Murder Case : ಬೆಂಗಳೂರಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ; ಬಾಳಸಂಗಾತಿ ಈಗ ಕೊಲೆಗಾರ್ತಿ - Vistara News

ಬೆಂಗಳೂರು

Murder Case : ಬೆಂಗಳೂರಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ; ಬಾಳಸಂಗಾತಿ ಈಗ ಕೊಲೆಗಾರ್ತಿ

Murder Case: ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

Murder case
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪತ್ನಿಯಿಂದಲೇ ಪತಿಯ (Murder case) ಕೊಲೆಯಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹೇಶ (39) ಮೃತ ದುರ್ದೈವಿ. ಪತ್ನಿ ತೇಜಸ್ವಿನಿಯಿಂದ ಈ ಕೃತ್ಯ ನಡೆದಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜಗಳ ಗಂಡ-ಹೆಂಡತಿ ಜಗಳವಾಡುತ್ತಿದ್ದರು. ಜಗಳದ ವೇಳೆ ತೇಜಸ್ವಿನಿ ಸಿಟ್ಟಿನಲ್ಲಿ ಮಹೇಶ್‌ನನ್ನು ತಳ್ಳಿದ್ದಾಳೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಮಹೇಶ್ ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವವಾಗಿ ಮಹೇಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ವೈಟ್ ಫೀಲ್ಡ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ಕೊಲೆ ಸಂಬಂಧ ಪೊಲೀಸರು ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ:Viral Video: ಒಂಟೆಯ ಮುಂದಿನ ಕಾಲು ಕಟ್ಟಿ ಚೂರಿಯಿಂದ ಇರಿದ; ಒಂಟೆ ಜಾಡಿಸಿ ಒದ್ದ ಹೊಡೆತಕ್ಕೆ ಸತ್ತೇ ಹೋದ!

ಪ್ರಣಯಕ್ಕೆ ಡಿಸ್ಟರ್ಬ್‌ ಆಯಿತೆಂದು ಕೋಪಗೊಂಡ ಪ್ರಿಯತಮ ಮಹಿಳೆಯ ಮಗುವನ್ನು ನೆಲಕ್ಕೆ ಬಡಿದು ಕೊಂದ!

ತಾಯಿ-ಮಗುವಿನ ಬಾಂಧ್ಯವ್ಯ ತುಂಬಾ ಅನ್ಯೋನ್ಯವಾದದ್ದು. ಮಗು ಎಷ್ಟೇ ಅತ್ತರೂ, ಹಠ ಹಿಡಿದರೂ ಕೂಡ ತಾಯಿ ಬೇಸರ ಮಾಡಿಕೊಳ್ಳದೆ ಅದನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಾಳೆ. ಒಂದು ವೇಳೆ ಸಿಟ್ಟಲ್ಲಿ ಹೊಡೆದರೂ ಸ್ವಲ್ಪ ಹೊತ್ತಿನಲ್ಲೇ ಮಗುವನ್ನು ಮುದ್ದಾಡುತ್ತಾಳೆ. ಹಾಗೇ ಬೇರೆ ಯಾರಾದರೂ ತನ್ನ ಮಗುವಿಗೆ ಹಾನಿ ಮಾಡಲು ಬಂದರೆ ತನ್ನ ಪ್ರಾಣವನ್ನು ಲೆಕ್ಕಿಸದೆ ಮಗುವನ್ನು ಕಾಪಾಡುತ್ತಾಳೆ. ಆದರೆ ಮಧ್ಯಪ್ರದೇಶದಲ್ಲಿ ಅಳುವುದನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಒಂದು ವರ್ಷದ ಮಗಳನ್ನು ಆಕೆಯ ತಾಯಿಯ ಎದುರೇ ಪ್ರಿಯಕರನ ಅಮಾನುಷವಾಗಿ ಕೊಲೆ (Baby Death) ಮಾಡಿದ್ದಾನೆ. ಮಧ್ಯಪ್ರದೇಶದ ಶಿವಪುರಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಈ ಮಹಿಳೆ ಪ್ರಿಯಕರನ ಜತೆ ಮಲಗಿದ್ದಳು. ಮಧ್ಯರಾತ್ರಿಯಲ್ಲಿ ಮಗು ಅಳಲು ಶುರು ಮಾಡಿದೆ. ಅಳುವುದನ್ನು ನಿಲ್ಲಿಸಲಿಲ್ಲ, ತನ್ನ ಪ್ರಣಯಕ್ಕೆ ತೊಂದರೆ ಆಯಿತು ಎಂದು ಸಿಟ್ಟುಗೊಂಡ ಪ್ರಿಯಕರ ಮೊದಲು ಮಗುವಿನ ಕಾಲುಗಳನ್ನು ಹಿಡಿದು ನೆಲಕ್ಕೆ ಬಡಿದಿದ್ದಾನೆ. ನಂತರ ಉಸಿರಾಟವನ್ನು ನಿಲ್ಲಿಸಲು ಬಾಯಿಯನ್ನು ಮುಚ್ಚಿದ್ದಾನೆ. ಇದರಿಂದ ಮಗು ಸಾವನಪ್ಪಿದೆ. ತಾಯಿ ತನ್ನ ಮಗಳ ನಿರ್ಜೀವ ದೇಹವನ್ನು ಹಿಡಿದುಕೊಂಡು ಇಡೀ ರಾತ್ರಿ ಅಳುತ್ತಾ ಕಳೆದರೆ, ಪ್ರೇಮಿ ಹತ್ತಿರದಲ್ಲೇ ನಿದ್ದೆ ಮಾಡುತ್ತಿದ್ದ! ಮರುದಿನ ಬೆಳಗ್ಗೆ ಅವನು ಸ್ಥಳದಿಂದ ಓಡಿಹೋಗಿದ್ದಾನೆ. ನಂತರ ತಾಯಿ ಈ ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದಾಳೆ.

