ಮನೆ ಬಾಗಿಲಿಗೆ ಮೆಟ್ರೋ : ಶೀಘ್ರವೇ ಓಡಾಡಲಿದೆ ನಿಯೋ ರೈಲು - Vistara News

ಬೆಂಗಳೂರು

ಮನೆ ಬಾಗಿಲಿಗೆ ಮೆಟ್ರೋ : ಶೀಘ್ರವೇ ಓಡಾಡಲಿದೆ ನಿಯೋ ರೈಲು

ನಗರದಲ್ಲಿ ಇದೇ ಮೊದಲ ಬಾರಿಗೆ ನಿರ್ಮಾಣ ಮಾಡುತ್ತಿರುವ ನಿಯೋ ಮೆಟ್ರೋ ರೈಲು
ಬಸ್‌ ಮಾದರಿಯಲ್ಲಿ ನಿಯೋ ಜನರಿಗೆ ಭರ್ಜರಿ ಆಫರ್‌

VISTARANEWS.COM


on

ನಿಯೋ ಮೆಟ್ರೊ ಕಾಲ್ಪನಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ರಾಜ್ಯದ ರಾಜಧಾನಿಗೂ ಹಾಗೂ ಟ್ರಾಫಿಕ್‌ಗೂ ಅದೇನೋ ಅವಿನಾಭಾವ ಸಂಬಂಧ. ಕೊರೋನಾ ಕೊಂಚ ಕಡಿಮೆ ಆದರೂ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿ ಒದ್ದಾಡೋದು ಮಾತ್ರ ತಪ್ಪಿದ್ದಲ್ಲ. ಅಷ್ಟೇ ಅಲ್ಲದೇ ಮೆಟ್ರೋ ನಿಲ್ದಾಣದಿಂದ ಜನರಿಗೆ ಮನೆಯನ್ನ ಸೇರಲು ಕಿಲೋಮೀಟರ್‌ನಷ್ಟು ನಡೆಯೋ ಫಜೀತಿ ಮಾತ್ರ ತಪ್ಪಿದ್ದಲ್ಲ. ಆದರೆ ಇದಕ್ಕೆಲ್ಲ ಬ್ರೇಕ್‌ ಹಾಕಲು ಬರ್ತಾ ಇದೆ ನಿಯೋ ಮೆಟ್ರೋ.

ಏನಿದು ನಿಯೋ ಮೆಟ್ರೋ ?

ಸಾಮಾನ್ಯವಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳು ಅಂದಾಜು 14 ಮೀಟರ್‌ ಉದ್ದವಿರುತ್ತವೆ. ಸದ್ಯ ಬೆಂಗಳೂರು ಮೆಟ್ರೊ ರೈಲ್‌ನ ಪ್ರತಿ ಬೋಗಿ 20.8 ಉದ್ದವಿರುತ್ತದೆ. ನಗರದಲ್ಲಿ ಇದೇ ಮೊದಲ ಬಾರಿಗೆ ನಿರ್ಮಾಣ ಮಾಡುತ್ತಿರುವ ನಿಯೋ ಮೆಟ್ರೋ ರೈಲು 18 ರಿಂದ 25 ಮೀ ಉದ್ದವಿದ್ದು, ಬಸ್‌ ಮಾದರಿಯಲ್ಲಿ ಬೋಗಿಯನ್ನು ಹೊಂದಿದೆ. ಸಾಮಾನ್ಯ ಮೆಟ್ರೋ ರೈಲಿಗಳಿಗಿಂತ ಬೋಗಿಯು ಚಿಕ್ಕದಾಗಿದ್ದು ಮತ್ತು ಹಗುರವಾಗಿರುವುದು ಇನ್ನೂ ವಿಶೇಷ. ನಿಯೋ ರಸ್ತೆಯ ಸಮತಟ್ಟಾದ ಹಾಗೂ ಏರಿಳಿತದ ಪ್ರದೇಶಗಳಲ್ಲಿ ಚಲಿಸಲಿವೆ.

