Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು - Vistara News

ಬೆಂಗಳೂರು

Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು

Navaratri: ನವರಾತ್ರಿಯಂದು ಬಣ್ಣಕ್ಕೂ ಎಲ್ಲಿಲ್ಲದ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಒಂದೇ ತರಹ ಬಟ್ಟೆ ಧರಿಸಿ ಮಿಂಚಿದ್ದಾರೆ.

VISTARANEWS.COM


on

navaratri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನವರಾತ್ರಿಯ(Navaratri) ಸಂಭ್ರಮ ಎಲ್ಲೆಡೆ ಕಳೆಕಟ್ಟಿದೆ. ದೇವಿಯನ್ನು ವಿವಿಧ ರೂಪದಲ್ಲಿ ಆರಾಧಿಸಲಾಗುತ್ತದೆ. ನವರಾತ್ರಿಯ ಇನ್ನೊಂದು ವಿಶೇಷ ಎಂದರೆ 9 ದಿನಗಳಿಗೆ 9 ಬಣ್ಣದ ಬಟ್ಟೆ. ಒಂದೊಂದು ದಿನ ಒಂದೊಂದು ಬಣ್ಣದ ಬಟ್ಟೆ ಧರಿಸುವುದು ವಾಡಿಕೆ. ಹೀಗೆ ನವರಾತ್ರಿಯ ವೈಭವ ಜೋರಾಗಿದ್ದು, ಹೆಂಗಳೆಯರು ಒಂದೇ ತರಹದ ಸೀರೆಯನ್ನುಟ್ಟು ಮಿಂಚಿದ್ದಾರೆ.

ಜೆ.ಎಸ್.ಎಸ್ ಪದವಿ ಮಹಾವಿದ್ಯಾಲಯದ ಬೋಧಕ – ಬೋಧಕೇತರ ಮಹಿಳಾ ಸಿಬ್ಬಂದಿ ಶರನ್ನವರಾತ್ರಿ ಸಂಭ್ರಮದ ಮೊದಲ ದಿನ .

ಶರನ್ನವರಾತ್ರಿ ಸಂಭ್ರಮದ ಎರಡನೇ ದಿನ ಹಸಿರು ಸೀರೆಯಲ್ಲಿ ಮಿಂಚಿ ಸಂಭ್ರಮಿಸಿ ಮಹಿಳಾಮಣಿಯರು

ತರ್ಮಾಕೋಲ್‌ನಲ್ಲಿ ಮೂಡಿ ಬಂತು ಅಂಬಾರಿ

ನಾಡ ಹಬ್ಬ ದಸರಾ ಹಾಗೂ ನವರಾತ್ರಿ ಸಂಭ್ರಮ ಶುರುವಾಗಿದೆ. ವಿಜಯ ದಶಮಿಯಂದು ಗರ್ಜಿಸಲು ತರ್ಮಾಕೋಲ್ ಆನೆಗಳು, ಅಂಬಾರಿ ಸಹ ರಗಡ್ಡಗಿದ್ದು, ಗತಿಸಿ ಹೋದ ಇತಿಹಾಸ ಇಲ್ಲಿ ಕಾಣಸಿಗುತ್ತಿವೆ. ಒಂಬತ್ತು ದಿನಗಳ ನವರಾತ್ರಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಹೆಂಗಳೆಯರು ಕಲರ್ ಕಲರ್ ಸೀರೆಯುಟ್ಟು ಮಸ್ತಿ ಮಾಡುತ್ತಿದ್ದರೆ, ಇತ್ತ ವಿಜಯದಶಮಿ ದಿನಕ್ಕೆ ತರ್ಮಾಕೋಲ್‌ನಲ್ಲಿ ಅಂಬಾರಿ ಮೂಡಿ ಬಂದಿದೆ. ಇದನ್ನು ನೋಡಿದರೆ ಸೇಮ್‌ ಮೈಸೂರು ಅಂಬಾರಿಯಂತೆ ಭಾಸವಾಗುತ್ತದೆ.

ಅಂದಹಾಗೆ ವುಡ್‌ನಲ್ಲಿ ಬೇಕಾದಂತಹ ಐಟಮ್ಸ್ ತಯಾರಿಸೋದು ಕಷ್ಟವಲ್ಲ ಆದರೆ ಅದನ್ನು ಮೆಂಟೇನ್ ಮಾಡೋದು ಕಷ್ಟಕರವೆಂದು ಜನರು ತರ್ಮಾಕೋಲ್ ಗೊಂಬೆಗಳಿಗೆ ಮೊರೆ ಹೋಗಿದ್ದಾರೆ. ತರ್ಮಾಕೋಲ್‌ನಲ್ಲಿ ಅಂಬಾರಿ, ಜೋಡಿ ಗೊಂಬೆಗಳು, ಹಂಪಿಯ ದೇವಸ್ಥಾನ, ಯಕ್ಷಗಾನದ ಮಂಟಪ, ಆನೆ, ಕಮಲದ ಹೂಗಳು ಮಾತ್ರವಲ್ಲ ಮೈಸೂರು ಅರಮನೆ ಸೇರಿದಂತೆ ಹಲವಾರು ವಿಭಿನ್ನವಾದ ಕಲೆಗಳು ಮೂಡಿ ಬಂದೀವೆ. ಸಿಲಿಕಾನ್ ಸಿಟಿ ಜನರಿಗೆ ಹಬ್ಬದ ಸಂಭ್ರಮಕ್ಕೆ ತರ್ಮಾಕೋಲ್‌ನಿಂದ ಮಾಡಿರುವ ವಸ್ತುಗಳು ಗಮನ ಸೆಳೆಯುತ್ತಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Actor Darshan : ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Actor Darshan : ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್‌ ಪರ ವಾದ ಮಂಡಿಸಿದ ಸಿ.ವಿ ನಾಗೇಶ್‌, ಪ್ರಕರಣದ ದೋಷಾರೋಪ ಪಟ್ಟಿಯಲ್ಲಿ ತನಿಖಾಧಿಕಾರಿಗಳ ಲೋಪ ಇದೆ. ದರ್ಶನ್‌ರನ್ನು ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ ಎಂದು ವಾದಿಸಿದ್ದಾರೆ. ಸುದೀರ್ಘ ವಾದ ಆಲಿಸಿದ ಕೋರ್ಟ್‌ ನಾಳೆ ಶನಿವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.

