Kora Clothing Store: ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಕೊರಾದ 18ನೇ ಮಳಿಗೆ ಆರಂಭ Vistara News
Connect with us

ಬೆಂಗಳೂರು

Kora Clothing Store: ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಕೊರಾದ 18ನೇ ಮಳಿಗೆ ಆರಂಭ

VISTARANEWS.COM


on

Kora shop
Koo

ಬೆಂಗಳೂರು: ನೀಲೇಶ್ ಛಡ್ವಾ ಮತ್ತು ಮಿತೇಶ್ ಸುಂಬದ್ ಮಾಲೀಕತ್ವದ ಕೊರಾ ಸಂಸ್ಥೆಯ 18ನೇ ಮಳಿಗೆ ನಗರದಲ್ಲಿ ಅದ್ಧೂರಿಯಾಗಿ ಭಾನುವಾರ ಆರಂಭವಾಗಿದೆ. ಸಂಪ್ರದಾಯ ಮತ್ತು ಆಧುನಿಕತೆಯ ಸಂಯೋಜನೆಯಾದ ಕೊರಾ ಬೈ ನೀಲೇಶ್ ಮಿತೇಶ್ ಮಳಿಗೆಯನ್ನು (Kora Clothing Store) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು.

ಕೊರಾ ಬೈ ನಿತೇಶ್‌ನ ನಿರ್ದೇಶಕ ಮಿತೇಶ್ ಸುಂಬದ್ ಪ್ರತಿಕ್ರಿಯಿಸಿ, ಕೊರಾ ಬೈ ಎನ್ಎಂ ವಿಶೇಷ ವಿನ್ಯಾಸಗಳನ್ನು ಮಾತ್ರ ಸೃಷ್ಟಿಸುತ್ತಿಲ್ಲ, ಇದು ಉಡುಪಿನ ಮೂಲಕ ಜನರ ಭಾವನೆಗಳನ್ನು ವಿನ್ಯಾಸಗೊಳಿಸುವುದು ಮತ್ತು ನಮ್ಮ ಉದ್ಯಮದ ಒಟ್ಟಾರೆ ಪ್ರಗತಿಯನ್ನು ಉತ್ತೇಜಿಸುವುದಾಗಿದೆ ಎಂದು ತಿಳಿಸಿದರು.

ನೀಲೇಶ್ ಛಡ್ವಾ ಅವರು ಮಾತನಾಡಿ, ನಮ್ಮ ಗ್ರಾಹಕರಿಗೆ ಕೊರಾ ಉಡುಪುಗಳನ್ನು ಧರಿಸಿದಾಗ ಐಷಾರಾಮಿಯ ಅನುಭವ ನೀಡುತ್ತದೆ. ನಮ್ಮ ಉತ್ಪನ್ನಗಳ ಬಗ್ಗೆ ಗ್ರಾಹಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳಿದರು.

ಅತ್ಯುತ್ತಮ ಸಾಂಪ್ರದಾಯಿಕ ಉಡುಪುಗಳ ಕೇಂದ್ರ

ನೀಲೇಶ್ ಮತ್ತು ಮಿತೇಶ್ ಅವರು 2011ರಲ್ಲಿ ಕೊರಾ ಕಂಪನಿಯನ್ನು ಪ್ರಾರಂಭಿಸಿದರು. ಇದು ಪುರುಷರು ಮತ್ತು ಬಾಲಕರಿಗೆ ಒನ್-ಸ್ಟಾಪ್ –ಶಾಪ್ ಆಗಿದ್ದು, ಅತ್ಯುತ್ತಮ ಸಾಂಪ್ರದಾಯಿಕ ಉಡುಪುಗಳ ಕೇಂದ್ರವಾಗಿದೆ. ಖ್ಯಾತ ವಿನ್ಯಾಸಕರು, ಮಾಸ್ಟರ್‌ಗಳು ಮತ್ತು ಕರಕುಶಲಿಗರ ತಂಡವನ್ನು ಹೊಂದಿರುವ ಕೊರಾ, ವರ್ಷದಿಂದ ವರ್ಷಕ್ಕೆ ವಿಸ್ತರಿಸುತ್ತಿದೆ. ಮುಂಬೈನಲ್ಲಿ ಸಿಟಿ ಆಫ್ ಡ್ರೀಮ್ಸ್ (ಬೊರಿವಿಲಿ, ಸಾಂತಾ ಕ್ರೂಜ್ ಮತ್ತು ಹ್ಯೂಸ್ ರೋಡ್), ದುಬೈನ ಇಂಟರ್ ನ್ಯಾಷನಲ್ ಫ್ಯಾಷನ್ ಹಬ್ (ಮೀನಾ ಬಜಾರ್)ನಲ್ಲಿ ಕೊರಾ ಮಳಿಗೆಗಳಿವೆ.

