದು, ಜುಲೈ 31ರವರೆಗೆ ನೀಡಲಾಗಿದ್ದ ಕಾಲಾವಧಿಯನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದರು.

“ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗುವುದು. ಒಂದು ವೇಳೆ ಯಾರಾದರೂ ಹೆಚ್ಚಿಗೆ ಹಣ ಪಾವತಿ ಮಾಡಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ವಜಾಗೊಳಿಸಲಾಗುವುದು. ಈ ವಿಚಾರದಲ್ಲಿ ಅನಗತ್ಯವಾಗಿ ಗಾಬರಿಯಾಗುವುದು ಬೇಡ” ಎಂದು ಹೇಳಿದರು.

ಬೆಂಗಳೂರು ನಗರ ಅಭಿವೃದ್ಧಿಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾರ್ಚ್‌ನಲ್ಲಿ ತೆರಿಗೆ ಸಂಗ್ರಹವನ್ನು ಸುಗಮಗೊಳಿಸಲು ಮತ್ತು ಆದಾಯವನ್ನು ಹೆಚ್ಚಿಸಲು ಹೊಸ ಆಸ್ತಿ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸಿದ್ದರು. ಎಂದಿಗೂ ತೆರಿಗೆ ಪಾವತಿಸದ ಆಸ್ತಿ ಮಾಲೀಕರಿಗೆ ಒಂದು ಬಾರಿ ಪರಿಹಾರದ ಆಯ್ಕೆಯನ್ನು ಅವರು ಈ ಯೋಜನೆಯ ಅಡಿಯಲ್ಲಿ ಘೋಷಿಸಿದ್ದರು.

ಆಸ್ತಿ ಮಾಲೀಕರಿಗೆ ಪರಿಹಾರ ನೀಡಲು ಬೆಂಗಳೂರಿನಲ್ಲಿ ಬಾಕಿ ಉಳಿದಿರುವ ಆಸ್ತಿ ತೆರಿಗೆ ಪಾವತಿ ವಿಂಡೋವನ್ನು ಈ ವರ್ಷ ಏಪ್ರಿಲ್ 30ರಿಂದ ಜುಲೈ 31ರವರೆಗೆ ವಿಸ್ತರಿಸಲಾಗಿತ್ತು. ಜುಲೈ 31 ರೊಳಗೆ ಬಾಕಿ ಪಾವತಿಸಲು ವಿಫಲರಾದವರನ್ನು ಆಗಸ್ಟ್ 1ರಿಂದ ಸುಸ್ತಿದಾರರೆಂದು ಪರಿಗಣಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದರು. ಆದರೆ, ಇದೀಗ ಮತ್ತೊಂದು ತಿಂಗಳು ʼಒನ್‌ ಟೈಮ್‌ ಸೆಟ್ಲ್‌ಮೆಂಟ್‌ ಯೋಜನೆʼ ವಿಸ್ತರಿಸಲಾಗಿದೆ.

ಇದನ್ನೂ ಓದಿ | Tax Saving Tips: 10 ಲಕ್ಷ ರೂ. ಆದಾಯ ಇದ್ದರೂ ತೆರಿಗೆಯಿಂದ ಪಾರಾಗಲು ಸಾಧ್ಯ! ಇಲ್ಲಿದೆ ಸರಳ ಲೆಕ್ಕಾಚಾರ!

ಬೆಂಗಳೂರಿನ (bengaluru) ಎಂಟು ವಲಯಗಳ ಸುಮಾರು 2.88 ಲಕ್ಷ ಆಸ್ತಿಗಳ 548.94 ಕೋಟಿ ರೂ. ಮೊತ್ತದ ಆಸ್ತಿ ತೆರಿಗೆ (Property Tax) ಬಾಕಿ ಪಾವತಿಯಾಗದೆ ಉಳಿದಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತಿಳಿಸಿದೆ.

Continue Reading

ಪ್ರಮುಖ ಸುದ್ದಿ

Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

Governor Versus State: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೆ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಕಾಡಲಿದೆ. ಆಗ ಜನಪ್ರತಿನಿಧಿಗಳ ನ್ಯಾಯಾಲಯ ಇಲ್ಲವೇ ಲೋಕಾಯುಕ್ತ ಕೋರ್ಟ್‌ನಲ್ಲಿ ಕೇಸ್ ದಾಖಲು ಆಗಬಹುದು. ಕೇಸ್ ಅಂಗೀಕರಿಸುವ ಬಗ್ಗೆ ಕೋರ್ಟ್‌ನಲ್ಲಿ ವಾದ ಪ್ರತಿವಾದ ಶುರು ಆಗಬಹುದು.

VISTARANEWS.COM


on

thawar chand gehlot siddaramaiah Governor versus state
Koo

ಬೆಂಗಳೂರು: ಕೇರಳ, ಪಶ್ಚಿಮ ಬಂಗಾಳ, ದಿಲ್ಲಿ ಮುಂತಾದ ರಾಜ್ಯಗಳಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರ ವರ್ಸಸ್‌ ರಾಜ್ಯಪಾಲರು (Governor versus state) ಫೈಟ್‌ ಇದೀಗ ಕರ್ನಾಟಕಕ್ಕೂ (Karnataka) ವಿಸ್ತರಿಸಿದೆ. ಮುಡಾ ಪ್ರಕರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಶೋಕಾಸ್ ನೋಟಿಸ್ (Show cause Notice) ಜಾರಿ ಮಾಡಿರುವ ಪರಿಣಾಮ ಕಾಂಗ್ರೆಸ್‌ ನಾಯಕರು ರೊಚ್ಚಿಗೆದ್ದಿದ್ದು, ರಾಜ್ಯಪಾಲರ ವಿರುದ್ಧ ಕಾನೂನು ಸಂಘರ್ಷಕ್ಕೆ ಇಳಿಯುವ ಸಾಧ್ಯತೆಯನ್ನು ಪರಿಗಣಿಸುತ್ತಿದ್ದಾರೆ.

ಮುಡಾ ಹಗರಣದಲ್ಲಿ ಹೆಸರು ಕೇಳಿಬಂದಿರುವ ನಿಮ್ಮ ಮೇಲೆ ಏಕೆ ಪ್ರಾಸಿಕ್ಯೂಷನ್‌ಗೆ ಯಾಕೆ ಅನುಮತಿ ನೀಡಬಾರದು ಎಂದು ಉತ್ತರ ನೀಡಿ ಎಂದು ರಾಜಭವನದಿಂದ ನೋಟೀಸ್ ಕಳಿಸಲಾಗಿತ್ತು. ರಾಜ್ಯಪಾಲರ ನೋಟೀಸ್‌ಗೆ ಸಚಿವ ಸಂಪುಟ ಅಸಮಾಧಾನ ವ್ಯಕ್ತಪಡಿಸಿದೆ. ಎರಡು ಪ್ರಮುಖ ನಿರ್ಣಯಗಳನ್ನು ಕ್ಯಾಬಿನೆಟ್ ಮಾಡಿದ್ದು, ಅವುಗಳನ್ನು ರಾಜಭವನಕ್ಕೆ ಕಳಿಸಿದೆ. ಒಂದು, ಟಿಜೆ ಅಬ್ರಾಹಂ ನೀಡಿರುವ ದೂರು ವಜಾಗೊಳಿಸಬೇಕು. ಎರಡನೆಯದು, ಶೋಕಾಸ್ ನೋಟಿಸ್ ಹಿಂಪಡೆಯಬೇಕು ಎಂದಿದೆ.

ಸಚಿವ ಸಂಪುಟ ರಾಜ್ಯಪಾಲರಿಗೆ ನೀಡಿರುವ ಪ್ರತ್ಯುತ್ತರ ಇದೀಗ ಯಾವ ಸ್ವರೂಪ ಪಡೆಯಬಹುದು, ರಾಜ್ಯಪಾಲರ ನಡೆ ಏನಿರಬಹುದು ಎಂಬುದು ಕುತೂಹಲ ಮೂಡಿಸಿದೆ. ಸರ್ಕಾರದ ಸಲಹೆಯನ್ನು ರಾಜ್ಯಪಾಲರು ಯಾವ ರೀತಿ ಸ್ವೀಕಾರ ಮಾಡುತ್ತಾರೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡ್ತಾರಾ? ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೆ ಆಡಳಿತ ಪಕ್ಷವೂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಅದು ಸರ್ಕಾರ ವರ್ಸಸ್ ರಾಜ್ಯಪಾಲರ ನಡುವೆ ಸಂಘರ್ಷಕ್ಕೆ ನಾಂದಿ‌ಯಾಗುತ್ತದೆ.