ಇದನ್ನೂ ಓದಿ : ಒಂದು ವರ್ಷದಿಂದ ಕೊರೆಯುತ್ತಿದ್ದ ಸುರಂಗ ಪೂರ್ಣ, Namma Metro ದಿಂದ ಮತ್ತೊಂದು ಮೈಲಿಗಲ್ಲು

ನಿಯೋ ಸ್ಪೇಷಾಲಿಟಿ :

ಒಂದೇ ಸಮಯದಲ್ಲಿ 250 ಪ್ರಯಾಣಿಕರನ್ನು ಕೊಂಡೊಯ್ಯುವ ಸಾಮರ್ಥ್ಯವನ್ನು ಸಹ ಹೊಂದಿದೆ. ಈ ನಿಯೋ ರೈಲಿನ ಕೋಚ್‌ಗೆ ಟೈರ್‌ಗಳನ್ನು ಅಳವಡಿಸಲಾಗುತ್ತಿದ್ದು, ವಿದ್ಯುತ್‌ ರೈಲಿನ ಮಾದರಿಯಲ್ಲಿ ವಿದ್ಯುತ್‌ ಸಂಪರ್ಕದಲ್ಲೇ ಚಲಿಸುತ್ತದೆ. ಓವರ್‌ ಹೆಡ್‌ ಎಲೆಕ್ಟ್ರಿಕ್‌ ಟ್ರಾಕ್ಷನ್‌ ಹೊಂದಿರುವ ಟ್ರಾಲಿಬಸ್‌ ವ್ಯವಸ್ಥೆಗೆ ʼಟೆಕ್‌ ಹಳ್ಳಿ ಎಕ್ಸ್‌ಪ್ರೆಸ್‌ʼ ಎಂಬ ಕರೆಯುವ ಸಾಧ್ಯತೆಗಳು ಇದೆ. ಹವಾನಿಯಂತ್ರಿತ ಮತ್ತು ಸ್ವಯಂ ಚಾಲಿತ ಬಾಗಿಲು ಮುಚ್ಚುವ ವ್ಯವಸ್ಥೆ, ಲೆವೆಲ್‌ ಬೋರ್ಡಿಂಗ್‌, ಆರಾಮದಾಯಕ ಆಸನಗಳು, ಪ್ರಕಟಣೆ ವ್ಯವಸ್ಥೆ ಮತ್ತು ಎಲೆಕ್ಟ್ರಾನಿಕ್‌ ಪ್ರದರ್ಶನ ಫಲಕ ಇರಲಿದೆ.

ಎಲೆಕ್ಟ್ರಾನಿಕ್‌ ಸಿಟಿ ಇಂಡಸ್ಟ್ರೀಯಲ್‌ ಟೌನ್‌ಶಿಪ್‌ ಅಥಾರಿಟಿಯಿಂದ ಮೆಟ್ರೋ ನಿಯೋ ರೈಲು ವ್ಯವಸ್ಥೆ ಪರಿಚಯಿಸಲಾಗುತ್ತಿದೆ. ಮೇಟ್ರೋ ಫೀಡರ್‌ ಆಗಿಯೂ ಕೂಡ ಇದು ಕಾರ್ಯ ನಿರ್ವಹಿಸಲಿದೆ. ಮೆಟ್ರೊ ರೈಲು ಇಳಿದ ನಂತರ ಮನೆಯವರೆಗೆ ತೆರಳಲು ಸಂಪರ್ಕ ಸಾಧನಗಳಿಲ್ಲ ಎಂಬ ಕೊರಗಿಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಿದೆ.

ಖಾಸಗಿ ಸಹಭಾಗಿತ್ವ :

ಬಿಎಂಆರ್‌ಸಿಎಲ್‌ ನಿಯೋ ರೈಲಿಗೆ ಬೇಕಾದಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಕಂಪನಿಗಳ ಎಂಪ್ಲಾಯಿಸ್‌ಗೆ ಉಚಿತ ಪ್ರಯಾಣ ನೀಡುತ್ತಿರುವುದು ವಿಶೇಷ.

