BY Vijayendra : ಯಾವುದು ಲಾಟ್ರಿ ಅಂತ ಎಲೆಕ್ಷನ್‌ನಲ್ಲಿ ಗೊತ್ತಾಗುತ್ತೆ; ಡಿಕೆಶಿಗೆ ವಿಜಯೇಂದ್ರ ಸವಾಲ್‌ - Vistara News

ಬೆಂಗಳೂರು

BY Vijayendra : ಯಾವುದು ಲಾಟ್ರಿ ಅಂತ ಎಲೆಕ್ಷನ್‌ನಲ್ಲಿ ಗೊತ್ತಾಗುತ್ತೆ; ಡಿಕೆಶಿಗೆ ವಿಜಯೇಂದ್ರ ಸವಾಲ್‌

BY Vijayendra : ತಾವು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು ಲಾಟರಿ ಎಂಬ ಡಿ.ಕೆ. ಶಿವಕುಮಾರ್‌ ಅವರ ಹೇಳಿಕೆಗೆ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಯಾವುದು ಲಾಟ್ರಿ ಅಂತ ಲೋಕಸಭಾ ಚುನಾವಣೆ ಫಲಿತಾಂಶ ತಿಳಿಸಿಕೊಡಲಿದೆ ಎಂದಿದ್ದಾರೆ.

VISTARANEWS.COM


on

BY VIjayendra DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರ ಕೃಪಾಕಟಾಕ್ಷದಿಂದ ಬಿ.ವೈ ವಿಜಯೇಂದ್ರ (BY Vijayendra) ಅವರು ಬಿಜೆಪಿ ರಾಜ್ಯಾಧ್ಯಕ್ಷ (BJP State President) ಆಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DCM DK Shivakumar) ಅವರ ಹೇಳಿಕೆಗೆ ವಿಜಯೇಂದ್ರ ಅವರು ತಿರುಗೇಟು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ‌ ಬಿಜೆಪಿ ಕಾರ್ಯಕರ್ತರು ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ವಿಜಯೇಂದ್ರ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಸೋಮವಾರ ಬೆಳಗ್ಗೆ‌ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ ಅವರು, ನನಗೆ ರಾಜ್ಯಾಧ್ಯಕ್ಷತೆ ಸಿಕ್ಕಿರುವುದು ಲಾಟರಿನೋ, ಬಂಪರ್‌ ಲಾಟರಿನೋ ಎನ್ನುವುದನ್ನು ರಾಜ್ಯದ ಜನ ಮತ್ತು ಬಿಜೆಪಿ ಕಾರ್ಯಕರ್ತರು ತೋರಿಸುತ್ತಾರೆ ಎಂದು ಸವಾಲು ಹಾಕಿದರು.

ಯಾವ ಕ್ಷೇತ್ರದ ಟಿಕೆಟ್‌ ಕೂಡಾ ಫೈನಲ್‌ ಆಗಿಲ್ಲ

ಮಂಡ್ಯ ಮತ್ತು ಹಾಸನ ಟಿಕೆಟ್‌ ಬಿಜೆಪಿಗೆ ಸಿಗಲಿದೆ ಎಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಯಾವ ಕ್ಷೇತ್ರದಿಂದ ಯಾರು ಸ್ಪರ್ಧಿಸಬೇಕು ಎಂಬುದನ್ನು ನಮ್ಮ ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ. 28 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಯಾರೆಂದು ಬಿಜೆಪಿ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಸೂಕ್ತ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ, ಸದ್ಯಕ್ಕೆ ಮೈತ್ರಿ ಪಕ್ಷಗಳ ನಡುವೆ ಟಿಕೆಟ್‌ ಹಂಚಿಕೆ ನಡೆದಿಲ್ಲ, ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌ ಎಂಬುದೂ ನಿರ್ಧಾರವಾಗಿಲ್ಲ ಎಂದು ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರವನ್ನೇ ಆರಂಭ ಮಾಡಿರುವ ಮಾಜಿ ಸಚಿವ ಡಾ. ಕೆ ಸುಧಾಕರ್‌ ಅವರ ಬಗ್ಗೆಯೂ ಇದೇ ಮಾತು ಹೇಳಿದರು.

