ಹೋಟೆಲ್‌ನಲ್ಲಿ ಕಳ್ಳತನಕ್ಕೆ ಬಂದು ಚಿಕನ್ ಹುಡುಕಾಡಿದ, ಅದೂ ಸಿಗದೆ ವಾಪಸಾದ ! - Vistara News

ಕ್ರೈಂ

ಹೋಟೆಲ್‌ನಲ್ಲಿ ಕಳ್ಳತನಕ್ಕೆ ಬಂದು ಚಿಕನ್ ಹುಡುಕಾಡಿದ, ಅದೂ ಸಿಗದೆ ವಾಪಸಾದ !

ಅಂಗಡಿಯ ಡ್ಯಾಶ್ ಬೋರ್ಡ್‌ನಲ್ಲಿ ದುಡ್ಡಿಲ್ಲವೆಂದು ಕಿಚನ್‌ನಲ್ಲಿ ಕಳ್ಳ ಹುಡುಕಾಟ ನಡೆಸಿದ್ದು , ನಂತರ ತಡರಾತ್ರಿ ನಾನ್-ವೆಜ್‌ಗಾಗಿ ಹುಡುಕಾಡಿದ್ದಾನೆ.

VISTARANEWS.COM


on

ಸಿಸಿಟಿವಿ ದೃಶ್ಯಾವಳಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬ್ಯಾಡರಹಳ್ಳಿ ಬಳಿಯ ತಿಗಳರಪೇಟೆಯಲ್ಲಿ ಕಳ್ಳತನಕ್ಕೆ ಎಂದು ಬಂದು ಚಿಕನ್‌ ಹುಡುಗಾಟ ಮಾಡಿ ಅದೂ ಸಿಗದೆ ಬರೀ ಕೈಯಲ್ಲಿ ಕಳ್ಳ ವಾಪಾಸಾದ ಘಟನೆ ನಡೆದಿದೆ. ತಿಗಳರಪೇಟೆಯ ಫೈವ್ ಸ್ಟಾರ್ ಚಿಕನ್ ಸೆಂಟರ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಫೈವ್ ಸ್ಟಾರ್ ಚಿಕನ್ ಸೆಂಟರ್ ಮೇಲ್ಚಾವಣಿ ಮುರಿದು ಕಳ್ಳತನಕ್ಕೆ ಯತ್ನಿಸಿದ್ದ.

ಇದನ್ನೂ ಓದಿ : 50 ಸಿಸಿಟಿವಿ, ಮೊಬೈಲ್‌ ನೆಟ್‌ವರ್ಕ್‌ ಸಹಾಯದಿಂದ ಸಿಕ್ಕಿಬಿದ್ದ ಲಾರಿ ಕಳ್ಳ !

ಅಂಗಡಿಯ ಡ್ಯಾಶ್ ಬೋರ್ಡ್‌ನಲ್ಲಿ ದುಡ್ಡಿಲ್ಲವೆಂದು ಕಿಚನ್‌ನಲ್ಲಿ ಕಳ್ಳ ಹುಡುಕಾಟ ನಡೆಸಿದ್ದು , ನಂತರ ತಡರಾತ್ರಿ ನಾನ್-ವೆಜ್‌ಗಾಗಿ ಹುಡುಕಾಡಿದ್ದಾನೆ. ದುಡ್ಡು ಸಿಗದೇ, ಚಿಕನ್ನೂ ಸಿಗದೇ ಬರೀ ಗೈಯಲ್ಲಿ ವಾಪಾಸ್ಸಾಗಿದ್ದಾನೆ. ಈ ದೃಶ್ಯ ಸಿಸಿಟವಿಯಲ್ಲಿ ಸೆರೆ ಯಾಗಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಅಂಗಡಿ ಮಾಲೀಕ ಉಮೇಶ್‌ ಅವರಿಂದ ದೂರು ದಾಖಲಾಗಿದೆ.

