Naxal arrested‌ : ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌ ನೋಡಲು ಬಂದು ಸಿಕ್ಕಿಬಿದ್ದ ಹರಿಯಾಣದ ನಕ್ಸಲ್‌ - Vistara News

ಬೆಂಗಳೂರು

Naxal arrested‌ : ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌ ನೋಡಲು ಬಂದು ಸಿಕ್ಕಿಬಿದ್ದ ಹರಿಯಾಣದ ನಕ್ಸಲ್‌

Naxal arrested : ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌ ನೋಡಲು ಬಂದು ಹರಿಯಾಣದ ನಕ್ಸಲ್ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಎರಡು ಬ್ಯಾಗ್‌ಗಳು, ಪೆನ್ ಡ್ರೈವ್‌ಗಳು, ಟ್ಯಾಬ್ ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Haryana Naxal caught by police after coming to see girlfriend in Bengaluru
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಲ್ಲಿ ಗರ್ಲ್ ಫ್ರೆಂಡ್ ನೋಡಲು ಬಂದು ನಕ್ಸಲ್‌ವೊಬ್ಬ ಅಂದರ್ (Naxal arrested) ಆಗಿದ್ದಾನೆ. ಅನಿರುದ್ಧ್‌ ಬಂಧಿತ ನಕ್ಸಲ್ ಆಗಿದ್ದಾನೆ. ಹರಿಯಾಣ ಮೂಲದ ಅನಿರುದ್ದ್ ಸಿಪಿಐ ಮಾವೋವಾದಿಗಳ‌ ಪರವಾಗಿ ಕೆಲಸ ಮಾಡುತ್ತಿದ್ದ. ಸಿಸಿಬಿಯ ಎಟಿಸಿಯಿಂದ ಈತನನ್ನು ಬಂಧಿಸಲಾಗಿದೆ.

ಅನಿರುದ್ಧ್‌ ನಿಷೇಧಿತ ಬರಹಗಳನ್ನು ಸರ್ಕ್ಯೂಲೇಟ್ ಮಾಡುತ್ತಿದ್ದ. ಇದುವರೆಗೂ ಯಾವ ಪೊಲೀಸರಿಗೂ ಸಿಕ್ಕಿಬಿದ್ದಿರಲಿಲ್ಲ. ಈಗ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ ನಕ್ಸಲ್‌ನನ್ನು ಬೆಂಗಳೂರು ಸಿಸಿಬಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ನಿಷೇಧಿತ ನಕ್ಸಲ್ ಸಂಘಟನೆಯಾಗಿರುವ CPI(M)ನಲ್ಲಿ ಅನಿರುದ್ಧ್‌ ತನ್ನನ್ನು ತೊಡಗಿಸಿಕೊಂಡಿದ್ದ. ನಿಷೇಧಿತ ಸಂಘಟನೆ ಪರ ಕೆಲಸ ಮಾಡುತ್ತಿದ್ದ. ಹಣ ಸಂಗ್ರಹ, ಗುಪ್ತ ಸಭೆಗಳನ್ನು ನಡೆಸುತ್ತಿದ್ದ. ತನ್ನ ಗೆಳತಿ ನೋಡಲು ಮೂರ್ನಾಲ್ಕು ದಿನದ ಹಿಂದೆ ಬೆಂಗಳೂರಿಗೆ ಬಂದಿದ್ದ.

ಇದನ್ನೂ ಓದಿ: Yogaraj Bhat :30 ಅಡಿ ಎತ್ತರದಿಂದ ಬಿದ್ದು ಲೈಟ್‌ ಮ್ಯಾನ್‌ ಸಾವು; ಚಿತ್ರ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್

ವಿಕಾಸ್ ಘಾಡ್ಗೆ ಎಂಬ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಕೊಂಡಿದ್ದ. ಸದ್ಯ ಬಂಧಿತನಿಂದ ಎರಡು ಬ್ಯಾಗ್‌ಗಳು, ಪೆನ್ ಡ್ರೈವ್‌ಗಳು, ಟ್ಯಾಬ್ ವಶಕ್ಕೆ ಪಡೆಯಲಾಗಿದೆ. ನಿನ್ನೆ ಗುರುವಾರ ಬೆಳಗ್ಗೆ 8 ಗಂಟೆಗೆ ಚೆನ್ನೈಗೆ ಹೋಗಲು ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದ.

