Site icon Vistara News

Namma Metro : ಕೆಟ್ಟು ನಿಂತ ನಮ್ಮ ಮೆಟ್ರೋ! ಈ ಮಾರ್ಗದಲ್ಲಿ ಸೇವೆ ಸ್ಥಗಿತ

Service on Namma Metro Green Line suspended

ಬೆಂಗಳೂರು: ಕಳೆದ ಒಂದು ಗಂಟೆಯಿಂದ ಹಸಿರು ಮಾರ್ಗದಲ್ಲಿ (Green Line) ಮೆಟ್ರೋ ಸೇವೆಯಲ್ಲಿ (Namma Metro) ವ್ಯತ್ಯಯವಾಗಿದೆ. ತಾಂತ್ರಿಕ ದೋಷದಿಂದ ಪೀಣ್ಯ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ರೈಲು ಕೆಟ್ಟು ನಿಂತಿದೆ. ಹೀಗಾಗಿ ಪೀಣ್ಯದಿಂದ ನಾಗಸಂದ್ರಕ್ಕೆ ನಮ್ಮ ಮೆಟ್ರೋ ಸ್ಥಗಿತಗೊಂಡಿದೆ.

ಮೆಟ್ರೋ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಟವನ್ನು ಅನುಭವಿಸಿದರು. ಸದ್ಯ ಯಶವಂತಪುರ – ಸಿಲ್ಕ್ ಇನ್ಸ್ಟಿಟ್ಯೂಟ್‌ವರಗೆ ಮಾತ್ರ ಮೆಟ್ರೋ ಸಂಚಾರಿಸುತ್ತಿದೆ.ಇನ್ನೂ ಎರಡು ಗಂಟೆಯೊಳಗೆ ತಾಂತ್ರಿಕ ದೋಷ ಸರಿಪಡಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ನಾಗಸಂದ್ರದಿಂದ ಯಶವಂತಪುರ ಹಾಗೂ ಯಶವಂತಪುರದಿಂದ ನಾಗಸಂದ್ರದ ಎರಡು ಕಡೆಯಿಂದಲೂ ಮೆಟ್ರೋ ರೈಲು ಸಂಚಾರವಿಲ್ಲ. ಹೀಗಾಗಿ ಮೆಟ್ರೋ ರೈಲಿಗಾಗಿ ಕಾದು ಪ್ರಯಾಣಿಕರು ಸಂಚಾರವಿಲ್ಲದೆ ವಾಪಸ್‌ ಆಗುತ್ತಿದ್ದಾರೆ. ಬೆಳಗ್ಗೆ 10:18ಕ್ಕೆ ರೈಲು ಹಳಿಯಲ್ಲಿ ಕಾಣಿಸಿಕೊಂಡ ಸಮಸ್ಯೆಯಿಂದ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ಗಂಭೀರ ಸಮಸ್ಯೆ ಏನಿಲ್ಲ ಶೀಘ್ರವೇ ಸೇವೆ ಆರಂಭಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Nandini Milk: ‌ಸದ್ಯದಲ್ಲೇ ನಂದಿನಿ ಹಾಲಿನ ದರ ಹೆಚ್ಚಳ ಶಾಕ್ ಖಚಿತ

ಮೆಟ್ರೋಗೆ ಹರಾಜಲ್ಲಿ ಸಿಕ್ತು 7 ಲಕ್ಷ ರೂ.; ಇವು ಪ್ರಯಾಣಿಕರ ವಸ್ತುಗಳು!

ಬೆಂಗಳೂರು: ಹಿಂದಿನ ಐದು ವರ್ಷಗಳಿಂದ ಪ್ರಯಾಣಿಕರು ಬಿಟ್ಟು ಹೋದ ವಸ್ತುಗಳನ್ನು ಮರಳಿ ಪಡೆಯದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್‌ ಹರಾಜು (Namma Metro) ಹಾಕಿದೆ. ಈ ಮೂಲಕ ಲಕ್ಷಾಂತರ ರೂ. ಸಂಗ್ರಹಿಸಿದೆ. ನಮ್ಮ ಮೆಟ್ರೋ ಪ್ರಯಾಣಿಕರು ನಿಲ್ದಾಣ ಹಾಗೂ ರೈಲಿನಲ್ಲಿ ಬಿಟ್ಟು ಹೋದ ವಸ್ತುಗಳನ್ನು ಹರಾಜು (Auction Process) ಹಾಕಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 7.4 ರೂಪಾಯಿ ಗಳಿಸಿದೆ.