https://vistaranews.com/2022/04/18/%e0%b2%ae%e0%b2%b2%e0%b2%97%e0%b2%bf%e0%b2%a6%e0%b3%8d%e0%b2%a6-%e0%b2%95%e0%b3%8d%e0%b2%af%e0%b2%be%e0%b2%ac%e0%b3%8d-%e0%b2%9a%e0%b2%be%e0%b2%b2%e0%b2%95%e0%b2%a8%e0%b2%bf%e0%b2%97%e0%b3%86/
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Murder Case: ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

VISTARANEWS.COM


on

woman murder case kengeri
ಕೊಲೆಯಾದ ದಿವ್ಯಾ, ಆರೋಪಿ ಮೋನಿಕಾ
Koo

ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ (Woman murder case) ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ (kengeri murder, bangalore crime) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನು ಗಮನಿಸಿ ಸ್ಕೆಚ್‌ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ (Strangle) ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

“ನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ” ಎಂದವನು ಮಾಡಿಯೇ ಬಿಟ್ಟ!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು (Stabbing) ಮತ್ತೊಬ್ಬ ಯುವತಿಯನ್ನು ಕೊಲೆ (Woman Murder Case) ಮಾಡಲಾಗಿದೆ. ಇದು ಕೂಡ ಪಾಗಲ್‌ ಭಗ್ನಪ್ರೇಮಿಯ ಕೃತ್ಯವಾಗಿದೆ. ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಈ ಕೊಲೆಯೂ ಘಟಿಸಿದೆ. ಕೊಲೆಗೆ ಕೆಲ ದಿನಗಳ ಮುನ್ನ ಆರೋಪಿ, ಯುವತಿಗೆ “ನೇಹಾ ಹಿರೇಮಠ ಥರ ಮಾಡ್ತೀನಿ” ಎಂದು ಬೆದರಿಸಿದ್ದ ಎಂದು ಗೊತ್ತಾಗಿದೆ.

woman murder case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಂಜಲಿ ಅಂಬಿಗೇರ (20) ಕೊಲೆಯಾಗಿರುವ ಯುವತಿ. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದಾನೆ ಎಂದು ಗೊತ್ತಾಗಿದೆ. ಬೆಳಗಿನ ಜಾವ 5.30ಕ್ಕೆ ಅಂಜಲಿ ಅವರು ವೀರಾಪೂರ ಓಣಿಯಲ್ಲಿರುವ ತಮ್ಮ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿ ಮನೆಗೇ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ಪ್ರತಿಭಟಿಸಿದರೂ ಅವರ ಎದುರೇ ಇರಿದಿದ್ದಾನೆ.

ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಕೊಲೆಪಾತಕಿ ಗಿರೀಶ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠ ಅವರನ್ನು ಪಾಗಲ್‌ ಪ್ರೇಮಿ ಫಯಾಜ್‌ ಕಾಲೇಜ್‌ ಕ್ಯಾಂಪಸ್‌ನಲ್ಲಿಯೇ ಕಳೆದ ತಿಂಗಳು ಕೊಚ್ಚಿ ಕೊಲೆ ಮಾಡಿದ್ದ. ಇದು ಲವ್‌ ಜಿಹಾದ್‌ ಪ್ರಕರಣ ಎಂದು ರಾಜಾದ್ಯಂತ ತೀವ್ರ ಪ್ರತಿಭಟನೆ, ರಾಜಕೀಯ ಕೆಸರೆರಚಾಟಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Continue Reading

ಕ್ರೈಂ

Physical Abuse: ಹಿಂದೂ ಯುವಕನ ಪ್ರೀತಿಸಿ ಮದುವೆಯಾದವಳಿಗೆ ಲೈಂಗಿಕ ಕಿರುಕುಳ, ಕಣ್ಣೀರಿಟ್ಟ ಮುಸ್ಲಿಂ ಮಹಿಳೆ

