Namma Metro : ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ 4 ವರ್ಷದ ಮಗು! ಮುಂದೇನಾಯ್ತು - Vistara News

ಬೆಂಗಳೂರು

Namma Metro : ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ 4 ವರ್ಷದ ಮಗು! ಮುಂದೇನಾಯ್ತು

Namma Metro : ತಾಯಿ ಜತೆಗೆ ಮೆಟ್ರೋಗೆ ಬಂದಿದ್ದ ಮಗುವೊಂದು ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ ಘಟನೆ ಬೈಯಪ್ಪನಹಳ್ಳಿಯಲ್ಲಿ (Baiyappanahalli Metro) ನಡೆದಿದೆ. ಅದೃಷ್ಟವಶಾತ್‌ ಮಗುವು ಪ್ರಾಣಾಪಾಯದಿಂದ ಪಾರಾಗಿದೆ.

VISTARANEWS.COM


on

Namma Metro
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro ) ಮಕ್ಕಳಿಗೆ ಸೇಫ್ಟಿ ಇಲ್ವಾ?? ಇಂತಹದೊಂದು ಅನುಮಾನ ಸಹಜವಾಗಿಯೇ ಕಾಡುತ್ತದೆ. ಕೆಲವೊಮ್ಮೆ ಸಿಬ್ಬಂದಿ ಇದ್ದರೂ ಅಚಾರ್ತುಯಗಳು ನಡೆದು ಹೋಗಿ ಬಿಡುತ್ತವೆ. ಸದ್ಯ ನಿನ್ನೆ ಗುರುವಾರ ನಾಲ್ಕು ವರ್ಷದ ಮಗುವೊಂದು ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದಿದೆ.

ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್‌ನಲ್ಲಿ (Baiyappanahalli Metro) ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೆಟ್ರೋ ರೈಲು ಬರಲು ನಾಲ್ಕೈದ ನಿಮಿಷಗಳು ಬಾಕಿ ಇದ್ವು. ಈ ವೇಳೆ ಆಟವಾಡುತ್ತಾ ಮಗು ಟ್ರ್ಯಾಕ್‌ ಮುಂದೆ ಬಂದಿದೆ. ಬಗ್ಗಿ ನೋಡುವಾಗ ಆಕಸ್ಮಿಕವಾಗಿ ಆಯತಪ್ಪಿ ಟ್ರ್ಯಾಕ್‌ಗೆ ಬಂದಿದೆ. ಮಗು ಟ್ರ್ಯಾಕ್‌ಗೆ ಬಿದ್ದ ತಕ್ಷಣ ಅಲರ್ಟ್‌ ಆದ ಮೆಟ್ರೋ ಸಿಬ್ಬಂದಿ, ಮೆಟ್ರೋ ಟ್ರ್ಯಾಕ್‌ನ ಪವರ್ ಕಟ್ ಮಾಡಿಸಿದ್ದಾರೆ.

ಇದನ್ನೂ ಓದಿ: Gold Rate Today: ಸ್ವರ್ಣಪ್ರಿಯರಿಗೆ ಶಾಕ್‌; ಮತ್ತೆ ಏರಿಕೆ ಕಂಡ ಚಿನ್ನದ ದರ

ಕೂಡಲೇ ಟ್ರ್ಯಾಕ್‌ಗೆ ಇಳಿದು ಮಗುವನ್ನು ರಕ್ಷಣೆ ಮಾಡಿದ್ದಾರೆ. ಅದೃಷ್ಟವಶಾತ್‌ ಮಗುವಿಗೆ ಯಾವುದೇ ಅಪಾಯವಾಗಿಲ್ಲ. ಇನ್ನೂ ಈ ಘಟನೆಯಿಂದ ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ನಿನ್ನೆ (ಆ.1) ರಾತ್ರಿ 9 ಗಂಟೆ 8 ನಿಮಿಷದಿಂದ 9 ಗಂಟೆ 16 ನಿಮಿಷದ ವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿ, 2 ರೈಲು ಸಂಚಾರವನ್ನು ಬಿಎಂಆರ್‌ಸಿಎಲ್‌ ಸ್ಥಗಿತಗೊಳಿಸಿತ್ತು. ಬಳಿಕ ಎಂದಿನಂತೆ ಮೆಟ್ರೋ ಸಂಚಾರಾರಂಭವಾಗಿತ್ತು.