ಇದನ್ನೂ ಓದಿ | Festival Nail Art: ಹಬ್ಬದ ಸೀಸನ್‌ಗೆ ಬಂದಿದೆ ಪ್ರೆಸ್ ಆನ್ ನೇಲ್ ಆರ್ಟ್ ಗಣೇಶ

ಈ ಬ್ರಾಂಡ್ ಫ್ಯಾಷನ್ ಆಸಕ್ತಿಯ ಪುರುಷರಿಗೆ ಗುಣಮಟ್ಟದ ಸಾಂಪ್ರದಾಯಿಕ ಉಡುಪುಗಳನ್ನು ಒದಗಿಸುತ್ತದೆ. ಕೊರಾ ಬೈ ನೀಲೇಶ್ ಮಿತೇಶ್‌ನ ಹೊಸ ಮಳಿಗೆಯಲ್ಲಿ ವಿಸ್ತಾರ ಶ್ರೇಣಿಯ ಉಡುಪು ಸಂಗ್ರಹವಿದ್ದು, ಪುರುಷರು ಮತ್ತು ಬಾಲಕರ ಕೊರಾ ಬ್ರ್ಯಾಂಡ್‌ನ ಶೇರ್ವಾನಿ, ಬಂದ್ ಗಾಲಾ, ಕುರ್ತಾ ಮತ್ತು ಟಕ್ಸೆಡೊಗಳಿಗೆ ಭಾರಿ ಬೇಡಿಕೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?

Bangalore Bandh: ಕಾವೇರಿ ನೀರು ಬಿಡುಗಡೆ ವಿರುದ್ಧ ಪ್ರತಿಭಟನೆ ನಡೆಸಿದ ಹೋರಾಟಗಾರರು ಮತ್ತು ನಾಯಕರನ್ನು ಬಂಧಿಸಿದ್ದನ್ನು ಮಾಜಿ ಸಿಎಂ ಕುಮಾರಸ್ವಾಮಿ ಖಂಡಿಸಿದ್ದಾರೆ. ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ ಎಂದು ಕೇಳಿದ್ದಾರೆ.

VISTARANEWS.COM


on

Edited by

HD Kumaraswamy Bandh
ಹೋರಾಟಗಾರರನ್ನು ಬಂಧಿಸಿದ್ದಕ್ಕೆ ಕುಮಾರಸ್ವಾಮಿ ಆಕ್ರೋಶ
Koo

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರುದ್ಧ (Cauvery Water Dispute) ಬೆಂಗಳೂರು ಬಂದ್‌ಗೆ (Bangalore Bandh) ಕರೆ ನೀಡಿದವರು ಮತ್ತು ಬೆಂಬಲ ನೀಡಿದ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸುತ್ತಿರುವ (Protesters and Leaders deatained) ಸರ್ಕಾರದ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಕೆಂಡಾಮಂಡಲರಾಗಿದ್ದಾರೆ.

ಮೇಕೆದಾಟು ಪಾದಯಾತ್ರೆ ಮಾಡಿದವರು ಈಗ ಕಾವೇರಿಗಾಗಿ ಬೀದಿಗಿಳಿದು ಹೋರಾಟ ಮಾಡುತ್ತಿರುವುದು ಕಿಡಿಗೇಡಿತನದ ಪರಮಾವಧಿ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಇದು ಕನ್ನಡಿಗರ ಸರ್ಕಾರವೋ, ಸ್ಟಾಲಿನ್‌ನ ಬಾಡಿಗೆ ಸರ್ಕಾರವೋ? ಕಾಂಗ್ರೆಸ್‌ ಡಿಎಂಕೆಯ ಬಿ ಟೀಮಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಬೆಂಗಳೂರು_ಬಂದ್‌ ಕಾವೇರಿ_ನಮ್ಮದು ಎಂಬ ಹ್ಯಾಷ್‌ ಟ್ಯಾಗ್‌ನಲ್ಲಿ ಅವರು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಒಂದು ನ್ಯಾಯವೇ

ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕರ್ನಾಟಕದ ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?- ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ಮಾಡಬಾರದೇ?

ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?

ಇದನ್ನೂ ಓದಿ: Bangalore Bandh : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್‌ ಬಂದ್‌ ಬಿಸಿ, ಬೇಕಿತ್ತಾ ಎರಡೆರಡು ಬಂದ್‌?

ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಿ ಎಂದ ಎಚ್‌ಡಿಕೆ

ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Bangalore Bandh : ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಪ್ರತಿಭಟನೆ: ಕುರುಬೂರು ಶಾಂತ ಕುಮಾರ್‌ ಪೊಲೀಸ್‌ ವಶಕ್ಕೆ

ರಾತ್ರೋರಾತ್ರಿ 150ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಹಿಂದೆ ಬಂದ್‌ ವೇಳೆ ಗಲಾಟೆಗೆ ಕಾರಣರಾಗಿದ್ದ ಕೆಲವು ನಾಯಕರು ಮತ್ತು ರೌಡಿ ಶೀಟರ್‌ಗಳನ್ನು ಪೊಲೀಸರು ಬಂಧಿಸಿದ್ದರು.

ʻʻಹಳೆ ಪ್ರಕರಣಗಳಲ್ಲಿ ಇನ್ವಾಲ್ ಆಗಿದ್ದ ರೌಡಿಶೀಟರ್‌ಗಳನ್ನು ಕಸ್ಟಡಿಗೆ ತಗೊಂಡಿದ್ದೇವೆ. ನಿನ್ನೆ ರಾತ್ರಿನೇ ಹಳೆ ಕೇಸ್ ಗಳಲ್ಲಿ ಭಾಗಿಯಾಗಿದ್ದ 150 ಜನರನ್ನ ವಶಕ್ಕೆ ಪಡೆದಿದ್ದೇವೆ. ಅದು ಇವತ್ತು ತುಂಬಾನೇ ಹೆಲ್ಪ್ ಆಗಿದೆ. ಬೆಳಗ್ಗೆ 4 ಘಂಟೆಯಿಂದಲೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಒಂದಷ್ಟು ಲೀಡರ್‌ಗಳನ್ನು ವಶಕ್ಕೆ ಪಡೆದಿದ್ದೇವೆ. ಎಲ್ಲಾ ರೀತಿಯ ಭದ್ರತೆ ವಹಿಸಿದ್ದೇವೆʼʼ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಜಲಸಂರಕ್ಷಣಾ ಸಮಿತಿಯ ಕುರುಬೂರು ಶಾಂತ ಕುಮಾರ್‌ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಎಲ್ಲ ನಾಯಕರನ್ನು ಫ್ರೀಡಂ ಪಾರ್ಕ್‌ಗೆ ತಂದು ಬಿಡಲಾಗುತ್ತಿದ್ದು, ಅಲ್ಲಿಂದ ಹೊರಗೆ ಹೋಗಲು ಬಿಡುತ್ತಿಲ್ಲ.