ಈ ವೇಳೆ ಆತನ ಮೇಲೆ ನಿಗಾ ಇಟ್ಟಿದ್ದ ಎಟಿಸಿ ಟೀಂ ಅನಿರುದ್ದ ಬಂಧಿಸಿ UAPA ಕಾಯ್ದೆಯಡಿ ಕೇಸ್ ದಾಖಲಿಸಿಕೊಂಡಿದೆ. ಸದ್ಯ ಆರೋಪಿಯನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan : ದರ್ಶನ್‌ ಕೊಟ್ಟ ಮೂರೇ ಹೊಡೆತಕ್ಕೆ ಜೀವ ಬಿಟ್ಟಿದ್ದ ರೇಣುಕಾಸ್ವಾಮಿ!; ಆ 45 ನಿಮಿಷ ಶೆಡ್‌ನಲ್ಲಿ ನಡೆದಿದ್ದೇನು?

Actor Darshan : ನಟ ದರ್ಶನ್‌ ಕೊಟ್ಟ ಮೂರೇ ಹೊಡೆತಕ್ಕೆ ರೇಣುಕಾಸ್ವಾಮಿ ಜೀವ ಬಿಟ್ಟಿದ್ದ . ಆ 45 ನಿಮಿಷ ಶೆಡ್‌ನಲ್ಲಿ ನಡೆದಿದ್ದೇನು? ಚಾರ್ಜ್‌‌ಶೀಟ್‌ನಲ್ಲಿ ಆಡಿಯೋ ವಿಡಿಯೋ ವರದಿ ಉಲ್ಲೇಖವಾಗಿದೆ.

VISTARANEWS.COM


on

By

actor darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಸಂಬಂಧ ಚಾರ್ಜ್‌ಶೀಟ್‌ ಸಲ್ಲಿಕೆ ಆಗಿದ್ದೇ ತಡ ದರ್ಶನ್‌ ಟೀಂನ (actor darshan) ಕೌರ್ಯ ಹೇಗಿತ್ತು ಎಂದು ಒಂದೊಂದೆ ಬಯಲಾಗುತ್ತಿದೆ. ಇಷ್ಟಕ್ಕೂ ಪಟ್ಟಣಗೆರೆ ಶೆಡ್‌ನಲ್ಲಿ ದರ್ಶನ್ ಇದ್ದ ಆ 45 ನಿಮಿಷ ನಡೆದಿದ್ದು ಏನು ಗೊತ್ತಾ? ರೇಣುಕಾಸ್ವಾಮಿ ಸಾವಿಗೆ ಕಾರಣವಾಗಿದ್ದೇ ದರ್ಶನ್‌ ಕೊಟ್ಟ ಆ ಮೂರು ಹೊಡೆತಗಳು.

ಹೊಡೆತ 1

ನಟ ದರ್ಶನ್‌ ಸಿಟ್ಟಿನಲ್ಲಿ ರೇಣುಕಾಸ್ವಾಮಿ ಎದೆಗೆ ಒಂದೆ ಸಮನೆ ಒದ್ದಿದ್ದ. 110 ಕೆ.ಜಿಯ ಮನುಷ್ಯ ನರಪೇತಲನಂತಿದ್ದ ರೇಣುಕಾಸ್ವಾಮಿ ಎದೆಗೆ ಶೂ ಕಾಲಿನಿಂದ ಒದ್ದಿದ್ದ. ದರ್ಶನ್ ಹೊಡೆತಕ್ಕೆ ರೇಣುಕಾಸ್ವಾಮಿ ಎದೆ ಮೂಳೆ ಪುಡಿ ಪುಡಿಯಾಗಿತ್ತು.

