Congress | ಪೊಲೀಸ್‌ ಠಾಣೆ ಮೆಟ್ಟಿಲೇರಿದ ಎನ್‌ಎಸ್‌ಯುಐ ಬಣ ಬಡಿದಾಟ - Vistara News

ಬೆಂಗಳೂರು

Congress | ಪೊಲೀಸ್‌ ಠಾಣೆ ಮೆಟ್ಟಿಲೇರಿದ ಎನ್‌ಎಸ್‌ಯುಐ ಬಣ ಬಡಿದಾಟ

ಕಾಂಗ್ರೆಸ್ ಕಚೇರಿಯಲ್ಲಿ ಬಗೆ ಹರಿಯಬೇಕಿದ್ದ ಯುವ ನಾಯಕರ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಪಕ್ಷಕ್ಕೆ ಮುಜುಗರ ತಂದಿದೆ.

VISTARANEWS.COM


on

ಎನ್‌ಎಸ್‌ಯುಐ
ಎನ್‌ಎಸ್‌ಯುಐ ಅಧ್ಯಕ್ಷ ಕೀರ್ತಿಗಣೇಶ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು “ಸ್ವಾಂತಂತ್ರ್ಯ ನಡಿಗೆʼʼ ಬೃಹತ್‌ ಪಾದಯಾತ್ರೆ ಮೂಲಕ ಶಕ್ತಿ ಪ್ರದರ್ಶನ ಮಾಡಿ ಕಾಂಗ್ರೆಸ್‌ ನಾಯಕರು ಬೀಗುತ್ತಿರುವ ನಡುವೆಯೇ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐನಲ್ಲಿ ನಡೆದಿದ್ದ ಬಣ ಬಡಿದಾಟದ ವಿಷಯ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ.

ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ವೇಳೆ ಎನ್‌ಎಸ್‌ಯುಐ ಘಟಕದ ಎರಡು ಗುಂಪುಗಳು ಕೈ ಕೈ ಮಿಲಾಯಿಸಿಕೊಂಡಿದ್ದವು. ಹಿರಿಯ ನಾಯಕರ ಸೂಚನೆಗೂ ಕ್ಯಾರೆ ಎನ್ನದೆ ಇದೀಗ ಯುವ ನಾಯಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಎರಡು ಗುಂಪುಗಳಿಂದ ಬೇರೆ ಬೇರೆ ಠಾಣೆಗಳಲ್ಲಿ ದೂರು ಹಾಗೂ ಪ್ರತಿ ದೂರು ದಾಖಲಾಗಿವೆ.

ಎನ್‌ಎಸ್‌ಯುಐ ಉಪಾಧ್ಯಕ್ಷ ಜಯಂದರ್, ಪ್ರಧಾನ ಕಾರ್ಯದರ್ಶಿ ದೀಪಕ್ ಗೌಡ

ಎನ್‌ಎಸ್‌ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಮೇಲೆ ಉಪಾಧ್ಯಕ್ಷ ಜಯಂದರ್, ಪ್ರಧಾನ ಕಾರ್ಯದರ್ಶಿ ದೀಪಕ್ ಗೌಡ ಹಲ್ಲೆ ಮಾಡಿದ್ದರು. ಹೀಗಾಗಿ ಇವರಿಬ್ಬರ ವಿರುದ್ಧ ವಿವಿಪುರಂ ಪೊಲೀಸ್ ಠಾಣೆಗೆ ಅಧ್ಯಕ್ಷ ಕೀರ್ತಿ ಗಣೇಶ್ ದೂರು ನೀಡಿದ್ದಾರೆ.

ಮತ್ತೊಂದೆಡೆ ದೀಪಕ್ ಗೌಡ ಹಾಗೂ ಜಯಂದರ್, ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಅಧ್ಯಕ್ಷ ಕೀರ್ತಿ ಗಣೇಶ್‌ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಬಗೆ ಹರಿಯಬೇಕಿದ್ದ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿರುವುದು ಪಕ್ಷಕ್ಕೆ ಮುಜುಗರ ತಂದಿದೆ.

ಸ್ವಾತಂತ್ರ್ಯ ನಡಿಗೆಯಲ್ಲಿ ಆಗಿದ್ದೇನು?
ಸ್ವಾತಂತ್ರ್ಯ ನಡಿಗೆಗೆ ಎನ್‌ಎಸ್‌ಯುಐ ಅಧ್ಯಕ್ಷ ಕೀರ್ತಿ ಡ್ಯಾನ್ಸ್ ಟೀಮ್ ಒಂದನ್ನು ಸಿದ್ಧ ಮಾಡಿದ್ದರು. ಆ ತಂಡಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ದೀಪಕ್ ಗೌಡ ಹಾಗೂ ಜಯಂದರ್ ಕರೆ ತಂದಿದ್ದಾರೆ. ಈ ವಿಷಯ ಕೀರ್ತಿ ಗಣೇಶ್ ಗಮನಕ್ಕೆ ತಾರದ ಹಿನ್ನೆಲೆಯಲ್ಲಿ ಉಭಯ ಬಣಗಳ ನಡುವೆ ಜಗಳವಾಗಿದೆ. ಸಂಘಟನೆಯಲ್ಲಿ ಮೊದಲಿಂದಲೂ ಈ ಎರಡು ಬಣಗಳ ನಡುವೆ ಭಿನ್ನಾಭಿಪ್ರಾಯ ಇದೆ ಎನ್ನಲಾಗಿದೆ.