ಇಬ್ಬರೂ ಮೆಟ್ರೋ ಸೆಕ್ಯುರಿಟಿ ಗಾರ್ಡ್‌ಗಳಿಂದ ಮಗುವಿನ ಪ್ರಾಣ ಉಳಿದಿದೆ. ಮಗುವಿಗೆ ಯಾವುದೇ ಗಾಯಗಳು ಆಗದ ರೀತಿಯಲ್ಲಿ ಮೆಟ್ರೋ ವಿದ್ಯುತ್ ಲೈನ್ ಆಫ್ ಮಾಡಿದ್ದಾರೆ. ಮೆಟ್ರೋ ಸೆಕ್ಯುರಿಟಿಗಳು, ಸಿಬ್ಬಂದಿ ಚೂರು ಯಾಮಾರಿದರೂ ಮಗುವಿನ ಪ್ರಾಣ ಹೋಗುತ್ತಿತ್ತು ಎಂಬ ಮಾಹಿತಿ ಇದೆ.

ಈ ಕುರಿತು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ. ನಿನ್ನೆ ಗುರುವಾರ ರಾತ್ರಿ 9 ಗಂಟೆ 8 ನಿಮಿಷಕ್ಕೆ ಈ ಘಟನೆ ಸಂಭವಿಸಿದೆ. 4 ವರ್ಷದ ಮಗು ಹಳಿಗೆ ಬಿದ್ದ ತಕ್ಷಣ ಭದ್ರತಾ ಸಿಬ್ಬಂದಿ ಅಲರ್ಟ್ ಆಗಿದ್ದಾರೆ. ಫ್ಲಾಟ್‌ಫಾರಂ ಎರಡು ಬದಿಯಿದ್ದ ತುರ್ತು ನಿಲುಗಡೆ ವ್ಯವಸ್ಥೆ ಬಳಕೆ ಮಾಡಲಾಗಿದೆ. ಸಣ್ಣಪುಟ್ಟ ಗಾಯ ಬಿಟ್ಟರೆ ಯಾವುದೇ ಗಂಭೀರ ಸಮಸ್ಯೆ ಮಗುವಿಗೆ ಆಗಿಲ್ಲ. 9 ಗಂಟೆ 15 ನಿಮಿಷಕ್ಕೆ ರೈಲು ಸಂಚಾರ ಪುನರ್ ಆರಂಭವಾಗಿದೆ. ಮಗುವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಹ ಅಗತ್ಯ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP-JDS Padayatra: ಮೈಸೂರು ಚಲೋಗೆ ಸರ್ಕಾರ ಅನುಮತಿ; ನಾಳೆ ಬೆಳಗ್ಗೆ ಚಾಲನೆ, ಪಾದಯಾತ್ರೆ ಮಾರ್ಗದ ವಿವರ ಇಲ್ಲಿದೆ

BJP-JDS Padayatra: ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ಶನಿವಾರ ಬೆಳಗ್ಗೆ 9.30ಕ್ಕೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಚಾಲನೆ ನೀಡಲಾಗುತ್ತದೆ.

VISTARANEWS.COM


on

BJP-JDS Padayatra
Koo

ಬೆಂಗಳೂರು: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. “ಭ್ರಷ್ಟ ಕಾಂಗ್ರೆಸ್ ತೊಲಗಿಸಿ” ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ಶನಿವಾರ ಬೆಳಗ್ಗೆ 9.30ಕ್ಕೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಚಾಲನೆ ನೀಡಲಾಗುತ್ತದೆ. ಏಳು ದಿನಗಳ ಪಾದಯಾತ್ರೆ ಸಾಗುವ ಮಾರ್ಗದ ವಿವರವನ್ನು ಇಲ್ಲಿ ನೀಡಲಾಗಿದೆ.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವರಾದ ಎಚ್‌.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಅವರು ಚಾಲನೆ ನೀಡಲಿದ್ದಾರೆ. ಒಟ್ಟು 124 ಕಿ.ಮೀ ಪಾದಯಾತ್ರೆ ಸಾಗಲಿದ್ದು, ಸಮಾರೋಪ ಸಮಾರಂಭ ಸೇರಿ ಒಟ್ಟು ಎಂಟು ದಿನಗಳ ಕಾರ್ಯಕ್ರಮದ ಮಾಹಿತಿ ಇಲ್ಲಿದೆ.

