Udyami Vokkaliga | ಒಕ್ಕಲಿಗರು ಕೃಷಿಯ ಜತೆಗೆ ಉದ್ಯಮಿಗಳೂ ಆಗಬೇಕು: ಸಚಿವ ಸಿ.ಎನ್.ಅಶ್ವತ್ಥನಾರಾಯಣ - Vistara News

ಬೆಂಗಳೂರು

Udyami Vokkaliga | ಒಕ್ಕಲಿಗರು ಕೃಷಿಯ ಜತೆಗೆ ಉದ್ಯಮಿಗಳೂ ಆಗಬೇಕು: ಸಚಿವ ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರಿನಲ್ಲಿ ‘ಫಸ್ಟ್ ಸರ್ಕಲ್’ ಸಂಘಟನೆ ವತಿಯಿಂದ ಏರ್ಪಡಿಸಿದ್ದ ರಾಜ್ಯ‌ಮಟ್ಟದ ಒಕ್ಕಲಿಗರ ಉದ್ಯಮಿಗಳ ‘ಉದ್ಯಮಿ ಒಕ್ಕಲಿಗ’ ಸಮಾವೇಶವನ್ನು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಉದ್ಘಾಟಿಸಿದರು.

VISTARANEWS.COM


on

Udyami Vokkaliga
ಬೆಂಗಳೂರಿನಲ್ಲಿ ಏರ್ಪಡಿಸಿದ್ದ 'ಉದ್ಯಮಿ ಒಕ್ಕಲಿಗ' ಸಮಾವೇಶದಲ್ಲಿ ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಕ್ಕಲಿಗ ಸಮುದಾಯವು(Udyami Vokkaliga) ಕೃಷಿಯ ಜತೆಗೆ ಬದಲಾದ ಕಾಲಕ್ಕೆ ತಕ್ಕಂತೆ ಉದ್ಯಮ ರಂಗದಲ್ಲೂ ತೊಡಗಿಸಿಕೊಂಡು ಛಾಪು ಮೂಡಿಸಬೇಕು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ‘ಫಸ್ಟ್ ಸರ್ಕಲ್’ ಸಂಘಟನೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ರಾಜ್ಯ‌ಮಟ್ಟದ ಒಕ್ಕಲಿಗರ ಉದ್ಯಮಿಗಳ ‘ಉದ್ಯಮಿ ಒಕ್ಕಲಿಗ’ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ | Karnataka Election 2023 | ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಸಿದ್ದರಾಮಯ್ಯ ಆಸೆಗೆ ಡಿಕೆಶಿ ತಣ್ಣೀರು

ಸಮುದಾಯವು ಕೃಷಿಯ ಜತೆಗಿನ ಸಂಬಂಧವನ್ನು ಬಿಡಬಾರದು. ಆದರೆ ಸಮಕಾಲೀನ ಜಗತ್ತು ಬೇಡುವ ಔದ್ಯಮಿಕ ಕೌಶಲಗಳನ್ನು ಬಳಸಿಕೊಂಡು ಉದ್ಯಮಿಗಳಾಗಲು ಒಕ್ಕಲಿಗ ಸಮುದಾಯದ ಪ್ರತಿಭಾವಂತರು ಪ್ರಯತ್ನಿಸಬೇಕು. ಇದಕ್ಕೆ ಮೊದಲಿನಿಂದಲೇ ಉದ್ಯಮಶೀಲತೆಯನ್ನು ಪೋಷಿಸಬೇಕು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸಮುದಾಯದವರ ಸಂಖ್ಯೆ ಹೆಚ್ಚಾಗಿದೆ. ಉದ್ಯಮಶೀಲ ಮನಸ್ಸಿದ್ದರೆ ಕೃಷಿಯನ್ನು ಆಧರಿಸಿ ಹಲವು ಉದ್ದಿಮೆಗಳನ್ನು ಆರಂಭಿಸಬಹುದು. ರಾಜ್ಯದಲ್ಲಿ ಉದ್ಯಮಿಯಾಗಲು ತಕ್ಕ ಕಾರ್ಯ ಪರಿಸರವಿದೆ. ಇಲ್ಲಿ ಕೂಡ ಒಳ್ಳೆಯ ಶಿಕ್ಷಣ, ಸಂಸ್ಕಾರ, ಮೌಲ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಇದನ್ನು ಮರೆತರೆ ಸಮುದಾಯಕ್ಕೆ ಒಳ್ಳೆಯದಾಗುವುದಿಲ್ಲ ಎಂದು ಅವರು ಸಲಹೆ ನೀಡಿದರು.

ಒಕ್ಕಲಿಗ ಜನಾಂಗದ ಉತ್ಸಾಹಿಗಳು ಉದ್ಯಮಿಗಳಾಗಲು ಮುಂದೆ ಬಂದರೆ ಸರ್ಕಾರವು ಅಗತ್ಯ ಪ್ರೋತ್ಸಾಹ ನೀಡಲಿದೆ. ಇಲ್ಲಿ ವೈಯಕ್ತಿಕ ಉದ್ದೇಶಕ್ಕಿಂತ ಹೆಚ್ಚಾಗಿ ಸಾಮುದಾಯಿಕ ಹಿತದ ಬಗ್ಗೆ ಹೆಚ್ಚಿನ ಗಮನ ಇರಬೇಕು ಎಂದು ಹೇಳಿದರು.

ಬಿಬಿಎಂಪಿ ವಿಶೇಷ ಆಯುಕ್ತ ಜೈರಾಮ್ ರಾಯ್ಪುರ ಮಾತನಾಡಿ, “ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಈ ಫರ್ಸ್ಟ್ ಸರ್ಕಲ್ ಇನ್ನೂ 25 ಜಿಲ್ಲೆಗಳಿಗೆ ವಿಸ್ತರಿಸಲಿದೆ. ಕ್ರಮೇಣ ದೇಶದ ವಿವಿಧ ರಾಜ್ಯಗಳಿಗೆ ವಿಸ್ತರಿಸಲಿದೆ. ಇನ್ನೂ 250ಕ್ಕೂ ಹೆಚ್ಚು ಉದ್ಯಮಿಗಳು ಇದರ ವ್ಯಾಪ್ತಿಗೆ ಸೇರಿಕೊಳ್ಳಲಿದ್ದಾರೆ. ಇದು ಆಂತರಿಕ ಅರ್ಥ್ಯವ್ಯವಸ್ಥೆ ಸುಧಾರಣೆಗೆ ನೆರವಾಗಲಿದೆ” ಎಂದರು.