ಇದನ್ನೂ ಓದಿ | Janotsava | ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರ, ಶಾಸಕರ ಪೂರ್ವಭಾವಿ ಸಭೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released: ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಎಚ್.ಡಿ. ರೇವಣ್ಣ ಹೇಳಿದ್ದಾರೆ.

VISTARANEWS.COM


on

HD Revanna Released first reaction after release will be acquitted of all charges
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

ರೇವಣ್ಣ ಅವರು ತಂದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (HD Devegowda) ನಿವಾಸಕ್ಕೆ ತೆರಳಿದ್ದು, ಅವರನ್ನು ಕಂಡ ಕೂಡಲೇ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಬ್ಬಿಕೊಂಡು ಸ್ವಾಗತಿಸಿದರು. ಇನ್ನು ಕುಟುಂಬಸ್ಥರನ್ನು ಕಂಡಕೂಡಲೇ ರೇವಣ್ಣ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

ಹನ್ನೊಂದು ದಿನಗಳ ಹಿಂದೆ ಇದೇ ದೇವೇಗೌಡರ ಮನೆಯಲ್ಲಿ ಎಸ್ಐಟಿ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಸೀದಾ ಅಲ್ಲಿಗೇ ಎಚ್‌.ಡಿ. ರೇವಣ್ಣ ಬಂದಿದ್ದಾರೆ. ಇದಕ್ಕಿಂತ ಮುಂಚಿತವಾಗಿ ಎಚ್‌.ಡಿ. ದೇವೇಗೌಡರು ಮನೆಯಲ್ಲಿ ವಿಶೇಷ ಪೂಜೆಯನ್ನು ಮಾಡಿಸಿದ್ದರು. ರೇವಣ್ಣ ಮನೆಗೆ ಎಂಟ್ರಿ ಆದ ತಕ್ಷಣ ಅವರನ್ನು ತಬ್ಬಿಕೊಂಡ ಕುಮಾರಸ್ವಾಮಿ ಸಂತೈಸಿದರು. ಅಲ್ಲಿಂದ ಸೀದಾ ಒಳಗೆ ಹೋದ ರೇವಣ್ಣ ಅವರು ಎಚ್‌.ಡಿ. ದೇವೇಗೌಡರ ಕೋಣೆಗೆ ಎಂಟ್ರಿ ಕೊಟ್ಟರು.
ದೇವೇಗೌಡರನ್ನು ನೋಡಿ ಕಾಲಿಗೆ ಬಿದ್ದು ಕಣ್ಣೀರು ಹಾಕಿದರು ಎನ್ನಲಾಗಿದೆ. ಜತೆಗೆ ತಾಯಿ ಚನ್ನಮ್ಮ ಅವರ ಆಶೀರ್ವಾದವನ್ನೂ ಈ ವೇಳೆ ರೇವಣ್ಣ ಪಡೆದುಕೊಂಡರು.

ಭವಾನಿ ರೇವಣ್ಣ ನೆಗ್ಲೆಟ್‌?

ಎಚ್‌.ಡಿ. ರೇವಣ್ಣ ಅವರಿಗೆ ಸೋಮವಾರ ಸಂಜೆಯೇ ಬೇಲ್‌ ಸಿಕ್ಕರೂ ಭವಾನಿ ರೇವಣ್ಣ ಅವರ ಸುದ್ದಿಯೇ ಇಲ್ಲವಾಘಿದೆ. ಇನ್ನು ಪದ್ಮನಾಭ ನಗರದ ದೇವೇಗೌಡರ ನಿವಾಸಕ್ಕೂ ಅವರು ಆಗಮಿಸಲಿಲ್ಲ. ರೇವಣ್ಣ ಜೈಲಿಗೆ ಹೋದಾಗಲೂ ನೋಡಲು ಹೋಗಲಿಲ್ಲ. ರೇವಣ್ಣ ಎಸ್ಐಟಿ ಕಸ್ಟಡಿಯಲ್ಲಿ ಇದ್ದಾಗಲೂ ಬರಲಿಲ್ಲ. ಬಿಡುಗಡೆ ಆಗಿ ದೇವೇಗೌಡರ ನಿವಾಸಕ್ಕೆ ರೇವಣ್ಣ ಬಂದರೂ ಅತ್ತ ಕಡೆ ಸುಳಿಯದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಂತರ ಕಾಯ್ದುಕೊಂಡರಾ ಭವಾನಿ ಹಾಗೂ ಸೂರಜ್ ರೇವಣ್ಣ?

ಭವಾನಿ ರೇವಣ್ಣ ಹಾಗೂ ಸೂರಜ್ ರೇವಣ್ಣ ಅಂತರ ಕಾಯ್ದುಕೊಂಡರಾ ಎಂಬ ಪ್ರಶ್ನೆ ಮೂಡುತ್ತಿದೆ. ಈ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಗ್ಗೆ ಅಸಹನೆಯಾ? ಇಲ್ಲವೇ ಪ್ರಜ್ವಲ್ ಕೇಸ್‌ ಬಗ್ಗೆ ಸಮರ್ಥನೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೀಗೆ ಮಾಡುತ್ತಿದ್ದಾರಾ? ಎಂಬ ಪ್ರಶ್ನೆ ಮೂಡಿದೆ.