ರಾಜ್ಯಪಾಲರು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿ ಆಧರಿಸಿ ಪ್ರಕರಣದ ಕುರಿತ ವರದಿ ನೀಡುವಂತೆ ಸಿಎಸ್‌ಗೆ ಕೇಳಿದ್ದರು. ರಾಜ್ಯಪಾಲರ ಪತ್ರವನ್ನು ಗಂಭೀರವಾಗಿ ಪರಿಗಣಿಸಿ, ಈ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ ಅವರ ನೇತೃತ್ವದ ಸಮಿತಿ ರಚಿಸಿ ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿತ್ತು.

ಅಬ್ರಾಹಂ ಅವರು ಜುಲೈ 26ರಂದು ದೂರು ನೀಡಿದ್ದರು. ಅದೇ ದಿನ ಮುಖ್ಯ ಕಾರ್ಯದರ್ಶಿಗಳು ರಾಜ್ಯಪಾಲರಿಗೆ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಸಲ್ಲಿಸಿದ್ದರು. ರಾಜ್ಯಪಾಲರು ದೂರು ಹಾಗೂ ಸಿಎಸ್ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸುವ ಮುನ್ನವೇ ಸಿಎಂಗೆ ಶೋಕಾಸ್ ನೋಟೀಸ್ ನೀಡಿದ್ದಾರೆ. ಇಷ್ಟು ತರಾತುರಿಯಲ್ಲಿ ಇಂತಹ ತೀರ್ಮಾನ ಮಾಡುತ್ತಿರುವುದೇಕೆ? ಎಂದು ರಾಜ್ಯಪಾಲರಿಗೆ ಕ್ಯಾಬಿನೆಟ್ ಪ್ರಶ್ನೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ಜೊತೆಗೆ ಹೈಕಮಾಂಡ್ ನಿಂತಿದೆ. ನಿನ್ನೆ ರಾತ್ರಿ ಸಿಎಂ ಕರೆ ಮಾಡಿದ್ದ ರಾಜ್ಯದ ಉಸ್ತುವಾರಿ ವೇಣುಗೋಪಾಲ್‌, ಸಚಿವರ ಸಭೆ ಮತ್ತು ಕ್ಯಾಬಿನೆಟ್ ಸಭೆ ನಿರ್ಣಯದ ಬಗ್ಗೆ ಮಾಹಿತಿ ಪಡೆದಿದ್ದರು. ನಾವು ನಿಮ್ಮ ಜೊತೆಗಿದ್ದೇವೆ. ಇದನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಟ ಮಾಡೋಣ. ಬಿಜೆಪಿ ಪಾದಯಾತ್ರೆಗೆ ಕೌಂಟರ್ ಕೊಡಬೇಕು. ನಾನು ರಾಜ್ಯಕ್ಕೆ ಬರ್ತಿದ್ದೇನೆ. ಎಲ್ಲವೂ ಚರ್ಚೆ ಮಾಡೋಣ ಎಂದಿದ್ದಾರೆ ವೇಣುಗೋಪಾಲ್.

ತನಿಖೆಗೆ ಅನುಮತಿ ಕೊಟ್ಟರೆ ಏನಾಗುತ್ತದೆ?

