Nisha Narasapa: ಬಾಲನಟಿ ವಂಶಿಕಾ ಹೆಸರು ಬಳಸಿ ಫೈನಾನ್ಶಿಯರುಗಳಿಗೂ ಧೋಖಾ ಮಾಡಿದ ನಿಶಾ! - Vistara News

ಕ್ರೈಂ

Nisha Narasapa: ಬಾಲನಟಿ ವಂಶಿಕಾ ಹೆಸರು ಬಳಸಿ ಫೈನಾನ್ಶಿಯರುಗಳಿಗೂ ಧೋಖಾ ಮಾಡಿದ ನಿಶಾ!

ನಿಮ್ಮ ಮಕ್ಕಳಿಗೆ ನಟನೆಯ ಚಾನ್ಸ್ ಕೊಡಿಸುವುದಾಗಿ ಈ ನಿಶಾ (nisah narasappa) ಎಂಬಾಕೆ ಹಲವು ಪೋಷಕರನ್ನು ನಂಬಿಸಿ ವಂಚಿಸಿದ್ದಳು. ಮಕ್ಕಳ ಪೋಷಕರಲ್ಲದೇ ದೊಡ್ಡ ದೊಡ್ಡ ಫೈನಾನ್ಷಿಯರ್‌ಗಳಿಗೂ ವಂಚನೆ ಮಾಡಿರುವುದು ಈಗ ಗೊತ್ತಾಗಿದೆ.

VISTARANEWS.COM


on

vanshika name misusing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬಾಲನಟಿ ವಂಶಿಕಾ (Vanshika Anjani kashyapa) ಹೆಸರು ಬಳಸಿಕೊಂಡು ಹಲವರಿಗೆ ವಂಚಿಸಿದ (fraud case) ಪ್ರಕರಣದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ಬಗೆದಷ್ಟೂ ಮತ್ತಷ್ಟು ರಹಸ್ಯಗಳು ಇದರಲ್ಲಿ ಬಯಲಾಗುತ್ತಿದೆ. ನಿಶಾ ನರಸಪ್ಪ (Nisha Narasapa) ಮತ್ತಷ್ಟು ಮಂದಿಗೆ ವಂಚಿಸಿರುವುದು ಬಯಲಾಗಿದೆ.

ನಿಮ್ಮ ಮಕ್ಕಳಿಗೆ ನಟನೆಯ ಚಾನ್ಸ್ ಕೊಡಿಸುವುದಾಗಿ ಈ ನಿಶಾ ಎಂಬಾಕೆ ಹಲವು ಪೋಷಕರನ್ನು ನಂಬಿಸಿ ವಂಚಿಸಿದ್ದಳು. ಮಕ್ಕಳ ಪೋಷಕರಲ್ಲದೇ ದೊಡ್ಡ ದೊಡ್ಡ ಫೈನಾನ್ಷಿಯರ್‌ಗಳಿಗೂ ವಂಚನೆ ಮಾಡಿರುವುದು ಈಗ ಗೊತ್ತಾಗಿದೆ. ಸುಮಾರು 30ರಿಂದ 40 ಜನ ಹೀಗೆ ನಿಶಾಗೆ ಹಣ ಕೊಟ್ಟು ಕೈ ಸುಟ್ಟಿಕೊಂಡಿದ್ದಾರೆ.