ದೇವೇಗೌಡರ ಜತೆ ಊಟಕ್ಕೆ ಕುಳಿತ ಮಕ್ಕಳು; ಕಂಪ್ಲೇಂಟ್‌ ಹೇಳಿದರಾ ರೇವಣ್ಣ?

ಮನೆಗೆ ಧಾವಿಸಿದ ಹಿರಿಯ ಪುತ್ರ ಎಚ್.ಡಿ. ರೇವಣ್ಣ ಅವರಿಗೆ ಮೊದಲಿಗೆ ಬೆಳಗ್ಗೆ ಮನೆಯಲ್ಲಿ ಮಾಡಿಸಲಾಗಿದ್ದ ದೇವರ ಪೂಜೆಯ ಪ್ರಸಾದವನ್ನು ಕೊಡಲಾಯಿತು. ಬಳಿಕ ಎಲ್ಲರೂ ಒಟ್ಟಿಗೆ ಊಟಕ್ಕೆ ಕುಳಿತರು. ಊಟದ ಸಮಯದಲ್ಲಿ ರೇವಣ್ಣ ಅವರು ಎಸ್‌ಐಟಿ ವಶ ಹಾಗೂ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಹೇಳಿಕೊಂಡಿದ್ದಾರೆನ್ನಲಾಗಿದೆ.

ಎಸ್ಐಟಿ ಅಧಿಕಾರಿಗಳು ತನಿಖೆ ನೆಪದಲ್ಲಿ ಏನೆಲ್ಲ ಪ್ರಶ್ನೆಗಳನ್ನು ಕೇಳಿದರು? ಯಾವ ಮಾದರಿಯ ಪ್ರಶ್ನೆಗಳು ಇದ್ದವು? ಯಾವೆಲ್ಲ ಒತ್ತಡವನ್ನು ನೀಡಿದರು? ಎಂಬಿತ್ಯಾದಿ ವಿಷಯಗಳ ಬಗ್ಗೆ ಎಚ್‌.ಡಿ. ರೇವಣ್ಣ ಅವರು ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಾಜಕೀಯ ಷಡ್ಯಂತ್ರದ ಬಗ್ಗೆ ಚರ್ಚೆ?

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ನಿಷ್ಪಕ್ಷಪಾತ ತನಿಖೆಯನ್ನು ನಡೆಸಲಾಗುತ್ತಿಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮಧ್ಯಪ್ರವೇಶ ಮಾಡಿದ್ದಾರೆ. ರಾಜಕೀಯವಾಗಿ ಏನೆಲ್ಲ ಷಡ್ಯಂತ್ರ ನಡೆಯುತ್ತಿದೆ ಎಂಬ ಬಗ್ಗೆ ಈಗಾಗಲೇ ಆರೋಪ ಮಾಡಿರುವ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯವನ್ನು ರೇವಣ್ಣ ಮುಂದೆ ಪ್ರಸ್ತಾಪ ಮಾಡಿದ್ದಾರೆನ್ನಲಾಗಿದೆ. ಅಲ್ಲದೆ, ರಾಜಕೀಯ ಷಡ್ಯಂತ್ರದ ಜತೆಗೆ ಮುಂದಿನ ನಡೆ ಏನು ಎಂಬ ಬಗ್ಗೆಯೂ ತಂದೆ ಮತ್ತು ಮಕ್ಕಳು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

ಜೆಡಿಎಸ್‌ ಶಾಸಕರು, ಮುಖಂಡರ ಜತೆ ರೇವಣ್ಣ ಚರ್ಚೆ

ಈ ವೇಳೆ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಜೆಡಿಎಸ್‌ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಕೆ ಆರ್ ಪೇಟೆ ಶಾಸಕ ಎಚ್.ಡಿ. ಮಂಜುನಾಥ್, ಮಾಗಡಿ ಮಾಜಿ ಶಾಸಕ ಮಂಜುನಾಥ್ ಸೇರಿದಂತೆ ಹಲವರು ಆಗಮಿಸಿದ್ದಾರೆ. ಇನ್ನು ಎಚ್‌.ಡಿ. ರೇವಣ್ಣ ಸಹ ಕೆಲವು ಪ್ರಮುಖರ ಜತೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

Continue Reading

ಮಳೆ

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Karnataka Weather Forecast : ಮಂಗಳವಾರ ಸಂಜೆ ಚಿಕ್ಕಮಗಳೂರು, ಕಾರವಾರ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ವಿದ್ಯುತ್‌ ಕಂಬಗಳು ಉರುಳಿ ಬಿದ್ದರೆ, ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಈ ವಾರ ಪೂರ್ತಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸುರಿಯುತ್ತಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಕಾರ ಮಳೆ‌ಯಾಗುತ್ತಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿತ್ತು. ಇನ್ನೂ ಗಾಳಿ ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿ ಹರಿವು ಕೊಂಚ ಏರಿಕೆಯಾಗುವ (Karnataka weather Forecast) ಸಾಧ್ಯತೆ ಇದೆ.