VISTARANEWS.COM


on

By

Actor Darshan Renukaswamy murder case
Koo

ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ (Renukaswamy Murder case) ಪ್ರಕರಣಕ್ಕೆ ಸಂಬಂಧ ಜೈಲು ಪಾಲಾಗಿರುವ ನಟ ದರ್ಶನ್ (Actor Darshan), ಪವಿತ್ರಗೌಡ, ರವಿಶಂಕರ್, ಲಕ್ಷ್ಮಣ್‌ರ ಜಾಮೀನು ಅರ್ಜಿ‌ ವಿಚಾರಣೆಯು 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಶುಕ್ರವಾರ (ಅ.4) ನಡೆಯಿತು. ನಟ ದರ್ಶನ್ ಪರ ಸಿ.ವಿ ನಾಗೇಶ್, ಪವಿತ್ರಗೌಡ ಗೌಡ ಪರ ಟಾಮಿ ಸೆಬಾಸ್ಟಿಯನ್, ರವಿಶಂಕರ್ ಪರ ರಂಗನಾಥ್ ರೆಡ್ಡಿ, ಲಕ್ಷ್ಮಣ್ ಪರ ಸೂರ್ಯ ಮುಕುಂದ್ ವಾದ ಮಂಡಿಸಿದ್ದರು. ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ ನಾಗೇಶ್‌, ದೋಷಾರೋಪ ಪಟ್ಟಿಯಲ್ಲಿ ತನಿಖಾಧಿಕಾರಿಗಳ ಲೋಪವನ್ನು ಉಲ್ಲೇಖಿಸಿದರು. ವಾದ ಆಲಿಸಿದ ಕೋರ್ಟ್‌ ಅರ್ಜಿ ವಿಚಾರಣೆಯನ್ನು ಶನಿವಾರ ಮಧ್ಯಾಹ್ನಕ್ಕೆ ಮುಂದೂಡಿದೆ.

ಮೊದಲಿಗೆ ದರ್ಶನ್‌ ಪರ ವಕೀಲ ಸಿ.ವಿ ನಾಗೇಶ್‌ ವಾದ ಶುರು ಮಾಡಿದರು. ದರ್ಶನ್ ವಿರುದ್ಧದ ಆರೋಪದ ಚಾರ್ಜ್ ಶೀಟ್ ಕ್ರೋಢೀಕೃತ ವರದಿ ಸಲ್ಲಿಕೆ ಮಾಡಲಾಗಿದೆ. ಚಾರ್ಜ್ ಶೀಟ್‌ನ ಎಲ್ಲಾ ಹೇಳಿಕೆಗಳು, ಸಾಕ್ಷಿಗಳು ಹಾಗೂ ಎಫ್ಎಸ್ಎಲ್ ರಿಪೋರ್ಟ್ ವರದಿಯಾಗಿದೆ. ಪ್ರಕರಣದ ಮೊದಲ ವಿಚಾರಣೆ ( ಟ್ರಯಲ್) ಪತ್ರಿಕೆ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ ಆಗಿದೆ. ಈ ವರದಿಯಿಂದ ನನ್ನ ಕಕ್ಷಿದಾರನಿಗೆ ದೊಡ್ಡ ನಷ್ಟವಾಗಿದೆ. ಸುಪ್ರೀಂ ಕೋರ್ಟ್ 2016ರ ಆದೇಶ ಉಲ್ಲೇಖಿಸಿದ ನಾಗೇಶ್‌, ಪ್ರಕರಣದ ಎವಿಡೆನ್ಸ್ ಮತ್ತು ಮೆರಿಟ್ಸ್ ತುಂಬಾ ದೊಡ್ಡ ಪಬ್ಲಿಸಿಟಿ ಆಗಬಾರದು. ಇಲ್ಲಿ ದರ್ಶನ್ ವಿರುದ್ಧ ದೊಡ್ಡ ಮಟ್ಟದ ಪ್ರಚಾರವಾಗಿದೆ. ಇದು ನ್ಯಾಯದಾನದ ಮೇಲೆ ಪರಿಣಾಮ ಬೀರಲಿದೆ ಎಂದು ಆದೇಶದ ಬಗ್ಗೆ ಸಿ.ವಿ. ನಾಗೇಶ್ ಉಲ್ಲೇಖಿಸಿದರು. ಈ ವೇಳೆ ನನಗೆ ಪ್ರತಿ ನೀಡಿಲ್ಲ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ಹೇಳಿದರು.