ಈಕೆ ಬಣ್ಣ ಬಣ್ಣದ ಮಾತುಗಳ ಮೂಲಕ ಮರುಳು ಮಾಡಿ ಲಕ್ಷ ಲಕ್ಷ ಹಣ ತೆಗೆದುಕೊಳ್ಳುತ್ತಿದ್ದಳು. ತೆಗೆದುಕೊಂಡ ಹಣಕ್ಕೆ ಪ್ರತಿಯಾಗಿ ಆರಂಭದಲ್ಲಿ 20 ಪರ್ಸೆಂಟ್ ಬಡ್ಡಿ ಹಣ ನೀಡಿದ್ದಳು. 10 ಲಕ್ಷ ಹಣ ಪಡೆದರೆ ಎರಡು ಲಕ್ಷ ಬಡ್ಡಿ ಹಾಕಿ ರಿಟರ್ನ್ ಮಾಡುತ್ತಿದ್ದಳು. ಇದನ್ನು ನಂಬಿ ಮತ್ತಷ್ಟು ಹಣ ನೀಡಿದವರಿಗೆ ಅಸಲೇ ಮರಳಿ ಬಂದಿಲ್ಲ.

ದೂರು ದಾಖಲಾಗುತ್ತಿದ್ದಂತೆ ನಿಶಾ ನರಸಪ್ಪ ಅಕೌಂಟ್ ಖಾಲಿ ಮಾಡಿದ್ದಾಳೆ. ಕೇವಲ ಎಂಟು ಸಾವಿರ ಇಟ್ಟಿದ್ದಾಳೆ. ನಿಶಾ ಅಕೌಂಟ್ ಡಿಟೇಲ್ಸ್ ತೆಗೆದಾಗ ಆಕೆಯ ಕೋಟಿ ಕೋಟಿ ವ್ಯವಹಾರ ಬಹಿರಂಗವಾಗಿದೆ. ಸದ್ಯ ತನಿಖೆ ಮುಂದುವರಿಸಿರುವ ಸದಾಶಿವನಗರ ಪೊಲೀಸರು, ವಂಚನೆ ಮಾಡಿ ಈಕೆ ಗಳಿಸಿರೋ ಆಭರಣ, ಆಸ್ತಿ ವಶಕ್ಕೆ ಮುಂದಾಗಿದ್ದಾರೆ.

ವಂಶಿಕಾ ಅಂಜನಿ ಕಶ್ಯಪ ಕಿರುತೆರೆಯಲ್ಲಿ ತನ್ನದೆ ಛಾಪು ಮೂಡಿಸಿ ಎಲ್ಲರ ಮನ ಗೆಲುತ್ತಿರುವ ಪೋರಿ. ತಂದೆ ನಟ ಮಾಸ್ಟರ್‌ ಆನಂದ್‌ರಂತೆ (Master anandh) ಅರಳು ಹುರಿದಂತೆ ಮಾತನಾಡುವ ವಂಶಿಕಾ (Vanshika Anjani kashyapa) ಸೋಶಿಯಲ್‌ ಮೀಡಿಯಾದಲ್ಲೂ (Social Media) ಹೆಚ್ಚು ಸದ್ದು ಮಾಡುತ್ತಿದ್ದಾಳೆ. ಈ ಬಾಲನಟಿ ವಂಶಿಕಾ ಹೆಸರನ್ನು ದುರುಪಯೋಗ (Fraud Case) ಮಾಡಿಕೊಳ್ಳಲಾಗುತ್ತಿದೆ ಎಂದು ತಾಯಿ ಯಶಸ್ವಿನಿ ಜು.13ರಂದು ಠಾಣೆ ಮೆಟ್ಟಿಲೇರಿದ್ದರು.

ವಂಶಿಕಾ ಮಾಸ್ಟರ್‌ ಆನಂದ್‌ ಹೆಸರಿನಲ್ಲಿ (Vanshika Anjani kashyapa) ಹಣ ಪೀಕಿದ ನಿಶಾ ನರಸಪ್ಪಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶಿಸಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಒಂದೊಂದು ಹಳೇ ವಂಚನೆ ಕೇಸ್‌ಗಳು (Fraud Case) ಬೆಳಕಿಗೆ ಬರುತ್ತಿವೆ. ನಿಶಾ ನರಸಪ್ಪ (nisha narasapa) ವಿರುದ್ಧ ಇದೇ ಮೊದಲಲ್ಲ, ಈ ಹಿಂದೆಯೇ ವಂಚನೆ ಕೇಸ್‌ ದಾಖಲಾಗಿದೆ.