ಉತ್ತರಕನ್ನಡದಲ್ಲೂ ವರುಣಾರ್ಭಟ

ಉತ್ತರಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಶಿರಸಿಯಲ್ಲಿ ಭಾರೀ ಮಳೆಗೆ ಮರಗಳು ಧರೆಗುರುಳಿದೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆನಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

HSRP Number Plate: ಬಂದೇ ಬಿಡ್ತು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿ ಡೆಡ್‌ಲೈನ್‌! ಸರ್ಕಾರದಿಂದ ದಂಡಾಸ್ತ್ರ ಪ್ರಯೋಗ?

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಇದ್ದ ಗಡುವನ್ನು ರಾಜ್ಯ ಸರ್ಕಾರ ಈಗ ಮೇ 31ರವರೆಗೆ ವಿಸ್ತರಣೆ ಮಾಡಿತ್ತು. ಆದರೆ, ಆ ಸಮಯ ಈಗ ಸಮೀಪಿಸುತ್ತಿದೆ. ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಹೊರಡಿಸಿದ್ದ ಆದೇಶವನ್ನು ಇದುವರೆಗೆ ಎರಡು ಬಾರಿ ಮುಂದಕ್ಕೆ ಹಾಕಿದಂತಾಗಿದೆ. ಇದಕ್ಕೆ ಕಾರಣ, ಇನ್ನೂ ಅಲ್ಪಮಟ್ಟದಲ್ಲಿ ನೋಂದಣಿ ಆಗಿರುವುದಾಗಿದೆ. ಹೀಗಾಗಿ ಈ ಬಾರಿಯೂ ವಿಸ್ತರಣೆ ಮಾಡಲಿದೆಯೇ? ಅಥವಾ ದಂಡ ಪ್ರಯೋಗಕ್ಕೆ ಮುಂದಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ.

VISTARANEWS.COM


on

HSRP Number Plate Registration Deadline Near Will the government impose fines
Koo

ಬೆಂಗಳೂರು: ‌ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌ – HSRP Number Plate) ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಮುಗಿಯುತ್ತಾ ಬಂದರೂ ವಾಹನ ಸವಾರರು ಮಾತ್ರ ನಿರಾಸಕ್ತಿ ತೋರಿದ್ದಾರೆ. ಅವಧಿಯನ್ನು ವಿಸ್ತರಣೆ ಮಾಡಲಾಗುತ್ತಾ ಬರುತ್ತಿದ್ದರೂ 2 ಕೋಟಿ ವಾಹನಗಳ ಪೈಕಿ ಈವರೆಗೆ ನೋಂದಣಿ ಮಾಡಿಸಿರುವುದು 35 ಲಕ್ಷ ಮಂದಿ ಮಾತ್ರ ಎಂಬ ವಿಚಾರ ಗೊತ್ತಾಗಿದೆ. ಹಾಗಾಗಿ ಮತ್ತೊಮ್ಮೆ ಅವಧಿ ವಿಸ್ತರಣೆ ಆಗಲಿದೆಯೇ? ಅಥವಾ ದಂಡಾಸ್ತ್ರಕ್ಕೆ ರಾಜ್ಯ ಸರ್ಕಾರ ಮುಂದಾಗಲಿದೆಯೇ ಎಂಬ ಬಗ್ಗೆ ಈ ತಿಂಗಳ ಕೊನೆಯಲ್ಲಿ ಗೊತ್ತಾಗಲಿದೆ.

ಫೆಬ್ರವರಿ 17ಕ್ಕೆ ಇದ್ದ ನೋಂದಣಿ ಗಡುವನ್ನು ರಾಜ್ಯ ಸರ್ಕಾರ ಈಗ ಮೇ 31ರವರೆಗೆ ವಿಸ್ತರಣೆ ಮಾಡಿ ಈಗಾಗಲೇ ಆದೇಶಿಸಿದೆ. ಸರಿಯಾಗಿ ಲೆಕ್ಕ ಹಾಕಿದರೆ ಇನ್ನು 17 ದಿನ ಮಾತ್ರ ಬಾಕಿ ಇದೆ. ಆದರೆ, ರಾಜ್ಯದ ವಾಹನ ಸವಾರರು ಈ ಬಗ್ಗೆ ತಲೆಬಿಸಿಯನ್ನೇ ಮಾಡಿಕೊಂಡಂತೆ ಇಲ್ಲ. ಗಡುವು ವಿಸ್ತರಣೆಯಾದರೂ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ಸಲ ಗಡುವು ವಿಸ್ತರಣೆಯಾಗಿದ್ದಾಗ ಕೊನೇ ಹಂತದಲ್ಲಿ 18 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದರು. ಈಗ ಅದರ ಪ್ರಮಾಣ 35 ಲಕ್ಷಕ್ಕೇರಿದೆ. ಆದರೆ, ನೋಂದಾಯಿತ ವಾಹನಗಳು ಬರೋಬ್ಬರಿ 2 ಕೋಟಿಗೂ ಅಧಿಕ ಇದೆ. ಹೀಗಾಗಿ ಈ ಬಾರಿ ರಾಜ್ಯ ಸರ್ಕಾರ ಯಾವ ಕ್ರಮವನ್ನು ಕೈಗೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮಾರ್ಚ್‌ನಲ್ಲಿ ನಡೆದಿದ್ದ ವಿಧಾನ ಮಂಡಲ ಅಧಿವೇಶನದಲ್ಲಿ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿ ವಿಚಾರ ಚರ್ಚೆಗೆ ಬಂದಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿ, ಇನ್ನೂ 18 ಲಕ್ಷ ವಾಹನ ಸವಾರರು ನೋಂದಣಿ ಮಾಡಿಸಿಕೊಂಡಿದ್ದರಿಂದ ಗಡುವನ್ನು ವಿಸ್ತರಣೆ ಮಾಡುತ್ತಿರುವುದಾಗಿ ಹೇಳಿದ್ದರು. ಇದರಂತೆ ಈಗ ಮೇ 31ರವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಸಾವಿರ ರೂಪಾಯಿವರೆಗೂ ದಂಡ

