Site icon Vistara News

Namma Metro : ಮೆಟ್ರೋ ಪ್ರಯಾಣಿಕರೇ ಗಮನಿಸಿ, ಭಾನುವಾರ 7ರಿಂದ 1 ಗಂಟೆವರೆಗೆ ರೈಲು ಓಡಲ್ಲ; ಎಲ್ಲೆಲ್ಲಿ ಅಂತ ನೋಡಿ

Namma Metro

ಬೆಂಗಳೂರು: ನಮ್ಮ ಮೆಟ್ರೋ ಸಂಚಾರದಲ್ಲಿ (Namma Metro) ಭಾನುವಾರ (ಆಗಸ್ಟ್‌ 27ರಂದು) ಭಾರಿ ಬದಲಾವಣೆಯಾಗಲಿದೆ. ಅಂದು ಕೆಲವು ಮೆಟ್ರೋ ಮಾರ್ಗಗಳಲ್ಲಿ (Metro operation) ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ರೈಲು ಸಂಚಾರ ಇರುವುದಿಲ್ಲ ಎಂದು ನಮ್ಮ ಮೆಟ್ರೋ ತಿಳಿಸಿದೆ. ನೀವು ಮೆಟ್ರೋ ಪ್ರಯಾಣಿಕರಾಗಿದ್ದರೆ (Metro commuters), ಅಥವಾ ಭಾನುವಾರ ಮೆಟ್ರೋದಲ್ಲಿ ಹೋಗೋಣ ಎಂದು ಪ್ಲ್ಯಾನ್‌ ಮಾಡಿದ್ದರೆ ಈ ಮಾಹಿತಿಯನ್ನು ಅಗತ್ಯವಾಗಿ ಓದಿ.

ಯಾಕೆ ಈ ಸಂಚಾರ ವ್ಯತ್ಯಯ?

ಎಲ್ಲರಿಗೂ ತಿಳಿದಿರುವಂತೆ ನೇರಳೆ ಮಾರ್ಗದ ವಿಸ್ತರಣೆ ಕಾರ್ಯ ನಡೆದಿದೆ. ಕೆಂಗೇರಿಯಿಂದ ಚೆಲ್ಲಘಟ್ಟವರೆಗೆ ಬೈಯಪ್ಪನಹಳ್ಳಿಯಿಂದ ಕೆಆರ್‌ಪುರವನ್ನು ಜೋಡಿಸುವ ಕೆಲಸ ಅಂತಿಮ ಹಂತದಲ್ಲಿದೆ. ಹೀಗಾಗಿ ಇಲ್ಲಿ ರೈಲು ಸುರಕ್ಷತಾ ಮತ್ತು ಪರೀಕ್ಷೆಗಳು ನಡೆಯಬೇಕಾಗಿದೆ. ಈ ಕಾರಣಕ್ಕಾಗಿ ಈ ಮಾರ್ಗದಲ್ಲಿ ಆಗಸ್ಟ್ 27ರಂದು ಭಾನುವಾರ ಬೆಳಗ್ಗೆ ಮೆಟ್ರೋ ಸಂಚಾರ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತಿಳಿಸಿದೆ.

ನೇರಳೆ ಮಾರ್ಗದ ಕೆ.ಆರ್‌.ಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ, ಮಟ್ರೋ ನಿಲ್ದಾಣಗಳ ನಡುವೆ ವಿಸ್ತರಣೆ ಮಾರ್ಗಗಳನ್ನು ಕಾರ್ಯಗತಗೊಳಿಸಲಿದ್ದೇವೆ. ಈ ಸಂಬಂಧ ಅನುಕೂಲವಾಗುವಂತೆ ಇದೇ ಭಾನುವಾರ ವಿವರವಾದ ಸುರಕ್ಷತಾ, ಪರೀಕ್ಷೆಗಳನ್ನು ಕೈಗೊಳ್ಳಲೂ ಹೆಚ್ಚಿನ ಸಮಯದ ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ರೈಲು ಸೇವೆಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರಣದಿಂದಾಗಿ ಆಗಸ್ಟ್ 27ರಂದು ಈ ಕೆಲವು ಮಾರ್ಗಗಳ ಮೆಟ್ರೋ ನಿಲ್ದಾಣಗಳ ಮಧ್ಯೆ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ರೈಲು ಸೇವೆಗಳು ಲಭ್ಯವಿರುವುದಿಲ್ಲ ಎನ್ನುವುದು ಮೆಟ್ರೋ ಪ್ರಕಟಣೆ

