Mental Health : Good News; ರಾಜ್ಯದ ಎಲ್ಲ 33 ಜಿಲ್ಲಾಸ್ಪತ್ರೆಗಳಲ್ಲಿ ನಿಮ್ಹಾನ್ಸ್‌ ಮಾದರಿ ಸೇವೆ - Vistara News

ಬೆಂಗಳೂರು

Mental Health : Good News; ರಾಜ್ಯದ ಎಲ್ಲ 33 ಜಿಲ್ಲಾಸ್ಪತ್ರೆಗಳಲ್ಲಿ ನಿಮ್ಹಾನ್ಸ್‌ ಮಾದರಿ ಸೇವೆ

Mental Health : ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿಯೇ ಮೆದುಳು ಹಾಗೂ ನರ ಸಮಸ್ಯೆಗಳನ್ನು ಹೊಂದಿರುವ ರೋಗಿಗಳಿಗೆ ಆರೋಗ್ಯ ಸೇವೆ (Mental Health) ಒದಗಿಸುವತ್ತ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.

VISTARANEWS.COM


on

Mental Health Dinesh Gundu rao
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ (Brain Health Service) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸೋಮವಾರ ಚಾಲನೆ ನೀಡಿದರು. ನಿಮ್ಹಾನ್ಸ್ ಸಂಸ್ಥೆಯ (Nimhans Institute) ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ.‌ ಈ ಮೂಲಕ ನಿಮ್ಹಾನ್ಸ್ ಮೇಲಿನ ಒತ್ತಡ ಕಡಿಮೆ ಮಾಡುವುದರೊಂದಿಗೆ, ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿಯೇ ಮೆದುಳು ಹಾಗೂ ನರ ಸಮಸ್ಯೆಗಳನ್ನು ಹೊಂದಿರುವ ರೋಗಿಗಳಿಗೆ ಆರೋಗ್ಯ ಸೇವೆ (Mental Health) ಒದಗಿಸುವತ್ತ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ನೂತನ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao), ದೇಶದಲ್ಲಿ ಇದೊಂದು ಮಾದರಿ ಕಾರ್ಯಕ್ರಮವಾಗಲಿದೆ ಎಂದರು. ಮೆದುಳು ಆರೋಗ್ಯದ ವಿಚಾರದಲ್ಲಿ ಹೆಚ್ಚು ಒತ್ತು ನೀಡಬೇಕಾಗಿದೆ. ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

ಜಿಲ್ಲಾ ಕೇಂದ್ರಗಳಲ್ಲೇ ನಿಮ್ಹಾನ್ಸ್‌ ಮಾದರಿ ಸೇವೆ (Nimhans model Service)

ಮೆದುಳು ಹಾಗೂ ನರ ಸಮಸ್ಯೆಗಳಿಗೆ ರಾಜ್ಯದ ಜನರು ಬೆಂಗಳೂರಿನ ನಿಮ್ಹಾನ್ಸ್ ಗೆ ಆಗಮಿಸಬೇಕಾಗಿತ್ತು. ನಿಮ್ಹಾನ್ಸ್ ಮೇಲೆ ಹೆಚ್ಚಿನ ಒತ್ತಡ ಇತ್ತು‌. ಈ ಒತ್ತಡವನ್ನ ಕಡಿಮೆ ಮಾಡುವುದರ ಜೊತೆಗೆ, ಜಿಲ್ಲಾ ಮಟ್ಟದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲು 33 ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ. ನಿಮ್ಹಾನ್ಸ್ ಸಹಯೋಗ ಹಾಗೂ ಸಲಹೆಗಳೊಂದಿಗೆ ಈ ಕೇಂದ್ರಗಳಲ್ಲಿ ಇನ್ಮುಂದೆ ಚಿಕಿತ್ಸೆ ದೊರೆಯಲಿದೆ ಎಂದರು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ನಿಮ್ಹಾನ್ಸ್ ತಜ್ಞ ವೈದ್ಯರ ಸಲಹೆ ಪಡೆದುಕೊಂಡು ಜಿಲ್ಲಾ ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Mental Health Dinesh Gundu rao1

