ಪೆಟ್ರೋಲ್‌ ಬಂಕ್‌ನಲ್ಲಿ ವಂಚನೆ ಆರೋಪ; ರೊಚ್ಚಿಗೆದ್ದ ಜನರಿಂದ ಪ್ರತಿಭಟನೆ - Vistara News

ಬೆಂಗಳೂರು

ಪೆಟ್ರೋಲ್‌ ಬಂಕ್‌ನಲ್ಲಿ ವಂಚನೆ ಆರೋಪ; ರೊಚ್ಚಿಗೆದ್ದ ಜನರಿಂದ ಪ್ರತಿಭಟನೆ

ಬೆಂಗಳೂರಿನ ಪೆಟ್ರೋಲ್‌ ಬಂಕ್‌ನಲ್ಲಿ ನಿಗದಿತ ಬೆಲೆಗೆ ಪೆಟ್ರೋಲ್‌ ಹಾಕದೆ ಜನರಿಗೆ ವಂಚನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಾಹನ ಸವಾರರು ಪ್ರತಿಭಟಿಸಿದ ಘಟನೆ ನಡೆದಿದೆ.

VISTARANEWS.COM


on

ಪೆಟ್ರೋಲ್‌ ಬಂಕ್‌ ಆವರಣದಲ್ಲಿ ವಾಹನ ಸವಾರರ ಪ್ರತಿಭಟನೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಲ್ಲಿನ ಹೆಬ್ಬಾಳ ಸಿಬಿಐ ಸಮೀಪವಿರುವ ಎಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಶನಿವಾರ ವಾಹನ ಸವಾರರು ರೊಚ್ಚಿಗೆದ್ದಿದ್ದರು. ನೂರಕ್ಕೂ ಹೆಚ್ಚು ಜನರು ಪೆಟ್ರೋಲ್‌ ಬಂಕ್‌ ಮುಂದೆ ಪ್ರತಿಭಟನೆ ನಡೆಸಿದರು. ಪೆಟ್ರೋಲ್‌ನಲ್ಲಿ ಮೋಸ ಮಾಡಲಾಗಿದೆ ಎಂಬ ಆರೋಪವೇ ಪ್ರತಿಭಟನೆಗೆ ಕಾರಣವಾಗಿತ್ತು.

ನಿಗದಿತ ಬೆಲೆಗೆ ಪೆಟ್ರೋಲ್ ಹಾಕದೇ ವಂಚನೆ ಮಾಡಿದ್ದಾರೆಂದು ವಾಹನ ಸವಾರರು ಆರೋಪಿಸಿದ್ದಾರೆ. ಕಾರು ಚಾಲಕ ಮೋಹನ್‌ ಎಂಬುವವರು ೧ ಸಾವಿರ ರೂ ಪೆಟ್ರೋಲ್ ಹಾಕಿಸಿದ್ದರೆ, ಆದರೆ ಸಿಬ್ಬಂದಿ ೯೮೫ ಪೆಟ್ರೋಲ್ ಹಾಕಿ, ೧ ಸಾವಿರ ಬಿಲ್ ಕೊಟ್ಟಿದ್ದಾರೆ. ಇದರಿಂದ ಕೋಪಗೊಂಡ ವಾಹನ ಸವಾರರು ಪ್ರತಿಭಟಿಸಿದ್ದಾರೆ.

ಬಂಕ್‌ನಲ್ಲಿ ಸಾರ್ವಜನಿಕರು ಜಮಾಯಿಸುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿ, ಜನರನ್ನು ಚದುರಿಸಲು ಮುಂದಾದರು. ಈ ವೇಳೆ ಆಕ್ರೋಶಗೊಂಡ ಸಾರ್ವಜನಿಕರು, ತಪ್ಪು ಮಾಡಿದವರನ್ನು ಪ್ರಶ್ನಿಸುವುದು ಬಿಟ್ಟು ನಮ್ಮನ್ನು ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ಕಿಡಿಕಾರಿದರು. ಪೆಟ್ರೋಲ್ ಗನ್ ಮಿಷನ್ ಪರಿಶೀಲನೆಗೆ ಪಟ್ಟುಹಿಡಿದರು. ಸೂಕ್ತ ತನಿಖೆ ವಹಿಸುವುದಾಗಿ ಪೊಲೀಸರು ಹೇಳಿದರು. ಆದರೆ, ನಿಜವಾಗಿಯೂ ಕ್ರಮವಾಗುತ್ತದೆಯೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಾಕಿ, ಆತ್ಮಹತ್ಯೆಗೆ ಯತ್ನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಸುಮಲತಾ ಭೇಟಿ ಮಾಡಿದ ವಿಜಯೇಂದ್ರ; ನಾಳೆಯೇ ಫೈನಲ್‌ ಅಂದ್ರು ರೆಬೆಲ್‌ ಲೇಡಿ!

Lok Sabha Election 2024: ಶುಕ್ರವಾರ ನಡೆದ ಬಿಜೆಪಿ – ಜೆಡಿಎಸ್‌ ಸಮನ್ವಯ ಸಮಿತಿ ಸಭೆಯ ಬಳಿಕ ಸುಮಲತಾ ಅಂಬರೀಶ್‌ ಅವರನ್ನು ಬಿ.ವೈ. ವಿಜಯೇಂದ್ರ ಭೇಟಿ ಮಾಡಿದ್ದಾರೆ. ಅಲ್ಲದೆ, ಎನ್‌ಡಿಎ ಅಭ್ಯರ್ಥಿಯಾಗಿರುವ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, ತೀರ್ಮಾನ ಏನೇ ಇದ್ದರು ತಮ್ಮ ಬೆಂಬಲಿರ ಮುಂದೆಯೇ ಎಂದು ಹೇಳಿರುವ ಸುಮಲತಾ, ಇದಕ್ಕಾಗಿ ನಾಳೆ ಕಾರ್ಯಕರ್ತರು, ಹಿತೈಷಿಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಪಡೆದು ತಮ್ಮ ಅಂತಿಮ ನಿರ್ಣಯವನ್ನು ಪ್ರಕಟಿಸಲಿದ್ದಾರೆ.

VISTARANEWS.COM


on

Lok Sabha Election 2024 and BY Vijayendra meets Sumalatha Ambareesh for discussion on support to NDA candidate in Mandya Lok Sabha Constituency
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆ ಸಾಕಷ್ಟು ಬಿರುಸುಗೊಂಡಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ (Mandya Lok Sabha constituency) ಬಿಜೆಪಿಯಿಂದ ಸ್ಪರ್ಧೆ ಬಯಸಿದ್ದ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಈಗಾಗಲೇ ನಿರಾಸೆಯಾಗಿದೆ. ಹೀಗಾಗಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಸುಮಲತಾ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಆದರೆ, ತಮ್ಮ ಮುಂದಿನ ನಿರ್ಧಾರದ ಬಗ್ಗೆ ಗುಟ್ಟು ಬಿಟ್ಟುಕೊಡದ ಸುಮಲತಾ, ನಾಳೆ (ಶನಿವಾರ – ಮಾ. 30) ತಮ್ಮ ಅಂತಿಮ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ.