Physical Abuse: ಸೈನಾಜ್‌ನ ಮಗ ಸದ್ದಾಂನ ಮೇಲೆ ಲಿಯಾಕತ್ ಗ್ಯಾಂಗ್ ತೀವ್ರವಾಗಿ ಹಲ್ಲೆ ಮಾಡಿದೆ. ನಿನ್ನೆ ರಾತ್ರಿ ಕೂಡ ತಾಯಿ ಸೈನಾಜ್, ಪುತ್ರ ಸದ್ದಾಂ ಮೇಲೆ ಆರೋಪಿ ಲಿಯಾಕತ್, ಅಲ್ತಾಫ್ ಸೈಯದ್, ಸಮೀರ್, ರಿಯಾಜ್, ಜಾವೀದ್ ಎಂಬುವವರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

VISTARANEWS.COM


on

physical abuse gadag crime
Koo

ಗದಗ: ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾಗಿ, ಕೊರೊನಾ (corona virus) ಕಾಲದಲ್ಲಿ ಪತಿಯನ್ನೂ ಕಳೆದುಕೊಂಡಿರುವ ಮುಸ್ಲಿಂ ಮಹಿಳೆಗೆ ಕೆಲವು ಮುಸ್ಲಿಂ ಪುಂಡರು ಲೈಂಗಿಕ ಕಿರುಕುಳ (Physical Abuse) ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಮಹಿಳೆಯ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೂ ದುಷ್ಕರ್ಮಿಗಳು ಕಿರುಕುಳ ನೀಡಿದ್ದು, ಹಲ್ಲೆ (Assault case) ನಡೆಸಿದ್ದಾರೆ. ದೂರು ನೀಡಿದರೂ ಪೊಲೀಸರು ಕ್ಯಾರೇ ಎಂದಿಲ್ಲ.

ಗದಗ ಬೆಟಗೇರಿಯ ಆಶ್ರಯ ಕಾಲೋನಿ ನಿವಾಸಿಯಾದ ಸೈನಜಾ ಬೇಗಂ ಎಂಬಾಕೆ ಕಿರುಕುಳಕ್ಕೆ ಒಳಗಾದ ಮಹಿಳೆ. ನಾಲ್ಕು ಜನ ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಸೈನಜಾ ಬೇಗಂ, ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಮೂರು ವರ್ಷಗಳ ಹಿಂದೆ ಕೊರೊನಾದಿಂದ ಪತಿ ನಿಧನ ಹೊಂದಿದ್ದರು.

ಇತ್ತೀಚೆಗೆ ಲಿಯಾಕತ್, ಅಲ್ತಾಫ್, ಸೈಯದ್ ಸೇರಿದಂತೆ ಹಲವರು ಈಕೆಗೆ ಕಿರುಕುಳ ನೀಡುತ್ತಿದ್ದು, ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. ಸೈನಾಜ್‌ನ ಮಗ ಸದ್ದಾಂನ ಮೇಲೆ ಲಿಯಾಕತ್ ಗ್ಯಾಂಗ್ ತೀವ್ರವಾಗಿ ಹಲ್ಲೆ ಮಾಡಿದೆ. ನಿನ್ನೆ ರಾತ್ರಿ ಕೂಡ ತಾಯಿ ಸೈನಾಜ್, ಪುತ್ರ ಸದ್ದಾಂ ಮೇಲೆ ಆರೋಪಿ ಲಿಯಾಕತ್, ಅಲ್ತಾಫ್ ಸೈಯದ್, ಸಮೀರ್, ರಿಯಾಜ್, ಜಾವೀದ್ ಎಂಬುವವರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

