Lakshmi Hebbalkar: ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ - Vistara News

ಬೆಂಗಳೂರು

Lakshmi Hebbalkar: ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅವಕಾಶ ಕಲ್ಪಿಸಿದ್ದಾರೆ.

VISTARANEWS.COM


on

Lakshmi Hebbalkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವಕಾಶ ಕಲ್ಪಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ.

Lakshmi Hebbalkar

ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳಲು ಸಚಿವರು ಕೋರಿದ್ದಾರೆ.
ರೀಲ್ಸ್ ಮಾಡಿ ಸಾಮಾಜಿಕ ಜಾಲ ಜಾಲತಾಣಗಳಾದ ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ಕೋರಿದ್ದಾರೆ.

ಲಾಸ್ಟ್‌ ಡೇಟ್‌ ಯಾವಾಗ?

ಯಾವ ಯಜಮಾನಿಯರು ಮಾಡಿದ ರೀಲ್ಸ್‌ಗೆ ಹೆಚ್ಚು ವಿವರ್ಸ್ ಬಂದಿದೆಯೋ ಅಂತಹ ಯಜಮಾನಿಯರಿಗೆ ಒಂದು ಬಹುಮಾನ ಘೋಷಿಸಿದ್ದಾರೆ. ಇಲ್ಲಿಂದ ಒಂದು ತಿಂಗಳು ಅಂದರೆ ಸೆಪ್ಪಂಬರ್ 30ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಹಂಚಿಕೊಳ್ಳಬೇಕಿದೆ. ಜಾಸ್ತಿ ವಿವರ್ಸ್ ಸಿಕ್ಕಿದ ಯಜಮಾನಿಯರಿಗೆ ಸಚಿವರು ವೈಯಕ್ತಿಕವಾಗಿ ಒಂದು ಬಹುಮಾನವನ್ನು ನೀಡಲಿದ್ದಾರೆ. ಮೊದಲ 50 ಯಜಮಾನಿಯರ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ; ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KPSC Exam: ಕೆಪಿಎಸ್ಸಿ ಮರು ಪರೀಕ್ಷೆ; ಕೆಟ್ಟ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಬಂತು- ಆರ್‌ ಅಶೋಕ್‌‌ ವ್ಯಂಗ್ಯ

KPSC Exam: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹ ಎಂದು ಆರ್‌ ಅಶೋಕ್‌ ತಿಳಿಸಿದ್ದಾರೆ. ಕಡೆಗೂ ಕೆಟ್ಟ ಮೇಲೆ ಬುದ್ಧಿ ಬಂತಲ್ಲ ಎಂದು ಕಾಲೆಳೆದಿದ್ದಾರೆ.

VISTARANEWS.COM


on

SSLC examination-2 to begin from tomorrow at over 700 centres
Koo

ಕೆಪಿಎಸ್‌ಸಿ (KPSC Exam) ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಾಗು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮರುಪರೀಕ್ಷೆಯನ್ನ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡುವುದು, ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ ಮಾಡುವುದು, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಸೇರಿದಂತೆ ಎಲ್ಲ ಅಂಶಗಳನ್ನ ಪರಿಗಣಿಸಿ ಈ ಹಿಂದೆ ಆದ ತಪ್ಪುಗಳು, ಲೋಪದೋಷಗಳು ಮರುಕಳಿಸದಂತೆ ಅತ್ಯಂತ ಜಾಗರೂಕತೆಯಿಂದ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು.