ಈ ಪ್ರಕರಣದಲ್ಲಿ ಎಲೆಕ್ಟ್ರಾನಿಕ್ ಮೀಡಿಯಾ ಪಬ್ಲಿಸಿಟಿಯೂ ಪರಿಣಾಮ ಬೀರಿದೆ. ಎಫ್ಐಆರ್‌ನಿಂದ ಸಾಕ್ಷಿಗಳ ತನಕ ಎಲ್ಲಾ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಸಂಪೂರ್ಣ ಚಾರ್ಜ್ ಶೀಟ್ ಪ್ರತಿ ಸಿಕ್ಕಿದೆ. ಅವರು ನೇರವಾಗಿ ನ್ಯಾಯಾವ್ಯವಸ್ಥೆಯಲ್ಲಿ ಮಧ್ಯಪ್ರವೇಶಿಸಿದ್ದಾರೆ. ಪ್ರಕರಣದ ಟ್ರಾಯಲ್ ನ್ಯಾಯಾಲಯದಲ್ಲಿ ಆಗಬೇಕು ಹೊರತು ಯಾವುದೇ ಪ್ಯಾನಲ್ ಡಿಸ್ಕ್‌ಷನ್‌ನಲ್ಲಿ ಅಲ್ಲ. ಈ ಅಂಶಗಳ ಪರಿಗಣಿಸಿ ತನಿಖಾಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ದರ್ಶನ್ ಪರ ಸಿ ವಿ ನಾಗೇಶ್ ವಾದಿಸಿದರು.

ಮೊದಲು ಪ್ರಕರಣದ ಸೀಜಿಂಗ್ ವೇಳೆ ಸಿಕ್ಕಿರುವುದು ಏನು? ಮರದ ಕೊಂಬೆಗಳು, ನೈಲಾನ್ ಹಗ್ಗ, ವಾಟರ್ ಬಾಟೆಲ್ ಮತ್ತು ಬಟ್ಟೆ ಮಾತ್ರ. ಆದರೆ ಪೊಲೀಸರು ಅದನ್ನೇ ಇಲ್ಲಿ ಸಾಕ್ಷಿಯನ್ನಾಗಿ ಮಾಡಿದ್ದಾರೆ. ಸುಮಾರು ಅರ್ಧ ಅಡಿ ಉದ್ದದ ಕೋಲು, ವಾಟರ್ ಬಾಟೆಲ್ ಒಂದು ಪತ್ತೆಯಾಗಿದ್ದು, ಅದರಲ್ಲಿ ಸ್ಟೋನಿ ಬ್ರೂಕ್ ಚಿನ್ಹೆ ಇದೆ. ಕೋಲಿನ ಮೇಲೆ ಪಿಂಕ್ ಮತ್ತು ಕೆಂಪು ಬಣ್ಣದ ನೈಲಾನ್ ಹಗ್ಗ ಸಿಕ್ಕಿರುತ್ತದೆ. ಅದರಲ್ಲಿ ರಕ್ತದ ಕಲೆ ಪತ್ತೆಯಾಗಿದೆ. ಪ್ರಕರಣದ ಪಂಚನಾಮೆ ಓದಿ ವಾದ ಮುಂದುವರಿಸಿದ ಸಿ.ವಿ ನಾಗೇಶ್ ಇತರ ಆರೋಪಿಗಳ ಸ್ವ ಇಚ್ಛೆ ಹೇಳಿಕೆಯ ಬಗ್ಗೆ ಉಲ್ಲೇಖಿಸಿದರು. ಆರೋಪಿಗಳ ಬಂಧನ ಮೇ 11ರಂದು ಆಗಿದೆ, 12ರಂದು ಸ್ವ ಇಚ್ಚಾ ಹೇಳಿಕೆ ಪಡೆಯಲಾಗಿದೆ. ಹಾಗಾದರೆ ಅವರಿಗೆ ಮೊದಲೆ ಕೇಸ್ ಅಪರಾಧದ ಅರಿವು ಇರುತ್ತಾ ಎಂದು ಸಿ.ವಿ ನಾಗೇಶ್ ಪ್ರಶ್ನಿಸಿದರು.

ಓರ್ವ ವ್ಯಕ್ತಿ ಗುಪ್ತಾಂಗಕ್ಕೆ ಗುದ್ದಿ ಸಾಯಿಸಿದ್ದಾಗಿ ವಿನಯ್ ಹೇಳಿದ್ದ, ಆದಾದ ಬಳಿಕ ಗಿರೀಶ್ ನಾಯ್ಕ್ ಇನ್ಸ್‌ಪೆಕ್ಟರ್‌ಗೆ ಹೇಳಿದೆ. ಆಗ ಇನ್ಸ್‌ಪೆಕ್ಟರ್‌ ಹೇಳಿದ್ದು, ಅವರ ಕಾನ್ಫಿಡೆನ್ಸ್ ತೆಗೆದುಕೊಂಡು ಕೊಲೆ ಮಾಡಿದವರು ಯಾರು ಅಂತಾ ತಿಳಿದುಕೋ ಅಂದಿದ್ದರಂತೆ. ಕೊಲೆ ಮಾಡಿದ್ದು ದರ್ಶನ್ ಅಭಿಮಾನಿಗಳು ಅಂದಾಗ, ಮೀಡಿಯಾದವರು ಅವರೇ ಕೊಲೆ ಮಾಡಿದ್ದಾರೆ ಅಂತ ಹಾಕುತ್ತಾರೆ ಅಂತಾ ಹೇಳಿದ್ದರಂತೆ. ಇದು ಸಂಪೂರ್ಣವಾಗಿ ತಿರುಚಿದ ಹೇಳಿಕೆಯಾಗಿದೆ. ‌ಪ್ಲ್ಯಾನ್‌ ಮಾಡಿ ಈ ರೀತಿ ಹೇಳಿಕೆ ದಾಖಲಿಸಲಾಗಿದೆ ಎಂದು ದರ್ಶನ್ ಪರ ಸಿ ವಿ ನಾಗೇಶ್ ವಾದಿಸಿದರು.

