Namma Metro : ಇಂದಿನಿಂದ 1 ವರ್ಷ ಬನ್ನೇರುಘಟ್ಟ ಮುಖ್ಯರಸ್ತೆಯ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ ರಸ್ತೆ ಬಂದ್‌ - Vistara News

ಬೆಂಗಳೂರು

Namma Metro : ಇಂದಿನಿಂದ 1 ವರ್ಷ ಬನ್ನೇರುಘಟ್ಟ ಮುಖ್ಯರಸ್ತೆಯ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ ರಸ್ತೆ ಬಂದ್‌

Lakkasandra Metro: ಲಕ್ಕಸಂದ್ರ ಮೆಟ್ರೋ ಕಾಮಗಾರಿ (Namma Metro) ಹಿನ್ನೆಲೆಯಲ್ಲಿ ಇಂದಿನಿಂದ (ಏ.1) ಮೈಕೋ ಸಿಗ್ನಲ್‌ನಿಂದ (Myco signal) ಆನೆಪಾಳ್ಯ ಜಂಕ್ಷನ್‌ವರೆಗೆ ವಾಹನಗಳ ಸಂಚಾರ ಇರುವುದಿಲ್ಲ.

VISTARANEWS.COM


on

Namma Metro Traffic advise
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬನ್ನೇರುಘಟ್ಟ ಮುಖ್ಯ ರಸ್ತೆಯ ಮೈಕೋ ಸಿಗ್ನಲ್‌ನಿಂದ (Myco signal) ಆನೆಪಾಳ್ಯ ಜಂಕ್ಷನ್‌ವರೆಗೆ (Anepalya junction) 1 ವರ್ಷ ವಾಹನ ಸಂಚಾರವನ್ನು ನಿಷೇಧ (No vehicular movement) ಮಾಡಲಾಗಿದೆ. ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ (Lakkasandra Metro) ಕಾಮಗಾರಿಯನ್ನು ಬಿಎಂಆರ್‌ಸಿಎಲ್‌ (BMRCL) ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗವನ್ನು ಮತ್ತು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ಏಪ್ರಿಲ್‌ 1ರಿಂದ ಮುಂದಿನ ಒಂದು ವರ್ಷ ಬಂದ್ ಮಾಡಲಾಗುತ್ತಿದೆ. ವಾಹನ ಸವಾರರ ಅನುಕೂಲಕ್ಕಾಗಿ ಬಿಎಂಆರ್​ಸಿಎಲ್ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ.

Namma Metro traffic

ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯನ್ನು ನಮ್ಮ ಮೆಟ್ರೋ (Namma Metro) ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರ ನಿರ್ಬಂಧ (Traffic restrictions) ಮಾಡಲಾಗುತ್ತಿದೆ. ಏಪ್ರಿಲ್‌ 1 ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುತ್ತದೆ. ಈ ಬಗ್ಗೆ ಬಿಎಂಆರ್‌ಸಿಎಲ್‌ ಪ್ರಕಟಣೆ (BMRTC) ಹೊರಡಿಸಿದೆ.

ಕಾಮಗಾರಿ ನಿರ್ಮಾಣಕ್ಕೆ ಅನುಕೂಲವಾಗುವಂತೆ ಸಂಚಾರ ನಿರ್ಬಂಧವಾಗಿರುವ ಕಾರಣಕ್ಕೆ ಪರ್ಯಾಯ ಮಾರ್ಗ ಬಳಸುವಂತೆ ಬಿಎಂಆರ್‌ಸಿಎಲ್‌ ವಿನಂತಿ ಮಾಡಿದೆ. ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್‌ ಕಡೆಯಿಂದ ಚಲಿಸುವ ವಾಹನಗಳು ಆನೆಪಾಳ್ಯ ಜಂಕ್ಷನ್‌ ಕಡೆಗೆ ಹೋಗಬೇಕಾದರೆ ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಭೋಷ್‌ ಲಿಂಕ್‌ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್‌ ತಲುಪಿ ಎಡಕ್ಕೆ ತಿರುಗಿಕೊಳ್ಳಬೇಕು.

ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೆ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್‌ ಗಾರ್ಡನ್‌ನ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು.