ಮಾಹಿತಿಯ ಪ್ರಕಾರ, ಮೃತ ಮಗುವನ್ನು ಛಾಯಾ ಎಂದು ಗುರುತಿಸಲಾಗಿದೆ. ಆರೋಪಿ ಪ್ರೇಮಿ ಭೈಯಾಲಾಲ್ ಆದಿವಾಸಿ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಈ ಅವಧಿಯಲ್ಲಿ, ಅವನು ಜಯಂತಿ ಆದಿವಾಸಿ (35) ಅವಳನ್ನು ಭೇಟಿಯಾಗಿದ್ದಾನೆ. ಜಯಂತಿ ತನ್ನ ಪತಿ ಪರಮಾನಂದ್ ಮತ್ತು ಮೂವರು ಮಕ್ಕಳೊಂದಿಗೆ ಅಲ್ಲಿ ಕೆಲಸ ಮಾಡುತ್ತಿದ್ದಳು. ಸುಮಾರು 20 ದಿನಗಳ ಹಿಂದೆ ಜಯಂತಿ ತನ್ನ ಪತಿ ಮತ್ತು ಇಬ್ಬರು ಹಿರಿಯ ಮಕ್ಕಳಾದ ದಾಮಿನಿ (9) ಮತ್ತು ದೇವ್ (8) ಅವರನ್ನು ಬಿಟ್ಟು ತನ್ನ ಒಂದು ವರ್ಷದ ಮಗಳು ಛಾಯಾಳನ್ನು ಕರೆದುಕೊಂಡು ಪ್ರಿಯಕರ ಭೈಯಾಲಾಲ್ ಅವನೊಂದಿಗೆ ಶಿವಪುರಿಯಲ್ಲಿ ವಾಸವಾಗಿದ್ದಳು.

ಮಂಗಳವಾರ ರಾತ್ರಿ ಅವರು ಊಟ ಮಾಡಿ ಮಲಗಿದ ನಂತರ ಮಧ್ಯರಾತ್ರಿಯ ಸುಮಾರಿಗೆ, ಛಾಯಾ ಅಳಲು ಪ್ರಾರಂಭಿಸಿದಳು, ಭೈಯಾಲಾಲ್‌ನನ್ನು ಎಬ್ಬಿಸಿದಳು. ಇದರಿಂದ ಕೋಪಗೊಂಡ ಅವನು ಮಗುವನ್ನು ಹೊಡೆದನು, ಇದರಿಂದ ಮಗು ಜೋರಾಗಿ ಅತ್ತಿದೆ. ನಂತರ ಅವನು ಛಾಯಾಳ ಕಾಲುಗಳನ್ನು ಹಿಡಿದು ನೆಲಕ್ಕೆ ಹೊಡೆದ. ಇದರಿಂದಾಗಿ ಅವಳ ಬಾಯಿ ಮತ್ತು ತಲೆಯಿಂದ ತೀವ್ರ ರಕ್ತಸ್ರಾವವಾಯಿತು. ನಂತರ ಅವನು ಅವಳ ಬಾಯಿಯನ್ನು ಮುಚ್ಚಿ ಉಸಿರುಗಟ್ಟಿಸಿ ಕೊಂದನು. ಮರುದಿನ ಬೆಳಗ್ಗೆ ಭೈಯಾಲಾಲ್ ಗುಡಿಸಲಿನಿಂದ ಹೊರಟು ಹೋದಾಗ ಜಯಂತಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾಳೆ.

