ಇತಿಹಾಸವನ್ನು ತಿರುಚಿ ಬರೆದ ಪಠ್ಯ ಪುಸ್ತಕ: ರಾಮಲಿಂಗಾರೆಡ್ಡಿ ಆರೋಪ - Vistara News

ಬೆಂಗಳೂರು

ಇತಿಹಾಸವನ್ನು ತಿರುಚಿ ಬರೆದ ಪಠ್ಯ ಪುಸ್ತಕ: ರಾಮಲಿಂಗಾರೆಡ್ಡಿ ಆರೋಪ

ಪಠ್ಯ ಪುಸ್ತಕ ಪರಿಷ್ಕರಣೆಗೆ ಬಿಜೆಪಿ ಸರ್ಕಾರ ಯಾವುದೇ ಅರ್ಹತೆಯಿಲ್ಲದ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಗೆ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಜವಾಬ್ದಾರಿಯನ್ನು ನೀಡಿದೆ ಎಂದು ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

VISTARANEWS.COM


on

ರಾಮಲಿಂಗಾರೆಡ್ಡಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದ ಇತಿಹಾಸವನ್ನು ತಿರುಚಿ, ಸತ್ಯವಲ್ಲದ ಸಂಗತಿಗಳನ್ನು ಪಠ್ಯ ಪುಸ್ತಕದಲ್ಲಿ ಸೇರಿಸಲು ಪ್ರಯತ್ನಿಸುತ್ತಿದ್ದಾರೆ. ನಾಡಿನ ಮಹಾನ್ ವ್ಯಕ್ತಿಗಳ ಅಪಮಾನ ಮಾಡುವ ಕೆಲಸವನ್ನು ಈ ಸಮಿತಿ ಮಾಡಿದೆ. ಬುದ್ಧ ಬಸವಣ್ಣ ಮಹಾವೀರ ಜಯಂತಿ ಭಗತ್ ಸಿಂಗ್ ಅಂಬೇಡ್ಕರ್ ಅವರು ನಾರಾಯಣಗುರುಗಳು ಹಾಗೂ ಕುವೆಂಪು ಸೇರಿದಂತೆ ಹಲವು ಮಹಾನ್ ವ್ಯಕ್ತಿಗಳ ಪಠ್ಯ ಪುಸ್ತಕ ತಿರುಚಿ ಅಪಮಾನ ಮಾಡಲಾಗಿದೆ.

ಅನೇಕ ಮಠಾಧೀಶರು ಚಿಂತಕರು, ಸಾಹಿತಿಗಳ ಸಂಘ-ಸಂಸ್ಥೆಗಳ ವಿರೋಧ ವ್ಯಕ್ತಪಡಿಸಿದ್ದರೂ ಸರ್ಕಾರ ಪರಿಷ್ಕೃತ ಪಠ್ಯ ಪುಸ್ತಕವನ್ನು ಮಕ್ಕಳಿಗೆ ನೀಡಲು ಮುಂದಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆ ಎಲ್ಲಿ ಅಂಬೇಡ್ಕರ್ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಲಾಗಿದೆ.

ಆರನೇ ತರಗತಿ ಪಠ್ಯ ಪುಸ್ತಕದಲ್ಲಿ ವಾಲಿಕಾರ್ ಅವರು ಬರೆದ ನೀ ಹೋದ ಮರುದಿನ ಎಂಬ ಅಂಬೇಡ್ಕರ್ ಅವರ ಕುರಿತ ಪಠ್ಯವನ್ನು ಕೈಬಿಡಲಾಗಿದೆ. 7ನೇ ತರಗತಿ ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಂಬೇಡ್ಕರ್ ಅವರ ತಂದೆ-ತಾಯಿ ಹುಟ್ಟಿದ ಸ್ಥಳ ಸೇರಿದಂತೆ ಹಲವು ವಿವರಗಳನ್ನು ಕೈಬಿಡಲಾಗಿದೆ.

ಅಂಬೇಡ್ಕರ್ ಅವರ ಹೋರಾಟದ ವಿಚಾರಗಳನ್ನು ಪಠ್ಯದಿಂದ ತೆಗೆದುಹಾಕಲಾಗಿದೆ.

9ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಎಂಬ ಭಾಗವನ್ನು ತೆಗೆದು ಹಾಕಲಾಗಿದೆ. ಸಂವಿಧಾನ ರಚನೆಯಲ್ಲಿ ಬಿ. ಎನ್. ರಾವ್ ಅವರ ಕೊಡುಗೆ ಅಪಾರ ಎಂದು ತಿಳಿಸಲಾಗಿದೆ. ಆ ಮೂಲಕ ಮುಂದಿನ ದಿನಗಳಲ್ಲಿ ಅಂಬೇಡ್ಕರ್ ಅವರನ್ನು ಬಿಟ್ಟು ಬಿ.ಎನ್‌. ರಾವ್‌ ಅವರೇ ಸಂವಿಧಾನ ರಚನೆ ಮಾಡಿದ್ದಾರೆ ಎಂದು ಬಿಂಬಿಸುವ ಪ್ರಯತ್ನ ನಡೆಸಲಾಗಿದೆ.

10ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಗಾಂಧಿಯುಗ ಪಾಠದಲ್ಲಿ ಅಂಬೇಡ್ಕರ್ ಅವರ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿ ಧರ್ಮ ಸ್ವೀಕರಿಸಿದರು ಎಂಬ ಅಂಶವನ್ನು ಕೈಬಿಡಲಾಗಿದೆ.

ಸರ್ಕಾರ ಕೂಡಲೇ ಈ ವ್ಯಕ್ತಿಯನ್ನು ಬಂಧಿಸಬೇಕು:

ಬಿಜೆಪಿ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಇತಿಹಾಸದ ಮೇಲೆ ಅತ್ಯಾಚಾರ ನಡೆಸುತ್ತಿದೆ. ಇದರ ವಿರುದ್ಧ ಮಠಾಧೀಶರು ಸಾಹಿತಿಗಳು ಚಿಂತಕರು ಎಲ್ಲರೂ ವಿರೋಧ ವ್ಯಕ್ತಪಡಿಸಿದರು ಇದಪ್ಪ ಚರ್ಮದ ಸರ್ಕಾರಕ್ಕೆತಾಗುತ್ತಿಲ್ಲ. ಬಸವಣ್ಣನವರ ಬಗ್ಗೆ ಇತಿಹಾಸ ತಿರುಚಿ ಬರೆದರು ಮುಖ್ಯಮಂತ್ರಿ ಬೊಮ್ಮಾಯಿ ಅವರು ಚಕಾರ ಎತ್ತುತ್ತಿಲ್ಲ. ಆ ಮೂಲಕ ತಮಗೆ ಅಧಿಕಾರವೇ ಮುಖ್ಯ ಉಳಿದೆಲ್ಲವೂ ಗೌಡ ಎಂಬಂತೆ ವರ್ತಿಸುತ್ತಿದ್ದಾರೆ.

ರಾಜ್ಯಸಭೆ ಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ, ‘ ಇನ್ನು ಮುಂದೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜೆಡಿಎಸ್ ನವರು ತೀರ್ಮಾನಿಸಿದ್ದಾರೆ ಕಾಂಗ್ರೆಸ್ನವರು ತೀರ್ಮಾನಿಸಿದ್ದೇವೆ. ಅವರು ಕೊನೆಕ್ಷಣದಲ್ಲಿ ಕಾಂಗ್ರೆಸ್ ಬೆಂಬಲ ಕೋರಿದ್ದು ಪಕ್ಷದ ಹೈಕಮಾಂಡ್ ಅದಕ್ಕೆ ಸಮ್ಮತಿ ಸೂಚಿಸಲಿಲ್ಲ’ ಎಂದರು.

ಇದನ್ನೂ ಓದಿ| Textbook controversy: ಪಠ್ಯ ಪುಸ್ತಕ ಪರಿಷ್ಕರಣೆ ಸ್ಥಗಿತಗೊಳಿಸಲು ನಿರಂಜನಾರಾಧ್ಯ ಒತ್ತಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಹೈ ಅಲರ್ಟ್‌ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಗದಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಶುರುವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಸುಮಾರು 31 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

9 ಜಿಲ್ಲೆಗಳಿಗೆ ಹೈ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವುದರ ಜತೆಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಕೊಡಗು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಮತ್ತು ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ . ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Health Tips: ನಮ್ಮ ದೇಹಕ್ಕೆ ಪ್ರೊಟೀನ್‌ ಪುಷ್ಟಿ ನೀಡಲು ಯಾವ ಮೊಳಕೆ ಕಾಳುಗಳು ಸೂಕ್ತ?

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌!

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌! (Dogs Monsoon Fashion) ಅರರೆ., ಇದೇನಿದು ಶ್ವಾನಗಳಿಗೂ ಮಳೆಗಾಲದ ಫ್ಯಾಷನ್‌ ಎಂದು ಹುಬ್ಬೇರಿಸಬಹುದು. ಹೌದು, ಇದೀಗ ಶ್ವಾನಗಳ ಮಾನ್ಸೂನ್‌ ಡ್ರೆಸ್‌ ಹಾಗೂ ರೈನ್‌ಕೋಟ್‌, ಮತ್ತಿತರೇ ಆಕ್ಸೆಸರೀಸ್‌ ಪೆಟ್‌ ಲೋಕದಲ್ಲಿ ಕಾಲಿಟ್ಟಿವೆ. ಆಯಾ ಜಾತಿಯ ಮುದ್ದು ಶ್ವಾನಗಳಿಗೆ ಹೊಂದುವಂತಹ, ನಾನಾ ವೆರೈಟಿ ಮಾನ್ಸೂನ್‌ ಡ್ರೆಸ್‌ಗಳು ಹಾಗೂ ವಾಟರ್‌ಪ್ರೂಫ್‌ ರೈನ್‌ಕೋಟ್‌ಗಳು ನಾಯಿಮರಿಗಳನ್ನು ಅಲಂಕರಿಸುತ್ತಿವೆ.