“ನಮಗೆ ಸೂಕ್ತವಾದ ರಕ್ಷಣೆ ನೀಡಬೇಕುʼʼ ಎಂದು ಮಹಿಳೆ ಒತ್ತಾಯಿಸಿದ್ದಾರೆ. ತಾಯಿ, ಮಕ್ಕಳ ‌ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಘಟನೆ ಕುರಿತು ಬೆಟಗೇರಿ ಪೊಲೀಸ್ ಠಾಣೆಗೆ ಲಿಯಾಕತ್, ಅಲ್ತಾಫ್ ಎಂಬವರ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ದೂರು ನೀಡಿದರೂ ಪೊಲೀಸರು ಮಾತ್ರ ಈ ಕುರಿತು ಕ್ಯಾರೇ ಎಂದಿಲ್ಲ. ಜೊತೆಗೆ ದೂರು ನೀಡಿದರೆ ನಿನ್ನ ಮತ್ತು ಮಕ್ಕಳನ್ನು ಒಳಗೆ ಹಾಕುತ್ತೇವೆ ಎಂದು ಪೊಲೀಸರು ಕೂಡ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರ ವಿರುದ್ಧವೂ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನು ಗಮನಿಸಿ ಸ್ಕೆಚ್‌ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Continue Reading

ಕ್ರೈಂ

Road Accident: ಭೀಕರ ರಸ್ತೆ ಅಪಘಾತ; ಮತ ಚಲಾಯಿಸಿ ತೆರಳುತ್ತಿದ್ದ 6 ಮಂದಿ ಸಜೀವ ದಹನ

Road Accident: ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆಯಲ್ಲಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಹೊತ್ತಿ ಉರಿದು ಆರು ಮಂದಿ ಸಜೀವ ದಹನವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತರನ್ನು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಅಂಜಿ (35), ಉಪ್ಪುಂದೂರು ಕಾಶಿ (65), ಉಪ್ಪುಗುಂದೂರು ಲಕ್ಷ್ಮಿ (55) ಮತ್ತು ಮುಪ್ಪರಾಜು ಖ್ಯಾತಿ ಸಾಯಿಶ್ರೀ (8) ಎಂದು ಗುರುತಿಸಲಾಗಿದೆ. ಉಳಿದಿಬ್ಬರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

VISTARANEWS.COM


on

Road Accident
Koo

ಅಮರಾವತಿ: ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆಯಲ್ಲಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಹೊತ್ತಿ ಉರಿದು ಆರು ಮಂದಿ ಸಜೀವ ದಹನವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ (Road Accident). ಹಲವು ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿರಾಲಾದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಅದು ಚಾಲಕನ ನಿಯಂತ್ರಣ ಕಳೆದುಕೊಂಡು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆಯಿತು. ಬಳಿಕ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ್ದು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಮೃತರನ್ನು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಅಂಜಿ (35), ಉಪ್ಪುಂದೂರು ಕಾಶಿ (65), ಉಪ್ಪುಗುಂದೂರು ಲಕ್ಷ್ಮಿ (55) ಮತ್ತು ಮುಪ್ಪರಾಜು ಖ್ಯಾತಿ ಸಾಯಿಶ್ರೀ (8) ಎಂದು ಗುರುತಿಸಲಾಗಿದೆ. ಉಳಿದಿಬ್ಬರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಘಟನೆಯಲ್ಲಿ ಗಾಯಗೊಂಡವರಿಗೆ ಆರಂಭದಲ್ಲಿ ಚಿಲಕಲೂರಿಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರಿಗೆ ಕಳುಹಿಸಲಾಗಿದೆ. ಸೋಮವಾರ (ಮೇ 13) ಮತ ಚಲಾಯಿಸಿದ ನಂತರ ಒಟ್ಟು 42 ಜನರು ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಬಸ್‌ನಲ್ಲಿ ಹೈದರಾಬಾದ್‌ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ಪೈಕಿ ಲಾರಿ ಚಾಲಕ, ಬಸ್ ಚಾಲಕ ಮತ್ತು ಇತರ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಚಿಲಕಲೂರಿಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಎರಡೂ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ

