Leopard | ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಚಿರತೆ, ಹೆಚ್ಚಿದ ಆತಂಕ Vistara News
Connect with us

ಬೆಂಗಳೂರು

Leopard | ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಚಿರತೆ, ಹೆಚ್ಚಿದ ಆತಂಕ

ಚಿರತೆ (Leopard) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಒಬ್ಬಂಟಿಯಾಗಿ ಓಡಾಡದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

Leopard in Bengaluru university
Koo

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಚಿರತೆಯ (Leopard) ಭೀತಿ ಶುರುವಾಗಿದೆ. ರಾತ್ರಿ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಿಶ್ವವಿದ್ಯಾಲಯ ಪ್ರವೇಶವನ್ನು ಬಂದ್ ಮಾಡಲಾಗಿದೆ.

ಚಿರತೆಯೊಂದು ವಿಶ್ವವಿದ್ಯಾಲಯ ಕ್ಯಾಂಪಸ್ ಸೇರಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ವಿವಿಗೆ ಸಂಪರ್ಕಿಸುವ ನಾಗರಭಾವಿ ರಸ್ತೆಯನ್ನು ಬಂದ್ ಮಾಡಿದ್ದಾರೆ. ಈ ಮಾರ್ಗವಾಗಿ ಬರುತ್ತಿರುವ ವಾಹನಗಳನ್ನು ಪ್ರವೇಶಿ ನಿರಾಕರಿಸಿ, ಬೇರಡೆಗೆ ಕಳುಹಿಸಲಾಗಿದೆ.

ಯಾರನ್ನೂ ರಸ್ತೆಯಲ್ಲಿ ಬಿಡದಂತೆ ಸೂಚನೆ ನೀಡಲಾಗಿದೆ. ನಿರ್ದಿಷ್ಟ ಸಮಯದಲ್ಲಿ ಯಾವ ಗಾಡಿಗಳನ್ನು ಪೊಲೀಸರು ಬಿಟ್ಟಿಲ್ಲ. ಜ್ಞಾನ ಭಾರತಿ ಪೊಲೀಸರಿಂದ ಗೇಟ್ ಬಂದ್ ಮಾಡಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಒಬ್ಬಂಟಿಯಾಗಿ ಕ್ಯಾಂಪಸ್‌ನಲ್ಲಿ ಓಡಾಡದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ | Leopard Attack | ಮಂಡ್ಯದಲ್ಲಿ ನಿಲ್ಲದ ಚಿರತೆ ಹಾವಳಿ; 6 ಮೇಕೆಗಳ ಕೊಂದು, 4 ಮೇಕೆಗಳನ್ನು ಹೊತ್ತೊಯ್ದ ಚಿರತೆಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

Live News

Bangalore Bandh Live: ಬೆಂಗಳೂರು ಬಂದ್‌ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?

ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್‌ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಎಲ್ಲೆಲ್ಲಿ ಏನಾಗುತ್ತಿದೆ ಎಂಬುದರ ಅಪ್‌ಡೇಟ್‌ ಇಲ್ಲಿದೆ. .

VISTARANEWS.COM


on

Edited by

bangalore bandh
Koo

ಬೆಂಗಳೂರು: ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್‌ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಎಲ್ಲೆಲ್ಲಿ ಏನಾಗುತ್ತಿದೆ ಎಂಬುದರ ಅಪ್‌ಡೇಟ್‌ ಇಲ್ಲಿದೆ. .

Continue Reading

ಕರ್ನಾಟಕ

Bangalore rain : ಮನೆ ಮುಂದೆ ವಾಕ್‌ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ

Bangalore rain: ಬೆಂಗಳೂರಿನಲ್ಲಿ ಸಂಭವಿಸಿದ ಮಳೆ ದುರಂತದಲ್ಲಿ ತಾಯಿ ಮೃತಪಟ್ಟು, ಪುಟ್ಟ ಕಂದಮ್ಮ ಗಾಯಗೊಂಡಿದ್ದಾಳೆ. ಮರ ಬಿದ್ದು ಈ ದುರಂತ ಸಂಭವಿಸಿದೆ.