Continue Reading

ಕರ್ನಾಟಕ

Bangalore Bandh: ತಮಿಳುನಾಡು ಬಸ್‌ಗಳು ಗಡಿ ಭಾಗದಿಂದಲೇ ವಾಪಸ್‌, ಬಾಯ್‌ ಬಾಯ್‌ ಎಂದ ಕಂಡಕ್ಟರ್

Bangalore Bandh: ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ತಮಿಳುನಾಡಿನಿಂದ ಬರುವ ಬಸ್‌ಗಳು ಗಡಿಭಾಗದಿಂದಲೇ ಮರಳುತ್ತಿವೆ. ಯಾವುದೇ ಸಮಸ್ಯೆ ಬೇಡ ಎಂದು ಮುನ್ನೆಚ್ಚರಿಕೆ ವಹಿಸುತ್ತಿವೆ.

VISTARANEWS.COM


on

Edited by

Bangalore bandh Attibele border
ತಮಿಳುನಾಡು-ಕರ್ನಾಟಕ ಗಡಿಭಾಗವಾದ ಅತ್ತಿಬೆಲೆಯಲ್ಲಿ ಭದ್ರತೆ
Koo

ಆನೇಕಲ್‌ ಬೆಂಗಳೂರು: ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು (Cauvery water Dispute) ಎಂದು ಆಗ್ರಹಿಸಿ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ (Bangalore bandh) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ, ತಮಿಳುನಾಡಿನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಸ್‌ಗಳು (Tamilnadu-Bangalore bus) ಗಡಿ ಭಾಗದಿಂದಲೇ ಹಿಂದಕ್ಕೆ ಮರಳುತ್ತಿವೆ (Buses returning from border).

ತಮಿಳುನಾಡು-ಕರ್ನಾಟಕ ಗಡಿಭಾಗವಾದ ಅತ್ತಿಬೆಲೆಯಲ್ಲಿ (Attibele Border) ಭಾರಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡು ಕಡೆಯಿಂದ ಬರುತ್ತಿರುವ ಬಸ್‌ಗಳು ಅತ್ತಿ ಬೆಲೆಯ ಗಡಿ ಭಾಗದಿಂದಲೆ ವಾಪಸ್‌ ತೆರಳುತ್ತಿವೆ. ಹೀಗೆ ತಿರುಗಿಸಿಕೊಂಡು ಹೋಗುವಾಗ ತಮಿಳುನಾಡು ಬಸ್ಸಿನ ಕಂಡಕ್ಟರ್‌ ಅವರು ಒಬ್ಬರು ಕರ್ನಾಟಕದವರ ಕಡೆಗೆ ಕೈ ಬೀಸಿ ಬಾಯ್‌ ಬಾಯ್‌ ಎನ್ನುತ್ತಲೇ ಶುಭ ಹಾರೈಸಿದ್ದು ಕಂಡುಬಂತು.

Bangalore bandh attibele border bus conductor wishing
ತಮಿಳುನಾಡಿಗೆ ಟರ್ನ್‌ ತೆಗೆದುಕೊಳ್ಳುತ್ತಿರುವ ಬಸ್‌ ಬಾಯ್‌ ಎನ್ನುತ್ತಿರುವ ಕಂಡಕ್ಟರ್‌

ತಮಿಳುನಾಡಿನಿಂದ ಬರುವ ಬಸ್ ಗಳು ಗಡಿಭಾಗದವರೆಗೆ ಪ್ರಯಾಣಿಕರನ್ನ ಬಿಟ್ಟು ಅಲ್ಲಿಂದ ವಾಪಸ್ ಆದರೆ, ಇತ್ತ ಅತ್ತಿಬೆಲೆಯಿಂದ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರು ಬೆಂಗಳೂರಿನತ್ತ ಬರುತ್ತಿದ್ದಾರೆ.

ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳು ಸಹ ಅತ್ತಿಬೆಲೆ ಗಡಿಭಾಗದವರೆಗೆ ಮಾತ್ರ ಸಂಚಾರ ಮಾಡುತ್ತಿವೆ. ಅಲ್ಲಿಂದ ಆಚೆಗೆ ತಮಿಳುನಾಡಿನ ಬಸ್‌ಗಳನ್ನೇ ಆಶ್ರಯಿಸುತ್ತಿದ್ದಾರೆ.

ಇದನ್ನೂ ಓದಿ : Bangalore Bandh : ಬೆಂಗಳೂರಿನ ಈ ಭಾಗದಲ್ಲಿ ಪ್ರತಿಭಟನೆ ಜೋರು, ಆ ಕಡೆ ಹೋಗುವಾಗ ಹುಷಾರು

ಹೇಗೆ ನಡೆಯುತ್ತಿದೆ ಬೆಂಗಳೂರು ಬಂದ್‌?

