Bengaluru Ring Road : ಬೆಂಗಳೂರಿನ 2 ರಿಂಗ್‌ ರೋಡ್‌ ಲೋಕಾರ್ಪಣೆ ಮಾಡಿದ ಮೋದಿ: ಏನೇನು ಲಾಭ? - Vistara News

ಬೆಂಗಳೂರು

Bengaluru Ring Road : ಬೆಂಗಳೂರಿನ 2 ರಿಂಗ್‌ ರೋಡ್‌ ಲೋಕಾರ್ಪಣೆ ಮಾಡಿದ ಮೋದಿ: ಏನೇನು ಲಾಭ?

Bengaluru Ring Road : ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ. ಜನರಿಗೆ ನಿರಾಳತೆ ಒದಗಿಸುವ ಸೆಟಲೈಟ್‌ ಟೌನ್‌ ರಿಂಗ್‌ ರೋಡ್‌ನ ಎರಡು ಸೆಕ್ಷನ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಇದರ ಲಾಭ ಏನೇನು? ಇಲ್ಲಿದೆ ವಿವರ.

VISTARANEWS.COM


on

bengaluru Outer Ring Road1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬೆಂಗಳೂರಿನ ಮಹತ್ವಾಕಾಂಕ್ಷಿ ಸೆಟಲೈಟ್‌ ಟೌನ್‌ ರಿಂಗ್‌ ರೋಡ್‌ನ (Satellite Town Ring Road- STRR) ಎರಡು ಪ್ರಮುಖ ರಸ್ತೆಗಳ (Bengaluru Ring Road) ಲೋಕಾರ್ಪಣೆ ಮಾಡುವ ಮೂಲಕ ನಗರದ ಜನಸಂಚಾರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ದಾಬಸ್‌ಪೇಟೆಯಿಂದ ದೊಡ್ಡ ಬಳ್ಳಾಪುರವನ್ನು (Dobbaspet – Doddaballapur section) ಸಂಪರ್ಕಿಸುವ 42 ಕಿ.ಮೀ. ಉದ್ದದ ರಸ್ತೆ, ದೊಡ್ಡಬಳ್ಳಾಪುರದಿಂದ ಹೊಸಕೋಟೆ (Doddaballapura-Hoskote section) ನಡುವಿನ 37 ಕಿ.ಮೀ ಉದ್ದದ ರಸ್ತೆಯನ್ನು ಅವರು ವರ್ಚ್ಯುವಲ್‌ (Virtual Inauguration) ಆಗಿ ಉದ್ಘಾಟಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆ, ಟ್ರಾಫಿಕ್‌ ಸಮಸ್ಯೆಗೆ ದೊಡ್ಡ ಪರಿಹಾರವಾಗಿ ಸೆಟಲೈಟ್‌ ಟೌನ್‌ ಟೌನ್‌ ರಿಂಗ್‌ ರೋಡನ್ನು ರೂಪಿಸಲಾಗಿದ್ದು, ದಾಬಸ್‌ಪೇಟೆಯಿಂದ ದೊಡ್ಡ ಬಳ್ಳಾಪುರವನ್ನು ಸಂಪರ್ಕಿಸುವ 42 ಕಿ.ಮೀ. ಉದ್ದದ ರಸ್ತೆಯನ್ನು 1438 ಕೋಟಿ ರೂ. ಮತ್ತು ದೊಡ್ಡಬಳ್ಳಾಪುರದಿಂದ ಹೊಸಕೋಟೆ ನಡುವಿನ 37 ಕಿ.ಮೀ ಉದ್ದದ ರಸ್ತೆಯನ್ನು 1317 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

bengaluru Outer Ring Road1

ಈ ಸೆಟಲೈಟ್‌ ರಿಂಗ್‌ ರೋಡ್‌ನ ನಿರ್ಮಾಣದಿಂದಾಗಿ ಇನ್ನು ಮುಂದೆ ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಅದರಲ್ಲೂ ಮುಖ್ಯವಾಗಿ ನಗರದ ಹೊರಭಾಗದಿಂದ ‌ ಬಂದು ವಿಮಾನ ನಿಲ್ದಾಣ ಕಡೆಗೆ ಹೋಗುವವರಿಗೆ ಅನುಕೂಲವಾಗಲಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದ್ದಾರೆ.

