Road Accident: ಗರ್ಭಿಣಿಯ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದ ಮಗು ಸಹಿತ ಅಪ್ಪಚ್ಚಿ - Vistara News

ಬೆಂಗಳೂರು

Road Accident: ಗರ್ಭಿಣಿಯ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದ ಮಗು ಸಹಿತ ಅಪ್ಪಚ್ಚಿ

Road Accident: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಘೋರ ದುರಂತ ಸಂಭವಿಸಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. 8 ತಿಂಗಳ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾರೆ. ಟಿಪ್ಪರ್ ಮೈಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದು ಅಸುನೀಗಿದೆ.

VISTARANEWS.COM


on

nelamangala road accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ನಡೆದ ಘೋರ ಅಪಘಾತ (Road Accident) ಒಂದರಲ್ಲಿ, ಟಿಪ್ಪರ್‌ ಲಾರಿಗೆ ಗರ್ಭಿಣಿ (Pregnant death) ಬಲಿಯಾಗಿದ್ದಾರೆ. ಹೊಟ್ಟೆಯಲ್ಲಿದ್ದ ಮಗು ಸಹಿತ ಹೊಟ್ಟೆಯಿಂದ ಹೊರಬಂದು ಸಾವಿಗೀಡಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಘೋರ ದುರಂತ ಸಂಭವಿಸಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. 8 ತಿಂಗಳ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾರೆ. ಟಿಪ್ಪರ್ ಮೈಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದು ಅಸುನೀಗಿದೆ.

ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ ಸಿಂಚನ (30) ಎಂದು ಗುರುತಿಸಲಾಗಿದೆ. ಪತಿ ಮಂಜುನಾಥ್ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೋಟೆಲ್‌, ಮಾಲ್‌ಗಳಲ್ಲಿ ಆಹಾರದಲ್ಲಿ ಕೆಮಿಕಲ್‌, ಕಲರ್‌ ಬಳಸಿದರೆ ಕ್ರಮ; ತರಕಾರಿ ಮಾರಾಟಗಾರರಿಗೂ ಲೈಸೆನ್ಸ್‌ ಕಡ್ಡಾಯ

ಬೆಂಗಳೂರು: ರಾಜಧಾನಿಯ ಹೋಟೆಲ್ ಹಾಗೂ ಮಾಲ್‌ಗಳಲ್ಲಿ ನೀಡಲಾಗುವ ಆಹಾರದಲ್ಲಿ ಕೃತಕ ಕಲರ್‌ (Added colour) ಹಾಗೂ ಕೆಮಿಕಲ್ (Chemicals in Food) ಬಳಕೆ ಮಾಡದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಆರೋಗ್ಯ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಮಾಲ್‌ಗಳು ಹಾಗೂ ಹೋಟೆಲ್ ಮಾಲೀಕರ ಜೊತೆಗೆ ಸಭೆ ನಡೆಸಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಈ ಕುರಿತು ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿ ಆಹಾರದಲ್ಲೂ ಕಲರ್ ಬಳಕೆ, ರಾಸಾಯನಿಕ ಬಳಕೆ ಮಾಡಲಾಗುತ್ತಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತನಿಖೆ ಮಾಡಿದಾಗ ಮಾಲ್‌ಗಳಲ್ಲಿನ ಫುಡ್ ಕಳಪೆ ಎಂದು ಪತ್ತೆಯಾಗಿದೆ. ಇದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಎಲ್ಲರೂ ಆಹಾರದಲ್ಲಿ ಶುಚಿತ್ವ ಕಾಪಾಡುವಂತೆ ಹಾಗೂ ಕಲರ್ ಮುಕ್ತ ಆಹಾರ ನೀಡುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.

ಇದರ ಜೊತೆಗೆ ತರಕಾರಿ ಮಾರಾಟಗಾರರಿಗೂ ಲೈಸನ್ಸ್ ಪಡೆಯುವುದು ಕಡ್ಡಾಯವಾಗಲಿದೆ. ಎಲ್ಲಾ ತರಕಾರಿ ವ್ಯಾಪಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಲೈಸೆನ್ಸ್ ಪಡೆಯಬೇಕು. ತರಕಾರಿಗಳ ಸ್ಯಾಂಪಲ್‌ಗಳನ್ನು ಅಗತ್ಯ ಬಿದ್ದರೆ ಪರೀಕ್ಷೆ ನಡೆಸಬೇಕು. ತರಕಾರಿ- ಹಣ್ಣು ಮಾರುವಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಕೆಲವು ಕಡೆಗಳಲ್ಲಿ ಸಾವಯವ ತರಕಾರಿ ಮಾರುತ್ತೇವೆ ಎಂದು ಹೆಚ್ಚಿನ ದರದಲ್ಲಿ ಕಳಪೆ ತರಕಾರಿ ಹಣ್ಣುಗಳನ್ನು ಮಾರುತ್ತಿರುವುದು ಕಂಡುಬರುತ್ತಿದೆ. ಇದರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

BJP-JDS Padayatra: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ‌ ; ಬ್ಯಾನರ್‌ಗಳಲ್ಲೂ ಕಾಣಿಸಿಕೊಳ್ಳದ ಸುಮಲತಾ ಅಂಬರೀಷ್‌!