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೆ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಕಾಡಲಿದೆ. ಆಗ ಜನಪ್ರತಿನಿಧಿಗಳ ನ್ಯಾಯಾಲಯ ಇಲ್ಲವೇ ಲೋಕಾಯುಕ್ತ ಕೋರ್ಟ್‌ನಲ್ಲಿ ಕೇಸ್ ದಾಖಲು ಆಗಬಹುದು. ಕೇಸ್ ಅಂಗೀಕರಿಸುವ ಬಗ್ಗೆ ಕೋರ್ಟ್‌ನಲ್ಲಿ ವಾದ ಪ್ರತಿವಾದ ಶುರು ಆಗಬಹುದು. ಬಳಿಕ ಲೋಕಾಯುಕ್ತ ಕೋರ್ಟ್‌ನಿಂದ ಸಿಎಂಗೆ ನೋಟೀಸ್ ಹೋಗುತ್ತದೆ. ಹೈಕೋರ್ಟ್ ಲೋಕಾಯುಕ್ತ ಕೋರ್ಟ್ ವಿಚಾರಣೆಗೆ ಹೈಕೋರ್ಟ್‌ ತಡೆ ಕೊಟ್ಟರೆ ಸಿಎಂ ಬಚಾವ್ ಆಗಬಹುದು.‌ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲು ಮಾಡಿದರೆ ಎಫ್ಐಆರ್ ತಡೆ ಕೋರಿ ಅರ್ಜಿ ಸಲ್ಲಿಸಬಹುದು. ಅದಕ್ಕೂ ಮೊದಲು ಸಿಎಂ ವಿಚಾರಣೆ ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವುದನ್ನು ಪ್ರಶ್ನೆ ಮಾಡಿ ಹೈಕೋರ್ಟ್ ಮೊರೆ ಹೋಗಬಹುದು.

ಅಧಿಕಾರ ದುರ್ಬಳಕೆ?

ಇದೆಲ್ಲದಕ್ಕೂ ಮೊದಲು ರಾಜ್ಯಪಾಲರು ಸಂವಿಧಾನದತ್ತವಾಗಿ ಸಿಕ್ಕಿರುವ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಸುಪ್ರೀಂ ಕೋರ್ಟ್ ಸಂವಿಧಾನದ ಪೀಠದ ಮುಂದೆ ಸಿಎಂ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕಾನೂನು ತಂಡದ ಜೊತೆಗೆ ಸುದೀರ್ಘವಾಗಿ ಚರ್ಚೆ ಮಾಡುತ್ತಿದ್ದಾರೆ. ಮೊನ್ನೆ ದೆಹಲಿಗೆ ತೆರಳಿದಾಗ ಅಭಿಷೇಕ್ ಮನು‌ ಸಿಂಗ್ವಿ ಜತೆ ಚರ್ಚೆ ಮಾಡಿದ್ದು, ಕಾನೂನು ಹೋರಾಟಕ್ಕೂ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: MUDA Scam: ಸಿಎಂಗೆ ಕಳಿಸಿದ ರಾಜ್ಯಪಾಲರ ನೋಟೀಸ್‌ ತಿರಸ್ಕರಿಸಿದ ಕ್ಯಾಬಿನೆಟ್‌, ಕಾನೂನು ಹೋರಾಟಕ್ಕೆ ನಿರ್ಣಯ

Continue Reading

ಕರ್ನಾಟಕ

BJP-JDS Padayatra: ಮೈಸೂರು ಚಲೋಗೆ ಸರ್ಕಾರ ಅನುಮತಿ; ನಾಳೆ ಬೆಳಗ್ಗೆ ಚಾಲನೆ, ಪಾದಯಾತ್ರೆ ಮಾರ್ಗದ ವಿವರ ಇಲ್ಲಿದೆ

BJP-JDS Padayatra: ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ಶನಿವಾರ ಬೆಳಗ್ಗೆ 9.30ಕ್ಕೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಚಾಲನೆ ನೀಡಲಾಗುತ್ತದೆ.

VISTARANEWS.COM


on

BJP-JDS Padayatra
Koo

ಬೆಂಗಳೂರು: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. “ಭ್ರಷ್ಟ ಕಾಂಗ್ರೆಸ್ ತೊಲಗಿಸಿ” ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ಶನಿವಾರ ಬೆಳಗ್ಗೆ 9.30ಕ್ಕೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಚಾಲನೆ ನೀಡಲಾಗುತ್ತದೆ. ಏಳು ದಿನಗಳ ಪಾದಯಾತ್ರೆ ಸಾಗುವ ಮಾರ್ಗದ ವಿವರವನ್ನು ಇಲ್ಲಿ ನೀಡಲಾಗಿದೆ.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವರಾದ ಎಚ್‌.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಅವರು ಚಾಲನೆ ನೀಡಲಿದ್ದಾರೆ. ಒಟ್ಟು 124 ಕಿ.ಮೀ ಪಾದಯಾತ್ರೆ ಸಾಗಲಿದ್ದು, ಸಮಾರೋಪ ಸಮಾರಂಭ ಸೇರಿ ಒಟ್ಟು ಎಂಟು ದಿನಗಳ ಕಾರ್ಯಕ್ರಮದ ಮಾಹಿತಿ ಇಲ್ಲಿದೆ.