ಇದನ್ನೂ ಓದಿ: Nisha narasapa: ಬಗೆದಷ್ಟು ಬೆಳಕಿಗೆ ಬರ್ತಿದೆ ನಿಶಾ ನರಸಪ್ಪ ಮಾಡಿರುವ ಮಹಾ ಮೋಸ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌, ಪುತ್ರ ನಲಪಾಡ್‌ಗೆ ಇಡಿ ಶಾಕ್!

VISTARANEWS.COM


on

ಬೆಂಗಳೂರು: ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಶಾಸಕ, ಬಿಡಿಎ ಅಧ್ಯಕ್ಷ ಎನ್.‌ ಎ. ಹ್ಯಾರಿಸ್‌ ಹಾಗೂ ಅವರ ಪುತ್ರ ಯುವ ಕಾಂಗ್ರೆಸ್‌ ಮುಖಂಡ ನಲಪಾಡ್‌ ಅವರ ನಿವಾಸ ಮತ್ತು ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ಬಿಟ್‌ ಕಾಯಿನ್‌ ಪ್ರಕರಣದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ. ಬಿಟ್‌ ಕಾಯಿನ್‌ ಆರೋಪಿ ಶ್ರೀಕಿ ಜೊತೆಯಲ್ಲಿ ವ್ಯವಹಾರ ನಡೆಸಿರುವ ಸಂಬಂಧ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ನಲಪಾಡ್‌ ಶ್ರೀಕಿ ಜೊತೆ ಹಲವು ವರ್ಷಗಳಿಂದ ವ್ಯವಹಾರ ಹೊಂದಿರುವ ಆರೋಪ ಎದುರಿಸುತ್ತಿದ್ದಾರೆ. ಇವರಿಬ್ಬರ ನಡುವೆ ಅಂದಾಜು ರೂ.4.5 ಕೋಟಿ ವ್ಯವಹಾರ ವಹಿವಾಟು ನಡೆದಿರುವುದನ್ನು ಇಡಿ ಪತ್ತೆ ಹಚ್ಚಿದೆ.
ಇಂದು ಬೆಳ್ಳಂಬೆಳಗ್ಗೆ 14 ಇಡಿ ಅಧಿಕಾರಿಗಳು 4 ಕಾರುಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ. ಈಗಲೂ ದಾಖಲೆಗಳ ಪರಿಶೀಲನೆ ಮುಂದುವರೆದಿದೆ. ಅಶೋಕ ನಗರದಲ್ಲಿರುವ ಹ್ಯಾರಿಸ್ ನಿವಾಸ ಸೇರಿದಂತೆ 17 ಕಡೆ ಶೋಧ ನಡೆದಿದೆ.

Continue Reading

ಕೊಡಗು

Murder Case : ತೆಲಂಗಾಣ ಉದ್ಯಮಿ ಕೊಲೆ ಕೇಸ್‌; ಸ್ಥಳ ಮಹಜರು ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಲ್ಕಿತ್ತ ಆರೋಪಿ

Murder Case : ತೆಲಂಗಾಣ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಸ್ಥಳ ಮಹಜರು ವೇಳೆ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

VISTARANEWS.COM


on

Murder Case

ಬೆಂಗಳೂರು: ಕೊಲೆ ಆರೋಪಿಯನ್ನು (Murder Case) ಮಹಜರು ನಡೆಸಲು ಕರೆದೊಯ್ಯುವ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿರುವ ಘಟನೆ ತೆಲಂಗಾಣ ರಾಜ್ಯದ ಉಪ್ಪಳ್‌ನಲ್ಲಿ ನಡೆದಿದೆ. ತೆಲಂಗಾಣದಲ್ಲಿ ಉದ್ಯಮಿಯನ್ನು ಹತ್ಯೆ ನಡೆಸಿ ಬಳಿಕ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಪನ್ಯದ ಎಸ್ಟೇಟ್‌ನಲ್ಲಿ ಸುಟ್ಟುಹಾಕಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದರು.

