Murder Case: ಪ್ರಿಯಕರನ ಜತೆಗಿದ್ದ ಪತ್ನಿಯನ್ನು ಕೊಂದ ಪತಿ - Vistara News

ಕ್ರೈಂ

Murder Case: ಪ್ರಿಯಕರನ ಜತೆಗಿದ್ದ ಪತ್ನಿಯನ್ನು ಕೊಂದ ಪತಿ

ಪತ್ನಿಯ ಅಕ್ರಮ ಸಂಬಂಧ ತಪ್ಪಿಸಲು ಪತಿ ಆಕೆಯನ್ನು ಕೋಲ್ಕತ್ತಾಗೆ ಕರೆದುಕೊಂಡು ಹೋಗಿದ್ದ. ಆದರೆ ಆಕೆ ಮರಳಿ ಬಂದು ಬೆಂಗಳೂರಿನಲ್ಲಿ ಪ್ರಿಯಕರನ ಜತೆಗಿದ್ದಳು.

VISTARANEWS.COM


on

murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಕತ್ತು ಸೀಳಿ ಕೊಂದು ಹಾಕಿದ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಬ್ಸುಮ್ ಬೇಬಿ ಕೊಲೆಯಾದ ಮಹಿಳೆ. ಹದಿನಾಲ್ಕು ವರ್ಷಗಳ ಕೊಲ್ಕತ್ತ ಮೂಲದ ತಬ್ಸುಮ್ ಮತ್ತು ಶೇಕ್ ಸೋಹೆಲ್ ಮದುವೆಯಾಗಿದ್ದರು. ಆರು ವರ್ಷಗಳ ಹಿಂದೆ ಪತ್ನಿಗೆ ಅಕ್ರಮ ಸಂಬಂಧ ಇರುವ ವಿಚಾರ ಗೊತ್ತಾಗಿ ವಾಪಸ್ಸು ಕೋಲ್ಕತ್ತಾಗೆ ಈತ ಕರೆದುಕೊಂಡು ಹೋಗಿದ್ದ. ಆದರೆ ತಬ್ಸುಮ್‌ ಮತ್ತೆ ಪತಿಯನ್ನು ಬಿಟ್ಟು ಪ್ರಿಯಕರನ ಜೊತೆಗೆ ಇರಲು ಬಂದಿದ್ದಳು.

ಆರು ವರ್ಷಗಳ ಬಳಿಕ ಬೆಂಗಳೂರಿಗೆ ಬಂದಿದ್ದ ಪತಿ ಸೋಹೆಲ್, ನಿನ್ನೆ ರಾತ್ರಿ ಮಾತನಾಡಬೇಕು ಎಂದು ತಬ್ಸುಮ್‌ಳನ್ನು ಭೇಟಿಯಾಗಿದ್ದ. ತಬ್ಸುಮ್‌ ತಂಗಿಯ ಮನೆಯಲ್ಲಿ ಭೇಟಿಯಾಗಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು, ಜಗಳದ ನಡುವೆ ಚಾಕುವಿನಿಂದ ತಬ್ಸುಮ್ ಕುತ್ತಿಗೆಗೆ ಚಾಕುವಿನಿಂದ ಸೋಹೆಲ್‌ ಇರಿದಿದ್ದಾನೆ. ಆರೋಪಿ ಶೇಕ್ ಸೋಹೆಲ್‌ನನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂರು ನಾಡ ಬಂದೂಕು ಪತ್ತೆ

ವಿಜಯನಗರ: ವಿಜಯನಗರ ಜಿಲ್ಲೆಯಲ್ಲಿ ಮೂರು ನಾಡ ಬಂದೂಕು ಪತ್ತೆಯಾಗಿವೆ. ಇದಕ್ಕೆ ಸಂಬಂಧಿಸಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕೂಡ್ಲಿಗಿ ತಾಲೂಕಿನ ಗುಡಿಕೋಟೆ ಚಿನ್ನೇಹಳ್ಳಿ ಗ್ರಾಮದ ರೂಪ್ಲಾ ನಾಯ್ಕ್, ರಾಮಸಾಗರ ಹಟ್ಟಿ ಗ್ರಾಮದ ಬಿ. ಬಸವಾರಾಜ್‌ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.