ಮುಖ್ಯ ಉದ್ದೇಶ :

ಮೆಟ್ರೋ ಸೇವೆ ನಗರದ ಪ್ರತಿಯೊಂದು ದಿಕ್ಕಿನಲ್ಲಿಯೂ ವಿಸ್ತರಣೆ ಹೊಂದಿದ್ದು, ಆದರೆ ಜನವಸತಿ ಅಥವಾ ಸಣ್ಣ ಪ್ರದೇಶಗಳಿಗೆ ಮೆಟ್ರೋ ಸೇವೆ ನೀಡಲು ಸಾಧ್ಯವಿಲ್ಲ. ಇಂತಹ ಸ್ಥಳಗಳಲ್ಲಿ ನಿಯೋ ಮೆಟ್ರೋ, ಮೆಟ್ರೋ ಲೈಟ್‌ ಸೇರಿ ವಿವಿಧ ಸೇವೆ ಆರಂಭಿಸಲು ಈ ಮುಂಚೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡಿತ್ತು. ಮೆಟ್ರೋದ ಪ್ರಮುಖ ಯೋಜನೆಗಳಲ್ಲಿ ಒಂದಾದ ಹಳದಿಮಾರ್ಗದಲ್ಲಿ (ಆರ್‌.ವಿ. ರಸ್ತೆ-ಬೊಮ್ಮಸಂದ್ರ) ಎರಡು ಮೆಟ್ರೋ ನಿಲ್ದಾಣಗಳು ಪ್ರಾರಂಭವಾಗಲಿದೆ. ಇಲ್ಲಿಂದಎಲೆಕ್ಟ್ರಾನಿಕ್‌ ಸಿಟಿ ಒಳಭಾಗದ ವಿವಿಧ ಪ್ರದೇಶಗಳಿಗೆ ಹೋಗಲು ಕಾರು, ಬಸ್‌ ಮತ್ತು ಇತರೆ ವಾಹನಗಳನ್ನು ಬಳಸಲಾಗುತ್ತಿದೆ.

ಇದನ್ನೂ ಓದಿ : ಕಲ್ಲಿದ್ದಲು ಕೊರತೆ, ಇನ್ನಷ್ಟು ಪವರ್‌ ಕಟ್‌ ಅನುಭವಿಸಲು ರೆಡಿಯಾಗಿ!

ಜನರಿಗೆ ಭರ್ಜರಿ ಆಫರ್‌ :

ಮೆಟ್ರೋದಿಂದ ಇಳಿದ ಸಾರ್ವಜನಿಕರಿಗೆ ಎಲೆಕ್ಟ್ರಾನಿಕ್ಸ್‌ ಸಿಟಿ ಟೌನ್‌ಶಿಪ್‌ನಲ್ಲಿರುವ ಕಂಪನಿಗಳು, ಕಚೇರಿಗಳು, ಕೈಗಾರಿಕೆಗಳು, ಕಾರ್ಖಾನೆಗಳು, ಜನವಸತಿ, ಅಪಾರ್ಟ್‌ಮೆಂಟ್‌ಗಳು ಹೋಗಲು ಎಲೆಕ್ಟ್ರಾನಿಕ್ಸ್‌ ಸಿಟಿ ಇಂಡಸ್ಟ್ರಿಯಲ್‌ ಟೌನ್‌ಶಿಪ್‌ ಅಥಾರಿಟಿ (ಎಲ್ಸಿಟಾ) ವತಿಯಿಂದ ನಿಯೋ ಮೆಟ್ರೋ ನೆಟ್‌ವರ್ಕ್‌ ಸಿದ್ಧಪಡಿಸಲಾಗುತ್ತಿದೆ.

ಪ್ರತೀ ಕಿ.ಮೀ ಗೆ ಅಂದಾಜು 130 ಕೋಟಿ ರೂ. ವೆಚ್ಚದಂತೆ ಒಟ್ಟು 650 ಕೋಟಿ ರೂ ವೆಚ್ಚವಾಗುವ ಸಾದ್ಯತೆಗಳಿವೆ. ನಿಯೋ ನೆಟ್‌ವರ್ಕ್‌ನ ಮೊದಲ ಹಂತದಲ್ಲಿ ಇನ್ಪೋಸಿಸ್‌ ಪೌಂಡೇಷನ್‌, ಕೋನಪ್ಪನ ಅಗ್ರಹಾರ ನಿಲ್ದಾಣ, ಟಿಮ್ಕೆನ್‌, ವೆಲಂಕಣಿ, 3 ಎಂ.ಇಂಡಿಯಾ. ಎಲೆಕ್ಟ್ರಾನಿಕ್ಸ್‌ ಸಿಟಿ ಹಂತ-3, ವಿಪ್ರೋ, ಇಂಟರ್‌ ಪ್ಲೆಕ್ಸ್‌, ಎಲೆಕ್ಟ್ರಾನಿಕ್ಸ್‌, ಹ್ಯಾಪಿಯೆಸ್ಟ್‌ ಮೈಂಡ್ಸ್‌, ಎಲೆಕ್ಟ್ರಾನಿಕ್ಸ್‌ ಸಿಟಿ ಮೆಟ್ರೋ ಸ್ಟೇಷನ್‌ ಸೇರಿ ಒಟ್ಟು 10 ನಿಲ್ದಾಣ ನಿರ್ಮಿಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. 50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಮರದಡಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ.