VISTARANEWS.COM


on

Edited by

Tree falls and kills woman, daughter survived
ಉರುಳಿದ ಮರ ಮತ್ತು ಗಾಯಾಳು ರಚಿತಾ
Koo

ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಸಂಜೆ ಸುರಿದ ಮಳೆಗೆ (Bangalore rain) ಮರವೊಂದು ಧರೆಗುರುಳಿ (Tree Falls on mother and daughter) ವಾಕ್‌ ಮಾಡುತ್ತಿದ್ದ ತಾಯಿ ಮತ್ತು ಮಗುವನ್ನು ಗಾಯಗೊಳಿಸಿದೆ. ತಾಯಿ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟರೆ (Mothrer dead at Hospital), ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವಿಲ್ಸನ್ ಗಾರ್ಡನ್ 7 ಕ್ರಾಸ್ ನಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ವಿಲ್ಸನ್‌ ಗಾರ್ಡನ್‌ (Wilson garden) ನಿವಾಸಿ ಹೇಮಾವತಿ (35) ಎಂದು ಗುರುತಿಸಲಾಗಿದೆ. ಅವರ ಪುಟ್ಟ ಕಂದಮ್ಮ ಐದು ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಹೇಮಾವತಿ ಮತ್ತು ಮಗಳು ರಚಿತಾ ಸಂಜೆಯ ಹೊತ್ತು ಮನೆಯ ಮುಂದೆ ಪುಟ್ ಪಾತ್ ಮೇಲೆ ತಾಯಿ ಮಗಳು ವಾಕ್ ಮಾಡುತ್ತಿದ್ದಾಗ ಬೃಹತ್ ಮರ ಉರುಳಿದೆ. ಒಂದು ಕಡೆ ಮರದ ಕೊಂಬೆ ಇನ್ನೊಂದು ಕಡೆ ವಿದ್ಯುತ್‌ ಕಂಬವೂ ಅವರ ಮೇಲೆ ಬಿದ್ದಿದೆ.

ಕೂಡಲೇ ಹೇಮಾವತಿ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಒಯ್ಯಲಾಯಿತು. ರಚಿತಾಗೆ ತಲೆಗೆ ಗಾಯವಾಗಿದ್ದು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು.

ಈ ನಡುವೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ ಹೇಮಾವತಿ ನಿಧನರಾಗಿದ್ದಾರೆ. ಅವರು ಸಂಜಯಗಾಂಧಿ ಆಸ್ಪತ್ರೆಯಲ್ಲಿ‌ ಕೊನೆಯುಸಿರೆಳೆದರು. ಬೆಳಗ್ಗೆ ಮರಣೋತ್ತರ ಪರೀಕ್ಷೆ ನಂತರ ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರ ಸಾವು

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರಾಗಿದ್ದು, ಮೃತರಾದವರ ಗುರುತು ಪತ್ತೆಯಾಗಿಲ್ಲ.

Accident near Channapatna kills 3

ಮೈಸೂರು ಕಡೆಗೆ ಹೋಗುತ್ತಿದ್ದ ಫಾರ್ಚುನರ್‌ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಬೆಂಗಳೂರು ಕಡೆಗೆ ಬರುವ ರಸ್ತೆಗೆ ನುಗ್ಗಿ ಸ್ಯಾಂಟ್ರೋ ಕಾರು ಮತ್ತು ಇತರ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಸ್ಯಾಂಟ್ರೋ ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆಗೂ ಗಂಭೀರ ಗಾಯಗಳಾಗಿದ್ದು ಅವರು ಆಸ್ಪತ್ರೆಗೆ ಸಾಗಿಸುವ ಪ್ರಾಣ ಕಳೆದುಕೊಂಡರು.

ಸಂಜೆ ಸುಮಾರು 5.30ರ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಮೃತರು ಹಾಸನ ಮೂಲದವರೆಂದು ಹೇಳಲಾಗುತ್ತಿದೆ. ಎರಡೂ ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಇತರ ವಾಹನಗಳಿಗೂ ಹಾನಿಯಾಗಿದೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ತುಂಬಾ ಹೊತ್ತು ಟ್ರಾಫಿಕ್‌ ಜಾಮ್‌ ಆಗಿತ್ತು.