ರೂಪ್ಲಾ ನಾಯ್ಕ್‌ನಿಂದ ಎರಡು ನಾಡ ಬಂದೂಕು, 250 ಗ್ರಾಂ ಮದ್ದಿನ ಪುಡಿ, 3 ಅಡಿ ಕಬ್ಬಿಣ ಪೈಪ್, 17 ಖಾಲಿ ಕೇಪು, ಒಂದು ಟವೆಲ್, ಬಸವರಾಜ್‌ನಿಂದ ಒಂದು ನಾಡ ಬಂದೂಕು, 150 ಗ್ರಾಂ ಮದ್ದಿನ ಪುಡಿ, ಬಟ್ಟೆ ಚೀಲ, ಒಂದು ಮೋಟಾರು ಬೈಕ್ ವಶಕ್ಕೆ ಪಡೆಯಲಾಗಿದೆ. ರೂಪ್ಲಾ ನಾಯ್ಕ್ ಕೂಡ್ಲಿಗಿಯ ಗಂಡಬೊಮ್ಮನಹಳ್ಳಿ ಅರಣ್ಯದಲ್ಲಿ ಹಾಗೂ ಬಸವರಾಜ್ ಹರವದಿ ಗ್ರಾಮದ ಅರಣ್ಯದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಅನುಮತಿ ಇಲ್ಲದ ನಾಡ ಬಂದೂಕು ಉಪಯೋಗ ಮಾಡುತ್ತಿದ್ದರು. ಖಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Robbery Case: ಬೆಂಗಳೂರು ಹೊರವಲಯದಲ್ಲಿ ರೌಡಿ ಶೀಟರ್‌ಗಳಿಂದ ಮನೆ ದರೋಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Road Accident: ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

Road Accident: ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

VISTARANEWS.COM


on

bolero hit 3 death road accident raichur
Koo

ರಾಯಚೂರು: ಹನುಮ ಮಾಲಾಧಾರಿಗಳಿಗೆ (Hanuman Devotees) ಬೊಲೇರೋ ವಾಹನ (Bolero Hit) ಡಿಕ್ಕಿಯಾಗಿ ಸ್ಥಳದಲ್ಲಿಯೇ (Road Accident) ಮೂರು ಜನ ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

ಅಯ್ಯನಗೌಡ (28) ಮಹೇಶ (22), ಉದಯಕುಮಾರ (28) ಮೃತ ದುರ್ದೈವಿಗಳು. ರಮೇಶ ಭೂಷಣ ಎಂಬ ಇಬ್ಬರಿಗೆ ಗಂಭೀರ ಗಾಯವಾಗಿದೆ. ಎಲ್ಲರೂ ರಾಯಚೂರಿನ ಹೆಗಸನಹಳ್ಳಿ ನಿವಾಸಿಗಳು. ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ವಿಮಾನದಲ್ಲಿ ಬಂತು 10 ಅನಕೊಂಡ! ಬ್ಯಾಂಕಾಕ್‌ನಿಂದ ಅಕ್ರಮ ಆಮದು, ಬಂಧನ

ಬೆಂಗಳೂರು: ಬೆಂಗಳೂರು ಏರ್ ಕಸ್ಟಮ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಕದ್ದು ತರಲಾಗುತ್ತಿದ್ದ 10 ಅನಕೊಂಡಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿವೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತರಲಾಗಿದ್ದ 10 ಹಳದಿ ಆನಕೊಂಡಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಲಗೇಜ್ ಬ್ಯಾಗ್‌ನಲ್ಲಿ ಈ ಆನಕೊಂಡಗಳನ್ನು ತಂದಿದ್ದರು. ಏರ್ ಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ. ಸದ್ಯ ಅನಕೊಂಡಗಳನ್ನು ರಕ್ಷಿಸಿ ಆರೋಪಿಯನ್ನು ಏರ್ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಹಳದಿ ಬಣ್ಣ ಉಳ್ಳ ಆನಕೊಂಡ ಹಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

ಹಳದಿ ಅನಕೊಂಡವನ್ನು ಪರಾಗ್ವೆಯನ್ ಅನಕೊಂಡ ಎಂದೂ ಕರೆಯುತ್ತಾರೆ. ಇದು ದಕ್ಷಿಣ ಅಮೆರಿಕಾಕ್ಕೆ ಸೇರಿದ ಬೋವಾ ಜಾತಿಯ ಹಾವು. ಇದು ವಿಶ್ವದ ಅತಿದೊಡ್ಡ ಹಾವುಗಳಲ್ಲಿ ಒಂದು. ಆದರೆ ಅದರ ಹತ್ತಿರದ ಸಂಬಂಧಿ ಹಸಿರು ಅನಕೊಂಡಕ್ಕಿಂತ ಚಿಕ್ಕದು. ಇವುಗಳ ಮರಿಗಳನ್ನು ಕದ್ದು ಸಾಗಿಸುವ ವ್ಯಾಪಕ ಜಾಲ ಅಂತಾರಾಷ್ಟ್ರೀಯವಾಗಿ ಸಕ್ರಿಯವಾಗಿದೆ. ಈ ನಿಟ್ಟಿನಲ್ಲಿ ಕಸ್ಟಮ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭಾರತದಲ್ಲಿ ವಿದೇಶದ ವಿಶಿಷ್ಟ ಪ್ರಾಣಿಗಳನ್ನು (Exotic Animals) ಆಮದು ಮಾಡುವುದು ಹಾಗೂ ಸಾಕುವುದನ್ನು ನಿಷೇಧಿಸಲಾಗಿದೆ.