ಒಂದು ವೇಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸುವ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡದೇ ಇದ್ದರೆ ದಂಡ ಬೀಳುವುದು ಗ್ಯಾರಂಟಿ. ಮೇ 31ರೊಳಗೆ ನೋಂದಣಿ ಮಾಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಕ್ರಮ ಜರುಗಿಸುವ ತೀರ್ಮಾನಕ್ಕೆ ಸಾರಿಗೆ ಇಲಾಖೆ ಬಂದಿದೆ. ಮೊದಲ ಬಾರಿಗೆ ಸಿಕ್ಕಿಬಿದ್ದರೆ 500 ರೂಪಾಯಿ ದಂಡ, ಎರಡನೇ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿಗೆ ಏರಿಕೆ ಮಾಡುವ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲು ಚಿಂತಿಸಲಾಗಿದೆ ಎನ್ನಲಾಗಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಮಾತ್ರವೇ ನೋಂದಣಿ ಮಾಡಿ

ಅದೆಷ್ಟೋ ಜನರಿಗೆ ಎಲ್ಲಿ ಅಪ್ಲೈ ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಾಗಿ ಗೊತ್ತಾಗದೇ ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ ಕೂಡ. ಇನ್ನು ಕೆಲವರು ಯಾವುದ್ಯಾವುದೋ ವೆಬ್‌ಸೈಟ್‌ ಓಪನ್‌ ಮಾಡಿ ವಂಚನೆಗೆ ಒಳಗಾಗುತ್ತಿದ್ದು, ಇದನ್ನು ತಪ್ಪಿಸುವ ಕೆಲಸ ಆಗಬೇಕಿದೆ. ಇನ್ನು ಮೊಬೈಲ್‌ ಇಲ್ಲವೇ ಡೆಸ್ಕ್‌ಟಾಪ್‌ ಮೂಲಕವೇ ನೋಂದಣಿ ಮಾಡಿಸಬಹುದಾಗಿದ್ದು, ಇದಕ್ಕೆ ಸರಳ ವಿಧಾನವಿದೆ.

ಅಧಿಸೂಚನೆ ಹೊರಡಿಸಿದ್ದ ಸರ್ಕಾರ

2019ರ ಏಪ್ರಿಲ್‌ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು (High Security Registration Plate-ಎಚ್‌ಎಸ್‌ಆರ್‌ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂದು ಆಗಸ್ಟ್‌ 17ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದೇ ರೀತಿ ಆ.18ರಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕಾಗಿದೆ.

ಅರ್ಜಿ ಸಲ್ಲಿಕೆಗೆ ನವೆಂಬರ್‌ 17 ಕೊನೇ ದಿನವಾಗಿತ್ತು

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ನ. 17ರೊಳಗೆ ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಬಳಿಕ ವಿಸ್ತರಣೆ ಮಾಡಲಾಗುತ್ತಾ ಬರುತ್ತಿದೆ.

ಹೆಚ್ಚುವರಿ ಹಣ ವಸೂಲಿ ಮಾಡಿದರೆ ದೂರು ನೀಡಿ: ರಾಮಲಿಂಗಾ ರೆಡ್ಡಿ

HSRP ಅಳವಡಿಸಲು ಹೆಚ್ಚುವರಿ ಹಣ ವಸೂಲಿ ವಿಚಾರ ಸರ್ಕಾರದ ಗಮನಕ್ಕೆ ಬರುತ್ತಿದೆ. ಈ ಬಗ್ಗೆ ದೂರುಗಳು ಸಹ ಕೇಳಿ ಬಂದಿವೆ. ಅಲ್ಲದೆ, ಸರಿಯಾಗಿ ಅಳವಡಿಸದೇ ಇದ್ದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು. ನಾಗರಿಕರು ಹೆಚ್ಚುವರಿ ಹಣ ವಸೂಲಿ ಮಾಡುವಂತಹ ಡೀಲರ್‌ಗಳ ಮೇಲೆ ದೂರು ನೀಡಬೇಕು. ಸಾರಿಗೆ ಇಲಾಖೆಯ ಆಯುಕ್ತರಿಗೆ ದೂರು ನೀಡಿದರೆ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಪದೇ ಪದೆ ಗ್ರಾಹಕರಿಗೆ ಕಿರಿಕಿರಿ ಮಾಡಿದರೆ ಅಂತಹ ಡೀಲರ್‌ಗಳನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಎಚ್ಎಸ್ಆರ್‌ಪಿ ಪಡೆಯುವುದು ಹೇಗೆ?