BJP-JDS Padayatra: ಬುಧವಾರ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆ ಸಂಚರಿಸಲಿದ್ದರೂ, ಮಂಡ್ಯದಲ್ಲಿ ಹಾಕಿರುವ ಫ್ಲೆಕ್ಸ್‌- ಬ್ಯಾನರ್‌ಗಳಿಂದಲೂ ಸುಮಲತಾ ಕಣ್ಮರೆಯಾಗಿದ್ದಾರೆ. ಯಾವ ನಾಯಕರೂ ತಮ್ಮ ಬ್ಯಾನರ್‌ಗಳಲ್ಲಿ ಸುಮಲತಾ ಅವರನ್ನು ಸ್ಮರಿಸಿಕೊಂಡಿಲ್ಲ.

VISTARANEWS.COM


on

bjp-jds padayatra Sumalatha ambareesh
Koo

ಮಂಡ್ಯ: ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ರಾಜೀನಾಮೆಗೆ ಆಗ್ರಹಿಸಿ ನಡೆಸಲಾಗುತ್ತಿರುವ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ (BJP-JDS Padayatra) ಐದನೇ ದಿನ ಮಂಡ್ಯ ತಲುಪಿದ್ದು, ಉಭಯ ಪಕ್ಷಗಳ ನಾಯಕರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್‌ (Sumalatha Ambareesh) ಮಾತ್ರ ಎಲ್ಲೂ ಕಾಣಿಸಿಕೊಂಡಿಲ್ಲ.

ಕಳೆದ ಲೋಕಸಭೆ ಚುನಾವಣೆಗೂ (Loksabha Election 2024) ಮುನ್ನ ಬಿಜೆಪಿ ಸೇರ್ಪಡೆಯಾಗಿದ್ದ ಸುಮಲತಾ, ಬಿಜೆಪಿ ಸೇರಿದ್ದು ನನ್ನ ಜೀವನದಲ್ಲೇ ಸುದಿನ ಎಂದಿದ್ದರು. ಆದರೆ ಟಿಕೆಟ್‌ ಹಂಚಿಕೆ ಸಂದರ್ಭದಲ್ಲಿ ಮಂಡ್ಯ ಜೆಡಿಎಸ್‌ ಪಾಲಾಗಿ, ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಟಿಕೆಟ್‌ ಒಲಿದಿತ್ತು. ಮಂಡ್ಯದಲ್ಲಿ ಟಿಕೆಟ್‌ಗಾಗಿ ಪ್ರಯತ್ನಿಸಿದ್ದ ಸುಮಲತಾ, ಕುಮಾರಣ್ಣ ಪರ ಪ್ರಚಾರ ಕಣದಲ್ಲೆಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇದೀಗ ಪಾದಯಾತ್ರೆಯಲ್ಲಿಯೂ ಅವರು ಕಾಣಿಸಿಕೊಂಡಿಲ್ಲ. ಹೀಗಾಗಿ, ಮಂಡ್ಯದ ರಾಜಕಾರಣದಲ್ಲಿ ಮತ್ತೆ ಸುಮಲತಾ ಅಂಬರೀಷ್‌ ಸೈಡ್‌ಲೈನ್ ಆದ್ರಾ ಎಂಬ ಪ್ರಶ್ನೆ ಮೂಡಿದೆ.

ಬುಧವಾರ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆ ಸಂಚರಿಸಲಿದ್ದರೂ, ಮಂಡ್ಯದಲ್ಲಿ ಹಾಕಿರುವ ಫ್ಲೆಕ್ಸ್‌- ಬ್ಯಾನರ್‌ಗಳಿಂದಲೂ ಸುಮಲತಾ ಕಣ್ಮರೆಯಾಗಿದ್ದಾರೆ. ಯಾವ ನಾಯಕರೂ ತಮ್ಮ ಬ್ಯಾನರ್‌ಗಳಲ್ಲಿ ಸುಮಲತಾ ಅವರನ್ನು ಸ್ಮರಿಸಿಕೊಂಡಿಲ್ಲ. ರಾಜ್ಯ ಬಿಜೆಪಿ, ಜೆಡಿಎಸ್ ವತಿಯಿಂದ ಹಾಕಿರುವ ಫ್ಲೆಕ್ಸ್‌ಗಳಲ್ಲಿ ಸುಮಲತಾ ಅವರಿಗೆ ಯಾವುದೇ ಸ್ಥಾನ ನೀಡಿಲ್ಲ. ಪಾದಯಾತ್ರೆ ಪ್ರಚಾರ ಮತ್ತು ಪಾದಯಾತ್ರಿಗಳ ಸ್ವಾಗತ ಕೋರುವ ಫ್ಲೆಕ್ಸ್, ಬ್ಯಾನರ್‌ಗಳಲ್ಲಿ ಅವರು ಕಾಣಿಸಿಕೊಂಡಿಲ್ಲ.