ಶುಕ್ರವಾರ ನಡೆದ ಬಿಜೆಪಿ – ಜೆಡಿಎಸ್‌ ಸಮನ್ವಯ ಸಮಿತಿ ಸಭೆಯ ಬಳಿಕ ಸುಮಲತಾ ಅಂಬರೀಶ್‌ ಅವರನ್ನು ಬಿ.ವೈ. ವಿಜಯೇಂದ್ರ ಭೇಟಿ ಮಾಡಿದ್ದಾರೆ. ಅಲ್ಲದೆ, ಎನ್‌ಡಿಎ ಅಭ್ಯರ್ಥಿಯಾಗಿರುವ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಮಾ. 30ಕ್ಕೆ ಬೆಂಗಳೂರು ನಿವಾಸದಲ್ಲಿ ಸಭೆ

ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚೆ ನಡೆಸಲು ನಾಳೆ (ಮಾ. 30) ಮಧ್ಯಾಹ್ನ 3 ಗಂಟೆಗೆ ಜೆಪಿ ನಗರ ನಿವಾಸದಲ್ಲಿ ಬೆಂಬಲಿಗರು, ಆಪ್ತರು ಹಾಗೂ ಹಿತೈಷಿಗಳ ಸಭೆ ಕರೆದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದು, ಈ ಬಾರಿ ಬಿಜೆಪಿಯಿಂದ ಟಿಕೆಟ್‌ ಬಯಸಿದ್ದೆ. ಆದರೆ, ಅಲ್ಲಿ ಮೈತ್ರಿ ಧರ್ಮ ಪಾಲನೆ ಸಂಬಂಧ ಜೆಡಿಎಸ್‌ಗೆ ಕ್ಷೇತ್ರವನ್ನು ಬಿಟ್ಟು ಕೊಡಲಾಗಿದೆ. ಹೀಗಾಗಿ ನಾನು ಮುಂದೆ ಯಾವ ನಿರ್ಧಾರವನ್ನು ತೆಗೆದುಕೊಳ್ಳಬೇಕು? ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಬೇಕೋ? ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡಬೇಕೋ? ಎಂಬ ಪ್ರಶ್ನೆಯನ್ನು ಈ ಸಭೆಯ ಮುಂದಿಡಲಿದ್ದಾರೆ. ಇಲ್ಲಿ ಬರುವ ಅಭಿಪ್ರಾಯಗಳ ಆಧಾರದ ಮೇಲೆ ಸುಮಲತಾ ಅವರು ಶನಿವಾರ ಸಂಜೆಯೇ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.

Lok Sabha Election 2024 Vijayendra meets Sumalatha final decision will be announced tomorrow

ಅಭಿಮಾನಿಗಳ ಸಂಘದಿಂದ ಹೊರಬಿದ್ದ ಪ್ರಕಟಣೆ!

ಸುಮಲತಾ ಅಂಬರೀಶ್‌ ಅವರ ಸ್ಪರ್ಧೆ ಸಂಬಂಧ ಈಗ ಎದ್ದಿರುವ ಗೊಂದಲಗಳ ಪರಿಹಾರಕ್ಕೆ ಶನಿವಾರ ಸಭೆಯನ್ನು ಕರೆದಿರುವ ಬಗ್ಗೆ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘವು ಪ್ರಕಟಣೆಯೊಂದನ್ನು ಹೊರಡಿಸಿದೆ. ಇದರ ಅನುಸಾರ, “2019ರಲ್ಲಿ ಜಿಲ್ಲೆಯ ಸ್ವಾಭಿಮಾನಿ ಸಂಸದರಾಗಿ ಆಯ್ಕೆಯಾಗಿ ತಮ್ಮ ಕ್ರಿಯಾಶೀಲತೆ ಮೂಲಕ ಜಿಲ್ಲೆಯ ಜನರ ವಿಶ್ವಾಸಾರ್ಹತೆ ಗಳಿಸಿರುವ ಸಂಸದರಾದ ಸುಮಲತಾ ಅಂಬರೀಶ್ ಅವರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮುಂದಿನ ನಡೆ ಬಗ್ಗೆ ಹಲವಾರು ಬೆಂಬಲಿಗರು, ಕಾರ್ಯಕರ್ತರಲ್ಲಿ ಆತಂಕ ಹಾಗೂ ಗೊಂದಲಗಳಿವೆ. ಈ ಬಗ್ಗೆ ಪರಸ್ಪರ ಚರ್ಚಿಸುವ ಸಲುವಾಗಿ ಹಾಗೂ ತಮ್ಮ ತಮ್ಮ ವೈಯಕ್ತಿಕ ಅಭಿಪ್ರಾಯ, ಅನಿಸಿಕೆಗಳನ್ನು ಹಂಚಿಕೊಳ್ಳಲು ಸುಮಲತಾ ಅಂಬರೀಶ್ ಅವರು ಬೆಂಗಳೂರಿನ ನಿವಾಸಕ್ಕೆ ಅವರ ಬೆಂಬಲಿಗರು, ಹಿತೈಷಿಗಳು, ಅಂಬರೀಶ್ ಕುಟುಂಬದ ಅಭಿಮಾನಿಗಳು ಆಪ್ತರು ಸೇರಿದಂತೆ ಜಿಲ್ಲೆಯ ಸ್ವಾಭಿಮಾನಿ ಮುಖಂಡರು ಕಾರ್ಯಕರ್ತರು ಶನಿವಾರ (30-03-2024) ಅವರ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಲಾಗಿದೆ. ಆಸಕ್ತಿ ಉಳ್ಳವರು ಮಧ್ಯಾಹ್ನ 2.30ಕ್ಕೆ ಸರಿಯಾಗಿ ಅವರ ನಿವಾಸಕ್ಕೆ ಭೇಟಿ ನೀಡಿ” ಎಂದು ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಸುಮಲತಾರಿಂದ ಸಕಾರಾತ್ಮಕ ಸ್ಪಂದನೆ: ಬಿ.ವೈ. ವಿಜಯೇಂದ್ರ

ಸುಮಲತಾ ಅಂಬರೀಶ್‌ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಸುಮಲತಾ ಅವರು ಸಾಕಷ್ಟು ವಿಚಾರವನ್ನು ಚರ್ಚೆ ಮಾಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಬೆಂಬಲಿಗರೊಂದಿಗೆ ಮಾತನಾಡಿ ನಿರ್ಧಾರವನ್ನು ತಿಳಿಸುವುದಾಗಿ ಹೇಳಿದ್ದಾರೆ. ಸಂಸದರಾಗಿ ತೀರ್ಮಾನ ತೆಗೆದುಕೊಳ್ಳುವಾಗ ಅಭಿಮಾನಿಗಳ ಅಭಿಪ್ರಾಯ ಪಡೆಯಬೇಕಾಗುತ್ತದೆ. ಎಲ್ಲವೂ ಕೂಡ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗಿದೆ. ದೆಹಲಿ ಮಟ್ಟದಲ್ಲಿ ಎಲ್ಲವೂ ಚರ್ಚೆಯಾಗಿದೆ. ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಬೇಕು ಎಂಬ ಸದಾಭಿಪ್ರಾಯ ಅವರಲ್ಲಿದೆ. ಎಲ್ಲದರ ಬಗ್ಗೆಯೂ ರಾಷ್ಟ್ರೀಯ ನಾಯಕರು ಚರ್ಚೆ ಮಾಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಮಹಿಳೆಯರು ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು; ಆಕಾಶದಲ್ಲಿ ಹಾರಾಡೋಕೂ ಗೊತ್ತೆಂದ ಗಾಯತ್ರಿ