ಭೈಯಾಲಾಲ್ ಆದಿವಾಸಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಮೋರ್ ಕಲಾನ್ ಪೊಲೀಸ್ ಠಾಣೆಯ ಉಸ್ತುವಾರಿ ನೀತು ಸಿಂಗ್ ಹೇಳಿದ್ದಾರೆ. ಜಯಂತಿಯ ಅತ್ತೆಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಪತಿ ಪರಮಾನಂದ್ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Shiradi Landslide: ಶಿರಾಡಿ ಘಾಟಿ ರೈಲ್ವೇ ಹಳಿ ಮೇಲೆ ಮತ್ತೆ ಭೂಕುಸಿತ, ರೈಲು ಸಂಚಾರ ರದ್ದು; ಏರ್‌ಫೋರ್ಸ್‌ ಪರೀಕ್ಷೆ ತಪ್ಪಿದ್ದಕ್ಕೆ ಅಭ್ಯರ್ಥಿ ಕಣ್ಣೀರು

Shiradi Landslide: ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಹಾಸನ- ಮಂಗಳೂರು ರೈಲು ಮಾರ್ಗದ ಮೇಲೆ ಮರಗಳ ಸಮೇತವಾಗಿ ಭಾರಿ ಪ್ರಮಾಣದ ಮಣ್ಣು ಕುಸಿತವಾಗಿದೆ. ಕಿಲೋಮೀಟರ್ ಸಂಖ್ಯೆ 42/43ರ ಮಧ್ಯೆ ಭೂಕುಸಿತವಾಗಿದ್ದು, ರೈಲುಗಳ ಸಂಚಾರ ಸ್ಥಗಿತವಾಗಿದೆ.

VISTARANEWS.COM


on

shiradi landslide trains cancelled
Koo

ಹಾಸನ: ಬೆಂಗಳೂರು- ಮಂಗಳೂರು (Bangalore- Mangalore) ಸಂಪರ್ಕಿಸುವ ರೈಲ್ವೇ ಹಳಿ (Railway Track) ಮೇಲೆ ಶಿರಾಡಿ ಘಾಟಿ (Shiradi Ghat) ಪ್ರದೇಶದಲ್ಲಿ ನಿನ್ನೆ ರಾತ್ರಿ ಮತ್ತೆ ಭಾರಿ ಪ್ರಮಾಣದಲ್ಲಿ (Shiradi Landslide) ಭೂಕುಸಿತವಾಗಿದೆ. ಇದರಿಂದಾಗಿ ರೈಲುಗಳ ಸಂಚಾರ (trains Cancelled) ಅಸ್ತವ್ಯಸ್ತವಾಗಿದೆ. ರೈಲುಗಳು ರದ್ದಾಗಿದ್ದರಿಂದ ಏರ್‌ಫೋರ್ಸ್ ಪರೀಕ್ಷೆ (Airforce Exam) ತಪ್ಪಿಸಿಕೊಂಡು ಅಭ್ಯರ್ಥಿಯೊಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಅಳಲು ತೋಡಿಕೊಂಡಿದ್ದಾರೆ.

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಹಾಸನ- ಮಂಗಳೂರು ರೈಲು ಮಾರ್ಗದ ಮೇಲೆ ಮರಗಳ ಸಮೇತವಾಗಿ ಭಾರಿ ಪ್ರಮಾಣದ ಮಣ್ಣು ಕುಸಿತವಾಗಿದೆ. ಕಿಲೋಮೀಟರ್ ಸಂಖ್ಯೆ 42/43ರ ಮಧ್ಯೆ ಭೂಕುಸಿತವಾಗಿದ್ದು, ರೈಲುಗಳ ಸಂಚಾರ ಸ್ಥಗಿತವಾಗಿದೆ. ಕಳೆದ ವಾರವಷ್ಟೇ ಈ ಮಾರ್ಗದಲ್ಲಿ ದೊಡ್ಡ ಪರಮಾಣದ ಗುಡ್ಡ ಕುಸಿತವಾಗಿತ್ತು. ಸುಮಾರು 430 ಮಂದಿ ಕಾರ್ಮಿಕರು ಹಗಲು ಇರುಳು ಕೆಲಸ ಮಾಡಿ ಮಾರ್ಗ ತೆರವು ಮಾಡಿದ್ದರು.

ಮಣ್ಣು ಕುಸಿತದ್‌ ಪರಿಣಾಮ ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಸಕಲೇಶಪುರ, ಎಡಕುಮೇರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತುಹೋಗಿವೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ಪರದಾಟ ಅನುಭವಿಸಿದರು. ನಿನ್ನೆ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಪ್ರಯಾಣಿಕರಿಗೆ ಪರ್ಯಾಯ ವಾಹನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಲಾಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

ಪರೀಕ್ಷೆ ತಪ್ಪಿದ್ದಕ್ಕೆ ಬೇಸರ

ರೈಲು ವ್ಯತ್ಯಯದಿಂದ ಅಭ್ಯರ್ಥಿಯೊಬ್ಬರಿಗೆ ಏರ್‌ಫೋರ್ಸ್‌ ಪರೀಕ್ಷೆಗೆ ಹಾಜರಾಗುವುದು ತಪ್ಪಿಹೋಗಿದೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ವಿದ್ಯಾರ್ಥಿ ಬೇಸರ ತೋಡಿಕೊಂಡಿದ್ದಾರೆ. ಮಂಗಳೂರಿಗೆ ಏರ್‌ಫೋರ್ಸ್ ಪರೀಕ್ಷೆಗಾಗಿ ತೆರಳುತ್ತಿದ್ದ ರೋಹಿತ್ ಸಿಂಗ್ ರಾವತ್ ದಾರಿ ಮಧ್ಯೆ ಸಿಲುಕಿಕೊಂಡಿದ್ದಾರೆ.

