KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ - Vistara News

ಬೆಂಗಳೂರು

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಎಂಜಲು ಉಗುಳುವ ಬರದಲ್ಲಿ ಕಿಟಿಕಿಯ ಸಣ್ಣ ಸಂದಿಯೊಳಗೆ ತಲೆ ಹಾಕಿ ಪರದಾಡಿದ ಘಟನೆ ನಡೆದಿದೆ. ಮತ್ತೊಂದು ಕಡೆ ಕೆಎಸ್‌ಆರ್‌ಟಿಸಿ ಬಸ್‌ ಸಿಬ್ಬಂದಿ ಸೈಡ್‌ ಬಿಡಲಿಲ್ಲ ಎಂದು ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ.

VISTARANEWS.COM


on

KSRTC BUS Woman locks in window of KSRTC bus after going to spit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (KSRTC Bus) ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ತಲೆಯು ಲಾಕ್‌ ಆದ ಘಟನೆ ನಡೆದಿದೆ. ಕಿಟಿಕಿಯಲ್ಲಿ ತಲೆ ಸಿಕ್ಕಿಸಿಕೊಂಡ ಪರಿಣಾಮ ಮಹಿಳೆ ಕೆಲಕಾಲ ಪರದಾಡಬೇಕಾಯಿತು.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಎಂಜಲು ಉಗುಳಲು ಬಸ್‌ನ ಕಿಟಿಕಿಯ ಸಣ್ಣ ಸಂದಿಯೊಳಗೆ ತಲೆಯನ್ನು ಹೊರಹಾಕಿದ್ದರು. ಹೀಗೆ ಹೊರ ಹಾಕಿದ ತಲೆಯು ವಾಪಸ್‌ ಹಿಂದಕ್ಕೆ ಬಾರದೇ ಅಲ್ಲೆ ಲಾಕ್‌ ಆಗಿತ್ತು. ಕಾರಣ ಕಿಟಕಿಯ ಸಣ್ಣ ಜಾಗಕ್ಕೆ ನುಗ್ಗಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿತ್ತು.

ಈ ವೇಳೆ ಮಹಿಳೆಯ ಪರದಾಟ ಹಾಗೂ ಕೂಗಾಟ ಕಂಡು ಸಹ ಪ್ರಯಾಣಿಕರು ಸಹಾಯಕ್ಕೆ ಧಾವಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಬಳಿಕ ಮಹಿಳೆ ತಲೆ ಲಾಕ್‌ ಆಗಿರುವುದು ಗಮನಕ್ಕೆ ಬಂದಾಕ್ಷಣ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರು ಬಸ್ ನಿಲ್ಲಿಸಿದ್ದಾರೆ. ಬಳಿಕ 15 ನಿಮಿಷಗಳ ಕಾರ್ಯಾಚರಣೆ ಮಾಡಿ, ಜಾಗರೂಕತೆಯಿಂದ ಮಹಿಳೆಯ ತಲೆಯನ್ನು ಕಿಟಿಕಿಯಿಂದ ಬಿಡಿಸಿ, ರಕ್ಷಿಸಿದ್ದಾರೆ.

ಇತ್ತ ಮಹಿಳೆಯು ಬದುಕಿತು ಬಡ ಜೀವ ಎಂಬಂತೆ ತಲೆಯನ್ನು ಒಳಗೆ ಎಳೆದುಕೊಂಡಿದ್ದಾರೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಗೆ ಯಾಕ್ ಬೇಕಿತ್ತು ಈ ಅವಾಂತರ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ

ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಯ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಆಗುಂಬೆಯಿಂದ ಹೆಬ್ರಿಗೆ ಹೊರಟಿತ್ತು. ಈ ವೇಳೆ ಬಸ್ ಹಿಂದೆ ಇದ್ದ ಪ್ರವಾಸಿಗರ ಕಾರಿಗೆ ಸೈಡ್ ನೀಡಲಿಲ್ಲ ಎನ್ನುವ ಆರೋಪವಿದೆ. ಹೀಗಾಗಿ ಗಾಟಿಯ ಮಧ್ಯೆ ಬಸ್‌ಗೆ ಅಡ್ಡಹಾಕಿ ನಿರ್ವಾಹಕ ಮತ್ತು ಚಾಲಕನಿಗೆ ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ. ಈ ಗಲಾಟೆಯಿಂದಾಗಿ ಘಾಟಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Karnataka Rain : ಬೆಂಗಳೂರು, ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ (Heavy Rain Effect) ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮಳೆಗೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಈ ಮಧ್ಯೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ಕಾರವಾರ: ಭಾನುವಾರವೂ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲವೆಡೆ ಮಳೆಯು (Heavy Rain) ಅಬ್ಬರಿಸಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ (Karnataka Rain) ಇತ್ತು.. ಸಂಜೆ ಆಗುತ್ತಿದ್ದಂತೆ ಮೆಜೆಸ್ಟಿಕ್‌, ಕಾಟನ್‌ಪೇಟೆ, ಕೆಆರ್‌ ಮಾರ್ಕೆಟ್‌ ,ಟೌನ್ ಹಾಲ್, ಶಿವಾನಂದ ಸರ್ಕಲ್, ಮೈಸೂರು ಸರ್ಕಲ್ ಸುತ್ತಮುತ್ತ ಮಳೆಯಾಗಿದೆ. ಜಿಟಿ ಜಿಟಿಯಾಗಿ ಶುರುವಾದ ಮಳೆಯು ನಂತರ ಕೆಲ ಕಾಲ ಅಬ್ಬರಿಸಿತ್ತು. ಇತ್ತ ಧಾರವಾಡ ನಗರದಲ್ಲೂ ನಿರಂತರ ಮಳೆಯಾಗಿದೆ. ಬೆಳಗ್ಗೆಯಿಂದಲ್ಲೂ ಬಿಟ್ಟು ಬಿಡದೆ ಸುರಿಯುತ್ತಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಿಂದಾಗಿ ಸವಾರರು ಪರದಾಡಿದರು. ಧಾರವಾಡ ಗ್ರಾಮೀಣ ಕೆಲ ಭಾಗಗಳಲ್ಲಿ ಹೊರತುಪಡಿಸಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.

ನಿರಂತರ ಮಳೆಗೆ ಗುಡ್ಡ ಕುಸಿತ

ಚಿಕ್ಕಮಗಳೂರಿನಲ್ಲಿ ಬಿಟ್ಟುಬಿಡದೆ ಮಳೆಯು ಸುರಿಯುತ್ತಿದ್ದು, ರಸ್ತೆ ಬದಿ ಗುಡ್ಡ ಕುಸಿತ ಹೆಚ್ಚಾಗುತ್ತಿದೆ. ಶೃಂಗೇರಿ ತಾಲೂಕಿನ ಕೂತು ಗೋಡು ಗ್ರಾಮದ ಬಳಿ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಹಲವು ಗಂಟೆಗಳ ಕಾಲ ಸಂಚಾರ ಬಂದ್ ಆಗಿತ್ತು. ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದರು. ಕಳೆದ ಏಳೆಂಟು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪದೆಪದೇ ಗುಡ್ಡದ ಮಣ್ಣು ಕುಸಿಯುತ್ತಿದೆ. ಹೀಗಾಗಿ ತಾಲೂಕು ಆಡಳಿತವು ಗುಡ್ಡಗಾಡು ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಅಡ್ಡಲಾಗಿ ಬಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿತ್ತು. ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಇತ್ತ ಹೆದ್ದಾರಿ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆವರೆಗೆ ವಾಹನಗಳು ಹೆದ್ದಾರಿಯ ಮತ್ತೊಂದು ಬದಿಯಿಂದ ಸಂಚರಿಸುತ್ತಿದ್ದವು.

ಮುಂದುವರಿದ ಪ್ರವಾಸಿಗರ ಹುಚ್ಚಾಟ

ಬೆಳಗಾವಿಯ ಗೋಕಾಕ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನೀರು ರಭಸವಾಗಿ ಧುಮ್ಮಿಕ್ಕುವ ಸ್ಥಳಗಳಲ್ಲಿ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಜತೆಗೆ ಕೆಲವರು ಬಂಡೆಗಲ್ಲುಗಳ‌ ಮೇಲೆ ಕುಳಿತು ಊಟ ಮಾಡುತ್ತಿರುವುದು ಕಂಡು ಬಂದಿದೆ. ಜಲಪಾತಕ್ಕೆ ಭದ್ರತೆ ‌ಒದಗಿಸದೆ ಪೊಲೀಸರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಮಳೆಯಲ್ಲೇ ಟ್ರಾಫಿಕ್‌ಗೆ ಸಿಲುಕಿದ ಪ್ರವಾಸಿಗರು