ಪಾರ್ಶ್ವವಾಯು, ಅಪಸ್ಮಾರ, ಮರೆವಿನ ಕಾಯಿಲೆ ಮತ್ತು ತಲೆನೋವು ಸೇರಿದಂತೆ ನರವೈಜ್ಞಾನಿಕ ಕಾಯಿಲೆಗಳ ಹೊರ ಭಾರತದಲ್ಲಿ ಹೆಚ್ಚಾಗುತ್ತಿದೆ. ಇವು ಮರಣ ಮತ್ತು ಅಂಗವೈಕಲ್ಯಕ್ಕೆ ಪ್ರಮುಖ ಕಾರಣವಾಗಿವೆ. ಇದನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಆರೋಗ್ಯ ಕೇಂದ್ರಗಳು ಸಹಕಾರಿಯಾಗಲಿವೆ. ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಪಿಸಿಯೋಥೆರಪಿಸ್ಟ್, ಸ್ಪೀಚ್ ಥೆರಪಿಸ್ಟ್, ಮನಶ್ಯಾಸ್ತ್ರಜ್ಞರು, ನರ್ಸ್ ಮತ್ತು ಜಿಲ್ಲಾ ಸಂಯೋಜಕರನ್ನು ಒಳಗೊಂಡಿರುತ್ತದೆ.

ಇದನ್ನೂ ಓದಿ : Raja Marga Column : ಪದೇಪದೆ ಡಿಪ್ರೆಸ್‌ ಆಗ್ತಾ ಇದ್ದೀರಾ? ಹುಷಾರು ಆತಂಕ ಒಂದು ನಿಧಾನ ವಿಷ!

Mental Health Dinesh Gundu rao1

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಪ್ರಮುಖ ಅಂಶಗಳು

ಮೆದುಳು ಆರೋಗ್ಯ ಚಿಕಿತ್ಸಾಲಯಗಳ ಸ್ಥಾಪನೆ

ಕರ್ನಾಟಕದ 31 ಜಿಲ್ಲೆ ಮತ್ತು ಬಿಬಿಎಂಪಿಯ ಜಿಲ್ಲಾಮಟ್ಟದ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಚಿಕಿತ್ಸಾಲಯಗಳನ್ನು ಸ್ಥಾಪಿಸಲಾಗಿದೆ. ನರರೋಗಿಗಳಿಗೆ ಸಕಾಲಿಕ ಚಿಕಿತ್ಸೆಯನ್ನು ಖಾತ್ರಿಪಡಿಸುವ ಮತ್ತು ಆರೈಕೆಗಾಗಿ ನೋಡಲ್ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ.

ವೈದ್ಯರು, ಆಶಾ ಕಾರ್ಯಕರ್ತರ ತರಬೇತಿ ಮೂಲಕ ಸಾಮರ್ಥ್ಯ ವೃದ್ಧಿ

ನರವೈಜ್ಞಾನಿಕ ಅಸ್ವಸ್ಥತೆಗಳ ನಿರ್ವಹಣೆಯನ್ನು ಹೆಚ್ಚಿಸಲು ರಾಜ್ಯಾದ್ಯಂತ ಆಶಾ ಕಾರ್ಯಕರ್ತರು, ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೈಕೆ ವೈದ್ಯರು ಮತ್ತು ಫಿಜಿಷಿಯನ್ಸ್ ಗಳಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನರರೋಗತಜ್ಞರ ರಾಜ್ಯವ್ಯಾಪಿ ನೆಟ್ವರ್ಕ್