ಸ್ಥಳ ಮಹಜರ್ ಮಾಡಿದ ಪಿಡಬ್ಲ್ಯೂಡಿ ಎಂಜಿನಿಯರ್ ಹೇಳಿಕೆಯನ್ನು ಓದಿದ ನಾಗೇಶ್‌, ಪ್ರಕರಣದಲ್ಲಿ ಐ ವಿಟ್ನೇಸ್ ಸೆಕ್ಯೂರಿಟಿ ಗಾರ್ಡ್, ಆತನ 164 ಹೇಳಿಕೆ ದಾಖಲಾಗಿದೆ. ಆತನಿಗೆ ಕನ್ನಡವೇ ಬರಲ್ಲ ಆದರೆ ಕನ್ನಡದಲ್ಲಿ ಹೇಳಿಕೆ ದಾಖಲಾಗಿದೆ. ಇದೊಂದು ಕ್ಲಾಸಿಕ್ ಕೇಸ್ ಆಫ್ ಫ್ಯಾಬ್ರಿಕ್ ಎವಿಡೆನ್ಸ್.. ಮರುದಿನ ಬೆಳಗ್ಗೆ ಅಂದರೆ ಮಂಗಳವಾರ 10:30ಕ್ಕೆ ಪೊಲೀಸರು ಬಂದು, ಆಚೆ ಕಳಿಸಿದರು. ಈ ಪ್ರಕಾರ ಪೊಲೀಸರು ಗೋಡಾನ್ ವಶಕ್ಕೆ ಪಡೆದಿದ್ದಾರೆ. ಪ್ಲೇಸ್ ಆಫ್ ಕ್ರೈಂ ಸೀಜ್ ಮಾಡಿದ್ದಾರೆ. ಆದಾದ ಬಳಿಕ ಏಕೆ 12ನೇ ತಾರೀಕಿನ ತನಕ ಸಾಕ್ಷಿಗಳ ಕಲೆ ಹಾಕಲು, ಕೋಲು, ಹಗ್ಗ ಎಲ್ಲಾ ಕಲೆಕ್ಟ್ ಮಾಡಲು ಕಾಯ್ದರು. ಇದೆಲ್ಲವೂ ದರ್ಶನ್ ವಿರುದ್ಧ ಸಾಕ್ಷಿಗಳ ಪ್ಲಾಂಟ್ ಮಾಡಲು ಮಾಡಿದ್ದಾರೆ.

9,10 ಹಾಗೂ 11ನೇ ತಾರೀಖು ಬಿಟ್ಟು ಆಮೇಲೆ ಮಾಡಿದ್ದಾರೆ. ಲಾಕ್ ಮಾಡಿ ಸೀಲ್ ಮಾಡಿದ ಮೇಲೆ ಏಕೆ ತಡವಾಗಿ ರಿಕವರಿ ಮಾಡಿದ್ದಾರೆ. ಅಲ್ಲಿ ಮರದ ಕೊಂಬೆಗಳು, ನೈಲಾನ್ ಹಗ್ಗ, ಎಲ್ಲವನ್ನು ಆಮೇಲೆ ಇಟ್ಟು, ಪ್ಲಾಂಟ್ ಮಾಡಿದ್ದಾರೆ. ನನ್ನ ಕಕ್ಷಿದಾರನ ವಿರುದ್ಧ ಇಟ್ಟು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಇಷ್ಟು ತಡವಾಗಿ ಮಾಡಿರುವುದು ಅನುಮಾನ ಮೂಡಿಸಿದೆ. ಕೃತ್ಯದಲ್ಲಿ ವೆಫನ್ ಫ್ಯಾಬ್ರಿಕೇಟ್ ಮಾಡಲಾಗಿದೆ ಎಂದು ನಾಗೇಶ್‌ ವಾದಿಸಿದಾಗ, ಮಧ್ಯಪ್ರವೇಶಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್ ಇದಕ್ಕೆ ನಾನು ಉತ್ತರ ಆಮೇಲೆ ಹೇಳುತ್ತೇನೆ ಎಂದರು.

ತನಿಖಾಧಿಕಾರಿಗಳ ಲೋಪ?

ಪ್ರಕರಣದಲ್ಲಿ ಪೊಲೀಸರ ಹಾಗೂ ತನಿಖಾಧಿಕಾರಿಯ ಲೋಪದ ಬಗ್ಗೆ ಉಲ್ಲೇಖಿಸಿದ ನಾಗೇಶ್‌, ಪೊಲೀಸರಿಗೆ ಪ್ರಕರಣ ಕೃತ್ಯದ ಜಾಗ, ಬಳಸಿದ ವಸ್ತುಗಳ ಬಗ್ಗೆ ಮಾಹಿತಿ ಇತ್ತು. ಆದರೂ ಏಕೆ ತಡವಾಗಿ ಪಂಚನಾಮೆ ಮಾಡಿದರು. 11ನೇ ತಾರೀಖು ಆದರೂ ಮಾಡಬೇಕಿತ್ತು, ಸದ್ಯ ಇರುವ ಮಿಸ್ಟರಿ ಎಂದು ಸಿವಿ‌ ನಾಗೇಶ್ ಪ್ರಕರಣದ ಐಒ ನೀಡಿರುವ ಸಾಕ್ಷಿ ಹೇಳಿಕೆಯ ಅಂಶಗಳ ಓದಿದ್ರು.