ಇದನ್ನೂ ಓದಿ: Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಆರೆಂಜ್‌, ಯೆಲ್ಲೋ ಅಲರ್ಟ್‌

ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯೊಂದಿಗೆ ಗುಡುಗು, ಬಿರುಗಾಳಿಯು ಗಂಟೆಗೆ 30-40 ಕಿ.ಮೀ ಬೀಸಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗುತ್ತೇನೆ ಎಂದು ವಿಡಿಯೊ ಮಾಡಿ ಹರಿಬಿಟ್ಟಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಆರ್‌ಸಿಬಿ ಮತ್ತು ಸಿಎಸ್‌ಕೆ (RCB vs CSK) ನಡುವಿನ ಐಪಿಎಲ್‌ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗುತ್ತೇನೆ ಎಂದು ಹೇಳಿದ್ದ ಯುವಕನನ್ನು ಕಬ್ಬನ್ ಪಾರ್ಕ್ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ. ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುವುದಾಗಿ ವಿಡಿಯೊ ಮಾಡಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಯುವಕನನ್ನು ವಶಕ್ಕೆ ಪಡೆಯಲಾಗಿದೆ.

ನಿತಿನ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುವುದಾಗಿ ಯುವಕ ಹೇಳಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮೇ 18ರಂದು ನಡೆಯುವ ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುತ್ತೇನೆ ಎಂದು ಯುವಕ ವಿಡಿಯೊದಲ್ಲಿ ಹೇಳಿದ್ದ. ಈ ವಿಡಿಯೊವನ್ನು ಕಬ್ಬನ್‌ ಪಾರ್ಕ್‌ ಪೊಲೀಸರು ಗಮನಿಸಿ ನಿತಿನ್‌ನನ್ನು ವಶಕ್ಕೆ ಪಡೆದಿದ್ದಾರೆ.

ಈ ಹಿಂದೆ ಮಾರ್ಚ್‌ 25ರಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದ ವೇಳೆ ಅಭಿಮಾನಿಯೊಬ್ಬ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗಿ ವಿರಾಟ್‌ ಕೊಹ್ಲಿಯ(Virat Kohli) ಕಾಲಿಗೆ ಬಿದ್ದ ಪ್ರಸಂಗ ನಡೆದಿತ್ತು. ಈ ಘಟನೆಯಿಂದ ಪ್ರೇರಣೆಗೊಂಡ ಬೆಂಗಳೂರಿನ ಯುವಕ ನಿತಿನ್‌, ತಾನು ಕೂಡ ಮೈದಾನಕ್ಕೆ ನುಗ್ಗುವುದಾಗಿ ವಿಡಿಯೊದಲ್ಲಿ ಹೇಳಿದ್ದ. ಇದರಿಂದ ಪಂದ್ಯದ ವೇಳೆ ಸಮಸ್ಯೆಯಾಗಬಹುದು ಎಂದು ಕ್ರೀಡಾಂಗಣದ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ | RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

ಯುವಕನ ವಿಡಿಯೊ ವೈರಲ್‌ ಆದ ಬಳಿಕ ನಿಗಾ ವಹಿಸಿದ್ದ ಪೊಲೀಸರು, ಯುವಕ ಟಿಕೆಟ್‌ ಪಡೆದು ಪಂದ್ಯ ವೀಕ್ಷಿಸಲು ಶನಿವಾರ ಆಗಮಿಸಿದ್ದಾಗ ವಶಕ್ಕೆ ಪಡೆದಿದ್ದಾರೆ.