ಇದನ್ನೂ ಓದಿ: Acid Attack : ಆಸ್ತಿ ವಿಚಾರಕ್ಕೆ ಯುವಕನಿಗೆ ಆ್ಯಸಿಡ್‌ ಎರಚಿದ ಸಂಬಂಧಿಕರು; ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಫೈಟಿಂಗ್‌

Namma Metro : ನಮ್ಮ ಮೆಟ್ರೋ 3ನೇ ಹಂತಕ್ಕೆ ಸಂಪುಟ ಒಪ್ಪಿಗೆ; ಜೆ.ಪಿ. ನಗರದಿಂದ ಹೆಬ್ಬಾಳಕ್ಕೆ ನೇರ ಸಂಪರ್ಕ

ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ‌, ಟ್ರಾಫಿಕ್‌ ಸಂಕಷ್ಟಗಳಿಗೆ ಪರಿಹಾರ ರೂಪವಾಗಿ ಬಂದಿರುವ ನಮ್ಮ ಮೆಟ್ರೋದ (Namma Metro) ಮೂರನೇ ಹಂತದ (Namma Metro Third Phase) ಯೋಜನೆಯ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ (Cabinet Meeting) ನೀಡಿದೆ. ಬೆಂಗಳೂರಿನ ಜೆ.ಪಿ. ನಗರದಿಂದ ಹೆಬ್ಬಾಳವನ್ನು (JP Nagar to Hebbala) ಸಂಪರ್ಕಿಸುವ ಸುಮಾರು 44 ಕಿ.ಮೀ. ಉದ್ದದ ಹೊರ ವರ್ತುಲ ಮೆಟ್ರೋ ರಿಂಗ್‌ ರೋಡ್‌ ಇದಾಗಿದೆ. ಈ ಯೋಜನೆಯನ್ನು ಸುಮಾರು 15,611 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮೆಟ್ರೋ ಮೂರನೇ ಹಂತ ಹಲವು ಪ್ರಮುಖ ಭಾಗಗಳನ್ನು ಸಂಪರ್ಕಿಸುತ್ತದೆ. ಹೆಬ್ಬಾಳ – ಗೊರುಗುಂಟೆಪಾಳ್ಯ-ಕನಕಪುರ ರಸ್ತೆ – ಜೆಪಿ ನಗರ ಮೆಟ್ರೋ ನಿಲ್ದಾಣಗಳು ಇದರಲ್ಲಿ ಬರಲಿವೆ. ಇದಕ್ಕೆ ಬೇಕಾಗುವ ಖರ್ಚಿನ ಮೊತ್ತದಲ್ಲಿ ಶೇ. 15-16 ಭಾಗವನ್ನು ಕೇಂದ್ರ ಸರ್ಕಾರ ನೀಡುತ್ತದೆ. ಉಳಿದ ಶೇ. 85 ಭಾಗವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಸಂಪುಟ ಸಭೆಯ ಬಳಿಕ ವಿವರ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Namma Metro Phase 3

ಏನಿದು ಮೆಟ್ರೋ ಮೂರನೇ ಹಂತದ ಯೋಜನೆ, ಯಾವ್ಯಾಗ ಭಾಗವನ್ನು ಸಂಪರ್ಕಿಸುತ್ತದೆ

ಮೆಟ್ರೋ ಮೂರನೇ ಹಂತ ಒಟ್ಟು 81 ಕಿಮೀ. ಉದ್ದದ ಮೂರು ಕಾರಿಡಾರ್‌ಗಳನ್ನು ಒಳಗೊಂಡ ಯೋಜನೆಯಾಗಿದೆ.
ಕಾರಿಡಾರ್‌ – 1 : ಜೆ.ಪಿ. ನಗರ 4ನೇ ಹಂತದಿಂದ ಕೆಂಪಾಪುರವರೆಗಿನ 32.15 ಕಿ.ಮೀ.: 22 ನಿಲ್ದಾಣಗಳು
ಕಾರಿಡಾರ್‌ – 2: ಹೊಸ ಹಳ್ಳಿಯಿಂದ ಮಾಗಡಿ ರಸ್ತೆಯ ಕಡಬಗೆರೆವರೆಗೆ 12 ಕಿ.ಮೀ.: 9 ನಿಲ್ದಾಣಗಳು
ಕಾರಿಡಾರ್‌ – 3: ಸರ್ಜಾಪುರದಿಂದ ಹೆಬ್ಬಾಳವರೆಗೆ 37 ಕಿ. ಮೀ. ಅಂತರ ಹೊಂದಿದೆ.

ರಾಜ್ಯ ಸಚಿವ ಸಂಪುಟವು ಸದ್ಯಕ್ಕೆ ಮೊದಲ ಎರಡು ಕಾರಿಡಾರ್‌ಗಳಿಗೆ ಅನುಮತಿಯನ್ನು ನೀಡಿದೆ.