Dogs Monsoon Fashion

ಮುದ್ದು ಶ್ವಾನಗಳಿಗೂ ಮಾನ್ಸೂನ್‌ ಫ್ಯಾಷನ್‌

“ಇಂದು ಕಾಲ ಬದಲಾಗಿದೆ. ಮನೆಯಲ್ಲಿ ಮುದ್ದು ಶ್ವಾನಗಳಿಗೂ ಮಕ್ಕಳ ಸ್ಥಾನ ಮಾನ ದೊರಕಿದೆ. ಪ್ರತಿಯೊಬ್ಬರು ಅವರು ಸಾಕಿದ ನಾಯಿಮರಿಗಳನ್ನು ಯಾವ ಮಟ್ಟಿಗೆ ಇಷ್ಟ ಪಡುತ್ತಾರೆಂದರೇ, ಅವಕ್ಕೆ ಇತ್ತೀಚೆಗೆ ನಾನಾ ಬಗೆಯಲ್ಲಿ ಸ್ಟೈಲಿಂಗ್‌ ಕೂಡ ಮಾಡುತ್ತಾರೆ. ಇನ್ನು, ಹಿರಿಯರು ಕಿರಿಯರೆನ್ನದೇ ಎಲ್ಲರೂ ವಾಕಿಂಗ್‌ ಹಾಗೂ ಜಾಕಿಂಗ್‌ ಸಮಯದಲ್ಲೂ ಶ್ವಾನಗಳನ್ನು ಜೊತೆಯಲ್ಲಿಯೇ ಕರೆದೊಯ್ಯುತ್ತಾರೆ. ಇದಕ್ಕೆ ಪೂರಕ ಎಂಬಂತೆ, ಪೆಟ್‌ ಲೋಕದಲ್ಲೂ ನಾನಾ ಬಗೆಯ ಆಕ್ಸೆಸರೀಸ್‌ಗಳು ಹಾಗೂ ಉಡುಗೆಗಳು ಬಂದಿವೆ. ಆಯಾ ಸೀಸನ್‌ಗೆ ಮ್ಯಾಚ್‌ ಆಗುವಂತೆ ದೊರಕುತ್ತಿವೆ. ಅವುಗಳಲ್ಲಿ ಇದೀಗ ಮಾನ್ಸೂನ್‌ ಸೀಸನ್‌ಗೆ ಹೊಂದುವಂತಹ ಫ್ಯಾಷನ್‌ ಉಡುಗೆ ಹಾಗೂ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ” ಎನ್ನುತ್ತಾರೆ ಪೆಟ್‌ ಸ್ಪಾನ ಸ್ಟೈಲಿಂಗ್‌ ಎಕ್ಸ್‌ಫರ್ಟ್ ಜಾಕಿ. ಅವರ ಪ್ರಕಾರ, ಶ್ವಾನಗಳು ಇದೀಗ ಸ್ಟೈಲಿಶ್‌ ಆಗಿ ಕಾಣಿಸಲು ಈ ಆಕ್ಸೆಸರೀಸ್‌ಗಳು ಸಹಕರಿಸುತ್ತಿವೆಯಂತೆ.

Dogs Monsoon Fashion

ಮಾನ್ಸೂನ್‌ಗೆ ಮ್ಯಾಚಿಂಗ್‌

ಶ್ವಾನಗಳಿಗೆ ಬಂದಿರುವ ಕಲರ್‌ಫುಲ್‌ ಉಡುಗೆ ಹಾಗೂ ರೈನ್‌ಕೋಟ್‌ ಮತ್ತು ಅವುಗಳ ಕಾಲಿನ ಪಾದಗಳಿಗೆ ಹಾಕಬಹುದಾದ ಪೆಟ್‌ ವೆಲ್ಲೈಸ್‌, ರೈನ್‌ ಬೂಟ್ಸ್ ಹಾಗೂ ಟವೆಲ್‌ ಮತ್ತು ವೈಪ್ಸ್ ಈ ಸೀಸನ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿವೆ.

Dogs Monsoon Fashion

ಕಲರ್‌ಫುಲ್‌ ಡಾಗ್ಗಿ ರೈನ್‌ ಕೋಟ್ಸ್

ಪಿರಿ ಪಿರಿ ಸಣ್ಣ ಮಳೆಯಲ್ಲೂ ಡಾಗ್ಗಿಯಿಲ್ಲದೇ ವಾಕ್‌ ಮಾಡಲಾಗುವುದಿಲ್ಲ ಎನ್ನುವ ಶ್ವಾನಗಳ ಪೋಷಕರು, ಈ ಮಾನ್ಸೂನ್‌ ಡಾಗ್‌ ರೈನ್‌ಕೋಟ್ಸ್‌ಗಳ ಖರೀದಿ ಮಾಡತೊಡಗಿದ್ದಾರೆ. ಬೇಡಿಕೆ ಹೆಚ್ಚಾದಂತೆ, ಸಿಂಥಟಿಕ್‌, ಪಾಲಿಸ್ಟರ್‌ ಸೇರಿದಂತೆ ವಾಟರ್‌ ಪ್ರೂಫ್‌ ಫ್ಯಾಬ್ರಿಕ್‌ನಲ್ಲಿ ಇವು ನಾನಾ ಡಿಸೈನ್‌ನಲ್ಲಿ ಆಗಮಿಸಿವೆ.