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಿತಾಣಕ್ಕೆ ಪ್ರವಾಸಿಗರ ದಂಡು ಹರಿದುಬರುತ್ತಿದ್ದು, ಮಳೆಯಲ್ಲೇ ಟ್ರಾಫಿಕ್‌ನಲ್ಲಿ ಸಿಲುಕಿದರು. ಸುಮಾರು ಎರಡು ಗಂಟೆ ಕಾಲ ನಿಂತಲ್ಲೇ ನಿಲ್ಲುಂತಾಯಿತು. ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಟೂರಿಸ್ಟ್‌ಗಳು ಆಗಮಿಸಿದ್ದರು.

ಇದನ್ನೂ ಓದಿ: Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

ಮಳೆಗೆ ಜಲಾಶಯಗಳು ಭರ್ತಿ!

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ರಾಜ್ಯದ ಹಲವೆಡೆ ಜಲಾಶಯಗಳು ಭರ್ತಿಯಾಗುತ್ತಿವೆ. ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯ ಭರ್ತಿಗೆ ಎರಡು ಅಡಿ ಬಾಕಿ‌ ಇದೆ. ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವು ಗಣನೀಯವಾಗಿ ಏರಿಕೆ ಆಗುತ್ತಿದೆ. ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಅಣೆಕಟ್ಟಾಗಿದೆ.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ. ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರೀ ಪ್ರಮಾಣ ಹೆಚ್ಚಳವಾಗುತ್ತಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ನಿನ್ನೆ ಶನಿವಾರ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು ಭಾನುವಾರ 18. 24 ಗೆ ಏರಿಕೆ ಆಗಿದೆ.

ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇರುವುದರಿಂದ ರೈತರಲ್ಲಿ ಸಂತಸ ಹೆಚ್ಚಿಸಿದೆ. ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿ ಆಗಿದೆ. ಇದೇ ರೀತಿ ಒಳ ಹರಿವು ಹೆಚ್ಚಾದರೆ 10 ರಿಂದ 15 ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ

Gold Rate Today:ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,765 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,380 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,120. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,650 ಮತ್ತು ₹ 6,76,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,040 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,800 ಮತ್ತು ₹ 7,38,000 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ನಿನ್ನೆ ಏಕಾಏಕಿ ಚಿನ್ನದ ದರ ಏರಿಕೆ ಕಂಡಿದ್ದರು ಸ್ವರ್ಣ ಪ್ರಿಯರಿಗೆ ಶಾಕ್‌ ನೀಡಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,765 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,380 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,120. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,650 ಮತ್ತು ₹ 6,76,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,040 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,800 ಮತ್ತು ₹ 7,38,000 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,780₹ 7,395
ಮುಂಬೈ₹ 6,765₹ 7,380
ಬೆಂಗಳೂರು₹ 6,765₹ 7,380
ಚೆನ್ನೈ₹ 6,820₹ 7,440

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 94.50 ಹಾಗೂ 8 ಗ್ರಾಂಗೆ ₹ 756 ಇದೆ. 10 ಗ್ರಾಂಗೆ ₹ 945 ಹಾಗೂ 1 ಕಿಲೋಗ್ರಾಂಗೆ ₹ 94,500 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Project Zorawar: ಚೀನಾಗೆ ಪೆಟ್ಟು ಕೊಡಲು ದೇಶೀಯವಾಗಿ ಯುದ್ಧ ಟ್ಯಾಂಕ್‌ ಉತ್ಪಾದನೆ; ಏನಿವುಗಳ ವಿಶೇಷ?