ಕಾವರಿ ನೀರಿನ ವಿಚಾರದಲ್ಲಿ (Cauvery protest) ಕನ್ನಡಿಗರಿಗೆ ಆಗಿರುವ ಅನ್ಯಾಯ ಹಾಗೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದ್ದು, ಬೆಂಗಳೂರು ಬಂದ್‌ (Bangalore Bandh) ಇಂದು ಮುಂಜಾನೆಯಿಂದ ಆರಂಭವಾಗಿದೆ.

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮತ್ತು ಇತರ ಸಂಘಟನೆಗಳು ಇಂದು (ಸೆ.26) ಬೆಂಗಳೂರು ಬಂದ್ (Bangalore Bandh) ಆಚರಿಸುತ್ತಿದೆ. ಈ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಿಜೆಪಿ ಹಾಗೂ ಜೆಡಿಎಸ್‌ ಬಂದ್‌ಗೆ ಬೆಂಬಲ ಸೂಚಿಸಿರುವುದರಿಂದ ಪ್ರತಿಭಟನೆಯ ಕಾವು ಜೋರಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಬಂದ್ ಆಚರಿಸಲಾಗುತ್ತಿದ್ದು, ಸಂಜೆ 6 ಗಂಟೆಯವರೆಗೂ ಬಂದ್ ಮುಂದುವರಿಯಲಿದೆ.

ಮೆಟ್ರೋ ಎಂದಿನಂತೆ ಕಾರ್ಯಾಚರಿಸಿತು. ಮೆಟ್ರೋದ ಎಲ್ಲ ಲೈನ್‌ಗಳೂ ಪೂರ್ಣವಾಗಿ ಕಾರ್ಯಾಚರಿಸಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು. ಬಸ್‌ಗಳು ಎಂದಿನಂತೆ ಸಂಚಾರಕ್ಕೆ ಸಿದ್ಧಚಾಗಿದ್ದರೂ ಜನ ಬೀದಿಗಿಳಿಯಲಿಲ್ಲ. ಸದ್ಯ ಬಸ್‌ಗಳ ಸಂಖ್ಯೆ ಇಳಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇವನಹಳ್ಳಿ ವಿಮಾನ ನಿಲ್ದಾಣ

ಅತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನಸಂದಣಿ ತುಂಬಿ ತುಳುಕಿತು. ಮಧ್ಯಾಹ್ನ ಹಾಗೂ ಸಂಜೆ ವಿಮಾನ ಪ್ರಯಾಣದ ಸಮಯ ಹೊಂದಿದ್ದವರು ಕೂಡ, ಬಂದ್‌ ಜೋರಾದರೆ ಎಂಬ ಆತಂಕದಿಂದ ಮುಂಜಾನೆ ಆರು ಗಂಟೆಗೇ ನಿಲ್ದಾಣಕ್ಕೆ ಧಾವಿಸಿ ಬೀಡುಬಿಟ್ಟರು. ಯಾವುದೇ ವಿಮಾನ ಹಾರಾಟ ವ್ಯತ್ಯಯವಾಗಿಲ್ಲ. ಟ್ಯಾಕ್ಸಿ ಹಾಗೂ ಕ್ಯಾಬ್‌ಗಳು ಕಾರ್ಯಾಚರಿಸುತ್ತಿವೆ.

ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಕೆಆರ್ ಮಾರ್ಕೆಟ್ ಇಂದು ಬಿಕೋ ಎನ್ನುತ್ತಿದೆ. ವಿರಳ ಸಂಖ್ಯೆಯಲ್ಲಿ ವಾಹನಗಳ ಓಡಾಟ ಇದೆ. ಬೀದಿ ಬದಿ ವ್ಯಾಪಾರಿಗಳಿಗೆ ಬಂದ್ ಬಿಸಿ ತಟ್ಟಿದ್ದು, ಬಹುತೇಕ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ. ಬೀದಿಬದಿ ಅಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಇಳಿಕೆಯಾಗಿದೆ. ಹೂ, ಸೊಪ್ಪು, ತರಕಾರಿ ವ್ಯಾಪಾರ ಕೂಡ ಡಲ್ ಆಗಿದೆ.

bangalore Bandh kuruburu deatained

ಫ್ರೀಡಂ ಪಾರ್ಕ್‌ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಆಯೋಜನೆಯಾಗಿದ್ದು, ಅವರನ್ನು ಪೊಲೀಸರು ತಡೆದು ನಿಲ್ಲಿಸಿದರು. ಪ್ರತಿಭಟನಾಕಾರರಿಂದ ಅರೆ ಬೆತ್ತಲೆ ಪ್ರತಿಭಟನೆ ನಡೆಯಿತು. ಫ್ರೀಡಂ ಪಾರ್ಕ್‌ಗೆ ಖಾಲಿ ಬಿಂದಿಗೆ ಹಿಡಿದು ಬಂದ ಪ್ರತಿಭಟನಾಕಾರರು ಅರೆ ಬೆತ್ತಲೆಯಾಗಿ ಪ್ರತಿಭಟಿಸಿದರು. ಫ್ರೀಡಂ ಪಾರ್ಕ್ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾವೇರಿ ಹೋರಾಟ ಒಕ್ಕೂಟದಿಂದ ಟೌನ್ ಹಾಲ್‌ಗೆ ರ್ಯಾಲಿ ಏರ್ಪಡಿಸಲಾಗಿದ್ದು, ಅಲ್ಲಿಯೂ ಪೊಲೀಸ್‌ ಬಂದೋಬಸ್ತ್‌ ಹಾಕಲಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ಹೋರಾಟಗಾರರು ಬಾಪೂಜಿನಗರ ಮುಖ್ಯದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