ಪಾದಯಾತ್ರೆ ಸಾಗುವ ವಿವರ

  • ಆ.3- ಕೆಂಗೇರಿಯಿಂದ ಹೊರಟು ಬಿಡದಿಯಲ್ಲಿ ವಾಸ್ತವ್ಯ
  • ಆ.4- ಬಿಡದಿಯಿಂದ ಹೊರಟು ಕೆಂಗಲ್‌ನಲ್ಲಿ ಹಾಲ್ಟ್
  • ಆ.5- ಕೆಂಗಲ್ ನಿಂದ ಹೊರಟು ನಿಡಘಟ್ಟದಲ್ಲಿ ವಾಸ್ತವ್ಯ
  • ಆ.6- ನಿಡಘಟ್ಟದಿಂದ ಹೊರಟು ಮಂಡ್ಯ
  • ಆ.7- ಮಂಡ್ಯದಿಂದ ಹೊರಟು ತೂಬಿನಕೆರೆಯಲ್ಲಿ ವಾಸ್ತವ್ಯ
  • ಆ.8- ತೂಬಿನ ಕೆರೆಯಿಂದ ಹೊರಟು ಶ್ರೀರಂಗಪಟ್ಟಣದಲ್ಲಿ ಹಾಲ್ಟ್
  • ಆ.9- ಶ್ರೀರಂಗಪಟ್ಟಣದಿಂದ ಹೊರಟು ಮೈಸೂರು ಹೊರವಲಯದಲ್ಲಿ ವಾಸ್ತವ್ಯ
  • ಆ.10- ಮೈಸೂರು ಹೊರವಲಯದಿಂದ ಕೇಂದ್ರ ನಾಯಕರ ಜತೆ ಪಾದಯಾತ್ರೆ ಹೊರಟು ಸಮಾರೋಪ ಸಮಾರಂಭದ ವೇದಿಕೆ ತಲುಪುವುದು.

ಶಾಂತಿಯುತವಾಗಿ ಪಾದಯಾತ್ರೆ ನಡೆಸಲು ಅನುಮತಿ: ಪರಮೇಶ್ವರ್

ಬೆಂಗಳೂರು: ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಅವರು ಪಾದಯಾತ್ರೆ ನಡೆಸುತ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ಕೊಡಲು ನಾವು ನಿರ್ಧರಿಸಿದ್ದೇವೆ ಎಂಧೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಇದನ್ನೂ ಓದಿ | Rakshit Shetty: ಯಶವಂತಪುರ ಪೊಲೀಸರ ಮುಂದೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ, ಕಾಪಿರೈಟ್‌ ಉಲ್ಲಂಘನೆ ವಿಚಾರಣೆ

ನಗರದಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದ ಕಮಿಷನರ್

ನಾಳೆ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಹಿನ್ನೆಲೆ‌ ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯಿಸಿ, ಎಲ್ಲಿಂದ ಯಾವ ರೀತಿ ಪಾದಯಾತ್ರೆ ಮಾಡುತ್ತಾರೋ ಅಂತ ಇನ್ನೂ ಗೊತ್ತಿಲ್ಲ. ನಗರದಲ್ಲಿ ಪ್ರತಿಭಟನೆ, ರ‍್ಯಾಲಿ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರು ಬಂದು ಇದುವರೆಗೂ ಅನುಮತಿ ಕೇಳಿಲ್ಲ. ಪ್ರತಿಭಟನೆಗೆ ಬೆಂಗಳೂರಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿ ಮುನಿಸು ಶಮನ, ಬಿಜೆಪಿ, ಜೆಡಿಎಸ್‌ ಒಗ್ಗೂಡಿ ಪಾದಯಾತ್ರೆ

ನವದೆಹಲಿ/ಬೆಂಗಳೂರು: ಮುಡಾ ಹಗರಣ ಸೇರಿ ಹಲವು ಭ್ರಷ್ಟಾಚಾರ ಆರೋಪ ಹೊತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೈಗೊಳ್ಳಲು ತೀರ್ಮಾನಿಸಿರುವ ಪಾದಯಾತ್ರೆಗೆ (BJP Padayatra) ಸಹಕಾರ ನೀಡುವುದಿಲ್ಲ ಎಂದು ಬಂಡಾಯದ ಬಾವುಟ ಹಾರಿಸಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರ ಮುನಿಸು ಈಗ ಶಮನವಾಗಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವರು ಮಾತುಕತೆ ನಡೆಸಿದ್ದು, “ಬಿಜೆಪಿ ಹಾಗೂ ಜೆಡಿಎಸ್‌ ಒಗ್ಗೂಡಿ ಶನಿವಾರದಿಂದ (ಆಗಸ್ಟ್‌ 3) ಪಾದಯಾತ್ರೆ ಆರಂಭಿಸಲಾಗುತ್ತದೆ” ಎಂದು ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | DK Shivakumar: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರಶ್ನೆಗಳ ಸವಾಲು, ಹೆಜ್ಜೆಗೆ ಒಂದು ಪ್ರಶ್ನೆ ಎಂದ ಡಿಕೆಶಿ