ರಾಜಸ್ಥಾನದಿಂದ ಬೆಂಗಳೂರಿಗೆ ಬಂದು ಮಂಗಳೂರಿಗೆ ಟ್ರೈನ್‌ನಲ್ಲಿ ರಾವತ್‌ ಪ್ರಯಾಣಿಸುತ್ತಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಅಬ್ಬಕ್ಕ ಸರ್ಕಲ್ ಬಳಿಯ ಖಾಸಗಿ ಕಾಲೇಜಿನಲ್ಲಿ ಪರೀಕ್ಷೆ ನಡೆದಿದೆ. ಇದರಲ್ಲಿ ಭಾಗವಹಿಸಲು ರಾವತ್‌ಗೆ ಸಾಧ್ಯವಾಗಿಲ್ಲ. ʼಬೆಂಗಳೂರು- ಮಂಗಳೂರು ನಡುವಿನ ರೈಲು 4 ಗಂಟೆ ಕಾಲ ತಡವಾಗಿ ಚಲಿಸುತ್ತಿದೆ. ಈ ಕಾರಣದಿಂದಾಗಿ ನನ್ನ ಪರೀಕ್ಷಾ ಕೇಂದ್ರವನ್ನು ತಲುಪಲು ನನಗೆ ಸಾಧ್ಯವಾಗುವುದಿಲ್ಲ. ಇದರ ಹೊಣೆ ಹೊರುವವರು ಯಾರು?ʼ ಎಂದು ಪೋಸ್ಟ್ ಹಾಕಿ ಅಭ್ಯರ್ಥಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Namma Metro: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

Continue Reading

ಬೆಂಗಳೂರು

Namma Metro Ticket Price Hike: ಮೆಟ್ರೋ ಟಿಕೆಟ್‌ ದರದ ಮೇಲೆ ಕೈ ಇಟ್ರೋ! ಬೆಂಗಳೂರು ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ?

Namma Metro Ticket Price Hike: ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ (PSD) ಅಳವಡಿಸಲು ಚಿಂತಿಸಲಾಗಿದೆ. ಗ್ಲಾಸ್ ಅಳವಡಿಕೆಯಿಂದ ಒಂದು ನಿಲ್ದಾಣಕ್ಕೆ 6-7 ಕೋಟಿ ವೆಚ್ಚ ಆಗಲಿದೆ. ಹೀಗಾಗಿ ಟಿಕೆಟ್ ದರ ಏರಿಕೆ ಮಾಡಲು ಚಿಂತಿಸಲಾಗುತ್ತಿದೆ.

VISTARANEWS.COM


on

Namma Metro ticket price hike
Koo

ಬೆಂಗಳೂರು: ನಿತ್ಯ ವಸ್ತುಗಳ ಬೆಲೆ ಏರಿಕೆಗಳ (Price Hike) ನಡುವೆ ತತ್ತರಿಸುತ್ತಿರುವ ರಾಜಧಾನಿಯ (Bangalore) ಜನತೆಗೆ ಇನ್ನೊಂದು ಶಾಕ್‌ ನೀಡಲು ಸರ್ಕಾರ ಸಿದ್ಧವಾಗಿದೆ. ಮೆಟ್ರೋ ರೈಲಿನ ಟಿಕೆಟ್ ದರ ಏರಿಕೆಗೆ (Namma Metro Ticket Price Hike) ಬಿಎಂಆರ್‌ಸಿಎಲ್‌ (BMRCL) ಚಿಂತನೆ ನಡೆಸಿದೆ.

ಪ್ರಯಾಣಿಕರ ಸುರಕ್ಷತೆಗಾಗಿ ದರ ಏರಿಕೆ ಅನಿವಾರ್ಯ ಎಂದು ಬಿಎಂಆರ್‌ಸಿಎಲ್‌ ಹೇಳಿದೆ. ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ (PSD) ಅಳವಡಿಸಲು ಚಿಂತಿಸಲಾಗಿದೆ. ಗ್ಲಾಸ್ ಅಳವಡಿಕೆಯಿಂದ ಒಂದು ನಿಲ್ದಾಣಕ್ಕೆ 6-7 ಕೋಟಿ ವೆಚ್ಚ ಆಗಲಿದೆ. ಹೀಗಾಗಿ ಟಿಕೆಟ್ ದರ ಏರಿಕೆ ಮಾಡಲು ಚಿಂತಿಸಲಾಗುತ್ತಿದೆ.