ವಿರಾಟ್‌ ಕೊಹ್ಲಿಯ ಕಾಲಿಗೆ ಬಿದ್ದಿದ್ದ ಅಭಿಯಾನಿ

ಮಾರ್ಚ್‌ನಲ್ಲಿ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂಗೆ ನುಗ್ಗಿ ವಿರಾಟ್‌ ಕೊಹ್ಲಿಯ(Virat Kohli) ಕಾಲಿಗೆ ಬಿದ್ದ ಅಭಿಯಾನಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್‌ ಆರಂಭಿಸಲು ಸಿದ್ಧತೆ ನಡೆಸುತ್ತಿತ್ತು. ಆಗ ಕೊಹ್ಲಿ ಕ್ರೀಸ್‌ನಲ್ಲಿದ್ದರು. ಅ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಅಭಿಮಾನಿ ಪಿಚ್‌ ಕಡೆ ಬಂದು ಕೊಹ್ಲಿ ಕಾಲಿಗೆ ಬಿದ್ದು, ಆಲಿಂಗನ ಮಾಡಿದ್ದ. ಕೂಡಲೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಮೈದಾನದಿಂದ ಹೊರಹಾಕಿದ್ದರು. ಇದರ ಫೋಟೋ, ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ | RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

ರಾಯಚೂರು ಮೂಲದ ವಿರಾಟ್​ ಕೊಹ್ಲಿಯ ಅಪ್ಪಟ ಅಭಿಮಾನಿ ಕುರುಮಪ್ಪ‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಅತ ಪೊಲೀಸ್​ ವಿಚಾರಣೆ ವೇಳೆ ತನ್ನ ಮೂಲ ಹೆಸರನ್ನು ಮರೆ ಮಾಚಿ ರಂಜಿತ್ ಎಂದು ಹೇಳಿದ್ದ. ದಾಖಲೆಗಳನ್ನು ಪರಿಶೀಲಿಸುವ ವೇಳೆ ಆತ ರಂಜಿತ್​ ಅಲ್ಲ ಕುರುಮಪ್ಪ‌ ಎಂಬ ವಿಚಾರ ಬೆಳಕಿಗೆ ಬಂದಿತ್ತು. ನಂತರ ಆತನ ವಿರುದ್ಧ ಎಫ್ಐಆರ್ ದಾಖಲಿಸಿ ಕರ್ತವ್ಯಕ್ಕೆ ಅಡ್ಡಿ, ಮೈದಾನಕ್ಕೆ ಅತಿಕ್ರಮಣ ಪ್ರವೇಶದಡಿ ಕೇಸ್ ದಾಖಲಿಸಲಾಗಿತ್ತು.

Continue Reading

ಸಿನಿಮಾ

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Kannada New Movie: ‘ರಂಗಿ ತರಂಗʼ, ‘ಅವನೇ ಶ್ರೀಮನ್ನಾರಾಯಣ’ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್.ಕೆ ಪ್ರಕಾಶ್ ನಿರ್ಮಾಣದ 5ನೇ ಸಿನಿಮಾ ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಚಿತ್ರದ ಪೋಸ್ಟರ್ ಈಚೆಗೆ ಬಿಡುಗಡೆಯಾಯಿತು. ನಿರ್ದೇಶಕ ಸಿಂಪಲ್ ಸುನಿ, ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದರು.

VISTARANEWS.COM


on

Bank of Bhagyalakshmi movie poster released
Koo

ಬೆಂಗಳೂರು: ‘ರಂಗಿ ತರಂಗʼ, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್.ಕೆ. ಪ್ರಕಾಶ್ ನಿರ್ಮಾಣದ 5ನೇ ಸಿನಿಮಾ ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಚಿತ್ರದ ಪೋಸ್ಟರ್ (Kannada New Movie) ಬಿಡುಗಡೆಯಾಯಿತು.

ಕಾರ್ಯಕ್ರಮದಲ್ಲಿ ನಿರ್ದೇಶಕ ಸಿಂಪಲ್ ಸುನಿ ಅವರು ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದರು.

ದೀಕ್ಷಿತ್ ಶೆಟ್ಟಿ ಅಭಿನಯದ ಚಿತ್ರ‌

ದಿಯಾ , ದಸರಾ, ಕೆಟಿಎಂ ಹಾಗೂ ಬ್ಲಿಂಕ್ ಸಿನಿಮಾಗಳಲ್ಲಿ ಅಭಿನಯದಲ್ಲಿ ಹೆಸರು ಮಾಡಿ, ತೆಲುಗು, ಮಲಯಾಳಂಗಳಲ್ಲಿ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಬೃಂದಾ ಆಚಾರ್ಯ ಸಿನಿಮಾದ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

ಚಿತ್ರಕ್ಕೆ ನವ ನಿರ್ದೇಶಕ ಅಭಿಷೇಕ ಎಂ. ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತು ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನಿಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. ‘ಪಿನಾಕ’ ಎಂಬ ವಿಎಫ್‌ಎಕ್ಸ್‌ (VFX) ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ. ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ.