ಅಧಿಕಾರಿಗಳನ್ನು ಕಪ್ಪುಪಟ್ಟಿಗೆ ಸೇರಿಸಿ

ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆಯಾಗದಂತೆ ಬ್ಲಾಕ್ ಲಿಸ್ಟ್ ಮಾಡಬೇಕು. ಕೆಪಿಎಸ್ ಸಿ ಪರೀಕ್ಷೆ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಪ್ರಶ್ನೆ ಆಗಿರುವುದರಿಂದ ಅವರ ಬದುಕಿನ ಜೊತೆ ಚೆಲ್ಲಾಟವಾಡದೆ, ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಸುವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ನಡೆಯುವಂತೆ ಎಚ್ಚರವಹಿಸಬೇಕು. ಕೆಪಿಎಸ್ ಸಿ ಪರೀಕ್ಷೆ ಕಡೆಗೆ ಈಗ ಇಡೀ ದೇಶವೇ ಎದುರು ನೋಡುತ್ತಿದ್ದು, ಇದು ಈಗ ಕೇವಲ ಅಭ್ಯರ್ಥಿಗಳ ಪರೀಕ್ಷೆಯಾಗಿ ಉಳಿದಿಲ್ಲ. ಇದು ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಒಂದು ಸತ್ವ ಪರೀಕ್ಷೆಯಾಗಿದೆ.

Continue Reading

ಪ್ರಮುಖ ಸುದ್ದಿ

KPSC Exam 2024 : ಕೆಪಿಎಸ್‌ಸಿ ಮರುಪರೀಕ್ಷೆಗೆ ಸರ್ಕಾರ ಅಸ್ತು; ಕರ್ತವ್ಯ ಲೋಪವೆಸಗಿದ ಅಧಿಕಾರಿಗಳು ಅಮಾನತು

KPSC Exam 2024 : ಕೆಪಿಎಸ್ ಸಿ ಮರುಪರೀಕ್ಷೆಗೆ ಸರ್ಕಾರ ಅಸ್ತು ಎಂದಿದ್ದು, ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

VISTARANEWS.COM


on

By

Govt approves KPSC re-examination Officials suspended for dereliction of duty
Koo

ಬೆಂಗಳೂರು: ಕೆಪಿಎಸ್‌ಸಿ ಪ್ರಿಮಿಲ್ಸ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಎಡವಟ್ಟು ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ತಮ್ನ X ಖಾತೆ ಮೂಲಕ ಮರು ಪರೀಕ್ಷೆ ನಡೆಸುವ ಬಗ್ಗೆ ಸೂಚನೆ ಕೊಟ್ಟಿದ್ದಾರೆ. ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡಕ್ಕೆ ಅನುವಾದ ಮಾಡುವ ವೇಳೆ ಆಗಿದ್ದ ಲೋಪದೋಷಗಳ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಸಿಎಂ ಸೂಚನೆ ನೀಡಿದ್ದಾರೆ.

ಕಳೆದ ಆಗಸ್ಟ್ 27ರಂದು ಕೆಪಿಎಸ್‌ಸಿ ಪೂರ್ವ ಭಾವಿ ಪರೀಕ್ಷೆ ನಡೆದಿತ್ತು. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌-ಎ ಮತ್ತು ಗ್ರೂಪ್‌-ಬಿ ವೃಂದದ ಒಟ್ಟು 384 ಹುದ್ದೆಗಳಿಗೆ ಪ್ರಿಲಿಮ್ಸ್ ಎಕ್ಸಾಂ ನಡೆಸಿತ್ತು. ಸುಮಾರು 2 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಈ ಪರೀಕ್ಷೆ ಬರೆದಿದ್ದಾರೆ. ಆದರೆ ಈ ಪರೀಕ್ಷೆಯಲ್ಲಿ ಕನ್ನಡದ ಕಗ್ಗೋಲೆ ಮಾಡಲಾಗಿದೆ, ಕನ್ನಡದ ಪ್ರಶ್ನೆಗಳನ್ನು ತಪ್ಪಾಗಿ ಕೇಳಲಾಗಿದೆ. ಇದರಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ತೊಂದರೆಯಾಗಿತ್ತು. 60ಕ್ಕೂ ಹೆಚ್ಚು ತಪ್ಪುಗಳನ್ನು ಈ ಪರೀಕ್ಷೆಯಲ್ಲಿ ಮಾಡಲಾಗಿತ್ತು.