ದೆಹಲಿಯಲ್ಲಿ ಪ್ರಲ್ಹಾದ್‌ ಜೋಶಿ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದರು. “ಶನಿವಾರದಿಂದ ನಮ್ಮ ಪಾದಯಾತ್ರೆ ಪ್ರಾರಂಭ ಆಗಲಿದೆ. ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ. ಮೂಡಾ ಹಾಗೂ ವಾಲ್ಮೀಕಿ ಹಗರಣಗಳು ಇದಕ್ಕೆ ಜ್ವಲoತ ಉದಾಹರಣೆಗಳಾಗಿವೆ. ಕಾಂಗ್ರೆಸ್‌ನವರು ಕೂಡ ಮೂಡಾ ಹಗರಣದ ಬಗ್ಗೆ ಮಾತನಾಡುತ್ತಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಒಟ್ಟಿಗೆ ಪಾದಯಾತ್ರೆ ಕೈಗೊಳ್ಳುತ್ತವೆ. ಕುಮಾರಸ್ವಾಮಿ ಅವರ ಜತೆ ಇದ್ದ ಸಣ್ಣ ಕಮ್ಯುನಿಕೇಷನ್ ಗ್ಯಾಪ್ ಸರಿ ಆಗಿದೆ. ನಾವು ಕುಮಾರಸ್ವಾಮಿ ಅವರ ಹತ್ತಿರ ಮಾತಾಡಿದ್ದೇವೆ. 7 ದಿನಗಳ ಪಾದಯಾತ್ರೆ ಪೂರ್ಣಗೊಳ್ಳಲಿದೆ” ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದರು.

Continue Reading

ಬೆಂಗಳೂರು

Kidnap case : ಪತಿ ಮೇಲಿನ ಸಿಟ್ಟಿಗೆ ಗೆಳೆಯನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ!

Kidnap case : ಕೌಟುಂಬಿಕ ಕಲಹಕ್ಕೆ ಪತಿಯಿಂದ ದೂರಾಗಿದ್ದ ಪತ್ನಿ ಬೇರೊಂದು ಮದುವೆ ಆಗಿದ್ದಳು. ಈ ನಡುವೆ ಏಕಾಏಕಿ ಮನೆ ಬಳಿ ಆಕೆ ಸ್ವಂತ ಮಗುವನ್ನೇ ಕಿಡ್ನ್ಯಾಪ್‌ ಮಾಡಿ ಎಸ್ಕೇಪ್‌ ಆಗಿದ್ದಾಳೆ.

VISTARANEWS.COM


on

By

kidnap case
Koo

ಬೆಂಗಳೂರು: ಬೆಂಗಳೂರಿನಲ್ಲಿ ತಾಯಿಯಿಂದಲೇ ಮಗುವಿನ (Kidnap case) ಅಪಹರಣವಾಗಿದೆ. ಮಗುವನ್ನು ಕಿಡ್ನ್ಯಾಪ್ ಮಾಡಿ ಎಸ್ಕೇಪ್‌ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕೆಆರ್‌ ಪುರಂನ ಕ್ಯಾಸ ಗ್ರ್ಯಾಂಡ್ ರಾಯ್ಸಿ ಅಪಾರ್ಟ್ ಮೆಂಟ್ ಮುಂಭಾಗ ಬೆಳಗ್ಗೆ 8.30 ರ ಸುಮಾರಿಗೆ ಘಟನೆ ನಡೆದಿದೆ.

ಮಗುವಿನ ತಾಯಿ ಅನುಪಮ ಮತ್ತು ಆತನ ಸ್ನೇಹಿತನಿಂದ ಈ ಕೃತ್ಯ ನಡೆದಿದೆ. ಪತಿ ಸಿದ್ದಾರ್ಥ ಮತ್ತು ಪತ್ನಿ ಅನುಪಮ ನಡುವೆ ಕೌಟುಂಬಿಕ ಕಲಹವಿತ್ತು. ಹೀಗಾಗಿ ಈ ಇಬ್ಬರು ದೂರವಾಗಿದ್ದರು. ದೂರಾದ ಬಳಿಕ ಪತ್ನಿ ಅನುಪಮ ಬೇರೊಬ್ಬ ವ್ಯಕ್ತಿ ಜತೆಗೆ ಮದುವೆ ಆಗಿದ್ದರು.