ಹೈನುಗಾರರ 716 ಕೋಟಿ ಬಾಕಿ ಮೊತ್ತ ತಕ್ಷಣ ಬಿಡುಗಡೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ನೈಜ ಕಾಳಜಿ ಇದ್ದರೆ ಬಾಕಿ ಉಳಿಸಿದ ಹೈನುಗಾರರ ಪ್ರೋತ್ಸಾಹಧನವನ್ನು ಗೌರವಯುತವಾಗಿ ತಕ್ಷಣ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ರಾಜ್ಯದ ಕಾಂಗ್ರೆಸ್ ಸರಕಾರದ ಧೋರಣೆಯಿಂದ ಜನರು ಮಾತ್ರವಲ್ಲ; ಜಾನುವಾರುಗಳೂ ಈ ಸರಕಾರಕ್ಕೆ ಶಾಪ ಹಾಕುತ್ತಿವೆ. ರಾಜ್ಯದ ರೈತರು, ಬಡವರ ಕೋಪವಷ್ಟೇ ಅಲ್ಲ, ಜಾನುವಾರುಗಳ ಕೋಪಕ್ಕೂ ಕೂಡ ರಾಜ್ಯ ಸರಕಾರ ಸಿಲುಕಿದೆ ಎಂದು ತಿಳಿಸಿದರು.

BY Vijayendra Pressmeet

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನು ನೀಡುತ್ತಿದ್ದರು. ಅದರ ಪರಿಣಾಮವಾಗಿ ಬಿಜೆಪಿ ಆಡಳಿತದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ ಪ್ರತಿದಿನ 80-85 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿತ್ತು. ಇಂದಿನ ಕಾಂಗ್ರೆಸ್ ಸರಕಾರವು ಹಾಲು ಉತ್ಪಾದಕ ರೈತರಿಗೆ 716 ಕೋಟಿ ಬಾಕಿ ಪ್ರೋತ್ಸಾಹಧನವನ್ನು ಉಳಿಸಿಕೊಂಡಿದೆ ಎಂದು ಟೀಕಿಸಿದರು. ಇದರ ಪರಿಣಾಮವಾಗಿ 10 ಲಕ್ಷ ಲೀಟರ್‍ನಷ್ಟು ಹಾಲು ಸಂಗ್ರಹಣೆ ಕಡಿಮೆ ಆಗಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಹಿರಿಯರು ಬಿಜೆಪಿ ಬಗ್ಗೆ ಟೀಕಿಸುತ್ತಾರೆ; ‘ಮಾನ ಮರ್ಯಾದೆ ಇದ್ದರೆ..’ ಎನ್ನುತ್ತಾರೆ. ನಾನು ಆ ಭಾಷೆ ಬಳಸುವುದಿಲ್ಲ. ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ನೈಜ ಕಾಳಜಿ ಇದ್ದರೆ ಬಾಕಿ ಉಳಿಸಿದ ಹೈನುಗಾರರ ಪ್ರೋತ್ಸಾಹಧನವನ್ನು ಗೌರವಯುತವಾಗಿ ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ರೈತರ ದುಡ್ಡು ಉಳಿಸಿಕೊಂಡ ಪಾಪದ ಸರಕಾರ ಎಂದು ಜನರು ಶಾಪ ಹಾಕುತ್ತಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ: DK Shivakumar: ಕೇಂದ್ರದಿಂದ ಅನ್ಯಾಯವಾಗಿದೆ ಎಂದು ರಾಜ್ಯ ಬಿಜೆಪಿಗರೇ ಒಪ್ಪಿದ್ದಾರೆ ಎಂದ ಡಿಕೆಶಿ

ಜಾನುವಾರುಗಳ ಜೊತೆ ಹೋರಾಟ..

ರಾಜ್ಯ ಸರಕಾರ ಪ್ರತಿಬಾರಿ ತನ್ನ ಹೊಣೆಗಾರಿಕೆ ಮರೆತು ಕೇಂದ್ರ ಸರಕಾರವನ್ನು ತೋರಿಸುತ್ತಿದೆ. ಹಣಕಾಸು ವಿಚಾರ ಬಂದೊಡನೆ ‘ಮೋದಿಯವರು ಕೊಡುತ್ತಿಲ್ಲ; ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಮೋದಿಯವರಿಗೆ ಮಾತನಾಡಲಿ’ ಎನ್ನುವ ಮಾತು ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ನಾಯಕರಿಂದ ಕೇಳುತ್ತಿದ್ದೇವೆ. ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ಜನರು ಮತ್ತು ಜಾನುವಾರುಗಳು ಒಟ್ಟಿಗೆ ಸೇರಿ ಹೋರಾಟಕ್ಕೆ ಇಳಿಯುವ ಅನಿವಾರ್ಯತೆ ಬರಲಿದೆ ಎಂದು ಎಚ್ಚರಿಸಿದರು.

