Murder case : ಬನಶಂಕರಿಯಲ್ಲಿ ಚಾಕು ಇರಿದು ಯುವಕನ‌ ಕೊಲೆ ಮಾಡಿದ ರೌಡಿಶೀಟರ್‌ - Vistara News

ಬೆಂಗಳೂರು

Murder case : ಬನಶಂಕರಿಯಲ್ಲಿ ಚಾಕು ಇರಿದು ಯುವಕನ‌ ಕೊಲೆ ಮಾಡಿದ ರೌಡಿಶೀಟರ್‌

Murder case : ಪ್ರತ್ಯೇಕ ಕಡೆಗಳಲ್ಲಿ ಕೊಲೆ ಪ್ರಕರಣಗಳು ವರದಿ ಆಗಿವೆ. ಬೆಂಗಳೂರಿನಲ್ಲಿ ರೌಡಿಶೀಟರ್‌ವೊಬ್ಬ ಯುವಕನ ಕೊಲೆ ಮಾಡಿದ್ದರೆ, ಶಿವಮೊಗ್ಗದಲ್ಲಿ ದುಷ್ಕರ್ಮಿಗಳು ವ್ಯಕ್ತಿಯನ್ನು ಛಿದ್ರ, ಛಿದ್ರವಾಗಿ ಕೊಲೆ ಮಾಡಿ ನದಿಗೆ ಎಸೆದಿದ್ದಾರೆ. ಇನ್ನು ದಾವಣಗೆರೆಯಲ್ಲಿ ಒಂದು ಸಾವಿರ ರೂಪಾಯಿ ಕೊಡದ್ದಕ್ಕೆ ಚಾಕು ಇರಿಯಲಾಗಿದೆ.

VISTARANEWS.COM


on

Murder Case
ಕೊಲೆ ಆರೋಪಿ ವಸೀಂ ಕುರಿತು ಮಾಹಿತಿ ನೀಡಿದ ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಜಗಲಾಸ್ಕರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಬನಶಂಕರಿಯಲ್ಲಿ ಯುವಕನೊಬ್ಬನ (Murder case) ಕೊಲೆಯಾಗಿದೆ. ಸೋಮವಾರ ಮಧ್ಯಾಹ್ನ ಕಾವೇರಿ ನಗರದಲ್ಲಿ (Murder Case) ಘಟನೆ ನಡೆದಿದೆ. ವಿಕ್ರಂ (21) ಮೃತ ದುರ್ದೈವಿ. ರೌಡಿಶೀಟರ್ ವಸಿಂ (28) ಎಂಬಾತ ಕೊಲೆ ಮಾಡಿದ ಆರೋಪಿ ಆಗಿದ್ದಾನೆ.

ಆರೋಪಿ ವಸಿಂನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಕೆಲ ವರ್ಷಗಳ ಹಿಂದೆ ವಿಕ್ರಂ ಆರೋಪಿ ವಸೀಂಗೆ ಹಲ್ಲೆ ಮಾಡಿದ್ದ. ಹೀಗಾಗಿ ವಸೀಂ ಮನಸ್ಸಿನಲ್ಲಿ ದ್ವೇಷ ಬೆಳೆಸಿಕೊಂಡಿದ್ದ. ಇವತ್ತು ಕಾವೇರಿ ನಗರದ 8ನೇ ಕ್ರಾಸ್‌ನಲ್ಲಿ ವಿಕ್ರಂ ಸ್ನೇಹಿತನ ಜತೆ‌ ನಿಂತಿದ್ದ. ಈ ವೇಳೆ ಚಾಕುವಿನಿಂದ ನೇರ ಎದೆಗೆ ಇರಿದು ವಸೀಂ ಎಸ್ಕೇಪ್ ಆಗಿದ್ದ.

ಕೂಡಲೇ ಗಾಯಾಳು ವಿಕ್ರಂನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಘಟನೆ ನಡೆದು ಕೆಲವೇ ಗಂಟೆಯಲ್ಲಿ ಆರೋಪಿ ವಸೀಂನನ್ನು ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಶಿವಮೊಗ್ಗದಲ್ಲಿ ಅನೈತಿಕ ಸಂಬಂಧಕ್ಕೆ ವ್ಯಕ್ತಿಯ ಭೀಕರ ಹತ್ಯೆ

ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಛಿದ್ರ, ಛಿದ್ರವಾಗಿ ಕೊಲೆ ಮಾಡಿ ನದಿಗೆ ಎಸೆದಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲ್ಲೂಕು ನಾಗೀಹಳ್ಳಿ ಗ್ರಾಮದಲ್ಲಿ ಹತ್ಯೆ ನಡೆದಿದೆ. ಕೃಷ್ಣಪ್ಪ (33) ಕೊಲೆಯಾದ ದುರ್ದೈವಿ. ಕಳೆದ ಮೂರು ದಿನಗಳ ಹಿಂದೆ ಕೃಷ್ಣಪ್ಪ ಅವರ ಪತ್ನಿ ಕಾಣೆಯಾಗಿದ್ದಾರೆ ಎಂದು ಶಿರಾಳಕೊಪ್ಪ ಠಾಣೆಯಲ್ಲಿ ದೂರು ನೀಡಿದ್ದರು. ಸಂಶಯದ ಮೇರೆಗೆ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ಆದರೆ ಕಿರಣ್ ಬಂಧನದ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಕೃಷ್ಣಪ್ಪನ ಪತ್ನಿ ಜತೆ ಕಿರಣ್‌ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ಕಿರಣನನ್ನು ಕರೆದು ಕೃಷ್ಣಪ್ಪ ಬೈದು ಎಚ್ಚರಿಕೆ ನೀಡಿ ಕಳಿಸಿದ್ದ. ಇದರಿಂದ ಸಿಟ್ಟಾದ ಕಿರಣ್‌ ತನ್ನಿಬ್ಬರು ಸ್ನೇಹಿತರಾದ ಪ್ರತಾಪ್‌ ಹಾಗೂ ಗಣೇಶನ ಸಹಾಯ ಪಡೆದು ಕಂದ್ಲಿ, ಕುಡುಗೋಲು ಮತ್ತು ಪ್ಲಾಸ್ಟಿಕ್‌ ಕೊಪ್ಪೆಗಳನ್ನು ಬಳಸಿ ಕೊಲೆ ಮಾಡಿದ್ದಾರೆ.

ಕೃಷ್ಣಪ್ಪನನ್ನು ಕರೆಸಿಕೊಂಡ ಕಿರಣ್‌ ಮಧ್ಯರಾತ್ರಿವರೆಗೂ ಮದ್ಯ ಕುಡಿಸಿದ್ದ. ಬಳಿಕ ಕೊಲೆ ಮಾಡಿದ ಕಿರಣ್ ಹಾಗೂ ಸ್ನೇಹಿತರು ಕೃಷ್ಣಪ್ಪನ ಅಂಗಾಂಗಗಳನ್ನ ಕತ್ತರಿಸಿ ಎರಡು ಪ್ಲಾಸ್ಟಿಕ್‌ ಚೀಲಗಳಿಗೆ ತುಂಬಿಕೊಂಡಿದ್ದರು. ಬಳಿಕ ಗಣೇಶ ಹಾಗೂ ಕಿರಣ ಒಂದು, ಪ್ರತಾಪ ಇನ್ನೊಂದು ಶವದ ಚೀಲವನ್ನು ಹಿಡಿದು ಕೊರಟೆಗೆರೆ , ಚಿಕ್ಕರೂರು, ಬಾರಂಗಿ ಮೂಲಕ ಗೋಂದಿ ಬ್ರಿಡ್ಜ್‌ ಬಳಿ ಶವ ಎಸೆದು ಬಳಿಕ ಕಾಲ್ಕಿತ್ತಿದ್ದರು.