ಈ ಹಿಂದಿನಿಂದಲೂ PSD ಅಳವಡಿಕೆ ಮಾಡಲು ಚಿಂತನೆ ನಡೆದಿತ್ತು. ಪ್ರತಿ ಸ್ಟೇಷನ್ನಿಗೂ ಅಳವಡಿಕೆ ಮಾಡಬೇಕೆಂದರೆ 6-7 ಕೋಟಿ ಬೇಕಾಗುತ್ತದೆ. ಈ‌ ಹಣವನ್ನು ಟಿಕೆಟ್ ದರ ಹೆಚ್ಚು ಮಾಡುವ ಮೂಲಕವೇ ಪಡೆಯಬೇಕಿದೆ. ಮೊನ್ನೆ ಆದ ಆತ್ಮಹತ್ಯೆ ಪ್ರಕರಣದ ಬಳಿಕ, ಎಲ್ಲಾ ಸ್ಟೇಷನ್‌ಗಳಲ್ಲಿ ಇದನ್ನು ಮಾಡಬೇಕು ಅಂತ ಚಿಂತನೆ ಇದೆ.

ಹಳೆ ಸ್ಟೇಷನ್‌ಗಳಲ್ಲಿ ಪಿಎಸ್‌ಡಿ ಅಳವಡಿಕೆ ಮಾಡಲು ತಾಂತ್ರಿಕವಾಗಿ ಸಮಸ್ಯೆಗಳಿವೆ. ಯಾಕೆಂದರೆ ಹಳೆಯ ಸಿಗ್ನಲ್ ಇದೆ. ಸಾಫ್ಟ್‌ವೇರ್‌ ಬದಲಾವಣೆಗೆ ಕೂಡ ವೆಚ್ಚವಾಗುತ್ತದೆ. ಎಲ್ಲ ನಿಲ್ದಾಣಗಳಲ್ಲಿ ಮಾಡಬೇಕೆಂದರೆ 70 ಕೋಟಿ ಬೇಕಾಗಬಹುದು. ಹೊಸ ಮೂರು ನಿಲ್ದಾಣ ಕೂಡಿ 70 ಮೆಟ್ರೋ ನಿಲ್ದಾಣಗಳು ಇವೆ. ಹೀಗಾಗಿ ದರ ಏರಿಕೆ ಬಗ್ಗೆ ಚಿಂತನೆ ಇದೆ ಅಷ್ಟೇ ಎಂದು ಮೆಟ್ರೋದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ ಚವಾನ್ ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ಮೆಟ್ರೋ ರೈಲಿನಡಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಪದೇಪದೆ ಅವಘಡಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು, ಸಿಬ್ಬಂದಿ ಎಚ್ಚರಗೊಂಡಂತೆ ಕಾಣುತ್ತಿಲ್ಲ. ಮೊನ್ನೆ ಮೆಟ್ರೋ ಟ್ರ್ಯಾಕ್‌ಗೆ 4 ವರ್ಷದ ಮಗು ಬಿದ್ದ ಬೆನ್ನಲ್ಲೇ ಆಗಸ್ಟ್‌ 3ರಂದು ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದೊಡ್ಡಕಲ್ಲಸಂದ್ರ ಬಳಿ ನಡೆದಿದೆ.

ಸಂಜೆ 5:45 ಸುಮಾರಿಗೆ ದೊಡ್ಡಕಲ್ಲಸಂದ್ರ ಬಳಿ ಘಟನೆ‌ ನಡೆದಿದೆ. ಇದರಿಂದ ಯಲಚೇನಹಳ್ಳಿ- ಸಿಲ್ಕ್ ಇನ್‌ಸ್ಟಿಟ್ಯೂಟ್ ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಕೊಣನಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟ ವ್ಯಕ್ತಿ ಯಾರು?, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಆ. 1ರಂದು ರಾತ್ರಿ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ 2ರಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕ, ಆಕಸ್ಮಿಕವಾಗಿ ಹಳಿ ಮೇಲೆ ಬಿದ್ದಿದ್ದ ಘಟನೆ ನಡೆದಿತ್ತು. ತಕ್ಷಣ ಭದ್ರತಾ ಸಿಬ್ಬಂದಿ ತುರ್ತು ರೈಲು ನಿಲುಗಡೆ ವ್ಯವಸ್ಥೆಯನ್ನು ಬಳಸುವ ಮೂಲಕ ರೈಲು ಸಂಚಾರವನ್ನು ನಿಲ್ಲಿಸಿದ್ದರು. ಬಳಿಕ ಬಾಲಕನನ್ನು ರಕ್ಷಣೆ ಮಾಡಲಾಗಿತ್ತು.