ಜೂನ್‌11 ರಂದು ದರ್ಶನ್‌ನಿಂದ ಸ್ವ ಇಚ್ಛೆ ಹೇಳಿಕೆ ಪಡೆದಿದ್ದರೆ, ಆದರೆ ರಿಕವರಿ ಮಾಡಿದ್ದು ಮಾತ್ರ 14 ಮತ್ತು‌15 ರಂದು? ಅಲ್ಲಿಯವರೆಗೆ ಪೊಲೀಸರು ಏನು ಮಾಡುತ್ತಾ ಇದ್ದರು. ದರ್ಶನ್ ಹೇಳಿದ‌ ರೀತಿ ಅಂದು ಧರಿಸಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇಲ್ಲಿ ದರ್ಶನ್ ಅಂದು ಧರಿಸಿದ್ದು ಚಪ್ಪಲಿಯೋ? ಶೂ ವೋ? ದರ್ಶನ್ ಧರಿಸಿದ್ದ ಬಟ್ಟೆಗಳನ್ನು ಬಿನ್‌ನಲ್ಲಿ ಹಾಕಿದ್ದಾಗಿ ಹೇಳಿಕೆ ನೀಡಿದ್ದರು. ಮನೆಯಲ್ಲಿ ಪಂಚನಾಮೆ ವೇಳೆ ಬಿನ್‌ನಲ್ಲಿ‌ ಬಟ್ಟೆಗಳು ದೊರಕಿಲ್ಲ. ಮನೆ ಕೆಲಸದಾಕೆ ಬಟ್ಟೆ ಒಗೆದಿರಬಹುದು ‌ಎಂದು ಟೆರೆಸ್‌ ಹೋಗಿ ನೋಡಲಾಗಿದೆ. ಬಟ್ಟೆ ಒಣಹಾಕಿದ್ದು ಪತ್ತೆಯಾಗಿದೆ. ಸರ್ಫ್ ಸೋಪ್‌ನಲ್ಲಿ ತೊಳೆದಿದ್ದಾರೆ ಅಂತಲೂ ಉಲ್ಲೇಖ ಮಾಡಲಾಗಿದೆ. ಮನೆ ಕೆಲಸದಾಕೆ ಹೇಳಿಕೆ ಪಡೆದಿದ್ದು, ಸರ್ಫ್ ಪೌಡರ್‌ನಲ್ಲಿ ನೆನೆ ಹಾಕಿ ಕೈಯಿಂದ ಕುಕ್ಕಿ ಕುಕ್ಕಿ ಒಗೆದಿದ್ದಾಗಿ ಹೇಳಿಕೆ ನೀಡಿದ್ದಾಳೆ. ಒಂದು ರೀತಿ ಅರೇಬಿಯನ್‌ ನೈಟ್ ಕಥೆ ಇದ್ದ ಹಾಗೆ ಇದೆ ಎಂದು ತನಿಖಾ ರೀತಿಯನ್ನು ಸಿ.ವಿ ನಾಗೇಶ್‌ ಪ್ರಶ್ನಿಸಿದರು.

ಹೀಗಿದ್ದಾಗ ಬಟ್ಟೆಯಲ್ಲಿ ಕಲೆ ಇದೆ ಅಂತಾ ರಿಕವರಿ ಅಂತಾರೆ ಹೇಗೆ? ರಿಕವರಿ ಮತ್ತು ಸ್ವ ಇಚ್ಚಾ ಹೇಳಿಕೆಯ ಸಂದೇಹ ಮತ್ತು ವ್ಯತ್ಯಾಸಗಳ ಬಗ್ಗೆ ಸಿ ವಿ‌ ನಾಗೇಶ್ ವಾದಿಸಿದರು. ಸ್ವ ಇಚ್ಚಾ ಹೇಳಿಕೆಗಳ ಸಾಕ್ಷಿಗಳಾಗಿ ಪರಿಗಣಿಸುವ ಬಗ್ಗೆ ಹಿಂದಿನ ಆದೇಶಗಳ ಉಲ್ಲೇಖಿಸಿದರು. ದರ್ಶನ್ ಎಲ್ಲೂ ಸಹ ತನ್ನ ಸ್ವ ಇಚ್ಚಾ ಹೇಳಿಕೆಯಲ್ಲಿ ನಾನು ಯಾವ ಡ್ರೆಸ್ ಹಾಕಿದ್ದೆ, ಯಾವ ಬಣ್ಣದ ಶರ್ಟ್ ಪ್ಯಾಂಟ್ ಅಂತ ಹೇಳಿಲ್ಲ. ಆದರೂ ಬಹಳ‌ ನಾಜೂಕಾಗಿ ಬ್ಲ್ಯಾಕ್ ಕಲರ್ ಶರ್ಟ್, ಬ್ಲೂ ಜೀನ್ಸ್ ವಶಪಡಿಸಿಕೊಂಡಿದ್ದಾರೆ.