ನದಿಗೆ ಎರಡು ಚೀಲದಲ್ಲಿದ್ದ ಕೃ‍ಷ್ಣಪ್ಪನ ಅಂಗಾಂಗಗಳನ್ನು ಎಸೆದು ಕಿರಣ್‌ ಏನು ಆಗದಂತೆ ವಾಪಸ್‌ ಆಗಿದ್ದ. ಆದರೆ ಕಿರಣ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೃತ್ಯ ಬಯಲಾಗಿದೆ. ಸದ್ಯ ಎಫ್.ಐ.ಆರ್. ದಾಖಲಿಸಿ ಆರೋಪಿಗಳನ್ನು ಬಂಧಿಸಿದ ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಸಾವಿರ ರೂ. ಗಾಗಿ ಯುವಕನಿಗೆ ಚಾಕು ಇರಿದ ದುರುಳರು

ದಾವಣಗೆರೆಯ ಚನ್ನಗಿರಿ ತಾಲೂಕಿನ ಗಾಣದಗಟ್ಟೆ ಗ್ರಾಮದಲ್ಲಿ ಗುಂಪು ಕಟ್ಟಿಕೊಂಡು ಬಂದ ಯುವಕನೊರ್ವ ವ್ಯಕ್ತಿಯೊಬ್ಬರಿಗೆ ಹೊಡೆದು ಚಾಕು ಇರಿದಿದ್ದಾನೆ. ಅಣ್ಣಪ್ಪ (45) ಚಾಕು ಇರಿತಕ್ಕೆ ಒಳಗಾದವರು. ಒಂದು ಸಾವಿರ ರೂಪಾಯಿ ಕೊಡದೆ ಇರುವುದಕ್ಕೆ ಗಾಣದಗಟ್ಟೆ ಗ್ರಾಮದ ರಾಕೇಶ್ ಎಂಬಾತ ಚಾಕು ಇರಿದಿದ್ದಾನೆ. ಗಲಾಟೆ ಹಾಗೂ ಚಾಕು ಇರಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ.

ಅಣ್ಣಪ್ಪ ಹಾಗೂ ಸುನೀಲ್ ಎನ್ನುವರು ಇಬ್ಬರು ಸ್ನೇಹಿತರು, ರಾಕಿ ಹತ್ತಿರ ಒಂದು ಸಾವಿರ ಸಾಲ ಪಡೆದಿದ್ದರು. ಎರಡು ತಿಂಗಳಾದರೂ ನೀಡಿಲ್ಲ ಎಂದು ಗಾಣದಗಟ್ಟೆಯಲ್ಲಿ ರಾಕಿ ಜಗಳ ತೆಗೆದಿದ್ದ. ಜಗಳ ಮಾಡುತ್ತಿದ್ದಾಗ ಸ್ನೇಹಿತನ ಪರ ಹೋದ ಅಣ್ಣಪ್ಪ, ಇನ್ನೆರಡು ದಿನಗಳಲ್ಲಿ ನಾನೇ ಸಾವಿರ ರೂಪಾಯಿ ನೀಡುತ್ತೇನೆ ಎಂದು ಒಪ್ಪಿಕೊಂಡಿದ್ದ.

ಆದರೂ ಒಪ್ಪದೆ, ಹಣನಾ ಸುನೀಲ್ ಕೊಡಬೇಕಿರುವುದು ನೀನು ಅಲ್ಲ ಎಂದು ಜಗಳ ತೆಗೆದಿದ್ದ. ಎರಡು ಗುಂಪುಗಳ‌ ನಡುವೆ ಜಗಳವಾಗಿ ರಾಕೇಶ್ ಅಣ್ಣಪ್ಪನಿಗೆ ಚಾಕು ಇರಿದಿದ್ದಾನೆ. ಸದ್ಯ ಕುಟುಂಬಸ್ಥರು ಅಣ್ಣಪ್ಪನನ್ನು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಗೆ ದೂರು‌ ನೀಡಿದರೂ ಆರೋಪಿಯನ್ನು ಬಂಧಿಸಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ನೀಡದ್ದಕ್ಕೆ ಚಾಕು ಹಾಕಿದ ಸ್ನೇಹಿತ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಹಿಂದೂ ಮಹಾ ಗಣಪತಿ ಬಳಿ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದವು. ಕಾರ್ಯಕ್ರಮದ ವೇಳೆ ನೀನು ನನಗೆ ಅವಕಾಶ ನೀಡಲಿಲ್ಲ ಎಂದು ಮೂವರು ತಕರಾರು ತೆಗೆದಿದ್ದರು. ಅಷ್ಟೇ ಅಲ್ಲದೇ ಗಲಾಟೆ ಕೂಡಾ ಮಾಡಿಕೊಂಡಿದ್ದಾರೆ.

ಗಲಾಟೆ ವಿಕೋಪಕ್ಕೆ ತಿರುಗಿದ್ದು ಆದಿತ್ಯ (26), ಪ್ರಕಾಶ್ (24) ಇವರಿಬ್ಬರಿಗೆ ಆತನ ಸ್ನೇಹಿತ ತಿರುಮಲ (25) ಎಂಬಾತ ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾನೆ. ಚಾಕು ಇರಿತದಿಂದ ಗಂಭೀರ ಗಾಯಗೊಂಡಿರುವ ಯುವಕರಿಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

Bengaluru Murder : ವೈಯಾಲಿಕಾವಲ್ ಮಹಿಳೆಯ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

VISTARANEWS.COM


on

By

Murder case
Koo

ಬೆಂಗಳೂರು: ಬೆಂಗಳೂರಿನ (Bengaluru Murder) ವೈಯಾಲಿಕಾವಲ್ ಮಹಾಲಕ್ಷ್ಮೀ ಮರ್ಡರ್ ಕೇಸ್‌ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮಹಿಳೆಯನ್ನು ಕೊಲೆ ಮಾಡಿದವನು ತನ್ನೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಪೊಲೀಸರ ಮುಂದೆ ಪ್ರಶ್ನೆಗಳ ಸರಮಾಲೆಯೇ ಇದೆ. ಮಹಾಲಕ್ಷ್ಮಿಯನ್ನು ಕೊಂದ ಕೊಲೆಗಾರನನ್ನು ಟ್ರೇಸ್‌ ಮಾಡಿ ಇನ್ನೇನು ಹಿಡಿಬೇಕು ಎನ್ನುವಾಗಲೇ ಕೊಲೆ ಆರೋಪಿ ಮುಕ್ತಿರಂಜನ್ ಎಂಬಾತ ಒಡಿಶಾದಲ್ಲಿ ನಿನ್ನೆ (ಸೆ.25) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಹಾಲಕ್ಷ್ಮೀ ಮರ್ಡರ್ ಕೇಸ್ ಪೊಲೀಸರ ಮುಂದೆ ಹಲವು ಸವಾಲುಗಳನ್ನಿಟ್ಟಿದೆ‌. ಆರೋಪಿ ಅರೆಸ್ಟ್ ಆದಮೇಲೆ ಪ್ರಕರಣಕ್ಕೆ ಒಂದು ಫುಲ್ ಸ್ಟಾಪ್ ಇಡಬಹುದಿತ್ತು. ಆದರೆ ಪೊಲೀಸರಿಗೆ ಸಿಗುವ ಮುನ್ನವೆ ಆರೋಪಿ ಮುಕ್ತಿ ರಂಜನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದಾಗಿ ತನಿಖಾಧಿಕಾರಿಗಳಿಗೆ ಮುಂದಿರುವ ಸಾಕಷ್ಟು ಪ್ರಶ್ನೆಗಳಿಗೆ ಉತ್ತರ ಸಿಗದಂತಾಗಿದೆ. ಪ್ರಕರಣದ ಆರೋಪಿಯಾಗಿದ್ದ ಒಡಿಶಾ ಮೂಲದ ಮುಕ್ತಿರಂಜನ್ ಪ್ರತಾಪ್ ರಾಯ್ ನಿನ್ನೆ ಬುಧವಾರ ಬೆಳಗ್ಗೆ ಒಡಿಶಾದ ಭದ್ರಕ್ ಜಿಲ್ಲೆಯ ಭೂನಿಪುರದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾಲಕ್ಷ್ಮಿಯ ಭೀಕರ ಹತ್ಯೆಗೆ ಕಾರಣವೇನು? ಆರೋಪಿ ಹತ್ಯೆಗೈದಿದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳು ಸಿಗುವ ಮುನ್ನವೇ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನೂ ಓದಿ: Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

ಮದುವೆ ಆಗುವಂತೆ ಒತ್ತಾಯಿಸಿದ್ದಳು ಮಹಾಲಕ್ಷ್ಮಿ

ಇನ್ನು ತನಿಖೆ ವೇಳೆ ಒಂದಷ್ಟು ಸ್ಫೋಟಕ ವಿಚಾರಗಳು ಹೊರ ಬಿದ್ದಿದ್ದು, ಮದುವೆಯಾಗುವಂತೆ ಮುಕ್ತಿ ರಂಜನ್‌ನ ಮಹಾಲಕ್ಷ್ಮಿ ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಆಗಿ ಕೊಲೆ ನಡೆದಿರಬಹುದು ಎಂಬ ಅನುಮಾನ ಮೂಡಿದೆ. ಮಹಾಲಕ್ಷ್ಮಿ ಹಾಗೂ ಮುಕ್ತಿ ರಂಜನ್‌ ಇಬ್ಬರು ಒಂದೆ ಕಡೆ ಕೆಲಸ ಮಾಡುತ್ತಿದ್ದರು. ಹೀಗಾಗಿ ಇಬ್ಬರ ಮಧ್ಯೆ ಸ್ನೇಹ, ಸಲುಗೆ ಬೆಳದಿತ್ತು.