ಬೆಂಗಳೂರಿನಿಂದ ಮೈಸೂರಿನವರೆಗೂ ಹಾಕಿರುವ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್‌ಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನ ಪುಡಿ ನಾಯಕರು, ಕಾರ್ಯಕರ್ತರ ಫೋಟೋಗಳಿದ್ದರೂ ಸುಮಲತಾ ಮುಖ ಎಲ್ಲೂ ಕಾಣಿಸಿಕೊಂಡಿಲ್ಲ. ಬಿಜೆಪಿ ಇರಲಿ, ಸುಮಲತಾ ಅವರ ಆಪ್ತರು, ಬೆಂಬಲಿಗರಿಗೂ ಸುಮಲತಾ ಬೇಡವಾದರೇ ಎಂಬ ಪ್ರಶ್ನೆ ಎದ್ದಿದೆ. ಅಧಿಕಾರ ಇದ್ದಾಗ ಅವರನ್ನು ಮೆರೆಸುತ್ತಿದ್ದ ಆಪ್ತರು, ಬೆಂಬಲಿಗರು ಕೂಡ ಸುಮಲತಾರ ಫ್ಲೆಕ್ಸ್ ಹಾಕದೆ ನಿರ್ಲಕ್ಷ್ಯ ತೋರಿದಂತಿದೆ. ಪಾದಯಾತ್ರೆ ಕುರಿತು ನಡೆಸಲಾಗಿದ್ದ ಪೂರ್ವಭಾವಿ ಸಭೆಯಲ್ಲೂ ಸುಮಲತಾ ಪಾಲ್ಗೊಂಡಿರಲಿಲ್ಲ.

ಮುಡಾ ಹಗರಣದ ಇನ್ನಷ್ಟು ದಾಖಲೆ ಕೇಳಿದ ರಾಜ್ಯಪಾಲರು; ತನಿಖೆಗೆ ಅನುಮತಿ ಖಚಿತ

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ರಾಜ್ಯಪಾಲರು (Governor) ಅನುಮತಿ ನೀಡುವುದು ಬಹುತೇಕ ಖಚಿತವಾಗಿದ್ದು, ಮುಡಾ ಹಗರಣದ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನೀಡುವಂತೆ ಅರ್ಜಿದಾರ ಟಿಜೆ ಅಬ್ರಹಾಂ (TJ Abraham) ಅವರಿಗೆ ಸೂಚಿಸಿದ್ದಾರೆ.

ನಿನ್ನೆ ಈ ಕುರಿತು ಅಬ್ರಹಾಂ ಅವರನ್ನು ಕರೆದು ಮಾಹಿತಿ ಪಡೆದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot), ಕ್ಯಾಬಿನೆಟ್ ನಿರ್ಣಯದ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ (Supreme Court) ತೀರ್ಪುಗಳ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ಪ್ರಕರಣವನ್ನು ಗಟ್ಟಿಗೊಳಿಸಲು ಅಗತ್ಯವಾದ ಮಾಹಿತಿಗಳನ್ನು ಪಡೆಯಲು ಮುಂದಾಗಿದ್ದಾರೆ.

ಕ್ಯಾಬಿನೆಟ್‌ ರಾಜ್ಯಪಾಲರಿಗೆ ತನ್ನ ನಿರ್ಣಯವನ್ನು ಕಳಿಸುವುದರ ಜೊತೆಗೆ, ದೂರುದಾರರ ಚಾರಿತ್ರ್ಯವನ್ನೂ ಪ್ರಶ್ನೆ ಮಾಡಿತ್ತು. ಸರ್ಕಾರಿ ಅಧಿಕಾರಿಯನ್ನು ಒಂದು ಕೋಟಿ ರೂಪಾಯಿಗೆ ಬ್ಲಾಕ್‌ಮೇಲ್‌ ಮಾಡಿದ ಆರೋಪ ಅಬ್ರಹಾಂ ಮೇಲಿದೆ ಎಂದಿತ್ತು. ಈ ಕುರಿತು ಸಿಡಿಯನ್ನು ಕೂಡ ರಾಜ್ಯಪಾಲರಿಗೆ ರವಾನೆ ಮಾಡಿತ್ತು. ಈ ಆರೋಪದ ಸತ್ಯಾಸತ್ಯತೆಯ ಬಗ್ಗೆ ಮಾಹಿತಿ ನೀಡಿ ಎಂದು ಕೂಡ ರಾಜ್ಯಪಾಲರು ಅಬ್ರಹಾಂಗೆ ಸೂಚಿಸಿದ್ದಾರೆ.