ಓರ್ವ ನ್ಯಾಯಾಂಗ ಬಂಧನವಾಗಿದ್ದು, ಉಳಿದ ಇಬ್ಬರು ಆರೋಪಿಗಳ ಪೈಕಿ ಅಂಕುರ್ ರಾಣಾ ಠಾಕೂರ್‌ನನ್ನು ಎರಡು ದಿನಗಳ ಹಿಂದೆ ತೆಲಂಗಾಣಕ್ಕೆ ಮಹಜರು ನಡೆಸಲು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಸದ್ಯ ಆರೋಪಿ ಪರಾರಿ ಸಂಬಂಧ ತೆಲಂಗಾಣ ಉಪ್ಪಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚುವರಿಯಾಗಿ ಕೊಡಗಿನ ಎರಡು ಎಕ್ಸ್ ಪರ್ಟ್ ಟೀಮ್ ಕೂಡ ತೆಲಂಗಾಣಕ್ಕೆ ತೆರಳಿದ್ದು ಹುಟುಕಾಟ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಭೇದಿಸಿ ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.

Murder Case
ಬಂಧಿತ ಆರೋಪಿಗಳು

ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading

ಕೊಡಗು

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣವನ್ನು ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಪನ್ಯ ಎಫ್.ಸಿ. ತಂಡದ ಸದಸ್ಯರು ಸನ್ಮಾನಿಸಿ ಗೌರವಿಸಿದರು.

VISTARANEWS.COM


on

murder case

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಸಂದೇಶ್‌ ಎಂಬುವವರಿಗೆ ಸೇರಿದ ಪನ್ಯ ಕಾಫಿ ತೋಟದಲ್ಲಿ ವ್ಯಕ್ತಿಯನ್ನು ಕೊಲೆ (murder case) ಮಾಡಿ, ಸುಟ್ಟು ಹಾಕಿದ ಪ್ರಕರಣವನ್ನು ಸುಂಟಿಕೊಪ್ಪ ಪೊಲೀಸರು ಕಾರ್ಯಾಚರಣೆ ನಡೆಸಿ ಭೇದಿಸಿದ್ದರು. ಹೀಗಾಗಿ ಸುಂಟಿಕೊಪ್ಪ ಪೊಲೀಸರ ಕಾರ್ಯವನ್ನು ಶ್ಲಾಘಿಸಿ ಪನ್ಯತೋಟದ ಪನ್ಯ ಎಫ್.ಸಿ. ತಂಡದ ಸದಸ್ಯರು ಸುಂಟಿಕೊಪ್ಪ ಠಾಣೆಗೆ ತೆರಳಿ ಕುಶಾಲನಗರ ವೃತ್ತ ನಿರೀಕ್ಷಕ ಮುದ್ದು ಮಾದೇವ, ಸುಂಟಿಕೊಪ್ಪದ ಠಾಣಾಧಿಕಾರಿ ಚಂದ್ರಶೇಖರ ಹಾಗೂ ಕಾರ್ಯಾಚರಣೆಯಲ್ಲಿ ಭಾಗಿಯಾದ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಿದರು.

murder case

ಯಾವುದೆ ಸುಳಿವು ಇಲ್ಲದಿರೋ ಈ ಪ್ರಕರಣವನ್ನು ಪೊಲೀಸರು ಭೇದಿಸಿರೋದಕ್ಕೆ ಪನ್ಯ ಎಫ್.ಸಿ ತಂಡ ಶ್ಲಾಘನೆ ವ್ಯಕ್ತಪಡಿಸಿತ್ತು. ಪನ್ಯ ಎಫ್.ಸಿ. ತಂಡದ ಸುಮಾರು 25ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡಿದ್ದರು. ಗ್ರಾ.ಪಂ. ಸದಸ್ಯ ಪ್ರಸಾದ್ ಕುಟ್ಟಪ್ಪ ಅವರ ನೇತೃತ್ವದಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಿತು

murder case

ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನಿಗೆ ಚಟ್ಟ ಕಟ್ಟಿದ್ದಳು

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.