ಉಡುಪಿ/ಮಂಡ್ಯ/ಚಿತ್ರದುರ್ಗ/ ಚಿಕ್ಕಮಗಳೂರು: ಪ್ರತ್ಯೇಕ ಕಡೆಗಳಲ್ಲಿ ನಡೆದ ನಾಲ್ಕು ಅಪಘಾತದಲ್ಲಿ ಪವಾಡ ಸದೃಶ್ಯದಂತೆ ಪ್ರಯಾಣಿಕರು ಪಾರಾಗಿದ್ದಾರೆ. ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ ಬಳಿ ಸ್ಕೂಟರ್‌ಗೆ ಟ್ರಕ್‌ವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಕಟ್ಟಡವೊಂದರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆಯೊಬ್ಬರು ಸ್ಕೂಟರ್‌ನಲ್ಲಿ ನೇರವಾಗಿ ಹೋಗುತ್ತಿದ್ದರು. ಈ ವೇಳೆ ಲೆಫ್ಟ್ ಟರ್ನ್ ತೆಗೆದುಕೊಳ್ಳುವ ಧಾವಂತದಲ್ಲಿ ಟ್ರಕ್‌ ಸ್ಕೂಟಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮಹಿಳೆ ಸ್ಕೂಟರ್‌ ಸಮೇತ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಟ್ರಕ್ ಚಾಲಕ ತಕ್ಷಣ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ದುರಂತ ತಪ್ಪಿದೆ. ಒಂದು ತಿಂಗಳ ಹಿಂದೆಯಷ್ಟೇ ಇದೇ ಸ್ಥಳದಲ್ಲಿ ಇದೇ ರೀತಿಯ ಅಪಘಾತ ನಡೆದಿತ್ತು.

ಮಂಡ್ಯದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಮೂವರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಕಾರೊಂದು ಗುದ್ದಿದೆ. ಮಂಡ್ಯದ ಹನಕೆರೆ ಗ್ರಾಮದ ಸಮೀಪದ ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಭೀಕರ ಅಪಘಾತ ನಡೆದಿದೆ. ಕೇರಳ ಮೂಲದ ಮೂವರಿಗೆ ಗಂಭೀರ ಗಾಯವಾಗಿದೆ. ಕೇರಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಹೈವೆಯಲ್ಲಿ ಉರುಳಿಬಿದ್ದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Continue Reading

ದೇಶ

Terror Module Bust: ಪಂಜಾಬ್‌ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಸಿಖ್ ಉಗ್ರರ ಜತೆ ನಂಟು ಹೊಂದಿದ್ದ ನಾಲ್ವರು ಅರೆಸ್ಟ್‌

Terror Module Bust: ರಾಜ್ಯದಲ್ಲಿ ಸಕ್ರಿಯವಾಗಿದ್ದ ಉಗ್ರ ಸಂಘಟನೆ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ. ಸಂಘಟನೆಯ ಮಾಸ್ಟರ್‌ ಮೈಂಡ್‌ ಕೂಡ ಪೊಲೀಸರ ಬಲೆಗೆ ಬಿದ್ದಿದ್ದಾನೆ. ವಿದೇಶದಲ್ಲಿ ನೆಲೆಸಿದ್ದ ಇಕ್ಬಾಲ್‌ಪ್ರಿತ್‌ ಸಿಂಗ್‌ ಅಲಿಯಾಸ್‌ ಬುಚಿ ಎಂಬಾತ ನಡೆಸುತ್ತಿದ್ದ ಉಗ್ರ ಸಂಘಟನೆಯ ಜೊತೆಗೆ ಬಂಧಿತ ನಾಲ್ವರು ನಂಟು ಹೊಂದಿದ್ದರು. ಬಂಧಿತ ಪ್ರಮುಖ ಆರೋಪಿಯನ್ನು ಗುರ್ವಿಂದರ್‌ ಸಿಂಗ್‌ ಅಲಿಯಾಸ್‌ ಶೆರಾ ಎಂದು ಗುರುತಿಸಲಾಗಿದೆ. ರಾಜಪುರದ ಲಿಬರ್ಟಿ ಚೌಕ್‌ನಲ್ಲಿ ಈ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