ಮುಕ್ತಿರಂಜನ್‌ನನ್ನು ತುಂಬಾ ಹಚ್ಡಿಕೊಂಡಿದ್ದ ಮಹಾಲಕ್ಷ್ಮಿ ಆತನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು. ಕೆಲಸ ಮಾಡುತ್ತಿದ್ದ ಸ್ಟೋರ್‌ನಲ್ಲಿ ಬೇರೆ ಹುಡುಗೀಯರ ಜತೆ ಮುಕ್ತಿರಂಜನ್‌ ಮಾತನಾಡಿದರೆ ಮಹಾಲಕ್ಷ್ಮಿ ಸ್ವಲ್ಪವೂ ಸಹಿಸುತ್ತಿರಲಿಲ್ಲ. ಕೂಡಲೇ ಆ ಯುವತಿಯರಿಗೆ ವಾರ್ನ್ ಮಾಡುತ್ತಿದ್ದಳು. ಇನ್ನು ಮುಕ್ತಿರಂಜನ್ ಸಹ ಸ್ವತಃ ಹಠಮಾರಿ ಸ್ವಭಾವದವನಾಗಿದ್ದ ಎಂಬುದು ಇದುವರೆಗಿನ ತನಿಖೆಯಲ್ಲಿ ತಿಳಿದು ಬಂದಿದೆ. ಸೆಪ್ಟೆಂಬರ್ 1ರಂದು ಇಬ್ಬರೂ ಕೆಲಸಕ್ಕೆ ಹಾಜರಾಗಿದ್ದರು. ಎರಡನೇ ತಾರೀಖು ಇಬ್ಬರೂ ರಜೆ ಹಾಕಿ ವೈಯಾಲಿಕಾವಲ್ ಮನೆಗೆ ಹೋಗಿದ್ದರಂತೆ. ಈ ವೇಳೆ ಜಗಳ ಆಗಿ, ಕೊಲೆ ಮಾಡಿ ಮುಕ್ತಿರಂಜನ್‌ ಎಸ್ಕೇಪ್ ಆಗಿರಬಹುದು ಎನ್ನಲಾಗಿದೆ.

ಮನೆಯಲ್ಲಿ ಎಲ್ಲೂ ರಕ್ತ ಹರಿದಿಲ್ಲ; ಮೂವರ ಫಿಂಗರ್‌ ಪ್ರಿಂಟ್‌ ಪತ್ತೆ

ಮಹಾಲಕ್ಷ್ಮಿಯನ್ನು ಹತ್ಯೆ ಮಾಡಿರುವ ಬಗ್ಗೆಯಂತೂ ಪೊಲೀಸರಿಗೆ ಅನುಮಾನಗಳ ಮೇಲೆ ಅನುಮಾನ ಹುಟ್ಟಿಸಿದೆ. ದೇಹ ಕತ್ತರಿಸುವ ರೀತಿ, ಮನೆಯಲ್ಲಿ ರಕ್ತ ಎಲ್ಲಿಯೂ ಸಹ ಸಿಡಿಯದಂತೆ ಮೃತದೇಹ ಕತ್ತರಿಸಲಾಗಿದೆ. ಹತ್ಯೆಗೈದು ಮೃತದೇಹದ ರಕ್ತ ಹರಿದ ನಂತರ ಕತ್ತರಿಸಲಾಗಿತ್ತಾ ಅನ್ನೋ ಪ್ರಶ್ನೆ ಮುಂದಿವೆ. ಅಲ್ಲದೇ ಮನೆಯಲ್ಲಿ ಇಬ್ಬರಿಂದ ಮೂರು ಜನರ ಫಿಂಗರ್ ಪ್ರಿಂಟ್‌ಗಳು ಪತ್ತೆಯಾಗಿದ್ದು, ಆರೋಪಿಯ ಕೃತ್ಯಕ್ಕೆ ಬೇರೆ ಯಾರಾದರೂ ಸಾಥ್ ನೀಡಿದ್ದರಾ? ಹತ್ಯೆಗೈದು ಇಷ್ಟು ದಿನ ಆರೋಪಿ ತಲೆಮರೆಸಿಕೊಂಡಿದ್ದೆಲ್ಲಿ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿತ್ತು. ಆದರೆ ಪೊಲೀಸರಿಗೆ ಸಿಗುವ ಮುನ್ನವೇ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸರ ತಲೆ ಕೆಡಿಸಿದೆ.

ಸದ್ಯ ಒಡಿಶಾದಲ್ಲಿ ಬೀಡುಬಿಟ್ಟಿರುವ ಬೆಂಗಳೂರು ಪೊಲೀಸರು, ಆರೋಪಿಯ ಕುಟುಂಬಸ್ಥರಿಂದ ಮಾಹಿತಿ ಪಡಿತಿದೆ. ಈಗಾಗಲೇ ರಾಜ್ಯ ಪೊಲೀಸರ ಎರಡು ತಂಡಗಳು ಒಡಿಶಾದಲ್ಲಿರುವುದರಿಂದ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಮತ್ತೊಂದು ಕಡೆ ಮಹಿಳೆ ಮೊಬೈಲ್ ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

New Serial: ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಕಾಂಟ್ರಾಕ್ಟ್ ಮದುವೆಯನ್ನೊಳಗೊಂಡ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಶುರುವಾಗ್ತಿದೆ. ಇದೇ ಸೋಮವಾರದಿಂದ ಅಂದರೆ ಸೆ.30ರ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ.

VISTARANEWS.COM


on

By

new serial
Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಅದೆಷ್ಟೋ ಮದುವೆ ಆಧಾರಿತ ಕಥೆಗಳು ಬಂದು ಹೋಗಿವೆ. ಆದರೆ ಇದೀಗ ‘ನಿನ್ನ ಜೊತೆ ನನ್ನ ಕಥೆ’ ಎಂಬ ಹೊಸ ಧಾರಾವಾಹಿಯ ಮೂಲಕ ವಿನೂತನ ಕಥೆಯನ್ನು (New Serial) ವೀಕ್ಷಕರಿಗೆ ಹೇಳಲು ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣ (star suvarna) ಸಜ್ಜಾಗಿದೆ.

ಕರ್ನಾಟಕದ ಸಕ್ಕರೆನಾಡು ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಈ ಕಥೆಯು ಕೇಂದ್ರೀಕೃತವಾಗಿರುತ್ತದೆ. ಸಾಮಾನ್ಯವಾಗಿ ಮನಸು-ಮನಸುಗಳ ಬೆಸುಗೆಯಿಂದ ಮದುವೆಯಾಗುತ್ತದೆ. ಆದರೆ ಇದೊಂತರ ಡಿಫರೆಂಟ್ ಕಥೆ ಅಂತಾನೇ ಹೇಳಬಹುದು. ಕಥಾನಾಯಕಿ ಭೂಮಿ ಚಹಾ (ಟೀ) ಮಾರುವವಳಾಗಿದ್ದು, ಪೊಲೀಸ್ ಕಾನ್ಸ್‌ಟೇಬಲ್‌ ಆಗಬೇಕೆಂಬ ಕನಸನ್ನು ಹೊಂದಿರುತ್ತಾಳೆ. ಇನ್ನೊಂದು ಕಡೆ ಯಾರದ್ದೋ ಸಂಚಿಗೆ ಬಲಿಯಾಗಿ ಭೂಮಿಯ ತಾಯಿ ತಪ್ಪೇ ಮಾಡದಿದ್ರೂ ಜೈಲು ಸೇರಿರುತ್ತಾರೆ.

