Site icon Vistara News

Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

Murder case In Bengaluur

ಬೆಂಗಳೂರು: ತನ್ನ ಮನೋಕಾಮನೆ ತಣಿಸಲು 48ರ ಮಹಿಳೆ, ಹುಡುಗರನ್ನು ಬಟ್ಟೆ ಬದಲಾಯಿಸುವಂತೆ ಬದಲಿಸುತ್ತಿದ್ದಳು. 20 ಹುಡುಗರ ಸಹವಾಸ ಹೊಂದಿದ್ದ ಆಕೆ ಅವರಿಗೆಲ್ಲ ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ ಹೆಸರು ಇಟ್ಟಿದ್ದಳು. ಆದರೆ ಕೊನೆಗೆ ಆಕೆಗೆ ಅದುವೇ ಮುಳುವಾಯಿತು. ಕಳೆದ ಏ. 19ರಂದು ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನ ಗಣೇಶ ನಗರದಲ್ಲಿ ಒಂಟಿ ಮಹಿಳೆಯ ಬರ್ಬರ (Murder Case) ಹತ್ಯೆಯಾಗಿತ್ತು. ಶೋಭಾ (48) ಎಂಬಾಕೆಯ ಮೃತದೇಹವು ಬೆಡ್‌ ರೂಮಿನಲ್ಲಿ ನಗ್ನ ಸ್ಥಿತಿಯಲ್ಲಿ ಬಿದ್ದಿತ್ತು. ಇದೀಗ ಕೊಲೆ ಪ್ರಕರಣವನ್ನು ಭೇದಿಸಿರುವ ಕೊಡಿಗೇಹಳ್ಳಿ ಪೊಲೀಸರು ಹೇರೋಹಳ್ಳಿ ಮೂಲದ ನವೀನ್ ಎಂಬಾತನನ್ನು ಬಂಧಿಸಿದ್ದಾರೆ. ತನಿಖೆಯಲ್ಲಿ ಮಹಿಳೆಯ ಕಾಮಕಥೆ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದ ಶೋಭಾ, ಕೊಡಿಗೆಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದಳು. ಇತ್ತ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್‌, ಕಾಲ್ ಗರ್ಲ್‌ಗಾಗಿ ಆ್ಯಪ್‌ಗಳನ್ನು ಬಳಕೆ ಮಾಡುವುದು, ಅವರ ಜತೆ ಚಾಟ್ ಮಾಡುವುದು ಮಾಡುತ್ತಿದ್ದ. ಈ ವೇಳೆ ಶೋಭಾಳ ಪರಿಚಯವಾಗಿತ್ತು. ಮೊದ ಮೊದಲು ನವೀನ್‌ಗೆ ಶೋಭಾಳ ಸಂಗ ಚೆನ್ನಾಗಿಯೇ ಇತ್ತು. ಆದರೆ ಶೋಭಾಳ ವಿಕೃತತೆ ಹೆಚ್ಚಾಗುತ್ತಲೇ ಹೋಗಿತ್ತು. ಪದೇಪದೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದಳು. ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಳು. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಸಿಟ್ಟಾದ ನವೀನ್‌ ಉಸಿರುಗಟ್ಟಿಸಿ ಕೊಂದು ಪರಾರಿ ಆಗಿದ್ದ.

ಫೋಟೋ ತೋರಿಸಿ ಹುಡುಗರಿಗೆ ಬ್ಲಾಕ್‌ಮೇಲ್‌

ಇನ್ನು ಶೋಭಾ ಹಿನ್ನೆಲೆ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. 48ರ ಶೋಭಾಳಿಗೆ ಯುವಕರೆಂದರೆ ಹುಚ್ಚು ಅಂತೆ. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿರುವ ಶೋಭಾ, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಕಾಲ್‌ ಗರ್ಲ್‌ ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು.

ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೆ ಅಲ್ಲದೆ ಅವರೇನಾದರೂ ಬೇರೆಯವರನ್ನು ಮದುವೆ ಆಗಲು ಮುಂದಾದರೆ ಅದನ್ನು ತಪ್ಪಿಸುತ್ತಿದ್ದಳು. ನೀ ಮದುವೆ ಆಗಬಾರದು, ನಾನು ಕರೆದಾಗ ಬರಬೇಕು ಎಂದು ಧಮ್ಕಿ ಹಾಕುತ್ತಿದ್ದಳು. ಹೀಗೆ ನಾಲ್ವರು ಯುವಕರ ಮದುವೆಯನ್ನು ನಿಲ್ಲಿಸಿದ್ದಾಳೆ.

ಕೊಲೆಯಾದ ಶೋಭಾ ಹಾಗೂ ಆರೋಪಿ ನವೀನ್

ಒಳ್ಳೆ ಕುಟುಂಬದಿಂದ ಬಂದಿದ್ದ ನವೀನ್‌ನ ಹಿಂದೆ ಬಿದ್ದ ಶೋಭಾ ಕಾಟ ಕೊಟ್ಟಿದ್ದಳು. ಮನೆಗೆ ಕರೆದಾಗ
ಬಂದಿಲ್ಲ ಎಂದರೆ ಬೆದರಿಕೆ ಹಾಕುತ್ತಿದ್ದಳು ಎನ್ನಲಾಗಿದೆ. ಆಕೆಗೆ ಹೆದರಿ ನವೀನ್‌ ಬಂದು ಹೋಗುತ್ತಿದ್ದ. ಇನ್ನೂ
ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version