ನನ್ನ ತೀರ್ಮಾನವನ್ನು ನಾಳೆ ಹೇಳ್ತೇನೆ: ಸುಮಲತಾ ಅಂಬರೀಶ್

‌ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್‌, ಇಂದು ಬಿ.ವೈ. ವಿಜಯೇಂದ್ರ, ಪ್ರೀತಂಗೌಡ ಅವರು ನನ್ನನ್ನು ಭೇಟಿ ಮಾಡಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು. ಅವರ ಭಾವನೆಯನ್ನು ಹೇಳಿದ್ದಾರೆ. ಪಕ್ಷಕ್ಕೆ ನೀವು ಸೇರ್ಪಡೆಯಾಗಬೇಕು ಅಂತ ಕೇಳಿಕೊಂಡಿದ್ದಾರೆ. ನಾಳೆ ಬೆಂಬಲಿಗರು ನಮ್ಮ ಮನೆಗೆ ಬರುತ್ತಿದ್ದಾರೆ. ಅವರ ಭಾವನೆಯನ್ನು ಕೇಳಬೇಕಾದ ಕರ್ತವ್ಯವಿದೆ. ನಾನು ಕಾರ್ಯಕರ್ತರ ಭಾವನೆಯನ್ನು ಕೇಳಿ ಮಂಡ್ಯದಲ್ಲಿ ನಿಲುವನ್ನು ತಿಳಿಸುತ್ತೇನೆ. ಬಿಜೆಪಿಗೆ ಸಪೋರ್ಟ್ ಅನ್ನೊದು ಒಂದು ಕಡೆಯಾದರೆ, ಬೆಂಬಲಿಗರು ಏನು ಹೇಳುತ್ತಾರೆ ಎಂಬುದನ್ನು ಸಹ ನಾನು ಕೇಳಬೇಕು. ಮಂಡ್ಯಕ್ಕೆ ಹೋಗಿ ಅವರ ಮುಂದೆಯೇ ನಿಲುವನ್ನು ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದರು.

ಸುಲಭವಾಗಿ ಗೆಲ್ಲುವ ಕ್ಷೇತ್ರಗಳ ಆಫರ್ ನನಗೆ ಇತ್ತು. ಬೇರೆ ಪಕ್ಷದಿಂದಲೂ ಆಫರ್ ಇತ್ತು. ಆದರೆ, ನಾನು ಮಂಡ್ಯವನ್ನು ಬಿಟ್ಟರೆ ಮತ್ತೆಲ್ಲೂ ಹೋಗುತ್ತಿಲ್ಲ. ನನ್ನ ಅಸ್ತಿತ್ವ ಅಂದರೆ ಮಂಡ್ಯ ಮಾತ್ರ. ಅದನ್ನು ಕಳೆದುಕೊಳ್ಳಲು ಇಷ್ಟಪಡಲ್ಲ. ಮಂಡ್ಯ ಲೋಕಸಭಾ ಕ್ಷೇತ್ರವು ಜೆಡಿಎಸ್‌ಗೆ ಹೋಗಿದೆ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ನಾವು ಉಳಿಸಿಕೊಂಡಿದ್ದರೆ ಒಳ್ಳೆಯದಿತ್ತು. ಭೇಟಿಗೆ ನನ್ನ ಆಕ್ಷೇಪ ಇಲ್ಲ. ಇದು ಅಂಬರೀಶ್ ಮನೆ. ಯಾರೇ ಬಂದರೂ ಸ್ವಾಗತ. ಮೈಶುಗರ್ ವಿಚಾರದಲ್ಲಿ ಕಾರ್ಯ ಆರಂಭ ಮಾಡಿದಾಗ ನಾರಾಯಣಗೌಡ ಸಚಿವರಾಗಿರಲಿಲ್ಲ. ಅವರ ಬೆಂಬಲ ಇಲ್ಲ ಅಂತಲ್ಲ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಹಕಾರ ಕೊಟ್ಟರು.‌ ಬಸವರಾಜ ಬೊಮ್ಮಾಯಿ ಕೂಡ ಬೆಂಬಲಿಸಿದರು. ಬೇರೆ ಆಫರ್ ಏನೂ ಕೊಟ್ಟಿಲ್ಲ. ಆ ರೀತಿ ಕೇಳಿ ಪಡೆಯುವ ಅಭ್ಯಾಸ ಇಲ್ಲ ಎಂದು ಸುಮಲತಾ ಅಂಬರೀಶ್‌ ಹೇಳಿದರು.

Continue Reading

ಕರ್ನಾಟಕ

Bomb Threat: ಆನೇಕಲ್‌ನ ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ!

Bomb Threat: ಡಿಸೆಂಬರ್‌ನಲ್ಲಿ​ಇದೇ ರೀತಿ ಬೆಂಗಳೂರಿನ 48ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದರಿಂದಾಗಿ ಶಾಲೆ ಆಡಳಿತ ಮಂಡಳಿಗಳು ಬೆಚ್ಚಿ ಬಿದ್ದಿದ್ದವು. ಇದೀಗ ಮತ್ತೊಂದು ಶಾಲೆಗೆ ಬಾಂಬ್‌ ಬೆದರಿಕೆ ಇ-ಮೇಲ್ ಬಂದಿದೆ. ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ತೆರಳಿ ಪರಿಶೀಲಿಸಿದ್ದಾರೆ.

VISTARANEWS.COM


on

Bomb threat
Koo

ಆನೇಕಲ್: ಇತ್ತೀಚೆಗೆ ಬೆಂಗಳೂರಿನ 48ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಿದ ಬೆನ್ನಲ್ಲೇ ಮತ್ತೊಂದು ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಹಾಕಿರುವುದು ಕಂಡುಬಂದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹುಲಿಮಂಗಲದ ಟ್ರೀಮಿಸ್ ವರ್ಲ್ಡ್ ಸ್ಕೂಲ್‌ಗೆ ಶುಕ್ರವಾರ ಮಧ್ಯಾಹ್ನ ಬಾಂಬ್‌ ಬೆದರಿಕೆ ಇ-ಮೇಲ್ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ಶಾಲಾ ಕೊಠಡಿಯ ಡೆಸ್ಕ್ ಕೆಳಗಡೆ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದಿದೆ. ಹೀಗಾಗಿ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ದೌಡಾಯಿಸಿ, ಇಡೀ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಶಾಲೆಯಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಇದರಿಂದ ಬೆಚ್ಚಿ ಬಿದ್ದಿದ್ದ ಶಾಲೆ ಆಡಳಿತ ಮಂಡಳಿ ನಿಟ್ಟಿಸಿರು ಬಿಟ್ಟಿದೆ.