Continue Reading

ಕರ್ನಾಟಕ

Short Circuit: ಮೈಸೂರು ವಿವಿ ಸಂಶೋಧಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌

Short Circuit: ಮೈಸೂರು ವಿಶ್ವ ವಿದ್ಯಾನಿಲಯದ ಸಂಶೋಧಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಹಾನಿಯಾಗಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಡಿಪಿ ಹೊತ್ತಿ ಉರಿದಿದ್ದು, ಕೂಡಲೇ ವಿದ್ಯಾರ್ಥಿಗಳು ಹೊರಗೋಡಿ ಬಂದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

VISTARANEWS.COM


on

Short Circuit
Koo

ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯದ ಸಂಶೋಧಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಹಾನಿಯಾಗಿಲ್ಲ. ಶಾರ್ಟ್ ಸರ್ಕ್ಯೂಟ್‌ (Short Circuit)ನಿಂದ ಡಿಪಿ (Distribution Panel) ಹೊತ್ತಿ ಉರಿದಿದ್ದು, ಕೂಡಲೇ ವಿದ್ಯಾರ್ಥಿಗಳು ಹೊರಗೋಡಿ ಬಂದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

ಮೈಸೂರಿನ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿರುವ ಸಂಶೋಧಕರ ನಿಲಯಯಲ್ಲಿ ಈ ಘಟನೆ ನಡೆದಿದೆ. ಶಬ್ದ ಕೇಳುತ್ತಿದ್ದಂತೆ ವಿಧ್ಯಾರ್ಥಿಗಳು ಹೊರಗೆ ಓಡಿ ಬಂದಿದ್ದಾರೆ. ಪಟಾಕಿಯಂತೆ ಡಿಪಿ ಸಿಡಿದಿದೆ. ಈ ಹಿಂದೆಯೇ ವಿದ್ಯುತ್ ವ್ಯವಸ್ಥೆಯಲ್ಲಿ ಸಮಸ್ಯೆ ಕಂಡು ಬರುತ್ತಿರುವುದಾಗಿ ವಿದ್ಯಾರ್ಥಿಗಳು ಅಧಿಕಾರಿಗಳಿಗೆ ತಿಳಿಸಿದ್ದರು. ರಿಪೇರಿ ಮಾಡಿಸುವಂತೆ ಮನವಿಯನ್ನೂ ಮಾಡಿದ್ದರು. ಆದರೆ ಕ್ರಮ ಕೈಗೊಂಡಿರಲಿಲ್ಲ. ಇದೀಗ ಅಧಿಕಾರಿಗಳ ನಿರ್ಲಕ್ಷ್ಯ ಡಿಪಿ ಹೊತ್ತಿ ಉರಿದಿದೆ.

ʼʼವಿದ್ಯುತ್‌ ವ್ಯವಸ್ಥೆಯಲ್ಲಿ ಸಮಸ್ಯೆ ಇರುವ ಕುರಿತು ಈ ಹಿಂದೆಯೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದೆವು. ಆದರೆ ಕ್ರಮ ಕೈಗೊಂಡಿರಲಿಲ್ಲ. ಡಿಪಿ ಪಟಾಕಿಯಂತೆ ಸದ್ದು ಮಾಡಿ ಹೊತ್ತಿ ಉರಿದಿದೆ. ಶಬ್ದ ಕೇಳಿದ ಕೂಡಲೇ ನಾವೆಲ್ಲ ಹೊರಗೋಡಿ ಬಂದೆವುʼʼ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಯುವಕ ಆತ್ಮಹತ್ಯೆ

ಮೈಸೂರು: ರೈಲು ಹಳಿಗೆ ಹಾರಿ ಯುವಕನೋರ್ವ ಅತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಯಾದವಗಿರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಸಂಜಯ್ (22) ಅತ್ಮಹತ್ಯೆ ಮಾಡಿಕೊಂಡಿರುವ ಯುವಕ. ಮೈಸೂರಿನ ಚಾಮರಾಜ ಮೊಹಲ್ಲಾ ನಿವಾಸಿ ಸಂಜಯ್‌ನ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ನಿಂತ ಲಾರಿಗೆ‌ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಧಾರವಾಡ: ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು‌ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ದೀಪಕ್ ಎಂದು ಗುರುತಿಸಲಾಗಿದೆ.