ಗೌರವಾನ್ವಿತ ಮುಖ್ಯಮಂತ್ರಿಗಳು ಇವತ್ತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುವ ಮಾಹಿತಿ ಇದೆ. ರಾಜಸ್ವ ಸ್ವೀಕೃತಿ ಗುರಿ (ರೆವಿನ್ಯೂ ರಿಸೀಟ್) 2 ಲಕ್ಷ 38 ಸಾವಿರ ಕೋಟಿ ಇದ್ದು, ಡಿಸೆಂಬರ್ ಅಂತ್ಯಕ್ಕೆ 1 ಲಕ್ಷ 61 ಸಾವಿರ ಕೋಟಿ ರಾಜಸ್ವ ಮಾತ್ರ ಸ್ವೀಕಾರ ಆಗಿದೆ. ಕೇವಲ ಶೇ 67 ಇವರ ಸಾಧನೆ. ನಮ್ಮ ಸರಕಾರ ಇದ್ದಾಗ ಡಿಸೆಂಬರ್ ವೇಳೆಗೆ ಶೇ 82 ಗುರಿ ಸಾಧಿಸಿದ್ದೆವು. ಸಿಎಂ ಅವರಿಗೆ ಗುರಿ ಸಾಧಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು. ಶೇ 82ರಿಂದ ಶೇ 67ಕ್ಕೆ ಇಳಿದುದಕ್ಕೆ ಮೋದಿಜೀ ಅವರ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಯಾಕಾಗಿ ಗುರಿ ಮುಟ್ಟಲು ಸಾಧ್ಯವಾಗಿಲ್ಲ ಎಂದು ಜನರಿಗೆ ಉತ್ತರಿಸಿ ಎಂದು ಕೇಳಿದರು.

ಫೆಬ್ರವರಿ 10ರಂದು ಅಮಿತ್‌ ಶಾ ಬೆಂಗಳೂರಿಗೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಇದೇ 10ರಂದು ಬೆಂಗಳೂರಿಗೆ ಬರಲಿದ್ದಾರೆ. ಇಲ್ಲಿ ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್ ಸಭೆಯಲ್ಲಿ ಭಾಗವಹಿಸುತ್ತಾರೆ. ನಂತರ ಕೋರ್ ಕಮಿಟಿ ಸದಸ್ಯರ ಜೊತೆ ಸಮಾಲೋಚನೆ ಮಾಡಲಿದ್ದಾರೆ. ಸರಕಾರಿ ಕಾರ್ಯಕ್ರಮವೂ ಇದೆ ಎಂದು ಕೇಳಿದ್ದೇವೆ; ಸಂಜೆ 5 ಗಂಟೆಗೆ ಸುತ್ತೂರು ಜಾತ್ರೆಯಲ್ಲೂ ಪಾಲ್ಗೊಳ್ಳುತ್ತಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಕ್ಲಸ್ಟರ್‌ ಎಂದರೆ ನಾಲ್ಕು ಲೋಕಸಭಾ ಕ್ಷೇತ್ರಗಳ ಗುಂಪು.

ಮಾಧ್ಯಮ ಗೋಷ್ಠಿಯ ವೇಳೆ ವಿಜಯೇಂದ್ರ ಅವರ ಜತೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ್, ಪ್ರೀತಂ ಗೌಡ, ಮತ್ತು ಇತರರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

ಬೆಂಗಳೂರು ರಸ್ತೆಗಳಲ್ಲಿ ಗುಂಡಿಗಳು ಸಾಮಾನ್ಯ, ಅಂತೆಯೇ ಜಗಳಗಳು. ಇದು ಕೆಲವೊಮ್ಮೆ ಕೈಕೈ ಮಿಲಾಯಿಸುವ ಹಂತಕ್ಕೂ ಹೋಗುವುದಿದೆ. ಇದನ್ನು ತಪ್ಪಿಸಲು ಬೆಂಗಳೂರು ಪೊಲೀಸರು ಕೆಲವೊಂದು ಸಲಹೆಗಳನ್ನು ನೀಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ (Viral Video) ಭಾರೀ ವೈರಲ್ ಆಗಿದೆ.