Continue Reading

ಕರ್ನಾಟಕ

Bangalore Bandh: ಬೆಂಗಳೂರು ಸ್ತಬ್ಧ: ರೈತರ ಅರೆಬೆತ್ತಲೆ ಪ್ರತಿಭಟನೆ, ಬಿಗಿ ಬಂದೋಬಸ್ತ್, ಶಾಲೆಗಳಿಗೆ ರಜೆ, ಬೀದಿಗಿಳಿಯದ ಜನ

ಬಿಜೆಪಿ ಹಾಗೂ ಜೆಡಿಎಸ್‌ ಬಂದ್‌ಗೆ ಬೆಂಬಲ ಸೂಚಿಸಿರುವುದರಿಂದ ಪ್ರತಿಭಟನೆಯ ಕಾವು ಜೋರಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಬಂದ್ ಆಚರಿಸಲಾಗುತ್ತಿದ್ದು, ಸಂಜೆ 6 ಗಂಟೆಯವರೆಗೂ ಬಂದ್ ಮುಂದುವರಿಯಲಿದೆ.

VISTARANEWS.COM


on

Edited by

cauvery protest bng vv
Koo

ಬೆಂಗಳೂರು: ಕಾವರಿ ನೀರಿನ ವಿಚಾರದಲ್ಲಿ (Cauvery protest) ಕನ್ನಡಿಗರಿಗೆ ಆಗಿರುವ ಅನ್ಯಾಯ ಹಾಗೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದ್ದು, ಬೆಂಗಳೂರು ಬಂದ್‌ (Bangalore Bandh) ಇಂದು ಮುಂಜಾನೆಯಿಂದ ಆರಂಭವಾಗಿದೆ.

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮತ್ತು ಇತರ ಸಂಘಟನೆಗಳು ಇಂದು (ಸೆ.26) ಬೆಂಗಳೂರು ಬಂದ್ (Bangalore Bandh) ಆಚರಿಸುತ್ತಿದೆ. ಈ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಿಜೆಪಿ ಹಾಗೂ ಜೆಡಿಎಸ್‌ ಬಂದ್‌ಗೆ ಬೆಂಬಲ ಸೂಚಿಸಿರುವುದರಿಂದ ಪ್ರತಿಭಟನೆಯ ಕಾವು ಜೋರಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಬಂದ್ ಆಚರಿಸಲಾಗುತ್ತಿದ್ದು, ಸಂಜೆ 6 ಗಂಟೆಯವರೆಗೂ ಬಂದ್ ಮುಂದುವರಿಯಲಿದೆ.

ಮೆಟ್ರೋ ಎಂದಿನಂತೆ ಕಾರ್ಯಾಚರಿಸಿತು. ಮೆಟ್ರೋದ ಎಲ್ಲ ಲೈನ್‌ಗಳೂ ಪೂರ್ಣವಾಗಿ ಕಾರ್ಯಾಚರಿಸಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು. ಬಸ್‌ಗಳು ಎಂದಿನಂತೆ ಸಂಚಾರಕ್ಕೆ ಸಿದ್ಧಚಾಗಿದ್ದರೂ ಜನ ಬೀದಿಗಿಳಿಯಲಿಲ್ಲ. ಸದ್ಯ ಬಸ್‌ಗಳ ಸಂಖ್ಯೆ ಇಳಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನಸಂದಣಿ ತುಂಬಿ ತುಳುಕಿತು. ಮಧ್ಯಾಹ್ನ ಹಾಗೂ ಸಂಜೆ ವಿಮಾನ ಪ್ರಯಾಣದ ಸಮಯ ಹೊಂದಿದ್ದವರು ಕೂಡ, ಬಂದ್‌ ಜೋರಾದರೆ ಎಂಬ ಆತಂಕದಿಂದ ಮುಂಜಾನೆ ಆರು ಗಂಟೆಗೇ ನಿಲ್ದಾಣಕ್ಕೆ ಧಾವಿಸಿ ಬೀಡುಬಿಟ್ಟರು. ಯಾವುದೇ ವಿಮಾನ ಹಾರಾಟ ವ್ಯತ್ಯಯವಾಗಿಲ್ಲ. ಟ್ಯಾಕ್ಸಿ ಹಾಗೂ ಕ್ಯಾಬ್‌ಗಳು ಕಾರ್ಯಾಚರಿಸುತ್ತಿವೆ.

ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಕೆಆರ್ ಮಾರ್ಕೆಟ್ ಇಂದು ಬಿಕೋ ಎನ್ನುತ್ತಿದೆ. ವಿರಳ ಸಂಖ್ಯೆಯಲ್ಲಿ ವಾಹನಗಳ ಓಡಾಟ ಇದೆ. ಬೀದಿ ಬದಿ ವ್ಯಾಪಾರಿಗಳಿಗೆ ಬಂದ್ ಬಿಸಿ ತಟ್ಟಿದ್ದು, ಬಹುತೇಕ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ. ಬೀದಿಬದಿ ಅಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಇಳಿಕೆಯಾಗಿದೆ. ಹೂ, ಸೊಪ್ಪು, ತರಕಾರಿ ವ್ಯಾಪಾರ ಕೂಡ ಡಲ್ ಆಗಿದೆ.