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ.

ಕೆಪಿಎಸ್‌ಸಿ ಮರುಪರೀಕ್ಷೆಗೆ ಸರ್ಕಾರ ಅಸ್ತು ಹಿನ್ನೆಲೆಯಲ್ಲಿ ಫ್ರೀಡ್ಂ ಪಾರ್ಕ್‌ನಲ್ಲಿ ಅಭ್ಯರ್ಥಿಗಳ ಸಂಭ್ರಮಾಚರಣೆ ಜೋರಾಗಿತ್ತು. ಈ ಕುರಿತು ಕರವೇ ನಾರಾಯಣ ಗೌಡ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಗೊಂದಲಕ್ಕೆ ಕಾರಣವಾಗಿತ್ತು. ಕನ್ನಡದ ಮಕ್ಕಳಿಗೆ ಅನ್ಯಾಯವಾಗಿತ್ತು. 160 ಪ್ರಶ್ನೆಗಳು ಗೊಂದಲ ಇದೆ ಎಂದು ಅಭ್ಯರ್ಥಿಗಳು ಹೇಳಿದ್ದರು. ಅಭ್ಯರ್ಥಿಗಳ ಜತೆ ನಾವಿದ್ದೇವೆ ಎಂದು ಹೋರಾಟಕ್ಕೆ ಕರೆ ಕೊಟ್ಟಿದ್ದೆವು. ಮರು ಪರೀಕ್ಷೆಗೆ ನಾವು ಆಗ್ರಹಿಸಿದ್ದೆವು. ಲಕ್ಷಾಂತರ ಮಕ್ಕಳ ಒತ್ತಾಯದಂತೆ ಮರು ಪರೀಕ್ಷೆ ಮಾಡಲು ಆಗ್ರಹಿಸಿದ್ದೆವು. ನಾವು ಸರ್ಕಾರದ ಮುಂದೆ ಬೇಡಿಕೆಯನ್ನು ಇಟ್ಟಿದ್ದವು. ಇವತ್ತು ಸರ್ಕಾರ, ಸಿಎಂ ಮರು ಪರೀಕ್ಷೆಗೆ ಆದೇಶ ಮಾಡಿದ್ದಾರೆ. ಮರು ಪರೀಕ್ಷೆಗೆ ಅವಕಾಶ ಕೊಟ್ಟಿರುವ ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ. ಯಾವ ಅಧಿಕಾರಿಗಳು ಈ ಲೋಪಕ್ಕೆ ಕಾರಣವಾಗಿದ್ರಲ್ಲ ಅವರಿಗೆ ಶಿಕ್ಷೆಯಾಗಬೇಕು. ಇದು ಕನ್ನಡಿಗರ ಸಿಕ್ಕ ಜಯವೆಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Gold Smuggling: ಗುದದ್ವಾರದಲ್ಲಿತ್ತು ಕೋಟಿ ಮೌಲ್ಯದ ಚಿನ್ನ; ಶ್ರೀಲಂಕಾದಿಂದ ಬಂದವರು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಲಾಕ್‌

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದದ್ವಾರದಲ್ಲಿ ಚಿನ್ನ ಅಡಗಿಸಿ (Gold Smuggling) ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

VISTARANEWS.COM


on

By

Three arrested for smuggling gold in rectum
Koo

ದೇವನಹಳ್ಳಿ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆದಿದೆ. ಗುದದ್ವಾರದಲ್ಲಿ ಚಿನ್ನ ಅಡಗಿಸಿ (Gold Smuggling) ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದ ಮೂವರ ಬಂಧನ ಮಾಡಲಾಗಿದೆ. ಶ್ರೀಲಂಕಾದ ಕೊಲೊಂಬೊದಿಂದ 6E 1168 ವಿಮಾನದಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿದ್ದ ಪ್ರಯಾಣಿಕರ ತಪಾಸಣೆ ಮಾಡುವಾಗ ಸಿಕ್ಕಿ ಬಿದ್ದಿದ್ದಾರೆ.