Bomb threat

ಡಿಸೆಂಬರ್‌ನಲ್ಲಿ ಬೆಂಗಳೂರಿನ 48ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು. ನಂತರ ಮಾರ್ಚ್‌ 1ರಂದು ಮಾರ್ಚ್ 1 ರಂದು ಬೆಂಗಳೂರಿನ ಬ್ರೂಕ್ ಫೀಲ್ಡ್‌ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು. ಅದಾದ ಬಳಿಕ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಮಾರ್‌, ಗೃಹ ಸಚಿವ ಪರಮೇಶ್ವರ್‌ ಸೇರಿದಂತೆ ಹಲವು ನಾಯಕರಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿತ್ತು. 25 ಲಕ್ಷ ಡಾಲರ್‌ (20 ಕೋಟಿ ರೂ.) ನೀಡದೇ ಹೋದರೆ ಅನಾಹುತ ಖಚಿತ ಎಂದೂ ದುಷ್ಕರ್ಮಿ ಇ-ಮೇಲ್‌ನಲ್ಲಿ ಬೆದರಿಕೆ ಹಾಕಿದ್ದ. ಇದೀಗ ಮತ್ತೊಂದು ಶಾಲೆಗೆ ಬೆದರಿಕೆ ಸಂದೇಶ ಬಂದಿರುವುದು ಆತಂಕ ಮೂಡಿಸಿದೆ.

Bomb threat

ಇದನ್ನೂ ಓದಿ | Blast in Bengaluru: ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌; ಭಟ್ಕಳದ ಶಂಕಿತ ಉಗ್ರನ ಪುತ್ರನಿಗೆ ಎನ್‌ಐಎ ನೋಟಿಸ್‌

ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರ ಸುಳಿವು ಕೊಟ್ಟರೆ 10 ಲಕ್ಷ ರೂ. ಇನಾಮು; ಇಲ್ಲಿದೆ ಉಗ್ರರ ಪೋಟೊ ಸಮೇತ ವಿವರ

Mussavir Hussain

ಬೆಂಗಳೂರು : ನಗರದ ರಾಮೇಶ್ವರಂ ಕೆಫೆ ಸ್ಫೋಟ (Blast in Bangalore) ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ ಬಳಿಕ, ತಲೆಮರೆಸಿಕೊಂಡಿರುವ ಇತರ ಇಬ್ಬರು ಆರೋಪಿಗಳ ಬಗ್ಗೆ ಯಾವುದೇ ರೀತಿಯ ಮಾಹಿತಿ ನೀಡುವವರಿಗೆ 10 ಲಕ್ಷ ರೂ.ಗಳ ನಗದು ಬಹುಮಾನವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ ಘೋಷಿಸಿದೆ. ಪತ್ತೆ ಮಾಡುವ ಉದ್ದೇಶಕ್ಕಾಗಿ ಎನ್​ಐಎ ಇಬ್ಬರೂ ಶಂಕಿತರ ಮೂಲ ವಿವರಗಳನ್ನು ನೀಡಿದೆ ಮತ್ತು ಆರೋಪಿಗಳನ್ನು ಬಂಧಿಸಲು ಸಾರ್ವಜನಿಕರ ನೆರವು ಕೋರಿದೆ.

ಸ್ಫೋಟ ನಡೆಸಿದ ಪ್ರಮುಖ ಆರೋಪಿಯನ್ನು ಮುಸ್ಸಾವಿರ್ ಶಾಜಿಬ್ ಹುಸೇನ್ ಎಂದು ತನಿಖಾ ಸಂಸ್ಥೆ ಗುರುತಿಸಿದ್ದು, ಆತನ ಚಲನವಲನಗಳು ರಾಮೇಶ್ವರಂ ಕೆಫೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಎನ್ಐಎ ಪ್ರಕಾರ, ಆತ ಸುಮಾರು 6 ಅಡಿ 2 ಇಂಚು ಎತ್ತರವಿರುವ 30 ವರ್ಷದ ವ್ಯಕ್ತಿ. ಬಾಲಕರ ಹಾಸ್ಟೆಲ್, ಪಿಜಿ ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್​ಗಳಲ್ಲಿ ವಾಸಿಸುತ್ತಿದ್ದಾನೆ. ಮೊಹಮ್ಮದ್ ಜುನೇದ್ ಸಯೀದ್ ಹೆಸರಿನಲ್ಲಿ ನಕಲಿ ಚಾಲನಾ ಪರವಾನಗಿ ಬಳಸುತ್ತಿದ್ದಾನೆ ಎಂದೂ ತನಿಖಾಧಿಕಾರಿಗಳು ಹೇಳಿದ್ದಾರೆ. ಆರೋಪಿ ತನ್ನ ಮೂಲ ಗುರುತನ್ನು ಮರೆಮಾಚಲು ಮುಖಗವಸು, ನಕಲಿ ಗಡ್ಡ ಅಥವಾ ವಿಗ್ ಧರಿಸುತ್ತಾನೆ ಎಂದು ಹೇಳಿದೆ.

ಇದನ್ನೂ ಓದಿ: Juice Jacking: ಸಾರ್ವಜನಿಕ ಸ್ಥಳಗಳ ಮೊಬೈಲ್​ ಚಾರ್ಜರ್​ ಬಳಸುವಾಗ ಎಚ್ಚರಿಕೆ; ಸೈಬರ್ ಕಳ್ಳರಿದ್ದಾರೆ!

ಸ್ಫೋಟದ ಇನ್ನೋರ್ವ ಆರೋಪಿ ಅಬ್ದುಲ್ ಮತೀನ್ ಅಹ್ಮದ್ ತಾಹಾ, ಸ್ಫೋಟ ನಡೆಸಲು ಮುಸ್ಸಾವಿರ್​ಗೆ ಸಹಾಯ ಮಾಡಿದ್ದನೆಂದು ಹೇಳಲಾಗಿದ್ದು, ಆತನಿಗೂ ಹುಡುಕಾಟ ನಡೆಯುತ್ತಿದೆ. ಈತ ತನ್ನ ಮೂಲ ಗುರುತನ್ನು ಮರೆಮಾಚಲು ವಿಘ್ನೇಶ್ ಡಿ ಮತ್ತು ಸುಮಿತ್ ಎಂಬ ಹಿಂದೂ ಹೆಸರನ್ನೂ ಬಳಸುತ್ತಿದ್ದಾನೆ ಎಂದು ಎನ್​​ಐಎ ಹೇಳಿದೆ. ಆತ ಬಹುಶಃ ಹುಡುಗರ ಹಾಸ್ಟೆಲ್ ಗಳು, ಪಿಜಿಗಳು ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್ ಗಳಲ್ಲಿ ವಾಸಿಸುತ್ತಿದ್ದಾನೆ ಎಂದು ಹೇಳಿದ್ದಾರೆ. ಇಬ್ಬರೂ ಆರೋಪಿಗಳು ತೀರ್ಥಹಳ್ಳಿ ಮೂಲದವರು.

ಪ್ರಕರಣದ ಆರೋಪಿಗಳ ಬಗ್ಗೆ ವಿವರಗಳನ್ನು ನೀಡುವವರಿಗೆ ಎನ್ಐಎ ಈ ಹಿಂದೆಯೂ 10 ಲಕ್ಷ ರೂ.ಗಳ ಬಹುಮಾನ ಘೋಷಿಸಿತ್ತು. ಶಂಕಿತರ ರೇಖಾಚಿತ್ರಗಳನ್ನು ಈ ಹಿಂದೆ ಬಿಡುಗಡೆ ಮಾಡಿತ್ತು. ಮಾರ್ಚ್ 1 ರಂದು ರೆಸ್ಟೋರೆಂಟ್​ನಲ್ಲಿ ಸಂಭವಿಸಿದ ಐಇಡಿ ಸ್ಫೋಟದ ಸಹ ಸಂಚುಕೋರ ಮುಜಮ್ಮಿಲ್ ಶರೀಪ್​ನನ್ನು ಎನ್ಐಎ ಗುರುವಾರ ಬಂಧಿಸಿದೆ. ಸ್ಫೋಟ ಸಂಭವಿಸಿದ ನಂತರ ಕಳೆದ ತಿಂಗಳಲ್ಲಿ ಎನ್ಐಎ ನಡೆಸಿದ ಮೊದಲ ಬಂಧನ ಇದಾಗಿದೆ.