  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
  2. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
  5. HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
  7. ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
  9. ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆಯನ್ನು ಹೊಂದಬಹುದು.

ಪ್ರಮುಖ ಅಂಶಗಳು

  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಎಸ್‌ಐಎಎಂ ವೆಬ್‌ಸೈಟ್‌ ಮೂಲಕ HSRP ಅಳವಡಿಕೆಗೆ ಕಾಯ್ದಿರಿಸಿಕೊಳ್ಳಿ.
  2. ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP, ಒಂದೇ ರೀತಿಯ ಪ್ಲೇಟ್‌ಗಳು, ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.
  3. HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳಿಗೆ ಅನುಮತಿಸುವುದಿಲ್ಲ.
  4. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ ಎಚ್‌ಎಸ್‌ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿರುವುದಿಲ್ಲ.
  5. HSRP ಅಳವಡಿಕೆಗೆ ಮೇ 31 ಕೊನೇ ದಿನವಾಗಿದ್ದು, ಕೂಡಲೇ ಅರ್ಜಿ ಸಲ್ಲಿಸಿ

ಎಚ್‌ಎಸ್‌ಆರ್‌ಪಿ ಯಾಕೆ ಮತ್ತು ವಿಶೇಷತೆ ಏನು?

  1. HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.
  2. ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
  3. ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
  4. ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
  5. ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
  6. ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

ಹೆಚ್ಚುತ್ತಿವೆ ನಕಲಿ ಹಾವಳಿ; ಎಚ್ಚರ

HSRP ನಂಬರ್‌ ಪ್ಲೇಟ್‌ಗಳನ್ನು ನಕಲಿ ಮಾಡಿ ವಂಚನೆ ಮಾಡುವ ಜಾಲವು ಇದ್ದು, ಸಾರ್ವಜನಿಕರು ಮೋಸ ಹೋಗದಂತೆ ಮನವಿ ಮಾಡಲಾಗುತ್ತಿದೆ. ಈ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ನಂತೆಯೇ ಹೋಲಿಕೆ ಇರುವಂತೆ ಇಂಥವರು ಸಿದ್ಧಪಡಿಸಿ ಕೊಡುತ್ತಾರೆ. ಇದನ್ನು ಅಗ್ಗದ ಬೆಲೆಯಲ್ಲಿ ಕೊಡುವುದರಿಂದ ಜನರೂ ಗೊತ್ತಿಲ್ಲದೆ ಖರೀದಿ ಮಾಡುತ್ತಾರೆ. ಆದರೆ, ಅದರಲ್ಲಿ ಟ್ಯಾಂಪರ್‌ ಪ್ರೂಫ್‌ ವೈಶಿಷ್ಟ್ಯ, ಯುನೀಕ್‌ ಐಡೆಂಟಿಟಿ ಅಂಶಗಳು ಇರುವುದಿಲ್ಲ. ಇದರಿಂದ ಒಮ್ಮೆ ಆರ್‌ಟಿಒ ಪೊಲೀಸರಿಗೆ ಸಿಕ್ಕಿ ಬಿದ್ದರೆ ದಂಡ ಕಟ್ಟುವುದು ಗ್ಯಾರಂಟಿಯಾಗಿದೆ. ಇಲ್ಲಿ “IND” ಗುರುತಾಗಲೀ, ಅಶೋಕ ಚಕ್ರ ಚಿಹ್ನೆಯ Hot stamp ಆಗಲೀ ಇರುವುದಿಲ್ಲ. ಹೀಗಾಗಿ ಅಧಿಕೃತ ವಿತರಕರಿಂದ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಪಡೆದುಕೊಳ್ಳಬೇಕು ಎಂದು ಸರ್ಕಾರ ಸಹ ಹೇಳಿದೆ.

Continue Reading

ಬೆಂಗಳೂರು

Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

Silicon City Hospital: ಲಕ್ಷದಲ್ಲಿ ಇಬ್ಬರಲ್ಲಿ ಕಾಣಿಸಿಕೊಳ್ಳುವ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಗೆ ಸಿಲಿಕಾನ್‌ ಸಿಟಿ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ, ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ. ಬಾಲಕಿ ಉಳಿಸಲು ಆಗಲ್ಲ ಎಂದು ಕೈಚೆಲ್ಲಿದ್ದ ದೊಡ್ಡ ಆಸ್ಪತ್ರೆಗಳಿಗೂ ಅಚ್ಚರಿ ಮೂಡಿಸುವುದರೊಂದಿಗೆ ಮೆಚ್ಚುಗೆಯನ್ನು ಪಡೆದಿದ್ದಾರೆ.