ʻಚುನಾವಣೆ ಪ್ರಚಾರ ಮಾಡಿದ್ರೆ ಹುಷಾರ್!‌ʼ ಎಂದು ಲಾಂಗ್‌ ಝಳಪಿಸಿದ ಜೆಡಿಎಸ್‌ ನಾಯಕ

ಚಿಕ್ಕಬಳ್ಳಾಪುರ: ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ‌ ಚಿಂತಾಮಣಿಯಲ್ಲಿ ಜೆಡಿಎಸ್‌ ನಾಯಕನೊಬ್ಬ ಎದುರಾಳಿಗಳ ಮುಂದೆ ಲಾಂಗ್‌ ಝಳಪಿಸಿ ಆವಾಜ್ ಹಾಕಿದ್ದಾನೆ. ಚುನಾವಣೆ ಪ್ರಚಾರ, ಮತದಾನದಲ್ಲಿ ಪಾಲ್ಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೆಡಿಎಸ್ ಮುಖಂಡನಿಂದ ಕಾಂಗ್ರೆಸ್ ಬೆಂಬಲಿಗರಿಗೆ ಬೆದರಿಕೆ ಹಾಕಿದ ಆರೋಪವಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವದಲ್ಲಿ ಲಾಂಗು ಹಿಡಿದು ಬೆದರಿಕೆ ಹಾಕಿದ್ದಾನೆ. ಇದರ ವಿಡಿಯೋ ಸಾಕ್ಷಿ ಲಭ್ಯವಾಗಿದೆ.

ಕೋದಂಡಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ನಡೆಯುತಿದ್ದ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕೆ.ವಿ‌ ಶ್ರೀನಿವಾಸರೆಡ್ಡಿ (ಕೆವಿಎಸ್) ಎಂಬಾತ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾನೆ. “ಏ ನನ್ನ ಮಕ್ಳಾ, ಚುನಾವಣಾ ಪ್ರಚಾರ ಅಥವಾ ಮತದಾನದಲ್ಲಿ ಪಾಲ್ಗೊಂಡರೆ‌ ಕತ್ತರಿಸುತ್ತೇನೆ” ಎಂದು ಬೆದರಿಕೆ‌ ಹಾಕಿದ್ದಾನೆ ಎನ್ನಲಾಗಿದೆ. ಎದುರಾಳಿಗಳಾದ ಕಲ್ಯಾಣ್‌ ರೆಡ್ಡಿ ಹಾಗು ಆತನ ಕುಟುಂಬದವರನ್ನು ಅಟ್ಟಾಡಿಸಿ ಬೆದರಿಸಿದ್ದಾನೆ.

ಈ ಕುರಿತು ಶ್ರೀನಿವಾಸರೆಡ್ಡಿ ವಿರುದ್ಧ ಕಲ್ಯಾಣ್ ಕುಮಾರ್ ಪ್ರಾಣಬೆದರಿಕೆ ದೂರು ದಾಖಲಿಸಿದ್ದಾರೆ. ಕಲ್ಯಾಣ್ ಕುಮಾರ್ ಹಾಲಿ ಸಚಿವ ಡಾ. ಎಂ. ಸಿ‌ ಸುಧಾಕರ್ ಬೆಂಬಲಿಗರಾಗಿದ್ದು, ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Continue Reading

ಕ್ರೈಂ

Smuggling Case: ಬ್ಯಾಂಕಾಕ್‌ನಿಂದ ಸ್ಮಗ್ಲಿಂಗ್‌ ಮಾಡುತ್ತಿದ್ದ 10 ಹಳದಿ ಅನಕೊಂಡ ವಶಕ್ಕೆ, ಆರೋಪಿ ಬಂಧನ

Smuggling Case: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತರಲಾಗಿದ್ದ 10 ಹಳದಿ ಆನಕೊಂಡಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಲಗೇಜ್ ಬ್ಯಾಗ್‌ನಲ್ಲಿ ಈ ಆನಕೊಂಡಗಳನ್ನು ತಂದಿದ್ದರು. ಏರ್ ಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ.