ಸುಬ್ರಮಣ್ಯ ವರ್ಸಸ್ ಸ್ಟೇಟ್ ಆಫ್ ಕರ್ನಾಟಕ ಕೇಸ್ ಬಗ್ಗೆ ಉಲ್ಲೇಖಿಸಿದ ನಾಗೇಶ್‌, ಈ ಕೇಸ್‌ನಲ್ಲಿ ಸ್ವ ಇಚ್ಛೆ ಹೇಳಿಕೆ, ಐ ವಿಟ್ನೇಸ್ ಹೇಳಿಕೆ ಮತ್ತು ರಿಕವರಿ ತಾಳೆಯಾಗಬೇಕು. ಆದರೆ ಇಲ್ಲಿ‌ ಒಂದಕ್ಕೊಂದು ತೀರಾ ವ್ಯತ್ಯಾಸ ಇದೆ. ದರ್ಶನ್ ಚಪ್ಪಲಿ ಹಾಕಿದ್ದಾಗಿ‌ ಸ್ವ ಇಚ್ಛೆ ಹೇಳಿಕೆಯಿದೆ. ಆದರೆ ರಿಕವರಿ ಪಂಚನಾಮೆಯಲ್ಲಿ ಶೂ ಅಂತಾ ಹೇಳಲಾಗಿದೆ. ಇಲ್ಲಿ ಸ್ವ ಇಚ್ಛೆ ಹೇಳಿಕೆ ನೈಜವಾಗಿದೆ, ಪಂಚನಾಮೆ ಹೇಳಿಕೆಯೂ ಪ್ಯಾಬ್ರಿಕೇಟ್ ಆಗಿದೆ ಎಂದು ಸಿ.ವಿ ‌ನಾಗೇಶ್ ವಾದಿಸಿದರು. ಬಳಿಕ ವಾದ ಆಲಿಸಿದ ಕೋರ್ಟ್‌ ನಾಳೆ ಶನಿವಾರ (ಅ.5) ಮಧ್ಯಾಹ್ನ 12.30ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಉಳಿದ ಆರೋಪಿಗಳ ಜಾಮೀನು ಅರ್ಜಿಗಳು ಮುಂದೂಡಿಕೆ ಆಗಿವೆ.

Continue Reading

ಬೆಂಗಳೂರು

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

Bomb threat to BMS, MS Ramayya and four other colleges in Basavanagudi Bengaluru
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್‌ (Bomb Threat) ಬಂದಿದೆ. ಕಾಲೇಜಿಗೆ Sattanathapuram Be Shekhar ಎಂಬ ಇ-ಮೇಲ್‌ ಐಡಿಯಿಂದ ದುಷ್ಕರ್ಮಿಗಳು ಸಂದೇಶ ಕಳಿಸಿದ್ದಾರೆ. ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಕಾಲೇಜಿಗೆ ಬಾಂಬ್ ಬೆದರಿಕೆ ಮಸೇಜ್‌ ಕಳಿಸಿದ್ದಾರೆ. ಇ- ಮೇಲ್ ನೋಡಿದ ಕೂಡಲೇ ಕಾಲೇಜು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಿಎಂಎಸ್‌ ಕಾಲೇಜಿಗೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಹಾಗೂ ಹನುಮಂತನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Sattanathapuram Be Shekhar ಎಂಬ ಇ- ಮೇಲ್ ಐಡಿಯಿಂದ ಬಾಂಬ್ ಬೆದರಿಕೆ ಬಂದಿದ್ದು, ಸುಧಾರಿತ ಹೈಡ್ರೋಜನ್ IEDs ಇಟ್ಟಿದ್ದು, 5 ಗಂಟೆ ಒಳಗೆ ಕಾಲೇಜು ಬಿಟ್ಟು ಹೊರಹೋಗುವಂತೆ ಸಂದೇಶ ಕಳಿಸಿದ್ದಾರೆ. ಬಿಎಂಎಸ್ ಕಾಲೇಜ್ ಅಲ್ಲದೆ ಬಿಐಟಿ, ಎಂಎಸ್ ಆರ್ ಐಟಿ ಕಾಲೇಜುಗಳಿಗೂ ಬಾಂಬ್ ಬೆದರಿಕೆ ಹಾಕಿದ್ದಾರೆ. ದಕ್ಷಿಣ ವಿಭಾಗದ ಮೂರು ಕಾಲೇಜುಗಳಿಗೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಯ ಸಂದರ್ಭದಲ್ಲಿ ಬಾಂಬ್ ಬೆದರಿಕೆ ಇ‌ಮೇಲ್ ಬಂದಿದೆ. ಜತೆಗೆ ಕೇಂದ್ರ ವಿಭಾಗದ ಮತ್ತೊಂದು ಕಾಲೇಜಿಗೂ ಬಾಂಬ್ ಬೆದರಿಕೆ ಬಂದಿದೆ. ಪ್ರತಿಷ್ಠಿತ ಎಂಎಸ್ ರಾಮಯ್ಯ ಕಾಲೇಜಿಗೂ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ ಮೇಲ್ ಮಾಡಿದ್ದಾರೆ. ಸ್ಥಳಕ್ಕೆ ಸದಾಶಿವನಗರ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ಬೆಂಗಳೂರು

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಇಬ್ಬರು ವಂಚಕರನ್ನು ಪೊಲೀಸರು ಬಂಧಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Medical Seat
ಬಂಧಿತ ಆರೋಪಿಗಳು
Koo


ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ (Medical Seat)ಸೀಟ್ ಕೊಡಿಸುತ್ತೇವೆ ಎಂದು ಕೋಟಿಗೂ ಅಧಿಕ ಹಣ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿಕ್ಷಣ ಸಂಸ್ಥೆ‌ ಅಧಿಕಾರಿಗಳ ಹೆಸರು ಹೇಳಿ ಮೆಡಿಕಲ್ ಸೀಟ್ ಕೊಡಿಸುತ್ತೇನೆ ಹಾಗೂ ಹಣ ಡಬಲ್ ಮಾಡಿ ಕೊಡುತ್ತೇನೆ ಎಂದು ವಂಚಿಸುತ್ತಿದ್ದ ಗ್ಯಾಂಗ್‌ ಬಂಧನವಾಗಿದೆ.

ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮೆಡಿಕಲ್ ಸೀಟ್ ವಂಚನೆ ಪ್ರಕರಣ ನಡೆದಿದೆ. ಉದ್ಯಮಿಯೊಬ್ಬರಿಗೆ ಇಬ್ಬರು ಅಸಾಮಿಗಳು ಮೆಡಿಕಲ್ ಸೀಟ್ ಕೊಡಿಸುವುದಾಗಿ ಬರೋಬ್ಬರಿ 1.5 ಕೋಟಿ ಹಣ ವಂಚಿಸಿದ್ದಾರೆ. ಮಂಜಪ್ಪ ಹಾಗೂ ವಿರೂಪಾಕ್ಷಪ್ಪ ಎಂಬುವರ ವಿರುದ್ಧ ಆರೋಪ ಕೇಳಿ ಬಂದಿದೆ. ಪ್ರದೀಪ್ತ ಭಾಸ್ಕರ್ ಪೌಲ್ ಎಂಬುವವರು ಮಗಳ ಮೆಡಿಕಲ್ ಪಿಜಿ ಸೀಟ್‌ಗಾಗಿ ಹುಡುಕಾಡುತ್ತಿದ್ದರು. ಈ ವಿಚಾರವನ್ನು ಪರಿಚಯವಿದ್ದ ಮಂಜಪ್ಪ ಎಂಬಾತನಿಗೆ ತಿಳಿಸಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಮಂಜಪ್ಪ 1.5 ಕೋಟಿ ವಂಚಿಸಿದ್ದಾರೆ.

ಇದನ್ನೂ ಓದಿ: Murder Case : ಪ್ರಿಯಕರನಿಗಾಗಿ ಪತಿಗೆ ಚಟ್ಟ ಕಟ್ಟಿದ್ದಳು ಪಾಪಿ ಪತ್ನಿ; ಹೊಟ್ಟೆ ಉರಿಯಿಂದ ಸತ್ತ ಎಂದವಳು ಈಗ ಜೈಲುಪಾಲು

ಪ್ರತಿಷ್ಟಿತ ಮೆಡಿಕಲ್ ಕಾಲೇಜ್‌ವೊಂದರ ಮ್ಯಾನೇಜ್ ಮೆಂಟ್ ಸಂಪರ್ಕ ಇದೆ ಎಂದು ಕಥೆ ಕಟ್ಟಿದ್ದರು. ನಿಮ್ಮ ಮಗಳಿಗೆ ಮೆಡಿಕಲ್ ಸೀಟ್ ಕೊಡಿಸುತ್ತೇವೆ ಎಂದು 1.30 ಕೋಟಿ ಹಣ ತೆಗೆದುಕೊಂಡಿದ್ದರು. ಪುನಃ ಇತ್ತೀಚಿಗೆ ಮೆಡಿಕಲ್ ಸೀಟ್‌ಗೆ ಡಿಮ್ಯಾಂಡ್ ಜಾಸ್ತಿ ಆಗಿದೆ ಅಂತೇಳಿ ಹೆಚ್ಚುವರಿಯಾಗಿ 26 ಲಕ್ಷ ತೆಗೆದುಕೊಂಡಿದ್ದರು. ನಂತರ ಇತ್ತ ಹಣವೂ ಇಲ್ಲ, ಅತ್ತ ಮೆಡಿಕಲ್ ಸೀಟು ಕೊಡಿಸದೆ ಆಟ ಆಡಿಸಿದ್ದರು.

ಸೀಟ್ ಸಿಗದಿದ್ದರೆ ನಮ್ಮ ಹಣಕ್ಕೆ ಗ್ಯಾರೆಂಟಿ ಏನು ಎಂದು ಕೇಳಿದರೆ ಆರೋಪಿಗಳು ಚಾಲಾಕಿ ಉತ್ತರ ನೀಡುತ್ತಿದ್ದರು. ಸೀಟ್ ಹಂಚಿಕೆ ಆಗದಿದ್ದರೆ ಷೇರು ಮಾರ್ಕೆಟ್‌ನಲ್ಲಿ ಹಣ ಹಾಕಿ ಡಬಲ್ ಮಾಡಿ ಕೊಡುವುದಾಗಿ ಮತ್ತೆ ಸುಳ್ಳು ಹೇಳಿ ನಂಬಿಸಿದ್ದರು. ಷೇರ್ ಮಾರ್ಕೆಟ್ ಏಜೆಂಟ್ ನಾವು ಎಂದು ಹಣ ಡಬಲ್ ಮಾಡುವ ಕಥೆ ಕಟ್ಟಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ಹಾಕಿ ಡಬಲ್‌ ಮಾಡಿ ಕೊಡುವುದಾಗಿ ನಂಬಿಸಿದ್ದರು. ನಂತರ ಹಣವೂ ಕೊಡದೆ ಮೆಡಿಕಲ್‌ ಸೀಟು ಕೊಡಿಸದೆ ಕೈ ಎತ್ತಿದ್ದರು.