ಹೊಡೆತ 2

ಸಿನಿಮಾ ಶೈಲಿಯಲ್ಲಿ ರೇಣುಕಾಸ್ವಾಮಿಯನ್ನು ಎತ್ತಿ ಲಾರಿಗೆ ಬಿಸಾಕಿದ್ದ ದರ್ಶನ್. ದರ್ಶನ್ ಬಿಸಾಕಿದ ರಭಸಕ್ಕೆ ರೇಣುಕಾಸ್ವಾಮಿ ತಲೆಗೆ ಗಂಭೀರ ಗಾಯವಾಗಿತ್ತು. ತಲೆ ಬುರುಡೆಗೆ ಏಟು ಬಿದ್ದು ರಕ್ತ ಹೆಪ್ಪುಗಟ್ಟಿತ್ತು.

ಹೊಡೆತ 3

ಇದೇ ಫೋಟೊ ಅಲ್ವೇನೋ ನೀನು ಕಳಿಸಿದ್ದು ನಿನ್ನ…..! ಎಂದು ರೇಣುಕಾಸ್ವಾಮಿ ಮರ್ಮಾಂಗಕ್ಕೆ ನಟ ದರ್ಶನ್‌ ಒದ್ದಿದ್ದ. ಮರ್ಮಾಂಗಕ್ಕೆ ಒದೆಯುತ್ತಿದ್ದಂತೆ ರೇಣುಕಾಸ್ವಾಮಿ ಪ್ರಜ್ಞೆ ತಪ್ಪಿ ಬಿದ್ದಿದ್ದ. ಈ ಹೊಡೆತಗಳೆ ರೇಣುಕಾಸ್ವಾಮಿ ಸಾವಿಗೆ ಕಾರಣ ಎನ್ನಲಾಗಿದೆ. ಎಫ್‌ಎಸ್‌ಎಲ್‌ ರಿಪೋರ್ಟ್‌ನಲ್ಲೂ ಸಾವಿನ ರಹಸ್ಯ ಬಯಲಾಗಿದ್ದು, ಚಾರ್ಜ್ ಶೀಟ್‌ನಲ್ಲಿ ಇದೆಲ್ಲವನ್ನು ಪೊಲೀಸರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Dvija Film : ಅಕ್ಟೋಬರ್‌ಗೆ ‘ದ್ವಿಜ’ ಚಿತ್ರ ಬಿಡುಗಡೆಗೆ ಸಜ್ಜು; ಕ್ರೈಂ ಥ್ರಿಲ್ಲರ್‌ ಮೂವಿಯಲ್ಲಿ ಕ್ರಿಮಿನಲ್ ಜಗತ್ತು ಅನಾವರಣ

ಚಾರ್ಜ್‌‌ಶೀಟ್‌ನಲ್ಲಿ ಆಡಿಯೋ ವಿಡಿಯೋ ವರದಿ ಉಲ್ಲೇಖ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಚಾರ್ಜ್‌‌ಶೀಟ್‌ನಲ್ಲಿ ಆಡಿಯೋ ವಿಡಿಯೋ ವರದಿ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ. ಒಟ್ಟು 30 ಸ್ಯಾಂಪಲ್ಸ್‌ಗಳಿಗೆ ಸಂಬಂಧಿಸಿದ ಆಡಿಯೋ ವಿಡಿಯೋ ವರದಿ ಇದೆ. ಹಾಗಾದರೆ ಆ ಆಡಿಯೋ ವಿಡಿಯೋ ವರದಿಯಲ್ಲಿ ಏನೇನಿದೆ?