Namma Metro K R Puram station

ಹಾಗಿದ್ದರೆ ರೈಲು ಸೇವೆ ವ್ಯತ್ಯಯ ಆಗುವ ಮಾರ್ಗಗಳು ಯಾವುವು?

  1. ಮೈಸೂರು ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ಮಧ್ಯೆ ಸೇವೆ ಅಲಭ್ಯ.
  2. ಬೈಯಪ್ಪನಹಳ್ಳಿ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಸೇವೆ ಇರುವುದಿಲ್ಲ.
  3. ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ಮಧ್ಯೆ ರೈಲು ಸೇವೆ ವತ್ಯಯಗೊಳ್ಳಲಿದೆ.

ಗಮನಿಸಿ, ಈ ನಿಲ್ದಾಣಗಳ ಮಧ್ಯೆ ರೈಲು ಸಂಚಾರ ಇರುತ್ತದೆ

  1. ಭಾನುವಾರ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ, ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆಗಳು ಲಭ್ಯವಿರುತ್ತದೆ. ಇವುಗಳಲ್ಲಿ ಯಾವುದೇ ಬದಲಾವಣೆ ಇಲ್ಲ.
  2. ಮಧ್ಯಾಹ್ನ 1 ಗಂಟೆಯ ನಂತರ, ಬೈಯಪ್ಪನಹಳ್ಳಿಯಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೃಷ್ಣರಾಜಪುರದಿಂದ, ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣದವರೆಗೆ ಎಂದಿನಂತೆ ರಾತ್ರಿ 11.00 ಗಂಟೆಯವರೆಗೆ ಮೆಟ್ರೊ ಸಂಚಾರ ಸೇವೆ (ವಾಣಿಜ್ಯ ಸೇವೆ) ಲಭ್ಯವಿರುತ್ತದೆ.

ರೇಷ್ಮೆ ಸಂಸ್ಥೆಯಿಂದ ನಾಗಸಂದ್ರದವರೆಗೆ ಓಡಾಡುವ ಹಸಿರು ಮಾರ್ಗದಲ್ಲಿ ಸಂಚಾರ ಬದಲಾವಣೆ ಇರುವುದಿಲ್ಲ

ಇದನ್ನೂ ಓದಿ: Namma Metro : ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆಗೆ ನಮ್ಮ ಮೆಟ್ರೋ ವಿಸ್ತರಣೆ?

ಆಗಸ್ಟ್‌ 29ರ ಮಂಗಳವಾರವೂ ಸಂಚಾರ ವ್ಯತ್ಯಯವಿದೆ

ಬೈಯಪ್ಪನಹಳ್ಳಿ – ಸ್ವಾಮಿ ವಿವೇಕಾನಂದ ಸ್ಟೇಷನ್‌ ನಡುವೆ ಸಂಚಾರ ವ್ಯತ್ಯಯ

  1. ಆ.29ರ ಮಂಗಳವಾರ ಬೈಯಪ್ಪನಹಳ್ಳಿ ಟರ್ಮಿನಲ್‌ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್‌ (ಕಾಡುಗೋಡಿ) ಮಾರ್ಗಗಳ ನಡುವೆ ಬೆಳಗ್ಗೆ 7 ಗಂಟೆವರೆಗೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ.
  2. ಈ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋನಿಲ್ದಾಣದಿಂದ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.
Exit mobile version