Continue Reading

ಕರ್ನಾಟಕ

Parliament Flashback: ದೇಶದಲ್ಲಿ ಇಂದಿರಾ ಗಾಂಧಿ ವಿರೋಧಿ ಅಲೆ ಇದ್ದಾಗಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ಜಯಭೇರಿ!

Parliament Flashback: ಕರ್ನಾಟಕದಲ್ಲೂ ಇಂದಿರಾ ವಿರೋಧಿ ಅಲೆ (Parliament Flashback) ಜೋರಾಗಿತ್ತು. ಆದರೆ ಒಟ್ಟು 28 ಕ್ಷೇತ್ರಗಳಲ್ಲಿ ಜನತಾ ಪಕ್ಷವು ಭಾರತೀಯ ಲೋಕ ದಳದ ಹೆಸರಿನಲ್ಲಿ ಗೆದ್ದಿದ್ದು ಕೇವಲ ಎರಡು ಕ್ಷೇತ್ರಗಳಲ್ಲಿ. ಕಾಂಗ್ರೆಸ್‌ 26 ಸ್ಥಾನಗಳನ್ನು ಗೆದ್ದು ಅಚ್ಚರಿ ಮೂಡಿಸಿತು. ಜನತಾ ಪರಿವಾರದ ಅಭ್ಯರ್ಥಿಗಳಲ್ಲಿ ಗೆದ್ದವರೆಂದರೆ, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ನ್ಯಾ. ಕೆ.ಎಸ್‌. ಹೆಗ್ಡೆ ಮತ್ತು ಹಾಸನದಿಂದ ಎಸ್‌. ನಂಜೇಗೌಡರು ಮಾತ್ರ.

VISTARANEWS.COM


on

Parliament Flashback
Koo

ಬೆಂಗಳೂರು: ತುರ್ತು ಪರಿಸ್ಥಿತಿ ಹೇರಿದ್ದ (Parliament Flashback) ಇಂದಿರಾ ಗಾಂಧಿ ವಿರುದ್ಧ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹಾಗಾಗಿ ಕಾಂಗ್ರೆಸ್‌ಗೆ ಭಾರಿ ಸೋಲಾಯಿತು. ಆದರೆ ಕರ್ನಾಟಕದಲ್ಲಿ ಮಾತ್ರ ತದ್ವಿರುದ್ಧ ಫಲಿತಾಂಶ ಕಂಡು ಬಂತು. ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ 1977ರ ಮಾ.21ರಂದು ಅಂತ್ಯವಾಯಿತು. ತುರ್ತು ಪರಿಸ್ಥಿತಿಯ ಭಯದ ವಾತಾವರಣದ ನಡುವೆಯೇ ಮಾ.16ರಿಂದ 20ರವರೆಗೆ 6ನೇ ಲೋಕಸಭೆ ಚುನಾವಣೆ ನಡೆಯಿತು. ಇಡೀ ದೇಶ ಇಂದಿರಾ ಗಾಂಧಿ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಕೊತಕೊತನೆ ಕುದಿಯುತ್ತಿತ್ತು. ಜನರ ಆಕ್ರೋಶ ಭುಗಿಲೆದ್ದಿತ್ತು. ಎಲ್ಲ ಪ್ರತಿಪಕ್ಷಗಳು ಜನತಾ ಪರಿವಾರದ ಅಡಿಯಲ್ಲಿ ಒಂದಾಗಿ ಕಾಂಗ್ರೆಸ್‌ ವಿರುದ್ಧ ಸಮರ ಸಾರಿದ್ದರು.

ಜನತಾ ಪರಿವಾರ 295 ಸೀಟುಗಳೊಂದಿಗೆ ಬಹುಮತ ಪಡೆಯಿತು. ಇಂದಿರಾ ಗಾಂಧಿ ಅವರ ಕಾಂಗ್ರೆಸ್‌ ಪಕ್ಷ ಕೇವಲ 154 ಸ್ಥಾನಗಳನ್ನು ಗಳಿಸಿತು. ಜನತಾ ಪರಿವಾರ ಹಿಂದಿನ ಚುನಾವಣೆಗಿಂತ 260 ಸ್ಥಾನಗಳನ್ನು ಹೆಚ್ಚುವರಿಯಾಗಿ ಗಳಿಸಿದರೆ, ಕಾಂಗ್ರೆಸ್‌‌ ತನ್ನ ಹಿಡಿತದಲ್ಲಿದ್ದ 198 ಕ್ಷೇತ್ರಗಳನ್ನು ಕಳೆದುಕೊಂಡಿತು.

ರಾಜ್ಯದಲ್ಲೂ ಇಂದಿರಾ ಅಲೆ ಇತ್ತು, ಆದರೆ…

ಕರ್ನಾಟಕದಲ್ಲೂ ಇಂದಿರಾ ವಿರೋಧಿ ಅಲೆ ಜೋರಾಗಿತ್ತು. ಆದರೆ ಒಟ್ಟು 28 ಕ್ಷೇತ್ರಗಳಲ್ಲಿ ಜನತಾ ಪಕ್ಷವು ಭಾರತೀಯ ಲೋಕ ದಳದ ಹೆಸರಿನಲ್ಲಿ ಗೆದ್ದಿದ್ದು ಕೇವಲ ಎರಡು ಕ್ಷೇತ್ರಗಳಲ್ಲಿ. ಕಾಂಗ್ರೆಸ್‌ 26 ಸ್ಥಾನಗಳನ್ನು ಗೆದ್ದು ಅಚ್ಚರಿ ಮೂಡಿಸಿತು.

ಇದನ್ನೂ ಓದಿ | Parliament Flashback: ಬೆಂಗಳೂರು ದಕ್ಷಿಣ ಕ್ಷೇತ್ರ ಅಂದರೆ ಕಾಂಗ್ರೆಸ್‌ಗೆ ದುಃಸ್ವಪ್ನ! ಗೆದ್ದಿದ್ದು ಒಮ್ಮೆ ಮಾತ್ರ!

ಜನತಾ ಪರಿವಾರದ ಅಭ್ಯರ್ಥಿಗಳಲ್ಲಿ ಗೆದ್ದವರೆಂದರೆ, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ನ್ಯಾ. ಕೆ.ಎಸ್‌. ಹೆಗ್ಡೆ ಮತ್ತು ಹಾಸನದಿಂದ ಎಸ್‌ ನಂಜೇಗೌಡರು ಮಾತ್ರ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೆ.ಎಸ್‌. ಹೆಗ್ಡೆ ಅವರು ಕಾಂಗ್ರೆಸ್‌ನ ಕೆ. ಹನುಮಂತಯ್ಯ ಅವರನ್ನು 41,165 ಮತಗಳ ಅಂತರದಿಂದ ಸೋಲಿಸಿದರು. ಹಾಸನದಲ್ಲಿ ಎಸ್‌ ನಂಜೇಗೌಡ ಅವರು ಕಾಂಗ್ರೆಸ್‌ನ ಜಿ.ಎಲ್‌. ನಲ್ಲೂರೆಗೌಡ ಅವರ ವಿರುದ್ಧ ಕೇವಲ 1081 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಸೋತ ಘಟಾನುಘಟಿಗಳು ಯಾರು?