VISTARANEWS.COM


on

anaconda smuggling case
Koo

ಬೆಂಗಳೂರು: ಬೆಂಗಳೂರು ಏರ್ ಕಸ್ಟಮ್ (Air Customs) ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ, ಬ್ಯಾಂಕಾಕ್‌ನಿಂದ (Bangkok) ಅಕ್ರಮವಾಗಿ (Smuggling Case) ಕದ್ದು ತರಲಾಗುತ್ತಿದ್ದ 10 ಅನಕೊಂಡ ಹಾವುಗಳು (Anakonda Snake) ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIL) ಪತ್ತೆಯಾಗಿವೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತರಲಾಗಿದ್ದ 10 ಹಳದಿ ಆನಕೊಂಡಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಲಗೇಜ್ ಬ್ಯಾಗ್‌ನಲ್ಲಿ ಈ ಆನಕೊಂಡಗಳನ್ನು ತಂದಿದ್ದರು. ಏರ್ ಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ. ಸದ್ಯ ಅನಕೊಂಡಗಳನ್ನು ರಕ್ಷಿಸಿ ಆರೋಪಿಯನ್ನು ಏರ್ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಹಳದಿ ಬಣ್ಣ ಉಳ್ಳ ಆನಕೊಂಡ ಹಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

ಹಳದಿ ಅನಕೊಂಡವನ್ನು ಪರಾಗ್ವೆಯನ್ ಅನಕೊಂಡ ಎಂದೂ ಕರೆಯುತ್ತಾರೆ. ಇದು ದಕ್ಷಿಣ ಅಮೆರಿಕಾಕ್ಕೆ ಸೇರಿದ ಬೋವಾ ಜಾತಿಯ ಹಾವು. ಇದು ವಿಶ್ವದ ಅತಿದೊಡ್ಡ ಹಾವುಗಳಲ್ಲಿ ಒಂದು. ಆದರೆ ಅದರ ಹತ್ತಿರದ ಸಂಬಂಧಿ ಹಸಿರು ಅನಕೊಂಡಕ್ಕಿಂತ ಚಿಕ್ಕದು. ಇವುಗಳ ಮರಿಗಳನ್ನು ಕದ್ದು ಸಾಗಿಸುವ ವ್ಯಾಪಕ ಜಾಲ ಅಂತಾರಾಷ್ಟ್ರೀಯವಾಗಿ ಸಕ್ರಿಯವಾಗಿದೆ. ಈ ನಿಟ್ಟಿನಲ್ಲಿ ಕಸ್ಟಮ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭಾರತದಲ್ಲಿ ವಿದೇಶದ ವಿಶಿಷ್ಟ ಪ್ರಾಣಿಗಳನ್ನು (Exotic Animals) ಆಮದು ಮಾಡುವುದು ಹಾಗೂ ಸಾಕುವುದನ್ನು ನಿಷೇಧಿಸಲಾಗಿದೆ.

ʻಚುನಾವಣೆ ಪ್ರಚಾರ ಮಾಡಿದ್ರೆ ಹುಷಾರ್!‌ʼ ಎಂದು ಲಾಂಗ್‌ ಝಳಪಿಸಿದ ಜೆಡಿಎಸ್‌ ನಾಯಕ

ಚಿಕ್ಕಬಳ್ಳಾಪುರ: ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ‌ ಚಿಂತಾಮಣಿಯಲ್ಲಿ ಜೆಡಿಎಸ್‌ ನಾಯಕನೊಬ್ಬ ಎದುರಾಳಿಗಳ ಮುಂದೆ ಲಾಂಗ್‌ ಝಳಪಿಸಿ ಆವಾಜ್ ಹಾಕಿದ್ದಾನೆ. ಚುನಾವಣೆ ಪ್ರಚಾರ, ಮತದಾನದಲ್ಲಿ ಪಾಲ್ಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೆಡಿಎಸ್ ಮುಖಂಡನಿಂದ ಕಾಂಗ್ರೆಸ್ ಬೆಂಬಲಿಗರಿಗೆ ಬೆದರಿಕೆ ಹಾಕಿದ ಆರೋಪವಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವದಲ್ಲಿ ಲಾಂಗು ಹಿಡಿದು ಬೆದರಿಕೆ ಹಾಕಿದ್ದಾನೆ. ಇದರ ವಿಡಿಯೋ ಸಾಕ್ಷಿ ಲಭ್ಯವಾಗಿದೆ.

ಕೋದಂಡಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ನಡೆಯುತಿದ್ದ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕೆ.ವಿ‌ ಶ್ರೀನಿವಾಸರೆಡ್ಡಿ (ಕೆವಿಎಸ್) ಎಂಬಾತ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾನೆ. “ಏ ನನ್ನ ಮಕ್ಳಾ, ಚುನಾವಣಾ ಪ್ರಚಾರ ಅಥವಾ ಮತದಾನದಲ್ಲಿ ಪಾಲ್ಗೊಂಡರೆ‌ ಕತ್ತರಿಸುತ್ತೇನೆ” ಎಂದು ಬೆದರಿಕೆ‌ ಹಾಕಿದ್ದಾನೆ ಎನ್ನಲಾಗಿದೆ. ಎದುರಾಳಿಗಳಾದ ಕಲ್ಯಾಣ್‌ ರೆಡ್ಡಿ ಹಾಗು ಆತನ ಕುಟುಂಬದವರನ್ನು ಅಟ್ಟಾಡಿಸಿ ಬೆದರಿಸಿದ್ದಾನೆ.