ಕಾರ್ಯಕ್ರಮದಲ್ಲಿ ಸಚಿವ ಕೆ.ಗೋಪಾಲಯ್ಯ, ಸಂಸದ ಬಿ ಎನ್ ಬಚ್ಚೇಗೌಡ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ ರಾಯಪುರ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ | Voter data | 3 ಕ್ಷೇತ್ರಗಳಲ್ಲಿ ಡಿಲೀಟ್‌ ಆದ ಎಲ್ಲ ಹೆಸರುಗಳ ಮರುಪರಿಶೀಲನೆಗೆ ಚು.ಆಯೋಗ ಆದೇಶ, ಇಬ್ಬರು ಅಧಿಕಾರಿಗಳ ಸಸ್ಪೆಂಡ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

Meta: ಮೆಟಾ ಸಂಸ್ಥೆಯಿಂದ ಮಂಗಳವಾರ ಬೆಂಗಳೂರು ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’(ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮ ಜರುಗಿತು. ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು.

VISTARANEWS.COM


on

Talking Digital Safety for Teens programme by Meta in Bengaluru
Koo

ಬೆಂಗಳೂರು: ಯುವಜನರ ಯೋಗಕ್ಷೇಮದ ಕುರಿತು ಮೆಟಾ (Meta) ಸಂಸ್ಥೆಯಿಂದ ಮಂಗಳವಾರ ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’ (ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು. ಮೆಟಾದ ಪ್ಲಾಟ್ ಫಾರ್ಮ್‌ಗಳನ್ನು ಒಳಗೊಂಡಂತೆ ಹದಿಹರೆಯದ ಮಕ್ಕಳ ಸ್ಮಾರ್ಟ್‌ಫೋನ್‌ ಮತ್ತು ಸಾಧನಗಳ ಬಳಕೆಯನ್ನು ಆತ್ಮವಿಶ್ವಾಸದಿಂದ ನಿರ್ವಹಣೆ ಮಾಡಲು ಸಾಧ್ಯವಾಗುವಂತೆ ಪೋಷಕರನ್ನು ಸಜ್ಜುಗೊಳಿಸುವ ಅನೇಕ ವಿಧಾನಗಳನ್ನು ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

ಕಾರ್ಯಕ್ರಮದಲ್ಲಿ ಹದಿಹರೆಯದ ಮಕ್ಕಳ ಸಾಮಾಜಿಕ ಮಾಧ್ಯಮಗಳ ಬಳಕೆ ಮತ್ತು ಇತರ ಆನ್‌ಲೈನ್ ಟ್ರೆಂಡ್‌ಗಳ ಬಳಕೆ ಕುರಿತು ಪೋಷಕರು ಮತ್ತು ಶಿಕ್ಷಕರ ಒಳನೋಟಗಳನ್ನು ಈ ವೇಳೆ ಸಂಗ್ರಹಿಸಲಾಯಿತು. ಡಿಜಿಟಲ್ ಸುರಕ್ಷತಾ ಉಪಕ್ರಮಗಳ ಕುರಿತು ಹೆಚ್ಚು ತಿಳಿದುಕೊಳ್ಳಲು ಮತ್ತು ಅವರ ಹದಿಹರೆಯದ ಮಕ್ಕಳ ಸಾಮಾಜಿಕ ಜಾಲತಾಣಗಳ ಪ್ರಯಾಣದ ಅನುಭವಗಳ ಕುರಿತು ಚರ್ಚಿಸಲು ನಗರದ ಆಯ್ದ 10-15 ಶಾಲೆಗಳ ಆಯ್ದ ಶಿಕ್ಷಕರು ಮತ್ತು ಪೋಷಕರು ಪಾಲ್ಗೊಂಡಿದ್ದರು.

ಈ ವೇಳೆ ಇನ್‌ಸ್ಟಾಗ್ರಾಮ್‌ನ ಭಾರತದ ಸಾರ್ವಜನಿಕ ನೀತಿಯ ನಿರ್ದೇಶಕಿ ನತಾಶಾ ಜೋಗ್ ಮಾತನಾಡಿ, ನಮ್ಮ ಯುವ ಬಳಕೆದಾರರು ಆನ್‌ಲೈನ್‌ನಲ್ಲಿ ಅರ್ಥಪೂರ್ಣವಾಗಿ ಸಮಯವನ್ನು ಕಳೆಯುವುದರ ಜತೆಗೆ ವಿಶೇಷವಾಗಿ ಅವರು ಇಷ್ಟಪಡುವ ಎಲ್ಲಾ ಕೆಲಸಗಳನ್ನು ಮಾಡುತ್ತಲೇ ಸುರಕ್ಷಿತವಾಗಿರುವ ಅಗತ್ಯವನ್ನು ನಾವು ಗಮನಿಸಿದ್ದೇವೆ.

ಭಾರತದಾದ್ಯಂತ ಈ ಚರ್ಚಾ ಸರಣಿಯ ಮೂಲಕ ನಾವು ಶಿಕ್ಷಕರೊಂದಿಗೆ ಸಂವಹನ ನಡೆಸುತ್ತಲೇ, ಕುಟುಂಬದ ಆನ್‌ಲೈನ್ ಅಭ್ಯಾಸಗಳನ್ನು ನಿರ್ವಹಿಸಲು ಪೋಷಕರನ್ನು ಸಜ್ಜುಗೊಳಿಸುವ ದಾರಿಗಳನ್ನು ಹುಡುಕುತ್ತಿದ್ದೇವೆ. ಆ ಮೂಲಕ ಅವರ ಪಾಲಿಗೆ ಉತ್ತಮ ಎನಿಸುವ ರಕ್ಷಣಾ ವಿಧಾನ ಒದಗಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಬಳಕೆದಾರರ ಸುರಕ್ಷತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಮೆಟಾ ಕಳೆದ ವರ್ಷ ‘ಡಿಜಿಟಲ್ ಸುರಕ್ಷಾ ಶೃಂಗಸಭೆ’ ಅನ್ನು ನಡೆಸಿತ್ತು. ಆ ಮೂಲಕ ಯುವಜನತೆ ಮತ್ತು ಮಹಿಳೆಯರಿಗೆ ಸುರಕ್ಷಿತ ಮತ್ತು ಸಮತೋಲಿತ ಆನ್‌ಲೈನ್ ಅನುಭವವನ್ನು ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಇದರ ಜತೆಗೆ ಮೆಟಾ, ಆನ್‌ಲೈನ್ ಸುರಕ್ಷತೆ ಮತ್ತು ಡಿಜಿಟಲ್ ಪೌರತ್ವ ಕುರಿತು ಮಾಹಿತಿ, ಜ್ಞಾನ ಮತ್ತು ಶಿಕ್ಷಣದ ಬಗ್ಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸಬಲೀಕರಣಗೊಳಿಸಲು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ (ಐಟಿಬಿಟಿ) ಇಲಾಖೆಯೊಂದಿಗೆ ಎರಡು ವರ್ಷಗಳ ಪಾಲುದಾರಿಕೆಯನ್ನು ಪ್ರಕಟಿಸಿದೆ.