new serial
new serial

ಇನ್ನು ಈ ಕಥೆಯ ನಾಯಕ ಅಜಿತ್‌, ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ದು ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿರುತ್ತಾನೆ. ಮದುವೆ ಅಂದ್ರೇನೆ ಇಷ್ಟವಿರದ ಆದಿಗೆ ಮನೆಯಲ್ಲಿ ಮದುವೆಯ ತಯಾರಿ ಮಾಡುತ್ತಿರುತ್ತಾರೆ. ಮುಂದೆ, ಅನಿವಾರ್ಯ ಕಾರಣಗಳಿಂದಾಗಿ ಭೂಮಿ ಹಾಗು ಅಜಿತ್‌ ಇಬ್ಬರು ಪರಸ್ಪರ ಷರತ್ತುಗಳಿಗೆ ಒಪ್ಪಿಕೊಂಡು ಒಂದು ವರ್ಷದ ಕಾಂಟ್ರಾಕ್ಟ್‌ನೊಂದಿಗೆ ಮದುವೆಯಾಗ್ತಾರೆ. ಕಾಂಟ್ರಾಕ್ಟ್ ಮದುವೆಯಿಂದ ಒಂದಾದ ಈ ಜೀವಗಳ ಮನಸುಗಳು ಮುಂದೆ ಹೇಗೆ ಒಂದಾಗುತ್ತೆ ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ಈ ಕಥೆಯ ನಾಯಕನ ಪಾತ್ರದಲ್ಲಿ ನಟಿಸುತ್ತಿರುವ ನಟ ನಿರಂಜನ್ ವರ್ಷಗಳ ಬಳಿಕ “ನಿನ್ನ ಜೊತೆ ನನ್ನ ಕಥೆ” ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಗೆ ಮರಳುತ್ತಿದ್ದಾರೆ. ನಾಯಕಿಯಾಗಿ ನಟಿ ನಿರುಷ ಗೌಡ ನಟಿಸುತ್ತಿದ್ದು ಕಥೆಯು ಅದ್ಬುತ ತಾರಾಬಳಗವನ್ನು ಹೊಂದಿದೆ. ಹೊಚ್ಚ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

World Retinal Day 2024: ಕುರುಡುತನವನ್ನು ಶೇ. 90% ತಡೆಗಟ್ಟಬಹುದು ಅಥವಾ ಅದಕ್ಕೆ ಚಿಕಿತ್ಸೆಯನ್ನು ನೀಡಬಹುದು. ಆದರೂ ಜಾಗತಿಕವಾಗಿ 1 ಬಿಲಿಯನ್ ಜನರು ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದಾರೆ.

VISTARANEWS.COM


on

By

World Retinal Day 2024
Koo

ಬೆಂಗಳೂರು: ಪ್ರಪಂಚವು ತಾನು ಬೆಳೆಯುತ್ತಿರುವ ವೇಗದಲ್ಲಿ ತನ್ನ ದೃಷ್ಟಿಯನ್ನು ಕಳೆದುಕೊಳ್ಳುತ್ತಿದೆ. ಅದಕ್ಕಾಗಿ ತುರ್ತು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ರೆಟಿನಾ ದಿನವನ್ನಾಗಿ (World Retinal Day 2024) ಆಚರಿಸಲಾಗುತ್ತಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಕುರುಡುತನವನ್ನು ಶೇ. 90% ತಡೆಗಟ್ಟಬಹುದು ಅಥವಾ ಅದಕ್ಕೆ ಚಿಕಿತ್ಸೆಯನ್ನು ನೀಡಬಹುದು. ಆದರೂ ಜಾಗತಿಕವಾಗಿ 1 ಬಿಲಿಯನ್ ಜನರು ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದಾರೆ. 2020ರಲ್ಲಿ ಮಾತ್ರವೇ ದೃಷ್ಟಿ ದೋಷವು ಜಾಗತಿಕವಾಗಿ 410.9 ಬಿಲಿಯನ್ ಅಷ್ಟು ಆರ್ಥಿಕ ಉತ್ಪಾದಕತೆಯನ್ನು ಕಡಿಮೆಗೊಳಿಸಿತು. DR, DME ಮತ್ತು NAMD ನಂತಹ ರೆಟಿನಾದ ಸಮಸ್ಯೆಗಳು ಶಾಶ್ವತ ಮತ್ತು ಬದಲಾಯಿಸಲಾಗದ ದೃಷ್ಟಿ ನಷ್ಟಕ್ಕೆ ಕಾರಣವಾಗಬಹುದು.

21 ಮಿಲಿಯನ್ ಜನರು DME (Durable medical equipment) ಬಳಸುತ್ತಿದ್ದು, ಇದು ಕೆಲಸ ಮಾಡುವ ವಯಸ್ಸಿನ ವಯಸ್ಕರಲ್ಲಿ ದೃಷ್ಟಿ ನಷ್ಟಕ್ಕೆ ಪ್ರಮುಖ ಕಾರಣವಾಗಿದೆ. 20 ಮಿಲಿಯನ್ ಜನರು NAMD (Nanoscale Molecular Dynamics) ಇದು 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರಲ್ಲಿ ದೃಷ್ಟಿ ನಷ್ಟಕ್ಕೆ ಪ್ರಮುಖ ಕಾರಣವಾಗಿದೆ.
ವಿಶ್ವದ ಅಂಧ ಜನಸಂಖ್ಯೆಯ 1/3 ನೇ ಭಾಗವು ಭಾರತದಲ್ಲಿ ಕಂಡು ಬರುತ್ತಿದೆ. 11 + ಮಿಲಿಯನ್ ಜನರು ರೆಟಿನಾದ ಸಮಸ್ಯೆಗಳಿಂದ ಪ್ರಭಾವಿತರಾಗಿದ್ದಾರೆ ಹಾಗೂ 3.88 ಮಿಲಿಯನ್ ಜನರು DME ಮತ್ತು nAMD ಯಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಕುರುಡುತನಕ್ಕೆ ರೆಟಿನಾದ ಅಸ್ವಸ್ಥತೆಗಳ ಕೊಡುಗೆಯು 4.7% (2010) ರಿಂದ 8% (2019) ಕ್ಕೆ ಹೆಚ್ಚಾಗಿದೆ. 100 ಮಿಲಿಯನ್ ಮಧುಮೇಹಿಗಳು ಮತ್ತು ವಯಸ್ಸಾದ ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ ರೆಟಿನಾದ ಆರೋಗ್ಯಕ್ಕೆ ಆದ್ಯತೆಯನ್ನು ನೀಡಬೇಕಾಗುತ್ತದೆ.

ದೃಷ್ಟಿ ನಷ್ಟದಿಂದಾಗಿ ನಿರಂತರವಾಗಿ ಹೆಚ್ಚುತ್ತಿರುವ ಸಾಮಾಜಿಕ-ಆರ್ಥಿಕ ಹೊರೆಯು ಜಾಗತಿಕವಾಗಿ ಹಾಗೂ ಭಾರತದಲ್ಲಿ ಬೆಳೆಯುತ್ತಿರುವ ಸಾರ್ವಜನಿಕ ಆರೋಗ್ಯ ಕಾಳಜಿಯಾಗಿದೆ. ಜಾಗತಿಕವಾಗಿ ರಕ್ತಹೀನತೆ ಮತ್ತು ಶ್ರವಣ ನಷ್ಟದ ನಂತರ ದೃಷ್ಟಿ ನಷ್ಟವು ಮೂರನೇ ಅತಿದೊಡ್ಡ ದುರ್ಬಲತೆಯಾಗಿದೆ. ಕಣ್ಣಿನ ಪೊರೆ, ಗ್ಲುಕೋಮಾ ಮತ್ತು ವಕ್ರೀಕಾರಕ ದೋಷಗಳಂತಹ ಕೆಲವು ರೀತಿಯ ದೃಷ್ಟಿಹೀನತೆಗಳ ಬಗ್ಗೆ ಸಾಮಾನ್ಯವಾಗಿ ಸಾರ್ವಜನಿಕರಿಗೆ ಅರಿವು ಇದ್ದರೂ ಸಹ, ರೆಟಿನಾದ ಅಸ್ವಸ್ಥತೆಗಳಿಂದ ಉಂಟಾಗುವ ದೃಷ್ಟಿ ಅಸಾಮರ್ಥ್ಯಗಳು ನಿರಂತರವಾಗಿ ಹೆಚ್ಚಾಗುತ್ತಿವೆ.