ಪಾದಯಾತ್ರೆ ಸಾಗುವ ವಿವರ

  • ಆ.3- ಕೆಂಗೇರಿಯಿಂದ ಹೊರಟು ಬಿಡದಿಯಲ್ಲಿ ವಾಸ್ತವ್ಯ
  • ಆ.4- ಬಿಡದಿಯಿಂದ ಹೊರಟು ಕೆಂಗಲ್‌ನಲ್ಲಿ ಹಾಲ್ಟ್
  • ಆ.5- ಕೆಂಗಲ್ ನಿಂದ ಹೊರಟು ನಿಡಘಟ್ಟದಲ್ಲಿ ವಾಸ್ತವ್ಯ
  • ಆ.6- ನಿಡಘಟ್ಟದಿಂದ ಹೊರಟು ಮಂಡ್ಯ
  • ಆ.7- ಮಂಡ್ಯದಿಂದ ಹೊರಟು ತೂಬಿನಕೆರೆಯಲ್ಲಿ ವಾಸ್ತವ್ಯ
  • ಆ.8- ತೂಬಿನ ಕೆರೆಯಿಂದ ಹೊರಟು ಶ್ರೀರಂಗಪಟ್ಟಣದಲ್ಲಿ ಹಾಲ್ಟ್
  • ಆ.9- ಶ್ರೀರಂಗಪಟ್ಟಣದಿಂದ ಹೊರಟು ಮೈಸೂರು ಹೊರವಲಯದಲ್ಲಿ ವಾಸ್ತವ್ಯ
  • ಆ.10- ಮೈಸೂರು ಹೊರವಲಯದಿಂದ ಕೇಂದ್ರ ನಾಯಕರ ಜತೆ ಪಾದಯಾತ್ರೆ ಹೊರಟು ಸಮಾರೋಪ ಸಮಾರಂಭದ ವೇದಿಕೆ ತಲುಪುವುದು.

ಶಾಂತಿಯುತವಾಗಿ ಪಾದಯಾತ್ರೆ ನಡೆಸಲು ಅನುಮತಿ: ಪರಮೇಶ್ವರ್

ಬೆಂಗಳೂರು: ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಅವರು ಪಾದಯಾತ್ರೆ ನಡೆಸುತ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ಕೊಡಲು ನಾವು ನಿರ್ಧರಿಸಿದ್ದೇವೆ ಎಂಧೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಇದನ್ನೂ ಓದಿ | Rakshit Shetty: ಯಶವಂತಪುರ ಪೊಲೀಸರ ಮುಂದೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ, ಕಾಪಿರೈಟ್‌ ಉಲ್ಲಂಘನೆ ವಿಚಾರಣೆ

ನಗರದಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದ ಕಮಿಷನರ್

ನಾಳೆ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಹಿನ್ನೆಲೆ‌ ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯಿಸಿ, ಎಲ್ಲಿಂದ ಯಾವ ರೀತಿ ಪಾದಯಾತ್ರೆ ಮಾಡುತ್ತಾರೋ ಅಂತ ಇನ್ನೂ ಗೊತ್ತಿಲ್ಲ. ನಗರದಲ್ಲಿ ಪ್ರತಿಭಟನೆ, ರ‍್ಯಾಲಿ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರು ಬಂದು ಇದುವರೆಗೂ ಅನುಮತಿ ಕೇಳಿಲ್ಲ. ಪ್ರತಿಭಟನೆಗೆ ಬೆಂಗಳೂರಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿ ಮುನಿಸು ಶಮನ, ಬಿಜೆಪಿ, ಜೆಡಿಎಸ್‌ ಒಗ್ಗೂಡಿ ಪಾದಯಾತ್ರೆ