ಕಳೆದ ಮೂರು ವರ್ಷಗಳಲ್ಲಿ, ಆನ್‌ಲೈನ್ ಸುರಕ್ಷತೆಯನ್ನು ಉತ್ತೇಜಿಸಲು ಮೆಟಾ 50ಕ್ಕೂ ಹೆಚ್ಚು ಸುರಕ್ಷತಾ ಪರಿಕರಗಳು ಮತ್ತು ಫೀಚರ್‌ಗಳನ್ನು ಬಿಡುಗಡೆ ಮಾಡಿದೆ. ಹದಿಹರೆಯದವರ ಸುರಕ್ಷತೆಗಾಗಿ ‘ನೈಟ್ ನಡ್ಜಸ್’ ಎಂಬ ಫೀಚರನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಇದು ತಡರಾತ್ರಿಯಲ್ಲಿ ಇನ್ ಸ್ಟಾಗ್ರಾಮ್ ಆಪ್ ಬಳಸುವಾಗ ಆ ಆಪ್ ಅನ್ನು ಷಟ್‌ಡೌನ್ ಮಾಡಲು ಬಳಕೆದಾರರಿಗೆ ಸೂಚಿಸುತ್ತದೆ. ಜತೆಗೆ ‘ಕ್ವೈಟ್ ಮೋಡ್’ ಫೀಚರ್ ಕೂಡ ಇದ್ದು, ಇದು ಹದಿಹರೆಯದ ಬಳಕೆದಾರರಿಗೆ ತಾವು ಆಪ್‌ನಲ್ಲಿ ಕಳೆಯುವ ಸಮಯದ ಮೇಲೆ ಮತ್ತು ಅವರು ಏನು ನೋಡುತ್ತಾರೆ ಎಂಬುದರ ಮೇಲೆ ಹೆಚ್ಚಿನ ನಿಯಂತ್ರಣವನ್ನು ಹೊಂದಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

ಇದಲ್ಲದೆ, ಇನ್ಸ್ಟಾಗ್ರಾಮ್‌ನ ಪೇರೆಂಟಲ್ ಸೂಪರ್ ವಿಷನ್ ಫೀಚರ್ (ಪೋಷಕರ ಮೇಲ್ವಿಚಾರಣಾ ವೈಶಿಷ್ಟ್ಯ) ಮೂಲಕ ಪೋಷಕರು ತಮ್ಮ ಮಕ್ಕಳು ಫಾಲೋ ಮಾಡುವ ಖಾತೆಗಳು, ಅವರ ಮಕ್ಕಳನ್ನು ಫಾಲೋ ಮಾಡುವ ಖಾತೆಗಳನ್ನು ವೀಕ್ಷಿಸಬಹುದು ಮತ್ತು ಅವರ ಆನ್‌ಲೈನ್ ಬಳಕೆಯಲ್ಲಿ ತಮ್ಮನ್ನೂ ಹೆಚ್ಚು ತೊಡಗಿಸಿಕೊಳ್ಳಬಹುದು. ಮೆಟಾದ ‘ಫ್ಯಾಮಿಲಿ ಸೆಂಟರ್’ ಫೀಚರ್ ಪ್ಲಾಟ್‌ಫಾರ್ಮ್‌ಗಳನ್ನು ಸುರಕ್ಷಿತವಾಗಿ ಬಳಸುವುದು ಹೇಗೆ ಎಂಬ ಮಾಹಿತಿಯನ್ನು ಹುಡುಕಲು ಪೋಷಕರು ಮತ್ತು ಹದಿಹರೆಯದವರಿಗೆ ಸಹ ಮಾಹಿತಿ ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ

Bengaluru News: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನದಿಂದ ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಸಮಾರೋಪ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.

VISTARANEWS.COM


on

udupi Shree Bhandarakeri math annual award programme in bengaluru
Koo

ಬೆಂಗಳೂರು: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ (Bengaluru News) ತಿಳಿಸಿದರು.

ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಸಮಾರೋಪ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ರಾಜ ಪ್ರಭುತ್ವ ಇದ್ದಾಗ ಮಹಾರಾಜರೇ ಪ್ರಜೆಗಳಿಗೆ ಸಂತೋಷವಾಗುವ ರೀತಿ ರಾಜ್ಯಭಾರ ಮಾಡುತ್ತ ಇದ್ದರು. ರಾಮ ಇದಕ್ಕೆ ಆದರ್ಶ ಪುರುಷ. ಆದರೆ ಇಂದು ಪ್ರಜಾಪ್ರಭುತ್ವ ಇದೆ. ಪ್ರಜೆಗಳೇ ಸಮಾಜಕ್ಕೆ ಹಿತವಾಗುವಂತೆ ಬಾಳಬೇಕು. ಇತರರಿಗೆ ನೆಮ್ಮದಿ, ಸಂಭ್ರಮ ನೀಡುವ ಉದಾತ್ತ ಮನೋಭಾವ ರೂಢಿಸಿಕೊಂಡರೆ ನಾಡು ಸುಭಿಕ್ಷವಾಗಿರುತ್ತದೆ ಎಂದರು.

ಇದನ್ನೂ ಓದಿ: Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

ಶ್ರೀ ಭಂಡಾರ ಕೇರಿ ಗುರುಗಳು ವೇದವ್ಯಾಸರ ಜಯಂತಿಯನ್ನು ರಾಷ್ಟ್ರಗುರು ವೇದವ್ಯಾಸ ಜಯಂತಿಯನ್ನಾಗಿ ಆಚರಿಸಬೇಕೆಂದು ಸಂಕಲ್ಪ ಮಾಡಿ, ಆ ನಿಟ್ಟಿನಲ್ಲಿ ಕಳೆದ ಎರಡು ದಶಕಗಳಿಂದ ವಿಶೇಷವಾದ ಕಾರ್ಯಕ್ರಮವನ್ನು ರೂಪಿಸುತ್ತಿದ್ದಾರೆ. ಪಂಡಿತರಿಗೆ, ವಿದ್ವಾಂಸರಿಗೆ ಸಾಕಷ್ಟು ಮನ್ನಣೆ ನೀಡಿ ಗೌರವಾದರಗಳನ್ನು ದಯ ಪಾಲಿಸಿದ್ದಾರೆ. ಶ್ರೀ ಭಂಡಾರಕೇರಿ ಗುರುಗಳ ಆಶಯ ಈಡೇರಿ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಗವಾನ್ ವೇದವ್ಯಾಸರ ಜಯಂತಿಯನ್ನು ಎಲ್ಲರೂ ಸಂಭ್ರಮಿಸುವಂತಾಗಲಿ ಎಂದು ಪೇಜಾವರ ಶ್ರೀಗಳು ಆಶಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ ಮತ್ತು 48 ದಿನಗಳ ಮಂಡಲೋತ್ಸವದಲ್ಲಿ ಶ್ರೀ ಪೇಜಾವರ ಶ್ರೀಗಳು ವಿಶೇಷ ಸಾನಿಧ್ಯ ವಹಿಸಿ ಎಲ್ಲಾ ಕಾರ್ಯವನ್ನು ಸಾಂಗವಾಗಿ ನೆರವೇರಿಸಿ ಕೊಟ್ಟಿದ್ದು ವಿಶ್ವದ ಹೆಮ್ಮೆ ಎಂದು ತಿಳಿಸಿದರು.