  • ಆರೋಪಿಗಳು ಟ್ರೆಂಡ್ಸ್‌‌ ಶೋನಲ್ಲಿ ಬಟ್ಟೆ ಖರೀದಿಸಿದ ಸಿಸಿಟಿವಿ ಫೂಟೇಜ್
  • ಶವ ಬಿಸಾಡಿದ ಸ್ಥಳದಲ್ಲಿ ಸತ್ವ ಅಪಾರ್ಟ್‌ಮೆಂಟ್‌ನ ಸಿಸಿಟಿವಿ
  • ತುಮಕೂರಿನ ದುರ್ಗಾ ಬಾರ್‌‌ನಲ್ಲಿ ಎಣ್ಣೆ ಖರೀದಿಸಿದ ಸಿಸಿಟಿವಿ
  • ಚಿತ್ರದುರ್ಗ ಟು ಬೆಂಗಳೂರು ಟೋಲ್‌ಗಳ ಸಿಸಿಟಿವಿ ಫೂಟೇಜ್
  • ಚಿತ್ರದುರ್ಗದ ಬಾಲಾಜಿ ಬಾರ್‌ನ ಸಿಸಿಟಿವಿ ವಿಡಿಯೋ
  • ಮೈಸೂರಿನ ರ‍್ಯಾಡಿಸನ್‌ ಬ್ಲೂ ಹೋಟೆಲ್‌ನ ಸಿಸಿಟಿವಿ
  • ಆರೋಪಿಗಳು ಶರಣಾಗತಿಗೆ ಬಂದ ವೇಳೆ ಸಿಸಿಟಿವಿ
  • ರೇಣುಕಾಸ್ವಾಮಿ ಫೋಟೋ ಇರುವ ಪೆನ್‌ಡ್ರೈವ್‌‌
  • ಎ1 ಪವಿತ್ರಾ ಗೌಡ & ದರ್ಶನ್‌‌ಗೆ ಸಂಬಂಧಿಸಿದ ಫೋಟೊ
  • ಇತರೆ 15 ಜನ ಆರೋಪಿಗಳಿಗೆ ಸಂಬಂಧಿಸಿದ ಫೋಟೋಗಳು
  • ಸಾಕ್ಷಿದಾರರ ಫೋಟೋಗಳು ಕೂಡ ರಿಟ್ರೀವ್‌ನಲ್ಲಿ ಪತ್ತೆ.
  • ದರ್ಶನ್‌ ಮನೆಯ ಡಿವಿಆರ್‌.
  • ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ & ಪಟ್ಟಣಗೆರೆ ಶೆಡ್‌ನ ಸಿಸಿಟಿವಿ.
  • ಆರೋಪಿಗಳ ವಾಹನಗಳು ಮಾತೇಶ್ವರಿ ಸ್ಟೋರ್‌‌ ಬಳಿಯ ಸಿಸಿಟಿವಿ.
  • ಮಾರಮ್ಮ ಟೆಂಪಲ್‌ ಬಳಿಯ ಸಿಸಿಟಿವಿ ವಿಡಿಯೋ.
  • ಪವಿತ್ರಾ ಗೌಡ ಮನೆಯ ಸಿಸಿಟಿವಿ ಫೂಟೇಜ್‌.
  • ಬಾಡಿ ಬಿಸಾಡಲು ಹೋದ ವೇಳೆ ಸೆರೆ ಸಿಕ್ಕ ಸಿಸಿಟಿವಿ ವಿಡಿಯೋ.
  • ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌ ಸಿಸಿಟಿವಿ.
  • ಈ ಎಲ್ಲಾ ಆಡಿಯೋ ವಿಡಿಯೋ ವರದಿಗೆ ಸಂಬಂಧಿಸಿದಂತೆ ತಜ್ಞರ ಅಭಿಪ್ರಾಯ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Yogaraj Bhat :30 ಅಡಿ ಎತ್ತರದಿಂದ ಬಿದ್ದು ಲೈಟ್‌ ಮ್ಯಾನ್‌ ಸಾವು; ಚಿತ್ರ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್

