Site icon Vistara News

Murder Case : ಪಿತೃಪಕ್ಷ ಪೂಜೆ ಬಳಿಕ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಬಗೆದು ಕೊಂದ ಪಾಪಿ!

Murder Case

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ (Murder Case) ಕೊಲೆಯಾಗಿದೆ. ಕೀರ್ತಿ (32) ಎಂಬಾತ ಮೂರ್ತಿ(52) ಎಂಬುವವರಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಸಣ್ಣೇನ ಹಳ್ಳಿಯಲ್ಲಿ ಘಟನೆ ನಡೆದಿದೆ.

ಮೂರ್ತಿ ಹಸು ಸಾಕಾಣಿಕೆ ಕೆಲಸ ಮಾಡುತ್ತಿದ್ದರೆ, ಆರೋಪಿ ಕೀರ್ತಿ ಸ್ನೇಹಿತನಾಗಿದ್ದು ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ. ಮೃತ ವ್ಯಕ್ತಿ ಮತ್ತು ಆರೋಪಿ ಇಬ್ಬರು ಒಂದೇ ಏರಿಯಾದವರು. ರಾತ್ರಿ ಮನೆಯಲ್ಲಿ ಮಹಾಲಯ ಅಮಾವಾಸ್ಯೆಯ ಹಬ್ಬ ಮಾಡಿ, ಮದ್ಯ ಸೇವನೆ‌ ಮಾಡಿದ್ದರು. ಈ ಸಮಯದಲ್ಲಿ ಗಲಾಟೆ ನಡೆದಿದ್ದು ಸಿಟ್ಟಿನಲ್ಲಿ ಕೀರ್ತಿ ಮೂರ್ತಿಯ ಹೊಟ್ಟೆಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಇನ್ನೂ ಮೂರ್ತಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ರಾತ್ರಿ 7 ಗಂಟೆಯ ಸುಮಾರಿಗೆ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಕನಕಪುರ ರಸ್ತೆ ಮಾರ್ಗವಾಗಿ ಬೈಕ್‌ನಲ್ಲಿ ಪ್ರಯಾಣ ಬೆಳೆಸುತ್ತಿದ್ದ. ಈ ವೇಳೆ ಟ್ರ್ಯಾಕ್ ಮಾಡಿ ಆರೋಪಿಯನ್ನು ಹಿಡಿದಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಾಗಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ.

ಪಿತೃತಪಕ್ಷ ಹಿನ್ನೆಲೆಯಲ್ಲಿ ಭಾನುವಾರು ಎಲ್ಲರು ಮನೆಯಲ್ಲಿ ಪಾರ್ಟಿ ಮಾಡಿದ್ದರು. ಕೊಲೆಯಾದ ಮೂರ್ತಿ ಹಾಗೂ ಆರೋಪಿ ಕೀರ್ತಿ ಒಂದೇ ಊರಿನವರು. ಅಕ್ಕಪಕ್ಕದ ಮನೆಯವರೆಲ್ಲ ಸೇರಿ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ಕೀರ್ತಿ ಕಾಲಿಗೆ ಮೂರ್ತಿ ಒದ್ದಿದ್ದ. ಈ ವೇಳೆ ಸಿಟ್ಟಿಗೆದ್ದಿದ್ದ ಕೀರ್ತಿ ಮೂರ್ತಿ ಜತೆ ಜಗಳ ತೆಗೆದಿದ್ದಾನೆ. ಜಗಳ ಜೋರಾಗಿ ಕೈಗೆ ಚಾಕು ಎತ್ತಿಕೊಂಡಿದ್ದ ಕೀರ್ತಿ ಏಕಾಏಕಿ ಮೂರ್ತಿ ಹೊಟ್ಟೆಯ ಬಲ ಭಾಗಕ್ಕೆ ಚಾಕುವಿನಿಂದ ಇರಿದಿದ್ದ. ಈ ವೇಳೆ ತೀವ್ರ ಗಾಯಗೊಂಡು ಒದ್ದಾಡುತ್ತಿದ್ದ ಮೂರ್ತಿ ರಕ್ತಸ್ರಾವವಾಗಿ ಮೃತಪಟ್ಟಿದ್ದ.