70 ಜನರಿಗೆ ಸನ್ಮಾನ ಸಂಕಲ್ಪ

ಶ್ರೀ ವೇದವ್ಯಾಸ ಜಯಂತಿ ಸಂದರ್ಭದಲ್ಲಿ ಮೂವರು ಪಂಡಿತರಿಗೆ ಶ್ರೀಮಠ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ. ಇದರೊಂದಿಗೆ ನಮ್ಮ ಎಪ್ಪತ್ತನೇ ವರ್ಧಂತಿ ಸಮಾರಂಭವೂ ನಡೆಯುತ್ತಿದ್ದು, ಈ ವರ್ಷ ಪೂರ್ಣ 70 ಜನ ಪಂಡಿತರಿಗೆ ಸನ್ಮಾನ ಮತ್ತು ಗೌರವವನ್ನು ಮಾಡಿ ಅವರನ್ನು ಪ್ರೋತ್ಸಾಹಿಸುವ ಸಂಕಲ್ಪ ಮಾಡಲಾಗಿದೆ ಎಂದು ಭಂಡಾರ ಕೇರಿ ಶ್ರೀಗಳು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ವೇದವ್ಯಾಸ ಜಯಂತಿ ಅಂಗವಾಗಿ ಬೆಳಗ್ಗೆ 8ಕ್ಕೆ ಹೋಮ, 9ಕ್ಕೆ ವೇದ ಶಾಸ್ತ್ರ ವಿನೋದ, ಮಧ್ಯಾಹ್ನ 2ಕ್ಕೆ ವಸಂತ ಉತ್ಸವ, ಸಂಜೆ 5ಕ್ಕೆ ಶ್ರೀ ವಿದ್ಯಾಮಾನ್ಯರ ಭಾವಚಿತ್ರ ಶೋಭಾಯಾತ್ರೆ ನೆರವೇರಿತು.

ಪ್ರಶಸ್ತಿ ಪ್ರದಾನ

ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲದ ದಾಮೋದರಾಚಾರ್ಯರ ಪರವಾಗಿ ಅವರ ಶಿಷ್ಯ ಸಂತಾನ ಕೃಷ್ಣ ಅವರಿಗೆ (1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ), ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ ಅವರಿಗೆ (ರಾಜಹಂಸ ಪ್ರಶಸ್ತಿ), ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ಪಂಡಿತ ಸತ್ಯಬೋಧಾಚಾರ್ಯ ಹೊನ್ನಾಳಿ ಅವರಿಗೆ (ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿ) ತಲಾ 50 ಸಾವಿರ ರೂ. ನಗದು, ಸನ್ಮಾನ ಪತ್ರ ನೀಡಿ, ಗೌರವಿಸಲಾಯಿತು.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಶ್ರೀ ಭಂಡಾರಕೇರಿ ಶ್ರೀಗಳು ‘ಶ್ರೀ ರಾಮ ಲಲನ ಲಾಲನ ಲಲಾಮ ತೀರ್ಥ’ ಎಂದು ಬಿರುದು ನೀಡಿ, ಸನ್ಮಾನಿಸಿದರು. ನೂರಾರು ಜನ ವಿದ್ವಾಂಸರು, ಪಂಡಿತರು ಇದಕ್ಕೆ ಸಾಕ್ಷಿಯಾದರು.

Continue Reading

ಕರ್ನಾಟಕ

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Rameshwaram Cafe Blast: ಕರ್ನಾಟಕ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. ಇದರಲ್ಲಿ ಹುಬ್ಬಳ್ಳಿಯ ಗೌಸಿಯಾ ಟೌನ್‌ನ ನಿವಾಸಿ ಕೂಡ ಸೇರಿದ್ದಾನೆ.

VISTARANEWS.COM


on

Rameshwaram Cafe Blast
Koo

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ (Rameshwaram Cafe Blast) ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆ ಚುರುಕುಗೊಳಿಸಿದ್ದು, ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. ಈ ಪೈಕಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶೋಯೆಬ್‌ ಅಬ್ದುಲ್ ಮಿರ್ಜಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಹುಬ್ಬಳ್ಳಿಯ ಗೌಸಿಯಾ ಟೌನ್‌ನಲ್ಲಿ ವಾಸವಿದ್ದ ಶೋಯೆಬ್‌ ಅಬ್ದುಲ್ ಮಿರ್ಜಾನನ್ನು ವಶಕ್ಕೆ ಪಡೆದಿದ್ದು, ಈತ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ. ಇನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ | Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

ಏಪ್ರಿಲ್ 12ರಂದು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದ ಎನ್‌ಐಎ

ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್‌ ತಾಹ ಹಾಗೂ ಬಾಂಬ್‌ ಇರಿಸಿದ್ದ ಮುಸಾವಿರ್‌ ಹುಸೇನ್‌ ಶಾಜಿಬ್‌ರನ್ನು ಎನ್‌ಐಎ ಈಗಾಗಲೇ ಬಂಧಿಸಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಿ ಕೋಲ್ಕತ್ತಾದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದರು. ಬಂಧನದಿಂದ ಬಚಾವ್‌ ಆಗಲು ಇಬ್ಬರೂ ಕೂಡ ಸಾಕಷ್ಟು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದರು ಎನ್ನುವ ವಿವರ ಕೂಡ ಪತ್ತೆಯಾಗಿದೆ. ಬೇರೆ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಶಂಕಿತರು ಅಡಗಿದ್ದರು. ಎನ್ಐಎ ತನಿಖೆ ವೇಳೆ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಬ್ದುಲ್‌ ಮತೀನ್‌ ತಾಹ, ಯಶ್‌ ಶಹನವಾಜ್‌ ಪಟೇಲ್‌ ಹೆಸರಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಂಡಿದ್ದರೆ, ಮುಸಾವಿರ್‌ ಹುಸೇನ್‌ ಶಾಜಿಬ್‌, ಅನ್ಮೋಲ್‌ ಕುಲಕರ್ಣಿ ಎನ್ನುವ ಹಿಂದು ಹೆಸರಲ್ಲಿ ಆಧಾರ್‌ ಕಾರ್ಡ್‌ ರಚಿಸಿಕೊಂಡಿದ್ದ.