Yogaraj Bhat : ಅಡಕಮಾರನಹಳ್ಳಿಯ ಗೋಡೌನ್‌ನಲ್ಲಿ ಯೋಗರಾಜ್ ಭಟ್ ನಿರ್ದೇಶನದ ಮನದ ಕಡಲು ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಅಲ್ಯೂಮಿನಿಯಂ ರೋಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುವಾಗ ಆಯತಪ್ಪಿ ಬಿದ್ದು ಲೈಟ್‌ ಮ್ಯಾನ್‌ ಮೃತಪಟ್ಟಿದ್ದಾರೆ. ಈ ಸಂಬಂಧ ಯೋಗರಾಜ್‌ ಭಟ್‌ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿದೆ.

VISTARANEWS.COM


on

By

Lightman dies after falling from 30 feet height FIR against film director Yogaraj Bhat
Koo

ಬೆಂಗಳೂರು: ಚಿತ್ರ ನಿರ್ದೇಶಕ ಯೋಗರಾಜ್‌ ಭಟ್‌ (Yogaraj Bhat) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಯೋಗರಾಜ್‌ ಭಟ್‌ ನಿರ್ದೇಶನದ ಮನದ ಕಡಲು (Manada kadalu Film) ಸಿನಿಮಾ ಚಿತ್ರಿಕರಣದ ವೇಳೆ ಅವಘಡವೊಂದು ಸಂಭವಿಸಿತ್ತು. ಮೂವತ್ತು ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ (Light man) ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯಲ್ಲಿ ನಡೆದಿತ್ತು.

ಲೈಟ್ ಮ್ಯಾನ್ ಮೋಹನ್ ಕುಮಾರ್ ಮೃತ ದುರ್ದೈವಿ. ಕಳೆದ ಸೆ. 3ರ ಸಂಜೆ ಶೂಟಿಂಗ್‌ ಸೆಟ್‌ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್‌ ಕುಮಾರ್‌ ಕೆಳಗೆ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಮೋಹನ್ ಕುಮಾರ್ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ಅಲ್ಲಿದ್ದವರು ಕೂಡಲೇ ಮೋಹನ್ ಕುಮಾರ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಇದನ್ನೂ ಓದಿ: Dvija Film : ಅಕ್ಟೋಬರ್‌ಗೆ ‘ದ್ವಿಜ’ ಚಿತ್ರ ಬಿಡುಗಡೆಗೆ ಸಜ್ಜು; ಕ್ರೈಂ ಥ್ರಿಲ್ಲರ್‌ ಮೂವಿಯಲ್ಲಿ ಕ್ರಿಮಿನಲ್ ಜಗತ್ತು ಅನಾವರಣ

ಆದರೆ ಗೊರಗುಂಟೆಪಾಳ್ಯ ಖಾಸಗಿ ಆಸ್ಪತ್ರೆಯಲ್ಲಿ ಮೋಹನ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್, ಅಡಕಮಾರನಹಳ್ಳಿಯ ಕೃಷ್ಣಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ A4 ಎಂದು ಯೋಗರಾಜ್ ಭಟ್ ವಿರುದ್ಧ ಕೇಸ್ ದಾಖಲಾಗಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಮನದ ಕಡಲು ಚಿತ್ರವನ್ನು ಅಡಕಮಾರನಹಳ್ಳಿಯ ಗೋಡೌನ್‌ನಲ್ಲಿ ಚಿತ್ರೀಕರಣ ನಡೆಯುತ್ತಿತ್ತು. 30 ಅಡಿ ಎತ್ತರದ ಅಲ್ಯೂಮಿನಿಯಂ ರೋಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುವ ವೇಳೆ ಅವಘಡ ಸಂಭವಿಸಿದೆ. ಮೃತನ ಸಹೋದರ ಶಿವರಾಜ್ ನೀಡಿದ ದೂರಿನನ್ವಯ ಎಫ್ಐಆರ್ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Theft Case : ಪ್ರೇಯಸಿಯ ಜತೆಗೆ ಹೈಫೈ ಲೈಫ್‌ ಎಂಜಾಯ್‌ ಮಾಡಲು ಮನೆಗಳ್ಳತನಕ್ಕೆ ಇಳಿದ ಪ್ರೇಮಖೈದಿ!