ಹೀಗಾಗಿ ಈ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆ ಕೊಡಲಿದ್ದೇನೆ ಎಂದು ದೂರುದಾರ ಅಬ್ರಹಾಂ ತಿಳಿಸಿದ್ದಾರೆ. ಸರ್ಕಾರದ ಆರೋಪಕ್ಕೆ ಪ್ರತಿಯಾಗಿ ದಾಖಲೆ ರೆಡಿ ಮಾಡಿಕೊಳ್ಳುತ್ತಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದ ಇನ್ನಷ್ಟು ದಾಖಲೆ ಪತ್ರಗಳನ್ನು ಸಜ್ಜುಗೊಳಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: CM Siddaramaiah: ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

Continue Reading

ಕರ್ನಾಟಕ

Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

Actor Darshan: ಎಫ್‌ಎಸ್‌ಎಲ್ ವರದಿಯಲ್ಲಿ ಭಯಾನಕ ಸತ್ಯ ಹೊರಬಿದ್ದಿದೆ. ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ಅನ್ನು ಎಫ್‌ಎಸ್‌ಎಲ್‌ಗೆ ಪೊಲೀಸರು ಕಳುಹಿಸಿದ್ದರು. ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತಿ ದೊಡ್ಡ ರಹಸ್ಯ ರಿವೀಲ್ ಆಗಿದೆ. ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿದ್ದು, ಇದರಿಂದ ಪ್ರಕರಣದಲ್ಲಿ ದರ್ಶನ್‌ಗೆ (Actor Darshan) ಕಂಟಕವಾಗಲಿರುವ ಅತಿ ದೊಡ್ಡ ಸಾಕ್ಷ್ಯ ಪೊಲೀಸರಿಗೆ ಸಿಕ್ಕಂತಾಗಿದೆ.

ಎಫ್‌ಎಸ್‌ಎಲ್ ವರದಿಯಲ್ಲಿ ಭಯಾನಕ ಸತ್ಯ ಹೊರಬಿದ್ದಿದೆ. ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ಅನ್ನು ಎಫ್‌ಎಸ್‌ಎಲ್‌ಗೆ ಪೊಲೀಸರು ಕಳುಹಿಸಿದ್ದರು. ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್‌ಎಸ್‌ಎಲ್ ವರದಿಯಲ್ಲಿ ಧೃಡವಾಗಿದೆ ಎನ್ನಲಾಗಿದೆ.

ಆಂಜನೇಯನ ಮೂರ್ತಿ ಜೊತೆಗೆ ದರ್ಶನ್‌ ಫೋಟೋ ಇಟ್ಟು ಪೂಜೆ! ಕಿಡಿ ಕಾರಿದ ಭಕ್ತರು

actor darshan photo with god
actor darshan photo with god

ರಾಯಚೂರು: ದೇವರ ಮೂರ್ತಿಯ (God Idol) ಜೊತೆಗೆ ಕೊಲೆ ಆರೋಪಿ (Murder Suspect) ನಟ ದರ್ಶನ್‌ (Actor Darshan) ಫೋಟೋ ಇಟ್ಟು ಪೂಜೆ (worship) ಮಾಡಿರುವ ರಾಯಚೂರಿನ (Raichur News) ದೇವಾಲಯದ ಅರ್ಚಕರ ನಡೆಗೆ ಭಾರಿ ವಿರೋಧ ವ್ಯಕ್ತವಾಗಿದೆ.

ರಾಯಚೂರಿನ ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ಪ್ರಸಿದ್ಧ ದೇಗುಲ ಲಕ್ಷ್ಮೀ ರಂಗನಾಥ ದೇವಾಲಯದಲ್ಲಿ ಈ ಅಪಸವ್ಯ ನಡೆದಿದೆ. ಪೂಜೆ ಮಾಡಿದ ಅರ್ಚಕರು ಹಾಗೂ ಪೂಜೆ ಮಾಡಿಸಿದ ದರ್ಶನ್‌ ಫ್ಯಾನ್ಸ್‌ ಇದೀಗ ಭಕ್ತರ ಅಸಮಾಧಾನಕ್ಕೆ ತುತ್ತಾಗಿದ್ದಾರೆ.