Murder Case

ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading

ಬೆಂಗಳೂರು

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

VISTARANEWS.COM


on

ಬೆಂಗಳೂರು: ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿಯ ಕಾಟಕ್ಕೆ ಬೇಸತ್ತ ಪತ್ನಿ ಪೊಲೀಸ್‌ ಠಾಣೆ (Assault Case) ಮೆಟ್ಟಿಲೇರಿದ್ದಾಳೆ. ಮಗುವನ್ನು ಬಲಿ ಕೊಡೋಣ, ಬಲಿ ಕೊಟ್ರೆ ನಿಧಿ ಸಿಗುತ್ತೆ. ಕುಟುಂಬದ ಸಮೃದ್ಧಿ ಹೆಚ್ಚಾಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ. ಪತಿ ವಿರುದ್ಧ ಸಿಡಿದೆದ್ದ ಪತ್ನಿಯಿಂದ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಸದ್ದಾಂ ವಿರುದ್ಧ ಪತ್ನಿಯೇ ದೂರು ನೀಡಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ನಾನೊಬ್ಬ ಹಿಂದು ಯುವಕಮ ನನ್ನ ಹೆಸರು ಆದಿಈಶ್ವರ್ ಎಂದು ಸುಳ್ಳು ಹೇಳಿ ಸದ್ದಾಂ ಹಿಂದು ಧರ್ಮದ ಯುವತಿಯನ್ನು ಮದುವೆಯಾಗಿದ್ದ.

Assault case A psychopathic husband in Bangalore Wife harassed for sacrificing her child for treasure

ಮದುವೆಯಾಗಿ ಪತ್ನಿ ಗರ್ಭಿಣಿಯಾದಾಗ ತಾನೊಬ್ಬ ಮುಸಲ್ಮಾನ್ ತನ್ನ ಹೆಸರು ಸದ್ದಾಂ ಎಂದು ಹೇಳಿಕೊಂಡಿದ್ದ.
ನೀನು ಮುಸಲ್ಮಾನ್ ಧರ್ಮಕ್ಕೆ ಮತಾಂತರವಾಗಬೇಕೆಂದು ಪತ್ನಿಯನ್ನು ಮತಾಂತರಿಸಿದ್ದ. ಅಲ್ಲದೇ ಪತ್ನಿಯ ಹೆಸರನ್ನು ಬದಲಾಯಿಸಿದ್ದ. ಪ್ರೀತಿಸಿ ಮದುವೆಯಾದವನು ಧರ್ಮ ಯಾವುದಾದರೇನು ಎಂದು ಪತ್ನಿಯೂ ಸುಮ್ಮನಾಗಿದ್ದಳು. ಆದರೆ ಇತ್ತೀಚಿಗೆ ಸೈಕೋ ರೀತಿಯಲ್ಲಿ ಸದ್ದಾಂ ವರ್ತಿಸುತ್ತಿದ್ದ.