ಉದ್ದೇಶಿತ ಕಾರಿಡಾರ್‌ – 1ರ ಅಡಿ ಜೆ.ಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ 32.15 ಕಿ. ಮೀ. ಮಾರ್ಗದಲ್ಲಿ 22 ನಿಲ್ದಾಣಗಳು ಬರಲಿವೆ ಮತ್ತು ಕಾರಿಡಾರ್‌ – 2ರಲ್ಲಿ ಹೊಸ ಹಳ್ಳಿಯಿಂದ ಮಾಗಡಿ ರಸ್ತೆಯ ಕಡಬಗೆರೆವರೆಗೂ 12. ಕಿ. ಮೀ. ಮಾರ್ಗದಲ್ಲಿ 9 ನಿಲ್ದಾಣಗಳು ಬರಲಿವೆ. ಈ ಯೋಜನೆ ಉಪ ನಗರ ರೈಲು, ಬಸ್‌ ಡಿಪೋಗಳೂ ಸೇರಿದಂತೆ 9 ಕಡೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಸುಮನ ಹಳ್ಳಿ ಜಂಕ್ಷನ್‌ ಇಂಟರ್‌ಚೇಂಜ್‌ ನಿಲ್ದಾಣವಾಗಿ ಕಾರ್ಯ ನಿರ್ವಹಿಸಲಿದೆ.

ಹೆಬ್ಬಾಳದಲ್ಲಿ ಕೊನೆಗೊಳ್ಳುವ ಕಾರಿಡಾರ್‌ – 1 ಏರ್‌ಪೋರ್ಟ್‌ ಲೈನ್‌ನ (ನೀಲಿ ಮಾರ್ಗ) ಹಂತ – 2 ಮಾರ್ಗದೊಂದಿಗೆ ಸಂಪರ್ಕ ಬೆಸೆಯಲಿದೆ. ಇದು ಕೆ. ಆರ್‌. ಪುರದಿಂದ ಹೆಬ್ಬಾಳ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗಲಿದೆ. ಜೆ. ಪಿ. ನಗರದ ನಿಲ್ದಾಣವು ಹಸಿರು ಮಾರ್ಗದ ಜೆ. ಪಿ. ನಗರ ನಿಲ್ದಾಣ, ಕಾಮಾಕ್ಯ ಮೆಟ್ರೋ ನಿಲ್ದಾಣ ಹಾಗೂ ನೇರಳೆ ಮಾರ್ಗದ ಮೈಸೂರು ರಸ್ತೆ ನಿಲ್ದಾಣ, ಸುಮನಹಳ್ಳಿ ಕ್ರಾಸ್‌ ಎರಡೂ ಹೊಸ ಕಾರಿಡಾರ್‌ಗಳಿಗೆ ಸಂಪರ್ಕ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ : Namma Metro : ಹಳಿಯಲ್ಲಿ ಯುವಕನ ಹುಚ್ಚಾಟ; 27 ನಿಮಿಷ ಮೆಟ್ರೋ ಸಂಚಾರ ಸ್ಥಗಿತ

ಕಾರಿಡಾರ್‌ ಒಂದರಲ್ಲಿ ಬರುವ ನಿಲ್ದಾಣಗಳು ಇವು

ಜೆ.ಪಿ. ನಗರ-ಹೆಬ್ಬಾಳ ಮಾರ್ಗ: ಜೆ.ಪಿ. ನಗರ 4ನೇ ಹಂತ, ಜೆ.ಪಿ ನಗರ 5ನೇ ಹಂತ, ಜೆ.ಪಿ ನಗರ, ಕದಿರೇನ ಹಳ್ಳಿ, ಕಾಮಾಕ್ಯ ಬಸ್‌ ನಿಲ್ದಾಣ, ಹೊಸಕೆರೆ ಹಳ್ಳಿ ಕ್ರಾಸ್‌, ಪಿಇಎಸ್‌ ಕಾಲೇಜು, ಮೈಸೂರು ರಸ್ತೆ ನಾಗರಬಾವಿ ವೃತ್ತ, ವಿನಾಯಕ ಲೇಔಟ್‌, ಅಂಬೇಡ್ಕರ್‌ ಇನ್‌ಸ್ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌, ಬಿಡಿಎ ಕಾಂಪ್ಲೆಕ್ಸ್‌, ಸುಮನಹಳ್ಳಿ ಕ್ರಾಸ್‌, ಚೌಡೇಶ್ವರಿ ನಗರ, ಫ್ರೀಡಂ ಫೈಟರ್‌ ಕ್ರಾಸ್‌, ಕಂಠೀರವ ಸ್ಟೇಡಿಯಂ, ಪೀಣ್ಯ, ಬಾಹುಬಲಿ ನಗರ, ಬಿಇಎಲ್‌ ವೃತ್ತ, ಪಟೇಲಪ್ಪ ಲೇಔಟ್‌, ಹೆಬ್ಬಾಳ, ಕೆಂಪಾಪುರ