ಸದ್ಯ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಕೀರ್ತಿಯನ್ನು ಬಂಧಿಸಿ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ. ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಈ ಕುರಿತು ಮಾಹಿತಿ ನೀಡಿದ್ದಾರೆ. ನಿನ್ನೆ ಭಾನುವಾರ 11 ಗಂಟೆ ಸುಮಾರಿಗೆ ಕೊಲೆ ಪ್ರಕರಣ ವರದಿ ಆಗಿದೆ. ಫ್ರೆಂಡ್ಸ್ ಮತ್ತೆ ರಿಲೆಟಿವ್ ಸೇರಿ ಪಿತೃಪಕ್ಷ ಹಿನ್ನೆಲೆಯಲ್ಲಿ ಮೂರ್ತಿಯ ತಮ್ಮನ ಮನೆಯಲ್ಲಿ ಪಾರ್ಟಿ ಮಾಡಿದ್ದರು. ಕೀರ್ತಿ ಕೂಡ ಆ ಪಾರ್ಟಿಯಲ್ಲಿ ಭಾಗಿಯಾಗಿದ್ದ. ಕಾಲು ಬಡಿತು ಎನ್ನುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಆಗಿದೆ. ಈ ವೇಳೆ ಚಾಕುವಿನಿಂದ ಮೂರ್ತಿಗೆ ಕೀರ್ತಿ ಎಂಬಾತ ಇರಿದಿದ್ದಾನೆ. ಸೋಮವಾರ ಬೆಳಗ್ಗೆ ಆರೋಪಿ ಕೀರ್ತಿಯನ್ನು ಬಂಧನ ಮಾಡಲಾಗಿದೆ.

ಇದನ್ನೂ ಓದಿ: Suspicious Death : ಮೈಸೂರಿನ ಚೆಲುವಾಂಬ ಆಸ್ಪತ್ರೆಯ ವೈದ್ಯೆ ಅನುಮಾನಾಸ್ಪದ ಸಾವು; ಪತಿ ಕೈವಾಡ ಶಂಕೆ

ಶೋಭಾಯಾತ್ರೆಯಂದು ಯುವಕನಿಗೆ ಚಾಕು ಇರಿತ

ಹಿಂದೂ ಮಹಾಗಣಪತಿ ಶೋಭಾಯಾತ್ರೆ ದಿನ ಯುವಕನಿಗೆ ಚಾಕು ಇರಿದಿರುವ ಘಟನೆ ಚಿತ್ರದುರ್ಗದ ಸೀಬಾರ ಸಮೀಪದಲ್ಲಿ ನಡೆದಿದೆ. ಸುದೀಪ್ (22) ಎಂಬಾತ ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದಾನೆ. ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಚಿಗಟೇರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸುದೀಪ್ ಹಾಗೂ ಸ್ನೇಹಿತರು ಬೈಕ್‌ನಲ್ಲಿ ಬರುತ್ತಿದ್ದಾಗ, ದರ್ಶನ್ & ಗ್ಯಾಂಗ್‌ ಬೈಕ್ ಅಡ್ಡಗಟ್ಟಿ ಕೃತ್ಯ ಎಸಗಿದ್ದಾರೆ. ಘಟನೆಯಲ್ಲಿ ಬಿಳಿಚೋಡು ಮೂಲದ ಸುದೀಪ್, ದೇವರಾಜ್, ಅಜಯ್‌ಗೆ ಗಾಯವಾಗಿದೆ. ಚಾಕು ಇರಿದು ಕೊಲೆ ಬೆದರಿಕೆ ಹಾಕಿ ದರ್ಶನ್ & ಗ್ಯಾಂಗ್ ಎಸ್ಕೇಪ್ ಆಗಿದೆ. ಚಾಕು ಇರಿತಕ್ಕೆ ನಿಖರ ಕಾರಣ ಲಭ್ಯವಿಲ್ಲ. ಸದ್ಯ BNS 126/2, 352, 115/2, 189/2, 191/2, 109,190 ಕಲಂ ಅಡಿಯಲ್ಲಿ ಕೇಸ್ ದಾಖಲಾಗಿದ್ದು, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯು ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version