VISTARANEWS.COM


on

By

Silicon City Hospital doctors successful surgery on girl suffering from Arterio Venus malpermation
Koo

ಬೆಂಗಳೂರು: ಮೆದುಳಿನ ರಕ್ತನಾಳ ಒಡೆದು ರಕ್ತ ಸೋರುವ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯ ಪ್ರಾಣವನ್ನು ಸಿಲಿಕಾನ್‌ ಸಿಟಿ ಆಸ್ಪತ್ರೆ ವೈದ್ಯರು (Silicon City Hospital) ಉಳಿಸಿದ್ದಾರೆ. ಒಂದು ಲಕ್ಷದಲ್ಲಿ ಇಬ್ಬರಿಗೆ ಮಾತ್ರ ಬರುವ ಈ ಅಪರೂಪದ ಕಾಯಿಲೆಯು ಬಾಲಕಿಗೆ ಕೊನೆ ಹಂತದಲ್ಲಿತ್ತು. ಇದನ್ನೇ ಸವಾಲಾಗಿ ಸ್ವೀಕರಿಸಿದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಬಾಲಕಿ ಜೀವ ಉಳಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನೆರನಹಳ್ಳಿ ಗ್ರಾಮದ ನೆರನಹಳ್ಳಿಯ ಬಾಬು ಮತ್ತು ಲಾವಣ್ಯ ದಂಪತಿ ಮಗಳು ಸ್ನೇಹಾ ಅಪಾಯದಿಂದ ಪಾರಾದವಳು . ಕಳೆದ ಮೇ 3ರಂದು ಚೆನ್ನಾಗಿದ್ದ ಸ್ನೇಹಾ ಇದ್ದಕ್ಕಿದ್ದಂತೆ ವಾಂತಿ ಮಾಡಿಕೊಂಡು ಒದ್ದಾಡಿದ್ದಳು. ಮಗಳ ಪರಿಸ್ಥಿತಿ ಕಂಡು ಭಯಗೊಂಡ ಪೋಷಕರು ಮುಳಬಾಗಿಲಿನ ಖಾಸಗಿ‌ ಆಸ್ಪತ್ರೆಗೆ ತೋರಿಸಿದ್ದರು. ಆದರೆ ಅಲ್ಲಿನ ವೈದ್ಯರು ನಿಮ್ಮ ಮಗಳಿಗೆ ನರರೋಗಕ್ಕೆ ಸಂಬಂಧಿಸಿದ ಕಾಯಿಲೆ ಇದೆ ಎಂದಿದ್ದರು.

ತಡ ಮಾಡದೆ ಅಲ್ಲಿಂದ ಬೆಂಗಳೂರಿಗೆ ಮಗಳು ಸ್ನೇಹಾಳನ್ನು ಕರೆತಂದು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ವೇಳೆ ತಲೆ ಮೆದುಳಿನ ರಕ್ತನಾಳ ಒಡೆದು ರಕ್ತ ಸೋರುವ ಈ ಕಾಯಿಲೆ ಇದೆ ಎಂದು ಗೊತ್ತಾಗಿತ್ತು. ಸ್ನೇಹಾಳಿಗೆ ಬಂದ ಈ ಕಾಯಿಲೆ ಅದಾಗಲೇ ಯಾರಿಗೂ ತಿಳಿಯದಂತೆ ಕೊನೆ ಹಂತ ತಲುಪಿತ್ತು. ಹೀಗಾಗಿ ನಿಮ್ಹಾನ್ಸ್‌ ವೈದ್ಯರು ನಿಮ್ಮ ಮಗಳನ್ನು ಬದುಕಿಸುವುದು ಕಷ್ಟ ವಾಪಸ್‌ ಕರೆದುಕೊಂಡು ಹೋಗಿ ಎಂದು ಕೈ ಚೆಲ್ಲಿದ್ದರು.

ಇದರಿಂದ ಮತ್ತಷ್ಟು ಗಾಬರಿಗೊಂಡ ಬಾಬು, ಲಾವಣ್ಯ ದಂಪತಿಗೆ ಆ್ಯಂಬುಲೆನ್ಸ್ ಚಾಲಕ ಸಮಾಧಾನಪಡಿಸಿದ್ದಾರೆ. ಬಳಿಕ ಹೊಸಕೋಟೆಯಲ್ಲಿರುವ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಹೋಗುವಂತೆ ಹೇಳಿದ್ದಾರೆ. ನುರಿತ ವೈದ್ಯರು ಇರುವ ನಿಮ್ಹಾನ್ಸ್‌ ಆಸ್ಪತ್ರೆಯಲ್ಲೆ ಮಗುವನ್ನು ಬದುಕಿಸುವುದು ಕಷ್ಟ ಎಂದಿರುವಾಗ ಬೇರೊಂದು ಆಸ್ಪತ್ರೆಗೆ ಹೋಗಿ ಏನು ಪ್ರಯೋಜನ ಎಂದು ಸ್ನೇಹಿತರು, ಸಂಬಂಧಿಕರು ಹೇಳಿದ್ದಾರೆ. ಆದರೆ ಮಗಳು ಉಳಿಯುತ್ತಾಳೆ ಎಂದಾಗ ಬಾಬು, ಲಾವಣ್ಯ ದಂಪತಿ ಕ್ಷಣವೂ ಯೋಚಿಸದೇ ಸಿಲಿಕಾನ್‌ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

Silicon City Hospital doctors

ಇದನ್ನೂ ಓದಿ: Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆ ವೈದ್ಯರಾದ ಡಾ.ಸುಪ್ರಿತ್ ಮತ್ತು ಡಾ.ಮನೋಹರ್‌ರವರ ನರರೋಗ ತಜ್ಞರ ತಂಡ, ಅಚ್ಚರಿ ಪಡುವ ರೀತಿ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿ ಮಗುವಿನ ಜೀವ ಉಳಿಸಿದ್ದಾರೆ.