Theft Case : ಪ್ರೇಯಸಿಯ ಜತೆಗೆ ಹೈಫೈ ಲೈಫ್‌ ಎಂಜಾಯ್‌ ಮಾಡುವ ಸಲುವಾಗಿ ಮನೆಗಳ್ಳತನಕ್ಕೆ ಇಳಿದ ಪ್ರೇಮಖೈದಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Theft case
Koo

ಆನೇಕಲ್: ಪ್ರೇಯಸಿಯ ಜತೆ ಹೈಫೈ ಲೈಫ್‌ ಕಳೆಯಲು ಮನೆ ಕಳ್ಳತನಕ್ಕೆ ಇಳಿದಿದ್ದ ಪ್ರೇಮಿಯನ್ನು (Theft Case) ಬಂಧಿಸಿದ್ದಾರೆ. ಹಾಡುಹಗಲೇ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಆನೇಕಲ್ ತಾಲೂಕಿನ ವಾಬಸಂದ್ರದಲ್ಲಿ ಮನೆ ಕಳ್ಳತನವಾಗಿತ್ತು. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಹಿಡಿದಿದ್ದಾರೆ.

ಬಂಧಿತ ಆರೋಪಿಯಿಂದ 8 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ಜಿಗಣಿ ಸಿ.ಪಿ.ಐ ಮಂಜುನಾಥ್ ನೇತೃತ್ವದಲ್ಲಿ ತಂಡ ರಚನೆ ಮಾಡಿ ಲಕ್ಷ್ಮಣ್ ಅಲಿಯಾಸ್‌ ಗುನ್ನಿ ಎಂಬಾತನನ್ನು ಬಂಧಿಸಿದ್ದಾರೆ. ಸರ್ಜಾಪುರ ಸಮೀಪದ ಚಿಕ್ಕದಾಸರಹಳ್ಳಿಯ ಲಕ್ಷ್ಮಣ್ ವಿರುದ್ಧ ಈಗಾಗಲೇ ಬನ್ನೇರುಘಟ್ಟ ,ಜಿಗಣಿ, ಸರ್ಜಾಪುರ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಲಕ್ಷ್ಮಣನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ವೇಳೆ ಪ್ರೇಯಸಿ ಜತೆ ಲೈಫ್ ಎಂಜಾಯ್ ಮಾಡಲು ಕಳ್ಳತನ ಮಾಡುತ್ತಿದ್ದೆ ಎಂದು ಲಕ್ಷ್ಮಣ್ ಹೇಳಿಕೆ ನೀಡಿದ್ದಾನೆ. ಕದ್ದ ಚಿನ್ನ ಬೆಳ್ಳಿ ಮಾರಾಟ ಮಾಡಿ ಪ್ರೇಯಸಿಗೆ ಖರ್ಚು ಮಾಡುತ್ತಿದ್ದ. ತನಿಖೆಯ ವೇಳೆ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

theft case
Jigani police arrest thief
theft case Jigani police arrest thief

ಇದನ್ನೂ ಓದಿ:Actor Darshan : ನಟ ದರ್ಶನ್‌-ಪವಿತ್ರಾ ಐಫೋನ್‌ಗಳಲ್ಲಿ ಇದ್ಯಾ ಕೊಲೆ ರಹಸ್ಯ! ಹೈದರಾಬಾದ್‌ನಿಂದ ರಿಟರ್ನ್‌ ಆದ ಫೋನ್‌ಗಳು