VISTARANEWS.COM


on

By

Viral Video
Koo

ಸಣ್ಣಪುಟ್ಟ ಘಟನೆಗಳು ರಸ್ತೆಯಲ್ಲಿ (road) ಕೆಲವೊಮ್ಮೆ ವಾಹನ (vehicle) ಸವಾರರ ನಡುವೆ ಜಗಳಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗೆ ಇಂತಹ ಮಾತಿನ ಚಕಮಕಿಯ ಘಟನೆಗಳು ಸಾಮಾನ್ಯವಾಗಿದೆ. ಕೆಲವೊಮ್ಮೆ ಇಂತಹ ಘಟನೆಗಳು ಮಾರಾಮಾರಿಗೂ (physical fights) ಕಾರಣವಾಗಿ, ವಾಹನಗಳಿಗೆ ಹಾನಿ, ವ್ಯಕ್ತಿಗಳಿಗೆ ಗಾಯವನ್ನು ಉಂಟು ಮಾಡುತ್ತದೆ. ಕೊಲೆ ನಡೆದಿದ್ದೂ ಇದೆ.

ಹೆಚ್ಚುತ್ತಿರುವ ಇಂತಹ ಪ್ರಕರಣಗಳ ನಡುವೆ ಬೆಂಗಳೂರು ಪೊಲೀಸರು (bengaluru police) ಈ ರೀತಿಯ ಘಟನೆಗಳನ್ನು ಹೇಗೆ ಎದುರಿಸಬೇಕು ಎಂದು ಸಾಮಾಜಿಕ ಜಾಲತಾಣದ (Viral Video) ಮೂಲಕ ಸಾರ್ವಜನಿಕರಿಗೆ ಉಪಯುಕ್ತ ಸಲಹೆ ಮಾಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪೊಲೀಸ್ ಇಲಾಖೆ ಜಾಗೃತಿ ವಿಡಿಯೋವನ್ನು ಹಂಚಿಕೊಂಡಿದ್ದು, ಈ ರೀತಿಯ ಸಂದರ್ಭಗಳನ್ನು ಎದುರಿಸುವಾಗ ನಾವು ಶಾಂತವಾಗಿರುವುದು ಬಹಳ ಮುಖ್ಯ ಎಂದಿದ್ದಾರೆ. ಈ ವಿಡಿಯೋ ಕ್ಲಿಪ್ ಪ್ರಯಾಣಿಕರ ನಡುವಿನ ಜಗಳದಿಂದ ಪ್ರಾರಂಭವಾಗುತ್ತದೆ. ಇದು ಹಲವಾರು ಅಂಶಗಳನ್ನು ಒಳಗೊಂಡಿದೆ. ಇದೇ ರೀತಿಯ ಸಂದರ್ಭಗಳು ಬಂದರೆ ಪ್ರಯಾಣಿಕರು ಏನು ಮಾಡಬೇಕೆಂಬ ಕುರಿತು ಮಾರ್ಗದರ್ಶನ ನೀಡುತ್ತದೆ.

ರಸ್ತೆಯಲ್ಲಿ ವಾಹನ ಓಡಿಸುವಾಗ ಸುರಕ್ಷತೆ ಮೊದಲನೆಯದು. ಕೆಲವೊಂದು ಘಟನೆಗಳು ನಮಗೆ ಸಿಟ್ಟು ತರಿಸಬಹುದು. ಆದರೆ ಪರಿಸ್ಥಿತಿಗಳನ್ನು ಹೇಗೆ ಸುರಕ್ಷಿತವಾಗಿ ನಿರ್ವಹಿಸುವುದು ಎಂಬುದರ ಕುರಿತು ಪ್ರಾಯೋಗಿಕ ಸಲಹೆಗಳಿಗಾಗಿ ನಮ್ಮ ಇತ್ತೀಚಿನ ವಿಡಿಯೋವನ್ನು ಪರಿಶೀಲಿಸಿ. ಮಾಹಿತಿಯಲ್ಲಿರಿ, ಸುರಕ್ಷಿತವಾಗಿರಿ ಎಂದು ವಿಡಿಯೋವನ್ನು ಹಂಚಿಕೊಳ್ಳುವಾಗ ಬೆಂಗಳೂರು ಪೊಲೀಸರು ಬರೆದಿದ್ದಾರೆ.