ನವದೆಹಲಿ/ಬೆಂಗಳೂರು: ಮುಡಾ ಹಗರಣ ಸೇರಿ ಹಲವು ಭ್ರಷ್ಟಾಚಾರ ಆರೋಪ ಹೊತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೈಗೊಳ್ಳಲು ತೀರ್ಮಾನಿಸಿರುವ ಪಾದಯಾತ್ರೆಗೆ (BJP Padayatra) ಸಹಕಾರ ನೀಡುವುದಿಲ್ಲ ಎಂದು ಬಂಡಾಯದ ಬಾವುಟ ಹಾರಿಸಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರ ಮುನಿಸು ಈಗ ಶಮನವಾಗಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವರು ಮಾತುಕತೆ ನಡೆಸಿದ್ದು, “ಬಿಜೆಪಿ ಹಾಗೂ ಜೆಡಿಎಸ್‌ ಒಗ್ಗೂಡಿ ಶನಿವಾರದಿಂದ (ಆಗಸ್ಟ್‌ 3) ಪಾದಯಾತ್ರೆ ಆರಂಭಿಸಲಾಗುತ್ತದೆ” ಎಂದು ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | DK Shivakumar: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರಶ್ನೆಗಳ ಸವಾಲು, ಹೆಜ್ಜೆಗೆ ಒಂದು ಪ್ರಶ್ನೆ ಎಂದ ಡಿಕೆಶಿ

ದೆಹಲಿಯಲ್ಲಿ ಪ್ರಲ್ಹಾದ್‌ ಜೋಶಿ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದರು. “ಶನಿವಾರದಿಂದ ನಮ್ಮ ಪಾದಯಾತ್ರೆ ಪ್ರಾರಂಭ ಆಗಲಿದೆ. ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ. ಮೂಡಾ ಹಾಗೂ ವಾಲ್ಮೀಕಿ ಹಗರಣಗಳು ಇದಕ್ಕೆ ಜ್ವಲoತ ಉದಾಹರಣೆಗಳಾಗಿವೆ. ಕಾಂಗ್ರೆಸ್‌ನವರು ಕೂಡ ಮೂಡಾ ಹಗರಣದ ಬಗ್ಗೆ ಮಾತನಾಡುತ್ತಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಒಟ್ಟಿಗೆ ಪಾದಯಾತ್ರೆ ಕೈಗೊಳ್ಳುತ್ತವೆ. ಕುಮಾರಸ್ವಾಮಿ ಅವರ ಜತೆ ಇದ್ದ ಸಣ್ಣ ಕಮ್ಯುನಿಕೇಷನ್ ಗ್ಯಾಪ್ ಸರಿ ಆಗಿದೆ. ನಾವು ಕುಮಾರಸ್ವಾಮಿ ಅವರ ಹತ್ತಿರ ಮಾತಾಡಿದ್ದೇವೆ. 7 ದಿನಗಳ ಪಾದಯಾತ್ರೆ ಪೂರ್ಣಗೊಳ್ಳಲಿದೆ” ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದರು.

Continue Reading

ಸಿನಿಮಾ

Rakshit Shetty: ಯಶವಂತಪುರ ಪೊಲೀಸರ ಮುಂದೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ, ಕಾಪಿರೈಟ್‌ ಉಲ್ಲಂಘನೆ ವಿಚಾರಣೆ

Rakshit Shetty: ನಟ ರಕ್ಷಿತ್ ಶೆಟ್ಟಿ ಹಾಗೂ ಅವರ ಒಡೆತನದ ಪರಂವಹ ಸ್ಟುಡಿಯೋ ಮೇಲೆ ಎಫ್ಐಆರ್ ದಾಖಲಾಗಿತ್ತು. ʼಬ್ಯಾಚುಲರ್ ಪಾರ್ಟಿʼ ಸಿನಿಮಾದಲ್ಲಿ ʼಗಾಳಿಮಾತುʼ ಹಾಗು ʼನ್ಯಾಯ ಎಲ್ಲಿದೆʼ ಎಂಬ ಸಿನಿಮಾದ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಿಕೊಂಡ ಆರೋಪ ಅವರ ಮೇಲಿದೆ.