Continue Reading

ಕರ್ನಾಟಕ

VISTARA TOP 10 NEWS: ನಾಳೆ ಬೆಂಗಳೂರು ಬಂದ್‌, ಶುಕ್ರವಾರ ಕರ್ನಾಟಕ ಬಂದ್‌, ಎಐಎಡಿಎಂಕೆ-ಬಿಜೆಪಿ ಮೈತ್ರಿಯೂ ಬಂದ್‌

VISTARA TOP 10 NEWS : ನಾಳೆ ಬೆಂಗಳೂರು ಬಂದ್‌, ಶುಕ್ರವಾರ ಕರ್ನಾಟಕ ಬಂದ್‌, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಬಂದ್‌! ಇನ್ನು ಪ್ರಧಾನಿ ಮೋದಿ ಅವರು ಅ. 1ರಂದು ಎಲ್ಲರೂ ಸೇರಿ ಕಸ ಗುಡಿಸೋಣ ಅಂದಿದ್ದಾರೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್‌ 10 ನ್ಯೂಸ್‌.

VISTARANEWS.COM


on

Edited by

Vistara Top 10 News 2509
Koo

1. ಕಾವೇರಿ ಕಿಚ್ಚು: ರಾಜ್ಯಕ್ಕೆ ಡಬಲ್‌ ಬಂದ್‌ ಶಾಕ್‌; ನಾಳೆ ಬೆಂಗಳೂರು, ಸೆ. 29 ಕರ್ನಾಟಕ ಬಂದ್‌
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕರೆ ನೀಡಲಾಗಿರುವ ಸೆ. 26ರ ಬೆಂಗಳೂರು ಬಂದ್‌ ಬೆನ್ನಿಗೇ ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ಸೆ. 29ರಂದು ಅಖಿಲ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಹೀಗಾಗಿ ವಾರದಲ್ಲಿ ಎರಡು ಬಂದ್‌ ನಡೆಯಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ವರದಿ : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್‌ ಬಂದ್‌ ಬಿಸಿ, ಬೇಕಿತ್ತಾ ಎರಡೆರಡು ಬಂದ್‌?

2. ನಾಳೆ ಬೆಂಗಳೂರು ಬಂದ್‌: ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ; ಏನಿರುತ್ತೆ? ಏನಿರಲ್ಲ?
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery water Dispute) ಮಾಡಬಾರದು ಎಂದು ಆಗ್ರಹಿಸಿ ಜಲ ಸಂರಕ್ಷಣಾ ಸಮಿತಿ ಕರೆ ನೀಡಿರುವ ಸೆ. 26ರ ಬೆಂಗಳೂರು ಬಂದ್‌ (Bangalore bandh) ಮೊದಲು ಪ್ರಕಟಿಸಿದಂತೆ ಯಥಾವತ್ತಾಗಿ ನಡೆಯಲಿದೆ. ಹಾಗಿದ್ದರೆ ಏನಿರುತ್ತೆ? ಏನಿರಲ್ಲ? ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ಸುದ್ದಿ1: ಬಲವಂತದಿಂದ ಬಂದ್‌ ಮಾಡಿಸುವಂತಿಲ್ಲ; ಮೆರವಣಿಗೆಗೆ ಅವಕಾಶವಿಲ್ಲ ಎಂದ ಕಮಿಷನರ್‌
ಪೂರಕ ಸುದ್ದಿ2: ಬಂದ್‌ ಯಶಸ್ವಿ ಆಗಬೇಕು; ಹೋಟೆಲ್‌ ಓಪನ್‌ ಮಾಡ್ಬೇಡಿ, ಸಮಸ್ಯೆಗೆ ನೀವೇ ಹೊಣೆ: ಬಿಎಸ್‌ವೈ
ಪೂರಕ ಸುದ್ದಿ3: ಯಾವ ಬಂದ್‌ಗೂ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ; ನಾರಾಯಣ ಗೌಡ ಘೋಷಣೆ

3 .ಜಲಶಕ್ತಿ ಇಲಾಖೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಲಿ, ಮೋದಿ ಮಧ್ಯಪ್ರವೇಶಿಸಲಿ: ದೇವೇಗೌಡ
ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಈ ಸಂಬಂಧ ಜಲ ಶಕ್ತಿ ಇಲಾಖೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಇದಕ್ಕೆ ಪ್ರಧಾನಿ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಈ ಸುದ್ದಿಯನ್ನೂ ಓದಿ: ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್‌ನಿಂದ ರಾಜಕೀಯ: ಸಿದ್ದರಾಮಯ್ಯ ಆರೋಪ