ರಾಜ್ಯದಲ್ಲಿ ಅಂದಿನ ಚುನಾವಣೆಯಲ್ಲಿ ಸೋತು ಹೋದ ಜನತಾ ಪರಿವಾರದ ಘಟಾನುಘಟಿ ರಾಜಕಾರಣಿಗಳು ಯಾರ್ಯಾರು ನೋಡಿ:

ಕೆನರಾ (ಈಗಿನ ಉತ್ತರ ಕನ್ನಡ ಕ್ಷೇತ್ರ) ಲೋಕಸಭೆ ಕ್ಷೇತ್ರದಿಂದ ರಾಮಕೃಷ್ಣ ಹೆಗಡೆ, ಧಾರವಾಡ ಉತ್ತರದಿಂದ ಜಗನ್ನಾಥ್‌ ರಾವ್‌ ಜೋಶಿ, ಮಂಗಳೂರಿನಿಂದ ಎ.ಕೆ. ಸುಬ್ಬಯ್ಯ, ಮೈಸೂರಿನಿಂದ ಎಂ.ಎಸ್‌. ಗುರುಪಾದಸ್ವಾಮಿ, ಶಿವಮೊಗ್ಗದಿಂದ ಜೆ.ಎಚ್‌. ಪಟೇಲ್‌, ಉಡುಪಿಯಿಂದ ವಿ.ಎಸ್‌. ಆಚಾರ್ಯ, ಧಾರವಾಡ ದಕ್ಷಿಣದಿಂದ ಸಿ.ಎಂ. ಇಬ್ರಾಹಿಂ, ತುಮಕೂರಿನಿಂದ ಎಸ್‌. ಮಲ್ಲಿಕಾರ್ಜುನಯ್ಯ.

1977ರ ಮಾ.25ರಂದು ಮಧ್ಯಾಹ್ನ 3.30ಕ್ಕೆ 81 ವರ್ಷದ ಮೊರಾರ್ಜಿ ದೇಸಾಯಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಇಂದಿರಾ ಆಳ್ವಿಕೆ ಅಂತ್ಯ ಆಯಿತು. ಆದರೆ ಕರ್ನಾಟಕ ಮಾತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿಯೇ ಉಳಿಯಿತು.

ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದಿದ್ದ ಒಡೆಯರ್‌!

ಮೈಸೂರು ರಾಜ ವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಮೈಸೂರು ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ (Parliament Flashback) ಗೆಲುವು ಸಾಧಿಸಿದ್ದರು. ಸೋಜಿಗವೆಂದರೆ ಒಡೆಯರ್‌ ನಿರಂತರ ಎರಡು ಬಾರಿ ಕಾಂಗ್ರೆಸ್‌ನಿಂದ ಗೆದ್ದು ಮೂರನೇ ಬಾರಿ ಬಿಜೆಪಿ ಟಿಕೆಟ್‌ನಿಂದ ಚುನಾವಣೆ ಕಣಕ್ಕಿಳಿದಾಗ ಸೋತು ಹೋದರು! ಮುಂದೆ ಮತ್ತೆರಡು ಬಾರಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದರು!

1984ರಲ್ಲಿ ಮೊದಲ ಬಾರಿ ಸ್ಪರ್ಧೆ

1984ರಲ್ಲಿ ಒಡೆಯರ್‌ ಮೊದಲ ಬಾರಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದು ಲೋಕಸಭೆ ಪ್ರವೇಶಿಸಿದರು. 1989ರಲ್ಲಿ ಮತ್ತೊಮ್ಮೆ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದರು. 1991ರಲ್ಲಿ ಕಾಂಗ್ರೆಸ್‌ ಹೈಕಮಾಂಡ್‌, ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸ್‌ ಅವರ ಪುತ್ರಿ ಚಂದ್ರಪ್ರಭಾ ಅರಸ್‌ ಅವರಿಗೆ ಟಿಕೆಟ್‌ ನೀಡಿತು. ಸಿಟ್ಟಿಗೆದ್ದ ಒಡೆಯರ್‌ ಅವರು ಬಿಜೆಪಿಯಿಂದ ಕಣಕ್ಕಿಳಿದರು. ಆದರೆ ಚಂದ್ರಪ್ರಭಾ ಅರಸ್‌ ಎದುರು ಸೋತು ಹೋದರು.

ಇದನ್ನೂ ಓದಿ | Parliament Flashback: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರನ್ನೇ ಸೋಲಿಸಿದ್ದ ಬ್ಯಾರೇಜ್‌ ಸಿದ್ದು!

ಮತ್ತೊಮ್ಮೆ ಒಡೆಯರ್‌ಗೆ ಟಿಕೆಟ್‌

1996ರಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಒಡೆಯರ್‌ಗೆ ಟಿಕೆಟ್‌ ನೀಡಿತು. ಆ ಚುನಾವಣೆಯಲ್ಲಿ ಒಡೆಯರ್‌ ಜನತಾ ದಳದ ಅಭ್ಯರ್ಥಿ ಜಿ.ಟಿ. ದೇವೇಗೌಡರನ್ನು ಸೋಲಿಸಿದರು. ಆದರೆ 1998ರಲ್ಲಿ ಕಾಂಗ್ರೆಸ್‌ ಚಿಕ್ಕಮಾದು ಅವರಿಗೆ ಟಿಕೆಟ್‌ ನೀಡಿತು. ಬಿಜೆಪಿ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಅವರು ಚಿಕ್ಕಮಾದು ಅವರನ್ನು ಸೋಲಿಸುವ ಮೂಲಕ ಬಿಜೆಪಿ ಮೊದಲ ಬಾರಿ ಮೈಸೂರಿನಲ್ಲಿ ಖಾತೆ ತೆರೆಯಿತು. 2004ರಲ್ಲಿ ಕಾಂಗ್ರೆಸ್‌ ಮತ್ತೆ ಒಡೆಯರ್‌ ಅವರನ್ನು ಕಣಕ್ಕಿಳಿಸಿತು. ಆದರೆ ಬಿಜೆಪಿಯ ವಿಜಯಶಂಕರ್‌ ಅವರು 3,16,442 ಮತಗಳನ್ನು ಪಡೆದು ಎರಡನೇ ಬಾರಿ ಗೆಲುವು ಸಾಧಿಸಿದರು. ಜನತಾ ದಳದಿಂದ ಸ್ಪರ್ಧಿಸಿದ್ದ ಎ.ಎಸ್‌. ಗುರುಸ್ವಾಮಿ 3,06,292 ಮತ ಪಡೆದು ಎರಡನೇ ಸ್ಥಾನ ಪಡೆದರೆ, ಒಡೆಯರ್‌ ಅವರು 2,99,227 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. ಅಲ್ಲಿಗೆ ಅವರ ಚುನಾವಣಾ ರಾಜಕೀಯ ಅಂತ್ಯವಾಯಿತು.