ಇಬ್ಬರೂ ಕೂಡ ಕೋಲ್ಕತ್ತಾದ ಪ್ಯಾರಡೈಸ್ ಹೋಟೆಲ್‌ಗೆ ನಕಲಿ ದಾಖಲೆ ನೀಡಿ ವಾಸ್ತವ್ಯ ಮಾಡಿದ್ದರು. ದಾಳಿ ವೇಳೆ ನಕಲಿ ದಾಖಲೆಗಳನ್ನು ಎನ್‌ಐಎ ವಶಕ್ಕೆ ಪಡೆದಾಗ ಈ ಮಾಹಿತಿ ಪತ್ತೆಯಾಗಿದೆ. ನಕಲಿ ದಾಖಲೆಗಳನ್ನು ಎನ್‌ಐಎ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಉಗ್ರರು ತಲೆಮರೆಸಿಕೊಂಡಿದ್ದ ಸಂಪೂರ್ಣ ಮಾಹಿತಿ ಸಂಗ್ರಹವನ್ನೂ ಮಾಡಿದ್ದಾರೆ. 12 ದಿನ ಕೋಲ್ಕತ್ತದಲ್ಲಿದ್ದ ಇಬ್ಬರೂ ಉಗ್ರರು, ಮೂರು ನಾಲ್ಕು ದಿನಕ್ಕೊಮ್ಮೆ ಸ್ಥಳವನ್ನು ಬದಲಾವಣೆ ಮಾಡುತ್ತಿದ್ದರು.

ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ನಂತರ ಮತ್ತೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

ಮಾರ್ಚ್ 1ರಂದು ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಸಹಿತ 9 ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಸುಮಾರು 40 ದಿನಗಳ ಬಳಿಕ ಕೋಲ್ಕೊತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

Continue Reading

ರಾಜಕೀಯ

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Phone tapping: ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.‌ ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು. ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ? ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದ್ದಾರೆ.

VISTARANEWS.COM


on

Phone tapping case and R Ashok demands for CBI investigation
Koo

ಬೆಂಗಳೂರು: ಫೋನ್‌ ಕದ್ದಾಲಿಕೆಯನ್ನು (Phone tapping) ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ. ಅವರು ತಪ್ಪು ಮಾಡಿಲ್ಲ ಎಂದಾದರೆ ಕೂಡಲೇ ಸಿಬಿಐಗೆ ತನಿಖೆ ಹೊಣೆಯನ್ನು ಒಪ್ಪಿಸಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಸವಾಲು ಹಾಕಿದರು.

ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಬಿಜೆಪಿ ಪ್ರಮುಖರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌. ಅಶೋಕ್, ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.‌ ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು. ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ? ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದರು.

ಸರ್ಕಾರ ಮಾಡಿಲ್ಲವಾದರೆ ತನಿಖೆಗೆ ಕೊಡಲಿ

ಫೋನ್‌ ಟ್ಯಾಪ್‌ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್‌ ಅಧಿಕಾರಿಗಳು ಮಾಡಿ ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಆರ್‌. ಅಶೋಕ್ ಒತ್ತಾಯಿಸಿದರು.

ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಚರ್ಚಿಸಲಾಗಿದೆ. ಈ ಕ್ಷೇತ್ರಗಳ ಮತದಾರರನ್ನು ಗುರುತಿಸಿ ಅವರ ಮನವೊಲಿಸುವ ಕೆಲಸ ಮಾಡಬೇಕೆಂದು ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಿ, ಪ್ರತಿ ಬೂತ್‌ಗಳಲ್ಲಿ ಕೆಲಸ ಮಾಡಲು ಸೂಚಿಸಲಾಗಿದೆ. ಟಿಕೆಟ್‌ ಕುರಿತು ಕೇಂದ್ರದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ (HD Devegowda) ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಕೂಡಲೇ ರಾಜೀನಾಮೆ ಕೊಡಬೇಕು. ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ ಎಂದು ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು, ಜೈಲಿನಲ್ಲಿ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಜೀವ ಭಯ ಇದೆ ಎಂದು ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಅದಕ್ಕೆ ಏನು ಕಾರಣ ಎಂದೂ ಹೇಳಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಜೈಲಿನಲ್ಲಿ ವಕೀಲ ದೇವೇರಾಜೇಗೌಡರಿಗೆ ಜೀವ ಭಯ ಇದೆ ಎಂಬ ಮಾಜಿ ಶಾಸಕ ಸುರೇಶ್ ಗೌಡ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ದೇವರಾಜೇಗೌಡ ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇರಬಹುದು. ಈ ಸರ್ಕಾರದಲ್ಲಿ ಇರುವ ಬಹಳ ಜನರು ಯಾವ ಹಿನ್ನೆಲೆಯಿಂದ ಬಂದಿದ್ದಾರೆ ಎನ್ನುವ ಹಿನ್ನೆಲೆಯನ್ನು ನೋಡಿದರೆ ನಿಜ ಇರಬಹುದು. ಹೀಗಾಗಿ ನಮ್ಮ ಪಕ್ಷದ ಮಾಜಿ ಶಾಸಕ ಸುರೇಶ್ ಗೌಡ ಅವರು ಹೇಳಿರಬಹುದು ಎಂದು ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡರು.

ಡಿಕೆಶಿ ವಜಾಕ್ಕೆ ಆಗ್ರಹ

ಆಡಿಯೊ ಸಂಭಾಷಣೆಯಲ್ಲಿ ಡಿ.ಕೆ. ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಇದನ್ನೂ ಓದಿ: CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೊಗಳನ್ನು ತಂದು ಕೊಟ್ಟಿದ್ದೇ ಡಿಕೆ ಶಿವಕುಮಾರ್‌ಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ದೂರಿದರು.

ದೊಡ್ಡ ಬೆಲೆ ತೆರಬೇಕಾದೀತು ಎಚ್ಚರ

ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಒಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದರು.