VISTARANEWS.COM


on

Koo

ಬೆಂಗಳೂರು: ಹಾಡುಗಳ ಕಾಪಿರೈಟ್ ಉಲ್ಲಂಘನೆ (Copy Right Violation) ಆರೋಪದಲ್ಲಿ ನಟ, ಸಿಂಪಲ್‌ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ವಿರುದ್ಧ ದಾಖಲಾಗಿದ್ದ ಎಫ್ಐಆರ್ (FIR) ಪ್ರಕರಣಕ್ಕೆ ಸಂಬಂಧಿಸಿ, ಯಶವಂತಪುರ ಪೊಲೀಸರ ಎದುರು ವಿಚಾರಣೆಗೆ ನಟ ರಕ್ಷಿತ್ ಶೆಟ್ಟಿ ಹಾಜರಾಗಿದ್ದಾರೆ.

ನಟ ರಕ್ಷಿತ್ ಶೆಟ್ಟಿ ಹಾಗೂ ಅವರ ಒಡೆತನದ ಪರಂವಹ ಸ್ಟುಡಿಯೋ ಮೇಲೆ ಎಫ್ಐಆರ್ ದಾಖಲಾಗಿತ್ತು. ʼಬ್ಯಾಚುಲರ್ ಪಾರ್ಟಿʼ ಸಿನಿಮಾದಲ್ಲಿ ʼಗಾಳಿಮಾತುʼ ಹಾಗು ʼನ್ಯಾಯ ಎಲ್ಲಿದೆʼ ಎಂಬ ಸಿನಿಮಾದ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಿಕೊಂಡ ಆರೋಪ ಅವರ ಮೇಲಿದೆ. ʼನ್ಯಾಯ ಎಲ್ಲಿದೆʼ ಟೈಟಲ್ ಸಾಂಗ್ ಮತ್ತು ʼಒಮ್ಮೆ ನಿನ್ನನ್ನೂ ಕಣ್ತುಂಬ ನೋಡುವಾಸೆʼ ಎಂಬ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ನವೀನ್ ಎಂಬವರು ದೂರು ಸಲ್ಲಿಸಿದ್ದರು.

ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಎರಡು ಹಾಡು ಅನುಮತಿಯಿಲ್ಲದೆ ಬಳಕೆ ಮಾಡಿಕೊಂಡ ಆರೋಪದ ಬಗ್ಗೆ ಪೊಲೀಸರು ಪ್ರಶ್ನಿಸಿದ್ದಾರೆ. ಸಿನಿಮಾ ತೆರೆ ಕಾಣುವುದಕ್ಕೂ ಮುನ್ನ MRT ಸಂಸ್ಥೆಯ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ರಕ್ಷಿತ್‌ ಉತ್ತರ ನೀಡಿದ್ದಾರೆ. ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ನಾವು ಹಾಡು ಬಳಕೆ ಮಾಡುವ ಕುರಿತು ಮಾತುಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ ನಮ್ಮ ಬಡ್ಜೆಟ್ ಅನ್ನು ಮೀರಿತ್ತು. ಎಂಆರ್‌ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರು ಮಾತುಕತೆಗೆ ತಯಾರಿರರಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಮಾಡಿದ್ದಾರೆ ಎಂದು ಉತ್ತರಿಸಿರುವ ರಕ್ಷಿತ್‌ ಶೆಟ್ಟಿ, ಚಿತ್ರದಲ್ಲಿ ಬಳಕೆಯಾಗಿರುವ ಹಾಡಿನ ತುಣುಕುಗಳನ್ನು ತೋರಿಸಿದ್ದಾರೆ. ಚಿತ್ರದಲ್ಲಿ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಜನವರಿ 26 ರಂದು ರಿಲೀಸ್‌ ಆಗಿತ್ತು. ಕಾಮಿಡಿ ಜಾನರ್‌ನ ಈ ಸಿನಿಮಾದಲ್ಲಿ ನಟ ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತ್ ಕುಮಾ‌ರ್, ನಟಿ ಸಿರಿ ರವಿಕುಮಾರ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಕಿರಿಕ್ ಪಾರ್ಟಿ’ ಚಿತ್ರದ ಬರಹಗಾರ ಅಭಿಜಿತ್ ಮಹೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದರು. ಕಿರಿಕ್‌ ಪಾರ್ಟಿಯ ಬರಹಗಾರರಲ್ಲಿ ಅಭಿಜಿತ್ ಮಹೇಶ್ ಕೂಡ ಒಬ್ಬರು. ಈ ಚಿತ್ರದ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗಿ ಬೆಳ್ಳಿ ಪರದೆಗೆ ಕಾಲಿಟ್ಟಿದ್ದರು. ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದು, ಅರವಿಂದ್ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿತ್ತು.