ದಾಖಲೆ ಸಂಖ್ಯೆಯ ಪ್ರಯಾಣಿಕರು

ಬೆಂಗಳೂರು: ಆಗಸ್ಟ್ 6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಡೆಸಿದ್ದು, ಈ ಹಿಂದಿನ ರೈಡರ್‌ಶಿಪ್ ದಾಖಲೆಗಳನ್ನು ಮುರಿದಂತಾಗಿದೆ. ನಮ್ಮ ಮೆಟ್ರೋದಲ್ಲಿ ಮಂಗಳವಾರ 8.26 ಲಕ್ಷ ಮಂದಿ ಪ್ರಯಾಣಿಸಿದ್ದು, ಈ ಸಾಧನೆಗೆ ಕಾರಣರಾದ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಧನ್ಯವಾದ ಹೇಳಿದೆ.

ಆ.6ರಂದು ಒಟ್ಟಾರೆ 8,26,883 ಪ್ರಯಾಣಿಕರಿಂದ ಮೆಟ್ರೋ ಬಳಕೆಯಾಗಿದೆ. ನಮ್ಮ ಮೆಟ್ರೋವನ್ನು ತಮ್ಮ ಪ್ರಯಾಣದ ಪಾಲುದಾರರನ್ನಾಗಿ ಮಾಡಿಕೊಂಡಿದ್ದಕ್ಕಾಗಿ ಮತ್ತು ವಾತಾವರಣದ ಕಾರ್ಬನ್‌ ಡೈ ಆಕ್ಸೈಡ್‌ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವನ್ನು ಬೆಂಬಲಿಸುತ್ತಿರುವುದಕ್ಕೆ ಪ್ರಯಾಣಿಕರಿಗೆ ಧನ್ಯವಾದಗಳು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಇದನ್ನೂ ಓದಿ: Metro City: ಬೆಂಗಳೂರಿಗೆ ‘ಮೆಟ್ರೊ ಸಿಟಿ’ ಸ್ಥಾನಮಾನ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ!

Continue Reading

ಪ್ರಮುಖ ಸುದ್ದಿ

BJP-JDS Padayatra: ಇಂದು ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ತೆರೆ, ಮೈಸೂರಿನಲ್ಲಿ ಬೃಹತ್‌ ಸಮಾವೇಶ

bjp-jds padayatra: ಮೈಸೂರಿನ ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣಗಳಲ್ಲಿ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ʼಮೈಸೂರು ಚಲೋʼ ಪಾದಯಾತ್ರೆಯನ್ನು ಒಂದು ವಾರದಿಂದ ನಡೆಸುತ್ತಿರುವ ಬಿಜೆಪಿ- ಜೆಡಿಎಸ್, ಅಂತಿಮ ಘಟ್ಟ ತಲುಪಿವೆ.

VISTARANEWS.COM


on

bjp-jds padayatra
Koo

ಮೈಸೂರು: ನಿನ್ನೆ ಸಿಎಂ ಸಿದ್ದರಾಮಯ್ಯ (CM Siddaramaiah) ಬೃಹತ್‌ ಜನಾಂದೋಲನ ಸಮಾವೇಶ (Janandolana) ನಡೆಸಿದ ಮೈಸೂರಿನಲ್ಲಿ (Mysore) ಇಂದು ದೋಸ್ತಿ ಪಕ್ಷಗಳ ಶಕ್ತಿ ಪ್ರದರ್ಶನ ನಡೆಯಲಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ (BJP-JDS Padayatra) ಸಮಾರೋಪ ಸಮಾವೇಶ ನಡೆಯಲಿದೆ.

ಮೈಸೂರಿನ ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣಗಳಲ್ಲಿ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ʼಮೈಸೂರು ಚಲೋʼ ಪಾದಯಾತ್ರೆಯನ್ನು ಒಂದು ವಾರದಿಂದ ನಡೆಸುತ್ತಿರುವ ಬಿಜೆಪಿ- ಜೆಡಿಎಸ್, ಅಂತಿಮ ಘಟ್ಟ ತಲುಪಿವೆ. ಪಾದಯಾತ್ರೆ ಮೈಸೂರು ತಲುಪುವ ಮುನ್ನ ಸಿಎಂ ರಾಜೀನಾಮೆ ನೀಡಬೇಕು. ಇಲ್ಲವಾದರೆ ಇನ್ನಷ್ಟು ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಆಗ್ರಹಿಸಿದ್ದರು.

ಇಂದು ಮೈಸೂರು ನಗರದಲ್ಲಿ ದೋಸ್ತಿ ಪಕ್ಷಗಳ ಪಾದಯಾತ್ರೆ ನಡೆಯಲಿದೆ. ಕೊಲಂಬಿಯಾ ಏಷಿಯಾ ಜಂಕ್ಷನ್‌‌ನಿಂದ ಪಾದಯಾತ್ರೆ ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಲಿದ್ದು, ಬೆಳಗ್ಗೆ 11.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಜಮಾವಣೆಯಾಗಲಿದೆ. ಬೃಹತ್ ಸಮಾವೇಶದ ಮೂಲಕ ಪಾದಯಾತ್ರೆಗೆ ತೆರೆ ಬೀಳಲಿದೆ. ಅಂದಾಜು 1 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ.