Continue Reading

ಮಳೆ

Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

Temperature rising : ಒಂದೆಡೆ ಗರಿಷ್ಠ ತಾಪಮಾನ ಏರಿಕೆ ಆಗುತ್ತಿದ್ದರೆ, ಮತ್ತೊಂದು ಕಡೆ ಶಾಖ ತರಂಗಗಳು (Heat Wave) ಅಪ್ಪಿಳಿಸಿ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇದು ಆರೋಗ್ಯದ ಮೇಲೂ ಪರಿಣಾಮ ಬೀರಲಿದ್ದು, ಹುಷಾರಾಗಿರಿ ಅಂತಿದ್ದಾರೆ ವೈದ್ಯರು.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬಿಸಿಲಿನ ಶಾಖಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬರಿಗಾಲಿನಲ್ಲಿ ಏನಾದರೂ ಹೊರಗೆ ಕಾಲಿಟ್ಟರೆ ಸುಟ್ಟು ಹೋಗುವುದು ಗ್ಯಾರಂಟಿ. ಮುಂದಿನ ಮೂರು ದಿನಗಳು ತಾಪಮಾನ ಏರಿಕೆ (Temperature rising) ಆಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಇದರೊಟ್ಟಿಗೆ ಹೀಟ್‌ ವೇವ್‌ (Heat Wave Warning) ಎಚ್ಚರಿಕೆಯನ್ನು ನೀಡಲಾಗಿದೆ.

ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಣಹವೆ (Dry Weather) ಇರುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳು ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಜತೆಗೆ ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಉಷ್ಣ ಅಲೆ ಪರಿಸ್ಥಿತಿ ಇರಲಿದೆ.

ರಾಜಧಾನಿ ಬೆಂಗಳೂರಲ್ಲಿ ನಿರ್ಮಲ ಆಕಾಶ ಇರಲಿದೆ. ಗರಿಷ್ಠ ಉಷ್ಣಾಂಶವು 36 ಹಾಗೂ ಕನಿಷ್ಠ ಉಷ್ಣಾಂಶವು 22 ಡಿ.ಸೆ ಇರಲಿದೆ. ಇದರಿಂದ ಬಿಸಿಲ ಧಗೆ ಹೆಚ್ಚಿರಲಿದೆ.

Karnataka Weather

ಕಾದ ಕೆಂಡವಾಗುತ್ತಿದೆ ಉತ್ತರ ಕರ್ನಾಟಕ

ಕರ್ನಾಟಕದಲ್ಲಿ ಒಣ ಹವೆ ಮುಂದುವರಿದಿದ್ದು, ಗರಿಷ್ಠ ಉಷ್ಣಾಂಶವು ಕಲಬುರಗಿಯಲ್ಲಿ 40.9 ಡಿ.ಸೆ ದಾಖಲಾಗಿತ್ತು. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶವು 19.5 ಡಿ.ಸೆ ನಷ್ಟು ದಾಟಿತ್ತು. ಕೋಲಾರ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 18.0 ಡಿ.ಸೆ ಹಾಗೂ ರಾಯಚೂರಿನಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 41.9 ಡಿ.ಸೆ ದಾಖಲಾಗಿದೆ.

karnataka Weather

ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ನಿಂದ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಬಾಗಲಕೋಟೆ ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್‌ನಿಂದ 44 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

ಸಮ್ಮರ್‌ ಸೀಸನ್‌ನಲ್ಲಿ ಬದಲಾಯ್ತು ನೇಲ್‌ ಕಲರ್ಸ್‌ ಟ್ರೆಂಡ್‌


ಬೇಸಿಗೆ ಬಂದಾಯ್ತು, ಇನ್ನೇನಿದ್ದರೂ ಲೈಟ್‌ ಹಾಗೂ ಬ್ರೈಟ್‌ ನೇಲ್‌ ಕಲರ್‌ಗಳ ಹಾವಳಿ. ಯಾವ ಫ್ಯಾಷನ್‌ ಪ್ರಿಯ ಹೆಣ್ಮಕ್ಕಳನ್ನು ನೋಡಿದರೂ ಸಾಕು, ಟ್ರೆಂಡಿಯಾಗಿರುವ ನೇಲ್‌ ಕಲರ್‌ ಹಾಗೂ ಶೇಡ್‌ಗಳನ್ನು ಹಚ್ಚಿರುವ ಉಗುರುಗಳು ಮನ ಸೆಳೆಯುತ್ತವೆ. ಆ ಮಟ್ಟಿಗೆ ಈ ಬಾರಿ ಭಿನ್ನ-ವಿಭಿನ್ನ ಮಾನೋಕ್ರೋಮಾಟಿಕ್‌ ಶೇಡ್‌ಗಳು ಹಾಗೂ ಲೈಟ್‌ ವರ್ಣಗಳು ಬ್ಯೂಟಿ ಲೋಕಕ್ಕೆ ಕಾಲಿಟ್ಟಿವೆ.

Nail Colours

ಟ್ರೆಂಡ್‌ನಲ್ಲಿ ಕಾಲಿಟ್ಟ ನೇಲ್‌ ಬಣ್ಣಗಳು

ನನಗೆ ಅತಿಯಾಗಿರುವ ನೇಲ್‌ ಡಿಸೈನ್‌ ಬೇಡ. ನೋಡಲು ಆಕರ್ಷಕವಾಗಿ ಕಾಣಬೇಕು ಹಾಗೂ ಸಿಂಪಲ್ಲಾಗಿರಬೇಕು ಎನ್ನುವವರಿಗೆ ಈ ಸೀಸನ್‌ನ ಸಾಕಷ್ಟು ನೇಲ್‌ ಕಲರ್‌ಗಳು ಹೊಂದುತ್ತವೆ ಎನ್ನುವ ನೇಲ್‌ ಆರ್ಟಿಸ್ಟ್‌ ರಿಚಾ ಪ್ರಕಾರ, ಇವು ಡಿಫರೆಂಟ್‌ ಆಗಿ ಹಚ್ಚಿದಲ್ಲಿ ಮೋಡಲು ವಿಭಿನ್ನವಾಗಿ ಕಾಣುತ್ತವೆ. ಇದಕ್ಕೆ ಉದಾಹರಣೆ ಮಾನೋಕ್ರೋಮ್ಯಾಟಿಕ್‌ ನೇಲ್‌ ಡಿಸೈನ್‌ ಎನ್ನುತ್ತಾರೆ.