4. ಏಕಕಾಲಕ್ಕೆ ರಾಜ್ಯಾದ್ಯಂತ ದಾಖಲೆ ಬರೆದ ಜನತಾ ದರ್ಶನ: ಸಿದ್ದರಾಮಯ್ಯ ಚಿಂತನೆ ಕ್ಲಿಕ್‌
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaih) ಅವರ ಸೂಚನೆಯಂತೆ ಇದೇ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ (Janata Darshana) ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5. ಏಷ್ಯನ್‌ ಗೇಮ್ಸ್‌: ಐತಿಹಾಸಿಕ ಚಿನ್ನ ಗೆದ್ದ ಭಾರತ ಮಹಿಳಾ ಕ್ರಿಕೆಟ್‌ ತಂಡ; ಲಂಕಾ ವಿರುದ್ಧ ರೋಚಕ ಜಯ
ಇದೇ ಮೊದಲ ಬಾರಿಗೆ ಏಷ್ಯನ್​ ಗೇಮ್ಸ್​(Asian Games 2023) ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಭಾರತ ಮಹಿಳಾ ಕ್ರಿಕೆಟ್​ ತಂಡ ಮೊದಲ ಪ್ರಯತ್ನದಲ್ಲೇ ಐತಿಹಾಸಿಕ ಚಿನ್ನದ ಪದಕ ಜಯಿಸಿ ಮರೆದಾಡಿದೆ. ಅಲ್ಪ ಮೊತ್ತದ ಪಂದ್ಯದಲ್ಲಿ ಲಂಕಾ ವಿರುದ್ಧ ರೋಚಕ 19 ರನ್​ಗಳ ಗೆಲುವು ಸಾಧಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ದೇಶಾದ್ಯಂತ ಅ.1ರಂದು 1 ಗಂಟೆ ಸ್ವಚ್ಛತಾ ಅಭಿಯಾನ: ಎಲ್ಲರೂ ಬನ್ನಿ ಎಂದು ಆಹ್ವಾನಿಸಿದ ಪ್ರಧಾನಿ ಮೋದಿ
ಗಾಂಧಿ ಜಯಂತಿಗೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್‌ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಂದು ಒಂದು ಗಂಟೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಈ ಸುದ್ದಿಯನ್ನೂ ಓದಿ: ಎಲ್ಲ ಗ್ಯಾರಂಟಿಗಳಿಗಳ ಜಾರಿಗೂ ಮೋದಿಯೇ ಗ್ಯಾರಂಟಿ; ಪ್ರಧಾನಿ ಅಬ್ಬರದ ಭಾಷಣ