Three arrested for smuggling gold in rectum
Three arrested for smuggling gold in rectum

ತಪಾಸಣೆ ವೇಳೆ ಮೂವರು ಆರೋಪಿಗಳು ಪೆಸ್ಟ್ ರೂಪದಲ್ಲಿ ಗುದದ್ವಾರದಲ್ಲಿ ಚಿನ್ನ ಅಡಗಿಸಿ ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಪೆಸ್ಟ್ ರೂಪದಲ್ಲಿ ಇಟ್ಟುಕೊಂಡು ಬಂದಿದ್ದ 1 ಕೋಟಿ 19 ಲಕ್ಷದ 38 ಸಾವಿರ ಮೌಲ್ಯದ 1,670 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳಿಂದ ತೀವ್ರ ವಿಚಾರಣೆ ನಡೆಯುತ್ತಿದೆ.

ವೃದ್ಧನ ಗುದದ್ವಾರದಲ್ಲಿತ್ತು 16 ಇಂಚಿನ ಸೋರೆಕಾಯಿ! ವೈದ್ಯರಿಗೇ ಗಾಬರಿ!

ಈ ಹಿಂದೆ ಮನುಷ್ಯರ ದೇಹದಿಂದ ಸೂಜಿ, ಪಿನ್ನು, ಕಬ್ಬಿಣದ ತುಂಡುಗಳು, ಮುಂತಾದ ಚಿಕ್ಕ ಚಿಕ್ಕ ವಸ್ತುಗಳನ್ನು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ದೇಹದಿಂದ ಹೊರಗೆ ತೆಗೆದ ಅನೇಕ ಘಟನೆಗಳು ನಡೆದಿತ್ತು. ಇಂತಹ ಚಿಕ್ಕ ವಸ್ತುಗಳನ್ನು ದೇಹದಿಂದ ಹೊರತೆಗೆಯುವುದು ವೈದ್ಯರಿಗೆ ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬ ವ್ಯಕ್ತಿಯ ದೇಹದಲ್ಲಿರುವ ವಸ್ತುವನ್ನು ಕಂಡು ವೈದ್ಯರಿಗೆ ಆಘಾತವನ್ನುಂಟಾಗಿದೆ. ಮಧ್ಯಪ್ರದೇಶದ ವ್ಯಕ್ತಿಯೊಬ್ಬನ ಗುದದ್ವಾರದಿಂದ ಸೋರೆಕಾಯಿ ಅನ್ನು ವೈದ್ಯರು ತೆಗೆದುಹಾಕಿದ್ದು, ಇದು ಅಚ್ಚರಿಗೆ ಕಾರಣವಾಗಿದೆ. ಈ ಸುದ್ದಿ ಈಗ ಹೆಚ್ಚು ವೈರಲ್‌ (Viral News) ಆಗಿದೆ.