ಈ ಕುರಿತು ಶ್ರೀನಿವಾಸರೆಡ್ಡಿ ವಿರುದ್ಧ ಕಲ್ಯಾಣ್ ಕುಮಾರ್ ಪ್ರಾಣಬೆದರಿಕೆ ದೂರು ದಾಖಲಿಸಿದ್ದಾರೆ. ಕಲ್ಯಾಣ್ ಕುಮಾರ್ ಹಾಲಿ ಸಚಿವ ಡಾ. ಎಂ. ಸಿ‌ ಸುಧಾಕರ್ ಬೆಂಬಲಿಗರಾಗಿದ್ದು, ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಿಯತಮೆಯ ಮದುವೆ ದಿನವೇ ಪ್ರಿಯತಮನ ರುಂಡ-ಮುಂಡ ಕಟ್‌; ಕೊಲೆಯೋ? ಆತ್ಮಹತ್ಯೆಯೋ?

Love Case

ಬೀದರ್: ಪ್ರಿಯತಮೆಯ ಮದುವೆ ದಿನವೇ ಪ್ರಿಯತಮ ಮಸಣ (love case) ಸೇರಿದ್ದಾನೆ. ರೈಲ್ವೆ ಹಳಿ ಮೇಲೆ ರುಂಡ-ಮುಂಡ ತುಂಡರಿಸಿ ಬಿದ್ದ ಸ್ಥಿತಿಯಲ್ಲಿ ಯುವಕನ ಶವ (dead body found) ಪತ್ತೆಯಾಗಿದೆ. ಬೀದರ್‌ ನಗರದ ಹೊರವಲಯದ ನೌಬಾದ್ ಹೈವೇ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಬೀದರ್ ತಾಲೂಕಿನ ನಿಜಾಂಪೂರ್ ಗ್ರಾಮದ ವೆಂಕಟೇಶ ಕುಮಾರ್ (22) ಮೃತ ದುರ್ದೈವಿ.

ಬೀದರ್ ತಾಲೂಕಿನ ರಂಜೋಳ ಖೇಣಿ ಗ್ರಾಮದ ವೆಂಕಟೇಶ್‌ ನಿಜಾಂಪುರ ಗ್ರಾಮದ ಅಜ್ಜಿಯ‌ ಮನೆಯಲ್ಲಿ ವಾಸವಾಗಿದ್ದ. ಖಾಸಗಿ ಕಂಪನಿಯೊಂದರಲ್ಲಿ‌ ಕೆಲಸ ಮಾಡುತ್ತಿದ್ದ ವೆಂಕಟೇಶ್ ಎರಡು ವರ್ಷಗಳಿಂದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಕುಟುಂಬಸ್ಥರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಯುವತಿಯ ಮದುವೆ ದಿನವೇ ಯುವಕನ ಕೊಲೆ‌ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ 1 ಕಿ.ಮೀ. ದೂರದಲ್ಲಿ ಬೈಕ್ ಇದೆ. ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ. ಯುವತಿಯ ಕುಟುಂಬಸ್ಥರೇ ಕೊಲೆ ಮಾಡಿ, ರೈಲ್ವೆ ಟ್ರ್ಯಾಕ್‌ ಮೇಲೆ ಬಿಸಾಡಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನ್ಯೂಟೌನ್ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹುಡುಗಿಯ‌ ವಿಚಾರಕ್ಕೆ ಕೊಲೆಯಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ. ಹೀಗಾಗಿ ಈ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case: ಯಾದಗಿರಿ ಹಿಂದು ಯುವಕನ ಕೊಲೆ ಪ್ರಕರಣ; ಇಬ್ಬರ ವಿರುದ್ಧ ಎಫ್‌ಐಆರ್‌

Continue Reading

ಕ್ರೈಂ

Threat Case: ʻಚುನಾವಣೆ ಪ್ರಚಾರ ಮಾಡಿದ್ರೆ ಹುಷಾರ್!‌ʼ ಎಂದು ಲಾಂಗ್‌ ಝಳಪಿಸಿದ ಜೆಡಿಎಸ್‌ ಮುಖಂಡ

ಕೋದಂಡಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ನಡೆಯುತಿದ್ದ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕೆ.ವಿ‌ ಶ್ರೀನಿವಾಸರೆಡ್ಡಿ (ಕೆವಿಎಸ್) ಎಂಬಾತ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾನೆ. “ಏ ನನ್ನ ಮಕ್ಳಾ, ಚುನಾವಣಾ ಪ್ರಚಾರ ಅಥವಾ ಮತದಾನದಲ್ಲಿ ಪಾಲ್ಗೊಂಡರೆ‌ ಕತ್ತರಿಸುತ್ತೇನೆ” ಎಂದು ಬೆದರಿಕೆ‌ (Threat Case) ಹಾಕಿದ್ದಾನೆ ಎನ್ನಲಾಗಿದೆ.