ಜಾಗತಿಕವಾಗಿ, ರೆಟಿನಾದ ಕಾಯಿಲೆಗಳು ಸುಮಾರು 6% ಕುರುಡುತನಕ್ಕೆ ಕಾರಣವಾಗಿವೆ. ರಕ್ತದಲ್ಲಿ ಇರುವ ಅನಿಯಂತ್ರಿತ ಸಕ್ಕರೆ ಮಟ್ಟಗಳು (DR ಮತ್ತು DME) ಹಾಗೂ ವಯಸ್ಸಿನ (nAMD) ಪರಿಣಾಮವಾಗಿ ಉಂಟಾಗಬಹುದಾದ ಕೆಲವು ರೆಟಿನಾದ ಅಸ್ವಸ್ಥತೆಗಳು ದೃಷ್ಟಿಯ ವಿಷಯದಲ್ಲಿ ಬೆದರಿಕೆಯನ್ನು ಉಂಟುಮಾಡುತ್ತವೆ, ಇದು ಸಕಾಲಿಕ ವಿಧಾನದಲ್ಲಿ ರೋಗನಿರ್ಣಯ ಮಾಡಿ ಹಾಗೂ ಚಿಕಿತ್ಸೆಯನ್ನು ನೀಡದಿದ್ದಲ್ಲಿ ಶಾಶ್ವತ ಮತ್ತು ಬದಲಾಯಿಸಲಾಗದ ದೃಷ್ಟಿ ನಷ್ಟಕ್ಕೆ ಕಾರಣವಾಗುತ್ತದೆ.

ಭಾರತದಲ್ಲಿ ಅಂಧತ್ವ ಮತ್ತು ದೃಷ್ಟಿಹೀನತೆಯ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕಾರ್ಯಕ್ರಮ (NPCBVI) ದಂತಹ ಉಪಕ್ರಮಗಳು ಕಣ್ಣಿನ ಪೊರೆ ಹಾಗೂ ಗ್ಲುಕೋಮಾ ಸಂಬಂಧಿತ ಕುರುಡುತನವನ್ನು (ಕಣ್ಣಿನ ಮುಂಭಾಗದ ಅಥವಾ ಮುಂಭಾಗ) ಕಡಿಮೆ ಮಾಡುವಲ್ಲಿ ಶ್ಲಾಘನೀಯ ಪ್ರಗತಿಯನ್ನು ಸಾಧಿಸಿವೆ. ಪ್ರಸ್ತುತ, ಅಕ್ಷಿಪಟಲದ ಆರೋಗ್ಯದ (ಕಣ್ಣಿನ ಹಿಂಭಾಗ ಅಥವಾ ಹಿಂದೆ) ಮೇಲೆ ಕೇಂದ್ರೀಕರಿಸುವ ತುರ್ತು ಅವಶ್ಯಕತೆಯಿದೆ. ರೆಟಿನಾದ ನರ ಕೋಶಗಳಿಗೆ ಉಂಟಾಗುವ ಹಾನಿಯನ್ನು ಬದಲಾಯಿಸಲು ಬರುವುದಿಲ್ಲ ಹಾಗೂ ಕೇಂದ್ರೀಕೃತ ನಷ್ಟವನ್ನು ಉಂಟು ಮಾಡಬಹುದು. ಇದು ದೃಷ್ಟಿಯನ್ನು ಹೆಚ್ಚು ದುರ್ಬಲಗೊಳಿಸುವ, ಗಾಯದ ಅಪಾಯ ಮತ್ತು ಜೀವನದಲ್ಲಿ ಕಳಪೆ ಗುಣಮಟ್ಟವನ್ನು ಉಂಟುಮಾಡುವ ಸಾಧ್ಯತೆ ಇದೆ.

ಕಳೆದ ದಶಕ ಒಂದರಲ್ಲಿಯೇ ಭಾರತದಲ್ಲಿ, ಕುರುಡುತನಕ್ಕೆ ಕಾರಣವಾಗುವ ರೆಟಿನಾದ ಅಸ್ವಸ್ಥತೆಗಳ ಪಾಲಿನಲ್ಲಿ ಆತಂಕಕಾರಿ ಹೆಚ್ಚಳವು ಕಂಡುಬಂದಿದೆ. ನಮ್ಮ ಜನಸಂಖ್ಯೆಯು ಬೆಳೆದಂತೆ ಹಾಗೂ ಅವರಿಗೆ ವಯಸ್ಸಾದಂತೆ ಈ ಸಂಖ್ಯೆಗಳು ಹೆಚ್ಚಾಗುತ್ತಲೇ ಇರುತ್ತವೆ ಮತ್ತು ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಜನರ ಸಂಖ್ಯೆಯು ಹೆಚ್ಚಾಗುತ್ತಲೇ ಇರುತ್ತದೆ. ರೋಗನಿರ್ಣಯದಲ್ಲಿ ಪರಿಸರ ವ್ಯವಸ್ಥೆ ಒಡ್ಡುವ ಸವಾಲುಗಳು ಮತ್ತು ಅಡೆತಡೆಗಳು ಭಾರತದಲ್ಲಿ ಅಕ್ಷಿಪಟಲದ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿಯ ಹೊರತಾಗಿಯೂ, ಪರಿಸರ ವ್ಯವಸ್ಥೆಯು ಒಡ್ಡುವ ಅಡೆತಡೆಗಳು, ನೀತಿ ಅಂತರಗಳು, ಜಾಗೃತಿ ಸವಾಲುಗಳು ಮತ್ತು ಚಿಕಿತ್ಸೆಯ ಅನುಸರಣೆಯ ಕೊರತೆಗಳು ಅಸ್ತಿತ್ವದಲ್ಲಿವೆ:
● ಸಾಮರ್ಥ್ಯದ ಬಗೆಗಿನ ನಿರ್ಬಂಧಗಳು ಮತ್ತು ತರಬೇತಿ ಪಡೆದ ರೆಟಿನಾ ತಜ್ಞರ ತೀವ್ರ ಕೊರತೆ: ಭಾರತದಲ್ಲಿ, ನೇತ್ರಶಾಸ್ತ್ರಜ್ಞರ ಪೂಲ್ ಕಣ್ಣಿನ ಮುಂಭಾಗದ ಭಾಗಕ್ಕೆ ಹೆಚ್ಚು ವಾಲುತ್ತಿದ್ದು ಸುಮಾರು 80% ರಷ್ಟು ಇದೆ, ಆದರಲ್ಲಿ ಕೇವಲ 5% ರಿಂದ 8% ರಷ್ಟು ಮಾತ್ರವೇ ರೆಟಿನಾದಲ್ಲಿ ಪರಿಣತಿಯನ್ನು ಹೊಂದಿರುವವರಿದ್ದು, ಅದೂ ಸಹ ಶ್ರೇಣಿ 1 ನಗರಗಳಲ್ಲಿ ಮಾತ್ರವೇ ಕೇಂದ್ರೀಕೃತವಾಗಿದೆ.
● ಪ್ರಮಾಣೀಕೃತ ಚಿಕಿತ್ಸಾ ಮಾರ್ಗಸೂಚಿಗಳ ಕೊರತೆ: ಭಾರತದಲ್ಲಿ, ರೋಗಿಗಳ ಫಲಿತಾಂಶಗಳ ಮೇಲೆ ತೀವ್ರ ಪರಿಣಾಮ ಬೀರುವ ಚಿಕಿತ್ಸಾ ಪ್ರೋಟೋಕಾಲ್‌ಗಳಲ್ಲಿ ಪ್ರಾದೇಶಿಕ ವ್ಯತ್ಯಾಸದ ಅಭ್ಯಾಸವಿದೆ. ಸ್ಟ್ಯಾಂಡರ್ಡ್ ಅಭ್ಯಾಸವೆಂದರೆ ‘ಸ್ಟೆಪ್ ಥೆರಪಿ’ ಇದರಲ್ಲಿ ಹೊಸ ಚಿಕಿತ್ಸಾ ಆಯ್ಕೆಗಳನ್ನು ಮರುಕಳಿಸುವ ರೋಗಿಗಳಿಗೆ ಕಾಯ್ದಿರಿಸಲಾಗಿದೆ, ಇದರಲ್ಲಿ ದೃಷ್ಟಿ ಎನ್ನುವುದು ಈಗಾಗಲೇ ಹದಗೆಟ್ಟಿದೆ, ಈ ನವೀನ ಚಿಕಿತ್ಸೆಗಳು ದೃಷ್ಟಿಯನ್ನು ಪುನಃಸ್ಥಾಪಿಸುವಲ್ಲಿ ಕಡಿಮೆ ಅಥವಾ ಯಾವುದೇ ಫಲಿತಾಂಶವನ್ನು ಪ್ರದರ್ಶಿಸುವುದಿಲ್ಲ.
● ರೋಗನಿರ್ಣಯ ಮತ್ತು ರೋಗಿಗಳ ಉಲ್ಲೇಖಗಳಿಗಾಗಿ ಕಳಪೆ ಸಮಗ್ರ ಆರೋಗ್ಯ ವ್ಯವಸ್ಥೆಗಳು: ವಿಶೇಷವಾಗಿ ಮಧುಮೇಹ ರೋಗಿಗಳಿಗೆ, ಉಲ್ಲೇಖಿತ ಮಾರ್ಗಗಳು ಮುಗಿದುಹೋಗಿವೆ. ಈ ಅಸ್ವಸ್ಥತೆಗಳು ಮುಂದುವರಿದ ಹಂತಗಳನ್ನು ತಲುಪಿದಾಗ ಮಾತ್ರವೇ ರೋಗಿಗಳು ತಮ್ಮನ್ನು ರೆಟಿನಾ ತಜ್ಞರಿಗೆ ತೋರಿಸುತ್ತಾರೆ.
● ಲಭ್ಯವಿರುವ ಚಿಕಿತ್ಸೆಗಳ ಮೇಲಿನ ಚಿಕಿತ್ಸಾ ಹೊರೆ: ಪ್ರಸ್ತುತ ಅಸ್ತಿತ್ವದಲ್ಲಿರುವ ಚಿಕಿತ್ಸೆಗಳು ಸಾಕಷ್ಟು ಹೊರೆಯನ್ನು ಉಂಟುಮಾಡುತ್ತವೆ, ಇದರಿಂದಾಗಿ ಆಗಾಗ್ಗೆ ಕಣ್ಣಿಗೆ ಚುಚ್ಚುಮದ್ದಿನ ಅಗತ್ಯವಿರುತ್ತದೆ. ಅಂಟಿಕೊಳ್ಳುವಿಕೆಯ ಅಂತರದಿಂದ ಉಂಟಾಗುವ ಇದು ಅಂಡರ್-ಟ್ರೀಟ್ಮೆಂಟ್ಗೆ ಕಾರಣವಾಗಬಹುದು, ಇದು ಮತ್ತಷ್ಟು ರೆಟಿನಾದ ಹಾನಿಗೆ ಕಾರಣವಾಗುತ್ತದೆ.
● ಸಾರ್ವಜನಿಕ ಅರಿವಿನ ಕೊರತೆ: ನಮ್ಮ ದೇಶದಲ್ಲಿ ಚಾಲ್ತಿಯಲ್ಲಿರುವ ಅಭ್ಯಾಸದ ಒಂದು ಭಾಗವಾಗಿ, ಕಣ್ಣಿನ ಆರೋಗ್ಯವನ್ನು ನಿರ್ಲಕ್ಷಿಸಲಾಗುತ್ತದೆ. ಕುಟುಂಬಗಳು, ಕಾರ್ಪೊರೇಟ್‌ಗಳು ಮತ್ತು ಸಂಸ್ಥೆಗಳು ವಾರ್ಷಿಕ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳಲ್ಲಿ ರೆಟಿನಾವನ್ನು ಸೇರಿಸುವುದಿಲ್ಲ. ಮಧುಮೇಹದಂತಹ ಸಮಸ್ಯೆಗಳು ದೃಷ್ಟಿಯ ಮೇಲೆ ಪರಿಣಾಮ ಬೀರಬಹುದು ಎನ್ನುವುದು ಸಾಮಾನ್ಯ ಜನರಿಗೆ ಸಂಪೂರ್ಣವಾಗಿ ತಿಳುವಳಿಕೆ ಇಲ್ಲ.