ದೇವೇಗೌಡರ ಕುಟುಂಬ ನಿರ್ನಾಮಕ್ಕೆ ಸಂಚು

ದೇವರಾಜೇಗೌಡ, ಶಿವರಾಮೇಗೌಡ ನಡುವಿನ ಮೊಬೈಲ್ ಸಂಭಾಷಣೆ ಹೊರಬಂದಾಗಿನಿಂದ ಡಿಕೆಶಿ ಮಾತನಾಡುತ್ತಿಲ್ಲ. ಅದಕ್ಕೆ ನಾನು ಕೇಳಿದ್ದು, ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು. ಇದಕ್ಕೆ ನಾವು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ. ನಾನು ಮೊದಲಿನಿಂದಲೂ ಹೇಳಿದ್ದೇನೆ, ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗಬೇಕು ಎಂದಿದ್ದೇನೆ. ತಪ್ಪಿತಸ್ಥರನ್ನು ರಕ್ಷಣೆ ಮಾಡಲು ನಾವು ಹೋಗುವುದಿಲ್ಲ. ಆದರೆ, ಈ ವಿಷಯದಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ದೇವೆಗೌಡರ ಕುಟುಂಬವನ್ನು ರಾಜಕೀಯವಾಗಿ ನಿರ್ನಾಮ ಮಾಡಬೇಕು ಎಂದು ಸಂಚು ನಡೆಯುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಆಡಿಯೊದಲ್ಲೇನಿದೆ?

ಪೆನ್ ಡ್ರೈವ್ ಸೃಷ್ಟಿ ಮಾಡಿ ಅದನ್ನೆಲ್ಲ ಹೊರಗೆ ತಂದು ಮಹಿಳೆಯರಿಗೆ ಕಂಟಕರಾದವರೇ ಇವತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಎನ್‌ಡಿಎ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷವನ್ನು ಯಾವಾಗ ಹೊರಕ್ಕೆ ಹಾಕುತ್ತೀರಿ ಎಂದು ಕೇಳುತ್ತಾರೆ. ಆಡಿಯೊ ಸಂಭಾಷಣೆಯಲ್ಲಿ ಈ ಅಂಶವೂ ಇದೆ. ಅಲ್ಲಿಗೆ ಇವರ ದುರುದ್ದೇಶ ಏನು ಎನ್ನುವುದು ಅರ್ಥ ಆಯಿತಲ್ಲವೇ ಎಂದು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ಡಿಕೆಶಿ ವಿರುದ್ಧ ನೇರ ಆರೋಪ

ಈ ಪ್ರಕರಣಕ್ಕೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಚಾರ ಕೊಡಿಸಿ ಅದನ್ನು ದೇಶ ವಿದೇಶದಲ್ಲಿಯೂ ಹರಡುವಂತೆ ಮಾಡಿದವರೇ ಕಾಂಗ್ರೆಸ್‌ನವರು. ಬಿಜೆಪಿ ಜೆಡಿಎಸ್ ಮೈತ್ರಿ ಆಗದೇ ಇದ್ದಿದ್ದರೆ ಅವರು ರಾಜ್ಯದಲ್ಲಿ 20 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಭ್ರಮೆಯಲ್ಲಿ ಇದ್ದರು. ಅವರ ಕನಸು ನುಚ್ಚು ನೂರಾಗಿದೆ. ಚುನಾವಣೆ ಫಲಿತಾಂಶ ಹೇಗೆ ಬರುತ್ತದೆ ಎನ್ನುವ ಹತಾಶೆಯಲ್ಲಿ ಅವರು ಇದ್ದಾರೆ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡ ದಿನವೇ ಅವರಿಗೆ ಅರ್ಥವಾಯಿತು, ನಮ್ಮ ಓಟಕ್ಕೆ ‌ಕಡಿವಾಣ ಬಿತ್ತು ಎಂದುಕೊಂಡರು. ಈ ಆತಂಕಕ್ಕೆ ಒಳಗಾಗಿ ಈ ಪ್ರಕರಣವನ್ನು ಸೃಷ್ಟಿಸಿ ಇಡೀ ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದ್ದೆ ಇದೇ ಡಿ.ಕೆ. ಶಿವಕುಮಾರ್ ಎಂದು ಅವರು ನೇರ ಆರೋಪ ಮಾಡಿದರು.

ಸೀಡಿ ಶಿವು ಇದನ್ನೆಲ್ಲ ಮಾಡಿದ್ದಾರೆ

ಡಿ.ಕೆ.ಶಿವಕುಮಾರ್ ಮತ್ತು ಇವರ ಪಟಾಲಂಗಳು ಇದನ್ನು ಮಾಡಿದ್ದಾರೆ. ‘ಸೀಡಿ ಶಿವು’ ಅವರೇ ಇದನ್ನೆಲ್ಲ ಮಾಡಿದ್ದಾರೆ. ಆದರೆ, ಇದುವರೆಗೂ ಯಾರ ಮೇಲೆಯೂ ಕ್ರಮ ಇಲ್ಲ. ಈ ನೆಲದ ಕಾನೂನಿನ ಪ್ರಕಾರ ಯಾರೇ ಆದರೂ ನ್ಯಾಯಕ್ಕೆ ತಲೆ ಬಾಗಲೇಬೇಕು. ನಿತ್ಯವೂ ಹಣ, ಅಧಿಕಾರದ ದುರುಪಯೋಗ ಮಾಡಿಕೊಂಡು ಮೆರೆಯುವ ವ್ಯಕ್ತಿಗಳು ಬಹಳ ದಿನ ಮೆರೆಯುವುದಕ್ಕೆ ಸಾಧ್ಯ ಇಲ್ಲ. ಪ್ರತಿಯೊಂದಕ್ಕೂ ಅಂತಿಮ ದಿನಗಳು ಬಂದೇ ಬರುತ್ತವೆ ಎಂದು ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ಪೆನ್ ಡ್ರೈವ್ ಹಂಚಿಕೆ ಪ್ರಕರಣದ ತನಿಖೆ ಸಿಬಿಐ ಕೊಡಲಿ ಎನ್ನುವ ಉದ್ದೇಶದಿಂದ ಯಾರೋ ಒಬ್ಬರು ಹೈಕೋರ್ಟ್ ಮೊರೆ ಹೋಗುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಈ ಬಗ್ಗೆ ಸಿಬಿಐ ತನಿಖೆ ನಡೆಯಬೇಕು. ನಾವು ಕೂಡ ಏನು ಮಾಡಬೇಕು ಎಂಬ ಬಗ್ಗೆ ಕಾನೂ‌ನು ತಜ್ಞರ ಜತೆ ಚರ್ಚೆ ಮಾಡುತ್ತೇವೆ. ಈ ವಿಷಯದಲ್ಲಿ ಕಾನೂನು ಚೌಕಟ್ಟಿನಲ್ಲಿ, ದೇಶದ ಕಾನೂನು ವ್ಯವಸ್ಥೆಯಲ್ಲಿ ಸತ್ಯಾಂಶ ಹೊರಗೆ ತರಲು ಏನೇನು ಕ್ರಮ ತೆಗೆದುಕೊಳ್ಳಬೇಕೋ ಕೈಗೊಳ್ಳುತ್ತೇವೆ ಎಂದು ಕುಮಾರಸ್ವಾಮಿ ‌ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ವಾಪಸ್ ಬರುವಂತೆ ಮತ್ತೆ ಪ್ರಜಲ್‌ಗೆ ಹೇಳಿದ ಎಚ್‌ಡಿಕೆ