ಶಾಂತವಾಗಿರಿ ಜಗಳ ತಪ್ಪಿಸಿ

ಪ್ರಯಾಣಿಕರೇ ಶಾಂತವಾಗಿರಿ, ಇತರ ವ್ಯಕ್ತಿಗಳೊಂದಿಗೆ ಜಗಳವಾಡುವುದನ್ನು ತಪ್ಪಿಸಿ, ಅದನ್ನು ನೀವೇ ಪರಿಹರಿಸಲು ಪ್ರಯತ್ನಿಸಬೇಡಿ. ವಾಹನದ ವಿವರಗಳನ್ನು ಗಮನಿಸಿ, ತುರ್ತು ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಮತ್ತು ಘಟನೆಯ ಬಗ್ಗೆ ತಕ್ಷಣ ಮಾಹಿತಿ ನೀಡಿ ಎಂದು ಬೆಂಗಳೂರು ಪೊಲೀಸ್ ಇಲಾಖೆ ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಟ್ರಾಫಿಕ್ ಅಡಚಣೆಯನ್ನು ತಪ್ಪಿಸಲು ಮತ್ತು ಘಟನೆ ಅಥವಾ ವಾಹನದ ಫೋಟೋಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳು ವೀಕ್ಷಕರಿಗೆ ಹೇಳಿದ್ದಾರೆ. ಪೊಲೀಸರು ಬಂದಾಗ ಏನಾಯಿತು ಎಂಬುದರ ಕುರಿತು ನಿಮ್ಮ ಸಂಪೂರ್ಣ ಮಾಹಿತಿಯನ್ನು ಒದಗಿಸಿ ಮತ್ತು ಇತರ ವ್ಯಕ್ತಿಗಳಿಗೆ ಅವರ ಅನಿಸಿಕೆ ಹಂಚಿಕೊಳ್ಳಲು ಅವಕಾಶ ಮಾಡಿಕೊಡಿ. ಕೊನೆಯದಾಗಿ ಪೊಲೀಸರಿಗೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡಿ ಎಂದು ಹೇಳಿದ್ದಾರೆ.

4 ಲಕ್ಷಕ್ಕೂ ಹೆಚ್ಚು ವೀಕ್ಷಣೆ

ಬೆಂಗಳೂರು ಪೊಲೀಸರು ಕೆಲವೇ ಗಂಟೆಗಳ ಹಿಂದೆ ಹಂಚಿಕೊಂಡಿರುವ ಈ ವಿಡಿಯೋ ಪೋಸ್ಟ್ ಇನ್ ಸ್ಟಾಗ್ರಾಮ್ ನಲ್ಲಿ 4,05,000 ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ಕ್ಲಿಪ್ ಅನ್ನು ಎಕ್ಸ್ ನಲ್ಲೂ ಹಂಚಿಕೊಳ್ಳಲಾಗಿದೆ. ಹಲವಾರು ಬಳಕೆದಾರರು ಈ ಜಾಗೃತಿ ವಿಡಿಯೋ ಗೆ ಪೊಲೀಸರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಆದರೂ ಇಂತಹ ಘಟನೆಗಳು ಸಂಭವಿಸಿದಾಗ ಇಲಾಖೆಯು ಏನನ್ನೂ ಮಾಡುತ್ತಿಲ್ಲ ಎಂದು ಕೆಲವರು ಆರೋಪಿಸಿದರು.

ಇದನ್ನೂ ಓದಿ: IndiGo Flight: ಇಂಡಿಗೊ ವಿಮಾನದಲ್ಲಿ ಮತ್ತೊಂದು ಎಡವಟ್ಟು; ನಿಂತುಕೊಂಡೇ ಪ್ರಯಾಣಿಸಲು ಮುಂದಾದ ಪ್ಯಾಸೆಂಜರ್‌!

ರಸ್ತೆ ಸುರಕ್ಷತೆಯ ಕುರಿತು ಬೆಂಗಳೂರು ಪೊಲೀಸರು ನೀಡಿರುವ ಸಾರ್ವಜನಿಕರಿಗೆ ಶಿಕ್ಷಣವನ್ನು ನಾನು ಇಷ್ಟಪಟ್ಟಿದ್ದೇನೆ. ಪೊಲೀಸ್ ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ ಎಂದೊಬ್ಬರು ತಮ್ಮ ಅನಿಸಿಕೆ ಬರೆದಿದ್ದಾರೆ.

Continue Reading

ಚಿನ್ನದ ದರ

Gold Rate Today: ಬಂಗಾರದ ಬೆಲೆಯಲ್ಲಿ ಯಥಾಸ್ಥಿತಿ; ಇಂದಿನ ದರಗಳನ್ನು ಇಲ್ಲಿಯೇ ನೋಡಿ

ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಬುಧವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಏನೂ ವ್ಯತ್ಯಾಸ ಕಂಡಿಲ್ಲ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

gold rate today beauty
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಬುಧವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಏನೂ ವ್ಯತ್ಯಾಸ ಕಂಡಿಲ್ಲ. ನಿನ್ನೆ 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹600 ಹಾಗೂ ₹650 ಇಳಿಕೆಯಾಗಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,830ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,640 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,300 ಮತ್ತು ₹6,83,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,451 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,608 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,510 ಮತ್ತು ₹7,45,100 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹92.50, ಎಂಟು ಗ್ರಾಂ ₹740 ಮತ್ತು 10 ಗ್ರಾಂ ₹925ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,250 ಮತ್ತು 1 ಕಿಲೋಗ್ರಾಂಗೆ ₹92,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,45074,660
ಮುಂಬಯಿ68,30074,510
ಬೆಂಗಳೂರು68,30074,510
ಚೆನ್ನೈ68,60074,840