ಫ್ರೀಡಂ ಪಾರ್ಕ್‌ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಆಯೋಜನೆಯಾಗಿದ್ದು, ಅವರನ್ನು ಪೊಲೀಸರು ತಡೆದು ನಿಲ್ಲಿಸಿದರು. ಪ್ರತಿಭಟನಾಕಾರರಿಂದ ಅರೆ ಬೆತ್ತಲೆ ಪ್ರತಿಭಟನೆ ನಡೆಯಿತು. ಫ್ರೀಡಂ ಪಾರ್ಕ್‌ಗೆ ಖಾಲಿ ಬಿಂದಿಗೆ ಹಿಡಿದು ಬಂದ ಪ್ರತಿಭಟನಾಕಾರರು ಅರೆ ಬೆತ್ತಲೆಯಾಗಿ ಪ್ರತಿಭಟಿಸಿದರು. ಫ್ರೀಡಂ ಪಾರ್ಕ್ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾವೇರಿ ಹೋರಾಟ ಒಕ್ಕೂಟದಿಂದ ಟೌನ್ ಹಾಲ್‌ಗೆ ರ್ಯಾಲಿ ಏರ್ಪಡಿಸಲಾಗಿದ್ದು, ಅಲ್ಲಿಯೂ ಪೊಲೀಸ್‌ ಬಂದೋಬಸ್ತ್‌ ಹಾಕಲಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ಹೋರಾಟಗಾರರು ಬಾಪೂಜಿನಗರ ಮುಖ್ಯದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜಧಾನಿಯ ಬಹುತೇಕ ಶಾಲೆಗಳು ಇಂದು ರಜೆ ಘೋಷಿಸಿವೆ. ಮಲ್ಲೇಶ್ವರಂ, ರಾಜಾಜಿನಗರ, ಕೆಂಗೇರಿ ಮುಂತಾದ ಕಡೆಗಳಲ್ಲಿ ಖಾಸಗಿ ಶಾಲೆಗಳು ರಜೆ ಘೋಷಿಸಿದವು.

ಇದನ್ನೂ ಓದಿ: Bangalore Bandh Live: ಬೆಂಗಳೂರು ಬಂದ್‌ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?

Continue Reading

ಕರ್ನಾಟಕ

Bangalore Bandh : ಬೆಂಗಳೂರಿನ ಈ ಭಾಗದಲ್ಲಿ ಪ್ರತಿಭಟನೆ ಜೋರು, ಆ ಕಡೆ ಹೋಗುವಾಗ ಹುಷಾರು

Bangalore Bandh : ಬೆಂಗಳೂರು ಬಂದ್‌ ಕಾವೇರುತ್ತಿದೆ. ಬೆಂಗಳೂರಿನ ಕೆಲವು ಭಾಗಗಳಲ್ಲಿ ಇಂದು ದೊಡ್ಡ ಮಟ್ಟದ ಪ್ರತಿಭಟನೆ ನಡೆಯಲಿದೆ. ಹೀಗಾಗಿ ಆ ಭಾಗಕ್ಕೆ ಹೋಗುವಾಗ ಹುಷಾರಾಗಿರಿ.

VISTARANEWS.COM


on

Edited by

Cauvery protest in Bangalore
Koo

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery Water Dispute) ಮಾಡುತ್ತಿರುವುದನ್ನು ಪ್ರತಿಭಟಿಸಿ ಜಲ ಸಂರಕ್ಷಣಾ ಸಮಿತಿ ಕರೆ ನೀಡಿರುವ ಬೆಂಗಳೂರು ಬಂದ್‌ (bangalore bandh) ಕಾವೇರುತ್ತಿದೆ. ಯಾವ ಕಾರಣಕ್ಕೂ ಬಲವಂತದ ಬಂದ್‌ಗೆ ಅವಕಾಶವಿಲ್ಲ ಎಂದು ಪೊಲೀಸರು ಸ್ಪಷ್ಟವಾಗಿ ಹೇಳಿರುವುದರಿಂದ ಕೆಲವು ಕಡೆಗಳಲ್ಲಿ ವ್ಯಾಪಾರ ವಹಿವಾಟುಗಳು (Business as usual) ಎಂದಿನಂತೆ ನಡೆಯುತ್ತಿವೆ. ಆದರೆ, ಪ್ರಮುಖ ಸ್ಥಳಗಳಾದ ಮೆಜೆಸ್ಟಿಕ್‌ (Majestic Bus stand), ಕೆ.ಆರ್.‌ ಮಾರ್ಕೆಟ್‌ನಲ್ಲಿ (KR Market) ಜನ ಸಂಚಾರ ಬಹುತೇಕ ಸ್ತಬ್ಧವಾಗಿದೆ. ಈ ನಡುವೆ ಪೊಲೀಸರು ಬಂದ್‌ಗೆ ಕರೆ ನೀಡಿದ ಮುಖಂಡರಲ್ಲಿ ಒಬ್ಬರಾದ ರೈತ ಮುಖಂಡ ಕುರುಬೂರು ಶಾಂತ ಕುಮಾರ್‌ (Kuruburu Shanthakumar) ಅವರನ್ನು ಬಂಧಿಸಿದ್ದಾರೆ.