7. ಭಾರತ ವಿಭಜಿಸಿ ಹಲವು ದೇಶ ಸೃಷ್ಟಿಸುವುದು ಖಲಿಸ್ತಾನಿ ಉಗ್ರ ಪನ್ನುನ್‌ ಗುರಿ; ಷಡ್ಯಂತ್ರ ಬಯಲು
ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ನಿಷೇಧಿತ ಸಿಖ್ಸ್‌ ಫಾರ್‌ ಜಸ್ಟಿಸ್‌ ಸಂಘಟನೆಯ ಗುರುಪತ್ವಂತ್‌ ಸಿಂಗ್‌ ಪನ್ನುನ್‌ (Gurpatwant Singh Pannun) ಆಸ್ತಿಗಳನ್ನು ಎನ್‌ಐಎ ಜಪ್ತಿ ಮಾಡಿದ ಬೆನ್ನಲ್ಲೇ ಉಗ್ರನ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗಿದೆ. “ಭಾರತವನ್ನು ವಿಭಜಿಸಿ, ಹಲವು ದೇಶಗಳನ್ನಾಗಿ ಸೃಷ್ಟಿಸುವುದು ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಗುರಿಯಾಗಿದೆ” ಎನ್ನುವುದೇ ಆ ಮಾಹಿತಿ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ಬಿಜೆಪಿ ಜತೆ ಮೈತ್ರಿ ಇಲ್ಲ; ಎಐಎಡಿಎಂಕೆ ಅಧಿಕೃತ ಘೋಷಣೆ! ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ
ತಮ್ಮ ಪಕ್ಷದ ನಾಯಕರನ್ನು ಅವಮಾನಿಸುತ್ತಿರುವ ಬಿಜೆಪಿ ಜತೆಗೆ ಸಖ್ಯವನ್ನು ಕಡಿದುಕೊಂಡಿರುವುದಾಗಿ ಇತ್ತೀಚೆಗಷ್ಟೇ ಎಐಎಡಿಎಂಕೆ ನಾಯಕರೊಬ್ಬರು ಹೇಳಿದ್ದರು. ಇದೀಗ, ಬಿಜೆಪಿ ಜತೆಗಿನ ಮೈತ್ರಿಯನ್ನು ಮುರಿದುಕೊಂಡಿರುವುದಾಗಿ ಎಐಎಡಿಎಂಕೆ ಅಧಿಕೃತವಾಗಿ ಘೋಷಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. 9 ತಿಂಗಳೊಳಗೆ 2000 ಕೋಟಿ ರೂ. ಕೊಳ್ಳೆ ಹೊಡೆದ ಶಾರುಖ್;‌ ಜವಾನ್‌ ಹೊಸ ದಾಖಲೆ
ಶಾರುಖ್ ಖಾನ್‌ ಪ್ರಧಾನ ಪಾತ್ರದಲ್ಲಿರುವ ಜವಾನ್, ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂ. ಗಳಿಸಿದೆ (Jawan box office collection).ಪಠಾಣ್‌ ಸಿನಿಮಾವೂ 1000 ಕೋಟಿ ದಾಟಿತ್ತು. ಹೀಗಾಗಿ ಒಂಬತ್ತು ತಿಂಗಳ ಅವಧಿಯಲ್ಲಿ ಶಾರುಖ್‌ 2000 ಕೋಟಿ ಕೊಳ್ಳೆ ಹೊಡೆದಂತಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. 100 ಫ್ಯಾನ್‌ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್‌ ಕಂಪನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ
ದೇಶಾದ್ಯಂತ ಅದ್ಧೂರಿಯಾಗಿ ಆಚರಿಸುವ ಗಣೇಶ ಚತುರ್ಥಿ(Ganesh Chaturthi) ಹಬ್ಬವನ್ನು ಹ್ಯಾವಲ್ಸ್‌ ಕಂಪೆನಿ(Havells) ಕ್ರಿಯಾತ್ಮಕವಾಗಿ ಬರಮಾಡಿಕೊಂಡಿದೆ. 100 ಫ್ಯಾನ್‌ಗಳನ್ನು ಬಳಸಿಕೊಂಡು ಗಣೇಶನನ್ನು ರಚಿಸಿ ಗಮನ ಸೆಳೆದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Bangalore Bandh : ಬೆಂಗಳೂರು ಬಂದ್‌ ಫಿಕ್ಸ್‌; ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಬಸ್‌ ಸಂಚಾರ ಡೌಟ್; ಏನಿರುತ್ತೆ? ಏನಿರಲ್ಲ?‌

Bangalore Bandh : ಮಂಗಳವಾರದ ಬೆಂಗಳೂರು ಬಂದ್‌ಗೆ ವೇದಿಕೆ ಸಿದ್ಧವಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್‌ ಆಗುವ ಸಾಧ್ಯತೆ ಇದೆ. ಹಾಗಿದ್ದರೆ ಬಂದ್‌ ವೇಳೆ ಏನಿರುತ್ತದೆ? ಏನಿರಲ್ಲ ಎಂಬುದರ ಪೂರ್ಣ ವಿವರ ಇಲ್ಲಿದೆ.

VISTARANEWS.COM


on

Edited by

Bangalore Bandh Photo
Koo

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery water Dispute) ಮಾಡಬಾರದು ಎಂದು ಆಗ್ರಹಿಸಿ ಜಲ ಸಂರಕ್ಷಣಾ ಸಮಿತಿ (Jala Samrakshana Samiti) ಕರೆ ನೀಡಿರುವ ಸೆ. 26ರ ಬೆಂಗಳೂರು ಬಂದ್‌ (Bangalore bandh) ಮೊದಲು ಪ್ರಕಟಿಸಿದಂತೆ ಯಥಾವತ್ತಾಗಿ ನಡೆಯಲಿದೆ. ಆದರೆ, ವಾಟಾಳ್‌ ನಾಗರಾಜ್‌ (Vatal Nagaraj) ನೇತೃತ್ವದಲ್ಲಿ ಸೆ. 29ರಂದು ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ಈ ಹಿಂದೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿವೆ.