ಮೆಟ್ರೋ ಪ್ರಯಾಣಿಕರು ಬಿಟ್ಟು ಹೋದ ಸುಮಾರು 6,354 ವಸ್ತುಗಳನ್ನು ಮರಳಿ ಪಡೆಯದ ಹಿನ್ನೆಲೆ ಹರಾಜು ಮಾಡಲಾಗಿದೆ. ನೀರಿನ ಬಾಟಲಿ, ಹೆಲ್ಮೆಟ್‌ಗಳು, ಊಟದ ಬಾಕ್ಸ್‌ಗಳು, ಬ್ಯಾಗ್, ಛತ್ರಿಯಂತಹ ಇನ್ನಿತರ ವಸ್ತುಗಳನ್ನು ಹರಾಜು ಮಾಡಲಾಗಿದೆ ಎನ್ನಲಾಗಿದೆ. ನೇರಳೆ ಮಾರ್ಗದಲ್ಲಿನ ಒಟ್ಟು 1,402 ವಸ್ತುಗಳು ಮತ್ತು ಹಸಿರು ಮಾರ್ಗದಲ್ಲಿನ 4,952 ವಸ್ತುಗಳನ್ನು ಹರಾಜು ಮಾಡಲಾಗಿದೆ ಎಂದು ನಿಗಮ ತಿಳಿಸಿದೆ.

ಗ್ಯಾಜೆಟ್‌ಗಳನ್ನು ಕಳೆದುಕೊಂಡ ಪ್ರಯಾಣಿಕರು!

ಕೆಲ ಪ್ರಯಾಣಿಕರು ತಮ್ಮ ಬಳಿಯಿದ್ದ ಗ್ಯಾಜೆಟ್‌ಗಳನ್ನು ಬಿಟ್ಟು ಹೋಗಿದ್ದಾರೆ. ಕೆಲವರು ಕಳೆದುಕೊಂಡು ಇರಬಹುದು ಅಥವಾ ಮರೆತು ಬಿಟ್ಟು ಹೋಗಿರಬಹುದು. ಹೀಗೆ ಪತ್ತೆಯಾದ ಗ್ಯಾಜೆಟ್‌ಗಳನ್ನು ನಿಲ್ದಾಣದ ಸಿಬ್ಬಂದಿಗೆ ನೀಡಲಾಗುತ್ತದೆ. ನಿಲ್ದಾಣದ ಸಿಬ್ಬಂದಿಯನ್ನು ಸಂಪರ್ಕಿಸಿದರೆ ಅದು ಅವರದ್ದೇ ಎಂದು ಪರಿಶೀಲಿಸಿ ಖಚಿತವಾದರೆ ಅವುಗಳನ್ನು ಮಾಲೀಕರಿಗೆ ಹಸ್ತಾಂತರ ಮಾಡಲಾಗುತ್ತದೆ. ಇನ್ನು ಸುರಕ್ಷತೆ ದೃಷ್ಟಿಯಿಂದ ಬಿಎಂಆರ್‌ಸಿಎಲ್‌ ಅಧಿಕಾರಿಗಳು ಗ್ಯಾಜೆಟ್‌ಗಳನ್ನು ಹರಾಜು ಮಾಡಿಲ್ಲ. ಬದಲಿಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಚಿನ್ನ-ಬೆಳ್ಳಿಯನ್ನು ಕೇಳಲು ಬರದ ಪ್ರಯಾಣಿಕರು

ಛತ್ರಿ, ಬ್ಯಾಗ್, ಊಟದ ಬಾಕ್ಸ್, ಬಾಟಲಿಗಳಂತಹ ವಸ್ತುಗಳನ್ನು ಸಂಗ್ರಹಿಲು ಆಸಕ್ತಿ ತೋರುವುದಿಲ್ಲ. ಸದ್ಯ ಇಂತಹ ವಸ್ತುಗಳನ್ನು ಬಿಎಂಆರ್‌ಸಿಎಲ್ ಪ್ರತಿ ಆರು ತಿಂಗಳಿಗೊಮ್ಮೆ ಹರಾಜು ಹಾಕುತ್ತದೆ. ಇನ್ನೂ ಕೆಲವೊಮ್ಮೆ ಪ್ರಯಾಣಿಕರು ಬೆಳ್ಳಿ ಮತ್ತು ಚಿನ್ನದ ವಸ್ತುಗಳನ್ನು ಸಹ ಕೇಳಲು ವಾಪಾಸ್ ಬರದ ನಿದರ್ಶನಗಳಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನು ಈ ವಸ್ತುಗಳನ್ನು ಹರಾಜಿಗೂ ಮೊದಲು ಬಿಎಂಆರ್‌ಸಿಎಲ್‌ ಹರಾಜಿನ ವಸ್ತುಗಳ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತದೆ. ವಸ್ತು ಕಳೆದುಕೊಂಡವರು ಅಧಿಕಾರಿಗಳನ್ನು ಸಂಪರ್ಕಿಸುವ ಅವಕಾಶವಿದೆ. ಒಂದು ವೇಳೆ ಯಾವುದೇ ಕರೆಗಳು ಬರದೇ ಇದ್ದಾಗ ಹರಾಜು ಮಾಡಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version