ಮಸರಕಲ್ ಲಕ್ಷ್ಮೀ ರಂಗನಾಥ ದೇಗುಲದ ಎದುರಲ್ಲಿರುವ ಆಂಜನೇಯ ಮೂರ್ತಿಯ ಜೊತೆಗೆ ನಟ ದರ್ಶನ್ ಫೋಟೋಗಳನ್ನು ಇಟ್ಟು ಪೂಜೆ ಸಲ್ಲಿಸಲಾಗಿತ್ತು. ಅರ್ಚಕರ ಪೂಜೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಉದ್ಭವ ಮೂರ್ತಿ, ಪ್ರತಿಷ್ಠಾಪನಾ ಮೂರ್ತಿಯ ಮೇಲೆ ಕೊಲೆ ಆರೋಪಿ ದರ್ಶನ್ ಪೋಟೋ ಇಟ್ಟು ಪೂಜೆ ಮಾಡಿರುವುದನ್ನು ಭಕ್ತರು ಪ್ರಶ್ನಿಸಿದ್ದಾರೆ.

ದೇವರ ಮೂರ್ತಿಯ ಜೊತೆಗೆ ಕೊಲೆ ಆರೋಪಿಯ ಫೋಟೋ ಇಟ್ಟು ಪೂಜೆ ಮಾಡಿಸುವ ಮೂಲಕ ದೇಗುಲದ ಅರ್ಚಕರು ಹಾಗೂ ದರ್ಶನ್ ಅಭಿಮಾನಿಗನು ಭಕ್ತರ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ. ದರ್ಶನ್ ಕೊಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆ. ಕೊಲೆ ಆರೋಪಿಯ ಫೋಟೋ ಗರ್ಭಗುಡಿಯಲ್ಲಿ ಇಟ್ಟು ಪೂಜೆ ಮಾಡುವ ಅಗತ್ಯ ಏನಿದೆ? ಇದು ಕನ್ನಡ ಸಂಸ್ಕೃತಿಯಲ್ಲ. ಅಭಿಮಾನಿಗಳಿಗೆ ದರ್ಶನ್ ಮೇಲೆ ಅಭಿಮಾನ ಇರಬಹುದು.‌ ಆದರೆ ಮನೆಯಲ್ಲಿ ಹೀಗೆ ಪೂಜೆ ಮಾಡಲಿ. ಸಾರ್ವಜನಿಕ ದೇವಾಲಯದಲ್ಲಿ ಹೀಗೆ ಮಾಡುವುದು ಸಲ್ಲದು ಎಂದು ಕನ್ನಡ ಹೋರಾಟಗಾರರು ರಾಂಗ್‌ ಆಗಿದ್ದಾರೆ.

ಇದನ್ನೂ ಓದಿ | Muda Scam: ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ.ಅಬ್ರಹಾಂ; ಸಿಎಂ ವಿರುದ್ಧ ತನಿಖೆಗೆ ಮತ್ತಷ್ಟು ದಾಖಲೆ

ಈ ವಿಚಾರದಲ್ಲಿ ಅರ್ಚಕರು ಹಾಗೂ ಪೂಜೆ ಮಾಡಿಸಿದವರ ವಿರುದ್ಧ ಹೋರಾಟ ಮಾಡುತ್ತೇವೆ. ನೀವು ದೇವರ ಪುರೋಹಿತರು ಅಂತ ಹೇಳಲು ನಮಗೆ ನಾಚಿಕೆ ಆಗುತ್ತದೆ. ಕ್ಷಮೆ ಕೇಳಿ ಎಂದು ರಾಯಚೂರಲ್ಲಿ ಕನ್ನಡ ಪರ ಹೋರಾಟಗಾರ ಅಶೋಕ್ ಕುಮಾರ್ ಜೈನ್ ಕಿಡಿ ಕಾರಿದ್ದಾರೆ.

Continue Reading

ಕರ್ನಾಟಕ

Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

Namma Metro: ಆ.6ರಂದು ಮಂಗಳವಾರ ಒಟ್ಟಾರೆ 8,26,883 ಪ್ರಯಾಣಿಕರಿಂದ ಮೆಟ್ರೋ ಬಳಕೆಯಾಗಿದೆ. ಈ ಸಾಧನೆಗೆ ಕಾರಣರಾದ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಧನ್ಯವಾದ ಹೇಳಿದೆ.

VISTARANEWS.COM


on

Namma Metro
Koo

ಬೆಂಗಳೂರು: ಆಗಸ್ಟ್ 6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಡೆಸಿದ್ದು, ಈ ಹಿಂದಿನ ರೈಡರ್‌ಶಿಪ್ ದಾಖಲೆಗಳನ್ನು ಮುರಿದಂತಾಗಿದೆ. ನಮ್ಮ ಮೆಟ್ರೋದಲ್ಲಿ ಮಂಗಳವಾರ 8.26 ಲಕ್ಷ ಮಂದಿ ಪ್ರಯಾಣಿಸಿದ್ದು, ಈ ಸಾಧನೆಗೆ ಕಾರಣರಾದ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಧನ್ಯವಾದ ಹೇಳಿದೆ.