ಸಮಾವೇಶದಲ್ಲಿ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ.

ದಲಿತರ ಹಣವೇ ಬೇಕಿತ್ತೆ: ಅಶೋಕ್

ವಾಲ್ಮೀಕಿ ಹಗರಣ ಮಾಡಿ ದಲಿತರ ಹಣ ಹೊಡೆದು ಗ್ಯಾರಂಟಿಗೆ ಹಣ ಹೊಂದಿಸಬೇಕಿತ್ತಾ? ಬೇರೆ ಜಾತಿಯ ಹಣ ಬೇಕಿಲ್ಲ ಇವರಿಗೆ ಎಂದು ಟೀಕಿಸಿರುವ ವಿಪಕ್ಷ ನಾಯಕ ಆರ್.‌ ಅಶೋಕ್‌, ನಿಮಗೆ ಧೈರ್ಯ ಇದ್ದಿದ್ರೆ ವಿರೋಧ ಪಕ್ಷದಲ್ಲಿದಾಗ ನಮ್ಮ ದಾಖಲೆ ಬಿಡುಗಡೆ ಮಾಡಬೇಕಿತ್ತು ಎಂದಿದ್ದಾರೆ.

ಕಾಂಗ್ರೆಸ್ 14 ತಿಂಗಳ ಕಾಲ ಮಾಡಿದ ಭ್ರಷ್ಟಾಚಾರದ ಪುಸ್ತಕ ನಾವು ಬಿಡುಗಡೆ ಮಾಡುತ್ತೇವೆ. 14 ಅವತಾರಗಳಿವೆ. ಬ್ರಾಂಡ್ ಬೆಂಗಳೂರು ಬ್ಯಾಡ್ ಬೆಂಗಳೂರು ಮಾಡಿದ್ರಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಟೀಕಿಸಿದರು. ಸದನದಲ್ಲಿ ಮಾತಾಡಲು ನಮಗೆ ಅವಕಾಶ ಕೊಡಬೇಕಿತ್ತು. ಅದಕ್ಕೆ ನಮ್ಮ ಹೋರಾಟ ಎಂದರು.

ಸಿದ್ದರಾಮಯ್ಯ 5 ಗ್ಯಾರಂಟಿ ಜೊತೆಗೆ 50 ಗ್ಯಾರಂಟಿ ತನ್ನಿ. ಎಲ್ಲರಿಗೂ ಕೊಡಿ ನಮ್ಮ ವಿರೋಧ ಇಲ್ಲ. ಸಿದ್ದರಾಮಯ್ಯ ಬಹಳ ಭಯಬೀತರಾಗಿದ್ದಾರೆ. ಪಾಪ ಎರಡೂ ದಿನ ಮನೆಯಲ್ಲೆ ಕುಳಿತಿದ್ರು. ದುಡ್ಡು ಲೂಟಿ ಹೊಡೆಯುತ್ತಿದ್ದಾರೆ. ಸರ್ಕಾರ ದಾರಿ ತಪ್ಪಿದೆ. ವಾಲ್ಮೀಕಿ ಹಗರಣದ ಇಡಿ, ಸಿಬಿಐ, ತನಿಖೆ ನಡೆಯುತ್ತಿದೆ. ಹಣ ಸೀಜ್ ಮಾಡಿ ಜೈಲಿಗೆ ಹಾಕಿದ್ದಾರೆ. ಮುಡಾ ಹಗರಣದಲ್ಲಿ ಇನ್ನೂ ಯಾರು ಜೈಲಿಗೆ ಹೋಗಿಲ್ಲ ಎಂದರು.‌

ಭ್ರಷ್ಟಾಚಾರದ ಬಗ್ಗೆ ತಿಳಿಸುವ ಕೆಲಸ ವಿರೋಧ ಪಕ್ಷದ ಹಕ್ಕು.. ಆದರೆ ಕಾಂಗ್ರೆಸ್ ಪಕ್ಷ ಬೀದಿಗಳಿದು ಹೋರಾಟ ಮಾಡ್ತಿದೆ. ಅವರು ವಿಧಾನ ಸಭೆ ಒಳಗೆ ಹೇಳುವುದು ಕರ್ತವ್ಯ. ಸರ್ಕಾರ ಬೀದಿಗಿಳಿದು ನಾನು ಕಳ್ಳ ಅಲ್ಲ ಕಳ್ಳ ಅಲ್ಲ ಅಂತ ಸಾರುತ್ತಿದೆ. ನಮ್ಮದು ಹೋರಾಟ, ಕಾಂಗ್ರೆಸ್ ಅವರದು ಹಾರಾಟ. ಮಂತ್ರಿಗೆ ಇನ್ ಚಾರ್ಜ್ ಕೊಟ್ಟು ಸಭೆ ಮಾಡ್ತಾರೆ. ಕಾಂಗ್ರೆಸ್ ನಾಟಕ ಆಡುತ್ತಿದೆ ಎಂದು ಟೀಕಿಸಿದರು.