VISTARANEWS.COM


on

threat case chikkaballapur
Koo

ಚಿಕ್ಕಬಳ್ಳಾಪುರ: ರಾಜಕೀಯ ವೈಷಮ್ಯದ (Political rivalry) ಹಿನ್ನೆಲೆಯಲ್ಲಿ‌ ಚಿಂತಾಮಣಿಯಲ್ಲಿ (Chintamani) ಜೆಡಿಎಸ್‌ (JDS) ನಾಯಕನೊಬ್ಬ ಎದುರಾಳಿಗಳ ಮುಂದೆ ಲಾಂಗ್‌ ಝಳಪಿಸಿ ಆವಾಜ್ (Threat Case) ಹಾಕಿದ್ದಾನೆ. ಚುನಾವಣೆ ಪ್ರಚಾರ, ಮತದಾನದಲ್ಲಿ ಪಾಲ್ಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೆಡಿಎಸ್ ಮುಖಂಡನಿಂದ ಕಾಂಗ್ರೆಸ್ ಬೆಂಬಲಿಗರಿಗೆ ಬೆದರಿಕೆ ಹಾಕಿದ ಆರೋಪವಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವದಲ್ಲಿ ಲಾಂಗು ಹಿಡಿದು ಬೆದರಿಕೆ ಹಾಕಿದ್ದಾನೆ. ಇದರ ವಿಡಿಯೋ ಸಾಕ್ಷಿ ಲಭ್ಯವಾಗಿದೆ.

ಕೋದಂಡಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ನಡೆಯುತಿದ್ದ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕೆ.ವಿ‌ ಶ್ರೀನಿವಾಸರೆಡ್ಡಿ (ಕೆವಿಎಸ್) ಎಂಬಾತ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾನೆ. “ಏ ನನ್ನ ಮಕ್ಳಾ, ಚುನಾವಣಾ ಪ್ರಚಾರ ಅಥವಾ ಮತದಾನದಲ್ಲಿ ಪಾಲ್ಗೊಂಡರೆ‌ ಕತ್ತರಿಸುತ್ತೇನೆ” ಎಂದು ಬೆದರಿಕೆ‌ ಹಾಕಿದ್ದಾನೆ ಎನ್ನಲಾಗಿದೆ. ಎದುರಾಳಿಗಳಾದ ಕಲ್ಯಾಣ್‌ ರೆಡ್ಡಿ ಹಾಗು ಆತನ ಕುಟುಂಬದವರನ್ನು ಅಟ್ಟಾಡಿಸಿ ಬೆದರಿಸಿದ್ದಾನೆ.

ಈ ಕುರಿತು ಶ್ರೀನಿವಾಸರೆಡ್ಡಿ ವಿರುದ್ಧ ಕಲ್ಯಾಣ್ ಕುಮಾರ್ ಪ್ರಾಣಬೆದರಿಕೆ ದೂರು ದಾಖಲಿಸಿದ್ದಾರೆ. ಕಲ್ಯಾಣ್ ಕುಮಾರ್ ಹಾಲಿ ಸಚಿವ ಡಾ. ಎಂ. ಸಿ‌ ಸುಧಾಕರ್ ಬೆಂಬಲಿಗರಾಗಿದ್ದು, ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು

ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ದಲಿತ ಹಿಂದು ಯುವಕನ‌ (Murder Case ) ಹತ್ಯೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಕೇಶ್ (22) ಮೃತ ದುರ್ದೈವಿ.

ಭಾನುವಾರ ರಾತ್ರಿ ರಾಕೇಶ್‌ ಊಟ ಮಾಡಲು ಹೊರಗೆ ಬಂದಿದ್ದ. ಅನ್ಯಕೋಮಿನವರ ಮನೆಯಲ್ಲಿ ರೊಟ್ಟಿ ಮಾರಾಟ ಮಾಡುತ್ತಿದ್ದರು. ಹೀಗಾಗಿ ಮನೆ ಸಮೀಪದಲ್ಲೇ ಇರುವ ರೊಟ್ಟಿ ಕೇಂದ್ರಕ್ಕೆ ರಾಕೇಶ್‌ ತೆರಳಿದ್ದ. ಈ ವೇಳೆ ಮನೆ ಬಾಗಿಲು ಬಡಿದು ರೊಟ್ಟಿ ಕೇಳಿದ್ದ, ಆದರೆ ರೊಟ್ಟಿ ಇಲ್ಲವೆಂದು ಕಳುಹಿಸಿದ್ದರು. ಮನೆಗೆ ವಾಪಸ್ ಬಂದ ರಾಕೇಶ್‌ ಖಾಲಿ ಹೊಟ್ಟೆಯಲ್ಲಿ ನಿದ್ರೆಗೆ ಜಾರಿದ್ದ.