ಕಾರಿಡಾರ್‌ -2ರಲ್ಲಿ ಬರುವ ಮೆಟ್ರೋ ನಿಲ್ದಾಣಗಳು ಇವು

ಹೊಸಹಳ್ಳಿ-ಕಡಬಗೆರೆ ಮಾರ್ಗ: ಹೊಸ ಹಳ್ಳಿ, ಕೆಎಚ್‌ಬಿ ಕಾಲೋನಿ, ವಿನಾಯಕ ನಗರ, ಸುಮನ ಹಳ್ಳಿ ಕ್ರಾಸ್‌, ಸುಂಕದ ಕಟ್ಟೆ, ಹೇರೋ ಹಳ್ಳಿ, ಬ್ಯಾಡರ ಹಳ್ಳಿ, ಫಾರೆಸ್ಟ್‌ ಗೇಟ್‌, ಕಡಬಗೆರೆ

ಕಾರಿಡಾರ್‌ -3ರಲ್ಲಿ ಬರುವ ಮೆಟ್ರೋ ನಿಲ್ದಾಣಗಳು

ಸರ್ಜಾಪುರದಿಂದ ಹೆಬ್ಬಾಳವರೆಗಿನ ಈ ಮೆಟ್ರೋ ಮಾರ್ಗವು 37 ಕಿ.ಮೀ. ಅಂತರ ಹೊಂದಿದೆ. ಇದರಲ್ಲಿ 18.60 ಎತ್ತರಿಸಿದ ಮಾರ್ಗವಾದರೆ, 16.80 ಕಿ. ಮೀ. ಭೂಗತ ಮಾರ್ಗವನ್ನು ಹೊಂದಿದೆ. ಈ ಯೋಜನೆಗೆ ಒಟ್ಟು 15 ಸಾವಿರ ಕೋಟಿ ಅಂದಾಜು ಮೊತ್ತ ನಿಗದಿಪಡಿಸಲಾಗಿದೆ. ಇದು ಈ ಸಂಪುಟ ಒಪ್ಪಿಗೆ ನೀಡಿದ ಯೋಜನೆಯಲ್ಲಿ ಸೇರಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಕರ್ನಾಟಕ

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

Murder Case: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ಕೊಲೆ ನಡೆದಿದೆ. ವಿಚ್ಛೇದನ ಪಡೆದು ದೂರವಾಗುತ್ತಾಳೆ ಎಂದು ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿರುವ ಘಟನೆ (Murder Case) ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ನಡೆದಿದೆ. ಹೆಂಡ್ತಿ ತನ್ನನ್ನು ಬಿಟ್ಟು ಬೇರೆಯಾಗುತ್ತಾಳೆ ಎಂದು ಬೇಸರದಿಂದ ಪತಿ ಚಾಕು ಇರಿದು ಕೊಲೆ ಮಾಡಿದ್ದಾನೆ.

ಶಿಯಾಪತ್ ಉನ್ನಿಸ ಕೊಲೆಯಾದ ಮಹಿಳೆ. ನೂರುಲ್ಲಾ ಪತ್ನಿಯ ಕೊಲೆ ಮಾಡಿದ ಗಂಡ. ಆರೋಪಿ ನೂರುಲ್ಲಾನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಗಂಡ-ಹೆಂಡತಿ ವಿಚ್ಛೇದನ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಕಳೆದ ಐದು ದಿನಗಳಿಂದ ಹೆಂಡತಿಯಿಂದ ಗಂಡ ದೂರವಿದ್ದ. ಸೋಮವಾರ ಹೆಂಡತಿ ಉನ್ನೀಸಾ ಮನೆ ಖಾಲಿ ಮಾಡುತ್ತಿದ್ದಳು. ಈ ವೇಳೆ ಏಕಾಏಕಿ ಗಂಡ ಬಂದು ಹೆಂಡತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆ

ರಾಯಚೂರು: ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ಇತ್ತೀಚೆಗೆ ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಸುನೀತಾ (26) ಎಂಬ ಯುವತಿಯ ಶವ ಬೆಡ್ ರೂಮ್‌ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದೆ.