ಬೇಲೂರು ಕೈಗಾರಿಕಾ ಪ್ರದೇಶದಿಂದ ಕೆಲಸ‌ ಮುಗಿಸಿ ಮನೆಗೆ ಹೊರಟಿದ್ದ‌ ವೇಳೆ ಈ ಅವಘಡ ಸಂಭವಿಸಿದೆ. ಮೂವರು ಸಂಚರಿಸುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ದೀಪಕ್‌ ಸ್ಥಳದಲ್ಲೇ ಮೃತಪಟ್ಟರು. ಇನ್ನಿಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳು ಹಾಗೂ ಸಾವನ್ನಪ್ಪಿದ ಮೃತ ದೀಪಕ್‌ ಬೆಳಗಾವಿ ಜಿಲ್ಲೆಯ ಗಂಡಿಗವಾಡ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಗರಗ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

ಶಾಸಕರ ಬರ್ತ್ ಡೇ ಫ್ಲೆಕ್ಸ್‌ ಬಿದ್ದ ಗಂಭೀರ ಗಾಯ

ಬೆಂಗಳೂರು: ಶಾಸಕರ ಬರ್ತ್ ಡೇ ಫ್ಲೆಕ್ಸ್‌ ಮೈಮೇಲೆ ಬಿದ್ದು ವೃದ್ಧರೊಬ್ಬರು ಗಂಭೀರ ಗಾಯಗೊಂಡು ಕೋಮಾದಲ್ಲಿರುವ ಘಟನೆ ನಡೆದಿದೆ. ಸಿಂಗನಾಯಕನಹಳ್ಳಿ ಮುಖ್ಯ ರಸ್ತೆಯಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್‌ ಬಿದ್ದು 77 ವರ್ಷದ ಭಕ್ತವಸ್ತಲ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಮೊಮ್ಮಗಳನ್ನ ಕರೆತರಲು ಬೈಕ್ ಮೇಲೆ ಹೋಗುತ್ತಿದ್ದ ಭಕ್ತವಸ್ತಲ ಅವರ ಮೇಲೆ ಶನಿವಾರ ಮಧ್ಯಾಹ್ನ ಸ್ಥಳೀಯ ಶಾಸಕರ ಬರ್ತ್ ಡೇಗೆ ವಿಶ್ ಮಾಡಿ ಅಳವಡಿಸಿದ್ದ ಫ್ಲೆಕ್ಸ್‌ ಗಾಳಿಗೆ ಹಾರಿ ಬಂದು ಬಿದ್ದಿತ್ತು. ಇದರಿಂದ ನಿಯಂತ್ರಣ ಕಳೆದುಕೊಂಡು ಅವರು ರಸ್ತೆಗೆ ಬಿದ್ದು ಬಿಟ್ಟಿದ್ದರು. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

Continue Reading

ಬೆಂಗಳೂರು

Road Accident: ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

Road Accident: ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಹೇಮಂತ ಕುಮಾರ್ (27) ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ರಾಜಕಾಲುವೆಗೆ ಬಿದ್ದಿದ್ದರು. ಶುಕ್ರವಾರದಿಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹೇಮಂತ ಕುಮಾರ್‌ಗಾಗಿ ಸತತವಾಗಿ ಹುಡುಕಾಟ ನಡೆಸುತ್ತಿದ್ದರು. ಇದೀಗ ಬಿದ್ದ ಸ್ಥಳದಲ್ಲಿಯೇ ಯುವಕನ ಮೃತದೇಹ ಪತ್ತೆಯಾಗಿದೆ.

VISTARANEWS.COM


on

Road Accident
Koo

ಬೆಂಗಳೂರು: ರಾಜಕಾಲುವೆ (Rajakaluve)ಗೆ ಬಿದ್ದ ಬೈಕ್‌ ಸವಾರನ ಮೃತದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಹೇಮಂತ ಕುಮಾರ್ (27) ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ರಾಜಕಾಲುವೆಗೆ ಬಿದ್ದಿದ್ದರು. ಡಿವೈಡರ್‌ಗೆ ಗುದ್ದಿದ ಪರಿಣಾಮ ಹೇಮಂತ ಕುಮಾರ್ ಚಿಮ್ಮಿ ವೃಷಭಾವತಿ ನದಿ‌ ರಾಜಕಾಲುವೆ ಒಳಗೆ ಬಿದ್ದಿದ್ದರು. ವೇಗವಾಗಿ ಬೈಕ್‌ ಚಲಾಯಿಸಿದ್ದರಿಂದ, ಬೈಕ್‌ ಡಿವೈಡರ್‌ಗೆ ಗುದ್ದಿದ ಪರಿಣಾಮ ಅವರು ಚಿಮ್ಮಿ ರಾಜಕಾಲುವೆ ಒಳಗೆ ಬಿದ್ದಿದ್ದಾರೆ ಎಂದು ಊಹಿಸಲಾಗಿದೆ. ಸಣ್ಣದಾಗಿ ಮಳೆ ಬರುತ್ತಿದ್ದುದರಿಂದ ಡಿವೈಡರ್‌ ಗುರುತಿಸಲು ಸಾಧ್ಯವಾಗದೆ ಈ ಅವಘಡ ಸಂಭವಿಸಿದೆ. ಆದರೆ ಮೂರು ದಿನಗಳಿಂದ ಅವರು ಪತ್ತೆಯಾಗಿರಲಿಲ್ಲ. ಇದೀಗ ಮೃತದೇಹ ಕಂಡು ಬಂದಿದೆ (Road Accident).