ಪ್ರಾಥಮಿಕ ಹಂತದಲ್ಲಿ ವಿಶೇಷ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ತಜ್ಞರ ಸಮಾಲೋಚನೆ, ಟೆಲಿನ್ಯೂರಾಲಜಿ ಮತ್ತು ಟೆಲಿಮೆಂಟರಿಂಗ್ ಸೇವೆಗಳನ್ನು ಒದಗಿಸುವ ನರರೋಗತಜ್ಞರುಗಳನ್ನು ಸಂಯೋಜಿಸಲಾಗಿದೆ. ಆರೋಗ್ಯ ಕೇಂದ್ರಗಳು ಮತ್ತು ಆಸ್ಪತ್ರೆಗಳ ನಡುವೆ ಸಂಬಂಧವನ್ನು ಬಲಪಡಿಸುವ ಮತ್ತು ಪ್ರಾಥಮಿಕ ಹಂತದಲ್ಲಿ ರೋಗನಿರ್ಣಯ, ಸಕಾಲಿಕ ಚಿಕಿತ್ಸೆಯನ್ನು ಸುಲಭಗೊಳಿಸಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

ಅಂತರ್ವಿಭಾಗೀಯ ಸಮನ್ವಯ

ಅಸಾಂಕ್ರಾಮಿಕ ರೋಗಗಳು, ಮಾನಸಿಕ ಆರೋಗ್ಯ, ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಾಲ್ತಿಯಲ್ಲಿರುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳೊಂದಿಗೆ ನಿಬಂಧನೆಗಳ ಏಕೀಕರಣಗೊಳಿಸಿದೆ.

ಮೆದುಳಿನ ಆರೋಗ್ಯ ಜಾಗೃತಿ ಅಭಿಯಾನಗಳು

ಮೆದುಳಿನ ಆರೋಗ್ಯವನ್ನು ಉತ್ತೇಜಿಸಲು ವ್ಯಾಪಕವಾದ ಅಭಿಯಾನಗಳು, ತಡೆಗಟ್ಟುವಿಕೆ ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳ ಆರಂಭಿಕ ಗುರುತಿಸುವಿಕೆಯ ಬಗ್ಗೆ ಸಮುದಾಯಕ್ಕೆ ಅರಿವು ಮೂಡಿಸುವುದು.

ಡಿಜಿಟಲ್ ಡೇಟಾ ಮತ್ತು ಮಾಹಿತಿ ವ್ಯವಸ್ಥೆ

ಸಂವಹನ, ಕೆಲಸದ ಹರಿವು ಮತ್ತು ಪ್ರಭಾವದ ಮೌಲ್ಯಮಾಪನವನ್ನು ಸುಗಮಗೊಳಿಸುವ ಅತ್ಯಾಧುನಿಕ ವ್ಯವಸ್ಥೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

PM Narendra Modi: ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

PM Narendra Modi Cm Siddaramaiah many questions to PM Modi Challenge for answer
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಜ್ಯ ಪ್ರವಾಸದಲ್ಲಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್‌ ಹಾಗೂ ಕರ್ನಾಟಕ ಸರ್ಕಾರದ (Karnataka Congress Government) ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮೋದಿಯವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದು, ಉತ್ತರಿಸುವಂತೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ ಎಂದು ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗಳು ಏನು?

ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ‍್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕೋರುತ್ತೇನೆ. ನಿಮ್ಮ ಇತ್ತೀಚಿನ ಅತಿದೊಡ್ಡ ಸುಳ್ಳಿನ ಬಗ್ಗೆ ಕೆಲವು ಪ್ರಶ್ನೆಗಳನ್ನು ನಿಮಗೆ ಕೇಳಬೇಕೆಂದಿದ್ದೇನೆ, ನಿಮ್ಮ ಇಂದಿನ ಭಾಷಣದಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸುವಿರೆಂದು ನಂಬಿದ್ದೇನೆ.

‘’ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ’’ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ. ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿಸಿ.

ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ?

ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿತ್ತು. ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. 2019ರ ಬಜೆಟ್‌ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈಗ ನಿರ್ಮಲಾ ಸೀತಾರಾಮನ್ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ?

ಸಂಪತ್ತಿನ ಸಮಾನ ಹಂಚಿಕೆ ಎಂಬುದು ಉದಾತ್ತ ಚಿಂತನೆ

ಸಂಪತ್ತಿನ ಸಮಾನ ಹಂಚಿಕೆ ಎನ್ನುವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಎಚ್.ಡಿ. ದೇವೇಗೌಡರು. ಮೋದಿಯವರೇ ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ?

ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ?

ನರೇಂದ್ರ ಮೋದಿಯವರೇ ನಿಮ್ಮದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಾದುದೇನಲ್ಲ. 2019ರಲ್ಲಿ ನಿಮ್ಮದೇ ಸರ್ಕಾರ ಶೇಕಡಾ 30ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ ಎನ್ನುವುದು ನಿಮಗೆ ತಿಳಿದಿರಲಿ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಪ್ರಧಾನಿ ಮೋದಿಯವರೇ, ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ?

ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದೀರಾ?

ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ?

ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿಯವರೇ, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆ ಮಾಡಬೇಕೆಂದು ನಿಮಗೆ ಅನಿಸಲಿಲ್ಲವೇ?

ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ

ಹಿಂದಿನ ಪ್ರಧಾನಿಗಳಾದ ಜವಾಹರಲಾಲ್ ನೆಹರೂ 33, ಲಾಲ್ ಬಹದ್ದೂರ್ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್ ಗಾಂಧಿಯವರು 16, ವಿ.ಪಿ.ಸಿಂಗ್ ಅವರು 2, ಐ.ಕೆ.ಗುಜ್ರಾಲ್ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್ ಸಿಂಗ್ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ನಿಮ್ಮ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದೀರಿ. ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದರೆ ಇದೇನಾ?

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿಯವರೇ, ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿತು. ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಅನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು.

ಹತ್ತು ವರ್ಷಗಳಲ್ಲಿ ನೀವು ಆಸ್ತಿ ಮಾಡಿಕೊಟ್ಟಿದ್ದು ಯಾರಿಗೆ?

ಪ್ರಧಾನಿ ಮೋದಿಯವರೇ ನಿಮ್ಮ ಹತ್ತು ವರ್ಷಗಳಲ್ಲಿ ನೀವು ಆಸ್ತಿ ಮಾಡಿಕೊಟ್ಟಿದ್ದು ಅದಾನಿ – ಅಂಬಾನಿಗಳಿಗೆ ಮಾತ್ರ ಅಲ್ಲವೇ? ವಿಮಾನ ನಿಲ್ದಾಣಗಳು, ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್ ನಿಗಮಗಳು ಒಂದೇ ಎರಡೇ ಇವೆಲ್ಲವೂ ನಿಮ್ಮ ಕಾಲದಲ್ಲಿಯೇ ಅಲ್ಲವೇ ಅದಾನಿ-ಅಂಬಾನಿ ಮಡಿಲು ಸೇರಿದ್ದು? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ?

Continue Reading

Lok Sabha Election 2024

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

Prajwal Revanna Pen Drive: ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

VISTARANEWS.COM


on

Prajwal Revanna Pen Drive Case Prajwal Revanna accused of sex scandal No interference in SIT probe says Parameshwara
Koo

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಪೆನ್‌ಡ್ರೈವ್‌ ಬಹಿರಂಗಗೊಂಡ (Prajwal Revanna Pen Drive) ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಶನಿವಾರ (ಏಪ್ರಿಲ್‌ 27) ಘೋಷಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (Dr G Parameshwar) ಪ್ರತಿಕ್ರಿಯೆ ನೀಡಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರದಿಂದ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್‌, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಕೇಸ್ ಅನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇನ್ನು ಕೆಲವೇ ಸಮಯದಲ್ಲಿ ಅಧಿಕೃತವಾಗಿ ಎಸ್‌ಐಟಿ ರಚನೆ ಮಾಡಿ ಆದೇಶವನ್ನು ಹೊರಡಿಸಲಾಗುವುದು. ಎಡಿಜಿಪಿ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿದೆ ಎಂದು ಹೇಳಿದರು.

ಎಸ್‌ಐಟಿಗೆ ಪರಮಾಧಿಕಾರ

ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ವಿದೇಶದಿಂದ ಕರೆ ತರಲಾಗುತ್ತದೆಯೇ?

ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್‌ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟ ವಿಚಾರವಾಗಿದೆ. ಇನ್ನು ವಿದೇಶದಲ್ಲಿರುವ ಅವರನ್ನು ಕರೆತರುವ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳೇ ತೀರ್ಮಾನ ಮಾಡಬೇಕು. ಪ್ರಕರಣದಲ್ಲಿ ಸತ್ಯ ಕಂಡುಬಂದರೆ ಅವರ ರೀತಿಯಲ್ಲಿ ಅವರು ಕ್ರಮ ವಹಿಸುತ್ತಾರೆ. ಇದರಲ್ಲಿ ಸರ್ಕಾರದಿಂದ ಯಾವುದೇ ನಿರ್ದೇಶನ ಇರುವುದಿಲ್ಲ. ಹೀಗೇ ತನಿಖೆ ನಡೆಸಬೇಕು ಎಂದು ನಾವು ಹೇಳುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ಎಸ್‌ಐಟಿ ತನಿಖೆ ಬಗ್ಗೆ ಘೋಷಿಸಿದ್ದ ಸಿಎಂ

ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಮಾಧ್ಯಮ ಪ್ರಕಟಣೆ ಮೂಲಕ ಘೋಷಣೆ ಮಾಡಿದ್ದರು. ಭಾನುವಾರ ಈ ಸಂಬಂಧ ಅಧಿಕೃತ ಆದೇಶ ಹೊರಬರಬೇಕಿದೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ. ಈ ಸಂಬಂಧ ಮಹಿಳಾ ಆಯೋಗ ಸಹ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದು, ತನಿಖೆ ನಡೆಸುವಂತೆ ಕೋರಿತ್ತು.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೊಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

Fire Accident : ಬೆಂಗಳೂರು ನಗರ ವಲಯದಲ್ಲಿ ಅರಣ್ಯಕ್ಕೆ ಬೆಂಕಿ, ಭಾರೀ ಹಾನಿ

Fire Accident :ಗುರುವಾರ ರಾತ್ರಿ ವೇಳೆ ಅರಣ್ಯ ಪ್ರದೇಶಕ್ಕೆ ಬೆಂಕಿ ತಾಗಿದೆ. ಎರಡು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದೆ. ಅರಣ್ಯವು ಬಿಬಿಎಂಪಿ ವ್ಯಾಪ್ತಿಗೆ ಸೇರಿದ್ದು, ಅದರಲ್ಲಿ 1.5 ಎಕರೆ ಜಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Fire Accident
Koo

ಬೆಂಗಳೂರು: ಮಹಾನಗರದ ಹೊರವಲಯದ ಸುಮನ್ನಹಳ್ಳಿ ಬ್ರಿಡ್ಜ್ ಬಳಿ ಶ್ರೀಗಂಧ ಕಾವಲ್ ನಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಮೂರು ಎಕರೆ ಅರಣ್ಯ ಪ್ರದೇಶದಲ್ಲಿ ಹೊತ್ತಿ ಮರಗಳು ಹೊತ್ತಿ ಉರಿದಿವೆ. ಒಣ ಕಸಕ್ಕೆ ಬೆಂಕಿ ಹಾಕಿರುವ ಹಿನ್ನಲೆ ಮರಗಳಿಗೆ ಬೆಂಕಿ ತಗುಲಿದೆ ಎಂದು ಶಂಕಿಸಲಾಗಿದೆ. ಬೆಂಗಳೂರು ನಗರದಲ್ಲಿ ಬೇಸಿಗೆ ಪ್ರಭಾವ ಹೆಚ್ಚಾಗಿದೆ. ಹೀಗಾಗಿ ಕಸಕ್ಕೆ ಹಾಕಿದ ಬೆಂಕಿ ಅರಣಕ್ಕೆ ತಾಗಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ರಾತ್ರಿ ವೇಳೆ ಅರಣ್ಯ ಪ್ರದೇಶಕ್ಕೆ ಬೆಂಕಿ ತಾಗಿದೆ. ಎರಡು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದೆ. ಅರಣ್ಯವು ಬಿಬಿಎಂಪಿ ವ್ಯಾಪ್ತಿಗೆ ಸೇರಿದ್ದು, ಅದರಲ್ಲಿ 1.5 ಎಕರೆ ಜಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ತೆರವುಗೊಳಿಸಿದ ಮರಗಳನ್ನು ಇಲ್ಲಿ ತಂದು ಡಂಪ್ ಮಾಡಲಾಗುತ್ತಿತ್ತು. ಅದೇ ರೀತಿ ಹೊರಗಡೆ ಮಾರಟ ಮಾಡುವ ಕಟ್ಟಿಗೆಗಳನ್ನು ಇಲ್ಲಿ ತಂದು ಹಾಕಿ ಹರಾಜು ಮಾಡಲಾಗ್ತಿತ್ತು. ಹರಾಜು ಆಗದೇ ಉಳಿದಿದ್ದ ಕಟ್ಟಿಗೆಗಳೆಲ್ಲ ಅರಣ್ಯ ವ್ಯಾಪ್ತಿಯಲ್ಲಿ ರಾಶಿ ಬಿದ್ದಿದ್ದವು. ತೀವ್ರ ಬಿಸಿಲಿನ ಕಾರಣ ಸಂಪೂರ್ಣ ಒಣಗಿದ್ದ ಮರದ ತುಂಡುಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಸಾಧ್ಯತೆಯೂ ಇದೆ ಎಂಬುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.