60 ವರ್ಷದ ರೈತನೊಬ್ಬ ತೀವ್ರ ಹೊಟ್ಟೆನೋವಿನಿಂದ ನರಳುತ್ತಾ ವೈದ್ಯರ ಬಳಿಗೆ ಹೋಗಿದ್ದ. ಆಗ ವೈದ್ಯರು ಎಕ್ಸ್-ರೇ ಮಾಡಿದ್ದಾರೆ. ಆಗ ಅವನ ಗುದನಾಳದಲ್ಲಿ ಸೋರೆಕಾಯಿ ಇರುವುದು ಕಂಡುಬಂದಿದೆ! ಆದರೆ ಈ ತರಕಾರಿ ಅವನ ಗುದ್ವಾರದೊಳಗೆ ಹೇಗೆ ಹೋಗಿದೆ ಎಂಬುದು ಸ್ಪಷ್ಟವಾಗಿಲ್ಲ. ಅಲ್ಲದೆ, ಆ ವ್ಯಕ್ತಿ ಈ ಬಗ್ಗೆ ಯಾವುದೇ ಸ್ಪಷ್ಟೀಕರಣವನ್ನು ನೀಡುತ್ತಿಲ್ಲ ಎನ್ನಲಾಗಿದೆ. ವೈದ್ಯರು ಆ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು, ಎರಡು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ಆ ವಸ್ತುವನ್ನು ಹೊರಗೆ ತೆಗೆದು ಹಾಕಿದ್ದಾರೆ. ಡಾ. ಮನೋಜ್ ಚೌಧರಿ, ಡಾ. ನಂದಕಿಶೋರ್ ಜಾತವ್, ಡಾ. ಆಶಿಶ್ ಶುಕ್ಲಾ ಮತ್ತು ಡಾ. ಸಂಜಯ್ ಮೌರ್ಯ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ. ಇದರಿಂದ ಆ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಹಿಂದಿನ ಕಾರಣ ಮಾನಸಿಕ ಅಸ್ವಸ್ಥತೆ, ಲೈಂಗಿಕ ಸಮಸ್ಯೆ ಅಥವಾ ಅಪಘಾತ ಆಗಿರಬಹುದು ಎಂದು ಡಾ. ಚೌಧರಿ ತಿಳಿಸಿದ್ದಾರೆ. ಆದರೆ ನಿಖರವಾದ ಕಾರಣವನ್ನು ತಿಳಿಯಲು ಆಸ್ಪತ್ರೆ ತನಿಖೆಯನ್ನು ಪ್ರಾರಂಭಿಸಿದೆ ಎನ್ನಲಾಗಿದೆ.

ಇದಕ್ಕೂ ಮುನ್ನ ಮಾರ್ಚ್‍ನಲ್ಲಿ ವಿಯೆಟ್ನಾಂನಲ್ಲಿ ಇದೇ ರೀತಿಯ ಘಟನೆ ಜನರನ್ನು ಬೆಚ್ಚಿಬೀಳಿಸಿತು. 34 ವರ್ಷದ ವ್ಯಕ್ತಿಯೊಬ್ಬರು ತೀವ್ರ ಹೊಟ್ಟೆ ನೋವಿನಿಂದ ವೈದ್ಯರನ್ನು ಭೇಟಿಯಾದಾಗ, ಅವರಿಗೆ ಆಘಾತಕಾರಿ ಸಮಸ್ಯೆ ಇರುವುದು ತಿಳಿದುಬಂದಿದೆ. ಅಲ್ಟ್ರಾಸೌಂಡ್ ಮತ್ತು ಎಕ್ಸ್-ರೇ ನಂತರ, ವೈದ್ಯರಿಗೆ ಅವನ ಅನಾರೋಗ್ಯದ ಹಿಂದಿನ ಕಾರಣ ಅವನ ಹೊಟ್ಟೆಯಲ್ಲಿ ಸಿಕ್ಕಿಹಾಕಿಕೊಂಡ 30 ಸೆಂ.ಮೀ ಉದ್ದದ ಈಲ್ ಎಂಬುದು ತಿಳಿದು ಬಂದಿತ್ತು.

ಇದನ್ನೂ ಓದಿ: ಮಗ ಸತ್ತು ಶವ ಕೊಳೆಯುತ್ತಿದ್ದರೂ ಮಲಗಿದ್ದಾನೆಂದು ಮನೆಯಲ್ಲೇ ಇರಿಸಿಕೊಂಡಿದ್ದ ತಾಯಿ-ಮಗಳು!