ಸ್ವಲ್ಪ ಸಮಯದ ನಂತರ ರಾಕೇಶ್‌ ಮನೆಗೆ ಬಂದಿದ್ದ ಅನ್ಯಕೋಮಿನ ಯುವಕರು, ರೊಟ್ಟಿ ಕೇಳಲು ಮನೆಗೆ ಯಾಕೆ ಬಂದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಪ್ರಮುಖ ಆರೋಪಿ ಫೈಯಾಜ್ ಸೇರಿ ನಾಲ್ವರು ರಾಕೇಶ್‌ನ ಗುಪ್ತಾಂಗಕ್ಕೆ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ರಾಕೇಶ್‌ ಉಸಿರುಚೆಲ್ಲಿದ್ದಾನೆ ಎಂದು ರಾಕೇಶ್ ತಾಯಿ ಆರೋಪಿಸಿದ್ದಾರೆ.

ಇನ್ನು ಹಿಂದು ಯುವಕನ‌ ಹತ್ಯೆ ಮರೆಮಾಚಲು ಪೊಲೀಸ್ ಇಲಾಖೆ ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಭಾನುವಾರ ತಡರಾತ್ರಿ ಕೊಲೆ ನಡೆದಿದ್ದು, ಕೇಸ್ ದಾಖಲಿಸಿಕೊಂಡಿಲ್ಲ. ದಲಿತ ಕುಟುಂಬಕ್ಕೆ ಬಿಜೆಪಿ, ಹಿಂದು ಕಾರ್ಯಕರ್ತರು ಬೆಂಗಾವಲಾಗಿ ನಿಂತ ಕೂಡಲೇ ಎಚ್ಚೆತ್ತ ಪೊಲೀಸರು, ಕೊಲೆ ನಡೆದ 18 ಗಂಟೆಗಳ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಖುದ್ದು ಎಸ್‌ಪಿ ಜಿ.ಸಂಗೀತಾ ಅವರು ಸ್ಥಳದಲ್ಲಿ ನಿಂತು ಆಸ್ಪತ್ರೆಗೆ ರವಾನಿಸಿದ್ದರು.

ಪ್ರಕರಣ ಸಂಬಂಧ ಯಾದಗಿರಿ ಎಸ್‌ಪಿ ಜಿ.ಸಂಗೀತಾ ಪ್ರತಿಕ್ರಿಯಿಸಿ, ನಮಗೆ ಕೊಲೆ ನಡೆದಿರುವ ಬಗ್ಗೆ ಗೊತ್ತೇ ಇಲ್ಲ. ಕೊಲೆಯಾದ ಯುವಕನ ಕುಟುಂಬಸ್ಥರು ಇನ್ನೂ ಏನು ಹೇಳಿಲ್ಲ. ದೂರು ಕೊಡಿ ಎಂದರೆ ಅವರು ಬಂದಿಲ್ಲ. ಪ್ರಕರಣ ಸಂಬಂಧ ಮಾಹಿತಿ ಕೇಳಿದರೆ, ರೊಟ್ಟಿ ಕೇಂದ್ರಕ್ಕೆ ಹೋಗಿದ್ದ ಎನ್ನುತ್ತಿದ್ದಾರೆ. ಅವರ ಹಿರಿಯರ ಜತೆ ಚರ್ಚಿಸಿ ನಂತರ ಬಂದು ದೂರು ಕೊಡುತ್ತಾರೆ. ದೂರು ಕೊಟ್ಟ ನಂತರ ವಿಚಾರಣೆ ಮಾಡಿ ಆರೋಪಿಯನ್ನು ಬಂಧಿಸುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ | Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Continue Reading

ಕರ್ನಾಟಕ

Gurulinga Shivacharya Swamiji: ಕಾರು ಅಪಘಾತದಲ್ಲಿ ಬಂಗರಗಾ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

Gurulinga Shivacharya Swamiji: ಆಳಂದ ಪಟ್ಟಣದ ಬಸ್ ಡಿಪೋ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಲಿಂಗೈಕ್ಯರಾಗಿದ್ದಾರೆ.

VISTARANEWS.COM


on

Gurulinga Shivacharya Swamiji
Koo

ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಳಂದ ತಾಲೂಕಿನ ಸುಕ್ಷೇತ್ರ ಬಂಗರಗಾ ಹಿರೇಮಠದ ಪೀಠಾಧಿಪತಿ ಶ್ರೀ ಷ.ಬ್ರ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು (Gurulinga Shivacharya Swamiji) ಸೋಮವಾರ ಲಿಂಗೈಕ್ಯರಾಗಿದ್ದಾರೆ. ಅಪಘಾತದ ಬಳಿಕ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಜಿಲ್ಲೆಯ ಆಳಂದ ಪಟ್ಟಣದ ಬಸ್ ಡಿಪೋ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಶಿವಾ ಶಾಂತಲಿಂಗೇಶ್ವರ ಶಿವಾಚಾರ್ಯರು ಗಂಭೀರವಾಗಿ ಗಾಯಗೊಂಡಿದ್ದರು ಹೀಗಾಗಿ ಗುರುಲಿಂಗ ಶಿವಾಚಾರ್ಯರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಹಾಗೂ ಶಿವಾ ಶಾಂತಲಿಂಗೇಶ್ವರ ಶಿವಾಚಾರ್ಯರನ್ನು ಆಳಂದನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಚಿಕಿತ್ಸೆ ಫಲಿಸದೆ ಲಿಂಗೈಕ್ಯರಾಗಿದ್ದಾರೆ.