Dogs Monsoon Fashion

ಪೆಟ್ಸ್ ರೈನ್‌ ಬೂಟ್ಸ್

ನಾಯಿ ಮರಿಗಳಿಗೆ ರಸ್ತೆಯ ಹಾಗೂ ನೆಲದ ಕೊಚ್ಚೆ, ಕೆಸರು ಹತ್ತದಂತೆ ಕಾಪಾಡಬಹುದಾದ ಪುಟ್ಟ ಪುಟ್ಟ ರೈನ್‌ ಬೂಟ್ಸ್‌ಗಳು ಕೂಡ ನಾನಾ ವಿನ್ಯಾಸದಲ್ಲಿ ಪೆಟ್‌ ಶಾಪ್‌ಗಳಿಗೆ ಬಂದಿವೆ. ಇನ್ನು, ಡಾಗ್‌ ಟವೆಲ್ಸ್ ಹಾಗೂ ವೈಪ್ಸ್ ಸೇರಿದಂತೆ, ಬೋ ಹಾಗೂ ಬೆಲ್ಟ್‌ಗಳು ಕೂಡ ಪೆಟ್‌ ಶಾಪ್‌ಗಳಿಗೆ ಲಗ್ಗೆ ಇಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Pralhad Joshi: ಕೇವಲ ಶೇ.0.1 ಮತ ಗಳಿಕೆ ಹೆಚ್ವಿದ್ದಕ್ಕೇ ಕಾಂಗ್ರೆಸ್ ಗೆದ್ದ ಭ್ರಮೆಯಲ್ಲಿದೆ; ಪ್ರಲ್ಹಾದ್ ಜೋಶಿ ಗೇಲಿ

Pralhad Joshi: ಕಳೆದ 3 ಲೋಕಸಭೆ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್ ನಮಗೆ ಸರಿ ಸಾಟಿಯೇ ಅಲ್ಲ. 2014, 2019 ಮತ್ತು 2024 ಈ ಮೂರೂ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದ ಸಂಖ್ಯೆ ಬಿಜೆಪಿಯ ಪ್ರಸ್ತುತ ಫಲಿತಾಂಶಕ್ಕೆ ಸಮವಿಲ್ಲ. ಕಾಂಗ್ರೆಸ್ ಈ ಮೂರೂ ಚುನಾವಣೆಗಳಲ್ಲಿ ಒಟ್ಟಾರೆ 140ರಿಂದ 150 ಸ್ಥಾನ ಗೆದ್ದರೆ ಬಿಜೆಪಿ ಒಂದೇ ಚುನಾವಣೆಯಲ್ಲಿ 240 ಸ್ಥಾನಗಳನ್ನು ಗೆದ್ದುಕೊಂಡಿದೆ. ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿಗೆ ಕಳೆದ ಬಾರಿಗಿಂತ ತುಸು ಕಡಿಮೆ ಸೀಟುಗಳು ಬಂದಿವೆ ನಿಜ. ಚುನಾವಣೆಯಿಂದ ಚುನಾವಣೆಗೆ ವ್ಯತ್ಯಾಸ ಆಗೋದು ಸಹಜವೇ. ಆದರೆ, ಇಡೀ ಇಂಡಿ ಕೂಟ ಪಡೆದ ಸ್ಥಾನಗಳೂ ಬಿಜೆಪಿಗೆ ಸರಿ ಸಮನಾಗಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi statement
Koo

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಕೇವಲ ಶೇ.0.1 ರಷ್ಟು ವೋಟ್ ಶೇರ್ ಹೆಚ್ಚಿಸಿಕೊಂಡ ಕಾಂಗ್ರೆಸ್ (Congress) ಗೆದ್ದ ಭ್ರಮೆಯಲ್ಲಿದ್ದು, ಇಂಡಿ ಒಕ್ಕೂಟ ದೇಶದಲ್ಲಿ ಇಲ್ಲವೇ ಇಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಟೀಕಿಸಿದರು.

ಬೆಂಗಳೂರಿನಲ್ಲಿ ಇಂದು ಬಿಜೆಪಿ-ಜೆಡಿಎಸ್ ನೂತನ ಸಂಸದರಿಗೆ ಹಮ್ಮಿಕೊಂಡಿದ್ದ ಅಭಿನಂದನೆ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ದೇಶದಲ್ಲಿ 230 ಸ್ಥಾನಗಳನ್ನು ಗೆದ್ದಿದ್ದು, ಇದು ಬಿಜೆಪಿ ಒಂದೇ ಪಕ್ಷ ಪಡೆದ ಸೀಟುಗಳಿಗೂ ಸರಿ ಸಮವಾಗಿಲ್ಲ. ಕಾಂಗ್ರೆಸ್ಸಿಗರು ವಾಸ್ತವ ಅರಿಯಲಿ ಎಂದು ಹೇಳಿದರು.