ಅದು ಗುದದ್ವಾರದ ಮೂಲಕ ವ್ಯಕ್ತಿಯ ದೇಹವನ್ನು ಪ್ರವೇಶಿಸಿ ನಂತರ ಅವನ ಕರುಳಿಗೆ ಜಾರಿತ್ತು ಎಂದು ವೈದ್ಯರು ತಿಳಿಸಿದ್ದರು. ಇದೊಂದು ಅಪರೂಪದ ಪ್ರಕರಣವಾಗಿದ್ದು, ಗುದದ್ವಾರದ ಪ್ರದೇಶವು ಸಾಕಷ್ಟು ಮಲದ ದ್ರವವನ್ನು ಹೊಂದಿರುತ್ತದೆ. ಸುಲಭವಾಗಿ ಬ್ಯಾಕ್ಟೀರಿಯಾದಿಂದ ಸೋಂಕಿಗೆ ಒಳಗಾಗುತ್ತದೆ. ಆದರೂ ವೈದ್ಯರು ಸುರಕ್ಷಿತವಾಗಿ ಶಸ್ತ್ರಚಿಕಿತ್ಸೆ ಮಾಡಿ ಆತನನ್ನು ಕಾಪಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್‌ ಮರ; ಆಸ್ಪತ್ರೆ ಪಾಲಾದ ಅಣ್ಣ-ತಂಗಿ

Bengaluru News : ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಗಾತ್ರದ ಮರ ಬಿದ್ದು, ಗಾಯಾಳು ಅಣ್ಣ-ತಂಗಿ ಆಸ್ಪತ್ರೆ ಪಾಲಾಗಿದ್ದಾರೆ.

VISTARANEWS.COM


on

By

Several injured as tree falls on them in Bengaluru
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru News) ವಾರಕ್ಕೊಂದು ಮರ ಬೀಳುವ ಪ್ರಕರಣಗಳು ವರದಿ (Tree fall) ಆಗುತ್ತಲೇ ಇದೆ. ಸದ್ಯ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಸಮೀಪ ಬೃಹತ್‌ ಗಾತ್ರದ ಮರವೊಂದು ಬುಡ ಸಮೇತ ಬಿದ್ದಿದೆ. ಚಲಿಸುತ್ತಿದ್ದ ಕಾರುಗಳ ಮೇಲೆ ಮರ ಬಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೂರು ಕಾರುಗಳಿಗೆ ಹಾನಿಯಾಗಿದೆ.

ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯರು ಕೂಡಲೇ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಿಬಿಎಂಪಿ, ಅರಣ್ಯ ಸಿಬ್ಬಂದಿ ಮರ ತೆರವು ಮಾಡಿದ್ದಾರೆ. ಮರ ಬಿದ್ದ ಪರಿಣಾಮ ನಕ್ಕುಲ್ ಹಾಗೂ ನತಾಶಾ ಎಂಬುವವರಿಗೆ ಗಾಯವಾಗಿದೆ. ಅಣ್ಣ ತಂಗಿ ಇಬ್ಬರು ಕಾರಿನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಮರ ಬಿದ್ದಿದೆ. ಓರ್ವ ಗಾಯಾಳಿಗೆ ತಲೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಎದೆಯ ಮೂಳೆ ಮುರಿದಿರುವ ಸಾಧ್ಯತೆ ಇದೆ. ಮತ್ತೊಬ್ಬ ಗಾಯಾಳುವಿನ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಇಬ್ಬರಿಗೂ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು ಈಗಾಗಲೇ “ರಸ್ತೆ ಗುಂಡಿ ಗಮನ” ಎನ್ನುವ ಆ್ಯಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಸಿಟಿ ರೌಂಡ್ಸ್‌

ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ತಾವೇ ಸ್ವತಃ ಪ್ರದಕ್ಷಿಣೆ ಹಾಕಲಿದ್ದು, ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
SSLC examination-2 to begin from tomorrow at over 700 centres
ಕರ್ನಾಟಕ3 mins ago

KPSC Exam: ಕೆಪಿಎಸ್ಸಿ ಮರು ಪರೀಕ್ಷೆ; ಕೆಟ್ಟ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಬಂತು- ಆರ್‌ ಅಶೋಕ್‌‌ ವ್ಯಂಗ್ಯ