ಒಂಟಿ ಮಹಿಳೆಯರೇ ಟಾರ್ಗೆಟ್‌

ಬೆಳಗಾವಿ: ಇರಾನಿ ಗ್ಯಾಂಗ್ ಬೆಳಗಾವಿ ಜನರ ನೆಮ್ಮದಿಯ ನಿದ್ದೆಗೆ ಭಂಗ ತಂದಿದೆ. ಇರಾನಿ ಗ್ಯಾಂಗ್ (Irani gang) ಮಹಿಳೆಯರು ಧೈರ್ಯದಿಂದ ಬೀದಿಯಲ್ಲಿ ಓಡಾಡದ ಪರಿಸ್ಥಿತಿಗೆ ತಂದಿದೆ. ಬೀದಿಯಲ್ಲಿ ಸಂಚರಿಸುವ ಒಂಟಿ ಮಹಿಳೆಯರು ಹಾಗೂ ಖಾಲಿ ಮನೆಗಳೆ ಈ ಗ್ಯಾಂಗ್ (Theft Case) ಟಾರ್ಗೆಟ್ ಆಗಿದೆ.

ರಾತ್ರಿ ಹೊತ್ತು ಮನೆಗಳ ಮುಂಭಾಗ ಬೀಗ ಹಾಕಿದ್ದರೆ, ಹಗಲು ಹೊತ್ತು ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಾರೆ. ಮಹಾಂತೇಶ ನಗರ, ಅಮನ್ ನಗರದಲ್ಲಿ ಸೇರಿದಂತೆ ವಿವಿಧೆಡೆ ಮನೆಗಳ್ಳತನ ಮಾಡಿದ್ದಾರೆ. 2.5 ಲಕ್ಷ ರೂ. ಚಿನ್ನಾಭರಣ, 50 ಸಾವಿರ ಮೌಲ್ಯದ ಬೆಳ್ಳಿ ಹಾಗೂ 2.20 ಲಕ್ಷ ‌ನಗದು ಸೇರಿ 7 ಲಕ್ಷ ಮೌಲ್ಯದ ವಸ್ತು ಎಗರಿಸಿ ಖದೀಮರು ಕಾಲ್ಕಿತ್ತಿದ್ದಾರೆ. ಜತೆಗೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಬೈಕ್‌ ಕದ್ದು ಹೋಗುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನಲ್ಲಿ ಹೇಗೆ?

Karnataka Weather Forecast: ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡು ಮತ್ತು ಮಲೆನಾಡಿನಲ್ಲಿ ದುರ್ಬಲವಾಗಿ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆ (Rain news) ಆಗಿದೆ. ಆದರೂ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast ) ನೀಡಿದೆ.

ಕರಾವಳಿಯ ಉಳಿದ ಉಡುಪಿ, ದಕ್ಷಿಣ ಕನ್ನಡ ಸುತ್ತಮುತ್ತಲ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಸುತ್ತಮುತ್ತ ಚದುರಿದಂತೆ ಮಳೆ ಸುರಿಯಬಹುದು.

ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರದಲ್ಲಿ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ.

ಇದನ್ನೂ ಓದಿ: Actor Darshan : ನಟ ದರ್ಶನ್‌-ಪವಿತ್ರಾ ಐಫೋನ್‌ಗಳಲ್ಲಿ ಇದ್ಯಾ ಕೊಲೆ ರಹಸ್ಯ! ಹೈದರಾಬಾದ್‌ನಿಂದ ರಿಟರ್ನ್‌ ಆದ ಫೋನ್‌ಗಳು

ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಕೂಡಿದ ಮಳೆ ಮತ್ತು ನಿರಂತರ ಗಾಳಿಯ ವೇಗ 30-40ಕಿ.ಮೀ ತಲುಪುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 21 ° C ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
actor darshan
ಸ್ಯಾಂಡಲ್ ವುಡ್5 mins ago

Actor Darshan : ದರ್ಶನ್‌ ಕೊಟ್ಟ ಮೂರೇ ಹೊಡೆತಕ್ಕೆ ಜೀವ ಬಿಟ್ಟಿದ್ದ ರೇಣುಕಾಸ್ವಾಮಿ!; ಆ 45 ನಿಮಿಷ ಶೆಡ್‌ನಲ್ಲಿ ನಡೆದಿದ್ದೇನು?