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

Continue Reading

ರಾಜಕೀಯ

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Nandini Milk: ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ. ಈಗಾಗಲೇ ಸರ್ಕಾರದ ಮೇಲೆ ಮುಗಿಬಿದ್ದಿರುವ ಪ್ರತಿಪಕ್ಷಗಳು, ಈಗ ಮತ್ತಷ್ಟು ಸಮಸ್ಯೆಗಳನ್ನು ಹೊತ್ತು ಜನರ ಮುಂದಿಡಲು ಪ್ರಯತ್ನ ಮಾಡುತ್ತಿವೆ. ಇದರ ಭಾಗವಾಗಿ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಪ್ರಾಯೋಜಕತ್ವಕ್ಕೆ ಹಣ ಹಾಕಿರುವ ಬಗ್ಗೆ ಆರ್.‌ ಅಶೋಕ್‌ ಪ್ರಶ್ನೆ ಮಾಡಿದ್ದಾರೆ. ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಎಂದು ಟೀಕಿಸಿದ್ದಾರೆ.

VISTARANEWS.COM


on

Nandini Milk No incentives for milk producers Ashok slams govt for sponsoring foreign cricket team
Koo

ಬೆಂಗಳೂರು: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಕೊಡದ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಗರಂ ಆಗಿದ್ದಾರೆ. ಒಂದು ಕಡೆ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡು ಮತ್ತೊಂದು ಕಡೆ ಕೆಎಂಎಫ್‌ ಸಂಸ್ಥೆಯ ನಂದಿನಿ ಹಾಲು (Nandini Milk) ಉತ್ಪಾದನೆಯಿಂದ ಬಂದ ಲಾಭದಲ್ಲಿ ಕೋಟ್ಯಂತರ ರೂಪಾಯಿ ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವವನ್ನು ಪಡೆದುಕೊಳ್ಳಲಾಗಿದೆ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಆರ್.‌ ಅಶೋಕ್‌, ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ. ಈಗಾಗಲೇ ಸರ್ಕಾರದ ಮೇಲೆ ಮುಗಿಬಿದ್ದಿರುವ ಪ್ರತಿಪಕ್ಷಗಳು, ಈಗ ಮತ್ತಷ್ಟು ಸಮಸ್ಯೆಗಳನ್ನು ಹೊತ್ತು ಜನರ ಮುಂದಿಡಲು ಪ್ರಯತ್ನ ಮಾಡುತ್ತಿವೆ. ಇದರ ಭಾಗವಾಗಿ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಪ್ರಾಯೋಜಕತ್ವಕ್ಕೆ ಹಣ ಹಾಕಿರುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಆರ್.‌ ಅಶೋಕ್‌ ಪೋಸ್ಟ್‌ನಲ್ಲೇನಿದೆ?

“ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ.

ಸಿಎಂ ಸಿದ್ದರಾಮಯ್ಯ ಅವರೇ, ಚುನಾವಣೆ ಸಂದರ್ಭದಲ್ಲಿ ನಂದಿನಿ ಹೆಸರಲ್ಲಿ ರಾಜಕೀಯ ಮಾಡಿ ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದೀರಲ್ಲ, ಇದೇನಾ ನೀವು ನಮ್ಮ ನಂದಿನಿ ಬ್ರ್ಯಾಂಡ್ ಉಳಿಸುವ ಪರಿ?

ಇದನ್ನೂ ಓದಿ: Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

ನಂದಿನಿ ಸಂಸ್ಥೆಯ ಕೋಟ್ಯಂತರ ರೂಪಾಯಿ ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಸರ್ಕಾರದ ಬಳಿ ಇದೆ. ಆದರೆ, ನಂದಿನಿ ಬ್ರ್ಯಾಂಡ್ ಅನ್ನ ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹ ಧನ ನೀಡಲು ತಮ್ಮ ಬಳಿ ಹಣವಿಲ್ಲ ಅಲ್ಲವೇ ಸಿದ್ದರಾಮಯ್ಯನವರೇ? ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು” ಎಂದು ಆರ್.‌ ಅಶೋಕ್‌ ರೈತರ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ.