ಈ ಹಿನ್ನೆಲೆಯಲ್ಲಿ ಕೋರ್ಟ್ ಮಗುವನ್ನು ಪತಿ ಸಿದ್ದಾರ್ಥ್‌ ವಶಕ್ಕೆ ಒಪ್ಪಿಸಿತ್ತು. ಆದರೆ ಇಂದು ಶುಕ್ರವಾರ ಅಪಾರ್ಟ್‌ಮೆಂಟ್ ಮುಂಭಾಗ ಸ್ಕೂಲ್‌ಗೆ ಹೋಗಲು ನಿಂತಿದ್ದಾಗ ಅನುಪಮ, ಸ್ನೇಹಿತ ಜತೆ ಸೇರಿ ಮಗುವನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಸದ್ಯ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮಗುವನ್ನು ಕಿಡ್ನ್ಯಾಪ್‌ ಮಾಡುವ ದೃಶ್ಯವು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Murder case : ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಕಿರಾತಕ

ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಮತಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವಳು. ಬೆಂಗಳೂರಿನ ಬಾಗಲಗುಂಟೆ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಘಟನೆ ನಡೆದಿದೆ. ಡೆತ್ ನೋಟ್ ಬರೆದಿಟ್ಟಿರುವ ಮಮತಾ, ನನ್ನ ಬಗ್ಗೆ ಕೆಟ್ಟದ್ದಾಗಿ ಏನಾದರೂ ಬಂದರೆ ನೀವೆ ಹೊಣೆ ಎಂದು ಉಲ್ಲೇಖಸಿದ್ದಾಳೆ. ಇಬ್ಬರು ಯುವಕರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Rakshit Shetty: ಯಶವಂತಪುರ ಪೊಲೀಸರ ಮುಂದೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ, ಕಾಪಿರೈಟ್‌ ಉಲ್ಲಂಘನೆ ವಿಚಾರಣೆ

Rakshit Shetty: ನಟ ರಕ್ಷಿತ್ ಶೆಟ್ಟಿ ಹಾಗೂ ಅವರ ಒಡೆತನದ ಪರಂವಹ ಸ್ಟುಡಿಯೋ ಮೇಲೆ ಎಫ್ಐಆರ್ ದಾಖಲಾಗಿತ್ತು. ʼಬ್ಯಾಚುಲರ್ ಪಾರ್ಟಿʼ ಸಿನಿಮಾದಲ್ಲಿ ʼಗಾಳಿಮಾತುʼ ಹಾಗು ʼನ್ಯಾಯ ಎಲ್ಲಿದೆʼ ಎಂಬ ಸಿನಿಮಾದ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಿಕೊಂಡ ಆರೋಪ ಅವರ ಮೇಲಿದೆ.

VISTARANEWS.COM


on

Koo

ಬೆಂಗಳೂರು: ಹಾಡುಗಳ ಕಾಪಿರೈಟ್ ಉಲ್ಲಂಘನೆ (Copy Right Violation) ಆರೋಪದಲ್ಲಿ ನಟ, ಸಿಂಪಲ್‌ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ವಿರುದ್ಧ ದಾಖಲಾಗಿದ್ದ ಎಫ್ಐಆರ್ (FIR) ಪ್ರಕರಣಕ್ಕೆ ಸಂಬಂಧಿಸಿ, ಯಶವಂತಪುರ ಪೊಲೀಸರ ಎದುರು ವಿಚಾರಣೆಗೆ ನಟ ರಕ್ಷಿತ್ ಶೆಟ್ಟಿ ಹಾಜರಾಗಿದ್ದಾರೆ.

ನಟ ರಕ್ಷಿತ್ ಶೆಟ್ಟಿ ಹಾಗೂ ಅವರ ಒಡೆತನದ ಪರಂವಹ ಸ್ಟುಡಿಯೋ ಮೇಲೆ ಎಫ್ಐಆರ್ ದಾಖಲಾಗಿತ್ತು. ʼಬ್ಯಾಚುಲರ್ ಪಾರ್ಟಿʼ ಸಿನಿಮಾದಲ್ಲಿ ʼಗಾಳಿಮಾತುʼ ಹಾಗು ʼನ್ಯಾಯ ಎಲ್ಲಿದೆʼ ಎಂಬ ಸಿನಿಮಾದ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಿಕೊಂಡ ಆರೋಪ ಅವರ ಮೇಲಿದೆ. ʼನ್ಯಾಯ ಎಲ್ಲಿದೆʼ ಟೈಟಲ್ ಸಾಂಗ್ ಮತ್ತು ʼಒಮ್ಮೆ ನಿನ್ನನ್ನೂ ಕಣ್ತುಂಬ ನೋಡುವಾಸೆʼ ಎಂಬ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ನವೀನ್ ಎಂಬವರು ದೂರು ಸಲ್ಲಿಸಿದ್ದರು.

ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಎರಡು ಹಾಡು ಅನುಮತಿಯಿಲ್ಲದೆ ಬಳಕೆ ಮಾಡಿಕೊಂಡ ಆರೋಪದ ಬಗ್ಗೆ ಪೊಲೀಸರು ಪ್ರಶ್ನಿಸಿದ್ದಾರೆ. ಸಿನಿಮಾ ತೆರೆ ಕಾಣುವುದಕ್ಕೂ ಮುನ್ನ MRT ಸಂಸ್ಥೆಯ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ರಕ್ಷಿತ್‌ ಉತ್ತರ ನೀಡಿದ್ದಾರೆ. ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ನಾವು ಹಾಡು ಬಳಕೆ ಮಾಡುವ ಕುರಿತು ಮಾತುಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ ನಮ್ಮ ಬಡ್ಜೆಟ್ ಅನ್ನು ಮೀರಿತ್ತು. ಎಂಆರ್‌ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರು ಮಾತುಕತೆಗೆ ತಯಾರಿರರಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಮಾಡಿದ್ದಾರೆ ಎಂದು ಉತ್ತರಿಸಿರುವ ರಕ್ಷಿತ್‌ ಶೆಟ್ಟಿ, ಚಿತ್ರದಲ್ಲಿ ಬಳಕೆಯಾಗಿರುವ ಹಾಡಿನ ತುಣುಕುಗಳನ್ನು ತೋರಿಸಿದ್ದಾರೆ. ಚಿತ್ರದಲ್ಲಿ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಜನವರಿ 26 ರಂದು ರಿಲೀಸ್‌ ಆಗಿತ್ತು. ಕಾಮಿಡಿ ಜಾನರ್‌ನ ಈ ಸಿನಿಮಾದಲ್ಲಿ ನಟ ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತ್ ಕುಮಾ‌ರ್, ನಟಿ ಸಿರಿ ರವಿಕುಮಾರ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಕಿರಿಕ್ ಪಾರ್ಟಿ’ ಚಿತ್ರದ ಬರಹಗಾರ ಅಭಿಜಿತ್ ಮಹೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದರು. ಕಿರಿಕ್‌ ಪಾರ್ಟಿಯ ಬರಹಗಾರರಲ್ಲಿ ಅಭಿಜಿತ್ ಮಹೇಶ್ ಕೂಡ ಒಬ್ಬರು. ಈ ಚಿತ್ರದ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗಿ ಬೆಳ್ಳಿ ಪರದೆಗೆ ಕಾಲಿಟ್ಟಿದ್ದರು. ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದು, ಅರವಿಂದ್ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿತ್ತು.

ಈ ಮುಂಚೆ ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಬಳಕೆಯಾದ ಒಂದು ಹಾಡಿನ ವಿರುದ್ಧ ಲಹರಿ ಮ್ಯೂಸಿಕ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿತ್ತು. ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಕಾಪಿರೈಟ್ ನಿಯಮ ಉಲ್ಲಂಘಿಸಿ ತಮ್ಮ ಸಂಸ್ಥೆಯ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ, ಅನುಮತಿ ಇಲ್ಲದೆ ಹಾಡು ಬಳಸಲಾಗಿದೆ ಎಂದು ಆರೋಪಿಸಿ ಲಹರಿ ಸಂಸ್ಥೆ ಕೇಸ್ ಹಾಕಿತ್ತು.

ಇದನ್ನೂ ಓದಿ | Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

Continue Reading

ಬೆಂಗಳೂರು

Murder case : ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಕಿರಾತಕ

Murder case : ಕೌಟುಂಬಿಕ ಕಲಹದಿಂದಾಗಿ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