ಆ.6ರಂದು ಒಟ್ಟಾರೆ 8,26,883 ಪ್ರಯಾಣಿಕರಿಂದ ಮೆಟ್ರೋ ಬಳಕೆಯಾಗಿದೆ. ನಮ್ಮ ಮೆಟ್ರೋವನ್ನು ತಮ್ಮ ಪ್ರಯಾಣದ ಪಾಲುದಾರರನ್ನಾಗಿ ಮಾಡಿಕೊಂಡಿದ್ದಕ್ಕಾಗಿ ಮತ್ತು ವಾತಾವರ್ಣದ ಕಾರ್ಬನ್‌ ಡೈ ಆಕ್ಸೈಡ್‌ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವನ್ನು ಬೆಂಬಲಿಸುತ್ತಿರುವುದಕ್ಕೆ ಪ್ರಯಾಣಿಕರಿಗೆ ಧನ್ಯವಾದಗಳು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಇದನ್ನೂ ಓದಿ | Namma Metro : ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ 4 ವರ್ಷದ ಮಗು! ಮುಂದೇನಾಯ್ತು

ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

Bangalore Hotels
Bangalore Hotels

ಬೆಂಗಳೂರು: ರಾಜಧಾನಿಯಲ್ಲಿ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ (Bangalore Hotels) ವ್ಯಾಪಾರ-ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ, ಬೆಳಗ್ಗೆ 9ರಿಂದ ರಾತ್ರಿ 1 ಗಂಟೆವರೆಗೆ ವ್ಯಾಪಾರ-ವಹಿವಾಟು ನಡೆಸಲು ಅನುಮತಿ ನೀಡಿದೆ.

ಈ ಬಗ್ಗೆ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್‌ ಎನ್‌.ಕೆ. ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಸಿಎಲ್‌ 4, ಸಿಎಲ್‌ 6, ಸಿಎಲ್‌ 7, ಸಿಎಲ್‌ 7D ಲೈಸೆನ್ಸ್ ಪಡೆದ ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌ಗೆ ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆವರೆಗೆ ಹಾಗೂ ಸಿಎಲ್‌ 9 ಲೈಸೆನ್ಸ್ ಪಡೆದ ಬಾರ್‌ಗಳಿಗೆ ಬೆಳಗ್ಗೆ 10ರಿಂದ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿನ ಸಮಯ ನಿಗದಿಪಡಿಸಲಾಗಿದೆ.

ಇದನ್ನೂ ಓದಿ | Almonds For Health: ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು?

2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 269 ರಲ್ಲಿ ಘೋಷಿಸಲಾದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ವ್ಯಾಪಾರದ ದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯಾರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜುಲೈ 06 ರಂದು ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆ ಸಹಮತಿ ನೀಡಿದ ಹಿನ್ನೆಲೆ ವ್ಯಾಪಾರ-ವಹಿವಾಟು ವಿಸ್ತರಣೆಗೆ ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Continue Reading

ಕರ್ನಾಟಕ

Self Harming: ಖಿನ್ನತೆಯಿಂದ ನೇಣಿಗೆ ಶರಣಾದ ಕೇರಳ ಮೂಲದ ಯುವತಿ

Self Harming: ಬೆಂಗಳೂರು ನಗರದ ಪಿ.ಜಿ.ಯಲ್ಲಿ ಯುವತಿ ವಾಸವಿದ್ದಳು. ಇತ್ತೀಚೆಗೆ ತಂದೆ ತೀರಿಕೊಂಡಿದ್ದರಿಂದ ಒಂಟಿತನ ಹಾಗೂ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

VISTARANEWS.COM


on

Koo

ಬೆಂಗಳೂರು: ಕೇರಳ ಮೂಲದ ಯುವತಿಯೊಬ್ಬಳು ಖಿನ್ನತೆಯಿಂದ ನೇಣಿಗೆ ಶರಣಾಗಿರುವ ಘಟನೆ (Self Harming) ನಗರದ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂಜನಾ‌ (26) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ನಗರದ ಪಿ.ಜಿ.ಯಲ್ಲಿ ಯುವತಿ ವಾಸವಿದ್ದಳು. ಇತ್ತೀಚೆಗೆ ತಂದೆ ತೀರಿಕೊಂಡಿದ್ದರಿಂದ ಕೆಲ ದಿನಗಳಿಂದ ಒಂಟಿತನ ಹಾಗೂ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆಗಸ್ಟ್ 3ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಆನೇಕಲ್: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಶಿಲೀಂಧ್ರದೊಡ್ಡಿ ಬಾಲಾಜಿ ಬಡಾವಣೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ.