ಇದನ್ನೂ ಓದಿ: Congress Meeting: ನನ್ನದು ಹೋರಾಟದ ಬದುಕು, ಬಿಜೆಪಿ-ಜೆಡಿಎಸ್‌ ಎಷ್ಟೇ ಪಾದಯಾತ್ರೆ ಮಾಡಿದ್ರೂ ಜಗ್ಗಲ್ಲ ಎಂದ ಸಿಎಂ

Continue Reading

ಮಳೆ

Karnataka Weather : ಭಾರಿ ಮಳೆ ಸೂಚನೆ; ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಈ ದಿನ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಹಾಗೂ ಒಳನಾಡಿನಲ್ಲಿ ವಾತಾವರಣ ಹೇಗಿರಲಿದೆ? ಇಲ್ಲಿದೆ ಮಾಹಿತಿ

VISTARANEWS.COM


on

By

karnataka weather Forecast
Koo

ಬೆಂಗಳೂರು: ಆಗಸ್ಟ್‌ 10ರಂದು ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮೈಸೂರು-ಮಂಡ್ಯದಲ್ಲೂ ಭಾರಿ ಮಳೆ

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಸುರಿಯಲಿದೆ.

ಇದನ್ನೂ ಓದಿ: Theft Case : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯತಮ! ಮದುವೆಯಾಗಲು ಹೊರಟವರು ಜೈಲುಪಾಲು

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಜಿಲ್ಲೆಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ಬೆಂಗಳೂರಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28ºC ಮತ್ತು 21ºC ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
love jihad mohammad ishphaq vismaya
ಕರ್ನಾಟಕ3 mins ago

Vis: ಕೇರಳದ ಯುವಕನನ್ನು ಮದುವೆಯಾದ ಮಂಗಳೂರಿನ ಹಿಂದೂ ಯುವತಿ; ಹಿಂದೂ ಸಂಘಟನೆಗಳ ಹೋರಾಟ ನಿಷ್ಫಲ

Heart attack
ಉಡುಪಿ9 mins ago

Heart Attack : ಮಲಗಿದ್ದಲೇ ಹೃದಯ ಸ್ತಬ್ಧ! ನಾಲ್ಕೈದು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Paris Olympics
ಪ್ರಮುಖ ಸುದ್ದಿ21 mins ago

Paris Olympics Medal Table: ಪಾಕಿಸ್ತಾನ 1 ಪದಕ ಗೆದ್ದರೂ ಪದಕ ಪಟ್ಟಿಯಲ್ಲಿ ಮೇಲೆ, ಭಾರತ 6 ಪದಕ ಗೆದ್ದರೂ ಕೆಳಗೆ ಏಕೆ?

John Abraham slams actors for endorsing paan masala
ಬಾಲಿವುಡ್30 mins ago

John Abraham : ನಾನು ಸಾವನ್ನು ಮಾರಲ್ಲ ಎಂದು ಶಾರುಖ್ ಖಾನ್, ಅಜಯ್ ದೇವಗನ್‌ಗೆ ಪರೋಕ್ಷವಾಗಿ ತಿರುಗೇಟು ಕೊಟ್ಟ ಜಾನ್ ಅಬ್ರಹಾಂ!

ಚಿನ್ನದ ದರ38 mins ago

Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

Viral Video
Latest47 mins ago

Viral Video: ವೇಗವಾಗಿ ಬಂದು ಅಪ್ಪಳಿಸಿದ ಸ್ಕಾರ್ಪಿಯೋ; ಒಂದೇ ಕುಟುಂಬದ ಮೂವರು ಪಾರಾಗಿದ್ದೇ ಅಚ್ಚರಿ!

anganawadi worker
ಕೊಪ್ಪಳ53 mins ago

Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

Hindenburg
ವಾಣಿಜ್ಯ1 hour ago

Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

Indian Men’s Hockey Team
ಕ್ರೀಡೆ1 hour ago

Indian Men’s Hockey Team: ತವರಿಗೆ ಮರಳಿದ ಕಂಚು ವಿಜೇತ ಭಾರತ ಹಾಕಿ ತಂಡ; ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

Road Accident
ರಾಯಚೂರು1 hour ago

Road Accident : ಜವರಾಯನಂತೆ ಬಂದ ಟಾಟಾಏಸ್‌ ಚಾಲಕ; ಪಾದಯಾತ್ರೆ ಹೊರಟಿದ್ದ ತಾಯಿ ದುರ್ಮರಣ, ಮಗಳು ಗಂಭೀರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