ಹಾಸ್ಯ ಪ್ರಧಾನ ಕಥಾಹಂದರ

ಬ್ಯಾಂಕ್‌ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರವನ್ನು ಈ ಚಿತ್ರವು ಒಳಗೊಂಡಿದೆ. ಸಹ ಕಲಾವಿದರಾಗಿ ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ, ಉಷಾ ಭಂಡಾರಿ, ಭರತ್, ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಸೇರಿದಂತೆ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.

ಶೀಘ್ರದಲ್ಲೇ ಚಿತ್ರೀಕರಣ ಮುಕ್ತಾಯ

ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗ ಸುತ್ತಮುತ್ತ ಶೇ.80 ರಷ್ಟು ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಆದಷ್ಟು ಬೇಗ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ.

ಇದನ್ನೂ ಓದಿ: Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

ಇನ್ನು ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಸಿನಿಮಾವನ್ನು ನಿರ್ಮಾಪಕ ಎಚ್.ಕೆ ಪ್ರಕಾಶ್, ಕನ್ನಡದ ಜತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ. ಕಾಸರಗೋಡು ಅವರ ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಅವರ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.

Continue Reading

ಮಳೆ

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Rain News: ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News Boy dies after being struck by lightning in Banavasi Heavy rains lash Chikkamagaluru and Hassan
ಮೃತ ಆಸ್ಪಕ್ ಅಲಿ
Koo

ಕಾರವಾರ/ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ (Rain News) ಆಗುತ್ತಿದ್ದು, ಸಾಕಷ್ಟು ಹಾನಿಯನ್ನುಂಟು ಮಾಡಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಾಲಕನೊಬ್ಬ ಆಟ ಆಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ, ಭಾನುವಾರ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು – ಸಿಡಿಲು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಹೆಚಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast Report) ಹೇಳಿದೆ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಬಾಲಕನೊಬ್ಬ ಆಟವಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಆಸ್ಪಕ್ ಅಲಿ (16) ಮೃತ ದುರ್ದೈವಿ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೂ ಭಾರಿ ಮಳೆ

ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಹಳ್ಳ ಕೊಳ್ಳಗಳು ಉಕ್ಕಿ ಹರಿದಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿದಿದೆ. ಸುತ್ತಮುತ್ತಲಿನ ತೋಟ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

Continue Reading
Advertisement
ಸೈಬರ್‌ ಸೇಫ್ಟಿ cyber safety rules
ಅಂಕಣ11 mins ago

ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Swati Maliwal Case
ದೇಶ38 mins ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 202441 mins ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ48 mins ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ54 mins ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

IPL 2024
ಪ್ರಮುಖ ಸುದ್ದಿ1 hour ago

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

Virat kohli
ಕ್ರೀಡೆ1 hour ago

Virat kohli : ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು; ಇಲ್ಲಿದೆ ವಿಡಿಯೊ

Tips for Mothers
ಆರೋಗ್ಯ1 hour ago

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

virat kohli
ಕ್ರಿಕೆಟ್2 hours ago

Virat kohli : ಕೇಕೆ ಹಾಕುತ್ತಿದ್ದ ಸಿಎಸ್​ಕೆ ಅಭಿಮಾನಿಗಳ ಬಾಯ್ಮುಚ್ಚಿಸಿದ ಕೊಹ್ಲಿ; ಇಲ್ಲಿದೆ ವಿಡಿಯೊ

IPL 2024
ಕ್ರಿಕೆಟ್2 hours ago

IPL 2024 : ಚೆನ್ನೈ ಮಣಿಸಿ ಪ್ಲೇಆಫ್​ಗೇರುವ ಮುನ್ನವೇ ಸಿಕ್ಸರ್​​ಗಳ ವಿಶೇಷ ದಾಖಲೆ ಬರೆದ ಆರ್​ಸಿಬಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