ಈ ಮುಂಚೆ ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಬಳಕೆಯಾದ ಒಂದು ಹಾಡಿನ ವಿರುದ್ಧ ಲಹರಿ ಮ್ಯೂಸಿಕ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿತ್ತು. ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಕಾಪಿರೈಟ್ ನಿಯಮ ಉಲ್ಲಂಘಿಸಿ ತಮ್ಮ ಸಂಸ್ಥೆಯ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ, ಅನುಮತಿ ಇಲ್ಲದೆ ಹಾಡು ಬಳಸಲಾಗಿದೆ ಎಂದು ಆರೋಪಿಸಿ ಲಹರಿ ಸಂಸ್ಥೆ ಕೇಸ್ ಹಾಕಿತ್ತು.

ಇದನ್ನೂ ಓದಿ | Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

Continue Reading
Advertisement
Model Monsoon Fashion
ಲೈಫ್‌ಸ್ಟೈಲ್12 mins ago

Model Monsoon Fashion: ಮಾನ್ಸೂನ್‌ ಫ್ಯಾಷನ್‌ನಲ್ಲಿ ಮಾಡೆಲ್‌ ಸನ್ನಿಧಿಯ ಸಿಂಪಲ್‌ ಲುಕ್ಸ್!

Ismail Haniyeh Killing
ವಿದೇಶ21 mins ago

Ismail Haniyh Killing: ಇಸ್ಮಾಯಿಲ್‌ ಹನಿಯೆಹ್‌ ಹತ್ಯೆಗೆ ನಡೆದಿತ್ತಾ ಮಾಸ್ಟರ್‌ ಪ್ಲ್ಯಾನ್? ತಿಂಗಳ ಹಿಂದೆಯೇ ಗೆಸ್ಟ್‌ಹೌಸ್‌ನಲ್ಲಿ‌ ಇಡಲಾಗಿತ್ತಾ ಬಾಂಬ್‌?

Paris Olympics
ಕ್ರೀಡೆ25 mins ago

Paris Olympics: ಆರ್ಚರಿ ಪ್ರೀ ಕ್ವಾರ್ಟರ್‌ನಲ್ಲಿ ನಾಳೆ ಭಾರತದ ದೀಪಿಕಾ ಕುಮಾರಿ-ಭಜನ್ ಕೌರ್ ಕಣಕ್ಕೆ

BBMP Property Tax
ಪ್ರಮುಖ ಸುದ್ದಿ1 hour ago

BBMP Property Tax: ಆಸ್ತಿ ತೆರಿಗೆ ಒನ್‌ ಟೈಮ್‌ ಸೆಟ್ಲ್‌ಮೆಂಟ್‌ಗೆ ಮತ್ತೆ 1 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಿದ ಬಿಬಿಎಂಪಿ

Love Case
ಬಳ್ಳಾರಿ1 hour ago

Love case : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

thawar chand gehlot siddaramaiah Governor versus state
ಪ್ರಮುಖ ಸುದ್ದಿ2 hours ago

Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

Viral Video
Latest2 hours ago

Viral Video: ಥೋ! ಈ ಮುದುಕರಿಗೆ ಈ ವಯಸ್ಸಲ್ಲಿ ಏನೆಲ್ಲ ಚಪಲ ನೋಡಿ! ಹಿಂದೆಂದೂ ಕಂಡಿರದಂಥ ವಿಡಿಯೊ!

Paris Olympics
ಕ್ರೀಡೆ2 hours ago

Paris Olympics: ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ

intel layoffs
ವಿದೇಶ2 hours ago

Intel Layoffs: ಆರ್ಥಿಕ ಬಿಕ್ಕಟ್ಟು- ಇಂಟೆಲ್‌ ಕಂಪನಿಯಿಂದ 18,000 ಉದ್ಯೋಗಿಗಳು ವಜಾ

Sexual Abuse
Latest2 hours ago

Sexual Abuse: ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಮಗು ಜನನ! ಆಘಾತಗೊಂಡು ಅಲ್ಲೇ ಕೂತಿದ್ದ ಬಾಲಕಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