ಹೊಸಕೋಟೆ, ಕೋಲಾರ, ಚಿತ್ತೂರು, ಚಿಂತಾಮಣಿ, ಮಾಲೂರು ಭಾಗಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ಇದರಿಂದ ಭಾರಿ ಅನುಕೂಲವಾಗಲಿದೆ. ಇಲ್ಲಿನ ಜನರು ಬೆಂಗಳೂರು ನಗರವನ್ನು ಪ್ರವೇಶ ಮಾಡದೆಯೇ ವಿಮಾನ ನಿಲ್ದಾಣಕ್ಕೆ ತಲುಪಬಹುದು. ಈ ಮೂಲಕ ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆಯೂ ಭಾರಿ ಕಡಿಮೆಯಾಗಲಿದೆ.

Bengaluru Ring Road : ಹೆಬ್ಬಾಳ ಪ್ರದೇಶದ ಮೇಲಿನ ಒತ್ತಡ ಕಡಿಮೆಯಾಗಲಿದೆ

ದಾಬಸ್‌ಪೇಟೆ -ದೊಡ್ಡಬಳ್ಳಾಪುರವನ್ನು ಸಂಪರ್ಕಿಸುವ ರಿಂಗ್‌ ರೋಡ್‌ನಿಂದಾಗಿ ಬೆಂಗಳೂರಿನ ಹೆಬ್ಬಾಳ ಪ್ರದೇಶ ಮೇಲೆ ಉಂಟಾಗುತ್ತಿರುವ ಟ್ರಾಫಿಕ್‌ ಒತ್ತಡವನ್ನು ಕಡಿಮೆ ಮಾಡಲಿದೆ. ಆಂಧ್ರ ಪ್ರದೇಶ ಮತ್ತು ಇತರ ಗಡಿ ಭಾಗಗಳಿಗೆ ಸಾಗುವವರಿಂದಾಗಿ ಹೆಬ್ಬಾಳ ಭಾಗದಲ್ಲಿ ಭಾರಿ ಒತ್ತಡ ಸೃಷ್ಟಿಯಾಗುತ್ತದೆ. ದಾಬಸ್‌ಪೇಟೆ ದೊಡ್ಡಬಳ್ಳಾಪುರ ರಿಂಗ್‌ ರೋಡ್‌ನಿಂದಾಗಿ ಅವರು ಹೆಬ್ಬಾಳ ಭಾಗಕ್ಕೆ ಪ್ರವೇಶ ಪಡೆಯದೆಯೇ ನೇರವಾಗಿ ಔಟರ್‌ ರಿಂಗ್‌ ರೋಡ್‌ ಮೂಲಕ ಸಂಚರಿಸಬಹುದಾಗಿದೆ.

bengaluru Outer Ring Road1

ಇದು 17000 ಕೋಟಿ ರೂ ವೆಚ್ಚದ ಬೃಹತ್‌ ಯೋಜನೆಯಾಗಿದ್ದು, ದಾಬಸ್‌ ಪೇಟೆಯಿಂದ ಹೊಸೂರು ವರೆಗಿನ ಸುಮಾರು 288 ಕಿ.ಮೀ. ಭಾಗವನ್ನು ಸಂಪರ್ಕಿಸಲಿದೆ. ದಾಬಸ್‌ ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಸರ್ಜಾಪುರ, ಅತ್ತಿಬೆಲೆ, ಆನೇಕಲ್‌, ತಟ್ಟಕೆರೆ, ರಾಮನಗರ, ಕನಕಪುರ, ಮಾಗಡಿ ಮೂಲಕ ಹೊಸೂರನ್ನು ಅದು ಸಂಪರ್ಕಿಸಲಿದೆ. ದಾಬಸ್‌ಪೇಟೆಯಿಂದ ದೊಡ್ಡ ಬಳ್ಳಾಪುರವನ್ನು ಸಂಪರ್ಕಿಸುವ 42 ಕಿ.ಮೀ. ಉದ್ದದ ರಸ್ತೆ, ದೊಡ್ಡಬಳ್ಳಾಪುರದಿಂದ ಹೊಸಕೋಟೆ ನಡುವಿನ 37 ಕಿ.ಮೀ ಉದ್ದದ ರಸ್ತೆ ಈಗ ಲೋಕಾರ್ಪಣೆಗೊಂಡಿದೆ. ಇದರಿಂದ ಹಲವಾರು ವಾಹನದಟ್ಟಣೆಯ ಭಾಗಗಳಿಗೆ ನಿರಾಳತೆ ದೊರೆಯಲಿದೆ.