ಸತತ ಶೋಧ ಕಾರ್ಯ

ಶುಕ್ರವಾರದಿಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹೇಮಂತ ಕುಮಾರ್‌ಗಾಗಿ ಸತತವಾಗಿ ಹುಡುಕಾಟ ನಡೆಸುತ್ತಿದ್ದರು. ಇದೀಗ ಬಿದ್ದ ಸ್ಥಳದಲ್ಲಿಯೇ ಯುವಕನ ಮೃತದೇಹ ಪತ್ತೆಯಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಮೃತದೇಹವನ್ನು ಮೇಲಕ್ಕೆ ಎತ್ತಿ ಅಂಬ್ಯುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಯಾದಗಿರಿ: ಬಾವಿಗೆ ಎಸೆದು ಹಸುಗೂಸನ್ನು ಕೊಲೆ (Murder case) ಮಾಡಲಾಗಿದೆ. ಯಾದಗಿರಿ ನಗರದ ಅಂಬೇಡ್ಕರ್ ಬಡಾವಣೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮೀನಾಕ್ಷಿ (2 ತಿಂಗಳು) ಮೃತ ದುರ್ದೈವಿ. ನಾಗೇಶ್ ಹಾಗೂ ಚಿಟ್ಟೆಮ್ಮ ದಂಪತಿಯ ಮಗು ಮೀನಾಕ್ಷಿಯನ್ನು ಕೊಲೆ ಯಾರು ಮಾಡಿದ್ದಾರೆ? ಯಾಕೆ‌‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಬಡಾವಣೆಯ ಹೊರ ಭಾಗದ ನಿರ್ಜನ ಪ್ರದೇಶದಲ್ಲಿರುವ ಬಾವಿಗೆ ಬಿಸಾಡಿ ಹೋಗಿದ್ದಾರೆ.

ಹೆಣ್ಣು ಮಗು ಎಂಬ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಮಗುವಿನ ಪೋಷಕರು ಕಣ್ಣೀರು ಹಾಕುತ್ತಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಯಾದಗಿರಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಮೇಲೆ ಎತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಯಾದಗಿರಿ ನಗರ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಬನ್ನೇರುಘಟ್ಟ ಸಫಾರಿ ವೇಳೆ ಸಿಬ್ಬಂದಿ ಮೇಲೆ ಕರಡಿ ದಾಳಿ