ಪ್ರಸ್ತುತ ಚಿಕಿತ್ಸಾ ಭೂದೃಶ್ಯದಲ್ಲಿ ಎದುರಿಸುತ್ತಿರುವ ಸವಾಲುಗಳು ಹಾಗೂ ನವೀನ ಚಿಕಿತ್ಸೆಗಳ ಅವಶ್ಯಕತೆ.
ರೋಗಿಯ ದೃಷ್ಟಿಕೋನದಿಂದ ನೋಡಿದಲ್ಲಿ, ಅವರು ತಮ್ಮ ಚಿಕಿತ್ಸೆಯ ಭಾಗವಾಗಿ ಕಣ್ಣಿನಲ್ಲಿ ಚುಚ್ಚುಮದ್ದು ಹಾಕಿಸಿಕೊಳ್ಳಲು ಭಯಪಡುತ್ತಾರೆ. ಕಳಪೆ ದೃಷ್ಟಿಯೊಂದಿಗೆ ವ್ಯವಹರಿಸುವಾಗ ಆಗಾಗ್ಗೆ ಚುಚ್ಚುಮದ್ದುಗಳನ್ನು ಪಡೆಯುವ ಸವಾಲು ಮತ್ತು ಕಣ್ಣಿನ ಆರೈಕೆ ಸೌಲಭ್ಯಗಳನ್ನು ಪಡೆಯಲು ಅನೇಕ ಭೇಟಿಗಳ ಕಷ್ಟವು ಕೂಡ ಅದರಲ್ಲಿ ಸೇರಿರುತ್ತದೆ. ಆಂಟಿ-VEGFಗಳಂತಹ ಹಳೆಯ ಚಿಕಿತ್ಸಾ ಆಯ್ಕೆಗಳನ್ನು ಸಾಮಾನ್ಯವಾಗಿ ಬಳಸಲಾಗಿದ್ದರೂ ಸಹ ಅನೇಕರು ಈ ಸಮಸ್ಯೆಯನ್ನು ಎದುರಿಸುತ್ತಾರೆ.

ಹಿಂದೆ ಅನುಮೋದಿಸಲಾದ ಚಿಕಿತ್ಸೆಗಳು nAMD ಮತ್ತು DME ಗಳ ಅಭಿವೃದ್ಧಿ ಹಾಗೂ ಪ್ರಗತಿಯನ್ನು ಹೆಚ್ಚಿಸುವ ಪ್ರಕ್ರಿಯೆಗಳನ್ನು – ಅಥವಾ ‘ಪಾತ್‌ವೇಸ್’ ಅನ್ನು ಮಾತ್ರವೇ ಭಾಗಶಃ ತಿಳಿಸಿವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸ್ಟ್ಯಾಂಡರ್ಡ್ IVT ಚಿಕಿತ್ಸೆಯನ್ನು ಕೂಡ ಮೀರಿ ನಾವೀನ್ಯತೆಯ ಅವಶ್ಯಕತೆಯಿದೆ. IVT ಚುಚ್ಚುಮದ್ದುಗಳು (ಕಣ್ಣಿನ ಚುಚ್ಚುಮದ್ದು) ರೋಗಿಗಳಿಗೆ ಭರವಸೆಯ ಹೊಸ ಆಯ್ಕೆಗಳನ್ನು ತಂದಿದ್ದರೂ ಸಹ, DME ಮತ್ತು nAMD ಚಿಕಿತ್ಸೆಯಲ್ಲಿ ಇನ್ನೂ ಪೂರೈಸದ ಅಗತ್ಯತೆಗಳು ಸಾಕಷ್ಟಿವೆ. ಪ್ರಸ್ತುತ ಚಿಕಿತ್ಸೆಗೆ ಪುನರಾವರ್ತಿತ ವೆಚ್ಚ, ಪ್ರಯಾಣದ ಅನಾನುಕೂಲತೆ ಮತ್ತು ಆರೈಕೆದಾರರ ಮೇಲೆ ಅವಲಂಬಿತರಾಗುವ ಅಗತ್ಯವನ್ನು ಹೊಂದಿರುವ ರೋಗಿಗೆ ಆಗಾಗ್ಗೆ ಚುಚ್ಚುಮದ್ದು ಅಗತ್ಯವಿರುತ್ತದೆ. ಹೊಸ ಉದಯೋನ್ಮುಖ ಚಿಕಿತ್ಸೆಗಳು ಚುಚ್ಚುಮದ್ದಿನ ಸಂಖ್ಯೆ ಮತ್ತು ಆವರ್ತನದ ವಿಷಯದಲ್ಲಿ ರೋಗಿಗಳ ಮೇಲೆ ಕಡಿಮೆ ಹೊರೆಯೊಂದಿಗೆ ಉತ್ತಮ ಫಲಿತಾಂಶಗಳನ್ನು ಒದಗಿಸುವುದರ ಮೇಲೆ ಕೇಂದ್ರೀಕರಿಸುತ್ತವೆ.