ಪಾಳು ಬಿದ್ದ ನೀರಿನ ತೊಟ್ಟಿಯಲ್ಲಿ ಸುಮಾರು 30 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಶವ ಪತ್ತೆಯಾಗಿದ್ದು, ಕೊಲೆಗೈದು ತೊಟ್ಟಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಶವ ಎಸೆದು ಹೋಗಿರುವ ಅನುಮಾನಗಳು ಮೂಡಿವೆ. ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Murder Case: ಪತ್ನಿಯನ್ನು ಕೊಂದು ಪರಾರಿಯಾದ, ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಸತ್ತ!

Murder case
Murder case

ಕೋಲಾರ: ಪತ್ನಿಯನ್ನು ಕೊಂದು (Murder Case) ಪರಾರಿಯಾಗಿದ್ದ ಪಾತಕಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ತೀವ್ರವಾಗಿ ಗಾಯಗೊಂಡು ಸತ್ತುಹೋಗಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ (Bangalore Crime) ಪತ್ನಿಯನ್ನು ಕೊಂದಿದ್ದ (husband killed wife) ಆರೋಪಿ, ಕೋಲಾರದಲ್ಲಿ (Kolar News) ಸಾವಿಗೀಡಾಗಿದ್ದಾನೆ.

ಕೊಲೆ ನಡೆದ ಐದು ದಿನದ ಬಳಿಕ, ಆರೋಪಿ ತಬ್ರೇಝ್ ಪಾಷಾನ ಬೆನ್ನು ಹತ್ತಿದ ಪೊಲೀಸರಿಗೆ ಆತನ ಹೆಣ ಎದುರಾಗಿದೆ. ಫೇಸ್‌ಬುಕ್ ಲೈವ್ ಮಾಡುತ್ತಲೇ ಪತ್ನಿಯ ಹತ್ಯೆ ಮಾಡಿದ್ದ ಪಾತಕಿ, ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಜೀವ ಕಳೆದುಕೊಂಡಿದ್ದಾನೆ.

ಫಾತಿಮಾ‌ (34) ಪತಿಯಿಂದ ಕೊಲೆಯಾದ ಮಹಿಳೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಐದು ವರ್ಷಗಳ ಹಿಂದೆಯೇ ಈ ದಂಪತಿ ದೂರವಾಗಿದ್ದರು. ಆರೋಪಿ ತಬ್ರೇಝ್ ಪಾಷಾ ಕಳ್ಳತನ ಕೇಸ್, ಗಾಂಜಾ ಕೇಸ್‌ನಲ್ಲಿ ಭಾಗಿಯಾಗಿದ್ದ. ಇತ್ತ ಅಂಗವಿಕಲ ತಾಯಿಯೊಂದಿಗೆ ಇಬ್ಬರು ಮಕ್ಕಳ ಜತೆ ಫಾತಿಮಾ ವಾಸವಿದ್ದಳು. ಆದರೂ ಆಗಾಗ ಮನೆಗೆ ಬಂದು ಜಗಳ ಮಾಡುತ್ತಿದ್ದ. ಪದೇ ಪದೆ ಮನೆಗೆ ಬರುವಂತೆ ಕಿರುಕುಳ ಕೊಡುತ್ತಿದ್ದ.

ಇತ್ತೀಚೆಗೆ ರಸ್ತೆಯಲ್ಲಿ ಆಕೆಯನ್ನು ಅಡ್ಡ ಹಾಕಿ ಜಗಳ ತೆಗೆದಿದ್ದ ತಬ್ರೇಝ್, ಕೊಲೆ ಮಾಡುತ್ತೇನೆ ಎಂದು ಬೆದರಿಸಿದ್ದ. ಹೀಗಾಗಿ ಫಾತಿಮಾ ತಾಯಿ, ತಬ್ರೇಝ್ ಏನಾದರೂ ಮಾಡುತ್ತಾನೆ ಎಂಬ ಆತಂಕದಿಂದ ಮನೆಗೆ ಸಿಸಿಟಿವಿ ಅಳವಡಿಸಿದ್ದರು. ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದು ಜಗಳ ತೆಗೆದಿದ್ದ ತಬ್ರೇಜ್ ಪಾಷ, ಇಬ್ಬರು ಮಕ್ಕಳನ್ನು ಹೊರಗೆ ಕಳಿಸಿದ್ದ. ತಾಯಿಯ ಮುಂದೆಯೇ ಪತ್ನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ.