ಇದನ್ನು ಓದಿ : PM Narendra Modi: ಮೋದಿ ಜನಪ್ರಿಯತೆ ಮತ್ತೂ 10% ಹೆಚ್ಚಳ; ಜಾಗತಿಕ ನಾಯಕರ ಪಟ್ಟಿಯಲ್ಲಿ ಮೊದಲಿಗ

ಈ ಯೋಜನೆಯ ಪ್ರಸ್ತಾವನೆಯನ್ನು 2005ರಲ್ಲೇ ಮಂಡಿಸಲಾಗಿದ್ದರೂ, ಇದು ಒಂದು ಸ್ಪಷ್ಟ ಸ್ವರೂಪವನ್ನು ಪಡೆದುಕೊಂಡಿದ್ದು 2022ರಲ್ಲಿ. 2022ರ ಜೂನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೆಟಲೈಟ್‌ ರಿಂಗ್‌ ರೋಡ್‌ಗೆ ಅಡಿಗಲ್ಲು ಹಾಕಿದ್ದೃು. ಮತ್ತು ಇದನ್ನು ಪೂರ್ಣಗೊಳಿಸಲು 40 ತಿಂಗಳ ಗಡುವನ್ನು ವಿಧಿಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Murder Case: ಮಲಗಿದ್ದ ವ್ಯಕ್ತಿಯನ್ನು ದರದರನೆ ಎಳೆದು ತಂದ ಆಸಾಮಿ ನಂತರ ರಸ್ತೆ ಪಕ್ಕ ಬಿದ್ದಿದ್ದ ಕಲ್ಲು ತಲೆ ಮೇಲೆ ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವವಾಗಿ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಇಬ್ಬರ ಗುರುತೂ ಪತ್ತೆಯಾಗಿಲ್ಲ.

VISTARANEWS.COM


on

jayanagar murder case
Koo

ಬೆಂಗಳೂರು: ರಸ್ತೆಯ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ (Jayanagar murder case) ನಡೆಸಿದ ಘಟನೆ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ಜಯನಗರ (Jayanagar murder case) 7ನೇ ಬಡಾವಣೆಯಲ್ಲಿ ನಡೆದಿದೆ. ರಾತ್ರಿ 12ರ ಹೊತ್ತಿಗೆ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.

ಮೃತನ ಗುರುತು ಪತ್ತೆಯಾಗಿಲ್ಲ. ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಪಾನಮತ್ತನಾಗಿ ಈತ ಮಲಗಿದ್ದ ಎನ್ನಲಾಗಿದೆ. ಮತ್ತೊಬ್ಬ ಬಂದು ಆತನ ಮೇಲೆ ಬಿದ್ದಿದ್ದಾನೆ. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆಯಾಗಿದೆ. ಮಲಗಿದ್ದ ವ್ಯಕ್ತಿಯನ್ನು ದರದರನೆ ಎಳೆದು ತಂದ ಆಸಾಮಿ ನಂತರ ರಸ್ತೆ ಪಕ್ಕ ಬಿದ್ದಿದ್ದ ಕಲ್ಲು ತಲೆ ಮೇಲೆ ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವವಾಗಿ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಘಟನೆ ಸ್ಥಳಕ್ಕೆ ಭೇಟಿ ನೀಡಿರುವ ಬನಶಂಕರಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ನಡೆದ ಸುತ್ತಮುತ್ತಲಿನ ಮನೆಗಳ ಸಿಸಿಟಿವಿ ಫೂಟೇಜ್‌ ಆಧರಿಸಿ ವ್ಯಕ್ತಿಯ ತಲಾಶೆ ನಡೆಸಲಾಗುತ್ತಿದೆ. ಕೊಲೆಯಾದ ವ್ಯಕ್ತಿಯ ವಿವರಗಳೂ ಗೊತ್ತಾಗಿಲ್ಲ. ಯಾವುದೇ ಐಡಿ ಈತನ ಬಳಿ ಕಂಡುಬಂದಿಲ್ಲ.

ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಒಂದು ಜಮೀನು (Land dispute) ಹಲವು ವರ್ಷಗಳಿಂದ ವಿವಾದದಲ್ಲಿತ್ತು. ಈ ಹಿನ್ನೆಲೆಯಲ್ಲಿ ಇಂಜಂಕ್ಷನ್‌ ಆರ್ಡರ್‌ (Injenction Order) ಅನ್ನು ಸಹ ತರಲಾಗಿತ್ತು. ಇಷ್ಟಾದರೂ ಈ ಜಮೀನಿಗೆ ಪ್ರವೇಶ ಮಾಡಿದ್ದಾನೆ ಎಂಬ ಕಾರಣಕ್ಕೆ ಇನ್ನೊಂದು ಕಡೆಯ ಗುಂಪಿನವರು ದಾಳಿ ನಡೆಸಿ ಕುಡುಗೋಲು ಬೀಸಿ ಕೊಂದು (Murder case) ಹಾಕಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಡಹಗಲೇ ಕೊಲೆ ನಡೆದಿದೆ. ಇಂಜಂಕ್ಷನ್‌ ಆರ್ಡರ್ ಇದ್ದ ಜಮೀನಿಗೆ ತೆರಳಿದ್ದ ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ.

ಗಲಾಟೆ ಜೋರಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಅಖಿಲೇಶ್‌ ಗುಂಪಿನವರಲ್ಲೊಬ್ಬರು ಸ್ಥಳದಲ್ಲಿದ್ದ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಮತ್ತೆ ಕೆಲವರು ಕೈಯಿಂದಲೇ ಗುದ್ದಿದ್ದಾರೆ. ಬಹಳಷ್ಟು ಜನ ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡ ಸತೀಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಯೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಯೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Continue Reading

ಮಳೆ

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka weather Forecast: ರಾಜ್ಯದ ವಿವಿಧೆಡೆ ಮಳೆ ಅಬ್ಬರ (Heavy Rain)ಮುಂದುವರಿದಿದೆ. ಮೇ 14ರಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು, ಹವಾಮಾನ ಇಲಾಖೆಯು 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌:

ಭಾರೀ ಮಳೆಯೊಂದಿಗೆ ಗುಡುಗು ಹಾಗೂ ಬಿರುಗಾಳಿ ಇರಲಿದ್ದು ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Prajwal Revanna Case: ಎಚ್.ಡಿ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದು, ಹೀಗಾಗಿ ಈ ವಾರದಲ್ಲಿಯೇ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ಸಾಧ್ಯತೆಗಳಿವೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಮಾಜಿ ಸಚಿವ ರೇವಣ್ಣ ಅವರಿಗೆ ಜಾಮೀನು ಮಂಜೂರಾದ ಬೆನ್ನಲ್ಲೇ ಅಮ್ಮ-ಮಗ ಎಸ್ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ(Prajwal Revanna Case), ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಆದ್ದರಿಂದ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಪ್ರಜ್ವಲ್ ಹಾಜರಾಗಲಿದ್ದಾರೆ ಎನ್ನಲಾಗಿದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದು, ಹೀಗಾಗಿ ಈ ವಾರದಲ್ಲಿಯೇ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ಸಾಧ್ಯತೆಗಳಿವೆ.

ಇದನ್ನೂ ಓದಿ | Prajwal Revanna Case: ರೇವಣ್ಣಗೆ ಜಾಮೀನು; ಹೊಳೆನರಸೀಪುರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು ವಶಕ್ಕೆ

ಹಾಸನ, ಹೊಳೆನರಸೀಪುರ ನಿವಾಸದಲ್ಲಿ ಎಫ್ಎಸ್ಎಲ್ ತಜ್ಞರ ಪರಿಶೀಲನೆ

ಹಾಸನ: ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದೆ. ಪ್ರಕರಣದ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕಲು ಹಾಸನ ಸಂಸದರ ನಿವಾಸ ಹಾಗೂ ಹೊಳೆನರಸೀಪುರದ ರೇವಣ್ಣ ಅವರ ನಿವಾಸದಲ್ಲಿ ಎಫ್‌ಎಸ್‌ಎಲ್ ತಂಡದೊಂದಿಗೆ ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಹಾಸನದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಮೂರು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಲಾಗಿದ್ದು, ಅತ್ಯಾಚಾರ ಆರೋಪ ಕುರಿತು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ನಂತರ ಹೊಳೆನರಸೀಪುರದ ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ತೆರಳಿದರು. ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇನ್ಸ್‌ಪೆಕ್ಟರ್ ಸ್ಚರ್ಣ ನೇತೃತ್ವದ ತಂಡ ಪರಿಶೀಲನೆ ನಡೆಸಿತು.

ಹಾಸನ ಸಂಸದರ ನಿವಾಸ ಹಾಗೂ ಹೊಳೆನರಸೀಪುರ ನಿವಾಸದಲ್ಲೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ದೂರು ನೀಡಿದ್ದರಿಂದ ಎರಡೂ ಕಡೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಅಪಾಯ ಇದ್ದೇ ಇದೆ.