ಸುಧಾರಿತ ಚಿಕಿತ್ಸಾ ಆಯ್ಕೆಗಳನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯತೆ: ಪರಿಪೂರ್ಣ ದೃಷ್ಟಿಯನ್ನು ಹೊಂದಲು, ನಮ್ಮ ರೆಟಿನಾದಲ್ಲಿನ ನಾಳಗಳು ಸ್ಥಿರವಾಗಿರಬೇಕು ಹಾಗೂ ಬಲವಾಗಿರಬೇಕು. ಆದಾಗ್ಯೂ, ರೆಟಿನಾದ ಸಮಸ್ಯೆಗಳೊಂದಿಗೆ ವಾಸಿಸುವ ಜನರ ನಾಳಗಳು ಅಸ್ಥಿರವಾಗಿರುತ್ತವೆ, ಸೋರಿಕೆಯಾಗುತ್ತವೆ, ಉರಿಯುತ್ತವೆ ಮತ್ತು ಅಸಹಜವಾಗಿ ಬೆಳೆಯುತ್ತವೆ. VEGFಎನ್ನುವುದು ರೆಟಿನಾದ ಸಮಸ್ಯೆಗಳ ಅಭಿವೃದ್ಧಿ ಮತ್ತು ಪ್ರಗತಿಯನ್ನು ಒಳಗೊಂಡಿರುವ ಒಂದು ಪ್ರಮುಖ ಮಾರ್ಗವಾಗಿದೆ. VEGF ಮಾರ್ಗವನ್ನು ನಿರ್ಬಂಧಿಸುವುದರಿಂದ ರೆಟಿನಾದಲ್ಲಿನ ನಾಳಗಳು ರಕ್ತ ಮತ್ತು ದ್ರವ ಸೋರಿಕೆಯನ್ನು ಯಶಸ್ವಿಯಾಗಿ ನಿಲ್ಲಿಸುತ್ತದೆ ಹಾಗೂ ಹೊಸ ಅನಾರೋಗ್ಯಕರ ನಾಳಗಳು ಬೆಳೆಯುವುದನ್ನು ತಡೆಯುತ್ತದೆ. ಆದಾಗ್ಯೂ, VEGF ಮಾತ್ರವೇ ಏಕೈಕ ಮಾರ್ಗವಲ್ಲ. Ang-2 ಎನ್ನುವುದು ನಾಳೀಯ ಅಸ್ಥಿರತೆಗೆ ಕೊಡುಗೆ ನೀಡುತ್ತದೆ, ಉರಿಯೂತವನ್ನು ಉಂಟುಮಾಡುತ್ತದೆ ಹಾಗೂ ನಾಳಗಳ ಮೇಲೆ VEGF ನ ಕ್ರಿಯೆಗಳನ್ನು ಸುಗಮಗೊಳಿಸುತ್ತದೆ ಮತ್ತು ವರ್ಧಿಸುತ್ತದೆ, ಇದು ದೀರ್ಘಾವಧಿಯಲ್ಲಿ ಹೆಚ್ಚು ತೀವ್ರ ಸ್ಥಿತಿಗೆ ಕಾರಣವಾಗುತ್ತದೆ. VEGF ಅನ್ನು ಮಾತ್ರವೇ ಗುರಿಯಾಗಿಟ್ಟುಕೊಂಡು ನೀಡುವ ಚಿಕಿತ್ಸಾ ಆಯ್ಕೆಗಳು ರೋಗದ ಜೀವಶಾಸ್ತ್ರವನ್ನು ಭಾಗಶಃ ಮಾತ್ರವೇ ಪರಿಹರಿಸುತ್ತವೆ.

DME ಮತ್ತು nAMD ನಂತಹ ರೆಟಿನಾದ ಸಮಸ್ಯೆಗಳು ಶಾಶ್ವತ ಮತ್ತು ಬದಲಾಯಿಸಲಾಗದ ದೃಷ್ಟಿ ಹಾನಿಗೆ ಕಾರಣವಾಗಬಹುದು ಎಂದು ನಮಗೆ ತಿಳಿದಿದೆ; ಹಾಗೂ ಚಿಕಿತ್ಸೆಗಾಗಿ ಸಿಗುವ ಮೊದಲ ಅವಕಾಶವು ಚಿಕಿತ್ಸೆಯ ಅತ್ಯುತ್ತಮ ಅವಕಾಶವಾಗಿರುತ್ತದೆ. ಆದ್ದರಿಂದ ದೃಷ್ಟಿಯ ಸ್ಥಿತಿಯು ಕಾಲಾನಂತರದಲ್ಲಿ ಹದಗೆಟ್ಟ ರೋಗಿಗಳಿಗೆ ಅಂತಹ ಚಿಕಿತ್ಸೆಗಳನ್ನು ಕಾಯ್ದಿರಿಸುವ ಬದಲು ಮೊದಲ ಸಾಲಿನ ಸೆಟ್ಟಿಂಗ್‌ಗಳಲ್ಲಿ ಹೊಸ ನವೀನ ಚಿಕಿತ್ಸೆಗಳೊಂದಿಗೆ ರೋಗಿಗಳಿಗೆ ಚಿಕಿತ್ಸೆ ನೀಡುವ ಗುರಿಯನ್ನು ಹೊಂದಿರುತ್ತದೆ.

Ang-2 ಮತ್ತು VEGF-A ಒಳಗೊಂಡಿರುವ ಎರಡೂ ಮಾರ್ಗಗಳನ್ನು ನಿರ್ಬಂಧಿಸುವ ಸುಧಾರಿತ ಚಿಕಿತ್ಸಾ ಆಯ್ಕೆಗಳು, ರಕ್ತನಾಳಗಳನ್ನು ಸ್ಥಿರಗೊಳಿಸುವಂತೆ ವಿನ್ಯಾಸಗೊಳಿಸಲಾಗಿದೆ, ಇದರಿಂದಾಗಿ ಉರಿಯೂತ, ಸೋರಿಕೆ ಮತ್ತು ಅಸಹಜ ನಾಳಗಳ ಬೆಳವಣಿಗೆಯನ್ನು ಕಡಿಮೆ ಮಾಡಬಹುದು, ಇದು ನಿರಂತರ ರೋಗ ನಿಯಂತ್ರಣವನ್ನು ಒದಗಿಸಲು ಹಾಗೂ ದೃಷ್ಟಿ ಫಲಿತಾಂಶಗಳನ್ನು ಕಾಪಾಡಿಕೊಳ್ಳಲು ಬಹಳ ಸಹಾಯವನ್ನು ಮಾಡುತ್ತದೆ.

HCP ಯಿಂದ ಉಲ್ಲೇಖ – ದೃಷ್ಟಿ ನಷ್ಟವನ್ನು ಹೊಂದಿರುವ ರೋಗಿಗಳು ಸಾಮಾಜಿಕ ಬಹಿಷ್ಕಾರ, ಆತಂಕ, ಖಿನ್ನತೆಯ ಲಕ್ಷಣಗಳು ಮತ್ತು ಅವರ ದೈನಂದಿನ ಜೀವನದಲ್ಲಿ ಅನೇಕ ಕಷ್ಟಗಳನ್ನು ಎದುರಿಸುತ್ತಾರೆ. ಸರಳವಾದ ಕಾರ್ಯಗಳನ್ನು ನಿರ್ವಹಿಸುವ ಸಾಮರ್ಥ್ಯವು ಸೀಮಿತಗೊಳ್ಳುತ್ತದೆ. ಬಹು ಕ್ಲಿನಿಕ್ ಭೇಟಿಗಳು ಮತ್ತು ಆಗಾಗ್ಗೆ ಕಣ್ಣಿನ ಚುಚ್ಚುಮದ್ದಿನ ಹೊರೆಯ ಚಿಕಿತ್ಸೆಯ ವೇಳಾಪಟ್ಟಿಯನ್ನು ಕೂಡ ಇದಕ್ಕೆ ಸೇರಿಸಿದಂತೆ. ವಿಸ್ತೃತ ಚಿಕಿತ್ಸೆಯ ಬಾಳಿಕೆಯೊಂದಿಗೆ ಬರುವ ಪರಿಣಾಮಕಾರಿ ವೈದ್ಯಕೀಯ ಪ್ರಯೋಜನಗಳನ್ನು ನೀಡುವ ಹೊಸ, ನವೀನ ಚಿಕಿತ್ಸಾ ಆಯ್ಕೆಗಳ ಅವಶ್ಯಕತೆಯಿದೆ. ಇಂತಹ ಚಿಕಿತ್ಸಾ ಆಯ್ಕೆಗಳು ರೋಗಿಗಳಿಗೆ ಅನುಕೂಲವನ್ನು ಒದಗಿಸುವುದಲ್ಲದೆ, ಉತ್ತಮ ಫಲಿತಾಂಶಗಳಿಗಾಗಿ ಚಿಕಿತ್ಸೆಯ ಅನುಸರಣೆಯನ್ನು ಖಾತ್ರಿಪಡಿಸುತ್ತದೆ, ಹಾಗೂ ನಮ್ಮ ಆರೋಗ್ಯ ವ್ಯವಸ್ಥೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. – ಡಾ. ವಿವೇಕ್ ಎಂ ಭಾಸ್ಕರ್ – ಹಿರಿಯ ಸಲಹೆಗಾರ (ವಿಟ್ರಿಯೋ ರೆಟಿನಾಲ್) – ಶೇಖರ್ ಕಣ್ಣಿನ ಆಸ್ಪತ್ರೆ, ಬೆಂಗಳೂರು.