Assault case A psychopathic husband in Bangalore Wife harassed for sacrificing her child for treasure

ಗಂಡು ಮಗು ಹುಟ್ಟಿದ ನಂತರ ಕುಟ್ಟಿ ಸೈತಾನ್ ಪೂಜೆ ಮಾಡಬೇಕು. ಕುಟ್ಟಿ ಸೈತಾನ್ ಪೂಜೆಯಲ್ಲಿ ಮಗುವನ್ನು ಬಲಿ ಕೊಡಬೇಕು. ಮಗುವನ್ನು ಬಲಿ ಕೊಟ್ರೆ ಸಮೃದ್ಧಿ ಹೆಚ್ಚಾಗತ್ತೆ, ಜತೆಗೆ ನಿಧಿ ಸಿಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಸದ್ಯ ಸೈಕೋ ಗಂಡನಿಂದ ತಪ್ಪಿಸಿಕೊಂಡಿರುವ ಮಹಿಳೆ ತುಮಕೂರಿನ ತವರು ಮನೆ ಸೇರಿಕೊಂಡಿದ್ದಾಳೆ. ತುಮಕೂರಿಗೂ ತೆರಳಿ ಮಗುವನ್ನು ಬಲಿ ಕೊಡೋಣ ಮಗುವನ್ನು ಕೊಡು ಎಂದು ಟಾರ್ಚರ್ ಕೊಟ್ಟಿದ್ದಾನೆ. ಆರೋಪಿ ಸದ್ದಾಂ ಪತ್ನಿಯ ತಾಯಿಗೂ ಜೀವ ಬೆದರಿಕೆ ಹಾಕಿದ್ದಾನೆ.

Assault case A psychopathic husband in Bangalore Wife harassed for sacrificing her child for treasure

ಹೀಗಾಗಿ ಮಹಿಳೆ ಈ ಬಗ್ಗೆ ಕೆ.ಆರ್.ಪುರ ಠಾಣೆಗೆ ದೂರು ನೀಡಿದ್ದಾಳೆ. ಆದರೆ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ದಯಾನಂದ್‌ಗೆ ನೊಂದಾಕೆ ದೂರು ನೀಡಿದ್ದಾಳೆ. ತಡರಾತ್ರಿ ಎದ್ದು ಮಂತ್ರ ಪಠಿಸುತ್ತಾ ವಾಮಾಚಾರ ವಿದ್ಯೆ ಅಭ್ಯಾಸ ಮಾಡುತ್ತಿದ್ದ. ಪತಿಯ ವರ್ತನೆ ಕಂಡು ಭಯಭೀತಳಾಗಿದ್ದ ಮಹಿಳೆ, ದಿನ ಕಳೆದಂತೆ ಕುಟ್ಟಿ ಸೈತಾನ್ ಪೂಜೆಗೆ ಮಗುವನ್ನು ಬಲಿ ಕೊಡಬೇಕೆಂದು ಹಿಂಸೆ ನೀಡಲು ಶುರು ಮಾಡಿದ್ದ.

Continue Reading
Advertisement
ಕರ್ನಾಟಕ7 ನಿಮಿಷಗಳು ago

SSLC ಫಲಿತಾಂಶ ಪ್ರಕಟ ಯಾವಾಗ? ತಡ ಆಗುತ್ತಿರುವುದು ಏಕೆ?; ಇಲ್ಲಿದೆ ಮಾಹಿತಿ

Latest20 ನಿಮಿಷಗಳು ago

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌, ಪುತ್ರ ನಲಪಾಡ್‌ಗೆ ಇಡಿ ಶಾಕ್!

Latest28 ನಿಮಿಷಗಳು ago

ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ದೇಶದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು

ರಾಜಕೀಯ43 ನಿಮಿಷಗಳು ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ: ಸಿಎಂ ಸಿದ್ದರಾಮಯ್ಯ ಕರೆ

Latest53 ನಿಮಿಷಗಳು ago

ಅಕ್ಷಯ ತೃತೀಯದ ದಿನ ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌

ಕರ್ನಾಟಕ21 ಗಂಟೆಗಳು ago

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

Latest1 ದಿನ ago

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

ಪ್ರಮುಖ ಸುದ್ದಿ1 ದಿನ ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

ಸುವಚನ1 ದಿನ ago

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

Kodava Family Hockey Tournament Website Launched
ಕೊಡಗು1 ವರ್ಷ ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