VISTARANEWS.COM


on

terror module
Koo

ಚಂಡೀಗಢ: ಪಂಜಾಬ್‌ನಲ್ಲಿ ದರೋಡೆಕೋರ ವಿರೋಧಿ ಕಾರ್ಯಪಡೆ(AGTF) ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆ(Terror Module Bust) ಜೊತೆಗೆ ನಂಟು ಹೊಂದಿದ್ದ ನಾಲ್ವರನ್ನು ಹೆಡೆಮುರಿ ಕಟ್ಟಲಾಗಿದೆ. ಕಳೆದ ವರ್ಷ ಹತ್ಯೆಯಾಗಿದ್ದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌(Hardeep Singh Nijjar) ಆಪ್ತನ ನಿಯಂತ್ರಣದಲ್ಲಿದ್ದ ಉಗ್ರ ಸಂಘಟನೆ ಜೊತೆಗೆ ಈ ನಾಲ್ವರು ನಂಟು ಹೊಂದಿರುವವುದು ಖಚಿತವಾಗಿದೆ. ಇನ್ನು ಪ್ರಮುಖ ಆರೋಪಿ ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರನ್ನು ಅರೆಸ್ಟ್‌ ಮಾಡಿದ್ದಾರೆ.

ಪಂಜಾಬ್‌ ಡಿಜಿಪಿ ಗೌರವ್‌ ಯಾದವ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸಕ್ರಿಯವಾಗಿದ್ದ ಉಗ್ರ ಸಂಘಟನೆ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ. ಸಂಘಟನೆಯ ಮಾಸ್ಟರ್‌ ಮೈಂಡ್‌ ಕೂಡ ಪೊಲೀಸರ ಬಲೆಗೆ ಬಿದ್ದಿದ್ದಾನೆ. ವಿದೇಶದಲ್ಲಿ ನೆಲೆಸಿದ್ದ ಇಕ್ಬಾಲ್‌ಪ್ರಿತ್‌ ಸಿಂಗ್‌ ಅಲಿಯಾಸ್‌ ಬುಚಿ ಎಂಬಾತ ನಡೆಸುತ್ತಿದ್ದ ಉಗ್ರ ಸಂಘಟನೆಯ ಜೊತೆಗೆ ಬಂಧಿತ ನಾಲ್ವರು ನಂಟು ಹೊಂದಿದ್ದರು. ಬಂಧಿತ ಪ್ರಮುಖ ಆರೋಪಿಯನ್ನು ಗುರ್ವಿಂದರ್‌ ಸಿಂಗ್‌ ಅಲಿಯಾಸ್‌ ಶೆರಾ ಎಂದು ಗುರುತಿಸಲಾಗಿದೆ. ರಾಜಪುರದ ಲಿಬರ್ಟಿ ಚೌಕ್‌ನಲ್ಲಿ ಈ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಪ್ರದೇಶದಲ್ಲಿ ಆರೋಪಿಗಳು ತಂಗಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ AGTF ತಂಡ ಹೆಚ್ಚುವರಿ ಡಿಜಿಪಿ ಪ್ರಮೋದ್‌ ಬನ್‌ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಕಾರ್ಯಾಚರಣೆಗೆ ಪೊಲೀಸ್‌ ಅಧಿಕಾರಿಗಳಾದ ಗುರ್ಮಿತ್‌ ಸಿಂಗ್‌ ಚೌಹಾಣ್‌ ಮತ್ತು ಬ್ರಿಕಮ್‌ಜಿತ್‌ ಸಿಂಗ್‌ ಬ್ರಾರ್‌ ಸಾಥ್‌ ಕೊಟ್ಟಿದ್ದಾರೆ. ಪಂಜಾಬ್‌ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಎಸಗಲೆಂದೇ ಬುಚಿ ಈ ಗ್ಯಾಂಗ್‌ ಅನ್ನು ನಡೆಸುತ್ತಿದ್ದ ಎಂಬ ವಿಚಾರವನ್ನು ಬಂಧಿತ ಶೆರಾ ಬಾಯ್ಬಿಟ್ಟಿದ್ದಾನೆ. ಇನ್ನು ಬಂಧಿತರಿಂದ ಮೂರು ಪಿಸ್ತೂಲ್‌ ಮತ್ತು ಜೀವಂತ ಗುಂಡುಗಳು ಹಾಗೂ ಕಾರೊಂದನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಇತರ ಮೂವರನ್ನು ಪಟಿಯಾಲ ಮೂಲದ ಗುರುಪ್ರಿತ್‌ ಸಿಂಗ್‌, ರಂಜಿತ್‌ ಸಿಂಗ್‌ ಅಲಿಯಾಸ್‌ ಸೋನು ಮತ್ತು ಜಗಜಿತ್‌ ಸಿಂಗ್‌ ಅಲಿಯಾಸ್‌ ಜಶನ್‌ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