Haryana Naxal caught by police after coming to see girlfriend in Bengaluru
ಬೆಂಗಳೂರು3 hours ago

Naxal arrested‌ : ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌ ನೋಡಲು ಬಂದು ಸಿಕ್ಕಿಬಿದ್ದ ಹರಿಯಾಣದ ನಕ್ಸಲ್‌

Actor Darshan says he is not married to Pavithra Gowda
ಸ್ಯಾಂಡಲ್ ವುಡ್3 hours ago

Actor Darshan : ನಾವಿಬ್ಬರು ಮದುವೆ ಆಗಿಲ್ಲ.. ಜಸ್ಟ್‌ ಲಿವಿಂಗ್‌ ಟುಗೆದರ್‌ನಲ್ಲಿ ಇದ್ದೀವಿ- ವಿಚಾರಣೆಯಲ್ಲಿ ನಟ ದರ್ಶನ್‌ ಹೇಳಿಕೆ

Lightman dies after falling from 30 feet height FIR against film director Yogaraj Bhat
ಸ್ಯಾಂಡಲ್ ವುಡ್4 hours ago

Yogaraj Bhat :30 ಅಡಿ ಎತ್ತರದಿಂದ ಬಿದ್ದು ಲೈಟ್‌ ಮ್ಯಾನ್‌ ಸಾವು; ಚಿತ್ರ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್

ಸಿನಿಮಾ7 hours ago

Dvija Film : ಅಕ್ಟೋಬರ್‌ಗೆ ‘ದ್ವಿಜ’ ಚಿತ್ರ ಬಿಡುಗಡೆಗೆ ಸಜ್ಜು; ಕ್ರೈಂ ಥ್ರಿಲ್ಲರ್‌ ಮೂವಿಯಲ್ಲಿ ಕ್ರಿಮಿನಲ್ ಜಗತ್ತು ಅನಾವರಣ

Theft case
ಬೆಂಗಳೂರು ಗ್ರಾಮಾಂತರ8 hours ago

Theft Case : ಪ್ರೇಯಸಿಯ ಜತೆಗೆ ಹೈಫೈ ಲೈಫ್‌ ಎಂಜಾಯ್‌ ಮಾಡಲು ಮನೆಗಳ್ಳತನಕ್ಕೆ ಇಳಿದ ಪ್ರೇಮಖೈದಿ!

karnataka weather Forecast
ಮಳೆ10 hours ago

Karnataka Weather : ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನಲ್ಲಿ ಹೇಗೆ?

Dina Bhavishya
ಭವಿಷ್ಯ10 hours ago

Dina Bhavishya : ಈ ದಿನ ನಿಮ್ಮನ್ನು ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ; ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ

TA Sharavana
ಕರ್ನಾಟಕ20 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರಾದ ಬಳಿಕ ಕಚೇರಿ ಉದ್ಘಾಟನೆ ಮಾಡಿದ ಟಿ.ಎ ಶರವಣ

actor darshan
ಸಿನಿಮಾ22 hours ago

Actor Darshan : ನಟ ದರ್ಶನ್‌-ಪವಿತ್ರಾ ಐಫೋನ್‌ಗಳಲ್ಲಿ ಇದ್ಯಾ ಕೊಲೆ ರಹಸ್ಯ! ಹೈದರಾಬಾದ್‌ನಿಂದ ರಿಟರ್ನ್‌ ಆದ ಫೋನ್‌ಗಳು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್6 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 week ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