ಬೆಂಗಳೂರು ಗ್ರಾಮಾಂತರ: ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಫಾರಿ ವೇಳೆ ಕರಡಿಯೊಂದು (Bear Attack) ಸಿಬ್ಬಂದಿ ಮೇಲೆ ದಾಳಿ (Wild Animal Attack) ಮಾಡಿದೆ. ಬೆಂಗಳೂರು ಹೊರವಲಯ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಘಟನೆ ನಡೆದಿದೆ.ಬೆಟ್ಟಪ್ಪ (54) ಕರಡಿ ದಾಳಿಗೊಳಗಾದವರು. ಬೆಟ್ಟಪ್ಪ ಕಳೆದ ಇಪ್ಪತ್ತು ವರ್ಷಗಳಿಂದ ಬನ್ನೇರುಘಟ್ಟದಲ್ಲಿ ಸಫಾರಿಯ ಗೇಟ್‌ ಆಪರೇಟರ್‌ ಕೆಲಸ ಮಾಡುತ್ತಿದ್ದಾರೆ. ಶನಿವಾರ ಸಫಾರಿಯಲ್ಲಿ ಗೇಟ್ ಆಪರೇಟ್ ಮಾಡುವಾಗ ಏಕಾಏಕಿ ಕರಡಿ ದಾಳಿ ಮಾಡಿದೆ. ಬೆಟ್ಟಪ್ಪ ಗಂಭೀರ ಗಾಯಗೊಂಡಿದ್ದು. ಅಪೋಲೋ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಾವು ಬದುಕಿನ ನಡುವೆ ಬೆಟ್ಟಪ್ಪ ಹೋರಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ | Viral News: ಮದುವೆಯಾಗಲು ನಿರಾಕರಿಸಿದ ಪ್ರಿಯಕರನ ಆ ʼಅಂಗʼಕ್ಕೆ ಕತ್ತರಿ ಹಾಕಿದ ಪ್ರಿಯತಮೆ

Continue Reading
Advertisement
Viral News
ದೇಶ17 mins ago

Viral News: ಶಾಕಿಂಗ್‌ ಘಟನೆ! ಬುದ್ದಿ ಹೇಳಿದ ಗುರುವನ್ನೇ ಚುಚ್ಚಿ ಕೊಂದ ವಿದ್ಯಾರ್ಥಿ

ಪ್ರಮುಖ ಸುದ್ದಿ24 mins ago

Ravi Bishnoi : ಭಾರತ ಪರ ಸ್ಪಿನ್​ ಬೌಲಿಂಗ್​​ನಲ್ಲಿ ವಿಶೇಷ ಸಾಧನೆ ಮಾಡಿದ ರವಿ ಬಿಷ್ಣೋಯ್​​

Shashi Tharoor
ಕ್ರೀಡೆ30 mins ago

Shashi Tharoor: ಜಿಂಬಾಬ್ವೆ ಎದುರು ಭಾರತಕ್ಕೆ ಸೋಲು: ಲೇವಡಿ ಮಾಡಿದ ಶಶಿ ತರೂರ್

Karnataka Rain
ಮಳೆ35 mins ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Money Guide
ಮನಿ-ಗೈಡ್36 mins ago

Money Guide: ನಿಮ್ಮ ಎಲ್‌ಐಸಿ ಪಾಲಿಸಿ ಲ್ಯಾಪ್ಸ್‌ ಆಗಿದೆಯಾ? ನವೀಕರಿಸಲು ಹೀಗೆ ಮಾಡಿ

Mumbai Hit And Run
ದೇಶ36 mins ago

Mumbai Hit And Run: ಮುಂಬೈನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಮಹಿಳೆ ಬಲಿ; ಶಿವಸೇನೆ ನಾಯಕನ ಬಂಧನ!

Tharun Sudhir Bigg update marriage
ಸ್ಯಾಂಡಲ್ ವುಡ್46 mins ago

Tharun Sudhir: ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ತರುಣ್ ಸುಧೀರ್; ಹುಡುಗಿ ಹೇಗಿರಬೇಕು ಅಂದ್ರೆ….

Dengue Cases in Mysore
ಕರ್ನಾಟಕ48 mins ago

Dengue Cases in Mysore: ಮೈಸೂರಿನಲ್ಲಿ ಡೆಂಗ್ಯೂಗೆ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

ishan Kishan
ಪ್ರಮುಖ ಸುದ್ದಿ54 mins ago

Ishan Kishan : ನನ್ನನ್ನು ಹೊರಗಿಟ್ಟಿರುವ ತೀರ್ಮಾನ ಮೂರ್ಖತನದ್ದು; ಜಯ್​ ಶಾಗೆ ಟಾಂಗ್​ ಕೊಟ್ಟ ಇಶಾನ್​ ಕಿಶನ್​

Rishab Shetty Birthday pragati shetty cute wish
ಸಿನಿಮಾ1 hour ago

Rishab Shetty: ನನ್ನ ಜೀವನದ ಆಧಾರಸ್ತಂಭ ಎಂದು ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಪತ್ನಿ ಕ್ಯೂಟ್‌ ವಿಶ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ35 mins ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ11 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ23 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

ಟ್ರೆಂಡಿಂಗ್‌