VISTARANEWS.COM


on

Hoarding
Koo

ಮುಂಬಯಿಯ ಘಾಟ್‌ಕೋಪರ್‌ನಲ್ಲಿ ಅಪ್ಪಳಿಸಿದ ಭಾರಿ ಧೂಳು ಬಿರುಗಾಳಿ ಮತ್ತು ಮಳೆಯಿಂದಾಗಿ ಬೃಹತ್ ಜಾಹೀರಾತು ಫಲಕ ಕುಸಿದು 14 ಮಂದಿ ಸಾವನ್ನಪ್ಪಿದ್ದಾರೆ. 59 ಜನರು ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ವೇಗವಾಗಿ ಧೂಳಿನ ಸಮೇತ ಬಂದ ಬಿರುಗಾಳಿ, ಭಾರೀ ಮಳೆ ಹಿನ್ನೆಲೆ ಮುಂಬೈ ನಗರದಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಜನಸಂದಣಿ ಇರುವ ಪ್ರದೇಶದಲ್ಲಿ ಬೃಹದಾಕಾರದ ಹೋರ್ಡಿಂಗ್ ಬಿರುಗಾಳಿಗೆ ಕುಸಿದು ಬಿದ್ದಿದೆ. ಬೃಹದಾಕಾರದ ಹೋರ್ಡಿಂಗ್ ನ ಕಬ್ಬಿಣದ ರಾಡ್ ಗಳು ಹಿಂದಕ್ಕೆ ವಾಲಿಕೊಂಡು ಸಂಪೂರ್ಣವಾಗಿ ನೆಲಕಚ್ಚಿದೆ. ದುರ್ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಹೋರ್ಡಿಂಗ್​ ಕೆಳಗೆ ಸಿಲುಕಿಕೊಂಡಿದ್ದಾರೆ. ಹೋರ್ಡಿಂಗ್ ಬಿದ್ದ ಪರಿಣಾಮ ಅಲ್ಲಿದ್ದ ಅಂಗಡಿಗಳು, ವಾಹನಗಳು ಸಹ ಜಖಂ ಆಗಿದೆ. ಇನ್ನೊಂದು ಇಂಥದೇ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಹಲವರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ.

ಇದು ಅಪರೂಪದ ಪ್ರಕರಣವಲ್ಲ. ಈ ಹಿಂದೆಯೂ ಇಂಥ ಘಟನೆಗಳು ಆದದ್ದುಂಟು. ಈ ಬೃಹತ್ ಜಾಹೀರಾತು ಫಲಕಗಳು ನಾಲ್ಕು- ಐದು ಮಹಡಿ ಕಟ್ಟಡಗಳಷ್ಟು ಎತ್ತರವಾಗಿರುತ್ತವೆ. ವೈಜ್ಞಾನಿಕವಾಗಿ ಇದನ್ನು ನಿರ್ಮಿಸದೇ ಹೋದರೆ ಇವು ಬಿದ್ದಾಗ ಹಲವು ಜೀವಗಳಿಗೆ ಮಾರಣಾಂತಿಕ ಆಗುವ ಸಂಭವ ಇದ್ದೇ ಇರುತ್ತದೆ. ಜೊತೆಗೆ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್‌ಗಳ ಕಾಟವೂ ಇದೆ. ಇವು ನಗರಗಳ ಸೌಂದರ್ಯವನ್ನು ಊನಗೊಳಿಸುವಲ್ಲಿ ಕುಖ್ಯಾತವಾಗಿವೆ.