ಬಿಜೆಪಿಗೆ ಸಾಟಿಯೇ ಅಲ್ಲ ಕಾಂಗ್ರೆಸ್

ಕಳೆದ ಮೂರು ಲೋಕಸಭೆ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್ ನಮಗೆ ಸರಿ ಸಾಟಿಯೇ ಅಲ್ಲ. 2014, 2019 ಮತ್ತು 2024 ಈ ಮೂರೂ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದ ಸಂಖ್ಯೆ ಬಿಜೆಪಿಯ ಪ್ರಸ್ತುತ ಫಲಿತಾಂಶಕ್ಕೆ ಸಮವಿಲ್ಲ. ಕಾಂಗ್ರೆಸ್ ಈ ಮೂರೂ ಚುನಾವಣೆಗಳಲ್ಲಿ ಒಟ್ಟಾರೆ 140 ರಿಂದ 150 ಸ್ಥಾನ ಗೆದ್ದರೆ ಬಿಜೆಪಿ ಒಂದೇ ಚುನಾವಣೆಯಲ್ಲಿ 240 ಸ್ಥಾನಗಳನ್ನು ಗೆದ್ದುಕೊಂಡಿದೆ ಎಂದು ಸಚಿವ ಜೋಶಿ ವಿಶ್ಲೇಷಿಸಿದರು.

ಇದನ್ನೂ ಓದಿ: HD Kumaraswamy: ಎಚ್‌ಎಂಟಿ ಕಾರ್ಖಾನೆಗೆ ಮರು ಜೀವ: ಎಚ್.ಡಿ. ಕುಮಾರಸ್ವಾಮಿ

ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿಗೆ ಕಳೆದ ಬಾರಿಗಿಂತ ತುಸು ಕಡಿಮೆ ಸೀಟುಗಳು ಬಂದಿವೆ ನಿಜ. ಚುನಾವಣೆಯಿಂದ ಚುನಾವಣೆಗೆ ವ್ಯತ್ಯಾಸ ಆಗೋದು ಸಹಜವೇ. ಆದರೆ, ಇಡೀ ಇಂಡಿ ಕೂಟ ಪಡೆದ ಸ್ಥಾನಗಳೂ ಬಿಜೆಪಿಗೆ ಸರಿ ಸಮನಾಗಿಲ್ಲ ಎಂದು ಹೇಳಿದರು.

ಅರ್ಥವೇ ಇಲ್ಲದ ಇಂಡಿ ಕೂಟ

ಬಿಜೆಪಿಯನ್ನು ವಿರೋಧಿಸಲೆಂದೇ ಹುಟ್ಟಿಕೊಂಡ ಕಾಂಗ್ರೆಸ್ ನೇತೃತ್ವದ ಇಂಡಿ ಕೂಟಕ್ಕೆ ಅರ್ಥವೇ ಇಲ್ಲ. ದೇಶದಲ್ಲೆಲ್ಲೂ ಇಂಡಿಗೆ ನೆಲೆಯೇ ಇಲ್ಲ. ಇಂಡಿ ಕೂಟದಲ್ಲಿ ಸಮನ್ವಯತೆ ಇಲ್ಲವೆಂದು ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದರು.

ಬೆಂಗಳೂರಿನಲ್ಲಿ ಇಂದು ಬಿಜೆಪಿ-ಜೆಡಿಎಸ್ ನೂತನ ಸಂಸದರಿಗೆ ಅಭಿನಂದನೆ ಸಮಾರಂಭ ಜರುಗಿತು.

ಕೇರಳದಲ್ಲಿ ಇಂಡಿ ಕೂಟದಲ್ಲಿ ಪರಸ್ಪರ ಬಡಿದಾಟವಿದೆ. ದೆಹಲಿಯಲ್ಲಿ ಎಎಪಿ+ ಕಾಂಗ್ರೆಸ್ ಚುನಾವಣೆಗೆ ಹೋಗುತ್ತಿವೆ. ಪಂಜಾಬ್ ಅಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಟವಿದೆ. ಹೀಗೆ ದೇಶದ ಎಲ್ಲೆಡೆಯೂ ಇಂಡಿ ಕೂಟದಲ್ಲಿ ಸಮನ್ವಯ ಇಲ್ಲವೇ ಇಲ್ಲ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ: KEA: ಕೆಇಎಯಿಂದ ಮೊದಲ ಬಾರಿ ಯಶಸ್ವಿ ವೆಬ್‌ಕಾಸ್ಟಿಂಗ್; 37 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಡಿಸಿಇಟಿ

ವಯನಾಡಲ್ಲಿ ಪ್ರಿಯಾಂಕಾಗೆ ಬೆಂಬಲ ಸಿಗುತ್ತದೆಯೇ?

ಪ್ರಿಯಾಂಕಾ ಗಾಂಧಿ ವಯನಾಡಲ್ಲಿ ಸ್ಪರ್ಧಿಸಲು ಹೊರಟಿದ್ದಾರೆ. ಸಿಪಿಐ, ಸಿಪಿಎಂ ಪಕ್ಷಗಳು ಅಲ್ಲಿ ನಿಮ್ಮನ್ನು ಬೆಂಬಲಿಸುತ್ತವೆಯೇ? ನೋಡಿಕೊಳ್ಳಿ ಎಂದು ಪ್ರಲ್ಹಾದ್‌ ಜೋಶಿ ಸವಾಲು ಹಾಕಿದರು.