ಕಾಮಾಕ್ಷಿಪಾಳ್ಯ ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸತತ 9 ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ


ಡೆಹ್ರಾಡೂನ್‌: ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ಭುಗಿಲೆದ್ದಿರುವ ಕಾಡ್ಗಿಚ್ಚು (Forest Fires) ಶನಿವಾರ ಪೈನ್‌ ಪ್ರದೇಶದ ಹೈಕೋರ್ಟ್‌ ಕಾಲನಿಯ ಸಮೀಪಕ್ಕೂ ವ್ಯಾಪಿಸಿದ್ದು, ನಂದಿಸಲು ಐಎಎಫ್ (Indian Air Force) ಹೆಲಿಕಾಪ್ಟರ್‌ (Air Force Chopper) ಬಳಸಲಾಗಿದೆ. ಸದ್ಯ ಹೆಲಿಕಾಪ್ಟರ್‌ ಕಾರ್ಯಾಚರಣೆಯ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಅಗ್ನಿಯ ಕೆನ್ನಾಲಗೆ ಅಪಾಯಕಾರಿಯಾಗಿ ವ್ಯಾಪಿಸುತ್ತಿದ್ದು, ಜನವಸತಿ ಪ್ರದೇಶಗಳತ್ತ ನುಗ್ಗ ತೊಡಗಿದೆ. ಪೈನ್‌ನ ಈ ಪ್ರದೇಶದಿಂದ ಸುಮಾರು 5 ಕಿ.ಮೀ. ದೂರಲ್ಲಿ ಸೇನಾ ಕಂಟೋನ್‌ಮೆಂಟ್‌ ಇದ್ದು, ಅಧಿಕಾರಿಗಳ ತ್ವರಿತವಾಗಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ʼʼಎಂಐ-17 ವಿ5 (Mi-17 V5) ಹೆಲಿಕಾಪ್ಟರ್‌ ಅನ್ನು ಬೆಂಕಿ ನಿಯಂತ್ರಣ ಕಾರ್ಯಾಚರಣೆಗಾಗಿ ಬಳಸಲಾಗಿದೆʼʼ ಎಂದು ಭಾರತೀಯ ವಾಯುಪಡೆ ತಿಳಿಸಿದೆ. ಕಾರ್ಯಾಚರಣೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದೆ. “ನೈನಿತಾಲ್ ಬಳಿಯ ವಾಯುಪಡೆ ನಿಲ್ದಾಣದ ಸಮೀಪದ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅದನ್ನು ನಿಯಂತ್ರಿಸಲು ಐಎಎಫ್‌ ತನ್ನ ವೈಮಾನಿಕ ಸಾಹಸ ಪ್ರದರ್ಶಿಸಿದೆʼʼ ಎಂದು ಐಎಎಫ್ ಬರೆದುಕೊಂಡಿದೆ.