ಬರೋಬ್ಬರಿ 1.57 ಕೋಟಿ ಹಣ ವಂಚನೆ‌ ಮಾಡಿದ ಹಿನ್ನೆಲೆಯಲ್ಲಿ ಪ್ರದೀಪ್ತ ಭಾಸ್ಕರ್ ಪೌಲ್ ಅವರು ಮಂಜಪ್ಪ ಮತ್ತು ವಿರೂಪಾಕ್ಷಪ್ಪ ವಿರುದ್ಧ ದೂರು ದಾಖಲಿಸಿದರು. ಸದ್ಯ ದೂರಿನ ಮೇರೆಗೆ ಇಬ್ಬರನ್ನು ಬಂಧನ ಮಾಡಿರುವ ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

Namma Metro : ಸಿಲಿಕಾನ್‌ ಸಿಟಿ ಬೆಂಗಳೂರು ಮಂದಿಗೆ ಮತ್ತೊಂದು ಶಾಕ್‌ ಕಾದಿದೆ. ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Namma metro ticket prices will be hiked soon
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗಲಾಗಿರುವ ಸಿಟಿ ಮಂದಿಗೆ ಮತ್ತೊಂದು ಬರೆ ಬೀಳಲಿದೆ. ಬೆಂಗಳೂರಿನಲ್ಲಿ ಶೀಘ್ರದಲ್ಲೇ ನಮ್ಮ ಮೆಟ್ರೋ‌ (Namma Metro) ಟಿಕೆಟ್ ದರ ಶೇ.15-20ರಷ್ಟು ಏರಿಕೆ ಆಗುವ ಸಾಧ್ಯತೆ ಇದೆ. 2017ರ ನಂತರ ಇದೀಗ ಮೆಟ್ರೋ ದರ ಏರಿಕೆಗೆ ತೀರ್ಮಾನ ಮಾಡಲಾಗಿದೆ.

ಎಷ್ಟು ದರ ಏರಿಕೆ ಮಾಡಬೇಕೆಂದು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಕ್ಕೆ ಸಾರ್ವಜನಿಕರನೊಳಗೊಂಡ ಕಮಿಟಿ ರಚನೆ ಮಾಡಲಾಗಿದೆ. ಅಧಿಕೃತವಾಗಿ ಬಿಎಂಆರ್‌ಸಿಎಲ್ ಜಾಹೀರಾತು ನೀಡಿದೆ. ಮೆಟ್ರೋ ಟಿಕೆಟ್ ದರ ಏರಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ.

ಹಾಲಿ ನಮ್ಮ ಮೆಟ್ರೋದ ಟಿಕೆಟ್ ದರ ಕನಿಷ್ಠ ದರ 10 ರೂ. ಆಗಿದ್ದು, ಗರಿಷ್ಠ ದರ 60 ರೂ. ಆಗಿದೆ. ಈಗ 15 ರಿಂದ 20 ರಷ್ಟು ಟಿಕೆಟ್ ದರ ಏರಿಕೆ ಆಗಿದೆ. ಮುಂದಿನ ತಿಂಗಳಿಂದ ಹೊಸ ದರ ಜಾರಿ ಆಗಲಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚೌಹಾನ್ ಪ್ರತಿಕ್ರಿಯಿಸಿದ್ದಾರೆ.

ದರ ಏರಿಕೆ ಬಗ್ಗೆ ಕಮಿಟಿ ಆಗಿದ್ದು, ಒಂದು ಸಭೆ ಕೂಡಾ ಆಗಿದೆ. ಕಮಿಟಿ ಶೀಘ್ರದಲ್ಲೇ ವರದಿ ನೀಡಲಿದ್ದು, ವರದಿ ಆಧಾರದ ಮೇಲೆ ದರ ಏರಿಕೆ ಮಾಡಲಾಗುತ್ತದೆ. ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಕಮಿಟಿ ಇದಾಗಿದೆ. ಕಮಿಟಿಯು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಿದೆ. ನಮ್ಮ ಖರ್ಚು- ವೆಚ್ಚ ನೋಡಿಕೊಂಡು ದರ ಏರಿಕೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
navaratri
ಬೆಂಗಳೂರು1 ಗಂಟೆ ago

Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು

Mysuru News
ಮೈಸೂರು1 ಗಂಟೆ ago

Mysuru News : ಪರ್ಯಾವರಣ ಸಂರಕ್ಷಣ ಗತಿವಿಧಿಯಿಂದ ತ್ಯಾಜ್ಯ ಸಂಗ್ರಹಣ ಅಭಿಯಾನಕ್ಕೆ ಚಾಲನೆ

Kodagu News
ಕೊಡಗು2 ಗಂಟೆಗಳು ago

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್

Actor Darshan Renukaswamy murder case
ಬೆಂಗಳೂರು2 ಗಂಟೆಗಳು ago

Actor Darshan : ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Bomb threat to BMS, MS Ramayya and four other colleges in Basavanagudi Bengaluru
ಬೆಂಗಳೂರು3 ಗಂಟೆಗಳು ago

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

Medical Seat
ಬೆಂಗಳೂರು4 ಗಂಟೆಗಳು ago

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ

Murder case
ಚಿತ್ರದುರ್ಗ5 ಗಂಟೆಗಳು ago

Murder Case : ಪ್ರಿಯಕರನಿಗಾಗಿ ಪತಿಗೆ ಚಟ್ಟ ಕಟ್ಟಿದ್ದಳು ಪಾಪಿ ಪತ್ನಿ; ಹೊಟ್ಟೆ ಉರಿಯಿಂದ ಸತ್ತ ಎಂದವಳು ಈಗ ಜೈಲುಪಾಲು

Namma metro ticket prices will be hiked soon
ಬೆಂಗಳೂರು6 ಗಂಟೆಗಳು ago

Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

Murder case
ಬೆಂಗಳೂರು6 ಗಂಟೆಗಳು ago

Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

murder case
ಬೆಂಗಳೂರು7 ಗಂಟೆಗಳು ago

Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ24 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