ಮೃತ ಯುವತಿ ದೇಹದ‌ ಮೇಲೆ ಚಾಕುವಿನಿಂದ ಹಲ್ಲೆ ಗುರುತು ಪತ್ತೆಯಾಗಿದ್ದು, ಒಲ್ಲದ ಮನಸ್ಸಿನಿಂದ ಮದುವೆಗೆ ಒಪ್ಪಿಕೊಂಡಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಮನೆಯವರ ಮದುವೆ‌ ಪ್ರಸ್ತಾಪಕ್ಕೆ‌ ಯುವತಿ ಮನನೊಂದಿದ್ದಳು. ಜತೆಗೆ ತಾಯಿ‌, ಅಣ್ಣನ ಜತೆ ಮನಸ್ತಾಪ ಇತ್ತು. ಇದೇ ಕಾರಣಕ್ಕೆ ಎಷ್ಟೋ ಬಾರಿ ಯುವತಿ ಮನೆ ಬಿಟ್ಟು ಹೋಗಿದ್ದಳಂತೆ. ಮದುವೆ ಪ್ರಸ್ತಾಪದಿಂದ ಮಾನಸಿಕ‌ ಸ್ಥಿಮಿತ ಕಳೆದುಕೊಂಡಿದ್ದ ಸುನೀತಾ, ಏ.26ರಂದು ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ಮತ್ತು ಅಣ್ಣ ಹೇಳಿದ್ದಾರೆ.

ಆದರೆ, ತಂಗಿಯ ಮರಣದ ಬಗ್ಗೆ ಸಂಶಯ ವ್ಯಕ್ತ ಪಡಿಸಿ ಅಕ್ಕ ದೂರು ದಾಖಲು ಮಾಡಿದ್ದಾಳೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Continue Reading

ಕರ್ನಾಟಕ

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Murder Case: ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Murder Case
Koo

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ (Murder Case) ಅಂತ್ಯವಾಗಿರುವುದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ (60) ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಸಂಜೆ ಚಾಕುವಿನಿಂದ ಪರಸ್ಪರ ಇರಿದು ಕೊಂಡಿದ್ದರಿಂದ ಮಂಗಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ತಾಯಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

ಹೆತ್ತ ತಾಯಿಯ ಮೇಲೆಯೇ ಮಗ ಹಲ್ಲೆ; ಅನ್ನ, ನೀರು ಕೊಡದೆ ಹಿಂಸೆ

ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಹೆತ್ತ ಮಕ್ಕಳಿಗೆ ಚಿತ್ರ ಹಿಂಸೆ ಕೊಟ್ಟಿರೋದನ್ನು ನೋಡಿದ್ದೆವು. ಆದರೆ ಈಗ ಹೆತ್ತ ತಾಯಿಯನ್ನೇ ಹೊಡೆಯುವ ಮೂಲಕ ಮಗ ಅಮಾನವೀಯವಾಗಿ ನಡೆದುಕೊಂಡಿರುವುದು ಕಂಡುಬಂದಿದೆ.

ಚಂದ್ರಮ್ಮ (75) ಹಲ್ಲೆಗೊಳಗಾದವರು. ಮುನಿರತ್ನ (45) ಹಲ್ಲೆ ಮಾಡಿದ ಮಗ. ಕತ್ತರಿಗುಪ್ಪೆಯ ಶ್ರೀನಿವಾಸ ನಗರದಲ್ಲಿ ಘಟನೆ ನಡೆದಿದೆ. ಒಂದು ವರ್ಷದಿಂದ ಮನೆಯ ಹೊರಗಡೆ ತಾಯಿ ಮಲಗಿಸುತ್ತಿದ್ದ ಮಗ, ಆಕೆಗೆ ಸರಿಯಾಗಿ ಊಟ ಕೂಡ ನೀಡದೆ ಹಿಂಸೆ ನೀಡುತ್ತಿದ್ದ. ಕಾರಣ ಕೇಳಿದರೆ ಮೂತ್ರ ವಿಸರ್ಜನೆ ಮಾಡಿಕೊಳ್ಳುತ್ತಿರುವ ಕಾರಣ ಹೊರಗೆ ಮಲಗಿಸುತ್ತಿರುವುದಾಗಿ ಮಗ ಹೇಳಿದ್ದಾನೆ.