ಕಾರ್ಯಾಚರಣೆ ಹೇಗಿತ್ತು?

ʼʼಹೆಲಿಕಾಪ್ಟರ್ ನೈನಿ ಮತ್ತು ಭೀಮ್ತಾಲ್ ಸರೋವರಗಳಿಂದ ಬಾಂಬಿ ಬಕೆಟ್‌ (Bambi bucket)ನಲ್ಲಿ ನೀರನ್ನು ಸಂಗ್ರಹಿಸಿ ಪೈನ್ಸ್, ಭೂಮಿಧರ್, ಜ್ಯೋಲಿಕೋಟ್, ನಾರಾಯಣ್ ನಗರ, ಭವಾಲಿ, ರಾಮ್ಗಢ್ ಮತ್ತು ಮುಕ್ತೇಶ್ವರ ಪ್ರದೇಶಗಳಲ್ಲಿ ಕಾಣಿಸಿಕೊಂಡ ಬೆಂಕಿಯ ಮೇಲೆ ಸುರಿದಿದೆʼʼ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಕೆಟ್ ಏಕಕಾಲದಲ್ಲಿ 5,000 ಲೀಟರ್ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿದೆ.

ನೈನಿ ಸರೋವರದಲ್ಲಿ ನೀರಿನ ಮಟ್ಟ ಕಡಿಮೆಯಾದ ಕಾರಣ ದೋಣಿ ವಿಹಾರದ ಚಟುವಟಿಕೆಗಳನ್ನು ಕೆಲವು ದಿನಗಳ ಹಿಂದೆಯೇ ಸ್ಥಗಿತಗೊಳಿಸಲಾಗಿತ್ತು. ಇದೀಗ ಕಾರ್ಯಾಚರಣೆಗಾಗಿ ಭೀಮ್ತಾಲ್ ಸರೋವರದಲ್ಲಿ ದೋಣಿ ವಿಹಾರ ನಿಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ʼʼಬೆಂಕಿಯನ್ನು ನಿಯಂತ್ರಣಕ್ಕೆ ತರಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆʼʼ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ. ಅವರು ಬೆಂಕಿ ಆವರಿಸಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಂಡಿದ್ದಾರೆ.

Continue Reading

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ವೈರಲ್ ನ್ಯೂಸ್12 mins ago

Viral Video: ಹೆಂಡತಿನ ಚೆನ್ನಾಗಿ ಥಳಿಸಿ ಫ್ಲೈ ಓವರ್‌ನಿಂದ ತಳ್ಳೋಕೆ ಯತ್ನಿಸಿದ ಪಾಪಿ ಗಂಡ; ಆಮೇಲೆ ಆಗಿದ್ದೇನು?

Lok sabaha election
ದೇಶ22 mins ago

Lok Sabha Election: ಮತದಾನ ಪ್ರಮಾಣ ಕುಸಿತ; ಬಿಜೆಪಿಗೆ ಆತಂಕ!

PM Narendra Modi Live in Sirsi campaign meeting here
Lok Sabha Election 202425 mins ago

PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Samantha Ruth Prabhu shocking secrets
ಟಾಲಿವುಡ್28 mins ago

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

PM Narendra Modi Cm Siddaramaiah many questions to PM Modi Challenge for answer
Lok Sabha Election 202452 mins ago

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

Priyanka Gandhi Rahul Gandhi
ದೇಶ1 hour ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Ranbir Kapoor stunned as photographer abuses in front of him
ಬಾಲಿವುಡ್1 hour ago

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

pralhad Joshi
ಪ್ರಮುಖ ಸುದ್ದಿ1 hour ago

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

If Congress comes to power all your assets will belong to Government says PM Narendra Modi
Lok Sabha Election 20241 hour ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

If Congress comes to power all your assets will belong to Government says PM Narendra Modi
Lok Sabha Election 20241 hour ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ5 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202421 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಟ್ರೆಂಡಿಂಗ್‌