ರೈತ ಸಂಘದ ಕುರುಬೂರು ಶಾಂತ ಕುಮಾರ್‌ ಮತ್ತು ಆಮ್‌ ಆದ್ಮಿ ಪಕ್ಷದ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಹಲವಾರು ಸಂಘಟನೆಗಳ ಬೆಂಬಲದೊಂದಿಗೆ ಬೆಂಗಳೂರು ಬಂದ್‌ ನಡೆಯಲಿದೆ. ಬಂದ್‌ನಿಂದಾಗಿ ಮಕ್ಕಳಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕಾಗಿ ಬೆಂಗಳೂರು ಜಿಲ್ಲಾಧಿಕಾರಿಗಳು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ (Holiday announced for School and Colleges) ಘೋಷಿಸಿದ್ದಾರೆ. ಕಾಲೇಜುಗಳು ಮತ್ತು ವಿವಿಗಳು ನಿಗದಿ ಮಾಡಿದ್ದ ಪರೀಕ್ಷೆಗಳನ್ನು ಮುಂದೂಡಿವೆ (Exams Postponed).

ಈ ನಡುವೆ ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಬಿಎಂಟಿಸಿ ಮತ್ತು ಕರ್ನಾಟಕ ಸಾರಿಗೆ ಬಸ್‌ಗಳ ಸಂಚಾರ ವ್ಯತ್ಯಯಗೊಳ್ಳುವ ಸಾಧ್ಯತೆಗಳಿವೆ. ಯಾಕೆಂದರೆ, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನೌಕರರ ಸಂಘಟನೆ ಬಂದ್‌ಗೆ ಬೆಂಬಲ ಘೋಷಿಸಿವೆ. ಆದರೆ ಮೆಟ್ರೋ ಸಂಚಾರ ಎಂದಿನಂತೆ ಇರುತ್ತದೆ.

ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ

ಕನ್ನಡ ಮತ್ತು ನೀರಿಗೆ ಸಂಬಂಧಿಸಿದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಕನ್ನಡ ರಕ್ಷಣಾ ವೇದಿಕೆ ಈ ಬಾರಿ ತಟಸ್ಥವಾಗಿ ಉಳಿದಿದೆ. ಸೆ. 26 ಅಥವಾ ಸೆ. 29 ಯಾವ ಬಂದ್‌ಗೂ ಬೆಂಬಲ ಕೊಡುವುದಿಲ್ಲ ಎಂದು ಅದು ಪ್ರಕಟಿಸಿದೆ. ಇದು ಬಂದ್‌ ಆಯೋಜಕರಿಗೆ ದೊಡ್ಡ ಹಿನ್ನಡೆಯಾಗಲಿದೆ.

ಹಲವು ಸಂಘಟನೆಗಳ ಬೆಂಬಲ ವಾಪಸ್‌

ಬೆಂಗಳೂರು ಬಂದ್‌, ಕರ್ನಾಟಕ ಬಂದ್‌ ಎರಡು ಬಂದ್‌ ಘೋಷಣೆಯಾಗಿದ್ದರಿಂದ ಕೆಲವು ಸಂಘಟನೆಗಳು ಸೆ. 26ರ ಬಂದ್‌ಗೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿವೆ.
1. ಬೆಂಗಳೂರಿನ ಓಲಾ, ಊಬರ್‌ ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ತನ್ವೀರ್‌ ಪಾಷಾ ಅವರು ತಾವು ಸೆ. 26ರ ಬದಲು ಸೆ. 29ರ ಬಂದ್‌ ಬೆಂಬಲಿಸುವುದಾಗಿ ಹೇಳಿದೆ.

2. ಬೆಂಗಳೂರಿನ ಆದರ್ಶ ಆಟೋ ಚಾಲಕರ ಯೂನಿಯನ್‌ ಕೂಡಾ ಸೆ. 26ರ ಬದಲು ಸೆ. 29ಕ್ಕೆ ಶಿಫ್ಟ್‌ ಆಗಿದೆ.

3. ಈ ಹಿಂದೆ ಸೆ. 26ರ ಬೆಂಗಳೂರು ಬಂದ್‌ಗೆ ಬೆಂಬಲ ಘೋಷಿಸಿದ್ದ ಬೃಹತ್‌ ಬೆಂಗಳೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್‌ ಅವರು ಈಗ ಸೆ. 29ರ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಇರುವುದಿಲ್ಲ ಅಂದಿದೆ ಸಂಘಟನೆ