ಇದನ್ನೂ ಓದಿ | Cake Tragedy: ಕೇಕ್‌ ತಿಂದು ಬಾಲಕಿ ಸಾವಿನ ಪ್ರಕರಣ; ಸಾವಿಗೆ ನಿಖರ ಕಾರಣ ಬಯಲು

ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅಸ್ವಸ್ಥ

Tulsi Gowda

ಕಾರವಾರ: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅವರು ಅಸ್ವಸ್ಥರಾಗಿದ್ದು, ಅವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ಮನೆಯಲ್ಲಿ ವೃಕ್ಷಮಾತೆ ತುಳಸಿಗೌಡ (Tulsi Gowda) ಅವರು ಜಾರಿ ಬಿದ್ದಿದ್ದರಿಂದ ಕಾಲಿಗೆ ಪೆಟ್ಟಾಗಿತ್ತು.

ಲಕ್ಷಾಂತರ ಮರಗಳನ್ನು ಬೆಳೆಸಿ ವೃಕ್ಷಮಾತೆ ಎನಿಸಿಕೊಂಡಿರುವ ತುಳಸಿ ಗೌಡ ಅವರಿಗೆ ಸದ್ಯ ಐಸಿಯು‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಲು ಜಾರಿ ಬಿದ್ದ ಪರಿಣಾಮ ತುಳಸಜ್ಜಿ ಅಸ್ವಸ್ಥಗೊಂಡಿದ್ದಾರೆ.

Continue Reading
Advertisement
OM Puri
ಬಾಲಿವುಡ್8 mins ago

OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

malasia helicopter crash viral video
ವೈರಲ್ ನ್ಯೂಸ್14 mins ago

Viral video: ಗಾಳಿಯಲ್ಲಿ ಭಯಾನಕವಾಗಿ ಡಿಕ್ಕಿ ಹೊಡೆದುಕೊಂಡ ಹೆಲಿಕಾಪ್ಟರ್‌ಗಳು, 10 ಸಾವು

CSK vs LSG
ಕ್ರೀಡೆ45 mins ago

CSK vs LSG: ಇಂದಿನ ಲಕ್ನೋ-ಚೆನ್ನೈ ಪಂದ್ಯಕ್ಕೆ ಮಳೆ ಭೀತಿ

Bengaluru Karaga
ಬೆಂಗಳೂರು1 hour ago

Bengaluru Karaga: ಇಂದು ರಾತ್ರಿ ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

Rohit Sharma
ಕ್ರೀಡೆ1 hour ago

Rohit Sharma: ರೋಹಿತ್​ ಕೆನ್ನೆಗೆ ಕಿಸ್​ ಕೊಡಲು ಬಂದ ರಾಜಸ್ಥಾನ್​ ಕೋಚ್​; ವಿಡಿಯೊ ವೈರಲ್

Amit Shah
ಕರ್ನಾಟಕ2 hours ago

Amit Shah: ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ; ಒಂದೇ ಕ್ಷೇತ್ರದಲ್ಲಿ ಕ್ಯಾಂಪೇನ್!‌

bolero hit 3 death road accident raichur
ರಾಯಚೂರು2 hours ago

Road Accident: ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

Yashasvi Jaiswal
ಕ್ರೀಡೆ2 hours ago

Yashasvi Jaiswal: ಶತಕ ಬಾರಿಸಿ ಐಪಿಎಲ್​ನಲ್ಲಿ ನೂತನ ದಾಖಲೆ ಬರೆದ ಯಶಸ್ವಿ ಜೈಸ್ವಾಲ್​

Union Minister Pralhad Joshi election campaign in shiggavi taluk
ಹುಬ್ಬಳ್ಳಿ2 hours ago

Lok Sabha Election 2024: ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳಿಗೆ ಅಪಾಯ: ಪ್ರಲ್ಹಾದ್‌ ಜೋಶಿ

DCM DK Shivakumar election campaign for Chikkaballapur Lok Sabha constituency Congress candidate Raksha Ramaiah
ಚಿಕ್ಕಬಳ್ಳಾಪುರ2 hours ago

Lok Sabha Election 2024: ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಗೆಲ್ಲುವುದು ನಿಶ್ಚಿತ: ಶಿವಕುಮಾರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು17 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ19 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು21 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು23 hours ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