ಇವರು ತಿರುಪತಿ ಮೂಲದವರಾಗಿದ್ದು, ಮುನಿರತ್ನ ತನ್ನ ಮದುವೆಗೂ ಮುನ್ನ ತಾಯಿಯನ್ನು ಅಡುಗೆ ಮಾಡಲು ಮನೆಗೆ ಕರೆತಂದಿದ್ದ. ಮದುವೆಯಾದ ಬಳಿಕ ತಾಯಿಯನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ ಎನ್ನಲಾಗಿದೆ. ಬೆಂಗಳೂರಿನ ಕತ್ತರಿಗುಪ್ಪೆಯ ಶ್ರೀನಿವಾಸ ನಗರಕ್ಕೆ ಬಂದು 2 ವರ್ಷವಾಗಿದೆ. ಸೊಸೆ ಸ್ವಂತ ತಾಯಿಯಂತೆ ನೋಡಿಕೊಳ್ಳುತ್ತಿದ್ದಳು. ಆದರೆ ಮಗ ತಾಯಿಗೆ ಚಿತ್ರ ಹಿಂಸೆ ನೀಡುತ್ತಿದ್ದ. ಹೀಗಾಗಿ ಮನೆಯ ಅಂಗಳದಲ್ಲಿ ತಾಯಿ ಇರುತ್ತಿದ್ದಳು.

ಇದನ್ನೂ ಓದಿ | Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

ಸೊಸೆ ತಾಯಿಯನ್ನು ನೋಡಿಕೊಳ್ಳುತ್ತಿದ್ದಳು ಎನ್ನುವ ಕಾರಣಕ್ಕೆ ಹೆಂಡತಿಯ ಜತೆಗೂ ಜಗಳವಾಡುತ್ತಿದ್ದ. 2 ದಿನದ ಹಿಂದೆ ಹೆಂಡತಿ ಜಗಳವಾಡಿ ತವರುಮನೆಗೆ ಹೋಗಿದ್ದಳು. ಹೀಗಾಗಿ ತಾಯಿ ಚಂದ್ರಮ್ಮನ ಮೇಲೆ ಮಗ ಹಲ್ಲೆ ಮಾಡಿದ್ದಾನೆ, 2 ದಿನದಿಂದ ತಾಯಿಗೆ ಅನ್ನ, ನೀರು ನೀಡಿಲ್ಲ. ನಶೆಯಲ್ಲಿ ಇಲ್ಲದ ಸಮಯದಲ್ಲೂ ಇದೆ ಸ್ಥಿತಿಯಲ್ಲಿ ಮುನಿರತ್ನ ಇರುತ್ತಿದ್ದ ಎನ್ನಲಾಗಿದೆ.

Continue Reading

ಕರ್ನಾಟಕ

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Karnataka Weather: ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಇನ್ನು ನಾಲ್ಕೈದು ದಿನ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಈ ಬಾರಿ ಬೇಸಿಗೆಯಲ್ಲಿ ರಾಜ್ಯದಲ್ಲಿ ದಿನೇ ದಿನೇ ತಾಪಮಾನ (Karnataka Weather) ಹೆಚ್ಚಾಗುತ್ತಿರುವುದು ಕಂಡುಬರುತ್ತಿದೆ ಉತ್ತರ ಕರ್ನಾಟಕ ಭಾಗದಲ್ಲಿ ದಾಖಲೆಯ ಉಷ್ಣಾಂಶ ದಾಖಲಾಗುತ್ತಿದೆ. ರಾಯಚೂರಿನಲ್ಲಿ ಭಾನುವಾರ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 43 ಡಿಗ್ರಿ ಸೆ. ಉಷ್ಣಾಂಶ ವರದಿಯಾಗಿದೆ. ಇನ್ನು ಮಂಗಳವಾರವೂ ಕೂಡ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಂಗಳವಾರ ಶಾಖದ ಅಲೆಗಳ ತೀವ್ರತೆ (Heat wave) ಹೆಚ್ಚಾಗುವ ಸಾಧ್ಯತೆ ಇದೆ.

ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಅದೇ ರೀತಿ ಮೇ 6ರಂದು ಮಂಡ್ಯ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಶಾಖದ ಅಲೆಯ ಎಚ್ಚರಿಕೆ

ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮೇ 3ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading
Advertisement
Sadhguru Jaggi Vasudev
ಬೆಂಗಳೂರು6 mins ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ11 mins ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ28 mins ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ37 mins ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ46 mins ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ53 mins ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ1 hour ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ1 hour ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ1 hour ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ2 hours ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202411 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202412 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