ಖಲಿಸ್ತಾನ ಪ್ರತ್ಯೇಕತಾವಾದಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದ. 2016-2017ರಲ್ಲಿ ನಡೆದಿದ್ದ ಕೊಲೆ ಪ್ರಕರಣಗಳ ರೂವಾರಿ ರಮಣ್‌ದೀಪ್‌ ಬಗ್ಗಾ ಅಲಿಯಾಸ್‌ ಕೆನೇಡಿಯನ್‌ನ ಆಪ್ತ ಕೂಡ ಹೌದು. ಬಗ್ಗಾ 11 ಕ್ರಿಮಿನಲ್‌ ಕೇಸ್‌ಗಳಲ್ಲಿ ಅರೆಸ್ಟ್‌ ಆಗಿದ್ದು, ಸದ್ಯ ತಿಹಾರ್‌ ಜೈಲಿನಲ್ಲಿದ್ದಾನೆ.

Continue Reading
Advertisement
Himanta Biswa Sarma
ರಾಜಕೀಯ3 mins ago

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Facebook, Instagram Down
ತಂತ್ರಜ್ಞಾನ10 mins ago

Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Madhavi Raje Scindia
ದೇಶ22 mins ago

Madhavi Raje Scindia: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮಾತೃ ವಿಯೋಗ

woman murder case kengeri
ಕ್ರೈಂ31 mins ago

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Anchor Anushree talking with fans on instagram live
ಕಿರುತೆರೆ33 mins ago

Anchor Anushree: ಖುಷಿಯಾಗಿದ್ರೂ ಕಷ್ಟ, ಸಾಧನೆ ಹೊಗಳಿದ್ರೆ ಬಕೆಟ್‌ ಅಂತೀರಾ: ಅನುಶ್ರೀ ಬೇಸರ

NewsClick case
ದೇಶ1 hour ago

NewsClick Case: ಚೀನಾ ಪರ ಪ್ರಚಾರ; ಬಂಧನದಲ್ಲಿದ್ದ ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ರಿಲೀಸ್‌

Drone Prathap Special Gift For sangeetha sringeri Birthday
ಕಿರುತೆರೆ1 hour ago

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

gold rate today
ಚಿನ್ನದ ದರ1 hour ago

Gold Rate Today: ಬಂಗಾರದ ಬೆಲೆ ಏರಿಕೆ; ಮಾರುಕಟ್ಟೆ ದರ ಇಂದು ಹೀಗಿದೆ

Actor Diganth role in Crazystar Ravichandran The Judgement movie Kannada
ಸ್ಯಾಂಡಲ್ ವುಡ್2 hours ago

Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

US sanction
ದೇಶ2 hours ago

US sanction: ನಿರ್ಬಂಧ ಹೇರುವ ಎಚ್ಚರಿಕೆ ನೀಡಿದ್ದ ಅಮೆರಿಕಕ್ಕೆ ಭಾರತ ತಿರುಗೇಟು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ5 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ8 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ18 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202420 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202423 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ24 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