ಸೆ. 26ರಂದು ನಡೆಯುವ ಬೆಂಗಳೂರು ಬಂದ್ ಗೆ ಬಿಎಂಟಿಸಿ ಹಾಗೂ KSRTC ನೌಕರರು ಬೆಂಬಲ ಕೊಡುತ್ತಾರೆ ಎಂದು ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಕೂಟದ ಪ್ರಧಾನ ಕಾರ್ಯದರ್ಶಿ ಎಸ್ ನಾಗರಾಜ್ ಹೇಳಿಕೆ ನೀಡಿದ್ದಾರೆ. ನಾವು ಹಾಗೂ ಸಮಾನ ಮನಸ್ಕರ ವೇದಿಕೆ ಹಾಗೂ ಬಿಎಂಟಿಸಿ ನೌಕರರ ಸಂಘಗಳು ತೀರ್ಮಾನ ಮಾಡಿದ್ದೇವೆ. ಯಾವ ವಾಹನಗಳನ್ನು ರಸ್ತೆಗೆ ಇಳಿಸಬೇಡಿ ಅಂತ ನಾವು ಸೂಚನೆ ಕೊಟ್ಟಿದ್ದೇವೆ. ಈ ಹಿಂದೆಯೂ ನಾವು ಬೆಂಬಲ ಕೊಟ್ಟಿದ್ದೆವು, ನಾಳೆಯೂ ಬೆಂಬಲ ಕೊಡುತ್ತೇವೆ ಎಂದಿದ್ದಾರೆ ನಾಗರಾಜ್‌.

ಸೆ. 26ರ ಬಂದ್‌ನಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗಿ ಆಗುವಂತೆ ಕರೆ ಕೊಟ್ಟಿದ್ದೇವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ. ಶಾಂತಿಯುತ ಹೋರಾಟಕ್ಕೆ ನಾವು ಒಟ್ಟು ಕೊಡುತ್ತೇವೆ, ಅಹಿತಕರ ಘಟನೆ ಆಸ್ಪದ ಕೊಡಲ್ಲ. ಇದರಲ್ಲಿ ನಮ್ಮ ನೌಕರರನ್ನು ವಿಭಜನೆ ಮಾಡಿ ನೋಡುವ ಅಗತ್ಯ ಇಲ್ಲ ಎಂದು ಚಂದ್ರಶೇಖರ್‌ ಹೇಳಿದ್ದಾರೆ.

ಇದನ್ನೂ ಓದಿ: Cauvery water dispute : ನಾಳೆ ಬಂದ್‌ ಯಶಸ್ವಿ ಆಗಬೇಕು; ಹೋಟೆಲ್‌ ಓಪನ್‌ ಮಾಡ್ಬೇಡಿ, ಸಮಸ್ಯೆಗೆ ನೀವೇ ಹೊಣೆ: ಬಿಎಸ್‌ವೈ

ಹಾಗಿದ್ದರೆ ಸೆ. 26ರ ಬೆಂಗಳೂರು ಬಂದ್‌ನಲ್ಲಿ ಏನಿರುತ್ತದೆ? ಏನಿರುವುದಿಲ್ಲ?

ಏನೇನು ಇರುವುದಿಲ್ಲ?

-ಶಾಲೆ, ಕಾಲೇಜುಗಳು ಬಂದ್‌: ಪರೀಕ್ಷೆಗಳು ಕೂಡಾ ಮುಂದಕ್ಕೆ
-ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ಬಹುತೇಕ ಇರುವುದಿಲ್ಲ
– ಓಲಾ, ಊಬರ್‌ ಹೊರತಾದ ಆಟೋ ರಿಕ್ಷಾಗಳು ಡೌಟ್‌
– ಸಿನಿಮಾ ಥಿಯೇಟರ್‌ಗಳು ಬಂದ್‌
– ಖಾಸಗಿ ಬಸ್‌ಗಳು, ಗೂಡ್ಸ್‌ ವಾಹನಗಳು
-ಸೂಪರ್‌ ಮಾರ್ಕೆಟ್‌, ಮಾಲ್‌ಗಳು
– ಬಹುತೇಕ ಅಂಗಡಿಗಳು ಬಂದ್‌
– ಕೈಗಾರಿಕೆಗಳು
– ಜುವೆಲ್ಲರಿ ಶಾಪ್‌ಗಳು
– ಬಿಬಿಎಂಪಿ ಕಾರ್ಮಿಕರು, ನೌಕರರು ಕೆಲಸ ಮಾಡಲ್ಲ