Nail Colours

ಕಲರ್‌ಫುಲ್‌ ನೇಲ್‌ ಶೇಡ್ಸ್

ಸಾವಿರಗಟ್ಟಲೇ ಕೊಟ್ಟು ನೇಲ್‌ ಆರ್ಟ್ ಮಾಡಿಸಲು ಸಾಧ್ಯವಾಗದು ಎನ್ನುವವರಿಗೆ ಈ ನೇಲ್‌ ಶೇಡ್ಸ್ ಹೊಸ ಲುಕ್‌ ನೀಡುತ್ತವೆ ಎನ್ನಬಹುದು. ಹಚ್ಚುವವರ ಕ್ರಿಯಾತ್ಮಕತೆ ಮೇಲೆ ಡಿಪೆಂಡ್‌ ಆಗುತ್ತದೆ ಎನ್ನುತ್ತಾರೆ ನೇಲ್‌ ಆರ್ಟ್ ಡಿಸೈನರ್‌. ಇನ್ನು ಇದೀಗ ಒಂದೊಂದು ಉಗುರುಗಳಿಗೂ ಒಂದೊಂದು ಬಗೆಯ ಬಣ್ಣ ಹಚ್ಚುವುದು ಕೂಡ ಫ್ಯಾಷನ್‌ ಆಗಿದೆ. ಇದರೊಂದಿಗೆ ಇದೀಗ ಈ ಬಣ್ಣಗಳನ್ನು ಅಡ್ಡಡ್ಡ, ಉದ್ದುದ್ದವಾಗಿ ಹಚ್ಚುವ ಫ್ಯಾಷನ್‌ ಕೂಡ ಆರಂಭವಾಗಿದೆಯಂತೆ ಎನ್ನುತ್ತಾರೆ. ಇನ್ನು ಯಾವುದೇ ನೇಲ್‌ ವರ್ಣಗಳು ಚೆನ್ನಾಗಿ ಕಾಣಬೇಕೆಂದಲ್ಲಿ ಒಂದಿಷ್ಟು ಸಲಹೆಗಳನ್ನು ಪಾಲಿಸಲೇಬೇಕು ಎಂಬುದು ಬ್ಯೂಟಿ ಎಕ್ಸ್ಪಟ್ರ್ಸ್ ಅಭಿಪ್ರಾಯ. ಇದಕ್ಕಾಗಿ ಉಗುರುಗಳಿಗೆ ಆಕಾರ ನೀಡುವುದು ಅಗತ್ಯ ಎನ್ನುತ್ತಾರೆ.

red Nail Colour

ಮರೆಯಾದ ನೇಲ್‌ ಶೇಡ್ಸ್‌

ಬೋಲ್ಡ್‌ ಕಲರ್‌ಗಳಾದ ಬರ್ಗ್ಯಾಂಡಿ, ರೆಡ್‌ವೈನ್‌, ಶೇಡಿ ಬ್ಲಾಕ್‌, ಗೋಲ್ಡನ್‌ ಟ್ರೆಂಡಿ ಕಲರ್‌ಗಳು ಕಳೆದ ಸಾಲಿಗೆ ಕೊನೆಯಾಗಿವೆ. ಆದರೆ, ಮೆಟಾಲಿಕ್‌ ಕಲರ್ಸ್‌ ಈ ಸೀಸನ್‌ನ ನೇಲ್‌ ಫ್ಯಾಷನ್‌ನಲ್ಲಿಮಾತ್ರವಲ್ಲ, ಈ ಸಾಲಿಗೂ ಮುಂದುವರೆದಿವೆ. ನೀಲಿ, ಹಸಿರು, ಗೋಲ್ಡ್‌, ಸಿಲ್ವರ್‌ ಕಲರ್‌ಗಳು ಕಾಂಟ್ರಾಸ್ಟ್‌ ಮ್ಯಾಚ್‌ನೊಂದಿಗೆ ಮುಂದುವರೆದಿವೆ ಎನ್ನುತ್ತಾರೆ ನೇಲ್‌ ಆರ್ಟ್ ಡಿಸೈನರ್‌ ರಕ್ಷಾ.

Nail Colour at Nails Salon

ನೇಲ್‌ ಕಲರ್ಸ್ ಪ್ರಿಯರಿಗೆ ಟಿಪ್ಸ್‌

  • ನಿಮ್ಮ ಸ್ಕಿನ್‌ ಟೋನ್‌ಗೆ ಮ್ಯಾಚ್‌ ಆಗುವುದನ್ನು ಆಯ್ಕೆ ಮಾಡಿ.
  • ಪ್ರತಿ ಬಾರಿ ರಿಮೂವರ್‌ನಿಂದ ಹಳೆಯದ್ದನ್ನು ಅಳಿಸಿ.
  • ಡಬ್ಬಲ್‌ ಶೇಡ್ಸ್‌ ಹಚ್ಚಿ, ಹೊಸ ಲುಕ್‌ ನೀಡಿ.
  • ಅಲಂಕಾರಕ್ಕೆ ಸ್ಟಿಕ್ಕರ್‌ ಕ್ರಿಸ್ಟಲ್‌ ಬಳಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ISIS Terroirst- ISIS Threat
ಪ್ರಮುಖ ಸುದ್ದಿ2 mins ago

ISIS Threat : ಭಾರತಕ್ಕೆ ಎದುರಾಗಿದೆ ಐಸಿಸ್​ ಉಗ್ರರ ದಾಳಿಯ ಬೆದರಿಕೆ

Anjanadri Hill Shree Anjaneya Swamy Temple Hundi money leak video viral
ಕೊಪ್ಪಳ32 mins ago

Koppala News: ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ಹುಂಡಿಯ ಹಣ ಸೋರಿಕೆ ವಿಡಿಯೊ ವೈರಲ್

Kalaburagi News
ಕರ್ನಾಟಕ34 mins ago

Kalaburagi News: ಕಲಬುರಗಿ ಉಚ್ಚಾಯಿ ರಥೋತ್ಸವದಲ್ಲಿ ದುರಂತ; ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ದುರ್ಮರಣ

Violation of Code of Conduct 84 thousand rupees cash seized at honnali
ದಾವಣಗೆರೆ36 mins ago

Davanagere News: ನೀತಿ ಸಂಹಿತೆ ಉಲ್ಲಂಘನೆ; 84 ಸಾವಿರ ರೂ. ನಗದು ಜಪ್ತಿ

Lok Sabha Election 2024 and BY Vijayendra meets Sumalatha Ambareesh for discussion on support to NDA candidate in Mandya Lok Sabha Constituency
Lok Sabha Election 202437 mins ago

Lok Sabha Election 2024: ಸುಮಲತಾ ಭೇಟಿ ಮಾಡಿದ ವಿಜಯೇಂದ್ರ; ನಾಳೆಯೇ ಫೈನಲ್‌ ಅಂದ್ರು ರೆಬೆಲ್‌ ಲೇಡಿ!

Bomb threat
ಕರ್ನಾಟಕ1 hour ago

Bomb Threat: ಆನೇಕಲ್‌ನ ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ!

Mukthar Ansari
ಪ್ರಮುಖ ಸುದ್ದಿ2 hours ago

Mukhtar Ansari : ನಿಜಕ್ಕೂ ಗ್ಯಾಂಗ್ ಸ್ಟರ್ ಅನ್ಸಾರಿ ಸತ್ತಿದ್ದು ಹೇಗೆ? ಬಂತು ಪೋಸ್ಟ್ ಮಾರ್ಟಮ್ ರಿಪೋರ್ಟ್!

Parliament Flashback
ಕರ್ನಾಟಕ2 hours ago

Parliament Flashback: ದೇಶದಲ್ಲಿ ಇಂದಿರಾ ಗಾಂಧಿ ವಿರೋಧಿ ಅಲೆ ಇದ್ದಾಗಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ಜಯಭೇರಿ!

Satyendar Jain
ಪ್ರಮುಖ ಸುದ್ದಿ2 hours ago

Satyendar Jain : ಆಪ್​ಗೆ ಇನ್ನಷ್ಟು ಸಂಕಷ್ಟ; ಸತ್ಯೇಂದರ್​ ಜೈನ್ ವಿರುದ್ಧ ಸಿಬಿಐ ತನಿಖೆಗೆ ಆದೇಶ

Karnataka Weather
ಮಳೆ2 hours ago

Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ17 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