ಪ್ರಜ್ವಲ್ ಗೆ ಈಗಾಗಲೇ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ. ಎಲ್ಲೇ ಇದ್ದರೂ ಬಂದು SIT ಮುಂದೆ ಹಾಜರಾಗು ಎಂದು ಸಂದೇಶ ನೀಡಿದ್ದೇನೆ ಎಂದ ಅವರು; ನನಗೆ ಪ್ರಜ್ವಲ್ ಸಂಪರ್ಕದಲ್ಲಿ ಇಲ್ಲ. ಆ ಕಾರಣಕ್ಕೆ ಸಾರ್ವಜನಿಕವಾಗಿ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದೇನೆ.ನಾನೂ ಕೂಡ ವಾಪಸ್ ಬರುತ್ತಾನೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದೇನೆ. ದೇವೇಗೌಡರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಗೌರವ ಎನ್ನುವುದು ಇದ್ದರೆ ವಾಪಸ್ ಬಾ.. ಎಂದು ಹೇಳಿದ್ದೇನೆ. ಈ ಕೂಡಲೇ ವಾಪಸ್ ಬಾ.. ಎಂದು ಮತ್ತೆ ನಿಮ್ಮ (ಮಾಧ್ಯಮಗಳು) ಮೂಲಕ ಮನವಿ ಮಾಡುತ್ತೇನೆ ಎಂದರು.

ಸಾಕ್ಷ್ಯ ಬೇಕೆಂದ ಸಿಎಂ ವಿರುದ್ಧ ಕಿಡಿ

ಪೆನ್ ಡ್ರೈವ್ ಕೇಸ್‌ನಲ್ಲಿ ಸಾಕ್ಷ್ಯ ಕೇಳಿದ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಮಾಧ್ಯಮಗಳಲ್ಲಿ ಬಿಡುಗಡೆ ಆಗಿರುವ ಶಿವರಾಮೇಗೌಡ, ದೇವರಾಜೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆಗಿಂತ ಬೇರೆ ಸಾಕ್ಷ್ಯ ಬೇಕಾ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಡಿ.ಕೆ.ಶಿವಕುಮಾರ್ ಅವರೇ ಅರ್ಧ ನಿಮಿಷ ಮಾತಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಷ್ಟು ಮಾತನಾಡಿರುವುದೇ ಸಾಲದೇ? ಆದರೆ, ಸಿಎಂ ಅವರು ಸಾಕ್ಷ್ಯ ಕೊಡಿ, ಸಾಕ್ಷ್ಯ ಕೊಡಿ ಎಂದು ಕೇಳುತ್ತಿದ್ದಾರೆ. SIT ತಂಡ 7-8 ಜನರನ್ನು ಬಂಧನ ಮಾಡಿ ಕರೆದುಕೊಂಡು ಬಂದಿದ್ದಾರೆ. ಯಾವ ಸಾಕ್ಷ್ಯಗಳ ಆಧಾರದಲ್ಲಿ ಅವರನ್ನು ಕರೆದುಕೊಂಡು ಬಂದಿದ್ದಾರೆ. ಅವರಿಗೂ ಪ್ರಕರಣಕ್ಕೂ ಏನು ಸಂಬಂಧ? ಸ್ಪಷ್ಟವಾಗಿ ಕಣ್ಣಿಗೆ ಕಟ್ಟಿದ ಹಾಗೇ ಇದೆ, ಇದೆಲ್ಲವನ್ನೂ ಡಿ.ಕೆ.ಶಿವಕುಮಾರ್ ಅವರೇ ಮಾಡಿರುವುದು ಎಂದು ಎಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಅವರೇ ಮೊಬೈಲ್ ಸಂಭಾಷಣೆಯಲ್ಲಿ ಇನ್ನು ಏನೇನು ಮಾಹಿತಿ, ಸಾಕ್ಷ್ಯ ಇದೆ ತೆಗೆದುಕೊಂಡು ಬಾ.. ಎಂದು ದೇವರಾಜೇ ಗೌಡನಿಗೆ ಹೇಳಿದ್ದಾರೆ. ಇದಕ್ಕಿಂತ ಇನ್ನೂ ಏನು ಸಾಕ್ಷ್ಯ ಬೇಕು? ಅವರ ಜತೆ ಮಾತನಾಡುವಾಗ ಡಿಕೆಶಿ, ಪೊಲೀಸ್ ದೂರನ್ನು ಕಷ್ಟ ಪಟ್ಟು ಕೊಡಿಸಿದ್ದೇವೆ ಎನ್ನುತ್ತಾರೆ. ಸಿಎಂಗೆ ಇದಕ್ಕಿಂತ‌ ಸಾಕ್ಷಿ ಬೇಕಾ? ಎಂದು ಸಿದ್ದರಾಮಯ್ಯ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ‌ಕಿಡಿಕಾರಿದರು.

ಸಿದ್ದರಾಮಯ್ಯ ಅವರು 6 ಪ್ರಶ್ನೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ. ಆದರೆ, ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ನನ್ನು ಮುಖ್ಯಮಂತ್ರಿಗಳು ಅಪರಾಧಿ ಮಾಡಿ ಬಿಟ್ಟಿದ್ದಾರೆ. ಇನ್ನು ಪ್ರಜ್ವಲ್ ಆರೋಪಿ ಸ್ಥಾನದಲ್ಲಿ ‌ಇದ್ದಾನೆ. ಅಪರಾಧಿ ಅಂತ‌ ಇನ್ನು ಎಲ್ಲಿ ಸಾಬೀತಾಗಿದೆ? ತನಿಖಾ ತಂಡದವರೇ ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಮಾಡಿದ್ದಾರೆ. ವಿಡಿಯೊಗಳಲ್ಲಿ ಪುರುಷನ ಮುಖವೇ ಕಾಣಲ್ಲ ಎಂದು ಹೇಳಲಾಗಿದೆ. ಇದು ಸಿಎಂಗೆ ಗೊತ್ತಿಲ್ಲವೇ? ನೈತಿಕತೆ ಉಳಿಸಬೇಕು ಎಂದೇ ಆತನ ವಿರುದ್ಧ ಕೇಳಿ ಬಂದ ತಕ್ಷಣ ಪಕ್ಷದಿಂದ ಅಮಾನತು ಮಾಡಿದ್ದೇವೆ. ನಾವು ಸಿದ್ದರಾಮಯ್ಯ ತರಹ ಭಂಡತನ ಮಾಡಿಲ್ಲ. ಆ ಭಂಡತನದಲ್ಲಿ ನಿಮ್ಮ ಮಗನದ್ದು ನಡೆಯಿತಲ್ಲ.. ಅಪ್ಪ..ಅಪ್ಪ.. ನಾನು ಕೊಟ್ಟಿದ್ದೇ 5 ಹೆಸರು, 6 ಹೆಸರು ಎಲ್ಲಿಂದ ಬಂತು ಹೇಳಿ ಎಂದು ಕಥೆ ಕಟ್ಟಿದಿರಲ್ಲ? ನಿಮ್ಮ ಮಗನ ಹೆಸರು ಬಂದ ಕೂಡಲೇ ಅದಕ್ಕೆ ಸಿಎಸ್‌ಆರ್‌ ಫಂಡ್ ಎಂದು ಬಣ್ಣ ಹಚ್ಚಿದ್ದು ಗೊತ್ತಿಲ್ಲವೇ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂಗೆ ತಿರುಗೇಟು ನೀಡಿದರು.