ರಾಜಧಾನಿಯ ಹಲವು ಕಡೆಗಳಲ್ಲಿ ಇಂದು ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇದೆ. ಅಂದರೆ ಆ ಭಾಗದಲ್ಲಿ ಸಂಘಟನೆಗಳು ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಹೀಗಾಗಿ ಆ ಭಾಗಕ್ಕೆ ಹೋಗದಿದ್ದರೆ ಒಳ್ಳೆಯದು. ಹೋಗಲೇಬೇಕು ಎಂದಾದರೆ ಸೂಕ್ತ ವ್ಯವಸ್ಥೆ ಮಾಡಿಕೊಂಡು ಹೋಗಬಹುದು. ಪ್ರತಿಭಟನೆ ಮುಗಿದ ನಂತರ ಹೋಗಬಹುದು.

ಅಲ್ಲಲ್ಲಿ ಪ್ರತಿಭಟನೆಗಳನ್ನು ಆಯೋಜಿಸಿರುವ ಸಂಘಟನೆಗಳು ಸ್ವಲ್ಪ ಹೊತ್ತು ಆ ಭಾಗದಲ್ಲಿ ಮೆರವಣಿಗೆ ನಡೆಸುವ ಸಾಧ್ಯತೆ ಇರುತ್ತದೆ. ರಸ್ತೆಗಳು ಬಂದ್‌ ಆಗುತ್ತದೆ. ಸೋ ಹುಷಾರಾಗಿ ಓಡಾಡಿ ಎನ್ನುವುದಕ್ಕಾಗಿ ಪ್ರತಿಭಟನೆಯ ಪೂರ್ಣ ಮಾಹಿತಿ ಇಲ್ಲಿ ನೀಡುತ್ತಿದ್ದೇವೆ.

ಯಾವ ಸಂಘಟನೆಗಳ ಪ್ರತಿಭಟನೆ ಎಲ್ಲಿ? ಏನೇನು ಕಾರ್ಯಕ್ರಮ?

  • ಕಾವೇರಿ ಹೋರಾಟ ಸಮಿತಿ:  ಬೆಳಗ್ಗೆ 09.30ಕ್ಕೆ ಲಾಲ್ ಬಾಗ್ ಪಶ್ಚಿಮ ದ್ವಾರದಿಂದ ಬಳೆಪೇಟೆ,  ಮೈಸೂರು ಬ್ಯಾಂಕ್ ಸರ್ಕಲ್, ಟೌನ್ ಹಾಲ್ ಸಮೀಪ ಜನರಲ್ಲಿ ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ.
  • ಕನ್ನಡ ಚಳುವಳಿ ಕೇಂದ್ರ ಸಮಿತಿ, ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ವತಿಯಿಂದ ಟೋಲ್ ಗೇಟ್ ಸಿಗ್ನಲ್ ನಿಂದ ಟೌನ್ ಹಾಲ್ ತನಕ ಬೆಳಗ್ಗೆ 9 ಘಂಟೆಗೆ ಬೈಕ್ ರ್ಯಾಲಿ
  • ಜಯ ಕರ್ನಾಟಕ ಸಮರ ಸೇನೆ: ಬಾಪೂಜಿನಗರಿಂದ ಸ್ಯಾಟಲೈಟ್ ಬಸ್ ನಿಲ್ದಾಣ ತನಕ ಕಾಲ್ನಡಿಗೆ ಮೂಲಕ ಬಂದು ತಮಿಳುನಾಡು ಬಸ್ ತಡೆ.
  • ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಟೌನ್ ಹಾಲ್ ತನಕ ಸೈಕಲ್ ಜಾಥ ( ಖಾಲಿ ಬಿಂದಿಗೆಯನ್ನ ಸೈಕಲ್​ಗಳಿಗೆ ಕಟ್ಟಿಕೊಂಡು ಕೆ.ಆರ್. ಮಾರ್ಕೆಟ್, ಟೌನ್ ಹಾಲ್ ತನಕ ಗುಲಾಬಿ ಹೂ ನೀಡಿ ಬಂದ್ ಗೆ ಮನವಿ
  • ಖಾಸಗಿ ವಾಹನ ಮಾಲೀಕರ ಒಕ್ಕೂಟ: ನ್ಯಾಷನಲ್ ಕಾಲೇಜ್ ಮೈದಾನದಿಂದ ಟೌನ್ ಹಾಲ್ ವರೆಗೆ ಒಂದು ಸಾವಿರ ಆಟೋ, 300 ಕ್ಯಾಬ್ ಗಳ ಮೂಲಕ  ಮೆರವಣಿಗೆ
  • ಸ್ವಾಭಿಮಾನಿ ಸೇನೆಯಿಂದ ಮೈಸೂರು ರೋಡ್ ನ  ಗಾಳಿ ಆಂಜನೇಯ ದೇವಸ್ಥಾನ ದಿಂದ  ಮೆಜೆಸ್ಟಿಕ್, ಗಾಂಧಿನಗರ, ಬ್ರಿಗೇಡ್ , ಟೌನ್ ಹಾಲ್ ತನಕ ಕ್ಯಾಂಟರ್ ವಾಹನ ಮೂಲಕ ಬಂದ್ ಬಗ್ಗೆ ಜಾಗೃತಿ, ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡುವಂತೆ ಮನವಿ.
  • ಪೀಸ್ ಆಟೋ ಸಂಘಟನೆಯಿಂದ  9 ಗಂಟೆಗೆ ಆಟೋ ರ್ಯಾಲಿ
  • ಕರ್ನಾಟಕ ಕ್ರೈಸ್ತ ಸಂಘಟನೆಯ 200 ಜನರಿಂದ ಟೌನ್ ಹಾಲ್ ನಿಂದ  ಫ್ರೀಡಂಪಾರ್ಕ್ ವರೆಗೆ ಬೈಕ್ ರ್ಯಾಲಿ
  • ನಮ್ಮ ಕರುನಾಡು ಯುವ ಸೇನೆಯಿಂದ ನವರಂಗ್ ಸರ್ಕಲ್ ಬಳಿ ಟೈರ್ ಗೆ ಬೆಂಕಿ, ರಾಜ್ಯ ನಾಯಕರ ಪ್ರತಿಕೃತಿ ದಹನ

