Site icon Vistara News

Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

murder case

ಬೆಂಗಳೂರು: ಎಣ್ಣೆ ಮತ್ತಲ್ಲಿ ಬಿಹಾರಿ ಗೆಳೆಯರ ನಡುವೆ ಕಿರಿಕ್ ನಡೆದಿದ್ದು, ಕೊಲೆಯಲ್ಲಿ‌ (Murder case) ಅಂತ್ಯವಾಗಿದೆ. ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿ ಭೀಕರವಾಗಿ ಹತ್ಯೆಯಾಗಿದ್ದಾನೆ. ಸಜಿತ್ (34) ಕೊಲೆಯಾದ ದುರ್ದೈವಿ. ಬೆಂಗಳೂರಿನ ಮೈಕೋ ಲೇಔಟ್ ಬಳಿಯ ಕುಟ್ಟಪ್ಪ ಗಾರ್ಡನ್‌ನಲ್ಲಿ ಘಟನೆ ನಡೆದಿದೆ.

ಸಜೀತ್ ಇಂಟೀರಿಯರ್ ಡಿಸೈನ್ ಗೋಡೌನ್‌ನಲ್ಲಿ ಕೆಲಸ ಮಾಡುತ್ತಿದ್ದ. ಮೂವರು ಬಿಹಾರ ಮೂಲದವರು ಸೇರಿ ನಿನ್ನೆ ರಾತ್ರಿ ಪಾರ್ಟಿ ಮಾಡಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಮಾತಿನ ಚಕಮಕಿ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು ಜತೆಗೆ ಇದ್ದವರೇ ಮರದ ದೊಣ್ಣೆಗಳಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದು ಹಾಕಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸೊಕೋ ಮತ್ತು ಎಫ್.ಎಸ್.ಎಲ್ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೈಕೊಲೇಔಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಮೈಕೋ ಲೇಔಟ್ ಕೊಲೆ ಪ್ರಕರಣ ಸಂಬಂಧ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ. ಲಿಖಿತ್ ಇಂಟೀರಿಯರ್ ಡಿಸೈನ್ಸ್ ಎಂಬ ಶಾಪ್ ಬಳಿ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಒಂದು ಗಲಾಟೆ ನಡೆದಿದೆ. ಮೂರು ಜನ ಸೇರಿ ಗಲಾಟೆ ಮಾಡಿಕೊಂಡಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧನ ಮಾಡಿದ್ದೀವಿ. ಮೂವರು ಬಿಹಾರ ಮೂಲದ ಅಕ್ಕಪಕ್ಕದ ಹಳ್ಳಿಯವರು ಎಂದು ತಿಳಿದು ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version