Continue Reading

ರಾಜಕೀಯ

Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Phone tapping: ಫೋನ್‌ ಕದ್ದಾಲಿಕೆ ಆಗುತ್ತಿದೆ ಎಂದಾದರೆ ಈ ಬಗ್ಗೆ ಗೃಹ ಸಚಿವರಿಗೆ ಬರವಣಿಗೆ ಮೂಲಕ ದೂರು ಕೊಡಲಿ. ಅವರ ಕಾಲದಲ್ಲೆಲ್ಲ ಮಾಡಿದ್ದರಲ್ಲವೇ? ಯಾರ ಯಾರ ಕಾಲದಲ್ಲಿ ಫೋನ್‌ ಕದ್ದಾಲಿಕೆ ಮಾಡಿದ್ದಾರೆಂಬುದು ಗೊತ್ತಿದೆ. ಅಶೋಕ್‌ ಹೋಮ್ ಮಿನಿಸ್ಟರ್ ಆಗಿದ್ದವರು, ಕೆಲವರು ಚೀಫ್‌ ಮಿನಿಸ್ಟರ್ ಆಗಿದ್ದವರು ಮಾಡಿರುವ ಫೋನ್‌ ಟ್ಯಾಪಿಂಗ್‌ ಬಗ್ಗೆ ನಮಗೂ ರಿಪೋರ್ಟ್‌ ಬಂದಿತ್ತು ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಈ ಮೂಲಕ ವಿಧಾನಸಭಾ ವಿಪಕ್ಷ ನಾಯಕ ಆರ್.‌ ಅಶೋಕ್‌ಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

Phone tapping case Let Ashok file a complaint to Home Minister DK Shivakumar hits back at phone tapping allegations
Koo

ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ಕೇಳಿಬಂದಿರುವ ಫೋನ್‌ ಕದ್ದಾಲಿಕೆ (Phone tapping) ಆರೋಪವು ದಿನೇ ದಿನೆ ವಾಕ್ಸಮರಕ್ಕೆ ಕಾರಣವಾಗುತ್ತಿದೆ. ಈ ಬಗ್ಗೆ ಮೊದಲು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದರು. ಬಳಿಕ ಇದಕ್ಕೆ ಧ್ವನಿಗೂಡಿಸಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಹೇಳಿದ್ದರು. ಈಗ ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದು, ಅಶೋಕ್‌ ಅವರಿಗೆ ಗೃಹ ಸಚಿವರಿಗೆ ಬರವಣಿಗೆ ಮೂಲಕ ದೂರು ಕೊಡಲು ಹೇಳಿ ಎಂದು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಸರ್ಕಾರ ಫೋನ್‌ ಕದ್ದಾಲಿಕೆ ಮಾಡುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಕ್ಕೆ ತಿರುಗೇಟು ನೀಡಿದರು.

ಫೋನ್‌ ಕದ್ದಾಲಿಕೆ ಆಗುತ್ತಿದೆ ಎಂದಾದರೆ ಈ ಬಗ್ಗೆ ಗೃಹ ಸಚಿವರಿಗೆ ಬರವಣಿಗೆ ಮೂಲಕ ದೂರು ಕೊಡಲಿ. ಅವರ ಕಾಲದಲ್ಲೆಲ್ಲ ಮಾಡಿದ್ದರಲ್ಲವೇ? ಯಾರ ಯಾರ ಕಾಲದಲ್ಲಿ ಫೋನ್‌ ಕದ್ದಾಲಿಕೆ ಮಾಡಿದ್ದಾರೆಂಬುದು ಗೊತ್ತಿದೆ. ಅಶೋಕ್‌ ಹೋಮ್ ಮಿನಿಸ್ಟರ್ ಆಗಿದ್ದವರು, ಕೆಲವರು ಚೀಫ್‌ ಮಿನಿಸ್ಟರ್ ಆಗಿದ್ದವರು ಮಾಡಿರುವ ಫೋನ್‌ ಟ್ಯಾಪಿಂಗ್‌ ಬಗ್ಗೆ ನಮಗೂ ರಿಪೋರ್ಟ್‌ ಬಂದಿತ್ತು ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ನಿಮ್ಮ ಸುತ್ತ ಮುತ್ತ ಇರುವವರೇ ಮಾಹಿತಿ ನೀಡಿದ್ದಾರೆ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ಬಹಳ ಸಂತೋಷ. ಅವರು ಯಾರು ಯಾರು ಮಾಹಿತಿ ಕೊಟ್ಟಿದ್ದಾರೆಂಬುದರ ಬಗ್ಗೆ ಅಪ್ಡೇಟ್ ಕೊಡುವುದಕ್ಕೆ ಹೇಳಿ ಎಂದು ಮಾಧ್ಯಮವರಿಗೆ ಹೇಳಿದರು.

ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು

ಫೋನ್‌ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ. ಅವರು ತಪ್ಪು ಮಾಡಿಲ್ಲ ಎಂದಾದರೆ ಕೂಡಲೇ ಸಿಬಿಐಗೆ ತನಿಖೆ ಹೊಣೆಯನ್ನು ಒಪ್ಪಿಸಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಮಂಗಳವಾರ ಮಾಧ್ಯಮದವರ ಮುಂದೆ ಸವಾಲು ಹಾಕಿದ್ದರು.

ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.‌ ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು. ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ? ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

ಸರ್ಕಾರ ಮಾಡಿಲ್ಲವಾದರೆ ತನಿಖೆಗೆ ಕೊಡಲಿ

ಫೋನ್‌ ಟ್ಯಾಪ್‌ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್‌ ಅಧಿಕಾರಿಗಳು ಮಾಡಿ ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಆರ್‌. ಅಶೋಕ್ ಒತ್ತಾಯಿಸಿದ್ದರು.

Continue Reading
Advertisement
List of Movies Releasing From may 24
ಟಾಲಿವುಡ್15 mins ago

List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

Prashant Kishor
ದೇಶ29 mins ago

Prashant Kishor: 3ನೇ ಅವಧಿಯ ಮೋದಿ ಸರ್ಕಾರದಿಂದ ಈ 4 ಕ್ರಾಂತಿಕಾರಕ ಬದಲಾವಣೆ; ಪ್ರಶಾಂತ್‌ ಕಿಶೋರ್‌ ಭವಿಷ್ಯ

Viral Video
ವೈರಲ್ ನ್ಯೂಸ್40 mins ago

Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

Diabetes Management Tips
Latest43 mins ago

Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

gold rate today beauty
ಚಿನ್ನದ ದರ43 mins ago

Gold Rate Today: ಬಂಗಾರದ ಬೆಲೆಯಲ್ಲಿ ಯಥಾಸ್ಥಿತಿ; ಇಂದಿನ ದರಗಳನ್ನು ಇಲ್ಲಿಯೇ ನೋಡಿ

Viral News
ವೈರಲ್ ನ್ಯೂಸ್46 mins ago

Viral News: ಸಿಂಹದ ಹಿಂಡನ್ನೇ ಹಿಮ್ಮೆಟ್ಟಿಸಿದ ಕಾಡುಕೋಣಗಳು; ರೋಮಾಂಚನಕಾರಿ ವಿಡಿಯೊ ನೀವೂ ನೋಡಿ

Rishab shetty family visit Hariharpur Narasimhaswamy
ಸ್ಯಾಂಡಲ್ ವುಡ್1 hour ago

Rishab shetty: ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬದ ಭೇಟಿ: ನರಸಿಂಹಸ್ವಾಮಿಯ ದರ್ಶನ ಪಡೆದ ಡಿವೈನ್‌ ಸ್ಟಾರ್‌!

nisha cp yogeshwara
ವೈರಲ್ ನ್ಯೂಸ್1 hour ago

CP Yogeshwara: “ಹೊಡೀತಾರೆ, ಭಿಕ್ಷೆ ಬೇಡು ಅನ್ತಾರೆ….ʼʼ ಯೋಗೇಶ್ವರ್‌ ವಿರುದ್ಧ ಕಣ್ಣೀರು ಹಾಕುತ್ತಾ ರೆಬೆಲ್‌ ಆದ ಮಗಳು

Nandini Milk No incentives for milk producers Ashok slams govt for sponsoring foreign cricket team
ರಾಜಕೀಯ1 hour ago

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Viral video
ವೈರಲ್ ನ್ಯೂಸ್1 hour ago

Viral Video:‌ ಅಬ್ಬಾ..ಇದೆಂಥಾ ಹುಚ್ಚಾಟ; ಸ್ವಲ್ಪ ಮಿಸ್‌ ಆದ್ರೂ ಸಾವು ಗ್ಯಾರಂಟಿ-ಶಾಕಿಂಗ್‌ ವಿಡಿಯೋ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