Murder case
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Murder case) ಮತ್ತೊಂದು ಭೀಕರ ಹತ್ಯೆ ನಡೆದಿದೆ. ಪತಿಯಿಂದಲೇ ಪತ್ನಿಯ ಕೊಲೆಯಾಗಿದೆ. ಫಾತಿಮಾ‌ (34) ಕೊಲೆಯಾದವರು. ಪತಿ ತಬ್ರೇಜ್ ಪಾಷಾ ಆರೋಪಿಯಾಗಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಲವು ದಿನಗಳಿಂದ ಇಬ್ಬರ ಮಧ್ಯೆ ಜಗಳ‌ ಆಗಿತ್ತು. ಕೌಟುಂಬಿಕ ವಿಚಾರವಾಗಿ ಆಗಾಗ ಜಗಳ ನಡೆಯುತ್ತಲೇ ಇತ್ತು. ಅದೇ ರೀತಿ ಇಂದು ಬೆಳಗ್ಗೆ ಕೂಡ ಇಬ್ಬರ ಮಧ್ಯೆ ಜಗಳ ಶುರುವಾಗಿತ್ತು. ಶುಕ್ರವಾರ ಮನೆಗೆ ನುಗ್ಗಿದ ತಬ್ರೇಜ್‌, ಏಕಾಏಕಿ ಫಾತಿಮಾ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಬೆಳಗ್ಗೆ 8.30ರ ಸುಮಾರಿಗೆ ಪತ್ನಿ ಫಾತಿಮಾಗೆ ಚಾಕು ಇರಿದು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪರಾರಿ ಆಗಿರುವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ಹಂತಕನ ಓಡಾಟ

ಪತ್ನಿಯನ್ನು ಕೊಲ್ಲಲು ಮನೆಗೆ ಬಂದಿದ್ದ ತಬರೇಜ್‌ನಾ ಓಡಾಟವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಮಾಯಕನಂತೆ ಮನೆಗೆ ಬರುವ ತಬರೇಜ್ ಯಾರಿಗೂ ಡೌಟ್ ಬಾರದಂತೆ ರಸ್ತೆಯಲ್ಲಿ ಬೈಕ್ ಬಿಟ್ಟು ಸೈಲೆಂಟ್ ಆಗಿ ಒಳಗೆ ನುಗ್ಗಿದ್ದ. ಬಳಿಕ ಚಾಕು ತೆಗೆದು ಹತ್ಯೆ ಮಾಡಿ, ಚಾಕುವನ್ನು ಕೈನಲ್ಲಿಯೇ ಹಿಡಿದು ಹೊರ ಬಂದಿದ್ದಾನೆ. ಬಳಿಕ ಬೈಕ್ ಏರಿ ಎಸ್ಕೇಪ್ ಆಗಿದ್ದಾನೆ.

ಅಂಗವಿಕಲ ತಾಯಿ ಮುಂದೆಯೇ ಮಗಳ ಬರ್ಬರ ಹತ್ಯೆ

ಐದು ವರ್ಷಗಳ ಹಿಂದೆಯೇ ಈ ದಂಪತಿ ದೂರವಾಗಿದ್ದರು. ಆರೋಪಿ ತಬ್ರೇಜ್ ಪಾಷಾ ಕಳ್ಳತನ ಕೇಸ್, ಗಾಂಜಾ ಕೇಸ್‌ನಲ್ಲಿ ಭಾಗಿಯಾಗಿದ್ದ. ಇತ್ತ ಅಂಗವಿಕಲ ತಾಯಿಯೊಂದಿಗೆ ಇಬ್ಬರು ಮಕ್ಕಳ ಜತೆ ಫಾತಿಮಾ ವಾಸವಿದ್ದಳು. ಆದರೂ ಆಗಾಗ ಮನೆಗೆ ಬಂದು ಜಗಳ ಮಾಡುತ್ತಿದ್ದ. ಇತ್ತೀಚೆಗೆ ರಸ್ತೆಯೊಂದರ ಬಳಿ ಅಡ್ಡ ಹಾಕಿ ಜಗಳ ತೆಗೆದಿದ್ದ ತಬ್ರೇಜ್‌, ಕೊಲೆ ಮಾಡುತ್ತಿನಿ ಎಂದು ಹೇಳಿಕೊಂಡು ಓಡಾಡುತ್ತಿದ್ದ. ಹೀಗಾಗಿ ಫಾತಿಮಾ ತಾಯಿ, ತಬ್ರೇಜ್‌ ಏನಾದರೂ ಮಾಡುತ್ತಾನೆ ಎಂದೇ ಮನೆಗೆ ಸಿಸಿಟಿವಿ ಅಳವಡಿಸಿದ್ದರು. ಇಂದು ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದು ಜಗಳ ತೆಗೆದಿದ್ದ ತಬ್ರೇಜ್ ಪಾಷ, ಇಬ್ಬರು ಮಕ್ಕಳನ್ನು ಹೊರಗೆ ಕಳಿಸಿದ್ದ. ತಾಯಿಯ ಮುಂದೆಯೇ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿದ್ದ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ!

ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಹಾಡಹಗಲೆ ಯುವಕನ ಬರ್ಬರ ಹತ್ಯೆ (Murder case) ನಡೆದಿದೆ. ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ಘಟನೆ ನಡೆದಿದೆ. ಅಜಿತ್ ಕುಮಾರ್‌ (25) ಕೊಲೆಯಾದವನು.

ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು, ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಲೆ ಕೇಸ್‌ನಲ್ಲಿ ಆರೋಪಿಯಾಗಿದ್ದ ಅಜಿತ್‌

ಬ್ಲಡ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಅಜಿತ್‌, 2022ರಲ್ಲಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸಂಜೆ 4:15ರ ವೇಳೆಗೆ ಮನೆಯಿಂದ ಊಟ ಮುಗಿಸಿ ಹೊರಬಂದಿದ್ದ ಅಜಿತ್ ಮೇಲೆ ಏಕಾಏಕಿ ಹಂತಕರ ಗ್ಯಾಂಗ್‌ ಅಟ್ಯಾಕ್‌ ಮಾಡಿದೆ. ಮಚ್ಚು ಬೀಸಿದ ರಭಸಕ್ಕೆ ಅಜಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶೇಷಾದ್ರಿಪುರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಜಿತ್ ಹಾಗೂ ಸೋದರ ಕಾರ್ತಿಕ್ ಇಬ್ಬರು ಗಣೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಏರಿಯಾದಲ್ಲಿ ನಾನೇ ಡಾನ್ ಎಂದು ಅಜಿತ್‌ ಮೆರೆಯುತ್ತಿದ್ದ. ಸಮಯ ಕಾದು ನೋಡಿ ಎದುರಾಳಿಗಳು ಸೇಡು ತೀರಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
intel layoffs
ವಿದೇಶ3 mins ago

Intel Layoffs: ಆರ್ಥಿಕ ಬಿಕ್ಕಟ್ಟು- ಇಂಟೆಲ್‌ ಕಂಪನಿಯಿಂದ 18,000 ಉದ್ಯೋಗಿಗಳು ವಜಾ

Sexual Abuse
Latest8 mins ago

Sexual Abuse: ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಮಗು ಜನನ! ಆಘಾತಗೊಂಡು ಅಲ್ಲೇ ಕೂತಿದ್ದ ಬಾಲಕಿ

BJP-JDS Padayatra
ಕರ್ನಾಟಕ11 mins ago

BJP-JDS Padayatra: ಮೈಸೂರು ಚಲೋಗೆ ಸರ್ಕಾರ ಅನುಮತಿ; ನಾಳೆ ಬೆಳಗ್ಗೆ ಚಾಲನೆ, ಪಾದಯಾತ್ರೆ ಮಾರ್ಗದ ವಿವರ ಇಲ್ಲಿದೆ

1 lakh crore Rs dues paid to farmers in current sugar season says Pralhad Joshi
ದೇಶ23 mins ago

Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

Viral Video
Latest26 mins ago

Viral Video: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬಿದ್ದ ಕಬ್ಬಿಣದ ಗೇಟ್; ಶಾಕಿಂಗ್‌ ವಿಡಿಯೊ

ಸಿನಿಮಾ30 mins ago

OTT Releases: ಒಟಿಟಿಯಲ್ಲಿ ಈ ತಿಂಗಳು ಕಲ್ಕಿ, ಇಂಡಿಯನ್‌, ಟರ್ಬೊ ಜತೆಗೆ ಇನ್ಯಾವ ಹೊಸ ಚಿತ್ರ, ವೆಬ್‌ ಸಿರೀಸ್‌?

kidnap case
ಬೆಂಗಳೂರು39 mins ago

Kidnap case : ಪತಿ ಮೇಲಿನ ಸಿಟ್ಟಿಗೆ ಗೆಳೆಯನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ!

NEET UG 2024
ದೇಶ57 mins ago

NEET UG 2024: ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಎರಡು ನಗರಗಳಿಗೆ ಸೀಮಿತ; ಮರು ಪರೀಕ್ಷೆ ಅಗತ್ಯವಿಲ್ಲ-ಸುಪ್ರೀಂಕೋರ್ಟ್‌

ಸಿನಿಮಾ1 hour ago

Rakshit Shetty: ಯಶವಂತಪುರ ಪೊಲೀಸರ ಮುಂದೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ, ಕಾಪಿರೈಟ್‌ ಉಲ್ಲಂಘನೆ ವಿಚಾರಣೆ

MS Dhoni
ಕ್ರೀಡೆ1 hour ago

MS Dhoni: ನೆಚ್ಚಿನ ಆಟಗಾರನನ್ನು ಹೆಸರಿಸಿದ ಧೋನಿ; ಕೊಹ್ಲಿ, ರೋಹಿತ್​ ಅಲ್ಲ, ಮತ್ಯಾರು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