ಏನೇನು ಸೇವೆಗಳು ಲಭ್ಯ ಇರುತ್ತವೆ?
– ತುರ್ತು ಅಗತ್ಯದ ಎಲ್ಲ ಸೇವೆಗಳು ಇರುತ್ತವೆ.
– ಹಾಲಿನ ಬೂತ್‌ ಓಪನ್‌, ಪತ್ರಿಕೆಗಳು ಸಿಗುತ್ತವೆ
– ನಗರದಲ್ಲಿ ಹೋಟೆಲ್‌ಗಳು ತೆರೆದಿರುತ್ತವೆ.
– ಓಲಾ ಮತ್ತು ಊಬರ್‌ ಟ್ಯಾಕ್ಸಿಗಳು ಓಡಾಡುತ್ತವೆ
– ಹೆಚ್ಚಿನ ಆಟೋಗಳು ಓಡಾಡುತ್ತವೆ.
– ಆಸ್ಪತ್ರೆ, ಮೆಡಿಕಲ್‌ಗಳ ಸೇವೆ ಯಥಾಸ್ಥಿತಿ
– ಸರ್ಕಾರಿ ಕಚೇರಿಗಳು ಇರುತ್ತವೆ, ಜನ ಕಡಿಮೆ ಇರಬಹುದು
– ಆಂಬ್ಯುಲೆನ್ಸ್‌ ಸೇವೆಗಳು ಸಿಗುತ್ತವೆ.
– ಮೆಟ್ರೋ ಸೇವೆ ಎಂದಿನಂತೆ ಇರುತ್ತದೆ.

ಬಲವಂತವಾಗಿ ಬಂದ್‌ ಮಾಡುವಂತಿಲ್ಲ

ಸುಪ್ರೀಂಕೋರ್ಟ್‌ ತೀರ್ಪಿನಂತೆ ಬಂದ್‌ ಎಂಬ ಪದವೇ ಇಲ್ಲ. ಪ್ರತಿಭಟನೆಗೆ ಮಾತ್ರ ಅವಕಾಶ. ಬೆಂಗಳೂರು ಬಂದ್‌ ವೇಳೆ ಯಾರೂ ಯಾವುದೇ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸುವಂತಿಲ್ಲ, ವಾಹನಗಳನ್ನು ತಡೆಯುವಂತಿಲ್ಲ. ಹಾಗೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಬಂದ್‌ನಿಂದಾಗಿ ಆಸ್ತಿಪಾಸ್ತಿಗೆ ಹಾನಿ ಉಂಟಾದರೆ ಸಂಘಟಕರಿಂದಲೇ ವಸೂಲಿ ಮಾಡಲಾಗುವುದು.

Continue Reading
Advertisement
home lizard
ಲೈಫ್‌ಸ್ಟೈಲ್16 mins ago

Lizards in home: ಹಲ್ಲಿಯನ್ನು ಮನೆಯಿಂದ ಓಡಿಸುವ ಕಲೆ ನಿಮಗೆ ಗೊತ್ತೇ? ಇಲ್ಲಿವೆ ಟಿಪ್ಸ್!

healthy children food
Relationship44 mins ago

Parenting Tips: ನಿಮ್ಮ ಮಕ್ಕಳು ಅಡ್ಡ ಬೆಳೆಯದೆ, ಉದ್ದ ಬೆಳೆಯಬೇಕೆಂದರೆ ಈ ಆಹಾರವನ್ನೇ ನೀಡಿ!

Reality Shows neads a break
ಅಂಕಣ53 mins ago

Raja Marga Column : ನಿಮ್ಮ ಮಕ್ಕಳನ್ನು ಸೂಪರ್‌ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!

bangalore bandh
Live News1 hour ago

Bangalore Bandh Live: ಬೆಂಗಳೂರು ಬಂದ್‌ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?

Vistara Editorial, Janata Darshan by CM must appreciated
ಕರ್ನಾಟಕ2 hours ago

ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

Pakistan Cricket Team Skipper Babaz azam fined exceeding speed limit
ಕ್ರಿಕೆಟ್8 hours ago

Babar Azam: ಆಡಿ ಕಾರ್ ಓವರ್‌ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!

Sara Sunny
ದೇಶ8 hours ago

Lawyer Sara Sunny: ಸುಪ್ರೀಂ ಕೋರ್ಟ್‌ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ

Tree falls and kills woman, daughter survived
ಕರ್ನಾಟಕ9 hours ago

Bangalore rain : ಮನೆ ಮುಂದೆ ವಾಕ್‌ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ

BJP Flag
ದೇಶ9 hours ago

MP Assembly Election: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್, ಮೂವರು ಕೇಂದ್ರ ಸಚಿವರು, ಹಲವು ಸಂಸದರು ಕಣಕ್ಕೆ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ15 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ17 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ19 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ20 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