NDA ಗೆಲುವಿನ ನಾಗಾಲೋಟ

ದೇಶದಲ್ಲಿ ಬಿಜೆಪಿ ನೇತೃತ್ವದ NDA ಗೆಲುವಿನ ನಾಗಾಲೋಟ ಮುಂದುವರೆಸಿದೆ. 10 ರಾಜ್ಯಗಳಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. 7 ರಾಜ್ಯ ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.50ಕ್ಕಿಂತ ಹೆಚ್ಚು ಮತ ಪಡೆದಿದೆ. ಒಡಿಸ್ಸಾದಲ್ಲಿ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುತ್ತಿದೆ. ಅರುಣಾಚಲ ಪ್ರದೇಶದಲ್ಲಿ 46 ಸ್ಥಾನಗಳನ್ನು ಗೆದ್ದು ಹೊಸ ದಾಖಲೆ ಬರೆದಿದೆ ಬಿಜೆಪಿ. ಆಂಧ್ರಪ್ರದೇಶದಲ್ಲಿ ಸಹ NDA ಆಡಳಿತದಲ್ಲಿದೆ. ಪಂಜಾಬ್ ಅಲ್ಲಿ ಅಪಪ್ರಚಾರದ ನಡುವೆಯೂ ಶೇ.10ರಷ್ಟು ಹೆಚ್ಚು ಮತ ಪಡೆದಿದ್ದೇವೆ ಎಂದು ಪ್ರಲ್ಹಾದ್‌ ಜೋಶಿ, ಎನ್‌ಡಿಎ ಸಾಧನೆಯನ್ನು ಬಿಚ್ಚಿಟ್ಟರು.

ಇದನ್ನೂ ಓದಿ: GST Council Meet : ನಕಲಿ ಬಿಲ್​ ತಡೆಗೆ ಬಯೋಮೆಟ್ರಿಕ್​ ವ್ಯವಸ್ಥೆ; ಜಿಎಸ್​ಟಿ ಕೌನ್ಸಿಲ್​ ಸಭೆಯಲ್ಲಿ ಹಲವು ನಿರ್ಧಾರಗಳು ಪ್ರಕಟ

ಕಾಂಗ್ರೆಸ್ 2 ಬಾರಿ ಸಮ್ಮಿಶ್ರ ಸರ್ಕಾರ ನಡೆಸಲಿಲ್ಲವೇ?

ಕೇಂದ್ರದಲ್ಲಿ ಕಾಂಗ್ರೆಸ್ 2 ಬಾರಿ ಸಮ್ಮಿಶ್ರ ಸರ್ಕಾರ ನಡೆಸಲಿಲ್ಲವೇ? ಎಂದು ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದರು. 2004ರಲ್ಲಿ ಕಾಂಗ್ರೆಸ್ 145 ಸೀಟು ಪಡೆದಿತ್ತು. ಬಿಜೆಪಿ 138 ಸೀಟು ಪಡೆದಿತ್ತು. ಆಗ ಕೇವಲ ಏಳೇ ಸೀಟು ಹೆಚ್ಚು ಪಡೆದು ಆಡಳಿತ ನಡೆಸಿದ ಕಾಂಗ್ರೆಸ್ ಈಗ 242 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬಿಜೆಪಿಯನ್ನು ಪ್ರಶ್ನಿಸುತ್ತಿದೆ ಎಂದು ವ್ಯಂಗ್ಯವಾಡಿದರು.

Continue Reading

ಬೆಂಗಳೂರು

Bengaluru News: ಐಟಿಐ ಸೆಂಟ್ರಲ್ ಶಾಲೆಯಲ್ಲಿ ಯೋಗ ದಿನಾಚರಣೆ

Bengaluru News: ಬೆಂಗಳೂರು ನಗರದ ಐ.ಟಿ.ಐ. ಸೆಂಟ್ರಲ್ ಶಾಲೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಎನ್.ಸಿ.ಸಿ. ತಂಡ ಹಾಗೂ ವಿದ್ಯಾರ್ಥಿಗಳಿಂದ ಹಲವು ಯೋಗಾಸನಗಳನ್ನು ಪ್ರದರ್ಶಿಸಲಾಯಿತು.

VISTARANEWS.COM


on

10th International Yoga Day celebration at ITI Central School Bengaluru
Koo

ಬೆಂಗಳೂರು: ನಗರದ ಐ.ಟಿ.ಐ ಸೆಂಟ್ರಲ್ ಶಾಲೆಯಲ್ಲಿ (Bengaluru News) 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (Yoga Day) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಎನ್.ಸಿ.ಸಿ. ತಂಡ ಹಾಗೂ ವಿದ್ಯಾರ್ಥಿಗಳಿಂದ ಹಲವು ಯೋಗಾಸನಗಳನ್ನು ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರಮತಿ ಪೊನ್ಮಲರ್ ಮಾತನಾಡಿ, ಯೋಗಾಭ್ಯಾಸದಿಂದ ಮನಸ್ಸು, ದೇಹ, ಆಲೋಚನೆ ಮತ್ತು ಕ್ರಿಯೆಗಳನ್ನು ಸಮಚಿತ್ತಗೊಳಿಸಲು ಸಹಕಾರಿಯಾಗಿದೆ. ಯೋಗ ಕೇವಲ ವ್ಯಾಯಾಮವಷ್ಟೇ ಅಲ್ಲದೇ ನಮ್ಮೆಲ್ಲರ ನಡುವೆ ಏಕತೆಯನ್ನು ಬಿಂಬಿಸುವ ಚಟುವಟಿಕೆಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: GST Council Meet : ನಕಲಿ ಬಿಲ್​ ತಡೆಗೆ ಬಯೋಮೆಟ್ರಿಕ್​ ವ್ಯವಸ್ಥೆ; ಜಿಎಸ್​ಟಿ ಕೌನ್ಸಿಲ್​ ಸಭೆಯಲ್ಲಿ ಹಲವು ನಿರ್ಧಾರಗಳು ಪ್ರಕಟ