ಸಾಕ್ಷ್ಯ ನಾಶಕ್ಕೆ ನಿಮಗಿಂತ ಒಳ್ಳೆ ಉದಾಹರಣೆ ಬೇಕಾ?

ಸಾಕ್ಷ್ಯ ನಾಶ ಯಾವ ರೀತಿ ಮಾಡಬಹುದು ಎನ್ನುವುದಕ್ಕೆ ನಿಮಗಿಂತ ಒಳ್ಳೆಯ ಉದಾಹರಣೆ ಬೇಕಾ? ಅಧಿಕಾರ ದುರ್ಬಳಕೆ ಮಾಡಿಕೊಂಡು ಸಾಕ್ಷ್ಯಗಳನ್ನು ಯಾವ ರೀತಿ ತಿದ್ದಬಹುದು ಎಂದು ಸಾಬೀತು ಮಾಡಿದ್ದೀರಿ. ಈಗಲೂ ನೀವು ಮಾಡುತ್ತಿರುವುದು ಅದೇ ಕೆಲಸ. ಅಷ್ಟು ಸ್ಪಷ್ಟವಾಗಿ ಒಬ್ಬ ಡಿಸಿಎಂ ಮಾತನಾಡಿರುವುದು ಕಣ್ಣ ಮುಂದೆಯೇ ಇದೆ, ಆದರೂ ಸಾಕ್ಷ್ಯ ಕೇಳುತ್ತಿದ್ದೀರಿ ಎಂದು ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಇದನ್ನೂ ಓದಿ: ‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

ಸಿಎಂ ಉತ್ತರ ಕೊಡಬೇಕು

ಕಾರ್ತಿಕ್ ಗೌಡ, ನವೀನ್ ಗೌಡ ಸೇರಿ ಪೆನ್ ಡ್ರೈವ್ ಹಂಚಿದ ಕಿಡಿಗೇಡಿಗಳನ್ನು ಇವತ್ತಿನವರೆಗೂ ಬಂಧಿಸಿಲ್ಲ. ಎಸ್‌ಐಟಿಗೆ ಹೇಳಿಕೆ ನೀಡಿದ್ದಾನೆ ಎನ್ನುತ್ತೀರಿ, ಹಾಗಾದರೆ ಅವನು ಯಾರ ವಶದಲ್ಲಿ ಇದ್ದಾನೆ. ಯಾವತ್ತೂ ಅವನು ತನಿಖಾ ತಂಡಕ್ಕೆ ಹೇಳಿಕೆ ಕೊಟ್ಟ? ಅವನನ್ನು ಯಾಕೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿಲ್ಲ? ಇದರಲ್ಲಿ‌ ಏನೋ ಹುನ್ನಾರ ಇದೆ. ಮುಖ್ಯಮಂತ್ರಿ ಇದಕ್ಕೆ ಉತ್ತರ ಕೊಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದರು.

ಸಿಎಂ ಅವರು ಇಷ್ಟು ಲಘುವಾಗಿ ಮಾತಾಡೋದು ಬೇಡ. ಅವರು ನಮ್ಮ ‌ಪ್ರಶ್ನೆಗಳಿಗೆ ಉತ್ತರ ಕೊಡದೇ ನುಣಿಚಿಕೊಳ್ಳುತ್ತಿದ್ದಾರೆ. ಈ ಪ್ರಕರಣವನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಯಾರಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿಲ್ಲ. ಇದು SIT ತಂಡ ಅಲ್ಲ. ಇದು SIT ದಂಡ! ಸುಖಾಸುಮ್ಮನೆ ದಂಡಕ್ಕೆ ಇದನ್ನು ರಚನೆ ಮಾಡಲಾಗಿದೆ. SIT ದಂಡವನ್ನು ತಮಗೆ ಆಗದವರ ಮೇಲೆ ಪ್ರಯೋಗ ಮಾಡಲು ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ‌ಆಕ್ರೋಶ ವ್ಯಕ್ತಪಡಿಸಿದರು.

Continue Reading
Advertisement
Robert Vadra
ದೇಶ19 seconds ago

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

IPL 2024
ಕ್ರೀಡೆ20 mins ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ31 mins ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ33 mins ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Artificially ripened fruits
ಕರ್ನಾಟಕ34 mins ago

Artificially Ripened Fruits: ಬಾಳೆ, ಮಾವಿನ ಹಣ್ಣಿನಿಂದ ಕ್ಯಾನ್ಸರ್: ದೂರು ಸಲ್ಲಿಕೆ

Legal action if drought relief money is credited to farmers loans says Dr Sushila
ಯಾದಗಿರಿ35 mins ago

Yadgiri News: ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ: ಡಿಸಿ

Shree Bevinalamma Devi Jaladhi Mahotsav celebration in koratagere taluk
ತುಮಕೂರು37 mins ago

Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

udupi Shree Bhandarakeri math annual award programme in bengaluru
ಕರ್ನಾಟಕ39 mins ago

Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ

5 foreign coins found in anjanadri temple hundi counting
ಕರ್ನಾಟಕ42 mins ago

Koppala News: ಅಂಜನಾದ್ರಿ ದೇಗುಲ ಹುಂಡಿ ಎಣಿಕೆ; 5‌ ವಿದೇಶಿ ನಾಣ್ಯಗಳು ಪತ್ತೆ

IPL 2024
ಪ್ರಮುಖ ಸುದ್ದಿ60 mins ago

IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು10 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು11 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