ಇದನ್ನೂ ಓದಿ: Bangalore Bandh : ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಪ್ರತಿಭಟನೆ: ಕುರುಬೂರು ಶಾಂತ ಕುಮಾರ್‌ ಪೊಲೀಸ್‌ ವಶಕ್ಕೆ

ಮೆರವಣಿಗೆಗೆ ಅವಕಾಶವಿಲ್ಲ, ಫ್ರೀಡಂಪಾರ್ಕ್​ನಲ್ಲಿ ಮಾತ್ರ ಪ್ರತಿಭಟನೆ

ಹೋರಾಟಗಾರರು ಈ ಹಿಂದೆ ಮೈಸೂರು ಬ್ಯಾಂಕ್‌ನಿಂದ ಟೌನ್‌ ಹಾಲ್‌, ಅಲ್ಲಿಂದ ಫ್ರೀಡಂ ಪಾರ್ಕ್‌ಗೆ ಮೆರವಣಿಗೆ ನಡೆಸಲು ಪ್ಲ್ಯಾನ್‌ ಮಾಡಿದ್ದರು. ಆದರೆ, ಪೊಲೀಸರು ಯಾವ ಮೆರವಣಿಗೆಗೂ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಪ್ರತಿಭಟನೆ ಫ್ರೀಡಂ ಪಾರ್ಕ್‌ಗೆ ಸೀಮಿತವಾಗಲಿದೆ.

Continue Reading
Advertisement
Saurashtra Cricket Association Stadium Rajkot
ಕ್ರಿಕೆಟ್8 mins ago

IND vs AUS 3rd ODI: ರಾಜ್​ಕೋಟ್​ನ​ ಪಿಚ್​ ರಿಪೋರ್ಟ್​ ದಾಖಲೆಯೇ ವಿಚಿತ್ರ

HD Kumaraswamy Bandh
ಕರ್ನಾಟಕ18 mins ago

Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?

madhugiri accident
ತುಮಕೂರು28 mins ago

Road Accident: ಮಧುಗಿರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ, ಮೂವರ ಸಾವು

Bangalore bandh Attibele border
ಕರ್ನಾಟಕ43 mins ago

Bangalore Bandh: ತಮಿಳುನಾಡು ಬಸ್‌ಗಳು ಗಡಿ ಭಾಗದಿಂದಲೇ ವಾಪಸ್‌, ಬಾಯ್‌ ಬಾಯ್‌ ಎಂದ ಕಂಡಕ್ಟರ್

Rahul Dravid’s son
ಕ್ರಿಕೆಟ್1 hour ago

Vinoo Mankad Trophy: ಅಂಡರ್‌ 19 ಕರ್ನಾಟಕ ತಂಡಕ್ಕೆ ದ್ರಾವಿಡ್​ ಪುತ್ರ ಆಯ್ಕೆ

cauvery protest bng vv
ಕರ್ನಾಟಕ1 hour ago

Bangalore Bandh: ಬೆಂಗಳೂರು ಸ್ತಬ್ಧ: ರೈತರ ಅರೆಬೆತ್ತಲೆ ಪ್ರತಿಭಟನೆ, ಬಿಗಿ ಬಂದೋಬಸ್ತ್, ಶಾಲೆಗಳಿಗೆ ರಜೆ, ಬೀದಿಗಿಳಿಯದ ಜನ

Cauvery protest in Bangalore
ಕರ್ನಾಟಕ1 hour ago

Bangalore Bandh : ಬೆಂಗಳೂರಿನ ಈ ಭಾಗದಲ್ಲಿ ಪ್ರತಿಭಟನೆ ಜೋರು, ಆ ಕಡೆ ಹೋಗುವಾಗ ಹುಷಾರು

viral news kannada
ಕ್ರಿಕೆಟ್2 hours ago

Kapil Dev Kidnap: ವಿಶ್ವಕಪ್​ ವಿಜೇತ ನಾಯಕ ಕಪಿಲ್ ದೇವ್​ ಕಿಡ್ನಾಪ್​; ವಿಡಿಯೊ ವೈರಲ್​

bangalore Bandh kuruburu deatained
ಕರ್ನಾಟಕ2 hours ago

Bangalore Bandh : ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಪ್ರತಿಭಟನೆ: ಕುರುಬೂರು ಶಾಂತ ಕುಮಾರ್‌ ಪೊಲೀಸ್‌ ವಶಕ್ಕೆ

pakistan Team
ಕ್ರಿಕೆಟ್2 hours ago

Pakistan team: ಕೊನೆಗೂ ಬಗೆಹರಿದ ಪಾಕ್ ತಂಡದ​ ವೀಸಾ ಸಮಸ್ಯೆ; ಬುಧವಾರ ಭಾರತ ಪ್ರಯಾಣ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ6 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ17 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ19 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ21 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ22 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