ಯೋಗ ಪ್ರತಿಯೊಬ್ಬರ ಜೀವನದಲ್ಲೂ ಖಾಯಿಲೆ ಮುಕ್ತ , ಆರೋಗ್ಯವಂತ ಹಾಗೂ ಜೀವನಶೈಲಿಯನ್ನು ಬದಲಾಯಿಸಲು ಇರುವ ಒಂದು ವಿಶಿಷ್ಟ ಮಾರ್ಗ ಎಂದು ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಐ.ಟಿ.ಐ ಸೆಂಟ್ರಲ್ ಶಾಲೆಯ ಎನ್.ಸಿ.ಸಿ ತಂಡ ಹಾಗೂ ವಿದ್ಯಾರ್ಥಿಗಳಿಂದ ಹಲವು ಯೋಗಾಸನಗಳನ್ನು ಎನ್.ಸಿ.ಸಿ. ಅಧಿಕಾರಿ ಬಾಲಕೃಷ್ಣ ವಿ.ಎಚ್. ಅವರ ಮಾರ್ಗದರ್ಶನದಲ್ಲಿ ಪ್ರದರ್ಶಿಸಲಾಯಿತು.

ಈ ವೇಳೆ ತಾಡಾಸನ, ವೃಕ್ಷಾಸನ, ಪಾದಹಸ್ತಾಸನ, ತ್ರಿಕೋನಾಸನ, ಅರ್ಧಉಷ್ಟ್ರಾಸನ, ಶಶಾಂಕಾಸನ, ಸೇತುಬಂದಾಸನ, ಶಲಭಾಸನ, ಚಕ್ರಾಸನ, ಭುಜಂಗಾಸನ ಹಾಗೂ ಪ್ರಾಣಾಯಾಮಗಳನ್ನು ಪ್ರದರ್ಶಿಸಲಾಯಿತು. ಐ.ಟಿ.ಐ. ಕಾರ್ಖಾನೆಯ ವಿವಿಧ ಸ್ಥಳಗಳಲ್ಲಿ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾಮಂದಿರ ಶಾಲೆ, ಐ.ಟಿ.ಐ. ಮಹಿಳಾ ಸಬಲೀಕರಣ ಸಮಿತಿಯಿಂದಲೂ ಯೋಗ ಕಾರ್ಯಕ್ರಮ ಜರುಗಿತು.

ಇದನ್ನೂ ಓದಿ: Job Alert: ಅಂಚೆ ಇಲಾಖೆಯಲ್ಲಿ 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ

ಕಾರ್ಯಕ್ರಮದಲ್ಲಿ ಐ.ಟಿ.ಐ. ವಿದ್ಯಾಸಮಿತಿಯ ಆಡಳಿತಾಧಿಕಾರಿ ಲತಾ ಹಾಗೂ ಶಿಕ್ಷಕರು ಮತ್ತು ಇತರರು ಪಾಲ್ಗೊಂಡಿದ್ದರು.

Continue Reading

ಪ್ರಮುಖ ಸುದ್ದಿ

HD Kumaraswamy: ಎಚ್‌ಎಂಟಿ ಕಾರ್ಖಾನೆಗೆ ಮರು ಜೀವ: ಎಚ್.ಡಿ. ಕುಮಾರಸ್ವಾಮಿ

HD Kumaraswamy: ಬೆಂಗಳೂರಿನಲ್ಲಿ ಶನಿವಾರ HMT (ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್) ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೈಗಾರಿಕೆ ಅಭಿವೃದ್ಧಿ ಬಗ್ಗೆ ದೊಡ್ಡ ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಅವರ ಆತ್ಮನಿರ್ಭರ ಪರಿಕಲ್ಪನೆಯ ಮೂಲಕ ಎಚ್‌ಎಂಟಿ ಕಂಪನಿಯನ್ನು ಪುನರುಜ್ಜೀವನಗೊಳಿಸಬಹುದು ಎಂದಿದ್ದಾರೆ.

VISTARANEWS.COM


on

Union Minister HD Kumaraswamy meeting with high officials of HMT Company in Bengaluru
Koo

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy), ಬೆಂಗಳೂರಿನಲ್ಲಿ ಶನಿವಾರ ಎಚ್‌ಎಂಟಿ (HMT) (ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್) ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿದಂತೆ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು, ಕಂಪನಿಯ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.

ವಹಿವಾಟು, ನಿವ್ವಳ ಲಾಭ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು, ಕಂಪನಿಯ ಆರ್ಥಿಕತೆ, ಉತ್ಪಾದನೆ, ಇನ್ನಿತರೆ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದರು.