Silicon City Hospital doctors

ವೈದ್ಯ ಲೋಕದಲ್ಲಿ ಅಚ್ಚರಿ ಎನಿಸುವ ಅನೇಕ‌ ಕಾಯಿಲೆಗಳಿವೆ. ಒಂದು ಕಡೆ ವೈದ್ಯರಿಗೆ ಕೆಲವು‌‌ ಕಾಯಿಲೆ ಸವಾಲಾದರೆ, ಕೆಲವು ಕಾಯಿಲೆಯ ಸಕ್ಸಸ್ ರೇಟ್ ವೈದ್ಯರನ್ನು ಮತ್ತಷ್ಟು ಒಳ್ಳೆಯ ಕೆಲಸ ಮಾಡಲು ಪ್ರೇರೇಪಿಸುತ್ತದೆ. ಹೊಸಕೋಟೆ ಸಿಲಿಕಾನ್ ಸಿಟಿ ವೈದ್ಯರ ಸೇವೆಯೇ ಸಾಕ್ಷಿಯಾಗಿದೆ.

ಲಕ್ಷದಲ್ಲಿ ಇಬ್ಬರಿಗೆ ಕಾಣಿಸಿಕೊಳ್ಳುವ “ಅರ್ಟೆರಿಯೊ ವೀನಸ್ ಮಾಲ್ಪರ್ಮೇಷನ್- Alterio Venous Malformation (ಮೆದುಳು ನರಗಳಲ್ಲಿ ಗುಳ್ಳೆಗಳಾಗಿ‌ ಒಡೆದು ಹೋಗಿ ರಕ್ತ ಸೋರುವ ಕಾಯಿಲೆ) ಎಂಬ ಕಾಯಿಲೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಡು ಬಡವರಾದ ಅಂಗವಿಕಲರಾದ ಬಾಬು ಲಾವಣ್ಯ ದಂಪತಿ‌ ಇನ್ನೇನು ನಮ್ಮ ಒಬ್ಬಳೆ ಮಗಳು ನಮ್ಮಿಂದ ದೂರ ಆಗುತ್ತೆ ಎಂಬ ಆತಂಕವನ್ನು ಸಿಲಿಕಾನ್ ಸಿಟಿ ಆಸ್ಪತ್ರೆ ವೈದ್ಯರು ದೂರ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
HD Revanna Released first reaction after release will be acquitted of all charges
ರಾಜಕೀಯ8 mins ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

Income Tax office
ಪ್ರಮುಖ ಸುದ್ದಿ9 mins ago

Income Tax Office : ಆದಾಯ ತೆರಿಗೆ ಕಚೇರಿಯಲ್ಲಿ ಬೆಂಕಿ ಅವಘಡ; ಒಂದು ಸಾವು; ಇಲ್ಲಿದೆ ವಿಡಿಯೊ

Billboard Collapse
ಪ್ರಮುಖ ಸುದ್ದಿ30 mins ago

Billboard Collapse : 14 ಸಾವಿಗೆ ಕಾರಣವಾದ ಹೋರ್ಡಿಂಗ್ ಕಂಪನಿ ಮಾಲೀಕನ ಮೇಲಿದೆ ಅತ್ಯಾಚಾರ ಸೇರಿದಂತೆ 20ಕ್ಕೂ ಹೆಚ್ಚು ಕೇಸ್​ಗಳು

Stabbing Case
ಕರ್ನಾಟಕ32 mins ago

Stabbing Case: ಕುಡಿದ ಅಮಲಿನಲ್ಲಿ ಭುಜ ತಗುಲಿದ್ದಕ್ಕೆ ಕಿರಿಕ್; ವ್ಯಕ್ತಿಗೆ ಚೂರಿಯಿಂದ ಮನಸೋ ಇಚ್ಛೆ ಇರಿದ ಯುವಕರು

Ooty Tour
ಪ್ರವಾಸ35 mins ago

Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

WhatsApp Update
ತಂತ್ರಜ್ಞಾನ43 mins ago

WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

Spoken Language
Latest50 mins ago

Spoken Language: ವಿಶ್ವದಲ್ಲಿ ಅತೀ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಯಾವ ಸ್ಥಾನದಲ್ಲಿದೆ ಗೊತ್ತೆ?

Karnataka Weather Forecast
ಮಳೆ58 mins ago

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರೀತಂಗೌಡರ ಮತ್ತಿಬ್ಬರು ಆಪ್ತರ ಹೋಟೆಲ್‌, ಬಾರ್‌ ಮೇಲೆ ಎಸ್‌ಐಟಿ ದಾಳಿ

Warning For Android Users
ಗ್ಯಾಜೆಟ್ಸ್1 hour ago

Warning For Android Users: ಆಂಡ್ರಾಯ್ಡ್ ಬಳಕೆದಾರರಿಗೆ ಕಾದಿದೆ ಅಪಾಯ; ಸರ್ಕಾರದಿಂದ ಗಂಭೀರ ಎಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Released first reaction after release will be acquitted of all charges
ರಾಜಕೀಯ8 mins ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20246 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ6 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು8 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ14 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಟ್ರೆಂಡಿಂಗ್‌