Billa Ranga Baashaa
ಸಿನಿಮಾ29 mins ago

Billa Ranga Baashaa: ಕಿಚ್ಚೋತ್ಸವಕ್ಕೆ ‘ಬಿಲ್ಲ ರಂಗ ಭಾಷಾ’; ಹನುಮಾನ್ ಸಿನಿಮಾ ನಿರ್ಮಾಪಕ ಜೊತೆ ಕೈ ಜೋಡಿಸಿದ ಸುದೀಪ್

Kiccha Sudeep Call Boss To Only Two Persons
ಸಿನಿಮಾ59 mins ago

Kiccha Sudeepa: ನನ್ನ ಫ್ಯಾನ್ಸ್ ಒಳ್ಳೆಯವರು ಅದಕ್ಕೆ ನಾನು ಒಳ್ಳೆಯವನು- ದರ್ಶನ್ ಫ್ಯಾನ್ಸ್‌ಗೆ ಟಾಂಗ್

kichcha sudeepa
ಸಿನಿಮಾ2 hours ago

Kichcha Sudeepa: “ಮ್ಯಾಕ್ಸಿಮಮ್ ಮಾಸ್” ಆಟ ಆರಂಭ; ಕಿಚ್ಚನ ಹುಟ್ಟುಹಬ್ಬಕ್ಕೆ “ಮ್ಯಾಕ್ಸ್” ಚಿತ್ರದ ಮೊದಲ ಗೀತೆ ಬಿಡುಗಡೆ

Lakshmi Hebbalkar
ಬೆಂಗಳೂರು2 hours ago

Lakshmi Hebbalkar: ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Govt approves KPSC re-examination Officials suspended for dereliction of duty
ಪ್ರಮುಖ ಸುದ್ದಿ3 hours ago

KPSC Exam 2024 : ಕೆಪಿಎಸ್‌ಸಿ ಮರುಪರೀಕ್ಷೆಗೆ ಸರ್ಕಾರ ಅಸ್ತು; ಕರ್ತವ್ಯ ಲೋಪವೆಸಗಿದ ಅಧಿಕಾರಿಗಳು ಅಮಾನತು

Gram Panchayat member drowns in river while fishing
ಉತ್ತರ ಕನ್ನಡ3 hours ago

Accident Case : ಮೀನು ಹಿಡಿಯಲು ಹೋದ ಗ್ರಾ.ಪಂ ಸದಸ್ಯ ನದಿಯಲ್ಲಿ ಮುಳುಗಿ ಸಾವು

Yoga guru arrested in Chikmagalur
ಚಿಕ್ಕಮಗಳೂರು4 hours ago

Physical Abuse : ಅತ್ಯಾಚಾರ ಆರೋಪ ವಿದೇಶಿ ಮಹಿಳೆಯಿಂದ ದೂರು; ಚಿಕ್ಕಮಗಳೂರಿನಲ್ಲಿ ಯೋಗ ಗುರು ಬಂಧನ

Physical Abuse
ಶಿವಮೊಗ್ಗ4 hours ago

Physical Abuse : ಅರ್ಥವಾಗದ ಪಾಠವನ್ನು ಹೇಳಿಕೊಡುವುದಾಗಿ ವಿದ್ಯಾರ್ಥಿನಿಯನ್ನು ಕರೆಸಿ ಅತ್ಯಾಚಾರವೆಸಗಿದ ಉಪನ್ಯಾಸಕ

Three arrested for smuggling gold in rectum
ಬೆಂಗಳೂರು ಗ್ರಾಮಾಂತರ5 hours ago

Gold Smuggling: ಗುದದ್ವಾರದಲ್ಲಿತ್ತು ಕೋಟಿ ಮೌಲ್ಯದ ಚಿನ್ನ; ಶ್ರೀಲಂಕಾದಿಂದ ಬಂದವರು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಲಾಕ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