ಇದನ್ನೂ ಓದಿ: Job Alert: ಅಂಚೆ ಇಲಾಖೆಯಲ್ಲಿ 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ

ಒಂದು ಕಾಲದಲ್ಲಿ ವೈಭವಯುತವಾಗಿ ಮೆರೆದಿದ್ದ ಕಂಪನಿ ಇವತ್ತು ದುಸ್ಥಿತಿಗೆ ಬಂದಿದೆ. ಕಂಪನಿಯನ್ನು ಮತ್ತಷ್ಟು ಸದೃಢ ಮಾಡಿ. ಅದಕ್ಕೆ ಅಗತ್ಯವಾದ ಉಪ ಕ್ರಮ ಕೈಗೊಳ್ಳಿ. ಅದಕ್ಕೆ ಅಗತ್ಯವಾದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಎಂದು ರಾಜೇಶ್ ಕೊಹ್ಲಿ ಅವರಿಗೆ ಸಚಿವರು ಸೂಚಿಸಿದರು.

ಮೋದಿಯವರ ಆತ್ಮನಿರ್ಭರ ಪರಿಕಲ್ಪನೆಯಂತೆ HMT ಪುನಶ್ಚೇತನ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೈಗಾರಿಕೆ ಅಭಿವೃದ್ಧಿ ಬಗ್ಗೆ ದೊಡ್ಡ ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಅವರ ಆತ್ಮನಿರ್ಭರ ಪರಿಕಲ್ಪನೆಯ ಮೂಲಕ ಎಚ್‌ಎಂಟಿ ಕಂಪನಿಯನ್ನು ಪುನರುಜ್ಜೀವನಗೊಳಿಸಬಹುದು. ಪ್ರಧಾನಿಗಳ ಆಲೋಚನೆಯಂತೆ ಚಿಂತಿಸಿ ಕಂಪನಿಯ ಚೇತರಿಕೆಗೆ ಮುಂದಾಗಿ. ಅದಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರ ಒದಗಿಸುತ್ತದೆ ಎಂದು ಸಚಿವರು ಹೇಳಿದರು.

ನೀವು ರಕ್ಷಣಾ ಇಲಾಖೆಗೆ, ಬಾಹ್ಯಾಕಾಶ ಯೋಜನೆಗಳಿಗೆ ಪರಿಕರಗಳನ್ನು ತಯಾರಿಸಿ ಕೊಡುತ್ತೀರಿ. ದೇಶದ ಉದ್ದಗಲಕ್ಕೂ ಕಂಪನಿಯ ಉತ್ಪಾದನಾ ಘಟಕಗಳು ಇವೆ. ಹೀಗಾಗಿ ಕಂಪನಿಯ ಕ್ಷಮತೆಯನ್ನು ಹೆಚ್ಚಿಸಬೇಕು ಎಂದು ಸಚಿವರು ಸಲಹೆ ನೀಡಿದರು. ಕಂಪನಿಯು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಇದೇ ವೇಳೆ ಕಂಪನಿಯ ಅಧ್ಯಕ್ಷ ರಾಜೇಶ್ ಕೊಹ್ಲಿ ತಿಳಿಸಿದರು. ನಷ್ಟದ ಜತೆಗೆ ಆರ್ಥಿಕ ಬಿಕ್ಕಟ್ಟು, ನ್ಯಾಯಾಲಯಗಳಲ್ಲಿ ಮೊಕದ್ದಮೆ ಇತ್ಯಾದಿ ಸಂಕಷ್ಟಗಳನ್ನು ಎಚ್‌ಎಂಟಿ ಎದುರಿಸುತ್ತಿದೆ. ಇದಕ್ಕೆ ಕೇಂದ್ರದ ನೆರವು ಬೇಕಿದೆ ಎಂದು ಸಚಿವರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.

ಇದನ್ನೂ ಓದಿ: Karnataka Weather : ವೀಕೆಂಡ್‌ ಪ್ರಿಯರೇ ಎಚ್ಚರ; ಭಾನುವಾರ ಸುರಿಯಲಿದೆ ಮಳೆ ಧಾರಾಕಾರ

ಸಭೆಯಲ್ಲಿ ಕೋಲಾರ ಸಂಸದ ಮಲ್ಲೇಶ್ ಬಾಬು, ಕಂಪನಿಯ ನಿರ್ದೇಶಕಿ ಸಮೀನಾ ಕೊಹ್ಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Continue Reading
Advertisement
Gully cricket vibes
ಕ್ರೀಡೆ5 mins ago

Gully Cricket Vibes: ಗಲ್ಲಿ ಕ್ರಿಕೆಟ್​ನಂತೆ ಚೆಂಡು ಹುಡುಕಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Share Market Scam
ಕ್ರೈಂ16 mins ago

Share Market Scam: ಮುಖೇಶ್ ಅಂಬಾನಿ ಡೀಪ್ ಫೇಕ್‌! 7 ಲಕ್ಷ ರೂ. ಕಳೆದುಕೊಂಡ ವೈದ್ಯೆ

Tharun Sudhir sonal monteiro will get marriage
ಸಿನಿಮಾ17 mins ago

Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

Rushikonda Palace Issue
ದೇಶ31 mins ago

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

Sumit Nagal
ಕ್ರೀಡೆ37 mins ago

Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

Suraj Revanna Case
ಕರ್ನಾಟಕ53 mins ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಸೂರಜ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್1 hour ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ1 hour ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ2 hours ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ3 hours ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