HCP ಯಿಂದ ಉಲ್ಲೇಖ – ಕಣ್ಣಿನ ಪೊರೆ ಮತ್ತು ಗ್ಲುಕೋಮಾ ಸಂಬಂಧಿತ ಕುರುಡುತನವನ್ನು ಕಡಿಮೆ ಮಾಡುವಲ್ಲಿ ಭಾರತವು ಮಹತ್ತರವಾದ ಪ್ರಗತಿಯನ್ನು ಸಾಧಿಸಿದೆ. ಆದರೆ ದುರದೃಷ್ಟವಶಾತ್, ನಮ್ಮ ದೇಶದಲ್ಲಿ ರೆಟಿನಾ ಸಂಬಂಧಿತ ದೃಷ್ಟಿ ನಷ್ಟದ ಪಾಲು ಹೆಚ್ಚಾಗುತ್ತಲಿದೆ. ಹಲವಾರು ಅಂಶಗಳು ಇದಕ್ಕೆ ಕಾರಣವಾಗಿವೆ… ಅರಿವಿನ ಕೊರತೆ, ರೋಗನಿರ್ಣಯದಲ್ಲಿ ತಡ ಮಾಡುವಿಕೆ, ಕಳಪೆ ಜೀವನಶೈಲಿ, ಮಧುಮೇಹ ಜನಸಂಖ್ಯೆಯ ಹೆಚ್ಚಳ, ನಮ್ಮ ದೇಶದ ವಯಸ್ಸಾದ ಜನಸಂಖ್ಯೆ, ನಮ್ಮ ಆರೋಗ್ಯ ವ್ಯವಸ್ಥೆಗಳಲ್ಲಿನ ಸಾಮರ್ಥ್ಯದ ನಿರ್ಬಂಧಗಳು ಮತ್ತು ರೆಟಿನಾದ ಪರಿಸ್ಥಿತಿಗಳಿಗೆ ಆದ್ಯತೆ ನೀಡುವಲ್ಲಿ ದುರ್ಬಲವಾದ ನೀತಿ ಗಮನ ಮುಂತಾದವುಗಳು.

Continue Reading

ರಾಜಕೀಯ

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Muda Scam : ಮೂಡ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಿತು. ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಮತ್ತು ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಭಾಗಿಯಾಗಿದ್ದರು.

VISTARANEWS.COM


on

By

MUda Scam
Koo

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಶನ್ ಹೈಕೋರ್ಟ್ (Muda Scam) ಎತ್ತಿ ಹಿಡಿದಿದೆ. ಹೀಗೆ ತನಿಖೆಗೆ ಗ್ರೀನ್ ಸಿಗ್ನಲ್ ಕೊಟ್ಟಿರುವ ತೀರ್ಪಿನಲ್ಲಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಕಪಾಳ ಮೋಕ್ಷ ಮಾಡಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಮತ್ತು ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಜೆಡಿಎಸ್ ಪಕ್ಷದ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯ ವೇಳೆ ತಿಳಿಸಿದರು.

ಮೂಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ನೆರವಾಗುವ ರೀತಿಯಲ್ಲಿ ಮುಖ್ಯಂತ್ರಿಯಾಗಿ ಪ್ರಭಾವದ ದುರ್ಬಳಕೆ ಮಾಡಿದ್ದಾರೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ತನ್ನ ಆದೇಶದಲ್ಲಿ ತಿಳಿಸಿದೆ. ಸಿದ್ದರಾಮಯ್ಯ ಪತ್ನಿ ಅವರ ಸೈಟು ಪರ ಪ್ರತಿಬಾರಿಯೂ ಮೂಡಾ ತೀರ್ಮಾನ ಕೈಗೊಳ್ಳುವಾಗ ಸಿದ್ದರಾಮಯ್ಯ ಪ್ರಭಾವಿ ಹುದ್ದೆಯಲ್ಲಿ ಇದ್ದರು. ಈ ಹುದ್ದೆಯ ಪ್ರಭಾವದಿಂದ ಎರಡು ಸೈಟುಗಳು ಪರಿಹಾರವಾಗಿ ಸಿಗುವ ಬದಲು 14ಸೈಟುಗಳು ಸಿಕ್ಕಿವೆ ಎಂದು ನ್ಯಾಯಾಲಯ ಹೇಳಿದೆ ಎಂದು ತಿಳಿಸಿದರು.

ಅಂದ್ರೆ ಹೈಕೋರ್ಟ್ ಸಿದ್ದರಾಮಯ್ಯ ಅವರಿಗೆ ಬಹುತೇಕ ಛೀಮಾರಿ ಹಾಕಿದೆ. ಈ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ ಎಂದು ಸಿಎಂ ಹೇಳಿದರೂ , 62ಕೋಟಿ ರೂಪಾಯಿ ಪರಿಹಾರ ಕೇಳಿದ್ದೇಕೆ? ಎನ್ನುವುದು ನ್ಯಾಯಾಲಯ ಪ್ರಶ್ನೆ. ಹಾಗೆ ಇದು ನಮ್ಮೆಲ್ಲರ ಪ್ರಶ್ನೆ ಕೂಡ ಎಂದು ಈ ವೇಳೆ ತಿಳಿಸಿದರು.

ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡದೆ ಬೇರೆ ದಾರಿ ಇಲ್ಲ. ತನಿಖೆಗೆ ಹಸಿರು ನಿಶಾನೆ ಕೊಡುವ ಭರಾಟೆ ಯಲ್ಲಿ ನ್ಯಾಯಾಲಯ ಈ ಮೂಡಾ ಪ್ರಕರಣದಲ್ಲಿ ಸಿಎಂ ಭಾಗಿ ಆಗಿರುವುದನ್ನು ಖಚಿತಪಡಿಸಿದ್ದು, ಅವರು ರಾಜೀನಾಮೆ ಕೊಡಲೇ ಬೇಕು. ಆರೋಪಕ್ಕೆ ಗುರಿಯಾದ ವ್ಯಕ್ತಿ ಪ್ರಭಾವಿ ಹುದ್ದೆಯಲ್ಲಿ ಇದ್ದರೆ ನಿಷ್ಪಕ್ಸಪಾತವಾದ ತನಿಖೆ ಆಗುವುದಿಲ್ಲ. ಆದ್ದರಿಂದ ನಿಷ್ಪಕ್ಷಾತದಿಂದ ತನಿಖೆ ಆಗಬೇಕಾದರೆ ಸಿಎಂ ರಾಜೀನಾಮೆ ನೀಡಲೇಬೇಕು.
ಇನ್ನೂ ಅತ್ಯಂತ ಮುಖ್ಯ ಅಂದ್ರೆ ರಾಜ್ಯದ ಪೊಲೀಸರು ಸಿಎಂ ಕೈ ಕೆಳಗೆ ಬರುವುದರಿಂದ ಪೊಲೀಸ್ ತನಿಖೆಯಿಂದ ನ್ಯಾಯ ಸಿಗುವುದು ಅನುಮಾನ. ಪಾರದರ್ಶಕ ತನಿಖೆ ಸಾಧ್ಯವಿಲ್ಲ. ಆದ್ದರಿಂದ ಈ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Murder case
ಬೆಂಗಳೂರು12 ಗಂಟೆಗಳು ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ13 ಗಂಟೆಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ13 ಗಂಟೆಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು16 ಗಂಟೆಗಳು ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ17 ಗಂಟೆಗಳು ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ17 ಗಂಟೆಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Cancer Treatment AI
ಆರೋಗ್ಯ17 ಗಂಟೆಗಳು ago

Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

Dina Bhavishya
ಭವಿಷ್ಯ18 ಗಂಟೆಗಳು ago

Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Self Harming
ಕೋಲಾರ2 ದಿನಗಳು ago

Self Harming : ಹೆಂಡ್ತಿ ಮನೆಯವರ ಕಿರುಕುಳ; ವಿಡಿಯೊ ಮಾಡಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣಿಗೆ ಶರಣು

karnataka weather Forecast
ಮಳೆ2 ದಿನಗಳು ago

Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