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಹೋರ್ಡಿಂಗ್‌ನ ಗಾತ್ರವು ರಸ್ತೆಯ ಅಗಲ, ವೃತ್ತ ಅಥವಾ ಜಂಕ್ಷನ್ ಮತ್ತು ಪ್ರದೇಶವನ್ನು ಅವಲಂಬಿಸಿರುತ್ತದೆ. ಉದಾಹರಣೆಗೆ, 80 ರಿಂದ 100 ಅಡಿ ಅಗಲದ ರಸ್ತೆಯಲ್ಲಿ (ಒಳಗಿನ ವರ್ತುಲ ರಸ್ತೆ) 1,000 ಚದರ ಅಡಿ ಹೋರ್ಡಿಂಗ್ ಅನ್ನು ಪ್ರದರ್ಶಿಸಲು ಅನುಮತಿಸಲಾಗಿದೆ. ಜಾಹೀರಾತುದಾರರು ಪ್ರತಿ 100 ಮೀಟರ್‌ಗಳಿಗೆ ಅಂತಹ ಬೋರ್ಡ್‌ಗಳನ್ನು ಸ್ಥಾಪಿಸಬಹುದು. ಕನಿಷ್ಠ ಜಾಹೀರಾತು ಪ್ರದೇಶವು 800 ಚದರ ಅಡಿಗಳಾಗಿದ್ದರೆ, ಗರಿಷ್ಠ 3,000 ಚದರ ಅಡಿ. ಗರಿಷ್ಠ ಎತ್ತರ 75 ಅಡಿಗಳವರೆಗೂ ಹೋಗಬಹುದು. ಅಂದರೆ ಸುಮಾರು ಏಳು ಮಹಡಿ ಎತ್ತರ!

ಇಂಥ ಒಂದು ಬೃಹತ್ ಫಲಕ ಗಾಳಿಗೆ ಬಿದ್ದರೆ ಎಂಥ ಅನಾಹುತ ಆದೀತು ಎಂಬುದನ್ನು ಊಹಿಸಬಹುದು. ನೂತನ ಹೋರ್ಡಿಂಗ್ ನೀತಿಯಿಂದ ವಾರ್ಷಿಕ 500 ಕೋಟಿ ರೂಪಾಯಿ ಗಳಿಸುವ ಇರಾದೆ ಬಿಬಿಎಂಪಿಗೆ ಇದೆ. ಆದರೆ ಅದರಡಿ ಓಡಾಡುವ ಜನರ ಸುರಕ್ಷತೆಯ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಲಾಗುತ್ತದೆ? ಇಂಥ ಅಪಘಾತದ ಸಂತ್ರಸ್ತರಿಗೆ ಗರಿಷ್ಠ ವಿಮೆ ನೀಡುವ ಕಾಯಿದೆ ಇರಬೇಕಲ್ಲವೆ? ಇದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಇಂಥ ಅಪಘಾತಗಳು ಸಂಭವಿಸಿದಾಗ, ನಮ್ಮ ಸುತ್ತಮುತ್ತಲೂ ಯಾವಾಗ ಬೇಕಾದರೂ ಸಂಭವನೀಯ ಅಪಾಯಗಳ ಕುರಿತು ಕೂಡ ನಾವು ಚಿಂತಿಸಿ ಕಾರ್ಯಪ್ರವೃತ್ತರಾಗಬೇಕಿದೆ.

ಇದನ್ನೂ ಓದಿ: ICC World Cup 2023 : ಜಸ್ಟ್​ ಮಿಸ್​; ಪ್ರೇಕ್ಷಕರ ಸೀಟ್​​ಗಳ ಮೇಲೆ ಬಿದ್ದ ಬೃಹತ್​ ಹೋರ್ಡಿಂಗ್​

Continue Reading
Advertisement
IPL 2024 Points Table
ಕ್ರೀಡೆ13 mins ago

IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

jayanagar murder case
ಕ್ರೈಂ17 mins ago

Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Viral News
ದೇಶ54 mins ago

Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

HD Revanna Bail
ಪ್ರಮುಖ ಸುದ್ದಿ1 hour ago

HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

Kalki 2898 AD
ಸಿನಿಮಾ1 hour ago

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

mumbai hoarding collapse
ಪ್ರಮುಖ ಸುದ್ದಿ2 hours ago

Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Vertigo Problem
ಆರೋಗ್ಯ2 hours ago

Vertigo Problem: ನಿಮಗೆ ಇದ್ದಕ್ಕಿದ್ದಂತೆ ತಲೆ ಸುತ್ತುತ್ತಿದೆಯೆ? ಈ ವಿಷಯ ತಿಳಿದುಕೊಂಡಿರಿ

king dasharatha dhavala dharini
ಅಂಕಣ2 hours ago

ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

karnataka weather Forecast
ಮಳೆ3 hours ago

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Food Tips Kannada
ಆಹಾರ/ಅಡುಗೆ3 hours ago

Food Tips Kannada: ಸಸ್ಯಾಹಾರಿಗಳಿಗೆ ಒಮೇಗಾ 3 ಕೊಬ್ಬಿನಾಮ್ಲ ಯಾವುದರಲ್ಲಿ ದೊರೆಯುತ್ತದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ14 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ14 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ15 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ15 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ16 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ22 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