ಮನೆಗೆ ಬರುವ ಮುನ್ನ ಹಾಗೂ ಹತ್ಯೆಯ ವೇಳೆ ತನ್ನ ಕೃತ್ಯವನ್ನು ಈ ಪಾತಕಿ ಫೇಸ್‌ಬುಕ್‌ ಲೈವ್ ಮಾಡಿದ್ದ. ಕೊಲೆಯ ಬಳಿಕ ಕೋಲಾರಕ್ಕೆ ಕಾಲ್ಕಿತ್ತಿದ್ದ. ಮೊಬೈಲ್ ಬಳಸದೇ ಕೋಲಾರದ ಮಸೀದಿಯಲ್ಲಿ ನಾಲ್ಕು ದಿನ ಉಳಿದುಕೊಂಡಿದ್ದ. ಬಳಿಕ ನಿನ್ನೆ ಕೋಲಾರದ ಚಿಕ್ಕಮ್ಮನ ಮನೆಗೆ ತೆರಳಿದ್ದ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ!

ಆರೋಪಿಯನ್ನು ಬಂಧಿಸಲು ಕೋಲಾರಕ್ಕೆ ತೆರಳಿದ್ದ ಚಾಮರಾಜಪೇಟೆ ಪೊಲೀಸರ ತಂಡ ಚಿಕ್ಕಮ್ಮನ ಮನೆಗೆ ಪ್ರವೇಶಿಸಿದಾಗ, ತಪ್ಪಿಸಿಕೊಳ್ಳುವ ಭರದಲ್ಲಿ ಸುಮಾರು 12 ಅಡಿ ಎತ್ತರದ ಮನೆಯ ಟೆರೇಸ್‌ನಿಂದ ಈತ ಜಿಗಿದಿದ್ದಾನೆ. ಆಗ ಬಿದ್ದು ಅಸ್ವಸ್ಥನಾಗಿದ್ದ. ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಸಾವಿಗೀಡಾಗಿದ್ದಾನೆ.

Continue Reading
Advertisement
bjp-jds padayatra Sumalatha ambareesh
ಪ್ರಮುಖ ಸುದ್ದಿ3 mins ago

BJP-JDS Padayatra: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ‌ ; ಬ್ಯಾನರ್‌ಗಳಲ್ಲೂ ಕಾಣಿಸಿಕೊಳ್ಳದ ಸುಮಲತಾ ಅಂಬರೀಷ್‌!

Actor Darshan
ಕರ್ನಾಟಕ7 mins ago

Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

Actor Dhanush Raayan set for OTT release
ಕಾಲಿವುಡ್8 mins ago

Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

Crop Over Festival
Latest30 mins ago

Rihanna Crop Over: ʼಊರ ಹಬ್ಬʼದಲ್ಲಿ ʼನಗ್ನ ಉಡುಗೆʼ ಧರಿಸಿ ಸಂಚಲನ ಮೂಡಿಸಿದ ರಿಹಾನ್ನಾ!

Viral Video
Latest42 mins ago

Viral Video: ರಸ್ತೆಯಲ್ಲಿ ಚುಡಾಯಿಸಿದ ಪುಂಡನಿಗೆ ಬುದ್ಧಿ ಕಲಿಸಿದ ವಿದ್ಯಾರ್ಥಿನಿ; ವಿಡಿಯೊ ನೋಡಿ

Bangladesh Unrest
ವಿದೇಶ53 mins ago

Bangladesh Unrest: ಶೇಖ್‌ ಹಸೀನಾ ಅವರ ಪಕ್ಷದ ಮುಖಂಡರು, ಕಾರ್ಯಕರ್ತರೇ ಟಾರ್ಗೆಟ್‌; ಒಂದೇ ದಿನ 29 ಜನ ಬಲಿ

Student Abuse
Latest54 mins ago

Student Abuse: ʼಮೇಡಂ ನನಗೆ ಪಿರಿಯಡ್ಸ್‌ʼ ಎಂದರೂ ಬಿಡದೆ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿದ ಶಿಕ್ಷಕಿ!

Vinesh Phogat Disqualified
ಕ್ರೀಡೆ55 mins ago

Vinesh Phogat Disqualified: ತೂಕ ವಿಭಾಗ ಬದಲಿಸಿದ್ದೇ ವಿನೇಶ್​ ಹಿನ್ನಡೆಗೆ ಕಾರಣವಾಯಿತೇ?

Namma Metro
ಕರ್ನಾಟಕ55 mins ago

Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

Vinesh Phogat
ದೇಶ56 mins ago

Vinesh Phogat: ನೋ! ನೋ! ನೋ!; ವಿನೇಶ್​ ಫೋಗಟ್ ಅನರ್ಹತೆ ಕೆಟ್ಟ ಕನಸಾಗಿರಲಿ: ಆನಂದ್‌ ಮಹೀಂದ್ರಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು21 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ22 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